PAK vs AUS: ಬೆಂಗಳೂರಿನ ವಿಶ್ವಕಪ್​ ಪಂದ್ಯಗಳಿಗೆ ಭಾರಿ ಬಿಗಿ ಬಂದೋಬಸ್ತ್ - Vistara News

ಕ್ರಿಕೆಟ್

PAK vs AUS: ಬೆಂಗಳೂರಿನ ವಿಶ್ವಕಪ್​ ಪಂದ್ಯಗಳಿಗೆ ಭಾರಿ ಬಿಗಿ ಬಂದೋಬಸ್ತ್

ಇಸ್ರೇಲ್ ಹಾಗೂ ಪ್ಯಾಲೆಸ್ತೀನಿಯರ(israel vs palestine) ನಡುವೆ ನಡೆಯುತ್ತಿರುವ ಭಾರಿ ಘರ್ಷಣೆಗೆ ಬೆಂಬಲ ಸೂಚಿಸಿ ನಗರದ ಕೆಲವೆಡೆ ಪ್ರತಿಭಟನೆಗಳು ನಡೆಯುತ್ತಿರುವ ಕಾರಣ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹೈಅಲರ್ಟ್ ಘೋಷಿಸಿದ್ದಾರೆ.

VISTARANEWS.COM


on

m.chinnaswamy stadium bengaluru security
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M.Chinnaswamy Stadium) ಆರಂಭಗೊಳ್ಳಲಿರುವ ವಿಶ್ವಕಪ್​ ಚರಣದ ಪಂದ್ಯಗಳಿಗೆ ಭಾರಿ ಬಿಗಿ ಬಂದೋಬಸ್ತ್​ ಮಾಡಲಾಗಿದೆ. ಶುಕ್ರವಾರ ನಡೆಯುವ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ(PAK vs AUS) ವಿರುದ್ಧದ ಪಂದ್ಯ ಇಲ್ಲಿ ನಡೆಯುವ ಮೊದಲ ಪಂದ್ಯವಾಗಲಿದೆ. ಆದರೆ ಇಸ್ರೇಲ್ ಹಾಗೂ ಪ್ಯಾಲೆಸ್ತೀನಿಯರ(israel vs palestine) ನಡುವೆ ನಡೆಯುತ್ತಿರುವ ಭಾರಿ ಘರ್ಷಣೆಗೆ ಬೆಂಬಲ ಸೂಚಿಸಿ ನಗರದ ಕೆಲವೆಡೆ ಪ್ರತಿಭಟನೆಗಳು ನಡೆದಿವೆ. ಹೀಗಾಗಿ ಬೆಂಗಳೂರು ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹೈಅಲರ್ಟ್ ಘೋಷಿಸಿದ್ದಾರೆ.

ಮೂಲಗಳ ಪ್ರಕಾರ ಪಂದ್ಯ ನಡೆಯುವ ವೇಳೆ ಕೆಲ ಸಂಘಟನೆಯ ವ್ಯಕ್ತಿಗಳು ಇಸ್ರೇಲ್ ಹಾಗೂ ಪ್ಯಾಲೆಸ್ತೀನಿಯಕ್ಕೆ ಬೆಂಬಲ ಸೂಚಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಸಿಗುವಂತೆ ಮಾಡಲು ಯೋಜನೆ ರೂಪಿಸಿದ್ದಾರೆ ಎಂದು ಸುಳಿವು ಸಿಕ್ಕಿದೆ. ಇದೇ ಕಾರಣ ಸ್ಟೇಡಿಯಂಗೆ ಪ್ರವೇಶ ಪಡೆಯುವ ವ್ಯಕ್ತಿಗಳಿಗೆ ಯಾವುದೇ ಬಿತ್ತಿ ಪತ್ರಗಳನ್ನು ತೆಗೆದುಕೊಂಡು ಬರದಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಹೀಗಾಗಿ ಮ್ಯಾಚ್ ವಿಕ್ಷಣೆಗೆ ಬರುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಡಲು ನಿರ್ಧರಿಸಿದ್ದಾರೆ.

ಪಾಕ್​ ಆಟಗಾರ ರಿಜ್ವಾನ್​ ಕೂಡ ಕೆಲ ದಿನಗಳ ಹಿಂದೆ ನಡೆದ ಲಂಕಾ ವಿರುದ್ಧದ ಪಂದ್ಯದ ಬಳಿಕ ತಮ್ಮ ಶತಕವನ್ನು ಗಾಜಾದ ಜನತೆಗೆ ಅರ್ಪಿಸಿದ್ದರು. ಹೀಗಾಗಿ ಈ ಪಂದದ ವೇಳೆ ಕೆಲ ಮುಸ್ಲಿಂ ಸಂಘಟನೆಗಳು ಗಾಜಾಕ್ಕೆ ಬೆಂಬಲ ಸೂಚಿಸಿ ಪೋಸ್ಟರ್​ ಹಿಡಿಯುವ ಸಾಧ್ಯತೆ ಇದೆ ಎಂದು ಮಾಹಿತಿ ಸಿಕ್ಕ ಕಾರಣ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ಅಲ್ಲದೆ ಅಕ್ಟೋಬರ್​ 16ರ ಸಂಜೆ ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ನೂರಾರು ಜನರು ಜಮಾಯಿಸಿ ಗಾಜಾ ಮೇಲೆ ಇಸ್ರೇಲ್‌ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿ ಜಾಥ ಮಾಡಿದ್ದರು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಲು ಪಂದ್ಯದ ನಡುವೆಯೂ ಈ ರೀತಿಯ ಘಟನೆ ನಡೆಯುವ ಸಾಧ್ಯತೆಯನ್ನು ಅರಿತ ನಗರದ ಪೊಲೀಸರು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಭದ್ರತೆ ಕಲ್ಪಿಸಿದ್ದಾರೆ.

ಇದನ್ನೂ ಓದಿ ICC World Cup 2023 : ದ. ಆಫ್ರಿಕಾ ತಂಡವನ್ನು ಬಗ್ಗು ಬಡಿದು ಹೊಸ ದಾಖಲೆ ಬರೆದ ನೆದರ್ಲ್ಯಾಂಡ್ಸ್​​

ಪಾಕ್​ ಆಟಗಾರರಿಗೆ ವೈರಲ್​ ಜ್ವರ

ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ತಂಡದ 4 ಮಂದಿ ಸ್ಟಾರ್​ ಆಟಗಾರರು ವೈರಲ್​ ಜ್ವರದಿಂದ ಬಳಲುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಅಲ್ಲದೆ ಈ ಆಟಗಾರರನ್ನು ಮುನ್ನೆಚರಿಕಾ ಕ್ರಮವಾಗಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ ಎನ್ನಲಾಗಿದೆ.

ಪಾಕಿಸ್ತಾನ ಆಟಗಾರರು ಸದ್ಯ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಶುಕ್ರವಾರ ನಡೆಯುವ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದ್ದರು ಆದರೆ ಆಟಗಾರರಿಗೆ ವೈರಲ್​ ಜ್ವರದ ಸಮಸ್ಯೆ ಕಂಡು ಬಂದ ಕಾರಣ ತಂಡಕ್ಕೆ ಚಿಂತೆಯೊಂದು ಕಾಡಿದೆ. ಶಾಹೀನ್‌ ಶಾ ಅಫ್ರಿದಿ, ಶಫೀಕ್‌ ಅಬ್ದುಲ್ಲ, ಜಮಾನ್‌ ಖಾನ್‌ ಮತ್ತು ಉಸಾಮ ಮಿರ್‌ ಜ್ವರದಿಂದ ಬಳಲುತ್ತಿರುವ ಆಟಗಾರರು ಎಂದು ತಿಳಿದುಬಂದಿದೆ.

ಸದ್ಯ ಯಾವುದೇ ಆಟಗಾರರಿಗೂ ಡೆಂಗ್ಯೂ ಲಕ್ಷಣ ಕಂಡುಬಂದಿಲ್ಲ ಎಂಬುದು ಸಾಬೀತಾಗಿದೆ. ಎಲ್ಲರ ವೈದ್ಯಕೀಯ ಪರೀಕ್ಷೆಯ ವರದಿಯಲ್ಲೂ ನೆಗೆಟಿವ್‌ ಫ‌ಲಿತಾಂಶ ಬಂದಿದೆ. ಎಲ್ಲರೂ ಚೇತರಿಸಿಕೊಳ್ಳುತ್ತಿದ್ದು ಆಸೀಸ್​ ವಿರುದ್ಧ ಆಡುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ತಂಡದ ಮಾಧ್ಯಮ ವ್ಯವಸ್ಥಾಪಕರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Paris Olympics 2024 : 1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​ನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ (Paris Olympics 2024) ನಾಲ್ಕನೇ ದಿನದಲ್ಲಿ ಭಾರತ ಅಥ್ಲೀಟ್​ಗಳು ಕೆಲವು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ ಇದುವರೆಗೆ ಕೇವಲ 1 ಕಂಚಿನ ಪದಕವನ್ನು ಮಾತ್ರ ಪಡೆದಿದೆ. ಆದಾಗ್ಯೂ ಇನ್ನೂ ಪದಕಗಳನ್ನು ಗೆಲ್ಲುವ ಭರವಸೆಯಿದೆ. ಹೀಗಾಗಿ ಕ್ರೀಡಾಭಿಮಾನಿಗಳಲ್ಲಿ ಹೆಚ್ಚು ಕುತೂಹಲ ಸೃಷ್ಟಿಯಾಗಿದೆ. ಪ್ರಮುಖವಾಗಿ ಒಂದು ಪದಕದ ಸ್ಪರ್ಧೆಯೂ ಮಂಗಳವಾರ ನಡೆಯಲಿದೆ.

ಒಲಿಂಪಿಕ್ಸ್​​ನ 4ನೇ ದಿನವಾದ ಜುಲೈ 30ರಂದು (Paris Olympics 2024) ಭಾರತದ ಶೂಟರ್ ಮನು ಭಾಕರ್ ಇತಿಹಾಸ ನಿರ್ಮಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಕ್ರೀಡಾಕೂಟದಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಪದಕ (ಕಂಚು) ಗೆದ್ದ ಭಾಕರ್, 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಮತ್ತೊಂದು ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿದ್ದಾರೆ. ಸ್ವಾತಂತ್ರ್ಯದ ನಂತರ ಒಲಿಂಪಿಕ್ ಕ್ರೀಡಾಕೂಟದ ಒಂದೇ ಆವೃತ್ತಿಯಲ್ಲಿ ಯಾವುದೇ ಭಾರತೀಯ ಕ್ರೀಡಾಪಟು ಎರಡು ಪದಕಗಳನ್ನು ಗೆದ್ದಿಲ್ಲ. ಹೀಗಾಗಿ ಮನು ಗೆದ್ದರೆ ದೊಡ್ಡ ಸಾಧನೆಯಾಗಲಿದೆ.

1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

ಭಾಕರ್ ಮತ್ತು ಸರಬ್ಜೋತ್ ಭಾರತದ ಪದಕಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ, ಬಿಲ್ಲುಗಾರ ಧೀರಜ್ ಬೊಮ್ಮದೇವರ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಜನ್ ಕೌರ್ ಮತ್ತು ಅಂಕಿತಾ ಭಕತ್ ಮಹಿಳೆಯರ ವೈಯಕ್ತಿಕ ಎಲಿಮಿನೇಷನ್ ಸುತ್ತುಗಳಲ್ಲಿ ಸ್ಪರ್ಧಿಸಲಿದ್ದಾರೆ.

ಪುರುಷರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ 2 ನೇ ದಿನದಂದು ಟ್ರ್ಯಾಪ್ ಶೂಟರ್ ಪೃಥ್ವಿರಾಜ್ ತೊಂಡೈಮನ್ ಪುಟಿದೇಳಲು ಪ್ರಯತ್ನಿಸಿದರೆ, ರಾಜೇಶ್ವರಿ ಕುಮಾರಿ ಮತ್ತು ಶ್ರೇಯಸಿ ಸಿಂಗ್ ಮಹಿಳೆಯರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ ಮೊದಲ ದಿನದಂದು ಅಭಿಯಾನಪ್ರಾರಂಭಿಸಲಿದ್ದಾರೆ.

ಬಾಕ್ಸರ್​ಗಳು ಕಣಕ್ಕೆ

ಭಾರತದ ಆರು ಭಾರತೀಯ ಬಾಕ್ಸರ್ ಗಳಲ್ಲಿ ಮೂವರು ನಾಳೆ ಕಣಕ್ಕಿಳಿಯಲಿದ್ದಾರೆ. ಪುರುಷರ 51 ಕೆಜಿ ವಿಭಾಗದಲ್ಲಿ ಅಮಿತ್ ಪಂಗಲ್, ಮಹಿಳೆಯರ 57 ಕೆಜಿ ವಿಭಾಗದಲ್ಲಿ ಜಾಸ್ಮಿನ್ ಲಂಬೋರಿಯಾ ಮತ್ತು ಮಹಿಳೆಯರ 54 ಕೆಜಿ ವಿಭಾಗದಲ್ಲಿ ಪ್ರೀತಿ ಪವಾರ್ ಸ್ಪರ್ಧಿಸಲಿದ್ದಾರೆ.

ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡೋನೇಷ್ಯಾ ವಿರುದ್ಧದ ಅಂತಿಮ ಗ್ರೂಪ್ ಪಂದ್ಯದಲ್ಲಿ ತಮ್ಮ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ಗುರಿ ಹೊಂದಿದ್ದಾರೆ. ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಆಸ್ಟ್ರೇಲಿಯಾ ವಿರುದ್ಧ ಸತತ ಎರಡು ಸೋಲುಗಳ ಬಳಿಕ ಮತ್ತೊಂದ ಪಂದ್ಯ ಆಡಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪುರುಷರ ಆರ್ಚರಿ ತಂಡಕ್ಕೆ ಆಘಾತ, ಕ್ವಾರ್ಟರ್​ಫೈನಲ್​ನಲ್ಲಿ ಸೋಲು

ಶೂಟಿಂಗ್, ಬಾಕ್ಸಿಂಗ್ ಮತ್ತು ಬ್ಯಾಡ್ಮಿಂಟನ್ ಜೊತೆಗೆ, ಪುರುಷರ ಸಿಂಗಲ್ಸ್ ಸ್ಕಲ್ಸ್​ನಲ್ಲಿ ಬಲರಾಜ್ ಪನ್ವಾರ್ ಮತ್ತು ಈಕ್ವೆಸ್ಟ್ರಿಯನ್​ ವೈಯಕ್ತಿಕ ಡ್ರೆಸ್ಸಿಂಗ್ ಅರ್ಹತಾ ಸ್ಪರ್ಧೆಯಲ್ಲಿ ಅನುಷ್ ಅಗರ್ವಾಲ್ಲಾ ಸ್ಪರ್ಧಿಸಲಿದ್ದಾರೆ.

ಭಾರತದ ಪಂದ್ಯಗಳ ವಿವರ ಇಲ್ಲಿದೆ

  • ಶೂಟಿಂಗ್​​: ಪುರುಷರ​​ ಟ್ರ್ಯಾಪ್ ಅರ್ಹತಾ ಸುತ್ತಿನ 2ನೇ ದಿನ; ಪೃಥ್ವಿರಾಜ್ ತೊಡೈಮನ್, ಮಧ್ಯಾಹ್ನ 12.30ಕ್ಕೆ
  • ಶೂಟಿಂಗ್​: ಟ್ರ್ಯಾಪ್ ಮಹಿಳಾ ಅರ್ಹತಾ ಸುತ್ತಿನ ಮೊದಲ ದಿನ, ಶ್ರೇಯಸಿ ಸಿಂಗ್/ ರಾಜೇಶ್ವರಿ ಕುಮಾರಿ, ಮಧ್ಯಾಹ್ನ 12.30ಕ್ಕೆ
  • ಶೂಟಿಂಗ್: 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ, ಕಂಚಿನ ಪದಕ ಪಂದ್ಯ, ಮನು ಭಾಕರ್-ಸರಬ್ಜೋತ್ ಸಿಂಗ್, ಮಧ್ಯಾಹ್ನ 1 ಗಂಟೆಗೆ
  • ಟೇಬಲ್ ಟೆನಿಸ್- ಮಹಿಳೆಯರ ಸಿಂಗಲ್ಸ್, ಶ್ರೀಜಾ ಅಕುಲಾ
  • ರೋಯಿಂಗ್- ಪುರುಷರ ಸಿಂಗಲ್ಸ್ ಸ್ಕಲ್ ಕ್ವಾರ್ಟರ್ ಫೈನಲ್ 4, ಬಲರಾಜ್ ಪನ್ವಾರ್ , ಮಧ್ಯಾಹ್ನ 1.40ರಿಂದ
  • ಈಕ್ವೆಸ್ಟ್ರಿಯನ್ ವೈಯಕ್ತಿಕ ಡ್ರೆಸೇಜ್​- ಅನುಷ್ ಅಗರ್ವಾಲಾ, ಮಧ್ಯಾಹ್ನ 2.30 ರಿಂದ
  • ಹಾಕಿ: ಪುರುಷರ ಪೂಲ್ ಬಿ ಪಂದ್ಯ: ಐರ್ಲೆಂಡ್ ವಿರುದ್ಧ , ಸಂಜೆ 4.45ಕ್ಕೆ
  • ಆರ್ಚರಿ: ಮಹಿಳೆಯರ ವೈಯಕ್ತಿಕ 32ನೇ ಸುತ್ತು, ಅಂಕಿತಾ ಭಕತ್, ಸಂಜೆ 5.14ಕ್ಕೆ
  • ಆರ್ಚರಿ: ಮಹಿಳಾ ವೈಯಕ್ತಿಕ 32ನೇ ಸುತ್ತು, ಭಜನ್ ಕೌರ್, ಸಂಜೆ 5.27ಕ್ಕೆ
  • ಬ್ಯಾಡ್ಮಿಂಟನ್: ಪುರುಷರ ಡಬಲ್ಸ್ ಗ್ರೂಪ್ ಸಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ, ಸಂಜೆ 5.30
  • ಬ್ಯಾಡ್ಮಿಂಟನ್: ಮಹಿಳಾ ಡಬಲ್ಸ್ ಗ್ರೂಪ್ ಸಿ: ತನಿಶಾ ಕ್ರಾಸ್ಟೊ/ಅಶ್ವಿನಿ ಪೊನ್ನಪ್ಪ, ಸಂಜೆ 6.20ಕ್ಕೆ
  • ಬಾಕ್ಸಿಂಗ್: ಪುರುಷರ 51 ಕೆ.ಜಿ ವಿಭಾಗ : ಅಮಿತ್ ಪಂಗಲ್, ಸಂಜೆ 7.16ಕ್ಕೆ
  • ಬಾಕ್ಸಿಂಗ್: ಪುರುಷರ 57 ಕೆ.ಜಿ ವಿಭಾಗ ಜೈಸ್ಮಿನ್ ಲಂಬೋರಿಯಾ, ರಾತ್ರಿ 9.08ರಿಂದ
  • ಆರ್ಚರಿ: ಪುರುಷರ ವೈಯಕ್ತಿಕ ಸುತ್ತಿನಲ್ಲಿ 32 ಧೀರಜ್ ಬೊಮ್ಮದೇವರ, 10.46ರಿಂದ
  • ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ ವಿಭಾಗ, ಪ್ರೀತಿ, 01.06 ಗಂಟೆಗೆ
Continue Reading

ಪ್ರಮುಖ ಸುದ್ದಿ

Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

Asia Cup cricket : ಈ ಟೂರ್ನಿಯ 2026 ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​ಗೆ ಪೂರ್ವಭಾವಿಯಾಗಿ ನಡೆಯಲಿದೆ. ಸಾಂಪ್ರದಾಯಿಕವಾಗಿ ಏಷ್ಯಾ ಕಪ್ ಐಸಿಸಿ ಪಂದ್ಯಾವಳಿಯ ಪೂರ್ವಸಿದ್ಧತಾ ಟೂರ್ನಿಯಾಗಿ ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮುಂಬರುವ ವಿಶ್ವಕಪ್​ಗೆ ಮೊದಲು ಆಡಲಾಗುತ್ತದೆ. 2023 ರಲ್ಲಿ, ಏಷ್ಯಾ ಕಪ್ ಅನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯೋಜಿಸಿತು.

VISTARANEWS.COM


on

Asia Cup cricket
Koo

ನವದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತನ್ನ ಆಹ್ವಾನದಲ್ಲಿ ಘೋಷಿಸಿದಂತೆ 2025ರ ಆವೃತ್ತಿಯ ಏಷ್ಯಾ ಕಪ್ ಭಾರತದಲ್ಲಿ (Asia Cup Cricket) ನಡೆಯಲಿದೆ. ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಮುಂಬರುವ ಆವೃತ್ತಿಯಲ್ಲಿ ಟಿ 20 ಸ್ವರೂಪದಲ್ಲಿ ನಡೆಯಲಿದ್ದು ಭಾರತದ ಅಭಿಮಾನಿಗಳಿಗೆ ಖುಷಿಯ ವಿಚಾರವಾಗಿದೆ.

ಈ ಟೂರ್ನಿಯ 2026 ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​ಗೆ ಪೂರ್ವಭಾವಿಯಾಗಿ ನಡೆಯಲಿದೆ. ಸಾಂಪ್ರದಾಯಿಕವಾಗಿ ಏಷ್ಯಾ ಕಪ್ ಐಸಿಸಿ ಪಂದ್ಯಾವಳಿಯ ಪೂರ್ವಸಿದ್ಧತಾ ಟೂರ್ನಿಯಾಗಿ ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮುಂಬರುವ ವಿಶ್ವಕಪ್​ಗೆ ಮೊದಲು ಆಡಲಾಗುತ್ತದೆ. 2023 ರಲ್ಲಿ, ಏಷ್ಯಾ ಕಪ್ ಅನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯೋಜಿಸಿತು. ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ನಿರಾಕರಿಸಿದ ಕಾರಣ ‘ಹೈಬ್ರಿಡ್ ಮಾದರಿಯಲ್ಲಿ’ ನಡೆಸಲಾಯಿತು. ಇದರ ಪರಿಣಾಮವಾಗಿ, ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದವು.

2027ರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದ್ದು, ಬಾಂಗ್ಲಾದೇಶದಲ್ಲಿ ಆತಿಥ್ಯ ವಹಿಸಲಿದೆ. ಅದೇ ವರ್ಷ ದಕ್ಷಿಣ ಆಫ್ರಿಕಾದಲ್ಲಿ ಯೋಜಿಸಲಾದ 50 ಓವರ್ ಗಳ ವಿಶ್ವಕಪ್ ಗೆ ಪೂರ್ವಭಾವಿಯಾಗಿ ನಡೆಯಲಿದೆ.

2025ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ಏಷ್ಯಾಕಪ್ ಹಾಗೂ 2027ರಲ್ಲಿ ಬಾಂಗ್ಲಾದೇಶದಲ್ಲಿ ನಡೆಯಲಿರುವ 50 ಓವರ್ಗಳ ಏಷ್ಯಾಕಪ್​ನಲ್ಲಿ ತಲಾ 13 ಪಂದ್ಯಗಳು ನಡೆಯಲಿವೆ.

‘ಪುರುಷರ ಏಷ್ಯಾ ಕಪ್ ಪಂದ್ಯಾವಳಿ’ ಎಂದರೆ ನಿಯೋಜಿತ ಸದಸ್ಯರನ್ನು ಒಳಗೊಂಡ ಎಸಿಸಿ ಆಯೋಜಿಸುವ ಮತ್ತು ನಿರ್ವಹಿಸುವ ದ್ವೈವಾರ್ಷಿಕ ಹಿರಿಯ ಪುರುಷರ ಕ್ರಿಕೆಟ್ ಪಂದ್ಯಾವಳಿಯಾಗಿದೆ. ಅಫ್ಘಾನಿಸ್ತಾನ, ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶದ ತಂಡಗಳು ಮತ್ತು ಅರ್ಹತಾ ಸ್ಪರ್ಧೆಗಳ ಮೂಲಕ ಆಯ್ಕೆಯಾದ ಎಸಿಸಿಯ ಟೆಸ್ಟ್ ಅಲ್ಲದ ಸದಸ್ಯ ತಂಡವೊಂದು ಭಾಗವಹಿಸುತ್ತದೆ ಎಂದು ಎಸಿಸಿ ತನ್ನ ಐಇಒಐ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವರ್ಷ ಏಷ್ಯಾಕಪ್ ಟಿ20 ಟ್ರೋಫಿ ಗೆದ್ದ ಬಳಿಕ ಭಾರತ ಹಾಲಿ ಚಾಂಪಿಯನ್ ಎನಿಸಿಕೊಂಡಿದೆ. ಕೊಲಂಬೊದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವನ್ನು ವಿರುದ್ಧ 10 ವಿಕೆಟ್​ಗಳ ಗೆಲವು ದಾಖಲಿಸಲಾಗಿತ್ತು. 7-1-21-6 ಅಂಕಗಳ ನಂತರ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಷ್ಯಾಕಪ್ ಇತಿಹಾಸದಲ್ಲಿ ಭಾರತ ಅತ್ಯಂತ ಯಶಸ್ವಿ ತಂಡವಾಗಿದ್ದು, ಎಂಟು ಬಾರಿ ಪ್ರಶಸ್ತಿ ಗೆದ್ದಿದೆ.

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

Paris Olympics 2024 : ಕ್ವಾರ್ಟರ್ ಫೈನಲ್​ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಈಗ ಇಂಡೋನೇಷ್ಯಾ ವಿರುದ್ಧದ ಮುಂಬರುವ ಪಂದ್ಯದತ್ತ ಗಮನ ಹರಿಸಲಿದ್ದು, ಗುಂಪು ಹಂತವನ್ನು ಉನ್ನತ ಮಟ್ಟದಲ್ಲಿ ಮುಗಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕಕ್ಕಾಗಿ ತಮ್ಮ ಪ್ರಭಾವಶಾಲಿ ಓಟ ಮತ್ತು ಸವಾಲನ್ನು ಮುಂದುವರಿಸಲು ಭಾರತೀಯ ಜೋಡಿ ಉತ್ಸುಕವಾಗಿದೆ.

VISTARANEWS.COM


on

Paris Olympics 2024 :Satwik-Chirag reach men's doubles quarter-finals
Koo

ಬೆಂಗಳೂರು: ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್​​ ತಲುಪಿದ್ದಾರೆ. ಈ ಮೂಲಕ ಅವರು ಒಲಿಂಪಿಕ್ಸ್​ನಲ್ಲಿ ಎಂಟರ ಘಟ್ಟಕ್ಕೇರಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುಂಪು ಹಂತದಲ್ಲಿ ಇವರಿಬ್ಬರ ಪ್ರಭಾವಶಾಲಿ ಪ್ರದರ್ಶನವು ಪ್ಯಾರಿಸ್ ಒಲಿಂಪಿಕ್ಸ್ ನ ಕೊನೆಯ ಎಂಟರಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿತು. ಸಾತ್ವಿಕ್-ಚಿರಾಗ್ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ ಮತ್ತು ಮಾರ್ವಿನ್ ಸೀಡೆಲ್ ಅವರನ್ನು ಎದುರಿಸಬೇಕಿತ್ತು, ಆದರೆ ಲ್ಯಾಮ್ಸ್ಫಸ್ ಅವರ ಗಾಯದಿಂದಾಗಿ ಜರ್ಮನ್ ಜೋಡಿ ಹಿಂದೆ ಸರಿದರು. ಹೀಗಾಗಿ ಕ್ವಾರ್ಟರ್​ ಫೈನಲ್ ಸ್ಥಾನ ಖಚಿತಪಡಿಸಿಕೊಂಡರು.

ವಿಶ್ವದ 3ನೇ ಶ್ರೇಯಾಂಕಿತ ಜೋಡಿ ಪ್ಯಾರಿಸ್ 2024ರ ಅಭಿಯಾನವನ್ನು 40ನೇ ಶ್ರೇಯಾಂಕಿತ ಫ್ರಾನ್ಸ್ನ ಲ್ಯೂಕಾಸ್ ಕಾರ್ವಿ ಮತ್ತು ರೋನನ್ ಲಾಬರ್ ವಿರುದ್ಧ ಜಯಗಳಿಸುವ ಮೂಲಕ ಆರಂಭಿಸಿತು. ಕಾರ್ವಿ ಮತ್ತು ಲಾಬರ್ ನಂತರ ವಿಶ್ವದ 7 ನೇ ಶ್ರೇಯಾಂಕದ ಇಂಡೋನೇಷ್ಯಾದ ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಮತ್ತು ಫಜರ್ ಅಲ್ಫಿಯಾನ್ ವಿರುದ್ಧ ಸೋತರು. ಎರಡು ಸೋಲುಗಳೊಂದಿಗೆ ಫ್ರೆಂಚ್ ಜೋಡಿ ನಿರ್ಗಮಿಸಿದ್ದು, ಚಿರಾಗ್-ಸಾತ್ವಿಕ್ ಮತ್ತು ಅರ್ಡಿಯಾಂಟೊ-ಅಲ್ಫಿಯಾನ್ ಸಿ ಗುಂಪಿನ ಅಗ್ರ ಎರಡು ಸ್ಥಾನಗಳನ್ನು ಪಡೆಯುವುದು ಖಚಿತವಾಗಿದೆ. ಗುಂಪಿನ ಅಗ್ರ ಸ್ಥಾನಕ್ಕಾಗಿ ಭಾರತ ಮತ್ತು ಇಂಡೋನೇಷ್ಯಾ ಜೋಡಿಗಳು ಮಂಗಳವಾರ ಸ್ಪರ್ಧಿಸಲಿವೆ.

ಇದನ್ನೂ ಓದಿ: Paris Olympics 2024 : ಭಾರತಕ್ಕೆ ಶೂಟಿಂಗ್​ನಲ್ಲಿ ಕಂಚಿನ ಪದಕ ಜಸ್ಟ್​ ಮಿಸ್​!

ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಭಾರತದ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ 21-11, 21-12 ಅಂತರದಲ್ಲಿ ವಿಶ್ವದ 4ನೇ ಶ್ರೇಯಾಂಕಿತ ಜಪಾನ್​​ ನಮಿ ಮತ್ಸುಯಾಮಾ ಮತ್ತು ಚಿಹಾರು ಶಿಡಾ ವಿರುದ್ಧ ಸೋತು ನಿರ್ಗಮಿಸುವ ಅಂಚಿನಲ್ಲಿದ್ದಾರೆ. ಪ್ರಸ್ತುತ ಸಿ ಗುಂಪಿನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತದ ಜೋಡಿ ತನ್ನ ಆರಂಭಿಕ ಪಂದ್ಯದಲ್ಲಿ ಎಂಟನೇ ಶ್ರೇಯಾಂಕದ ಕಿಮ್ ಸೊ-ಯೊಂಗ್ ಮತ್ತು ದಕ್ಷಿಣ ಕೊರಿಯಾದ ಕಾಂಗ್ ಹೀ-ಯೊಂಗ್ ವಿರುದ್ಧ 21-18, 21-10 ಅಂತರದಲ್ಲಿ ಸೋತಿತ್ತು. ವಿಶ್ವ ರ್ಯಾಂಕಿಂಗ್​​ನಲ್ಲಿ 19ನೇ ಸ್ಥಾನದಲ್ಲಿರುವ ಕ್ರಾಸ್ಟೊ-ಪೊನ್ನಪ್ಪ ಮಂಗಳವಾರ ನಡೆಯಲಿರುವ ಅಂತಿಮ ಗ್ರೂಪ್ ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸೆಟ್ಯಾನಾ ಮಾಪಾಸಾ ಮತ್ತು 26ನೇ ಶ್ರೇಯಾಂಕದ ಏಂಜೆಲಾ ಯು ಅವರನ್ನು ಎದುರಿಸಲಿದ್ದಾರೆ.

ಪದಕದ ಮೇಲೆ ಕಣ್ಣು: ಭಾರತ ಬ್ಯಾಡ್ಮಿಂಟನ್

ಕ್ವಾರ್ಟರ್ ಫೈನಲ್​ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಈಗ ಇಂಡೋನೇಷ್ಯಾ ವಿರುದ್ಧದ ಮುಂಬರುವ ಪಂದ್ಯದತ್ತ ಗಮನ ಹರಿಸಲಿದ್ದು, ಗುಂಪು ಹಂತವನ್ನು ಉನ್ನತ ಮಟ್ಟದಲ್ಲಿ ಮುಗಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕಕ್ಕಾಗಿ ತಮ್ಮ ಪ್ರಭಾವಶಾಲಿ ಓಟ ಮತ್ತು ಸವಾಲನ್ನು ಮುಂದುವರಿಸಲು ಭಾರತೀಯ ಜೋಡಿ ಉತ್ಸುಕವಾಗಿದೆ.

ಇವರಿಬ್ಬರ ಸಾಧನೆಯು ಭಾರತೀಯ ಬ್ಯಾಡ್ಮಿಂಟನ್​ಗೆ ಮಹತ್ವದ ಮೈಲಿಗಲ್ಲಾಗಿದೆ. ಇದು ಅಭಿಮಾನಿಗಳಲ್ಲಿ ಅಪಾರ ಉತ್ಸಾಹವನ್ನು ಸೃಷ್ಟಿಸಿದೆ. ಒಲಿಂಪಿಕ್ಸ್​ನಲ್ಲಿ ಇತಿಹಾಸವನ್ನು ಸೃಷ್ಟಿಸಲು ಎದುರು ನೋಡುತ್ತಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಅವರಿಗಾಗಿ ಇಡೀ ದೇಶವು ಬೆನ್ನೆಲುಬಾಗಿದೆ.

ಲಕ್ಷ್ಯ ಸೇನ್​ಗೆ ಜಯ

ಲಾ ಚಾಪೆಲ್ ಅರೆನಾದಲ್ಲಿ ನಡೆದ ಪುರುಷರ ಸಿಂಗಲ್ಸ್ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತದ ಲಕ್ಷ್ಯ ಸೇನ್ ಬೆಲ್ಜಿಯಂನ ಜೂಲಿಯನ್ ಕರಾಗಿ ವಿರುದ್ಧ 21-19, 21-14 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್​​ನಲ್ಲಿ 18ನೇ ಸ್ಥಾನದಲ್ಲಿರುವ ಸೇನ್ ಮೊದಲ ಗೇಮ್​​​ನಲ್ಲಿ ಕಠಿಣ ಪ್ರದರ್ಶನ ನೀಡಿ ನಂತರದ ಹಂತಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ನಂತರ ಅವರು ಎರಡನೇ ಗೇಮ್ ನಲ್ಲಿ ವಿಶ್ವದ 52 ನೇ ಶ್ರೇಯಾಂಕದ ಜೂಲಿಯನ್ ಕರಾಗ್ಗಿ ಅವರನ್ನು ಸೋಲಿಸಿ ಬಲವಾದ ಗೆಲುವು ಸಾಧಿಸಿದರು.

ಲಕ್ಷ್ಯ ಸೇನ್ ಗ್ವಾಟೆಮಾಲಾದ ಕೆವಿನ್ ಕಾರ್ಡನ್ ವಿರುದ್ಧ ಜಯಗಳಿಸುವ ಮೂಲಕ ತಮ್ಮ ಒಲಿಂಪಿಕ್ ಅಭಿಯಾನವನ್ನು ಪ್ರಾರಂಭಿಸಿದ್ದರು.

Continue Reading

ಪ್ರಮುಖ ಸುದ್ದಿ

Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

Rohit Sharma : ಏಕದಿನ ಸರಣಿಗೆ ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ ನೀಡಲಾಗುತ್ತದೆಯೇ ಎಂಬ ಬಗ್ಗೆ ಊಹಾಪೋಹಗಳು ಇದ್ದವು. ಆದರೆ, ರೋಹಿತ್ ಅವರನ್ನು ಏಕದಿನ ನಾಯಕನನ್ನಾಗಿ ಘೋಷಿಸಲಾಯಿತು. ಕೊಹ್ಲಿಯನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಯಿತು. 2024 ರ ಟಿ 20 ವಿಶ್ವಕಪ್​ನಲ್ಲಿ ಭಾರತದ ಗೆಲುವಿನ ಒಂದು ತಿಂಗಳ ನಂತರ ಭಾರತೀಯ ದಿಗ್ಗಜರು ಕ್ರಿಕೆಟ್ ಮೈದಾನಕ್ಕೆ ಮರಳಲಿದ್ದಾರೆ.

VISTARANEWS.COM


on

Koo

ಬೆಂಗಳೂರು: ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಭಾರತದ ಸ್ಟಾರ್ ಆಟಗಾರರು ಏಕ ದಿನ ಸರಣಿಗಾಗಿ ಕೊಲಂಬೊಗೆ ಬಂದಿಳಿದಿದ್ದಾರೆ. ಅವರು ಶ್ರೀಲಂಕಾ ವಿರುದ್ಧದ ಭಾರತದ ಏಕದಿನ ಸರಣಿಗೆ ಮುಂಚಿತವಾಗಿ ತರಬೇತಿಯಲ್ಲಿ ಭಾಗವಹಿಸಲಿದ್ದಾರೆ. ಜುಲೈ 29, ಸೋಮವಾರ ಮಧ್ಯಾಹ್ನ ಕೊಹ್ಲಿ ದ್ವೀಪ ರಾಷ್ಟ್ರಕ್ಕೆ ಬಂದಿಳಿದಿದ್ದಾರೆ. ರೋಹಿತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಕುಲದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಭಾನುವಾರ ಲಂಕಾ ತಲುಪಿದ್ದಾರೆ. 50 ಓವರ್​ಗಳ ಸರಣಿ ಪ್ರಾರಂಭವಾಗುವ ಮೊದಲು ಕೊಹ್ಲಿ ಮತ್ತು ರೋಹಿತ್ ಅಭ್ಯಾಸದಲ್ಲಿ ಭಾಗವಹಿಸಲಿದ್ದಾರೆ. ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಜೂನ್ 29 ರಂದು ಸ್ಟಾರ್ ಜೋಡಿ ಟಿ 20 ಯಿಂದ ನಿವೃತ್ತಿ ಘೋಷಿಸಿದ್ದರು.

ಏಕದಿನ ಸರಣಿಗೆ ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ ನೀಡಲಾಗುತ್ತದೆಯೇ ಎಂಬ ಬಗ್ಗೆ ಊಹಾಪೋಹಗಳು ಇದ್ದವು. ಆದರೆ, ರೋಹಿತ್ ಅವರನ್ನು ಏಕದಿನ ನಾಯಕನನ್ನಾಗಿ ಘೋಷಿಸಲಾಯಿತು. ಕೊಹ್ಲಿಯನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಯಿತು. 2024 ರ ಟಿ 20 ವಿಶ್ವಕಪ್​ನಲ್ಲಿ ಭಾರತದ ಗೆಲುವಿನ ಒಂದು ತಿಂಗಳ ನಂತರ ಭಾರತೀಯ ದಿಗ್ಗಜರು ಕ್ರಿಕೆಟ್ ಮೈದಾನಕ್ಕೆ ಮರಳಲಿದ್ದಾರೆ. ಆ ದಿನವೇ, ರೋಹಿತ್ ಮತ್ತು ಕೊಹ್ಲಿ ಭಾರತಕ್ಕಾಗಿ ಕಿರು ಸ್ವರೂಪದಿಂದ ನಿವೃತ್ತಿ ಘೋಷಿಸಿದ್ದರು. ಆಟದ ಉಳಿದ ಎರಡು ಸ್ವರೂಪಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಕುಟುಂಬದೊಂದಿಗೆ ಸಮಯ ಕಳೆದ ಕೊಹ್ಲಿ-ರೋಹಿತ್

ಟಿ 20 ಐ ನಿವೃತ್ತಿಯ ನಂತರ, ಕೊಹ್ಲಿ ಮತ್ತು ರೋಹಿತ್ ತಮ್ಮ ಕುಟುಂಬಗಳೊಂದಿಗೆ ಸುಂದರ ಸಮಯವನ್ನು ಕಳೆದರು. ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಇಬ್ಬರು ಮಕ್ಕಳಾದ ವಮಿಕಾ ಮತ್ತು ಅಕೆ ಕೊಹ್ಲಿ ಅವರೊಂದಿಗೆ ಲಂಡನ್ ಗೆ ಹಾರಿದ್ದಾರೆ. ರೋಹಿತ್ ತಮ್ಮ ಪತ್ನಿ ರಿತಿಕಾ ಸಜ್ದೇಹ್ ಮತ್ತು ಮಗಳು ಸಮೈರಾ ಅವರೊಂದಿಗೆ ಯುಎಸ್ಎಗೆ ತೆರಳಿದ್ದರು.

ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರು ಸಜ್ಜು

ಈ ಸರಣಿಯಲ್ಲಿ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ತಂಡಕ್ಕಾಗಿ ಆಡಲಿದ್ದಾಋಎ. ಕೆಎಲ್ ರಾಹುಲ್ ಕೂಡ ಸರಣಿಯಲ್ಲಿ ಪುನರಾಗಮನ ಮಾಡಲಿದ್ದಾರೆ. ಟಿ 20 ಐ ಸರಣಿಯಿಂದ ವಿಶ್ರಾಂತಿ ಪಡೆದ ವಿಶ್ವ ಚಾಂಪಿಯನ್ ಕುಲದೀಪ್ ಯಾದವ್ ಮರಳಲಿದ್ದಾರೆ. ಹರ್ಷಿತ್ ರಾಣಾ ಕೂಡ ಸರಣಿಯಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಲು ಎದುರು ನೋಡುತ್ತಿದ್ದಾರೆ. ಈ ಆಟಗಾರರು ಕೊಲಂಬೊದಲ್ಲಿ ಭಾರತದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರ ಅಡಿಯಲ್ಲಿ ತರಬೇತಿ ಪಡೆಯಲಿದ್ದಾರೆ.

ಇದನ್ನೂ ಓದಿ: Paris Olympics 2024 : ಮನು ಭಾಕರ್ ಸೇರಿದಂತೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರ ಎಕ್ಸ್​ ಖಾತೆಯಲ್ಲಿ ಐಫೆಲ್​ ಟವರ್ ಚಿತ್ರ

ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ನೇತೃತ್ವದ ಭಾರತ ತಂಡವು ಪಲ್ಲೆಕೆಲೆಯಲ್ಲಿ ನಡೆಯಲಿರುವ 3 ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾಗವಹಿಸುತ್ತಿದೆ. ಶ್ರೀಲಂಕಾ ವಿರುದ್ಧ ಭಾರತ 2-0 ಮುನ್ನಡೆ ಸಾಧಿಸಿದ್ದು, ಜುಲೈ 30 ರಂದು ನಡೆಯಲಿರುವ 3 ನೇ ಟಿ 20 ಐ ಪಂದ್ಯದಲ್ಲಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಟಿ 20 ಐ ತಂಡದ ಅನೇಕ ಆಟಗಾರರು ಏಕದಿನ ತಂಡವನ್ನು ಸೇರಿಕೊಳ್ಳಲಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ 50 ಓವರ್​ಗಳ ಸ್ವರೂಪದ ಸರಣಿ ಆಗಸ್ಟ್ 2 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 7 ರವರೆಗೆ ನಡೆಯಲಿದೆ.

Continue Reading
Advertisement
Sadhguru  Jaggi Vasudev
ಆರೋಗ್ಯ10 mins ago

Sadhguru Jaggi Vasudev: ನಮ್ಮ ಹೃದಯವನ್ನು ಜೋಪಾನವಾಗಿ ಇಟ್ಟುಕೊಳ್ಳುವುದು ಹೇಗೆ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Paris Olympics 2024
ಕ್ರೀಡೆ25 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Side Effects Of Dry Fruits
ಆರೋಗ್ಯ25 mins ago

Side Effects Of Dry Fruits: ಆರೋಗ್ಯಕ್ಕೆ ಒಳ್ಳೆಯದೆಂದು ಒಣಬೀಜಗಳನ್ನು ಅತಿಯಾಗಿ ತಿನ್ನುತ್ತೀರಾ? ಎಚ್ಚರ!

Karnataka Weather Forecast
ಮಳೆ25 mins ago

Karnataka Weather : 8 ಜಿಲ್ಲೆಗಳಿಗೆ ವ್ಯಾಪಕ ಮಳೆ ಎಚ್ಚರಿಕೆ, ಬಿರುಗಾಳಿ ಸಾಥ್‌

dina bhavishya
ಭವಿಷ್ಯ55 mins ago

Dina Bhavishya : ಬಣ್ಣದ ಮಾತುಗಳನ್ನು ನಂಬಿ ಈ ರಾಶಿಯವರು ಯಾವುದೇ ವ್ಯವಹಾರ ಮಾಡ್ಬೇಡಿ

NEET-UG
ಪ್ರಮುಖ ಸುದ್ದಿ6 hours ago

NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

ವೈರಲ್ ನ್ಯೂಸ್6 hours ago

Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Paris Olympics 2024
ಕ್ರೀಡೆ6 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಈಜುಪಟುವಿಗೆ ಕೊರೊನಾ ಸೋಂಕು!

Asia Cup cricket
ಪ್ರಮುಖ ಸುದ್ದಿ6 hours ago

Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

Viral video
ವೈರಲ್ ನ್ಯೂಸ್7 hours ago

Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ12 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ13 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ16 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌