ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ಯುವಕ ಆತ್ಮಹತ್ಯೆ - Vistara News

ಕ್ರೈಂ

ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ಯುವಕ ಆತ್ಮಹತ್ಯೆ

ಗೃಹಪ್ರವೇಶಕ್ಕಾಗಿ ಬಬಲಾದಿ ಸ್ವಾಮೀಜಿ ಅವ್ರಿಗೂ ಸಹ ಆವ್ಹಾನಿಸಲಾಗಿತ್ತು. ಆದ್ರೆ ಹೊಸಮನೆ ಗೃಹ ಪ್ರವೇಶಕ್ಕೂ ಮುನ್ನವೇ ತಿಮ್ಮಣ್ಣ ಆತ್ಮಹತ್ಯೆಗೆ ಶರಣಾಗಿದಾರೆ.

VISTARANEWS.COM


on

ಕನ್ನಡದ ಕೋಟ್ಯಧೀಪತಿ ಕಾರ್ಯಕ್ರಮದಲ್ಲಿ ನಟ ರಮೇಶ್‌ ಅರವಿಂದ್‌ ಜತೆಗೆ ತಿಮ್ಮಣ್ಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ನಟ ರಮೇಶ್ ಅರವಿಂದ್ ನಡೆಸುತ್ತಿದ್ದ ಕನ್ನಡದ ಕೋಟ್ಯಧಿಪತಿ ಸೀಜನ್‌ನಲ್ಲಿ ಭಾಗವಹಿಸಿದ್ದ ಯುವಕ ಸಾಲ ತೀರಿಸಲಾಗದೇ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಅಮಲಝರಿ ಗ್ರಾಮದ 27 ವರ್ಷದ ತಿಮ್ಮಣ್ಣ ಗುರಡ್ಡಿ ಎಂಬ ಯುವಕನೇ ಆತ್ಮಹತ್ಯೆ ಮಾಡಿಕೊಂಡವರು. ಅಮಲಝರಿ ಗ್ರಾಮದ ಹೊರವಲಯದಲ್ಲಿರುವ ಮುಧೋಳ ತಾಲೂಕಿನ ಮಂಟೂರು ಗ್ರಾಮ ವ್ಯಾಪ್ತಿಯ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ. ತಿಮ್ಮಣ್ಣ ಎಸ್ಸೆಸ್ಸೆಲ್ಸಿವರೆಗೂ ವ್ಯಾಸಂಗ ಮಾಡಿದ್ದರು. ಈ ಹಿಂದೆ ನಟ ರಮೇಶ್ ಅರವಿಂದ್ ನಡೆಸಿಕೊಟ್ಟಿದ್ದ ಕನ್ನಡದ ಕೊಟ್ಯಾದಿಪತಿ ಸೀಜನ್ 3 ರಲ್ಲಿ ಭಾಗವಹಿಸಿ ₹6.40 ಗೆದ್ದಿದ್ದರು.

ಇದನ್ನೂ ಓದಿ : ಮಣಿಪಾಲದ ಫರ್ನೀಚರ್‌ ಅಂಗಡಿಯಲ್ಲಿ ಅಗ್ನಿ ಅವಘಡ!

ಹಾಸ್ಯ, ಸಂಗೀತದ ಮೂಲಕ ಟಿಕ್‌ಟಾಕ್‌ನಲ್ಲಿ ರಂಜಿಸಿದ್ದ ತಿಮ್ಮಣ್ಣ. ಖೋ ಖೋ ಕ್ರೀಡಾಪಟು ಸಹ ಆಗಿದ್ದರು. ತಮ್ಮ ಗ್ರಾಮದ ಮಕ್ಕಳಿಗೆ ತರಬೇತಿ ಕೊಡುತ್ತಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಚಿಕಿತ್ಸೆಗಾಗಿ ಮತ್ತು ಹೊಸ ಮನೆ ಕಟ್ಟಿಸುವ ಸಲುವಾಗಿ ₹16 ಲಕ್ಷ ಸಾಲ ಮಾಡಿಕೊಂಡಿದ್ದರು. ತಾನು ದುಡಿದು, ಸಾಲ ಮಾಡಿ ನಿರ್ಮಿಸಿದ್ದ ಹೊಸ ಮನೆ ಗೃಹ ಪ್ರವೇಶ ಸಹ ನಡೆಯಬೇಕಿತ್ತು. ಮನೆ ಗೃಹಪ್ರವೇಶಕ್ಕಾಗಿ ಬಬಲಾದಿ ಸ್ವಾಮೀಜಿ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ ಗೃಹ ಪ್ರವೇಶಕ್ಕೂ ಮುನ್ನವೇ ತಿಮ್ಮಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರ್ಕಾರಿ ನೌಕರಿಯಲ್ಲಿದ್ದ ತಿಮ್ಮಣ್ಣಗೆ ಒಳ್ಳೆ ವೇತನ ಇತ್ತು‌. ನೌಕರಿ ಮೇಲೆ ₹16 ಲಕ್ಷ ಸಾಲ ಮಾಡಿ ಒಟ್ಟು ₹18 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿದ್ದ. ಆತ್ಮಹತ್ಯೆ ಮಾಡಿಕೊಳ್ಳುವ ದಿನ ರಾತ್ರಿ 10 ಗಂಟೆಗೆ ಅಮಲಝರಿ ಗ್ರಾಮದ ಸ್ನೇಹಿತನ ಪಾನ್ ಶಾಪ್‌ಗೆ ಹೋಗಿ ಮನೆ ಗೃಹಪ್ರವೇಶದ ಬಗ್ಗೆ ಹೇಳಿದ್ದ. ಮುಧೋಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ | ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಸಹೋದ್ಯೋಗಿಗಳ ಕಿರುಕುಳ ಕಾರಣ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Suspicious Death: ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

Advocate Chaitra Gowda Case : ಕಳೆದ ಮೇ 11ರಂದು ಹೈಕೋರ್ಟ್‌ ವಕೀಲೆ ಚೈತ್ರಾ ಅವರ ಮೃತದೇಹವು ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಇದೀಗ ಅವರ ಸಾವಿನ ಕುರಿತು ಆಪ್ತರು ಅನುಮಾನ ವ್ಯಕ್ತಪಡಿಸಿದ ಕಾರಣಕ್ಕೆ ಸಿಸಿಬಿ ವರ್ಗಾವಣೆ ಮಾಡಲಾಗಿದೆ.

VISTARANEWS.COM


on

By

Suspicious Death Advocate Chaitra Gowda Case
Koo

ಬೆಂಗಳೂರು: ವಕೀಲೆ ಚೈತ್ರಾ ಅವರ (Advocate Chaitra Gowda Case) ಸಾವು ಅವರ ಆಪ್ತರಿಗೆ ಇನ್ನೂ ಕೂಡ ನಿಗೂಢವಾಗಿಯೇ ಇದೆ. ಪೊಲೀಸರ ವರದಿಯಲ್ಲಿ ಇದೊಂದು ಆತ್ಮಹತ್ಯೆ ಎಂದರೂ ಕೂಡ ಅದನ್ನು ಚೈತ್ರಾ ಆಪ್ತರು ಒಪ್ಪುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಸಿಬಿ ತೆಕ್ಕೆಗೆ (Suspicious Death) ವಹಿಸಲಾಗಿದೆ.

ಇದೇ ತಿಂಗಳ ಮೇ 11ರಂದು ಚೈತ್ರಾ ಗೌಡ ಅವರ ಮೃತದೇಹ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದೊಂದದು ಆತ್ಮಹತ್ಯೆ ಎಂದು ಹೇಳಲಾಗಿತ್ತು. ಪೋಸ್ಟ್‌ ಮಾರ್ಟಮ್‌ ರಿಪೋರ್ಟ್‌ನಲ್ಲಿ ಚೈತ್ರಾ ಸಾವು ಆತ್ಮಹತ್ಯೆಯಿಂದಲೇ (Self Harming) ಆಗಿದೆ ಎಂಬುದು ದೃಢಪಟ್ಟಿತ್ತು. ಆದರೆ ಅವರ ಆಪ್ತ ವಲಯ ಚೈತ್ರಾಗೌಡ ಅವರ ಸಾವು ಸಹಜವಲ್ಲ ಎಂದು ಇಂದಿಗೂ ಕೂಡ ವಾದಿಸುತ್ತಲೆ ಇದೆ. ಹೀಗಾಗಿ ವಕೀಲರ ಸಂಘದವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ಈ ಸಾವಿನ ಬಗ್ಗೆ ತನಿಖೆ ನಡೆಸಿ ಎಂದಿದ್ದರು. ಇದರ ಫಲವಾಗಿ ಪ್ರಕರಣದ ಹೆಚ್ಚಿನ ತನಿಖೆಗೆ ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು ಮೊದಲು ಆಕೆಯ ಸಾವಿನ 15 ದಿನಗಳ ಹಿಂದಿನ ಸಿಸಿಟಿವಿಗಳನ್ನು ಕಲೆ ಹಾಕುವ ಕೆಲಸ ಶುರು ಮಾಡಿದೆ. ಜತೆಗೆ ಚೈತ್ರಾರ ಮೊಬೈಲ್‌ಗೆ ಬಂದ ಕರೆಗಳ ಸಿಡಿಆರ್‌ಗಳನ್ನು ಸಂಗ್ರಹಿಸಿದೆ. ಚೈತ್ರಾರಿಗೆ ಯಾರಾದರೂ ತೊಂದರೆ ಕೊಟ್ಟಿರುವುದು ಅಥವಾ ಬೆದರಿಕೆ ಹಾಕಿದ್ದರಾ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ ಚೈತ್ರ ಗೌಡ ಅವರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಏನಿದು ಪ್ರಕರಣ?

2016ರಲ್ಲಿ ಮದುವೆ ಆಗಿದ್ದ ಶಿವಕುಮಾರ್ ಹಾಗೂ ಚೈತ್ರಾ ದಂಪತಿಗೆ 5 ವರ್ಷದ ಒಂದು ಮಗು ಇದೆ. ಈ ದಂಪತಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು. ಚೈತ್ರಾ ಹೈಕೋರ್ಟ್ ವಕೀಲೆ ಆಗಿದ್ದರೆ, ಶಿವಕುಮಾರ್ ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿದ್ದರು. ಸಂಜಯನಗರದ ಅಣ್ಣಯ್ಯಪ್ಪ ಲೇಔಟ್‌ನ ಅಪಾರ್ಟ್‌ಮೆಂಟ್‌ನ ಮೂರು ಫ್ಲಾಟ್‌ನಲ್ಲಿ ಒಂದರಲ್ಲಿ ಚೈತ್ರಾ ಕುಟುಂಬ ಹಾಗೂ ಇನ್ನೊಂದು ಫ್ಲಾಟ್‌ನಲ್ಲಿ ಮೃತಳ ತಮ್ಮ ವಾಸವಾಗಿದ್ದರು. ಮೇ 11ರ ಶನಿವಾರ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಪತಿ ಶಿವಕುಮಾರ್ ಜತೆ ನಂತರ ತಮ್ಮನನೊಟ್ಟಿಗೂ ಚೈತ್ರಾ ಮಾತನಾಡಿದ್ದ ಚೈತ್ರಾ 11 ಗಂಟೆ ಯಾರ ಫೋನ್‌ ಕರೆಗೂ ಸ್ಪಂದಿಸಿರಲಿಲ್ಲ. ಹೀಗಾಗಿ ಕಿಟಕಿಯಲ್ಲಿ ನೋಡಿದಾಗ ಫ್ಯಾನ್‌ಗೆ ವೇಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿತ್ತು. ಕೂಡಲೇ ಚೈತ್ರಾಳ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಚೈತ್ರಾರ ಬೆಡ್‌ ರೂಮಿನಲ್ಲಿ ಒಂದು ಪುಟದ ಡೆತ್ ನೋಟ್ ಪತ್ತೆಯಾಗಿತ್ತು. ಆದರೆ ಅದು ಮೂರು ತಿಂಗಳ ಹಿಂದೆ ಅಂದರೆ ಮಾರ್ಚ್ 11ರಂದು ಬರೆಯಲಾಗಿತ್ತು. ಡೆತ್‌ನೋಟ್‌ನಲ್ಲಿ, ನನ್ನ ಪತಿ ತುಂಬಾ ಒಳ್ಳೆಯವರು. ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್‌ನಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ ಆಗುತ್ತಿಲ್ಲ, ನಾನು ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೆನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ಸೂಸೈಡ್ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಸಹ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನಕ್ಕೆ ಅಂತ್ಯವಾಡಿದ್ದೇನೆ ಎಂದು ಬರೆದಿದ್ದರು.

ಇತ್ತ ಚೈತ್ರಾ ಕುಟುಂಬಸ್ಥರು ಇದು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಚೈತ್ರಾ ಪತಿ,‌ ಕೆಎಎಸ್ ಅಧಿಕಾರಿ ಶಿವಕುಮಾರ್ ಅವರನ್ನು ಪೊಲೀಸರು ವಿಚಾರಣೆ ಮಾಡಿದ್ದರು. ವಿಚಾರಣೆ ವೇಳೆ, ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಜತೆಗೆ ಯಾವುದೇ ಹಣಕಾಸಿನ ಸಮಸ್ಯೆ ಕೂಡ ಇರಲಿಲ್ಲ ಎಂದು ಶಿವಕುಮಾರ್‌ ತಿಳಿಸಿದ್ದರು. ಆದರೆ ಪ್ರಾಪರ್ಟಿ ವಿಚಾರವಾಗಿ ಆಗಾಗ್ಗೆ ಸ್ವಲ್ಪ ಜಗಳ ನಡೀತಾ ಇತ್ತು. ಇದರಿಂದ ಖಿನ್ನತೆಗೊಳಗಾಗಿದ್ದಳು ಎಂದು ಮಾಹಿತಿ ನೀಡಿದ್ದರು.

ಇದರೊಟ್ಟಿಗೆ ಮರಣೋತ್ತರ ಪರೀಕ್ಷೆಯಲ್ಲಿ ಇದು ಆತ್ಮಹತ್ಯೆ ಎಂದು ಕಂಡುಬಂದಿತ್ತು. ಜತೆಗೆ ಮನೆಯಲ್ಲಿ ಸಿಕ್ಕ ಡೆತ್ ನೋಟ್ ಕೂಡ ಚೈತ್ರಾ ಬರೆದಿರುವುದು ಖಚಿತವಾಗಿತ್ತು. ಚೈತ್ರಾ, ತಮ್ಮ ಕುಟುಂಬಸ್ಥರ ಬಳಿ ಮೂರು ತಿಂಗಳ ಹಿಂದೆಯೇ ತಾವು ಸಾಯುವುದಾಗಿ ಮಾತಾಡಿದ್ದರು. ಈ ಮಾತಾಡಿದ ಬಳಿಕವೇ ಡೆತ್‌ ನೋಟ್‌ ಬರೆದಿಟ್ಟಿರುವುದು ಗೊತ್ತಾಗಿತ್ತು. ಆದರೂ ಈಕೆಯ ಸಾವಿನ ಕುರಿತು ಆಪ್ತರು, ವಕೀಲ ಸಂಘದವರು ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್‌ ಆಯುಕ್ತರು ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

BMTC Driver : ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬಿಎಂಟಿಸಿ ಕಛೇರಿಗೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಎಲೆಕ್ಟ್ರಿಕಲ್‌ ಬಸ್ಸಿಗೆ ಪರಭಾಷಿಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಕನ್ನಡ ಪರ ಸಂಘಟನೆ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

VISTARANEWS.COM


on

By

BMTC Bus
Koo

ಬೆಂಗಳೂರು: ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್‌ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕನ್ನಡ ಬಾರದ ಚಾಲಕರನ್ನು ನೇಮಕ (BMTC Driver) ಮಾಡಿಕೊಳ್ಳಲಾಗುತ್ತಿದೆ ಎಂದು ಪರಭಾಷಿಕರ ನೇಮಕದ ವಿರುದ್ಧ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಕಡಿಮೆ ವೇತನಕ್ಕೆ ನೆರೆಯ ಕೇರಳ, ಮಹಾರಾಷ್ಟ್ರ ಚಾಲಕರನ್ನು ನೇಮಕ ಮಾಡಲಾಗುತ್ತಿದೆ. ಇದರಿಂದಾಗಿ ಕರ್ನಾಟಕ ಚಾಲಕರನ್ನು ಕರೆತರಲು ಎಲೆಕ್ಟ್ರಿಕ್ ಕಂಪನಿಗಳ ಹಿಂದೇಟು‌ ಹಾಕುತ್ತಿವೆ ಎಂದು ಕಿಡಿಕಾರಿದ್ದಾರೆ.

ವಿವಿಧ ಕಂಪನಿಗಳು ಕಡಿಮೆ ವೇತನಕ್ಕೆ ಪರಭಾಷಿಕರ ಕರೆತರುತ್ತಿರುವುದಕ್ಕೆ ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಸಂಘಟನೆ ಮುಖಂಡ ರೂಪೇಶ್ ರಾಜಣ್ಣ ನೇತೃತ್ವದಲ್ಲಿ ಬಿಎಂಟಿಸಿಗೆ ಮುತ್ತಿಗೆ ಹಾಕಲಾಯಿತು. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ ತೆರಳಿ ಆಕ್ರೋಶ ಹೊರಹಾಕಿದರು.

ಕೇರಳದ ಬಹುತೇಕ ಚಾಲಕರಿಗೆ ಕನ್ನಡ ಬರಲ್ಲ. ಇದರಿಂದ ನಿರ್ವಾಹಕರು, ಚಾಲಕರ ಮಧ್ಯೆ ಸಂವಹನ ಸಮಸ್ಯೆ ಉಂಟಾಗುತ್ತದೆ. ನಗರದ ರೂಟ್ ಗೊತ್ತಿಲ್ಲ, ಭಾಷೆ ತಿಳಿಯದೆ, ಅರ್ಥವಾಗದೇ ತೊಂದರೆಯಾಗುತ್ತಿದೆ. ಹೊರ ರಾಜ್ಯದವರನ್ನು ನೇಮಕ‌ ಮಾಡಿಕೊಳ್ಳದಂತೆ ಕನ್ನಡ ಪರ ಸಂಘಟನೆಗಳು ಒತ್ತಾಯ ಮಾಡಿವೆ.

ಬಿಎಂಟಿಸಿಯಲ್ಲಿ ಮೂರು ಕಂಪನಿಯಗಳ 648 ಎಲೆಕ್ಟ್ರಿಕ್ ಬಸ್‌ಗಳಿವೆ. ಎಲೆಕ್ಟ್ರಿಕ್ ಬಸ್‌ಗಳಲ್ಲಿ ಚಾಲಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ನಿರ್ವಾಹಕ ಮಾತ್ರ ಬಿಎಂಟಿಸಿ ಸಿಬ್ಬಂದಿ ಆಗಿರುತ್ತಾರೆ. ಆದರೆ ಬಸ್‌ ಚಾಲಕರನ್ನು ಕಂಪನಿಯೇ ನೇಮಕ ಮಾಡಬೇಕು. ಹೀಗಾಗಿ ಕಂಪನಿಗಳು ಇಲ್ಲಿನವರನ್ನು ಬಿಟ್ಟು ಹೊರ ರಾಜ್ಯದ ಕೆಲ ಚಾಲಕರನ್ನು ನೇಮಕ ಮಾಡಿಕೊಂಡಿದೆ. ಇದು ಈಗ ವಿವಾದಕ್ಕೆ ಕಾರಣವಾಗಿದೆ. ಕೂಡಲೇ ಹೊರ ರಾಜ್ಯದ ಚಾಲಕರನ್ನು ಕರ್ತವ್ಯದಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Food Poisoning : ಜಾತ್ರೆಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Fake CBI Officer : ಸಿಬಿಐ ಪೊಲೀಸರೆಂದು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ ನಾಲ್ವರು ಅರೆಸ್ಟ್‌

ಬೆಂಗಳೂರು: ಸಿಬಿಐ ಪೊಲೀಸರೆಂದು (Fake CBI Officer ) ವಿದ್ಯಾರ್ಥಿಗಳಿಂದ ಹಣ ವಸೂಲಿ‌ ಮಾಡುತ್ತಿದ್ದ ಕೇರಳ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ವಿದ್ಯಾರ್ಥಿಗಳಿದ್ದ ಮನೆಗೆ ಸಿಬಿಐ ಅಧಿಕಾರಿಗೆಳೆಂದು ದಾಳಿ ಮಾಡಿದ್ದರು. ಈ ವೇಳೆ ತಾವೇ ತಂದಿದ್ದ ಗಾಂಜಾವನ್ನು ವಿದ್ಯಾರ್ಥಿಗಳ ಕೈಯಲ್ಲಿ ಇಟ್ಟು ವಿಡಿಯೊ ಮಾಡಿಕೊಂಡು ಬ್ಲ್ಯಾಕ್‌ ಮೇಲ್‌ ಮಾಡಿದ್ದರು. ಕೈಯಲ್ಲಿದ್ದ ಪಿಸ್ತೂಲ್, ಐಡಿ ಕಾರ್ಡ್, ಲಾಟಿಯಿಂದ ಹಲ್ಲೆ ಮಾಡಿದ್ದರು.

ಆರೋಪಿಗಳ ನಡವಳಿಕೆಯಿಂದ ಅನುಮಾನಗೊಂಡ ಯುವಕರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ತನಿಖೆ ನಡೆಸಿದ ಸೋಲದೇವನಹಳ್ಳಿ ಪೊಲೀಸರು ದೂರು ದಾಖಲಾಗಿ 12 ಗಂಟೆಯೊಳಗೆ ಕೇರಳ‌ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅನಂತಕೃಷ್ಣ(23), ಪ್ರಮೋದ (42), ಆದರ್ಶ್(22) ಮತ್ತು ದೀಪಕ್ ಆರ್ ಚಂದ್ರ (37) ಬಂಧಿತ ಆರೋಪಿಗಳಾಗಿದ್ದಾರೆ.

ಕೃತ್ಯಕ್ಕೆ ಬಳಸಿದ್ದ ಹಲವು ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 1- ಮಹೀಂದ್ರ ಎಕ್ಸ್ ಯು ವಿ, 1 ಹ್ಯೂಂಡೈ ಐ 20 ಕಾರು, 1 ಏರ್ ಪಿಸ್ತೂಲ್, ಕೈ ಕೋಳ, ಐಡಿ ಕಾರ್ಡ್, ಬ್ಯಾಟನ್ ಮತ್ತು 4 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

Fake CBI Officer

ಇದನ್ನೂ ಓದಿ: Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

ಇನ್ನೂ ಆರೋಪಿ ಪ್ರಮೋದ್ ತಿರುವನಂತಪುರಂನಲ್ಲಿ ಹೋಟೆಲ್ ಬಿಸಿನೆಸ್ ನಡೆಸುತ್ತಿದ್ದ. ತನ್ನ ತಂಗಿಯನ್ನು ಬೆಂಗಳೂರಿನ ಯುವಕನಿಗೆ ಮದುವೆ ಮಾಡಿಕೊಟ್ಟಿದ್ದ. ಈ ಹಿನ್ನೆಲೆಯಲ್ಲಿ ಆಗಾಗ ಬೆಂಗಳೂರಿಗೆ ಬಂದು ಹೋಗುತ್ತಿದ್ದ. ಪ್ರಮೋದ್‌ನ ಪಕ್ಕದ ಊರಿನವರಾದ ಅನಂತಕೃಷ್ಣ ಮತ್ತು ಆದರ್ಶ್‌ ಬೆಂಗಳೂರಿನಲ್ಲಿ ಓದುತ್ತಿದ್ದರು. ಇವರನ್ನು ಪ್ರಮೋದ್‌ ಪರಿಚಯ‌ ಮಾಡಿಕೊಂಡಿದ್ದ. ಜತೆಗೆ ಕೇರಳದಿಂದ ದೀಪಕ್ ಎಂಬಾತನನ್ನು ಕರೆಸಿಕೊಂಡು ಪ್ಲ್ಯಾನ್‌ ಮಾಡಿದ್ದ. ಸಿಬಿಐ ಅಧಿಕಾರಿಗಳೆಂದು ಹೇಳಿದರೆ ಸುಲಭವಾಗಿ ಹಣ ವಸೂಲಿ ಮಾಡಬಹುದೆಂದು ಈ ರೀತಿಯ ಕೃತ್ಯ ಮಾಡಿದ್ದರು.

ಬ್ಲ್ಯಾಕ್ ಮೇಲ್ ವೇಳೆ 3 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಲ್ಲಿ ಗಾಂಜಾ ಕೈಯಲ್ಲಿರುವ ವಿಡಿಯೋ ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆ ಸಮಯದಲ್ಲಿ ಯುಪಿಐ ಐಡಿಗೆ ವಿದ್ಯಾರ್ಥಿಗಳಿಂದ 90,000 ಹಣ ವರ್ಗಾವಣೆ ಮಾಡಿಕೊಂಡಿದ್ದರು. ಇನ್ನುಳಿದ ಹಣವನ್ನು ಮುಂದಿನ ದಿನ ನೀಡಬೇಕೆಂದು ಹೇಳಿ ಹೋಗಿದ್ದರು. ಸದ್ಯ ನಾಲ್ವರನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Food Poisoning : ಜಾತ್ರೆಲಿ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Food Poisoning : ಜಾತ್ರೆಯಲ್ಲಿ ಊಟ ಸೇವಿಸಿದವರಿಗೆ ತೀವ್ರ ಅಸ್ವಸ್ಥಗೊಂಡಿದ್ದು, ಸುಮಾರು 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಗ್ರಾಮದಲ್ಲೇ ವೈದ್ಯಕೀಯ ತಂಡ ಬೀಡು ಬಿಟ್ಟಿದೆ.

VISTARANEWS.COM


on

By

Food Poisoning
Koo

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಬಾಳುಮಾಮಾ ಜಾತ್ರೆಯಲ್ಲಿ ಊಟ (Food Poisoning) ಮಾಡಿದವರು ಅಸ್ವಸ್ಥಗೊಂಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನೇ 200ಕ್ಕೂ ಹೆಚ್ಚು ಮಂದಿ ಸಂಜೆ ಊಟ ಮಾಡಿದ್ದರು. ಸಂಜೆ ಊಟ ಮಾಡಿದವರಿಗೆ ಏಕಾಏಕಿ ವಾಂತಿ ಭೇದಿ ಶುರುವಾಗಿತ್ತು. ಕೂಡಲೇ ಅಸ್ವಸ್ಥಗೊಂಡವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುಮಾರು 30 ಮಂದಿ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಉಳಿದ 10 ಮಂದಿಗೆ ಕೇರೂರ ಗ್ರಾಮದ ಅಂಗವಾಡಿ ಹಾಗೂ 15 ಮಂದಿಗೆ ಯಕ್ಸಂಭಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗ್ರಾಮದಲ್ಲೇ ವೈದ್ಯಕೀಯ ತಂಡ ಬೀಡು ಬಿಟ್ಟಿದೆ.

ಇದನ್ನೂ ಓದಿ: Viral News: ಸರ ಕದ್ದು ಪರಾರಿಯಾಗಲು ಬೈಕ್‌ ಏರಿದವರಿಗೆ ಕಾದಿತ್ತು ಶಾಕ್‌; ವಿಡಿಯೊ ಇಲ್ಲಿದೆ

ಪುರಿ ಜಗನ್ನಾಥ ದೇಗುಲದಲ್ಲಿ ಅಗ್ನಿ ದುರಂತ; 15 ಮಂದಿಗೆ ಗಾಯ

ಭುವನೇಶ್ವರ: ವಿಶ್ವ ಪ್ರಸಿದ್ಧ ಒಡಿಶಾದ ಪುರಿ ಜಗನ್ನಾಥ ದೇಗುಲ (Puri Jagannath temple)ದಲ್ಲಿ ಬುಧವಾರ ರಾತ್ರಿ ಅಗ್ನಿ ದುರಂತವೊಂದು ಸಂಭವಿಸಿದ್ದು, ಸುಮಾರು 15 ಮಂದಿಗೆ ಸುಟ್ಟ ಗಾಯಗಳಾಗಿವೆ. ಭಗವಾನ್ ಜಗನ್ನಾಥನ ಚಂದನ್ ಜಾತ್ರಾ ಉತ್ಸವದ ಸಂದರ್ಭದಲ್ಲಿ ಪಟಾಕಿಗಳ ರಾಶಿ ಸ್ಫೋಟಗೊಂಡು ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ (Firecracker Explosion).

ಉತ್ಸವ ವೀಕ್ಷಣೆಗಾಗಿ ನೂರಾರು ಮಂದಿ ನರೇಂದ್ರ ಪುಷ್ಕರಿಣಿ ದಂಡೆ ಮೇಲೆ ಜಮಾಯಿಸಿದ್ದ ವೇಳೆ ಪಟಾಕಿ ಸ್ಫೋಟಗೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಕ್ತರ ಗುಂಪು ಪಟಾಕಿ ಹಚ್ಚುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಹಾರಿದ ಬೆಂಕಿಯ ಕಿಡಿ ಪಟಾಕಿಗಳ ರಾಶಿಗೆ ಅಪ್ಪಳಿಸಿತು. ಇದು ಸ್ಫೋಟಕ್ಕೆ ಕಾರಣ ಎಂದು ಅವರು ವಿವರಿಸಿದ್ದಾರೆ.

ಪಟಾಕಿ ಸಿಡಿಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಕೆಲವರು ತಮ್ಮನ್ನು ರಕ್ಷಿಸಿಕೊಳ್ಳಲು ಪುಷ್ಕರಿಣಿಗೆ ಜಿಗಿದಿದ್ದಾರೆ. ಇನ್ನು ಹಲವರು ಕೂಡಲೇ ಸ್ಥಳದಿಂದ ತೆರಳಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಚಿಕಿತ್ಸೆಯ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ʼʼಪುರಿ ಜಗನ್ನಾಥ ಉತ್ಸವದ ವೇಳೆ ನಡೆದ ಬೆಂಕಿ ದುರಂತದಿಂದ ತೀವ್ರ ದುಃಖವಾಗಿದೆ. ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಲು ಮುಖ್ಯ ಆಡಳಿತ ಕಾರ್ಯದರ್ಶಿ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶಿಸಲಾಗಿದೆ. ಗಾಯಾಳುಗಳ ಎಲ್ಲ ವೈದ್ಯಕೀಯ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಭರಿಸಲಾಗುವುದು. ಎಲ್ಲರಿಗೂ ಉತ್ತಮ ಆರೋಗ್ಯವನ್ನು ಹಾರೈಸುತ್ತೇನೆ” ಎಂದು ನವೀನ್ ಪಟ್ನಾಯಕ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. “ಪುರಿ ಚಂದನ ಯಾತ್ರೆಯ ಸಂದರ್ಭದಲ್ಲಿ ನರೇಂದ್ರ ಪುಷ್ಕರಿಣಿ ದೇವಿಘಾಟ್‌ನಲ್ಲಿ ನಡೆದ ಅಪಘಾತದಲ್ಲಿ ಅನೇಕರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ದುಃಖವಾಗಿದೆ. ಭಗವಂತನ ಆಶೀರ್ವಾದದಿಂದ, ಚಿಕಿತ್ಸೆಯಲ್ಲಿರುವವರು ಶೀಘ್ರದಲ್ಲೇ ಗುಣಮುಖರಾಗಿ ಮನೆಗೆ ಮರಳಲಿ” ಎಂದು ಅವರು ಹಾರೈಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Chhota Rajan: ಹೊಟೇಲ್‌ ಉದ್ಯಮಿ ಹತ್ಯೆ ಕೇಸ್‌; ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Chhota Rajan:ಮುಂಬೈಯ ಗಾಮ್‌ದೇವಿಯ ಗೋಲ್ಡನ್‌ ಕ್ರೌನ್‌ ಹೊಟೇಲ್‌ ಮಾಲೀಕರಾಗಿದ್ದ ಜಯಾ ಶೆಟ್ಟಿ ಅವರಿಗೆ ಛೋಟಾ ರಾಜನ್‌ ಗ್ಯಾಂಗ್‌ನಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಆಗಾಗ ಕರೆ ಬರುತ್ತಿತ್ತು. ಇದಾದ ಬಳಿಕ ಕಲವೇ ದಿನಗಳಲ್ಲಿ ಅಂದರೆ ಮೇ 4, 2001ರಂದು ಹೊಟೇಲ್‌ ಒಳಗಡೆಯೇ ಜಯಾ ಶೆಟ್ಟಿ ಅವರನ್ನು ಛೋಟಾ ರಾಜನ್‌ ಗ್ಯಾಂಗ್‌ನ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

VISTARANEWS.COM


on

Chhota Rajan
Koo

ಮುಂಬೈ: ಹೊಟೇಲ್‌ ಉದ್ಯಮಿ ಜಯಾ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್‌, ಭೂಗತ ಪಾತಕಿ ಛೋಟಾ ರಾಜನ್‌(Chhota Rajan)ನನ್ನು ಅಪರಾಧಿ ಎಂದು ಮುಂಬೈ ಕೋರ್ಟ್‌(Mumbai court) ಘೋಷಿಸಿದೆ. 2001ರಲ್ಲಿ ನಡೆದ ಜಯಾ ಶೆಟ್ಟಿ ಕೊಲೆ ಪ್ರಕರಣದ ಅಂತಿಮ ತೀರ್ಪು ಇಂದು ಹೊರಬಿದ್ದಿದ್ದು, ರಾಜನ್‌ನನ್ನು ದೋಷಿ ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ಘೋಷಿಸಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆ(MCOCA) ಕೇಸ್‌ಗಳ ವಿಚಾರಣೆ ನಡೆಸುವ ಮುಂಬೈ ವಿಶೇಷ ಕೋರ್ಟ್‌ ನ್ಯಾಯಾಧೀಶ ಎ ಎಂ ಪಾಟೀಲ್‌ ರಾಜನ್‌ನನ್ನು ಅಪರಾಧಿ ಎಂದು ಘೋಷಿಸಿದ್ದಾರೆ.

ಜಯಾ ಶೆಟ್ಟಿ ಯಾರು?

ಮುಂಬೈಯ ಗಾಮ್‌ದೇವಿಯ ಗೋಲ್ಡನ್‌ ಕ್ರೌನ್‌ ಹೊಟೇಲ್‌ ಮಾಲೀಕರಾಗಿದ್ದ ಜಯಾ ಶೆಟ್ಟಿ ಅವರಿಗೆ ಛೋಟಾ ರಾಜನ್‌ ಗ್ಯಾಂಗ್‌ನಿಂದ ಹಣಕ್ಕಾಗಿ ಬೇಡಿಕೆ ಇಟ್ಟು ಆಗಾಗ ಕರೆ ಬರುತ್ತಿತ್ತು. ಇದಾದ ಬಳಿಕ ಕಲವೇ ದಿನಗಳಲ್ಲಿ ಅಂದರೆ ಮೇ 4, 2001ರಂದು ಹೊಟೇಲ್‌ ಒಳಗಡೆಯೇ ಜಯಾ ಶೆಟ್ಟಿ ಅವರನ್ನು ಛೋಟಾ ರಾಜನ್‌ ಗ್ಯಾಂಗ್‌ನ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಜಯಾ ಅವರಿಗೆ ಬೆದರಿಕೆ ಬರುತ್ತಿದ್ದಂತೆ ಮುಂಬೈ ಪೊಲೀಸರು ಅವರಿಗೆ ಭಾರೀ ಭದ್ರತೆ ಒದಗಿಸಿದ್ದರು. 2000ನೇ ಇಸವಿ ನವೆಂಬರ್ ತಿಂಗಳಿನಿಂದ ಛೋಟಾ ರಾಜನ್‌ ಬೆದರಿಕೆ ಕರೆಯಿಂದ ಪೊಲೀಸರಿಗೆ ದೂರು ನೀಡಿದ್ದ ಜಯಾ ಶೆಟ್ಟಿ, 2001ರ ಮಾರ್ಚ್ ಅಂತ್ಯದಲ್ಲಿ ಭದ್ರತೆ ಹಿಂತೆಗೆದುಕೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು. ಪೊಲೀಸ್ ಭದ್ರತೆ ಬಳಿಕ ಛೋಟಾ ರಾಜನ್‌ ದೂರವಾಣಿ ಕರೆ ಮಾಡಿ ಬೆದರಿಸುವ ಪ್ರಯತ್ನ ಮಾಡಿರಲಿಲ್ಲ. ಹೀಗಾಗಿ ಛೋಟಾ ರಾಜನ್‌ ತಮ್ಮ ತಂಟೆಗೆ ಬರುವುದಿಲ್ಲ ಎಂದು, ಪೊಲೀಸ್ ಭದ್ರತೆ ವಾಪಸ್ ಪಡೆಯಲು ಪೊಲೀಸರಿಗೆ ಮನವಿ ಮಾಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ 2015 ಅಕ್ಟೋಬರ್‌ನಲ್ಲಿ ಚೋಟಾ ರಾಜನ್‌ ಇಂಡೋನೇಷ್ಯಾದಿಂದ ಭಾರತಕ್ಕೆ ಗಡಿಪಾರಾಗುತ್ತಿದ್ದಂತೆ ಆತನನ್ನು ಅರೆಸ್ಟ್‌ ಮಾಡಿ ದಿಲ್ಲಿಯ ತಿಹಾರ್‌ ಜೈಲಿಗೆ ಕಳುಹಿಸಲಾಗಿತ್ತು. ಇನ್ನು ಘಟನೆ ನಡೆದ ಸಂದರ್ಭದಲ್ಲೇ ಹೊಟೇಲ್‌ನ ಮ್ಯಾನೇಜರ್‌ ಮತ್ತು ನೌಕರರು ಸೇರಿಕೊಂಡು ಇಬ್ಬರು ಶೂಟರ್‌ಗಳನ್ನು ಅರೆಸ್ಟ್‌ ಮಾಡಿದ್ದಾರೆ.

ಚೋಟಾ ರಾಜನ್‌ ಯಾರು?

ಚೋಟಾ ರಾಜನ್‌ನ ನಿಜವಾದ ಹೆಸರು ರಾಜೇಂದ್ರ ಸದಾಶಿವ ನಿಕಲ್ಜೆ . 2001ರಲ್ಲಿ ಛೋಟಾ ರಾಜನ್‌ ಹಾವಳಿ ಜೋರಾಗಿತ್ತು. ಮುಂಬೈನ ಉದ್ಯಮಿಗಳಿಂದ ಕೋಟಿ ಕೋಟಿ ರೂಪಾಯಿ ಸುಲಿಗೆ ಮಾಡೋದನ್ನೇ ದಂಧೆಯನ್ನಾಗಿ ಮಾಡಿಕೊಂಡಿದ್ದ.

ಇದನ್ನೂ ಓದಿ:Madhu Chopra: ಮಗಳು-ಅಳಿಯನ ವಯಸ್ಸಿನ ಅಂತರ ಬಗ್ಗೆ ಪ್ರಿಯಾಂಕಾ ಚೋಪ್ರಾ ತಾಯಿ ಹೇಳಿದ್ದೇನು?

ಇತ್ತೀಚೆಗೆ ಛೋಟಾ ರಾಜನ್‌ ಆಪ್ತ ಪ್ರಸಾದ್​ ಪೂಜಾರಿಯನ್ನು 20 ವರ್ಷಗಳ ಬಳಿಕ ಚೀನಾವು ಮುಂಬೈಗೆ ಗಡಿಪಾರು ಮಾಡಿತ್ತು. ಪ್ರಸಾದ್ ಪೂಜಾರಿ ಅಲಿಯಾಸ್ ಸುಭಾಷ್ ವಿಠ್ಠಲ್ ನನ್ನು ಚೀನಾದಿಂದ ಮುಂಬೈಗೆ ಗಡಿಪಾರು ಮಾಡಿದ್ದು, ಈತ ಛೋಟಾ ರಾಜನ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದು, ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Continue Reading
Advertisement
Reserve Bank of India
ದೇಶ28 mins ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ37 mins ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್1 hour ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು2 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ2 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Viral Video
ವೈರಲ್ ನ್ಯೂಸ್2 hours ago

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

Muslim Personal Law
ಪ್ರಮುಖ ಸುದ್ದಿ2 hours ago

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Prajwal Revanna Case
ಕರ್ನಾಟಕ2 hours ago

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

Viral Video
ವೈರಲ್ ನ್ಯೂಸ್2 hours ago

Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

Cow Smugling
ಪ್ರಮುಖ ಸುದ್ದಿ2 hours ago

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ9 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌