Dina Bhavishya : ಮುಂಗೋಪದಿಂದ ಈ ರಾಶಿಯವರಿಗೆ ನಷ್ಟ ಸಂಭವ - Vistara News

ಪ್ರಮುಖ ಸುದ್ದಿ

Dina Bhavishya : ಮುಂಗೋಪದಿಂದ ಈ ರಾಶಿಯವರಿಗೆ ನಷ್ಟ ಸಂಭವ

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷದ ಬಿದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಸೋಮವಾರ ವೃಶ್ಚಿಕ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ವೃಷಭ ರಾಶಿಯವರು ಸಂಗಾತಿಯೊಂದಿಗೆ ವಿನಾ ಕಾರಣ ವಾದಕ್ಕೆ ಇಳಿಯುವುದು ಬೇಡ. ಕಟಕ ರಾಶಿಯವರು ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಲಿದೆ. ಸಿಂಹ ರಾಶಿಯ ಬಹುದಿನಗಳ ಕನಸು ನನಸಾಗುವ ಸಮಯವಿದು. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (16-10-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ.
ತಿಥಿ:
ಬಿದಿಗೆ 25:12 ವಾರ: ಸೋಮವಾರ
ನಕ್ಷತ್ರ: ಸ್ವಾತಿ 19:34 ಯೋಗ: ವಿಷ್ಕುಂಭ 10:02
ಕರಣ: ಬಾಲವ 12:55 ಅಮೃತ ಕಾಲ: ಬೆಳಗ್ಗೆ 10:17 ರಿಂದ 11:58 ರವರೆಗೆ
ದಿನದ ವಿಶೇಷ: ಶರನ್ನವರಾತ್ರಿ ದ್ವಿತೀಯ ದಿವಸ ಪೂಜೆ ಬ್ರಹ್ಮಚಾರಿಣಿ ಅವತಾರ, ವಿಶ್ವ ಆಹಾರ ದಿನ, ಚಂದ್ರದರ್ಶನ

ಸೂರ್ಯೋದಯ : 06:24  ಸೂರ್ಯಾಸ್ತ : 07:00

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕ ಸಮಸ್ಯೆಗಳಿಗೆ ತಕ್ಕ ಪರಿಹಾರವೂ ಇಂದು ಸಿಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ವೃಷಭ: ಉದ್ಯೋಗಿಗಳಿಗೆ ಪ್ರೋತ್ಸಾಹವೂ ಸೇರಿದಂತೆ ಅನೇಕ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ವಿವಿಧ ಮೂಲಗಳಿಂದ ಆರ್ಥಿಕವಾಗಿ ಲಾಭ ಸಿಗಲಿದೆ. ಸಂಗಾತಿಯೊಂದಿಗೆ ವಿನಾ ಕಾರಣ ವಾದಕ್ಕೆ ಇಳಿಯುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಸ್ನೇಹಿತರ ಮೂಲಕ ದೊರಕುವ ಮಾರ್ಗದರ್ಶನ ನಿಮ್ಮ ಆರೋಗ್ಯವನ್ನು ಸುಧಾರಿಸಲು ನಿಮ್ಮನ್ನು ಉತ್ತೇಜಿಸುತ್ತದೆ. ನೀವು ಇಂದಿನ ದಿನವನ್ನು ಉತ್ತಮಗೊಳಿಸಲು ಕಳೆದ ದಿನಗಳಲ್ಲಿ ಹಣವನ್ನು ಹೂಡಿಕೆ ಮಾಡಿದ್ದರೆ, ಅದರ ಪ್ರಯೋಜನವನ್ನು ಪಡೆಯಬಹುದು. ನಿಮ್ಮ ಜತೆಗಿರುವ ಯಾರಾದರೂ ನಿಮ್ಮ ಇತ್ತೀಚೆನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯವಿದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಆತುರದ ಭರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸಿಗೆ ನೋವು ಆಗಲಿದೆ. ಹೀಗಾಗಿ ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದತ್ತ ಚಿಂತಿಸಿ. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

Horoscope Today

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ ಮಾಡುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ನವರಾತ್ರಿಯ ವಾರಭವಿಷ್ಯ ಹೇಗಿದೆ ನೋಡಿ

Horoscope Today

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ ಇದೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

Horoscope Today

ಕುಂಭ: ಆಲಸ್ಯದಿಂದ ಕಾರ್ಯ ಹಾನಿಯಾಗಲಿದೆ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಸೃಜನಾತ್ಮಕವಾಗಿ ಕೆಲಸ ಮಾಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ.ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ ಇದೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸವಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

Mahindra Marazzo: ಮುಂದಿನ ಎರಡು ತಿಂಗಳ ಅವಧಿಯಲ್ಲಿ ಎಂಪಿವಿ ಉತ್ಪಾದನೆ ಕೊನೆಗೊಳಿಸಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವೆರಿಟೊ ಕಂಪನಿಯು ಉತ್ಪಾದಿಸಿದ ಕೊನೆಯ ಸೆಡಾನ್ ಇದಾಗಿದೆ. ಎಂಪಿವಿ ಮಾರುಕಟ್ಟೆ ಇಂದು ಒಟ್ಟು ಪ್ರಯಾಣಿಕ ವಾಹನ ಮಾರುಕಟ್ಟೆಯಲ್ಲಿ ಸುಮಾರು 16 ಪ್ರತಿಶತ ಪಾಲನ್ನು ಹೊಂದಿದೆ. ಟೊಯೊಟಾ ಮತ್ತು ಮಾರುತಿ ಸುಜುಕಿ ಈ ವಿಭಾಗದಲ್ಲಿ ಪಾರಮ್ಯ ಹೊಂದಿವೆ.

VISTARANEWS.COM


on

Mahindra Marazzo
Koo

ಬೆಂಗಳೂರು: ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಿದ ಆರು ವರ್ಷಗಳ ನಂತರ ಮರಾಜೊ (Mahindra Marazzo) ಎಂಪಿವಿಯ ಮಾರಾಟವನ್ನು ನಿಲ್ಲಿಸಿದೆ. ಇದು ಕಾರು ತಯಾರಕರು ನಿರೀಕ್ಷಿಸಿದ ಮಟ್ಟಕ್ಕೆ ಮಾರಾಟದಲ್ಲಿ ಯಶಸ್ಸನ್ನು ಹೊಂದಿಲ್ಲ. ಮಾರುತಿ ಎರ್ಟಿಗಾ, ಎಕ್ಸ್ ಎಲ್ 6 ಮತ್ತು ಕಿಯಾ ಕ್ಯಾರೆನ್ಸ್ ಪ್ರತಿಸ್ಪರ್ಧಿಯಾಗಿದ್ದ ಇದನ್ನು ಸೆಪ್ಟೆಂಬರ್ 2018 ರಲ್ಲಿ 9.99 ಲಕ್ಷದಿಂದ 13.90 ಲಕ್ಷ ರೂ.ಗಳ ನಡುವೆ ಬಿಡುಗಡೆ ಮಾಡಲಾಗಿತ್ತು. ಇದು ನಾಲ್ಕು ಟ್ರಿಮ್ ಗಳು ಮತ್ತು 7- ಮತ್ತು 8-ಸೀಟರ್ ಕಾನ್ಫಿಗರೇಶನ್ ಗಳಲ್ಲಿ ಬಂದಿತ್ತು. ಆದರೆ, ಗ್ರಾಹಕರ ಗಮನ ಸೆಳೆಯಲು ವಿಫಲಗೊಂಡಿತ್ತು.

ಮುಂದಿನ ಎರಡು ತಿಂಗಳ ಅವಧಿಯಲ್ಲಿ ಎಂಪಿವಿ ಉತ್ಪಾದನೆ ಕೊನೆಗೊಳಿಸಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವೆರಿಟೊ ಕಂಪನಿಯು ಉತ್ಪಾದಿಸಿದ ಕೊನೆಯ ಸೆಡಾನ್ ಇದಾಗಿದೆ. ಎಂಪಿವಿ ಮಾರುಕಟ್ಟೆ ಇಂದು ಒಟ್ಟು ಪ್ರಯಾಣಿಕ ವಾಹನ ಮಾರುಕಟ್ಟೆಯಲ್ಲಿ ಸುಮಾರು 16 ಪ್ರತಿಶತ ಪಾಲನ್ನು ಹೊಂದಿದೆ. ಟೊಯೊಟಾ ಮತ್ತು ಮಾರುತಿ ಸುಜುಕಿ ಈ ವಿಭಾಗದಲ್ಲಿ ಪಾರಮ್ಯ ಹೊಂದಿವೆ.

ಮಹೀಂದ್ರಾ ಜೂನ್ 2024 ರವರೆಗೆ 44,793 ಮರಾಜೊಗಳನ್ನು ಮಾರಾಟ ಮಾಡಿದೆ. ಇದು ಮಾಸಿಕ ಸರಾಸರಿ ಸುಮಾರು 640 ಯುನಿಟ್​ಗಳು. ಕೋವಿಡ್ -19 ಲಾಕ್​ಡೌನ್​ ಸಮಯದಲ್ಲಿ ಮಾರಾಟವು ಕುಸಿಯಿತು. ಬಿಎಸ್ 6 ಹಂತ 2ರ ಮಾನದಂಡಗಳಿಂದಾಗಿ ಮರಾಜೊ ಕಾರಿನ ಡೀಸೆಲ್ ಎಂಜಿನ್ ಅನ್ನು ಅಪ್​ಡೇಟ್ ಮಾಡಲೂ ಸಾಧ್ಯವಾಗಲಿಲ್ಲ. ಮಾರಾಟದ ಅಂಕಿಅಂಶಗಳನ್ನು ದೃಷ್ಟಿಕೋನದಲ್ಲಿ ಹೇಳುವುದಾದರೆ ಮರಾಜೊ ಕಳೆದ ಐದು ತಿಂಗಳಲ್ಲಿ ಸರಾಸರಿ 34 ಯೂನಿಟ್​ ಮಾರಾಟ ಮಾಡಿದರೆ ಮಾರುತಿ ಮತ್ತು ಕಿಯಾ ಕ್ರಮವಾಗಿ ಸರಾಸರಿ 14,495 ಎರ್ಟಿಗಾಗಳು ಮತ್ತು 4,412 ಕ್ಯಾರೆನ್ಸ್ ಎಂಪಿವಿಗಳನ್ನು ಮಾರಾಟ ಮಾಡಿವೆ.

ಇದನ್ನೂ ಓದಿ: T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

ಈಗ 14.59 ಲಕ್ಷ-17 ಲಕ್ಷ ರೂ.ಗಳ ನಡುವೆ ಮಾರಾಟವಾಗುವ ಮತ್ತು ಮೂರು ಟ್ರಿಮ್ ಗಳನ್ನು ಹೊಂದಿರುವ ಮರಾಜೊ ಜೂನ್ ವರೆಗೆ 93,000 ರೂ.ಗಳವರೆಗೆ ರಿಯಾಯಿತಿಯೊಂದಿಗೆ ಲಭ್ಯವಿದೆ.

ಮರಾಜೊವನ್ನು ಭಾರತದಲ್ಲಿ ಅಭಿವೃದ್ಧಿ ಮಾಡಿಲ್ಲ. ಇದು ಅಮೆರಿಕದ ಮಿಚಿಗನ್ ನಲ್ಲಿರುವ ಮಹೀಂದ್ರಾ ನಾರ್ತ್ ಅಮೇರಿಕನ್ ಟೆಕ್ನಿಕಲ್ ಸೆಂಟರ್ (ಎಂಎನ್ ಎಟಿಸಿ) ರಚಿಸಿದ ಮೊದಲ ಕಾರು. ಮಾರಾಟಕ್ಕಿದ್ದ ಸಂಪೂರ್ಣ ಅವಧಿಯಲ್ಲಿ ಯಾವುದೇ ಅಪ್​​ಡೇಟ್ ಪಡೆಯಲಿಲ್ಲ. ಇದು ಅದರ ಮಾರಾಟ ಅಂಕಿಅಂಶಗಳ ಮೇಲೆ ಪರಿಣಾಮ ಬೀರಿತು. ಆರಂಭದಲ್ಲಿ ಎಎಂಟಿ- ಪೆಟ್ರೋಲ್ ಎಂಜಿನ್​ ಮಾದರಿಯ ಬಗ್ಗೆ ಮಾತುಕತೆಗಳು ನಡೆದರೂ ಕೊನೆಗೆ ಅದು ಬರಲಿಲ್ಲ.

ಮಹೀಂದ್ರಾ ಎಂಪಿವಿ ಏಕೈಕ 123 ಬಿಹೆಚ್ ಪಿ, 300 ಎನ್ಎಂ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಸಂ 17.3 ಕಿ.ಮೀ ಇಂಧನ ದಕ್ಷತೆಯ ರೇಟಿಂಗ್ ಅನ್ನು ಪಡೆದಿದೆ. ತನ್ನ ಎಂಪಿವಿ ಸಹೋದರರಲ್ಲಿಯೂ ಸಹ ಮರಾಜೊ ಲ್ಯಾಡರ್​ ಪ್ಲಾಟ್ ಫಾರ್ಮ್ ಹೊಂದಿದ್ದರೂ ಫ್ರಂಟ್-ವ್ಹೀಲ್-ಡ್ರೈವ್ ಸೆಟಪ್ ಅನ್ನು ಹೊಂದಿತ್ತು. ಹೀಗಾಗಿ ಬಿಡುಗಡೆಯಾದ ಸಮಯಕ್ಕೆ ಅಪೇಕ್ಷಿತವಾಗಿತ್ತು. ವಿಶೇಷವಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಟೊಯೊಟಾದ ಇನ್ನೋವಾ ಕ್ರಿಸ್ಟಾದಂಥ ರಿಯರ್ ವೀಲ್ ಡ್ರೈವ್ ಮಾದರಿಯು ಹೆಚ್ಚು ಗಮನ ಸೆಳೆದಿತ್ತು. ಮರಾಜೊ ಎಂಪಿವಿಯನ್ನು ಸಂಪೂರ್ಣವಾಗಿ ಲೋಡ್ ಮಾಡಿದಾಗ ಅದರ ನಾಲ್ಕು ಸಿಲಿಂಡರ್​ ಎಂಜಿನ್ ಕಡಿಮೆ ಪವರ್ ಹೊಂದಿತ್ತು.

ಮಹೀಂದ್ರಾ ಮುಂಬರುವ ವಾರಗಳಲ್ಲಿ ಥಾರ್ 5-ಡೋರ್ ಅನ್ನು ಮಾರುಕಟ್ಟೆಗೆ ತರಲು ಸಜ್ಜಾಗುತ್ತಿದೆ ಮತ್ತು ಈ ವರ್ಷದ ಅಂತ್ಯದ ವೇಳೆಗೆ ಎಕ್ಸ್ ಯುವಿ 700 ಆಧಾರಿತ ಇವಿ ಕೂಡ ಮಾರುಕಟ್ಟೆಗೆ ಬರಲಿದೆ.

Continue Reading

ದೇಶ

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

BSP President: ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಶುಕ್ರವಾರ (ಜುಲೈ 5) ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಉಪಯೋಗ ಆಗಲಿಲ್ಲ. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

BSP President
Koo

ಚೆನ್ನೈ: ರಾಜಕೀಯ ಹತ್ಯೆ, ಹಿಂಸಾಚಾರ, ಬೇರೆ ರಾಜಕೀಯ ಪಕ್ಷದ ನಾಯಕರ ಮೇಲೆ ಹಲ್ಲೆಗಳು ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಇಂತಹ ರಾಜಕೀಯ ದ್ವೇಷದ ಹತ್ಯೆಗಳು ತಮಿಳುನಾಡಿಗೂ ಕಾಲಿಟ್ಟಿವೆ. ಇದಕ್ಕೆ ನಿದರ್ಶನ ಎಂಬಂತೆ, ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಮಾಡಲಾಗಿದೆ. ಚೆನ್ನೈನಲ್ಲಿರುವ (Chennai) ಅವರ ನಿವಾಸದ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಶುಕ್ರವಾರ (ಜುಲೈ 5) ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿದೆ. ಮಾರಕಾಸ್ತ್ರಗಳ ಸಮೇತ ಆಗಮಿಸಿದ ಅವರು ದಾಳಿ ನಡೆಸಿ, ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ನಗರದಲ್ಲಿರುವ ಥೌಸಂಡ್‌ ಲ್ಯಾಂಪ್ಸ್‌ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್‌ ಅವರು ಇದಕ್ಕೂ ಮೊದಲು ಗ್ರೇಟರ್‌ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್‌ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್‌ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್‌ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಇಷ್ಟಾದರೂ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯಲಾಗಿದೆ.

ಆರ್ಮ್‌ಸ್ಟ್ರಾಂಗ್‌ ಜತೆಗೆ ಇನ್ನಿಬ್ಬರ ಮೇಲೆಯೂ ಹಲ್ಲೆ ನಡೆದಿದ್ದು, ಅವರು ಗಾಯಗೊಂಡಿದ್ದಾರೆ. ದಾಳಿ ಮಾಡಿದ ಆರು ಮಂದಿಯ ಕುರಿತು ಇದುವರೆಗೆ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದಾಗ್ಯೂ, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Dengue Fever: ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ.

VISTARANEWS.COM


on

Dengue Fever
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿವೆ. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಗ್ಯೂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಬಲಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಗುಡಿಬಂಡೆ ಪಟ್ಟಣದ‌ ನಿವಾಸಿ ವೇಣು(50) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರರಿಂದ ವೇಣು ಅವರು ಮೃತಪಟ್ಟಿರುವುದಾಗಿ ಸಂಬಂಧಿಕರು ಹೇಳಿದ್ದಾರೆ.

ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಹೀಗಾಗಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಬಿಬಿಎಂಪಿ, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಭಾರಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ನಿರ್ಧರಿಸಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ. 50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ನೆನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.

Continue Reading

ಪ್ರಮುಖ ಸುದ್ದಿ

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

T20 World Cup : 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಐಸಿಸಿ ಟಿ20 ವಿಶ್ವಕಪ್ (T20 World Cup) ಗೆದ್ದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ತಂಡದ ಆಟಗಾರರು ಸಂಭ್ರಮದಲ್ಲಿದ್ದಾರೆ. ಬಾರ್ಬಡೋಸ್​​​ನ ಬ್ರಿಜ್​​ಟೌನ್​​ ಕೆನ್ಸಿಂಗ್ಟನ್ ಓವಲ್​​ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್​​ಗಳಿಂದ ಸೋಲಿಸಿ ಟಿ20 ಕ್ರಿಕೆಟ್​ ಇತಿಹಾಸದಲ್ಲಿ ಎರಡನೇ ಟಿ 20 ಪ್ರಶಸ್ತಿ ಗೆದ್ದುಕೊಂಡಿತು. 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮುಂಬೈ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಪ್ರಮುಖ ಪಾತ್ರ ವಹಿಸಿದ್ದರು. ರೋಹಿತ್ ತಂಡವನ್ನು ಮುನ್ನಡೆಸಿದರೆ ಸೂರ್ಯಕುಮಾರ್ ಮತ್ತು ದುಬೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು.

ರೋಹಿತ್ ಶರ್ಮಾ ಪ್ರಭಾವಿ ನಾಯಕತ್ವವನ್ನು ಪ್ರದರ್ಶಿಸಿದ್ದರು ಮತ್ತು ಅವರ ಅದ್ಭುತ ತಂತ್ರಗಾರಿಕೆ ತೋರಿದ್ದರು. ಭಾರತದ ನಾಯಕ ಅದ್ಭುತ ಬೌಲಿಂಗ್ ಬದಲಾವಣೆಗಳು ಮತ್ತು ಫೀಲ್ಡ್ ಪ್ಲೇಸ್​ಮೆಂಟ್​​ಗಳು ಟೂರ್ನಿಯುದ್ದಕ್ಕೂ ಗಮನ ಸೆಳೆಯಿತು. ಇದು ಪ್ರತಿಯೊಂದು ಪಂದ್ಯದಲ್ಲೂ ಫಲ ನೀಡಿತು. 2024 ರ ಟಿ 20 ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸಹಾಯ ಮಾಡಿತು.

ಸೂರ್ಯಕುಮಾರ್ ಯಾದವ್ ಕೂಡ ಬ್ಯಾಟಿಂಗ್​ನಲ್ಲಿ ಉತ್ತಮ ಪಾತ್ರ ವಹಿಸಿದ್ದರು. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಮತ್ತು ಯುಎಸ್ಎ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮೂಲಕ ಉತ್ತಮ ಪ್ರದರ್ಶನವನ್ನು ನೀಡಿದ್ದರು. ಅಲ್ಲಿ ಭಾರತವು ಮುಂದುವರಿಯಲು ಹೆಣಗಾಡಿತು. ಅವರು ತಂಡದ ಪ್ರಮುಖ ಪಂದ್ಯಗಳಲ್ಲಿ ನಿರ್ಣಾಯಕ ಅರ್ಧ ಶತಕಗಳನ್ನು ಗಳಿಸಿದ್ದರು.

ಸೂರ್ಯಕುಮಾರ್ ಎಂಟು ಪಂದ್ಯಗಳಲ್ಲಿ 28.42 ಸರಾಸರಿಯಲ್ಲಿ 199 ರನ್ ಗಳಿಸಿದ್ದರೆ, ಟಿ 20 ವಿಶ್ವಕಪ್​​ನ ಫೈನಲ್​​ನಲ್ಲಿ ರೋಚಕ ಕ್ಯಾಚ್ ಹಿಡಿದು ಡೇವಿಡ್​ ಮಿಲ್ಲರ್​ ಅವರನ್ನು ಔಟ್ ಮಾಡಿದ್ದರು. ಆ ಕ್ಯಾಚ್ ಭಾರತವನ್ನು ಗೆಲ್ಲಿಸಿತ್ತು.

ಶಿವಂ ದುಬೆ ಕೂಡ ಉತ್ತಮವಾಗಿ ಆಡಿದ್ದರು. ಆಲ್ರೌಂಡರ್ ಮಧ್ಯದಲ್ಲಿ ಬ್ಯಾಟರ್​ ಮತ್ತು ಅವರು ಪರಿಣಾಮಕಾರಿ ಇನ್ನಿಂಗ್ಸ್​ಗಳನ್ಉ ಆಡುವುದನ್ನು ಖಚಿತಪಡಿಸಿಕೊಂಡರು. ಅವರು 16 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಒಂದು ಬೌಂಡರಿ ಸೇರಿದಂತೆ 27 ರನ್ ಗಳಿಸಿದ್ದರು. 168 ಸ್ಟ್ರೈಕ್ ರೇಟ್​​ನಲ್ಲಿ ಇದು ಫೈನಲ್​ನಲ್ಲಿ ಭಾರತೀಯ ಬ್ಯಾಟರ್​​​ಗಳ ಪೈಕಿ ಅತ್ಯಧಿಕವಾಗಿದೆ.

11 ಕೋಟಿ ರೂ. ಬಹುಮಾನ ಘೋಷಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ

2024 ರ ಟಿ 20 ವಿಶ್ವಕಪ್​​ನಲ್ಲಿ ಮುಂಬೈ ಮೂಲದ ಆಟಗಾರರು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದರಿಂದ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರಂತಹ ನಾಲ್ವರು ಆಟಗಾರರಿಗೆ ಬಹುಮಾನದ ಮೊತ್ತವನ್ನು ಘೋಷಿಸಿದ್ದಾರೆ.

ಇದನ್ನೂ ಓದಿ: Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

ಮುಂಬೈ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರದಿಂದ 11 ಕೋಟಿ ರೂಪಾಯಿ ಹಾಗೂ ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಉಡುಗೊರೆಯಾಗಿ ನೀಡಿದರು.

2024 ರ ಟಿ 20 ವಿಶ್ವಕಪ್ ನಲ್ಲಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ನಂತರ, ರೋಹಿತ್ ಶರ್ಮಾ ಟಿ 20ಯಿಂದ ನಿವೃತ್ತಿ ಘೋಷಿಸಿದರು. ಅವರು 4231 ರನ್​ಗಳೊಂದಿಗೆ ಸಾರ್ವಕಾಲಿಕ ಅತ್ಯಧಿಕ ರನ್ ಸ್ಕೋರರ್ ಆಗಿ ತಮ್ಮ ವೃತ್ತಿಜೀವನ ಕೊನೆಗೊಳಿಸಿದರು. ನಾಯಕ ಐದು ಶತಕಗಳನ್ನು ಗಳಿಸಿದ್ದಾರೆ. ಇದು ಟಿ 20 ಐ ಕ್ರಿಕೆಟ್​​ನಲ್ಲಿ ಬ್ಯಾಟರ್​ ಗಳಿಸಿದ ಗರಿಷ್ಠ ಮೊತ್ತವಾಗಿದೆ. ಅವರು 32 ಅರ್ಧಶತಕ ಬಾರಿಸಿದ್ದರೆ ವೃತ್ತಿಜೀವನದ ಸ್ಟ್ರೈಕ್ ರೇಟ್ 140 ಆಗಿದೆ.

Continue Reading
Advertisement
Mahindra Marazzo
ಪ್ರಮುಖ ಸುದ್ದಿ6 mins ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ31 mins ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ45 mins ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ51 mins ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ1 hour ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ1 hour ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್1 hour ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ1 hour ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ2 hours ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Teach for India
ಬೆಂಗಳೂರು2 hours ago

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ6 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ6 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ8 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ10 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು11 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು11 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ16 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌