Yash-Radhika Pandit: ದಸರಾ ಹಬ್ಬದ ಶುಭಾಶಯ ಹೇಳಲು ಯಶ್‌-ರಾಧಿಕಾ ಪಂಡಿತ್‌ ಹೊಸ ಫೋಟೊ ಶೂಟ್‌ - Vistara News

ಸಿನಿಮಾ

Yash-Radhika Pandit: ದಸರಾ ಹಬ್ಬದ ಶುಭಾಶಯ ಹೇಳಲು ಯಶ್‌-ರಾಧಿಕಾ ಪಂಡಿತ್‌ ಹೊಸ ಫೋಟೊ ಶೂಟ್‌

Yash-Radhika Pandit: ಸ್ಯಾಂಡಲ್‌ವುಡ್‌ನ ಕ್ಯೂಟ್‌ ಕಪಲ್‌ ಯಶ್‌ ಮತ್ತು ರಾಧಿಕಾ ಪಂಡಿತ್‌ ಹೊಸ ಫೋಟೊ ಶೂಟ್‌ ಮೂಲಕ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ.

VISTARANEWS.COM


on

yash radhika
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌-ರಾಧಿಕಾ ಪಂಡಿತ್‌ ದಂಪತಿ ಚಂದದ ಫೋಟೊ ಶೇರ್‌ ಮಾಡುವ ಮೂಲಕ ದಸರಾ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ʼʼಆನಂದದ ಮತ್ತು ಆಶೀರ್ವಾದಗಳಿಂದ ಕೂಡಿದ ದಸರಾ ಹಬ್ಬದ ಶುಭಾಶಯಗಳು!ʼʼ ಎಂದು ರಾಧಿಕಾ ಪಂಡಿತ್‌ ಬರೆದುಕೊಂಡಿದ್ದಾರೆ.

ದಸರಾ ಹಬ್ಬದ ನಿಮಿತ್ತ ಯಶ್​​ ಮತ್ತು ರಾಧಿಕಾ ಹೊಸ ಫೋಟೊ ಶೂಟ್​​​ ಮಾಡಿಸಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ. ರಾಧಿಕಾ ತಿಳಿ ನೀಲಿ ಬಣ್ಣದ ಸೀರೆಯಲ್ಲಿ ಮಿಂಚಿದರೆ, ಯಶ್‌ ಗ್ರೇ ಬಣ್ಣದ ಪೈಜಾಮಾ ಹಾಕಿ ಫೋಸ್‌ ನೀಡಿದ್ದಾರೆ.

ಇತ್ತ ಯಶ್‌-ರಾಧಿಕಾ ಪಂಡಿತ್‌ ದಂಪತಿ ಮಕ್ಕಳಾದ ಐರಾ ಮತ್ತು ಯಥರ್ವ್​​​​ ಸೈಕಲ್​ಗೆ ಪೂಜೆ ಮಾಡುವ ಮೂಲಕ ಆಯುಧ ಪೂಜೆಯನ್ನು ಭರ್ಜರಿಯಾಗಿ ಆಚರಿಸಿದ್ದಾರೆ. ಈ ಫೋಟೊವನ್ನು ರಾಧಿಕಾ ಇನ್‌ಸ್ಟಾಗ್ರಾಮ್‌ ಸ್ಟೋರಿ ಮೂಲಕ ಹಂಚಿಕೊಂಡಿದ್ದಾರೆ.

ಯಶ್‌-ರಾಧಿಕಾ ಫೋಟೊಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಜತೆಗೆ ಹಲವರು ಯಶ್‌ ಮುಂದಿನ ಚಿತ್ರ ಯಾವುದು? ಎಂದು ಕೇಳಿದ್ದಾರೆ. ಮಾತ್ರವಲ್ಲ ರಾಧಿಕಾ ಪಂಡಿತ್‌ ಚಿತ್ರರಂಗಕ್ಕೆ ಮರಳುವುದು ಯಾವಾಗ? ಎಂದೂ ಪ್ರಶ್ನಿಸಿದ್ದಾರೆ. 2019ರಲ್ಲಿ ತೆರೆಕಂಡ ʼಆದಿಲಕ್ಷ್ಮೀ ಪುರಾಣʼ ಚಿತ್ರದ ಬಳಿಕ ರಾಧಿಕಾ ಚಿತ್ರಗಳಲ್ಲಿ ಅಭಿನಯಿಸಿಲ್ಲ. ಇತ್ತ ಯಶ್‌ ಕೂಡ ʼಕೆಜಿಎಫ್‌ 2ʼ ಚಿತ್ರದ ಬಳಿಕ ಮುಂದಿನ ಸಿನಿಮಾವನ್ನು ಘೋಷಿಸಿಲ್ಲ. ಯಶ್‌ ಮುಂದಿನ ಚಿತ್ರಕ್ಕಾಗಿ ಕನ್ನಡ ಮಾತ್ರವಲ್ಲ ಭಾರತೀಯ ಚಿತ್ರರಂಗವೇ ಕುತೂಹಲದಿಂದ ಕಾಯುತ್ತಿದೆ.

ಇದನ್ನೂ ಓದಿ: Kerebete Movie: ಹಳ್ಳಿ ಸೊಗಡಿನ ಸಿನಿಮಾ ‘ಕೆರೆಬೇಟೆ’; ಮತ್ತೆ ಹೀರೊ ಆಗಿ ಮಿಂಚಲು ಗೌರಿ ಶಂಕರ್‌ ಸಜ್ಜು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Pavithra Gowda: ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

Pavithra Gowda: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಚಡಪಡಿಸುತ್ತಿದ್ದಾರೆ. ಹೈಪೈಯಾಗಿ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲು ಹಕ್ಕಿಯಾಗಿ ಸೆರೆವಾಸದಲ್ಲಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಎದ್ದಿರುವ ಅವರು ಸಿಬ್ಬಂದಿ ನೀಡಿದ ಕಾಫಿ ಕುಡಿದಿದ್ದಾರೆ. ಮಹಿಳಾ ವಿಭಾಗದ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ.

VISTARANEWS.COM


on

Pavithra Gowda Number 6024 in parappana jail
Koo

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ (Pavithra Gowda) ಇನ್ನು ಕೆಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ(UTP)ಕೈದಿ ನಂಬರ್ 6024 ಆಗಿದೆ. ಜೈಲು ಅಧಿಕಾರಿಗಳಿಂದ ವಿಚಾರಣಾಧೀನ ಬಂಧಿ ನಂಬರ್ ವಿತರಣೆ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಅವರು ಮಹಿಳಾ ವಿಭಾಗದ ಡಿ ಬ್ಯಾರಕ್ ನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಚಡಪಡಿಸುತ್ತಿದ್ದಾರೆ. ಹೈಪೈಯಾಗಿ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲು ಹಕ್ಕಿಯಾಗಿ ಸೆರೆವಾಸದಲ್ಲಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಎದ್ದಿರುವ ಅವರು ಸಿಬ್ಬಂದಿ ನೀಡಿದ ಕಾಫಿ ಕುಡಿದಿದ್ದಾರೆ. ಮಹಿಳಾ ವಿಭಾಗದ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ.

ಇದನ್ನೂ ಓದಿ: Pavithra Gowda: ಪರಪ್ಪನ ಅಗ್ರಹಾರದಲ್ಲಿ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸುತ್ತಿರುವ ಪವಿತ್ರ ಗೌಡ!

ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ. ಜೈಲಿನ ಮೆನುವಿನಂತೆ ಕೈದಿಗಳಿಗೆ ಉಪ್ಪಿಟ್ಟು ನೀಡಲಿದ್ದಾರೆ ಜೈಲು ಸಿಬ್ಬಂದಿ. ಇಂದು ಡಿ-ಗ್ಯಾಂಗ್ ಪಟಾಲಂ. ಜೈಲೂಟ ಸವಿಯಲಿದೆ. ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ ಕುಟುಂಬಸ್ಥರು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪವಿತ್ರಾ ಗೌಡ ಮಗಳು ಮತ್ತು ತಾಯಿ ಭೇಟಿಯಾಗುವ ಸಾಧ್ಯತೆ ಇದೆ.

ಇನ್ನು ನಿನ್ನೆ ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು.

Continue Reading

ಸ್ಯಾಂಡಲ್ ವುಡ್

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

Darshan Arrested: ಮೂಲಗಳ ಪ್ರಕಾರ ದರ್ಶನ್‌ ನಿವಾಸದ ಬೆಡ್‌ರೂಮ್‌ನ ಕಬೋಡ್‌ನಲ್ಲಿ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಬ್ಯಾಗ್‌ನಲ್ಲಿ ಇಟ್ಟಿದ್ದ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ರೂಪಾಯಿಯನ್ನೂ ವಶಪಡಿಸಿಕೊಂಡಿದ್ದಾರೆ. ಅಲ್ಲಿಗೆ, ಪ್ರಕರಣದಲ್ಲಿ ಪೊಲೀಸರು ಇದುವರೆಗೆ 70.40 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದಂತಾಗಿದೆ. ಜಪ್ತಿಯಾದ ಹಣದ ಕುರಿತು ಕೂಡ ಪೊಲೀಸರು ಕೋರ್ಟ್‌ಗೆ ಮಾಹಿತಿ ನೀಡಿ, ದರ್ಶನ್‌ ಅವರನ್ನು ಕಸ್ಟಡಿಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

Darshan Arrested in IT trouble! Is the money paid to a MLA's friend
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಎರಡು ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ನಟ ದರ್ಶನ್‌ (Actor Darshan) ಮನೆಯಲ್ಲಿ ಬುಧವಾರ (ಜೂನ್‌ 19) ಪೊಲೀಸರು 37.40 ಲಕ್ಷ ರೂ. ಜಪ್ತಿ ಮಾಡಿಕೊಂಡಿದ್ದಾರೆ. ಇದೀಗ ಕೊಲೆ ಆರೋಪದ ಜತೆಗೆ ದರ್ಶನ್‌ಗೆ ಐಟಿ ಸಂಕಷ್ಟ ಎದುರಾಗಿದೆ.

ಮೂಲಗಳ ಪ್ರಕಾರ ದರ್ಶನ್‌ ನಿವಾಸದ ಬೆಡ್‌ರೂಮ್‌ನ ಕಬೋಡ್‌ನಲ್ಲಿ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಬ್ಯಾಗ್‌ನಲ್ಲಿ ಇಟ್ಟಿದ್ದ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ರೂಪಾಯಿಯನ್ನೂ ವಶಪಡಿಸಿಕೊಂಡಿದ್ದಾರೆ. ಅಲ್ಲಿಗೆ, ಪ್ರಕರಣದಲ್ಲಿ ಪೊಲೀಸರು ಇದುವರೆಗೆ 70.40 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದಂತಾಗಿದೆ. ಜಪ್ತಿಯಾದ ಹಣದ ಕುರಿತು ಕೂಡ ಪೊಲೀಸರು ಕೋರ್ಟ್‌ಗೆ ಮಾಹಿತಿ ನೀಡಿ, ದರ್ಶನ್‌ ಅವರನ್ನು ಕಸ್ಟಡಿಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮನೆಯಲ್ಲಿ 37ಲಕ್ಷ ರೂ, ಆರೋಪಿಗಳಿಗೆ 30ಲಕ್ಷ ರೂ. ಹಣ ಮೂಲ ಪತ್ತೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಕೊಲೆ ಆರೋಪ ಬೆನ್ನಲ್ಲೆ ಆದಾಯ ತೆರೆಗಿ(ಐಟಿ) ಇಲಾಖೆ ದರ್ಶನ್ ಬೆನ್ನು ಹತ್ತುವ ಸಾಧ್ಯತೆ ಇದೆ ಎನ್ನಲಾಗಿದೆ. ದರ್ಶನ್ ಮನೆಯಲ್ಲಿ 37ಲಕ್ಷ ನಗದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಕೊಲೆ ನಂತರ ಸರಂಡರ್ ಆಗಲು 30ಲಕ್ಷ ನಗದು ನೀಡಿದ್ದಾರೆ. ಕಾನೂನಿನ ಪ್ರಕಾರ ಒಬ್ಬ ವ್ಯಕ್ತಿ ಎರಡು ಲಕ್ಷದವರೆಗೂ ನಗದನ್ನ ಇಟ್ಟು ಕೊಳ್ಳಬಹುದು. ಆದರೆ ದರ್ಶನ್ ಸುಮಾರು 70ಲಕ್ಷ ರೂ. ಹಣ ಇಟ್ಟುಕೊಂಡಿರುವುದರಿಂದ ತನಿಖೆ ಆಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: Darshan Arrested: ಇದು ʻಸಪ್ತ ಶೆಡ್ಡಿನಾಚೆ SSE side ‘D’! ಟ್ರೋಲ್‌ ಆದ್ರು ದರ್ಶನ್‌-ಪವಿತ್ರಾ!

ಈ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಆದಾಯ ತೆರಿಗೆ ಅಧಿಕಾರಿಗಳಿಗೆ ಈ ಬಗ್ಗೆ ಪತ್ರ ಬರೆಯಲಿದ್ದಾರೆ. ದರ್ಶನ್ ಸಿನಿಮಾ ಅಡ್ವಾನ್ಸ್ , ಅಥವಾ ಸಿನಿಮಾ ಹಣ ಅಂತ ಹೇಳಿದ್ದರೂ ಇಷ್ಟು ಕ್ಯಾಶ್ ಯಾಕೆ ಇಟ್ಟುಕೊಂಡಿದ್ರು, ಆ ಹಣಕ್ಕೆ ಟ್ಯಾಕ್ಸ್ ಕಟ್ಟಿದ್ದಾರಾ? ಎಂದು ಪರಿಶೀಲನೆ ಮಾಡಲಾಗುತ್ತದೆ. ಒಂದು ವೇಳೆ ಟ್ಯಾಕ್ಸ್ ಕಟ್ಟಿಲ್ಲ ಅಂದರೆ ದರ್ಶನ್ ಜತೆಗೆ ದರ್ಶನ್ ಹಣ ನೀಡಿದವರಿಗೂ ಸಂಕಷ್ಟ ಎದುರಾಗಲಿದೆ. ಮೋಹನ್ ರಾಜ್ ಎಂಬ ವ್ಯಕ್ತಿ ದರ್ಶನ್‌ಗೆ ಹಣ ನೀಡಿರುವ ಬಗ್ಗೆ ಪೊಲೀಸಿರಿಗೆ ಮಾಹಿತಿಯೂ ಸಿಕ್ಕಿದೆ. ದರ್ಶನ್‌ಗೆ ಸ್ನೇಹಿತ ಆಗಿರುವ ರಾಮ್ ಮೋಹನ್ ರಾಜು ಅವರಿಂದ ದರ್ಶನ್ 40ಲಕ್ಷ ರೂ ಹಣ ಪಡೆದಿದ್ದಾರಂತೆ. ಸದ್ಯ ಈ ಮೋಹನ್ ರಾಜ್‌ಗೂ ನೋಟೀಸ್ ನೀಡಿ ವಿಚಾರಣೆ ನಡೆಸಲು ಪೊಲೀಸರ ಸಿದ್ಧತೆ ನಡೆಸುತ್ತಿದ್ದಾರೆ.

ಯಾರು ಈ ರಾಮ್ ಮೋಹನ್ ರಾಜು?

ಹಣ ಕೊಟ್ಟಿರುವ ಮೋಹನ್ ರಾಜ್ ಶಾಸಕರೊಬ್ಬರ ಆಪ್ತ. ಹೆಸರು ಹೊರಗಡೆ ಬರುತ್ತಿದ್ದಂತೆ ಪೋನ್ ಸ್ವೀಚ್ ಆಫ್‌ ಮಾಡಿಕೊಂಡಿದ್ದಾರೆ. ಮೋಹನ್ ರಾಜ್ ಪೋನ್ ಸ್ವೀಚ್ ಆಪ್ ಆಗಿರುವುದರಿಂದ ಕಾಮಾಕ್ಷಿ ಪಾಳ್ಯ ಪೊಲೀಸರು ಅವರ ಮನೆಗೆ ಹೋಗಿ ನೋಟಿಸ್ ನೀಡಲು ಮುಂದಾಗಿದ್ದಾರೆ. 2018ರರಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಮೋಹನ್ ರಾಜ್ಆ ತ್ಮಹತ್ಯೆಗೆ ಯತ್ನಿಸಿದ್ದರು. ಜಮೀನು ವಿಚಾರವಾಗಿ ಕಿರುಕುಳ ಕೊಡ್ತಿದ್ದಾರೆಂದು ಆರೋಪಿಸಿ ಬೊಮ್ಮನಹಳ್ಳಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಎದುರೇ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆಗ ಮೋಹನ್ ರಾಜ್ ಬೊಮ್ಮನಹಳ್ಳಿ ವಾರ್ಡ್ ಕಾರ್ಪೋರೇಟರ್ ಆಗಿದ್ದರು .

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Actor Darshan: , ನಟಿ ಸಂಜನಾ ಗಲ್ರಾನಿ ಅವರು ಸ್ಪಷ್ಟ ಅಭಿಪ್ರಾಯ ನೀಡಿದ್ದು ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದಾರೆ. ನಟಿ ಸಂಜನಾ ಗಲ್ರಾನಿ ಮಾತನಾಡಿ ʻʻದರ್ಶನ್‌ ಅವರು ಕೆಟ್ಟವರಲ್ಲ . ತುಂಬ ಜಂಟಲ್‌ಮೆನ್‌. ಹಾಗೇ ನಾನು ಅವರ ಜತೆ ಕೆಲಸ ಮಾಡಿದ್ದೇನೆ. ಅವರನ್ನು ಎಲ್ಲೇ ಭೇಟಿ ಆದರೂ ಚೆನ್ನಾಗಿ ಮಾತಾಡುತ್ತಾರೆ. ನನಗೆ ಅವರ ಮೇಲೆ ಗೌರವ ಇದೆ. ʻಅರ್ಜುನ್‌ʼ ಸಿನಿಮಾ ಮಾಡುವಾಗ, ನರ್ವಸ್‌ ಆದಾಗ ಸಹಾಯ ಮಾಡಿದ್ದರು. ಆದರೆ ಈಗ ದರ್ಶನ್‌ ಅವರ ಈ ನ್ಯೂಸ್‌ ತುಂಬ ಕಾಡುತ್ತಿದೆʼʼ ಎಂದರು.

VISTARANEWS.COM


on

Actor Darshan case sanjana galrani Reaction about ramya statement
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ.  ಈ ಕೊಲೆ ಕೇಸ್‌ನಲ್ಲಿ ದರ್ಶನ್‌ ಅವರು ಕೇಸ್‌ನಿಂದ ತಪ್ಪಿಸಿಕೊಳ್ಳಲು ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದರು. ಇದೀಗ ಪೊಲೀಸ್‌ ಕಸ್ಟಡಿಯಲ್ಲಿ ಇದ್ದಾರೆ ದರ್ಶನ್‌. ಈ ನಡುವೆ, ನಟಿ ಸಂಜನಾ ಗಲ್ರಾನಿ ಅವರು ಸ್ಪಷ್ಟ ಅಭಿಪ್ರಾಯ ನೀಡಿದ್ದು ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದಾರೆ. ನಟ ದರ್ಶನ್ ತೂಗುದೀಪ ಆರೋಪಿಯೇ ಹೊರತು ಅಪರಾಧಿ ಅಲ್ಲ ಎಂದಿದ್ದಾರೆ. ಜತೆಗೆ ರಮ್ಯಾ ಅವರ ಟ್ವಿಟರ ಬಗ್ಗೆ ಪ್ರತಿಕ್ರಿಯೆ ನೀಡಿ ಮಾತಿನ ನಡುವೆ ತಾವು ಮೂರು ತಿಂಗಳು ಜೈಲಿನಲ್ಲಿದ್ದ ಅವಧಿಯನ್ನು ನೆನಪಿಸಿಕೊಂಡಿದ್ದಾರೆ.

ನಟಿ ಸಂಜನಾ ಗಲ್ರಾನಿ ಮಾತನಾಡಿ ʻʻದರ್ಶನ್‌ ಅವರು ಕೆಟ್ಟವರಲ್ಲ . ತುಂಬ ಜಂಟಲ್‌ಮೆನ್‌. ಹಾಗೇ ನಾನು ಅವರ ಜತೆ ಕೆಲಸ ಮಾಡಿದ್ದೇನೆ. ಅವರನ್ನು ಎಲ್ಲೇ ಭೇಟಿ ಆದರೂ ಚೆನ್ನಾಗಿ ಮಾತಾಡುತ್ತಾರೆ. ನನಗೆ ಅವರ ಮೇಲೆ ಗೌರವ ಇದೆ. ʻಅರ್ಜುನ್‌ʼ ಸಿನಿಮಾ ಮಾಡುವಾಗ, ನರ್ವಸ್‌ ಆದಾಗ ಸಹಾಯ ಮಾಡಿದ್ದರು. ಆದರೆ ಈಗ ದರ್ಶನ್‌ ಅವರ ಈ ನ್ಯೂಸ್‌ ತುಂಬ ಕಾಡುತ್ತಿದೆʼʼ ಎಂದರು.

ಇನ್ನು ರಮ್ಯಾ ಅವರು ಗಲ್ಲು ಶಿಕ್ಷೆ ದರ್ಶನ್‌ ಅವರಿಗೆ ಆಗಬೇಕು ಎಂದು ಟ್ವೀಟ್‌ ಮಾಡಿದ್ದರು. ಈ ಬಗ್ಗೆ ಸಂಜನಾ ಅವರು ಪ್ರತಿಕ್ರಿಯೆ ನೀಡಿದ್ದು ಹೀಗೆ. ʻʻನೋಡಿ ಗಲ್ಲು ಶಿಕ್ಷೆ ಆಗಬೇಕು ಎಂದು ಹೇಳುವ ಅಧಿಕಾರ ಕೋರ್ಟ್‌ಗೆ ಇದೆ. ನನ್ನ ಉದಾಹರಣೆ ಕೊಡುತ್ತೇನೆ. ನಾನು ಡ್ರಗ್ಸ್‌ ಕೇಸ್‌ ವಿಚಾರವಾಗಿ ನನ್ನ ಕರೆದಾಗ ಏಕಾ ಏಕಿ ಅರೆಸ್ಟ್‌ ಮಾಡಿದ್ದರು. ಆಮೇಲೆ ಮೊಬೈಲ್‌ ತೆಗೆದುಕೊಂಡರು. ಆಮೇಲೆ ತುಂಬ ಕಷ್ಟ ಪಟ್ಟೆ. ಇನ್ನು ನ್ಯೂಸ್‌ನಲ್ಲಿ ನೋಡಿದಾಗ ಸಂಜನಾ ತಪ್ಪು ಒಪ್ಪಿಕೊಂಡಿದ್ದಾರೆ ಎಂದು ಬಂತು. ಇನ್ನು ಇಲ್ಲಿ ವಿಚಾರಣೆನೇ ಆಗಿಲ್ಲ. ಯಾವುದೇ ಹೇಳಿಕೆಯೇ ನೀಡಿಲ್ಲ. ಆಗಲೇ ತಪ್ಪು ಒಪ್ಪಿಕೊಂಡರು ಎಂದು ಮಾಧ್ಯಗಳಲ್ಲಿ ಬಂತು. ಡ್ರಗ್ಸ್‌ ದಂಧೆ ನಡೆಸುತ್ತಾರೆ ಎಂದೆಲ್ಲ ಹಬ್ಬಿತ್ತು. ಈ ತರ ರೂಮರ್ಸ್‌ವನ್ನು ಯಾರು ತಡಿಲಿಕ್ಕೆ ಆಗುತ್ತೆ. ನಮ್ಮ ವಕೀಲರು ಇನೋಸೆಂಟ್‌ ಅಂದರು ಯಾರು ಕ್ಯಾರ್‌ ಮಾಡಿಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

ʻʻಚಾರ್ಜ್‌ಶೀಟ್‌ವನ್ನು ಮೊದಲು ಗೌರವಿಸಬೇಕು. ಊಹಾಪೋಹಗಳು ನಿಜ ಅಲ್ಲ. ಇನ್ನು ದರ್ಶನ್‌ ಕೇಸ್‌ಗೆ ಸಂಬಂಧಪಟ್ಟಂತೆ ವಿಚಾರಣೆ ಇನ್ನೂ ನಡಯುತ್ತಿದೆ ಅಂದಿದ್ದಾರೆ. ಆದರೂ ಈ ಗಾಸಿಪ್‌ಗಳು ಯಾಕೆ ಅನ್ನೋದು ಗೊತ್ತಿಲ್ಲ. ಕೆಲವೊಂದು ಮಾಧ್ಯಮಗಳು ಟಿಆರ್‌ಪಿಗೋಸ್ಕರ ಏನೂ ಬೇಕಾದರು ಹಾಕುತ್ತಾರೆ. ದರ್ಶನ್‌ ಅವರು ಕೆಟ್ಟವರಲ್ಲʼʼಎಂದಿದ್ದಾರೆ.

ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್​ 20 ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

Actor Darshan: ರೇಣುಕಾ ಸ್ವಾಮಿ ಸತ್ತ ಬಳಿಕ ಯಾರಿಗೂ ಕಾಣದಂತೆ ಶವ ಬಿಸಾಡುವ ಪ್ರಯತ್ನ ನಡೆಸಿದ್ದರು ಟೀಂ. ಆದರೆ ಆರೋಪಿಗಳಿಗೆ ಶವ ಬಿಸಾಡಲು ಸಾಕಷ್ಟು ಕನ್ಫ್ಯೂಷನ್ ಆಗಿತ್ತು. ಇದಕ್ಕೂ ಮುಂಚೆ ಸೋಮನಹಳ್ಳಿ ಬ್ರಿಡ್ಜ್ ಬಳಿ ಮೂರು ರೌಂಡ್ ಗಾಡಿಯಲ್ಲಿ ಸುತ್ತಿದ್ರು. ಬೇರೆ ಎಲ್ಲಾದ್ರೂ ಬಿಸಾಡಬಹುದಾ ನೋಡಿದ್ರು. ಕೊನೆಗೆ ದಾರಿ ಕಾಣದೆ ಮೋರಿಗೆ ಶವ ಹಾಕಿ ಎಸ್ಕೇಪ್ ಆದರು. ಅಲ್ಲಿ ಆದ ಎಡವಟ್ಟಿನಿಂದ ಶವ ಪತ್ತೆಯಾಗಿ ಆರೋಪಿಗಳು ಸಿಕ್ಕಿಬಿದ್ದರು.

VISTARANEWS.COM


on

Actor Darshan was careful at every step to escape from Renuka case
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ.  ಈ ಕೊಲೆ ಕೇಸ್‌ನಲ್ಲಿ ದರ್ಶನ್‌ ಅವರು ಕೇಸ್‌ನಿಂದ ತಪ್ಪಿಸಿಕೊಳ್ಳಲು ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದರು. ಕೊಲೆಯಾದ ಬೆನ್ನಲ್ಲೇ ಕೇಸ್‌ನಲ್ಲಿ ತನ್ನ ಹೆಸರೇ ಬರಬರಾದು ಎಂದು ಎಚ್ಚರ ವಹಿಸಿದ್ದರು. ಅದಕ್ಕೆ ಎಂದು 70 ಲಕ್ಷ ರೂ. ಹೆಚ್ಚು ಹಣವನ್ನು ದರ್ಶನ್‌ ರೆಡಿ ಮಾಡಿಕೊಂಡಿದ್ದರು. ಶವ ಬಿಸಾಡುವುದು, ಯಾರೂ ದರ್ಶನ್ ವಿರುದ್ಧ ಸಾಕ್ಷಿಗಳು ಹೇಳದಂತೆ ಇರುವುದು ಹೀಗೆ ಅನೇಕ ಸಾಕ್ಷ್ಯಗಳನ್ನು ನಾಶ ಮಾಡಲು ದರ್ಶನ್‌ ಪ್ಲ್ಯಾನ್‌ ನಡೆಸಿದ್ದರು. ವಿನಯ್, ಪ್ರದೂಷ್‌ ಮೂಲಕ ಕೇಸ್ ತನ್ನವರೆಗೂ ಬರದಂತೆ ಹಣ ನೀಡಿ ಮುಚ್ಚಿ ಹಾಕಿಸಲು ಸಂಚು ಹೂಡಿದ್ದರು. ಹಾಗಾದ್ರೆ ದರ್ಶನ್ ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಏನೆಲ್ಲಾ ಪ್ಲಾನ್ ಮಾಡಿದ್ದರು ಎಂಬುದು ತಿಳಿಯಲು ಮುಂದೆ ಓದಿ.

ಮೊದಲ ಹಂತದಲ್ಲಿ ರೇಣುಕಾಸ್ವಾಮಿ ಶವ ಬಿಸಾಡೋದ್ರಲ್ಲಿ ನಡೆದಿತ್ತು ಪ್ಲ್ಯಾನ್‌!

ರೇಣುಕಾ ಸ್ವಾಮಿ ಸತ್ತ ಬಳಿಕ ಯಾರಿಗೂ ಕಾಣದಂತೆ ಶವ ಬಿಸಾಡುವ ಪ್ರಯತ್ನ ನಡೆಸಿದ್ದರು ಟೀಂ. ಆದರೆ ಆರೋಪಿಗಳಿಗೆ ಶವ ಬಿಸಾಡಲು ಸಾಕಷ್ಟು ಕನ್ಫ್ಯೂಷನ್ ಆಗಿತ್ತು. ಇದಕ್ಕೂ ಮುಂಚೆ ಸೋಮನಹಳ್ಳಿ ಬ್ರಿಡ್ಜ್ ಬಳಿ ಮೂರು ರೌಂಡ್ ಗಾಡಿಯಲ್ಲಿ ಸುತ್ತಿದ್ರು. ಬೇರೆ ಎಲ್ಲಾದ್ರೂ ಬಿಸಾಡಬಹುದಾ ನೋಡಿದ್ರು. ಕೊನೆಗೆ ದಾರಿ ಕಾಣದೆ ಮೋರಿಗೆ ಶವ ಹಾಕಿ ಎಸ್ಕೇಪ್ ಆದರು. ಅಲ್ಲಿ ಆದ ಎಡವಟ್ಟಿನಿಂದ ಶವ ಪತ್ತೆಯಾಗಿ ಆರೋಪಿಗಳು ಸಿಕ್ಕಿಬಿದ್ದರು.

ಗಿರಿನಗರದ ಮೂವರು ಬಳಿಕ ತಾವೇ ಕೊಲೆ ಮಾಡಿದ್ದೇವೆ ಎಂದು ಒಪ್ಪಿ ಶರಣಾದರು. ಹಣದ ವಿಚಾರವಾಗಿ ಕೊಲೆ ಮಾಡಿರುವುದಾಗಿ ಒಪ್ಪಿಗೆ ಕೂಡ ಸೂಚಿಸಿದರು. ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರಿಸಿದಾಗ ಅಸಲಿ ವಿಚಾರ ಬಯಲಿಗೆ ಬಂತು.

ಇದನ್ನೂ ಓದಿ: ‌Actor Darshan: ದರ್ಶನ್‌ ಗ್ಯಾಂಗ್‌ನಿಂದ ಪೊಲೀಸರು ವಶಪಡಿಸಿಕೊಂಡದ್ದೇನು?

ಸಾಕ್ಷ್ಯ ನಾಶ, ಹಣ ಹಂಚಿ ಎಲ್ಲವನ್ನೂ ಡಿಸ್ಪೋಸ್..!

ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿ ಮರ್ಡರ್‌ ಮಾಡಲಾಗಿತ್ತು. ಇಲ್ಲಿನ‌ ಸಾಕ್ಷ್ಯಗಳೇ ದರ್ಶನ್ ಅರೆಸ್ಟ್‌ ಮಾಡಲು ಸಹಾಯವಾಗಿದ್ದು. ಘಟನಾ ಸ್ಥಳದಲ್ಲಿ ದರ್ಶನ್ ಇದ್ದರು ಎನ್ನುವುದೇ ಮುಖ್ಯ ಅಂಶ. ಆದರೆ ಹತ್ಯೆಯಾದ ಸಂದರ್ಭದಲ್ಲಿ ತಾನಿದ್ದ ಬಗ್ಗೆ ಹೇಳ್ಬಾರ್ದು ಎಂದು ಶೆಡ್ ಸಿಬ್ಬಂದಿಗೆ ಹಣದ ಆಮೀಷ ಒಡ್ಡಿದ್ದರು ದರ್ಶನ್‌. ಈ ಬಗ್ಗೆ ಪೊಲೀಸರ ಮುಂದೆ ಶೆಡ್ ಮಾಲೀಕ ಜಯಣ್ಣ ಹೇಳಿಕೆ ನೀಡಿದ್ದಾರೆ.

ಗಣ್ಯ ವ್ಯಕ್ತಿಗಳ ಸಂಪರ್ಕ, ಸರ್ಕಾರಕ್ಕೆ ಒತ್ತಡ ಹಾಕಿಸುವ ಯತ್ನ..

ರಾಜಕೀಯ ಹಂತದಲ್ಲೂ ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ದರ್ಶನ್ ಪ್ಲಾನ್ ಮಾಡಿದ್ದರು.ಗಣ್ಯ ವ್ಯಕ್ತಿಗಳ ಸಂಪರ್ಕ ಮಾಡಿ ಮನವಿ ಕೂಡ ಮಾಡಿದ್ದರು. ಕೇಸ್‌ನಲ್ಲಿ ಅರೆಸ್ಟ್ ಮಾಡದಂತೆ ಹೇಳಲು ಒತ್ತಡ ಹಾಕಿದ್ದರು. ಆದರೆ ಮರ್ಡರ್ ಕೇಸ್ ಹಿನ್ನೆಲೆಯಲ್ಲಿ ಗಣ್ಯ ವ್ಯಕ್ತಿಗಳು ಸೈಲೆಂಟ್‌ ಆಗಿದ್ದಾರೆ. ಹೀಗೆ ಹಂತ ಹಂತದಲ್ಲಿಯೂ ತಾನು ತಪ್ಪಿಸಿಕೊಳ್ಳೋಕೆ ದರ್ಶನ್‌ ಪ್ಲಾನ್ ಮಾಡಿದ್ದು ತನಿಖೆ ವೇಳೆ ಗೊತ್ತಾಗಿದೆ.

ನಟಿ ಪವಿತ್ರಾ ಗೌಡ (Pavithra Gowda) ಜೈಲು ಪಾಲಾಗಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಮಾಡಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಎ1, ದರ್ಶನ್​ ಎ2 ಆಗಿದ್ದಾರೆ. ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಪ್ರಮುಖ ಆರೋಪಿ ಆಗಿದ್ದು, ಜೂನ್​ 20 ಅವರ ಪೊಲೀಸ್​​ ಕಸ್ಟಡಿ ಅಂತ್ಯವಾಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡ ಸರಿಯಾಗಿ ಊಟ, ನಿದ್ರೆ ಮಾಡದೆ ಚಡಪಡಿಸಿದ್ದರು ಎನ್ನಲಾಗಿದೆ.

Continue Reading
Advertisement
Engineering Seats
ಶಿಕ್ಷಣ16 mins ago

Engineering Seats: ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಿಹಿಸುದ್ದಿ; ಈ ಬಾರಿ ಹೆಚ್ಚು ಸೀಟುಗಳು ಲಭ್ಯ!

Pavithra Gowda Number 6024 in parappana jail
ಕ್ರೈಂ16 mins ago

Pavithra Gowda: ಪವಿತ್ರಾ ಗೌಡ ಈಗ ಕೈದಿ ನಂಬರ್ 6024; ಹೈಫೈ ಲೈಫ್ ಲೀಡ್ ಮಾಡಿದ್ದ ನಟಿ ಈಗ ಜೈಲು ಹಕ್ಕಿ!

assault Case
ಕ್ರೈಂ30 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ34 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್38 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest54 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest56 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ1 hour ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ2 hours ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌