ICC World Cup 2023 : ಐದು ಬಾರಿಯ ಚಾಂಪಿಯನ್ನರಿಗೆ ಸವಾಲಾಗುವರೇ ಡಚ್ಚರು - Vistara News

ಕ್ರಿಕೆಟ್

ICC World Cup 2023 : ಐದು ಬಾರಿಯ ಚಾಂಪಿಯನ್ನರಿಗೆ ಸವಾಲಾಗುವರೇ ಡಚ್ಚರು

ಅಕ್ಟೋಬರ್ 25 ರಂದು ದೆಹಲಿಯಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ನಡೆಯಲಿರುವ ಏಕದಿನ ವಿಶ್ವ ಕಪ್ ಪಂದ್ಯದಲ್ಲಿ (ICC World Cup 2023)ಆಸ್ಟ್ರೇಲಿಯಾ ಹ್ಯಾಟ್ರಿಕ್ ಗೆಲುವು ದಾಖಲಿಸುವ ಗುರಿ ಹೊಂದಿದೆ.

VISTARANEWS.COM


on

Australia Cricket team
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: : ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಏಕದಿನ ವಿಶ್ವಕಪ್ ನ 24ನೇ (ICC World Cup 2023) ಪಂದ್ಯದಲ್ಲಿ ಅರ್ಹತಾ ತಂಡವಾಗಿರುವ ನೆದರ್ಲೆಂಡ್ಸ್ ವಿರುದ್ಧ ಸೆಣಸಲಿದೆ. ಹೋಲಿಕೆಯಲ್ಲಿ ಎರಡೂ ತಂಡಗಳ ಸಾಮರ್ಥ್ಯ ಅಜಗಜಾಂತರ. ಆದರೆ ಹಾಲಿ ವಿಶ್ವಕಪ್​ನಲ್ಲಿ ಈಗಾಗಲೇ ಕೆಲವು ಅಚ್ಚರಿಯ ಫಲಿತಾಂಶಗಳು ಕಂಡಿವೆ. ಹೀಗಾಗಿ ‘ಮೆನ್ ಇನ್ ಯೆಲ್ಲೋ’ ಡಚ್ ತಂಡವನ್ನು ಲಘುವಾಗಿ ತೆಗೆದುಕೊಳ್ಳದು. ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಸಮಗ್ರ ಸೋಲುಗಳೊಂದಿಗೆ ಆಸ್ಟ್ರೇಲಿಯಾ ತನ್ನ ಅಭಿಯಾನವನ್ನು ಪ್ರಾರಂಭಿಸಿತ್ತು. ಆದಾಗ್ಯೂ, ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವು ಶ್ರೀಲಂಕಾ ಮತ್ತು ಪಾಕಿಸ್ತಾನದ ವಿರುದ್ಧ ಸತತ ಗೆಲುವುಗಳೊಂದಿಗೆ ಮರಳಿ ಲಯ ಕಂಡುಕೊಂಡಿತು.

ಪಾಕಿಸ್ತಾನ ವಿರುದ್ಧದ ಹಿಂದಿನ ಪಂದ್ಯದಲ್ಲಿ ಆರಂಭಿಕ ಜೋಡಿ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ 259 ರನ್​ಗಳ ಜೊತೆಯಾಟವನ್ನು ನಿರ್ಮಿಸಿದ್ದರು. ಆಸ್ಟ್ರೇಲಿಯಾದ ಉಳಿದ ಬ್ಯಾಟರ್​​ಗಳು ಆ ರೋಚಕ ಆರಂಭವನ್ನು ಬಳಸಿಕೊಳ್ಳಲು ವಿಫಲ ಹೊಂದಿದ್ದರು. 50 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ ತಂಡ 367 ರನ್ ಗಳಿಸಿತ್ತು. ಪಾಕಿಸ್ತಾನವು ತಮ್ಮ ಚೇಸಿಂಗ್​​ನಲ್ಲಿ ಉತ್ತಮ ಆರಂಭ ಪಡೆದು ಕೊನೆಗೆ ಸೋಲೊಪ್ಪಿಕೊಂಡಿತು.

ಆಸ್ಟ್ರೇಲಿಯಾ ತಂಡಕ್ಕೆ ಸಾಕಷ್ಟು ಕಾಳಜಿಯ ಸಂಗತಿಗಳಿವೆ. ವಾರ್ನರ್, ಮಾರ್ಷ್ ಮತ್ತು ಜೋಶ್ ಇಂಗ್ಲಿಸ್ ಅವರನ್ನು ಹೊರತುಪಡಿಸಿದರೆ ಆಸ್ಟ್ರೇಲಿಯಾದ ಬೇರೆ ಯಾವುದೇ ಬ್ಯಾಟರ್​ಗಳು ನಿರ್ದಿಷ್ಟ ಇನಿಂಗ್ಸ್​ಗಳಲ್ಲಿ 50 ರನ್​ಗಳ ಗಡಿಯನ್ನು ದಾಟಿಲ್ಲ . ಬೌಲಿಂಗ್ ವಿಭಾಗದಲ್ಲಿ ಆಡಮ್ ಜಂಪಾ ನಾಲ್ಕು ಪಂದ್ಯಗಳಲ್ಲಿ ಒಂಬತ್ತು ವಿಕೆಟ್ ಪಡೆದು ಮಿಂಚಿದ್ದಾರೆ. ಅನುಭವಿ ಸೀಮ್ ಬೌಲರ್​ಗಳಾದ ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್ವುಡ್ ಮತ್ತು ಕಮಿನ್ಸ್ ಇನ್ನೂ ತಮ್ಮ ಕೌಶಲ ಪ್ರದರ್ಶಿಸಿಲ್ಲ.

ಉತ್ಸಾಹದಲ್ಲಿದೆ ನೆದರ್ಲ್ಯಾಂಡ್ಸ್​ ತಂಡ

ಪಾಕಿಸ್ತಾನ ವಿರುದ್ಧದ ವಿಶ್ವ ಕಪ್​ನ ತನ್ನ ಆರಂಭಿಕ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ಭರವಸೆ ವ್ಯಕ್ತಪಡಿಸಿತು. ಆದರೂ ಸೋತಿತು. ಬಳಿಕ ಫಾರ್ಮ್ ನಲ್ಲಿರುವ ನ್ಯೂಜಿಲೆಂಡ್ ತಂಡದೆದುರು ಸೋಲನುಭವಿಸಿತು. ಮೂರನೇ ಪಂದ್ಯದಲ್ಲಿ, ಸ್ಕಾಟ್ ಎಡ್ವರ್ಡ್ಸ್ ಮತ್ತು ತಂಡವು ಮಳೆಯಿಂದ ಮೊಟಕುಗೊಂಡ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸುವಲ್ಲಿ ಯಶಸ್ವಿಯಾಯಿತು. ಶ್ರೀಲಂಕಾ ವಿರುದ್ಧದ ಇತ್ತೀಚಿನ ಪಂದ್ಯದಲ್ಲಿ ಡಚ್ ತಂಡವು 262 ರನ್ ಗಳಿಸಿತ್ತು. ಆದರೆ ಲಂಕಾ ಲಯನ್ಸ್ 49ನೇ ಓವರ್​​ನಲ್ಲಿ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತ್ತು.

ಆಸ್ಟ್ರೇಲಿಯಾ ತನ್ನ ಪ್ಲೇಯಿಂಗ್ ಇಲೆವೆ್ನ್​ನಲ್ಲಿ ಯಾವುದೇ ಬದಲಾವಣೆಗಳಿಲ್ಲದೆ ನೆದರ್ಲ್ಯಾಂಡ್ಸ್ ವಿರುದ್ಧ ಕಣಕ್ಕೆ ಇಳಿಯಲಿದೆ. ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಕೊನೆಯ ಬಾರಿಗೆ ಓಪನಿಂಗ್ ಮಾಡುವ ನಿರೀಕ್ಷೆಯಿದೆ, ಟ್ರಾವಿಸ್ ಹೆಡ್ ನ್ಯೂಜಿಲೆಂಡ್ ವಿರುದ್ಧದ ಮುಂದಿನ ಪಂದ್ಯಕ್ಕೆ ಮರಳಲಿದ್ದಾರೆ.

ಈ ಸುದ್ದಿಗಳನ್ನೂ ಓದಿ
Virat kohli : ಹಿಮಾಚಲ ಪ್ರದೇಶದ ಐತಿಹಾಸಿಕ ಆಶ್ರಮಕ್ಕೆ ಭೇಟಿ ನೀಡಿದ ಕೊಹ್ಲಿ
ICC World Cup 2023 : ಪಾಕ್​ ವಿರುದ್ಧ ಅಫಘಾನಿಸ್ತಾನದ ಗೆಲುವಿನಲ್ಲಿ ಭಾರತದ ಮಾಜಿ ಕ್ರಿಕೆಟಿಗನ ಕೈವಾಡ
ಅಫಘಾನಿಸ್ತಾನ​ ವಿರುದ್ಧ ಸೋತು ಸುಣ್ಣವಾದ ಪಾಕ್ ತಂಡಕ್ಕೆ ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ?

ನೆದರ್ಲ್ಯಾಂಡ್ಸ್ ತಂಡ ಯುವ ಮತ್ತು ಅನುಭವಿ ಆಟಗಾರರನ್ನು ಹೊಂದಿದೆ. ಇದು ತಂಡದ ಸಮತೋಲನ ಕಾಪಾಡುತ್ತದೆ. ಆದರೆ ವಿಕ್ರಮ್ಜಿತ್ ಸಿಂಗ್, ಮ್ಯಾಕ್ಸ್ ಒ’ಡೌಡ್ ಮತ್ತು ತೇಜಾ ನಿಡಮನೂರು ಅವರಂತಹ ಆಟಗಾರರು ಬ್ಯಾಟಿಂಗ್ಸ್​​ ತಮ್ಮ ನಿರೀಕ್ಷೆಗಳನ್ನು ಪೂರೈಸಲು ವಿಫಲರಾಗಿದ್ದಾರೆ. ಸ್ಕಾಟ್ ಎಡ್ವರ್ಡ್ಸ್, ಸೈಬ್ರಾಂಡ್ ಎಂಗೆಲ್ಬ್ರೆಕ್ಟ್ ಮತ್ತು ಲೋಗನ್ ವ್ಯಾನ್ ಬೀಕ್ ಬ್ಯಾಟ್​ನೊಂದಿಗೆ ಉತ್ತಮ ಕೊಡುಗೆಗಳನ್ನು ನೀಡಿದ್ದಾರೆ. ಬಾಸ್ ಡಿ ಲೀಡೆ ಏಕದಿನ ವಿಶ್ವಕಪ್ 2023 ರಲ್ಲಿ ಯುರೋಪಿಯನ್ ರಾಷ್ಟ್ರಕ್ಕಾಗಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಅವರು ನಾಲ್ಕು ಪಂದ್ಯಗಳಲ್ಲಿ 27.29 ಸರಾಸರಿಯಲ್ಲಿ ಏಳು ವಿಕೆಟ್​ಗಳನ್ನು ಪಡೆದಿದ್ದಾರೆ.

ನೆದರ್ಲ್ಯಾಂಡ್ಸ್ ತಮ್ಮ ಪ್ಲೇಯಿಂಗ್ ಇಲೆವೆನ್ನಲ್ಲಿ ಹೆಚ್ಚು ಬದಲಾವಣೆ ಮಾಡಲು ಮಾಡಲು ಇಷ್ಟಪಡುವುದಿಲ್ಲ. ಹಿಂದಿನ ಪಂದ್ಯದಲ್ಲಿ ಆಡಿದ ಅದೇ ಆಟಗಾರರನ್ನು ಟೀಮ್ ಮ್ಯಾನೇಜ್ಮೆಂಟ್​ ಬೆಂಬಲಿಸಬಹುದು. ಆದರೆ ಅಗ್ರ ಕ್ರಮಾಂಕದಿಂದ ಕೆಲವು ರನ್ ಬರಲಿ ಎಂಬುದು ತಂಡದ ಬಯಕೆ. ಹೀಗಾಗಿ ಪಾಕಿಸ್ತಾನ ವಿರುದ್ಧ 52 ರನ್ ಗಳಿಸಿದ ನಂತರ ಮೂರು ಇನಿಂಗ್ಸ್​​ಗಳಲ್ಲಿ ಕೇವಲ 18 ರನ್ ಗಳಿಸಿರುವ ವಿಕ್ರಮ್ಜಿತ್ ಸಿಂಗ್ ಬದಲಿಗೆ 39 ವರ್ಷದ ವೆಸ್ಲಿ ಬರೆಸಿ ಬರುವ ಸಾಧ್ಯತೆಯಿದೆ.

ಪಿಚ್​ ಪರಿಸ್ಥಿತಿ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮರುನಿರ್ಮಾಣಗೊಂಡ ಪಿಚ್​​ಗಳು ಸಾಕಷ್ಟು ರನ್​​ಗಳನ್ನು ನೀಡಿವೆ. ಪಂದ್ಯಾವಳಿಯಲ್ಲಿ ಈವರೆಗೆ ಮೂರು ಪಂದ್ಯಗಳನ್ನು ಈ ಸ್ಥಳದಲ್ಲಿ ಆಡಲಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳು ಎರಡು ಪಂದ್ಯಗಳನ್ನು ಗೆದ್ದರೆ, ಚೇಸಿಂಗ್ ತಂಡವು ಒಮ್ಮೆ ಗೆದ್ದಿತು. ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಈ ಸ್ಥಳದಲ್ಲಿ ಇತ್ತೀಚೆಗೆ ಆಡಿದ ಪಂದ್ಯದಲ್ಲಿ ಇಬ್ಬನಿ ಪರಿಣಾಮ ಇರಲಿಲ್ಲ. ಎರಡನೇ ಇನ್ನಿಂಗ್ಸ್ ನಲ್ಲಿ ಚೆಂಡು ಮೇಲ್ಮೈಯಲ್ಲಿ ಸ್ವಲ್ಪ ಹಿಡಿದಿಟ್ಟುಕೊಂಡಿತು,

ತಂಡಗಳು ಹೀಗಿರಲಿವೆ

ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್​ ಕೀಪರ್​), ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹೇಜಲ್ವುಡ್.

ನೆದರ್ಲ್ಯಾಂಡ್ಸ್ : ವಿಕ್ರಮ್ಜಿತ್ ಸಿಂಗ್/ ವೆಸ್ಲಿ ಬಾರೆಸಿ, ಮ್ಯಾಕ್ಸ್ ಒ’ಡೌಡ್, ಕಾಲಿನ್ ಆಕರ್ಮ್ಯಾನ್, ಬಾಸ್ ಡಿ ಲೀಡ್, ಸಿಬ್ರಾಂಡ್ ಎಂಗೆಲ್ಬ್ರೆಕ್ಟ್, ತೇಜಾ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್​ ಕೀಪರ್​), ಲೋಗನ್ ವ್ಯಾನ್ ಬೀಕ್, ರೋಲೊಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್.

ಇತ್ತಂಡಗಳ ಮುಖಾಮುಖಿ

  • ಆಡಿದ ಪಂದ್ಯಗಳು 2
  • ಆಸ್ಟ್ರೇಲಿಯಾ 2 ಗೆಲುವು
  • ನೆದರ್ಲೆಂಡ್ಸ್ 0 ಗೆಲುವು
  • ಮೊದಲ ಪಂದ್ಯ 20 ಫೆಬ್ರವರಿ 2003
  • ಕೊನೆಯ ಬಾರಿ ಆಡಿದ್ದು 18 ಮಾರ್ಚ್ 2007

ನೇರ ಪ್ರಸಾರ ವಿವರಗಳು

  • ದಿನಾಂಕ: ಬುಧವಾರ, ಅಕ್ಟೋಬರ್ 25
  • ಸಮಯ: ಮಧ್ಯಾಹ್ನ 2:00 (ಭಾರತೀಯ ಕಾಲಮಾನ)
  • ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್ಸೈಟ್
  • ಲೈವ್ ಬ್ರಾಡ್ಕಾಸ್ಟ್ ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

INDW vs SAW: ಭಾನುವಾರದಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಎಲ್ಲ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಏಕೈಕ ಟೆಸ್ಟ್​ ಮತ್ತು 3 ಟಿ20 ಪಂದ್ಯಗಳು ಚೆನ್ನೈಯ ಚೆಪಾಕ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

INDW vs SAW
Koo

ಬೆಂಗಳೂರು: ಜೂನ್ 16ರಿಂದ ಆರಂಭಗೊಳ್ಳಲಿರುವ ದಕ್ಷಿಣ ಆಫ್ರಿಕಾ(India women’s vs South Africa women’s) ಮತ್ತು ಭಾರತ ಮಹಿಳಾ(INDW vs SAW) ಏಕದಿನ(INDW vs SAW 1st ODI) ಸರಣಿಗೆ ಉಭಯ ತಂಡಗಳ ಆಟಗಾರ್ತಿಯರು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ. ತಂಡದ ಸಿದ್ಧತೆ ಬಗ್ಗೆ ಶ್ರೇಯಾಂಕಾ ಪಾಟೀಲ್(Shreyanka Patil) ಕನ್ನಡದಲ್ಲೇ ವಿವರಿಸಿದ್ದಾರೆ. ಈ ವಿಡಿಯೊವನ್ನು ಆರ್​ಸಿಬಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಉದಯೋನ್ಮುಖ ಆಟಗಾರ್ತಿಯಾಗಿರುವ ಶ್ರೇಯಾಂಕಾ ಏಕದಿನ ಮತ್ತು ಟಿ20 ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ.


ಭಾನುವಾರದಂದು ಮೊದಲ ಏಕದಿನ ಪಂದ್ಯ ನಡೆಯಲಿದೆ. ಒಟ್ಟು ಮೂರು ಪಂದ್ಯಗಳ ಏಕದಿನ ಸರಣಿ ಇದಾಗಿದ್ದು ಎಲ್ಲ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಏಕೈಕ ಟೆಸ್ಟ್​ ಮತ್ತು 3 ಟಿ20 ಪಂದ್ಯಗಳು ಚೆನ್ನೈಯ ಚೆಪಾಕ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಂದ್ಯ ಸಿದ್ಧತೆ ಬಗ್ಗೆ ಮಾತನಾಡಿದ ಶ್ರೇಯಾಂಕ, ‘ಎಲ್ಲರಿಗೂ ನಮಸ್ಕಾರ, ನಾವು ಬೆಂಗಳೂರಿನಲ್ಲಿದ್ದೇವೆ. ಇಲ್ಲಿನ ವಾತಾವರಣ ತುಂಬಾ ಹಿತ ನೀಡಿದೆ. ಮೊದಲ ಅಭ್ಯಾಸ ಅವಧಿಯನ್ನು ಅತ್ಯಂತ ಯಶಸ್ವಿಯಾಗಿ ಮುಗಿಸಿದ್ದೇವೆ. ಎಲ್ಲರು ತುಂಬಾ ಎನರ್ಜಿಯಿಂದ ಅಭ್ಯಾಸ ನಡೆಸಿದೆವು. ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಕಾತರಗೊಂಡಿದ್ದೇವೆ. ಇಲ್ಲಿ ನಡೆದ ಡಬ್ಲ್ಯುಪಿಎಲ್​ ಪಂದ್ಯಾವಳಿಯ ವೇಳೆ ಪ್ರೇಕ್ಷಕರು ದೊಡ್ಡ ಸಂಖ್ಯೆಯಲ್ಲಿ ಬಂದು ಸ್ಟೇಡಿಯಂ ತುಂಬಿ ಹೋಗಿತ್ತು. ಇದೀಗ ಏಕದಿನ ಸರಣಿಗೂ ಅದೇ ರೀತಿ ಸ್ಟೇಡಿಯಂಗೆ ಬಂದು ಟೀಮ್​ ಇಂಡಿಯಾಕ್ಕೆ ಸಪೋರ್ಟ್​ ಮಾಡಿ’ ಎಂದು ಕೇಳಿಕೊಂಡಿದ್ದಾರೆ. ಡ್ಯಾಶಿಂಗ್​ ಓಪನರ್​ ಶಫಾಲಿ ವರ್ಮಾ ಕೂಡ ಬಿಸಿಸಿಐ ವಿಶೇಷ ವಿಡಿಯೊದಲ್ಲಿ ಮಾತನಾಡಿ ಪಂದ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬಂದು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ WPL 2024: ಶ್ರೇಯಾಂಕಾ ಪಾಟೀಲ್ ಅದ್ಭುತ ಫೀಲ್ಡಿಂಗ್​ ಕಂಡು ದಂಗಾದ ಆರ್​ಸಿಬಿ ಅಭಿಮಾನಿಗಳು

ಹರ್ಮನ್‌ಪ್ರೀತ್‌ ಕೌರ್‌ ಅವರು ಮೂರು ಮಾದರಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ಕಳೆದ ಬಾಂಗ್ಲಾ ವಿರುದ್ಧದ ಸರಣಿಯಿಂದ ಅವರು ಹೊರಗುಳಿದಿದ್ದರು. ವೇಗಿ ಪೂಜಾ ವಸ್ತ್ರಕರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದೇಶೀಯ ಕ್ರಿಕೆಟ್​ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿದ್ದ ಅಗ್ರ ಕ್ರಮಾಂಕದ ಬ್ಯಾಟರ್ ಪ್ರಿಯಾ ಪೂನಿಯಾ ಏಕದಿನ ಮತ್ತು ಟೆಸ್ಟ್‌ ತಂಡಕ್ಕೆ ಮರಳಿದ್ದಾರೆ.

ಏಕದಿನ ತಂಡ


ಹರ್ಮನ್‌ಪ್ರೀತ್‌ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್‌ ಕೀಪರ್‌), ಉಮಾ ಚೆಟ್ರಿ (ವಿಕೆಟ್ ಕೀಪರ್‌), ದಯಾಳನ್ ಹೇಮಲತಾ, ರಾಧಾ ಯಾದವ್, ಆಶಾ ಶೋಭನ, ಶ್ರೇಯಾಂಕಾ ಪಾಟೀಲ್​, ಸೈಕಾ ಇಶಾಕ್, ಪೂಜಾ ವಸ್ತ್ರಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಪ್ರಿಯಾ ಪೂನಿಯಾ

Continue Reading

ಕ್ರೀಡೆ

IND vs CAN: ಕೆನಡಾ ಪಂದ್ಯಕ್ಕೆ ಕೊಹ್ಲಿ,ಜಡೇಜಾ, ಅಕ್ಷರ್​ಗೆ ರೆಸ್ಟ್​​!​

IND vs CAN: ಈಗಾಗಲೇ ಭಾರತ(Team India) ಆಡಿದ ಎಲ್ಲ ಮೂರು ಪಂದ್ಯಗಳನ್ನು ಗೆದ್ದು ಸೂಪರ್​-8ಗೆ ಅರ್ಹತೆ ಪಡೆದಿದೆ. ಹೀಗಾಗಿ ಕೊಹ್ಲಿ ಅವರಿಗೆ ಅಂತಿಮ ಪಂದ್ಯದಲ್ಲಿ ಬಿಸಿಸಿಐ ವಿಶ್ರಾಂತಿ ನೀಡಲು ಬಯಸಿದೆ ಎಂದು ತಿಳಿದುಬಂದಿದೆ.

VISTARANEWS.COM


on

IND vs CAN
Koo

ನ್ಯೂಯಾರ್ಕ್​: ಕಳೆದ ಮೂರು ಪಂದ್ಯಗಳಲ್ಲಿ ಸತತವಾಗಿ ಬ್ಯಾಟಿಂಗ್​ ವೈಫಲ್ಯ ಕಂಡು ಒಂದಂಕಿಗೆ ಸೀಮಿತರಾದ ಕಿಂಗ್​ ಖ್ಯಾತಿಯ ವಿರಾಟ್​ ಕೊಹ್ಲಿ(Virat Kohli) ಅವರನ್ನು ಕೆನಡಾ(IND vs CAN) ವಿರುದ್ಧದ ಪಂದ್ಯದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ತಂಡದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಈಗಾಗಲೇ ಭಾರತ(Team India) ಆಡಿದ ಎಲ್ಲ ಮೂರು ಪಂದ್ಯಗಳನ್ನು ಗೆದ್ದು ಸೂಪರ್​-8ಗೆ ಅರ್ಹತೆ ಪಡೆದಿದೆ. ಹೀಗಾಗಿ ಕೊಹ್ಲಿ ಅವರಿಗೆ ಅಂತಿಮ ಪಂದ್ಯದಲ್ಲಿ ಬಿಸಿಸಿಐ ವಿಶ್ರಾಂತಿ ನೀಡಲು ಬಯಸಿದೆ ಎಂದು ತಿಳಿದುಬಂದಿದೆ. ಕೊಹ್ಲಿ ಮಾತ್ರವಲ್ಲದೆ ಅಕ್ಷರ್​ ಪಟೇಲ್, ರವೀಂದ್ರ ಜಡೇಜಾ ಅವರಿಗೂ ವಿಶ್ರಾಂತಿ ನೀಡಿ ಅವರ ಸ್ಥಾನದಲ್ಲಿ ಕುಲ್​ದೀಪ್​ ಮತ್ತು ಯಜುವೇಂದ್ರ ಚಹಲ್​ ಅವರನ್ನು ಆಡಿಸುವ ಸಾಧ್ಯತೆ ಕಂಡುಬಂದಿದೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ ಕೊಹ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. ಆದರೆ, ಈ ಯಶಸ್ಸು ಕೊಹ್ಲಿಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಕೈ ಹಿಡಿಯಲಿಲ್ಲ. 1, 4,0 ಇದು ಕೊಹ್ಲಿಯ ಈ ಬಾರಿಯ ಸ್ಕೋರ್​ ಆಗಿದೆ.

ಇದನ್ನೂ ಓದಿ IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​

ಕೊಹ್ಲಿ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಅಥವಾ ಸಂಜು ಸ್ಯಾಮ್ಸನ್ ಆಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬಂದಿವೆ. ಕೆನಡಾ ವಿರುದ್ಧದ ಪಂದ್ಯ ನಡೆಯುವುದು ಕೂಡ ಅನುಮಾನ ಎನ್ನುವಂತಿದೆ. ಪಂದ್ಯ ನಡೆಯುವ ಫ್ಲೊರಿಡಾದಲ್ಲಿ ಈಗಾಗಲೇ ಭಾರೀ ಮಳೆ ಸುರಿದು ರಸ್ತೆಗಳೆಲ್ಲ ಹೊಳೆಯಂತಾಗಿದೆ. ಸೂಪರ್ 8ರಲ್ಲಿ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಭಾರತಕ್ಕೆ ಎದುರಾಗುವ ಸಾಧ್ಯತೆ ಕಂಡು ಬಂದಿದೆ.

ಕೆನಡಾ ವಿರುದ್ಧದ ಪಂದ್ಯ ಮುಕ್ತಾಯಗೊಂಡ ತಕ್ಷಣ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ. ಶುಭಮನ್ ಗಿಲ್ ಮತ್ತು ಅವೇಶ್ ಖಾನ್ ತಂಡದಲ್ಲಿ ಪ್ರಯಾಣ ಮೀಸಲು ಭಾಗವಾಗಿ ಸ್ಥಾನ ಪಡೆದಿದ್ದರು.

ಕೊಹ್ಲಿ ವೈಫಲ್ಯಕ್ಕೆ ನಿಧಾನಗತಿ ಪಿಚ್ ಕಾರಣ!


ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.

Continue Reading

ಕ್ರೀಡೆ

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Yusuf Pathan: ಜೂನ್‌ 6ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಿ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹೇಳಲಾಗಿದೆ. ಜತೆಗೆ ಒಂದೆರಡು ವಾರಗಳ ಕಾಲಾವಕಾಶ ನೀಡಲಾಗಿದೆ ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಮಿಸ್ತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Yusuf Pathan
Koo

ವಡೋದರಾ: ಮೊನೆಯಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಹರಂಪುರ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌‍ (ಟಿಎಂಸಿ) ಪಕ್ಷದಿಂದ ಸ್ಪರ್ಧಿಸಿ ಸಂಸದರಾದ ಟೀಮ್​ ಇಂಡಿಯಾ ಮಾಜಿ ಕ್ರಿಕೆಟಿಗ ಯೂಸುಫ್‌ ಪಠಾಣ್‌(Yusuf Pathan) ಸಂಕಷ್ಟವೊಂದರಲ್ಲಿ ಸಿಲುಕಿದ್ದಾರೆ. ನಾಗರಿಕರ ಜಮೀನನ್ನು ಒತ್ತುವರಿ ಮಾಡಿದ ಆರೋಪದ ಮೇಲೆ ವಡೋದರಾ ಮುನ್ಸಿಪಲ್‌ ಕಾರ್ಪೊರೇಷನ್‌ (ವಿಎಂಸಿ) ಯೂಸುಫ್‌ ಅವರಿಗೆ ನೋಟಿಸ್‌‍ ಜಾರಿಗೊಳಿಸಿದೆ. ಜೂನ್‌ 6 ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿಯ ಮಾಜಿ ಕಾರ್ಪೊರೇಟರ್‌ ವಿಜಯ್‌ ಪವಾರ್‌ ಅವರು ಯೂಸುಫ್‌ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ್ದರು. 2012ರಲ್ಲಿ ಪಠಾಣ್‌ಗೆ ನಿವೇಶನ ಮಾರಾಟ ಮಾಡುವ ವಿಎಂಸಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದರೂ, ಹೊಸದಾಗಿ ಆಯ್ಕೆಯಾದ ಸಂಸದರು ಕಾಂಪೌಂಡ್‌ ಗೋಡೆ ನಿರ್ಮಿಸಿ ನಿವೇಶನವನ್ನು ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಯೂಸುಫ್‌ ಮೇಲೆ ನನಗೆ ಯಾವುದೇ ದ್ವೇಷವಿಲ್ಲ. ಟಿಪಿ 22ರ ಅಡಿಯಲ್ಲಿ ತನದಲ್ಜಾ ಪ್ರದೇಶದಲ್ಲಿನ ಪ್ಲಾಟ್‌ ವಿಎಂಸಿ ಒಡೆತನದ ವಸತಿ ಪ್ಲಾಟ್‌ ಆಗಿದೆ. 2012 ರಲ್ಲಿ ಪಠಾಣ್‌ ಅವರು ವಿಎಂಸಿಯಿಂದ ಈ ನಿವೇಶನವನ್ನು ಕೇಳಿದ್ದರು. ಆ ಸಮಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಅವರ ಮನೆ, ಆ ಪ್ಲಾಟ್‌ನ ಪಕ್ಕದಲ್ಲಿ ಇತ್ತು. ಪಠಾಣ್‌ ಅವರು ನಿವೇಶನವನ್ನು ಒತ್ತುವರಿ ಮಾಡಿಕೊಂಡು ಸುತ್ತಲೂ ಕಾಂಪೌಂಡ್‌ ಗೋಡೆ ನಿರ್ಮಿಸಿದ್ದರು. ಹೀಗಾಗಿ ನಗರಸಭೆಗೆ ತನಿಖೆ ನಡೆಸುವಂತೆ ಕೋರಿದ್ದೇನೆ ಎಂದು ಪವಾರ್‌ ಹೇಳಿದ್ದಾರೆ.

ಅತಿಕ್ರಮಣಕ್ಕಾಗಿ ಅವರಿಗೆ ನೋಟಿಸ್‌‍ ನೀಡಲಾಗಿದೆ ಎಂದು ವಿಎಂಸಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶೀತಲ್‌ ಮಿಸ್ತ್ರಿ ಹೇಳಿದ್ದಾರೆ. ಇತ್ತೀಚೆಗೆ, ಪಠಾಣ್​ ಕಾಂಪೌಂಡ್‌ ಗೋಡೆಯನ್ನು ನಿರ್ಮಿಸಿದ ಬಗ್ಗೆ ನಮಗೆ ಕೆಲವು ದೂರುಗಳು ಬಂದವು. ಹೀಗಾಗಿ ಜೂನ್‌ 6ರಂದು ಪಠಾಣ್‌ ಅವರಿಗೆ ನೋಟಿಸ್‌‍ ನೀಡಿ ಎಲ್ಲ ಅತಿಕ್ರಮಣಗಳನ್ನು ತೆರವುಗೊಳಿಸುವಂತೆ ಹೇಳಿದ್ದೆವೆ. ನಾವು ಒಂದೆರಡು ವಾರಗಳ ಕಾಲ ಕಾಯುತ್ತೇವೆ ಮತ್ತು ನಂತರ ನಾವು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ಈ ಭೂಮಿ ವಿಎಂಸಿಗೆ ಸೇರಿದ್ದು, ಅದನ್ನು ವಾಪಸ್‌‍ ಪಡೆಯುತ್ತೇವೆ ಎಂದು ಮಿಸ್ತ್ರಿ ಹೇಳಿದ್ದಾರೆ.

ಇದನ್ನೂ ಓದಿ Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury)ಯನ್ನು ಮಣಿಸಿದ್ದರು. ಯೂಸುಫ್ ಪಠಾಣ್ 5,18,066 ಮತಗಳನ್ನು ಪಡೆದರೆ, ತಮ್ಮ ಸಮೀಪದ ಪ್ರತಿಸ್ಪರ್ಧಿ ರಂಜನ್ ಚೌಧರಿ 4,32,340 ಮತಗಳನ್ನು ಮಾತ್ರ ಪಡೆದಿದ್ದರು. ಪಠಾಣ್ 85,726 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಐಪಿಎಲ್​ನಲ್ಲಿ ಕೆಕೆಆರ್​ ತಂಡದ ಪರ ಹಲವು ವರ್ಷಗಳ ಕಾಲ ಆಡಿದ್ದರು. ಅಲ್ಲದೆ ತಂಡದ ಪ್ರಧಾನ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಹೀಗಾಗಿ ಅವರಿಗೆ ಬಂಗಾಳದಾದ್ಯಂತ ಯೂಸುಫ್​ಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಇದೇ ಕಾರಣದಿಂದ ಅವರಿಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ಟಿಕೆಟ್​ ನೀಡಲಾಗಿತ್ತು.

Continue Reading

ಕ್ರೀಡೆ

Shakib Al Hasan: ನಿವೃತ್ತಿಯಾಗಿ ಎಂದು ಲೇವಡಿ ಮಾಡಿದ ಸೆಹವಾಗ್​ಗೆ ತಕ್ಕ ತಿರುಗೇಟು ನೀಡಿದ ಬಾಂಗ್ಲಾ ನಾಯಕ

Shakib Al Hasan: ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಶಕೀಬ್​ ಅವರು ಅಜೇಯ 64 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಮ್ಯಾಚ್​ ವಿನ್ನಿಂಗ್​ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.

VISTARANEWS.COM


on

Shakib Al Hasan
Koo

ನ್ಯೂಯಾರ್ಕ್​: ಕಳೆದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದ ಬಾಂಗ್ಲಾದೇಶ ತಂಡದ ನಾಯಕ ಶಕೀಬ್​ ಅಲ್​ ಹಸನ್(Shakib Al Hasan)​ ಅವರನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಕೈಬಿಟ್ಟರೆ ಉತ್ತಮ ಎಂದು ಹೇಳಿದ್ದ ಟೀಮ್​ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹವಾಗ್​ಗೆ(Virender Sehwag) ಶಕೀಬ್​ ತಿರಿಗೇಟು ನೀಡಿದ್ದಾರೆ.

ಗುರುವಾರ ನಡೆದಿದ್ದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೆದರ್ಲೆಂಡ್ಸ್(Bangladesh vs Netherlands)​ ವಿರುದ್ಧ 25 ರನ್​ ಅಂತರದ ಗೆಲುವು ಸಾಧಿಸಿ ಸೂಪರ್​-8 ಪ್ರವೇಶವನ್ನು ಜೀವಂತವಾಗಿ ಇರಿಸಿದೆ. ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಶಕೀಬ್​, ಯಾವುದೇ ತಂಡದ ಆಟಗಾರರು ಮೂರನೇ ವ್ಯಕ್ತಿಯ ಪ್ರಶ್ನೆಗಳಿಗೆ ಉತ್ತರಿಸಲು ಆಡುತ್ತಿಲ್ಲ. ತಮ್ಮ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡುವ ಜವಾಬ್ದಾರಿಯಿಂದ ಅಷ್ಟೇ. ಅದು ಒಬ್ಬ ಬ್ಯಾಟ್ಸ್​ಮನ್​, ಬೌಲರ್ ಅಥವಾ ಫೀಲ್ಡರ್​ ಆಗಿಯೂ ಇರಬಹುದು. ಕೊಡುಗೆ ನೀಡುವಲ್ಲಿ ವಿಫಲರಾದರೆ, ತಮ್ಮ ಫಾರ್ಮ್​ ಬಗ್ಗೆ ಇಂತಹ ಟೀಕೆಗಳು ಕೇಳಿಬರುವುದು ಸಾಮಾನ್ಯ ಎಂದು ಹೇಳುವ ಮೂಲಕ ಸೆಹವಾಗ್​ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ಸೆಹವಾಗ್​ ಹೇಳಿದ್ದೇನು?


ನನ್ನ ಪ್ರಕಾರ, ಶಕೀಬ್ ಅಲ್​ ಹಸನ್​ ಕ್ರಿಕೆಟ್​ನಿಂದ ನಿವೃತ್ತಿ ಪಡೆಯುವುದೇ ಉತ್ತಮ. ಶಕೀಬ್​ ಅವರನ್ನು ಬಾಂಗ್ಲಾ ಕ್ರಿಕೆಟ್ ಮಂಡಳಿ ಅಂದೇ ಕೈಬಿಡಬೇಕಿತ್ತು. ಅವರನ್ನು ಆಡಿಸುವ ಅವಶ್ಯಕತೆಯೇ ಇರಲಿಲ್ಲ ಎಂದು ಸೆಹವಾಗ್​ ಲೇವಡಿ ಮಾಡಿದ್ದರು. ನೆದರ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಶಕೀಬ್​ ಅವರು ಅಜೇಯ 64 ರನ್​ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಈ ಮ್ಯಾಚ್​ ವಿನ್ನಿಂಗ್​ ಪ್ರದರ್ಶನಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತ್ತು.


ಬಾಂಗ್ಲಾದೇಶ ತಂಡ ‘ಸಿ’ ಗುಂಪಿನಲ್ಲಿ ಸದ್ಯ 4 ಅಂಕದೊಂದಿಗೆ 2ನೇ ಸ್ಥಾನಿಯಾಗಿದೆ. ಸೂಪರ್​ 8 ಹಂತಕ್ಕೇರಲು ನೆಪಾಳ ವಿರುದ್ಧ ನಡೆಯುವ ಅಂತಿಮ ಲೀಗ್​ ಪಂದ್ಯದಲ್ಲಿ ಗೆಲ್ಲಲೇ ಬೇಕು. ಒಂದು ವೇಳೆ ಬಾಂಗ್ಲಾದೇಶ ಈ ಪಂದ್ಯದಲ್ಲಿ ಸೋತು, ಶ್ರೀಲಂಕಾ ವಿರುದ್ಧ ನೆದರ್ಲೆಂಡ್ ಸೋತರೆ ಬಾಂಗ್ಲಾ ತಂಡವೇ ಸೂಪರ್​ 8ಗೆ ಪ್ರವೇಶಿಸುತ್ತದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​


ಶುಕ್ರವಾರ ನಡೆದ ಟಿ20 ವಿಶ್ವಕಪ್​ನ ‘ಸಿ’ ವಿಭಾಗದ ಪಂದ್ಯದಲ್ಲಿ ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದಿತು.

ಇಲ್ಲಿನ ಟರೂಬದಲ್ಲಿರುವ ಬ್ರಿಯಾನ್‌ ಲಾರಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ ಫಜಲ್ಹಕ್ ಫಾರೂಕಿ ಮತ್ತು ನವೀನ್​ ಉಲ್​ ಹಕ್​ ಅವರ ಘಾತಕ ದಾಳಿಗೆ ನಲುಗಿ 95 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಅಫಘಾನಿಸ್ತಾನ 15.1 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 101 ರನ್​ ಬಾರಿಸಿ ಗೆಲುವು ದಾಖಲಿಸಿತು. ಅತ್ತ ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ನ್ಯೂಜಿಲ್ಯಾಂಡ್‌ ಈ ಬಾರಿ ಲೀಗ್​ನಿಂದಲೇ ಹೊರಬಿದ್ದ ಅವಮಾನಕ್ಕೆ ಸಿಲುಕಿತು.

Continue Reading
Advertisement
World Blood Donor Day Awareness Jatha in Bengaluru
ಕರ್ನಾಟಕ3 mins ago

World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

World Blood Donor Day
ಆರೋಗ್ಯ16 mins ago

World Blood Donor Day: ರಕ್ತದಾನ ಯಾರು ಮಾಡಬಹುದು? ಯಾರು ಮಾಡಬಾರದು?

actor Darshan
ಬೆಂಗಳೂರು16 mins ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Money Guide
ಮನಿ-ಗೈಡ್22 mins ago

Money Guide: ಅಸಂಘಟಿತ ವಲಯದ ಕಾರ್ಮಿಕರು ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಪಡೆಯಲು ಹೀಗೆ ಮಾಡಿ

Anant Ambani Love Letter Printed On Radhika Merchant Pre-Wedding Dress
ಬಾಲಿವುಡ್29 mins ago

Anant Ambani: ಅನಂತ್ ಅಂಬಾನಿ ಕೊಟ್ಟ ಪ್ರೇಮ ಪತ್ರ ಪ್ರಿಂಟ್ ಆಗಿದ್ದ ಗೌನ್‌ನಲ್ಲಿ ಮಿಂಚಿದ ರಾಧಿಕಾ ಮರ್ಚಂಟ್‌!

E. Tukaram
ಕರ್ನಾಟಕ38 mins ago

E. Tukaram: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಈ. ತುಕಾರಾಂ

INDW vs SAW
ಕ್ರೀಡೆ44 mins ago

INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

Actor Darshan
ಸಿನಿಮಾ49 mins ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

Pawan Kalyan Fan Narendra cut hairs after Five Years
ಟಾಲಿವುಡ್58 mins ago

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Arun Somanna
ಕರ್ನಾಟಕ1 hour ago

Arun Somanna: ವಂಚನೆ, ಜೀವ ಬೆದರಿಕೆ; ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌