ಕಾನ್ಪುರ ಗಲಭೆ: ಕಲ್ಲು ಎಸೆದವರಿಗೆ 500 ರೂ., ಪೆಟ್ರೋಲ್‌ ಬಾಂಬ್‌ ಎಸೆದರೆ 5000 ರೂ! ಎಸ್‌ಐಟಿ ವರದಿಯಲ್ಲಿ ಬಹಿರಂಗ - Vistara News

ಕ್ರೈಂ

ಕಾನ್ಪುರ ಗಲಭೆ: ಕಲ್ಲು ಎಸೆದವರಿಗೆ 500 ರೂ., ಪೆಟ್ರೋಲ್‌ ಬಾಂಬ್‌ ಎಸೆದರೆ 5000 ರೂ! ಎಸ್‌ಐಟಿ ವರದಿಯಲ್ಲಿ ಬಹಿರಂಗ

ನೂಪುರ್‌ ಶರ್ಮ ಅವರ ವಿವಾದಾತ್ಮಕ ಹೇಳಿಕೆ ಖಂಡಿಸಿ ಜೂನ್‌ 3ರಂದು ಕಾನ್ಪುರದಲ್ಲಿ ನಡೆದ ಗಲಭೆ ಆಕಸ್ಮಿಕವಲ್ಲ. ಅದು ಅತ್ಯಂತ ವ್ಯವಸ್ಥಿತ ಎಂದು ಎಸ್‌ಐಟಿ ವರದಿ ಹೇಳಿದೆ.

VISTARANEWS.COM


on

Kanpur stone pelting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾನ್ಪುರ: ಬಿಜೆಪಿ ವಕ್ತಾರೆ ನೂಪುರ್‌ ಶರ್ಮ ಅವರ ವಿವಾದಾತ್ಮಕ ಹೇಳಿಕೆ ಖಂಡಿಸಿ ಜೂನ್‌ ೩ರಂದು ಕಾನ್ಪುರದಲ್ಲಿ ಭಾರಿ ಗಲಭೆಯೇ ನಡೆದಿತ್ತು. ಬಂದ್‌ಗೆ ಕರೆ ನೀಡಿದ ಕೆಲವೇ ನಿಮಿಷಗಳಲ್ಲಿ ದೊಡ್ಡ ಗುಂಪು ದಾಂಧಲೆ ಎಬ್ಬಿಸಿತ್ತು. ಕಲ್ಲು ತೂರಾಟ ಶುರುವಾಗಿತ್ತು. ಇಷ್ಟು ಸಣ್ಣ ಮಧ್ಯಂತರದಲ್ಲಿ ಇಷ್ಟೊಂದು ಜನ ಹೇಗೆ ಕಲ್ಲು ತೂರಾಟಕ್ಕೆ ತಯಾರಾದರು, ಕಲ್ಲು ಎಲ್ಲಿಂದ ಬಂತು ಎನ್ನುವ ವಿಚಾರಗಳೆಲ್ಲ ಚರ್ಚೆಗೆ ಬಂದಿತ್ತು. ಈಗ ವಿಶೇಷ ತನಿಖಾ ತಂಡ ಸಲ್ಲಿಸಿದ ವರದಿ ಇವುಗಳಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರ ನೀಡಿದೆ. ಅಂದರೆ, ಇದೊಂದು ಅತ್ಯಂತ ವ್ಯವಸ್ಥಿತವಾದ ಗಲಭೆ, ಮೊದಲೇ ಎಲ್ಲವನ್ನೂ ಸಿದ್ಧಗೊಳಿಸಿ ಹಿಂಸೆಗೆ ಪ್ರಚೋದನೆ ನೀಡಲಾಗಿದೆ ಎಂದು ವರದಿ ಹೇಳಿದೆ.

ಎಸ್‌ಐಟಿ ತನಿಖಾ ವರದಿ ಪ್ರಕಾರ, ಕಾನ್ಪುರದಲ್ಲಿ ಕಲ್ಲು ತೂರಾಟ ನಡೆಸಲು ಮೊದಲೇ ತರಬೇತಿ ನೀಡಲಾಗಿತ್ತು ಮತ್ತು ಅವರಿಗೆ ಹಣವನ್ನೂ ನೀಡಲಾಗಿದೆ. ಅಂದರೆ ಹಿಂಸೆಯನ್ನು ಹಬ್ಬಿಸಲು ದೊಡ್ಡ ಮೊತ್ತವನ್ನು ಚೆಲ್ಲಲಾಗಿದೆ. ಜತೆಗೆ ಒಂದೊಮ್ಮೆ ಬಂಧನವಾದರೆ, ಪ್ರಕರಣ ದಾಖಲಾದರೆ ಕಾನೂನಿನ ನೆರವು ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ.

ಕಾನ್ಪುರ ಗಲಭೆಗೆ ಸಂಬಂಧಿಸಿ ಮಂಗಳವಾರ ಎಸ್‌ಐಟಿ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದೆ. ಪಬ್ಲಿಕ್‌ ಪ್ರಾಸಿಕ್ಯೂಟರ್‌ ದಿನೇಶ್‌ ಅಗರ್ವಾಲ್‌ ಅವರು ಇದನ್ನು ನ್ಯಾಯಾಲಯಕ್ಕೆ ಒಪ್ಪಿಸಿದರು.

ಯಾರಿಗೆ ಎಷ್ಟು ಹಣ?
ಕಲ್ಲು ತೂರಾಟ ಮಾಡಿದವರಿಗೆ ೫೦೦ರಿಂದ ೧೦೦೦ ರೂ. ನೀಡಿದ್ದರೆ, ಪೆಟ್ರೋಲ್‌ ಬಾಂಬ್‌ ಎಸೆದು ಹಿಂಸೆ ಹೆಚ್ಚಿಸಿದವರಿಗೆ ೫೦೦೦ ರೂ.ವರೆಗೆ ನೀಡಲಾಗಿದೆ. ವಾಹನಗಳಲ್ಲಿ ಕಲ್ಲು ತಂದು ಕೊಟ್ಟವರಿಗೆ ತಲಾ ೧೦೦೦ ರೂ. ನೀಡಲಾಗಿದೆ. ಈ ರೀತಿ ಕಲ್ಲು ತೂರಾಟ ಮಾಡಲು ಏಳರಿಂದ ಒಂಬತ್ತು ದಿನಗಳ ಕಾಲ ತರಬೇತಿ ನೀಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಎಲ್ಲಿ ಮೊದಲ ಹಿಂಸಾಚಾರ?
ನೂಪುರ್‌ ಶರ್ಮ ಅವರ ಹೇಳಿಕೆಯನ್ನು ಖಂಡಿಸಿ ಜೂನ್‌ ೩ರಂದು ಕಾನ್ಪುರದ ಪರೇಡ್‌ ಮಾರ್ಕೆಟ್‌ನಲ್ಲಿ ಮೊದಲ ಬಾರಿಗೆ ಹಿಂಸಾಚಾರ ಭುಗಿಲೆದ್ದಿತ್ತು. ಸ್ಥಳೀಯ ಸಂಘಟನೆಯೊಂದು ಬಂದ್‌ಗೆ ಕರೆ ನೀಡಿತ್ತು. ಕೆಲವೇ ನಿಮಿಷಗಳಲ್ಲಿ ಹಿಂಸಾಚಾರ ಹರಡಿ ಅಲ್ಲೋಲಕಲ್ಲೋಲ ಉಂಟಾಗಿತ್ತು. ಪರೇಡ್‌ ಮಾರ್ಕೆಟ್‌ ಎನ್ನುವುದು ನಗರದ ಅತಿ ದೊಡ್ಡ ಹೋಲ್‌ಸೇಲ್‌ ಮಾರ್ಕೆಟ್‌.

ಹಯಾತ್‌ ಝಫರ್‌ ಹಶ್ಮಿಯೇ ಪ್ರಧಾನ ಸೂತ್ರಧಾರ
ಅಷ್ಟಕ್ಕೂ ಈ ಎಲ್ಲ ಹಿಂಸಾಚಾರದ ರೂವಾರಿ ಹಯಾತ್‌ ಝಪರ್‌ ಹಷ್ಮಿ ಎಂದು ಪೊಲೀಸರು ಗುರುತಿಸಿದ್ದರು. ಅವನ ಸಹಚರರು ಸೇರಿದಂತೆ ೪೦ ಮಂದಿ ದೊಂಬಿಕೋರರನ್ನು ಬಂಧಿಸಲಾಗಿದೆ. ಹಷ್ಮಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ.

ಹಷ್ಮಿಯ ಈ ದುಷ್ಕೃತ್ಯಕ್ಕೆ ಕೊಲ್ಲಿ ರಾಷ್ಟ್ರಗಳಿಂದಲೂ ಹಣ ಹೂಡಿಕೆ ಮಾಡಲಾಗಿತ್ತು ಎನ್ನಲಾಗಿದೆ. ಇದು ಆತನ ಬ್ಯಾಂಕ್‌ ಅಕೌಂಟ್‌ ಮತ್ತು ಫೋನ್‌ ಸಂಭಾಷಣೆ ಮೂಲಕ ಸ್ಪಷ್ಟವಾಗಿದೆ. ಬಾಬಾ ಬಿರಿಯಾನಿಯ ಮಾಲೀಕರ ಮುಕ್ತಾರ್‌ ಬಾಬಾ ಕಲ್ಲು ತೂರಾಟಕ್ಕೆ ಜನರನ್ನು ಗೊತ್ತು ಮಾಡಿದ್ದ. ಕಲ್ಲು ತೂರಾಟಕ್ಕೆ ನಿಯೋಜಿತರಾದವರಿಗೆ ೧೦ ಲಕ್ಷ ರೂ.ಯನ್ನು ಅಡ್ವಾನ್ಸ್‌ ಅಗಿ ಪಾವತಿ ಮಾಡಲಾಗಿತ್ತು ಎಂದು ವರದಿ ಹೇಳಿದೆ. ಹಾಜಿ ಕುಡ್ಡುಸ್‌ ಎಂಬಾತ ಗಲಭೆ ಸಂದರ್ಭದಲ್ಲಿ ಸ್ಥಳೀಯಾಡಳಿತದ ಬೆಂಬಲ ಪಡೆಯುವ ಕೆಲಸ ಮಾಡಿದ್ದ. ಆತನಿಗೆ ಒಂದು ಫ್ಲ್ಯಾಟನ್ನು ಉಚಿತವಾಗಿ ನೀಡಲಾಗಿದೆ.

ಇದನ್ನೂ ಓದಿ| ಪ್ರವಾದಿ ಅವಹೇಳನ ವಿವಾದ: ಪ್ರಯಾಗರಾಜ್‌ ಹಿಂಸಾಚಾರ ಆರೋಪಿ ಮನೆಗೆ ಬುಲ್ಡೋಜರ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Darshan Arrested: ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

Darshan Arrested vinish write special message for darshan fathers day
Koo

ಬೆಂಗಳೂರು: ತಂದೆ – ತಾಯಿ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಅಮೂಲ್ಯವಾದವರು. ಅವರಲ್ಲಿ ನಾವು ಯಾರನ್ನೇ ಕಳೆದುಕೊಂಡರೂ (Darshan Arrested) ಆಘಾತದ ಸಿಡಿಲು ಬಡಿಯುವುದಂತೂ ಖಂಡಿತ. ಹಾಗಾಗಿ ತಂದೆ ತಾಯಿಯ ಋಣ, ಪ್ರೀತಿ, ಮಮತೆ ಯಾವತ್ತೂ ಮರೆಯಲಾಗದು.  ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭ ಕೋರಿದ್ದಾನೆ. ದರ್ಶನ್‌ಗೆ ಒಬ್ಬನೇ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.

ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದಿದ್ದ ದರ್ಶನ್‌ ಪುತ್ರ ವಿನೀಶ್

ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದ.

ಇದನ್ನೂ ಓದಿ: Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದ.

ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ

ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading

ದೇಶ

ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Illegal beef trade: ಅಕ್ರಮವಾಗಿ ಬೀಫ್‌ ವ್ಯಾಪಾರ ಮಾಡುತ್ತಿದ್ದ 11 ಮಂದಿ ಮುಸ್ಲಿಮರು ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಮನೆಗಳನ್ನು ಕೆಡವಿ ಹಾಕುವ ಮೂಲಕ ಮಧ್ಯ ಪ್ರದೇಶದ ಪೊಲೀಸರು ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧದ ಕಠಿಣ ಕ್ರಮ ಕೈಗೊಂಡಿದ್ದಾರೆ. ದಾಳಿ ವೇಳೆ ಪತ್ತೆಯಾದ 150 ಹಸುಗಳನ್ನು ಗೋಶಾಲೆಗೆ ರವಾನಿಸಲಾಗಿದೆ.

VISTARANEWS.COM


on

Illegal beef trade
Koo

ಭೋಪಾಲ್‌: ಅಕ್ರಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮಧ್ಯ ಪ್ರದೇಶ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಅಪರಾಧಿಗಳ ಅನಧಿಕೃತ ಕಟ್ಟಡ ನಿರ್ನಾಮ ಮಾಡಿ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದೀಗ ಅಂತಹದ್ದೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡು ದೇಶದ ಗಮನ ಸೆಳೆದಿದೆ. ಅಕ್ರಮವಾಗಿ ಬೀಫ್‌ ವ್ಯಾಪಾರ ಮಾಡುತ್ತಿದ್ದ (Illegal beef trade), 11 ಮಂದಿ ಮುಸ್ಲಿಮರು ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಮನೆಗಳನ್ನು ಕೆಡವಿ ಹಾಕಿದೆ.

ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯ ಹೊಂದಿರುವ ಮಾಂಡ್ಲಾದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿನ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧದ ಕ್ರಮದ ಭಾಗವಾಗಿ ಈ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ʼʼನೈನ್ಪುರದ ಭೈನ್ವಾಹಿ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಹಸುಗಳನ್ನು ಮಾಂಸಕ್ಕಾಗಿ ಕೂಡಿಡಲಾಗಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಈ ಕ್ರಮ ಕೈಗೊಂಡಿದ್ದಾರೆʼʼ ಎಂದು ಮಾಂಡ್ಲಾ ಪೊಲೀಸ್ ವರಿಷ್ಠಾಧಿಕಾರಿ ರಜತ್ ಸಕ್ಲೇಚಾ ಪಿಟಿಐಗೆ ತಿಳಿಸಿದ್ದಾರೆ. “ಪೊಲೀಸ್‌ ತಂಡ ದಾಳಿ ನಡೆಸಿದಾಗ ಆರೋಪಿಗಳ ಹಿತ್ತಿಲಿನಲ್ಲಿ ಮಾಂಸಕ್ಕಾಗಿ 150 ಹಸುಗಳನ್ನು ಕಟ್ಟಿ ಹಾಕಿರುವುದು ಕಂಡು ಬಂದಿತ್ತು. ಜತೆಗೆ ಎಲ್ಲ 11 ಆರೋಪಿಗಳ ಮನೆಗಳ ರೆಫ್ರಿಜರೇಟರ್ ಗಳಿಂದ ಹಸುವಿನ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಣಿಗಳ ಕೊಬ್ಬು, ಜಾನುವಾರುಗಳ ಚರ್ಮ ಮತ್ತು ಮೂಳೆಗಳು ಸಹ ದಾಳಿ ವೇಳೆ ಕಂಡು ಬಂದಿದೆ. ಅವುಗಳನ್ನು ಕೋಣೆಯಲ್ಲಿ ತುಂಬಿಡಲಾಗಿತ್ತುʼʼ ಎಂದು ಅವರು ಹೇಳಿದ್ದಾರೆ.

ದೃಢಪಡಿಸಿದ ವೈದ್ಯರು

ʼʼದಾಳಿ ವೇಳೆ ಪತ್ತೆಯಾಗಿರುವುದು ಗೋಮಾಂಸ ಎನ್ನುವುದನ್ನು ಸ್ಥಳೀಯ ಸರ್ಕಾರಿ ಪಶುವೈದ್ಯರು ದೃಢಪಡಿಸಿದ್ದಾರೆ. ದ್ವಿತೀಯ ಡಿಎನ್ಎ ವಿಶ್ಲೇಷಣೆಗಾಗಿ ನಾವು ಮಾದರಿಗಳನ್ನು ಹೈದರಾಬಾದ್‌ಗೆ ಕಳುಹಿಸಿದ್ದೇವೆ. 11 ಆರೋಪಿಗಳ ಮನೆಗಳು ಸರ್ಕಾರಿ ಭೂಮಿಯಲ್ಲಿದ್ದ ಕಾರಣ ಅವುಗಳನ್ನು ನೆಲಸಮಗೊಳಿಸಲಾಗಿದೆ” ಎಂದು ರಜತ್ ಸಕ್ಲೇಚಾ ವಿವರಿಸಿದ್ದಾರೆ.

10 ಆರೋಪಿಗಳಿಗಾಗಿ ಶೋಧ

ಹಸುಗಳು ಮತ್ತು ಗೋಮಾಂಸವನ್ನು ವಶಪಡಿಸಿಕೊಂಡ ನಂತರ ಶುಕ್ರವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡ ಉಳಿದ 10 ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಲಾಗಿದೆ.

ಇದನ್ನೂ ಓದಿ: Beef Smuggling: ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

ಗೋಶಾಲೆಗೆ ರವಾನೆ

“ದಾಳಿ ವೇಳೆ ಪತ್ತೆಯಾದ 150 ಹಸುಗಳನ್ನು ಗೋಶಾಲೆಗೆ ಕಳುಹಿಸಲಾಗಿದೆ. ಭೈನ್ಸ್ವಾಹಿ ಪ್ರದೇಶವು ಕೆಲವು ಸಮಯದಿಂದ ಹಸು ಕಳ್ಳ ಸಾಗಾಣಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ. ಮಧ್ಯ ಪ್ರದೇಶದಲ್ಲಿ ಗೋ ಹತ್ಯೆಯನ್ನು ನಿಷೇಧಿಸಲಾಗಿದ್ದು, ಇಂತಹ ಕೃತ್ಯ ಎಸಗಿದರೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದಾದ ಕಾನೂನು ಇದೆʼʼ ಎಂದು ಎಸ್‌ಪಿ ರಜತ್ ಸಕ್ಲೇಚಾ ಹೇಳಿದ್ದಾರೆ. ಅಪರಾಧಿಗಳ ಪೈಕಿ ಇಬ್ಬರ ಅಪರಾಧ ಹಿನ್ನೆಲೆಯನ್ನು ಸಂಗ್ರಹಿಸಲಾಗಿದೆ ಮತ್ತು ಉಳಿದ ವ್ಯಕ್ತಿಗಳ ಪೂರ್ವಾಪರಗಳ ಬಗ್ಗೆ ಕಂಡುಹಿಡಿಯುವ ಪ್ರಕ್ರಿಯೆ ನಡೆಯುತ್ತಿದೆ ಎಂದೂ ಅವರು ವಿವರಿಸಿದ್ದಾರೆ. ಎಲ್ಲ ಆರೋಪಿಗಳು ಮುಸ್ಲಿಮರು ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

Actor Darshan: ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

VISTARANEWS.COM


on

Actor Darshan ACP Chandan Kumar work salute by people
Koo

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ನಟ ದರ್ಶನ್ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ಗೆ ಮೈಸೂರಿನ ಇಟ್ಟಿಗೆಗೂಡು ಗ್ರಾಮಸ್ಥರಿಂದ ಶ್ಲಾಘನೆ ವ್ಯಕ್ತವಾಗಿದೆ. ಎಸಿಪಿ ಚಂದನ್ ಕುಮಾರ್ ಸ್ನೇಹಿತರು ವಿಸ್ತಾರ ನ್ಯೂಸ್‌ ಜತೆ ಸಂತಸ ಹಂಚಿಕೊಂಡಿದ್ದು ಹೀಗೆ.

ʻʻಎಸಿಪಿ ಚಂದನ್ ಕುಮಾರ್‌ ನಮ್ಮೂರಿನವರು ಎನ್ನುವುದೇ ನಮಗೆ ಹೆಮ್ಮೆ. ತುಂಬಾ ಸಂಭಾವಿತ ವ್ಯಕ್ತಿ. ಯಾವುದೇ ರಾಜಕೀಯ ಒತ್ತಡಕ್ಕೂ ಮಣಿಯಲ್ಲ, ಪ್ರಭಾವಕ್ಕೂ ಜಗ್ಗಲ್ಲ. ತಮ್ಮ ಪಾಲಿಗೆ ಬಂದ ಕೆಲಸವನ್ನು ಅತ್ಯಂತ ದಕ್ಷತೆಯಿಂದ ಮಾಡಿದ್ದಾರೆ.ಈ ಕೇಸ್ ಮೂಲಕ ಚಂದನ್ ಕರ್ನಾಟಕ ಪೊಲೀಸರ ಘನತೆ ಹೆಚ್ಚಿಸಿದ್ದಾರೆʼʼಎಂದು ಚಂದನ್ ಕುಮಾರ್ ಸ್ನೇಹಿತರು ವಿಸ್ತಾರ ನ್ಯೂಸ್‌ ಜತೆ ಸಂತಸ ಹಂಚಿಕೊಂಡರು.

ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಕೇಸ್;‌ ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

2011ರಲ್ಲಿ ಕರ್ನಾಟಕದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಬಂಧಿಸಿದ್ದು ಇದೇ ಗಿರೀಶ್‌ ಅವರು. ಹಾಗೇ ಇಂಜಿನಿಯರ್‌ ಆಗಿ ಬಳಿಕ ಪೊಲೀಸ್‌ ಅಧಿಕಾರಿಯಾಗಿರುವ ಎಸ್‌ ಗಿರೀಶ್‌ ಅವರು ಈ ಹಿಂದೆ ಲೋಕಾಯುಕ್ತದಲ್ಲಿದ್ದಾಗ ತಮ್ಮ ನೇರ ಹಾಗೂ ಧೈರ್ಯದ ನಡವಳಿಕೆಗೆ ಹೆಸರಾಗಿದ್ದರು. ಇನ್ನು, ಚಂದನ್‌ ಕುಮಾರ್‌ ಅವರು ಮೊದಲು ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿದ್ದರು. ಅದಾದ ಬಳಿಕ ಪೊಲೀಸ್‌ ಅಧಿಕಾರಿಯಾದರು.

ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Continue Reading

ಕರ್ನಾಟಕ

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್;‌ ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

Actor Darshan: ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Actor Darshan

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Continue Reading
Advertisement
Darshan Arrested vinish write special message for darshan fathers day
ಸ್ಯಾಂಡಲ್ ವುಡ್9 mins ago

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

INDW vs SAW
ಕ್ರೀಡೆ28 mins ago

INDW vs SAW: ಶುಭಾರಂಭದ ನಿರೀಕ್ಷೆಯಲ್ಲಿ ಹರ್ಮನ್​ಪ್ರೀತ್​ ಬಳಗ; ಇಂದು ಮೊದಲ ಏಕದಿನ

Kannada New Movie Maryade Prashne out now
ಸ್ಯಾಂಡಲ್ ವುಡ್29 mins ago

Kannada New Movie : ಆರ್​ಜೆ ಪ್ರದೀಪ್​ರ ‘ಮರ್ಯಾದೆ ಪ್ರಶ್ನ’ಗೆ ಆಲ್​ ಓಕೆಯ ಸಖತ್‌ ಹಾಡು!

Darshan Arrested
ಕರ್ನಾಟಕ37 mins ago

Darshan Arrested: ಕೊಲೆ ಬಳಿಕ ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ; ಇಂದು ಸ್ಥಳ ಮಹಜರು!

Kotee Movie Review dolly dhanjay News In Kannada
ಸ್ಯಾಂಡಲ್ ವುಡ್40 mins ago

Kotee Movie Review: ಎಲ್ಲರೂ ಬೆತ್ತಲೆಯಾಗಿರುವ ಸಮಾಜದಲ್ಲಿ ಬಟ್ಟೆ ಹಾಕಿಕೊಂಡವನಿಗೆ ನಾಚಿಕೆಯಾದಾಗ?!

Illegal beef trade
ದೇಶ42 mins ago

ಗೋಮಾಂಸ ಅಕ್ರಮ ವ್ಯಾಪಾರ ನಡೆಸುತ್ತಿದ್ದ 11 ಮುಸ್ಲಿಮರ ಮನೆ ಕೆಡವಿದ ಪೊಲೀಸರು; 150 ಹಸುಗಳ ರಕ್ಷಣೆ

Actor Darshan ACP Chandan Kumar work salute by people
ಕ್ರೈಂ53 mins ago

Actor Darshan: ದರ್ಶನ್‌ ಬಂಧಿಸಿದ ಎಸಿಪಿ ಚಂದನ್ ಕುಮಾರ್‌ ಕೆಲಸಕ್ಕೆ ಸೆಲ್ಯೂಟ್‌ ಎಂದ ಗ್ರಾಮಸ್ಥರು!

Euro 2024
ಕ್ರೀಡೆ1 hour ago

Euro 2024: ಕ್ರೊವೇಷಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸ್ಪೇನ್

Bihar Women
ದೇಶ1 hour ago

ರಾಹುಲ್‌ ಗಾಂಧಿ ‘ಟಕಾ ಟಕ್’‌ 1 ಲಕ್ಷ ರೂ.ಗಾಗಿ ಬ್ಯಾಂಕ್‌ಗೆ ನುಗ್ಗಿದ ನೂರಾರು ಸ್ತ್ರೀಯರು; ಬಳಿಕ ಆಗಿದ್ದೇನು?

Kalaburagi News
ಕರ್ನಾಟಕ1 hour ago

Kalaburagi News: ಕಲಬುರಗಿಯಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರ ಸಾವು; ಮತ್ತೊಬ್ಬನ ಸ್ಥಿತಿ ಗಂಭೀರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ20 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌