Karnataka Weather : ತಲಕಾವೇರಿಯಲ್ಲಿ ಧಾರಾಕಾರ ಮಳೆ; ಇವೆರಡು ಜಿಲ್ಲೆಗಳಲ್ಲಿ ನಾಳೆ ವ್ಯಾಪಕ ವರ್ಷಧಾರೆ - Vistara News

ಕರ್ನಾಟಕ

Karnataka Weather : ತಲಕಾವೇರಿಯಲ್ಲಿ ಧಾರಾಕಾರ ಮಳೆ; ಇವೆರಡು ಜಿಲ್ಲೆಗಳಲ್ಲಿ ನಾಳೆ ವ್ಯಾಪಕ ವರ್ಷಧಾರೆ

Rain News : ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದ್ದು, ಅ.18ರಂದು ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕೊಡಗಿನಲ್ಲಿ ಮಳೆ ಅಬ್ಬರಿಸುತ್ತಿದ್ದು ತೀರ್ಥೋದ್ಭವಕ್ಕೆ ಬರುವ ಭಕ್ತರು (Karnataka weather Forecast) ಪರದಾಡಿದರು.

VISTARANEWS.COM


on

Heavy Rain warning mom and baby waiting For rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಕೊಡಗು: ಮಂಗಳವಾರ (ಅ.17) ಕೊಡಗಿನ ಮಡಿಕೇರಿ ತಾಲೂಕಿನ ಭಾಗಮಂಡಲ ಸಮೀಪದ ತಲಕಾವೇರಿಯಲ್ಲಿ ಧಾರಾಕಾರ (Rain News) ಮಳೆಯಾಗಿದೆ. ದಟ್ಟ ಮಂಜಿನೊಂದಿಗೆ ಮಳೆ (Karnataka Weather Forecast) ಅಬ್ಬರಿಸುತ್ತಿದ್ದು, ತಲಕಾವೇರಿಯಲ್ಲಿಂದು ರಾತ್ರಿ 1.27ಕ್ಕೆ ತೀರ್ಥೋದ್ಭವ ಆಗಲಿದೆ. ಹೀಗಾಗಿ ಭಕ್ತಾಧಿಗಳು ರಾತ್ರಿ ಪೂರ್ತಿ ಹೀಗೆ ಮಳೆ ಸುರಿದರೆ ಪೂಜಾಕೈಂಕಾರ್ಯ ಹೇಗೆ ಎಂದು ಚಿಂತಿಸುತ್ತಿದ್ದಾರೆ.

ಅಕ್ಟೋಬರ್‌ 18ರಂದು ಕೊಡಗು ಹಾಗೂ ಮೈಸೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್‌ ನೀಡಿದೆ.

ಉಳಿದಂತೆ ದಕ್ಷಿಣ ಒಳನಾಡಿನ ಚಾಮರಾಜನಗರದಲ್ಲೂ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ರಾಮನಗರ ಮತ್ತು ತುಮಕೂರಲ್ಲಿ ಲಘುವಾಗಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ ಮತ್ತು ದಾವಣಗೆರೆಯಲ್ಲಿ ಚದುರಿದಂತೆ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರದಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದ್ದು, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Road Accident : ಭೀಕರ ಅಪಘಾತ; ನವರಾತ್ರಿ ಪೂಜೆಗೆ ಹೋದ ಮಹಿಳೆಯರು ಮಸಣ ಸೇರಿದರು

ಇಲ್ಲೆಲ್ಲ ಅಲ್ಪ ಮಳೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ವಿಜಯಪುರ, ಕೊಪ್ಪಳ, ಗದಗ, ಬಾಗಲಕೋಟೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವೆ ಇರಲಿದೆ.

ಮೈಸೂರು-ಮಂಡ್ಯದಲ್ಲಿ ಅಬ್ಬರಿಸಿರುವ ವರುಣ

ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಸಾಲಿಗ್ರಾಮದಲ್ಲಿ 9, ಕೃಷ್ಣರಾಜಪೇಟೆಯಲ್ಲಿ 8, ವಿರಾಜಪೇಟೆ 6, ಮಂಗಳೂರು ವಿಮಾನ ನಿಲ್ದಾಣ 5, ಜಯಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ.

ಪಣಂಬೂರು, ಉಡುಪಿ, ಟಿ ನರಸೀಪುರ, ಹುಣಸೂರಲ್ಲಿ ತಲಾ 3ಸೆಂ.ಮೀ ಮಳೆಯಾಗಿದೆ. ಮಾಣಿ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಯಲ್ಲಾಪುರ, ಕದ್ರಾ, ಗೋಕರ್ಣ, ಸಿದ್ದಾಪುರ, ಲೋಂಡಾ, ಶೃಂಗೇರಿ, ಮೈಸೂರಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಮೂಲ್ಕಿ, ಪುತ್ತೂರು, ಕಿರವತ್ತಿ , ಕೋಟ, ಕೂಲ್ಲೂರು, ಎನ್ ಆರ್ ಪುರ, ಕಡೂರು, ತರೀಕೆರೆ, ಕಮ್ಮರಡಿ, ಹಾರಂಗಿ, ನಾಪೋಕ್ಲು, ಅರಕಲಗೂಡು ಹಾಸನ, ಬೆಳ್ಳೂರು , ಕುಣಿಗಲ್‌ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಈ ಬಾರಿ ಮಳೆಗಾಲದಲ್ಲಿ ಮನೆಯಲ್ಲೇ ಸುಮ್ಮನೆ ಹೊದಿಕೆ ಹೊದ್ದು ಮಲಗುವ ಬದಲು ಬೆಂಗಳೂರು ಸುತ್ತಮುತ್ತಲೂ ಇರುವ ಸುಂದರ ತಾಣಗಳಿಗೆ (Monsoon Tour) ಭೇಟಿ ನೀಡೋಣ. ಪ್ರಕೃತಿಯ ಸೌಂದರ್ಯವನ್ನು ಕಣ್ತುಂಬಿಕೊಳ್ಳೋಣ.

VISTARANEWS.COM


on

By

Monsoon Tour
Koo

ಸುರಿಯುತ್ತಿರುವ ಮಳೆಯ ನಡುವೆ ಹೊರಗೆ ಹೋಗುವುದು ಬೇಜಾರು. ಆದರೆ ಪ್ರಕೃತಿಯ ಸೌಂದರ್ಯ ಎದ್ದು ಕಾಣುವುದೇ ಮಳೆಗಾಲದಲ್ಲಿ (Monsoon Tour). ಈ ಸಂದರ್ಭದಲ್ಲಿ ದೂರ ಹೋಗುವುದು ಅಸಾಧ್ಯವಾದರೂ ಹತ್ತಿರ ಇರುವ ಕೆಲವು ತಾಣಗಳಲ್ಲಿ (tourist place) ಸುತ್ತಾಡಬಹುದು. ಮಳೆಯ ನಡುವೆ ಸುತ್ತಮುತ್ತಲಿನ ಪರಿಸರದಲ್ಲಿ (nature) ಕಾಣುವ ಹೊಸತನದ ಚಿಗುರನ್ನು ನೋಡಿ ಆನಂದಿಸಬಹುದು.

ಮಳೆಯ ಸೌಂದರ್ಯವನ್ನು ಅನುಭವಿಸಲು ಮಲೆನಾಡಿಗೆ (malenadu) ಹೋಗಬೇಕಿಲ್ಲ. ಯಾಕೆಂದರೆ ಬೆಂಗಳೂರಿನ (bengaluru) ಸುತ್ತಮುತ್ತಲಿರುವ ಕೆಲವು ತಾಣಗಳು ಮಳೆಗಾಲದ ಅದ್ಭುತ ನೋಟವನ್ನು ತೆರೆದಿಡುತ್ತದೆ. ಪ್ರಾಚೀನ ಭಾರತೀಯ ದೇವಾಲಯಗಳು ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ವಾಸ್ತುಶಿಲ್ಪದ ಪರಂಪರೆಯನ್ನು ಪ್ರದರ್ಶಿಸುತ್ತವೆ. ಈ ಪವಿತ್ರ ತಾಣಗಳು ಕೇವಲ ಪೂಜಾ ಸ್ಥಳಗಳಲ್ಲ. ಇತಿಹಾಸ, ಕಲೆ ಮತ್ತು ಆಧ್ಯಾತ್ಮಿಕತೆಯ ಭಂಡಾರಗಳಾಗಿವೆ. ಇವುಗಳಲ್ಲಿ ಹಲವು ದೇವಾಲಯ ನಮ್ಮ ಬೆಂಗಳೂರಿನ ಸುತ್ತಮುತ್ತಲಿದೆ. ಈ ಬಾರಿ ಮಳೆಗಾಲದಲ್ಲಿ ಈ ಎಂಟು ದೇವಾಲಯಗಳಲ್ಲಿ ಹೆಜ್ಜೆ ಹಾಕಿ ಮಳೆಗಾಲದ ನೆನಪನ್ನು ಬೆಚ್ಚಗೆ ಮನದಲ್ಲಿ ತುಂಬಿ ಇಡೋಣ.


1. ಚೆನ್ನಕೇಶವ ದೇವಸ್ಥಾನ

ಹಾಸನ ಜಿಲ್ಲೆಯಲ್ಲಿರುವ 12ನೇ ಶತಮಾನದ ಬೇಲೂರಿನ ಚೆನ್ನಕೇಶವ ದೇವಾಲಯವು ತನ್ನ ಸಂಕೀರ್ಣವಾದ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಗಳಿಗೆ ಹೆಸರುವಾಸಿಯಾಗಿದೆ. ಇದು ನಕ್ಷತ್ರಾಕಾರದ ದೇವಾಲಯವಾಗಿದ್ದು, ಹಿಂದೂ ದೇವರಾದ ವಿಷ್ಣುವಿಗೆ ಸಮರ್ಪಿತವಾಗಿದೆ.


2. ಕೋಟಿಲಿಂಗೇಶ್ವರ ದೇವಸ್ಥಾನ

ಬೃಹತ್ ಶಿವಲಿಂಗಕ್ಕೆ ಹೆಸರುವಾಸಿಯಾಗಿರುವ ಈ ದೇವಾಲಯವು ವಿಶ್ವದ ಅತಿದೊಡ್ಡ ಲಿಂಗಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಕೋಟಿಲಿಂಗೇಶ್ವರ ದೇವಸ್ಥಾನ ಕೋಲಾರದಲ್ಲಿದೆ.


3. ಹೊಯ್ಸಳೇಶ್ವರ ದೇವಸ್ಥಾನ

12ನೇ ಶತಮಾನದ ಈ ದೇವಾಲಯವು ಹಾಸನ ಜಿಲ್ಲೆಯಲ್ಲಿದೆ ಮತ್ತು ಇದು ಶಿವನಿಗೆ ಸಮರ್ಪಿತವಾಗಿದೆ. ಹೊಯ್ಸಳ ವಾಸ್ತುಶೈಲಿಗೆ ಹೆಸರುವಾಸಿಯಾದ. ಇದು ಹಳೇಬೀಡುನಲ್ಲಿರುವ ಅತಿ ದೊಡ್ಡ ದೇವಾಲಯವಾಗಿದೆ.

Monsoon Tour


4. ಶ್ರೀ ರಂಗನಾಥಸ್ವಾಮಿ ದೇವಸ್ಥಾನ

ಮೈಸೂರಿನ ಸಮೀಪ ಶ್ರೀರಂಗಪಟ್ಟಣದಲ್ಲಿರುವ ಈ ದೇವಾಲಯವು ಕರ್ನಾಟಕದಲ್ಲಿಯೇ ಅತಿ ದೊಡ್ಡದಾಗಿದೆ ಮತ್ತು ವಿಷ್ಣುವಿನ ರೂಪವಾದ ರಂಗನಾಥನಿಗೆ ಸಮರ್ಪಿತವಾಗಿದೆ. ವೈಷ್ಣವ ಸಂಪ್ರದಾಯದ 108 ಅಭಿಮಾನ ಕ್ಷೇತ್ರಗಳಲ್ಲಿ ಒಂದಾಗಿ ಇದು ವಿಶೇಷ ಸ್ಥಾನವನ್ನು ಹೊಂದಿದೆ.


5. ಲೇಪಾಕ್ಷಿ ದೇವಸ್ಥಾನ

ಬೆಂಗಳೂರಿನಿಂದ ಇದು ತುಂಬ ದೂರ ಏನಿಲ್ಲ. ಆಂಧ್ರಪ್ರದೇಶದ ಅನಂತಪುರದಲ್ಲಿದೆ ಲೇಪಾಕ್ಷಿ ದೇವಾಲಯ. ಇಲ್ಲಿನ ಅದ್ಭುತ ವಿಜಯನಗರ ವಾಸ್ತುಶಿಲ್ಪ ಮತ್ತು ಪ್ರಸಿದ್ಧ ನೇತಾಡುವ ಸ್ತಂಭಗಳು ಪ್ರವಾಸಿಗರಲ್ಲಿ ಬೆರಗು ಮೂಡಿಸುತ್ತದೆ. 16 ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಾಲಯದ ಸಂಕೀರ್ಣ ಕೆತ್ತನೆಗಳು ಮತ್ತು ವರ್ಣಚಿತ್ರಗಳು ನಯನ ಮನೋಹರವಾಗಿದೆ.


6. ಭೋಗ ನಂದೀಶ್ವರ ದೇವಸ್ಥಾನ

ನಂದಿ ಬೆಟ್ಟದ ತಪ್ಪಲಿನಲ್ಲಿರುವ ಈ ದೇವಾಲಯದ ಸಂಕೀರ್ಣವು ಶಿವನಿಗೆ ಸಮರ್ಪಿತವಾಗಿದೆ ಮತ್ತು ದ್ರಾವಿಡ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ನಿಖರವಾದ ಮೂಲಗಳು ತಿಳಿದಿಲ್ಲವಾದರೂ ವಾಸ್ತುಶಿಲ್ಪವು 9ನೇ – 10ನೇ ಶತಮಾನದ ಹಿಂದಿನದು ಎಂದು ನಂಬಲಾಗಿದೆ.


7. ಶ್ರೀ ಚಾಮುಂಡೇಶ್ವರಿ ದೇವಸ್ಥಾನ

ಮೈಸೂರಿನಲ್ಲಿರುವ ವಿಶ್ವಪ್ರಸಿದ್ಧ ಈ ದೇವಾಲಯವು ಚಾಮುಂಡಿ ಬೆಟ್ಟದ ಮೇಲಿದೆ ಮತ್ತು ದುರ್ಗದ ರೂಪವಾದ ಚಾಮುಂಡೇಶ್ವರಿ ದೇವಿಯನ್ನು ಇಲ್ಲಿ ಪೂಜಿಸಲಾಗುತ್ತದೆ.

ಇದನ್ನೂ ಓದಿ: Sri Lanka Tour: ಕಡಿಮೆ ವೆಚ್ಚದಲ್ಲಿ ಶ್ರೀಲಂಕಾ ಪ್ರವಾಸ; ಐಆರ್‌ಸಿಟಿಸಿ ಸ್ಪೆಷಲ್‌ ಪ್ಯಾಕೇಜ್‌


8. ತಲಕಾಡು ಪಂಚಲಿಂಗ ದೇವಾಲಯಗಳು

ತಲಕಾಡು ಶಿವನಿಗೆ ಅರ್ಪಿತವಾದ ಪಂಚಲಿಂಗ ದೇವಾಲಯಗಳು ಸೇರಿದಂತೆ ಹಲವಾರು ಪುರಾತನ ದೇವಾಲಯಗಳಿಗೆ ನೆಲೆಯಾಗಿದೆ. ಪಂಚ ಲಿಂಗ ದರ್ಶನವು ಸಾಮಾನ್ಯವಾಗಿ ಪ್ರತಿ ಹನ್ನೆರಡು, ಏಳು, ಐದು ಅಥವಾ ಮೂರು ವರ್ಷಗಳಿಗೊಮ್ಮೆ ನಡೆಯುವ ಪ್ರಮುಖ ಕಾರ್ಯಕ್ರಮವಾಗಿದ್ದು, ಆಶೀರ್ವಾದ ಪಡೆಯಲು ಭಕ್ತರು ಐದು ದೇವಾಲಯಗಳಿಗೆ ಭೇಟಿ ನೀಡುತ್ತಾರೆ.

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Heavy rain : ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (rain news) ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ (karnataka weather forecast) ಯೆಲ್ಲೋ ಹಾಗೂ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ನೈರುತ್ಯ ಮಾನ್ಸೂನ್ ರಾಜ್ಯವನ್ನು ಆವರಿಸಿದೆ. ವಾರಾಂತ್ಯದಲ್ಲಿ ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಜೂ.10ರವರೆಗೆ ಮೀನುಗಾರಿಕೆಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ, ಬಾಗಲಕೋಟೆ, ಕೊಪ್ಪಳ , ಧಾರವಾಡದಲ್ಲೂ ವ್ಯಾಪಕ ಮಳೆಯಾಗಲಿದೆ.

ಮಲೆನಾಡಿನ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚದುರಿದಂತೆ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಿನಲ್ಲೂ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ ಸುಮಾರು 32 ಮತ್ತು 23 ಡಿ.ಸೆ ಇರಲಿದೆ.

ಮತ್ತೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು ಗಂಟೆಗೆ 40-50 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ದಕ್ಷಿಣ ಕನ್ನಡ, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Gas Leakage : ಮೈಸೂರಿನ ಗುಜರಿ ಗೋಡೌನ್​ನಲ್ಲಿ ಅನಿಲ ಸೋರಿಕೆ, 30 ಮಂದಿ ಅಸ್ವಸ್ಥ

Gas leak : ಸಂಜೆ ವೇಳೆಗೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್​ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ ಗ್ರಾಮಸ್ಥರಿಗೆ ಕೆಮ್ಮು, ವಾಂತಿ ಶುರುವಾಗಿದೆ. ಅಸ್ವಸ್ಥಗೊಂಡಿರುವ 30 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

VISTARANEWS.COM


on

Gas leak
Koo

ಮೈಸೂರು: ಗುಜರಿಯ ಗೋಡೌನ್‌ನಲ್ಲಿ ವಿಷಕಾರಿ ಅನಿಲ ಸೋರಿಕೆ‌ಯಾಗಿ (Gas Leakage) 30 ಮಂದಿ ಅಸ್ವಸ್ಥಗೊಂಡ ಘಟನೆ ಮೈಸೂರಿನಲ್ಲಿ ಸಂಭವಿಸಿದೆ. ಮೈಸೂರಿನ ಹಳೆ ಕೆಸರೆಯ ಗುಜರಿ ಅಂಗಡಿಯಲ್ಲಿ ಈ ಸಮಸ್ಯೆ ಉಂಟಾಗಿದ್ದು, ಆರಂಭದಲ್ಲಿ ಶೆಡ್​ನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥಗೊಂಡರೆ ಬಳಿಕ ಸುತ್ತಲಿನ ಗ್ರಾಮಸ್ಥರೂ ಆರೋಗ್ಯ ಸಮಸ್ಯೆ ಎದುರಿಸಿ ಆಸ್ಪತ್ರೆ ಸೇರಿದ್ದಾರೆ.

ಸಂಜೆ ವೇಳೆಗೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್​ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಳಿಕ ಗ್ರಾಮಸ್ಥರಿಗೆ ಕೆಮ್ಮು, ವಾಂತಿ ಶುರುವಾಗಿದೆ. ಅಸ್ವಸ್ಥಗೊಂಡಿರುವ 30 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಮೈಸೂರಿನ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ಗುಜರಿ ಗೋಡೌನ್​ನಲ್ಲಿ ಘಟನೆ ಸಂಭವಿಸಿದೆ. ಅನಿಲ ಗೋಡೌನ್​ನಿಂದ ಹೊರಕ್ಕೆ ಬಂದು ಕೆಸರೆ ಗ್ರಾಮದಲ್ಲಿ ಹರಡಿದಿಎ. ಕೆಸರೆ ಗ್ರಾಮಸ್ಥರಲ್ಲೂ ಉಸಿರಾಟದ ತೊಂದರೆ, ಕೆಮ್ಮು ಕಾಣಿಸಿಕೊಂಡು ಪರದಾಡಿದ್ದಾರೆ. ಎನ್.ಆರ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಹಾಗೂ ಆರೋಗ್ಯಾಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.

ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಗದಗ: ವಾಟ್ಸ್ಆ್ಯಪ್‌ ಗ್ರೂಪ್‌ಗೆ (WhatsApp Group) ಬಂದಿದ್ದ ಮೆಸೇಜ್‌ವೊಂದನ್ನು ತೆರೆದು ನೋಡಿದ ವ್ಯಾಪಾರಿಯೊಬ್ಬರು ತಮ್ಮ ಖಾತೆಯಲ್ಲಿದ್ದ ಮೂರೂವರೆ ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿದ್ದಾರೆ. ಸೈಬರ್‌ (Cyber Crime) ವಂಚಕರು ಹಣ ಲಪಟಾಯಿಸಿದ್ದಾರೆ. ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Assault Case: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ; ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆz

ಅನಿಲ್‌ ಮಲ್ಲಪ್ಪ ಚಿನ್ನಾಪುರ ಎಂಬುವವರೇ ಸೈಬರ್‌ ವಂಚನೆಗೆ ಒಳಗಾದ ವ್ಯಕ್ತಿ. ನಗರದ ಜಿ.ಎಸ್. ಪಾಟೀಲ್‌ ಲೇಔಟ್‌ನಲ್ಲಿ ವಾಸವಾಗಿರುವ ಇವರು, ಮೊದಲು ಜಿ.ಎಸ್. ಪಾಟೀಲ್‌ ಲೇಔಟ್‌ ವಾಟ್ಸ್ಆ್ಯಪ್‌ ಗ್ರೂಪ್‌ನಲ್ಲಿ ಯುನಿಯನ್ ಬ್ಯಾಂಕ್‌ನ ಎಪಿಕೆ ಹೆಸರಿನಲ್ಲಿ ಬಂದಿದ್ದ ಲಿಂಕ್ ಮೆಸೇಜ್ ಅನ್ನು ತೆರದು ನೋಡಿದ್ದಾರೆ. ಇದಾದ ಬಳಿಕ ಮರುದಿನ ಫೋನ್‌ ಕರೆಯೊಂದು ಬಂದಿದೆ. ಯೂನಿಯನ್ ಬ್ಯಾಂಕ್ ಮುಖ್ಯಸ್ಥ ಎಂದು ಕರೆ ಮಾಡಿದ ವ್ಯಕ್ತಿಯು, ನಿಮ್ಮ ಬ್ಯಾಂಕ್ ಖಾತೆ ಡಿಆಕ್ಟಿವೇಟ್‌ ಆಗಿದೆ ಎಂದು ಕೆಲವು ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಇದಾದ ಅರ್ಧಗಂಟೆಯಲ್ಲೇ ಅನಿಲ್‌ ಅವರ ಯೂನಿಯನ್‌ ಬ್ಯಾಂಕ್‌ ಖಾತೆಯಿಂದ ಮೊದಲ ಹಂತದಲ್ಲಿ 50 ಸಾವಿರ ರೂ, 2ನೇ ಹಂತದಲ್ಲಿ 2,25,000 ರೂ. ಹೀಗೆ ಒಟ್ಟು 3,74,998 ರೂಗಳನ್ನು ಸೈಬರ್‌ ವಂಚಕರು ಎಗರಿಸಿದ್ದಾರೆ.

ಈ ಕುರಿತು ಸೈಬರ್‌ ವಂಚನೆಗೆ ಒಳಗಾದ ಅನಿಲ್ ನಗರದ ರಾಜೀವ್‌ ಗಾಂಧಿ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ಖಾತೆಯಿಂದ ಎಗರಿಸಿದ ಹಣ‌ವು ತಮಿಳುನಾಡು ಹಾಗೂ ಬಾಂಗ್ಲಾದೇಶದ ಬ್ಯಾಂಕ್‌ ಖಾತೆಗಳಿಗೆ‌ ಜಮೆ ಆಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆ ಮೂಲಕ ಮಾಹಿತಿಯನ್ನು ನೀಡಿದ್ದಾರೆ.

Continue Reading

ಶಿವಮೊಗ್ಗ

Shivamogga News: ಸೊರಬದಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತ ಆರೋಪ

Shivamogga News: ಸೊರಬ ತಾಲೂಕಿನಲ್ಲಿ ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಚಟುವಟಿಕೆಗಳು ನಡೆಯದ ಕಾರಣ, ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಆಯ್ಕೆ ಮಾಡಿದ ಜನರಿಗೆ ಕ್ಷೇತ್ರದ ಶಾಸಕರು ನಂಬಿಕೆ ದ್ರೋಹ ವೆಸಗಿದ್ದಾರೆ ಎಂದು ಸೊರಬ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದ್ದಾರೆ.

VISTARANEWS.COM


on

soraba BJP Mandala president prakash talakaalukoppa pressmeet
Koo

ಸೊರಬ: ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಚಟುವಟಿಕೆಗಳು ನಡೆಯದ ಕಾರಣ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. (Shivamogga News) ಆಯ್ಕೆ ಮಾಡಿದ ಜನರಿಗೆ ಕ್ಷೇತ್ರದ ಶಾಸಕರು ನಂಬಿಕೆ ದ್ರೋಹ ವೆಸಗಿದ್ದಾರೆ ಎಂದು ಸೊರಬ ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ ಆರೋಪಿಸಿದರು.

ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯ್ಕೆಯಾಗಿ, ಸಚಿವರಾಗಿ ಒಂದು ವರ್ಷ ಕಳೆದರೂ ಒಂದೇ ಒಂದು ಬಿಡಿಗಾಸಿನ ಅನುದಾನ ತರದ ಮಧು ಬಂಗಾರಪ್ಪ ಅವರಿಗೆ ಅಭಿವೃದ್ಧಿ ಎನ್ನುವ ಪದದ ಅರ್ಥವೇ ತಿಳಿದಿಲ್ಲ. ಹಾಗಾಗಿ ತಾಲೂಕನ್ನು ಮರೆತಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಸ್ಥಗಿತಗೊಂಡಿರುವ ಆಡಳಿತ ಯಂತ್ರವನ್ನು ಚಾಲನೆ ತರುವ ಕೆಲಸಕ್ಕೆ ಮುಂದಾಗಬೇಕಿದೆ ಎಂದರು.

ಇದನ್ನೂ ಓದಿ: Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಈಗಾಗಲೇ ಮಳೆಗಾಲ ಪ್ರಾರಂಭಗೊಂಡಿದೆ. ರಸಗೊಬ್ಬರ, ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇಲ್ಲದ ಕಾರಣ ರೈತರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗುವ ಸಂದರ್ಭ ಎದುರಾಗಿದೆ. ಅಲ್ಲದೇ ರೈತ ಪರಿಕರಗಳ ದರ ದುಪ್ಪಟ್ಟಾಗಿದೆ. ಈ ಬಗ್ಗೆ ಯಾವುದೇ ಸಭೆ ನಡೆದಿಲ್ಲ. ಬರಿಯ ಚುನಾವಣೆಗಷ್ಟೇ ಸೀಮಿತವಾಗಿರುವ ಸಚಿವರು, ವರ್ಷ ಕಳೆದರೂ ಒಂದೇ ಒಂದು ಕೆಡಿಪಿ ಮತ್ತು ಅಧಿಕಾರಿಗಳ ಸಭೆಗೆ ಭಾಗವಹಿಸಿಲ್ಲ. ಈ ಕಾರಣ ರೈತರು ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅವರಿಂದ ಹೇಗೆ ಸಾಧ್ಯವಾಗುತ್ತದೆ ಎಂದು ಆರೋಪಿಸಿದ ಅವರು, ಕೂಡಲೇ ಸಚಿವರು ಅಧಿಕಾರಿಗಳ ಸಭೆ ನಡೆಸಬೇಕು ಮತ್ತು ತಾಲೂಕಿನ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿ, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಸಚಿವರು ವರ್ಷದಿಂದ ಅಭಿವೃದ್ಧಿ ಅನುದಾನದ ಹಣವನ್ನು ತರದೇ ಕಾಲಹರಣ ಮಾಡಿದ್ದಾರೆ. ಕುಮಾರ್ ಬಂಗಾರಪ್ಪ ಅವರ ಅವಧಿಯಲ್ಲಿ ಬಿಡುಗಡೆಯಾದ ಅನುದಾನದ ಹಣದಲ್ಲಿ ನಿರ್ಮಾಣವಾಗುತ್ತಿರುವ ಈಡಿಗ ಸಮುದಾಯ ಭವನ, ನೌಕರರ ಭವನ, ಕನ್ನಡ ಸಾಹಿತ್ಯ ಪರಿಷತ್ ಭವನ ಸೇರಿದಂತೆ ವಿವಿಧ ಸಮುದಾಯಗಳ ಭವನಗಳಿಗೆ ಹಣದ ಕೊರತೆ ಎದುರಾಗಿ ಕಾಮಗಾರಿ ಕುಂಠಿತಗೊಂಡಿವೆ. ಆದ್ದರಿಂದ ಸರ್ಕಾರದಿಂದ ಹೆಚ್ಚಿನ ಹಣ ಬಿಡುಗಡೆಗೊಳಿಸಿ ತಕ್ಷಣ ಪೂರ್ಣಗೊಳಿಸಿ ಸಾರ್ವನಿಕರ ಸೇವೆಗೆ ಅನುವು ಮಾಡಿಕೊಡುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ನೈರುತ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾದ ಡಾ. ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ಎಲ್. ಭೋಜೇಗೌಡ ಅವರ ಗೆಲುವಿಗೆ ಸಹಕರಿಸಿದ ಪ್ರಜ್ಞಾವಂತ ಮತದಾರರಿಗೆ ಕೃತಜ್ಞತೆಗಳನ್ನು ಅರ್ಪಿಸಿದ ಅವರು, ಡಾ.ಧನಂಜಯ ಸರ್ಜಿ, ಎಸ್‌.ಎಲ್. ಭೋಜೇಗೌಡ ಮತ್ತು ವಿಧಾನ ಪರಿಷತ್‍ಗೆ ಅವಿರೋಧವಾಗಿ ಆಯ್ಕೆಯಾದ ಸಿ.ಟಿ. ರವಿ, ಎನ್. ರವಿಕುಮಾರ್, ಎಂ.ಜಿ. ಮುಳೆ ಅವರಿಗೆ ಪಕ್ಷದ ಪರವಾಗಿ ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ: Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಈ ವೇಳೆ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಮುಖಂಡರಾದ ಪ್ರಕಾಶ ಅಗಸನಹಳ್ಳಿ, ದೇವೇಂದ್ರಪ್ಪ ಚನ್ನಾಪುರ, ಎಂ.ಡಿ. ಉಮೇಶ, ಕೊಟ್ರೇಶಸ್ವಾಮಿ ಆನವಟ್ಟಿ, ಓಂಕಾರಪ್ಪ ತತ್ತೂರು, ಗುರುಮೂರ್ತಿ ಹಿರೇಶಕುನ, ಹರೀಶ್, ವಿಶ್ವನಾಥ, ವಿನಯ್ ಗುತ್ತೇರ್, ಟೀಕಪ್ಪ ಕೊಡಕಣಿ, ಬಸವರಾಜ ಕೊಡಕಣಿ, ಜಾನಕಪ್ಪ ಒಡೆಯರ್ ಯಲಸಿ, ಅಶೋಕ್ ಶೇಟ್, ಡಿ. ಶಿವಯೋಗಿ ಸೇರಿದಂತೆ ಇತರರು ಇದ್ದರು.

Continue Reading
Advertisement
Viral Video
ವೈರಲ್ ನ್ಯೂಸ್4 mins ago

Viral Video: ಗ್ರಹಚಾರ ಕೆಟ್ಟಾಗ ಕಾರಿನ ಚಕ್ರ ಕಳಚಿ ತಲೆಗೆ ಅಪ್ಪಳಿಸಬಹುದು! ವಿಡಿಯೊ ನೋಡಿ

Ramoji Rao passed away
ದೇಶ14 mins ago

Ramoji Rao passed away: ಮಾಧ್ಯಮ ಲೋಕದ ದಿಗ್ಗಜ ಇನ್ನಿಲ್ಲ; ರಾಮೋಜಿ ರಾವ್ ವಿಧಿವಶ

Vastu Tips
ಧಾರ್ಮಿಕ37 mins ago

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

Monsoon Tour
ದೇಶ38 mins ago

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

Karnataka Weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Rishabh Pant
ಪ್ರಮುಖ ಸುದ್ದಿ2 hours ago

Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

Health Tips Kannada
ಆರೋಗ್ಯ2 hours ago

Health Tips Kannada: ಯಾವ ಬೀಜ ತಿಂದರೆ ನಮ್ಮ ಆರೋಗ್ಯಕ್ಕೆ ಏನು ಪ್ರಯೋಜನ?

Health Tips
ಆರೋಗ್ಯ3 hours ago

Health Tips: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಬೇಕೆ? ಈ ಆಹಾರ ಸೇವಿಸಿ

Dina Bhavishya
ಭವಿಷ್ಯ3 hours ago

Dina Bhavishya : ಹಣ ಗಳಿಸುವ ವಿವಿಧ ಮಾರ್ಗಗಳಿಗೆ ಈ ರಾಶಿಯವರಿಗೆ ಸಿಗಲಿದೆ ಪುಷ್ಟಿ

T20 World Cup
ಪ್ರಮುಖ ಸುದ್ದಿ8 hours ago

T20 World Cup : ವಿಶ್ವ ಕಪ್​ ಇತಿಹಾಸದಲ್ಲಿ ಮೊದಲ ಗೆಲುವು ದಾಖಲಿಸಿದ ಕೆನಡಾ; ಐರ್ಲೆಂಡ್​ಗೆ ನಿರಾಸೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ15 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌