Rajyotsava Awards: ವಿಜ್ಞಾನಿಯಿಂದ ಪತ್ರಿಕಾ ವಿತರಕರವರೆಗೆ; ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ - Vistara News

ಕನ್ನಡ ರಾಜ್ಯೋತ್ಸವ

Rajyotsava Awards: ವಿಜ್ಞಾನಿಯಿಂದ ಪತ್ರಿಕಾ ವಿತರಕರವರೆಗೆ; ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿ

Rajyotsava Awards : ಕನ್ನಡದ ಅಭಿವೃದ್ಧಿಗಾಗಿ, ಕನ್ನಡಿಗರ ಏಳ್ಗೆಗಾಗಿ, ಭಾಷೆಗಾಗಿ ದುಡಿದ 68 ಸಾಧಕರು ಮತ್ತು 10 ಸಂಸ್ಥೆಗಳಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.

VISTARANEWS.COM


on

V somanath and Javarappa
ಇಸ್ರೋ ಅಧ್ಯಕ್ಷ ಡಾ. ಸೋಮನಾಥ್‌ ಮತ್ತು ಮೈಸೂರಿನ ಪತ್ರಿಕಾ ವಿತರಕ ಜವರಪ್ಪ ಸೇರಿ 68 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ (Kannada Rajyotsava) ಸಂದರ್ಭದಲ್ಲಿ 68 ಮಂದಿ ಸಾಧಕರು ಮತ್ತು 10 ಕನ್ನಡ ಪರ ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ (Rajyotsava Awards) ಘೋಷಿಸಲಾಗಿದೆ. ಸಂಗೀತ-ನೃತ್ಯ, ಚಲನಚಿತ್ರ, ರಂಗಭೂಮಿ, ಶಿಲ್ಪಕಲೆ/ಚಿತ್ರಕಲೆ/ಕರಕುಶಲ, ಜಾನಪದ, ಸಮಾಜಸೇವೆ, ಆಡಳಿತ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ಕ್ರೀಡೆ, ನ್ಯಾಯಾಂಗ, ಪರಿಸರ, ಸಂಕೀರ್ಣ, ಮಾಧ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ, ಹೊರನಾಡು, ಸ್ವಾತಂತ್ರ್ಯ ಹೋರಾಟಗಾರರು ಹೀಗೆ 18 ಕ್ಷೇತ್ರಗಳಲ್ಲಿ ಒಟ್ಟು 68 ಮಂದಿ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ವಿಜೇತರ ಪಟ್ಟಿಯಲ್ಲಿ ವಿಜ್ಞಾನಿಗಳು, ಕಲಾವಿದರು, ಸಂಶೋಧಕರು, ಜನ ಸಾಮಾನ್ಯರು ಹೀಗೆ ನಾನಾ ವರ್ಗದ ಜನರು ಇದ್ದಾರೆ. ಒಬ್ಬ ಪತ್ರಿಕಾ ವಿತಕರರಿಗೂ ಈ ಬಾರಿಯ ಪ್ರಶಸ್ತಿ ಸಂದಿರುವುದು ವಿಶೇಷ.

Kannada Rajyothsava awards 2023

ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ. ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಇಡಿ ವಿತರಕ ಸಮುದಾಯವನ್ನು, ಈ ಸಮುದಾಯದ ಕಾರ್ಯಕ್ಷಮತೆ ಮತ್ತು ಶ್ರಮವನ್ನು ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ ಗುರುತಿಸಿದೆ, ಗೌರವಿಸಿದೆ. ತುಮಕೂರಿನಲ್ಲಿ ಇತ್ತೀಚಿಗೆ ಜರುಗಿದ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ್ದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು, “ರಾಜ್ಯ ಸರ್ಕಾರದ ಪ್ರಶಸ್ತಿಗಳಲ್ಲಿ ಪತ್ರಿಕಾ ವಿತರಕರನ್ನೂ ಪರಿಗಣಿಸಲಾಗುವುದು” ಎನ್ನುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಪ್ರಶಸ್ತಿ ವಿಜೇತರ ಪೂರ್ಣ ಪಟ್ಟಿ ಇಲ್ಲಿದೆ

ಸಂಗೀತ- ನೃತ್ಯ

1. ಡಾ ನಯನ್ ಎಸ್​ ಮೋರೆ (ಬೆಂಗಳೂರು)
2. ನೀಲಾ ಎಮ್​ ಕೊಡ್ಲಿ (ಧಾರವಾಡ)
3. ಶಬ್ಬೀರ್ ಅಹಮದ್​ (ಬೆಂಗಳೂರು)
4. ಡಾ ಎಸ್​ ಭಾಳೇಶ ಭಜಂತ್ರಿ (ಬೆಳಗಾವಿ)

ಚಲನಚಿತ್ರ

1. ಡಿಂಗ್ರಿ ನಾಗರಾಜ್​ (​ಬೆಂಗಳೂರು)
2. ಬಿ. ಜನಾರ್ಧನ (ಬ್ಯಾಂಕ್ ಜನಾರ್ದನ)

ರಂಗಭೂಮಿ

1. ಎ.ಜಿ ಚಿದಂಬರ ರಾವ್ ಜಂಬೆ (ಶಿವಮೊಗ್ಗ)
2. ಪಿ ಗಂಗಾಧರ ಸ್ವಾಮಿ (ಮೈಸೂರು)
3. ಎಚ್ ಬಿ ಸರೊಜಮ್ಮ (ಧಾರವಾಡ)
4. ತಯ್ಯಬ್​ಖಾನ್​ ಎಂ ಇನಾಮದಾರ( ಬಾಗಲಕೋಟೆ)
5. ಡಾ ವಿಶ್ವನಾಥ್ ವಂಶಾಕೃತ ಮಠ (ಬಾಗಲಕೋಟೆ)
6. ಪಿ ತಿಪ್ಪೇಸ್ವಾಮಿ (ಚಿತ್ರದುರ್ಗ)

ಶಿಲ್ಪ ಕಲೆ/ ಚಿತ್ರ ಕಲೆ/ ಕರಕುಶಲ

1.ಟಿ ಶಿವಶಂಕರ್​ (ದಾವಣಗೆರೆ)
2.ಕಾಳಪ್ಪ ವಿಶ್ವಕರ್ಮ (ರಾಯಚೂರು)
3.ಮಾರ್ಥಾ ಜಾಕಿಮೊವಿಚ್​ (ಬೆಂಗಳೂರು)
4.ಪಿ ಗೌರಯ್ಯ (ಮೈಸೂರು)

ಜಾನಪದ

    1. ಹುಸೇನಾಬಿ ಬುಡೆನ್‌ ಸಾಬ್‌ ಸಿದ್ದಿ- ಉತ್ತರ ಕನ್ನಡ
    2. ಶಿವಂಗಿ ಶಣ್ಮರಿ- ದಾವಣಗೆರೆ
    3. ಮಹದೇವು- ಮೈಸೂರು
    4. ನರಸಪ್ಪಾ- ಬೀದರ್‌
    5. ಶಕುಂತಲಾ ದೇವಲಾನಾಯಕ- ಕಲಬುರಗಿ
    6. ಎಚ್‌.ಕೆ. ಕಾರಮಂಚಪ್ಪ- ಬಳ್ಳಾರಿ
    7. ಶಂಭು ಬಳಿಗಾರ- ಗದಗ
    8. ವಿಭೂತಿ ಗುಂಡಪ್ಪ-ಕೊಪ್ಪಳ
    9. ಚೌಡಮ್ಮ-ಚಿಕ್ಕಮಗಳೂರು

    ಸಮಾಜಸೇವೆ

    1. ಹುಚ್ಚಮ್ಮ ಬಸಪ್ಪ ಚೌದ್ರಿ- ಕೊಪ್ಪಳ
    2. ಚಾರ್ಮಾಡಿ ಹಸನಬ್ಬ- ದಕ್ಷಿಣ ಕನ್ನಡ
    3. ಕೆ ರೂಪ್ಲಾ ನಾಯಕ್‌- ದಾವಣಗೆರೆ
    4. ನಿಜಗುಣಾನಂದ ಮಹಾಸ್ವಾಮಿಗಳು, ನಿಷ್ಕಲ ಮಂಟಪ- ಬೆಳಗಾವಿ
    5. ನಾಗರಾಜು.ಜಿ- ಬೆಂಗಳೂರು

    ಆಡಳಿತ

    1. ಜಿ.ವಿ ಬಲರಾಮ್‌- ತುಮಕೂರು

    ವೈದ್ಯಕೀಯ

    1. ಡಾ. ಸಿ ರಾಮಚಂದ್ರ- ಬೆಂಗಳೂರು
    2. ಡಾ. ಪ್ರಶಾಂತ್‌ ಶೆಟ್ಟಿ- ದಕ್ಷಿಣ ಕನ್ನಡ

    ಸಾಹಿತ್ಯ

    1. ಪ್ರೊ. .ಸಿ. ನಾಗಣ್ಣ- ಚಾಮರಾಜನಗರ
    2. ಸುಬ್ಬು ಹೊಲೆಯಾರ್‌ – ಹಾಸನ
    3. ಸತೀಶ ಕುಲಕರ್ಣಿ- ಹಾವೇರಿ
    4.ಲಕ್ಷ್ಮೀಪತಿ ಕೋಲಾರ- ಕೋಲಾರ
    5. ಪರಪ್ಪ ಗುರುಪಾದಪ್ಪ ಸಿದ್ಧಾಪುರ- ವಿಜಯಪುರ
    6.ಡಾ.ಕೆ. ಷರೀಫಾ – ಬೆಂಗಳೂರು

    ಶಿಕ್ಷಣ

    1.ರಾಮಪ್ಪ (ರಾಮಣ್ಣ) ಹವಳೆ – ರಾಯಚೂರು
    2. ಕೆ. ಚಂದ್ರಶೇಖರ್‌ – ಕೋಲಾರ
    3. ಕೆ.ಟಿ. ಚಂದು- ಮಂಡ್ಯ

    ಕ್ರೀಡೆ

    1. ಕುಮಾರಿ ದಿವ್ಯಾ ಟಿ.ಎಸ್.-‌ ಕೋಲಾರ
    2. ಅದಿತಿ ಅಶೋಕ್‌ – ಬೆಂಗಳೂರು
    3. ಅಶೊಕ್‌ ಗದಿಗೆಪ್ಪ ಎಣಗಿ – ಧಾರವಾಡ

    ನ್ಯಾಯಾಂಗ

    1.ಜ.ವಿ. ಗೋಪಾಲಗೌಡ- ಚಿಕ್ಕಬಳ್ಳಾಪುರ

    ಪರಿಸರ

    1. ಸೋಮನಾಥರೆಡ್ಡಿ ಪೂರ್ಮಾ – ಕಲಬುರಗಿ
    2. ದ್ಯಾವನಗೌಡ ಟಿ. ಪಾಟೀಲ- ಧಾರವಾಡ
    3. ಶಿವರೆಡ್ಡಿ ಹನುಮರೆಡ್ಡಿ ವಾಸನ- ಬಾಗಲಕೋಟೆ

    ಸಂಕೀರ್ಣ

    1. ಎಂ.ಎಂ.ಮದರಿ- ವಿಜಯಪುರ
    2. ಹಾಜಿ ಹಬ್ದುಲ್ಲಾ ಪರ್ಕಳ- ಉಡುಪಿ
    3. ಮಿಮಿಕ್ರಿ ದಯಾನಂದ್-‌ ಮೈಸೂರು
    4. ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್-‌ ಮೈಸೂರು
    5. ಲೆ.ಜ. ಕೊಡನ ಪೂವಯ್ಯ ಕಾರ್ಯಪ್ಪ- ಕೊಡಗು

    ಮಾಧ್ಯಮ ಕ್ಷೇತ್ರ

    1.ದಿನೇಶ್‌ ಅಮೀನ್‌ ಮಟ್ಟು -ದಕ್ಷಿಣ ಕನ್ನಡ
    2. ಜವರಪ್ಪ: ಮೈಸೂರು
    3. ಮಾಯಾ ಶರ್ಮ: ಬೆಂಗಳೂರು
    4. ರಫೀ ಭಂಡಾರಿ: ವಿಜಯಪುರ

    ಕ್ಷೇತ್ರ: ವಿಜ್ಞಾನ/ತಂತ್ರಜ್ಞಾನ

    1.ಎಸ್‌ ಸೋಮನಾಥನ್‌(ಇಸ್ರೋ ಅಧ್ಯಕ್ಷರು): ಬೆಂಗಳೂರು
    2.ಪ್ರೊ. ಗೋಪಾಲನ್‌ ಜಗದೀಶ್‌: ಚಾಮರಾಜ ನಗರ

    ಹೊರನಾಡು/ಹೊರದೇಶ

    1.ಸೀತಾರಾಮ ಅಯ್ಯಂಗಾರ್‌
    2. ದೀಪಕ್‌ ಶೆಟ್ಟಿ
    3. ಶಶಿಕಿರಣ್‌ ಶೆಟ್ಟಿ

    ಸ್ವಾತಂತ್ರ್ಯ ಹೋರಾಟಗಾರರು

    1. ಪುಟ್ಟಸ್ವಾಮಿಗೌಡ: ರಾಮನಗರ

    ಕರ್ನಾಟಕ ಸಂಭ್ರಮ 50ರ ರಾಜ್ಯೋತ್ಸವ ಪ್ರಶಸ್ತಿ-2023 (ಸಂಘ- ಸಂಸ್ಥೆ ಕ್ಷೇತ್ರ)

    1. ಕರ್ನಾಟಕ ಸಂಘ – ಶಿವಮೊಗ್ಗ
    2. ಬಿ.ಎನ್‌. ಶ್ರೀರಾಮ ಪುಸ್ತಕ ಪ್ರಕಾಶನ – ಮೈಸೂರು
    3. ಮಿಥಿಕ್‌ ಸೊಸೈಟಿ – ಬೆಂಗಳೂರು
    4. ಕರ್ನಾಟಕ ಸಾಹಿತ್ಯ ಸಂಘ – ಯಾದಗಿರಿ
    5. ಮೌಲಾನಾ ಆಜಾದ್‌ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ – ದಾವಣಗೆರೆ
    6. ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ – ದಕ್ಷಿಣ ಕನ್ನಡ
    7. ಸ್ನೇಹರಂಗ ಹವ್ಯಾಸಿ ಕಲಾ ಸಂಸ್ಥೆ – ಬಾಗಲಕೋಟೆ
    8. ಚಿಣ್ಣರ ಬಿಂಬ – ಮುಂಬೈ
    9. ಮಾರುತಿ ಜನಸೇವಾ ಸಂಘ – ದಕ್ಷಿಣ ಕನ್ನಡ
    10. ವಿದ್ಯಾದಾನ ಸಮಿತಿ – ಗದಗ

    ಇದನ್ನೂ ಓದಿ: Kannada Rajyotsava : ರಾಜ್ಯೋತ್ಸವ ದಿನ ಹಾಡಬೇಕಾದ 5 ಹಾಡುಗಳು ಇಲ್ಲಿವೆ; ಸಾಹಿತ್ಯ ಸಂಗೀತ ಸಹಿತ!

    ಸಂಗೀತ ನೃತ್ಯ ಕ್ಷೇತ್ರದಿಂದ ಸಾಹಿತ್ಯ ಕ್ಷೇತ್ರದವರೆಗೆ ಪೂರ್ಣ ಪಟ್ಟಿ ಇಲ್ಲಿದೆ

    Karnataka Rajyotsava award list

    ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಎಲ್ಲ ಕ್ಷೇತ್ರಗಳನ್ನ ನಾವು ಪರಿಗಣನೆ ಮಾಡಿದ್ದೇವೆ ಎಂದು ತಿಳಿಸಿದರು.

    Karnataka Rajyotsava award list

    ಶಿಕ್ಷಣ ಕ್ಷೇತ್ರದಿಂದ ಸ್ವಾತಂತ್ರ್ಯ ಹೋರಾಟಗಾರರ ವರೆಗೆ

    Karnataka Rajyotsava award list

    ಇದನ್ನೂ ಓದಿ: Indira Gandhi : ಇಂದಿರಾ ಗಾಂಧಿಯಂಥ ಜನಪರ-ಜನಪ್ರಿಯ ಪ್ರಧಾನಿ ಮತ್ತೊಬ್ಬರು ಬಂದಿಲ್ಲ: ಸಿಎಂ ಸಿದ್ದರಾಮಯ್ಯ

    Karnataka Rajyotsava award list

    ಈ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ಪ್ರಕಟ

    Karnataka Rajyotsava award list
    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಕರ್ನಾಟಕ

    Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

    Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

    VISTARANEWS.COM


    on

    Karnataka Candidate can write CRPF, BSF, CIS Constable Exam in Kannada, Kannada Pride
    Koo

    ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

    ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

    ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

    ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

    Continue Reading

    ಕನ್ನಡ ರಾಜ್ಯೋತ್ಸವ

    Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

    Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

    VISTARANEWS.COM


    on

    Kannada Koota Luxembourg
    Koo

    ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

    ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

    ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

    ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

    ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

    ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

    ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

    ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    “ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

    ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

    ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

    ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

    Continue Reading

    ಕನ್ನಡ ರಾಜ್ಯೋತ್ಸವ

    RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

    R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

    VISTARANEWS.COM


    on

    RK Balachandra
    Koo

    ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

    ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

    ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

    ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

    ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

    Continue Reading

    ಕನ್ನಡ ರಾಜ್ಯೋತ್ಸವ

    Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

    Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

    VISTARANEWS.COM


    on

    CM Siddaramaiah
    Koo

    ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

    ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

    ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

    ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

    CM Siddaramaiah talks in Karnataka sambhrama at Gadag

    ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

    ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

    ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

    ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

    ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

    Continue Reading
    Advertisement
    Rakhi Sawant Rushed to Hospital After Heart-Related Ailment
    ಬಾಲಿವುಡ್10 mins ago

    Rakhi Sawant: ಆಸ್ಪತ್ರೆಗೆ ದಾಖಲಾದ ನಟಿ ರಾಖಿ ಸಾವಂತ್‌

    physical abuse gadag crime
    ಕ್ರೈಂ24 mins ago

    Physical Abuse: ಹಿಂದೂ ಯುವಕನ ಪ್ರೀತಿಸಿ ಮದುವೆಯಾದವಳಿಗೆ ಲೈಂಗಿಕ ಕಿರುಕುಳ, ಕಣ್ಣೀರಿಟ್ಟ ಮುಸ್ಲಿಂ ಮಹಿಳೆ

    Narendra Modi
    ದೇಶ26 mins ago

    Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಬೇಧ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

    Shamita Shetty Undergoes Surgery For Endometriosis
    ಸಿನಿಮಾ32 mins ago

    Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

    Road Accident
    ಕ್ರೈಂ49 mins ago

    Road Accident: ಭೀಕರ ರಸ್ತೆ ಅಪಘಾತ; ಮತ ಚಲಾಯಿಸಿ ತೆರಳುತ್ತಿದ್ದ 6 ಮಂದಿ ಸಜೀವ ದಹನ

    Shrimad Ramayana udaya tv to telecasting kannada dubbing version
    ಕಿರುತೆರೆ57 mins ago

    Shrimad Ramayana: ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಶ್ರೀಮದ್ ರಾಮಾಯಣ’ ಮಹಾ ಕಾವ್ಯ: ಎಲ್ಲಿ? ಯಾವಾಗ?

    bangalore woman murder case
    ಕ್ರೈಂ1 hour ago

    Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

    Dolly Dhananjay Kotie Cinema Kannada
    ಸ್ಯಾಂಡಲ್ ವುಡ್2 hours ago

    Dolly Dhananjay: ʻಕೋಟಿʼ ಸಿನಿಮಾ ಮೊದಲ ಹಾಡು ಬಿಡುಗಡೆ!

    terror module
    ದೇಶ2 hours ago

    Terror Module Bust: ಪಂಜಾಬ್‌ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಸಿಖ್ ಉಗ್ರರ ಜತೆ ನಂಟು ಹೊಂದಿದ್ದ ನಾಲ್ವರು ಅರೆಸ್ಟ್‌

    woman murder case
    ಕ್ರೈಂ2 hours ago

    Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

    Sharmitha Gowda in bikini
    ಕಿರುತೆರೆ7 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ7 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ7 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ6 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ8 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ5 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ6 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Prajwal Revanna Case
    ಕರ್ನಾಟಕ3 hours ago

    Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

    Dina Bhavishya
    ಭವಿಷ್ಯ6 hours ago

    Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

    HD Revanna Released first reaction after release will be acquitted of all charges
    ರಾಜಕೀಯ16 hours ago

    HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

    CM Siddaramaiah says Our government is stable for 5 years BJP will disintegrate
    Lok Sabha Election 202418 hours ago

    CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

    I dont want to go to other states for Lok Sabha Election 2024 campaign for Congress says CM Siddaramaiah
    Lok Sabha Election 202421 hours ago

    CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

    HD Revanna Bail I am not happy that Revanna has been released says HD Kumaraswamy
    ರಾಜಕೀಯ22 hours ago

    HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

    karnataka Rain Effected
    ಬೆಂಗಳೂರು23 hours ago

    Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

    Dina Bhavishya
    ಭವಿಷ್ಯ1 day ago

    Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

    HD Revanna Bail Revanna will not leave the country condition imposed by the court
    ಕ್ರೈಂ2 days ago

    HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

    HD Revanna Bail
    ಕ್ರೈಂ2 days ago

    HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

    ಟ್ರೆಂಡಿಂಗ್‌