ಫೇಸ್‌ಬುಕ್‌ನಲ್ಲಿ ಪ್ಯಾಲೆಸ್ತೀನ್ ಪರ ಪೋಸ್ಟ್, ಯುಪಿ ಪೊಲೀಸ್ ಕಾನ್‌ಸ್ಟೆಬಲ್ ಸಸ್ಪೆಂಡ್! - Vistara News

ದೇಶ

ಫೇಸ್‌ಬುಕ್‌ನಲ್ಲಿ ಪ್ಯಾಲೆಸ್ತೀನ್ ಪರ ಪೋಸ್ಟ್, ಯುಪಿ ಪೊಲೀಸ್ ಕಾನ್‌ಸ್ಟೆಬಲ್ ಸಸ್ಪೆಂಡ್!

UP Police Constable: ಫೇಸ್‌ಬುಕ್‌ನಲ್ಲಿ ಸೇವ್ ಪ್ಯಾಲೆಸ್ತೀನ್ ಎಂದು ಪೋಸ್ಟ್ ಹಾಕಿದ್ದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

VISTARANEWS.COM


on

UP Police Constable Suspended For Pro-Palestinian Facebook Post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಕ್ನೋ: ಪ್ಯಾಲೆಸ್ತೀನ್ ಪರ (Save Palestine) ಬೆಂಬಲಿಸಿ ಪೋಸ್ಟ್ ಮಾಡಿದ್ದ ಉತ್ತರ ಪ್ರದೇಶದ ಕಾನ್‌ಸ್ಟೆಬಲ್ (UP Police Constable) ಒಬ್ಬರನ್ನು ಸೇವೆಯಿಂದ ಅಮಾನತು (Suspend from Service) ಮಾಡಿರುವ ಸರ್ಕಾರವು, ಇಲಾಖಾ ತನಿಖೆಗೆ ಆದೇಶಿಸಿದೆ. ಇಸ್ರೇಲ್ ಮತ್ತು ಹಮಾಸ್ ಮಧ್ಯೆ ಯುದ್ಧ ನಡೆಯುತ್ತಿರುವ (Israel Palestine War) ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಕಾನ್‌ಸ್ಟೆಬಲ್, ಪ್ಯಾಲೆಸ್ತೀನ್ ಪರ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಲ್ಲದೇ, ನಿಧಿ ಸಂಗ್ರಹಕ್ಕೆ ಮುಂದಾಗಿದ್ದಾರೆಂದು ಆರೋಪಿಸಲಾಗಿದೆ. ಈ ಪೋಸ್ಟ್ ಭಾರೀ ವೈರಲ್ ಆಗಿತ್ತು. ಬಳಿಕ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಸುಹೈಲ್ ಅನ್ಸಾರಿ ಅಮಾನತು ಆಗಿರುವ ಪೊಲೀಸ್ ಕಾನ್‌ಸ್ಟೆಬಲ್. ಬರೇಲಿ ನಿವಾಸಿಯಾಗಿರುವ ಅನ್ಸಾರಿ, ಲಖೀಂಪುರ್ ಖೇರಿ ಜಿಲ್ಲೆಯಲ್ಲಿ ಕೆಲವು ತಿಂಗಳಿಂದ ಡ್ಯೂಟಿಯಲ್ಲಿದ್ದರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೇಣಿಯ ಅಧಿಕಾರಿಯು ಪ್ರಕರಣವನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಕಾನ್‌ಸ್ಟೆಬಲ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಫೇಸ್‌ಬುಕ್‌ನಲ್ಲಿ ಪ್ಯಾಲೆಸ್ತೀನ್ ಅನ್ನು ಬೆಂಬಲಿಸುವ ಅವರ ಪೋಸ್ಟ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ಸಿಟಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿರುವ ಖೇರಿ ಡಿಎಸ್ಪಿ ಸಂದೀಪ್ ಸಿಂಗ್ ಅವರು ಹೇಳಿದ್ದಾರೆ.

ಪ್ಯಾಲೆಸ್ತೀನ್ ಉಳುವಿಗಾಗಿ ಹಣ ನೀಡುವಂತೆ ಅಸಮಾನತುಗೊಂಡಿರುವ ಪೊಲೀಸ್ ಕಾನ್‌ಸ್ಟೆಬಲ್ ಅವರು ಎಕ್ಸ್ ವೇದಿಕೆ ಮತ್ತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ಕುರಿತು ಉತ್ತರ ಪ್ರದೇಶ ಪೊಲೀಸರಿಗೆ ದೂರುಗಳನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧಕ್ಕೆ ಸಂಬಂಧಿಸಿದ ಯಾವುದನ್ನಾದರೂ ಪೋಸ್ಟ್ ಮಾಡಿದ್ದಕ್ಕಾಗಿ ಸರ್ಕಾರಿ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಅಮಾನತುಗೊಳಿಸಿದ ಈ ರೀತಿಯ ಮೊದಲ ಪ್ರಕರಣ ಇದಾಗಿದೆ.

ಅಕ್ಟೋಬರ್ 7ರಂದು ಹಮಾಸ್ ಬಂಡುಕೋರರು ದಕ್ಷಿಣ ಇಸ್ರೇಲ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಸಾವಿರಕ್ಕೂ ಅಧಿಕ ಇಸ್ರೇಲ್‌ ಜನರು ಮೃತಪಟ್ಟಿದ್ದರು. ಇದಾದ ಬಳಿಕ ಇಸ್ರೇಲ್, ಹಮಾಸ್ ಬಂಡುಕೋರರ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಪರಿಪೂರ್ಣ ಯುದ್ಧ ಆರಂಭಿಸಿದ್ದರಿಂದ ಈವರೆಗೆ 4000ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಯುದ್ಧ ನಡೆಯುತ್ತಿದೆ.

ಈ ಸುದ್ದಿಯನ್ನೂ ಓದಿ: Israel Palestine War: ನಮ್ಮ ಕೈ ಟ್ರಿಗರ್ ಮೇಲಿದೆ! ಇಸ್ರೇಲ್‌ಗೆ ನೇರ ಎಚ್ಚರಿಕೆ ನೀಡಿದ ಇರಾನ್

ಐಸ್‌ಕ್ರೀಮ್‌ ಸಾಗಿಸುತ್ತಿದ್ದ ಟ್ರಕ್‌ಗಳು ಈಗ ಶವಾಗಾರಗಳು!

ಯುದ್ಧದ ರೀತಿ ಯಾವುದೇ ಆಗಿರಲಿ, ಯಾವುದೇ ಕಾರಣಕ್ಕೆ ಯುದ್ಧ ಸಂಭವಿಸಲಿ, ಅದರ ಸ್ವರೂಪ, ಪರಿಣಾಮ ಮಾತ್ರ ಮನುಕುಲದ ಮೇಲೆ ಒಂದೇ ಪರಿಣಾಮ ಬೀರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ಸಂಘರ್ಷದ (Israel Palestine War) ಪರಿಣಾಮವನ್ನು ಮುಗ್ಧ ನಾಗರಿಕರು, ಮಕ್ಕಳು, ಸ್ತ್ರೀಯರು ಎದುರಿಸುತ್ತಿದ್ದಾರೆ. ಮನೆ ಕಳೆದುಕೊಂಡು, ಸಂಬಂಧಿಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಅದರಲ್ಲೂ, ಇಸ್ರೇಲ್‌ ದಾಳಿಗೆ ಗಾಜಾ ನಗರವು ಅಕ್ಷರಶಃ ಮಸಣದಂತಾಗಿದೆ. ಐಸ್‌ಕ್ರೀಮ್‌ ಸಾಗಿಸುತ್ತಿದ್ದ ಟ್ರಕ್‌ಗಳಲ್ಲಿ (Ice Cream Trucks) ಶವಗಳನ್ನು ಇರಿಸುವ ಮೂಲಕ ಅವುಗಳನ್ನು ಶವಾಗಾರಗಳನ್ನಾಗಿ ಬಳಸಲಾಗುತ್ತಿದೆ. ಅಷ್ಟರಮಟ್ಟಿಗೆ ಇಸ್ರೇಲ್‌ ದಾಳಿಗೆ ಗಾಜಾ ನಗರದಲ್ಲಿ (Gaza City) ಅಮಾಯಕರ ಹೆಣಗಳು ಉರುಳಿವೆ.

ಹಮಾಸ್‌ ಉಗ್ರರು ಅಕ್ಟೋಬರ್‌ 7ರಂದು ಇಸ್ರೇಲ್‌ ಮೇಲೆ ದಾಳಿ ನಡೆಸಿದ ಬಳಿಕ ಇಸ್ರೇಲ್‌ ಸೇನೆಯು ಗಾಜಾ ನಗರದ ಮೇಲೆ ಮುಗಿಬಿದ್ದಿದೆ. ಇದರಿಂದಾಗಿ ಗಾಜಾದಲ್ಲಿ ಇದುವರೆಗೆ 2,600ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಗಳ ಶವಾಗಾರಗಳಲ್ಲಿ ಜನರ ಶವಗಳನ್ನು ಇರಿಸಲು ಕೂಡ ಜಾಗ ಇಲ್ಲದಂತಾಗಿದೆ. ಹಾಗಾಗಿ, ಗಾಜಾ ನಗರದಲ್ಲಿ ಐಸ್‌ಕ್ರೀಮ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗಳನ್ನೇ ಶವಾಗಾರಗಳನ್ನಾಗಿ ಬಳಸಲಾಗುತ್ತಿದೆ. ಟ್ರಕ್‌ಗಳಲ್ಲಿ ಶವಗಳನ್ನು ಇರಿಸುವ ಮೂಲಕ ಅವುಗಳನ್ನೇ ಶವಾಗಾರಗಳ ರೀತಿ ಬಳಸಲಾಗುತ್ತಿದೆ. ಈ ಕುರಿತು ಪತ್ರಕರ್ತರೊಬ್ಬರು ಮಾಡಿದ ವರದಿಯ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

VHP leader murder: VHP ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

VHP leader murder: ಎನ್‌ಐಎ ಪ್ರಕಟಣೆ ಪ್ರಕಾರ ಹಂತಕರಾದ ಗರ್‌ಪಧನಾ ಗ್ರಾಮದ ನಿವಾಸಿಯಾಗಿರುವ ಕುಲದೀಪ್‌ ಸಿಂಗ್‌ ಪುತ್ರ ಹರ್ಜಿತ್‌ ಸಿಂಗ್‌ ಅಲಿಯಾಸ್‌ ಲಡ್ಡಿ ಮತ್ತು ಯಮುನಾ ನಗರ ನಿವಾಸಿ ಕುಲ್ಬೀರ್‌ ಸಿಂಗ್‌ ಪುತ್ರ ಸುಖ್ವಿಂದರ್‌ ಸಿಂಗ್‌ ವಿರುದ್ಧ ಹರಿಯಾಣದ ಜಗಧಾರಿ ಪೊಲೀಸ್‌ ಠಾಣೆಯಲ್ಲಿ ಮೇ 9ರಂದು ವಿಕಾಸ್‌ ಪ್ರಭಾಕರ್‌ ಹತ್ಯೆ ಪ್ರಕರಣ ದಾಖಲಾಗಿದೆ.

VISTARANEWS.COM


on

VHP leader murder
Koo

ಪಂಜಾಬ್‌: ವಿಶ್ವ ಹಿಂದೂ ಪರಿಷದ್‌(VHP leader murder) ಮುಖಂಡನ ಹಂತಕರ ಪತ್ತೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ. ಅಷ್ಟೇ ಅಲ್ಲದೇ ಎನ್‌ಐಎ ಈ ಇಬ್ಬರು ಹಂತಕರ ಫೊಟೋವನ್ನೂ ಸಹ ಬಿಡುಗಡೆ ಮಾಡಿದೆ. ಕಳೆದ ತಿಂಗಳು ವಿಶ್ವ ಹಿಂದೂ ಪರಿಷದ್‌ ನಾಯಕ ವಿಕಾಸ್‌ ಪ್ರಭಾಕರ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಹಂತಕರ ಪತ್ತೆಗಾಗಿ ಎನ್‌ಐಎ ಪ್ರಕಟಣೆ ಹೊರಡಿಸಿದೆ.

ಎನ್‌ಐಎ ಪ್ರಕಟಣೆ ಪ್ರಕಾರ ಹಂತಕರಾದ ಗರ್‌ಪಧನಾ ಗ್ರಾಮದ ನಿವಾಸಿಯಾಗಿರುವ ಕುಲದೀಪ್‌ ಸಿಂಗ್‌ ಪುತ್ರ ಹರ್ಜಿತ್‌ ಸಿಂಗ್‌ ಅಲಿಯಾಸ್‌ ಲಡ್ಡಿ ಮತ್ತು ಯಮುನಾ ನಗರ ನಿವಾಸಿ ಕುಲ್ಬೀರ್‌ ಸಿಂಗ್‌ ಪುತ್ರ ಸುಖ್ವಿಂದರ್‌ ಸಿಂಗ್‌ ವಿರುದ್ಧ ಹರಿಯಾಣದ ಜಗಧಾರಿ ಪೊಲೀಸ್‌ ಠಾಣೆಯಲ್ಲಿ ಮೇ 9ರಂದು ವಿಕಾಸ್‌ ಪ್ರಭಾಕರ್‌ ಹತ್ಯೆ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಪ್ರಭಾಕರ್ ಅವರು ವಿಎಚ್‌ಪಿಯ ನಂಗಲ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ದುರಂತವೆಂದರೆ, ಏಪ್ರಿಲ್ 13, 2024 ರಂದು ಪಂಜಾಬ್‌ನ ರೂಪನಗರ ಜಿಲ್ಲೆಯ ನಂಗಲ್ ಪಟ್ಟಣದ ಅವರ ಅಂಗಡಿಯಲ್ಲಿ ಮೋಟಾರ್‌ಸೈಕಲ್‌ನಲ್ಲಿ ಹೋಗುತ್ತಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕವಾಗಿ ಗುಂಡು ಹಾರಿಸಿ ಕೊಂದಿದ್ದರು. ಇಬ್ಬರು ದುಷ್ಕರ್ಮಿಗಳು ರೂಪನಗರ ರೈಲು ನಿಲ್ದಾಣದ ಬಳಿ ಇರುವ ಬಗ್ಗಾ ಅವರ ಮಿಠಾಯಿ ಅಂಗಡಿಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದರು. ತದನಂತರ ಸ್ಥಳದಿಂದ ಪರಾರಿಯಾಗಿದ್ದರು.

ಪ್ರಭಾಕರ್ ಹತ್ಯೆಯ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಕೇಂದ್ರ ಗೃಹ ಸಚಿವಾಲಯವು ಪ್ರಕರಣದ ಕುರಿತು ಎನ್‌ಐಎ ತನಿಖೆಗೆ ಶಿಫಾರಸು ಮಾಡಿತ್ತು. ಆರೋಪಿಗಳ ವಿರುದ್ಧ ಐಪಿಸಿ, ಯುಎ(ಪಿ) ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಗ್ಗೆ ಯಾವುದೇ ಮಾಹಿತಿಯನ್ನು ಸಿಕ್ಕಿದರೆ ಎನ್‌ಐಎ ಪ್ರಧಾನ ಕಚೇರಿಯ ದೂರವಾಣಿ ಸಂಖ್ಯೆ: 011-24368800, WhatsApp/ಟೆಲಿಗ್ರಾಂ: +91-8585931100 ಮತ್ತು ಇಮೇಲ್ ಐಡಿ: do.nia@gov.in ನಲ್ಲಿ ಹಂಚಿಕೊಳ್ಳಬಹುದು ಎಂದು NIA ತಿಳಿಸಿದೆ. ಇದಲ್ಲದೆ, ದೂರವಾಣಿ ಸಂಖ್ಯೆ: 0172-2682900, 2682901 ಮೂಲಕ ಇಬ್ಬರ ವಿರುದ್ಧ ಮಾಹಿತಿಯನ್ನು ಹಂಚಿಕೊಳ್ಳಲು ಅದರ ಚಂಡೀಗಢ ಕಚೇರಿಯನ್ನು ಸಂಪರ್ಕಿಸಬಹುದು; WhatsApp/ಟೆಲಿಗ್ರಾಮ್ ಸಂಖ್ಯೆ: 7743002947ಮತ್ತು info-chd.nia@gov.in ಕ್ಕೂ ಸಂಪರ್ಕಿಸಬಹುದು ಎಂದು ಎನ್‌ಐಎ ಹೇಳಿದೆ.

ಇದನ್ನೂ ಓದಿ: Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Continue Reading

ದೇಶ

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Lok Sabha Speaker Election: ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್‌ಡಿಎಯ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಮಧ್ಯೆ ತೀವ್ರ ಪೈಪೋಟಿ ಕಂಡು ಬಂದಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

VISTARANEWS.COM


on

Lok Sabha Speaker Election
Koo

ನವದೆಹಲಿ: ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕದ ಮೊದಲ ಅಧಿವೇಶನ (Parliament Session 2024) ಆರಂಭವಾಗಲಿದೆ. ಈಗಾಗಲೇ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ (Lok Sabha Speaker Election). ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಮಂಗಳವಾರ ಲೋಕಸಭಾ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಲಾಬಲ ಹೀಗಿದೆ

ಲೋಕಸಭೆಯಲ್ಲಿ ಬಿಜೆಪಿ ಈಗಾಗಲೇ ತನ್ನದೇ ಸಂಸದರಿಂದ 240 ಮತಗಳನ್ನು ಮತ್ತು ಎನ್‌ಡಿಎ ಪಾಲುದಾರ ಪಕ್ಷಗಳಿಂದ 63 ಮತಗಳನ್ನು ಹೊಂದಿದೆ. ಇದರಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿಯ 16 ಸಂಸದರು ಮತ್ತು ಪವನ್ ಕಲ್ಯಾಣ್‌ ಅವರ ಜನಸೇನಾ ಪಕ್ಷದ 2 ಸಂಸದರು ಸೇರಿಕೊಂಡಿದ್ದಾರೆ. ಒಟ್ಟು 293 ಸಂಖ್ಯಾಬಲವಿದೆ. ಹೆಚ್ಚುವರಿಯಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿ ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಬೆಂಬಲಿಸಲಿದೆ ಎನ್ನಲಾಗಿದ್ದು, ಅವರ 4 ಸಂಸದರ ಬಲ ಸೇರಿಸಿದರೆ ಎನ್‌ಡಿಎಗೆ ಒಟ್ಟು 297 ಮತ ದೊರೆಯಲಿದೆ. ಸ್ಥಳೀಯವಾಗಿ ವಿರೋಧ ಇರುವ ಹೊರತಾಗಿಯೂ ಬಿರ್ಲಾ ಅವರನ್ನು ಬೆಂಬಲಿಸಲು ವೈಎಸ್​ಆರ್​ ನಿರ್ಧರಿಸಿದೆ.

ಇನ್ನು ಪ್ರತಿಪಕ್ಷಗಳ ಇಂಡಿ ಬಣ ಲೋಕಸಭೆಯಲ್ಲಿ 232 ಸಂಸದರನ್ನು ಹೊಂದಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟಿಂಗ್‌ ಮಾಡುವ ಅಧಿಕಾರವಿಲ್ಲ. ಇದರಲ್ಲಿ ಕಾಂಗ್ರೆಸ್‌ ಐವರು ಮತ್ತು ತೃಣಮೂಲ ಕಾಂಗ್ರೆಸ್‌ ಇಬ್ಬರು ಸೇರಿದ್ದಾರೆ. ಜತೆಗೆ ಕೆಲವು ಸ್ವತಂತ್ರ ಅಭ್ಯರ್ಥಿಗಳೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಈ ಕೆಲವು ನಾಯಕರ ಪ್ರಮಾಣ ವಚನ ಸ್ವೀಕಾರ ಏಕೆ ಬಾಕಿ ಉಳಿದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಅರ್ಹತೆ ಹೊಂದಿರುವ ಸಂಸದರ ಸಂಖ್ಯೆಯನ್ನು ಆಧರಿಸಿ ವೋಟಿಂಗ್‌ ನಡೆಯಲಿದೆ. ಹೀಗಾಗಿ ಬಹುಮತಕ್ಕೆ 269 ಮತಗಳ ಅಗತ್ಯವಿದೆ.

ಶಾಕ್‌ ಕೊಟ್ಟ ಟಿಎಂಸಿ

ಈ ನಡುವೆ ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿದೆ. ಹೀಗಾಗಿ ಟಿಎಂಸಿ ನಡೆ ಕುತೂಹಲ ಮೂಡಿಸಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

ಇದನ್ನೂ ಓದಿ: Parliament Session 2024: ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

Continue Reading

ದೇಶ

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Parliament Session 2024: ಲೋಕಸಭಾ ಸ್ಪೀಕರ್‌ ಹುದ್ದೆಗೆ ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಸ್ಪರ್ಧಿಸುತ್ತಿದ್ದಾರೆ. ಸಾಮಾನ್ಯವಾಗಿ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆಯು ಸಹಮತದೊಂದಿಗೆ ನಡೆಯುತ್ತದೆ. ಆದರೆ ಈ ಬಾರಿ ಚುನಾವಣೆ ನಡೆಯಲಿದೆ. ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ Live ವೀಕ್ಷಿಸಿ.

VISTARANEWS.COM


on

Parliament Session 2024
Koo

ನವದೆಹಲಿ: ಜಿದ್ದಾಜಿದ್ದಿನ ಲೋಕಸಭಾ ಚುನಾವಣೆಯ ಬಳಿಕ ಇದೀಗ ದೇಶ ಲೋಕಸಭಾ ಸ್ಪೀಕರ್‌ ಆಯ್ಕೆಯ ಚುನಾವಣೆಗೆ ಸಾಕ್ಷಿಯಾಗಲಿದೆ (Lok Sabha Speaker Election). ಲೋಕಸಭಾ ಸ್ಪೀಕರ್‌ ಹುದ್ದೆಗೆ ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಸ್ಪರ್ಧಿಸುತ್ತಿದ್ದಾರೆ. ಅವಿರೋಧ ಆಯ್ಕೆಗೆ ಒಮ್ಮತ ಮೂಡದ ಹಿನ್ನಲೆಯಲ್ಲಿ ಈ ಇಬ್ಬರು ನಾಯಕರು ಮಂಗಳವಾರ ನಾಮಪತ್ರ ಸಲ್ಲಿಸಿದರು (Parliament Session 2024).

ಸಾಮಾನ್ಯವಾಗಿ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆಯು ಸಹಮತದೊಂದಿಗೆ ನಡೆಯುತ್ತದೆ. ಹಲವು ವರ್ಷಗಳಿಂದಲೂ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಈ ಸಂಪ್ರದಾಯ ಕೊನೆಯಾಗಿದ್ದು, ಹಲವು ದಶಕಗಳ ಬಳಿಕ ಇದೇ ಮೊದಲ ಸಲ ಸ್ಪೀಕರ್ ಸ್ಥಾನಕ್ಕೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗಿವೆ.

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ನಾಮಪತ್ರ ಸಲ್ಲಿಸಿದರು.

ಓಂ ಬಿರ್ಲಾ, ಕೆ.ಸುರೇಶ್‌ ಹಿನ್ನೆಲೆ

ರಾಜಸ್ಥಾನದ ಕೋಟಾ ಕ್ಷೇತ್ರವನ್ನು ಪ್ರತಿನಿಧಿಸುವ ಓಂ ಬಿರ್ಲಾ ಅವರು 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯೂ ಅವರೇ ಸ್ಪೀಕರ್‌ ಆಗಿದ್ದರು. ಹೀಗಾಗಿ ಅವರನ್ನೇ ಸ್ಪೀಕರ್ ಆಗಿ ಮುಂದುವರಿಸಲು ಬಿಜೆಪಿ ಮುಂದಾಗಿದೆ. ಇನ್ನು ಕೆ.ಸುರೇಶ್‌ ಕೇರಳದ ಮಾವೆಲಿಕರಾ ಕ್ಷೇತ್ರದ ಕಾಂಗ್ರೆಸ್ ಸಂಸದ. ಎಂಟು ಬಾರಿ ಗೆದ್ದಿರುವ ಸುರೇಶ್ ಅವರು, 18ನೇ ಲೋಕಸಭೆಯಲ್ಲಿ ಅತ್ಯಂತ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಸಂಸದರೆನಿಸಿದ್ದಾರೆ. ಕಳೆದ 2 ಲೋಕಸಭಾ ಅಧಿವೇಶನಗಳಲ್ಲಿ ಬಿಜೆಪಿಯ ಸುಮಿತ್ರಾ ಮಹಾಜನ್ (2014) ಮತ್ತು ಓಂ ಬಿರ್ಲಾ (2019) ಸ್ಪೀಕರ್‌ಗಳಾಗಿದ್ದರು.

ಚುನಾವಣೆ ಎಷ್ಟು ಗಂಟೆಗೆ?

ಇಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. 293 ಸಂಸದರ ಬಲ ಹೊಂದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸರಳ ಬಹುಮತದೊಂದಿಗೆ ಓಂ ಬಿರ್ಲಾ ಅವರು ಪುನರಾಯ್ಕೆ ಆಗುವ ನಿರೀಕ್ಷೆಯಲ್ಲಿದೆ. ಇಂಡಿ ಮೈತ್ರಿಕೂಟಕ್ಕೆ 232 ಸದಸ್ಯರ ಬಲವಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟು ಮಾಡುವ ಅಧಿಕಾರವಿಲ್ಲ. ಜತೆಗೆ ವೈ.ಎಸ್‌.ಜಗಮೋಹನ್‌ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಾಲ್ವರು ಸಂಸದರು ಎನ್‌ಡಿಎಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.

ವಿಪ್‌ ಜಾರಿ

ಲೋಕಸಭಾ ಸ್ಪೀಕರ್ ಹುದ್ದೆಯ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಸದನಕ್ಕೆ ಹಾಜರಾಗುವಂತೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಸಂಸದರಿಗೆ ವಿಪ್‌ (Whip) ಜಾರಿ ಮಾಡಿವೆ. ಎರಡೂ ಪಕ್ಷಗಳು ಬುಧವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಗೆ ಹಾಜರಾಗುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಿವೆ.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

Continue Reading

ಉದ್ಯೋಗ

Foxconn’s Hiring: ವಿವಾಹಿತ ಮಹಿಳೆಯರಿಗೆ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಕೆಲಸ ಕೊಡುವುದಿಲ್ಲ! ಭುಗಿಲೆದ್ದ ವಿವಾದ

ಆಪಲ್ ಸಾಧನಗಳ ಪ್ರಮುಖ ತಯಾರಕರಾದ ಫಾಕ್ಸ್‌ಕಾನ್ ನ ಭಾರತದಲ್ಲಿರುವ ಕಂಪನಿಗೆ ಇತ್ತೀಚೆಗೆ ನೇಮಕಾತಿ (Foxconn’s Hiring) ಪ್ರಕ್ರಿಯೆಗಳು ನಡೆದಿದ್ದು, ವಿವಾಹಿತ ಮಹಿಳೆಯರನ್ನು ಸಂದರ್ಶನ ಮತ್ತು ಆಯ್ಕೆ ವಿಚಾರದಲ್ಲಿ ದೂರ ಇಡಲಾಗಿದೆ. ಇದಕ್ಕೆ ಅವರ ಕೌಟುಂಬಿಕ ಕಾರಣಗಳನ್ನು ನೀಡಿರುವುದಾಗಿ ತಿಳಿದುಬಂದಿದೆ. ಇದು ವಿವಾದ ಮತ್ತು ಚರ್ಚೆಗೆ ಕಾರಣವಾಗಿದೆ.

VISTARANEWS.COM


on

By

Foxconn's Hiring
Koo

ಆಪಲ್ (apple) ಸಾಧನಗಳ ಪ್ರಮುಖ ತಯಾರಕರಾದ ಫಾಕ್ಸ್‌ಕಾನ್ (Foxconn’s Hiring) ಭಾರತದಲ್ಲಿನ (india) ತನ್ನ ಪ್ರಮುಖ ಸ್ಮಾರ್ಟ್‌ಫೋನ್ ಸ್ಥಾವರದಲ್ಲಿ (smartphone plant) ವಿವಾಹಿತ ಮಹಿಳೆಯರನ್ನು ಹೊರಗಿಡುತ್ತಿದೆ! ಇದು ಎರಡೂ ಕಂಪನಿಗಳ ನೀತಿ ಸಂಹಿತೆಗಳಿಗೆ ವಿರುದ್ಧವಾಗಿದ್ದು, ವೈವಾಹಿಕ ಸ್ಥಿತಿಯನ್ನು (marital status) ಆಧರಿಸಿ ತಾರತಮ್ಯವನ್ನು ತೋರುತ್ತಿರುವುದು ಸ್ಪಷ್ಟವಾಗಿದೆ.

ಜೂನ್ 25ರಂದು ಮಾಧ್ಯಮವೊಂದರಲ್ಲಿ ಪ್ರಕಟವಾದ ತನಿಖಾ ವರದಿಯು ಫಾಕ್ಸ್‌ಕಾನ್ ವಿವಾಹಿತ ಮಹಿಳೆಯರಿಗೆ ಅವರ ಉದ್ಯೋಗ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ತಾರತಮ್ಯವನ್ನು ತೋರಿಸಿದೆ ಎಂದು ಬಹಿರಂಗಪಡಿಸಿತು. ಅವಿವಾಹಿತರಿಗೆ ಹೋಲಿಸಿದರೆ ವಿವಾಹಿತ ಮಹಿಳೆಯರಿಗೆ ಹೆಚ್ಚಿನ ಕುಟುಂಬ ಜವಾಬ್ದಾರಿಗಳು ಕಾರಣ ಎಂಬ ಕಾರಣಕ್ಕಾಗಿ ಅವರಿಗೆ ಕೆಲಸ ನಿರಾಕರಿಸಲಾಗುತ್ತಿದೆ.

ಮದುವೆಯ ನಂತರದ ಸಮಸ್ಯೆಗಳು

ತಮಿಳುನಾಡಿನ ಚೆನ್ನೈ ಸಮೀಪದ ಶ್ರೀಪೆರಂಬದೂರಿನಲ್ಲಿರುವ ಪ್ರಮುಖ ಐಫೋನ್ ಅಸೆಂಬ್ಲಿ ಘಟಕದಲ್ಲಿ ಸ್ಮಾರ್ಟ್‌ಫೋನ್ ತಯಾರಕರು ವಿವಾಹಿತ ಮಹಿಳೆಯರನ್ನು ಉದ್ಯೋಗಾವಕಾಶಗಳಿಂದ ವ್ಯವಸ್ಥಿತವಾಗಿ ಹೊರಗಿಟ್ಟಿದ್ದಾರೆ. ಪ್ರಪಂಚದ ಅತಿ ದೊಡ್ಡ ಕಾಂಟ್ರ್ಯಾಕ್ಟ್ ಎಲೆಕ್ಟ್ರಾನಿಕ್ಸ್ ತಯಾರಕರು ವಿವಾಹಿತ ಮಹಿಳೆಯರಿಗೆ “ಮದುವೆ ನಂತರದ ಹೆಚ್ಚಿನ ಸಮಸ್ಯೆಗಳಿರುತ್ತವೆ” ಎಂದು ಪ್ರತಿಪಾದಿಸುವ ಮೂಲಕ ಇದನ್ನು ಸಮರ್ಥಿಸಿದ್ದಾರೆ.
ಭಾರತದಾದ್ಯಂತ ಸುಮಾರು 12 ಫಾಕ್ಸ್‌ಕಾನ್ ನೇಮಕಾತಿ ಏಜೆನ್ಸಿಗಳ ಹಲವಾರು ಮಾಜಿ ಮತ್ತು ಪ್ರಸ್ತುತ ಉದ್ಯೋಗಿಗಳು ಇದನ್ನು ದೃಢಪಡಿಸಿದ್ದಾರೆ.

ತಾರತಮ್ಯಕ್ಕೆ ಕಾರಣಗಳೇನು?

ಏಜೆಂಟ್‌ಗಳು ಮತ್ತು ಫಾಕ್ಸ್‌ಕಾನ್ ಹೆಚ್ ಆರ್ ಅಧಿಕಾರಿಗಳು ಈ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎನ್ನಲಾಗಿದೆ. ವಿವಾಹಿತ ಮಹಿಳೆಯರಿಗೆ ಗರ್ಭಾವಸ್ಥೆ ಮತ್ತು ಕುಟುಂಬದ ಜವಾಬ್ದಾರಿ ಹೆಚ್ಚಿರುವುದರಿಂದ ಅವರು ಹೆಚ್ಚಿನ ಕಾರ್ಯಕ್ಷಮತೆಯಿಂದ ಕೆಲಸ ಮಾಡುವುದಿಲ್ಲ. ಅದೂ ಅಲ್ಲದೆ ವಿವಾಹಿತ ಹಿಂದೂ ಮಹಿಳೆಯರು ಮೈತುಂಬ ಆಭರಣ ಧರಿಸಿ ಬರುತ್ತಿರುವ ಕಾರಣ ನಮ್ಮ ಉತ್ಪಾದನೆಗೆ ಅಡ್ಡಿಯಾಗುತ್ತದೆ ಎಂಬ ವಿಚಿತ್ರ ಪ್ರತಿಪಾದನೆ ಕೇಳಿ ಬರುತ್ತಿದೆ.

ತೈವಾನ್ ಪ್ರಧಾನ ಕಚೇರಿಯ ತಯಾರಕರು ಕಾರ್ಮಿಕ ಕೊರತೆಯನ್ನು ಎದುರಿಸುತ್ತಿರುವಾಗ ಹೆಚ್ಚಿನ ಉತ್ಪಾದನಾ ಅವಧಿಯಲ್ಲಿ ವಿವಾಹಿತ ಮಹಿಳೆಯರನ್ನು ನೇಮಿಸಿಕೊಳ್ಳದಿರುವ ತನ್ನ ನೀತಿಯನ್ನು ಸಡಿಲಿಸುತ್ತಿದ್ದಾರೆ ಎಂದು ಕಂಪೆನಿಯ ಹೆಚ್ ಆರ್ ಒಬ್ಬರು ಹೇಳಿದ್ದಾರೆ. ಕೆಲವು ಸಂದರ್ಭಗಳಲ್ಲಿ, ನೇಮಕಾತಿ ಏಜೆನ್ಸಿಗಳು ಮಹಿಳಾ ಅಭ್ಯರ್ಥಿಗಳಿಗೆ ತಮ್ಮ ವೈವಾಹಿಕ ಸ್ಥಿತಿಯನ್ನು ಮರೆಮಾಚಲು ಸಹಾಯ ಮಾಡುತ್ತವೆ ಎನ್ನಲಾಗಿದೆ.

ಸರಿಪಡಿಸಲು ಕ್ರಮ

ಆಪಲ್ ಮತ್ತು ಫಾಕ್ಸ್‌ಕಾನ್ 2022ರಲ್ಲಿ ತಮ್ಮ ನೇಮಕಾತಿ ಅಭ್ಯಾಸಗಳಲ್ಲಿನ ನ್ಯೂನತೆಗಳನ್ನು ಒಪ್ಪಿಕೊಂಡಿವೆ ಮತ್ತು ಪರಿಸ್ಥಿತಿಯನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಕಂಪನಿ ಹೇಳಿದೆ. ಆದರೂ ಶ್ರೀಪೆರಂಬದೂರ್ ಸ್ಥಾವರದಲ್ಲಿ 2023 ಮತ್ತು 2024ರ ನೇಮಕಾತಿಯಲ್ಲಿ ಈ ಲೋಪ ಸಂಭವಿಸಿವೆ.

ಇದನ್ನೂ ಓದಿ: Frank Duckworth : ಮಳೆ ಪೀಡಿತ ಪಂದ್ಯಗಳಿಗೆ ಅನ್ವಯಿಸುವ ಡಕ್ವರ್ತ್​​ ಲೂಯಿಸ್ ನಿಯಮದ ರೂವಾರಿ ಫ್ರಾಂಕ್​ ಡಕ್ವರ್ತ್​​ ನಿಧನ

Continue Reading
Advertisement
prajwal revanna case 4th
ಕ್ರೈಂ6 mins ago

Prajwal Revanna Case: ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

Famous Serial Actress kasthuri shankar half naked photos leaked
ಟಾಲಿವುಡ್13 mins ago

Famous Serial Actress: ಖ್ಯಾತ ಧಾರಾವಾಹಿ ನಟಿಯ ಅರೆನಗ್ನ ಫೋಟೊಗಳು ಲೀಕ್‌!

IND vs ENG
ಕ್ರಿಕೆಟ್15 mins ago

IND vs ENG: ಇಂಗ್ಲೆಂಡ್‌ ಎದುರು ಭಾರತಕ್ಕೆ ಸೇಡಿನ ಪಂದ್ಯ; ನಾಳೆ ದ್ವಿತೀಯ ಸೆಮಿಫೈನಲ್​

VHP leader murder
ದೇಶ18 mins ago

VHP leader murder: VHP ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

Vinay Gowda acted darshan devil Movie and says Futture cant be predict
ಸ್ಯಾಂಡಲ್ ವುಡ್35 mins ago

Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್‌ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!

Mass Shooting
ವಿದೇಶ54 mins ago

Mass Shooting: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ; ನಾಲ್ವರನ್ನು ಕೊಂದು ಆತ್ಮಹತ್ಯೆಗೆ ಶರಣಾದ ದುಷ್ಕರ್ಮಿ

Inzamam Ul Haq
ಕ್ರೀಡೆ1 hour ago

Inzamam Ul Haq: ಭಾರತ ತಂಡದ ವಿರುದ್ಧ ಬಾಲ್ ಟ್ಯಾಂಪರಿಂಗ್ ಆರೋಪ ಮಾಡಿದ ಪಾಕ್​ ಮಾಜಿ ನಾಯಕ

rain news wall collapse 4 death
ಕ್ರೈಂ1 hour ago

Rain News: ಭಾರಿ ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವು

Sanjith Hegde Nange Allava song Out
ಸ್ಯಾಂಡಲ್ ವುಡ್1 hour ago

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

suraj revanna case 1
ಕ್ರೈಂ2 hours ago

Suraj Revanna Case: ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌