ICC World Cup 2023 : ದ. ಆಫ್ರಿಕಾ ತಂಡವನ್ನು ಬಗ್ಗು ಬಡಿದು ಹೊಸ ದಾಖಲೆ ಬರೆದ ನೆದರ್ಲ್ಯಾಂಡ್ಸ್​​ - Vistara News

ಕ್ರಿಕೆಟ್

ICC World Cup 2023 : ದ. ಆಫ್ರಿಕಾ ತಂಡವನ್ನು ಬಗ್ಗು ಬಡಿದು ಹೊಸ ದಾಖಲೆ ಬರೆದ ನೆದರ್ಲ್ಯಾಂಡ್ಸ್​​

ನೆದರ್ಲ್ಯಾಂಡ್ಸ್​ ತಂಡ ಈ ಹಿಂದೆ 2007 ವಿಶ್ವ ಕಪ್​ನಲ್ಲಿ ಕೊನೇ ಬಾರಿಗೆ ನಮೀಬಿಯಾ ತಂಡವನ್ನು ಸೋಲಿಸಿತ್ತು. ಆ ಬಳಿಕ ಇದೀಗ (ICC World Cup 2023) ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದೆ.

VISTARANEWS.COM


on

Netherlands cricket team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಮಂಗಳವಾರ (ಅಕ್ಟೋಬರ್ 17) ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ 15ನೇ ಪಂದ್ಯದಲ್ಲಿ (ICC World Cup 2023) ನೆದರ್ಲೆಂಡ್ಸ್ ತಂಡ ದಕ್ಷಿಣ ಆಫ್ರಿಕಾವನ್ನು 38 ರನ್ ಗಳಿಂದ ಮಣಿಸಿದೆ. ಮಳೆಯಿಂದ ಮೊಟಕುಗೊಂಡ 46 ಓವರ್ ಗಳ ಪಂದ್ಯದಲ್ಲಿ 246 ರನ್ ಗಳ ಗುರಿಯನ್ನು ಬೆನ್ನಟ್ಟಲು ವಿಫಲವಾದ ದಕ್ಷಿಣ ಆಫ್ರಿಕಾ 42.5 ಓವರ್ ಗಳಲ್ಲಿ 207 ರನ್ ಗಳಿಗೆ ಆಲೌಟ್ ಆಯಿತು.

ಅರ್ಹತಾ ಸುತ್ತಿನ ಮೂಲಕ ವಿಶ್ವ ಕಪ್​ಗೆ ಪ್ರವೇಶ ಪಡೆದಿದ್ದ ನೆದರ್ಲ್ಯಾಂಡ್ಸ್​ ತಂಡಕ್ಕೆ ಇದು 16 ವರ್ಷಗಳ ಬಳಿಕ ದೊರೆತ ಗೆಲುವು ಎಂಬುದು ವಿಶೇಷ. ಈ ಹಿಂದೆ 2007ರ ವಿಶ್ವ ಕಪ್​ನಲ್ಲಿ ನೆದರ್ಲ್ಯಾಂಡ್ಸ್ ತಂಡ ಸ್ಕಾಟ್ಲೆಂಡ್​​ ತಂಡದ ವಿರುದ್ಧ ಗೆಲುವು ಸಾಧಿಸಿತ್ತು. ಅದಕ್ಕಿಂತ ಮೊದಲು 2003 ವಿಶ್ವ ಕಪ್​ನಲ್ಲಿ ಡಚ್ಚರ ತಂಡ ನಮೀಬಿಯಾ ವಿರುದ್ಧ ಏಕೈಕ ಗೆಲವು ಸಾಧಿಸಿತ್ತು. ಅಂದ ಹಾಗೆ ಟೆಸ್ಟ್​ ಆಡುವ ತಂಡವೊಂದರ ವಿರುದ್ಧ ವಿಶ್ವ ಕಪ್​ನಲ್ಲಿ ಗಳಿಸಿದ ಮೊದಲ ಗೆಲುವು ದಕ್ಷಿಣ ಆಫ್ರಿಕಾದ ವಿರುದ್ಧವಾಗಿದೆ.

ಪಂದ್ಯದಲ್ಲಿ ಏನಾಯಿತು?

ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ಏಕ ದಿನ ವಿಶ್ವ ಕಪ್​ನಲ್ಲಿ (ICC World Cup 2023) ಮತ್ತೊಂದು ಅನಿರೀಕ್ಷಿತ ಫಲಿತಾಂಶ ಮೂಡಿ ಬಂದಿದೆ. ಮೊದಲೆರಡು ಪಂದ್ಯಗಳಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ದಕ್ಷಿಣ ಆಫ್ರಿಕಾ ಬಳಗ, ಅರ್ಹತಾ ಸುತ್ತಿನ ಮೂಲಕ ಪ್ರವೇಶ ಪಡೆದಿರುವ ನೆದರ್ಲ್ಯಾಂಡ್ಸ್​ ತಂಡದ ವಿರುದ್ಧ 38 ರನ್​ಗಳಿಂದ ಹೀನಾಯವಾಗಿ ಸೋಲು ಕಂಡಿದೆ. ಈ ಮೂಲಕ ಹಾಲಿ ಆವೃತ್ತಿಯ ತನ್ನ ಮೊದಲ ವಿಜಯವನ್ನು ದಾಖಲಿಸಿದೆ ಡಚ್ಚರ ಪಡೆ. ಇದು ವಿಶ್ವ ಕಪ್​ 202ರ ಎರಡನೇ ಆಘಾತಕಾರಿ ಫಲಿತಾಂಶವಾಗಿದೆ. ನವದೆಹಲಿಯಲ್ಲಿ ನಡೆದಿದ್ದ ಹಾಲಿ ಚಾಂಪಿಯನ್​ ಇಂಗ್ಲೆಂಡ್ ತಂಡವನ್ನು ಅಫಘಾನಿಸ್ತಾನ ತಂಡ 69 ರನ್​ಗಳಿಂದ ಸೋಲಿಸಿ ಸಂಭ್ರಮಿಸಿತ್ತು.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್​ ಸಂಸ್ಥೆಯ ಸ್ಟೇಡಿಯಮ್​ನಲ್ಲಿ ಆಯೋಜನೆಗೊಂಡಿದ್ದ ಪಂದ್ಯಕ್ಕೆ ಆರಂಭದಲ್ಲಿಯೇ ಮಳೆಯ ಅಡಚಣೆ ಉಂಟಾಯಿತು. ಹೀಗಾಗಿ 43 ಇನಿಂಗ್ಸ್​ಗಳ ಪಂದ್ಯವನ್ನು ಆಯೋಜಿಸಲಾಯಿತು. ಅಂತೆಯೇ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನೆದರ್ಲೆಂಡ್ಸ್​ ತಂಡ ನಿಗದಿತ ಓವರ್​ಗಳಲ್ಲಿ ವಿಕೆಟ್​ ನಷ್ಟಕ್ಕೆ 245 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಹರಿಣಗಳ ಬಳಗ 42.5 ಓವರ್​ಗಳಲ್ಲಿ 207 ರನ್​ ಬಾರಿಸಿ ಆಲ್​ಔಟ್ ಆಗಿ ಸೋಲೊಪ್ಪಿಕೊಂಡಿತು.

ಈ ಸುದ್ದಿಗಳನ್ನೂ ಓದಿ:
Rohit Sharma : ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಬೌಲಿಂಗ್ ಮಾಡ್ತಾರಾ ರೋಹಿತ್​?
Ind vs Pak : ಸೋತರೂ ಬಿಡದ ಹುಂಬತನ; ಭಾರತ ವಿರುದ್ಧವೇ ದೂರು ನೀಡಿದ ಪಾಕಿಸ್ತಾನ
ICC World Cup 2023 : ನಿಮ್ಮಪ್ಪ ನಿನಗೆ ಕಲಿಸಿಲ್ವಾ? ಆಸೀಸ್​ ಆಟಗಾರನಿಗೆ ಗವಾಸ್ಕರ್ ಪ್ರಶ್ನೆ

ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡ ಪರಿಪೂರ್ಣ ಕ್ರಿಕೆಟ್ ಆಡಿತು. ಇನಿಂಗ್ಸ್ ಆರಂಭದಲ್ಲಿ ನಿಧಾನಗತಿಯಲ್ಲಿ ಬ್ಯಾಟ್ ಮಾಡಿದರೂ ಕೊನೇ 9 ಓವರ್​ಗಳಲ್ಲಿ 109 ರನ್​ ಬಾರಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಸ್ಪರ್ಧಾತ್ಮಕ ಗುರಿಯನ್ನು ಒಡ್ಡಿತು. ಆ ಮೊತ್ತವನ್ನು ಬಳಿಕ ಬೌಲಿಂಗ್​ನಲ್ಲಿಯೂ ಸ್ಮರಣೀಯ ಪ್ರದರ್ಶನ ನೀಡಿ ಗೆಲುವು ತನ್ನದಾಗಿಸಿಕೊಂಡಿತು.

ಅತ್ತ ದಕ್ಷಿಣ ಆಫ್ರಿಕಾ ತಂಡ ಮೊದಲೆರಡು ಪಂದ್ಯಗಳಲ್ಲಿ ಅದ್ಧೂರಿ ಪ್ರದರ್ಶನ ನೀಡಿತ್ತು. ಶ್ರೀಲಂಕಾ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ 102 ರನ್​ಗಳ ವಿಜಯ ದಾಖಲಿಸಿದ್ದರೆ, ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧವಂತೂ 132 ರನ್​ಗಳ ಬೃಹತ್​ ವಿಜಯವನ್ನು ತನ್ನದಾಗಿಸಿಕೊಂಡಿತ್ತು. ಆದರೀಗ ಏಕಾಏಕಿ ಕುಸಿತ ಕಂಡು ದುರ್ಬಲ ತಂಡವೊಂದರ ವಿರುದ್ಧ ಸೋಲು ಕಂಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Anant Ambani wedding: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರದಲ್ಲಿ ಪಾಲ್ಗೊಂಡ ಧೋನಿ, ಪಾಂಡ್ಯ ಬ್ರದರ್ಸ್​, ಇಶಾನ್​ ಕಿಶನ್​

Anant Ambani wedding: ಮಾರ್ಚ್​ನಲ್ಲಿ ಗುಜರಾತ್​ನ ಜಾಮ್‌ನಗರದಲ್ಲಿ ನಡೆದಿದ್ದ ಅದ್ಧೂರಿ ವಿವಾಹಪೂರ್ವ ಸಮಾರಂಭದಲ್ಲಿಯೂ ಧೋನಿ ಮತ್ತು ಅವರ ಪತ್ನಿ ಭಾಗಿಯಾಗಿದ್ದರು. ಈ ವೇಳೆ ಧೋನಿ ವಿಂಡೀಸ್​ನ ಮಾಜಿ ಆಟಗಾರ ಡ್ವೇನ್‌ ಬ್ರಾವೊ(Dwayne Bravo) ಜತೆ ದಾಂಡಿಯಾ(Dandiya) ನೃತ್ಯವಾಡಿದ್ದರು. ಈ ವಿಡಿಯೊ ವೈರಲ್​ ಆಗಿತ್ತು.

VISTARANEWS.COM


on

Anant Ambani wedding
Koo

ಮುಂಬಯಿ: ಮುಕೇಶ್‌ ಅಂಬಾನಿ(Mukesh Ambani) ಪುತ್ರ ಅನಂತ್‌ ಅಂಬಾನಿ(Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವಿವಾಹಪೂರ್ವವಾಗಿ(Anant Ambani wedding) ನಡೆಯುತ್ತಿರುವ ಸಂಗೀತ ಕಾರ್ಯಕ್ರಮದಲ್ಲಿ(Anant-Radhika sangeet ceremony) ಟೀಮ್ ಇಂಡಿಯಾದ ಹಲವು ಆಟಗಾರರು ತಮ್ಮ ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದಾರೆ. ಮಾಜಿ ಕ್ರಿಕೆಟಿಗರಾದ ಮಹೇಂದ್ರ ಸಿಂಗ್​ ಧೋನಿ(MS Dhoni), ಹಾರ್ದಿಕ್​ ಪಾಂಡ್ಯ(Hardik Pandya), ಇಶಾನ್​ ಕಿಶನ್(ishan kishan) ಮತ್ತು ​ಕೃಣಾಲ್​ ಪಾಂಡ್ಯ(krunal pandya) ಸಮಾರಂಭದಲ್ಲಿ ಭಾಗಿಯಾಗಿರುವ ವಿಡಿಯೊ ವೈರಲ್​ ಆಗಿದೆ.

ಮಾರ್ಚ್​ನಲ್ಲಿ ಗುಜರಾತ್​ನ ಜಾಮ್‌ನಗರದಲ್ಲಿ ನಡೆದಿದ್ದ ಅದ್ಧೂರಿ ವಿವಾಹಪೂರ್ವ ಸಮಾರಂಭದಲ್ಲಿಯೂ ಧೋನಿ ಮತ್ತು ಅವರ ಪತ್ನಿ ಭಾಗಿಯಾಗಿದ್ದರು. ಈ ವೇಳೆ ಧೋನಿ ವಿಂಡೀಸ್​ನ ಮಾಜಿ ಆಟಗಾರ ಡ್ವೇನ್‌ ಬ್ರಾವೊ(Dwayne Bravo) ಜತೆ ದಾಂಡಿಯಾ(Dandiya) ನೃತ್ಯವಾಡಿದ್ದರು. ಈ ವಿಡಿಯೊ ವೈರಲ್​ ಆಗಿತ್ತು.

ಅಂದು ನಡೆದಿದ್ದ ಅನಂತ್‌ ಅಂಬಾನಿ ವಿವಾಹಪೂರ್ವ ಸಮಾರಂಭದಲ್ಲಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್​, ರೋಹಿತ್ ಶರ್ಮ, ಜಹೀರ್ ಖಾನ್​, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್​ ಯಾದವ್​, ಕೈರಾನ್​ ಪೊಲಾರ್ಡ್​, ಕೃನಾಲ್ ಪಾಂಡ್ಯ , ಸುನೀಲ್​ ಗವಾಸ್ಕರ್​, ರಶೀದ್ ಖಾನ್​, ಸ್ಯಾಮ್ ಕರನ್​, ಗ್ರೇಮ್ ಸ್ಮಿತ್ ಸೇರಿ ಇನ್ನೂ ಅನೇಕ ಕ್ರಿಕೆಟಿಗರು ಪಾಲ್ಗೊಂಡಿದ್ದರು. ಒಟ್ಟು ಮೂರು ದಿನ ಗುಜರಾತ್​ನ ಜಾಮ್‌ನಗರದಲ್ಲಿ ಸಂಭ್ರಮ ಮನೆ ಮಾಡಿತ್ತು.

ಸದ್ಯ ನಡೆಯುತ್ತಿರುವ ‘ಸಂಗೀತ’ ಸಮಾರಂಭದಲ್ಲಿ ದೀಪಿಕ ಪಡುಕೋಣೆ, ಜಾಹ್ನವಿ ಕಪೂರ್, ಮಾಧುರಿ ದೀಕ್ಷಿತ್, ಖುಷಿ ಕಪೂರ್, ಅನನ್ಯಾ ಪಾಂಡೆ, ಸಲ್ಮಾನ್ ಖಾನ್, ಆದಿತ್ಯ ರಾಯ್ ಕಪೂರ್, ಆಲಿಯಾ ಭಟ್, ರಣಬೀರ್ ಕಪೂರ್ ಸೇರಿ ಹಲವು ಬಾಲಿವುಡ್​ ನಟ-ನಟಿಯರು ಪಾಲ್ಗೊಂಡಿದ್ದಾರೆ.

ಇದನ್ನು ಓದಿ Deepika Padukone: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ಗರ್ಭಿಣಿ ದೀಪಿಕಾ ಸೀರೆಯಲ್ಲಿ ಮಿಂಚಿದ್ದು ಹೀಗೆ!

ಜುಲೈ 12ರಂದು ಮದುವೆ

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಮುಂಬೈಯ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ವಿವಾಹವಾಗಲಿದ್ದಾರೆ. ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದೆ. ಇದರ ವಿವರವನ್ನು ಬಹಿರಂಗಪಡಿಸುವ ಆಹ್ವಾನ ಪತ್ರಿಕೆ ರಿಲೀಸ್‌ ಆಗಿ, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಜುಲೈ 14ರವರೆಗೆ ಶುಭ ವಿವಾಹ, ಶುಭ ಆಶೀರ್ವಾದ ಮತ್ತು ಮಂಗಳ ಉತ್ಸವ ಎನ್ನುವ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಕೆಲವು ದಿನಗಳ ಹಿಂದೆ ಮೂರು ದಿನಗಳ ಅದ್ದೂರಿ ಮದುವೆ ಪೂರ್ವ ಸಮಾರಂಭ ನಡೆದಿತ್ತು. ದೇಶ-ವಿದೇಶಗಳ ವಿವಿಧ ಕ್ಷೇತ್ರಗಳ ಗಣ್ಯರು ಇದರಲ್ಲಿ ಪಾಲ್ಗೊಂಡಿದ್ದರು.

Continue Reading

ಕ್ರೀಡೆ

Hardik Pandya: ನತಾಶಾ ಜತೆ ವಿಚ್ಛೇದನ ಖಚಿತ; ಸುಳಿವು ನೀಡಿದ ಹಾರ್ದಿಕ್​ ಪಾಂಡ್ಯ ಪೋಸ್ಟ್​!

Hardik Pandya: ತವರಿಗೆ ಬಂದಿರುವ ಪಾಂಡ್ಯ ತಮ್ಮ ಮಗ ಅಗಸ್ತ್ಯನ ಜತೆಗೆ ಕೇಕ್​ ಕತ್ತರಿಸಿ, ತಾವು ಗೆದ್ದ ಪದಕವನ್ನು ಮಗನ ಕೊರಳಿಗೆ ಹಾಕಿ ಸಂಭ್ರಮಿಸಿದ್ದಾರೆ. ಈ ಎಲ್ಲ ಸುಂದರ ಕ್ಷಣದ ಫೋಟೊ ಹಂಚಿಕೊಂಡು ‘ಎಲ್ಲವೂ ನಿನಗಾಗಿ. ನಾನೇನು ಮಾಡುತ್ತೇನೆಯೋ, ಅದು ನಿನ್ನ ಖುಷಿಗಾಗಿ ಮಾತ್ರ..’ ಎಂದು ಅವರು ಬರೆದುಕೊಂಡಿದ್ದಾರೆ.

VISTARANEWS.COM


on

Hardik Pandya
Koo

ಮುಂಬಯಿ: ಈ ಹಿಂದೆ ವರದಿಯಾದ ಪ್ರಕಾರ ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Nataša Stanković) ಅವರ ವಿವಾಹ ಮುರಿದು ಬಿದ್ದಿರುವುದು ಮತ್ತು ವಿಚ್ಛೇದನ ಪಡೆಯುವುದು ಬಹುತೇಖ ಖಚಿತ ಎನ್ನುವಂತಿದೆ. ಹೌದು, ಟಿ20 ವಿಶ್ವಕಪ್​ ಗೆದ್ದು ತವರಿಗೆ ಮರಳಿರುವ ಹಾರ್ದಿಕ್​ ಪಾಂಡ್ಯ ತಮ್ಮ ಮಗನೊಂದಿಗೆ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದ್ದಾರೆ. ಈ ಫೋಟೊ ಮತ್ತು ವಿಡಿಯೊಗಳನ್ನು ಪಾಂಡ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಪತ್ನಿ ಈ ಕಾರ್ಯಕ್ರಮಕ್ಕೆ ಗೈರಾಗಿರುವುದು ಕಂಡು ಈ ಜೋಡಿ ದೂರವಾದಂತೆ ತೋರುತ್ತಿದೆ.

ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನವೇ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾನ್‌ಕೋವಿಕ್‌ ವಿಚ್ಛೇದನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗಿತ್ತು. ಆದರೆ, ಈ ಜೋಡಿ ಮಾತ್ರ ಈ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೇವಲ ನಿಗೂಡ ಅರ್ಥದ ಪೋಸ್ಟ್​ಗಳನ್ನು ಮಾತ್ರ ಮಾಡುತ್ತಿದ್ದರು.

ವಿಚ್ಛೇದನದ ಸುದ್ದಿಯ ನಡುವೆ, ಕೆಲ ದಿನಗಳ ಹಿಂದೆ ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದರು. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದರು. ಈ ವೇಳೆ ನತಾಶಗೆ ಪಾಪರಾಜಿಗಳು ಪಾಂಡ್ಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನತಾಶ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.

ಇದಾಗ ಬಳಿಕ ನತಾಶಾ ಸ್ಟಾನ್‌ಕೋವಿಕ್‌ ಅವರು ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದರು. ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿತ್ತು. ಈ ಫೋಟೊವನ್ನು ಕಂಡಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿತ್ತು. ಅಲ್ಲದೆ ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು ಎಂದು ವರದಿಯಾಗಿತ್ತು.

ಇದನ್ನೂ ಓದಿ Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

ಟಿ20 ವಿಶ್ವಕಪ್​ ಗೆದ್ದಾಗ ಆಟಗಾರರ ಪತ್ನಿಯರು ಈ ಗೆಲುವಿನ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪತಿಯ ಫೋಟೊ ಮತ್ತು ಸಾಧನೆಯನ್ನು ಕೊಂಡಾಡಿದ್ದರು. ಆದರೆ ನತಾಶ ಯಾವುದೇ ಪೋಸ್ಟ್​ ಕೂಡ ಮಾಡಿರಲಿಲ್ಲ. ಇದೀಗ ತವರಿಗೆ ಬಂದಿರುವ ಪಾಂಡ್ಯ ತಮ್ಮ ಮಗ ಅಗಸ್ತ್ಯನ ಜತೆಗೆ ಕೇಕ್​ ಕತ್ತರಿಸಿ, ತಾವು ಗೆದ್ದ ಪದಕವನ್ನು ಮಗನ ಕೊರಳಿಗೆ ಹಾಕಿ ಸಂಭ್ರಮಿಸಿದ್ದಾರೆ. ಈ ಎಲ್ಲ ಸುಂದರ ಕ್ಷಣದ ಫೋಟೊ ಹಂಚಿಕೊಂಡು ‘ಎಲ್ಲವೂ ನಿನಗಾಗಿ. ನಾನೇನು ಮಾಡುತ್ತೇನೆಯೋ, ಅದು ನಿನ್ನ ಖುಷಿಗಾಗಿ ಮಾತ್ರ..’ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನು ನೋಡುವಾಗ ಪಾಂಡ್ಯ ಶೀಘ್ರದಲ್ಲೇ ನತಾಶಾಗೆ ವಿಚ್ಛೇದನ ನೀಡುವುದು ಖಚಿತ ಎನ್ನುವಂತಿದೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

ಕ್ರೀಡೆ

IND vs ZIM: ಇಂದು ಭಾರತ-ಜಿಂಬಾಬ್ವೆ ಮೊದಲ ಟಿ20 ಪಂದ್ಯ; ಎಷ್ಟು ಗಂಟೆಗೆ ಆರಂಭ?

IND vs ZIM: ಬ್ಯಾಟಿಂಗ್​ಗೆ ಹೆಚ್ಚು ಸಹಕಾರಿಯಾಗಿರುವ ಹರಾರೆ ಸ್ಪೋರ್ಟ್ಸ್ ಕ್ಲಬ್ ಪಿಚ್​ನಲ್ಲಿ ರನ್​ ಹೊಳೆಯೇ ಹರಿಯುವ ಸಾಧ್ಯತೆ ಇದೆ. ಹೇಳಿ ಕೇಳಿ ಭಾರತ ತಂಡದಲ್ಲಿ ಐಪಿಎಲ್​ ಸ್ಟಾರ್​ಗಳೇ ಹೆಚ್ಚಾಗಿ ತುಂಬಿಕೊಂಡಿದ್ದಾರೆ. ಹೊಡಿಬಡಿ ಆಟ ಇವರಿಗೆ ಹೊಸತೇನಲ್ಲ.

VISTARANEWS.COM


on

Koo

ಹರಾರೆ: ಭಾರತ ಮತ್ತು ಜಿಂಬಾಬ್ವೆ(Zimbabwe vs India) ನಡುವಣ 5 ಪಂದ್ಯಗಳ ಟಿ20 ಸರಣಿಗೆ ಇಂದು ಅಧಿಕೃತ ಚಾಲನೆ ಸಿಗಲಿದೆ. ಇತ್ತಂಡಗಳ(IND vs ZIM) ಮೊದಲ ಪಂದ್ಯ ಇಂದು(ಶನಿವಾರ) ಹರಾರೆ(Harare) ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಸಂಜೆ 4.30ಕ್ಕೆ ಆರಂಭಗೊಳ್ಳಲಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪಂದ್ಯ ಪ್ರಸಾರಗೊಳ್ಳಲಿದೆ.

ಭಾರತ ಮತ್ತು ಜಿಂಬಾಬ್ವೆ ಇದುವರೆಗೆ ಒಟ್ಟು 8 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ 6 ಪಂದ್ಯ ಗೆದ್ದಿದ್ದರೆ, ಜಿಂಬಾಬ್ವೆ 2 ಪಂದ್ಯ ಗೆದ್ದಿದೆ. ಕೊನೆಯ ಬಾರಿ ಇತ್ತಂಡಗಳು ಆಡಿದ್ದು 2022ರಲ್ಲಿ. ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ. ಈ ಪಂದ್ಯವನ್ನು ಭಾರತ 71 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಪಿಚ್​ ರಿಪೋರ್ಟ್​


ಬ್ಯಾಟಿಂಗ್​ಗೆ ಹೆಚ್ಚು ಸಹಕಾರಿಯಾಗಿರುವ ಹರಾರೆ ಸ್ಪೋರ್ಟ್ಸ್ ಕ್ಲಬ್ ಪಿಚ್​ನಲ್ಲಿ ರನ್​ ಹೊಳೆಯೇ ಹರಿಯುವ ಸಾಧ್ಯತೆ ಇದೆ. ಹೇಳಿ ಕೇಳಿ ಭಾರತ ತಂಡದಲ್ಲಿ ಐಪಿಎಲ್​ ಸ್ಟಾರ್​ಗಳೇ ಹೆಚ್ಚಾಗಿ ತುಂಬಿಕೊಂಡಿದ್ದಾರೆ. ಹೊಡಿಬಡಿ ಆಟ ಇವರಿಗೆ ಹೊಸತೇನಲ್ಲ. ಅತ್ತ ಜಿಂಬಾಬ್ಬೆ ಕೂಡ ಯುವ ಪಡೆಯನ್ನೇ ನೆಚ್ಚಿಕೊಂಡಿದೆ. ಒಟ್ಟಾರೆ ಬೌಲರ್​ಗಳು ಇಂದು ಶಕ್ತಿ ಮೀರಿ ಪ್ರದರ್ಶನ ತೋರುವ ಸ್ಥಿತಿ ಎದುರಾಗಬಹುದು.

ಈಗಾಗಲೇ ಹಿರಿಯ ಆಟಗಾರರಾದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20 ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದಾರೆ. ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಕೂಡ ನಡೆಯಲಿದೆ. ಇದು ಟಿ20 ಸ್ವರೂಪದಲ್ಲಿಯೇ ನಡೆಯಲಿದೆ. ಜತೆಗೆ 2026ರಲ್ಲಿ ಟಿ20 ವಿಶ್ವಕಪ್​ ಕೂಡ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ರಚಿಸಲು ಬಿಸಿಸಿಐ ಸಿದ್ಧತೆ ಆರಂಭಿಸಿದೆ. ಇದೀಗ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಸಿಕ್ಕ ಅವಕಾಶವನ್ನು ಯುವ ಆಟಗಾರರು ಸರಿಯಾಗಿ ಬಳಸಿಕೊಂಡರೆ ಭಾರತ ಸೀನಿಯರ್​ ತಂಡದಲ್ಲಿ ಆಡುವ ಅವಕಾಶ ಪಡೆಯಬಹುದು. ಹೀಗಾಗಿ ಎಲ್ಲ ಆಟಗಾರರು ಶ್ರೇಷ್ಠ ಪ್ರದರ್ಶನ ತೋರಬೇಕು. ಲೆಗ್‌ಸ್ಪಿನ್ನರ್‌ ರವಿ ಬಿಷ್ಣೋಯಿ ಟ್ರಂಪ್‌ಕಾರ್ಡ್‌ ಆಗುವ ಸಾಧ್ಯತೆ ಇದೆ. ಆವೇಶ್‌ ಖಾನ್‌, ಖಲೀಲ್‌ ಅಹ್ಮದ್‌, ಮುಕೇಶ್‌ ಕುಮಾರ್‌, ಹರ್ಷಿತ್‌ ರಾಣಾ ಅವರಿಗೆ ಇದೊಂದು ಅಗ್ನಿಪರೀಕ್ಷೆ.

ಇದನ್ನೂ ಓದಿ Team India: ರೋಹಿತ್​, ಸೂರ್ಯಕುಮಾರ್​, ದುಬೆ, ಜೈಸ್ವಾಲ್​ಗೆ ಸನ್ಮಾನ ಮಾಡಿದ ಸಿಎಂ ಏಕನಾಥ್​ ಶಿಂಧೆ

ಶುಭಮನ್​ ಗಿಲ್​ ಈ ಸರಣಿಯಲ್ಲಿ ಯಶಸ್ವಿಯಾದರೆ ಮುಂದಿನ ದಿನದಲ್ಲಿ ನಾಯಕನಾಗುವ ಸಾಧ್ಯತೆಯೂ ಇದೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಪರ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಮಳೆಯನ್ನೇ ಸುರಿಸಿದ್ದ ಎಡಗೈ ಬ್ಯಾಟರ್​ ಅಭಿಷೇಕ್​ ಶರ್ಮ ಬ್ಯಾಟಿಂಗ್​ ಪ್ರದರ್ಶನದ ಮೇಕೆಯೂ ಬಹಳ ನಿರೀಕ್ಷೆ ಇದೆ. ಒಟ್ಟಾರೆ ಈ ಸರಣಿಯಲ್ಲಿ ಆಟಗಾರರು ತೋರುವ ಪ್ರದರ್ಶನದಲ್ಲಿ ಅವರ ಮುಂದಿನ ಕ್ರಿಕೆಟ್​ ಭವಿಷ್ಯ ಅಡಗಿದೆ ಎನ್ನಲಡ್ಡಿಯಿಲ್ಲ. ಗಿಲ್​ ಜತೆ ಅಭಿಷೇಕ್​ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. ಈ ವಿಚಾರವನ್ನು ಪಂದ್ಯಕ್ಕೂ ಮುನ್ನವೇ ನಾಯಕ ಗಿಲ್​ ಖಚಿತಪಡಿಸಿದ್ದಾರೆ.

ಜಿಂಬಾಬ್ವೆ ವಿರುದ್ಧ ಭಾರತ ಅಜೇಯವಲ್ಲ. 2 ಸೋಲು ಕೂಡ ಕಂಡಿದೆ. ಅನುಭವಿ ಆಲ್​ರೌಂಡರ್​ ಹಾಗೂ ನಾಯಕನಾಗಿರುವ ಸಿಕಂದರ್​ ರಾಜಾ ಬ್ಯಾಟಿಂಗ್​ ಮತ್ತು ಬೌಲಿಂಗ್​ನಲ್ಲಿ ಉತ್ತಮ ಫಾರ್ಮ್​ನಲ್ಲಿದ್ದಾರೆ. ಜತೆಗೆ ತಂಡದ ನೂತನ ಕೋಚ್​ ಆಗಿರುವ ಜಸ್ಟಿನ್‌ ಸ್ಯಾಮ್ಸನ್‌ ಅವರ ಮಾರ್ಗದರ್ಶನ ಕೂಡ ತಂಡಕ್ಕೆ ನೆರವಾಗಬಹುದು. ಹೀಗಾಗಿ ಭಾರತ ಎಚ್ಚರಿಕೆಯಿಂದ ಆಡಬೇಕು.

Continue Reading

ಪ್ರಮುಖ ಸುದ್ದಿ

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Mohammed Siraj : ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು,

VISTARANEWS.COM


on

Mohammed Siraj
Koo

ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ವಿಜಯದ ಅಭಿಯಾನದ ನಂತರ ಟೀಮ್ ಇಂಡಿಯಾ ತಾರೆಯರಿಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಗುತ್ತಿದೆ. ಮುಂಬೈನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಅಮೋಘ ಬೆಂಬಲ ಪಡೆದುಕೊಂಡಿದ್ದ ಭಾರತ ತಂಡದ ಆಟಗಾರರು ಇದೀಗ ತಮ್ಮ ತಮ್ಮ ತವರಿಗೆ ಮರಳಿದ್ದಾರೆ. ಅವರಿಗೆ ಅಲ್ಲಿಯೂ ದೊಡ್ಡ ಮಟ್ಟ ಶ್ಲಾಘನೆ ದೊರಕಿದೆ. ವೇಗದ ಬೌಲರ್​ ಮೊಹಮ್ಮದ್ ಸಿರಾಜ್​ (Mohammed Siraj ) ಹೈದಾರಾದಬಾದ್​ನಲ್ಲಿ ಭರ್ಜರಿ ಸ್ವಾಗತ ಗಿಟ್ಟಿಸಿಕೊಂಡರು.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ 7 ರನ್​ಗಳ ಭರ್ಜರಿ ಜಯ ಸಾಧಿಸಿದೆ. 11 ವರ್ಷಗಳ ಅಂತರದ ನಂತರ ಐಸಿಸಿ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಭಾರತದ ಹಲವು ವರ್ಷಗಳ ನೋವನ್ನು ಮರೆಯಿತು. ಮೆನ್ ಇನ್ ಬ್ಲೂ ತಂಡವು ಹಲವಾರು ಸಂದರ್ಭಗಳಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಸೋತಿತ್ತು. ಕೊನೆಗೂ ಅವರು ತಮ್ಮ ನಿರೀಕ್ಷೆಯನ್ನು ಮೀರಿದ್ದಾರೆ.

ತಂಡವು ಮಂಗಳವಾರ ಭಾರತಕ್ಕೆ ಇಳಿಯಬೇಕಿತ್ತು. ಬೆರಿಲ್ ಚಂಡಮಾರುತದಿಂದಾಗಿ ವೆಸ್ಟ್​ ಇಂಡೀಸ್​​ನ ಬಾರ್ಬಡೋಸ್​ನಿಂದ ಅವರ ನಿರ್ಗಮನವು ಎರಡು ದಿನ ವಿಳಂಬವಾಯಿತು. ಅಂತಿಮವಾಗಿ ಬುಧವಾರ ದ್ವೀಪವನ್ನು ಬಿಡುವಲ್ಲಿ ಯಶಸ್ವಿಯಾದರು. ಗುರುವಾರ ಬೆಳಿಗ್ಗೆ ಭಾರತಕ್ಕೆ ಬಂದಿಳಿದರು. ಮುಂಬೈಗೆ ತೆರಳುವ ಮೊದಲು ತಂಡವು ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಇಳಿದು ಪ್ರಧಾನಿ ನರೇಂದ್ರ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು.

ಇದನ್ನೂ ಓದಿ: Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

ವಿಜಯಶಾಲಿ ಭಾರತೀಯ ತಂಡವು ಓಪನ್-ಟಾಪ್ ಬಸ್​ನಲ್ಲಿ ವಿಜಯ ಮೆರವಣಿಗೆಯಲ್ಲಿ ಭಾಗವಹಿಸಿತು. ಸಾವಿರಾರು ಅಭಿಮಾನಿಗಳು ಅವರಿಗೆ ಉತ್ಸಾಹಭರಿತ ಸ್ವಾಗತ ನೀಡಿದರು. ಮೆರವಣಿಗೆಯು ಮರೀನ್ ಡ್ರೈವ್ ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ನಡೆಯಿತು. 30,000 ಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣದಲ್ಲಿದ್ದರು, ಭಾರತ ತಂಡ ಮತ್ತು ಅಭಿಮಾನಿಗಳು ಒಟ್ಟಾಗಿ ಸ್ಮರಣೀಯ ವಿಜಯವನ್ನು ಆಚರಿಸಿದರು. ಬಿಸಿಸಿಐನಿಂದ ಸನ್ಮಾನಿಸಲ್ಪಡುವ ಮೊದಲು ಆಟಗಾರರು ಪ್ರೇಕ್ಷಕರೊಂದಿಗೆ ನೃತ್ಯ ಮಾಡಿದರು.

ಮೊಹಮ್ಮದ್ ಸಿರಾಜ್​​ಗೆ ಹೈದರಾಬಾದ್ ಸ್ವಾಗತ

ಗುರುವಾರ ಮುಂಬೈನಲ್ಲಿ ವಿಜಯೋತ್ಸವದ ನಂತರ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಶುಕ್ರವಾರ ಸಂಜೆ ತಮ್ಮ ತವರು ಪಟ್ಟಣ ಹೈದರಾಬಾದ್​ಗೆ ಬಂದಿಳಿದರು. ನಿರೀಕ್ಷೆಯಂತೆ, ವಿಮಾನ ನಿಲ್ದಾಣದ ಹೊರಗೆ ಭಾರಿ ಜನಸಮೂಹ ಅವರಿಗಾಗಿ ಕಾಯುತ್ತಿತ್ತು. ಅಭಿಮಾನಿಗಳು ತಮ್ಮ ತವರು ಆಟಗಾರನನ್ನು ಸ್ವಾಗತಿಸುತ್ತಿದ್ದಂತೆ ಎಲ್ಲೆಡೆ ‘ಇಂಡಿಯಾ, ಇಂಡಿಯಅ ‘ ಘೋಷಣೆಗಳು ಮೊಳಗಿದವು.

ಮೊಹಮ್ಮದ್ ಸಿರಾಜ್ ಟಿ 20 ವಿಶ್ವಕಪ್​​ನಲ್ಲಿ ಮೂರು ಪಂದ್ಯಗಳನ್ನು ಆಡಿದ್ದಾರೆ. ಪಂದ್ಯಾವಳಿಯ ಯುಎಸ್ಎ ಲೆಗ್ ಮುಗಿದ ಕೂಡಲೇ ಕುಲ್ದೀಪ್ ಯಾದವ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಲಾಗಿದೆ. ಕೆರಿಬಿಯನ್ ಪರಿಸ್ಥಿತಿಗಳು ಸ್ಪಿನ್ನರ್​ಗಳಿಗೆ ಹೆಚ್ಚು ಅನುಕೂಲಕರವಾಗಿದ್ದರಿಂದ, ಸಿರಾಜ್ ಬದಲಿಗೆ ಕುಲ್ದೀಪ್ ಅವರನ್ನು ತಂಡಕ್ಕೆ ಕರೆತಂದಿತು.

ಐದು ಪಂದ್ಯಗಳಲ್ಲಿ ಕುಲ್ದೀಪ್ 10 ವಿಕೆಟ್​ಗಳನ್ನು ಪಡೆದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಸಿರಾಜ್ 3 ಪಂದ್ಯಗಳಲ್ಲಿ 1 ವಿಕೆಟ್ ಪಡೆದಿದ್ದರು. .

Continue Reading
Advertisement
Anant Ambani wedding
ಕ್ರೀಡೆ4 mins ago

Anant Ambani wedding: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರದಲ್ಲಿ ಪಾಲ್ಗೊಂಡ ಧೋನಿ, ಪಾಂಡ್ಯ ಬ್ರದರ್ಸ್​, ಇಶಾನ್​ ಕಿಶನ್​

dengue fever death bangalore
ಕ್ರೈಂ16 mins ago

Dengue Fever: ಸಿಲಿಕಾನ್‌ ಸಿಟಿಯಲ್ಲಿ ಡೆಂಗ್ಯು ಜ್ವರಕ್ಕೆ ಬಾಲಕ ಬಲಿ, ರಾಜಧಾನಿಯಲ್ಲಿ 2ನೇ ಸಾವು

UK Election
ವಿದೇಶ28 mins ago

UK Election: ಇಂಗ್ಲೆಂಡ್‌ನಲ್ಲಿ ಅಧಿಕಾರಕ್ಕೆ ಬಂದ ಲೇಬರ್‌ ಪಕ್ಷ; ಭಾರತದ ಮೇಲೇನು ಪರಿಣಾಮ?

Heart Attack
ಕ್ರೀಡೆ37 mins ago

Heart Attack: ಚೆಸ್​ ಆಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಗ್ರ್ಯಾಂಡ್‌ಮಾಸ್ಟರ್

Janhvi Kapoor Stuns In Peacock Lehenga
ಬಾಲಿವುಡ್37 mins ago

Janhvi Kapoor: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ನವಿಲಂತೆ ಕಂಗೊಳಿಸಿದ ಜಾಹ್ನವಿ ಕಪೂರ್!

death by shock in pg
ಕ್ರೈಂ40 mins ago

Death by Shock: ಮೊಬೈಲ್‌ ಚಾರ್ಜರ್‌ನಿಂದ ಶಾಕ್‌ ಹೊಡೆದು ವಿದ್ಯಾರ್ಥಿ ಸಾವು

Deepika Padukone heads to Anant Ambani Radhika Merchant sangeet in a saree
ಬಾಲಿವುಡ್1 hour ago

Deepika Padukone: ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ಗರ್ಭಿಣಿ ದೀಪಿಕಾ ಸೀರೆಯಲ್ಲಿ ಮಿಂಚಿದ್ದು ಹೀಗೆ!

illegal relationship chitradurga
ಕ್ರೈಂ1 hour ago

Illegal Relationship: ಪರ ಸ್ತ್ರೀಯೊಂದಿಗೆ ಲಾಡ್ಜಿಗೆ ಬಂದು ಪರಲೋಕ ಸೇರಿದ!

Hardik Pandya
ಕ್ರೀಡೆ1 hour ago

Hardik Pandya: ನತಾಶಾ ಜತೆ ವಿಚ್ಛೇದನ ಖಚಿತ; ಸುಳಿವು ನೀಡಿದ ಹಾರ್ದಿಕ್​ ಪಾಂಡ್ಯ ಪೋಸ್ಟ್​!

UK Election
ವಿದೇಶ1 hour ago

UK Election: ಬ್ರಿಟನ್‌ ಸಂಸತ್ತಿಗೆ 28 ಭಾರತೀಯ ಮೂಲದವರು ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ16 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ18 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ19 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ20 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ22 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು23 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು23 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಟ್ರೆಂಡಿಂಗ್‌