AFG vs SL: ಸಮರ್ಥ ತಂಡಗಳ ನಡುವೆ ಹೋರಾಟ; ಗೆದ್ದರೆ ಸೆಮಿ ಆಸೆ ಜೀವಂತ - Vistara News

ಕ್ರಿಕೆಟ್

AFG vs SL: ಸಮರ್ಥ ತಂಡಗಳ ನಡುವೆ ಹೋರಾಟ; ಗೆದ್ದರೆ ಸೆಮಿ ಆಸೆ ಜೀವಂತ

ಉಭಯ ತಂಡಗಳು ಕೂಡ ಸ್ಪಿನ್​ ಪಿಚ್​ನಲ್ಲಿ ಉತ್ತಮ ಪ್ರದರ್ಶನ ತೋರುವ ಕಾರಣ ಈ ಪಂದ್ಯ ದೊಡ್ಡ ಮೊತ್ತಕ್ಕೆ ಸಾಕ್ಷಿಯಾಗಬಹುದೆಂದು ನಿರೀಕ್ಷೆ ಮಾಡಬಹುದಾಗಿದೆ. ಅಲ್ಲದೆ ಅಫಘಾನಿಸ್ತಾನ ಮತ್ತು ಶ್ರೀಲಂಕಾ ಈಗಾಗಲೇ ಬಲಿಷ್ಠ ತಂಡಕ್ಕೆ ಸೋಲುಣಿಸಿದ ಜೋಶ್​ನಲ್ಲಿದೆ

VISTARANEWS.COM


on

Afghanistan vs Sri Lanka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪುಣೆ: ಬಲಿಷ್ಠ ತಂಡಗಳಿಗೆ ಸೋಲುಣಿಸಿದ ಜೋಶ್​ನಲ್ಲಿರುವ ಶ್ರೀಲಂಕಾ ಮತ್ತು ಅಫಘಾನಿಸ್ತಾನ(AFG vs SL) ತಂಡಗಳು ಸೋಮವಾರದ ವಿಶ್ವಕಪ್​ನ(ODI World Cup 2023) 30ನೇ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಸೆಮಿಫೈನಲ್ ಪ್ರವೇಶಕ್ಕೆ ಉಭಯ ತಂಡಗಳಿಗೆ ಇನ್ನೂ ಅವಕಾಶ ಇರುವ ಕಾರಣ ಈ ಪಂದ್ಯವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಬಹುದು. ಇಲ್ಲಿ ಗೆದ್ದ ತಂಡದ ಸೆಮಿ ಆಸೆ ಜೀವಂತವಿರಲಿದೆ. ಈ ತಂಡ ಯಾವುದುದು ಎಂಬುದು ಪಂದ್ಯದ ಕುತೂಹಲ.

ಉಭಯ ತಂಡಗಳು ಬಲಿಷ್ಠ

ಉಭಯ ತಂಡಗಳು ಸಮರ್ಥ ಮತ್ತು ಒಂದೇ ರೀತಿಯ ಪ್ರದರ್ಶನವನ್ನು ತೋರುತ್ತಿದೆ. ಆರಂಭಿಕ ಹಂತದಲ್ಲಿ ಸೋಲಿಗೆ ತುತ್ತಾಗಿದ್ದ ಈ ತಂಡಗಳು ಆ ಬಳಿಕ ವಿಶ್ವದ ಬಲಿಷ್ಠ ತಂಡಕ್ಕೆ ಸೋಲಿನ ರುಚಿ ತೋರಿಸಿ ಮೆರೆದಾಡಿತ್ತು. ಹೀಗಾಗಿ ಯಾರನ್ನು ದೂರುವ ಹಾಗಿಲ್ಲ. ಸೆಮಿ ಮಹತ್ವದ ಪಂದ್ಯವಾದ ಕಾರಣ ಹಲವು ನಿರೀಕ್ಷೆಗಳು ಇಡಲಾಗಿದೆ.

ಹವಾಮಾನ ವರದಿ

ಪುಣೆಯಲ್ಲಿ ಯಾವುದೇ ಮಳೇಯ ಭೀತಿ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಬಿಸಿಲಿನ ಧಗೆ ಹೆಚ್ಚಿರಲಿದೆ ಎಂದು ತಿಳಿಸಿದೆ. ಪಂದ್ಯ ನಡೆಯುವ ಮಧ್ಯಾಹ್ನ ಇಲ್ಲಿನ ತಾಪಮಾನವು 32 ಡಿಗ್ರಿ ಸೆಲ್ಸಿಯಸ್​ ಇದರಲಿದೆ ಎಂದು ವರದಿಯಲ್ಲಿ ತಿಳಿಸಿದೆ. ಸಂಜೆಯ ವೇಳೆ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೀಗಾಗಿ ಪಂದ್ಯವನ್ನು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು.

ಇದನ್ನೂ ಓದಿ Rohit Sharma: ಅರ್ಧಶತಕ ಬಾರಿಸಿ 2 ದಾಖಲೆ ಬರೆದ ರೋಹಿತ್​ ಶರ್ಮ

ಪಿಚ್​ ರಿಪೋರ್ಟ್

ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ಪಿಚ್​ ಸಂಪೂರ್ಣ ಬ್ಯಾಟಿಂಗ್​ ಸ್ನೇಹಿಯಾಗಿದೆ. ಇಲ್ಲಿ ನಡೆದ ಹಿಂದಿನ ಏಳು ಏಕದಿನ ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ 300 ಪ್ಲಸ್ ರನ್​ ಆಗಿದೆ. ಆದರೆ ಇಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚು. ಏಕೆಂದರೆ 5 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದರೆ, ಮೂರು ಬಾರಿ ಮಾತ್ರ ಚೇಸಿಂಗ್​ ನಡೆಸಿದ ತಂಡ ಗೆದ್ದಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಬ್ಯಾಟಿಂಗ್​ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು. ವೇಗಿಗಳಿಗೆ ಇಲ್ಲಿ ಹೆಚ್ಚು ಮೇಲುಗೈ ಸಾಧಿಸಬಹುದು. ಹೀಗಾಗಿ ಉಭಯ ತಂಡಗಳು ಸ್ಪಿನ್​ಗಿಂತ ವೇಗದ ಬೌಲಿಂಗ್​ಗೆ ಹೆಚ್ಚಿನ ಒತ್ತು ನೀಡಬಹುದು.

ಜಿದ್ದಾ ಜಿದ್ದು ನಿರೀಕ್ಷೆ

ಉಭಯ ತಂಡಗಳು ಕೂಡ ಸ್ಪಿನ್​ ಪಿಚ್​ನಲ್ಲಿ ಉತ್ತಮ ಪ್ರದರ್ಶನ ತೋರುವ ಕಾರಣ ಈ ಪಂದ್ಯ ದೊಡ್ಡ ಮೊತ್ತಕ್ಕೆ ಸಾಕ್ಷಿಯಾಗಬಹುದೆಂದು ನಿರೀಕ್ಷೆ ಮಾಡಬಹುದಾಗಿದೆ. ಅಲ್ಲದೆ ಅಫಘಾನಿಸ್ತಾನ ಮತ್ತು ಶ್ರೀಲಂಕಾ ಈಗಾಗಲೇ ಬಲಿಷ್ಠ ತಂಡಕ್ಕೆ ಸೋಲುಣಿಸಿದ ಜೋಶ್​ನಲ್ಲಿದೆ. ಗೆಲುವು ಸಾಧಿಸಿದರೆ ಇತ್ತಂಡಗಳಿಗೂ ಸೆಮಿಫೈನಲ್​ ಪ್ರವೇಶ ಪಡೆಯುವ ಅವಕಾಶವಿದೆ. ಹೀಗಾಗಿ ಈ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರುವ ಸಾಧ್ಯತೆ ಇದೆ.

ಇದನ್ನೂ ಓದಿ IND vs ENG: ಆಂಗ್ಲರ ಬೌಲಿಂಗ್​ ದಾಳಿಗೆ ಕುಸಿದ ಭಾರತ; ಇಂಗ್ಲೆಂಡ್​ ಗೆಲುವಿಗೆ 230 ರನ್​ ಗುರಿ

ಮುಖಾಮುಖಿ

ಅಫಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 11 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಶ್ರೀಲಂಕಾ 07 ಪಂದ್ಯಗಳನ್ನು ಗೆದ್ದಿದೆ. ಅಫಘಾನಿಸ್ತಾನ 03 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಬಲಾಬಲದ ಲೆಕ್ಕಾಚಾರದಲ್ಲಿ ಲಂಕಾ ಮುಂದಿದ್ದರೂ ಆಫ್ಘನ್​ ಸವಾಲನ್ನು ಹಗುರವಾಗಿ ಪರಿಗಣಿಸುವಂತಿಲ್ಲ ಏಕೆಂದರೆ ಆಫ್ಘನ್ ಸೋಲಿಸಿದ್ದು ಹಾಲಿ ಚಾಂಪಿಯನ್​ ಇಂಗ್ಲೆಂಡ್​ ಮತ್ತು ಮಾಜಿ ಚಾಂಪಿಯನ್ ಪಾಕಿಸ್ತಾನ ತಂಡವನ್ನು. ಹೀಗಾಗಿ ಲಂಕಾ ಪ್ರತಿ ಹೆಜ್ಜೆಯೂ ಎಚ್ಚರಿಕೆಯಿಂದ ಇಡಬೇಕಿದೆ.

ಸಂಭಾವ್ಯ ತಂಡ

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತೀಕ್ಷಣ, ಕಸುನ್ ರಜಿತ, ಲಹಿರು ಕುಮಾರ, ದಿಲ್ಶನ್ ಮಧುಶಂಕ.

ಅಫಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ಸಿ), ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರನ್, ಅಜ್ಮತುಲ್ಲಾ ಒಮರ್ಜೈ/ ನೂರ್ ಅಹ್ಮದ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಾಕ್ ಫಾರೂಕಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

Rohit Sharma: ವಿಶ್ವಕಪ್​ ಆಡಿದ ಟೀಮ್​ ಇಂಡಿಯಾದ ಹಲವು ಆಟಗಾರರು ಮುಂದಿನ ಸರಣಿಗೂ ಮುನ್ನ ಕೊಂಚ ರಿಲ್ಯಾಕ್ಸ್ ಆಗುವ ನಿಟ್ಟಿನಲ್ಲಿ ತಮ್ಮ ಕುಟುಂಬದ ಜತೆ ನೆಚ್ಚಿನ ತಾಣಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್​ ಗೆದ್ದು ತವರಿಗೆ ಮರಳಿ ಎಲ್ಲ ಅಭಿನಂದನಾ ಕಾರ್ಯಕ್ರಮ ಮತ್ತು ಸನ್ಮಾನಗಳನ್ನು ಸ್ವೀಕರಿಸಿರುವ ಟೀಮ್​ ಇಂಡಿಯಾ ನಾಯಕ ರೋಹಿತ್​ ಶರ್ಮ(Rohit Sharma) ಇದೀಗ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ರೋಹಿತ್ ತಮ್ಮ ಪತ್ನಿ, ಮಗಳ ಜತೆ ಮುಂಬೈ ವಿಮಾನ ನಿಲ್ದಾಣದಿಂದ ವಿದೇಶ ಪ್ರಯಾಣ ಬೆಳೆಸಿದ ವಿಡಿಯೊ ವೈರಲ್​ ಆಗಿದೆ. ರೋಹಿತ್​ ಮಾತ್ರವಲ್ಲದೆ ಸೂರ್ಯಕುಮಾರ್ ಯಾದವ್ ಕೂಡಾ ಪತ್ನಿ ಜತೆ ಪ್ರವಾಸಕ್ಕೆ ತೆರಳಿದ್ದಾರೆ. ಒಟ್ಟಾರೆ ವಿಶ್ವಕಪ್​ ಆಡಿದ ಟೀಮ್​ ಇಂಡಿಯಾದ ಹಲವು ಆಟಗಾರರು ಮುಂದಿನ ಸರಣಿಗೂ ಮುನ್ನ ಕೊಂಚ ರಿಲ್ಯಾಕ್ಸ್ ಆಗುವ ನಿಟ್ಟಿನಲ್ಲಿ ತಮ್ಮ ಕುಟುಂಬದ ಜತೆ ನೆಚ್ಚಿನ ತಾಣಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

ರೋಹಿತ್ ನಾಯಕತ್ವದಲ್ಲಿ, ಕಳೆದ ವಾರ ಬಾರ್ಬಡೋಸ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್‌ಗಳ ಜಯದೊಂದಿಗೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರವನ್ನು ಕೊನೆಗೊಳಿಸಿತ್ತು. 2007 ರ ಉದ್ಘಾಟನಾ ಆವೃತ್ತಿಯ ನಂತರ ಇದು ಭಾರತಕ್ಕೆ ಒಲಿದ ಎರಡನೇ ಟಿ20 ವಿಶ್ವಕಪ್ ಪ್ರಶಸ್ತಿಯಾಗಿತ್ತು. ಮೆನ್ ಇನ್ ಬ್ಲೂ ಈ ಹಿಂದೆ ರೋಹಿತ್ ಅವರ ನಾಯಕತ್ವದಲ್ಲಿ ಎರಡು ಫೈನಲ್‌ಗಳನ್ನು ಆಡಿತ್ತು. ಏಕದಿನ ವಿಶ್ವಕಪ್ ಮತ್ತು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್. ಇಲ್ಲಿ ರನ್ನರ್-ಅಪ್ ಸ್ಥಾನ ಗಳಿಸಿತ್ತು.

ಇದನ್ನೂ ಓದಿ Rohit Sharma: ನನಗೆ ಟಿ20ಗೆ ನಿವೃತ್ತಿ ಘೋಷಿಸಲು ಮನಸ್ಸು ಇರಲಿಲ್ಲ; ಆಘಾತಕಾರಿ ಹೇಳಿಕೆ ನೀಡಿದ ರೋಹಿತ್​ ಶರ್ಮಾ

ಚಾಂಪಿಯನ್ಸ್​ ಟ್ರೋಫಿಗೂ ರೋಹಿತ್​ ನಾಯಕ


ಏಕದಿನ ಮತ್ತು ಟೆಸ್ಟ್ ಮಾದರಿಗಳಲ್ಲಿ ರೋಹಿತ್ ಶರ್ಮ(Rohit Sharma) ಭಾರತ ತಂಡದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(BCCI secretary Jay Shah) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ ಮುಂದಿನ ವರ್ಷ ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುವ ಚಾಂಪಿಯನ್ಸ್​ ಟ್ರೋಫಿ(Champions Trophy) ಟೂರ್ನಿಯಲ್ಲಿಯೂ ರೋಹಿತ್​ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂಬರುವ ಚಾಂಪಿಯನ್ಸ್ ಟ್ರೋಫಿ 2025 ಮತ್ತು ಮುಂದಿನ ವರ್ಷ ನಡೆಯಲಿರುವ ಮೂರನೇ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ರೋಹಿತ್​ ಶರ್ಮ ನಾಯಕತ್ವದಲ್ಲಿ ಚಾಂಪಿಯನ್​ ಆಗಲಿದೆ” ಎಂದು ಜಯ್​ ಶಾ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

2025ರಲ್ಲಿ ಪಾಕಿಸ್ತಾನದಲ್ಲಿ ಆಯೋಜನೆಗೊಂಡಿರುವ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ತಿಳಿದುಬಂದಿದೆ. ಕೆಲದಿನಗಳ ಹಿಂದಷ್ಟೇ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌, ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ನಿಗದಿ ಮಾಡಿತ್ತು. ಆದರೆ, ಭದ್ರತೆಯ ಕಾರಣವನ್ನು ನೀಡಿರುವ ಬಿಸಿಸಿಐ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

Continue Reading

ಕ್ರೀಡೆ

Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

Hasin Jahan: ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

VISTARANEWS.COM


on

Hasin Jahan: Divorced wife who scolded Shami unnecessarily as 'pack of dogs'; The video is viral
Koo

ಕೋಲ್ಕತ್ತಾ: ಟೀಮ್​ ಇಂಡಿಯಾದ ಸ್ಟಾರ್​ ವೇಗಿ ಮೊಹಮ್ಮದ್​ ಶಮಿ(Mohammed Shami) ಅವರ ವಿರುದ್ಧ ಸದಾ ಒಂದಿಲ್ಲೊಂದು ಕಾರಣಗಳಿಂದ ಟೀಕಿಸುತ್ತಿರುವ ಅವರ ವಿಚ್ಛೇದಿತ ಪತ್ನಿ ಹಸೀನ್ ಜಹಾನ್(Hasin Jahan) ಈ ಬಾರಿ ನಾಯಿಗೆ ಹೋಲಿಕೆ ಮಾಡಿ ಪರೋಕ್ಷವಾಗಿ ಹೀಯಾಳಿಸಿದ್ದಾರೆ.

ಹೌದು, ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಕಣ್ಣು ಮಿಟುಕಿಸುವ ಒಂದು ನಿಮಿಷದ ವಿಡಿಯೊ ಹಂಚಿಕೊಂಡಿರುವ ಹಸೀನ್ ಜಹಾನ್, ನಾಯಿಗಳ ದಂಡು ಹೆಣ್ಣು ಮಕ್ಕಳ ಹಿಂದಿನಿಂದ ಮಾತ್ರ ಬೊಗಳುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ಎಂದ ಅನುಮಾನ ಮೂಡಿದೆ.

ಶಮಿ ವಿರುದ್ಧ ಹಸೀನ್ ಜಹಾನ್ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ. ಏಕದಿನ ವಿಶ್ವಕಪ್​ ಟೂರ್ನಿಯ ವೇಳೆ ಉತ್ತಮ ಪ್ರದರ್ಶನ ತೋರಿದಾಗ ಎಮ್ಮೆ ನೀರು ಕುಡಿಯುತ್ತಿರುವ ಚಿತ್ರಗಳನ್ನು ಪೋಸ್ಟ್​ ಮಾಡುವ ಮೂಲಕ ವಿಲಕ್ಷಣದ ಹೇಳಿಕೆ ನೀಡಿದ್ದರು.

ಕೆಲವು ತಿಂಗಳ ಹಿಂದೆ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ರೋಹಿತ್​ ಶರ್ಮ ಅವರು ತಮ್ಮ ಪುಟ್ಟ ಮಗಳು ಸಮೈರಾ ತೊಡೆ ಮೇಲೆ ಹಾಯಾಗಿ ಮಲಗಿರುವ ಫೋಟೊ ಹಂಚಿಕೊಂಡಿದ್ದ ಹಸೀನ್ ಜಹಾನ್, ಹೆಚ್ಚಿನ ತಂದೆಯಂದಿರು ತಮ್ಮ ಪುಟ್ಟ ಮಗಳನ್ನು ದೇವರಂತೆ ಕಂಡು ಅವರಿಂದ ಶಾಂತಿ ಕಂಡುಕೊಳ್ಳುತ್ತಾರೆ. ಮತ್ತು ಕೆಲವು ತಂದೆಯರು ವೇಶ್ಯೆಯರ ಮಡಿಲಲ್ಲಿ!. ಅಲ್ಲಾಹು ಯಾವುದೇ ಮಗಳಿಗೆ ಇಂತಹ ಗುಣವಿಲ್ಲದ ತಂದೆಯನ್ನು ಎಂದಿಗೂ ನೀಡದಿರಲಿ. ಆಮೀನ್. ನನ್ನ ಪುಟ್ಟ ಮಗಳಿಗೆ ತಾಳ್ಮೆಯನ್ನು ನೀಡುವಂತೆ ನಾನು ಅಲ್ಲಾಹುವಿನನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್​ ಮಾಡಿ ಶಮಿಯನ್ನು ಅನಗತ್ಯವಾಗಿ ಕೆಣಕ್ಕಿದ್ದರು.

16 ಆಗಸ್ಟ್ 2018 ರಂದು, ಹಸಿನ್ ಜಹಾನ್(Hasin Jahan) ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲದೆ ಹಲ್ಲೆ, ಅತ್ಯಾಚಾರ, ಕೊಲೆ ಯತ್ನ ಮತ್ತು ಕೌಟುಂಬಿಕ ಹಿಂಸಾಚಾರದ ಆರೋಪದಡಿಯಲ್ಲಿ ಟೀಮ್ ಇಂಡಿಯಾ ಕ್ರಿಕೆಟಿಗನ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಇದೇ ವೇಳೆ ಮಗಳ ಖರ್ಚಿಗೆ ಹಾಗೂ ತನಗೆ ಯಾವುದೇ ರೀತಿಯ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಹಸಿನ್ ಜಹಾನ್ ದೂರಿನಲ್ಲಿ ಅಪಾದಿಸಿದ್ದರು.

ಜೀವನಾಂಶ ನೀಡುತ್ತಿರುವ ಶಮಿ

2018 ರಲ್ಲಿ ಹಸಿನ್ ಜಹಾನ್ ಅವರು ಮಾಸಿಕ 10 ಲಕ್ಷ ರೂ ಜೀವನಾಂಶವನ್ನು ಕೋರಿ ಶಮ್ಮಿ ವಿರುದ್ಧ ಕಾನೂನು ಮೊಕದ್ದಮೆ ಹೂಡಿದ್ದರು. ವೈಯಕ್ತಿಕ ವೆಚ್ಚಕ್ಕಾಗಿ 7 ಲಕ್ಷ ರೂ., ತಮ್ಮ ಮಗಳ ನಿರ್ವಹಣೆಗಾಗಿ 3 ಲಕ್ಷ ರೂ. ಕೇಳಿದ್ದರು. ಇದರ ವಿಚಾರಣೆ ನಡೆಸಿದ ಕೋಲ್ಕೊತಾ ನ್ಯಾಯಾಲಯ ಇದೇ ವರ್ಷದ ಜನವರಿಯಲ್ಲಿ ತೀರ್ಪು ಪ್ರಕಟಿಸಿ, ಶಮಿ ಅವರು ಪತ್ಯೇಕವಾಗಿ ವಾಸಿಸುತ್ತಿರುವ ಪತ್ನಿ ಜಹಾನ್​ಗೆ ತಿಂಗಳಿಗೆ 50 ಸಾವಿರ ರೂ. ನೀಡುವಂತೆ ಸೂಚಿಸಿತ್ತು. ಕೋರ್ಟ್​ ಸೂಚನೆಯಂತೆ ಶಮಿ ಅವರು ಈ ಮೊತ್ತವನ್ನು ನೀಡಿತ್ತಲೇ ಬರುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

Abhishek Sharma : ಅಭಿಷೇಕ್​ ಶತಕಕ್ಕೆ ಸಹೋದರಿಯ ಚಪ್ಪಾಳೆ, ವಿಡಿಯೊ ಶೇರ್ ಮಾಡಿದ ಕೋಮಲ್​ ಶರ್ಮಾ

Abhishek Sharma : ಅಭಿಷೇಕ್ ಶರ್ಮಾ ತಮ್ಮ ಚೊಚ್ಚಲ ಟಿ 20 ಐ ನಲ್ಲಿ ಡಕ್ ಔಟ್ ಆಗಿದ್ದರು. ತಮ್ಮ ಎರಡನೇ ಟಿ 20 ಪಂದ್ಯದಲ್ಲಿ ಅವರು ಗರಿಷ್ಠ ಲಾಭ ಪಡೆದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಿದ್ದರು. ಜಿಂಬಾಬ್ವೆ ಬೌಲರ್ ಗಳನ್ನು ಮೈದಾನದ ಎಲ್ಲಾ ಭಾಗಗಳಿಗೆ ಅಟ್ಟಿದರು. ಅವರು ತಮ್ಮ ಇನ್ನಿಂಗ್ಸ್ ಉದ್ದಕ್ಕೂ 200 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಆಡಿದ್ದಾರೆ.

VISTARANEWS.COM


on

Abhishek Sharma
Koo

ಬೆಂಗಳೂರು: ಅಭಿಷೇಕ್ ಶರ್ಮಾ (Abhishek Sharma) ತಮ್ಮ ವೃತ್ತಿ ಜೀವನದ ಎರಡನೇ ಟಿ 20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ತಮ್ಮ ಚೊಚ್ಚಲ ಟಿ 20 ಶತಕ ಗಳಿಸಿದ್ದರು. ಇದರೊಂದಿಗೆ ಭಾರತಕ್ಕೆ ಜಿಂಬಾಬ್ವೆ ವಿರುದ್ಧ 100 ರನ್ ಗಳ ಗೆಲುವು ಸಿಕ್ಕಿದ್ದು, ಐದು ಪಂದ್ಯಗಳ ಸರಣಿಯಲ್ಲಿ ಸಮಬಲದ ಸಾಧನೆ ಮಾಡಿದೆ.

ಅಭಿಷೇಕ್ ಶರ್ಮಾ ತಮ್ಮ ಚೊಚ್ಚಲ ಟಿ 20 ಐ ನಲ್ಲಿ ಡಕ್ ಔಟ್ ಆಗಿದ್ದರು. ತಮ್ಮ ಎರಡನೇ ಟಿ 20 ಪಂದ್ಯದಲ್ಲಿ ಅವರು ಗರಿಷ್ಠ ಲಾಭ ಪಡೆದರು. ಅವರು 47 ಎಸೆತಗಳಲ್ಲಿ 100 ರನ್ ಗಳಿಸಿದ್ದರು. ಜಿಂಬಾಬ್ವೆ ಬೌಲರ್ ಗಳನ್ನು ಮೈದಾನದ ಎಲ್ಲಾ ಭಾಗಗಳಿಗೆ ಅಟ್ಟಿದರು. ಅವರು ತಮ್ಮ ಇನ್ನಿಂಗ್ಸ್ ಉದ್ದಕ್ಕೂ 200 ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ ಆಡಿದ್ದಾರೆ. ಅವರು 34 ಎಸೆತಗಳಲ್ಲಿ ತಮ್ಮ ಅರ್ಧಶತಕ ಗಳಿಸಿದ್ದರು ಹಾಗೂ ಮುಂದಿನ 13 ಎಸೆತಗಳಲ್ಲಿ ತಮ್ಮ ಮುಂದಿನ 50 ರನ್ ಗಳಿಸಿದರು.

ಟಿ 20 ಪಂದ್ಯಗಳಲ್ಲಿ ಸಿಕ್ಸರ್​ನೊಂದಿಗೆ ಇನಿಂಗ್ಸ್ ಆರಂಭಿಸಿದ್ದರು ಮತ್ತು ಸತತ ಮೂರು ಸಿಕ್ಸರ್​ಗಳೊಂದಿಗೆ 100 ರನ್ ಗಳಿಸಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಸಿಕ್ಸರ್​ ಮೂಲಕ ಶತಕ ಗಳಿಸಿದ ಆರನೇ ಭಾರತೀಯ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ತಮ್ಮ ಚೊಚ್ಚಲ ಟಿ 20 ಐ ಶತಕವನ್ನು ಗಳಿಸಲು ಕಡಿಮೆ ಇನ್ನಿಂಗ್ಸ್ (2) ತೆಗೆದುಕೊಂಡ ದಾಖಲೆಯೂ ಅವರ ಹೆಸರಿನಲ್ಲಿದೆ.

ಋತುರಾಜ್ ಗಾಯಕ್ವಾಡ್ ಅವರೊಂದಿಗೆ 37 ರನ್ ಸೇರಿಸಿದರು ಮತ್ತು 14 ನೇ ಓವರ್ ನ ಕೊನೆಯ ಎಸೆತದಲ್ಲಿ 100 ರನ್ ಗಳಿಸಿ ಔಟಾದರು. ಗಾಯಕ್ವಾಡ್ ಮತ್ತು ರಿಂಕು ಸಿಂಗ್ (22 ಎಸೆತಗಳಲ್ಲಿ 48* ರನ್) ಕೊನೆಯ ಐದು ಓವರ್​ಗಳಲ್ಲಿ 87 ರನ್​ ಸೇರಿಸಿ ಬೃಹತ್ ಮೊತ್ತವನ್ನು ಗಳಿಸಲು ಸಹಾಯ ಮಾಡಿದರು. ನಂತರ ಭಾರತೀಯ ಬೌಲರ್​ಗಳು ಜಿಂಬಾಬ್ವೆಯನ್ನು ಕೇವಲ 134 ರನ್​ಗಳಿಗೆ ಆಲೌಟ್ ಮಾಡಿದರು.

ಕುಟುಂಬದ ಸಂಭ್ರಮ

ಅಭಿಷೇಕ್​ ಶರ್ಮಾ ಸಿಕ್ಸರ್​ ಬಾರಿಸಿ ಶತಕ ದಾಖಲಿಸುತ್ತಿದ್ದಂತ ಅವರ ಕುಟುಂಬದ ಸದಸ್ಯರು ಸಂಭ್ರಸಿದ್ದಾರೆ. ಇದರ ವಿಡಿಯೊವನ್ನು ಸಹೋದರಿ ಕೋಮಲ್​ ಶರ್ಮಾ ಇಂಟರ್ನೆಟ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ತಮ್ಮ ಮಗ ವಿಶೇಷ ಹೆಗ್ಗುರುತನ್ನು ತಲುಪಿದ ನಂತರ ಅವರೆಲ್ಲರೂ ನಗುವುದು ಕಂಡು ಬಂತು. ಐಪಿಎಲ್​​ನ ಅವರ ಅದ್ಭುತ ಪ್ರದರ್ಶನದ ಬಳಿಕ ಶರ್ಮಾ ಅವರನ್ನು ಸರಣಿಗಾಗಿ ಈ ಭಾರತೀಯ ತಂಡಕ್ಕೆ ಸೇರಿಸಲಾಯಿತು. ಅವರು ಎಸ್​​ಆರ್​ಎಚ್​ ಪರ 16 ಇನಿಂಗ್ಸ್​ಗಳಲ್ಲಿ 204.02 ಸ್ಟ್ರೈಕ್ ರೇಟ್​​ನಲ್ಲಿ 484 ರನ್ ಗಳಿಸಿದ್ದರು.

ಇದನ್ನೂ ಓದಿ: Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

ಹರಾರೆಯಲ್ಲಿ ನಡೆದ 2 ನೇ ಟಿ 20 ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ನಂತರ ಅಭಿಷೇಕ್ ಶರ್ಮಾ ಹರಾರೆ ಸ್ಪೋರ್ಟ್ಸ್ ಕ್ಲಬ್​ನಿಂದ ತಮ್ಮ ಕುಟುಂಬದೊಂದಿಗೆ ವಿಡಿಯೊ ಕಾಲ್ ಮೂಲಕ ಮಾತನಾಡಿದರು. ದಾಖಲೆಯ ಶತಕದ ನಂತರ ಅಭಿಷೇಕ್ ತನ್ನ ಹೆತ್ತವರೊಂದಿಗೆ ಮಾತನಾಡುವ ವೀಡಿಯೊವನ್ನು ಬಿಸಿಸಿಐ ಹಂಚಿಕೊಂಡಿದೆ.

ಅಭಿಷೇಕ್ ಶರ್ಮಾ ಅವರ ಸಹೋದರಿ ಪಂಜಾಬ್​​ ಯುವ ಕ್ರಿಕೆಟಿಗನಿಗೆ ಬೆಂಬಲವಾಗಿದ್ದಾರೆ. ವೈದ್ಯರಾಗಿರುವ ಕೋಮಲ್, ಐಪಿಎಲ್ 2024 ರ ಋತುವಿನಾದ್ಯಂತ ಅಭಿಷೇಕ್ ಅವರೊಂದಿಗೆ ಸಮಯ ಕಳೆಯುತ್ತಿದ್ದರು. ಹರಾರೆಯಲ್ಲಿ ಶತಕದ ನಂತರ ಅಭಿಷೇಕ್ ಶರ್ಮಾ ತಮ್ಮ ಮಾರ್ಗದರ್ಶಕ ಮತ್ತು ಭಾರತದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಅವರೊಂದಿಗೆ ಮಾತನಾಡಿದರು. ಭಾರತೀಯ ಕ್ರಿಕೆಟ್ ಮಂಡಳಿ ಹಂಚಿಕೊಂಡ ವೀಡಿಯೊದಲ್ಲಿ, ಯುವರಾಜ್ ಅಭಿಷೇಕ್ ಅವರನ್ನು ಅಭಿನಂದಿಸುವುದನ್ನು ಕಾಣಬಹುದು.

Continue Reading

ಪ್ರಮುಖ ಸುದ್ದಿ

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Mumbai Cricket Association : ಟಿ20 ವಿಜಯೋತ್ಸವ ಬಳಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರು ಮಹಾರಾಷ್ಟ್ರ ವಿಧಾನ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಅವರನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರರು ಸ್ವಾಗತಿಸಿದ್ದರು.

VISTARANEWS.COM


on

Mumbai Cricket Association
Koo

ಬೆಂಗಳೂರು: ಟಿ 20 ವಿಶ್ವಕಪ್ 2024 ವಿಜೇತ ಭಾರತೀಯ ತಂಡದ ಸದಸ್ಯರು ಇತ್ತೀಚೆಗೆ ಮುಂಬೈನ ಐತಿಹಾಸಿಕ ವಾಂಖೆಡೆ ಸ್ಟೇಡಿಯಮ್​ನಲ್ಲಿ (wankhede stadium) ಸಂಭ್ರಮಾಚರಣೆ ಮಾಡಿದ್ದರು. ಆದರೆ, ಈ ಐತಿಹಾಸಿಕ ಸ್ಟೇಡಿಯಮ್​ ಇನ್ನು ಮುಂದೆ ಇತಿಹಾಸದ ಪುಸ್ತಕ ಸೇರುವ ಎಲ್ಲ ಸಾಧ್ಯತೆಗಳಿವೆ. ಯಾಕೆಂದರೆ ಮಹಾರಾಷ್ಟ್ರ ಕ್ರಿಕೆಟ್​ ಸಂಸ್ಥೆಯು (Mumbai Cricket Association) ಒಂದು ಲಕ್ಷ ಮಂದಿ ಪ್ರೇಕ್ಷಕರ ದೊಡ್ಡ ಸ್ಟೇಡಿಯಮ್ ಒಂದನ್ನು ನಿರ್ಮಿಸಲು ಮುಂದಾಗಿದೆ. ಹೀಗಾದರೆ ವಾಂಖೆಡೆ ಮೂಲೆಗುಂಪಾಗುವುದು ಖಚಿತ.

ಟಿ20 ವಿಜಯೋತ್ಸವ ಬಳಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರು ಮಹಾರಾಷ್ಟ್ರ ವಿಧಾನ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಅವರನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರರು ಸ್ವಾಗತಿಸಿದ್ದರು.

ಮಹಾರಾಷ್ಟ್ರ ಮೂಲದ ಎಲ್ಲಾ ಕ್ರಿಕೆಟಿಗರನ್ನು ರಾಜ್ಯ ಸರ್ಕಾರವು ಸನ್ಮಾನಿಸಿತ್ತು. ಆಗ ಫಡ್ನವೀಸ್ ಸಿಎಂ ಏಕನಾಥ್​ ಶಿಂಧೆ ಬಳಿ ರಾಜ್ಯದಲ್ಲಿ ಮತ್ತೊಂದು ವಿಶ್ವ ದರ್ಜೆಯ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸುವ ಆಲೋಚನೆಯನ್ನು ಪರಿಶೀಲಿಸುವಂತೆ ವಿನಂತಿಸಿದ್ದರು. ಇದು ಒಂದು ಲಕ್ಷಕ್ಕೂ ಹೆಚ್ಚು ಆಸನ ಸಾಮರ್ಥ್ಯವನ್ನು ಹೊಂದಿರಲಿದೆ. ಇದು ದೇಶದ ಅತಿದೊಡ್ಡ ಕ್ರೀಡಾಂಗಣಗಳಲ್ಲಿ ಒಂದಾಗಲಿದೆ.

ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ 50 ಎಕರೆ ಭೂಮಿಗಾಗಿ ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಎಂಎಸ್ಆರ್​ಡಿಸಿಗೆ) ನೀಡುವ ಮುಕ್ತ ಟೆಂಡರ್​ಗೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್ (ಎಂಸಿಎ) ಈಗಾಗಲೇ ಅರ್ಜಿ ಸಲ್ಲಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾದ ವರದಿ ಮಾಡಿದೆ. ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದ ನಂತರ ಔಪಚಾರಿಕ ಯೋಜನೆ ಸಿದ್ಧಗೊಳ್ಳಲಿದೆ.

ವಾಂಖೆಡೆಯಿಂದ 68 ಕಿ.ಮೀ ದೂರದ ಸ್ಟೇಡಿಯಮ್​

ಥಾಣೆಯಿಂದ 26 ಕಿ.ಮೀ ಮತ್ತು ವಾಂಖೆಡೆ ಕ್ರೀಡಾಂಗಣದಿಂದ 68 ಕಿ.ಮೀ ದೂರದಲ್ಲಿರುವ ಅಮಾನೆಯಲ್ಲಿ ಸುಮಾರು 50 ಎಕರೆ ತೆರೆದ ಭೂಮಿಯಲ್ಲಿ ಹರಡಿರುವ 1 ಲಕ್ಷ ಸಾಮರ್ಥ್ಯದ ಬೃಹತ್ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ಎಂಸಿಎ ನೋಡುತ್ತಿದೆ. ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಎಂಎಸ್ಆರ್ಡಿಸಿ) ಕರೆದ ಮುಕ್ತ ಟೆಂಡರ್ ಅನ್ನು ಎಂಸಿಎ ಭರ್ತಿ ಮಾಡಿದೆ. ಸಂಘವು ಮಹಾರಾಷ್ಟ್ರ ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ” ಎಂದು ವರದಿ ತಿಳಿಸಿದೆ.

ಅಮೋಲ್ ಕಾಳೆ ಕನಸಿನ ಯೋಜನೆ

ದಿವಂಗತ ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ಅವರು ಫಡ್ನವೀಸ್ ಅವರ ಆಪ್ತ ಸ್ನೇಹಿತರಾಗಿದ್ದರು. ಹೊಸ ಕ್ರಿಕೆಟ್ ಅಖಾಡವನ್ನು ನಿರ್ಮಿಸುವುದು ಅವರ ಕನಸಿನ ಯೋಜನೆಯಾಗಿತ್ತು ಎಂದು ವರದಿಯಾಗಿದೆ. ವಿಶೇಷವೆಂದರೆ, ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಲ್ಲಿ ಭಾಗವಹಿಸಿದ ಸ್ವಲ್ಪ ಸಮಯದ ನಂತರ ಹೃದಾಯಘಾತದಿಂದ ನಿಧನ ಹೊಂದಿದ್ದರು.

ಇದನ್ನೂ ಓದಿ: Sourav Ganguly : ಸೌರವ್​ ಗಂಗೂಲಿಗೆ 52ನೇ ಜನ್ಮದಿನ; ದಾದಾನ ಅಭೂತಪೂರ್ವ ವೃತ್ತಿ ಜೀವನದ ಬಗ್ಗೆ ಇಲ್ಲಿದೆ ಸಂಕ್ಷಿಪ್ತ ವಿವರ

ಈ ಕ್ರೀಡಾಂಗಣವು ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ ಅವರ ಕನಸಿನ ಯೋಜನೆಯಾಗಿತ್ತು. ಇದು ಪ್ರಥಮ ದರ್ಜೆ ಪಂದ್ಯಗಳನ್ನು ಆಡಬಹುದಾದ ಎರಡು ಮೈದಾನಗಳು ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಹೊಂದಿರುತ್ತದೆ” ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ, ಮುಂಬೈನ ವಾಂಖೆಡೆ ಕ್ರೀಡಾಂಗಣ ಮತ್ತು ನವೀ ಮುಂಬೈನ ಡಾ.ಡಿ.ವೈ.ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಎಂಸಿಎ ಅಡಿಯಲ್ಲಿ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿದ ಎರಡು ಸ್ಥಳಗಳಾಗಿವೆ. ಬಿಕೆಸಿ ಮೈದಾನ ಮತ್ತು ಡೆಕ್ಕನ್ ಜಿಮ್ಖಾನಾ ಮೈದಾನಗಳು ಸಹ ಅಂತರರಾಷ್ಟ್ರೀಯ ಪಂದ್ಯಗಳಿಗೆ ಆತಿಥ್ಯ ವಹಿಸಿವೆ. ಆದರೆ ಆಧುನಿಕ ಕ್ರಿಕೆಟ್​ಗೆ ಪೂರಕವಾಗಿ ಸೌಲಭ್ಯಗಳು ಇಲ್ಲ.

Continue Reading
Advertisement
Manvita Kamath Honeymoon in baali
ಸ್ಯಾಂಡಲ್ ವುಡ್5 mins ago

Manvita Kamath: ಪತಿ ಅರುಣ್ ಜತೆ ಬಾಲಿಯಲ್ಲಿ ಸಖತ್‌ ಎಂಜಾಯ್‌ ಮಾಡುತ್ತಿರುವ ಮಾನ್ವಿತಾ ಕಾಮತ್!

NEET UG 2024
ದೇಶ17 mins ago

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

OPS News
ಕರ್ನಾಟಕ17 mins ago

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಕ್ರೀಡೆ27 mins ago

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

First Night Video
Latest30 mins ago

First Night Video: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

Ragging case in Bengaluru
ಬೆಂಗಳೂರು34 mins ago

Ragging Case : ಬೆಂಗಳೂರಲ್ಲಿ ನಿಲ್ಲದ ವ್ಹೀಲಿಂಗ್‌ ಆ್ಯಂಡ್‌ ರ‍್ಯಾಗಿಂಗ್‌ ಹಾವಳಿ; ಮಹಿಳೆ ಹಿಂದೆ ಬಿದ್ದ ಪೋಲಿ ಹುಡುಗರು

Supreme Court
ಪ್ರಮುಖ ಸುದ್ದಿ35 mins ago

Sandeshkhali case : ಸಿಬಿಐ ತನಿಖೆ ವಿರುದ್ಧದ ಅರ್ಜಿ ವಜಾ; ಸುಪ್ರೀಂ ಕೋರ್ಟ್‌‌ನಲ್ಲಿ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹಿನ್ನಡೆ

Kiccha Sudeep Call Boss To Only Two Persons
ಸ್ಯಾಂಡಲ್ ವುಡ್41 mins ago

Kiccha Sudeep: ಇಬ್ಬರಿಗೆ ಮಾತ್ರ ʻಬಾಸ್‌ʼ ಎಂದು ಕರೆಯುವೆ ಎಂದ ಕಿಚ್ಚ; ಯಾರವರು?

France Election
ಪ್ರಮುಖ ಸುದ್ದಿ1 hour ago

France Election: ಫ್ರಾನ್ಸ್ ಚುನಾವಣೆ: ಎಡ ಪಕ್ಷಗಳ ಒಕ್ಕೂಟದ ಮೇಲುಗೈ; ಅತಂತ್ರ ಫಲಿತಾಂಶ

Chennai Police commissioner
ಪ್ರಮುಖ ಸುದ್ದಿ1 hour ago

Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ1 hour ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು5 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ21 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ23 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ24 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಟ್ರೆಂಡಿಂಗ್‌