40 ವರ್ಷದ ಬಳಿಕ ಭಾರತ-ಶ್ರೀಲಂಕಾ ಮಧ್ಯೆ ಫೆರಿ ಸೇವೆ! ಟಿಕೆಟ್ ರೇಟ್ ಎಷ್ಟು? - Vistara News

ದೇಶ

40 ವರ್ಷದ ಬಳಿಕ ಭಾರತ-ಶ್ರೀಲಂಕಾ ಮಧ್ಯೆ ಫೆರಿ ಸೇವೆ! ಟಿಕೆಟ್ ರೇಟ್ ಎಷ್ಟು?

India -Sri Lanka: ಭಾರತ ಮತ್ತು ಶ್ರೀಲಂಕಾ ಮಧ್ಯೆ ಚಾಲ್ತಿಯಲ್ಲಿದ್ದ ಫೆರಿ ಸೇವೆಯನ್ನು 1982ರಲ್ಲಿ ರದ್ದುಗೊಳಿಸಲಾಗಿತ್ತು.

VISTARANEWS.COM


on

Ferry service between India and Sri Lanka after 40 years
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ, ತಮಿಳುನಾಡು: ಸುಮಾರು 40 ವರ್ಷಗಳ ಬಳಿಕ ಭಾರತ ಮತ್ತು ದ್ವೀಪ ರಾಷ್ಟ್ರ ಶ್ರೀಲಂಕಾ (India – Sri Lanka) ಮಧ್ಯೆ ಫೆರಿ ಸೇವೆ (Ferry Service) ಆರಂಭವಾಗಿದೆ. ಹೈಸ್ಪೀಡ್ ದೋಣಿ ಎರಡು ನೆರೆ ಹೊರೆ ರಾಷ್ಟ್ರಗಳನ್ನು ಸಂಪರ್ಕಿಸಲಿದೆ. ಕೇಂದ್ರ ಹಡಗು ಮತ್ತು ಜಲಸಾರಿಗೆ, ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್ (Union Minister Sarbananda Sonowal) ಅವರು, ತಮಿಳುನಾಡಿನ (Tamil Nadu) ನಾಗಪಟ್ಟಿಣಂ (nagapattinam) ಮತ್ತು ಶ್ರೀಲಂಕಾದ ಉತ್ತರ ಪ್ರಾಂತ್ಯದ ಕಂಕಸಂತುರೈ (Kankesanthurai) ಸಂಪರ್ಕಿಸುವ ಚೆರಿಯಪಾಣಿಗೆ (Cheriyapani) ಚಾಲನೆ ನೀಡಿದರು.

ಶನಿವಾರ ಬೆಳಿಗ್ಗೆ 8 ಗಂಟೆ 15 ನಿಮಿಷಕ್ಕೆ ಚೆರಿಯಪಾಣಿ (ಫೆರಿ) ಕ್ಯಾಪ್ಟನ್ ಬಿಜು ಜಾರ್ಜ್ ನೇತೃತ್ವದಲ್ಲಿ 50 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ನಾಗಪಟ್ಟಿಣಂ ಬಂದರಿನಿಂದ ಕಂಕಸಂತುರೈ ಕಡೆಗೆ ಹೊರಟಿತು. ಈ ಫೆರಿ ಮೂರು ಗಂಟೆಯಲ್ಲಿ ಶ್ರೀಲಂಕವನ್ನು ತಲುಪಲಿದೆ. ಪ್ರಯಾಣಿಕರ ದೋಣಿ ಸೇವೆಯನ್ನು ಪುನರಾರಂಭಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದರು. ವೀಡಿಯೊ ಭಾಷಣದಲ್ಲಿ ಅವರು, ನಾವು ಭಾರತ ಮತ್ತು ಶ್ರೀಲಂಕಾ ನಡುವಿನ ರಾಜತಾಂತ್ರಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇವೆ. ನಾಗಪಟ್ಟಣಂ ಮತ್ತು ಕಂಕೆಸಂತುರೈ ನಡುವೆ ದೋಣಿ ಸೇವೆಯನ್ನು ಪ್ರಾರಂಭಿಸುವುದು ನಮ್ಮ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದು ತಿಳಿಸಿದ್ದಾರೆ.

ನಾಗಪಟ್ಟಣಂ ಶಿಪ್ಪಿಂಗ್ ಹಾರ್ಬರ್ ಇಲಾಖೆಯ ಅಧಿಕಾರಿಗಳು ಅಕ್ಟೋಬರ್ 14 ಕ್ಕೆ ಒಂದು ದಿನದ ಪ್ರಚಾರದ ಕೊಡುಗೆಯಾಗಿ 2,375 ರೂ. ಮತ್ತು ಶೇ.18 ರಷ್ಟು ತೆರಿಗೆ ಸೇರಿದಂತೆ 2,800 ರೂ. ವಿಶೇಷ ಪ್ರಯಾಣವನ್ನು ಪರಿಚಯಿಸಿದ್ದಾರೆ. ವಾಸ್ತವದಲ್ಲಿ ಈ ಟಿಕೆಟ್ ಮೂಲ ದರವು 6,500 ರೂ. ಇದ್ದು ಶೇ.18 ತೆರಿಗೆ ಸೇರಿ 7670 ರೂ. ಇರಲಿದೆ. ಆದರೆ, ಆರಂಭದ ಕೊಡುಗೆಯಾಗಿ ಶೇ.75ರಷ್ಟು ರಿಯಾಯ್ತಿಯನ್ನು ನೀಡಲಾಗಿದೆ.

ಈ ಫೆರಿ ಸೇವೆಯನ್ನು ಅಕ್ಟೋಬರ್ 10ರಂದೇ ಆರಂಭಿಸಲು ಯೋಜಿಸಲಾಗಿತ್ತು. ಆದರೆ, ಕೆಲವು ಆಡಳಿತಾತ್ಮಕ ತೊಂದರೆಗಳಿಂದಾಗಿ ತಡವಾಯಿತು. ಅಕ್ಟೋಬರ್ 10ರ ಬದಲಿಗೆ 12ಕ್ಕೆ ನಿಗದಿ ಮಾಡಲಾಯಿತು. ಮತ್ತೆ ಅ.12ರ ಬದಲಿಗೆ ಅಕ್ಟೋಬರ್ 14ಕ್ಕೆ ಚಾಲನೆ ನೀಡಲಾಯಿತು.

ಈ ಸುದ್ದಿಯನ್ನೂ ಓದಿ: ಪ್ರಧಾನಿ ಮೋದಿ ಲೇಖನ: ಭಾರತದ ಆಧುನಿಕ, ಪ್ರಗತಿಪರ ಕೃಷಿಗೆ ಎಂ ಎಸ್ ಸ್ವಾಮಿನಾಥನ್ ಅಡಿಪಾಯ

ಭಾರತ ಮತ್ತು ಶ್ರೀಲಂಕ ಜಂಟಿ ಸಮಿತಿಯ ಅಡಿಯಲ್ಲಿ ಈ ಯೋಜನೆಯು ಪ್ರಾದೇಶಿಕ ವ್ಯಾಪಾರ ಮತ್ತು ಪ್ರವಾಸೋದ್ಯಮವನ್ನು ಪುನರುಜ್ಜೀವನಗೊಳಿಸುವ ಮತ್ತು ಬಲವಾದ ಜನರ-ಜನರ ಸಂಬಂಧಗಳನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಈ ಉಪಕ್ರಮವು 1900ರ ದಶಕದ ಆರಂಭದಿಂದಲೂ ಎರಡು ದೇಶಗಳ ನಡುವೆ ಅಸ್ತಿತ್ವದಲ್ಲಿದ್ದ ಐತಿಹಾಸಿಕ ಸಮುದ್ರ ಸಂಬಂಧಗಳನ್ನು ಮತ್ತೆ ಪುನರಾರಂಭಿಸುತ್ತದೆ ಎಂದು ಹೇಳಲಾಗುತ್ತಿದೆ.

ನಾಲ್ಕು ದಶಕಗಳ ಹಿಂದೆ ಭಾರತ ಮತ್ತು ಶ್ರೀಲಂಕಾ ಮಧ್ಯೆ ಇಂಡೋ-ಸಿಲೋನ್ ಎಕ್ಸ್‌ಪ್ರೆಸ್ ಫೆರಿ ಕಾರ್ಯಾಚರಣೆ ಮಾಡುತ್ತಿತ್ತು. ಈ ಫೆರಿ ಚೆನ್ನೈ ಮೂಲಕ ಬಂದರು ನಗರ ಥೂಥುಕೂಡಿ ಮತ್ತು ಕೊಲೊಂಬ ನಡುವೆ ಸಂಚರಿಸುತ್ತಿತ್ತು. ಆದರೆ, ಶ್ರೀಲಂಕಾದಲ್ಲಿ ನಾಗರಿಕ ಯುದ್ಧ ಶುರುವಾದ ಬಳಿಕ 1982ರಲ್ಲಿ ಈ ಫೆರಿಯನ್ನು ಸ್ಥಗಿತಗೊಳಿಸಲಾಯಿತು. ಎರಡು ದೇಶಗಳು ಪ್ರಯಾಣಿಕರ ಸಾರಿಗೆ ಒಪ್ಪಂದಕ್ಕೆ ಸಹಿ ಹಾಕಿದ ಎರಡು ವರ್ಷಗಳ ನಂತರ ದೋಣಿ ಸೇವೆಯನ್ನು ಮರುಪರಿಚಯಿಸಲಾಯಿತು. ಆದರೂ ಮುಂದುವರಿಯಲಿಲ್ಲ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Suresh Gopi: ಸಚಿವ ಸ್ಥಾನಕ್ಕೆ ಬಿಜೆಪಿಯ ಸುರೇಶ್‌ ಗೋಪಿ ರಾಜೀನಾಮೆ; ಮಹತ್ವದ ಸ್ಪಷ್ಟನೆ ಕೊಟ್ಟ ಸಂಸದ

Suresh Gopi: ಎಡರಂಗದ ಭದ್ರಕೋಟೆಯಾಗಿದ್ದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದು, ಕೇರಳದ ಮೊದಲ ಬಿಜೆಪಿ ಸಂಸದರಾಗಿ ಇತಿಹಾಸ ನಿರ್ಮಿಸಿದ್ದಾರೆ. ಸುರೇಶ್ ಗೋಪಿ ಅವರು ಸಿಪಿಐನ ವಿ.ಎಸ್.ಸುನಿಲ್ ಕುಮಾರ್ ಅವರನ್ನು 74,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ಇವರು ಭಾನುವಾರ ಕೇಂದ್ರ ಖಾತೆ ಸಹಾಯಕ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ

VISTARANEWS.COM


on

Suresh Gopi
Koo

ತಿರುವನಂತಪುರಂ: ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್‌ ಗೋಪಿ (Suresh Gopi) ಅವರು ಕೇಂದ್ರ ಸಚಿವ ಸ್ಥಾನಕ್ಕೆ (Central Minister) ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸಚಿವನಾಗಿ ಇರುವುದಕ್ಕಿಂತ, ಸಂಸದನಾಗಿ ಕೆಲಸ ಮಾಡಲು ಅವರು ಬಯಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಸುರೇಶ್‌ ಗೋಪಿ ಅವರು ಮಹತ್ವದ ಸ್ಪಷ್ಟನೆ ನೀಡಿದ್ದು, “ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುವ ವರದಿಗಳು ಶುದ್ಧ ಸುಳ್ಳು” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

“ನಾನು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂಬುದಾಗಿ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ/ ಆದರೆ, ಇದು ಶುದ್ಧ ಸುಳ್ಳು. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇರಳದ ಏಳಿಗೆಗೆ ಶ್ರಮಿಸುತ್ತೇನೆ” ಎಂಬುದಾಗಿ ಸುರೇಶ್‌ ಗೋಪಿ ಅವರು ಪೋಸ್ಟ್‌ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಮೋದಿ 3.0 ಕ್ಯಾಬಿನೆಟ್​ನಲ್ಲಿ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಸುರೇಶ್ ಗೋಪಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುದ್ದೆಯಿಂದ ಮುಕ್ತರಾಗಲು ಮತ್ತು ತ್ರಿಶೂರ್ ಜನರಿಗಾಗಿ ಸಂಸದರಾಗಿ ಕೆಲಸ ಮಾಡಲು ಬಯಸುವುದಾಗಿ ಹೇಳಿದ್ದಾರೆ. ನಟ-ರಾಜಕಾರಣಿ ಸುರೇಶ್ ಗೋಪಿ ಅವರು ಚಲನಚಿತ್ರಗಳಿಗೆ ಸಹಿ ಹಾಕಿದ್ದಾರೆ. ಅವುಗಳನ್ನು ಮುಗಿಸಲೇಬೇಕು ಎಂದು ಹೇಳಿದ್ದಾರೆ ಎಂಬುದಾಗಿ ವರದಿಯಾಗಿತ್ತು.

ಸಂಸದನಾಗಿ ಕೆಲಸ ಮಾಡುವುದು ನನ್ನ ಗುರಿ. ನಾನು ಏನನ್ನೂ ಕೇಳಲಿಲ್ಲ. ನನಗೆ ಈ ಹುದ್ದೆ ಅಗತ್ಯವಿಲ್ಲ ಎಂದು ನಾನು ಹೇಳಿದ್ದೆ. ನಾನು ಶೀಘ್ರದಲ್ಲೇ ಹುದ್ದೆಯಿಂದ ಮುಕ್ತನಾಗುತ್ತೇನೆ ಎಂದು ನಾನು ಭಾವಿಸುತ್ತೇನೆ. ತ್ರಿಶೂರ್ ಮತದಾರರಿಗೆ ಯಾವುದೇ ಸಮಸ್ಯೆ ಇಲ್ಲ. ಅವರಿಗೆ ಅದು ತಿಳಿದಿದೆ ಮತ್ತು ಸಂಸದನಾಗಿ ನಾನು ಅವರಿಗಾಗಿ ಕಾರ್ಯನಿರ್ವಹಿಸುತ್ತೇನೆ. ನಾನು ನನ್ನ ಚಲನಚಿತ್ರಗಳನ್ನು ಮುಗಿಸಬೇಕು ಎಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ದೆಹಲಿಯಲ್ಲಿ ಹೇಳಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು.

ಎಡರಂಗದ ಭದ್ರಕೋಟೆಯಾಗಿದ್ದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದು, ಕೇರಳದ ಮೊದಲ ಬಿಜೆಪಿ ಸಂಸದರಾಗಿ ಇತಿಹಾಸ ನಿರ್ಮಿಸಿದ್ದಾರೆ. ಸುರೇಶ್ ಗೋಪಿ ಅವರು ಸಿಪಿಐನ ವಿ.ಎಸ್.ಸುನಿಲ್ ಕುಮಾರ್ ಅವರನ್ನು 74,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕೆ ಮುರಳೀಧರನ್ ಅವರನ್ನು ಕಣಕ್ಕಿಳಿಸಿತ್ತು. 2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಸುರೇಶ್ ಗೋಪಿ ‘ತ್ರಿಶೂರ್​ಗೆ ಕೇಂದ್ರ ಸಚಿವ ಸ್ಥಾನ, ಮೋದಿಯವರ ಗ್ಯಾರಂಟಿ’ ಎಂಬ ಘೋಷಣೆಯೊಂದಿಗೆ ಪ್ರಚಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Suresh Gopi: ಕೇರಳದಲ್ಲಿ ಬಿಜೆಪಿ ಖಾತೆ ತೆರೆದಿರುವ ಸುರೇಶ್‌ ಗೋಪಿ ಜೀವನದಲ್ಲಿ ನಡೆದಿತ್ತೊಂದು ಘೋರ ದುರಂತ

Continue Reading

ವೈರಲ್ ನ್ಯೂಸ್

Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

Viral Video ಬಿಜೆಪಿ ಶಾಲು ಧರಿಸಿದ ವ್ಯಕ್ತಿ ಅಯೋಧ್ಯೆ ಹೆಸರಿನ ಪ್ರತಿಮೆಗೆ ಬೆಂಕಿ ಹಚ್ಚಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಈ ಘಟನೆಯ ಕುರಿತು ತನಿಖೆ ನಡೆಸುವಂತೆ ಅಯೋಧ್ಯೆ ಪೊಲೀಸರಿಗೆ ಆದೇಶಿಸಲಾಗಿದೆ.

VISTARANEWS.COM


on

Viral Video
Koo

ಅಯೋಧ್ಯೆ ಹಿಂದೂ ಧರ್ಮಗಳ (Viral video) ಪವಿತ್ರ ಸ್ಥಳವೆಂದು ಕರೆಯಬಹುದು. ಯಾಕೆಂದರೆ ಇದು ಭಗವಾನ್ ಶ್ರೀರಾಮನ ಜನ್ಮಭೂಮಿ ಮಾತ್ರವಲ್ಲ ಇತ್ತೀಚೆಗಷ್ಟೇ ಇಲ್ಲಿ ರಾಮಮಂದಿರವನ್ನು ನಿರ್ಮಿಸಲಾಗಿತ್ತು. ಇಂತಹ ಪವಿತ್ರ ಸ್ಥಳದಲ್ಲಿ ವ್ಯಕ್ತಿಯೊಬ್ಬ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

ಲೋಕಸಭೆಯ ಚುನಾವಣೆಯ ನಂತರ ಈ ಕಾರ್ಯ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಈ ಘಟನೆಯ ಕುರಿತು ತನಿಖೆ ನಡೆಸುವಂತೆ ಅಯೋಧ್ಯೆ ಪೊಲೀಸರಿಗೆ ಆದೇಶಿಸಲಾಗಿದೆ. ಸೈಬರ್ ಪೊಲೀಸ್ ಠಾಣೆಯ ಪೊಲೀಸ್ ಇನ್ ಪೆಕ್ಟರ್ ಗೆ ಇದರ ಸಂಪೂರ್ಣ ವಿಚಾರಣೆ ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.

ಅಯೋಧ್ಯೆ ಜನತೆ ಮೇಲೆ ಬಿಜೆಪಿ ಬೆಂಬಲಿಗರ ಆಕ್ರೋಶ

ಅಯೋಧ್ಯೆಯಲ್ಲಿ ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಮಮಂದಿರವನ್ನು ನಿರ್ಮಿಸಿತ್ತು. ಹಾಗಿದ್ದರೂ ಈ ಬಾರಿಯ ಲೋಕ ಸಭೆಯ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದಲ್ಲಿ  ಬಿಜೆಪಿ ಪಕ್ಷದ ಅಭ್ಯರ್ಥಿ ಲಲ್ಲೂ ಸಿಂಗ್ ಸೋಲನುಭವಿಸಿದ್ದರು. ಹೀಗಾಗಿ ಅಯೋಧ್ಯೆ ಜನರ ಮೇಲೆ ಅನೇಕ ಬಿಜೆಪಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ನಡುವೆ ಬಿಜೆಪಿ ಶಾಲು ಧರಿಸಿದ ವ್ಯಕ್ತಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿಯ ಮೇಲೆ ಹಿಂದೂಗಳನ್ನು ಎತ್ತಿಕಟ್ಟುವ ಹುನ್ನಾರವೇ? ಅಥವಾ ಬಿಜೆಪಿಗರು ಅಯೋಧ್ಯೆ ಜನರ ಮೇಲೆ ವ್ಯಕ್ತಪಡಿಸಿದ ಆಕ್ರೋಶವೇ? ಎಂಬ ಶಂಕೆ ವ್ಯಕ್ತವಾದ ಹಿನ್ನಲೆಯಲ್ಲಿ ಈ ಘಟನೆಯನ್ನ ತನಿಖೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

ಅಯೋಧ್ಯೆ ಜನರನ್ನು ಗುರಿಯಾಗಿಸಿಕೊಂಡು ನಿಂದನಾತ್ಮಕವಾಗಿ ಮಾಡಿದ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಬಳಕೆದಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಉದ್ವಿಗ್ನ ಮತ್ತು ಹಿಂಸಾಚಾರ ಪರಿಸ್ಥಿತಿಯನ್ನು ಹುಟ್ಟುಹಾಕುವ ಹುನ್ನಾರವನ್ನು ಎತ್ತಿ ತೋರಿಸುತ್ತದೆ. ಹಾಗಾಗಿ  ಅಯೋಧ್ಯೆ ನಿವಾಸಿಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡಬೇಕು ಮತ್ತು ಮತ್ತಷ್ಟು ಹಿಂಸಾಚಾರ ಅಥವಾ ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಕ್ರಮ ತೆಗೆದುಕೊಳ್ಳಬೇಕೆಂದು ಸೋಶಿಯಲ್ ಮೀಡಿಯಾದ ಬಳಕೆದಾರರು ತಿಳಿಸಿದ್ದಾರೆ.

ಒಟ್ಟಾರೆ ಈ ವಿಡಿಯೋ ಜನರ ಆಕ್ರೋಶಕ್ಕೆ ಕಾರಣವಾಗಿದ್ದು, ತನಿಖೆಯ ಬಳಿಕ ಇದರ ಹಿಂದಿನ ಉದ್ದೇಶ ತಿಳಿದುಬರಬೇಕಿದೆ.

Continue Reading

ದೇಶ

Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

Indian Chutneys: ಅಡುಗೆ ಎಂಬ ಶಬ್ದ ಕಿವಿಯ ಮೇಲೆ ಇದ್ದರೆ ಹೊಟ್ಟೆ ಜಾಗೃತವಾಗುತ್ತದೆ. ರುಚಿಯಾದ ಅಡುಗೆಯನ್ನು ಚಪ್ಪರಿಸಿ ತಿನ್ನುವುದೇ ಒಂದು ಭಾಗ್ಯ. ಇನ್ನು ಮಸಾಲೆ ಸಾಮಗ್ರಿಗಳನ್ನು ಬಳಸಿ ಮಾಡುವ ಭಾರತದ ಅಡುಗೆಗಳು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿವೆ. ಭಾರತದ ಅಡುಗೆಗೆ ಈಗ ಇನ್ನೊಂದು ಗರಿ ಮೂಡಿದೆ. ಅದೇನೆಂದರೆ ಊಟದ ಎಲೆಯ ತುದಿಯ ಮೇಲೆ ಬೀಳುವ ಚಟ್ನಿ  ಈಗ ವಿಶ್ವದ 50 ಡಿಪ್‌ ಗಳಲ್ಲಿ ಸ್ಥಾನ ಪಡೆದಿದೆಯೆಂತೆ.  

VISTARANEWS.COM


on

Indian Chutneys
Koo

ಬೆಂಗಳೂರು: ಚಟ್ನಿ ಎಂದಾಗ ಬಾಯಲ್ಲಿ ನೀರು ಬರುವುದು ಸಹಜ. ದೋಸೆ, ಇಡ್ಲಿ ಮಾಡಿದಾಗ ಸಾಂಬಾರಿನ ಹಂಗಿಲ್ಲದೇ ಚಟ್ನಿ ಜೊತೆ ಇವುಗಳನ್ನು ಸವಿಯಬಹುದು. ಇನ್ನು ಬಿಸಿ ಬಿಸಿ ಅನ್ನದ (Rice) ಜೊತೆಗೆ ಈ ಚಟ್ನಿಯ ಕಾಂಬಿನೇಷನ್‌ ಸೂಪರ್‌ ಆಗಿರುತ್ತದೆ. ಹೆಚ್ಚಾಗಿ  ನಾವು ಕೊತ್ತಂಬರಿಸೊಪ್ಪಿನ ಚಟ್ನಿ, ಮಾವಿನಕಾಯಿ ಚಟ್ನಿ (Mango Chutney), ಟೊಮೆಟೊ ಚಟ್ನಿ, ಶೇಂಗಾ ಚಟ್ನಿ ಮಾಡುತ್ತೇವೆ. ಇನ್ನು ಹಲವು ಬಗೆಯ ತರಕಾರಿಗಳನ್ನು ಬಳಸಿ ರುಚಿ ರುಚಿಯಾದ ಚಟ್ನಿಗಳನ್ನು ಮಾಡಬಹುದು. ಚಟ್ನಿಯ ಕುರಿತು ಯಾಕಿಷ್ಟು ಪೀಠಿಕೆಯೆಂದರೆ, ಇದೀಗ ಭಾರತದ ಚಟ್ನಿಗಳಲ್ಲಿ (Indian Chutneys)ಎರಡು ಚಟ್ನಿಗಳು ವಿಶ್ವದ 50 ಡಿಪ್ ಗಳಲ್ಲಿ ಸ್ಥಾನ ಪಡೆದಿವೆಯಂತೆ!

ಟೇಸ್ಟ್ ಅಟ್ಲಾಸ್ ಇತ್ತೀಚೆಗೆ ಜೂನ್ 2024ರ  ಶ್ರೇಯಾಂಕದ ಪ್ರಕಾರ ವಿಶ್ವದ 50 ಅತ್ಯುತ್ತಮ ಡಿಪ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಭಾರತೀಯ ಮಿಕ್ಸ್ ಚಟ್ನಿ  42ನೇ ಸ್ಥಾನ ಪಡೆದುಕೊಂಡಿದೆ. ಈ ಚಟ್ನಿಯನ್ನು ಬೇಯಿಸಿದ ಹಣ್ಣು ಮತ್ತು ತರಕಾರಿಗಳಿಂದ ತಯಾರಿಸಲಾಗುತ್ತದೆ. ಹಣ್ಣು ಹಾಗೂ ತರಕಾರಿಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಅದಕ್ಕೆ ಜೀರಿಗೆ, ಏಲಕ್ಕಿ, ಹುಣಸೆಹಣ್ಣು, ಶುಂಠಿ ಮತ್ತು ಅರಿಶಿನದಂತಹ ವಿವಿಧ ಮಸಾಲೆಗಳನ್ನು ಬೆರೆಸಿ ತಯಾರಿಸಲಾಗುತ್ತದೆಯಂತೆ. ಇದನ್ನು “ಭಾರತದ ರಾಷ್ಟ್ರೀಯ ಕಾಂಡಿಮೆಂಟ್ಸ್”ಎಂದು ಕರೆಯಲಾಗಿದೆ. ಹಾಗೇ ಟೇಸ್ಟ್ ಅಟ್ಲಾಸ್ ನ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿ ನಮಗೆ ಪ್ರಿಯವಾದಂತಹ ಕೊತ್ತಂಬರಿ ಚಟ್ನಿ (ಧನಿಯಾ ಚಟ್ನಿ) ಹಾಗೂ ಕೊನೆಯ ಅಂದರೆ 50 ನೇ ಸ್ಥಾನದಲ್ಲಿ ಮಾವಿನ ಚಟ್ನಿ ಇದೆ. ಇದನ್ನು ಮಾವಿನ ಹಣ್ಣಿನಿಂದ ತಯಾರಿಸಲಾಗುತ್ತದೆ. ಈ ಮಾವಿನ ಚಟ್ನಿ ಹುಳಿ, ಸಿಹಿ ಮತ್ತು ಮಸಾಲೆಯ ಸುವಾಸನೆಯಿಂದ ಕೂಡಿತ್ತು ಎನ್ನಲಾಗಿದೆ.

ಅಲ್ಲದೇ ಈ ಪಟ್ಟಿಯಲ್ಲಿ ಲೆಬನಾನ್ ನಿಂದ ಟೌಮ್ ಮೊದಲ ಸ್ಥಾನದಲ್ಲಿದ್ದರೆ , ಮೆಕ್ಸಿಕನ್ ನ ಜನಪ್ರಿಯ ಡಿಲೈಟ್ ಗ್ವಾಕಮೋಲ್ 4ನೇ ಸ್ಥಾನದಲ್ಲಿದೆ. ಹಮ್ಮಸ್ 10 ನೇ ಸ್ಥಾನವನ್ನು ಪಡೆದುಕೊಂಡಿದೆ.

ಇದಕ್ಕೂ ಮೊದಲು ಹಲವಾರು ಭಾರತೀಯ ಭಕ್ಷ್ಯಗಳು ಟೇಸ್ಟ್ ಅಟ್ಲಾಸ್ ನ ಟಾಪ್ 50 ಪಟ್ಟಿಗಳಲ್ಲಿ ಸ್ಥಾನ ಪಡೆದಿತ್ತು. ವಡಾ ಪಾವ್, ಮಹಾರಾಷ್ಟ್ರದ ಪ್ರಸಿದ್ಧ ಬೀದಿ ಶೈಲಿಯ ತಿಂಡಿ ವಿಶ್ವದ ಅತ್ಯುತ್ತಮ ಸ್ಯಾಂಡ್ ವಿಚ್ ಗಳಲ್ಲಿ ಹೆಸರು ಪಡೆದಿವೆ.  ಅಷ್ಟೇ ಅಲ್ಲದೇ ಮೂರು ಭಾರತೀಯ ಸಿಹಿತಿಂಡಿಗಳು ವಿಶ್ವದ 10 ಅತ್ಯುತ್ತಮ ರೈಸ್ ಪುಡಿಂಗ್ ಗಳಲ್ಲಿ ಸ್ಥಾನ ಪಡೆದಿವೆ.

ಇದೇ ರೀತಿ ಭಾರತೀಯ ಎಲ್ಲಾ ಭಕ್ಷ್ಯಗಳು ವಿಶ್ವದ ಎಲ್ಲಾ ಕಡೆ ಮೆಚ್ಚುಗೆಯನ್ನು ಗಳಿಸುವಂತಾಗಲಿ. ಎಲ್ಲರ ನಾಲಿಗೆಯ ರುಚಿಯನ್ನು ಹೆಚ್ಚಿಸುವಂತಾಗಲಿ.

Continue Reading

ದೇಶ

Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

Samsung: ಸ್ಯಾಮ್‌ಸಂಗ್ ಇಂದು 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯನ್ನು ಭಾರತದಲ್ಲಿ ರೂ.65990 ರ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದ್ದು, 2024 ಕ್ಯೂಎಲ್ಇಡಿ 4ಕೆ ಟಿವಿ ಉತ್ಪನ್ನ ಶ್ರೇಣಿಯು ಪ್ರೀಮಿಯಂ ಫೀಚರ್‌ಗಳ ಸಮೃದ್ಧಿಯನ್ನು ಹೊಂದಿದೆ. 2024 ಕ್ಯೂಎಲ್ಇಡಿ 4ಕೆ ಟಿವಿಯು 55”, 65” ಮತ್ತು 75” ಈ ಮೂರು ಗಾತ್ರಗಳಲ್ಲಿ ದೊರೆಯಲಿದೆ. ಕ್ವಾಂಟಮ್ ಪ್ರೊಸೆಸರ್ ಲೈಟ್ 4ಕೆ ಎಂಬ ಪ್ರೊಸೆಸರ್ ನಿಂದ ಚಾಲಿತವಾಗಿರುವ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಕ್ವಾಂಟಮ್ ಡಾಟ್ ಮತ್ತು ಕ್ವಾಂಟಮ್ ಎಚ್‌ಡಿಆರ್‌ ಫೀಚರ್ ಹೊಂದಿದೆ.

VISTARANEWS.COM


on

Samsung launches 2024 QLED 4K premium TV series
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ (Samsung) ಇಂದು 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯನ್ನು ಭಾರತದಲ್ಲಿ ರೂ.65990 ರ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. 2024 ಕ್ಯೂಎಲ್ಇಡಿ 4ಕೆ ಟಿವಿ ಉತ್ಪನ್ನ ಶ್ರೇಣಿಯು ಪ್ರೀಮಿಯಂ ಫೀಚರ್‌ಗಳ ಸಮೃದ್ಧಿಯನ್ನು ಹೊಂದಿದೆ.

2024 ಕ್ಯೂಎಲ್ಇಡಿ 4ಕೆ ಟಿವಿಯು 55”, 65” ಮತ್ತು 75” ಈ ಮೂರು ಗಾತ್ರಗಳಲ್ಲಿ ದೊರೆಯಲಿದ್ದು, ಈ ಉತ್ಪನ್ನ ಶ್ರೇಣಿಯು ಇಂದಿನಿಂದ Samsung.com ಮತ್ತು Amazon.in ಸೇರಿದಂತೆ ಹಲವು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾರಾಟಕ್ಕೆ ಲಭ್ಯವಿದೆ.

2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿ ವಿಶೇಷತೆ

ಕ್ವಾಂಟಮ್ ಪ್ರೊಸೆಸರ್ ಲೈಟ್ 4ಕೆ ಎಂಬ ಪ್ರೊಸೆಸರ್ ನಿಂದ ಚಾಲಿತವಾಗಿರುವ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಕ್ವಾಂಟಮ್ ಡಾಟ್ ಮತ್ತು ಕ್ವಾಂಟಮ್ ಎಚ್‌ಡಿಆರ್‌ ಫೀಚರ್ ಹೊಂದಿದ್ದು, ಜತೆಗೆ 100% ಬಣ್ಣಗಳ ಶ್ರೀಮಂತಿಕೆಯ ಅನುಭವವನ್ನು ಒದಗಿಸುತ್ತದೆ. ಇದಲ್ಲದೇ, ಈ ಸರಣಿಯು 4ಕೆ ಅಪ್‌ಸ್ಕೇಲಿಂಗ್‌ ತಂತ್ರಜ್ಞಾನ ಹೊಂದಿದ್ದು, ಈ ತಂತ್ರಜ್ಞಾನವು ಬಳಕೆದಾರರು ಹೈ ರೆಸಲ್ಯೂಶನ್ 4ಕೆ ಗುಣಮಟ್ಟದಲ್ಲಿ ದೃಶ್ಯಗಳನ್ನು ಆನಂದಿಸಲು ಅನುವು ಮಾಡಿಕೊಡುತ್ತದೆ. ಕ್ಯೂ-ಸಿಂಫನಿ ಸೌಂಡ್ ಟೆಕ್ನಾಲಜಿ, ಡ್ಯುಯಲ್ ಎಲ್‌ಇಡಿ, ಗೇಮಿಂಗ್‌ಗಾಗಿ ಮೋಷನ್ ಎಕ್ಸಲರೇಟರ್ ಮತ್ತು ಪ್ಯಾಂಟೋನ್ ಮೌಲ್ಯೀಕರಣ, ಅತ್ಯುತ್ತಮ ಬಣ್ಣದ ಸಂಯೋಜನೆ ಇತ್ಯಾದಿ ಹೊಂದಿರುವ ಈ ಟಿವಿಯು ಗ್ರಾಹಕರ ವಿಶ್ವಾಸಾರ್ಹ ಉತ್ಪನ್ನವಾಗಿ ಮೂಡಿಬಂದಿದೆ.

ಇದನ್ನೂ ಓದಿ: Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ!

ಸ್ಯಾಮ್‌ಸಂಗ್ ಇಂಡಿಯಾದ ವಿಷುಯಲ್ ಡಿಸ್‌ಪ್ಲೇ ಬಿಸಿನೆಸ್‌ನ ಹಿರಿಯ ಉಪಾಧ್ಯಕ್ಷ ಮೋಹನ್‌ದೀಪ್ ಸಿಂಗ್ ಈ ಕುರಿತು ಮಾತನಾಡಿ, ದೃಶ್ಯ ವೀಕ್ಷಣಾ ಕ್ರಮವು ಕಳೆದ ಎರಡು ವರ್ಷಗಳಲ್ಲಿ ಬಹಳ ವೇಗದ ಬದಲಾವಣೆ ಕಂಡಿದೆ. ಬಳಕೆದಾರರು ಹೆಚ್ಚು ತೀವ್ರ ಅನುಭವ ಒದಗಿಸುವ ಮತ್ತು ಪ್ರೀಮಿಯಂ ವೀಕ್ಷಣೆಯ ಅನುಭವವನ್ನು ಹೊಂದಲು ಬಯಸುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯನ್ನು ಪ್ರಾರಂಭಿಸಿದ್ದೇವೆ. ಈ ಮೂಲಕ ಪ್ರೀಮಿಯಂ ಮತ್ತು ಉನ್ನತ ಮಟ್ಟದ ವೀಕ್ಷಣೆಯ ಅನುಭವ ಒದಗಿಸುವ ನಿಟ್ಟಿನಲ್ಲಿ ಒಂದು ಮೆಟ್ಟಿಲು ಮೇಲೆ ಹೋಗಿದ್ದೇವೆ.

ಈ ಹೊಸ ಟಿವಿ ಸರಣಿಯು 4ಕೆ ಅಪ್‌ಸ್ಕೇಲಿಂಗ್ ಫೀಚರ್ ಹೊಂದಿದ್ದು, ದೃಶ್ಯ ಗುಣಮಟ್ಟವನ್ನು ಒದಗಿಸುತ್ತದೆ. ಪರದೆಯ ಮೇಲೆ ಕಾಣಿಸುವ ದೃಶ್ಯಗಳನ್ನು 4ಕೆ ಗುಣಮಟ್ಟಕ್ಕೆ ಬದಲಿಸುತ್ತದೆ. ಈ ಮೂಲಕ ಗ್ರಾಹಕರ ಒಟ್ಟಾರೆ ವೀಕ್ಷಣೆಯ ಅನುಭವವನ್ನು ಹಲವು ಹಂತಗಳಲ್ಲಿ ಉನ್ನತೀಕರಿಸುತ್ತದೆ ಎಂದು ತಿಳಿಸಿದ್ದಾರೆ.

ಕ್ವಾಂಟಮ್ ತಂತ್ರಜ್ಞಾನ

ಉದ್ಯಮದ ಮಾನದಂಡಗಳನ್ನು ಮೀರಿ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಕ್ವಾಂಟಮ್ ಪ್ರೊಸೆಸರ್ ಲೈಟ್ 4ಕೆ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತಿದೆ. ಈ ಪ್ರೊಸೆಸರ್ ವೀಕ್ಷಣೆ ಮತ್ತು ಆಡಿಯೋ ಗುಣಮಟ್ಟವನ್ನು ಉತ್ತಮಗೊಳಿಸುವ ಶಕ್ತಿಶಾಲಿ ಪ್ರೊಸೆಸರ್ ಆಗಿದೆ. ಹೆಚ್ಚುವರಿಯಾಗಿ ಕ್ವಾಂಟಮ್ ಎಚ್‌ಡಿಆರ್‌ ಫೀಚರ್ ಇದ್ದು, ಸಿನಿಮೀಯ ಪ್ರಮಾಣದಲ್ಲಿ ವಿಸ್ತಾರ ವ್ಯಾಪ್ತಿಯ ಕಾಂಟ್ರಾಸ್ಟ್ ಅನ್ನು ಒದಗಿಸುತ್ತದೆ. ಕ್ವಾಂಟಮ್ ಡಾಟ್ ತಂತ್ರಜ್ಞಾನವು ಜೀವನದ ತರಹವೇ ದೃಶ್ಯಗಳನ್ನು ಕಾಣಿಸುವ ಸೌಲಭ್ಯ ಒದಗಿಸುತ್ತಿದ್ದು, ಬಣ್ಣಗಳ ಒಂದು ಬಿಲಿಯನ್ ಶೇಡ್‌ಗಳನ್ನು ಕಾಣಿಸುತ್ತದೆ. ಜತೆಗೆ ವಿವಿಧ ಹಂತದ ಬ್ರೈಟ್‌ನೆಸ್‌ನಲ್ಲಿಯೂ ಬಣ್ಣಗಳನ್ನು ನಿಖರವಾಗಿ ಪ್ರದರ್ಶಿಸುತ್ತದೆ.

ಇದನ್ನೂ ಓದಿ: UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

ಅತ್ಯುತ್ತಮ ದೃಶ್ಯ ಗುಣಮಟ್ಟ

ಅಂತಿಮ 4ಕೆ ಅಪ್‌ಸ್ಕೇಲಿಂಗ್ ಫೀಚರ್ ಗ್ರಾಹಕರಿಗೆ ಉತ್ತಮವಾದ ದೃಶ್ಯ ಅನುಭವವನ್ನು ನೀಡುತ್ತದೆ. ಬಳಕೆದಾರರು ವೀಕ್ಷಿಸುತ್ತಿರುವ ಕಂಟೆಂಟ್‌ನ ರೆಸಲ್ಯೂಶನ್ ಏನೇ ಆಗಿದ್ದರೂ ಟಿವಿಗಳು ಸ್ವಯಂಚಾಲಿತವಾಗಿ ಟೋನಿಯರ್-4ಕೆ ಮಟ್ಟವನ್ನು ಅಪ್‌ಗ್ರೇಡ್ ಮಾಡುವುದರಿಂದ ಅವರು 4ಕೆ ಗುಣಮಟ್ಟದ ದೃಶ್ಯಗಳನ್ನು ಆನಂದಿಸಬಹುದು. ಮೇಲಾಗಿ, ಪ್ಯಾಂಟೋನ್ ಮೌಲ್ಯೀಕರಣವು 2000ಕ್ಕೂ ಬಣ್ಣಗಳನ್ನು ಹೆಚ್ಚು ನಿಖರವಾಗಿ ತೋರಿಸುತ್ತದೆ ಮತ್ತು ಡ್ಯುಯಲ್ ಎಲ್ಇಡಿಯ ನವೀನ ಬ್ಯಾಕ್‌ಲೈಟಿಂಗ್ ತಂತ್ರಜ್ಞಾನವು ವೀಕ್ಷಿಸುತ್ತಿರುವ ದೃಶ್ಯದ ಪ್ರಕಾರಕ್ಕೆ ತಕ್ಕಂತೆ ಬ್ಯಾಕ್‌ಲೈಟ್ ಬಣ್ಣದ ಟೋನ್ ಅನ್ನು ಬದಲಿಸುವ ಮೂಲಕ ಉತ್ತಮ ಕಾಂಟ್ರಾಸ್ಟ್ ನ ದೃಶ್ಯವನ್ನು ವೀಕ್ಷಿಸುವ ಸೌಕರ್ಯ ಒದಗಿಸುತ್ತದೆ.

ಭವಿಷ್ಯಕ್ಕೆ ತಕ್ಕ ವಿನ್ಯಾಸ

2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಏರ್‌ಸ್ಲಿಮ್ ವಿನ್ಯಾಸವನ್ನು ಹೊಂದಿದೆ. ಈ ವಿನ್ಯಾಸವು ನಿಮ್ಮ ಟಿವಿಯು ಗೋಡೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ. ಈ ಟಿವಿಯ ಸ್ಕ್ರೀನ್ ಮತ್ತು ಅಡ್ಜಸ್ಟೇಬಲ್ ಸ್ಟ್ಯಾಂಡ್ ಹೋಮ್ ಎಂಟರ್ಟೈನ್ಮೆಂಟ್ ಸೆಟಪ್ ಅನ್ನು ಬಹಳ ಅದ್ಭುತವಾಗಿ ಕಾಣಿಸುತ್ತದೆ. ಈ ಟಿವಿ ಸರಣಿಯು ಸೋಲಾರ್‌ಸೆಲ್ ರಿಮೋಟ್‌ ಅನ್ನು ಹೊಂದಿದ್ದು, ಸುಸ್ಥಿರತೆಯ ಗುಣವನ್ನು ಹೊಂದಿದೆ. ಈ ರಿಮೋಟ್ ಬ್ಯಾಟರಿಗಳ ಅಗತ್ಯವಿಲ್ಲದೆ ಕಾರ್ಯನಿರ್ವಹಿಸುತ್ತದೆ. ಜತೆಗೆ, ಎಐ ಎನರ್ಜಿ ಮೋಡ್ ವಿದ್ಯುತ್ ಉಳಿತಾಯ ಪ್ರಯೋಜನವನ್ನು ಒದಗಿಸುತ್ತದೆ.

ಅತ್ಯುತ್ತಮ ಧ್ವನಿ ಗುಣಮಟ್ಟ

ತೀವ್ರವಾದ ದೃಶ್ಯ ವೀಕ್ಷಣೆಯ ಅನುಭವ ಒದಗಿಸಲು 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಸರಣಿಯು ಕ್ಯೂ-ಸಿಂಫನಿ, ಓಟಿಎಸ್ ಲೈಟ್ ಮತ್ತು ಅಡಾಪ್ಟಿವ್ ಸೌಂಡ್‌ ಫೀಚರ್‌ಗಳನ್ನು ಹೊಂದಿದೆ. ಈ ಫೀಚರ್‌ಗಳು ಬಳಕೆದಾರರಿಗೆ ಆನ್-ಸ್ಕ್ರೀನ್ ವೀಕ್ಷಣೆಯನ್ನು ಉತ್ತಮ ರೀತಿಯಲ್ಲಿ ಅನುಭವಿಸಲು ಅನುವು ಮಾಡಿಕೊಡುತ್ತದೆ. ನೈಜ-ಸಮಯದ ದೃಶ್ಯ ವಿಶ್ಲೇಷಣೆ ಮಾಡುವ ಮೂಲಕ 3ಡಿ ಸರೌಂಡ್ ಸೌಂಡ್ ಸೌಕರ್ಯವನ್ನು ಒದಗಿಸುತ್ತದೆ. ಜತೆಗೆ ತೀವ್ರ ರೀತಿಯ ವೀಕ್ಷಣೆಯ ಅನುಭವವನ್ನು ಉಂಟು ಮಾಡುತ್ತದೆ.

ಅತ್ಯುತ್ತಮ ಗೇಮಿಂಗ್ ಸೌಲಭ್ಯ

2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಮೋಷನ್ ಎಕ್ಸಲರೇಟರ್ ಮತ್ತು ಆಟೋ ಲೋ ಲೋಟೆನ್ಸಿ ಮೋಡ್ (ಎಎಲ್ಎಲ್ಎಂ) ತಂತ್ಪಜ್ಞಾನ ಹೊಂದಿದೆ. ಅದರಿಂದಾಗಿ ಗೇಮರ್‌ಗಳು ಉತ್ತಮ ಗೇಮ್ ಆಡಬಹುದಾಗಿದೆ. ಫ್ರೇಮ್‌ಗಳ ನಡುವಿನ ಚಲನೆಯನ್ನು ಮೊದಲೇ ಊಹಿಸಬಹುದಾಗಿದೆ. ಈ ಫೀಚರ್‌ಗಳು ಸ್ಕ್ರೀನ್ ಚಲನೆಯ ಮೃದುತ್ವವನ್ನು ಸುಧಾರಿಸುತ್ತದೆ ಮತ್ತು ಕಡಿಮೆ ಲೇಟೆನ್ಸಿ ಜತೆಗೆ ಫ್ರೇಮ್ ಬದಲಾವಣೆನ್ನು ವೇಗಗೊಳಿಸುತ್ತದೆ.

ಇದನ್ನೂ ಓದಿ:8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

ಇತರ ಸ್ಮಾರ್ಟ್ ಫೀಚರ್‌ಗಳು

2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಸ್ಯಾಮ್‌ಸಂಗ್‌ನ ಟಿವಿ ಪ್ಲಸ್ ಫೀಚರ್ ಹೊಂದಿದ್ದು, 100+ ಉಚಿತ ಚಾನಲ್‌ಗಳನ್ನು ಒದಗಿಸುತ್ತದೆ. ಇದಲ್ಲದೆ, ಅಂತರ್ನಿರ್ಮಿತ ಮಲ್ಟಿ ವಾಯ್ಸ್ ಅಸಿಸ್ಟೆಂಟ್ ಫೀಚರ್ ಗ್ರಾಹಕರಿಗೆ ಉತ್ತಮ ಕನೆಕ್ಟಿವಿಟಿ ಒದಗಿಸುತ್ತದೆ. ಜತೆಗೆ ಉನ್ನತ ಶ್ರೇಣಿಯ ಭದ್ರತಾ ಪರಿಹಾರವಾದ ಸ್ಯಾಮ್‌ಸಂಗ್ ನಾಕ್ಸ್ ಸುರಕ್ಷಿತ ಅನುಭವವನ್ನು ಒದಗಿಸುತ್ತದೆ.

Continue Reading
Advertisement
Suresh Gopi
ದೇಶ5 mins ago

Suresh Gopi: ಸಚಿವ ಸ್ಥಾನಕ್ಕೆ ಬಿಜೆಪಿಯ ಸುರೇಶ್‌ ಗೋಪಿ ರಾಜೀನಾಮೆ; ಮಹತ್ವದ ಸ್ಪಷ್ಟನೆ ಕೊಟ್ಟ ಸಂಸದ

Medical student commits suicide in Bengaluru
ಬೆಂಗಳೂರು19 mins ago

Medical Student : ಬೆಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

Shivaraj Kumar
ಕರ್ನಾಟಕ23 mins ago

Shivaraj Kumar: ನನ್ನ ಹೆಂಡತಿ ಗೆಲ್ಲಲಿ ಎಂದು ಆಸೆ ಪಟ್ಟಿದ್ದು ತಪ್ಪಾ?: ನಟ ಶಿವರಾಜ್‌ ಕುಮಾರ್‌

Money Guide
ಮನಿ ಗೈಡ್29 mins ago

Money Guide: ಹೆಚ್ಚಿನ ಬಡ್ಡಿ ಮಾತ್ರವಲ್ಲ, ಪಿಪಿಎಫ್ ನಿಂದ ಇನ್ನೂ ಏನೇನು ಪ್ರಯೋಜನ?

MLA Shivaram Hebbar should resign immediately MLC Shantharama Siddi demands
ಉತ್ತರ ಕನ್ನಡ33 mins ago

Uttara Kannada News: ಪಕ್ಷದ್ರೋಹಿ ಶಾಸಕ ಶಿವರಾಮ ಹೆಬ್ಬಾರ್ ರಾಜೀನಾಮೆಗೆ ಆಗ್ರಹ

Chandan Shetty Niveditha gowda roumers on srujan lokesh
ಸ್ಯಾಂಡಲ್ ವುಡ್38 mins ago

Chandan Shetty: 3ನೇ ವ್ಯಕ್ತಿ ಜತೆ ನಿವೇದಿತಾ ಸಂಬಂಧದ ಕುರಿತು ಚಂದನ್‌ ಹೇಳಿದ್ದೇನು?

Viral Video
ವೈರಲ್ ನ್ಯೂಸ್38 mins ago

Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

Kangana Ranaut Saree Fashion
ಫ್ಯಾಷನ್39 mins ago

Kangana Ranaut Saree Fashion: ದೇಸಿ ಸೀರೆ ನೇಯ್ದ ನೇಕಾರರಿಗೆ ಥ್ಯಾಂಕ್ಸ್ ಹೇಳಿದ ಕಂಗನಾ ರಣಾವತ್!

Hebbe WaterFalls
ಚಿಕ್ಕಮಗಳೂರು42 mins ago

Hebbe Waterfalls : ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದ ಪ್ರವಾಸಿಗ ಸಾವು

Indian Chutneys
ದೇಶ43 mins ago

Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌