VISTARA TOP 10 NEWS : ಕಾಂಗ್ರೆಸ್‌ ಮೇಲೆ ಬಿಜೆಪಿ ಪೋಸ್ಟರ್‌ ದಾಳಿ, ಗಾಜಾ ಮೇಲೆ ಅಂತಿಮ ದಾಳಿಗೆ ಇಸ್ರೇಲ್‌ ರೆಡಿ - Vistara News

ಕರ್ನಾಟಕ

VISTARA TOP 10 NEWS : ಕಾಂಗ್ರೆಸ್‌ ಮೇಲೆ ಬಿಜೆಪಿ ಪೋಸ್ಟರ್‌ ದಾಳಿ, ಗಾಜಾ ಮೇಲೆ ಅಂತಿಮ ದಾಳಿಗೆ ಇಸ್ರೇಲ್‌ ರೆಡಿ

VISTARA TOP 10 NEWS : ಐಟಿ ದಾಳಿ ಬಳಿಕ ಬಿಜೆಪಿ ಚಿಗಿತುಕೊಂಡಿದೆ, ಅದು ಕಾಂಗ್ರೆಸ್‌ ಮೇಲೆ ಭರ್ಜರಿ ದಾಳಿ ನಡೆಸಿದೆ. ಅತ್ತ ಇಸ್ರೇಲ್‌ ಅಂತಿಮ ಕದನಕ್ಕೆ ಅಣಿಯಾಗಿದೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್‌ 10 ನ್ಯೂಸ್‌

VISTARANEWS.COM


on

Vistara Top 10 News 16 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಐಟಿ ದಾಳಿ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ದಳ, ಕಮಲ ಕಹಳೆ; ಪೋಸ್ಟರ್‌ ವಾರ್‌
ಐಟಿ ದಾಳಿಯಲ್ಲಿ ಸಿಕ್ಕಿದ ಹಣ ಯಾರದು, ಎಲ್ಲಿಗೆ ಹೋಗಬೇಕಿತ್ತು ಎಂಬುದನ್ನು ಆಧಾರವಾಗಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಕಾಂಗ್ರೆಸ್‌ ಮೇಲೆ ಮುಗಿಬಿದ್ದಿವೆ. ಇದು ಪಂಚರಾಜ್ಯ ಚುನಾವಣೆಗೆ ಸಂಗ್ರಹಿಸಿದ ಹಣ ಎಂದು ಹೇಳಿರುವ ಬಿಜೆಪಿ ಬಗೆಬಗೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರ ಮೇಲೆ ದಾಳಿ ಮಾಡಿದೆ. ಎಚ್‌ ಡಿ ಕುಮಾರಸ್ವಾಮಿ ಅವರು YST, SST ಹೆಸರಿನಲ್ಲಿ ಸಿಎಂ ಪಟಾಲಂ ಲೂಟಿ ಮಾಡುತ್ತಿದೆ ಎಂದಿದ್ದಾರೆ.

ವರದಿ 1.: ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ; ರಾಹುಲ್‌, ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಪೋಸ್ಟರ್‌ ಸಮರ
ವರದಿ 2: ಐಟಿ ದಾಳಿಯಲ್ಲಿ ಸಿಕ್ಕಿದ್ದು SST, YST TAX ಹಣ ಎಂದ HDK, ಅವರು ಹೇಳಿದ ವಾಸ್ತುಶಿಲ್ಪಿ ಯಾರು?
ವರದಿ 3: BY Vijayendra : ರಾಜ್ಯದಲ್ಲಿ SBI ಸ್ಥಾಪಿಸಿದ ಕಾಂಗ್ರೆಸ್‌; ಶಿವಕುಮಾರ್‌ ಬ್ಯಾಂಕ್‌ ಆಫ್‌ ಇಂಡಿಯಾ!

2. ಕಮಿಷನ್‌ ಅಸ್ತ್ರಕ್ಕೆ ಡಿ.ಕೆ.ಶಿ ಪ್ರತಿದಾಳಿ: ನಕಲಿ ಸ್ವಾಮಿ, ಲೂಟಿ ರವಿಗೆ ಉತ್ತರ ಕೊಡ್ತೀನಿ ಎಂದ ಡಿಸಿಎಂ
ʻʻನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಸಿಎಂ, ನಕಲಿ ಸ್ವಾಮಿ ಬ್ಲಾಕ್ ಮೇಲ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅಬ್ಬರಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ವರದಿ: ಸತೀಶ್‌ ಜಾರಕಿಹೊಳಿ ಟೀಮ್‌ನ ಮೈಸೂರು ಟ್ರಿಪ್‌ ಕ್ಯಾನ್ಸಲ್ ಮಾಡಿಸಿದ ಹೈಕಮಾಂಡ್

3. ವರಿಷ್ಠರ ವಿರುದ್ಧವೇ ತೊಡೆತಟ್ಟಿದ ಇಬ್ರಾಹಿಂ: ನಮ್ಮದೇ ಒರಿಜಿನಲ್‌ ಜೆಡಿಎಸ್ ಎಂದ ದಳಾಧ್ಯಕ್ಷ
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ (BJP-JDS Alliance) ಮಾಡಿಕೊಂಡ ಸ್ವಲ್ಪ ಸಮಯದ ನಂತರ ಸಿ.ಎಂ. ಇಬ್ರಾಹಿಂ (CM Ibrahim) ಸಿಡಿದು ನಿಂತಿದ್ದಾರೆ. ಮೈತ್ರಿಯನ್ನು ಒಪ್ಪುವುದಿಲ್ಲ ಎಂದಿರುವ ಅವರು ನಮ್ಮದೇ ಒರಿಜಿನಲ್‌ ಜೆಡಿಎಸ್‌ ಎಂದು ಘೋಷಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4.ಬೆಂಗಳೂರಿನ ಜನತೆಗೆ ಮತ್ತೆ ಜೋಡಿ ಆಘಾತ: ನೀರಿನ ದರದ ಜತೆಗೆ ವಿದ್ಯುತ್‌ ದರ ಏರಿಕೆ ಶಾಕ್‌
ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದು 4 ತಿಂಗಳು ಕಳೆಯುತ್ತಿರುವ ಬೆನ್ನಲ್ಲೇ ಬೆಲೆ ಏರಿಕೆಯ (Price Rise) ಭೂತ ಶುರುವಾಗಿದೆ. ಈಗ ಕುಡಿಯುವ ನೀರೂ ಸಹ ತುಟ್ಟಿ (Water will be Costly) ಆಗುವ ಸಾಧ್ಯತೆ ದಟ್ಟವಾಗಿದೆ. ಇದಲ್ಲದೆ ವಿದ್ಯುತ್ ದರ ಏರಿಕೆಯು (Electricity Tariff) ಸದ್ದಿಲ್ಲದೆ ಆಗುತ್ತಿದ್ದು, ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. Israel Palestine War: ನಮ್ಮ ಕೈ ಟ್ರಿಗರ್ ಮೇಲಿದೆ! ಇಸ್ರೇಲ್‌ಗೆ ನೇರ ಎಚ್ಚರಿಕೆ ನೀಡಿದ ಇರಾನ್
ಇಸ್ರೇಲಿಗಳ ಆಕ್ರಮಣಗಳು ನಿಲ್ಲದಿದ್ದರೆ, ಈ ಪ್ರದೇಶದ ಎಲ್ಲಾ ರಾಷ್ಟ್ರಗಳ ಕೈ ಯುದ್ಧದ ಬಟನ್ ಒತ್ತಲು ರೆಡಿಯಾಗಿವೆ ಎಂದು ವಿದೇಶಾಂಗ ಸಚಿವ ಹೊಸೈನ್ ಹೇಳಿದ್ದಾರೆ. ಇತ್ತ ಇಸ್ರೇಲ್‌ ಗಾಜಾ ಪಟ್ಟಿ ಮೇಲೆ ಅಂತಿಮ ದಾಳಿಗೆ ಸಿದ್ಧತವಾಗಿದೆ. ಹೀಗಾಗಿ ಭೀಕರ ಕಾಳಗ ನಿರೀಕ್ಷಿತ, ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. Supreme Court: 26 ವಾರಗಳ ಭ್ರೂಣದ ಗರ್ಭಪಾತಕ್ಕೆ ಸುಪ್ರೀಂ ನಕಾರ; ಮಗುವಿನ ಹೊಣೆ ಯಾರದ್ದು?
26 ವಾರ ತುಂಬಿದ ಗರ್ಭಿಣಿಗೆ ಗರ್ಭಪಾತಕ್ಕೆ ಅನುಮತಿ ನೀಡಲು ಸುಪ್ರೀಂ ಕೋರ್ಟ್‌ (Supreme Court) ನಿರಾಕರಿಸಿದೆ. ಮಹಿಳೆ ಗರ್ಭ ಧರಿಸಿ 24 ವಾರ ದಾಟಿರುವುದರಿಂದಾಗಿ ಗರ್ಭಪಾತಕ್ಕೆ ಅನುಮತಿಸಲು ಆಗುವುದಿಲ್ಲ ಎಂದಿದೆ. ಜತೆಗೆ ಮಗುವಿನ ಹೊಣೆ ಯಾರದು ಎಂದು ಕೇಳಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ದೀಪಾವಳಿ ಸಂದರ್ಭದಲ್ಲಿ ರಾತ್ರಿ 8ರಿಂದ 11 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 8ರಿಂದ 11ಗಂಟೆವರೆಗೂ ಪಟಾಕಿ ಸ್ಫೋಟಿಸಲು ಅವಕಾಶ ನೀಡಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಯಾವುದೇ ರೀತಿಯ ಪಟಾಕಿ ಮಾರಾಟ ಹಾಗೂ ಬಳಕೆ ನಿಷೇಧ ವಿಧಿಸಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ತೆಲಂಗಾಣದಲ್ಲಿ ಮತ್ತೆರೆಡು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌- ವಧುವಿಗೆ 1 ಲಕ್ಷ ನಗದು, 10 ಗ್ರಾಂ ಚಿನ್ನದ ಭಾಗ್ಯ
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದರೆ ಮಹಾಲಕ್ಷ್ಮೀ ಗ್ಯಾರಂಟಿ ಅಡಿಯಲ್ಲಿ ವಧುವಿಗೆ 10 ಗ್ರಾಂ ಚಿನ್ನ, 1 ಲಕ್ಷ ರೂ. ನಗದು ಸಿಗಲಿದೆ. ವಿದ್ಯಾರ್ಥಿಗಳಿಗೆ ಉಚಿತವಾಗಿ ಇಂಟರ್‌ನೆಟ್‌ ಸೇವೆ! ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ICC World Cup 2023 : ಹಮಾಸ್ ಉಗ್ರರಿಗೆ ಬೆಂಬಲ ನೀಡಿದ ರಿಜ್ವಾನ್​ ಬೆಂಡೆತ್ತಿದ ಪಾಕ್​ ಕ್ರಿಕೆಟಿಗ!
ಶ್ರೀಲಂಕಾ ವಿರುದ್ಧದ ಪಾಕಿಸ್ತಾನದ ಗೆಲುವನ್ನು ಗಾಜಾ ಪಟ್ಟಿಯ ಯುದ್ಧದಲ್ಲಿ ಪ್ರಾಣ ಕಳೆದುಕೊಂಡವರಿಗೆ ಅರ್ಪಿಸಿದ ಪಾಕಿಸ್ತಾನದ ಸ್ಟಾರ್ ಕೀಪರ್ ಮೊಹಮ್ಮದ್ ರಿಜ್ವಾನ್ ಅವರ ಹೇಳಿಕೆಯನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಖಂಡಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಪೂರಕ ವರದಿ: Pakistan Cricket Team : ಮೈದಾನದಲ್ಲೇ ನಮಾಜ್ ಮಾಡಿದ ರಿಜ್ವಾನ್ ಮೇಲೆ ಬಿತ್ತು ಕೇಸು

10.BBK 10: ಈ ಸಲ ಕಪ್‌ ʻಡ್ರೋನ್‌ʼದೆ; ಪ್ರತಾಪ್‌ಗೆ ಕರುನಾಡು ಸಾಥ್‌; ಗೌರೀಶ್‌ ಅಕ್ಕಿ ಊಸರವಳ್ಳಿ ಅಂತೆ!
ಈಗಾಗಲೇ ಪ್ರೇಕ್ಷಕರು ʻʻಬಿಗ್‌ ಬಾಸ್‌ ಸೀಸನ್‌ 10ರ ವಿಜೇತ ಡ್ರೋನ್‌ ಎಂದು ಘೋಷಿಸಿದ್ದಾರೆ! ಹಲವು ಟ್ರೋಲ್‌ ಪೇಜ್‌ಗಳು, ಮೀಮ್ಸ್‌ಗಳು ಡ್ರೋನ್‌ ಪರ ನಿಂತಿವೆ. ಅದೇ ವೇಳೆ ಗೌರೀಶ್‌ ಅಕ್ಕಿಗೆ ಊಸರವಳ್ಳಿ ಪಟ್ಟ ಸಿಕ್ಕಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

IAS Exam : ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ

IAS Exam : ದೂರದ ದಿಲ್ಲಿಗೆ ಹೋಗಿ ನಮ್ಮ ಕನ್ನಡಿಗ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಅಂತಹ ಅಭ್ಯರ್ಥಿಗಳು ನಮ್ಮ ಕರ್ನಾಟಕದಲ್ಲೇ ಉತ್ತಮ ಅವಕಾಶವನ್ನು ಪಡೆದುಕೊಳ್ಳಬೇಕು ಅನ್ನುವ ಸದುದ್ದೇಶದಿಂದ ‘ಧೀ ಅಕಾಡೆಮಿ’ಯನ್ನು ಬೆಂಗಳೂರಿನಲ್ಲಿ ತೆರೆಯಲಾಗಿದೆ.

VISTARANEWS.COM


on

IAS Exam
Koo

ಬೆಂಗಳೂರು: ಭವಿಷ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಯಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಅವಕಾಶವನ್ನು (IAS Exam) ‘ಧೀ ಅಕಾಡೆಮಿ’ ತೆರೆದಿಟ್ಟಿದೆ. ಬೆಂಗಳೂರಿನ ಚಂದ್ರಾಲೇ ಔಟ್ ನಲ್ಲಿರುವ ಈ ಸಂಸ್ಥೆ ಯುಪಿಎಸ್ ಸಿ ಪರೀಕ್ಷೆ ಬರೆಯುವ ಪ್ರತಿಯೊಬ್ಬ ಅಭ್ಯರ್ಥಿಗೂ ಕಳೆದೆರಡು ವರ್ಷಗಳಿಂದ ಅತ್ಯುತ್ತಮ ತರಬೇತಿ ನೀಡುತ್ತಾ ಬಂದಿದೆ. ಇಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ತೇರ್ಗಡೆ ಹೊಂದಿ ಸಂಸ್ಥೆಗೆ ಗೌರವ ತಂದಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿಯೇ ತರಬೇತಿ ನೀಡುವ ‘ಧೀ ಅಕಾಡೆಮಿ’ ಇತರೆ ಎಲ್ಲ ಸ್ಪರ್ಧಾತ್ಮಕ ತರಬೇತಿ ನೀಡುವ ಸಂಸ್ಥೆಗಳಿಗಿಂತ ಭಿನ್ನವಾಗಿ ಕೆಲಸ ನಿರ್ವಹಿಸುತ್ತಿದೆ ಅನ್ನೋದು ವಿಶೇಷ.

ದೂರದ ದಿಲ್ಲಿಗೆ ಹೋಗಿ ನಮ್ಮ ಕನ್ನಡಿಗ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಅಂತಹ ಅಭ್ಯರ್ಥಿಗಳು ನಮ್ಮ ಕರ್ನಾಟಕದಲ್ಲೇ ಉತ್ತಮ ಅವಕಾಶವನ್ನು ಪಡೆದುಕೊಳ್ಳಬೇಕು ಅನ್ನುವ ಸದುದ್ದೇಶದಿಂದ ‘ಧೀ ಅಕಾಡೆಮಿ’ಯನ್ನು ಬೆಂಗಳೂರಿನಲ್ಲಿ ತೆರೆಯಲಾಗಿದೆ.

ತಜ್ಞರಿಂದ ತರಬೇತಿ

ರಾಜ್ಯದ ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ದಿಲ್ಲಿಯಿಂದ ನುರಿತ ತಜ್ಞರು ಬಂದು ತರಬೇತಿ ನೀಡುತ್ತಾರೆ. ಜೊತೆಗೆ ಇಲ್ಲಿಯ ಸಂಪನ್ಮೂಲ ವ್ಯಕ್ತಿಗಳು ಕೂಡ ಅಗತ್ಯ ಮಾಹಿತಿ, ಸಲಹೆ -ಸೂಚನೆ ನೀಡುವುದಕ್ಕೆ ಲಭ್ಯವಿದ್ದಾರೆ. ನಿವೃತ್ತ ಐಎಎಸ್ , ಐಪಿಎಸ್ ಅಧಿಕಾರಿಗಳೇ ಉಪನ್ಯಾಸವನ್ನು ಅಭ್ಯರ್ಥಿಗಳಿಗೆ ನೀಡಲಿದ್ದಾರೆ. ‘ಧೀ ಅಕಾಡೆಮಿ’ಗೆ ಈಗಾಗಲೇ ನೋಂದಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ 9844868662/9844868663 ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ.

ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಈ ಬಗ್ಗೆ ಮಾತನಾಡಿರುವ ಸಂಸ್ಥೆಯ ಕಾವ್ಯಾ ಅನಂತ್, ‘ನಿಮ್ಮ ಕನಸನ್ನು ನನಸಾಗಿಸುವುದಕ್ಕೆ ‘ಧೀ ಅಕಾಡೆಮಿ’ ಅತ್ಯುತ್ತಮ ಆಯ್ಕೆ. ಬಡವರಿಗೆ ಉನ್ನತ ಹುದ್ದೆಗಳ ಕನಸು ಮರೀಚಿಕೆಯಾಗಿಯೇ ಉಳಿದಿದೆ. ಅಂತಹ ಸನ್ನಿವೇಶದಲ್ಲಿ ಅವರಿಗೆ ಉಚಿತ ತರಬೇತಿ ನೀಡುವುದಕ್ಕೆ ನಮಗೆ ಅತ್ಯಂತ ಖುಷಿಯಾಗುತ್ತದೆ. ಎಲ್ಲ ಮೂಲ ಸೌಕರ್ಯವನ್ನು ನಮ್ಮ ಸಂಸ್ಥೆ ಒಳಗೊಂಡಿದೆ. ನಿಮ್ಮ ಎಲ್ಲ ಕನಸುಗಳನ್ನು ನಮ್ಮ ಸಂಸ್ಥೆಯ ವೇದಿಕೆ ಮೂಲಕ ನನಸು ಮಾಡಿಕೊಳ್ಳಬಹುದು’ ಎಂದು ತಿಳಿಸಿದ್ದಾರೆ.

ಬಡ ವಿದ್ಯಾರ್ಥಿಗಳ ಆಯ್ಕೆ ಹೇಗೆ..?

ಯುಪಿಎಸ್ ಸಿ ಪರೀಕ್ಷೆ ಬರೆದು ಬದುಕಿನಲ್ಲಿ ಏನಾದರೂ ಸಾಧನೆ ಮಾಡಬೇಕು ಅನ್ನುವುದು ಎಲ್ಲರ ಕನಸಾಗಿರುತ್ತದೆ. ಆದರೆ ಹಣ ಇಲ್ಲ ಅನ್ನೋದೆ ದೊಡ್ಡ ಕೊರತೆ ಆಗಿರುತ್ತದೆ. ಅಂತಹ ಅಭ್ಯರ್ಥಿಗಳು ಯಾವುದೇ ಚಿಂತೆಗೆ ಒಳಗಾಗಬೇಕಿಲ್ಲ. ಪ್ರತಿಭೆ ಇರುವ ಅಭ್ಯರ್ಥಿಗಳನ್ನು ‘ಧೀ ಅಕಾಡೆಮಿ’ ಕೈ ಹಿಡಿಯಲಿದೆ. ಹಾಗಾದರೆ ನಿಮ್ಮ ಆಯ್ಕೆ ಹೇಗೆ ಅನ್ನೋದಕ್ಕೆ ಉತ್ತರ ಇಲ್ಲಿದೆ. ಧೀ ಅಕಾಡೆಮಿ ಬಡ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಅದರಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳ ತಂದೆ-ತಾಯಿಯ ಆದಾಯ ಸರ್ಟಿಫಿಕೇಟ್ ಪರಿಶೀಲನೆ ನಡೆಸಿದ ಬಳಿಕ ಉಚಿತ ತರಬೇತಿ ನೀಡಲಾಗುತ್ತದೆ.

ಧೀ ಅಕಾಡೆಮಿಯಲ್ಲಿ ತರಬೇತಿ ಪಡೆದು ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಉತ್ತೀರ್ಣರಾಗಿದ್ದಾರೆ. ಹೀಗಾಗಿ ಈ ಸಂಸ್ಥೆ ಹೊಸ ಭರವಸೆಯನ್ನು ಹುಟ್ಟು ಹಾಕಿದೆ.

Continue Reading

ಕರ್ನಾಟಕ

DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

DK Shivakumar: ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ಕೇರಳದಲ್ಲಿ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ ಪೂಜೆ ನಡೆಯುತ್ತಿದೆ ಎಂಬುದು ಕೂಡ ಗೊತ್ತಿದೆ ಎಂಬುದಾಗಿ ಡಿ.ಕೆ. ಶಿವಕುಮಾರ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಫಲಿತಾಂಶಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕರ್ನಾಟಕ ಸೇರಿ ದೇಶಾದ್ಯಂತ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಇದರ ಬೆನ್ನಲ್ಲೇ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ. “ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ನಡೆಯುತ್ತಿದೆ” ಎಂಬುದಾಗಿ ಹೇಳಿರುವುದು ಈಗ ಸಂಚಲನ ಮೂಡಿಸಿದೆ.

“ಕೇರಳದಲ್ಲಿ ನನ್ನ ಮೇಲೆ, ಸಿದ್ದರಾಮಯ್ಯ ಅವರ ಮೇಲೆ ಹಾಗೂ ನಮ್ಮ ಸರ್ಕಾರದ ಮೇಲೆ ಕೇರಳದಲ್ಲಿ ದೊಡ್ಡ ಪ್ರಯೋಗ ನಡೆಯುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದ ಸುತ್ತಮುತ್ತ ಯಾಗ ನಡೆಯುತ್ತಿದೆ. ನನ್ನ ಹಾಗೂ ಸಿಎಂ ಮೇಲೆ ಯಾವ ಪೂಜೆ ನಡೆಯುತ್ತಿದೆ ಎಂಬುದು ಕೂಡ ಗೊತ್ತಿದೆ” ಎಂದು ಹೇಳಿದ ಅವರು ಯಾರೋ ಬರೆದು ಕೊಟ್ಟಿದ್ದಾರೆ ಎಂಬುದಾಗಿ ಜೇಬಿನಲ್ಲಿರುವ ಚೀಟಿಯನ್ನು ತೆಗೆದು ನೋಡಿದ್ದಾರೆ.

ಪಂಚಬಲಿ ಕೊಡುತ್ತಿದ್ದಾರೆ ಎಂದ ಡಿಸಿಎಂ

ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ ನಡೆಸಲಾಗುತ್ತಿದೆ. ಇದಕ್ಕಾಗಿ ಪಂಚ ಬಲಿ ಕೊಡುತ್ತಿದ್ದಾರೆ. 21 ಕಪ್ಪು ಮೇಕೆ, 3 ಎಮ್ಮೆ, 21 ಕುರಿ, 5 ಹಂದಿ ಹಾಗೂ ಕೋಣವನ್ನು ಬಲಿ ಕೊಡುತಿದ್ದಾರೆ. ಈಗ ಯಾಗ ನಡೆಯುತ್ತಿದ್ದು, ಅವರ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಆದರೆ, ನಾವು ನಂಬಿದ ದೇವರು ನಮ್ಮನ್ನು ಕಾಪಾಡುತ್ತಾನೆ. ಎಲ್ಲ ಡೀಟೇಲ್ಸ್‌ ಅನ್ನು ಚೀಟಿ ಬರೆದುಕೊಟ್ಟಿದ್ದಾರೆ. ಯಾರು ಭಾಗಿಯಾಗಿದ್ದರೋ ಅವರೇ ನನಗೆ ಮಾಹಿತಿ ಕೊಟ್ಟಿದ್ದಾರೆ. ಇದೆಲ್ಲವನ್ನು ರಾಜಕೀಯದವರಲ್ಲದೆ ಬೇರೆ ಯಾರು ಮಾಡಲು ಸಾಧ್ಯ. ಆದರೆ, ಇದೆಲ್ಲವನ್ನು ನಾವು ನಂಬುವುದಿಲ್ಲ” ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯ ಸರ್ಕಾರದ ವಿರುದ್ಧ ಕೇರಳದಲ್ಲಿ ರಾಜಕಂಟಕ ಯಾಗ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ. ಸಿಎಂ, ಡಿಸಿಎಂ ಮಾರಣ ಮೋಹನ ಸ್ತಂಭನ ಪ್ರಯೋಗ ಯಾಗ ನಡೆಯುತ್ತಿದೆ. ಕೇರಳದ ನಿರ್ಜನ ಪ್ರದೇಶದಲ್ಲಿ ನಡೆದಿದೆ ಎಂಬ ಮಾಹಿತಿ ಇದೆ. ಇದೇ ಮಾಹಿತಿ ಆಧರಿಸಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ರಾಜ”ಸ್ಥಾನ”ದಲ್ಲಿ ಕೂತವರ ವಿರುದ್ಧ ಪ್ರಯೋಗ ನಡೆದಿದೆ ಎಂದು ಪರೋಕ್ಷವಾಗಿ ಡಿಕೆಶಿ ಹೇಳಿದ್ದಾರೆ.

ಇದನ್ನೂ ಓದಿ: DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Continue Reading

ಬೆಳಗಾವಿ

Food Poisoning : ಜಾತ್ರೆಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Food Poisoning : ಜಾತ್ರೆಯಲ್ಲಿ ಊಟ ಸೇವಿಸಿದವರಿಗೆ ತೀವ್ರ ಅಸ್ವಸ್ಥಗೊಂಡಿದ್ದು, ಸುಮಾರು 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಗ್ರಾಮದಲ್ಲೇ ವೈದ್ಯಕೀಯ ತಂಡ ಬೀಡು ಬಿಟ್ಟಿದೆ.

VISTARANEWS.COM


on

By

Food Poisoning
Koo

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಬಾಳುಮಾಮಾ ಜಾತ್ರೆಯಲ್ಲಿ ಊಟ (Food Poisoning) ಮಾಡಿದವರು ಅಸ್ವಸ್ಥಗೊಂಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನೇ 200ಕ್ಕೂ ಹೆಚ್ಚು ಮಂದಿ ಸಂಜೆ ಊಟ ಮಾಡಿದ್ದರು. ಸಂಜೆ ಊಟ ಮಾಡಿದವರಿಗೆ ಏಕಾಏಕಿ ವಾಂತಿ ಭೇದಿ ಶುರುವಾಗಿತ್ತು. ಕೂಡಲೇ ಅಸ್ವಸ್ಥಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುಮಾರು 30 ಮಂದಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಉಳಿದ 10 ಮಂದಿಗೆ ಕೇರೂರ ಗ್ರಾಮದ ಅಂಗವಾಡಿ ಹಾಗೂ 15 ಮಂದಿಗೆ ಯಕ್ಸಂಭಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲೇ ವೈದ್ಯಕೀಯ ತಂಡ ಬೀಡು ಬಿಟ್ಟಿದೆ.

ಇದನ್ನೂ ಓದಿ: Viral News: ಸರ ಕದ್ದು ಪರಾರಿಯಾಗಲು ಬೈಕ್‌ ಏರಿದವರಿಗೆ ಕಾದಿತ್ತು ಶಾಕ್‌; ವಿಡಿಯೊ ಇಲ್ಲಿದೆ

ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಭುವನೇಶ್ವರ: ವಿಶ್ವ ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇಗುಲ (Puri Jagannath temple)ದಲ್ಲಿ ಬುಧವಾರ ರಾತ್ರಿ ಅಗ್ನಿ ದುರಂತವೊಂದು ಸಂಭವಿಸಿದ್ದು, ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ. ಭಗವಾನ್ ಜಗನ್ನಾಥನ ಚಂದನ್ ಜಾತ್ರಾ ಉತ್ಸವದ ಸಂದರ್ಭದಲ್ಲಿ ಪಟಾಕಿಗಳ ರಾಶಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ (Firecracker Explosion).

ಉತ್ಸವ ವೀಕ್ಷಣೆಗಾಗಿ ನೂರಾರು ಮಂದಿ ನರೇಂದ್ರ ಪುಷ್ಕರಿಣಿ ದಂಡೆ ಮೇಲೆ ಜಮಾಯಿಸಿದ್ದ ವೇಳೆ ಪಟಾಕಿ ಸ್ಫೋಟಗೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಕ್ತರ ಗುಂಪು ಪಟಾಕಿ ಹಚ್ಚುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಹಾರಿದ ಬೆಂಕಿಯ ಕಿಡಿ ಪಟಾಕಿಗಳ ರಾಶಿಗೆ ಅಪ್ಪಳಿಸಿತು. ಇದು ಸ್ಫೋಟಕ್ಕೆ ಕಾರಣ ಎಂದು ಅವರು ವಿವರಿಸಿದ್ದಾರೆ.

ಪಟಾಕಿ ಸಿಡಿಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಕೆಲವರು ತಮ್ಮನ್ನು ರಕ್ಷಿಸಿಕೊಳ್ಳಲು ಪುಷ್ಕರಿಣಿಗೆ ಜಿಗಿದಿದ್ದಾರೆ. ಇನ್ನು ಹಲವರು ಕೂಡಲೇ ಸ್ಥಳದಿಂದ ತೆರಳಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಚಿಕಿತ್ಸೆಯ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ʼʼಪುರಿ ಜಗನ್ನಾಥ ಉತ್ಸವದ ವೇಳೆ ನಡೆದ ಬೆಂಕಿ ದುರಂತದಿಂದ ತೀವ್ರ ದುಃಖವಾಗಿದೆ. ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲು ಮುಖ್ಯ ಆಡಳಿತ ಕಾರ್ಯದರ್ಶಿ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶಿಸಲಾಗಿದೆ. ಗಾಯಾಳುಗಳ ಎಲ್ಲ ವೈದ್ಯಕೀಯ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲಾಗುವುದು. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ” ಎಂದು ನವೀನ್ ಪಟ್ನಾಯಕ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. “ಪುರಿ ಚಂದನ ಯಾತ್ರೆಯ ಸಂದರ್ಭದಲ್ಲಿ ನರೇಂದ್ರ ಪುಷ್ಕರಿಣಿ ದೇವಿಘಾಟ್‌ನಲ್ಲಿ ನಡೆದ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗಿದೆ. ಭಗವಂತನ ಆಶೀರ್ವಾದದಿಂದ, ಚಿಕಿತ್ಸೆಯಲ್ಲಿರುವವರು ಶೀಘ್ರದಲ್ಲೇ ಗುಣಮುಖರಾಗಿ ಮನೆಗೆ ಮರಳಲಿ” ಎಂದು ಅವರು ಹಾರೈಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Fake CBI Officer : ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ ನಾಲ್ವರು ಅರೆಸ್ಟ್‌

Fake CBI Officer : ಸಿಬಿಐ ಪೊಲೀಸರೆಂದು ಸುಳ್ಳು ಹೇಳಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಕಿಡಿಗೇಡಿ ಗ್ಯಾಂಗ್‌ ಅನ್ನು ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾಗಿ 12 ಗಂಟೆಯೊಳಗೆ ಕೇರಳ‌ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

VISTARANEWS.COM


on

By

Fake CBI Officer
Koo

ಬೆಂಗಳೂರು: ಸಿಬಿಐ ಪೊಲೀಸರೆಂದು (Fake CBI Officer ) ವಿದ್ಯಾರ್ಥಿಗಳಿಂದ ಹಣ ವಸೂಲಿ‌ ಮಾಡುತ್ತಿದ್ದ ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ವಿದ್ಯಾರ್ಥಿಗಳಿದ್ದ ಮನೆಗೆ ಸಿಬಿಐ ಅಧಿಕಾರಿಗೆಳೆಂದು ದಾಳಿ ಮಾಡಿದ್ದರು. ಈ ವೇಳೆ ತಾವೇ ತಂದಿದ್ದ ಗಾಂಜಾವನ್ನು ವಿದ್ಯಾರ್ಥಿಗಳ ಕೈಯಲ್ಲಿ ಇಟ್ಟು ವಿಡಿಯೊ ಮಾಡಿಕೊಂಡು ಬ್ಲ್ಯಾಕ್‌ ಮೇಲ್‌ ಮಾಡಿದ್ದರು. ಕೈಯಲ್ಲಿದ್ದ ಪಿಸ್ತೂಲ್, ಐಡಿ ಕಾರ್ಡ್, ಲಾಟಿಯಿಂದ ಹಲ್ಲೆ ಮಾಡಿದ್ದರು.

ಆರೋಪಿಗಳ ನಡವಳಿಕೆಯಿಂದ ಅನುಮಾನಗೊಂಡ ಯುವಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ತನಿಖೆ ನಡೆಸಿದ ಸೋಲದೇವನಹಳ್ಳಿ ಪೊಲೀಸರು ದೂರು ದಾಖಲಾಗಿ 12 ಗಂಟೆಯೊಳಗೆ ಕೇರಳ‌ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅನಂತಕೃಷ್ಣ(23), ಪ್ರಮೋದ (42), ಆದರ್ಶ್(22) ಮತ್ತು ದೀಪಕ್ ಆರ್ ಚಂದ್ರ (37) ಬಂಧಿತ ಆರೋಪಿಗಳಾಗಿದ್ದಾರೆ.

ಕೃತ್ಯಕ್ಕೆ ಬಳಸಿದ್ದ ಹಲವು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 1- ಮಹೀಂದ್ರ ಎಕ್ಸ್ ಯು ವಿ, 1 ಹ್ಯೂಂಡೈ ಐ 20 ಕಾರು, 1 ಏರ್ ಪಿಸ್ತೂಲ್, ಕೈ ಕೋಳ, ಐಡಿ ಕಾರ್ಡ್, ಬ್ಯಾಟನ್ ಮತ್ತು 4 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

Fake CBI Officer

ಇದನ್ನೂ ಓದಿ: Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

ಇನ್ನೂ ಆರೋಪಿ ಪ್ರಮೋದ್ ತಿರುವನಂತಪುರಂನಲ್ಲಿ ಹೋಟೆಲ್ ಬಿಸಿನೆಸ್ ನಡೆಸುತ್ತಿದ್ದ. ತನ್ನ ತಂಗಿಯನ್ನು ಬೆಂಗಳೂರಿನ ಯುವಕನಿಗೆ ಮದುವೆ ಮಾಡಿಕೊಟ್ಟಿದ್ದ. ಈ ಹಿನ್ನೆಲೆಯಲ್ಲಿ ಆಗಾಗ ಬೆಂಗಳೂರಿಗೆ ಬಂದು ಹೋಗುತ್ತಿದ್ದ. ಪ್ರಮೋದ್‌ನ ಪಕ್ಕದ ಊರಿನವರಾದ ಅನಂತಕೃಷ್ಣ ಮತ್ತು ಆದರ್ಶ್‌ ಬೆಂಗಳೂರಿನಲ್ಲಿ ಓದುತ್ತಿದ್ದರು. ಇವರನ್ನು ಪ್ರಮೋದ್‌ ಪರಿಚಯ‌ ಮಾಡಿಕೊಂಡಿದ್ದ. ಜತೆಗೆ ಕೇರಳದಿಂದ ದೀಪಕ್ ಎಂಬಾತನನ್ನು ಕರೆಸಿಕೊಂಡು ಪ್ಲ್ಯಾನ್‌ ಮಾಡಿದ್ದ. ಸಿಬಿಐ ಅಧಿಕಾರಿಗಳೆಂದು ಹೇಳಿದರೆ ಸುಲಭವಾಗಿ ಹಣ ವಸೂಲಿ ಮಾಡಬಹುದೆಂದು ಈ ರೀತಿಯ ಕೃತ್ಯ ಮಾಡಿದ್ದರು.

ಬ್ಲ್ಯಾಕ್ ಮೇಲ್ ವೇಳೆ 3 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಲ್ಲಿ ಗಾಂಜಾ ಕೈಯಲ್ಲಿರುವ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆ ಸಮಯದಲ್ಲಿ ಯುಪಿಐ ಐಡಿಗೆ ವಿದ್ಯಾರ್ಥಿಗಳಿಂದ 90,000 ಹಣ ವರ್ಗಾವಣೆ ಮಾಡಿಕೊಂಡಿದ್ದರು. ಇನ್ನುಳಿದ ಹಣವನ್ನು ಮುಂದಿನ ದಿನ ನೀಡಬೇಕೆಂದು ಹೇಳಿ ಹೋಗಿದ್ದರು. ಸದ್ಯ ನಾಲ್ವರನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rishabh Pant
ಕ್ರೀಡೆ4 mins ago

Rishabh Pant: ದೇವರ ಕೃಪೆಯಿಂದ ಮತ್ತೆ ಟೀಮ್​ ಇಂಡಿಯಾ ಜೆರ್ಸಿ ಧರಿಸುವಂತಾಯಿತು ಎಂದು ಭಾವುಕರಾದ ರಿಷಭ್​ ಪಂತ್

IAS Exam
ಕರ್ನಾಟಕ9 mins ago

IAS Exam : ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಉಚಿತ ತರಬೇತಿ

Kamal Haasan indian 2 second song out
ಕಾಲಿವುಡ್12 mins ago

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Bus accident
ದೇಶ24 mins ago

Bus Accident: ಕಂದಕಕ್ಕೆ ಉರುಳಿದ ಬಸ್‌; 9 ಜನ ಬಲಿ; 40 ಜನರಿಗೆ ಗಂಭೀರ ಗಾಯ

Money Guide
ಮನಿ-ಗೈಡ್26 mins ago

Money Guide: ಹಣ ಪಾವತಿ ಅಂಗಳಕ್ಕೆ ಕಾಲಿಡಲು ಅದಾನಿ ಗ್ರೂಪ್‌ ಸಜ್ಜು; ಗೂಗಲ್‌ ಪೇ, ಫೋನ್‌ ಪೇಗೆ ಪ್ರಬಲ ಪೈಪೋಟಿ?

DK Shivakumar
ಕರ್ನಾಟಕ31 mins ago

DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Food Poisoning
ಬೆಳಗಾವಿ31 mins ago

Food Poisoning : ಜಾತ್ರೆಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

IPL 2024
ಕ್ರೀಡೆ40 mins ago

IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

Kannada New Movie Dasappa Kannada Movie Trailer
ಸ್ಯಾಂಡಲ್ ವುಡ್51 mins ago

Kannada New Movie: ʻತಿಥಿʼ ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ ʻದಾಸಪ್ಪʼ ಸಿನಿಮಾ ಟ್ರೈಲರ್‌ ಔಟ್‌!

T20 World Cup 2024
ಕ್ರೀಡೆ51 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಕ್ಯಾಚ್​ ಹಿಡಿದ ಫೀಲ್ಡರ್​ಗಳಿವರು…

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ3 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌