India Bloc: ರಾಷ್ಟ್ರಮಟ್ಟದಲ್ಲಿ ಮಾತ್ರ ಇಂಡಿಯಾ ಕೂಟ ಎಂದ ಎಸ್‌ಪಿ ನಾಯಕ! ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು - Vistara News

ದೇಶ

India Bloc: ರಾಷ್ಟ್ರಮಟ್ಟದಲ್ಲಿ ಮಾತ್ರ ಇಂಡಿಯಾ ಕೂಟ ಎಂದ ಎಸ್‌ಪಿ ನಾಯಕ! ಪ್ರತಿಪಕ್ಷಗಳ ಮೈತ್ರಿಯಲ್ಲಿ ಬಿರುಕು

Indian Bloc: ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ. ಈ ಮೈತ್ರಿಯು ಕೇವಲ ರಾಷ್ಟ್ರಮಟ್ಟದಲ್ಲಿ ಮಾತ್ರವೇ ಇದೆ ಎಂದು ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

akhilesh yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರತಿಪಕ್ಷಗಳ (Opposition Parties) ಭಾರತೀಯ ರಾಷ್ಟ್ರೀಯ ಅಭಿವೃದ್ಧಿಯ ಸಮಗ್ರ ಒಕ್ಕೂಟ(INDIA Bloc)ವು ರಾಷ್ಟ್ರ ಮಟ್ಟದಲ್ಲಿ (National Level) ಮಾತ್ರವೇ ಇರಲಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾವದ್ (SP Leader Akhilesh Yadav) ಅವರು ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟವು ರಾಜ್ಯ ಮಟ್ಟದಲ್ಲೂ ಇದೆಯೇ ಎಂಬ ಕಾಂಗ್ರೆಸ್ ಪಕ್ಷಕ್ಕೆ ಕೇಳಿದ ಮಾರನೇ ದಿನವೇ ಅಖಿಲೇಶ್ ಯಾದವ್ ಅವರು ತಮ್ಮ ತೀರ್ಮಾನವನ್ನು ಹೊರ ಹಾಕಿದ್ದಾರೆ.

ಮೈತ್ರಿಯು ದೆಹಲಿಯ (ರಾಷ್ಟ್ರೀಯ) ಮಟ್ಟದಲ್ಲಿ ಮಾತ್ರ ಎಂಬ ಮಾಹಿತಿ ಈಗ ನಮಗೆ ಸಿಕ್ಕಿದೆ. ಸರಿ, ಸಮಯ ಬಂದಾಗ ನಾವು ದೆಹಲಿಯ ಬಗ್ಗೆ ಮಾತನಾಡುತ್ತೇವೆ. ಮೈತ್ರಿಯು ರಾಜ್ಯ ಚುನಾವಣೆಗಳಿಗೆ ಅನ್ವಯಿಸುವುದಿಲ್ಲ ಎಂದು ಈಗ ನಾವು ಒಪ್ಪಿಕೊಂಡಿದ್ದೇವೆ. ನಾವು ಮಧ್ಯಪ್ರದೇಶ ಚುನಾವಣೆಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲು ಆರಂಭಿಸುತ್ತೇವೆ ಎಂದು ಅಖಿಲೇಶ್ ಯಾದವ್ ಅವರು ಹೇಳಿದರು.

ರಾಜ್ಯ ಮಟ್ಟದಲ್ಲಿ ಇಂಡಿಯಾ ಕೂಟ ಮೈತ್ರಿ ಇಲ್ಲ ಎಂಬ ಮಾಹಿತಿ ದೊರೆತಿದೆ. ಹಾಗಾಗಿ ಮಧ್ಯ ಪ್ರದೇಶದಲ್ಲಿ ಎಸ್‌ಪಿ ಪ್ರತಿನಿಧಿಗಳು ಕಾಂಗ್ರೆಸ್ ಸೀಟ್ ಷೇರಿಂಗ್ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಸೀತಾಪುರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಚುನಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವುರ, 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲ 80 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಹೇಳಿದರು. ಮಧ್ಯ ಪ್ರದೇಶದ ವಿಧಾನಸಭೆ ಚುನಾವಣೆಗೆ ಸಮಾಜವಾದಿ ಪಕ್ಷವು ಈಗಾಗಲೇ 31 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ ಎಂದು ಮಧ್ಯ ಪ್ರದೇಶ ಚುನಾವಣಾ ಉಸ್ತುವಾರಿ ವ್ಯಾಸಜೀ ಗೋಂದ್ ಅವರು, ಎಲ್ಲ 230 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಾಗುವುದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ರಾಜಸ್ಥಾನ, ಮಧ್ಯ ಪ್ರದೇಶ, ಛತ್ತೀಸ್‌ಗಢದಲ್ಲಿ ಆಪ್ ಸ್ಪರ್ಧೆ! ಇಂಡಿಯಾ ಕೂಟದಲ್ಲಿ ಬಿರುಕು!

ರಾಷ್ಟ್ರೀಯ ಪಕ್ಷವಾಗಲು ಹವಣಿಸುತ್ತಿರುವ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದ ಆಚೆಗೂ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಪ್ರಯತ್ನವನ್ನು ಮಾಡುತ್ತಿದೆ. 1992ರಲ್ಲಿ ಪಾರ್ಟಿ ಆರಂಭವಾದಾಗಿನಿಂದಲೂ ಸಮಾಜವಾದಿ ಪಕ್ಷವು ಪ್ರಾದೇಶಿಕ ಪಕ್ಷದ ಮಾನ್ಯತೆಯಲ್ಲೇ ಇದೆ. ಉತ್ತರ ಪ್ರದೇಶದ ಆಚೆ ಅಂದರೆ ಮಧ್ಯ ಪ್ರದೇಶದಲ್ಲಿ 2003ರಲ್ಲಿ ಭಾರೀ ಸಕ್ಸೆಸ್ ದೊರೆತಿತ್ತು. ಆಗ ಎಸ್‌ಪಿ ಮಧ್ಯ ಪ್ರದೇಶದ 161 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಏಳು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2018ರಲ್ಲಿ 52 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಸ್‌ಪಿ, ಒಂದು ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಆದರೆ, ಗೆದ್ದ ಎಸ್‌ಪಿ ಅಭ್ಯರ್ಥಿ ಬಳಿಕ ಭಾರತೀಯ ಜನತಾ ಪಾರ್ಟಿಗೆ ಪಕ್ಷಾಂತರ ಮಾಡಿದ್ದರು.

ಮಧ್ಯ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆಗೂಡ 12 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷವು ಯೋಜನೆ ರೂಪಿಸಿತ್ತು. ಆದರೆ, ಉತ್ತರ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್ ಅವರು, ಮಧ್ಯ ಪ್ರದೇಶದಲ್ಲಿ ಅಸ್ತಿತ್ವ ಹೊಂದಿರದ ಎಸ್‍‌ಪಿ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಕೇಳಿಕೊಂಡಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Physical Assault: ವರದಿಯ ಪ್ರಕಾರ, ಮೂರು ತಿಂಗಳ ಹಿಂದೆ ರೇವಾದ ಜಾವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾತ್ರಿ ತನ್ನ ಮೊಬೈಲ್ ಫೋನ್ ನಲ್ಲಿ ಪೋರ್ನ್ ವಿಡಿಯೊ ನೋಡಿದ್ದಾನೆ. ಬಳಿಕ ತನ್ನ ಪಕ್ಕದಲ್ಲಿ ಮಲಗಿದ್ದ ಸಹೋದರಿಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ. ಆಕೆ ತಂದೆಗೆ ಹೇಳುವುದಾಗಿ ಹೇಳಿದಾಗ ಕೊಲೆ ಮಾಡಿದ್ದ.

VISTARANEWS.COM


on

Physical Assault
Koo

ಭೋಪಾಲ್: 13 ವರ್ಷದ ಬಾಲಕನೊಬ್ಬ ತನ್ನ 9 ವರ್ಷದ ತಂಗಿಯ ಮೇಲೆ ಅತ್ಯಾಚಾರ ಎಸಗಿ (Physical Assault) ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ತನಿಖಾಧಿಕಾರಿಗಳು 3 ತಿಂಗಳಲ್ಲಿ ನಡೆಸಿದ 50 ಕ್ಕೂ ಹೆಚ್ಚು ಡಿಎನ್ಎ ಪರೀಕ್ಷೆಗಳ ಬಳಿಕ , ಬಾಲಕಿ ಖಾಸಗಿ ಭಾಗಗಳಲ್ಲಿ ಕಂಡುಬಂದ ವೀರ್ಯ ಆಕೆಯ ಹಿರಿಯ ಸಹೋದರನ ವೀರ್ಯದೊಂದಿಗೆ ಹೊಂದಿಕೆಯಾದ ಬಳಿಕ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಎಲ್ಲವನ್ನೂ ತಿಳಿದಿದ್ದ ತಾಯಿ ಮತ್ತು ಇಬ್ಬರು ಹಿರಿಯ ಸಹೋದರಿಯರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಹೀಗಾಗಿ ಆರೋಪಿಗಳು, ಆತನ ತಾಯಿ ಮತ್ತು ಇಬ್ಬರು ಅಕ್ಕಂದಿರನ್ನು ಬಂಧಿಸಲಾಗಿದೆ.

ವರದಿಯ ಪ್ರಕಾರ, ಮೂರು ತಿಂಗಳ ಹಿಂದೆ ರೇವಾದ ಜಾವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾತ್ರಿ ತನ್ನ ಮೊಬೈಲ್ ಫೋನ್ ನಲ್ಲಿ ಪೋರ್ನ್ ವಿಡಿಯೊ ನೋಡಿದ್ದಾನೆ. ಬಳಿಕ ತನ್ನ ಪಕ್ಕದಲ್ಲಿ ಮಲಗಿದ್ದ ಸಹೋದರಿಯನ್ನು ಲೈಂಗಿಕವಾಗಿ ಶೋಷಿಸಿದ್ದಾನೆ. ಆಕೆ ತಂದೆಗೆ ಹೇಳುವುದಾಗಿ ಹೇಳಿದಾಗ ಕೊಲೆ ಮಾಡಿದ್ದ.

3 ತಿಂಗಳಲ್ಲಿ 55 ಜನರ ಡಿಎನ್ಎ ಪರೀಕ್ಷೆ

ಪೊಲೀಸರು 55 ಜನರ ಡಿಎನ್ಎ ಪರೀಕ್ಷೆಗಳನ್ನು ನಡೆಸಿದ್ದರು. ಆದರೆ ಬಾಲಕಿಯ ದೇಹದಲ್ಲಿ ಕಂಡುಬಂದ ಮಾದರಿಯು ಯಾವುದಕ್ಕೂ ಹೋಲಿಕೆಯಾಗಿರಲಿಲ್ಲ. ಕಿರಿಯ ಮಗಳನ್ನು ಕಳೆದುಕೊಂಡು ಈಗಾಗಲೇ ಮೂರು ತಿಂಗಳುಗಳು ಕಳೆದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬ ಆರೋಪಿಸಿದ್ದರು. ಅಂತಿಮವಾಗಿ ಪೊಲೀಸರು ಸಹೋದರನನ್ನು ಪರೀಕ್ಷೆಗೆ ಕರೆದೊಯ್ದ ಆತನ ವೀರ್ಯವು ಮಾದರಿ ಪರಿಶೀಲನೆ ನಡೆಸಿದಾಗ ಹೊಂದಿಕೆಯಾಗಿತ್ತು.

ಇದನ್ನೂ ಓದಿ: Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

ಪೊಲೀಸರು ಪ್ರಶ್ನಿಸಿದ ಬಳಿಕ ಆತ ತನ್ನ ಅಪರಾಧ ಒಪ್ಪಿಕೊಂಡಿದ್ದಾನೆ. ಮೊಬೈಲ್​​ನಲ್ಲಿ ಅಶ್ಲೀಲ ಚಿತ್ರವನ್ನು ನೋಡಿದ್ದೆ. ತನ್ನ ಕಾಮಕ್ಕೆ ಮಣಿದು ಆಕೆ ಮೇಲೆ ಅತ್ಯಾಚಾರ ಎಸಗಿದೆ ಎಂದು ಹೇಳಿಕೊಂಡಿದ್ದಾನೆ. ಎಲ್ಲವನ್ನೂ ತಂದೆಗೆ ಹೇಳುತ್ತೇನೆ ಎಂದು ಹೇಳಿದಾಗ ಕೊಂದಿದ್ದೇನೆ ಎಂದು ಹೇಳಿಕೊಂಡಿದ್ದಾನೆ.

ಆರೋಪಿ ತನ್ನ ತಾಯಿ ಮತ್ತು ಹಿರಿಯ ಸಹೋದರಿಯರಿಗೆ ಎಲ್ಲವನ್ನೂ ಹೇಳಿ. ಅವರು ಸೇರಿಕೊಂಡು ತಂದೆ ಮತ್ತು ಪೊಲೀಸರಿಂದ ರಕ್ಷಿಸಿದ್ದರು.

ಭಾರತೀಯ ದಂಡ ಸಂಹಿತೆಯಡಿ ಅತ್ಯಾಚಾರ, ಕೊಲೆ ಮತ್ತು ಸಾಕ್ಷ್ಯಗಳನ್ನು ಮರೆಮಾಚಿದ್ದಕ್ಕಾಗಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಜೈಲಿಗೆ ಕಳುಹಿಸಲಾಗಿದೆ. ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದೇಶ

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Rahul Gandhi: ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. ಇದೇ ವೇಳೆ, ಪರೀಕ್ಷೆಯಲ್ಲಿ ಎಷ್ಟು ವೋಟ್‌ ಪಡೆದಿದ್ದೀರಿ ಎಂಬುದಾಗಿ ಬಾಯಿತಪ್ಪಿ ಕೇಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ‌ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಛೀಮಾರಿ ಹಾಕಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ, ನೀಟ್‌ ಅಭ್ಯರ್ಥಿಗಳಿಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೇಳಿದ ಪ್ರಶ್ನೆ ಈಗ ಭಾರಿ ವೈರಲ್‌ ಆಗಿದೆ.

ಹೌದು, ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. “ನೀಟ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆಯೇ” ಎಂಬುದಾಗಿ ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳಿಗೆ ಕೇಳಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹೌದು ಎಂದಿದ್ದಾರೆ. ಆಗ, ರಾಹುಲ್‌ ಗಾಂಧಿ ಅವರು, “ಪರೀಕ್ಷೆಯಲ್ಲಿ ಎಷ್ಟು ವೋಟು ಗಳಿಸಿದ್ದೀರಿ” ಎಂಬುದಾಗಿ ಪ್ರಶ್ನಿಸಿದ್ದಾರೆ. ಎಷ್ಟು ಅಂಕ ಪಡೆದಿದ್ದೀರಿ ಎಂಬುದಾಗಿ ಹೇಳುವ ಬದಲು ಅವರು ಎಷ್ಟು ವೋಟು ಗಳಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ 240 ಎಂಬುದಾಗಿ ವಿದ್ಯಾರ್ಥಿ ಹೇಳಬೇಕಿತ್ತು” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಮುಗಿದರೂ ರಾಹುಲ್‌ ಗಾಂಧಿ ಅವರು ಇನ್ನೂ ಅದರಿಂದ ಹೊರಬಂದಿಲ್ಲ” ಎಂಬುದಾಗಿ ಮತ್ತೊಬ್ಬರು ಕಾಲೆಳೆದಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಡಿಯೊಗೆ ಕಮೆಂಟ್‌ ಮಾಡಿದ್ದಾರೆ.

ಏನಿದು ನೀಟ್‌ ಪ್ರಕರಣ?

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Continue Reading

ದೇಶ

Chandipura Virus: ಗುಜರಾತ್‌ನಲ್ಲಿ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ಗೆ 48 ಬಲಿ; 39 ಮಂದಿಗೆ ಚಾಂದಿಪುರ ವೈರಸ್ ದೃಢ

Chandipura Virus: ಕಳೆದ ಒಂದು ತಿಂಗಳಲ್ಲಿ ಗುಜರಾತ್‌ನಲ್ಲಿ ಮಾರಣಾಂತಿಕ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್‌ನಿಂದ ಕನಿಷ್ಠ 48 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಹೆಚ್ಚಿನವರ ಸಾವಿಗೆ ಚಾಂದಿಪುರ ವೈರಸ್ ಕಾರಣ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್‌ನಲ್ಲಿ ಜುಲೈ 26ರವರೆಗೆ ಒಟ್ಟು 127 ಎಇಎಸ್ (AES) ಪ್ರಕರಣಗಳು ವರದಿಯಾಗಿವೆ.

VISTARANEWS.COM


on

Koo

ಗಾಂಧಿನಗರ: ಕಳೆದ ಒಂದು ತಿಂಗಳಲ್ಲಿ ಗುಜರಾತ್‌ (Gujarat)ನಲ್ಲಿ ಮಾರಣಾಂತಿಕ ತೀವ್ರವಾದ ಎನ್ಸೆಫಾಲಿಟಿಸ್ ಸಿಂಡ್ರೋಮ್ (Acute Encephalitis Syndrome)ನಿಂದ ಕನಿಷ್ಠ 48 ಮಂದಿ ಮೃತಪಟ್ಟಿದ್ದಾರೆ. ಆ ಪೈಕಿ ಹೆಚ್ಚಿನವರ ಸಾವಿಗೆ ಚಾಂದಿಪುರ ವೈರಸ್ (Chandipura Virus) ಕಾರಣ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತ್‌ನಲ್ಲಿ ಜುಲೈ 26ರವರೆಗೆ ಒಟ್ಟು 127 ಎಇಎಸ್ (AES) ಪ್ರಕರಣಗಳು ವರದಿಯಾಗಿವೆ. ಈ ಪೈಕಿ 39 ಮಂದಿಗೆ ಚಾಂದಿಪುರ ವೈರಸ್ (CHPV) ಇರುವುದು ದೃಢಪಟ್ಟಿದೆ. ಪಾಸಿಟಿವ್ ಪ್ರಕರಣಗಳನ್ನು ಹೊಂದಿರುವ ಸಬರ್ಕಾಂತ ಮತ್ತು ಪಚ್ಮಹಲ್‌ನಲ್ಲಿ ತಲಾ 6, ಅರಾವಳಿ ಮತ್ತು ಖೇಡಾದಲ್ಲಿ ತಲಾ 3, ಮೆಹ್ಸಾನಾದಲ್ಲಿ 4, ಅಹಮದಾಬಾದ್ ನಗರದಲ್ಲಿ 3 ಮತ್ತು ದಾಹೋಡ್‌ನಲ್ಲಿ 2 ಪ್ರಕರಣಗಳು ವರದಿಯಾಗಿವೆ.

ಜುಲೈ 17ರಂದು ಅರಾವಳಿಯ ಮೋಟಾ ಕಾಂತರಿಯಾ ಎಂಬ ನಾಲ್ಕು ವರ್ಷದ ಮಗು ಸಬರ್ಕಾಂತದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಇದು ಚಾಂದಿಪುರ ವೈರಸ್‌ನಿಂದ ರಾಜ್ಯದಲ್ಲಿ ಸಂಭವಿಸಿದ ಮೊದಲ ಸಾವಿನ ಪ್ರಕರಣ ಎಂದು ಗುಜರಾತ್ ಸರ್ಕಾರ ದೃಢಪಡಿಸಿತ್ತು. ಮುಖ್ಯವಾಗಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಪರಿಣಾಮ ಬೀರುವ ಚಾಂದಿಪುರ ವೈರಸ್ ಸದ್ಯ ಆತಂಕಕ್ಕೆ ಕಾರಣವಾಗಿದೆ. ಸೋಂಕು ತಗುಲಿದಾಗ ಜ್ವರ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಮಾರಣಾಂತಿಕವಾಗುತ್ತದೆ.

ಮೆದುಳಿನ ಉರಿಯೂತ

ಎಇಎಸ್ ಮೆದುಳಿನ ಉರಿಯೂತವನ್ನು ಉಂಟು ಮಾಡುತ್ತದೆ. ಜತೆಗೆ ತೀವ್ರವಾದ ಎನ್ಸೆಫಾಲಿಟಿಕ್ ಕಾಯಿಲೆಗೆ ಕಾರಣವಾಗುತ್ತದೆ. ಇದು ಹರ್ಪಿಸ್ ಸಿಂಪ್ಲೆಕ್ಸ್ ವೈರಸ್, ಎಂಟರೊವೈರಸ್‌, ಮತ್ತು ಚಾಂದಿಪುರ ವೈರಸ್‌ಗಳಿಂದ ಕಾಣಿಸಿಕೊಳ್ಳುತ್ತದೆ. ಪ್ರಸ್ತುತ ಈ ರೋಗ ಲಕ್ಷಣವಿರುವ 54 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 26 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ರೋಗ ಲಕ್ಷಣ

ಚಾಂದಿಪುರ ವೈರಸ್ ಸೋಂಕು ಬಾಧಿತರಲ್ಲಿ ಸಾಮಾನ್ಯ ಜ್ವರದ ಲಕ್ಷಣವೇ ಕಂಡು ಬರುತ್ತದೆ. ಬಾಧಿತರಲ್ಲಿ ದಿಢೀರ್ ಜ್ವರ, ತೀವ್ರ ತಲೆನೋವು, ವಾಂತಿ, ಸ್ನಾಯು ಸೆಳೆತ, ಪ್ರಜ್ಞಾಹೀನತೆ, ಅರೆನಿದ್ರಾವಸ್ಥೆ ಕಂಡು ಬರುತ್ತದೆ. ತಕ್ಷಣ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಮಾರಣಾಂತಿಕವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ರಾಬ್ಡೋವೆರಿಡೆ ವರ್ಗಕ್ಕೆ ಸೇರಿದ ವೈರಸ್ ಈ ರೋಗಕ್ಕೆ ಕಾರಣ.

ಆರೋಗ್ಯ ಅಧಿಕಾರಿಗಳಿಂದ ಕ್ರಮ

ಆರೋಗ್ಯ ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ಪ್ರವೃತ್ತರಾಗಿದ್ದು, ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ರಾಜ್ಯವು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಸಜ್ಜುಗೊಳಿಸಿದೆ. ಪೀಡಿತ ಪ್ರದೇಶಗಳು 41,000ಕ್ಕೂ ಹೆಚ್ಚು ಮನೆಗಳನ್ನು ಒಳಗೊಂಡಿದೆ. ರಾಜ್ಯಾದ್ಯಂತ ಸುಮಾರು 5,00,000 ಮನೆಗಳು, 19,000ಕ್ಕೂ ಹೆಚ್ಚು ಶಾಲೆಗಳು ಮತ್ತು 21,000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ ಕೀಟನಾಶಕಗಳನ್ನು ಸಿಂಪಡಿಸುವ ಕಾರ್ಯ ನಡೆಯುತ್ತಿದೆ. ಮಲಾಥಿಯಾನ್ ಫಾಗಿಂಗ್, ಸ್ಯಾಂಡ್ ಫ್ಲೈಗಳು ಮತ್ತು ಸೊಳ್ಳೆಗಳ ಸಂಖ್ಯೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ವಿಶೇಷವಾಗಿ ಹೆಚ್ಚಿನ ಪ್ರಕರಣಗಳು ವರದಿಯಾದ ಪ್ರದೇಶಗಳಲ್ಲಿ ತಡೆಗಟ್ಟುವ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Continue Reading

ದೇಶ

Road Accident: ಕಣಿವೆಗೆ ಉರುಳಿದ ಕಾರು; ಐವರು ಮಕ್ಕಳು ಸೇರಿ 8 ಮಂದಿ ಸಾವು

Road Accident: ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಲೋಮೀಟರ್‌ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

VISTARANEWS.COM


on

Road Accident
Koo

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಅನಂತ್‌ನಾಗ್‌ ಜಿಲ್ಲೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಟಾಟಾ ಸುಮೋ ಕಾರೊಂದು ಕಣಿವೆಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಣಿವೆಗೆ ಉರುಳಿದೆ ಎಂಬುದಾಗಿ ತಿಳಿದುಬಂದಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಲೋಮೀಟರ್‌ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಇನ್ನೂ ಕಾರನ್ನು ಮೇಲಕ್ಕೆ ಎತ್ತಿಲ್ಲ. ಶವಗಳನ್ನು ಕೂಡ ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುರಿತು ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಜಮ್ಮು-ಕಾಶ್ಮೀರವು ಕಣಿವೆ ಪ್ರದೇಶವಾದ ಕಾರಣ ವಾಹನಗಳು ಹೆಚ್ಚಾಗಿ ಕಣಿವೆಗೆ ಉರುಳುತ್ತವೆ. ರಾಜೌರಿ ಜಿಲ್ಲೆಯಲ್ಲಿ ಕಳೆದ ಜೂನ್‌ನಲ್ಲಿ ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರು ಹಾಗೆಯೇ, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗಿತ್ತು.

ನೌಶೇರಾ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿರುವ ಭವಾನಿ ಗ್ರಾಮದ ಮೂಲಕ ಸೇನಾ ವಾಹನವು ಸಂಜೆ ತೆರಳುತ್ತಿತ್ತು. ವಾಹದಲ್ಲಿ ಐವರು ಯೋಧರು ಇದ್ದರು. ಇದೇ ವೇಳೆ, ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಉರುಳಿತ್ತು. ದುರಂತ ಸಂಭವಿಸುತ್ತಲೇ ಐವರೂ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅಷ್ಟೊತ್ತಿಗಾಗಲೇ ಒಬ್ಬ ಯೋಧ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಕಳೆದ ವರ್ಷ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸುಮಾರು 55 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌ ಒಂದು 300 ಅಡಿ ಆಳದ ಕಣಿವೆಗೆ ಬಿದ್ದು, 38 ಜನ ಮೃತಪಟ್ಟಿದ್ದರು. ಅಸ್ಸಾರ್‌ ಪ್ರದೇಶದ ತ್ರುಂಗಲ್‌ ಬಳಿ ಚಲಿಸುತ್ತಿದ್ದ ಬಸ್‌ ಕಂದಕಕ್ಕೆ ಉರುಳಿತ್ತು. ಕಿಶ್ತ್‌ವಾರ್‌ನಿಂದ ಜಮ್ಮುವಿಗೆ ತೆರಳುತ್ತಿದ್ದ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿತ್ತು.

ಇದನ್ನೂ ಓದಿ: Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

Continue Reading
Advertisement
Paris Olympics 2024
ಫ್ಯಾಷನ್3 mins ago

Paris Olympics 2024: ಭಾರತೀಯ ಅಥ್ಲೀಟ್‌ಗಳ ಡ್ರೆಸ್‌ ಕೋಡ್‌ ವಿನ್ಯಾಸಕ್ಕೆ ಜನರ ಮಿಶ್ರ ಪ್ರತಿಕ್ರಿಯೆ

Vaccin for Hiv
ಆರೋಗ್ಯ36 mins ago

Vaccine for HIV: ವರ್ಷಕ್ಕೆರಡು ಬಾರಿ ಈ ಇಂಜೆಕ್ಷನ್‌ ತೆಗೆದುಕೊಂಡರೆ ಎಚ್‌ಐವಿ ಭಯವೇ ಬೇಡ!

Physical Assault
ದೇಶ44 mins ago

Physical Assault : ಅಶ್ಲೀಲ ವಿಡಿಯೊಗಳನ್ನು ನೋಡಿ 9 ವರ್ಷದ ತಂಗಿಯನ್ನು ಅತ್ಯಾಚಾರ ಮಾಡಿ ಕೊಂದ 13 ವರ್ಷದ ಬಾಲಕ!

Paris Olympics
ಕ್ರೀಡೆ59 mins ago

Paris Olympics: ಕ್ರೀಡಾ ಗ್ರಾಮದಲ್ಲಿ ಭಾರತದ ಅಥ್ಲೀಟ್ಸ್‌ಗೆ ಆಹಾರ ಕೊರತೆ; ರೆಸ್ಟೋರೆಂಟ್​ನಿಂದ ರೋಟಿ, ದಾಲ್‌ ತರಿಸಿದ ಬಾಕ್ಸರ್​

karnataka Rain
ಮಳೆ1 hour ago

Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು

Rahul Gandhi
ದೇಶ1 hour ago

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Gautam Gambhir
ಕ್ರೀಡೆ1 hour ago

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Kannada New Movie Nava Digantha latest news
ಸಿನಿಮಾ1 hour ago

Kannada New Movie: ನೆರವೇರಿತು ’ನವ ದಿಗಂತ’ ಚಿತ್ರದ ಮುಹೂರ್ತ

DK Shivakumar
ಕರ್ನಾಟಕ2 hours ago

Brand Bengaluru: ‘ಬ್ರ್ಯಾಂಡ್‌ ಬೆಂಗಳೂರು’ ನಿರ್ಮಾಣಕ್ಕೆ ಡಿಕೆಶಿ ಮಾಸ್ಟರ್‌ಪ್ಲಾನ್;‌ ಇಲ್ಲಿದೆ ಸಭೆಯ ವಿವರ

Drone Prathap Eye surgery for an old woman with her own money
ಬಿಗ್ ಬಾಸ್2 hours ago

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ4 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ5 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ23 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌