BBK Season 10: ತಾನೆಷ್ಟು ʻಚಾಲಾಕಿʼ ಎಂದು ತೋರಿಸಿದ ಡ್ರೋನ್‌ ಪ್ರತಾಪ್‌; ಬಲೂನ್‌ ಆಟದಲ್ಲಿ ಕಿಂಗ್ - Vistara News

ಬಿಗ್ ಬಾಸ್

BBK Season 10: ತಾನೆಷ್ಟು ʻಚಾಲಾಕಿʼ ಎಂದು ತೋರಿಸಿದ ಡ್ರೋನ್‌ ಪ್ರತಾಪ್‌; ಬಲೂನ್‌ ಆಟದಲ್ಲಿ ಕಿಂಗ್

BBK Season 10:  ಸದಸ್ಯರೆಲ್ಲರೂ ಅವರ ಮೇಲೆ ಎರಗಿ ಎಷ್ಟೇ ಕಷ್ಟ ಕೊಟ್ಟರೂ ತಾನು ಏನು ಎಂಬುದನ್ನು ಈ ವಾರ ಸಾಬೀತು ಮಾಡಿದ್ದಾರೆ ಪ್ರತಾಪ್. ಅವರ ಬುದ್ಧಿವಂತಿಕೆ ನೋಡಿ ‌ಪ್ರೇಕ್ಷಕರು ಫಿದಾ ಆಗಿದ್ದಾರೆ.

VISTARANEWS.COM


on

Drone Pratap bbk 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 10ರ (BBK Season 10: ) ನಾಲ್ಕನೇ ವಾರ ನಾಮಿನೇಶನ್‌ ಪ್ರಕ್ರಿಯೆಯಲ್ಲಿ ಡ್ರೋನ್‌ ಪ್ರತಾಪ್‌ ಅವರು ತಮ್ಮ ಚಾಣಕ್ಯತನವನ್ನು ತೋರಿಸಿದ್ದಾರೆ. ಅಷ್ಟೇ ಅಲ್ಲದೇ ಸದಸ್ಯರೆಲ್ಲರೂ ಅವರ ಮೇಲೆ ಎರಗಿ ಎಷ್ಟೇ ಕಷ್ಟ ಕೊಟ್ಟರೂ ತಾನು ಏನು ಎಂಬುದನ್ನು ಈ ವಾರ ಸಾಬೀತು ಮಾಡಿದ್ದಾರೆ. ಅವರ ಬುದ್ಧಿವಂತಿಕೆ ನೋಡಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

ಹಲವು ಹಂತಗಳಲ್ಲಿ ನಡೆದ ನಾಮಿನೇಶನ್‌ ಪ್ರಕ್ರಿಯೆ

ಈ ವಾರದ ನಾಮಿನೇಶನ್‌ ಪ್ರಕ್ರಿಯೆ ಹಲವು ಹಂತಗಳಲ್ಲಿ ನಡೆಯಿತು. ಮೊದಲ ಹಂತ ಈ ವಾರ ನಾಮಿನೇಶನ್‌ ಮಾಡುವ ಅಧಿಕಾರ ಎಲ್ಲರಿಗೂ ಇರುವುದಿಲ್ಲ ಎಂದು ಬಿಗ್‌ ಬಾಸ್‌ ಹೇಳಿದರು. ಇದರ ಅನುಸಾರ ಮನೆಯಲ್ಲಿ ಇರುವ ಬಲೂನ್‌ಗಳ ಪೈಕಿ ನಾಮಿನೇಶನ್‌ ಪಾಸ್‌ ಆಗಿತ್ತು. ಮೊದಲ ಬಸರ್‌ ಆದ ಕೂಡಲೇ ಕ್ಯಾಪ್ಟನ್‌ ನೀತು ಹೊರತುಪಡಿಸಿ ಮನೆಯ ಎಲ್ಲ ಸದಸ್ಯರು ಬಲೂನ್‌ಗಳನ್ನು ಒಡೆದು ನಾಮಿನೇಶನ್‌ ಪಾಸ್‌ಗಳನ್ನು ಹುಡುಕಬೇಕು. ಪಾಸ್‌ ಸಿಕ್ಕಾಗ ಬೇರೆಯವರು ಕಸಿದುಕೊಳ್ಳದಂತೆ ಜೋಪಾನ ಇಟ್ಟುಕೊಂಡು ನಂತರ ಮತ್ತೆ ಉಳಿದ ಪಾಸ್‌ಗಳನ್ನು ಹುಡಕಬೇಕು. ಎರಡನೇ ಬಸರ್‌ ಆದಾಗ ಮೊದಲ ಹಂತ ಮುಕ್ತಾಯಗೊಳ್ಳುತ್ತಿತ್ತು. ಈ ಹಂತದಲ್ಲಿ ಡ್ರೋನ್‌ ಪ್ರತಾಪ್‌ ನಾಲ್ಕು ಪಾಸ್‌ಗಳನ್ನು ಗೆದ್ದರು.

ಈ ಹಂತದಲ್ಲಿ ಪ್ರತಾಪ್‌ ತಾನೆಷ್ಟು ಚಾಲಾಕಿ ಎಂಬುದುನ್ನು ಸಾಬೀತು ಪಡಿಸಿದರು. ಅಷ್ಟೇ ಅಲ್ಲ ಮನೆಮಂದಿ ಕೂಡ ಮನೆ ತುಂಬೆಲ್ಲ ಇದ್ದ ಬಲೂನ್‌ಗಳನ್ನು ಸ್ಪರ್ಧಿಗಳು ಮುಗಿಬಿದ್ದು ಒಡೆದರು. ಆದರೆ ಪಾಸ್‌ ಪಡೆಯುವಲ್ಲಿ ಬಹುತೇಕರು ಸೋತರು. ಇನ್ನ ಕೆಲವರು ಬಲೂನ್‌ಗಳನ್ನು ಒಡೆಯುವುದೇ ಬಿಟ್ಟರು. ಇನ್ನೂ ಒಂದಿಷ್ಟು ಜನ ಬಲೂನ್‌ನಿಂದ ಪಾಸ್ ಆಚೆ ಬಿದ್ದರೂ, ಅದನ್ನು ನೋಡದೇ ಮೈಮರೆತರು. ಆದರೆ ಪ್ರತಾಪ್‌ ಬಿಟ್ಟು ಇನ್ಯಾರಿಗೂ ಸಿಕ್ಕಿರಲಿಲ್ಲ.

ಇದನ್ನೂ ಓದಿ: BBK Season 10: ಭಾಗ್ಯಶ್ರೀ ಔಟ್‌ ಅಂದ್ರೂ ತೆರೆಯಲಿಲ್ಲ ಬಾಗಿಲು; ಸುದೀಪ್ ಕೊಟ್ಟರು ಟ್ವಿಸ್ಟ್!

ಮೈಮೇಲೆ ಎರಗಿ ಪಾಸ್‌ ಕಸಿದುಕೊಂಡ ಕಾರ್ತಿಕ್‌

ತನಗೆ ಸಿಕ್ಕಿದ ಪಾಸ್‌ ಅನ್ನು ಕಿಸೆಯಲ್ಲಿಟ್ಟುಕೊಂಡು ಹೋಗುತ್ತಿದ್ದ ಪ್ರತಾಪ್ ಅವರನ್ನು ವಿನಯ್‌, ‘ಹೆಂಗಿರತ್ತೆ ನೋಡೋಣ ತೋರಿಸು’ ಎಂದು ಕೇಳಿದ್ದಾರೆ. ಆದರೆ ಪ್ರತಾಪ್ ಪಾಸ್‌ ಅನ್ನು ವಿನಯ್‌ ಕೈಗೆ ಕೊಟ್ಟಿಲ್ಲ. ಮಾತಿಗೆ ಮಾತು ಬೆಳೆದಿದೆ. ಮುಂದಿನ ದೃಶ್ಯದಲ್ಲಿ ಕಾರ್ತಿಕ್, ಸ್ನೇಹಿತ್ ಎಲ್ಲರೂ ಪ್ರತಾಪ್‌ ಮೈಮೇಲೆ ಮುಗಿಬಿದ್ದು ಅವರಿಂದ ಪಾಸ್ ಕಸಿಯಲು ಯತ್ನಿಸುತ್ತಿರುವ ದೃಶ್ಯವಿದೆ. ಎಲ್ಲರ ನಡುವೆ ಸಿಲುಕಿ ಒದ್ದಾಡುತ್ತಿರುವ ಪ್ರತಾಪ್‌ ಕಿರುಚಾಡುತ್ತಿದ್ದಾರೆ. ಬಲವಂತವಾಗಿ ಅವರ ಬಳಿ ಇದ್ದ ಒಂದು ಪಾಸ್ ಅನ್ನು ಕಿತ್ತುಕೊಂಡರು. ಆಗ ಕಾರ್ತಿಕ್‌ಗೆ ಮೈಕೆಲ್‌ ಸಾಥ್ ನೀಡಿದರು.

ಪರಾಕ್ರಮ ತೋರಿಸಿದ ಪ್ರತಾಪ್‌

ಬಳಿಕ ಪ್ರತಾಪ್‌ ತಮ್ಮಲ್ಲಿರುವ ನಾಲ್ಕು ಪಾಸ್‌ಗಳನ್ನು ಮನೆಯ ಸದಸ್ಯರಿಗೆ ತೋರಿಸಿದರು. ಅಷ್ಟೇ ಅಲ್ಲದೇ ಮನೆಮಂದಿ ತನ್ನನ್ನು ಎಲ್ಲಿ ಅಟ್ಯಾಕ್‌ ಮಾಡುತ್ತಾರೋ ಎಂದು ತಿಳಿದು ಪ್ರತಾಪ್‌ ಒಂದು ಪಾಸ್ ಅನ್ನು ಮಾತ್ರ ಜೇಬಿನಲ್ಲಿ ಇಟ್ಟುಕೊಂಡು, ಉಳಿದ ಮೂರು ಪಾಸ್‌ಗಳನ್ನು ಮೈಕ್‌ನಲ್ಲಿ ಸೇಫ್‌ ಆಗಿ ಇಟ್ಟಿದ್ದರು. ಇದಾದ ಬಳಿಕೆ ಕೆಲವರು ಪ್ರತಾಪ್‌ಗೆ ಮೆಚ್ಚುಗೆ ಸೂಚಿಸಿದರೆ, ಇನ್ನೂ ಕೆಲವರು ಹೊಟ್ಟೆಕಿಚ್ಚು ಪಟ್ಟುಕೊಂಡರು. ಇದಾದ ಬಳಿಕ ಕಾರ್ತಿಕ್‌ ತಮ್ಮಲ್ಲಿರುವ ಒಂದು ಪಾಸ್‌ ಅನ್ನು ಪ್ರತಾಪ್‌ ಜೇಬಿನಿಂದ ಕದ್ದಿರುವುದಾಗಿ ತೋರಿಸಿದರು.

ಸ್ಪರ್ಧಿಗಳಿಗೆ ಪ್ರಶ್ನೆ ಇಟ್ಟ ಬಿಗ್‌ ಬಾಸ್‌

ʻʻವಿನಯ್‌ ನಿಮಗೆ ಚಟುವಟಿಕೆ ನಡುವೆ ಬಲೂನ್‌ಗಳನ್ನು ಒಡೆಯುವಾಗ ಅವುಗಳಲ್ಲಿ ಪಾಸ್‌ಗಳು ಇಲ್ವೇ ಇಲ್ಲ ಎಂದು ಅಂದುಕೊಂಡ್ರಾ? ವಿನಯ್‌, ಸ್ನೇಹಿತ್‌ ಹಾಗೂ ಸಂಗೀತಾ ಪಾಸ್‌ಗಳು ಇದ್ದ ಬಲೂನ್‌ಗಳನ್ನು ಒಡೆದ್ರಿ. ಗಮನ ಕೊಡದೇ ಅದು ಬೇರೆಯವರ ಪಾಲಾಯ್ತುʼʼ ಎಂದರು. ಪ್ರತಾಪ್‌ ಮೂರು, ಕಾರ್ತಿಕ್‌ ಒಂದು ಪಾಸ್‌ ಪಡೆದರು.

ಇದನ್ನೂ ಓದಿ: BBK Season 10: ಡ್ರೋನ್‌ ಪ್ರತಾಪ್‌ ಮೇಲೆ ಸ್ಪರ್ಧಿಗಳ ದಾದಾಗಿರಿ; ಕೈಗೆ ಚೀಟಿ ಸಿಕ್ಕಿದ್ದೇ ತಪ್ಪಾಯ್ತಾ?

ಎರಡನೇ ಹಂತ

ʻʻಈ ವಾರ ನಾಮಿನೇಶನ್‌ ಮಾಡುವ ಅಧಿಕಾರ ಕೇವಲ ಎಂಟು ಸದಸ್ಯರಿಗೆ ಮಾತ್ರ ಇತ್ತು. ಕಾರ್ತಿಕ್‌ ಬಳಿ ಒಂದು ಪಾಸ್‌ ಇದೆ. ಮನೆಯ ಕ್ಯಾಪ್ಟನ್‌ ನೀತು ಹೊರತು ಪಡಿಸಿ ನಾಮಿನೇಶನ್‌ ಮಾಡುವ ಅಧಿಕಾರ ಒಬ್ಬರಿಗೆ ಕೊಡಬಹುದು ಎಂದು ಬಿಗ್‌ ಬಾಸ್‌ ಹೇಳಿದರು. ಪ್ರತಾಪ್‌ಗೆ ಬಿಗ್‌ ಬಾಸ್‌ ಎರಡು ಆಯ್ಕೆಗಳನ್ನು ನೀಡಿದರು. ಆಯ್ಕೆ ಒಂದು, ಮೂರು ಪಾಸ್‌ಗಳ ಪೈಕಿ ಒಂದನ್ನು ನಿಮಗೆಂದು ಇರಿಸಿಕೊಂಡು ಉಳಿದ ಸದಸ್ಯರ ಪೈಕಿ ಒಬ್ಬರಿಗೆ ನಾಮಿನೇಟ್‌ ಮಾಡುವ ಅಧಿಕಾರವನ್ನು ನೀಡಬೇಕು. ಉಳಿದ ಎರಡು ಪಾಸ್‌ಗಳನ್ನು ನೀತು ಹಾಗೂ ಕಾರ್ತಿಕ್‌ ಅವರನ್ನು ಹೊರತುಪಡಿಸಿ ಉಳಿದವರ ಪೈಕಿ ಇಬ್ಬರಿಗೆ ಪಾಸ್‌ ಹಸ್ತಾಂತರಿಸಬಹುದು. ನಿಮ್ಮಿಂದ ಪಾಸ್‌ ಪಡೆದ ಸದಸ್ಯರು ತಮ್ಮ ಇಚ್ಛೆಯ ಒಬ್ಬೊಬ್ಬರಿಗೆ ನಾಮಿನೇಟ್‌ ಮಾಡುವ ಅಧಿಕಾರ ನೀಡಬೇಕುʼʼ ಎಂದರು.

ಆಯ್ಕೆ ಎರಡು, ನೀವು ಪಡೆದಿರುವ ಮೂರು ಪಾಸ್‌ಗಳನ್ನು ನಿಮ್ಮ ಬಳಿಯೇ ಇರಿಸಿಕೊಂಡು ಐದು ಸದಸ್ಯರಿಗೆ ನೀವು ನಾಮಿನೇಶನ್‌ ಮಾಡುವ ಅಧಿಕಾರ ಕೊಡಬೇಕು. ಇದಾದ ಬಳಿಕ ವಿನಯ್‌, ಮೈಕಲ್‌, ಸಂತು ಅವರೆಲ್ಲರೂ ಬಲವಂತವಾಗಿ ಪಾಸ್‌ ಒಂದನ್ನು ಡ್ರೋನ್‌ ಅವರಿಂದ ಕಸಿದುಕೊಂಡರು. ಇದಾದ ಬಳಿಕ ಬಿಗ್‌ ಬಾಸ್‌ ಮತ್ತೆ ಅನೌನ್ಸ್‌ ಮಾಡಿದರು. ʻʻಈಗಾಗಲೇ ಘೋಷಿಸಿದ್ದಾಗಿದೆ, ಒಂದು ವೇಳೆ ಪಾಸ್‌ ಬೇಕಾದರೆ ವಾರಸುದಾರರಿಗೆ ಹಿಂತಿರುಗಿಸಬೇಕುʼʼ ಎಂದು ಬಿಗ್‌ ಬಾಸ್‌ ಆದೇಶ ನೀಡಿದರು.

ಯಾರೆಲ್ಲ ಅಧಿಕಾರ ಪಡೆದುಕೊಂಡ್ರು?

ಇದರಂತೆ ಕಾರ್ತಿಕ್‌ ಅವರು ಮೈಕಲ್‌ ಅವರಿಗೆ ನಾಮಿನೇಶನ್‌ ಮಾಡುವ ಅಧಿಕಾರವನ್ನು ನೀಡಿದರು. ಕಾರಣವನ್ನು ನೀಡಿ ʻʻನನಗೆ ಈ ಪಾಸ್‌ ತೆಗೆದುಕೊಳ್ಳಲು ಮೈಕಲ್‌ ಸಹಾಯ ಮಾಡಿದರು. ಅವರ ನಿರ್ಧಾರ ಕೂಡ ಅನ್‌ಬೈಯಾಸ್ಡ್‌ ಆಗಿರುತ್ತೆʼʼ ಎಂದರು.

ಪ್ರತಾಪ್‌ ಎರಡು ಆಯ್ಕೆಯಲ್ಲಿ ಎರಡನೇ ಆಯ್ಕೆ ಮಾಡಿಕೊಂಡರು. ʻʻನಮ್ರತಾʼʼ ಅವರನ್ನು ಮೊದಲಿಗೆ ಸೆಲೆಕ್ಟ್‌ ಮಾಡಿದರು. ಮೊದಲ ದಿನದಂದಲೂ ನನಗೆ ಸಪೋರ್ಟ್‌ ಮಾಡಿದ್ದಾರೆ. ಸಂಗೀತಾ ಅವರಿಗೂ ನಾಮಿನೇಟ್‌ ಮಾಡುವ ಅಧಿಕಾರ ನೀಡಿದರು. ಬಳಿಕ ಸಿರಿ, ತನಿಷಾ, ಭಾಗ್ಯಶ್ರೀ ಅವರಿಗೆ ನಾಮಿನೇಟ್‌ ಮಾಡಲು ಅಧಿಕಾರ ನೀಡಿದರು.

ಈ ಮೂಲಕ ಈ ವಾರ ನಾಮಿನೇಶನ್‌ ಮಾಡಲು ಆಧಿಕಾರ ಹೊಂದಿದವರು ಪ್ರತಾಪ್‌, ಕಾರ್ತಿಕ್‌, ಮೈಕಲ್‌, ನಮ್ರತಾ, ಸಂಗೀತಾ, ಸಿರಿ, ತನಿಷಾ, ಭಾಗ್ಯಶ್ರೀ ಆದರು.

ಬಿಗ್​ಬಾಸ್ ಕನ್ನಡ ಕಲರ್ಸ್ ವಾಹಿನಿಯಲ್ಲಿ ಪ್ರತಿರಾತ್ರಿ 9:30ಕ್ಕೆ ಹಾಗೂ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Bigg Boss OTT 3: ಅನಿಲ್​ ಕಪೂರ್ ʻವರ್ಸ್ಟ್‌ ನಿರೂಪಕʼ ಎಂದ ನೆಟ್ಟಿಗರು ; ಬೇಸತ್ತ ವೀಕ್ಷಕರು!

Bigg Boss OTT 3: ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕುತ್ತಿದ್ದಾರೆ. ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ,ಮತ್ತೆ ಹೋಸ್ಟ್ ಆಗಿ ತೆಗೆದುಕೊಳ್ಳಬೇಡಿ ಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Bigg Boss OTT 3 Anil Kapoor as the worst ever host of Bigg Boss
Koo

ಬೆಂಗಳೂರು: ಈ ವರ್ಷ, ನಟ ಅನಿಲ್ ಕಪೂರ್ ಅವರು ಸಲ್ಮಾನ್ ಖಾನ್ ಬದಲಿಗೆ ಬಿಗ್ ಬಾಸ್ ಹಿಂದಿ OTT ಯ (Bigg Boss OTT 3) ಮೂರನೇ ಸೀಸನ್‌ನ ನಿರೂಪಕರಾಗಿದ್ದಾರೆ. ಮೊದಲಿಗೆ ಅನಿಲ್‌ ಕಪೂರ್‌ ಎಂದು ಅನೌನ್ಸ್‌ ಆದಾಗ ಪ್ರೇಕ್ಷಕರಲ್ಲಿ ನಿರೀಕ್ಷೆ ಇದ್ದಿತ್ತು. ಆದರೀಗ ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕುತ್ತಿದ್ದಾರೆ. ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ,ಮತ್ತೆ ಹೋಸ್ಟ್ ಆಗಿ ತೆಗೆದುಕೊಳ್ಳಬೇಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಇದೀಗ ನೆಟ್ಟಿಗರು ʻʻಬಿಗ್ ಬಾಸ್‌ನ ಅತ್ಯಂತ ಕೆಟ್ಟ ಹೋಸ್ಟ್ʼʼಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಹೀಗೆ ಬರೆದುಕೊಂಡಿದ್ದಾರೆ. ʻʻಅನಿಲ್‌ ಕಪೂರ್‌ ಅವರದ್ದು ಫೇಕ್‌ ನಗು, ಫೇಕ್‌ ಕೋಪ,ಒಟ್ಟಾರೆ ಫೇಕ್‌ ವ್ಯಕ್ತಿತ್ವ ಹೊಂದಿರುವವರುʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻನಾನು ಬಿಗ್ ಬಾಸ್ ಅನ್ನು ಹಲವು ವರ್ಷಗಳಿಂದ ನೋಡಿಕೊಂಡು ಬರುತ್ತಿದ್ದೆ. ಇದೇ ಮೊದಲ ಬಾರಿ ವೀಕೆಂಡ್‌ನಲ್ಲಿ ಕಾರ್ಯಕ್ರಮ ನೋಡುತ್ತ ಮಧ್ಯಕ್ಕೆ ಎದ್ದು ಹೋದೆ. ಈ ಸೀಸನ್ ಹೋಸ್ಟ್ ಮತ್ತು ಸ್ಪರ್ಧಿಗಳು ಸರಿಯಿಲ್ಲ. ದೇವರಿಗೆ ಧನ್ಯವಾದ. ಅಂತೂ ಮುಂದಿನ ವಾರ ಸೀಸನ್‌ ಕೊನೆಗೊಳ್ಳುತ್ತದೆʼʼಎಂದು ಕಮೆಂಟ್‌ ಮಾಡಿದ್ದಾರೆ. “ಅನಿಲ್ ಕಪೂರ್ ಒಬ್ಬ ಒಳ್ಳೆಯ ನಟ. ಅವರು ಹೋಸ್ಟ್ ಆದರೆ ವಿಚಿತ್ರವಾಗಿ ಕಾಣುತ್ತಾರೆʼʼಎಂದು ಬರೆದುಕೊಂಡಿದ್ದಾರೆ

ಕನ್ನಡದಲ್ಲಿ ನಟ ಸುದೀಪ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಕೂಡ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ಅನಿಲ್​ ಕಪೂರ್​ ಅವರು ಅತಿ ಕಳಪೆ ನಿರೂಪಕ ಎಂಬ ಟೀಕೆಗೆ ಒಳಗಾಗಿದ್ದಾರೆ. ಈಗ ಹಿಂದಿ ‘ಬಿಗ್​ ಬಾಸ್​ ಒಟಿಟಿ 3’ ಕೊನೇ ಹಂತ ತಲುಪಿದೆ. ಶೀಘ್ರದಲ್ಲೇ ಇದರ ಫಿನಾಲೆ ನಡೆಯಲಿದೆ. ಇಷ್ಟು ದಿನಗಳ ಕಾಲ ಅನಿಲ್​ ಕಪೂರ್​ ಅವರ ನಿರೂಪಣೆಯನ್ನು ನೋಡಿದ ವೀಕ್ಷಕರು ಬೇಸತ್ತಿದ್ದಾರೆ. ಇನ್ನೆಂದೂ ಅನಿಲ್​ ಕಪೂರ್​ ಅವರು ಬಿಗ್​ ಬಾಸ್​ ನಿರೂಪಣೆ ಮಾಡುವುದು ಬೇಡ ಎಂದು ಜನರು ತಾಕೀತು ಮಾಡುತ್ತಿದ್ದಾರೆ.

ಇದನ್ನೂ ಓದಿ: Bigg Boss OTT 3: ‘ಅತ್ತಿಗೆ, ನೋಡಲು ಬ್ಯೂಟಿಫುಲ್‌’ ಅಂದಿದ್ದೇ ತಡ ಕೆನ್ನೆಗೆ ಬಾರಿಸಿಯೇ ಬಿಟ್ಟ ಇಬ್ಬರು ಹೆಂಡತಿಯರ ಮುದ್ದಿನ ಗಂಡ!

ಈ ಶೋನಲ್ಲಿ ರಣವೀರ್ ಶೋರೆ, ಲವಕೇಶ್ ಕಟಾರಿಯಾ, ಸನಾ ಸುಲ್ತಾನ್, ಸನಾ ಮಕ್ಬುಲ್, ಸಾಯಿ ಕೇತನ್ ರಾವ್, ಶಿವನಿ ಕುಮಾರಿ, ವಿಶಾಲ್ ಪಾಂಡೆ, ನೇಜಿ, ಅರ್ಮಾನ್ ಮಲಿಕ್ ಮತ್ತು ಕೃತಿಕಾ ಮಲಿಕ್ ಬಿಗ್‌ ಬಾಸ್‌ ಸ್ಪರ್ಧಿಗಳು.

Continue Reading

ಬಿಗ್ ಬಾಸ್

Bigg Boss Marathi 5: ಶುರುವಾಯ್ತು ಮರಾಠಿ ಬಿಗ್​ಬಾಸ್ 5; ಈ ಬಾರಿ ರಿತೇಶ್ ದೇಶ್​ಮುಖ್ ನಿರೂಪಕ!

Bigg Boss Marathi 5: ಬಿಗ್ ಬಾಸ್ ಮರಾಠಿ 5 ಅನ್ನು ಘೋಷಿಸಿದಾಗಿನಿಂದ ಹೊಸ ಸೀಸನ್‌ನಲ್ಲಿ ಯಾರು ಭಾಗವಹಿಸುತ್ತಾರೆ ಎಂಬುದರ ಕುರಿತು ಊಹಾಪೋಹಗಳಿವೆ. ಇಲ್ಲಿಯವರೆಗೆ, ಕೋಕನ್ ಹಾರ್ಟೆಡ್ ಗರ್ಲ್ ಎಂದೂ ಕರೆಯಲ್ಪಡುವ ಸಾಮಾಜಿಕ ಮಾಧ್ಯಮದ ಪ್ರಭಾವಿ ಅಂಕಿತಾ ವಾಲಾವಲ್ಕರ್ ಕಾರ್ಯಕ್ರಮದ ಮೊದಲ ಸ್ಪರ್ಧಿ ಎಂದು ದೃಢಪಡಿಸಲಾಗಿದೆ ಎಂದು ವರದಿಗಳಿವೆ.

VISTARANEWS.COM


on

Bigg Boss Marathi 5 premiere ritesh deshmukh co star shubhankar tawde
Koo

ಬೆಂಗಳೂರು: ಬಿಗ್ ಬಾಸ್ ಮರಾಠಿ 5 ಗ್ರ್ಯಾಂಡ್ ಪ್ರೀಮಿಯರ್‌ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮರಾಠಿಯ ನಾಲ್ಕು ಸೀಸನ್‌ಗಳ ಯಶಸ್ಸಿನ ನಂತರ, ತಯಾರಕರು ಬಿಗ್ ಬಾಸ್ ಮರಾಠಿ 5 ನೊಂದಿಗೆ ಬಂದಿದ್ದಾರೆ. ಹಿಂದಿನ ಸೀಸನ್‌ಗಳಿಗಿಂತ ಭಿನ್ನವಾಗಿ, ಬಿಗ್ ಬಾಸ್ OTT 5 (Bigg Boss Marathi 5) ಅನ್ನು ರಿತೇಶ್ ದೇಶ್‌ಮುಖ್ ಅವರು ಹೋಸ್ಟ್ ಮಾಡಲಿದ್ದಾರೆ. ತೆಲುಗು ಬಿಗ್​ಬಾಸ್ ಇನ್ನೇನು ಕೆಲವು ದಿನಗಳಲ್ಲಿ ಆರಂಭವಾಗಲಿದೆ. ಹಿಂದಿ ಬಿಗ್​ಬಾಸ್​ಗೆ ಸಿದ್ಧತೆ ನಡೆಯುತ್ತಿದೆ. ಕನ್ನಡದಲ್ಲಿಯೂ ಸಿದ್ಧತೆ ಆರಂಭವಾಗಿದೆ. ಇದರ ನಡುವೆ ಮರಾಠಿ ಬಿಗ್​ಬಾಸ್​ ಇಂದಿನಿಂದ ಆರಂಭವಾಗುತ್ತಿದೆ.

ಮರಾಠಿ ಬಿಗ್​ಬಾಸ್ ಸೀಸನ್ 5 ಇಂದು (ಜುಲೈ 28) ಆರಂಭವಾಗುತ್ತಿದ್ದು, ಕಾರ್ಯಕ್ರಮದ ಪ್ರೋಮೋಗಳು, ಸ್ಪರ್ಧಿಗಳ ಪಟ್ಟಿ ಈಗಾಗಲೇ ವೈರಲ್ ಆಗುತ್ತಿದೆ. ವಿಶೇಷವೆಂದರೆ ಮರಾಠಿ ಬಿಗ್​ಬಾಸ್ ಆರಂಭವಾದಾಗಿನಿಂದಲೂ ಇದೇ ಮೊದಲ ಬಾರಿಗೆ ಶೋನ ನಿರೂಪಕರು ಬದಲಾಗಿದ್ದು, ಕಿಚ್ಚ ಸುದೀಪ್​ರ ಆಪ್ತ ಗೆಳೆಯ ರಿತೇಶ್ ದೇಶ್​ಮುಖ್​ ಈ ಬಾರಿ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

ಬಿಗ್ ಬಾಸ್ ಮರಾಠಿ 5 ಅನ್ನು ಘೋಷಿಸಿದಾಗಿನಿಂದ ಹೊಸ ಸೀಸನ್‌ನಲ್ಲಿ ಯಾರು ಭಾಗವಹಿಸುತ್ತಾರೆ ಎಂಬುದರ ಕುರಿತು ಊಹಾಪೋಹಗಳಿವೆ. ಇಲ್ಲಿಯವರೆಗೆ, ಕೋಕನ್ ಹಾರ್ಟೆಡ್ ಗರ್ಲ್ ಎಂದೂ ಕರೆಯಲ್ಪಡುವ ಸಾಮಾಜಿಕ ಮಾಧ್ಯಮದ ಪ್ರಭಾವಿ ಅಂಕಿತಾ ವಾಲಾವಲ್ಕರ್ ಕಾರ್ಯಕ್ರಮದ ಮೊದಲ ಸ್ಪರ್ಧಿ ಎಂದು ದೃಢಪಡಿಸಲಾಗಿದೆ ಎಂದು ವರದಿಗಳಿವೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಬಾರಿ ನಿರೂಪಕರನ್ನು ಬದಲಾಯಿಸಿದ್ದು, ಶೋಗೆ ಇನ್ನಷ್ಟು ಮಾದಕತೆ, ಗ್ಲಾಮರ್ ತುಂಬುವ ಪ್ರಯತ್ನ ಮಾಡಲಾಗುತ್ತಿದೆ. ಸುದೀಪ್ ನಟಿಸಿದ ಮೊದಲ ಹಿಂದಿ ಸಿನಿಮಾ ‘ರಣ್’ನಲ್ಲಿ ರಿತೇಶ್ ದೇಶ್​ಮುಖ್ ಸಹ ನಾಯಕನಾಗಿ ನಟಿಸಿದ್ದರು. ಆ ಸಿನಿಮಾದಲ್ಲಿ ಅಮಿತಾಭ್‌ ಬಚ್ಚನ್ ಸಹ ನಟಿಸಿದ್ದರು. ಈ ಹಿಂದೆ ಮರಾಠಿ ಬಿಗ್​ಬಾಸ್ ಶೋ ಅನ್ನು ಹಿರಿಯ ನಟ, ನಿರ್ದೇಶಕ ಮಹೇಶ್ ಮಾಂಜ್ರೆಕರ್ ನಿರೂಪಣೆ ಮಾಡುತ್ತಿದ್ದರು.

ಬಿಗ್ ಬಾಸ್ ಮರಾಠಿ 5 ರಲ್ಲಿ ಶುಭಂಕರ್ ಮತ್ತು ಅಂಕಿತಾ ಅವರಲ್ಲದೆ ಅರ್ಬಾಜ್ ಪಟೇಲ್, ವಿವೇಕ್ ಸಾಂಗ್ಲೆ, ಚೇತನ್ ವಡ್ನೆರೆ ಮತ್ತು ವರ್ಷಾ ಉಸ್ಗಾಂವ್ಕರ್ ಕೂಡ ಭಾಗವಹಿಸಲಿದ್ದಾರೆ ಎಂಬ ವದಂತಿಗಳಿವೆ. ಆದರೆ, ಈ ಬಗ್ಗೆ ಅಧಿಕೃತ ಪ್ರಕಟಣೆ ಇನ್ನೂ ಹೊರಬೀಳಬೇಕಿದೆ. ಜುಲೈ 28 ರಂದು ರಾತ್ರಿ 9 ಗಂಟೆಗೆ ಕಲರ್ಸ್ ಮರಾಠಿ ಮತ್ತು ಜಿಯೋ ಸಿನಿಮಾದಲ್ಲಿ ಪ್ರಸಾರವಾಗಲಿದೆ.

Continue Reading

ಬಿಗ್ ಬಾಸ್

Drone Prathap: ನುಡಿದಂತೆ ನಡೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್; ಸ್ವಂತ ಹಣದಿಂದ ವೃದ್ಧೆಗೆ ಕಣ್ಣು ಆಪರೇಷನ್ !

Drone Prathap: , ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ.

VISTARANEWS.COM


on

Drone Prathap Eye surgery for an old woman with her own money
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಆರ್ಥಿಕವಾಗಿ ಹಿಂದುಳಿದಿದ್ದು, ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವೆ ಎಂದು ಡ್ರೋನ್ ಪ್ರತಾಪ್ ಅವರು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದಾರೆ. ಅಜ್ಜಿಯೋರ್ವರಿಗೆ ಆಪರೇಶನ್ ಮಾಡಿಸಿದ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಮುಂಚೆ ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದರು. ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದರು.

ಅದರಂತೆ ಇಬ್ಬರು ಮಕ್ಕಳಿದ್ದರೂ ಕೂಡ ಗುಡಿಸಿಲಿನಲ್ಲಿ ಇದ್ದುಕೊಂಡು ವಾಸ ಮಾಡುತ್ತಿದ್ದ ಬಡ ಅಜ್ಜಿಯ ಕಣ್ಣಿನ ಆಪರೇಶನ್ ಮಾಡಿಸಿದ್ದಾರೆ. ಆ ಅಜ್ಜಿಯು ಪ್ರತಾಪ್ ಅವರನ್ನು ಹರಿಸಿದ್ದು, ನನಗೆ ಈಗ ಸರಿಯಾಗಿ ಕಣ್ಣು ಕಾಣುತ್ತಿದೆ ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಡ್ರೋನ್ ಪ್ರತಾಪ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ಇಷ್ಟುದಿನ ನನಗೆ ಒಬ್ಬ ಮೊಮ್ಮಗ ಇದ್ದನು, ಈಗ ಇನ್ನೊಬ್ಬ ಮೊಮ್ಮಗನಾಗಿ ನೀನು ಇದ್ದೀಯಾ. ನನಗೆ ನಿಜವಾಗಿಯೂ ಖುಷಿಯಾಗಿದೆ, ನಿನಗೆ ದೇವರು ಆಯುಷ್ಯ, ಆರೋಗ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಈ ಎಲ್ಲದಕ್ಕೂ ಮುಂಚೆ ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

ಬಿಗ್ ಬಾಸ್

Bigg Boss Kannada: ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ಹೋಗ್ತಾರಾ? ನಟಿ ಹೇಳಿದ್ದೇನು?

Bigg Boss Kannada: ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

VISTARANEWS.COM


on

Bigg Boss Kannada paru fame mokshita pai participate season 11
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು ಬಿಗ್‌ಬಾಸ್‌ಗೆ ಬರಲಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು. ಈ ಬಗ್ಗೆ ಸ್ವತಃ ನಟಿಯೇ ಮಾಧ್ಯಮವೊಂದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.

ಪಾರು ಧಾರಾವಾಹಿ ಮುಕ್ತಾಯದ ನಂತರ ಮೋಕ್ಷಿತಾ ಯಾವುದೇ ಪ್ರಾಜೆಕ್ಟ್‌ಗಳನ್ನು ಒಕೆ ಮಾಡದೇ ಕುಟುಂಬಸ್ಥರ ಜತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಮೋಕ್ಷಿತಾಗೆ ಬಿಗ್​ಬಾಸ್​ಮನೆ ಹೋಗುತ್ತಾರೆ ಎನ್ನಲಾಗಿತ್ತು. ಇದೀಗ ನಟಿ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯಿ ನೀಡಿ ʻʻಬಿಗ್ ಬಾಸ್ ಮನೆಗೆ ಹೋಗುವ ಯಾವ ಆಲೋಚನೆ ಸದ್ಯಕ್ಕೆ ನನಗೆ ಇಲ್ಲ . ನನಗೆ ಯಾವುದೇ ಕರೆ ಬಂದಿಲ್ಲ. ಯಾರೂ ಕೂಡ ಚರ್ಚೆ ಮಾಡಿಲ್ಲʼʼ ಎಂದಿದ್ದಾರೆ.

ಬಿಗ್‌ಬಾಸ್‌ನಲ್ಲಿ ಬೃಂದಾವನ ಧಾರಾವಾಹಿ ನಟ ವರುಣ್ ಆರಾಧ್ಯ, ಯುಟ್ಯೂಬರ್ ವರ್ಷಾ ಕಾವೇರಿ, ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ಮಜಾಭಾರತ ಖ್ಯಾತಿಯ ರಾಘವೇಂದ್ರ, ನಟ ಸುನೀಲ್ ರಾವ್, ಭವ್ಯಾ ಗೌಡ, ರೀಲ್ಸ್ ರೇಷ್ಮಾ ಹೀಗೆ ಒಂದಷ್ಟು ಸ್ಪರ್ಧಿಗಳ ಹೆಸರು ಕೇಳಿ ಬರುತ್ತಿದೆ.

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಇದನ್ನೂ ಓದಿ: Bigg Boss Kannada: ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಯಾವಾಗಿನಿಂದ ಶುರು? ಸ್ಪರ್ಧಿಗಳು ಇವರೇನಾ?

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಾರಿ ಯಾರು ಯಾರು ಬರಲಿದ್ದಾರೆ ಎಂದು ಕಾದು ನೋಡಬೇಕಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸಾಕಷ್ಟು ವಿವಾದಗಳು ಸೃಷ್ಟಿ ಆಗಿತ್ತು. ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕಾರಣಕ್ಕೆ ವರ್ತೂರು ಸಂತೋಷ್ ಅವರು ಒಂದಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು. ತನಿಷಾ ಕುಪ್ಪಂಡ ಅವರು ಒಂದು ಸಮುದಾಯಕ್ಕೆ ಬೇಸರ ತರಿಸುವ ಮಾತಾಡಿದರು ಎಂಬ ದೂರು ಕೇಳಿ ಬಂತು.

Continue Reading
Advertisement
Paris Olympics
ಕ್ರೀಡೆ6 mins ago

Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಬೆಲೆಯ ಕಾರು

Wayanad Landslide
ದೇಶ7 mins ago

Wayanad Landslide: ವಯನಾಡಿನ ಭೀಕರ ದೃಶ್ಯ ಸೆರೆ ಹಿಡಿದ ಇಸ್ರೋ; ಭೂಕುಸಿತಕ್ಕೂ ಮುನ್ನ ಮತ್ತು ನಂತರ ಫೋಟೋ ರಿಲೀಸ್‌

14 hours work it jobs
ಪ್ರಮುಖ ಸುದ್ದಿ13 mins ago

14 Hours Work: ಒಂದೆಡೆ ಐಟಿ ಉದ್ಯೋಗಿಗಳಿಂದ ಬೃಹತ್ ಪ್ರತಿಭಟನೆ, ಇನ್ನೊಂದೆಡೆ ಐಟಿ ಕಂಪನಿಗಳ ಮುಂದೆ ಕೆಲಸಕ್ಕಾಗಿ ಮೈಲುಗಟ್ಟಲೆ ಕ್ಯೂ!

India vs Sri Lanka
ಕ್ರೀಡೆ35 mins ago

India vs Sri Lanka: ಲಂಕಾ ಸರಣಿಯಲ್ಲಿ ವಿಶೇಷ ದಾಖಲೆ ಮೇಲೆ ಕಣ್ಣಿಟ್ಟ ಕೊಹ್ಲಿ, ರೋಹಿತ್​

police firing hubli robber
ಕ್ರೈಂ55 mins ago

Police Firing: ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

Phone Storage Issue
ಗ್ಯಾಜೆಟ್ಸ್1 hour ago

Phone Storage Issue: ನಿಮ್ಮ ಮೊಬೈಲ್ ಸ್ಟೋರೇಜ್ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ!

IND vs SL: When and where to watch ODI, squads, predicted XI, venues
ಕ್ರೀಡೆ1 hour ago

IND vs SL: ಇಂದು ಭಾರತ-ಲಂಕಾ ಮೊದಲ ಏಕದಿನ ಹಣಾಹಣಿ; ಎಷ್ಟು ಗಂಟೆಗೆ ಪಂದ್ಯ ಆರಂಭ?

NEET-UG 2024
ದೇಶ1 hour ago

NEET UG 2024: ನೀಟ್ ಅಕ್ರಮ; ಇಂದು ಸುಪ್ರೀಂಕೋರ್ಟ್‌ನಿಂದ ಮಹತ್ವದ ತೀರ್ಪು-CBI ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ

KEA exams time table
ಪ್ರಮುಖ ಸುದ್ದಿ2 hours ago

KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

instagram love story
ಕ್ರೈಂ2 hours ago

Instagram Love Story: ಮೂವರು ಗಂಡರ ಮುದ್ದಿನ ಹೆಂಡತಿ ಮೇಲೆ 2ನೇ ಗಂಡನ ದೂರು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ20 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ21 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ21 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌