Mental Wellness: ಗ್ರಹಚಾರ ಕೈಕೊಟ್ಟಾಗ ಶಾಂತ ರೀತಿಯಿಂದ ವರ್ತಿಸುವುದು ಹೇಗೆ ಅಂತೀರಾ? ಇಲ್ಲಿವೆ ಟಿಪ್ಸ್! - Vistara News

ಲೈಫ್‌ಸ್ಟೈಲ್

Mental Wellness: ಗ್ರಹಚಾರ ಕೈಕೊಟ್ಟಾಗ ಶಾಂತ ರೀತಿಯಿಂದ ವರ್ತಿಸುವುದು ಹೇಗೆ ಅಂತೀರಾ? ಇಲ್ಲಿವೆ ಟಿಪ್ಸ್!

ಕಷ್ಟಕಾಲದಲ್ಲಿ, ಮಾನಸಿಕವಾಗಿ (mental wellness) ತುಂಬ ದುರ್ಬಲ ಗಳಿಗೆಗಳಲ್ಲಿ ನಮ್ಮನ್ನು ನಾವು ಶಾಂತ ರೀತಿಯಲ್ಲಿರುವಂತೆ, ಸರಿಯಾದ ಕ್ರಮದಲ್ಲಿ ನಿಭಾಯಿಸುವಂತೆ ಮಾಡಬಹುದಾದ ದಾರಿ ಯಾವುದು ಎಂಬ ಪ್ರಶ್ನೆಯಿದ್ದರೆ ಅಂಥವರಿಗೆ ಇಲ್ಲಿವೆ ಕೆಲವು ಟಿಪ್ಸ್!

VISTARANEWS.COM


on

yoga with kid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಎಂಥ ಪರಿಸ್ಥಿತಿ ಬಂದರೂ ಎದೆಗುಂದದೆ, ಸರಳವಾಗಿ ಸಹಜವಾಗಿ ಶಾಂತಿಯಿಂದ (keeping calm) ಇರುವುದು ಹೇಗೆ ಎಂಬುದು ಬಹುತೇಕ ಎಲ್ಲರಿಗೂ ಇರುವ ಮಿಲಿಯನ್‌ ಡಾಲರ್‌ ಪ್ರಶ್ನೆ. ಇತರರು ಕಷ್ಟದಲ್ಲಿದ್ದಾಗ, ಅವರಿಗೆ ಎದೆಗುಂದದೆ ಇರುವಂತೆ ಸಮಾಧಾನ ಹೇಳುತ್ತೇವೆ, ಆದರೆ, ನಾವೇ ಅಂಥ ಪರಿಸ್ಥಿತಿಯಲ್ಲಿದ್ದಾಗ ಅದನ್ನು ನಿಭಾಯಿಸುವುದು, ಹೇಳಿದಷ್ಟು ಸುಲಭವಲ್ಲ ಎಂಬುದು ಬಹುಶಃ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಸಮಯದಲ್ಲಿ ಅನಿಸಿರಬಹುದು. ಯಾಕೆಂದರೆ, ಕಷ್ಟಕಾಲದಲ್ಲಿ ಶಾಂತಿಯಿಂದ ಇರುವುದೂ ಕೂಡಾ ಒಂದು ಕಲೆ. ಇದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಆದರೆ, ಪ್ರಯತ್ನಪಟ್ಟರೆ ಇದು ಕಲಿಯದ ವಿದ್ಯೆಯೇನಲ್ಲ. ನಮ್ಮ ಒಟ್ಟು ಆರೋಗ್ಯದ (Life tips) ದೃಷ್ಟಿಯಿಂದ ಶಾಂತರೀತಿಯಿಂದ ತೊಂದರೆಗಳನ್ನು ನಿಭಾಯಿಸುವುದು ಅತ್ಯಂತ ಅಗತ್ಯ ಕೂಡಾ. ಹಾಗಾದರೆ, ವಾಸ್ತವದಲ್ಲಿ ಕಷ್ಟಕಾಲದಲ್ಲಿ, ಮಾನಸಿಕವಾಗಿ (mental wellness) ತುಂಬ ದುರ್ಬಲ ಗಳಿಗೆಗಳಲ್ಲಿ ನಮ್ಮನ್ನು ನಾವು ಶಾಂತ ರೀತಿಯಲ್ಲಿರುವಂತೆ, ಸರಿಯಾದ ಕ್ರಮದಲ್ಲಿ ನಿಭಾಯಿಸುವಂತೆ ಮಾಡಬಹುದಾದ ದಾರಿ ಯಾವುದು ಎಂಬ ಪ್ರಶ್ನೆಯಿದ್ದರೆ ಅಂಥವರಿಗೆ ಇಲ್ಲಿವೆ ಕೆಲವು ಟಿಪ್ಸ್!

1. ಮಾನಸಿಕವಾಗಿ ಉದ್ವೇಗ ಅಥವಾ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿದ್ದಾಗ ಒಮ್ಮೆ ಒಂದು ಕ್ಷಣ ಎಲ್ಲವನ್ನು ಬಿಟ್ಟು ಶಾಂತವಾಗಿ ಕುಳಿತುಕೊಳ್ಳಿ. ನಿಧಾನವಾಗಿ, ಆಳವಾಗಿ (slow breath) ಉಸಿರಾಡಿ. ಮೂಗಿನ ಮೂಲಕ ಗಾಳಿಯನ್ನು ಒಳಗೆಳೆದುಕೊಂಡು, ಬಾಯಿಯ ಮೂಲಕ ಗಾಳಿಯನ್ನು ಹೊರಗೆ ಬಿಡಿ. ಇದನ್ನೇ, ಕೆಲವು ಸಲ ಮಾಡಿ. ಏಳೆಂಟು ಬಾರಿ ಮಾಡಿದಾಗ ನಿಧಾನವಾಗಿ ನೀವೊಂದು ಶಾಂತ ಮನೋಸ್ಥಿತಿಗೆ ಬಂದಿರುತ್ತೀರಿ. ಅದನ್ನು ಹಾಗೆಯೇ ಕಾಪಿಡಿ.

2. ಧ್ಯಾನ ಮಾಡುವುದನ್ನು (meditation) ಅಭ್ಯಾಸ ಮಾಡಿಕೊಳ್ಳಿ. ಎಂಥದ್ದೇ ಪರಿಸ್ಥಿತಿಯಲ್ಲೂ ಅದು ನಿಮ್ಮನ್ನು ಶಾಂತವಾಗಿರುವಂತೆ ಎಚ್ಚರಿಸುತ್ತಲೇ ಇರುತ್ತದೆ. ಪರಿಸ್ಥಿತಿಯಲ್ಲಿದ್ದುಕೊಂಡೂ ಸಹಜವಾಗಿರುವುದನ್ನು ಅದು ನಿಮಗೆ ಕಲಿಸುತ್ತದೆ. ನಿಮ್ಮ ಭಾವನೆಗಳನ್ನು ಹೊರಗಿನವರಾಗಿದ್ದುಕೊಂಡು ನೋಡುವುದನ್ನು ಅದು ನಿಮಗೆ ಕಲಿಸುತ್ತದೆ. ಹೀಗಾಗಿ, ಪರಿಸ್ಥಿತಿಯನ್ನು ಸಹಜವಾಗಿ, ಸರಳವಾಗಿ ತೆಗೆದುಕೊಂಡು ಶಾಂತವಾಗಿ, ಹೆಚ್ಚು ಉದ್ವೇಗಕ್ಕೊಳಗಾಗದೆ ಪ್ರತಿಕ್ರಿಯಿಸುವುದನ್ನೂ ಕೂಡಾ ಅದು ಕಲಿಸುತ್ತದೆ.

3. ಶಿಸ್ತುಬದ್ಧವಾದ ಜೀವನಕ್ರಮವನ್ನು (lifestyle discipline) ಪಾಲಿಸದಿರುವುದರಿಂದಲೇ ತೊಂದರೆಗಳು ಆಗಾಗ ಎದುರಾಗುತ್ತದೆ. ಹೀಗಾಗಿ, ಆದಷ್ಟೂ, ನಿಮ್ಮ ಜವಾಬ್ದಾರಿಗಳ ಬಗ್ಗೆ, ನಿಮ್ಮ ಕೆಲಸಗಳ ಬಗ್ಗೆ ಶಿಸ್ತನ್ನು ಪಾಲಿಸಿ. ಸಮಯಕ್ಕೆ ಸರಿಯಾಗಿ ಕಚೇರಿಗೆ ಹೋಗುವುದು, ಅದಕ್ಕೆ ತಕ್ಕನಾಗಿ ಬೇಗ ಎದ್ದು ನಿತ್ಯದ ಕೆಲಸಗಳನ್ನು ಮುಗಿಸಿಕೊಂಡು ತಯಾರಾಗಿ ಹೊರಡುವುದು ಕೂಡಾ, ನಿಮ್ಮ ಎಷ್ಟೋ ಉದ್ವೇಗವನ್ನು ಕಡಿಮೆ ಮಾಡುತ್ತದೆ. ಅಂದುಕೊಂಡದ್ದಕ್ಕಿಂತ ಬೇಗನೆ ತಲುಪಲು ತಯಾರಾಗಿ ಹೊರಟು ಬಿಡುವುದೂ ಕೂಡಾ ನಿಮ್ಮನ್ನು ಶಾಂತವಾಗಿರಿಸುತ್ತದೆ. ಹಾಗಾಗಿ, ಶಿಸ್ತುಬದ್ಧ, ಯೋಜನೆಗಳು ತೊಂದರೆಗಳಿಗೆ ಸಿಕ್ಕಿ ಹಾಕಿಕೊಳ್ಳದಂತೆ ನೋಡಿಕೊಳ್ಳುತ್ತದೆ.

happiness hormones

4. ಈಗಿನ ಡಿಜಿಟಲ್‌ ಕಾಲಘಟ್ಟದಲ್ಲಿ ನಿಮ್ಮನ್ನು ನೀವು ಅತೀವ ಮಾಹಿತಿಗಳಿಂದ ಓವರ್‌ಲೋಡ್‌ (Digital overload) ಮಾಡಿಕೊಳ್ಳಬೇಡಿ. ಅಗತ್ಯಕ್ಕಿಂತ ಹೆಚ್ಚು ತಿಳುವಳಿಕೆ ಕೂಡಾ ಮಾನಸಿಕವಾಗಿ ತೊಂದರೆಯೆಡೆಗೇ ದಾರಿ ತೋರಿಸುತ್ತದೆ. ಹಾಗಾಗಿ, ಹೆಚ್ಚು ಡಿಜಿಟಲ್‌ ದಾಸರಾಗಿರಬೇಡಿ.

5. ಯಾವಾಗಲೂ ಕೃತಜ್ಞತಾ (Gratitude) ಭಾವವನ್ನು ಮನಸ್ಸಿನಲ್ಲಿಡಿ. ನಿಮ್ಮ ಬದುಕಿನ ಪಾಸಿಟಿವ್‌ ಗಳಿಗೆಯ (positive attitude) ಬಗ್ಗೆ ನಿಮಗೆ ಕೃತಜ್ಞತೆಯಿರಲಿ. ನಿಮ್ಮ ಜಗತ್ತನ್ನು ಒಳ್ಳೆಯ ಹಾದಿಯೆಡೆಗೆ ಕರೆದೊಯ್ಯುವ ಶಕ್ತಿಯೆಡೆಗೆ, ನಿಮ್ಮ ಬಂಧು ಬಳಗದೆಡೆಗೆ ಕೃತಜ್ಞತೆ ರೂಢಿಸಿಕೊಳ್ಳಿ. ಆಗ ಬದುಕಿನಲ್ಲಿ ತಾನೇತಾನಾಗಿ ಪಾಸಿಟಿವಿಟಿ ಬೆಳೆಯುತ್ತದೆ.

6. ನಿತ್ಯವೂ ದೈಹಿಕ ವ್ಯಾಯಾಮಕ್ಕೆ (exercise) ಕೊಂಚ ಸಮಯ ಇಡಿ. ಅದು ನಡಿಗೆ ಇರಬಹುದು, ಯೋಗ ಇರಬಹುದು ಅಥವಾ ಜಿಮ್‌ ಇರಬಹುದು. ಇವು ನಿಮ್ಮನ್ನು ಕೇವಲ ದೂಹಿಕವಾಗಿ ಅಷ್ಟೇ ಅಲ್ಲ, ಮಾನಸಿಕವಾಗಿಯೂ ಸದೃಢರನ್ನಾಗಿಸುತ್ತದೆ.

7. ಕಷ್ಟಕಾಲದಲ್ಲಿ ಗೆಳೆಯರ ಆತ್ಮೀಯರ ನೆರವನ್ನು ಕೇಳಲು ಹಿಂದೆಮುಂದೆ ನೋಡಬೇಡಿ. ಕಷ್ಟವನ್ನು ಇತರರ ಜೊತೆಗೆ ಹಂಚಿಕೊಳ್ಳಿ. ಮನಸ್ಸು ಬಿಚ್ಚಿ ನೋವನ್ನು ಹೇಳಿಕೊಳ್ಳಿ. ಇದರಿಂದ ಮಾನಸಿಕವಾಗಿ ನೀವು ಹಗುರಾಗುತ್ತೀರಿ, ಹಾಗೂ ಅವರ ಕಾಳಜಿ, ಸಲಹೆಗಳು ನಿಮ್ಮನ್ನು ಸಮಸ್ಯೆಯನ್ನೆದುರಿಸಲು ಧೈರ್ಯ ತುಂಬಬಹುದು.

8. ಯಾವಾಗಲೂ ಸಮಸ್ಯೆಯೆಡೆಗೆ ಮಾನಸಿಕವಾಗಿ ತಕ್ಷಣ ಪ್ರತಿಕ್ರಿಯಿಸಬೇಡಿ. ಸಮಯ ತೆಗೆದುಕೊಂಡು ಯೋಚಿಸಿ. ಆಗ ಬೇರೆ ಮಾರ್ಗಗಳು ತೆರೆದುಕೊಳ್ಳುತ್ತವೆ. ಬೇರೆ ಆಯಾಮಗಳು ಗೋಚರಿಸುತ್ತವೆ.

ಇದನ್ನೂ ಓದಿ: Mental Wellness: ಮಾನಸಿಕ ಆರೋಗ್ಯಕ್ಕೂ ಇದೆ ಏಕರೂಪ ನೀತಿ ಸಂಹಿತೆ! ಈ ಸೂತ್ರಗಳನ್ನು ಪಾಲಿಸಿದರೆ ಸಾಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Covaxin Safety: ಬಿಎಚ್‌ಯು ಸಂಶೋಧನೆ ಮಾಡುವ ಮುನ್ನ ಸರಿಯಾದ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಸಂಶೋಧನೆಗೆ ಬಳಸಿರುವ ಜನಸಂಖ್ಯೆ ಪ್ರಮಾಣಕ್ಕೂ, ಸ್ಟಡಿ ವರದಿಗೂ ತುಂಬ ವ್ಯತ್ಯಾಸವಿದೆ. ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಹೇಳಿದವರನ್ನು ವರದಿ ತಯಾರಿಸಲು ಟೆಲಿಫೋನ್‌ ಮೂಲಕ ಸಂಪರ್ಕಿಸಲಾಗಿದೆಯೇ ಹೊರತು, ಅವರ ಅಭಿಪ್ರಾಯವನ್ನು ನೇರವಾಗಿ ಪಡೆದುಕೊಂಡಿಲ್ಲ ಎಂದು ಐಸಿಎಂಆರ್‌ ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Covaxin Safety
Koo

ನವದೆಹಲಿ: ಬ್ರಿಟನ್‌ನಲ್ಲಿ ಅಸ್ಟ್ರಾಜೆನಿನಾ ಕೊರೊನಾ ನಿರೋಧಕ ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಸ್ವತಃ ಕಂಪನಿಯೇ ಒಪ್ಪಿಕೊಂಡ ಬಳಿಕ ಭಾರತದಲ್ಲೂ ಕೊರೊನಾ ನಿರೋಧಕ ಲಸಿಕೆಯ ಸುರಕ್ಷತೆಗೆ ಬಗ್ಗೆ ಚರ್ಚೆಯಾಗುತ್ತಿದೆ. ಅದರಲ್ಲೂ, ದೇಶೀಯವಾಗಿ ಭಾರತ್‌ ಬಯೋಟೆಕ್‌ (Bharat Biotech) ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್‌ ಅಡ್ಡಪರಿಣಾಮಗಳ ಕುರಿತು ಬನಾರಸ್‌ ಹಿಂದು ವಿವಿ (BHU) ವರದಿ ಬಿಡುಗಡೆ ಮಾಡಿದೆ. ಕೊವ್ಯಾಕ್ಸಿನ್‌ ಪಡೆದ ಮೂವರಲ್ಲಿ ಒಬ್ಬರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಬಿಎಚ್‌ಯು ಪ್ರಕಟಿಸಿದ ವರದಿಗೆ ಈಗ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಆಕ್ರೋಶ ವ್ಯಕ್ತಪಡಿಸಿದೆ.

ಐಸಿಎಂಆರ್‌ ಮಹಾ ನಿರ್ದೇಶಕ ರಾಜೀವ್‌ ಬಾಹ್ಲ್‌ ಅವರು ಬಿಎಚ್‌ಯು ಅಧ್ಯಯನ ವರದಿಯನ್ನು ನಿರಾಕರಿಸಿದ್ದಾರೆ. “ಬಿಎಚ್‌ಯು ಸಂಶೋಧನೆ ಮಾಡುವ ಮುನ್ನ ಸರಿಯಾದ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಸಂಶೋಧನೆಗೆ ಬಳಸಿರುವ ಜನಸಂಖ್ಯೆ ಪ್ರಮಾಣಕ್ಕೂ, ಸ್ಟಡಿ ವರದಿಗೂ ತುಂಬ ವ್ಯತ್ಯಾಸವಿದೆ. ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಹೇಳಿದವರನ್ನು ವರದಿ ತಯಾರಿಸಲು ಟೆಲಿಫೋನ್‌ ಮೂಲಕ ಸಂಪರ್ಕಿಸಲಾಗಿದೆಯೇ ಹೊರತು, ಅವರ ಅಭಿಪ್ರಾಯವನ್ನು ನೇರವಾಗಿ ಪಡೆದುಕೊಂಡಿಲ್ಲ. ಸಂಶೋಧನೆಗೆ ಬಳಸಿರುವ ಅಂಕಿ-ಅಂಶಗಳನ್ನು ಸರಿಯಾಗಿ ಅವಲೋಕನ ಮಾಡಿಲ್ಲ” ಎಂಬುದಾಗಿ ರಾಜೀವ್‌ ಬಾಹ್ಲ್‌ ಹೇಳಿದ್ದಾರೆ.

“ಲಸಿಕೆಯ ಅಡ್ಡ ಪರಿಣಾಮ, ಲಸಿಕೆಯ ಸುರಕ್ಷತೆ ಬಗ್ಗೆ ಅಧ್ಯಯನ ಮಾಡಲು ತುಂಬ ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಬಿಎಚ್‌ಯು ಇಂತಹ ಮಾನದಂಡಗಳನ್ನು ಅನುಸರಿಸುವುದು ಬಿಡಿ, ಅಧ್ಯಯನ ಮಾಡುವ ತಜ್ಞರಿಗೆ ತಾಂತ್ರಿಕ ಹಾಗೂ ಹಣಕಾಸು ನೆರವು ಕೂಡ ಒದಗಿಸಿಲ್ಲ. ಹಾಗಾಗಿ, ಲಸಿಕೆಯ ಸುರಕ್ಷತೆಯ ಬಗ್ಗೆ ಬನಾರಸ್‌ ಹಿಂದು ವಿವಿ ಮಾಡಿದ ಸಂಶೋಧನಾ ವರದಿಯು ವೈಜ್ಞಾನಿಕತೆಯ ಆಧಾರದ ಮೇಲಿಲ್ಲ” ಎಂದು ಹೇಳಿದ್ದಾರೆ.

ಕೊವ್ಯಾಕ್ಸಿನ್‌ ಲಸಿಕೆ ಪಡೆದ ಸುಮಾರು 926 ಜನರನ್ನು ಸಂಪರ್ಕಿಸಿ ಲಸಿಕೆಯ ಸುರಕ್ಷತೆ, ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ವರದಿ ತಯಾರಿಸಿದೆ. ಲಸಿಕೆ ಪಡೆದ ಮೂವರಲ್ಲಿ ಒಬ್ಬರಿಗೆ ಅಡ್ಡ ಪರಿಣಾಮ ಉಂಟಾಗಿದೆ. ಲಸಿಕೆ ಪಡೆದವರಿಗೆ ಪಾರ್ಶ್ವವಾಯು, ನರಗಳಿಗೆ ಸಂಬಂಧಿಸಿದ ಕಾಯಿಲೆ, ಕೆಮ್ಮು, ಮೂಗು ಸೋರುವಿಕೆ, ಗಂಟಲು ಕೆರೆತ, ಉಸಿರಾಟ ಸಮಸ್ಯೆ ಸೇರಿ ಹಲವು ಅಡ್ಡ ಪರಿಣಾಮಗಳು ಕಾಣಿಸಿಕೊಂಡಿವೆ” ಎಂಬುದಾಗಿ ವರದಿ ತಿಳಿಸಿತ್ತು.

ಭಾರತ್‌ ಬಯೋಟೆಕ್‌ ಹೇಳುವುದೇನು?

“ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ. ಹಾಗಾಗಿ, ಲಸಿಕೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿ ತಿಳಿಸಿದೆ.

ಇದನ್ನೂ ಓದಿ: Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Continue Reading

ವಿಜಯನಗರ

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

Food Department : ತಾಯಿ-ಮಗ ಜೀವಂತವಾಗಿದ್ದರೂ, ಬದುಕಿಲ್ಲ ಎಂದು ಪಡಿತರ ಚೀಟಿಯಿಂದ (BPL Card) ಹೆಸರನ್ನೇ ಡಿಲೀಟ್‌ ಮಾಡಿದ್ದಾರೆ. ಸ್ಥಳ ಪರಿಶೀಲನೆ ಮಾಡದೆ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳದೇ ಆಹಾರ ಇಲಾಖೆಯ (ration card) ಅಧಿಕಾರಿಗಳ ಯಡವಟ್ಟಿಗೆ ಕಡು ಬಡತನದ ಕುಟುಂಬವೊಂದು ಪರದಾಡುತ್ತಿದೆ.

VISTARANEWS.COM


on

By

Food department deletes name from ration card list even though it is alive
Koo

ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸತ್ತಿದ್ದಾಗಿ ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ (BPL Card) ಹೆಸರಿನಿಂದ ಆಹಾರ ಇಲಾಖೆಯು (Food Department) ಡಿಲೀಟ್ ಮಾಡಿದೆ. ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳ (ration card) ಯಡವಟ್ಟಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಬದುಕಿದ್ದರೂ 2019ರಲ್ಲೇ ಸತ್ತಿದ್ದಾರೆ ಎಂದು ಬಿಪಿಎಲ್‌ ಕಾರ್ಡ್‌ನಿಂದ ಹೆಸರು ಡಿಲೀಟ್‌ ಮಾಡಲಾಗಿದೆ. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿದೆ. ಆಹಾರ ಇಲಾಖೆ ಯಡವಟ್ಟಿನಿಂದ ಪಡಬಾರದ ಕಷ್ಟ ಪಡುತ್ತಿರುವ ಕುಟಂಬ ತಿಂಗಳ ಪಡಿತರಕ್ಕೂ ಅಲೆಯುತ್ತಿದೆ.

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಆಹಾರ ಇಲಾಖೆ ಯಾರದ್ದೋ ಮಾತು ಕೇಳಿ ಪಡಿತರ ಚೀಟಿಯಿಂದ ಹೆಸರು ಡಿಲೀಟ್ ಮಾಡಿದೆ. ಕೂಡ್ಲಿಗಿ ತಾಲೂಕಿನ ಅಂಜಿನಮ್ಮ ತೀರಾ ಕಡು ಬಡವರಾಗಿದ್ದು, ಆಹಾರ ಇಲಾಖೆಯ ಕೆಲಸಕ್ಕೆ ಇತರೇ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ರೇಷನ್ ಕಾರ್ಡ್ ಇಲ್ಲದೇ ಇರುವುದರಿಂದ ಗೃಹ ಲಕ್ಷ್ಮೀ ಯೋಜನೆಯ ಲಾಭವೂ ಅಂಜಿನಮ್ಮಗೆ ಸಿಕ್ಕಿಲ್ಲ.

ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆದು ಸುಸ್ತಾಗಿದ್ದಾರೆ. ಆಹಾರ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಪಡಿತರ ಚೀಟಿಯಿಂದ ಹೆಸರು ತೆಗೆಯಬೇಕಾದರೆ ಅಧಿಕಾರಿಗಳು ಸ್ಪಾಟ್‌ ವಿಸಿಟ್‌ ಮಾಡಬೇಕು. ಪಡಿತರ ಚೀಟಿಯಲ್ಲಿ ಇರುವವರು ಬದುಕಿದ್ದಾರಾ ಇಲ್ವಾ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಅಧಿಕಾರಿಗಳು ಪರಿಶೀಲಿಸದೇ ಹೀಗೆ ಅಂಜೀನಮ್ಮ ಹೆಸರು ತೆಗೆದಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆಹಾರ/ಅಡುಗೆ

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

ಐಸ್‌ಕ್ರೀಮ್‌ ಪ್ರಿಯರಿಗೆ (History Of Ice Cream) ಕಾಲ-ದೇಶ-ಪಾತ್ರಗಳ ಹಂಗಿಲ್ಲ. ಚಳಿ-ಮಳೆ-ಬಿಸಿಲು ಎಂಬ ಭೇದವಿಲ್ಲದೆ, ಹಗಲು-ರಾತ್ರಿಗಳ ಲಕ್ಷ್ಯವಿಲ್ಲದಂತೆ ಐಸ್‌ಕ್ರೀಮ್‌ ತಿನ್ನಬಲ್ಲರು. ವಯಸ್ಸಿನ ಭೇದವನ್ನೂ ಮೀರಿ ಇಷ್ಟೊಂದು ಮೆಚ್ಚಾಗಿರುವ ಐಸ್‌ಕ್ರೀಮ್‌ (Ice Cream) ಹುಟ್ಟಿದ್ದು ಯಾವಾಗ? ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

History Of Ice Cream
Koo

ಬೇಸಿಗೆಯನ್ನು ದೂರುವವರು (History Of Ice Cream) ಇರುವಂತೆಯೇ ಅದನ್ನು ಇಷ್ಟ ಪಡುವವರೂ ಇದ್ದಾರೆ. ಯಾಕೆ ಇಷ್ಟ ಬೇಸಿಗೆ ಎಂದು ಕೇಳಿದರೆ ಜ್ಯೂಸ್‌, ಎಳನೀರು ಮುಂತಾದ ತಂಪು ಪೇಯಗಳನ್ನು ಕುಡಿಯುವುದಕ್ಕೆ ಎನ್ನುವವರಿರಬಹುದು; ಆದರೆ ಐಸ್‌ಕ್ರೀಮ್‌ (Ice Cream) ಮೆಲ್ಲುವುದಕ್ಕೆ ಎನ್ನುವವರದ್ದೇ ಬಹುಮತ. ತರಹೇವಾರಿ ಬಣ್ಣ, ಆಕಾರ, ರುಚಿಗಳಲ್ಲಿ ದೊರೆಯುವ ಇವುಗಳನ್ನೇ ನಂಬಿ-ನೆಚ್ಚಿ ಬದುಕಿದವರಿದ್ದಾರೆ. ಹಾಗಾಗಿ ಉಳಿದೆಲ್ಲ ತಿನಿಸುಗಳನ್ನೂ ಮೀರಿಸಿದ್ದು ಇವುಗಳ ಜನಪ್ರಿಯತೆ. ಹಾಗೆಂದೇ ಐಸ್‌ಕ್ರೀಮ್‌ ಪ್ರಿಯರಿಗೆ ಕಾಲ-ದೇಶ-ಪಾತ್ರಗಳ ಹಂಗಿಲ್ಲ. ಚಳಿ-ಮಳೆ-ಬಿಸಿಲು ಎಂಬ ಭೇದವಿಲ್ಲದೆ, ಹಗಲು-ರಾತ್ರಿಗಳ ಲಕ್ಷ್ಯವಿಲ್ಲದಂತೆ ಐಸ್‌ಕ್ರೀಮ್‌ ತಿನ್ನಬಲ್ಲರು. ವಯಸ್ಸಿನ ಭೇದವನ್ನೂ ಮೀರಿ ಇಷ್ಟೊಂದು ಮೆಚ್ಚಾಗಿರುವ ಐಸ್‌ಕ್ರೀಮ್‌ ಹುಟ್ಟಿದ್ದು (Ice Cream) ಯಾವಾಗ? ಶತಮಾನಗಳಿಂದ ವಿಕಾಸಕೊಳ್ಳುತ್ತಲೇ ಬಂದಿರುವ ಇದು ನಡೆದಿರುವ ಹಾದಿ ಹೇಗಿದೆ ಎಂಬ ಕುತೂಹಲದ ನೋಟವಿದು.

Ice Cream

ಹುಟ್ಟಿದ್ದು ಎಲ್ಲಿ?

ಹಳೆಯ ಮೆಸಪೊಟೇಮಿಯ ನಾಗರಿಕತೆಯಲ್ಲಿ ಯೂಫ್ರೆಟಿಸ್‌ ನದಿಯ ದಂಡೆಯಲ್ಲಿ ಐಸ್‌ ಮನೆಗಳಂತೆ ಮಾಡಿ, ಅಲ್ಲಿ ವಸ್ತುಗಳನ್ನು ತಣ್ಣಗೆ ಇರಿಸಿಕೊಳ್ಳುತ್ತಿದ್ದಂತೆ. ಇದೀಗ ಕ್ರಿ.ಪೂ. 4000 ವರ್ಷಗಳ ಹಿಂದಿನ ಕಥೆ! ಅಂದರೆ, ತಣ್ಣಗಿನ ವಸ್ತುಗಳನ್ನು ತಿನ್ನುವ ಖಯಾಲಿ ಅಷ್ಟೊಂದು ಸಾವಿರ ವರ್ಷಗಳ ಹಿಂದೆಯೇ ಮನುಷ್ಯರಿಗಿತ್ತು ಎಂದಾಯಿತು. ಹಳೆಯ ಅಥೆನ್ಸ್‌ನಲ್ಲಿ ವೈನ್‌ಗಳನ್ನು ತಣ್ಣಗಿರಿಸಲು ಐಸ್‌ ಬಳಸುತ್ತಿದ್ದ ಕಥೆಗಳಿವೆ. ಪ್ರಾಚೀನ ಚೀನಾದಲ್ಲಿ ಟಾಂಗ್‌ ರಾಜವಂಶದವರು ಹಾಲಿನಿಂದ ಮಾಡಿದ ಖಾದ್ಯಗಳನ್ನು ಹೀಗೆ ತಣ್ಣಗಾಗಿಸಿ ತಿನ್ನುತ್ತಿದ್ದ ಉಲ್ಲೇಖಗಳಿವೆ. ಭಾರತದಲ್ಲಿ ಮೊಘಲರೂ ಗಟ್ಟಿಯಾದ ಕೆನೆಭರಿತ ಹಾಲಿನಲ್ಲಿ ಕುಲ್ಫಿಯಂಥವನ್ನು ಮಾಡಿ ಸವಿಯುತ್ತಿದ್ದರಂತೆ. ಇವೆಲ್ಲವೂ ಒಂದಿಲ್ಲೊಂದು ರೀತಿಯಲ್ಲಿ ಇಂದಿನ ಐಸ್‌ಕ್ರೀಮಿನ ಪೂರ್ವಸ್ಥಿತಿಗಳು ಎಂದು ಹೇಳಲಾಗುತ್ತದೆ.

ಐಸ್‌ಕ್ರೀಮ್‌ನ ಆಧುನಿಕ ರೂಪ

ಈ ತಿನಿಸಿಗಿರುವ ಇಂದಿನ ರೂಪದ ಸಮೀಪಕ್ಕೆ ಮೊದಲು ಬಂದಿದ್ದು ಇಟಲಿಯಲ್ಲಿ, ಹದಿನೇಳನೇ ಶತಮಾನದ ನಡುವಿಗೆ. ನಂತರ, ಫ್ರಾನ್ಸ್‌, ಸ್ಪೇನ್‌ ಸೇರಿದಂತೆ ಯುರೋಪ್‌ನೆಲ್ಲೆಡೆ ಮೇಜವಾನಿಗಳ ಮೋಜು ಹೆಚ್ಚಿಸುವ ನೆಚ್ಚಿನ ವಸ್ತುವಾಯಿತು ಇದು. 1671ರಲ್ಲಿ ಬ್ರಿಟನ್‌ನ ರಾಜ ಎರಡನೇ ಚಾರ್ಲ್ಸ್‌ ಮೊದಲಿಗೆ ಐಸ್‌ಕ್ರೀಮ್‌ ಸವಿದ ದಾಖಲೆಗಳಿವೆ. ಆದರೆ ಇದರಿಂದಲೇ ಆರೋಗ್ಯದ ತುರ್ತು ಪರಿಸ್ಥಿತಿ ಇಂಗ್ಲೆಂಡ್‌ನಲ್ಲಿ ಉದ್ಭವವಾಗಿತ್ತು ಮಾತ್ರ ಕುತೂಹಲಕರ ಸಂಗತಿ.

Penny Lick

ʻಪೆನ್ನಿ ಲಿಕ್‌ʼ

19ನೇ ಶತಮಾನದ ಹೊತ್ತಿಗೆ ಇಂಗ್ಲೆಂಡ್‌ನಲ್ಲಿ ಇದೆಷ್ಟು ಜನಪ್ರಿಯವಾಯಿತೆಂದರೆ, ರಾಜರ, ಶ್ರೀಮಂತರ ಊಟದ ಟೇಬಲ್‌ನ ಸೀಮೆಯನ್ನು ಮೀರಿ, ಬೀದಿಬೀದಿಗಳಲ್ಲಿ ಮಾರಾಟವಾಗತೊಡಗಿತು. ಒಂದು ʻಪೆನ್ನಿʼಗೆ (ಅಲ್ಲಿನ ಪೈಸೆ) ಪುಟ್ಟ ಕಪ್‌ನಲ್ಲಿ ಐಸ್‌ಕ್ರೀಮ್‌ ತುಂಬಿಸಿ ಕೊಡಲಾಗುತ್ತಿತ್ತು. ಇದನ್ನು ನೆಕ್ಕಿ ಸ್ವಚ್ಛ ಮಾಡಿ ಗ್ರಾಹಕರು ಮರಳಿ ನೀಡುತ್ತಿದ್ದರು. ಇದು ʻಪೆನ್ನಿ ಲಿಕ್‌ʼ ಎಂದೇ ಪ್ರಸಿದ್ಧವಾಯಿತು. ಇದೆಷ್ಟು ಜನಪ್ರಿಯವಾಯಿತೆಂದರೆ ಬರುವ ಗ್ರಾಹಕರಿಗೆ ಐಸ್‌ಕ್ರೀಮ್‌ ಕಪ್‌ಗಳನ್ನು ತೊಳೆದು ತುಂಬಿಸಿಕೊಡುವಷ್ಟು ವ್ಯವಧಾನವಿಲ್ಲದ ವ್ಯಾಪಾರಿಗಳು, ಸ್ವಚ್ಛತೆಯನ್ನು ಕಡೆಗಣಿಸಿದರು. ಇದರಿಂದ ಕಾಲರಾ, ಕ್ಷಯದಂಥ ರೋಗಗಳು ತೀವ್ರವಾಗಿ ಹರಡಲಾರಂಭಿಸಿದವು. 1879ರಲ್ಲಿ ಕಾಲರಾ ಸಾಂಕ್ರಾಮಿಕ ಹರಡಿದ್ದು ʻಪೆನ್ನಿ ಲಿಕ್‌ʼನಿಂದಾಗಿಯೇ ಎಂದು ಅಲ್ಲಿನ ಆರೋಗ್ಯ ದಾಖಲೆಗಳು ಹೇಳುತ್ತವೆ.
ಅಂತಿಮವಾಗಿ ʻಪೆನ್ನಿ ಲಿಕ್‌ʼ ಮೇಲೆ ನಿಷೇಧ ಹೇರಲಾಯಿತು. ಇದರ ಪರಿಣಾಮವೆಂದರೆ ಹೊಸ ಆವಿಷ್ಕಾರಗಳನ್ನು ವರ್ತಕರು ಮಾಡಿದ್ದು. ಐಸ್‌ಕ್ರೀಮ್‌ ಕೋನ್‌ಗಳು ರೂಪುಗೊಂಡಿದ್ದು ಹೀಗೆ. ಸ್ವಚ್ಛತೆಯ ರಗಳೆಯಿಲ್ಲದೆ, ಕಪ್‌ ತೊಳೆದಿದ್ದಾರೋ ಇಲ್ಲವೋ ಎಂಬ ಹೆದರಿಕೆಗೆ ಅವಕಾಶವಿಲ್ಲದಂತೆ ಯಾರು, ಎಲ್ಲಿ ಬೇಕಾದರೂ ಸೇವಿಸಬೇಕಾದಂತೆ ಕೋನ್‌ಗಳನ್ನು ಸಿದ್ಧಪಡಿಸಲಾಯಿತು. ಹಾಗೆಯೇ ಕಡ್ಡಿ ಚುಚ್ಚಿ ಕೊಡುವ ಇನ್ನೂ ಅಗ್ಗದ ಕ್ಯಾಂಡಿಗಳು ಸಹ ಪ್ರಚಾರಕ್ಕೆ ಬಂದವು.

ಇದನ್ನೂ ಓದಿ: Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

ಅಲ್ಲಿಂದ ಮುಂದುವರಿದು, ಹೊಸ ರುಚಿಗಳು, ಫ್ಲೇವರ್‌ಗಳು ರೂಪುಗೊಂಡವು. ಸರಳವಾದ ವೆನಿಲಾದಿಂದ ಹಿಡಿದು, ನಾನಾ ರೀತಿಯ ʻಸಂಡೇʼ ಫ್ಲೇವರ್‌ಗಳು, ಕಾಯಿ-ಬೀಜಗಳನ್ನು ಒಳಗೊಂಡ ದುಬಾರಿ ಬೆಲೆಯವು, ಎಲ್ಲೆಲ್ಲೋ ಬೆಳೆಯುವ ಹಣ್ಣುಗಳನ್ನು ಸೇರಿಸಿಕೊಂಡವು- ಹೀಗೆ ಲೆಕ್ಕವಿಲ್ಲದಷ್ಟು ನಮೂನೆಯ ಐಸ್‌ಕ್ರೀಮ್‌ಗಳು ಈಗ ಲಭ್ಯವಾಗುತ್ತವೆ. ಸುಡು ಬೇಸಿಗೆಯನ್ನು ಸಹನೀಯವಾಗಿಸಿ, ಮಕ್ಕಳಿಗೆ ಮೋಜು ನೀಡುತ್ತಿವೆ. ಆದರೆ ಅದು ಬೆಳೆದುಬಂದ ಚರಿತ್ರೆಯನ್ನು ನೋಡಿದಾಗ, ಎಷ್ಟೊಂದು ಶತಮಾನಗಳ ಹಿಂದೆ ಐಸ್‌ಕ್ರೀಮ್‌ನ ಈ ಪಯಣ ಆರಂಭವಾಯಿತು ಎಂಬುದು ತಿಳಿಯುತ್ತದೆ. ಜೊತೆಗೆ, ಸದಾಕಾಲ ವಿಕಾಸಗೊಳ್ಳುತ್ತಲೇ ಇರುವ ಮಾನವನ ಜಿಹ್ವಾ ಚಾಪಲ್ಯದ ಇತಿಹಾಸವೂ ಅನಾವರಣಗೊಳ್ಳುತ್ತದೆ.

Continue Reading

ಫ್ಯಾಷನ್

Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆಯುವಂತಹ ಡಿಸೈನ್‌ನಲ್ಲಿ ಸಿಲ್ವರ್‌ ಜ್ಯುವೆಲರಿಗಳು (Silver Jewel Trend) ಆಗಮಿಸಿದ್ದು, ಇದೀಗ ಟ್ರೆಂಡಿಯಾಗಿವೆ. ಮಾನಿನಿಯರು ಧರಿಸುವ ಸಾಮಾನ್ಯ ಡಿಸೈನ್‌ಗಳಿಂದಿಡಿದು ಬ್ರೈಡಲ್‌ ಜ್ಯುವೆಲರಿ ವಿನ್ಯಾಸದಲ್ಲೂ ಇವು ಎಂಟ್ರಿ ನೀಡಿವೆ. ಯಾವ್ಯಾವುದು ಚಾಲ್ತಿಯಲ್ಲಿವೆ ಎಂಬುದರ ಬಗ್ಗೆ ಜ್ಯುವೆಲ್‌ ಡಿಸೈನರ್‌ಗಳು ಇಲ್ಲಿ ವಿವರಿಸಿದ್ದಾರೆ.

VISTARANEWS.COM


on

Silver Jewel Trend
ಚಿತ್ರಕೃಪೆ: ಪಿಕ್ಸೆಲ್‌
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು
ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆಯುವಂತಹ ಡಿಸೈನ್‌ನಲ್ಲಿ ಸಿಲ್ವರ್‌ ಜ್ಯುವೆಲರಿಗಳು (Silver Jewel Trend) ಇದೀಗ ಟ್ರೆಂಡಿಯಾಗಿವೆ. ಮಾನಿನಿಯರ ಸಾಮಾನ್ಯ ಡಿಸೈನ್‌ಗಳಿಂದಿಡಿದು ಬ್ರೈಡಲ್‌ ಜ್ಯುವೆಲರಿಗಳಲ್ಲೂ (Bridal Jewellery) ಎಂಟ್ರಿ ನೀಡಿವೆ. ವೆಡ್ಡಿಂಗ್‌ ಸೀಸನ್‌ನಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಂಡಿವೆ. ಲೆಕ್ಕವಿಲ್ಲದಷ್ಟು ಬಂಗಾರದ ಇಮಿಟೇಷನ್‌ ಡಿಸೈನ್‌ಗಳಲ್ಲೂ ಬಿಡುಗಡೆಗೊಂಡಿವೆ.

Silver Jewel Trend

ಸಿಲ್ವರ್‌ ಜ್ಯುವೆಲರಿಗಳಲ್ಲಿ ಬಂತು ವೆಡ್ಡಿಂಗ್‌ ಆಭರಣಗಳು

“ಸಿಲ್ವರ್‌ ಜ್ಯುವೆಲರಿಗಳು ಈ ಸೀಸನ್‌ನಲ್ಲಿ ಅತಿ ಹೆಚ್ಚು ಡಿಸೈನ್‌ನಲ್ಲಿ ಬಿಡುಗಡೆಗೊಂಡಿವೆ. ವೆಡ್ಡಿಂಗ್‌ ಸೀಸನ್‌ಗೆ ಊಹೆಗೂ ಮೀರಿದ ಡಿಸೈನ್‌ನಲ್ಲಿ ಆಗಮಿಸಿವೆ. ಒಂದಕ್ಕಿಂತ ಒಂದು ಡಿಸೈನ್‌ಗಳು ಬಂಗಾರದ ಆಭರಣಗಳ ಡಿಸೈನ್‌ಗಳನ್ನು ಮೀರಿಸಿವೆ. ಹಾಗಾಗಿ ಮದುವೆಯಾಗುವ ಹೆಣ್ಣು ಮಕ್ಕಳು ಮಾತ್ರವಲ್ಲ, ಫ್ಯಾಮಿಲಿಯ ಇತರೇ ಹೆಣ್ಣು ಮಕ್ಕಳು , ಮಾನಿನಿಯರು ಕೂಡ ಇವನ್ನು ಕೊಳ್ಳತೊಡಗಿದ್ದಾರೆ. ಆ ಮಟ್ಟಿಗೆ ಇವು ಮಾನಿನಿಯರನ್ನು ಸೆಳೆದಿವೆ” ಎನ್ನುತ್ತಾರೆ ಜ್ಯುವೆಲರಿ ಮಾರಾಟಗಾರರು.

ಟ್ರೆಂಡಿಯಾಗಿರುವ ಸಿಲ್ವರ್‌ ಜ್ಯುವೆಲರಿಗಳು

ಆಂಟಿಕ್‌ ಆಭರಣಗಳ ಸೆಟ್‌, ಪ್ರೀಶಿಯಸ್‌ ಜ್ಯುವೆಲರಿಗಳು, ಟೆಂಪಲ್‌ ಜ್ಯುವೆಲರಿ, ಕಂಟೆಂಪರರಿ ಡಿಸೈನ್ಸ್‌, ಹವಳದ ಸೆಟ್‌, ಮುತ್ತಿನ ಸೆಟ್‌, ಎಮರಾಲ್ಡ್‌ ಸೆಟ್‌, ಮೋಹನ್‌ಮಾಲ, ಬಿಗ್‌ ಚೋಕರ್ಸ್‌, ಸೊಂಟದ ಪಟ್ಟಿ, ಬಾಜುಬಂಧ್‌, ಕಡಗ, ಬಂಗಾರದ ಬಳೆಗಳ ಸೆಟ್‌, ಜಡೆನಾಗರ, ಮಾಟಿ, ಕಿವಿಯ ಬಿಗ್‌ ಮುತ್ತಿನ ಜುಮಕಿಗಳು ಸೇರಿದಂತೆ ಲೆಕ್ಕವಿಲ್ಲದಷ್ಟು ಬಗೆಯ ಡಿಸೈನ್‌ನ ಸಿಲ್ವರ್‌ ಆಭರಣಗಳು ಎಂಟ್ರಿ ನೀಡಿವೆ. ಅದರಲ್ಲೂ ಬಂಗಾರದ ಹಾಗೂ ವಜ್ರಾಭರಣಗಳ ಸೆಟ್‌ಗಳು ಅತಿ ಹೆಚ್ಚು ವೆಡ್ಡಿಂಗ್‌ ಬ್ರೈಡಲ್‌ ಸೆಟ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

Silver Jewel Trend

ಮೆನ್ಸ್ ಗೂ ಬಂತು ಸಿಲ್ವರ್‌ ಜ್ಯುವೆಲರಿ

ಬ್ರೇಸ್‌ಲೆಟ್ಸ್‌, ಕತ್ತಿನ ನಾನಾ ಬಗೆಯ ಚೈನ್‌ಗಳು, ಕೈ ಉಂಗುರಗಳು ಇದೀಗ ಮೆನ್ಸ್‌ ಜ್ಯುವೆಲರಿ ಕೆಟಗರಿಯಲ್ಲಿ ದೊರೆಯುತ್ತಿವೆ. ಬಂಗಾರ ಖರೀದಿಸಲು ಆಗದಿದ್ದವರಿಂದಿಡಿದು, ವೆರೈಟಿ ಡಿಸೈನ್‌ ಸೆಟ್‌ಗಳನ್ನು ಧರಿಸಲು ಬಯಸುವವರು, ಒಮ್ಮೆ ಧರಿಸಿ, ಮತ್ತೆ ರಿಪೀಟ್‌ ಮಾಡಲು ಬಯಸದವರು ಸಿಲ್ವರ್‌ ಜ್ಯುವೆಲರಿಗಳನ್ನು ಖರೀದಿಸತೊಡಗಿದ್ದಾರೆ.

ಕೈಗೆಟಕುವ ಬೆಲೆಯಲ್ಲಿ ಸಿಲ್ವರ್‌ ಜ್ಯುವೆಲರಿ

“ಮೊದಮೊದಲು ಕೇವಲ ಹೆಣ್ಣು ಮಕ್ಕಳ ಸಿಲ್ವರ್‌ ಜ್ಯುವೆಲರಿಗಳು ಹೆಚ್ಚು ಲಭ್ಯವಿದ್ದವು. ಇದೀಗ ಪುರುಷರ ಜ್ಯುವೆಲರಿಗಳು ಬಂದಿವೆ. ಕಡಿಮೆ ದರದಲ್ಲಿ ಅಂದರೇ ಸಾವಿರಾರು ರೂ.ಗಳಲ್ಲಿ ಭಾರಿ ಡಿಸೈನ್‌ನವನ್ನು ಖರೀದಿಸಬಹುದೆಂಬ ಲೆಕ್ಕಚಾರ ಹಲವರದ್ದು. ಲಕ್ಷಗಟ್ಟಲೇ ಬಂಗಾರಕ್ಕೆ ಸುರಿಯುವ ಬದಲು ಅದರ ತದ್ರೂಪದಂತಿರುವ ಸಿಲ್ವರ್‌ ಜ್ಯುವೆಲರಿಗಳನ್ನು ಖರೀದಿಸಿ, ಧರಿಸುವುದು ಇದೀಗ ಕಾಮನ್‌ ಆಗಿದೆ” ಎನ್ನುತ್ತಾರೆ ಜ್ಯುವೆಲರಿ ಡಿಸೈನರ್ಸ್.‌

ಇದನ್ನೂ ಓದಿ: Fashion Trend: ಯುವತಿಯರನ್ನು ಸೆಳೆದಿರುವ 3 ಶೈಲಿಯ ವೈಟ್‌ ಪ್ಯಾಂಟ್‌ಗಳಿವು!

ಸಿಲ್ವರ್‌ ಜ್ಯುವೆಲರಿ ಪ್ರಿಯರು ಖರೀದಿಗೆ ಮುನ್ನ ಗಮನದಲ್ಲಿಟ್ಟುಕೊಳ್ಳಬೇಕಾದ್ದು…

  • ಟ್ರೆಂಡಿಯಾಗಿರುವ ವಿನ್ಯಾಸದವನ್ನು ಖರೀದಿಸಿ.
  • ಹೆವ್ವಿ ಬಂಗಾರದ ರಿಪ್ಲೀಕಾ ಡಿಸೈನ್‌ನವು ಹೆಚ್ಚು ಚಾಲ್ತಿಯಲ್ಲಿವೆ.
  • ನಿರ್ವಹಣೆ ಬಗ್ಗೆ ಮೊದಲೇ ತಿಳಿದುಕೊಳ್ಳಿ.
  • ನೀರು ಸೋಕಿಸಿದಲ್ಲಿ ಮಾಸಬಹುದು.
  • ಪಾಲಿಶ್‌ ಕಡಿಮೆಯಾದಾಗ ಮತ್ತೊಮ್ಮೆ ಹಾಕಿಸಲು ಅಂಗಡಿಯವರನ್ನು ಸಂಪರ್ಕಿಸಿ.
  • ರೀಸೇಲ್‌ ವ್ಯಾಲ್ಯೂ ಬಗ್ಗೆ ತಿಳಿದುಕೊಂಡು ಖರೀದಿಸಿ.
  • ಬ್ರಾಂಡೆಡ್‌ ಆಭರಣ ಮಾರಾಟಗಾರರ ಬಳಿ ಕೊಳ್ಳಿ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

Continue Reading
Advertisement
Covaxin Safety
ದೇಶ9 mins ago

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Food department deletes name from ration card list even though it is alive
ವಿಜಯನಗರ12 mins ago

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

History Of Ice Cream
ಆಹಾರ/ಅಡುಗೆ13 mins ago

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

IPL 2024
ಕ್ರೀಡೆ15 mins ago

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

Silver Jewel Trend
ಫ್ಯಾಷನ್24 mins ago

Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

Prajwal Revanna Case
ಪ್ರಮುಖ ಸುದ್ದಿ27 mins ago

Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

Holenarasipura sexual assault case SIT moves HC against HD Revanna bail order
ಕ್ರೈಂ32 mins ago

HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

Due to heavy rain in Shira water entered houses and shops
ತುಮಕೂರು39 mins ago

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Lok Sabha Election 2024 Shah Rukh Khan booth in Mumbai
ಬಾಲಿವುಡ್42 mins ago

Lok Sabha Election 2024: ಕುಟುಂಬದ ಜತೆ ಬಂದು ಮತ ಚಲಾಯಿಸಿದ ಶಾರುಖ್‌ ಖಾನ್‌

Trichy Tour
ಪ್ರವಾಸ47 mins ago

Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌