Keshav Maharaj:‌ ಪಾಕ್‌ ವಿರುದ್ಧ ಗೆದ್ದು ಜೈ ಶ್ರೀ ಹನುಮಾನ್‌ ಎಂದ ಕೇಶವ್‌ ಮಹಾರಾಜ್! - Vistara News

ಕ್ರಿಕೆಟ್

Keshav Maharaj:‌ ಪಾಕ್‌ ವಿರುದ್ಧ ಗೆದ್ದು ಜೈ ಶ್ರೀ ಹನುಮಾನ್‌ ಎಂದ ಕೇಶವ್‌ ಮಹಾರಾಜ್!

Keshav Maharaj: ಪಾಕಿಸ್ತಾನ ವಿರುದ್ಧ ಶುಕ್ರವಾರ ನಡೆದ ಪಂದ್ಯದ ಕೊನೆಯಲ್ಲಿ ಸೋಲುವ ಹಂತದಲ್ಲಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಕೇಶವ್‌ ಮಹಾರಾಜ್‌ ಗೆಲ್ಲಿಸಿದರು. ಇದಾದ ಬಳಿಕ ಅವರು ಹಾಕಿರುವ ಪೋಸ್ಟ್‌ ವೈರಲ್‌ ಆಗಿದೆ.

VISTARANEWS.COM


on

Keshav Maharaj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವು ಸೆಮಿಫೈನಲ್‌ ಟಿಕೆಟ್‌ಅನ್ನು ಖಚಿತಪಡಿಸಿಕೊಂಡಿದೆ. ಅಷ್ಟೇ ಅಲ್ಲ, ಪಾಕ್‌ ತಂಡವನ್ನು ವಿಶ್ವಕಪ್‌ ಟೂರ್ನಿಯಿಂದಲೇ (ICC World Cup 2023) ಬಹುತೇಕ ಹೊರಗಟ್ಟಿದೆ. ಅದರಲ್ಲೂ, ಭಾರತ ಮೂಲದ ಕೇಶವ್‌ ಮಹಾರಾಜ್‌ (Keshav Maharaj) ಅವರು ಕೊನೆಯ ಕ್ಷಣದಲ್ಲಿ ಬೌಂಡರಿ ಬಾರಿಸುವ ಮೂಲಕ ದಕ್ಷಿಣ ಆಫ್ರಿಕಾ (South Africa) ತಂಡವನ್ನು ಪಾರು ಮಾಡಿದ್ದು, ಅವರ ಕುರಿತು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ, ಕೇಶವ್‌ ಮಹಾರಾಜ್‌ ಅವರ ಆಟವನ್ನು ಭಾರತೀಯರೇ ಮೆಚ್ಚಿದ್ದಾರೆ. ಇದರ ಬೆನ್ನಲ್ಲೇ, ಕೇಶವ್‌ ಮಹಾರಾಜ್‌ ಅವರು “ಜೈ ಶ್ರೀ ಹನುಮಾನ್‌” (Jai Shree Hanuman) ಎಂದು ಪೋಸ್ಟ್‌ ಹಾಕಿರುವುದು ಭಾರತೀಯರ ಮನಗೆದ್ದಿದೆ.

ಪಂದ್ಯ ಗೆದ್ದ ಬಳಿಕ ಕೇಶವ್‌ ಮಹಾರಾಜ್‌ ಅವರು ಫೋಟೊ ಸಮೇತ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದಾರೆ. “ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ನಮ್ಮೆಲ್ಲ ತಂಡಕ್ಕೂ ಇದು ವಿಶೇಷ ಫಲಿತಾಂಶ. ಅದರಲ್ಲೂ ಟಬ್ರೈಜ್‌ ಶಮ್ಸಿ ಹಾಗೂ ಏಡೆನ್ ಮಾರ್ಕ್ರಮ್​ ಅವರ ಆಟವು ಅದ್ಭುತವಾಗಿತ್ತು. ಜೈ ಶ್ರೀ ಹನುಮಾನ್”‌ ಎಂದು ಕೇಶವ್‌ ಮಹಾರಾಜ್‌ ಪೋಸ್ಟ್‌ ಮಾಡಿದ್ದಾರೆ. ಅವರು ದಕ್ಷಿಣ ಆಫ್ರಿಕಾದಲ್ಲಿ ನೆಲೆಸಿದರೂ ದೇವರ ಮೇಲೆ ನಂಬಿಕೆ ಇಟ್ಟಿರುವುದು ಹಾಗೂ ಜೈ ಶ್ರೀ ಹನುಮಾನ್‌ ಎಂದು ಪೋಸ್ಟ್‌ ಹಾಕಿರುವುದಕ್ಕೆ ಭಾರತೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೇಶವ್‌ ಮಹಾರಾಜ್‌ ಪೋಸ್ಟ್

ಚೆನ್ನೈನ ಎಂ ಎ ಚಿದಂಬರಂ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟ್​ ಮಾಡಿ 46. 4 ಓವರ್​ಗಳಲ್ಲಿ 270 ರನ್​ಗಳಿಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ತಂಡ 47.2 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 271 ರನ್ ಬಾರಿಸಿ ಗೆಲುವು ಸಾಧಿಸಿತು. ಕೊನೆಯಲ್ಲಿ ಕೇಶವ್‌ ಮಹಾರಾಜ್‌ ಅವರು ಬೌಂಡರಿ ಬಾರಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಗೆಲುವು ತಂದಿತ್ತರು.‌

ಕೇಶವ್‌ ಮಹಾರಾಜ್‌ ಗೆಲುವಿನ ‘ಬೌಂಡರಿ’

ಇದನ್ನೂ ಓದಿ: ICC World Cup 2023 : ದ. ಆಫ್ರಿಕಾದ ʼಮಹಾರಾಜʼನಿಗೆ ತಲೆ ಬಾಗಿದ ಪಾಕಿಸ್ತಾನಕ್ಕೆ ಮತ್ತೊಂದು ಸೋಲು

ಒಂದು ಹಂತದಲ್ಲಿ 4 ವಿಕೆಟ್‌ ಕಳೆದುಕೊಂಡು 206 ರನ್‌ ಗಳಿಸಿ ಸುಸ್ಥಿತಿಯಲ್ಲಿದ್ದ ದಕ್ಷಿಣ ಆಫ್ರಿಕಾ ತಂಡವು 260 ರನ್‌ ಗಳಿಸುವಷ್ಟರಲ್ಲಿ 9 ವಿಕೆಟ್‌ ಕಳೆದುಕೊಂಡು ಸೋಲಿನ ದವಡೆಗೆ ಸಿಲುಕಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಕೇಶವ್‌ ಮಹಾರಾಜ್‌ ಅವರು ತಾಳ್ಮೆಯಿಂದ ಆಟವಾಡಿದರು. ಪಾಕಿಸ್ತಾನ ಗೆದ್ದೇ ಬಿಟ್ಟಿತು ಎನ್ನುವ ಸಂದರ್ಭದಲ್ಲಿ ಬೌಂಡರಿ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಇದರಿಂದ ಗೆಲ್ಲಲೇಬೇಕಾದ ಪಂದ್ಯವನ್ನು ಸೋತ ಪಾಕಿಸ್ತಾನವು ಟೂರ್ನಿಯಿಂದ ಒಂದು ಕಾಲು ಹೊರಗಿಟ್ಟಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

SL vs IND 3rd T20I: ಇಂದು ಅಂತಿಮ ಟಿ20; ವೈಟ್‌ವಾಶ್‌ ಭೀತಿಯಿಂದ ಪಾರಾದೀತೇ ಶ್ರೀಲಂಕಾ?

SL vs IND 3rd T20I: ನೂತನ ನಾಯಕ ಸೂರ್ಯಕುಮಾರ್​ ಯಾದವ್​ ತಮ್ಮ ಎಂದಿನ ಹೊಡಿಬಡಿ ಶೈಲಿಯಲ್ಲೇ ಬ್ಯಾಟಿಂಗ್​ ನಡೆಸುತ್ತಾ ತಂಡಕ್ಕೆ ನೆರವಾಗುತ್ತಿದ್ದಾರೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಕೂಡ ಉತ್ತಮ ಬ್ಯಾಟಿಂಗ್​ ಲಯದಲ್ಲಿದ್ದಾರೆ.

VISTARANEWS.COM


on

SL vs IND 3rd T20I
Koo

ಪಲ್ಲೆಕೆಲೆ: ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ, ಅಂತಿಮ ಪಂದ್ಯವನ್ನು(SL vs IND 3rd T20I) ಆಡಲು ಸಜ್ಜಾಗಿದೆ. ಇತ್ತಂಡಗಳ ಈ ಅಂತಿಮ ಮುಖಾಮುಖಿ ಇಂದು(ಮಂಗಳವಾರ) ನಡೆಯಲಿದೆ. ಈ ಪಂದ್ಯವನ್ನು ಗೆದ್ದು ವೈಟ್‌ವಾಶ್‌ ಸಾಧಿಸುವುದು ಭಾರತದ ಗುರಿ.

ಭಾನುವಾರ ನಡೆದಿದ್ದ ದ್ವಿತೀಯ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತ್ತು. ಇದೀಗ ಇಂದು ನಡೆಯುವ ಪಂದ್ಯಕ್ಕೂ ಭಾರೀ ಮಳೆ ಮುನ್ಸೂಚನೆ ಇದೆ. ಕಳೆದ ಮಳೆಪೀಡಿತ ದ್ವಿತೀಯ ಪಂದ್ಯವನ್ನು ಭಾರತ 7 ವಿಕೆಟ್‌ಗಳಿಂದ ಗೆದ್ದು ಸರಣಿ ಗೆಲುವು ಸಾಧಿಸಿತ್ತು. ಯುವ ಭಾರತ ತಂಡ ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿ ಗೋಚರಿಸಿದೆ. ಆದರೆ, ಸಂಜು ಸ್ಯಾಮ್ಸನ್​ ತಮಗೆ ಸಿಕ್ಕ ಅವಕಾಶವನ್ನು ಮತ್ತೆ ಕೈಚೆಲ್ಲಿದ್ದಾರೆ. ಕಳೆದ ಪಂದ್ಯಲ್ಲಿ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದ್ದರು. ಒಂದೊಮ್ಮೆ ಅಂತಿಮ ಪಂದ್ಯದಲ್ಲಿಯೂ ಆಡುವ ಅವಕಾಶ ಸಿಕ್ಕಿ ಇದನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾದರೆ ಮತ್ತೆ ಅವರಿಗೆ ತಂಡದಲ್ಲಿ ಸ್ಥಾನ ಸಿಗುವುದು ಕಷ್ಟಸಾಧ್ಯ.

ಇದನ್ನೂ ಓದಿ Paris Olympics: ಮನು ಭಾಕರ್​-ಸರಬ್ಜೊತ್‌ ಸಿಂಗ್​ ಕಂಚಿನ ನಿರೀಕ್ಷೆ; ಭಾರತದ ಇಂದಿನ ಸ್ಪರ್ಧೆಗಳ ವಿವರ ಹೀಗಿದೆ

ನೂತನ ನಾಯಕ ಸೂರ್ಯಕುಮಾರ್​ ಯಾದವ್​ ತಮ್ಮ ಎಂದಿನ ಹೊಡಿಬಡಿ ಶೈಲಿಯಲ್ಲೇ ಬ್ಯಾಟಿಂಗ್​ ನಡೆಸುತ್ತಾ ತಂಡಕ್ಕೆ ನೆರವಾಗುತ್ತಿದ್ದಾರೆ. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ ಕೂಡ ಉತ್ತಮ ಬ್ಯಾಟಿಂಗ್​ ಲಯದಲ್ಲಿದ್ದಾರೆ. ಬೌಲಿಂಗ್​ನಲ್ಲಿ ಮೊಹಮ್ಮದ್​ ಸಿರಾಜ್​ ಹೊರತುಪಡಿಸಿ ಉಳಿದೆಲ್ಲ ಬೌಲರ್​ಗಳು ಸಂಘಟಿತ ಪ್ರದರ್ಶನ ತೋರುತ್ತಿದ್ದಾರೆ. ಸಿರಾಜ್​ ಆಡಿದ 2 ಪಂದ್ಯಗಳಲ್ಲಿಯೂ ಸರಿಯಾಗಿ ದಂಡಿಸಿಕೊಂಡಿದ್ದರು. ಹೀಗಾಗಿ ಅವರನ್ನು ಈ ಪಂದ್ಯದಿಂದ ಕೈಬಿಟ್ಟು ಖಲೀಲ್ ಅಹ್ಮದ್ ಅವರನ್ನು ಆಡಿಸುವ ಸಾಧ್ಯತೆ ಇದೆ. ಏಕದಿನ ಸರಣಿ ಆಡುವ ನಿಟ್ಟಿನಲ್ಲಿ ಗಿಲ್​ಗೆ ಈ ಪಂದ್ಯಕ್ಕೆ ವಿಶ್ರಾಂತಿ ನೀಡಬಹುದು. ಕುತ್ತಿಗೆ ನೋವಿಗೊಳಗಾಗಿದ್ದ ಕಾರಣ ಗಿಲ್​ ದ್ವಿತೀಯ ಪಂದ್ಯದಿಂದ ಹೊರಗುಳಿದಿದ್ದರು.

ಸಂಭಾವ್ಯ ತಂಡಗಳು


ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೀ), ಕುಸಲ್ ಪೆರೇರಾ, ಕಮಿಂದು ಮೆಂಡಿಸ್, ಚರಿತ್ ಅಸಲಂಕ (ನಾಯಕ), ದಸುನ್ ಶನಕ, ವನಿಂದು ಹಸರಂಗ, ರಮೇಶ್ ಮೆಂಡಿಸ್, ಮಹೀಶ್ ತೀಕ್ಷಣ, ಮತೀಶ ಪತಿರಣ, ಅಸಿತ ಫೆರ್ನಾಂಡೊ.

ಭಾರತ: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ರಿಷಭ್ ಪಂತ್ (ವಿಕೀ), ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ರಿಂಕು ಸಿಂಗ್, ಅಕ್ಷರ್​ ಪಟೇಲ್, ಅರ್ಶದೀಪ್​ ಸಿಂಗ್, ರವಿ ಬಿಷ್ಣೋಯ್, ಖಲೀಲ್​ ಅಹ್ಮದ್​.

ಅಭ್ಯಾಸ ಆರಂಭಿಸಿದ ರೋಹಿತ್‌, ಕೊಹ್ಲಿ


ಟಿ20 ಸರಣಿ ಮುಕ್ತಾಯದ ಬೆನ್ನಲ್ಲೇ ಭಾರತ ತಂಡ ಲಂಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಆಗಸ್ಟ್​ 2ರಂದು ಮೊದಲ ಪಂದ್ಯ ನಡೆಯಲಿದೆ. ಈ ಸರಣಿಯನ್ನಾಡಲು ನಾಯಕ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ, ಕೆ,ಎಲ್​ ರಾಹುಲ್​, ಜಸ್​ಪ್ರೀತ್​ ಬುಮ್ರಾ ಸೇರಿ ಕೆಲ ಆಟಗಾರರು ಈಗಾಗಲೇ ಲಂಕಾ ತಲುಪಿದ್ದು ಅಭ್ಯಾಸ ಕೂಡ ಆರಂಭಿಸಿದ್ದಾರೆ. ಭಾರತದ ಏಕದಿನ ತಂಡದ ಸದಸ್ಯರು ಭಾನುವಾರ ಕೊಲಂಬೊಗೆ ಆಗಮಿಸಿದ್ದರು.

Continue Reading

ಕ್ರೀಡೆ

IPL 2025: ಆರ್​ಸಿಬಿ ಇನ್​ಸ್ಟಾಗ್ರಾಮ್​ ಖಾತೆ ಅನ್​ಫಾಲೋ ಮಾಡಿದ ಮ್ಯಾಕ್ಸ್​ವೆಲ್; ಕಾರಣವೇನು?

IPL 2025: ಈ ಬಾರಿಯ ಆವೃತ್ತಿಯಲ್ಲಿ ಮ್ಯಾಕ್ಸ್​ವೆಲ್​ ಆರ್​ಸಿಬಿ ಪರ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆಡಿದ 10 ಪಂದ್ಯಗಳಲ್ಲಿ ಗಳಿಸಿದ್ದು ಕೇಲವ 52 ರನ್​ ಮಾತ್ರ. ಹೀಗಾಗಿ ಈ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಅಸಾಧ್ಯ.

VISTARANEWS.COM


on

IPL 2025
Koo

ಬೆಂಗಳೂರು: ಮುಂದಿನ ಆವೃತ್ತಿಯ ಐಪಿಎಲ್(IPL 2025)​ ಆರಂಭಕ್ಕೂ ಮುನ್ನ ಆಟಗಾರರ ಮೆಗಾ ಹರಾಜು(IPL Mega Auction 2025) ನಡೆಯಲಿದೆ. ಡಿಸೆಂಬರ್​ನಲ್ಲಿ ಈ ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ಎಲ್ಲ ಫ್ರಾಂಚೈಸಿಗಳು ಬಿಸಿಸಿಐ ಜತೆ ನಾಳೆ(ಬುಧವಾರ) ಸಭೆ ನಡೆಸಲಿದ್ದು ಎಷ್ಟು ಆಟಗಾರರನ್ನು ರೀಟೈನ್​ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದೆ ಎನ್ನಲಾಗಿದೆ. ಈಗಾಗಲೇ ಆರ್​ಸಿಬಿ ಮೂವರು ಆಟಗಾರರನ್ನು ಮಾತ್ರ ಉಳಿಸಿಕೊಂಡು ಉಳಿದೆಲ್ಲ ಆಟಗಾರರನ್ನು ತಂಡದಿಂದ ಕೈ ಬಿಡಲಿದೆ ಎಂದು ವರದಿಯಾದೆ. ಇದರ ಬೆನ್ನಲ್ಲೇ ಆರ್​ಸಿಬಿ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್(Glenn Maxwell)​ ಅವರು ಆರ್​ಸಿಬಿ(RCB) ಇನ್​ಸ್ಟಾಗ್ರಾಮ್​(RCB On Instagram) ಖಾತೆಯನ್ನು ಅನ್​ಫಾಲೋ ಮಾಡಿದ್ದಾರೆ.

ಮೂಲಗಳ ಪ್ರಕಾರ ಆರ್​ಸಿಬಿ ವಿರಾಟ್​ ಕೊಹ್ಲಿ, ಇಂಗ್ಲೆಂಡ್​ನ ವಿಲ್ ಜಾಕ್ಸ್​ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ತಂಡದಲ್ಲಿ ಉಳಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ. ನಾಯಕ ಫಾಫ್​ ಡು ಪ್ಲೆಸಿಸ್, ಕ್ಯಾಮರೂನ್​ ಗ್ರೀನ್​ ಸೇರಿ ಉಳಿದೆಲ್ಲ ಆಟಗಾರರನ್ನು​ ಕೂಡ ಕೈಬಿಡಲಿದೆ ಎಂದು ಮೂಲಗಳು 2 ದಿನಗಳ ಹಿಂದೆ ಮಾಹಿತಿ ನೀಡಿತ್ತು. ಈ ಬೆಳವಣಿಗೆ ಕಂಡು ಬಂದ ಬೆನ್ನಲ್ಲೇ ಗ್ಲೆನ್​ ಮ್ಯಾಕ್ಸ್​ವೆಲ್​ ಆರ್​ಸಿಬಿಯ ಅಧಿಕೃತ ​ಸ್ಟಾಗ್ರಾಮ್​ ಖಾತೆಯನ್ನು ಅನ್​ಫಾಲೋ ಮಾಡಿದ್ದಾರೆ. ಇದನ್ನು ನೋಡುವಾಗ ಮ್ಯಾಕ್ಸ್​ವೆಲ್​ಗೆ ಆರ್​ಸಿಬಿಯಿಂದ ಗೇಟ್​ ಪಾಸ್​ ಸಿಕ್ಕಿರುವುದು ಬಹುತೇಕ ಖಚಿತ ಎನ್ನುವಂತಿದೆ.

ಈ ಬಾರಿಯ ಆವೃತ್ತಿಯಲ್ಲಿ ಮ್ಯಾಕ್ಸ್​ವೆಲ್​ ಆರ್​ಸಿಬಿ ಪರ ಅತ್ಯಂತ ಕಳಪೆ ಮಟ್ಟದ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆಡಿದ 10 ಪಂದ್ಯಗಳಲ್ಲಿ ಗಳಿಸಿದ್ದು ಕೇಲವ 52 ರನ್​ ಮಾತ್ರ. ಹೀಗಾಗಿ ಈ ಬಾರಿ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಅಸಾಧ್ಯ.

ಆರ್​ಸಿಬಿ ಸೇರಲಿದ್ದಾರಾ ರಾಹುಲ್​?


ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರುವ ಕೆ.ಎಲ್​ ರಾಹುಲ್ ಈ ಬಾರಿ ಲಕ್ನೋ ತಂನಡ ತೊರೆಯುವುದು ಖಚಿತವಾಗಿದೆ. ಮೂಲಗಳ ಪ್ರಕಾರ ಅವರು ಆರ್​ಸಿಬಿ ತಂಡ ಸೇರಲಿದ್ದಾರೆ ಎನ್ನಲಾಗಿದೆ. ಆರ್​ಸಿಬಿ ಪರ ಆಡುವುದು ಕೂಡ ಅವರ ಬಯಕೆಯಾಗಿದೆ. ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆ.ಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. 

ಇದನ್ನೂ ಓದಿ IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರಮುಖ ಬೇಡಿಕೆ ಮುಂದಿಟ್ಟ ಫ್ರಾಂಚೈಸಿಗಳು

ಕಳೆದ ಮೂರು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿ ಮತ್ತೆ ನಾಯಕನಾದರೂ ಅಚ್ಚರಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬಂದರೂ ಕೂಡ ಕೊಹ್ಲಿ ಇದಕ್ಕೆ ಒಪ್ಪಲಿದ್ದಾರಾ ಎನ್ನುವುದು ಕುತೂಹಲ. ಈ ಐಪಿಎಲ್​ನಲ್ಲಿ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ 700ಕ್ಕೂ ಅಧಿಕ ರನ್​ ಕಲೆ ಹಾಕಿ ಟೂರ್ನಿಯ ಅತ್ಯಧಿಕ ಸ್ಕೋರ್​ ಎನಿಸಿಕೊಂಡಿದ್ದರು.

Continue Reading

ಕ್ರೀಡೆ

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Paris Olympics 2024 : 1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್​ನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ (Paris Olympics 2024) ನಾಲ್ಕನೇ ದಿನದಲ್ಲಿ ಭಾರತ ಅಥ್ಲೀಟ್​ಗಳು ಕೆಲವು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತ ಇದುವರೆಗೆ ಕೇವಲ 1 ಕಂಚಿನ ಪದಕವನ್ನು ಮಾತ್ರ ಪಡೆದಿದೆ. ಆದಾಗ್ಯೂ ಇನ್ನೂ ಪದಕಗಳನ್ನು ಗೆಲ್ಲುವ ಭರವಸೆಯಿದೆ. ಹೀಗಾಗಿ ಕ್ರೀಡಾಭಿಮಾನಿಗಳಲ್ಲಿ ಹೆಚ್ಚು ಕುತೂಹಲ ಸೃಷ್ಟಿಯಾಗಿದೆ. ಪ್ರಮುಖವಾಗಿ ಒಂದು ಪದಕದ ಸ್ಪರ್ಧೆಯೂ ಮಂಗಳವಾರ ನಡೆಯಲಿದೆ.

ಒಲಿಂಪಿಕ್ಸ್​​ನ 4ನೇ ದಿನವಾದ ಜುಲೈ 30ರಂದು (Paris Olympics 2024) ಭಾರತದ ಶೂಟರ್ ಮನು ಭಾಕರ್ ಇತಿಹಾಸ ನಿರ್ಮಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಕ್ರೀಡಾಕೂಟದಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಪದಕ (ಕಂಚು) ಗೆದ್ದ ಭಾಕರ್, 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಮತ್ತೊಂದು ಕಂಚಿನ ಪದಕಕ್ಕಾಗಿ ಸ್ಪರ್ಧಿಸಲಿದ್ದಾರೆ. ಸ್ವಾತಂತ್ರ್ಯದ ನಂತರ ಒಲಿಂಪಿಕ್ ಕ್ರೀಡಾಕೂಟದ ಒಂದೇ ಆವೃತ್ತಿಯಲ್ಲಿ ಯಾವುದೇ ಭಾರತೀಯ ಕ್ರೀಡಾಪಟು ಎರಡು ಪದಕಗಳನ್ನು ಗೆದ್ದಿಲ್ಲ. ಹೀಗಾಗಿ ಮನು ಗೆದ್ದರೆ ದೊಡ್ಡ ಸಾಧನೆಯಾಗಲಿದೆ.

1900ರಲ್ಲಿ ಪ್ಯಾರಿಸ್​ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಾರ್ಮನ್ ಪ್ರಿಚರ್ಡ್ ಎರಡು ಬೆಳ್ಳಿ ಪದಕಗಳನ್ನು ಗೆದ್ದಿದ್ದರು. ಅಲ್ಲಿಂದ ಭಾರತ ಸಾಧನೆ ಮಾಡಿಲ್ಲ. ಮಂಗಳವಾರ ಅರ್ಜೆಂಟೀನಾ ವಿರುದ್ಧದ ಕಠಿಣ ಹೋರಾಟದ ಪಂದ್ಯವನ್ನು ಡ್ರಾದ ನಂತರ ಪುರುಷರ ಹಾಕಿ ತಂಡವು ಐರ್ಲೆಂಡ್ ವಿರುದ್ಧ ಆಡಲಿದೆ.

ಭಾಕರ್ ಮತ್ತು ಸರಬ್ಜೋತ್ ಭಾರತದ ಪದಕಗಳ ಸಂಖ್ಯೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದ್ದರೆ, ಬಿಲ್ಲುಗಾರ ಧೀರಜ್ ಬೊಮ್ಮದೇವರ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಭಜನ್ ಕೌರ್ ಮತ್ತು ಅಂಕಿತಾ ಭಕತ್ ಮಹಿಳೆಯರ ವೈಯಕ್ತಿಕ ಎಲಿಮಿನೇಷನ್ ಸುತ್ತುಗಳಲ್ಲಿ ಸ್ಪರ್ಧಿಸಲಿದ್ದಾರೆ.

ಪುರುಷರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ 2 ನೇ ದಿನದಂದು ಟ್ರ್ಯಾಪ್ ಶೂಟರ್ ಪೃಥ್ವಿರಾಜ್ ತೊಂಡೈಮನ್ ಪುಟಿದೇಳಲು ಪ್ರಯತ್ನಿಸಿದರೆ, ರಾಜೇಶ್ವರಿ ಕುಮಾರಿ ಮತ್ತು ಶ್ರೇಯಸಿ ಸಿಂಗ್ ಮಹಿಳೆಯರ ಟ್ರ್ಯಾಪ್ ಶೂಟಿಂಗ್ ಅರ್ಹತೆಯ ಮೊದಲ ದಿನದಂದು ಅಭಿಯಾನಪ್ರಾರಂಭಿಸಲಿದ್ದಾರೆ.

ಬಾಕ್ಸರ್​ಗಳು ಕಣಕ್ಕೆ

ಭಾರತದ ಆರು ಭಾರತೀಯ ಬಾಕ್ಸರ್ ಗಳಲ್ಲಿ ಮೂವರು ನಾಳೆ ಕಣಕ್ಕಿಳಿಯಲಿದ್ದಾರೆ. ಪುರುಷರ 51 ಕೆಜಿ ವಿಭಾಗದಲ್ಲಿ ಅಮಿತ್ ಪಂಗಲ್, ಮಹಿಳೆಯರ 57 ಕೆಜಿ ವಿಭಾಗದಲ್ಲಿ ಜಾಸ್ಮಿನ್ ಲಂಬೋರಿಯಾ ಮತ್ತು ಮಹಿಳೆಯರ 54 ಕೆಜಿ ವಿಭಾಗದಲ್ಲಿ ಪ್ರೀತಿ ಪವಾರ್ ಸ್ಪರ್ಧಿಸಲಿದ್ದಾರೆ.

ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡೋನೇಷ್ಯಾ ವಿರುದ್ಧದ ಅಂತಿಮ ಗ್ರೂಪ್ ಪಂದ್ಯದಲ್ಲಿ ತಮ್ಮ ಗುಂಪಿನಲ್ಲಿ ಅಗ್ರ ಸ್ಥಾನ ಪಡೆಯುವ ಗುರಿ ಹೊಂದಿದ್ದಾರೆ. ಮಹಿಳಾ ಡಬಲ್ಸ್ ಜೋಡಿ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ ಆಸ್ಟ್ರೇಲಿಯಾ ವಿರುದ್ಧ ಸತತ ಎರಡು ಸೋಲುಗಳ ಬಳಿಕ ಮತ್ತೊಂದ ಪಂದ್ಯ ಆಡಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪುರುಷರ ಆರ್ಚರಿ ತಂಡಕ್ಕೆ ಆಘಾತ, ಕ್ವಾರ್ಟರ್​ಫೈನಲ್​ನಲ್ಲಿ ಸೋಲು

ಶೂಟಿಂಗ್, ಬಾಕ್ಸಿಂಗ್ ಮತ್ತು ಬ್ಯಾಡ್ಮಿಂಟನ್ ಜೊತೆಗೆ, ಪುರುಷರ ಸಿಂಗಲ್ಸ್ ಸ್ಕಲ್ಸ್​ನಲ್ಲಿ ಬಲರಾಜ್ ಪನ್ವಾರ್ ಮತ್ತು ಈಕ್ವೆಸ್ಟ್ರಿಯನ್​ ವೈಯಕ್ತಿಕ ಡ್ರೆಸ್ಸಿಂಗ್ ಅರ್ಹತಾ ಸ್ಪರ್ಧೆಯಲ್ಲಿ ಅನುಷ್ ಅಗರ್ವಾಲ್ಲಾ ಸ್ಪರ್ಧಿಸಲಿದ್ದಾರೆ.

ಭಾರತದ ಪಂದ್ಯಗಳ ವಿವರ ಇಲ್ಲಿದೆ

  • ಶೂಟಿಂಗ್​​: ಪುರುಷರ​​ ಟ್ರ್ಯಾಪ್ ಅರ್ಹತಾ ಸುತ್ತಿನ 2ನೇ ದಿನ; ಪೃಥ್ವಿರಾಜ್ ತೊಡೈಮನ್, ಮಧ್ಯಾಹ್ನ 12.30ಕ್ಕೆ
  • ಶೂಟಿಂಗ್​: ಟ್ರ್ಯಾಪ್ ಮಹಿಳಾ ಅರ್ಹತಾ ಸುತ್ತಿನ ಮೊದಲ ದಿನ, ಶ್ರೇಯಸಿ ಸಿಂಗ್/ ರಾಜೇಶ್ವರಿ ಕುಮಾರಿ, ಮಧ್ಯಾಹ್ನ 12.30ಕ್ಕೆ
  • ಶೂಟಿಂಗ್: 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ, ಕಂಚಿನ ಪದಕ ಪಂದ್ಯ, ಮನು ಭಾಕರ್-ಸರಬ್ಜೋತ್ ಸಿಂಗ್, ಮಧ್ಯಾಹ್ನ 1 ಗಂಟೆಗೆ
  • ಟೇಬಲ್ ಟೆನಿಸ್- ಮಹಿಳೆಯರ ಸಿಂಗಲ್ಸ್, ಶ್ರೀಜಾ ಅಕುಲಾ
  • ರೋಯಿಂಗ್- ಪುರುಷರ ಸಿಂಗಲ್ಸ್ ಸ್ಕಲ್ ಕ್ವಾರ್ಟರ್ ಫೈನಲ್ 4, ಬಲರಾಜ್ ಪನ್ವಾರ್ , ಮಧ್ಯಾಹ್ನ 1.40ರಿಂದ
  • ಈಕ್ವೆಸ್ಟ್ರಿಯನ್ ವೈಯಕ್ತಿಕ ಡ್ರೆಸೇಜ್​- ಅನುಷ್ ಅಗರ್ವಾಲಾ, ಮಧ್ಯಾಹ್ನ 2.30 ರಿಂದ
  • ಹಾಕಿ: ಪುರುಷರ ಪೂಲ್ ಬಿ ಪಂದ್ಯ: ಐರ್ಲೆಂಡ್ ವಿರುದ್ಧ , ಸಂಜೆ 4.45ಕ್ಕೆ
  • ಆರ್ಚರಿ: ಮಹಿಳೆಯರ ವೈಯಕ್ತಿಕ 32ನೇ ಸುತ್ತು, ಅಂಕಿತಾ ಭಕತ್, ಸಂಜೆ 5.14ಕ್ಕೆ
  • ಆರ್ಚರಿ: ಮಹಿಳಾ ವೈಯಕ್ತಿಕ 32ನೇ ಸುತ್ತು, ಭಜನ್ ಕೌರ್, ಸಂಜೆ 5.27ಕ್ಕೆ
  • ಬ್ಯಾಡ್ಮಿಂಟನ್: ಪುರುಷರ ಡಬಲ್ಸ್ ಗ್ರೂಪ್ ಸಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ, ಸಂಜೆ 5.30
  • ಬ್ಯಾಡ್ಮಿಂಟನ್: ಮಹಿಳಾ ಡಬಲ್ಸ್ ಗ್ರೂಪ್ ಸಿ: ತನಿಶಾ ಕ್ರಾಸ್ಟೊ/ಅಶ್ವಿನಿ ಪೊನ್ನಪ್ಪ, ಸಂಜೆ 6.20ಕ್ಕೆ
  • ಬಾಕ್ಸಿಂಗ್: ಪುರುಷರ 51 ಕೆ.ಜಿ ವಿಭಾಗ : ಅಮಿತ್ ಪಂಗಲ್, ಸಂಜೆ 7.16ಕ್ಕೆ
  • ಬಾಕ್ಸಿಂಗ್: ಪುರುಷರ 57 ಕೆ.ಜಿ ವಿಭಾಗ ಜೈಸ್ಮಿನ್ ಲಂಬೋರಿಯಾ, ರಾತ್ರಿ 9.08ರಿಂದ
  • ಆರ್ಚರಿ: ಪುರುಷರ ವೈಯಕ್ತಿಕ ಸುತ್ತಿನಲ್ಲಿ 32 ಧೀರಜ್ ಬೊಮ್ಮದೇವರ, 10.46ರಿಂದ
  • ಬಾಕ್ಸಿಂಗ್: ಮಹಿಳೆಯರ 54 ಕೆ.ಜಿ ವಿಭಾಗ, ಪ್ರೀತಿ, 01.06 ಗಂಟೆಗೆ
Continue Reading

ಪ್ರಮುಖ ಸುದ್ದಿ

Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

Asia Cup cricket : ಈ ಟೂರ್ನಿಯ 2026 ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​ಗೆ ಪೂರ್ವಭಾವಿಯಾಗಿ ನಡೆಯಲಿದೆ. ಸಾಂಪ್ರದಾಯಿಕವಾಗಿ ಏಷ್ಯಾ ಕಪ್ ಐಸಿಸಿ ಪಂದ್ಯಾವಳಿಯ ಪೂರ್ವಸಿದ್ಧತಾ ಟೂರ್ನಿಯಾಗಿ ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮುಂಬರುವ ವಿಶ್ವಕಪ್​ಗೆ ಮೊದಲು ಆಡಲಾಗುತ್ತದೆ. 2023 ರಲ್ಲಿ, ಏಷ್ಯಾ ಕಪ್ ಅನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯೋಜಿಸಿತು.

VISTARANEWS.COM


on

Asia Cup cricket
Koo

ನವದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತನ್ನ ಆಹ್ವಾನದಲ್ಲಿ ಘೋಷಿಸಿದಂತೆ 2025ರ ಆವೃತ್ತಿಯ ಏಷ್ಯಾ ಕಪ್ ಭಾರತದಲ್ಲಿ (Asia Cup Cricket) ನಡೆಯಲಿದೆ. ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಮುಂಬರುವ ಆವೃತ್ತಿಯಲ್ಲಿ ಟಿ 20 ಸ್ವರೂಪದಲ್ಲಿ ನಡೆಯಲಿದ್ದು ಭಾರತದ ಅಭಿಮಾನಿಗಳಿಗೆ ಖುಷಿಯ ವಿಚಾರವಾಗಿದೆ.

ಈ ಟೂರ್ನಿಯ 2026 ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​ಗೆ ಪೂರ್ವಭಾವಿಯಾಗಿ ನಡೆಯಲಿದೆ. ಸಾಂಪ್ರದಾಯಿಕವಾಗಿ ಏಷ್ಯಾ ಕಪ್ ಐಸಿಸಿ ಪಂದ್ಯಾವಳಿಯ ಪೂರ್ವಸಿದ್ಧತಾ ಟೂರ್ನಿಯಾಗಿ ಕಾರ್ಯನಿರ್ವಹಿಸುತ್ತದೆ. ಅಂತೆಯೇ ಮುಂಬರುವ ವಿಶ್ವಕಪ್​ಗೆ ಮೊದಲು ಆಡಲಾಗುತ್ತದೆ. 2023 ರಲ್ಲಿ, ಏಷ್ಯಾ ಕಪ್ ಅನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಆಯೋಜಿಸಿತು. ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ನಿರಾಕರಿಸಿದ ಕಾರಣ ‘ಹೈಬ್ರಿಡ್ ಮಾದರಿಯಲ್ಲಿ’ ನಡೆಸಲಾಯಿತು. ಇದರ ಪರಿಣಾಮವಾಗಿ, ಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದವು.

2027ರ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದ್ದು, ಬಾಂಗ್ಲಾದೇಶದಲ್ಲಿ ಆತಿಥ್ಯ ವಹಿಸಲಿದೆ. ಅದೇ ವರ್ಷ ದಕ್ಷಿಣ ಆಫ್ರಿಕಾದಲ್ಲಿ ಯೋಜಿಸಲಾದ 50 ಓವರ್ ಗಳ ವಿಶ್ವಕಪ್ ಗೆ ಪೂರ್ವಭಾವಿಯಾಗಿ ನಡೆಯಲಿದೆ.

2025ರಲ್ಲಿ ಭಾರತದಲ್ಲಿ ನಡೆಯಲಿರುವ ಟಿ20 ಏಷ್ಯಾಕಪ್ ಹಾಗೂ 2027ರಲ್ಲಿ ಬಾಂಗ್ಲಾದೇಶದಲ್ಲಿ ನಡೆಯಲಿರುವ 50 ಓವರ್ಗಳ ಏಷ್ಯಾಕಪ್​ನಲ್ಲಿ ತಲಾ 13 ಪಂದ್ಯಗಳು ನಡೆಯಲಿವೆ.

‘ಪುರುಷರ ಏಷ್ಯಾ ಕಪ್ ಪಂದ್ಯಾವಳಿ’ ಎಂದರೆ ನಿಯೋಜಿತ ಸದಸ್ಯರನ್ನು ಒಳಗೊಂಡ ಎಸಿಸಿ ಆಯೋಜಿಸುವ ಮತ್ತು ನಿರ್ವಹಿಸುವ ದ್ವೈವಾರ್ಷಿಕ ಹಿರಿಯ ಪುರುಷರ ಕ್ರಿಕೆಟ್ ಪಂದ್ಯಾವಳಿಯಾಗಿದೆ. ಅಫ್ಘಾನಿಸ್ತಾನ, ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶದ ತಂಡಗಳು ಮತ್ತು ಅರ್ಹತಾ ಸ್ಪರ್ಧೆಗಳ ಮೂಲಕ ಆಯ್ಕೆಯಾದ ಎಸಿಸಿಯ ಟೆಸ್ಟ್ ಅಲ್ಲದ ಸದಸ್ಯ ತಂಡವೊಂದು ಭಾಗವಹಿಸುತ್ತದೆ ಎಂದು ಎಸಿಸಿ ತನ್ನ ಐಇಒಐ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವರ್ಷ ಏಷ್ಯಾಕಪ್ ಟಿ20 ಟ್ರೋಫಿ ಗೆದ್ದ ಬಳಿಕ ಭಾರತ ಹಾಲಿ ಚಾಂಪಿಯನ್ ಎನಿಸಿಕೊಂಡಿದೆ. ಕೊಲಂಬೊದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವನ್ನು ವಿರುದ್ಧ 10 ವಿಕೆಟ್​ಗಳ ಗೆಲವು ದಾಖಲಿಸಲಾಗಿತ್ತು. 7-1-21-6 ಅಂಕಗಳ ನಂತರ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಷ್ಯಾಕಪ್ ಇತಿಹಾಸದಲ್ಲಿ ಭಾರತ ಅತ್ಯಂತ ಯಶಸ್ವಿ ತಂಡವಾಗಿದ್ದು, ಎಂಟು ಬಾರಿ ಪ್ರಶಸ್ತಿ ಗೆದ್ದಿದೆ.

Continue Reading
Advertisement
SL vs IND 3rd T20I
ಕ್ರೀಡೆ45 seconds ago

SL vs IND 3rd T20I: ಇಂದು ಅಂತಿಮ ಟಿ20; ವೈಟ್‌ವಾಶ್‌ ಭೀತಿಯಿಂದ ಪಾರಾದೀತೇ ಶ್ರೀಲಂಕಾ?

Liquor Price Karnataka
ಪ್ರಮುಖ ಸುದ್ದಿ12 mins ago

Liquor Price Karnataka: ನೊರೆ ನೊರೆ ಬಿಯರ್‌ ಮದ್ಯಪ್ರಿಯರ ಜೇಬಿಗೆ ಇನ್ನಷ್ಟು ಹೊರೆ

Parliament Session
ರಾಜಕೀಯ15 mins ago

Parliament Session: ಸಂಸತ್‌ನ ಬಜೆಟ್‌ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜು; Live ಇಲ್ಲಿ ವೀಕ್ಷಿಸಿ

Kerala Landslide
ದೇಶ22 mins ago

Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ದೇಶ26 mins ago

Jio Games: ಜಿಯೋಗೇಮ್ಸ್‌ನಲ್ಲಿ ಗೂಗಲ್‌ನ ಗೇಮ್‌ಸ್ನ್ಯಾಕ್ಸ್‌ ಗೇಮ್ಸ್‌ ಲಭ್ಯ

Rebel star Prabhas starrer The Rajasaab short glimpse released
ದೇಶ39 mins ago

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

IPL 2025
ಕ್ರೀಡೆ50 mins ago

IPL 2025: ಆರ್​ಸಿಬಿ ಇನ್​ಸ್ಟಾಗ್ರಾಮ್​ ಖಾತೆ ಅನ್​ಫಾಲೋ ಮಾಡಿದ ಮ್ಯಾಕ್ಸ್​ವೆಲ್; ಕಾರಣವೇನು?

ಪ್ರಮುಖ ಸುದ್ದಿ52 mins ago

Uttara Kannada Landslide: ನೀರಿನಡಿ ಇನ್ನೂ 9 ದೇಹಗಳಿವೆ ಎಂದ ಸ್ವಾಮೀಜಿ! ಬರಲಿದೆ ಕೇರಳದಿಂದ ಬಾರ್ಜ್‌ ಮೌಂಟೆಡ್‌ ಹಿಟಾಚಿ

Mahila Samman Savings Certificate
ಮನಿ-ಗೈಡ್55 mins ago

Mahila Samman Savings Certificate: ಮಹಿಳಾ ಸಮ್ಮಾನ್‌‌ನಲ್ಲಿ ಹೂಡಿಕೆಯಿಂದ ಏನು ಲಾಭ?

Kerala Landslide
ದೇಶ1 hour ago

Kerala Landslide: ಕೇರಳದಲ್ಲಿ ವರುಣನ ರೌದ್ರ ನರ್ತನ ಶುರು; ಭಾರೀ ಭೂಕುಸಿತಕ್ಕೆ ಐವರು ಬಲಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ16 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ17 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ20 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌