India Canada Row: ಟ್ರುಡೊ ಅಸಮರ್ಥ, ಭಾರತದಲ್ಲಿ ಹಾಸ್ಯಾಸ್ಪದ ವ್ಯಕ್ತಿ: ಕೆನಡಾ ಮುಖಂಡ ಕಟು ಟೀಕೆ - Vistara News

ದೇಶ

India Canada Row: ಟ್ರುಡೊ ಅಸಮರ್ಥ, ಭಾರತದಲ್ಲಿ ಹಾಸ್ಯಾಸ್ಪದ ವ್ಯಕ್ತಿ: ಕೆನಡಾ ಮುಖಂಡ ಕಟು ಟೀಕೆ

ಕೆನಡಾದ ಪ್ರಮುಖ ವಿರೋಧ ರಾಜಕೀಯ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ (Pierre Poilievre), ಭಾರತದೊಂದಿಗಿನ ಕೆನಡಾದ ಹದಗೆಟ್ಟ ಸಂಬಂಧಗಳ ಬಗ್ಗೆ ವಿಷಾದಿಸಿದ್ದಾರೆ.

VISTARANEWS.COM


on

justin trudeau
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಪ್ರಧಾನ ಮಂತ್ರಿ ಜಸ್ಟಿನ್‌ ಟ್ರುಡೊ (Canada PM Justin Trudeau) ಅಸಮರ್ಥ ನಾಯಕ; ಅವರು ಈಗ ಭಾರತದಲ್ಲಿ ಹಾಸ್ಯಾಸ್ಪದ ವ್ಯಕ್ತಿ ಆಗಿಬಿಟ್ಟಿದ್ದಾರೆ ಎಂದು ಕೆನಡಾದ ಪ್ರಮುಖ ವಿಪಕ್ಷ ನಾಯಕ ಪಿಯರೆ ಪೊಯಿಲಿವ್ರೆ ಕಟುವಾಗಿ ಟೀಕಿಸಿದ್ದಾರೆ.

ಕೆನಡಾದ ಪ್ರಮುಖ ವಿರೋಧ ರಾಜಕೀಯ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ (Pierre Poilievre), ಭಾರತದೊಂದಿಗಿನ ಕೆನಡಾದ ಹದಗೆಟ್ಟ ಸಂಬಂಧಗಳ ಬಗ್ಗೆ ವಿಷಾದಿಸಿದ್ದಾರೆ. ಅವರು ಭಾರತದೊಂದಿಗೆ ವೃತ್ತಿಪರ ಸಂಬಂಧವನ್ನು ಪುನಃಸ್ಥಾಪಿಸಲು ಪ್ರಯತ್ನಿಸುವುದಾಗಿ ಶಪಥ ಮಾಡಿದ್ದಾರೆ.

ಪೊಲಿಯೆವ್ರೆ ಅವರು ಕೆನಡಾದ ಹೌಸ್ ಆಫ್ ಕಾಮನ್ಸ್‌ನಲ್ಲಿ ಅತಿದೊಡ್ಡ ವಿರೋಧ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಪ್ರಸ್ತುತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಗಳಲ್ಲಿ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರ ಲಿಬರಲ್ ಪಕ್ಷಕ್ಕಿಂತ ಪೊಲಿಯೆವ್ರೆ ಹೆಚ್ಚಿನ ಮುನ್ನಡೆಯನ್ನು ಹೊಂದಿದ್ದಾರೆ. ಆದರೆ 2025ರವರೆಗೆ ಯಾವುದೇ ಚುನಾವಣೆ ಇಲ್ಲ.

ನೇಪಾಳದ ಮಾಧ್ಯಮ ಸಂಸ್ಥೆ ʼನಮಸ್ತೆ ರೇಡಿಯೊ ಟೊರೊಂಟೊʼಗೆ ನೀಡಿದ ಸಂದರ್ಶನದಲ್ಲಿ, ತನ್ನನ್ನು ಅಧಿಕಾರಕ್ಕೆ ತಂದರೆ ಭಾರತದೊಂದಿಗೆ ವೃತ್ತಿಪರ ಸಂಬಂಧವನ್ನು ಮರುಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ. “ಜಸ್ಟಿನ್ ಟ್ರುಡೊ ಎಂಟು ವರ್ಷಗಳ ನಂತರವೂ ಆಡಳಿತಕ್ಕೆ ಯೋಗ್ಯವಾಗಿಲ್ಲ ಎಂಬುದಕ್ಕೆ ಉಭಯ ದೇಶಗಳ ನಡುವೆ ಹಳಸಿದ ಸಂಬಂಧ ಮತ್ತೊಂದು ಉದಾಹರಣೆ. ಟ್ರುಡೊ ದೇಶದೊಳಗೆ ಕೆನಡಿಯನ್ನರನ್ನು ಒಡೆದಿದ್ದಾರೆ ಮತ್ತು ವಿದೇಶದಲ್ಲಿ ನಮ್ಮ ಸಂಬಂಧಗಳನ್ನು ಧ್ವಂಸಗೊಳಿಸಿದ್ದಾರೆ. ಅವರು ಎಷ್ಟು ಅಸಮರ್ಥ ಮತ್ತು ವೃತ್ತಿಪರ ಅಲ್ಲದ ವ್ಯಕ್ತಿ ಎಂಬುದು ಸಾಬೀತಾಗಿದೆ. ಈಗ ನಾವು ಪ್ರಪಂಚದ ಪ್ರತಿಯೊಂದು ಪ್ರಮುಖ ಶಕ್ತಿಯೊಂದಿಗೂ ವಿವಾದದಲ್ಲಿದ್ದೇವೆ. ಮತ್ತು ಅದರಲ್ಲಿ ಭಾರತವೂ ಸೇರಿದೆ” ಎಂದು ಅವರು ಹೇಳಿದರು.

ಜೂನ್‌ನಲ್ಲಿ ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಟ್ರುಡೊ ಹೇಳಿದ ಬಳಿಕ ಉದ್ವಿಗ್ನತೆ ಸೃಷ್ಟಿಯಾಗಿದೆ. ಕಳೆದ ವಾರ ಕೆನಡಾದ 41 ರಾಜತಾಂತ್ರಿಕರನ್ನು ಭಾರತದಿಂದ ಹಿಂತೆಗೆದುಕೊಳ್ಳಲಾಗಿದೆ. ತನಿಖೆಯಲ್ಲಿ ಸಹಕರಿಸುವಂತೆ ಕೆನಡಾ ಭಾರತಕ್ಕೆ ಕರೆ ನೀಡಿದೆ. ಆದರೆ ನವದೆಹಲಿ ಈ ಆರೋಪವನ್ನು ತಿರಸ್ಕರಿಸಿದೆ. ಕೆನಡಿಯನ್ನರಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ: India Canada Row: ಕೆನಡಾ ಉಪಟಳ; ಬೆಂಗಳೂರಲ್ಲಿ ವೀಸಾ ಸೇವೆ ಸ್ಥಗಿತ, 17 ಸಾವಿರ ಜನ ಅತಂತ್ರ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Patna Boat Accident: ದೇವರ ದರ್ಶನ ಮಾಡಿ ಮರಳುತ್ತಿದ್ದ 17 ಭಕ್ತರಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿ 6 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನದಿಯಲ್ಲಿ ಮುಳುಗಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಉಳಿದ 6 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅನಾಹುತ ನಡೆಯುವ ವೇಳೆ ದೋಣಿ ಬರ್ಹ್‌ನ ಉಮಾನಾಥ್ ಘಾಟ್‌ನಿಂದ ಡಿಯಾರಾಗೆ ಪ್ರಯಾಣಿಸುತ್ತಿತ್ತು.

VISTARANEWS.COM


on

Patna Boat Accident
Koo

ಪಟನಾ: ದೇವರ ದರ್ಶನ ಮಾಡಿ ಮರಳುತ್ತಿದ್ದ 17 ಭಕ್ತರಿದ್ದ ದೋಣಿ ಗಂಗಾ ನದಿಯಲ್ಲಿ ಮುಳುಗಿ 6 ಮಂದಿ ನಾಪತ್ತೆಯಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ನದಿಯಲ್ಲಿ ಮುಳುಗಿದ್ದ 11 ಮಂದಿಯನ್ನು ರಕ್ಷಿಸಲಾಗಿದ್ದು, ನಾಪತ್ತೆಯಾಗಿರುವ ಉಳಿದ 6 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ (Patna Boat Accident).

ಪಾಟ್ನಾದಿಂದ 70 ಕಿಮೀ ದೂರದಲ್ಲಿರುವ ಬಾರ್ಹ್ ಪಟ್ಟಣದ ಬಳಿಯ ಗಂಗಾ ನದಿಯಲ್ಲಿ ಪ್ರಯಾಣಿಕರಿದ್ದ ದೋಣಿ ಮುಳುಗಿ ಈ ದುರಂತ ಸಂಭವಿಸಿದೆ. ಅನಾಹುತ ನಡೆಯುವ ವೇಳೆ ದೋಣಿ ಬರ್ಹ್‌ನ ಉಮಾನಾಥ್ ಘಾಟ್‌ನಿಂದ ಡಿಯಾರಾಗೆ ಪ್ರಯಾಣಿಸುತ್ತಿತ್ತು. ಸದ್ಯ ಸ್ಥಳಕ್ಕೆ ಧಾವಿಸಿರುವ ಎಸ್‌ಡಿಆರ್‌ಎಫ್ ತಂಡ ಶೋಧ ಕಾರ್ಯ ಆರಂಭಿಸಿದೆ.

ʼʼಉಮನಾಥ್ ಘಾಟ್ ಸಮೀಪದಲ್ಲೇ ದೋಣಿ ಮುಳುಗಿದೆ. ದೋಣಿಯಲ್ಲಿ ಒಂದೇ ಕುಟುಂಬದ 17 ಮಂದಿ ಪ್ರಯಾಣಿಸುತ್ತಿದ್ದರು. ಬೆಳಿಗ್ಗೆ ಈ ಅವಘಡ ಸಂಭವಿಸಿದೆ. ದೋಣಿಯಲ್ಲಿ ಯಾರಿಗೂ ಲೈಫ್ ಜಾಕೆಟ್ ಇರಲಿಲ್ಲ. ಕೆಲವರು ಈಜಿ ದಡ ಸೇರಿದ್ದಾರೆ. ಕೆಲವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ನಾಪತ್ತೆಯಾದ 6 ಮಂದಿ ಇನ್ನೂ ಪತ್ತೆಯಾಗಿಲ್ಲʼʼ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.

ʼʼಸಣ್ಣ ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಜನ ತುಂಬಿದ್ದರಿಂದ ಅದು ಮಗುಚಿ ಬಿದ್ದಿದೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ದೋಣಿಯಲ್ಲಿದ್ದ 11 ಮಂದಿ ಸುರಕ್ಷಿತವಾಗಿದ್ದಾರೆ. ಉಳಿದ 6 ಮಂದಿಗಾಗಿ ಎಸ್‌ಡಿಆರ್‌ಎಫ್ ತಂಡ ಶೋಧ ನಡೆಸುತ್ತಿದೆʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚು ಜನರನ್ನು ತುಂಬಿದ್ದೇ ಕಾರಣ?

ದೋಣಿ ಮಗುಚಿ ಬಿದ್ದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ಕಾರಣ ಪತ್ತೆಗೆ ಆದೇಶ ಹೊರಡಿಸಿದ್ದಾರೆ. ಚಿಕ್ಕ ದೋಣಿಗೆ ಅಧಿಕ ಮಂದಿಯನ್ನು ತುಂಬಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಜಿಲ್ಲಾಡಳಿತ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಗೆ ಎಲ್ಲ ನೆರವು ನೀಡಿದೆ. ಸ್ಥಳದಲ್ಲಿ ನೂರಾರು ಮಂದಿ ನೆರೆದಿದ್ದಾರೆ.

ಇದನ್ನೂ ಓದಿ: boat capsizes: ಬೋಟ್ ಮಗುಚಿ 6 ಶಾಲಾ ಮಕ್ಕಳ ದುರ್ಮರಣ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಈ ವರ್ಷದ ಜನವರಿಯಲ್ಲಿ ಗುಜರಾತ್‌ನ ವಡೋದಾರದ ಹರಿಣಿ ಸರೋವರದಲ್ಲಿ ಬೋಟ್ ಮಗುಚಿ 13 ಶಾಲಾ ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಮೃತಪಟ್ಟಿದ್ದರು. ನ್ಯೂ ಸನ್‌ರೈಸ್ ಶಾಲೆಯ ಮಕ್ಕಳು ಪಿಕ್‌ನಿಕ್‌ಗಾಗಿ ಕೆರೆಗೆ ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿತ್ತು. ಬೋಟ್‌ನಲ್ಲಿ 27 ವಿದ್ಯಾರ್ಥಿಗಳಿದ್ದರು. ಮಕ್ಕಳ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತ ಮಕ್ಕಳ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಅಲ್ಲದೇ, ಈ ಘಟನೆಯಲ್ಲಿ ಗಾಯಗೊಂಡವರಿಗೆ 50 ಸಾವಿರ ರೂ. ನೆರವು ನೀಡುವುದಾಗಿ ಪ್ರಕಟಿಸಿದ್ದರು.

ಅಲ್ಲದೆ ಕೆಲವು ದಿನಗಳ ಹಿಂದೆ ಭೀಕರ ಗಾಳಿಗೆ ದೋಣಿಯಿಂದು ಮಗುಚಿ ಬಿದ್ದು ಆರು ಮಂದಿ ನೀರುಪಾಲಾಗಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿತ್ತು. ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಪುಟ್ಟ ಮಕ್ಕಳು ಸೇರಿ ಆರು ಮಂದಿ ಕಣ್ಮರೆಯಾಗಿದ್ದರು.

ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(30) ಕೋಮಲ್ ಜಾಧವ್(26) ಶುಭ ಜಾಧವ್(1) ಮಾಹಿ ಜಾಧವ್(3) ನೀರು ಪಾಲಾಗಿದ್ದರು.

Continue Reading

ದೇಶ

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

EVM Row: ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

EVM Row
Koo

ಮುಂಬೈ: ದೇಶದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಮುಗಿದ ಬೆನ್ನಲ್ಲೇ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಕುರಿತು ಚರ್ಚೆ ಶುರುವಾಗಿದೆ. ಇವಿಎಂಗಳ ಬಳಕೆಯೇ ಬೇಡ ಎಂದು ಎಲಾನ್‌ ಮಸ್ಕ್‌ (Elon Musk) ಹೇಳಿದ್ದಾರೆ. ಇದರ ಬೆನ್ನಲ್ಲೇ, “ಭಾರತದಲ್ಲಿ ಇವಿಎಂಗಳನ್ನು ಪರಿಶೀಲನೆ ಮಾಡಲು ಯಾರಿಗೂ ಆಗುವುದಿಲ್ಲ” ಎಂಬುದಾಗಿ ರಾಹುಲ್‌ ಗಾಂಧಿ ಮಸ್ಕ್‌ ಅವರ ಮಾತನ್ನೇ ಅನುಮೋದಿಸಿದ್ದಾರೆ. ಇದರ ಬೆನ್ನಲ್ಲೇ, ಮೊಬೈಲ್‌ ಬಳಸಿ ಇವಿಎಂಅನ್ನು ಅನ್‌ಲಾಕ್‌ ಮಾಡಿದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಶಿವಸೇನೆ ಸಂಸದ ರವೀಂದ್ರ ವೈಕರ್‌ (Ravindra Waikar) ಅವರ ಬಾವ ಮಂಗೇಶ್‌ ಪಂಡಿಲ್ಕರ್‌ ಅವರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಷ್ಟೇ ಅಲ್ಲ, ಇದು ಇವಿಎಂ ತಿರುಚಲಾಗುತ್ತದೆ ಎಂಬ ಆರೋಪಕ್ಕೆ ಪುಷ್ಟಿಯನ್ನೂ ನೀಡಿದಂತಾಗಿದೆ.

ಜೂನ್‌ 4ರಂದು ಮುಂಬೈ ವಾಯವ್ಯ ಲೋಕಸಭೆ ಕ್ಷೇತ್ರದ ಗೋರೆಗಾಂವ್‌ ಪ್ರದೇಶದ ಕೇಂದ್ರವೊಂದರಲ್ಲಿ ಮತಎಣಿಕೆ ಮಾಡಲಾಗುತ್ತಿತ್ತು. ಇದೇ ಕ್ಷೇತ್ರದ ಶಿವಸೇನೆ (ಏಕನಾಥ್‌ ಶಿಂಧೆ) ಸಂಸದ ರವೀಂದ್ರ ವೈಕರ್‌ ಅವರ ಬಾವ ಮಂಗೇಶ್ ಪಂಡಿಲ್ಕರ್‌ ಅವರು ಮತಎಣಿಕೆ ಕೇಂದ್ರಕ್ಕೆ ತೆರಳಿದ್ದಾರೆ. ಮತಎಣಿಕೆ ಕೇಂದ್ರದಲ್ಲಿ ಮಂಗೇಶ್‌ ಪಂಡಿಲ್ಕರ್‌ ಅವರು ತಮ್ಮ ಮೊಬೈಲ್‌ಅನ್ನು ಬಳಸಿಯೇ ಇವಿಎಂ ಅನ್‌ಲಾಕ್‌ ಮಾಡಿದ್ದಾರೆ. ತಮ್ಮ ಮೊಬೈಲ್‌ಗೆ ಒಟಿಪಿ ಜನರೇಟ್‌ ಮಾಡಿಕೊಂಡು ಅನ್‌ಲಾಕ್‌ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

‌ಲೋಕಸಭೆ ಚುನಾವಣೆಯಲ್ಲಿ ರವೀಂದ್ರ ವೈಕರ್‌ ಅವರು ಶಿವಸೇನೆಯ (ಉದ್ಧವ್‌ ಠಾಕ್ರೆ ಬಣ) ಅಭ್ಯರ್ಥಿ ಅಮೋಲ್‌ ಗಜಾನನ ಕೀರ್ತಿಕಾರ್ ಅವರ ವಿರುದ್ಧ ಕೇವಲ 48 ಮತಗಳ ಅಂತರದಿದ್ದ ಗೆದ್ದಿದ್ದಾರೆ. ರವೀಂದ್ರ ವೈಕರ್‌ ಅವರ ಸಂಬಂಧಿಯು ಇವಿಎಂ ತಿರುಚಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆಯು ಮರು ಎಣಿಕೆಗಾಗಿ ಚುನಾವಣಾ ಆಯೋಗಕ್ಕೆ ಮನವಿ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Continue Reading

ದೇಶ

Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

Rahul Gandhi: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ. ಎಲಾನ್‌ ಮಸ್ಕ್‌ ಅವರ ಆರೋಪಗಳಿಗೆ ರಾಹುಲ್‌ ಗಾಂಧಿ ಅವರೂ ಪ್ರತಿಕ್ರಿಯಿಸಿದ್ದು, ಭಾರತದ ಇವಿಎಂಗಳ ಕುರಿತು ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿ, ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈಗ 99 ಕ್ಷೇತ್ರಗಳಲ್ಲಿ ಗೆದ್ದಿದೆ. ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ (INDIA Bloc) 234 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, ಬಿಜೆಪಿಯೊಂದಕ್ಕೇ ಬಹುಮತ ಬರುವುದನ್ನು ತಪ್ಪಿಸಿವೆ. ಇಷ್ಟೆಲ್ಲ ಆದರೂ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮತ್ತೆ ಚುನಾವಣೆ ಮತಯಂತ್ರಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ.

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿರುವ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಇವಿಎಂ ಬಗ್ಗೆ ಪೋಸ್ಟ್‌ ಮಾಡಿದ್ದಾರೆ. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂಬುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ.

ಎಲಾನ್‌ ಮಸ್ಕ್‌ ಹೇಳಿದ್ದಿಷ್ಟು…

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ರಾಜೀವ್‌ ಚಂದ್ರಶೇಖರ್‌ ತಿರುಗೇಟು

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading

ಪ್ರಮುಖ ಸುದ್ದಿ

Elon Musk: ಕೃತಕ ಬುದ್ಧಿಮತ್ತೆ ಬಳಸಿ ಇವಿಎಂಗಳ ಹ್ಯಾಕಿಂಗ್‌ ಸಾಧ್ಯ ಎಲಾನ್‌ ಮಸ್ಕ್‌; ಬಿಜೆಪಿ ನಾಯಕ ಟಾಂಗ್!‌

Elon Musk: ಹ್ಯಾಕರ್‌ಗಳು ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ಅನ್ನು ಬಳಸಿಕೊಂಡು ಚುನಾವಣೆ ಮತಯಂತ್ರಗಳನ್ನು ಹ್ಯಾಕ್‌ ಮಾಡಬಹುದು. ಹಾಗಾಗಿ, ಇವಿಎಂಗಳನ್ನು ಚುನಾವಣೆಯಲ್ಲಿ ಬಳಸಬಾರದು ಎಂದು ಟೆಸ್ಲಾ ಕಂಪನಿ ಸಿಇಒ ಎಲಾನ್‌ ಮಸ್ಕ್‌ ಹೇಳಿದ್ದಾರೆ. ಇದು ಈಗ ಅಮೆರಿಕದಲ್ಲಿ ಭಾರಿ ಸಂಚಲನ ಮೂಡಿಸಿದೆ. ಎಲಾನ್‌ ಮಸ್ಕ್‌ ಹೇಳಿಕೆ ಕುರಿತು ಪರ ಹಾಗೂ ವಿರೋಧ ಚರ್ಚೆಗಳು ಶುರುವಾಗಿವೆ.

VISTARANEWS.COM


on

Elon Musk
Koo

ವಾಷಿಂಗ್ಟನ್‌/ನವದೆಹಲಿ: ಅದು ಲೋಕಸಭೆ ಚುನಾವಣೆ ಇರಲಿ, ಯಾವುದೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯೇ ನಡೆಯಲಿ, ಸೋತಾಗಲೆಲ್ಲ ಕಾಂಗ್ರೆಸ್‌ ನಾಯಕರು ಚುನಾವಣೆ ಮತಯಂತ್ರಗಳ (EVM) ದಕ್ಷತೆ ಬಗ್ಗೆ ಆರೋಪ ಮಾಡುವುದು ಸಾಮಾನ್ಯ ಎಂಬಂತಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಕಾರಣ ಯಾರೂ ಇವಿಎಂಗಳ ಬಗ್ಗೆ ತಕರಾರು ಎತ್ತಿಲ್ಲ. ಆದರೆ, ಜಾಗತಿಕ ಎಲೆಕ್ಟ್ರಿಕ್‌ ಕಾರು ಉತ್ಪಾದನಾ ದೈತ್ಯ ಟೆಸ್ಲಾ ಕಂಪನಿಯ ಸಿಇಒ ಎಲಾನ್‌ ಮಸ್ಕ್‌ (Elon Musk) ಅವರು ಇವಿಎಂಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಹಾಗಂತ, ಎಲಾನ್‌ ಮಸ್ಕ್‌ ಅವರು ಭಾರತದ ಇವಿಎಂಗಳ ಬಗ್ಗೆ ಚಕಾರ ಎತ್ತಿಲ್ಲ. ಬದಲಾಗಿ, ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ

ಎಲಾನ್‌ ಮಸ್ಕ್‌ ಮಾಡಿರುವ ಆರೋಪಕ್ಕೆ ಬಿಜೆಪಿ ನಾಯಕ, ಕೇಂದ್ರದ ಮಾಜಿ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ತಿರುಗೇಟು ನೀಡಿದ್ದಾರೆ. “ಸುರಕ್ಷಿತವಾಗಿರುವ ಡಿಜಿಟಲ್‌ ಹಾರ್ಡ್‌ವೇರ್‌ಅನ್ನು ಯಾರೂ ತಯಾರಿಸಲು ಆಗುವುದಿಲ್ಲ ರೀತಿಯಲ್ಲಿ ನೀವು ಇವಿಎಂ ಕುರಿತು ಸಾಮಾನ್ಯವಾದ ಹೇಳಿಕೆ ನೀಡಿದ್ದೀರಿ. ಇವಿಎಂಗೆ ಇಂಟರ್‌ನೆಟ್‌, ಬ್ಲ್ಯೂಟ್‌, ವೈಫೈ ಸಂಪರ್ಕ ಕೂಡ ಇಲ್ಲ. ಕಾರ್ಖಾನೆಯಲ್ಲಿ ತಯಾರಾದ ಇವಿಎಂಗಳನ್ನು, ಯಾವುದೇ ಕನೆಕ್ಟಿವಿಲ್ಲದ ಇವಿಎಂಗಳನ್ನು ಹ್ಯಾಕ್‌ ಮಾಡಲು ಆಗುವುದಿಲ್ಲ. ಭಾರತದಲ್ಲಿ ಇದು ಸಾಬೀತಾಗಿದೆ. ನಾವು ಈ ಕುರಿತು ಒಂದು ಟ್ಯುಟೋರಿಯಲ್‌ ತೆರೆಯೋಣ” ಎಂದು ಟಾಂಟ್‌ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹೊತ್ತಿನಲ್ಲೂ ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳ ದಕ್ಷತೆ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಹಾಗೂ ವಿವಿಪ್ಯಾಟ್‌ನಲ್ಲಿ ದಾಖಲಾದ ಮತಗಳನ್ನು ಶೇ.100ರಷ್ಟು ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸ್ಲಲಿಸಲಾಗಿತ್ತು. ಆದರೆ, ನ್ಯಾಯಾಲಯವು ಅರ್ಜಿಗಳನ್ನು ತಳ್ಳಿಹಾಕಿತ್ತು. ಇನ್ನು, ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಇದರ ಮಧ್ಯೆಯೇ, ಎಲಾನ್‌ ಮಸ್ಕ್‌ ಅವರು ಇವಿಎಂಗಳನ್ನು ಹ್ಯಾಕ್‌ ಮಾಡಬಹುದು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

Continue Reading
Advertisement
Renukaswamy murder case The location of the accused is complete
ಸಿನಿಮಾ2 mins ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ41 mins ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ1 hour ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ1 hour ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Kannada New Movie Chowkidar pruthvi ambaar
ಸಿನಿಮಾ1 hour ago

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Patna Boat Accident
ದೇಶ1 hour ago

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Sachin Tendulkar
ಕ್ರೀಡೆ2 hours ago

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Petrol Diesel Price
ಪ್ರಮುಖ ಸುದ್ದಿ2 hours ago

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Child Marriage
ವಿದೇಶ2 hours ago

12ರ ಹರೆಯದ ಮಗಳನ್ನು 5 ಲಕ್ಷ ರೂ.ಗೆ ಮಾರಿ 72 ವರ್ಷದ ವೃದ್ಧನೊಂದಿಗೆ ಮದುವೆ ಮಾಡಿಸಲು ಮುಂದಾದ ಪಾಪಿ ತಂದೆ!

EVM Row
ದೇಶ2 hours ago

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ2 mins ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 hour ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌