Guru Purnima 2022 | ಗುರು ಪದದ ಅರ್ಥ ಅರಿತವರಿಗಷ್ಟೇ ಮುಕ್ತಿ - Vistara News

ಧಾರ್ಮಿಕ

Guru Purnima 2022 | ಗುರು ಪದದ ಅರ್ಥ ಅರಿತವರಿಗಷ್ಟೇ ಮುಕ್ತಿ

ಆಧ್ಯಾತ್ಮಿಕವಾಗಿ, ಶೈಕ್ಷಣಿಕವಾಗಿ ಗುರುಗಳು ಸದಾ ಗೌರವಾರ್ಹರು. ಅವರಿಗೆ ಗೌರವ ನೀಡುವುದಕ್ಕಾಗಿಯೇ ಆದಿಗುರು ಬ್ರಹ್ಮರ್ಷಿ ವೇದವ್ಯಾಸರ ಜನ್ಮದಿನವನ್ನು ಗುರುಪೂರ್ಣಿಮೆ ಎಂದು ಆಚರಿಸಲಾಗುತ್ತದೆ. ಗುರು ಮಹತ್ವವನ್ನು ವಿವರಿಸುವ ರಾಜಗುರು ಬಿ.ಎಸ್‌.ದ್ವಾರಕನಾಥ್‌ ಅವರ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜಗುರು ಬಿ.ಎಸ್‌.ದ್ವಾರಕನಾಥ್‌
ಗುರುವಿಗೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನಮಾನವಿದೆ. ಗುರು ಶಬ್ದದೊಳಗಿನ ‘ಗ’ಕಾರ ಸಿದ್ಧಿದಾಯಕವಾಗಿ ದೆಯಲ್ಲದೆ, ಇದರಲ್ಲಿ ಗಣೇಶ, ಅಗ್ನಿ, ವಿಷ್ಣು, ಗುರು ಈ ನಾಲ್ಕು ದೈವಿ ಶಕ್ತಿಗಳು ಸಮ್ಮಿಳಿತಗೊಂಡಿವೆ. ‘ಉ’ ಕಾರವು ವಿಷ್ಣುವಿನ ಅವ್ಯಕ್ತ ಸ್ವರೂಪವಾಗಿದೆ. ‘ರ’ಕಾರಕ್ಕೆ ಶಾಪವನ್ನು ನಾಶಮಾಡುವವನು ಎಂಬ ಅರ್ಥವಿದೆ. ಶ್ರೀ ಗುರುಚರಿತ್ರೆಯ ಪ್ರಕಾರ ಗುರು ಶಬ್ದದಲ್ಲಿ ಬ್ರಹ್ಮ, ವಿಷ್ಣು, ಮಹೇಶ್ವರ, ಗಣೇಶ, ಅಗ್ನಿ, ಶಾಙ್ರ್ಮಧರ ಇವರೆಲ್ಲರೂ ಅಡಕವಾಗಿರುತ್ತಾರೆ.

ವಿವೇಕ, ಧರ್ಮ, ಭಕ್ತಿ, ವೈರಾಗ್ಯ ಇವುಗಳಿಗೆಲ್ಲಾ ಗುರುವೇ ಮಾರ್ಗದರ್ಶಕನಾಗಿರುವುದರಿಂದ ತ್ರಿಮೂರ್ತಿ ಹಾಗೂ ಸಕಲ ದೇವತೆಗಳಿಗಿಂತಲೂ ಗುರುವೇ ಹೆಚ್ಚಿನವನು. ಅವನನ್ನು ಪೂಜಿಸುವುದರಿಂದ,ಅನುಸರಿಸುವುದರಿಂದ ಸಕಲ ಸಿದ್ಧಿಗಳು ಸುಲಭವಾಗಿ ನೆರವೇರುವವು.

ಗುರುಃ ಪಿತಾಗುರುರ್‌ ಮಾತಾ| ಗುರುದೇವ ಪರಃಶಿವಃ|
ಶಿವೇರುಷ್ಟೇ ಗುರುಸ್ತ್ರಾತಾಗುರೌರುಷ್ಟೇ ನ ಕಶ್ಚನ ||
ಅಂದರೆ ಗುರುವೇ ತಂದೆ, ಗುರುವೇ ತಾಯಿ, ಗುರುವೇ ಪರಶಿವನ ಸಗುಣ ಸ್ವರೂಪನು. ಒಂದು ವೇಳೆ ಶಿವನೇ ಸಿಟ್ಟಾದರೂ ಕೂಡ ಗುರು ಅವನನ್ನು ರಕ್ಷಿಸುವನು. ಆದರೆ ಗುರುವು ಕೋಪಗೊಂಡರೆ ಅವನನ್ನು ಯಾರೂ ರಕ್ಷಿಸಲಾರರು. ಗುರು ನಿಜವಾಗಿ ಬ್ರಹ್ಮನು, ರುದ್ರನು, ಮಹಾವಿಷ್ಣುವೂ ಆಗಿದ್ದಾನೆ. ಒಟ್ಟಾರೆ ಪರಮಾತ್ಮನ ಸ್ವರೂಪ. ಗುರುವನ್ನು ಅಚಲ ನಿಷ್ಠೆಯಿಂದ ನಂಬಿದರೆ ಸಕಲ ವರಗಳನ್ನು ದಯಪಾಲಿಸುವನು. ಗುರು ಒಲಿದರೆ, ಹರಿಹರರೂ ಪ್ರಸನ್ನರಾಗುತ್ತಾರೆ.

ಮಹಾಗುರು ಶ್ರೀ ಶಂಕರಾಚಾರ್ಯರು ʼಶ್ರೀ ಗುರುವಾಷ್ಟಕʼ ದಲ್ಲಿ ಹೀಗೆಂದಿದ್ದಾರೆ;
ಶರೀರಂ ಸುರೂಪಂ ತಥಾ ವಾ ಕಲತ್ರಂ
ಯಶಶ್ಚಾರುಚಿತ್ರಂ ಧನಂ ಮೇರುತುಲ್ಯಮ್ |
ಮನಶ್ಚೇನ್ನ ಲಗ್ನಂ ಗುರೋರಂಘ್ರಿಪದ್ಮೇ
ತತಃ ಕಿಂ ತತಃ ಕಿಂ ತತಃ ಕಿಂ ತತಃ ಕಿಮ್ ||1॥
ಇದರ ಅರ್ಥ ತಾನು ಸುಂದರನಾಗಿದ್ದು, ತನ್ನ ಪತ್ನಿಯೂ ಸುಂದರಿ ಯಾಗಿದ್ದು, ತನ್ನ ಕೀರ್ತಿ ಜಗದಗಲ ಹರಡಿದ್ದು, ಸಂಪತ್ತು ಮೇರು ಪರ್ವತದಷ್ಟಿದ್ದರೂ. ಏನಿದ್ದರೇನು ಏನು ಫಲ!? ಮನಸ್ಸು ಗುರು ಪದಕಮಲದಲ್ಲಿ ಶರಣಾಗದಿದ್ದರೆ ಫಲವೇನು? ಎಂದಾಗಿದೆ. ಶಂಕರ ಭಗವತ್ಪಾದರು ಈ ಅಷ್ಟಕದಲ್ಲಿ ಬಹಳ ಸುಂದರಾವಾಗಿ ಗುರು ಮಹಿಮೆಯನ್ನು ಹೇಳಿದ್ದಾರೆ.

ರಾಮಾಯಣದಲ್ಲಿ ರಾವಣನನ್ನು ಕೊಲ್ಲಲು ಗುರು ವಸಿಷ್ಠರ ಮಾರ್ಗದರ್ಶನವಿಲ್ಲದೆ ಸಾಧ್ಯವಾಗುತ್ತಿರಲಿಲ್ಲ. ಗುರುಗಳ ಅನುಗ್ರಹವಿಲ್ಲದೆ, ನಮ್ಮಿಂದಯಾವ ಸಾಧನೆಯೂ ಆಗದು. ಇಂದಿಗೂ ನಮ್ಮದೇಶವನ್ನು ಕಾಯುತ್ತಿರುವುದೇ ನಮ್ಮ ಗುರು ಪರಂಪರೆ. ಗುರು ವಿದ್ಯಾಕಾರಕ, ಸನ್ನಡತೆಯನ್ನು ಹೇಳಿಕೊಡುವವನು, ಅನುಗ್ರಹ ಮಾಡುವವನು. ಶ್ರೀ ವೇದವ್ಯಾಸರು ಮೊದಲ ಗುರುಗಳು. ಅವರ ಜಯಂತಿಯೇ ಗುರು ಪೂರ್ಣಿಮೆ.

ವೇದವ್ಯಾಸರು ಮಹಾತ್ಮರಾದ ಪರಾಶರ ಮುನಿಗಳ ಕೃಪೆಯಿಂದ ಸತ್ಯಾವತಿ ಗರ್ಭದಲ್ಲಿ ಜನಿಸಿದರು. ಹುಟ್ಟಿದ ಕೂಡಲೇ ಅಳುವುದಕ್ಕೆ ಬದಲಾಗಿ ಸತ್ಯವತಿ ಮುಂದೆ ಕೈ ಜೋಡಿಸಿ ʼಮಾತೃದೇವೋಭವʼ ಎಂದು ಕೈಮುಗಿದಿದ್ದರಂತೆ. ವ್ಯಾಸರು ವೇದವನ್ನು ನಾಲ್ಕು ವಿಭಾಗಗಳನ್ನಾಗಿ ಮಾಡಿದ್ದರಿಂದ ಅವರಿಗೆ ವೇದವ್ಯಾಸ ಎಂದೂ, ಕಪ್ಪುವರ್ಣದವರಾಗಿ ಯಮುನಾ ನದಿ ದ್ವೀಪದಲ್ಲಿ ಹುಟ್ಟಿದುದರಿಂದ ಕೃಷ್ಣದೈಪಾಯನ ಎಂದೂ, ಬದರಿಕಾಶ್ರಮದಲ್ಲಿ ನೆಲಸಿದುದರಿಂದ ಬಾದರಾಯಣ ಎಂದೂ, ಸತ್ಯವತಿಗೆ ವಾಸವಿ ಎಂಬ ಹೆಸರಿದ್ದು ವಾಸವಿಯ ಮಗನಾದ್ದರಿಂದ ವಾಸವೇಯ ಎಂದೂ ಹೆಸರಿದೆ. ಬ್ರಹ್ಮರ್ಷಿ ವೇದವ್ಯಾಸರು ಮಹಾಭಾರತದ ರಚನಾಕಾರರು ಮಾತ್ರವಲ್ಲದೆ, ೧೮ ಮಹಾ ಪುರಾಣಗಳನ್ನೂ ಬರೆದಿದ್ದಾರೆ. 

ಗುರು ಪೂರ್ಣಿಮೆಗೆ ವ್ಯಾಸ ಜಯಂತಿ ಎಂದೇ ಕರೆಯುತ್ತಾರೆ. ಗುರು ಪೂರ್ಣಮೆಯ ಮೂಲ ಉದ್ದೇಶವೇ ಆತ್ಮಶೋಧನೆ. ಯಾರು ಮನದ ಅಂಧಃಕಾರ ಕಳೆಯಬಲ್ಲರೋ ಅವರೇ ನಿಜವಾದ ಗುರು. ಸಾಮಾನ್ಯವಾಗಿ ಜ್ಞಾನ ಎಂದರೆ ವಿದ್ಯೆ ಎಂದು ಅರ್ಥೈಸಿ ಕೊಳ್ಳುವವರೇ ಹೆಚ್ಚು. ಯಾರು ಜ್ಞಾನವನ್ನು ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳುತ್ತಾರೋ ಅವರೇ ನಿಜವಾದ ಗುರು.

ಎಲ್ಲರಿಗೂ ಗೊತ್ತಿರುವ ವಿಷಯ ಎಂದರೆ ಮಹಾಭಾರತದ ಯುದ್ಧ ಆರಂಭವಾದಾಗ ತಮ್ಮವರ ಮೇಲೇ ಯುದ್ಧ ಮಾಡಬೇಕಲ್ಲ ಎಂದು ಅರ್ಜುನ ಮರುಗುತ್ತಾನೆ. ತನ್ನ ಸಾರಥಿಯಾಗಿದ್ದ ಶ್ರೀಕೃಷ್ಣನ ಮುಂದೆ ತನ್ನ ಅಸಹಾಯಕ ಸ್ಥಿತಿಯನ್ನು ತೋಡಿಕೊಳ್ಳುತ್ತಾನೆ. ಸಂದಿಗ್ಧ ಸನ್ನಿವೇಶದಿಂದ ಪಾರುಮಾಡು ಎಂದು ಕೇಳಿಕೊಳ್ಳುತ್ತಾನೆ. ಶ್ರೀಕೃಷ್ಣ ಅರ್ಜುನನಿಗೆ ‘ಅಭ್ಯಾಸಂತು ಕೌಂತೇಯ ವೈರಾಗ್ಯೇನ ಚ ಗೃಹ್ಯತೇ’ ಅಂದರೆ ಸತತ ಸಾಧನೆ ಮಾಡು ಎಂದು ತಿಳಿಹೇಳುತ್ತಾನೆ. ಆ ಸಾಧನೆಯೇ ಗೊಂದಲ ಸ್ಥಿತಿಯಿಂದ ಹೊರಬರುವ ಮಾರ್ಗ ತೋರಿಸುತ್ತದೆ ಎಂದು ಮಾರ್ಗದರ್ಶನ ನೀಡುತ್ತಾನೆ. ಹೀಗೆ ಗುರುವಿನ ಮಾರ್ಗದರ್ಶನದಲ್ಲಿ ಜೀವನದುದ್ದಕ್ಕೂ ಸತತ ಸಾಧನೆ ಮಾಡುವುದೇ ನಮ್ಮ ಗುರಿಯಾಗಬೇಕು. ಆಗ ಗುರಿಯನ್ನು ಮುಟ್ಟಲು ಸಾಧ್ಯ.

ಶ್ರೀ ಗುರು ಚರಿತ್ರೆಯ ಎರಡನೇ ಅಧ್ಯಾಯದಲ್ಲಿ ಗುರುವಿನ ಮಹತ್ವವನ್ನು ಬಹಳ ಚೆನ್ನಾಗಿ ವರ್ಣೀಸಲಾಗಿದೆ. ಇದನ್ನು ಪಾರಾಯಣ ಮಾಡುವುದರಿಂದ ನಾವು ಗುರುವಿನ ಕೃಪೆಗೆ ಪಾತ್ರರಾಗಬಹುದು. ಅದರಲ್ಲೊಂದು ಶ್ಲೋಕ ಹೀಗಿದೆ;
ನ ತೀರ್ಥಯಾತ್ರಾ ನಚ ದೇವಯಾತ್ರಾ|
ನ ದೇಹಯಾತ್ರಾ ನಚ ಲೋಕಯಾತ್ರಾ||
ಅರ್ಹನಿಶಂ ಬ್ರಹ್ಮ ಹರೀಶ ಬಂಧ್ಯಾ|
ಗುರುಂ ಪ್ರಸನ್ನೋ ನಹಿ ಸೇವ್ಯ ಮನ್ಯತ್‌||
ಇದರ ಅರ್ಥ, ಒಳ್ಳೆಯ ಶಿಷ್ಯನಿಗೆ ತೀರ್ಥಯಾತ್ರೆ, ದೇವಯಾತ್ರೆ, ದೇಹಯಾತ್ರೆ, ಲೋಕಯಾತ್ರೆ ಯಾವುದೂ ಅವಶ್ಯವಾಗಿಲ್ಲ. ಹರಿ, ಹರ,ಬ್ರಹ್ಮ ಈ ತ್ರೀಮೂರ್ತಿಗಳ ಸಾಕಾರ ರೂಪವಾಗಿರುವ ಸದ್ಗುರುವಿನ ಸೇವೆ ಮಾಡಿ ಅವರನ್ನು ಪ್ರಸನ್ನಗೊಳಿಸಿಕೊಳ್ಳುವುದರಲ್ಲಿಯೇ ಆತನಿಗೆ ಈ ಎಲ್ಲ ಯಾತ್ರೆಗಳ ಫಲವೂ ಸುಲಭವಾಗಿ ದೊರೆಯುತ್ತದೆ ಎಂದು. ಗುರು ಪೂರ್ಣಿಮೆಯಂದು ನಾವು ಗುರುವನ್ನು ಪೂಜಿಸುವುದರಿಂದ ನಮಗೂ ಈ ಎಲ್ಲ ಫಲಗಳು ದೊರೆಯುತ್ತವೆ.

‘ಗುರು ಪೂರ್ಣಮಿ’ ಎನ್ನುವುದು ಕೇವಲ ಗುರುವನ್ನು ಸ್ತುತಿಸುವ, ಪ್ರಶಂಸಿಸುವ, ಪೂಜಿಸುವ ದಿನವಾಗಬಾರದು. ಬದಲಿಗೆ ಗುರುವೆನ್ನುವ ಪದದಲ್ಲಿನ ಅರ್ಥ ನಮಗೆ ನಿಚ್ಛಳವಾಗಬೇಕು. ನಮ್ಮೊಳಗಿನ ಅಜ್ಞಾನವನ್ನು ತೊಡೆದುಕೊಳ್ಳಲು ಪೂರಕ ಸಂಕಲ್ಪವಾಗಬೇಕು. ಈ ದಿಸೆಯಲ್ಲೇ ನಮ್ಮೆಲ್ಲಾ ಪ್ರಯತ್ನಗಳು ಸಾಗಬೇಕು. ಆಗ ಮಾತ್ರ ಈ ಆಚರಣೆಗೊಂದು ಅರ್ಥ.

ನಮ್ಮ ಕುಲಗುರುಗಳಾದ ಶೃಂಗೇರಿಯ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳು, ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಹಾಗೂ ಗಾಣಗಾಪುರದ ಶ್ರೀ ಗುರು ದತ್ತಾತ್ರೇಯರಿಗೆ ನಮಿಸುತ್ತಲೇ ಗುರು ಪೂರ್ಣಿಯೆ ಕುರಿತ ಈ ಲೇಖನವನ್ನು ನಿಮಗರ್ಪಿಸುತ್ತಿದ್ದೇನೆ. ಎಲ್ಲರಿಗೂ ಗುರು ಕಾರುಣ್ಯ ದೊರೆಯಲಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ | Chaturmas 2022 | ಯಾವ ಯತಿವರ್ಯರ ಚಾತುರ್ಮಾಸ್ಯ ವ್ರತಾಚರಣೆ ಎಲ್ಲಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಳಗಾವಿ

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Belagavi News: ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11 ನೇ ವಾರ್ಷಿಕ ಮಹೋತ್ಸವವು ಇದೇ ಮೇ 29 ರಿಂದ ಮೇ 31 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ತಿಳಿಸಿದ್ದಾರೆ.

VISTARANEWS.COM


on

11th Annual Mahotsav of Sri Annapurneswari Temple in Belagavi from 29th May
Koo

ಬೆಳಗಾವಿ: ಬೆಳಗಾವಿಯ ವಡಗಾವಿ ಯಳ್ಳೂರು ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವವು ಇದೇ ಮೇ 29 ರಿಂದ ಮೇ 31 ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ (Belagavi News) ತಿಳಿಸಿದ್ದಾರೆ.

ಇದನ್ನೂ ಓದಿ: Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

ಮೇ 29 ರಂದು ಬೆಳಗ್ಗೆ 6 ಗಂಟೆಗೆ ಶ್ರೀ ಅನ್ನಪೂರ್ಣೇಶ್ವರಿ ಸಹಿತ ಪರಿವಾರ ದೇವರಿಗೆ ಕಲಶಾಭಿಷೇಕ, 8 ಕ್ಕೆ ನಾಗದೇವರ ಬಿಂಬ ಪ್ರತಿಷ್ಠಾಪನೆ, ಕಲಶಾಭಿಷೇಕ ಮಹಾಪೂಜೆ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, ಪ್ರಸನ್ನ ಪೂಜೆ, ಪ್ರಸಾದ, ಸಂಜೆ 5 ರಿಂದ ರಂಗ ಪೂಜೆ ಶ್ರೀ ದೇವಿಯ ಪಲ್ಲಕ್ಕಿ- ಮೆರವಣಿಗೆ, ದೀಪೋತ್ಸವ ನಡೆಯಲಿದೆ.

ಮೇ 30 ರಂದು ಬೆಳಗ್ಗೆ 7 ಕ್ಕೆ ಸಂಪ್ರೋಕ್ಷಣೆ, ಅನ್ನಪೂರ್ಣೇಶ್ವರಿ ಯಾಗ, ಸುಬ್ರಮಣ್ಯ ದೇವರಿಗೆ ಆಶ್ಲೇಷ ಬಲಿ, 8.30 ಕ್ಕೆ ಮಹಾ ಚಂಡಿಕಾ ಯಾಗ, ಸಂಜೆ 6 ಕ್ಕೆ ಕೀರ್ತನಾಕಾರರಿಂದ ಕೀರ್ತನೆ, ವ್ಯಾಖ್ಯಾನ ನಡೆಯಲಿದೆ.

ಇದನ್ನೂ ಓದಿ: New Financial Rules: ಜೂನ್ 1ರಿಂದ ಏನೆಲ್ಲಾ ಬದಲಾವಣೆಗಳಾಗಲಿವೆ ಗೊತ್ತಿದೆಯೆ?

ಮೇ 31 ರಂದು ಬೆಳಗ್ಗೆ 9 ಕ್ಕೆ ದೇವಿಗೆ ವಿಶೇಷ ಅಲಂಕಾರ, ಪೂಜಾರಾಧನೆ, 10 ಕ್ಕೆ ಭಜನಾ ಮಂಡಳಿಯಿಂದ ಭಜನೆ, ಮಧ್ಯಾಹ್ನ 1 ರಿಂದ 3 ಗಂಟೆವರೆಗೆ ಮಹಾಪ್ರಸಾದ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ರವಿರಾಜ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಬೆಂಗಳೂರು

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Basavanagudi News : ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಗಳಲ್ಲಿ ಪೂಜಾ ಸಾಮಗ್ರಿಗಳನ್ನು ಒನ್‌ ಟು ಡಬಲ್‌ ರೇಟ್‌ಗೆ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಭಕ್ತಾಧಿಗಳು ಹಾಗೂ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.

VISTARANEWS.COM


on

By

Basavanagudi News
Koo

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ (Basavanagudi News) ಭಕ್ತಾದಿಗಳು ಹಾಗೂ ಮಳಿಗೆ ವ್ಯಾಪಾರಿಗಳ ನಡುವೆ ಗಲಾಟೆ ನಡೆದಿದೆ. ದೇವಸ್ಥಾನದಲ್ಲಿರುವ (Dodda Ganapathi Temple) ಮಳಿಗೆಯಲ್ಲಿ ಪೂಜಾ ಸಾಮಗ್ರಿಗಳು ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಕಳೆದ ಕೆಲವು ತಿಂಗಳಿಂದ ಪೂಜಾ ಸಾಮಗ್ರಿಗಳ ಬೆಲೆ ಕೇಳಿ ಭಕ್ತಾದಿಗಳು ಶಾಕ್ ಆಗಿದ್ದರು. ಮನಸೋ ಇಚ್ಛೆ ವಸೂಲಿ ಮಾಡಲಾಗುತ್ತಿದೆ ಎಂಬ ದೂರು ಕೂಡ ಕೇಳಿಬಂದಿತ್ತು. ಹೂವು, ಹಣ್ಣು, ಕಡ್ಡಿ, ಕರ್ಪೂರ ಸೇರಿದ 70-80 ರೂಪಾಯಿಯ ಒಂದು ಸಣ್ಣ ಕಿಟ್ ಅನ್ನು ಬರೋಬ್ಬರಿ 150 ರೂಪಾಯಿಗೆ ಸೇಲ್ ಮಾಡಲಾಗುತ್ತಿದೆ. ಇದೊಂಥರಾ ಹಗಲು ದರೋಡೆ ಅಂದರೆ ತಪ್ಪಾಗಲ್ಲ.

ದುಬಾರಿ ಬೆಲೆಗೆ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಕ್ತಾಧಿಗಳು ಇದನ್ನೂ ಪ್ರಶ್ನಸಿದ್ದಾರೆ. ಈ ವೇಳೆ ಭಕ್ತರು ಹಾಗೂ ಮಳಿಗೆ ವ್ಯಾಪಾರಿಗಳ ಮಧ್ಯೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ ನಡೆದಿದೆ. ಟೆಂಟರ್‌ಗೆ ಹೆಚ್ಚು ಹಣವನ್ನು ಕೊಟ್ಟಿದ್ದೀವಿ, ಹೀಗಾಗಿ ಹೆಚ್ಚುವರಿ ಹಣ ತೆಗೆದುಕೊಳ್ಳುತ್ತಿವಿ. ಮಾರುಕಟ್ಟೆಯಲ್ಲಿ ಹೂ-ತೆಂಗಿನಕಾಯಿ ದಿನಕ್ಕೊಂದು ದರ ಇರುತ್ತದೆ, ನಾವೇನು ಮಾಡೋಣ ಎಂದು ಮಳಿಗೆ ವ್ಯಾಪಾರಿಗಳು ವಾದವಾಗಿದೆ.

ಇತ್ತ 2 ಬಾಳೆಹಣ್ಣು, ತೆಂಗಿನಕಾಯಿ, ಅಗರಬತ್ತಿ, ಹೂವಿ ಇರುವು ಪೂಜಾ ಸಾಮಗ್ರಿಗೆ ಬರೋಬ್ಬರಿ 150-300 ರೂ. ವ್ಯಾಪಾರಿಗಳು ಭಕ್ತರಿಂದ ಪಡೆಯುತ್ತಿದ್ದಾರೆ. ಇದರಿಂದ ರೊಚ್ಚಿಗೆದ್ದ ಭಕ್ತರು, ವ್ಯಾಪಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಇದನ್ನು ಕೇಳಬೇಕಿದ್ದ ಮುಜರಾಯಿ ಕಣ್ಮುಚ್ಚಿ ಕುಳಿತಿದೆ. ಇದರ ಪರಿಣಾಮ ಭಕ್ತರ ಜೇಬು ಖಾಲಿ ಆಗುತ್ತಿದ್ದು, ವಿಧಿಯಿಲ್ಲದೆ ದುಬಾರಿ ಹಣ ತೆರಬೇಕಾಗುತ್ತಿದೆ.

ಇದನ್ನೂ ಓದಿ: Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

ಚಿಕ್ಕಬಳ್ಳಾಪುರ: ಮದುವೆ ಮನೆಗೆ ಬಂದ ಕಳ್ಳನಿಗೆ (Theft Case ) ವರ ಹಾಗೂ ವಧುವಿನ ಕಡೆಯವರು ಭರಪೂರ ಉಡುಗೊರೆ ಕೊಟ್ಟಿದ್ದಾರೆ. ಮದುವೆ ಮನೆಯೊಳಗೆ ನುಗ್ಗಿದ ಕಳ್ಳನೊಬ್ಬ ಮಹಿಳೆ ಬಳಿ ಚಿನ್ನದ ಸರ ಕದಿಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಕಳ್ಳನನ್ನು ಹಿಡಿದ ಮದುವೆ ಮನೆಯವರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಸಾಯಿಕೃಷ್ಣ ಫಂಕ್ಷನ್ ಹಾಲ್‌ನಲ್ಲಿ ಘಟನೆ ನಡೆದಿದೆ.

ಸರ ಕದ್ದ ಆರೋಪಿಯನ್ನು ಆಂದ್ರಪ್ರದೇಶದ ಮುಲ್ಲಮೋತುಕಪಲ್ಲಿ ಗ್ರಾಮದ ಪಿ. ನರೇಶ್ ಎಂದು ತಿಳಿದು ಬಂದಿದೆ. ಮದುವೆ ಮನೆಯಲ್ಲಿ ಮಹಿಳೆ ಬಟ್ಟೆ ಬದಲಿಸುವ ವೇಳೆ ನರೇಶ್ ಚಿನ್ನದ ಸರ ಕದಿಯಲು ಯತ್ನಿಸಿದ್ದ. ಆದರೆ ಇದನ್ನೂ ಗಮನಿಸಿದ ಮಹಿಳೆ ಕೂಡಲೇ ಕಿರುಚಾಡಿದ್ದು, ತಪ್ಪಿಸಿಕೊಂಡು ಓಡಾಡುತ್ತಿದ್ದ ನರೇಶ್‌ನನ್ನು ಹಿಡಿದು ಥಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೌರಿಬಿದನೂರು ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

ಬೆಂಗಳೂರು: ಸಾರಾಯಿಪಾಳ್ಯದ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಖರ್ತನಾಕ್‌ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ರಿಯಾಝ್ ಖಾನ್ ಹಾಗು ವಸೀಂ ಫಿರೋಝ್ ಬಂಧಿತ ಆರೋಪಿಗಳು.

ಬೆಳಗಿನಿಂದ ಸಂಜೆ ತನಕ ಕೋಳಿ ಅಂಗಡಿಯಲ್ಲಿ ಕೋಳಿ ಕುಯ್ಯುವ ಕೆಲಸ ಮಾಡಿದರೆ, ರಾತ್ರಿಯಾದರೆ ಸಾಕು ಸುಲಿಗೆಗೆ ಇಳಿಯುತ್ತಿದ್ದರು. ಇತ್ತೀಚಿಗೆ ಸ್ಕೂಟರ್‌ನಲ್ಲಿ ಬಂದಿದ್ದ ಇವರಿಬ್ಬರು, ಅಮ್ಮೇಜಾನ್ ಎಂಬುವವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಸಂಬಂಧ ಅಮ್ಮೇಜಾನ್‌ ಅವರು ದೂರು ದಾಖಲಿಸಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿರುವ ಬಾಣಸವಾಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Siddaramaiah: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು. ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದ್ದು ಕೂಡ ಕಂಡುಬಂತು.

VISTARANEWS.COM


on

Siddaramaiah
Koo

ಮಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ಭರಾಟೆ ಮುಗಿದು, ತುಸು ನಿರಾಳರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಶನಿವಾರ (ಮೇ 25) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ತೆರಳಿ, ದೇವರ ಆಶೀರ್ವಾದ ಪಡೆದರು. ಅಲ್ಲದೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿಯಾದರು. ಇದೇ ವೇಳೆ, ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ನೀಡುವ ತೀರ್ಮಾನದ ಕುರಿತು ಸಿದ್ದರಾಮಯ್ಯ ಅವರಿಗೆ ಹಲವು ಹೆಣ್ಣುಮಕ್ಕಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕುರಿತು ಸಿದ್ದರಾಮಯ್ಯ ಅವರೇ ಪೋಸ್ಟ್‌ ಮಾಡಿದ್ದಾರೆ.

ಧರ್ಮಸ್ಥಳ ಭೇಟಿ, ಮಹಿಳೆಯರ ಮೆಚ್ಚುಗೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಫೋಟೊಗಳ ಸಮೇತ ಪೋಸ್ಟ್‌ ಮಾಡಿದ್ದಾರೆ. “ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ, ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು. ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ನನ್ನದು” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಸಿಎಂಗೆ ಪೂರ್ಣಕುಂಭ ಸ್ವಾಗತ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಧರ್ಮಸ್ಥಳದ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸ್ವಾಗತವನ್ನು ಮಾಡಲಾಯಿತು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭವ್ಯ ಸ್ವಾಗತ ಸಿಕ್ಕಿತು. ವಾದ್ಯ ಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಪರವಾಗಿ ಧರ್ಮಸ್ಥಳ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತಿಸಿದರು.

ವಿಶೇಷ ಪೂಜೆ, ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಕೆಲ ಹೊತ್ತು ಚರ್ಚೆ ನಡೆಸಿದರು.

ಧರ್ಮಸ್ಥಳ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, “ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. “ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

Continue Reading

ಶಿವಮೊಗ್ಗ

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

Shivamogga News: ಸೊರಬ ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದರು.

VISTARANEWS.COM


on

Agee hunnime Thousands of devotees have darshan of Shri Renukamba Devi of Chandragutti
Koo

ಸೊರಬ: ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti Shri Renukamba Devi temple) ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ (Shivamogga News) ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಹುಣ್ಣಿಮೆ ಹಿನ್ನೆಲೆ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಿಯ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು. ಧಾರ್ಮಿಕ ಸೇವೆ, ಹರಕೆ ಸಲ್ಲಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯವೂ ಕಂಡುಬಂದಿತು.

ಇದನ್ನೂ ಓದಿ: Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

ಪ್ರತಿ ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಶೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಆದರೆ ರಸ್ತೆ ಕಿರಿದಾದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸುಮಾರು 1 ಗಂಟೆ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸ್ಥಳೀಯ ಜನಪ್ರತಿನಿಧಿಗಳು ಚಂದ್ರಗುತ್ತಿ ಮುಖ್ಯ ರಸ್ತೆಯನ್ನು ಅಗಲಿಕರಿಸಿ ವ್ಯವಸ್ಥಿತವಾದ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Continue Reading
Advertisement
karnataka weather forecast
ಮಳೆ22 mins ago

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Rishab Pant
ಪ್ರಮುಖ ಸುದ್ದಿ52 mins ago

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Wildlife Sanctuaries
ಪರಿಸರ52 mins ago

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

T20 World Cup
ಕ್ರೀಡೆ1 hour ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

namaz on road
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ಜಂಟಿ ಹೂಡಿಕೆ ವ್ಯವಹಾರದಿಂದ ದೂರವಿರಿ

Prajwal Revanna Case
ಪ್ರಮುಖ ಸುದ್ದಿ8 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ8 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ8 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ9 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು20 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌