Kannada Rajyotsava : ಕನ್ನಡ ರಾಜ್ಯೋತ್ಸವ ದಿನ ಪಂಚ ಗೀತೆಗಳ ಗಾಯನ ಕಡ್ಡಾಯ - Vistara News

ಕರ್ನಾಟಕ

Kannada Rajyotsava : ಕನ್ನಡ ರಾಜ್ಯೋತ್ಸವ ದಿನ ಪಂಚ ಗೀತೆಗಳ ಗಾಯನ ಕಡ್ಡಾಯ

Kannada Rajyotsava : ಕನ್ನಡ ರಾಜ್ಯೋತ್ಸವ ದಿನದಂದು ಪಂಚ ಕನ್ನಡ ಗೀತೆಗಳನ್ನು ಹಾಡುವುದು ಕಡ್ಡಾಯ ಎಂದಿದೆ ಸರ್ಕಾರ. ಯಾವುವು ಆ ಹಾಡುಗಳು.

VISTARANEWS.COM


on

Kannada Rajyotsava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನವೆಂಬರ್‌ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ (Kannada Rajyotsava) ಸಂದರ್ಭದಲ್ಲಿ ಐದು ಕನ್ನಡ ಗೀತೆಗಳ ಗಾಯನವನ್ನು (Five Kannada Songs) ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ (State Government) ಅದೇಶ ಹೊರಡಿಸಿದೆ.

ಈ ಬಾರಿ ಕರ್ನಾಟಕ ಸಂಭ್ರಮ 50ನೇ ವರ್ಷಾಚರಣೆ (Kannada Sambhrama 50) ನಡೆಯುತ್ತಿದೆ. ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ಈ ವರ್ಷದ ನವೆಂಬರ್‌ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ನ.1ರಂದು ರಾಜ್ಯದೆಲ್ಲೆಡೆ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ 50 ಅಭಿಯಾನದ ಅಂಗವಾಗಿ ಆಯ್ಕೆ ಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತೆ ಗಾಯನ) ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ರಾಜ್ಯೋತ್ಸವದಂದು ಏನೇನು ಕಾರ್ಯಕ್ರಮ?

  1. ರಾಜ್ಯದ ಎಲ್ಲಾ ಜಿಲ್ಲಾಮಟ್ಟ, ತಾಲೂಕುಮಟ್ಟ ಹಾಗೂ ಗ್ರಾಮಪಂಚಾಯಿತಿಗಳಲ್ಲಿ ನ.1ರಂದು ರಾಜ್ಯೋತ್ಸವ ಆಚರಿಸಬೇಕು.
  2. ಮೊದಲು ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯಾದ ಐದು ಹಾಡುಗಳನ್ನು ಹಾಡಬೇಕು.
  3. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು (ಹುಯಿಳಗೋಳ ನಾರಾಯಣರಾಯರು), ಎಲ್ಲಾದರೂ ಇರು ಎಂತಾದರು ಇರು (ಕುವೆಂಪು), ಒಂದೇ ಒಂದೇ ಕರ್ನಾಟಕ ಒಂದೇ (ದ. ರಾ. ಬೇಂದ್ರೆ), ಹೊತ್ತಿತೋ ಹೊತ್ತಿತು ಕನ್ನಡ ದೀಪ (ಸಿದ್ದಯ್ಯ ಪುರಾಣಿಕ) ಮತ್ತು ಹೆಸರಾಯಿತು ಕರ್ನಾಟಕ- ಉಸಿರಾಗಲಿ ಕನ್ನಡ (ಚನ್ನವೀರ ಕಣವಿ) ಗೀತೆಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹಾಡಬೇಕಾಗಿರುವ ಹಾಡುಗಳು ಇವು

1. ಹುಯಿಲಗೋಳ ನಾರಾಯಣ ರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
2. ಕುವೆಂಪು ವಿರಚಿತ ಎಲ್ಲಾದರೂ ಇರು ಎಂತಾದರು ಇರು
3. ದ. ರಾ. ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ
4. ಸಿದ್ದಯ್ಯ ಪುರಾಣಿಕ ಅವರ ಹೊತ್ತಿತೋ ಹೊತ್ತಿತು ಕನ್ನಡ ದೀಪ
5. ಚನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

NIA Raid: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

NIA Raid: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್‌ಐಎ ತಂಡ ದಾಳಿ ನಡೆಸಿ ಯುವಕನನ್ನು ಬಂಧಿಸಿದೆ.ಬಂಧಿತ ಯುವಕ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಎನ್ನಲಾಗಿದ್ದು, ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದ.

VISTARANEWS.COM


on

NIA Raid
Koo

ಕಾರವಾರ: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಯುವಕನೊಬ್ಬನನ್ನು ಎನ್‌ಐ‌ಎ ತಂಡ ಬಂಧಿಸಿದೆ. ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಗ್ರಾಮದಲ್ಲಿ ಎನ್‌ಐಎ ತಂಡ ದಾಳಿ (NIA Raid) ನಡೆಸಿ ಯುವಕನನ್ನು ಬಂಧಿಸಿದೆ.

ಅಬ್ದುಲ್ ಶಕೂರ್(32) ಬಂಧಿತ ಯುವಕ. ದುಬೈನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಕೆಲ ದಿನಗಳ ಹಿಂದಷ್ಟೇ ಬಕ್ರೀದ್ ಆಚರಣೆಗಾಗಿ ದಾಸನಕೊಪ್ಪಕ್ಕೆ ಬಂದಿದ್ದ. ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸೃಷ್ಟಿಸುವ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸರ ಸಹಕಾರದಿಂದ ಯುವಕನನ್ನು ಎನ್‌ಎಐ ಬಂಧಿಸಿದೆ.

ಬಂಧಿತ ಯುವಕ ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಆಗಿದ್ದು, ಈತ ದುಬೈನಲ್ಲಿ ಕೆಲಸ ಮಾಡುತ್ತಿದ್ದ. ರಾಮೇಶ್ವರಂ ಕೆಫೆ ಬ್ಲಾಸ್ಟ್, ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ, ಶಿವಮೊಗ್ಗದಲ್ಲಿ ಮಸೀದಿ ಹಾಗೂ ಇತರೆ ಪ್ರದೇಶಗಳಲ್ಲಿ ಬಾಂಬ್ ಬ್ಲಾಸ್ಟ್ ಆರೋಪಿಗಳಿಗೆ ಪ್ರಚೋದನೆ ನೀಡಿರುವ ಆರೋಪ‌ ಈತನ ಮೇಲಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ;‌ ʼಎಸ್‌ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲʼ ಎಂದು ದೂರು

ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ ಹಾಗೂ ಪಾಸ್‌ಪೋರ್ಟ್‌ ನಕಲಿ ದಾಖಲೆ ನೀಡಿದ ಆರೋಪದಡಿ ಆರೋಪಿಯನ್ನು ಬಂಧಿಸಿದ್ದು, ಸದ್ಯ ಆರೋಪಿಗೆ ನೋಟೀಸ್ ನೀಡಿ ಗುಪ್ತ ಸ್ಥಳದಲ್ಲಿ NIA ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

Udupi Gang War

ಉಡುಪಿ: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ (Udupi Gang War) ನಡೆದಿದ್ದು, ಯುವಕನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಉಡುಪಿಯ ಪುತ್ತೂರಿನಲ್ಲಿ ಜೂನ್ 15ರ ರಾತ್ರಿ ಘಟನೆ ನಡೆದಿದೆ.

ಚರಣ್‌ ಎಂಬಾತ ಸೆಲೂನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಶಬರಿ ಎಂಬಾತನಿಗೆ ಚರಣ್‌ ಬೈದಿದ್ದ. ಈ ವಿಚಾರಕ್ಕೆ ಮಾತುಕತೆಗೆಂದು ಪ್ರವೀಣ್‌ ಎಂಬಾತ ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಚರಣ್‌ನನ್ನು ಕರೆದಿದ್ದ. ಇತ್ತ ಚರಣ್‌ ತನ್ನ ಮೂವರು ಸ್ನೇಹಿತರ ಜತೆಗೂಡಿ ಆಗಮಿಸಿದ್ದ.

ಚರಣ್‌ ಬರುತ್ತಿದ್ದಂತೆ ಪ್ರವೀಣ್‌ ಗ್ಯಾಂಗ್‌ ಏಕಾಏಕಿ ತಲವಾರ್‌ ಬೀಸಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್ ಬಿಟ್ಟು ಓಡಿದ್ದಾರೆ. ಇತ್ತ ಚರಣ್ ಸಿಗದಿದ್ದಕ್ಕೆ ಆತನ ಬೈಕ್‌ ಅನ್ನು ಜಖಂಗೊಳಿಸಿದ್ದಾರೆ. ತಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡು ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಉಡುಪಿಯಲ್ಲಿ ಹೆಚ್ಚುತ್ತಿರುವ ಗ್ಯಾಂಗ್ ವಾರ್ ಪ್ರಕರಣಕ್ಕೆ ಉಡುಪಿ ಜನತೆ ಭಯಭೀತರಾಗಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ದಾಖಲಾಗಿದೆ.

ಕೃತ್ಯದ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಅರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಸದ್ಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ;‌ ʼಎಸ್‌ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲʼ ಎಂದು ದೂರು

Prajwal Revanna Case: 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದತ್ತ ಅವರನ್ನು ಕರೆದೊಯ್ಯಲಾಗಿದೆ. ನ್ಯಾಯಾಂಗ ಬಂಧನಕ್ಕೆ ಹೋದರೂ ನಾಳೆ ಮತ್ತೆ ಬಾಡಿ ವಾರಂಟ್ ಮೇಲೆ ಅವರನ್ನು ಕಸ್ಟಡಿಗೆ ಪಡೆಯಲು ಎಸ್ಐಟಿ ಮುಂದಾಗಿದೆ.

VISTARANEWS.COM


on

Prajwal Revanna case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು (Prajwal Revanna Case) ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ (Judicial custody) ಒಪ್ಪಿಸಿ ಕೋರ್ಟ್‌ (Court) ಆದೇಶಿಸಿದೆ. ಹಿಂದಿನ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್ ಶಿವಕುಮಾರ್ ಆದೇಶ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ, ಎಸ್‌ಐಟಿ (SIT) ಅಧಿಕಾರಿಗಳು ತನ್ನ ಆರೋಗ್ಯ ಸಮಸ್ಯೆಯನ್ನು ಕಡೆಗಣಿಸಿದ್ದಾರೆ ಎಂದು ಪ್ರಜ್ವಲ್‌ ದೂರಿದ್ದು ಕೂಡ ವರದಿಯಾಗಿದೆ. ಪ್ರಜ್ವಲ್ ರೇವಣ್ಣ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಎಸ್‌ಐಟಿ ಕೋರ್ಟ್‌ಗೆ ಹಾಜರು ಪಡಿಸಿದಾಗ, “ಏನಾದ್ರೂ ಆರೋಗ್ಯ ಸಮಸ್ಯೆ ಇದೆಯಾ?ʼʼ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. “ಹೌದು ಸರ್” ಎಂದು ಪ್ರಜ್ವಲ್ ನುಡಿದರು.

“ಎಸ್ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲ” ಎಂದು ಪ್ರಜ್ವಲ್ ಹೇಳಿದ್ದಲ್ಲದೆ, “ಎಂಆರ್‌ಐ ಸ್ಕ್ಯಾನ್ ಮಾಡಿಸಿದ್ದೇನೆ. ಟ್ಯಾಬ್ಲೆಟ್ ತೆಗೆದುಕೊಳ್ತಿದ್ದೇನೆ” ಎಂದು ಹೇಳಿದಾಗ, ʼಆರೋಗ್ಯ ತಪಾಸಣೆ ಯಾಕೆ ಮಾಡಿಸಿಲ್ಲ?ʼ ಎಂದು ಅಧಿಕಾರಿಗಳನ್ನು ಜಡ್ಜ್ ಪ್ರಶ್ನಿಸಿದರು. “ಅವರು ಈಗ ಹೇಳ್ತಾ ಇದ್ದಾರೆ, ನಮಗೆ ಹೇಳಿಲ್ಲ” ಎಂದು ಎಸ್ಐಟಿ ಅಧಿಕಾರಿಗಳು ಉತ್ತರಿಸಿದರು.

ನಂತರ 14 ದಿನಗಳ ಕಾಲ ನ್ಯಾಯಾಂಗ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದರು. ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದತ್ತ ಅವರನ್ನು ಕರೆದೊಯ್ಯಲಾಗಿದೆ. ನ್ಯಾಯಾಂಗ ಬಂಧನಕ್ಕೆ ಹೋದರೂ ನಾಳೆ ಮತ್ತೆ ಬಾಡಿ ವಾರಂಟ್ ಮೇಲೆ ಅವರನ್ನು ಕಸ್ಟಡಿಗೆ ಪಡೆಯಲು ಎಸ್ಐಟಿ ಮುಂದಾಗಿದೆ. ಸಿಐಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ಗೆ ಸಂಬಂಧಿಸಿ ವಶಕ್ಕೆ ಪಡೆಯಲಿದೆ.

ಭವಾನಿ ರೇವಣ್ಣಗೆ ಸಿಗ್ತು ನಿರೀಕ್ಷಣಾ ಜಾಮೀನು

ಕೆಆರ್ ನಗರದಲ್ಲಿ ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯನ್ನು ಕಿಡ್ನಾಪ್ (kidnap case) ಮಾಡಿದ ಪ್ರಕರಣದಲ್ಲಿ ಎಸ್‌ಐಟಿ (SIT) ವಿಚಾರಣೆ ಎದುರಿಸುತ್ತಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು (Anticipatory Bail) ದೊರೆತಿದೆ.

ಕಳೆದ ವಾರ ಕಿಡ್ನಾಪ್‌ ಕೇಸ್‌ನಲ್ಲಿ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠದಿಂದ ಆದೇಶ ಪ್ರಕಟವಾಗಿದ್ದು, ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲಾಗಿತ್ತು. ಇಂದು ನಿರೀಕ್ಷಣಾ ಜಾಮೀನು ಅರ್ಜಿಯ ಅಂತಿಮ ಆದೇಶವನ್ನು ಪೀಠ ಪ್ರಕಟಿಸಿದೆ.

“ಪೊಲೀಸರು ಮುಂದಿಟ್ಟ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರವನ್ನೇ ಕೊಡಬೇಕೆಂದಿಲ್ಲ” ಎಂದು ಕೋರ್ಟ್‌ ಪೀಠ ಹೇಳಿದೆ. “ಸಂತ್ರಸ್ತೆಗೆ ಭವಾನಿ ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ಅಕ್ಕ ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ” ಎಂದೂ ಕೋರ್ಟ್‌ ಗಮನಿಸಿದೆ.

ಆದರೆ, ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬ ಷರತ್ತನ್ನು ಹೈಕೋರ್ಟ್ ವಿಧಿಸಿದೆ. ತನಿಖೆಗೆ ಎಸ್‌ಐಟಿಗೆ ಸಹಕರಿಸಬೇಕು ಎಂದು ಆದೇಶಿಸಿದೆ. ಮಾಜಿ ಸಚಿವ ರೇವಣ್ಣ ಅವರಿಗೂ ದೇಶ ಬಿಟ್ಟು ಹೊರಹೋಗಬಾರದು ಎಂಬ ಆದೇಶ ವಿಧಿಸಲಾಗಿತ್ತು.

ಎರಡು ವಾರದ ಹಿಂದೆ, ಹೈಕೋರ್ಟ್‌ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಎಸ್‌ಐಟಿ ವಿಚಾರಣೆಗೆ ಭವಾನಿ ಹಾಜರಾಗಿದ್ದರು. ಅಲ್ಲಿಯವರೆಗೂ ಭವಾನಿ ತಲೆಮರೆಸಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು.

ʼʼಸಂತ್ರಸ್ತೆ ನಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ನಾನು ಅವರನ್ನು ಅಪಹರಣ ಮಾಡಿಸಿಲ್ಲ. ಆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ನನ್ನನ್ನು ರಾಜಕೀಯವಾಗಿ ಮುಗಿಸಲು ಯಾರೋ ಸಂಚು ರೂಪಿಸಿದ್ದು, ಇದರ ಭಾಗವಾಗಿ ಈ ಆರೋಪ ಹೊರಿಸಲಾಗುತ್ತಿದೆʼʼ ಎಂದು ಭವಾನಿ ರೇವಣ್ಣ ಎಸ್‌ಐಟಿ ಅಧಿಕಾರಿಗಳ ಮುಂದೆ ಹೇಳಿದ್ದಾರೆ.

ಇದನ್ನೂ ಓದಿ: Prajwal Revanna Case: ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Continue Reading

ಉಡುಪಿ

Udupi Gang War : ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

Udupi Gang War: ಉಡುಪಿಯಲ್ಲಿ ಗ್ಯಾಂಗ್‌ ವಾರ್‌ ಮುಂದುವರಿದಿದೆ. ಯಾರ ಭಯವೂ ಇಲ್ಲದೆ ಪುಂಡರು ನಡುರಸ್ತೆಯಲ್ಲೇ ಯುವಕನನ್ನು ಅಟ್ಟಾಡಿಸಿ ದಾಳಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

By

Udupi Gang War
ಬಂಧಿತ ಆರೋಪಿಗಳು
Koo

ಉಡುಪಿ: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ (Udupi Gang War) ನಡೆದಿದ್ದು, ಯುವಕನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಉಡುಪಿಯ ಪುತ್ತೂರಿನಲ್ಲಿ ಜೂನ್ 15ರ ರಾತ್ರಿ ಘಟನೆ ನಡೆದಿದೆ.

ಚರಣ್‌ ಎಂಬಾತ ಸೆಲೂನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಶಬರಿ ಎಂಬಾತನಿಗೆ ಚರಣ್‌ ಬೈದಿದ್ದ. ಈ ವಿಚಾರಕ್ಕೆ ಮಾತುಕತೆಗೆಂದು ಪ್ರವೀಣ್‌ ಎಂಬಾತ ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಚರಣ್‌ನನ್ನು ಕರೆದಿದ್ದ. ಇತ್ತ ಚರಣ್‌ ತನ್ನ ಮೂವರು ಸ್ನೇಹಿತರ ಜತೆಗೂಡಿ ಆಗಮಿಸಿದ್ದ.

ಚರಣ್‌ ಬರುತ್ತಿದ್ದಂತೆ ಪ್ರವೀಣ್‌ ಗ್ಯಾಂಗ್‌ ಏಕಾಏಕಿ ತಲವಾರ್‌ ಬೀಸಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್ ಬಿಟ್ಟು ಓಡಿದ್ದಾರೆ. ಇತ್ತ ಚರಣ್ ಸಿಗದಿದ್ದಕ್ಕೆ ಆತನ ಬೈಕ್‌ ಅನ್ನು ಜಖಂಗೊಳಿಸಿದ್ದಾರೆ. ತಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡು ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಉಡುಪಿಯಲ್ಲಿ ಹೆಚ್ಚುತ್ತಿರುವ ಗ್ಯಾಂಗ್ ವಾರ್ ಪ್ರಕರಣಕ್ಕೆ ಉಡುಪಿ ಜನತೆ ಭಯಭೀತರಾಗಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ದಾಖಲಾಗಿದೆ.

ಕೃತ್ಯದ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಅರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಸದ್ಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಂದು (Murder Case) ಹಾಕಿದ್ದಾನೆ. ಶಿವಮೊಗ್ಗ ನಗರದ ಆಯನೂರು ಗೇಟ್ ಬಳಿ ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಶಿವಮೊಗ್ಗದ ಜೆಪಿ ನಗರದ ನಿವಾಸಿ ರಾಜುನಾಯ್ಕ(30) ಕೊಲೆಯಾದವನು. ವಿಕ್ರಮ್ ಕೊಲೆ ಆರೋಪಿ ಆಗಿದ್ದಾನೆ.

ಕಳೆದ ಎರಡ್ಮೂರು ದಿನದಿಂದ ರಾಜುನಾಯ್ಕ ಹಾಗೂ ವಿಕ್ರಮ್‌ ನಡುವೆ ಕಲಹ ಇತ್ತು. ನಿನ್ನೆ ಸೋಮವಾರ ರಾತ್ರಿ ಎಣ್ಣೆ ಕುಡಿಯೋಣ ಬಾ ಎಂದು ವಿಕ್ರಮ್‌ ರಾಜುನಾಯ್ಕ್‌ನನ್ನು ಕರೆದುಕೊಂಡು ಹೋಗಿದ್ದ. ಎಣ್ಣೆ ಕುಡಿಸುವ ನೆಪದಲ್ಲಿ ಸ್ಮಶಾನಕ್ಕೆ ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿ ಕೊಲೆ ಮಾಡಲಾಗಿದೆ.

ಸದ್ಯ ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Actor Darshan: 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ರೆ ಹೀಗಾಗುತ್ತಿರಲಿಲ್ಲ: ಇಂದ್ರಜಿತ್ ಲಂಕೇಶ್

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಜತೆಗೆ ಆರ್ಥಿಕವಾಗಿ ಸಹಾಯ ಮಾಡಬೇಕು. 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ದರೆ ಹೀಗಾಗುತ್ತಿರಲಿಲ್ಲ. ಅವರ ಒಳ್ಳೆಯದಕ್ಕೆ ನಾನು ಹೇಳಿದ್ದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಹೇಳಿದ್ದಾರೆ.

VISTARANEWS.COM


on

Actor Darshan
Koo

ಮಂಡ್ಯ: ನಾನು ಈಗಾಗಲೇ ದರ್ಶನ್‌ (Actor Darshan) ಬಂಧನದ ಬಗ್ಗೆ ಮಾತನಾಡಿದ್ದೇನೆ. 2021ರಲ್ಲೂ ದರ್ಶನ್ ಬಗ್ಗೆ ಮಾತನಾಡಿದ್ದೆ. ಈ ಹಿಂದೆ ನಾನು ಏಕಾಂಗಿಯಾಗಿ ಧ್ವನಿ ಎತ್ತಿದ್ದೆ. ಅವತ್ತು ಸುಧಾರಣೆಯಾಗಿದ್ದರೆ ಈತರಹ ಅನಾಹುತ ಆಗುತ್ತಿರಲಿಲ್ಲ, ನನ್ನ ಮಾತು ಕೇಳಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ವಿಚಾರ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಪತ್ನಿಗೆ ನ್ಯಾಯ ಕೊಡಿಸಬೇಕು. ಆಯಮ್ಮ ಗರ್ಭಿಣಿ, ವಿಧವೆ ಆಗುವ ಕನಸನ್ನು ಕಂಡಿರಲಿಲ್ಲ. ಇನ್ನು ಹುಟ್ಟದ ಮಗುವಿಗೆ ಭವಿಷ್ಯ ಇಲ್ಲದಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಜತೆಗೆ ಆರ್ಥಿಕವಾಗಿ ಸಹಾಯ ಮಾಡಬೇಕು. ಆ ಕುಟುಂಬಕ್ಕೆ ನಾನು ವೈಯಕ್ತಿಕವಾಗಿ 20 ಸಾವಿರ ಕೊಡುತ್ತಿದ್ದೇನೆ. ಎಲ್ಲರೂ ಮುಂದೆ ಬಂದು ಸಹಾಯ ಮಾಡಿ ಮಗುವಿಗೆ ಭವಿಷ್ಯ ಕಟ್ಟಿಕೊಡಬೇಕು ಎಂದು ಮನವಿ ಮಾಡಿದರು.

ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಈ ಬಗ್ಗೆ ನಾನು ಮಾತನಾಡುವುದಕ್ಕೆ ಇಷ್ಟ ಇಲ್ಲ. 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ದರೆ ಹೀಗಾಗುತ್ತಿರಲಿಲ್ಲ. ಅವರ ಒಳ್ಳೆಯದಕ್ಕೆ ನಾನು ಹೇಳಿದ್ದೆ, ವೈಯಕ್ತಿಕವಾಗಿ ನನಗೂ ಅವರಿಗೂ ದ್ವೇಷ ಇಲ್ಲ. ಅವರ ಜತೆ ಎರಡು ಸಿನಿಮಾ ಮಾಡಿದ್ದೆ. ಲಂಕೇಶ್ ಪತ್ರಿಕೆ ಸಿನಿಮಾ ಮೂಲಕ ಅಡ್ವಾನ್ಸ್ ಕೊಟ್ಟಾಗ ಕಾರು ತೆಗೆದುಕೊಂಡಿದ್ದರು, ಇವತ್ತಿಗೂ ಅವರತ್ರ ಸ್ಕೋಡಾ 171 ಕಾರು ಇದೆ. ದರ್ಶನ್ ಬೆಳೆದು ಬಂದ ದಾರಿ ಬಹಳ ಕಷ್ಟವಾಗಿತ್ತು. ಈ ತರಹದ ಪರಿಸ್ಥಿತಿ ಆಗಬಾರದಿತ್ತು. 2021ರಲ್ಲಿ ಏಕಾಂಗಿಯಾಗಿ ಧ್ವನಿ ಎತ್ತಿದ್ದೆ. ಅವತ್ತು ಸುಧಾರಣೆಯಾಗಿದ್ರೆ ಈತರಹ ಅನಾಹುತ ಆಗುತ್ತಿರಲಿಲ್ಲ. ನನ್ನ ಮಾತು ಕೇಳಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ರೇಣುಕಾಸ್ವಾಮಿ ಕುಟುಂಬಕ್ಕೆ ಅನ್ಯಾಯ ಆಗಿದೆ, ನ್ಯಾಯ ಕೊಡಿಸಿ. ಈ ಘಟನೆ ನಡೆಯೋದಕ್ಕೆ ಸಾಮಾಜಿಕ ಜಾಲತಾಣವೇ ಕಾರಣ. ಸಾಮಾಜಿಕ ಜಾಲತಾಣ ಇಂದು ಅದ್ಭುತವಾದ ಮಾಧ್ಯಮ. ಆದರೆ ಬಹಳ ದುರ್ಬಳಕೆ ಆಗುತ್ತಿದೆ. ಈ ಘಟನೆ ನಡೆಯೋದಕ್ಕೆ ಸೋಷಿಯಲ್ ಮೀಡಿಯಾವೇ ಕಾರಣ. ಅಶ್ಲೀಲವಾದ ಮೆಸೇಜ್ ಹಾಕದಿದ್ದರೆ ಈ ಘಟನೆಯೇ ನಡೆಯುತ್ತಿರಲಿಲ್ಲ. ಸರ್ಕಾರ ಸಾಮಾಜಿಕ ಜಾಲತಾಣದ ಬಗ್ಗೆ ಹೆಚ್ಚು ಗಮನಹರಿಸಬೇಕು. ಪತ್ರಕರ್ತರ ಮೇ ಹೇಗೆ ಮಾನನಷ್ಟ ಕೇಸ್ ಹಾಕುತ್ತಾರೆ, ಹಾಗೆಯೇ ಸೋಷಿಯಲ್ ಮೀಡಿಯಾದಲ್ಲೂ ತಪ್ಪು ಮಾಹಿತಿ ಅಥವಾ ಅಶ್ಲೀಲ ಮೆಸೇಜ್ ಹಾಕುವವರಿಗೂ ಕೇಸ್ ಹಾಕಬೇಕು. ಮಂತ್ರಿ, ಸಿಎಂ ಮನೆಯಲ್ಲಿ ಕ್ರೈಂ ನಡೆದರೆ ಕ್ರಮ ಕೈಗೊಳ್ಳುತ್ತಾರೆ. ಬೇರೆ ಮನೆಯವರ ಮನೆಯಲ್ಲಿ ನಗುತ್ತಾ ಕೂರುತ್ತಾರೆ. ಸಿಎಂ ಸಿದ್ದರಾಮಯ್ಯನವರು ಸೈಬರ್ ಕ್ರೈಮ್ ಪೊಲೀಸರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡಬೇಕೆಂಬ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿ, ಬ್ಯಾನ್ ಅನ್ನೋ ಶಬ್ದವನ್ನು ಯಾರೂ ಉಪಯೋಗಿಸಿಕೊಳ್ಳಬಾರದು. ಯಾವುದೇ ಸಂದರ್ಭದಲ್ಲೂ ಯಾರನ್ನೂ ಬ್ಯಾನ್ ಮಾಡಬಾರದು. ಈ ಹಿಂದೆ ಮಹಿಳೆಯರನ್ನು ಬ್ಯಾನ್ ಮಾಡಿದ್ದರು, ಆ ರೀತಿ ಮಾಡಬಾರದಿತ್ತು. ಕೋರ್ಟ್ ಕೂಡ ಕೆಲಸ ಇಲ್ಲದೇ ಯಾರೂ ಇರಬಾರದು ಅಂತ ಹೇಳುತ್ತೆ. ಪ್ರತಿಯೊಬ್ಬರೂ ಜೀವಿಸೋದಕ್ಕೆ ಕೆಲಸ ಮಾಡಲೇಬೇಕು. ಘಟನೆಯನ್ನು ಈಗಾಗಲೇ ನಾವು ಖಂಡಿಸಿದ್ದೇವೆ. ತನಿಖೆ ನಡೆಯುತ್ತಿದೆ, ಚಾರ್ಜ್ ಶೀಟ್ ಹಾಕುತ್ತಾರೆ. ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | Murder Case : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದು ನೇಣಿಗೆ ಶರಣಾದ ಪತಿ

ಇಂದ್ರಜಿತ್‌ ಲಂಕೇಶ್‌ಗೆ ಬಂದಿದ್ದವು ಬೆದರಿಕೆ ಕರೆಗಳು

2021ರಲ್ಲಿ ನಟ ದರ್ಶನ್ ಪ್ರಚೋದನೆಯಿಂದ ಅವರ ಹಿಂಬಾಲಕರು, ಬೆಂಬಲಿಗರು ನನಗೆ ಮೊಬೈಲ್ ಕರೆ ಹಾಗೂ ಮೆಸೇಜ್‌ಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಬೆದರಿಕೆ ಕರೆಗಳು ಬಂದಿದ್ದ ಬಗ್ಗೆ ಕ್ರಮ ಕೈಗೊಳ್ಳಲು ಪೊಲೀಸ್‌ ಕಮಿಷನರ್‌ಗೆ ಇಂದ್ರಜಿತ್‌ ಲಂಕೇಶ್‌ ದೂರು ನೀಡಿದ್ದರು.

Continue Reading
Advertisement
Igor Stimac sacked
ಕ್ರೀಡೆ5 mins ago

Igor Stimac sacked: ಭಾರತದ ಫುಟ್ಬಾಲ್​ ಕೋಚ್​ ಹುದ್ದೆಯಿಂದ ಸ್ಟಿಮಾಕ್‌ ಕಿಕ್​ ಔಟ್​; ಕಾರಣವೇನು?​

Deepika Padukone
ಸಿನಿಮಾ15 mins ago

Deepika Padukone: ಅಧಿಕ ಸಂಭಾವನೆ ಪಡೆಯುವ ನಾಯಕಿಯರಲ್ಲಿ ಕನ್ನಡತಿ ದೀಪಿಕಾ ನಂ. 1; ಪ್ರತಿ ಚಿತ್ರಕ್ಕೆ ಇವರು ಎಷ್ಟು ಹಣ ಪಡೆಯುತ್ತಾರೆ?

NIA Raid
ಕರ್ನಾಟಕ18 mins ago

NIA Raid: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

Job News
Latest32 mins ago

Job News: ಕೇಂದ್ರ ಸರ್ಕಾರದಿಂದ ‘ಎಲೆಕ್ಟ್ರಾನಿಕ್’ ಯೋಜನೆ;‌ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ!

Amala Paul
ಸಿನಿಮಾ55 mins ago

Amala Paul: ಮದುವೆಯಾದ 8 ತಿಂಗಳಿಗೇ ಗಂಡು ಮಗುವಿಗೆ ಜನ್ಮ ನೀಡಿದ ಸುದೀಪ್‌ ಚಿತ್ರದ ನಾಯಕಿ

Prajwal Revanna case
ಕ್ರೈಂ58 mins ago

Prajwal Revanna Case: ಪ್ರಜ್ವಲ್ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ;‌ ʼಎಸ್‌ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲʼ ಎಂದು ದೂರು

Udupi Gang War
ಉಡುಪಿ1 hour ago

Udupi Gang War : ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

Actor Darshan
ಕರ್ನಾಟಕ1 hour ago

Actor Darshan: 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ರೆ ಹೀಗಾಗುತ್ತಿರಲಿಲ್ಲ: ಇಂದ್ರಜಿತ್ ಲಂಕೇಶ್

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಖರೀದಿಸುವವರಿಗೆ ಗುಡ್‌ನ್ಯೂಸ್‌; ಮತ್ತೆ ಇಳಿದ ಚಿನ್ನದ ದರ

Austria vs France
ಕ್ರೀಡೆ2 hours ago

Austria vs France: ಗಂಭೀರ ಗಾಯಗೊಂಡ ಎಂಬಾಪೆ; ಮುಂದಿನ ಪಂದ್ಯಕ್ಕೆ ಅನುಮಾನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌