Vijayanagara News: ಕರ್ನಾಟಕ ಸಂಭ್ರಮ-50ರ ಆಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಸಚಿವ ಶಿವರಾಜ ತಂಗಡಗಿ ಸೂಚನೆ - Vistara News

ವಿಜಯನಗರ

Vijayanagara News: ಕರ್ನಾಟಕ ಸಂಭ್ರಮ-50ರ ಆಚರಣೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಸಚಿವ ಶಿವರಾಜ ತಂಗಡಗಿ ಸೂಚನೆ

Vijayanagara News: ವಿಜಯನಗರ ಜಿಲ್ಲೆಯ ಡಿಸಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸಂಭ್ರಮ 50ರ ಆಚರಣೆಯ ಪೂರ್ವಭಾವಿ ಸಭೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಜರುಗಿತು.

VISTARANEWS.COM


on

Make Karnataka Sambhrama 50 a success says Minister Shivaraj Thangadagi instructs
ಹೊಸಪೇಟೆಯ ಡಿಸಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ಸಂಭ್ರಮ 50ರ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸಪೇಟೆ: ಕರ್ನಾಟಕ ಸಂಭ್ರಮ 50ರ ಆಚರಣೆಯು ರಾಜ್ಯಾದ್ಯಂತ ವರ್ಷವಿಡೀ ಸಂಭ್ರಮಾಚರಣೆ ಮಾಡಬೇಕೆಂದು ಸರ್ಕಾರ (Government) ನಿರ್ಧರಿಸಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು (Successful) ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕರ್ನಾಟಕ ಸಂಭ್ರಮ 50ರ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದು ಒಂದು ವರ್ಷದ ಕಾರ್ಯಕ್ರಮವಾಗಿದ್ದು, ಯಾವುದೇ ನಿರ್ಲಕ್ಷ್ಯ ವಹಿಸದೇ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

1973 ರ ಇತಿಹಾಸವನ್ನೇ ಹಂಪಿಯಲ್ಲಿ ಮತ್ತೊಮ್ಮೆ ಮರು ಕಳಿಸುವಂತೆ ಆಗಬೇಕು ಎಂದ ಅವರು, 1973 ರಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಡಿ. ದೇವರಾಜ ಅರಸು ಅವರು ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಿದರು. ನ.1 ಕ್ಕೆ ಇದು 50 ವರ್ಷವಾಗುತ್ತಿದೆ, ಹಾಗಾಗಿ ಮುಖ್ಯಮಂತ್ರಿ ಅವರು ಈ ಕಾರ್ಯಕ್ರಮವನ್ನು ಇಡೀ ರಾಜ್ಯದ್ಯಾಂತ ವರ್ಷಪೂರ್ತಿ ಕಾರ್ಯಕ್ರಮವನ್ನಾಗಿ ಆಚರಿಸಬೇಕು. ಹೆಸರು ಆಗಲಿ ಕರ್ನಾಟಕ, ಉಸಿರು ಆಗಲಿ ಕನ್ನಡ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಇದನ್ನೂ ಓದಿ: IND vs BAN: ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿ ಭಾರತ; ಬಾಂಗ್ಲಾ ಎದುರಾಳಿ

ಈ ನಿಟ್ಟಿನಲ್ಲಿ ಸಾಹಿತಿಗಳು, ಹೋರಾಟಗಾರರ ಹಾಗೂ ಕಲಾವಿದರ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ ಎಂದ ಅವರು, ನವೆಂಬರ್ 2 ರಂದು ಹಂಪಿಯಲ್ಲಿ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಕರ್ನಾಟಕ ಜ್ಯೋತಿಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಜ್ಯೋತಿಯು ಸಂಚರಿಸಿ ಕೊಪ್ಪಳ ಮೂಲಕ ನ.3ರಂದು ಗದಗ ತಲುಪಲಿದ್ದು, ಕರ್ನಾಟಕ ಜ್ಯೋತಿಗೆ ಸಂಚರಿಸುವ ಮಾರ್ಗದಲ್ಲಿ ಸೂಕ್ತ ಭದ್ರತೆಯನ್ನು ಒದಗಿಸಲು ಸೂಚಿಸಿದರು.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಮಾತನಾಡಿ, ಕರ್ನಾಟಕ ರಾಜ್ಯ ಎಂಬ ಹೆಸರನ್ನು ಮರುನಾಮಕರಣ ಮಾಡಿ ನ.1 ಕ್ಕೆ 50 ವರ್ಷಗಳು ತುಂಬಲಿದೆ. ಹೀಗಾಗಿ ಈ ವರ್ಷ ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮವನ್ನು ಯಶ್ವಸಿಯಾಗಿ ನೆರವೇರಿಸಲು ಸಮಿತಿಯನ್ನು ರಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: Navaratri Dandiya: ನವರಾತ್ರಿ ದಾಂಡಿಯಾ ಸಂಭ್ರಮಕ್ಕಷ್ಟೇ ಅಲ್ಲ, ಆರೋಗ್ಯಕ್ಕೂ ಹೇಗೆ ಪ್ರಯೋಜನ ನೋಡಿ!

ಈ ಸಂದರ್ಭದಲ್ಲಿ ವಿಜಯನಗರ ಶಾಸಕ ಎಚ್.ಆರ್.ಗವಿಯಪ್ಪ, ಕಂಪ್ಲಿ ಶಾಸಕ ಗಣೇಶ, ಜಿಲ್ಲಾಧಿಕಾರಿ ದಿವಾಕರ ಎಂ.ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್., ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Karnataka Weather Forecast: ಬೆಂಗಳೂರಲ್ಲಿ ಸೂರ್ಯ ಮರೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯು (Rain news) ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬುಧವಾರ ಕರ್ನಾಟಕದ ಕರಾವಳಿಯಲ್ಲಿ ಮಳೆಯು (Heavy rain) ಅಬ್ಬರಿಸಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಗೆ ಯಾವುದೇ ಮಳೆ ಸೂಚನೆ ಇಲ್ಲ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಹಾಗೂ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

ಕರ್ನಾಟದಲ್ಲಿ ಮಳೆಗಾಲ ಆರಂಭವಾಗಿದೆ. ಕೆಲವು ಪ್ರವಾಸಿ (Karnataka Tour) ತಾಣಗಳಂತೂ ನಯನ ಮನೋಹರವಾಗಿ ಕಂಗೊಳಿಸುತ್ತಿವೆ. ಮಾಂತ್ರಿಕವಾಗಿ ಸಿಂಗಾರಗೊಂಡಂತಿವೆ. ದೂರದೂರದ ಪ್ರವಾಸಿಗರನ್ನು (tourists) ತನ್ನತ್ತ ಆಕರ್ಷಿಸುತ್ತಿವೆ. ಒಂದೆಡೆ ಪಶ್ಚಿಮ ಘಟ್ಟಗಳು (Western Ghats), ಇನ್ನೊಂದೆಡೆ ಅರಬ್ಬಿ ಸಮುದ್ರದ (arabian sea) ಸಮೀಪವಿರುವ ಕರಾವಳಿ ಪ್ರದೇಶಗಳು ಮಳೆಯ ಧಾರೆಯಲ್ಲಿ ತೋಯ್ದು ತನ್ನನ್ನು ತಾನು ಸ್ವಚ್ಛ, ಸುಂದರ ಮತ್ತಷ್ಟು ಸಿಂಗಾರಗೊಳಿಸಿದಂತೆ ಭಾಸವಾಗುತ್ತಿದೆ.

ಭಾರೀ ಮಳೆಯ ಆರಂಭದ ದಿನಗಳಲ್ಲಿ ಕರ್ನಾಟಕದ ಹವಾಮಾನವು ಆರ್ದ್ರವಾಗಿರುತ್ತದೆ ಮತ್ತು ಆಹ್ಲಾದಕರವಾಗಿರುತ್ತದೆ. ಕರ್ನಾಟಕದ ಕರಾವಳಿ ಪ್ರದೇಶಗಳು ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಸಿರಿನಿಂದ ಚಿತ್ರಿಸಲ್ಪಟ್ಟಂತೆ ಭಾಸವಾಗುತ್ತದೆ. ಪಶ್ಚಿಮ ಘಟ್ಟಗಳಂತೂ ಆಕರ್ಷಣೆಯ ಕೇಂದ್ರವಾಗುತ್ತದೆ.

ಹಗಲಿನಲ್ಲಿ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿದರೆ ರಾತ್ರಿಯಲ್ಲಿ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವುದು. ಹಗಲು ಸುರಿಯುವ ಮಳೆಯಲ್ಲೂ ಹೊರಗೆ ಸುತ್ತಾಡಲು ಮನ ಬಯಸಿದರೆ, ರಾತ್ರಿ ತಂಪನೆಯ ವಾತಾವರಣ ಬೆಚ್ಚನೆ ಹೊದಿಕೆ ಹೊದ್ದು ಮಲಗಲು ಪ್ರೇರೇಪಿಸುತ್ತದೆ.

ಜಲಪಾತ, ಗಿರಿಧಾಮ, ಕಡಲ ತೀರಗಳು ಮಳೆಗಾಲದಲ್ಲಿ ಅನ್ವೇಷಿಸಬಹುದಾದ ಸಾಕಷ್ಟು ಆಕರ್ಷಣೆಗಳು ಕರ್ನಾಟಕದಲ್ಲಿವೆ. ಮಾನ್ಸೂನ್ ನಲ್ಲಿ ಈ ಸ್ಥಳಗಳ ಮಾಂತ್ರಿಕ ಮೋಡಿಯನ್ನು ಮಾಡುವುದು. ಮಳೆಗಾಲದಲ್ಲಿ ಕರ್ನಾಟಕದಲ್ಲಿ ನೋಡಲೇ ಬೇಕಾದ 15 ಪ್ರಮುಖ ಸ್ಥಳಗಳಿವೆ. ಇದರ ಸೌಂದರ್ಯವನ್ನು ಈ ಮಳೆಗಾಲದಲ್ಲಿ ಅನುಭವಿಸದೇ ಇದ್ದರೆ ಮುಂದಿನ ಮಳೆಗಾಲದವರೆಗೂ ಕಾಯಬೇಕಾಗುವುದು.


1. ಹಂಪಿ

ಹಂಪಿ ಕರ್ನಾಟಕದ ಅತ್ಯುತ್ತಮ ಮಾನ್ಸೂನ್ ಸ್ಥಳಗಳಲ್ಲಿ ಒಂದಾಗಿದೆ. ಇದ್ದಕ್ಕಿದ್ದಂತೆ, ಹಂಪಿಯ ಶುಷ್ಕ ಪ್ರದೇಶಗಳು ಹಸಿರು ವಿಸ್ತಾರವಾದ ಹುಲ್ಲುಗಾವಲುಗಳಾಗಿ ಬದಲಾಗುತ್ತವೆ. ಹಂಪಿಯ ರಮಣೀಯ ಭೂದೃಶ್ಯವನ್ನು ಹೊಂದಿರುವ ಹೇರಳವಾದ ದೇವಾಲಯಗಳು ಮಳೆಯಲ್ಲಿ ರುದ್ರರಮಣೀಯವಾಗಿ ಕಾಣುತ್ತವೆ. ಇಲ್ಲಿನ ಆಹ್ಲಾದಕರ ವಾತಾವರಣವು ಅದ್ಭುತವಾದ ಫೋಟೋಗಳನ್ನು ಒದಗಿಸುವುದು. ಮೋಡ ಕವಿದ ಆಕಾಶವು ದೇವಾಲಯಗಳ ಫೋಟೋಗಳಿಗೆ ಅದ್ಭುತವಾದ ಹಿನ್ನೆಲೆಯನ್ನು ಉಂಟು ಮಾಡುತ್ತದೆ. ಪ್ರಬಲವಾದ ಹಂಪಿ ನದಿಯಲ್ಲಿ ಕೊರಾಕಲ್ ದೋಣಿ ಸವಾರಿ ಮತ್ತು ರಾಕ್ ಕ್ಲೈಂಬಿಂಗ್ ಹೆಚ್ಚು ರೋಮಾಂಚನಕಾರಿಯಾಗಿರುತ್ತದೆ.


2. ಮರವಂತೆ

ಕರ್ನಾಟಕದ ಎನ್ ಹೆಚ್ 66ರಲ್ಲಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒಂದು ಸಣ್ಣ ಹಳ್ಳಿ ಮರವಂತೆಯಲ್ಲಿ ಸಮುದ್ರ ಮತ್ತು ನದಿ ಒಟ್ಟಿಗೆ ಸೇರುವ ದೃಶ್ಯ ನಯನಮನೋಹರವಾಗಿರುತ್ತದೆ. ಒಂದು ಕಡೆ ಗ್ರಾಮವು ಅರಬ್ಬೀ ಸಮುದ್ರದಿಂದ ಆವೃತವಾಗಿದ್ದರೆ ಇನ್ನೊಂದು ಬದಿಯಲ್ಲಿ ಸೌಪರ್ಣಿಕಾ ನದಿಯು ಶಾಂತವಾಗಿ ಹರಿಯುತ್ತಿರುತ್ತದೆ. ಮಾನ್ಸೂನ್ ಸಮಯದಲ್ಲಿ ಮರವಂತೆಯ ಬೀಚ್ ರಸ್ತೆಯಲ್ಲಿ ನಡೆಯುವುದು ಅತ್ಯುತ್ತಮ ಅನುಭವವನ್ನು ಕೊಡುವುದು.


3. ಆಗುಂಬೆ

ಆಗುಂಬೆಯು ಹಲವಾರು ಜಲಪಾತಗಳು, ನೈಸರ್ಗಿಕ ವೈಭವ ಮತ್ತು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಎತ್ತರದ ಗ್ರಾಮವನ್ನು ‘ದಕ್ಷಿಣದ ಚಿರಾಪುಂಜಿ’ ಎಂದೂ ಕರೆಯುತ್ತಾರೆ. ಯಾಕೆಂದರೆ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳವಾಗಿದೆ. ಅನೇಕ ಜಲಪಾತಗಳಾದ ಒನಕೆ ಅಬ್ಬಿ, ಜೋಗಿ ಗುಂಡಿ ಜಲಪಾತ ಮತ್ತು ಬರ್ಕಾನ ಜಲಪಾತಗಳು ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಅದ್ಭುತಗಳಾಗಿ ರೂಪಾಂತರಗೊಳ್ಳುತ್ತವೆ. ಹಚ್ಚ ಹಸಿರಿನ ಮಳೆಕಾಡುಗಳಲ್ಲಿನ ಹಲವಾರು ಟ್ರೆಕ್ಕಿಂಗ್ ಟ್ರೇಲ್‌ಗಳು ಈ ಸ್ಥಳವನ್ನು ಒದಗಿಸುವ ಇತರ ಆಹ್ಲಾದಕರ ಸಂಗತಿಯಾಗಿದೆ.


4. ಬೀದರ್ ಕೋಟೆ

ಒಂದು ಕಾಲದಲ್ಲಿ ದಕ್ಷಿಣದ ರಾಜಧಾನಿಯಾಗಿದ್ದು 98 ಸ್ಮಾರಕಗಳನ್ನು ಹೊಂದಿರುವ ಜನಪ್ರಿಯ ತಾಣವಾಗಿದೆ. ಬೆಟ್ಟದ ತುದಿಯಲ್ಲಿ ನೆಲೆಸಿರುವ ‘ಸಿಟಿ ಆಫ್ ವಿಸ್ಪರಿಂಗ್ ಸ್ಮಾರಕಗಳು’ ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. 500 ವರ್ಷಗಳಷ್ಟು ಹಳೆಯದಾದ ಬೀದರ್ ಕೋಟೆಯು ಭಾರತದ ಪುರಾತತ್ತ್ವ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಗಳಿಸಿದೆ.


5. ಕೊಡಗು

ಮಳೆಗಾಲದಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣ ಕೊಡಗು. ದಟ್ಟವಾದ ಮಂಜಿನ ವಾತಾವರಣದಲ್ಲಿ ಹಸಿರು ಕಾಫಿ ತೋಟಗಳು ತುಂಬಾ ಆಕರ್ಷಣೀಯವಾಗಿ ಕಾಣುತ್ತದೆ. ಮಡಿಕೇರಿ ಪಟ್ಟಣದ ಅತ್ಯುನ್ನತ ಸ್ಥಳವಾದ ರಾಜಾ ಸೀಟ್‌ನಿಂದ ಮಳೆಯಲ್ಲಿ ಮುಳುಗಿರುವ ನಗರ ಸೌಂದರ್ಯವನ್ನು ವೀಕ್ಷಿಸುವುದು ರೋಮಾಂಚಕ ಅನುಭವವನ್ನು ಕೊಡುತ್ತದೆ.

ಕೂರ್ಗ್‌ನ ಮತ್ತೊಂದು ಪ್ರಸಿದ್ಧ ಪ್ರವಾಸಿ ಆಕರ್ಷಣೆಯಾಗಿರುವ ಅಬ್ಬೆ ಜಲಪಾತ. ಜಲಪಾತದ ಸೌಂದರ್ಯ ಸವಿಯುತ್ತಾ ಬಿಸಿಬಿಸಿ ಕಪ್ ಕಾಫಿ ಸೇವನೆ ಮಾಡುತ್ತ ಕೂರ್ಗ್‌ ನಲ್ಲಿ ಬೈಕ್ ಸವಾರಿ ಮಾಡುವುದು ಅತ್ಯಂತ ಅದ್ಭುತವಾದ ಅನುಭವವನ್ನು ಕೊಡುತ್ತದೆ.


6. ದಾಂಡೇಲಿ

ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಸಸ್ಯ ಮತ್ತು ಪ್ರಾಣಿಗಳ ಸೌಂದರ್ಯ ಸವಿಯಲು ದಾಂಡೇಲಿಯ ಕಾಡುಗಳು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. ದಾಂಡೇಲಿ ವನ್ಯಜೀವಿ ಅಭಯಾರಣ್ಯವು ಕರ್ನಾಟಕದ ಎರಡನೇ ಅತಿ ದೊಡ್ಡ ವನ್ಯಜೀವಿ ಅಭಯಾರಣ್ಯವಾಗಿದೆ. ಮಳೆಗಾಲದಲ್ಲಿ ಅನೇಕ ಸರೀಸೃಪಗಳು, ಪಕ್ಷಿಗಳು ಮತ್ತು ಕಾಡು ಪ್ರಾಣಿಗಳ ಆವಾಸಸ್ಥಾನವಾಗಿದೆ. ಕಪ್ಪು ಪ್ಯಾಂಥರ್, ಚಿರತೆ ಅಥವಾ ಆನೆಯನ್ನು ಇಲ್ಲಿ ಕಾಣಬಹುದು.


7. ಮೈಸೂರು

ಮಳೆಗಾಲದಲ್ಲಿ ಪ್ರವಾಸ ಹೊರಡುವ ಯೋಚನೆ ಇದ್ದರೆ ಮೈಸೂರನ್ನು ಆಯ್ಕೆ ಮಾಡಬಹುದು. ವಾರಾಂತ್ಯವನ್ನು ಮೈಸೂರಿನ ಐಷಾರಾಮಿ ರೆಸಾರ್ಟ್‌ನಲ್ಲಿ ಕಳೆಯುವುದು ಅದ್ಭುತ ಆಯ್ಕೆಯಾಗಿದೆ. ಹೊರಗೆ ಮಳೆ ಸುರಿಯುವಾಗ ಬಲಿನೀಸ್, ಸ್ವೀಡಿಷ್ ಮತ್ತು ಆಯುರ್ವೇದಿಕ್ ಸ್ಪಾ ಚಿಕಿತ್ಸೆಗಳ ಆನಂದ ಸವಿಯಬಹುದು.


8. ನಂದಿ ಹಿಲ್‌

ಮಾನ್ಸೂನ್ ಸಮಯದಲ್ಲಿ ನಂದಿ ಬೆಟ್ಟದಲ್ಲಿ ಮಂತ್ರಮುಗ್ಧಗೊಳಿಸುವ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದು. ನಯನಮನೋಹರ ಸೂರ್ಯಾಸ್ತ, ಸೂರ್ಯೋದಯದ ದೃಶ್ಯಾವಳಿಗಳು ಮನದಲ್ಲಿ ವರ್ಣಚಿತ್ರದಂತೆ ಅಚ್ಚಳಿಯದೆ ಉಳಿಯುವುದು. ಮಳೆಗಾಲದಲ್ಲಿ ಬೈಕ್ ಸವಾರರು ಬೆಟ್ಟಗಳ ಮೇಲೆ ಹೋಗಿ ಪ್ರಕೃತಿಯ ಸೌಂದರ್ಯ ಸವಿಯಬಹುದು.


9. ಸ್ಕಂದಗಿರಿ ಬೆಟ್ಟ

ಸ್ಕಂದಗಿರಿ ಬೆಟ್ಟಗಳ ಶಿಖರದಲ್ಲಿ ನಿಂತಿರುವಾಗ ಮೋಡಗಳ ಮೇಲೆ ಏರಿದಂತ ಅನುಭವ ಕೊಡುತ್ತದೆ. ಆಗಸ್ಟ್‌ನಲ್ಲಿ ಇಲ್ಲಿ ಚಾರಣಕ್ಕೆ ಹೋಗಲು ಸೂಕ್ತ ಸಮಯ. ಹತ್ತಿಯಂತೆ ಕಾಣುವ ಮೋಡಗಳು ಅಲೌಕಿಕವಾಗಿ ಕಾಣುತ್ತವೆ. ಸ್ಕಂದಗಿರಿಯಿಂದ ಸೂರ್ಯೋದಯದ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು. ರಾತ್ರಿ ಆಕಾಶದ ಅದ್ಭುತಗಳ ಅಡಿಯಲ್ಲಿ ಕ್ಯಾಂಪಿಂಗ್ ಮಾಡುವುದು ಉತ್ತಮ ಅನುಭವವನ್ನು ನೀಡುತ್ತದೆ.


10. ಗೋಕರ್ಣ

ಹಿಪ್ಪಿಗಳ ಸ್ವರ್ಗ ಗೋಕರ್ಣದ ಕಡಲತೀರಗಳು ರಮಣೀಯ ದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಒಂದು ಕಡೆ ಕಲ್ಲಿನ ಪರ್ವತ ಮತ್ತು ಇನ್ನೊಂದು ಕಡೆ ಅರೇಬಿಯನ್ ಸಮುದ್ರದೊಂದಿಗೆ ಇರುವ ಧಾರ್ಮಿಕ ಪಟ್ಟಣವು ಅತ್ಯಂತ ಸುಂದರವಾದ ಭೂದೃಶ್ಯಗಳನ್ನು ನೀಡುತ್ತದೆ.

11. ಜೋಗ ಜಲಪಾತ

ಮಳೆಗಾಲದಲ್ಲಿ ತುಂಬಿ ಹರಿಯುವ ಜೋಗ ಜಲಪಾತವು ಕನಸಿನ ಪ್ರಪಂಚವನ್ನು ಮಳೆಗಾಲದಲ್ಲಿ ತೋರಿಸುತ್ತದೆ. ಮಾನ್ಸೂನ್ ಸಮಯದಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಬಿಲ್ಲುಗಳೊಂದಿಗೆ ಭವ್ಯವಾದ ಪ್ರಕೃತಿಯನ್ನು ಇಲ್ಲಿ ಆನಂದಿಸಬಹುದು. ಶರಾವತಿ ನದಿಯಿಂದ ರೂಪುಗೊಂಡಿರುವ ಜಲಪಾತವು ಕರ್ನಾಟಕದ ಅತ್ಯಂತ ಪ್ರಸಿದ್ಧವಾದ ಜಲಪಾತಗಳಲ್ಲಿ ಒಂದಾಗಿದೆ ಮತ್ತು ಭಾರತದ ಅತಿ ಎತ್ತರದ ಜಲಪಾತಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು


12. ಕೆಮ್ಮಣ್ಣುಗುಂಡಿ

ಕರ್ನಾಟಕದ ಪ್ರಸಿದ್ಧ ಗಿರಿಧಾಮಗಳಲ್ಲಿ ಒಂದಾಗಿರುವ ಕೆಮ್ಮಣ್ಣುಗುಂಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿ ನೋಡುವಂತ ಹಲವಾರು ಭೂದೃಶ್ಯಗಳು ಮತ್ತು ಸೊಂಪಾದ ಪ್ರದೇಶಗಳಿವೆ. ಕೆಮ್ಮನಗುಂಡಿಯಲ್ಲಿರುವ ಇತರ ಕೆಲವು ಪ್ರಮುಖ ಆಕರ್ಷಣೆಗಳೆಂದರೆ ಹೆಬ್ಬೆ ಜಲಪಾತ, ಶಾಂತಿ ಜಲಪಾತ, ಝೆಡ್ ಪಾಯಿಂಟ್ ಮತ್ತು ಅತ್ಯಂತ ಪ್ರಸಿದ್ಧವಾದ ಬಾಬಾ ಬುಡನ್ ಗಿರಿ ಮತ್ತು ಮುಳ್ಳಯ್ಯನಗಿರಿ ಬೆಟ್ಟಗಳು.


13. ಕುದುರೆಮುಖ

ಕುದುರೆಮುಖ ಗಿರಿಧಾಮ ಮಾನ್ಸೂನ್ ಸಮಯದಲ್ಲಿ ಉತ್ತಮ ಅನುಭವವನ್ನು ನೀಡುತ್ತದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ಶೋಲಾ ಹುಲ್ಲುಗಾವಲು ಮತ್ತು ಕಾಡುಗಳು ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯಂತ ಆಸಕ್ತಿದಾಯಕ ತಾಣಗಳಾಗಿವೆ. ಹನುಮಾನ್ ಗುಂಡಿ ಮತ್ತು ಕದಂಬಿ ಜಲಪಾತ ಇಲ್ಲಿನ ಎರಡು ಪ್ರಮುಖ ತಾಣಗಳಾಗಿವೆ. ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಭೇಟಿ ನೀಡಲು ಇದು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ.


14. ಬಾಲೂರು

ಚಿಕ್ಕಮಗಳೂರು ಜಿಲ್ಲೆಯ ಒಂದು ಗ್ರಾಮವಾದ ಬಾಲೂರು ಮಾನ್ಸೂನ್ ಋತುವಿನಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣವಾಗಿದೆ. ವಿಶಾಲವಾದ ಕಾಫಿ ಎಸ್ಟೇಟ್ ಗಳು ಭೂಮಿಯ ಮೇಲಿನ ಅತ್ಯಂತ ಪರಿಶುದ್ಧ ಸ್ಥಳ ಎಂಬಂತೆ ಭಾಸವಾಗುತ್ತದೆ. ಚಾರ್ಮಾಡಿ ಘಾಟ್, ಚಾರ್ಮಾಡಿ ಜಲಪಾತ ಮತ್ತು ಕೊಡೆ ಕಲ್ಲು ಇಲ್ಲಿನ ಅದ್ಭುತ ಸ್ಥಳಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

Karnataka Weather Forecast :ರಾಜ್ಯಾದ್ಯಂತ ಮಳೆ ಅಬ್ಬರಕ್ಕೆ (Rain News) ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಡಗಿನಲ್ಲಿ ಗುಡ್ಡ ಕುಸಿದರೆ, ಮಂಗಳೂರಲ್ಲಿ ರಸ್ತೆ ಕುಸಿದಿದೆ. ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿಯಾಗಿದೆ. ಇನ್ನೊಂದು ವಾರವು ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ನೈರುತ್ಯ ಮುಂಗಾರು (Rain News) ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿದ್ದು, ಉತ್ತರ ಒಳನಾಡಿನಲ್ಲಿ (Karnataka Weather Forecast) ದುರ್ಬಲಗೊಂಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದ್ದು, ಗುಡ್ಡ ಕುಸಿತದಂತಹ ಪ್ರಕರಣಗಳು ಹೆಚ್ಚಾಗಿವೆ. ಕೊಲ್ಲೂರು, ಸಿದ್ದಾಪುರ, ಕೊಟ್ಟಿಗೆಹಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಕೋಟ, ಆಗುಂಬೆಯಲ್ಲಿ ತಲಾ 8 ಸೆಂ.ಮೀ ಹಾಗೂ ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಆರಿದ್ರಾ ಮಳೆ ಎಫೆಕ್ಟ್‌ ಕೊಡಗಿನಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲಿ ಸುರಿದ ಆರಿದ್ರಾ ಮಳೆಯ ಎಫೆಕ್ಟ್‌ನಿಂದಾಗಿ ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ನಿನ್ನೆ ಸೋಮವಾರ ಸುರಿದ ಮಳೆಗೆ ಬೆಟ್ಟದ ಮಣ್ಣು ಕುಸಿದು ಮನೆ ಮತ್ತು ದೇವಸ್ಥಾನಕ್ಕೆ ಅಲ್ಪಪ್ರಮಾಣದಲ್ಲಿ ಹಾನಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಪಾಲೆಮಾಡುವಿನಲ್ಲಿ ಘಟನೆ ನಡೆದಿದೆ. ಪಾಲೆಮಾಡುವಿನ ಎಂಆರ್ ಕಾಳಪ್ಪ ಅವರ ಮನೆಯ ಸಮೀಪದ ಮಣ್ಣು ಕುಸಿದಿದೆ. ದೇವಸ್ಥಾನದ ಗೋಡೆ ಪಕ್ಕದಲ್ಲಿ ಮತ್ತು ವಾಸದ ಮನೆಯ ಪಕ್ಕದಲ್ಲಿ ರಾಶಿ ಮಣ್ಣು ತುಂಬಿದೆ.

ಇದನ್ನೂ ಓದಿ: Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

ಮಂಗಳೂರಿನ ಬಂಗ್ರ ಕೂಳೂರಿನಲ್ಲೂ ರಸ್ತೆ ಕುಸಿತ

ಭಾರೀ ಮಳೆಯಿಂದಾಗಿ ಮಂಗಳೂರಿನಲ್ಲಿ ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ರಸ್ತೆ ಕುಸಿದಿದೆ. ಎ ಜೆ ಇಂಜಿನಿಯರಿಂಗ್ ಕಾಲೇಜಿಗೆ ಸಂಪರ್ಕಿಸುವ ರಸ್ತೆ ಇದಾಗಿದ್ದು, ಮಣ್ಣಿನ ಸವೆತಕ್ಕೆ ಕ್ಷಣ ಕ್ಷಣಕ್ಕೂ ರಸ್ತೆಯು ಕುಸಿಯುತ್ತಿದೆ.

350 ಮೀಟರ್ ಉದ್ದದ ಈ ರಸ್ತೆಯಲ್ಲಿ ರಾಜಕಾಲುವೆಯು ಹೊಂದಿಕೊಂಡಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ಜನರ ಓಡಾಟವನ್ನು ನಿಷೇಧಿಸಲಾಗಿದೆ. ರಸ್ತೆ ಪಕ್ಕದ 10ಕ್ಕೂ ಹೆಚ್ಚು ಮನೆಗಳು ಕೂಡ ಅಪಾಯದಲ್ಲಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಲ್ಲಿ ಗಾಳಿ- ಮಳೆಗೆ ಶಾಲೆಗೆ ಹಾನಿ

ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ ಮುಂದುವರಿದಿದೆ. ಭಾರಿ ಮಳೆಗೆ ಶಾಲಾ ಕಟ್ಟಡವೊಂದು ಶಿಥಿಲಾವಸ್ಥೆಗೊಂಡಿದೆ. ಸರ್ಕಾರಿ ಶಾಲೆಯ ಚಾವಣಿಗೆ ಹಾನಿಯಾಗಿದ್ದು, ಗೋಡೆಯ ಮಣ್ಣು ಉದುರುತ್ತಿದೆ. ಮೂಡಿಗೆರೆ ತಾಲೂಕಿನ ಹಾಲೂರು ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಭೇಟಿ ನೀಡಿದ ಸ್ಥಳೀಯ ಶಾಸಕಿ ನಯನ ಮೋಟಮ್ಮ, ಶಿಥಿಲಾವಸ್ಥೆ ಗೊಂಡಿರುವ ಚಾವಣಿ ಸರಿಪಡಿಸಲು ಕ್ರಮವಹಿಸಲು ಸೂಚಿಸಿದರು.

ಧಾರಾಕಾರ ಮಳೆಗೆ ಧುಮ್ಮಿಕ್ಕಿದ ಜೋಗ್‌ ಫಾಲ್ಸ್‌

ಶಿವಮೊಗ್ಗದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಮನ ಸೋತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹಾಸನ

Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

Wild Animals Attack : ಕರೆಯದೇ ಮದುವೆಗೆ ಬಂದ ಕೋತಿಯೊಂದು ರಂಪಾಟವನ್ನೇ ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರ ಮೇಲೂ ಎರಗಿದೆ. ಮತ್ತೊಂದು ಕಾಡಾನೆ, ಕರಡಿ ಪ್ರತ್ಯಕ್ಷಗೊಂಡು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

wild animals Attack
Koo

ಹಾಸನ: ಮದುವೆ ಮನೆಗೆ ನುಗ್ಗಿದ ಕೋತಿಯೊಂದು ರಂಪಾಟ (Wild Animals Attack) ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರಿಗೂ ತೊಂದರೆ ಕೊಟ್ಟಿದೆ. ಇಷ್ಟು ಮಾತ್ರವಲ್ಲದೇ ಮದುವೆಗೆ ಬಂದವರಿಗೆ ಮಂಗ (Monkey Attack) ಕಚ್ಚಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಘಟನೆ ನಡೆದಿದೆ.

wild Animals Attack

ಹಿರಿಸಾವೆಯ ನುಗ್ಗೆಹಳ್ಳಿ ರಸ್ತೆಯಲ್ಲಿ ನಡೆಯುತ್ತಿದ್ದ ಮದುವೆಗೆ ಕರೆಯದೇ ಬಂದ ಕೋತಿ ಕಾಟಕ್ಕೆ ಜನರು ಹೈರಣಾದರು. ಡೈನಿಂಗ್ ಹಾಲ್‌ನಲ್ಲಿ ಊಟ ಮಾಡುತ್ತಿದ್ದವರಿಗೂ ಕಿರಿಕಿರಿ ಮಾಡಿ, ಊಟ ಕಸಿದುಕೊಂಡಿದೆ. 8-10 ಮಂದಿ ಮೇಲೆ ದಾಳಿ ಮಾಡಿ ಕಚ್ಚಿದೆ. ಸುಶೀಲಮ್ಮ, ಲೀಲಾವತಿ, ನಿಂಗೇಗೌಡ, ಗೌರಮ್ಮ, ಗಿರಿಜಮ್ಮ , ತಿಮ್ಮೇಗೌಡ, ಗಿರಿಗೌಡ ಎಂಬುವವರಿಗೆ ಕೋತಿ ಕಚ್ಚಿದ್ದು, ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುತ್ತಮುತ್ತಲಿನ ಹಳ್ಳಿಯಲ್ಲಿ ಓಡಾಡುತ್ತಿರುವ ಕೋತಿ ಹಿಡಿದು ಸ್ಥಳಾಂತರ ಮಾಡಲು ಆಗ್ರಹಿಸಿದ್ದಾರೆ.

wild animals Attack

ಇದನ್ನೂ ಓದಿ: Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

wild Animals Attack

ವಿಜಯನಗರದ ಎಪಿಎಂಸಿ ಆವರಣಕ್ಕೆ ಎಂಟ್ರಿ ಕೊಟ್ಟ ಕರಡಿ

ಇತ್ತೀಚೆಗೆ ಕರಡಿಗಳ ಹಾವಳಿ ಹೆಚ್ಚಾಗಿದೆ. ವಿಜಯನಗರದ ಹಗರಿಬೊಮ್ಮನ ಹಳ್ಳಿಯಲ್ಲಿರುವ ಎಪಿಎಂಸಿ (APMC) ಆವರಣದಲ್ಲಿ ಕರಡಿಯೊಂದು ಪತ್ತೆಯಾಗಿದೆ. ಮಂಗಳವಾರ ಬೆಳಗಿನ ಜಾವ ಕರಡಿ ಓಡಾಟ ಕಂಡು ರೈತರು ಹೌಹಾರಿದ್ದಾರೆ. ಕರಡಿ ಓಡಾಟವು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆಯೂ ನಾನಾ ಕಡೆ ಕರಡಿ ಪ್ರತ್ಯಕ್ಷವಾಗಿತ್ತು.

wild animals Attack

ಕೊಡಗಿನಲ್ಲಿ ಆಟೋ ಜಖಂ ಮಾಡಿದ ಕಾಡಾನೆ

ಕೊಡಗಿನಲ್ಲಿ ಆನೆ -ಮಾನವ ಸಂಘರ್ಷ ಮುಂದುವರಿದಿದೆ. ಮನೆ ಸಮೀಪ ನಿಲ್ಲಿಸಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ನಾಪೋಕ್ಲು ಸಮೀಪದ ಕಕ್ಕಬ್ಬೆಯ ಗ್ರಾಮದ ನಾಲಡಿ ವಾಟೆಕಾಡು ಎಂಬಲ್ಲಿ ಘಟನೆ ನಡೆದಿದೆ. ವಾಟೆಕಾಡು ನಿವಾಸಿ ದೇವಯ್ಯ ಎಂಬುವರ ಆಟೋವನ್ನು ಜಖಂಗೊಳಿಸಿ, ಸಮೀಪದ ತೋಟದಲ್ಲೂ ದಾಂಧಲೆ ನಡೆಸಿ ಕಾಲ್ಕಿತ್ತಿದೆ. ಆನೆ ಹಾವಳಿಯಿಂದ ಮುಕ್ತಿ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

wild Animals Attack

ಕೊಪ್ಪಳದಲ್ಲಿ ನಿಲ್ಲದ ಕರಡಿ ಆತಂಕ

ಕಳೆದ ಒಂದು ವಾರದಿಂದ ಕೊಪ್ಪಳ ಸುತ್ತಮುತ್ತ ಕರಡಿ ಪ್ರತ್ಯಕ್ಷಗೊಳ್ಳುತ್ತಿದೆ. ಇದೀಗ ಬಸ್‌ನಲ್ಲಿ ಹೋಗುತ್ತಿರುವವರಿಗೆ ಕರಡಿಯೊಂದು ದರ್ಶನ ಕೊಟ್ಟಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಿ – ಮಾಟಲದಿನ್ನಿ ಮಧ್ಯೆ ಕರಡಿ ಕಾಣಿಸಿಕೊಂಡಿದೆ. ಮಂಗಳವಾರ ಮುಂಜಾನೆ ಬಸ್‌ವೊಂದಕ್ಕೆ ಕರಡಿಯು ಅಡ್ಡಬಂದಿದೆ. ಇದನ್ನೂ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯನಗರ

Press Day: ಹೊಸಪೇಟೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ

Press Day: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕದಿಂದ ಸೋಮವಾರ ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

VISTARANEWS.COM


on

Press Day celebration Programme in hosapete
Koo

ಹೊಸಪೇಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯನಗರ ಜಿಲ್ಲಾ ಘಟಕದಿಂದ ಸೋಮವಾರ ಹೊಸಪೇಟೆಯ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು (Press Day) ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಒತ್ತಡದ ವೃತ್ತಿ ಜೀವನದ ಜತೆಗೆ ಕುಟುಂಬಕ್ಕೂ ಒಂದಿಷ್ಟು ಸಮಯ ಕೊಡಿ’ ಎಂದು ಪತ್ರಕರ್ತರಿಗೆ ಕಿವಿಮಾತು ಹೇಳಿದರು.

ಇದನ್ನೂ ಓದಿ: Foreign Investment: ರಾಜ್ಯದಲ್ಲಿ ವಾಹನ ಬಿಡಿಭಾಗ ತಯಾರಿಕೆ; ಬಂಡವಾಳ ಹೂಡಿಕೆಗೆ ದ.ಕೊರಿಯಾ ಒಲವು

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಮಾತನಾಡಿ, ಪತ್ರಕರ್ತರ ಪ್ರತಿಭಾವಂತ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಬರೆದು ಉನ್ನತ ಅಧಿಕಾರಿಗಳಾಗುವ ಕನಸು ಕಾಣಬೇಕು, ಅದಕ್ಕೆ ಅಗತ್ಯವಾದ ನೆರವು ನೀಡಲು ತಾವು ಸಿದ್ಧ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಸಂಸದ ಈ. ತುಕಾರಾಂ ಅವರ ಪತ್ನಿ ಅನ್ನಪೂರ್ಣಾ ಹಾಗೂ ‘ಹುಡಾ’ ಅಧ್ಯಕ್ಷ ಎಚ್‌.ಎನ್‌.ಎಫ್‌. ಮೊಹಮ್ಮದ್ ಇಮಾಮ್‌ ನಿಯಾಜಿ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಮಾತನಾಡಿದರು.

ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷ ಜೆ.ಎಂ. ಶಿವಪ್ರಸಾದ್ ಪತ್ರಕರ್ತ ಆರೋಗ್ಯ ವಿಮೆ ಕಾರ್ಡ್ ಹಸ್ತಾಂತರಿಸಿದರು. ಸಂಘದ ಜಿಲ್ಲಾಧ್ಯಕ್ಷ ಪಿ. ಸತ್ಯನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

ಇದೇ ವೇಳೆ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಜಿಲ್ಲೆಯ ಹಿರಿಯ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Continue Reading
Advertisement
IPS transfer
ಪ್ರಮುಖ ಸುದ್ದಿ2 mins ago

IPS Transfer: ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

karnataka weather Forecast
ಮಳೆ26 mins ago

Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Dharamshala Tour
ಪ್ರವಾಸ48 mins ago

Dharamshala Tour: ಪರಿಪೂರ್ಣ ಪ್ರವಾಸದ ಅನುಭವ ಕೊಡುವ ಧರ್ಮಶಾಲಾ

Vastu Tips
ಧಾರ್ಮಿಕ56 mins ago

Vastu Tips: ಮನೆ, ಅಂಗಡಿಯಲ್ಲಿ ಧನಾತ್ಮಕ ಶಕ್ತಿ ಆಹ್ವಾನಿಸಿ; ಸುಖ, ಶಾಂತಿ, ಸಮೃದ್ಧಿ ವೃದ್ಧಿಸಿ

Sour Curd
ಆರೋಗ್ಯ2 hours ago

Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ?

Dina Bhavishya
ಭವಿಷ್ಯ2 hours ago

Dina Bhavishya : ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುವಿರಿ

ಆಟೋಮೊಬೈಲ್5 hours ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ7 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ7 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ7 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ12 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌