Drama review : 'ದ್ವೀಪ'ದ ಕತ್ತಲೊಳಗೆ ಬೆಳಕು ಹುಡುಕುವ ಕೈದಿಗಳ ಬಿಂಬ - Vistara News

ಕಲೆ/ಸಾಹಿತ್ಯ

Drama review : ‘ದ್ವೀಪ’ದ ಕತ್ತಲೊಳಗೆ ಬೆಳಕು ಹುಡುಕುವ ಕೈದಿಗಳ ಬಿಂಬ

ರಾಜಕೀಯ ಕೈದಿಗಳ ಕಥನವನ್ನು ಈ ‘ದ್ವೀಪ’ ನಾಟಕದ ಮೂಲಕ ಬೆಂಗಳೂರಿನ ‘ಆ್ಯಕ್ಟ್ ರಿಯಾಕ್ಟ್’ ಪ್ರಸ್ತತಪಡಿಸಿದೆ. (Drama review)

VISTARANEWS.COM


on

Drama Review
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವರಾಜ್‌ ಡಿ ಎನ್‌ ಎಸ್‌

Shivaraj DNS

ಸಪ್ತಸಾಗರದಾಚೆ ಎಲ್ಲೋ ಬಂಧಿಸಿಟ್ಟಿರುವ ಇಬ್ಬರು ರಾಜಕೀಯ ಕೈದಿಗಳ ನೋವು ನಲಿವುಗಳನ್ನು ರಂಗದ ಮೇಲೆ ತಂದು ನಗೆಯಲೆಯಲ್ಲಿ ತೇಲಿಸುತ್ತಲೇ ಅಂತರಂಗದ ನೋವನ್ನು ಜನಮನಕ್ಕೆ ಮುಟ್ಟಿಸುವಂತಹ ನಾಟಕವಿದು. ವ್ಯವಸ್ಥೆಯೊಂದು ನಿನ್ನನ್ನು ಪ್ರಜೆ ಎಂದು ಒಪ್ಪಿಕೊಳ್ಳುವಷ್ಟು ಸಲೀಸಾಗಿ ವ್ಯವಸ್ಥೆಯ ಹುಳುಕುಗಳನ್ನು ಹೇಳಿಕೊಂಡಾಗ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳುತ್ತದೆ ಇದರ ಕಥೆ. ಹಕ್ಕುಗಳ ಕುರಿತ ದನಿ ಪ್ರತಿಭಟನೆ ಹೋರಾಟಗಳಾಗುತ್ತವೆ. ಪ್ರತಿರೋಧಕ್ಕೆ ಮುಂದಾದ ಮುಂದಾಳುಗಳನ್ನು ಕಾನೂನು ಎನ್ನುವ ಬಲೆಯೊಳಗೆಳೆದು ಹಿಂಸೆಗೊಳಗಾಗುತ್ತಾರೆ. ಅಂತಹ ರಾಜಕೀಯ ಕೈದಿಗಳ ಕಥನವನ್ನು ಈ ‘ದ್ವೀಪ’ ನಾಟಕದ ಮೂಲಕ ಬೆಂಗಳೂರಿನ ‘ಆ್ಯಕ್ಟ್ ರಿಯಾಕ್ಟ್’ ಪ್ರಸ್ತತಪಡಿಸಿದೆ

ಪ್ರಭುತ್ವವನ್ನು ವಿರೋಧಿಸುವ, ವಿರೋಧಿಸಿರುವ ಅಥವಾ ವಿರೋಧಿಸುತ್ತಿರುವ ಇಬ್ಬರು ಹೋರಾಟಗಾರರಿಬ್ಬರು ಕೈದಿಗಳಾಗಿ ಅತೀ ಕ್ರೂರಿ ಜೈಲರ್ ಇರುವ ದ್ವೀಪದ ಜೈಲೊಂದನ್ನು ತಲುಪುತ್ತಾರೆ. ಅವರ ಹೋರಾಟ ಅಲ್ಲಿಗೆ ನಿಲ್ಲುವುದಿಲ್ಲ. ಹೊರಗಿನ ಹೋರಾಟದಂತೆಯೇ ಕೈದಿಗಳಾಗಿ ನಿತ್ಯ ಬದುಕಿನಲ್ಲಿಯೂ ಹೋರಾಡುತ್ತಲೇ ಬದುಕುತ್ತಾರೆ. ಆ ಸ್ಥಿತಿಯ ನಡುವೆ, ನಾಲ್ಕು ಗೋಡೆಗಳ ಮಧ್ಯೆ ಅಳುತ್ತ ನಗುತ್ತಾ ಇರುತ್ತಾರೆ. ಏತನ್ಮಧ್ಯೆ ವಿಶೇಷ ದಿನವೊಂದಕ್ಕೆ ಸಜ್ಜಾಗುತ್ತಿರುವ ಜೈಲಿನಲ್ಲಿ ತಾವು ನಾಟಕ ಪ್ರದರ್ಶನ ಮಾಡಲು ನಿರ್ಧರಿಸುತ್ತಾರೆ “ಅಂತಿಗೊನೆ” ಎಂಬ ನಾಟಕದ ಕೆಲವು ದೃಶ್ಯ ಕಟ್ಟುವ ಕಾರ್ಯದಲ್ಲಿ ತೊಡಗುತ್ತಾರೆ. ನಿತ್ಯ ರಾತ್ರಿ ತಾಲೀಮು ನಡೆಸುತ್ತಾರೆ. ಈ ವೇಳೆ ನಾಟಕದ ಪಾತ್ರಗಳ ಸರಿತಪ್ಪುಗಳ ಗೋಜಿಗೆ ಕೈ ಹಾಕಿ ತಮ್ಮನ್ನ ತಾವೇ ಬೈದುಕೊಳ್ಳುತ್ತಾರೆ. ತಮ್ಮ ಬದುಕನ್ನು ಕಲೆಯನ್ನು ಪ್ರೀತಿಸುತ್ತ, ಸಮಾಧಾನ, ಅಸಮಾಧಾನ ಮಾಡಿಕೊಳ್ಳುತ್ತಾರೆ, ಮನಸ್ತಾಪ ಸಿಟ್ಟು, ಪ್ರೀತಿ, ಎಲ್ಲವನ್ನೂ ಮೀರಿ ಶತಾಯ ಗತಾಯ ನಾಟಕ ಪ್ರದರ್ಶನವೂ ಕಾಣುತ್ತದೆ. ನಂತರ ಏನಾಗುತ್ತದೆ? ಅವರ ನಾಟಕದೊಳಗಿನ ನಾಟಕ, ಅವರ ಪೋಷಾಕು ಹೇಗಿರುತ್ತದೆ ಎನ್ನುವುದನ್ನು ರಂಗ ಮೇಲೆ ನೋಡುವುದೇ ಚಂದ.

ಕೆಲವು ನಾಟಗಳು ಹಾಗೆ ಎತ್ತಲಿಂದೆತ್ತ ಹೊರಳಿದರೂ ವಾಸ್ತವಕ್ಕೆ ಕೈಗನ್ನಡಿ ಹಿಡಿಯುತ್ತವೆ. ಅಂತಹ ದೃಶ್ಯ ಮತ್ತು ಸಂಭಾಷಣೆಯನ್ನು ಈ ನಾಟಕಕ್ಕೆ ನಾಜೂಕಾಗಿ ರೂಪಾಂತಿಸಿದ್ದಾರೆ ಕೆ.ಪಿ ಲಕ್ಷ್ಮಣ್. ಕೈದಿಗಳಿಬ್ಬರೂ ಹೋರಾಟಗಾರರು. ಅದರಿಂದಾಗಿ ಅವರು ಜೈಲು ಪಾಲಾಗಿದ್ದಾರೆ ಎನ್ನುವುದನ್ನು ಮೊದಲನೇ ದೃಶ್ಯದಲ್ಲೆ ಕಲಾತ್ಮಕವಾಗಿ ಹೇಳಿರುವುದು ಸೃಜನಶೀಲತೆ ಎನಿಸಿಕೊಳ್ಳುತ್ತದೆ. ಅಭಿನಯದ ಕುರಿತು ಹೇಳಲು ಮುಂದಾದರೆ.. ಮೂರು ಮತ್ತೊಂದು ದೃಶ್ಯವಿರುವ ನೂರಕ್ಕೂ ಹೆಚ್ಚು ನಿಮಿಷದ ನಾಟಕದಲ್ಲಿ ಇಬ್ಬರೇ ಪಾತ್ರಧಾರಿಗಳು. ಈ ಇಬ್ಬರಲ್ಲಿ ಯಾರ ಹೆಸರು ಮೊದಲು ತೆಗೆದುಕೊಂಡರೆ ಸರಿ?. ಇಬ್ಬರು ಪಾತ್ರಧಾರಿಗಳಲ್ಲಿ ಯಾರು ಅತ್ಯುತ್ತಮರು ಎನ್ನುವುದೂ ಕಷ್ಟವೇ. ನಾವು ಕಂಡ ಸುಂದರ ನೋಟಕ್ಕೆ ಎಡಗಣ್ಣು ಕಾರಣವೇ, ಬಲಗಣ್ಣು ಕಾರಣವೇ ಎನ್ನುವ ಪ್ರಶ್ನೆಯಂತಾಗುತ್ತದೆ. ಬೆಳ್ಳಿ ತೆರೆಮೇಲೆ ತಮ್ಮ ಛಾಪು ಮೂಡಿಸಿರುವ ಬಾಸ್ಕರ್.ಆರ್ ಹಾಗೂ ನವೀನ್ ಸಾಣೆಹಳ್ಳಿ ಇಬ್ಬರೂ ಅತ್ಯುತ್ತಮ ಕಲಾವಿದರು. ಅವರಿಬ್ಬರೂ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿದ್ದಾರೆ. ಕ್ಷಣಾರ್ಧದಲ್ಲಿ ಫೋರ್ತ್ ವಾಲ್ ಬ್ರೇಕ್ ಮಾಡಿ ನಕ್ಕು ನಗಿಸಿ ಮತ್ತದೇ ಭಾವಕ್ಕೆ ಮರಳಿ ಹೊಕ್ಕುವ ನಟನಾ ಚಾತುರ್ಯ ಅವರುಗಳ ಅನುಭವವನ್ನು ಅರ್ಥೈಸುತ್ತದೆ. ನಾಟಕದ ಬೆಳಕಿನ ವಿನ್ಯಾಸ ‘ವಾವ್’ ಎನ್ನಿಸಿಕೊಳ್ಳುತ್ತದೆ. ನಾಟಕದೊಳಗಿನ ನಾಟಕದಲ್ಲಿ ಸ್ತ್ರೀ ಪಾತ್ರ ನಾನ್ಯಾಕೆ ನೀನೆ ಮಾಡು ಎನ್ನುವ ನಿರಾಕಣೆಯ ದೃಶ್ಯ ಸುಂದರವಾಗಿದೆ. ಕತ್ತಲ ಕೋಣೆಯಲ್ಲಿ ಅನ್ಯೋನ್ಯ ಗೆಳೆಯರಾಗಿರುವ ಇಬ್ಬರಲ್ಲಿ ಒಬ್ಬ ಬೇಗ ಬಿಡುಗಡೆಗೊಳ್ಳುತ್ತಾನೆ ಎನ್ನುವಾಗ ಇಬ್ಬರಲ್ಲೂ ಆಗುವ ತಳಮಳ, ಆ ಕರಾಳ ದಿನಗಳಲ್ಲೂ ಖುಷಿ ಕಂಡುಕೊಳ್ಳಲೆತ್ನಿಸುವ ಅವರ ಪ್ರಯೋಗ ಮನದಲ್ಲಿ ಅಚ್ಚಳಿಯದೆ ಉಳಿಯುತ್ತದೆ.

ಇದನ್ನೂ ಓದಿ : Prithviraj Sukumaran: ಪೃಥ್ವಿರಾಜ್‌ ಜನ್ಮದಿನ ಹೊಸ ಪೋಸ್ಟರ್‌ ಹಂಚಿಕೊಂಡ ಹೊಂಬಾಳೆ!

ಅತೋಲ್ ಫುಗಾರ್ಡ್ ಅವರ ‘ದಿ ಐಲ್ಯಾಂಡ್’ ನಾಟಕದ ರೂಪಾಂತರವಾಗಿರುವ ಈ ‘ದ್ವೀಪ’ ನಾಟಕ 15-10-2023 ರಂದು ರಂಗಶಂಕರದಲ್ಲಿ ಒಂದೇ ದಿನ ಎರಡು ಯಶಸ್ವಿ ಪ್ರಯೋಗ ಕಂಡಿತು. ಲಕ್ಷಣ್ ಕೆ.ಪಿ ರೂಪಾಂತರ ಮಾಡಿ ನಿರ್ದೇಶಿಸಿದ ಈ ನಾಟಕಕ್ಕೆ ಬಿಂದು ರಕ್ಷಿದಿ ಸಹಾಯಕ ನಿರ್ದೇಶಕಿ ಹಾಗೂ ಸಂಗೀತ ನಿರ್ವಹಣೆ ಕಾರ್ಯ ನಿರ್ವಹಿಸಿದರು, ಚಂದ್ರಶೇಖರ.ಕೆ ಅವರ ಬೆಳಕಿನ ವಿನ್ಯಾಸ, ರಮಿಕ ಚೈತ್ರ ರಂಗ ನಿರ್ವಹಣೆಯಿತ್ತು. ನಾಟಕ ಅಚ್ಚುಕಟ್ಟಾಗಿತ್ತು. ಮುಂದಿನ ದಿಗಳಲ್ಲಿ ಪ್ರದರ್ಶನಗೊಂಡಾಗ ರಂಗಾಸಕ್ತರು ಕಲಾಭಿಮಾನಿಗಳು ಗಮನಿಸಿ. ಅನುಭವಕ್ಕೆ ಭಾಗಿಯಾಗಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಘೋಷಣೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ. ಒಟ್ಟು 23 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಕರ್ನಾಟಕದ ಇಬ್ಬರಿಗೂ ಪ್ರಶಸ್ತಿ ದೊರೆತಿದೆ.

VISTARANEWS.COM


on

Kendra Sahitya Akademi Award
Koo

ನವದೆಹಲಿ/ಬೆಂಗಳೂರು: ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award) ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಶ್ರುತಿ ಬಿ.ಆರ್.‌ ಅವರು ಚಿಕ್ಕಮಗಳೂರಿನ ತರೀಕೆರೆಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕವಯತ್ರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇವರ ಮೊದಲ ಕವನ ಸಂಕಲನವಾದ ‘ಜೀರೋ ಬ್ಯಾಲೆನ್ಸ್’‌ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕಗಳೊಂದಿಗೆ ಪಡೆದಿದ್ದು, ಪಿಎಚ್‌.ಡಿಯನ್ನೂ ಪಡೆದಿದ್ದಾರೆ. ಇವರ ಲೇಖನಗಳು, ಕವಿತೆಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿಳಿಗೆರೆ ಅವರು ಇದೇ ಜಿಲ್ಲೆಯ ಹುಳಿಯಾರಿನ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾವಯವ ಕೃಷಿ, ಬೀಜ ನಾಟಿ, ನೀರು ಸಂಗ್ರಹ ಸೇರಿ ಹಲವು ಚಳವಳಿಗಳಲ್ಲೂ ಸಕ್ರಿಯರಾಗಿರುವ ಇವರು, ಸಾಹಿತ್ಯ ಕೃಷಿಯಲ್ಲೂ ನಾಡಿನಾದ್ಯಂತ ಹೆಸರು ಗಳಿಸಿದ್ದಾರೆ. ಕಾವ್ಯ, ಕತೆ, ನಾಟಕಗಳ ರಚನೆ ಮೂಲಕ ಇವರು ನಾಡಿನ ಮನೆಮಾತಾಗಿದ್ದಾರೆ. ಇವರಿಗೆ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Continue Reading

ಪ್ರಮುಖ ಸುದ್ದಿ

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Kendra Sahitya Akademi Award: ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ. ಇಬ್ಬರ ಕೃತಿಗಳಿಗೂ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಶಸ್ತಿ ಘೋಷಿಸಿದೆ/

VISTARANEWS.COM


on

Kendra Sahitya Akademi Award
Koo

ನವದೆಹಲಿ: ಒಡಿಶಾದ ಇಬ್ಬರು ಲೇಖಕರಿಗೆ 2024ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award 2024) ಅವರಿಗೆ ಘೋಷಣೆ ಮಾಡಲಾಗಿದೆ. ಒಡಿಶಾ ಲೇಖಕರಾದ ಮಾನಸ್‌ ರಂಜನ್‌ ಸಮಾಲ್‌ (Manas Ranjan Samal) ಹಾಗೂ ಸಂಜಯ್‌ ಕುಮಾರ್‌ ಪಾಂಡಾ (Sanjay Kumar Panda) ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಎರಡು ವಿಭಾಗಗಳಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಪುರಸ್ಕಾರ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಂಜಯ್‌ ಕುಮಾರ್‌ ಪಾಂಡಾ ಅವರಿಗೆ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ಘೋಷಿಸಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ (Gapa Kalika) ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ (Hu Baia) ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಭಗವದ್ಗೀತೆಯ ಕುರಿತಾದ ‘ಮಹಾಯುದ್ದಕ್ಕೆ ಮುನ್ನ’ ಅವರ ಮೊದಲ ಪ್ರಕಟಿತ ಕೃತಿಯಾಗಿದೆ. ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ ಅವರ ಇತರ ಕೃತಿಗಳಾಗಿವೆ. ಜತೆಗೆ, ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕವಾಗುತ್ತಲೇ ಇರುತ್ತವೆ.

ಇದನ್ನೂ ಓದಿ: All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

Bengaluru News: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Nari Samman 2024 award ceremony on June 15 in Bengaluru
Koo

ಬೆಂಗಳೂರು: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ, ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಂಬೆ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾ. ಮಂಜುಳಾ ಚೆಲ್ಲೂರು, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್‌, ಖ್ಯಾತ ಚಲನಚಿತ್ರ ನಟ ಶ್ರೀನಾಥ್‌, ಬೆಂಗಳೂರಿನ ಬಸವ ಪರಿಷತ್‌ ಅಧ್ಯಕ್ಷೆ ಎಂ.ಪಿ. ಉಮಾದೇವಿ, ಮಾಜಿ ಸಚಿವೆ ರಾಣಿ ಸತೀಶ್‌, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಇಸ್ರೋ ಸಂಸ್ಥೆ ವಿಜ್ಞಾನಿ ಬಿ.ಎಚ್‌.ಎಂ. ದಾರುಕೇಶ್‌, ಡಾ. ಎಚ್‌.ಆರ್‌. ಶಾಂತರಾಜಣ್ಣ, ಚಲನಚಿತ್ರ ನಟ ಸುಚೇಂದ್ರ ಪ್ರಸಾದ್‌, ಚಲನಚಿತ್ರ ನಟಿ ಭಾವನಾ, ಡಾ. ಮಂಜುಳಾ ಎ. ಪಾಟೀಲ್‌ ಪಾಲ್ಗೊಳ್ಳುವರು.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಕಿರುತೆರೆ ನಿರೂಪಕಿ ಅನುಶ್ರೀ, ಚಲನಚಿತ್ರ ನಟಿ ಸೋನಾಲ್‌ ಮಂಥೇರೋ, ಉದ್ಯಮಿ ಪಲ್ಲವಿ ರವಿ, ಡಾ. ಮಮತಾ ಎಸ್‌.ಎಚ್‌., ಉಮಾಬಾಯಿ ಖರೆ, ಜ್ಯೋತಿ ಟೋಸೂರ, ಡಾ. ರತ್ನಮ್ಮ ಆರ್‌., ಹಿರಿಯ ನಿರೂಪಕಿ ನವಿತ ಜೈನ್‌, ಸುಜಾತ ಬಯ್ಯಾಪುರ, ಮಧುರ ಅಶೋಕ್‌ ಕುಮಾರ, ಡಾ. ಸುಮಾ ಬಿರಾದಾರ, ಸುಮಿತ್ರಾ ಎಂ.ಪಿ.ರೇಣುಖಾಚಾರ್ಯ, ಡಾ. ಸಂದರ್ಶಿನಿ ನರೇಂದ್ರಕುಮಾರ್‌, ಡಾ. ಪುಲಿಗೆರೆ ಸಂಪದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ನಾಟ್ಯ ಸಂಪದ ನೃತ್ಯ ಶಾಲೆ ಸಂಸ್ಥಾಪಕಿ ಡಾ. ಮಾನಸ ಕಂಠಿ ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

Continue Reading

Latest

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

Veeraloka Books: ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ ಅವರು ಹಾರೈಸಿದರು.

VISTARANEWS.COM


on

Veeraloka
Koo

ಬೆಂಗಳೂರು: ಇವತ್ತು ದಾಲ್ ತಡ್ಕ ರೇಟ್ ಜಾಸ್ತಿಯಾದರೆ (Veeraloka Books) ನಾವು ಯಾರನ್ನೂ ಕೇಳುವುದಿಲ್ಲ. ಸುಮ್ಮನೆ ಹೋಗಿ ಹಣ ಕೊಟ್ಟು ತಿಂದು ಬರುತ್ತೇವೆ. ಆದರೆ ಕನ್ನಡ ಪುಸ್ತಕಗಳಿಗೆ ದಾಲ್‌ ತಡ್ಕಾಗಿರುವಷ್ಟು ಬೇಡಿಕೆಯೂ ಇಲ್ಲ. ಮುಖಬೆಲೆ ಐದು ರೂಪಾಯಿ ಜಾಸ್ತಿಯಾದರೂ ಓದುಗ ಪುಸ್ತಕ ಖರೀದಿಸಲು ಹಿಂದೆ ಮುಂದೆ ನೋಡುವಂಥ ಪರಿಸ್ಥಿತಿ ಇದೆ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ (jayant kaikini) ವಿಷಾದಿಸಿದರು. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ವೀರಲೋಕ ಬುಕ್ಸ್ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಕಾಯ್ಕಿಣಿ ಅವರು ಹಾರೈಸಿದರು.

ವೀರಲೋಕ ಬುಕ್ಸ್ ಆಯೋಜಿಸಿದ್ದ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಐದು ಕೃತಿಗಳ ಬಿಡುಗಡೆಯನ್ನೂ ಹಮ್ಮಿಕೊಳ್ಳಲಾಗಿತ್ತು. ಅವುಗಳಲ್ಲಿ ರಾಧಾಕೃಷ್ಣ ಕಲ್ಚಾರ್‌ ಅವರ ‘ಕವಚ’ ಕಾದಂಬರಿ ವೀರಲೋಕದ ನೂರನೇ ಕೃತಿಯಾಗಿತ್ತು. ಡಾ. ಎಂ ವೆಂಕಟಸ್ವಾಮಿಯವರ ‘ಜಗತ್ತಿನ ಭೀಕರ ಯುದ್ಧಗಳು’, ನೌಶಾದ್ ಜನ್ನತ್ತ್ ಅವರ ‘ಬೇವಾಚ್’, ಸಂದ್ಯಾರಾಣಿಯವರ ‘ನಾತಿಚರಾಮಿ’, ಡಾ. ಶೈಲೇಶ್ ಕುಮಾರ್ ಅವರ ‘ಸುಪ್ತ ಸಾಗರದಾಚೆ’ ಇನ್ನಿತರ ಕೃತಿಗಳಾಗಿದ್ದವು.
ವೀರಲೋಕ ಬುಕ್ಸ್ ಸಂಸ್ಥಾಪಕರಾದ ವೀರಕಪುತ್ರ ಶ್ರೀನಿವಾಸ್ ಅವರು ಆಶಯ ನುಡಿಗಳನ್ನಾಡಿದರು. ಎರಡು ವರ್ಷಗಳಲ್ಲಿನ ಏಳುಬೀಳುಗಳು, ಮೈಲುಗಲ್ಲುಗಳು, ಮುಂದಿನ ತಯಾರಿಗಳ ಬಗ್ಗೆ ವಿವರಿಸಿದರು.

ಇದೇ ವೇದಿಕೆಯಲ್ಲಿ ಅನಂತ ಕುಣಿಗಲ್ ಅವರು ಸಂಪಾದಿಸಿರುವ ವೀರಕಪುತ್ರ ಶ್ರೀನಿವಾಸ್ ಅವರ ಲಲಿತ ಪ್ರಬಂಧಗಳ ಸಂಕಲನ ‘ಬದುಕೇ ಥ್ಯಾಂಕ್ಯೂ’ ಕೃತಿಯೂ ಬಿಡುಗಡೆಯಾಯಿತು. ಕನ್ನಡ ಮಾಣಿಕ್ಯ ಮಾಸ ಪತ್ರಿಕೆಯ ದಶಮಾನೋತ್ಸವವನ್ನೂ ಆಚರಿಸಲಾಯಿತು. ವೀರಲೋಕದ ಐದು ಕೃತಿಗಳ ಮರುಮುದ್ರಣದ ಆವೃತ್ತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

ಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್, ನಿರ್ದೇಶಕ ಮಂಸೋರೆ, ಸಂಭಾಷಣೆಕಾರ ಮಾಸ್ತಿ, ಮಹೇಶ ಅರಬಳ್ಳಿ, ಭಾರತಿ ಬಿ.ವಿ, ಪೂರ್ಣಿಮಾ ಮಾಳಗಿಮನಿ, ಶೋಭಾ ರಾವ್, ನವೀನ್ ಸಾಗರ್, ಮಂಡ್ಯ ರಮೇಶ್, ಜೋಗಿ, ಸಂತೋಷ್ ಹಾನಗಲ್, ದಿವ್ಯಾ ಆಲೂರು, ಹರಿವು ರತೀಶ್, ಕಾನ್ಕೇವ್ ನಂದೀಶ್, ಪ್ರಕಾಶ್ ಕಂಬತ್ತಳ್ಳಿ, ಷಡಕ್ಷರಿ, ವಿ ನಾಗೇಂದ್ರ ಪ್ರಸಾದ್ ಮತ್ತಿತರು ಉಪಸ್ಥಿತರಿದ್ದರು.

Continue Reading
Advertisement
International Yoga Day 2024
Latest6 seconds ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Job Recruitment
ಉದ್ಯೋಗ3 mins ago

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

Rahul Gandhi
ದೇಶ16 mins ago

Rahul Gandhi: ರಾಯ್‌ಬರೇಲಿಯನ್ನೇ ಆಯ್ಕೆ ಮಾಡಿಕೊಂಡ ರಾಹುಲ್‌ ಗಾಂಧಿ; ವಯನಾಡಿನಲ್ಲಿ ಪ್ರಿಯಾಂಕಾ ಸ್ಪರ್ಧೆ!

Rahul Gandhi
ಕರ್ನಾಟಕ57 mins ago

Rahul Gandhi: ರಾಹುಲ್ ಗಾಂಧಿ ಬಗ್ಗೆ ವಿವಾದಾದ್ಮಕ ವಿಡಿಯೊ; ಯುಟ್ಯೂಬರ್‌ ವಿರುದ್ಧ ಎಫ್‌ಐಆರ್‌

Actor Chikkanna
ಕರ್ನಾಟಕ59 mins ago

Actor Chikkanna: ‌ದರ್ಶನ್‌ ಜತೆ ಪಾರ್ಟಿ ಮಾಡಿದ್ದು ನಿಜ; ಪೊಲೀಸರಿಗೆ ಸ್ಫೋಟಕ ಮಾಹಿತಿ ನೀಡಿದ ಚಿಕ್ಕಣ್ಣ!

Karnataka weather Forecast
ಮಳೆ1 hour ago

Karnataka Weather : ಬೆಂಗಳೂರು, ಚಿಕ್ಕಮಗಳೂರಲ್ಲಿ ಸುರಿದ ಧಾರಾಕಾರ ಮಳೆ

Viral Video
Latest1 hour ago

Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

Viral Video
Latest1 hour ago

Viral Video: ಗಂಭೀರ ಸ್ಥಿತಿಯಲ್ಲಿರುವ ಅಪ್ಪನ ಆಸೆ ಈಡೇರಿಕೆ; ಆಸ್ಪತ್ರೆಯ ಐಸಿಯುನಲ್ಲೇ ಮಗಳ ಮದುವೆ!

Sex Worker
ಪ್ರಮುಖ ಸುದ್ದಿ2 hours ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ2 hours ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು7 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು8 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌