ಯಾರಿವರು ಗೊಟಬಯ ರಾಜಪಕ್ಸ, ಅವರ ಪಲಾಯನಕ್ಕೆ ಶ್ರೀಲಂಕಾದಲ್ಲಿ ಸಂಭ್ರಮವೇಕೆ? - Vistara News

ಪ್ರಮುಖ ಸುದ್ದಿ

ಯಾರಿವರು ಗೊಟಬಯ ರಾಜಪಕ್ಸ, ಅವರ ಪಲಾಯನಕ್ಕೆ ಶ್ರೀಲಂಕಾದಲ್ಲಿ ಸಂಭ್ರಮವೇಕೆ?

ಶ್ರೀಲಂಕಾದಲ್ಲಿ ಅಧ್ಯಕ್ಷ ಗೊಟಬಯ ರಾಜಪಕ್ಸ ಪಲಾಯನ ಮಾಡುವುದರೊಂದಿಗೆ ರಾಜಪಕ್ಸ ಕುಟುಂಬದ ಪ್ರಾಬಲ್ಯ ಅಂತ್ಯವಾಗಿದೆ. ಪ್ರತಿಭಟನಾಕಾರರ ಪ್ರಕಾರ ಶ್ರೀಲಂಕಾ ದಿವಾಳಿಯಾಗಲು ರಾಜಪಕ್ಸ ಕುಟುಂಬದ ದುರಾಡಳಿತ ಕಾರಣ.

VISTARANEWS.COM


on

gotabaya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಲಂಬೊ: ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಇಂದು ಮುಂಜಾನೆ ಪತ್ನಿ ಮತ್ತು ಇಬ್ಬರು ಅಂಗರಕ್ಷರೊಡನೆ ಮಾಲ್ಡಿವ್ಸ್‌ಗೆ ಪಲಾಯನ ಮಾಡಿದ್ದಾರೆ. ಇದಕ್ಕಾಗಿ ಲಂಕಾದಲ್ಲಿ ಸಾವಿರಾರು ಜನ ಬೀದಿಗಿಳಿದು ಸಂಭ್ರಮಾಚರಿಸಿದ್ದಾರೆ. ಯುದ್ಧದಲ್ಲಿ ಗೆದ್ದಂತೆ ಬೀಗಿದ್ದಾರೆ.

ಎಲ್‌ಟಿಟಿಇ ವಿರುದ್ಧದ ಕಾರ್ಯಾಚರಣೆಯ ಹೀರೊ

ಅಧ್ಯಕ್ಷ ಗೊಟಬಯ ರಾಜಪಕ್ಸ ಈ ಹಿಂದೆ ಶ್ರೀಲಂಕಾದ ಅತ್ಯಂತ ಶಕ್ತಿಶಾಲಿ ರಾಜಕಾರಣಿಯಾಗಿ ಮೆರೆದವರು. ೨೦೦೯ರಲ್ಲಿ ಎಲ್‌ಟಿಟಿಇ ದಂಗೆಯನ್ನು ಮಟ್ಟ ಹಾಕಿದ ಮಿಲಿಟರಿ ಕಾರ್ಯಾಚರಣೆಯ ಮುಂಚೂಣಿಯಲ್ಲಿ ಇದ್ದವರು ಇದೇ ಗೊಟಬಯ ರಾಜಪಕ್ಸ. ಲಂಕಾ ಸೇನಾಪಡೆಯ ಉನ್ನತ ಹುದ್ದೆಯಲ್ಲಿದ್ದ ರಾಜಪಕ್ಸ ಬಳಿಕ ರಾಜಕಾರಣಿಯಾಗಿ ಬೆಳೆದು ಅಧ್ಯಕ್ಷ ಪದವಿಯನ್ನೂ ಅಲಂಕರಿಸಿದರು.

ಹೀಗಿದ್ದರೂ, ಎಲ್‌ಟಿಟಿ ವಿರುದ್ಧದ ಕಾರ್ಯಾಚರಣೆಯ ವೇಳೆ ಸಾವಿರಾರು ಮಂದಿ ತಮಿಳರ ವಿರುದ್ಧ ಭಾರಿ ದೌರ್ಜನ್ಯ ಎಸಗಿದ ಆರೋಪವನ್ನೂ ಗೊಟಬಯ ಎದುರಿಸುತ್ತಿದ್ದಾರೆ.

ರಾಜಪಕ್ಸ ಕುಟುಂಬದ ಪ್ರಾಬಲ್ಯ ಅಂತ್ಯ

ಕಳೆದ ಎರಡು ದಶಕಗಳಿಂದಲೂ ರಾಜಪಕ್ಸ ಅವರ ಕುಟುಂಬವು ಶ್ರೀಲಂಕಾದ ರಾಜಕಾರಣದಲ್ಲಿ ಹಿಡಿತ ಸಾಧಿಸಿತ್ತು. ಗೊಟಬಯ ರಾಜಪಕ್ಸ ಅವರ ಸೋದರ ಮಹೀಂದ್ರಾ ರಾಜಪಕ್ಸ ಕೂಡ ಪ್ರಧಾನಿಯಾಗಿ ಅಧಿಕಾರದಲ್ಲಿ ಇದ್ದವರು. ೨೦೧೯ರ ನವೆಂಬರ್‌ನಲ್ಲಿ ಪ್ರಧಾನಿಯಾಗಿ, ೨೦೨೨ರ ಮೇನಲ್ಲಿ ಒತ್ತಡಕ್ಕೆ ಮಣಿದು ರಾಜೀನಾಮೆ ಕೊಟ್ಟಿದ್ದಾರೆ. ಗೊಟಬಯ ರಾಜಪಕ್ಸ ಕೂಡ ೨೦೧೯ರಲ್ಲಿ ಅಧ್ಯಕ್ಷರಾಗಿದ್ದರು. ಹೀಗೆ ಶ್ರೀಲಂಕಾದ ಅಧ್ಯಕ್ಷ ಮತ್ತು ಪ್ರಧಾನಿ ಹುದ್ದೆಯನ್ನು ಅಣ್ಣ ಮತ್ತು ತಮ್ಮ ವಹಿಸಿಕೊಂಡಿದ್ದರು. ಸಿಂಹಳ ಬೌದ್ಧ ಸಮುದಾಯದ ಬೆಂಬಲವನ್ನು ರಾಜಪಕ್ಸ ಗಳಿಸಿದ್ದರು. ಆದರೆ ದುರಾಡಳಿತ, ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಶ್ರೀಲಂಕಾವನ್ನು ತೀವ್ರ ಆರ್ಥಿಕ ದುಸ್ಥಿತಿಗೆ ತಳ್ಳಿದ್ದು, ಜನಾಕ್ರೋಶದ ಪರಿಣಾಮ ರಾಜಪಕ್ಸ ಕುಟುಂಬದ ರಾಜಕೀಯ ಪಾರಮ್ಯ ಅಂತ್ಯವಾಗಿದೆ ಎನ್ನುತ್ತಾರೆ ವಿಶ್ಲೇಷಕರು. ಮಾತ್ರವಲ್ಲದೆ ರಾಜಪಕ್ಸ ಕುಟುಂಬಕ್ಕೆ ದೇಶದಿಂದಲೇ ಪಲಾಯನ ಮಾಡುವ ಸನ್ನಿವೇಶವನ್ನು ಸೃಷ್ಟಿಸಿದೆ. ಶ್ರೀಲಂಕಾದಲ್ಲಿ ಆರ್ಥಿಕತೆ ಸಂಪೂರ್ಣ ಕುಸಿದಿದೆ ಎಂದು ಪ್ರಧಾನಿ ವಿಕ್ರಮಸಿಂಘೆ ಕೂಡ ಇತ್ತೀಚೆಗೆ ಹೇಳಿದ್ದರು.

ಶ್ರೀಲಂಕಾದಲ್ಲಿ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ

ಶ್ರೀಲಂಕಾದಲ್ಲಿ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ಮತ್ತು ಪ್ರಭಾವ ಇದೆ. ಮಿಲಿಟರಿಯ ಮುಖ್ಯಸ್ಥರೂ ಅವರೇ ಆಗಿರುತ್ತಾರೆ. ಅವರು ಅಧಿಕಾರದಲ್ಲಿ ಇರುವ ತನಕ ಅರೆಸ್ಟ್‌ ಮಾಡುವಂತಿಲ್ಲ. ಅವರ ಅನುಪಸ್ಥಿತಿಯಲ್ಲಿ ಪ್ರಧಾನಿಯವರು ಡೆಪ್ಯುಟಿಯಾಗಿ ಜವಾಬ್ದಾರಿ ವಹಿಸಬಹುದು. ಆದರೆ ಲಂಕಾದಲ್ಲಿ ರಾಜಪಕ್ಸ ಕುಟುಂಬಕ್ಕೆ ಆಪ್ತರಾಗಿರುವ ಈಗಿನ ಪ್ರಧಾನಿ ರನಿಲ್‌ ವಿಕ್ರಮಸಿಂಘೆ ಅವರಿಗೆ ಜನಪ್ರಿಯತೆ ಇಲ್ಲ.

ಕೊಲಂಬೊದಲ್ಲಿ ಸಂಭ್ರಮಾಚರಣೆ

ಅಧ್ಯಕ್ಷ ಗೊಟಬಯ ರಾಜಪಕ್ಸ ದೇಶ ಬಿಟ್ಟು ಪರಾರಿಯಾಗಿರುವ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿ ಸಾವಿರಾರು ಮಂದಿ ಬೀದಿಗಿಳಿದು ವಿಜಯೋತ್ಸವ ಆಚರಿಸಿದರು. ಪ್ರತಿಭಟನೆ ನಡೆಯುತ್ತಿರುವ ಸ್ಥಳ ಗಾಲೆ ಫೇಸ್‌ ಗ್ರೀನ್‌ನಲ್ಲಿ ಪ್ರತಿಭಟನಾಕಾರರು ಸಂಭ್ರಮಿಸಿದರು. ರಾಜಪಕ್ಸ ಕುಟುಂಬದಿಂದ ಭಾರಿ ವಂಚನೆಗೀಡಾಗಿರುವುದಾಗಿ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇಂದು ಸಂಜೆ ರಾಜೀನಾಮೆ ಸಂಭವ

ಇಷ್ಟೆಲ್ಲ ಆಗಿದ್ದರೂ ಅಧ್ಯಕ್ಷ ಗೊಟಬಯ ರಾಜಪಕ್ಸ ಇನ್ನೂ ಸ್ಪೀಕರ್‌ಗೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಇಂದು ಸಂಜೆಯ ವೇಳೆಗೆ ರಾಜೀನಾಮೆ ಪತ್ರ ರವಾನಿಸುವ ನಿರೀಕ್ಷೆ ಇದೆ.

ಗೊಟಬಯಗೆ ಸಹಕರಿಸಿಲ್ಲ ಎಂದು ಸ್ಪಷ್ಟಪಡಿಸಿದ ಭಾರತ

ಶ್ರೀಲಂಕಾ ಅಧ್ಯಕ್ಷ ಗೊಟಬಯ ಅವರು ಶ್ರೀಲಂಕಾದಿಂದ ಪರಾರಿಯಾಗಲು ಭಾರತ ಸಹಕರಿಸಿದೆ ಎಂಬ ವದಂತಿಗಳನ್ನು ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರ ಕಚೇರಿ ಅಲ್ಲಗಳೆದಿದೆ.

ಇದನ್ನೂ ಓದಿ: ರಾಜೀನಾಮೆಗೆ ಮುನ್ನ ಶ್ರೀಲಂಕಾದಿಂದ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡಿವ್ಸ್‌ಗೆ ಪಲಾಯನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

BBMP Scam: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

BBMP Scam
Koo

ಬೆಂಗಳೂರು: ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣವು ಗಂಭೀರ ಸ್ವರೂಪ ಪಡೆದಿರುವ ಬೆನ್ನಲ್ಲೇ ಮತ್ತೊಂದು ಬಹುಕೋಟಿ ಹಗರಣವು ಬಯಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP Scam) ಅಧಿಕಾರಿಗಳು ಸುಮಾರು 102 ಕೋಟಿ ರೂಪಾಯಿಯನ್ನು ನಕಲಿ ಸೊಸೈಟಿಗಳಿಗೆ (Fake Societies) ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 9 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಹೌದು, ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ವಿಧವೆಯರಿಗೆ ಮೀಸಲಾದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 102 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಹಗರಣದಲ್ಲಿ ಶಾಮೀಲಾದ ಅಧಿಕಾರಿಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

Rahul Gandhi: 10 ವರ್ಷಗಳ ಬಳಿಕ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವು ಕಾಂಗ್ರೆಸ್‌ಗೆ ಲಭಿಸಿದ್ದು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯಲು ರಾಹುಲ್‌ ಗಾಂಧಿ ಅವರು ಸಜ್ಜಾಗಿದ್ದಾರೆ. ಇನ್ನು ಪ್ರತಿಪಕ್ಷ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಸಿಗುವ ಸಂಬಳ ಎಷ್ಟು? ಅವರಿಗೆ ಇರುವ ವಿಶೇಷ ಅಧಿಕಾರಗಳು ಯಾವವು? ಸವಲತ್ತುಗಳು ಏನೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ (Leader Of The Opposition) ಆಯ್ಕೆಯಾಗಿದ್ದಾರೆ. ಕಳೆದ ಎರಡು (2014, 2019) ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಪ್ರತಿಪಕ್ಷವಾಗುವಷ್ಟು ಸೀಟುಗಳನ್ನು ಗೆದ್ದಿರದ ಕಾರಣ ಪ್ರತಿಪಕ್ಷ ನಾಯಕರೇ ಇರಲಿಲ್ಲ. ಆದರೆ, ಕಳೆದ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳನ್ನು ಗೆದ್ದಿದ್ದು, ಈಗ ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇವರು ಆಡಳಿತಾರೂಢ ಪಕ್ಷಕ್ಕೆ ಸೆಡ್ಡು ಹೊಡೆಯುವ ಜತೆಗೆ ಹಲವು ಅಧಿಕಾರಗಳು ಹಾಗೂ ಸವಲತ್ತುಗಳನ್ನು ಪಡೆಯಲಿದ್ದಾರೆ. ಅವುಗಳ ಕುರಿತ ಮಾಹಿತಿ ಹೀಗಿದೆ…

ರಾಹುಲ್‌ ಗಾಂಧಿ ಸಂಬಳ ಎಷ್ಟು?

ರಾಹುಲ್‌ ಗಾಂಧಿ ಅವರು ಸಂಸದನಾಗಿ ಪಡೆಯುವ ಸಂಬಳದ ಜತೆಗೆ ಪ್ರತಿಪಕ್ಷ ನಾಯಕರೂ ಆಗಿರುವ ಕಾರಣ ಅವರಿಗೆ ಮಾಸಿಕ 3.3 ಲಕ್ಷ ರೂ. ಸಂಬಳ ಸಿಗಲಿದೆ. ಅಲ್ಲದೆ, ಕ್ಯಾಬಿನೆಟ್‌ ದರ್ಜೆಯ ಸಚಿವರಿಗೆ ಸಿಗುವ ಸವಲತ್ತುಗಳು, ಭದ್ರತೆ (ಝಡ್‌ ಪ್ಲಸ್‌) ಸಿಗಲಿದೆ. ಕ್ಯಾಬಿನೆಟ್‌ ಸಚಿವರೊಬ್ಬರಿಗೆ ಸಿಗುವ ಬಂಗಲೆಯೇ ರಾಹುಲ್‌ ಗಾಂಧಿ ಅವರಿಗೂ ನೀಡಲಾಗುತ್ತದೆ. ಇದರ ಜತೆಗೆ ಹಲವು ಭತ್ಯೆಗಳು ಕೂಡ ರಾಹುಲ್‌ ಗಾಂಧಿ ಅವರಿಗೆ ಸಿಗಲಿವೆ.

Rahul Gandhi

ಅವರ ಅಧಿಕಾರ ವ್ಯಾಪ್ತಿ ಹೇಗಿರಲಿದೆ?

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಹಲವು ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ. ಜಂಟಿ ಸಂಸದೀಯ ಸಮಿತಿಗಳು, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿರುತ್ತಾರೆ. ಹಾಗೆಯೇ, ಸಿಬಿಐ ನಿರ್ದೇಶಕ, ಮುಖ್ಯ ಚುನಾವಣಾ ಆಯುಕ್ತರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಚೀಫ್‌ ವಿಜಿಲನ್ಸ್‌ ಕಮಿಷನರ್‌, ಕೇಂದ್ರೀಯ ಮಾಹಿತಿ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡುವಾಗ ರಾಹುಲ್‌ ಗಾಂಧಿ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಸದನದ ಮುಂದಿನ ಸಾಲಿನಲ್ಲಿರುವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ. ಹಾಗೆಯೇ, ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾತನಾಡುವಾಗ ಕೂಡ ಅವರಿಗೆ ಮುಂದಿನ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಲೋಕಸಭೆಯ ಒಟ್ಟು ಕ್ಷೇತ್ರಗಳ ಶೇ.10ರಷ್ಟು ಅಂದರೆ 55 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಪಕ್ಷವು ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುತ್ತದೆ. ಆ ಪಕ್ಷದ ನಾಯಕ ಪ್ರತಿಪಕ್ಷ ನಾಯಕರಾಗುತ್ತಾರೆ. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 44 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇತ್ತು. ಈ ಬಾರಿ 99 ಕ್ಷೇತ್ರಗಳನ್ನು ಗೆದ್ದಿರುವ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Continue Reading

ದೇಶ

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Bridge Collapse: ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ (Bihar) ಕಳಪೆ ಕಾಮಗಾರಿಗಳು, ಸರ್ಕಾರದ ಕಾಮಗಾರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಲೇ ಇವೆ. ಅದರಲ್ಲೂ, ಕಳೆದ ಕೆಲ ದಿನಗಳಲ್ಲಿ ಸಾಲು ಸಾಲು ನಿರ್ಮಾಣ ಹಂತದ ಸೇತುವೆಗಳು ಕುಸಿಯುತ್ತಿರುವುದು (Bridge Collapse) ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ. ಇದರ ಬೆನ್ನಲ್ಲೇ, ಶುಕ್ರವಾರ (ಜೂನ್‌ 28) ಬಿಹಾರದ ಮಧುಬನಿ (Madhubani Region) ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಆ ಮೂಲಕ ಕಳೆದ 9 ದಿನದಲ್ಲಿ ಬಿಹಾರದಲ್ಲಿಯೇ 5 ಸೇತುವೆಗಳು ಕುಸಿದಂತಾಗಿದೆ.

ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ. ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಇದಕ್ಕಾಗಿಯೇ ವಿಳಂಬವಾಗುತ್ತಿದೆ ಎಂಬುದಾಗಿ ಸ್ಥಳೀಯರು ಆರೋಪಿಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ. ಈಗ ಸೇತುವೆಯು ನಿರ್ಮಾಣ ಹಂತದಲ್ಲಿಯೇ ಕುಸಿದಿರುವುದು ಜನರ ಆಕ್ರೋಶವನ್ನು ಕೆರಳಿಸಿದೆ.

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂಬುದಾಗಿ ಟೀಕಿಸಿದ್ದಾರೆ.

ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಸೇತುವೆ ಕುಸಿತದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಗುರುವಾರವಷ್ಟೇ (ಜೂನ್‌ 27) ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಸಣ್ಣ ಸೇತುವೆಯೊಂದು ಕುಸಿದು ಅಧಿಕಾರಿಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಜೂನ್‌ 22ರಂದು ಕೂಡ ಸಿವಾನ್‌ ಜಿಲ್ಲೆಯಲ್ಲಿ ಸೇತುವೆ ಕುಸಿದಿತ್ತು. ಜೂನ್‌ 19ರಂದೂ ಅರಾತಿಯಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಧರೆಗುರುಳಿತ್ತು.  

ಇದನ್ನೂ ಓದಿ: ಬಾಲ್ಟಿಮೋರ್‌ ಸೇತುವೆ ಕುಸಿತ ಪ್ರಕರಣ; ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಸಮಯಪ್ರಜ್ಞೆಗೆ ಅಮೆರಿಕ ಅಧ್ಯಕ್ಷ ಬೈಡನ್ ಮೆಚ್ಚುಗೆ

Continue Reading

ಭವಿಷ್ಯ

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷದ ಅಷ್ಟಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ಮೇಷ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಮಿಥುನ, ಕನ್ಯಾ, ತುಲಾ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಸಿಂಹ ರಾಶಿಯವರು ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (29-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಅಷ್ಟಮಿ 14:19 16:26 ವಾರ: ಶನಿವಾರ
ನಕ್ಷತ್ರ: ಉತ್ತರ ಭಾದ್ರಪದ 08:48 ಯೋಗ: ಶೋಭನ 18:52
ಕರಣ: ಕೌಲವ 14:19 ಅಮೃತಕಾಲ: ಬೆಳಗ್ಗೆ 05:17 ರಿಂದ 06:48

ಸೂರ್ಯೋದಯ : 05:57   ಸೂರ್ಯಾಸ್ತ : 06:50

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30

ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ನಿಮ್ಮ ಸತತ ಪ್ರಯತ್ನ ಹಾಗೂ ಕುಟುಂಬ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕೆಲಸದ ನಿರಾಳತೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಕುಟುಂಬ ಸದಸ್ಯರೊಂದಿಗೆ ತಾಳ್ಮೆಯಿಂದ ವರ್ತಿಸಿ, ಅಚಾತುರ್ಯದಿಂದ ಆಡಿದ ಮಾತುಗಳು ಅಪಾಯ ತರುವ ಸಾಧ್ಯತೆ ಎಚ್ಚರಿಕೆ ಇರಲಿ. ದೀರ್ಘಕಾಲದ ಅನಾರೋಗ್ಯದಿಂದ ಮುಕ್ತಿ ಪಡೆಯುವಿರಿ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಹೂಡಿಕೆ ವ್ಯವಹಾರಗಳ ಕುರಿತು ಆಲೋಚನೆ ಮಾಡುವಿರಿ. ಆರ್ಥಿಕವಾಗಿ ಪ್ರಗತಿ ಹೊಂದುವಿರಿ. ಅತಿಥಿಗಳ ಆಗಮನದಿಂದ ಅವರೊಂದಿಗೆ ಸಮಯ ಕಳೆಯುವ ಸಾಧ್ಯತೆ ಇದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಅತಿಯಾದ ಕೆಲಸದ ಒತ್ತಡದಿಂದ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಅಮೂಲ್ಯ ವಸ್ತುಗಳ ಬಗೆಗೆ ಜಾಗೃತಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ ಇದ್ದು, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಕುಟುಂಬದ ಜತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ನಿಮ್ಮ ಕ್ರಿಯಾಶೀಲ ಕಾರ್ಯ ಯೋಜನೆ ಸಫಲತೆಯನ್ನು ತಂದು ಕೊಡಲಿದೆ. ಆಪ್ತರು ನಿಮ್ಮ ಸಹನೆಯನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಪರಿಪೂರ್ಣವಾಗಿರಲಿದೆ ಅದರ ಹೊರತಾಗಿಯೂ ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ ಇದೆ. ಖರ್ಚು ಹೆಚ್ಚಾಗುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ : ಬಿಡುವಿಲ್ಲದ ಕಾರ್ಯದಿಂದ ಆಯಾಸ, ಇದರಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಆದಷ್ಟು ವಿಶ್ರಾಂತಿ ಪಡೆಯಿರಿ.ಅನಗತ್ಯ ಖರ್ಚು ಇರಲಿದೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಸಂತೋಷ ತುಂಬಿದ ವಾತಾವರಣ ಇರಲಿದೆ. ಮಕ್ಕಳಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಈ ದಿನ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮಲ್ಲಿರುವ ನಾಯಕತ್ವ ಗುಣವನ್ನು ಗುರುತಿಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಇಂದು ಕೈಗೊಂಡ ಧರ್ಮಾರ್ಥ ಕಾರ್ಯವು ಮಾನಸಿಕ ಶಾಂತಿ ಮತ್ತು ಆರಾಮ ತರುತ್ತದೆ. ಹಣಕಾಸು ವ್ಯವಹಾರ ಖಂಡಿತವಾಗಿಯೂ ವೃದ್ಧಿಯಾಗುತ್ತದೆ. ಆದರೆ ಅದೇ ಸಮಯದಲ್ಲಿ ಖರ್ಚು ಹೆಚ್ಚಾಗುತ್ತದೆ. ನಿಮ್ಮ ಬಗೆಗೆ ಕಾಳಜಿ ಮಾಡುವವರ ಬಗ್ಗೆ ಉದಾಸೀನತೆ ಬೇಡ. ದೀರ್ಘಕಾಲದ ಪ್ರಯತ್ನಕ್ಕೆ ಯಶಸ್ಸು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ವಿನಾಕಾರಣ ವಿಚಾರ ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದು ಬೇಡ. ಅನಗತ್ಯವಾಗಿ ಹಣವನ್ನು ಖರ್ಚು ಮಾಡುವ ಸಾಧ್ಯತೆ ಇದೆ. ಸಂಗಾತಿಯ ಸಲಹೆ ಹಿತಕರವೆನಿಸುವುದು. ಆತ್ಮೀಯರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
BBMP Scam
ಬೆಂಗಳೂರು11 mins ago

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Assam Tour
ಪ್ರವಾಸ24 mins ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ39 mins ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ39 mins ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Rahul Gandhi
ದೇಶ42 mins ago

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

karnataka weather Forecast
ಮಳೆ1 hour ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ1 hour ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ3 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ3 hours ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ8 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌