IND vs SL: ಭಾರತ-ಲಂಕಾ ನಡುವಣ ವಿಶ್ವಕಪ್​ ದಾಖಲೆಯೇ ಅತ್ಯಂತ ರೋಚಕ - Vistara News

ಕ್ರಿಕೆಟ್

IND vs SL: ಭಾರತ-ಲಂಕಾ ನಡುವಣ ವಿಶ್ವಕಪ್​ ದಾಖಲೆಯೇ ಅತ್ಯಂತ ರೋಚಕ

ಭಾರತ ತಂಡ ಲಂಕಾ ವಿರುದ್ಧ ವಿಶ್ವಕಪ್​ನಲ್ಲಿ ಮೊದಲ ಗೆಲುವು ಸಾಧಿಸಿದ್ದು 1999ರಲ್ಲಿ. ಈ ಪಂದ್ಯವನ್ನು ಭಾರತ ಭರ್ಜರಿ 157ರನ್​ಗಳಿಂದ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ರಾಹುಲ್​ ದ್ರಾವಿಡ್​ ಮತ್ತು ಸೌರವ್​ ಗಂಗೂಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಶತಕ ಬಾರಿಸಿ ಸಂಭ್ರಮಿಸಿದ್ದರು.

VISTARANEWS.COM


on

india vs sri lanka world cup 1999
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಪ್ರಸಕ್ತ ನಡೆಯುತ್ತಿರುವ ವಿಶ್ವಕಪ್(ICC Cricket World Cup 2023)​ ಟೂರ್ನಿಯಲ್ಲಿ ಆಡಿದ ಎಲ್ಲ 6 ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ ಸನಿಹ ಬಂದು ನಿಂತಿರುವ ಭಾರತ ತಂಡ, ಗುರುವಾರ ನೆರೆಯ ರಾಷ್ಟ್ರ ಶ್ರೀಲಂಕಾ(IND vs SL) ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿ ನಿಂತಿದೆ. ಈ ಪಂದ್ಯವನ್ನು ಗೆದ್ದರೆ ಸೆಮಿಫೈನಲ್​ ಟಿಕೆಟ್​ ಅಧಿಕೃತವಾಗಲಿದೆ. ಉಭಯ ತಂಡಗಳ ವಿಶ್ವಕಪ್​ ಮುಖಾಮುಖಿ ಮತ್ತು ದಾಖಲೆಗಳು ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ವಿಶ್ವಕಪ್​ ಮುಖಾಮುಖಿ

ಭಾರತ ಮತ್ತು ಶ್ರೀಲಂಕಾ ತಂಡಗಳು ವಿಶ್ವಕಪ್​ನಲ್ಲಿ ತನ್ನದೇ ಆದ ದಾಖಲೆಗಳನ್ನು ಹೊಂದಿದೆ. ಉಭಯ ತಂಡಗಳು ಒಟ್ಟು 9 ಬಾರಿ ವಿಶ್ವಕಪ್​ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇತ್ತಂಡಗಳು ತಲಾ 4 ಪಂದ್ಯಗಳನ್ನು ಗೆದ್ದ ದಾಖಲೆ ಹೋಂದಿದೆ. 1992ರ ವಿಶ್ವಕಪ್​ ಪಂದ್ಯವೊಂದು ಮಳೆಯಿಂದ ರದ್ದುಗೊಂಡಿತ್ತು.

ಇದನ್ನೂ ಓದಿ Quinton de Kock: ಶತಕ ಬಾರಿಸಿ ಸಂಗಕ್ಕರ ದಾಖಲೆ ಸರಿಗಟ್ಟಿದ ಕ್ವಿಂಟನ್​ ಡಿ ಕಾಕ್

1979ರಲ್ಲಿ ಮೊದಲ ಮುಖಾಮುಖಿ

ಇತ್ತಂಡಗಳು ವಿಶ್ವಕಪ್​ ಟೂರ್ನಿಯಲ್ಲಿ ಮೊದಲ ಬಾರಿಗೆ ಮುಖಾಮುಖಿಯಾದದ್ದು 1979ರಲ್ಲಿ. ಈ ಪಂದ್ಯವನ್ನು ಶ್ರೀಲಂಕಾ ತಂಡ 47 ರನ್​ಗಳಿಂದ ಗೆದ್ದು ಭಾರತಕ್ಕೆ ಸೋಲಿನ ಏಟು ನೀಡಿತ್ತು. ಆಗ ಭಾರತ ಕ್ರಿಕೆಟ್​ ಲೋಕದ ಶಿಶುವಾಗಿತ್ತು. ಇದು 60 ಓವರ್​ನ ಪಂದ್ಯವಾಗಿತ್ತು. ಮೊದಲು ಬ್ಯಾಟಿಂಗ್​ ನಡೆಸಿದ್ದ ಶ್ರೀಲಂಕಾ ನಿಗದಿತ 60 ಓವರ್​ಗಳಲ್ಲಿ 5 ವಿಕೆಟ್​ಗೆ 238 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ಭಾರತ 54.1 ಓವರ್​ನಲ್ಲಿ 191 ರನ್​ಗೆ ಸರ್ವಪತನ ಕಂಡು ಸೋಲು ಕಂಡಿತ್ತು.


ಮೊದಲ ಗೆಲುವು

ಭಾರತ ತಂಡ ಲಂಕಾ ವಿರುದ್ಧ ವಿಶ್ವಕಪ್​ನಲ್ಲಿ ಮೊದಲ ಗೆಲುವು ಸಾಧಿಸಿದ್ದು 1999ರಲ್ಲಿ. ಈ ಪಂದ್ಯವನ್ನು ಭಾರತ ಭರ್ಜರಿ 157ರನ್​ಗಳಿಂದ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ರಾಹುಲ್​ ದ್ರಾವಿಡ್​ ಮತ್ತು ಸೌರವ್​ ಗಂಗೂಲಿ ಪ್ರಚಂಡ ಬ್ಯಾಟಿಂಗ್​ ನಡೆಸಿ ಶತಕ ಬಾರಿಸಿ ಸಂಭ್ರಮಿಸಿದ್ದರು. ದ್ರಾವಿಡ್​ 145 ರನ್​ ಬಾರಿಸಿದರೆ, ಗಂಗೂಲಿ 183 ರನ್​ ಬಾರಿಸಿದ್ದರು.

india vs sri lanka world cup 1999


2011ರಲ್ಲಿ ಫೈನಲ್ ಮುಖಾಮುಖಿ

2011ರ ವಿಶ್ವಕಪ್​ ಫೈನಲ್​ನಲ್ಲಿ ಟೀಮ್​ ಇಂಡಿಯಾ ಮತ್ತು ಶ್ರೀಲಂಕಾ ಮುಖಾಮುಖಿಯಾಗಿತ್ತು. ಈ ಪಂದ್ಯವನ್ನು ಭಾರತ ಆರು ವಿಕೆಟ್​ಗಳ ಅಂತರದಿಂದ ಗೆದ್ದು 28 ವರ್ಷಗಳ ಬಳಿಕ ಮತ್ತೊಂದು ವಿಶ್ವಕಪ್​ ಗೆದ್ದ ಸಾಧನೆ ಮಾಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ತಂಡ ನಾಯಕ ಮಹೇಲಾ ಜಯವರ್ಧನೆ ಅವರ ಶತಕದ ನೆರವಿನಿಂದ 275 ರನ್ ಗಳಿಸಿತ್ತು. ಗುರಿ ಬೆನ್ನಟ್ಟಿದ ಭಾರತ ತಂಡ ಗೌತಮ್ ಗಂಭೀರ್(gautam gambhir) ಅವರ 97 ರನ್ ಮತ್ತು ನಾಯಕ ಮಹೇಂದ್ರ ಸಿಂಗ್ ಧೋನಿ ಅಜೇಯ 91 ರನ್ ನೆರವಿನಿಂದ ಜಯಭೇರಿ ಬಾರಿಸಿ ಇತಿಹಾಸ ನಿರ್ಮಿಸಿತ್ತು. 

ಇದನ್ನೂ ಓದಿ ಲಂಕಾ ಪಂದ್ಯಕ್ಕೂ ಮುನ್ನ ತಂಡ ಸೇರಲಿದ್ದಾರೆ ಹಾರ್ದಿಕ್​ ಪಾಂಡ್ಯ ಆದರೆ…

ಸಚಿನ್‌ಗೆ ಅರ್ಪಣೆ

ಕ್ರಿಕೆಟ್​ ದೇವರು ಸಚಿನ್​ ತೆಂಡೂಲ್ಕರ್​ ಅವರಿಗೆ ಈ ಪ್ರಶಸ್ತಿಯನ್ನು ಆಟಗಾರರೆಲ್ಲ ಸೇರಿ ಅರ್ಪಿಸಿದ್ದರು. ಅವರನ್ನು ಹೆಗಲ ಮೇಲೆ ಹೊತ್ತು ಮೈದಾನಕ್ಕೆ ಸುತ್ತು ಬಂದಿದ್ದರು. ಇಲ್ಲಿಗೆ ಸಚಿನ್​ ಅವರ ವರ್ಣರಂಜಿತ ಕ್ರಿಕೆಟ್‌ ಬದುಕು ಸಾರ್ಥಕವಾಯಿತು. ಸಚಿನ್‌ 6ನೇ ಹಾಗೂ ಕೊನೆಯ ವಿಶ್ವಕಪ್‌ ಆಡಲಿಳಿದಿದ್ದರು. ಪಾಕ್‌ ಎದುರಿನ ಸೆಮಿಫೈನಲ್‌ನಲ್ಲಿ 85 ರನ್‌ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು.

Sachin Tendulkar


ಏಕದಿನ ಮುಖಾಮುಖಿ

ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ ಒಟ್ಟು 167 ಪಂದ್ಯಗಳಲ್ಲಿ ಸೆಣಸಾಡಿವೆ. ಇದರಲ್ಲಿ ಭಾರತ 98 ಪಂದ್ಯಗಳನ್ನು ಗೆದ್ದಿವೆ. ಶ್ರೀಲಂಕಾ 57 ಪಂದ್ಯಗಳಲ್ಲಿ ಗೆಲುವು ಕಂಡಿದೆ. 11 ಪಂದ್ಯಗಳು ಟೈನಲ್ಲಿ ಅಂತ್ಯ ಕಂಡಿದೆ. 1 ಪಂದ್ಯ ರದ್ದು ಗೊಂಡಿದೆ. ಇನ್ನು ತವರಿನಲ್ಲಿ ಭಾರತ 39 ಪಂದ್ಯಗಳನ್ನು ಗೆದ್ದರೆ, ಲಂಕಾ 28 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

Women’s Asia Cup 2024 : ಏಷ್ಯಾದ ಅಗ್ರ 8 ಮಹಿಳಾ ಕ್ರಿಕೆಟ್ ತಂಡಗಳನ್ನು ಒಳಗೊಂಡ ಪಂದ್ಯಾವಳಿಗೆ ನಿಮ್ಮನ್ನು ಸಜ್ಜುಗೊಳಿಸಿಕೊಳ್ಳಿ. ನಿಮ್ಮ ಕ್ಯಾಲೆಂಡರ್​ನಲ್ಲಿ ದಿನಾಂಕಗಳನ್ನು ಮಾರ್ಕ್ ಮಾಡಿ. ಏಕೆಂದರೆ ಇದು ಜುಲೈ 19, 2024 ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ಟೂರ್ನಿ ಪ್ರಾರಂಭವಾಗಲಿದೆ, ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯಾಗಿರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ತನ್ನ ‘ಎಕ್ಸ್’ ಹ್ಯಾಂಡಲ್​ನಲ್ಲಿ ಬರೆದುಕೊಂಡಿದೆ.

VISTARANEWS.COM


on

Women's Asia Cup
Koo

ಬೆಂಗಳೂರು : ಇತ್ತೀಚೆಗೆ ತವರಿನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 3-0 ಸರಣಿ ಗೆಲುವಿನೊಂದಿಗೆ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಉತ್ಸಾಹದಲ್ಲಿದೆ. ಇದೀಗ ಮತ್ತೊಂದು ಪ್ರಮುಖ ಪಂದ್ಯಾವಳಿಗಾಗಿ ಶೀಘ್ರದಲ್ಲೇ ಸಿದ್ಧಗೊಳ್ಳಬೇಕಾಗಿದೆ. ಅದುವೇ ಮಹಿಳೆಯರ ಏಷ್ಯಾ ಕಪ್ ಕ್ರಿಕೆಟ್ (Women’s Asia Cup 2024 )​. ಅಲ್ಲಿ ಏಷ್ಯಾದ ಅಗ್ರ ತಂಡಗಳು ಖಂಡಾಂತರ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ಮುಂಬರುವ ಮಹಿಳಾ ಏಷ್ಯಾ ಕಪ್ 2024 ಖಂಡದ ಅಗ್ರ ಎಂಟು ತಂಡಗಳು ಭಾಗವಹಿಸಲಿವೆ. ಜುಲೈ 19ರಿಂದ ಆರಂಭವಾಗಲಿರುವ ಈ ರೋಚಕ ಕ್ರಿಕೆಟ್ ಪಂದ್ಯ ಜುಲೈ 28ರಂದು ಮುಕ್ತಾಯಗೊಳ್ಳಲಿದೆ. ಶ್ರೀಲಂಕಾ ಟೂರ್ನಿಗೆ ಆತಿಥ್ಯ ವಹಿಸಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕ್ರಿಕೆಟ್ ಅಭಿಮಾನಿಗಳಿಗೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಏಷ್ಯಾದ ಅಗ್ರ 8 ಮಹಿಳಾ ಕ್ರಿಕೆಟ್ ತಂಡಗಳನ್ನು ಒಳಗೊಂಡ ಪಂದ್ಯಾವಳಿಗೆ ನಿಮ್ಮನ್ನು ಸಜ್ಜುಗೊಳಿಸಿಕೊಳ್ಳಿ. ನಿಮ್ಮ ಕ್ಯಾಲೆಂಡರ್​ನಲ್ಲಿ ದಿನಾಂಕಗಳನ್ನು ಮಾರ್ಕ್ ಮಾಡಿ. ಏಕೆಂದರೆ ಇದು ಜುಲೈ 19, 2024 ರಂದು ಶ್ರೀಲಂಕಾದ ಡಂಬುಲ್ಲಾದಲ್ಲಿ ಟೂರ್ನಿ ಪ್ರಾರಂಭವಾಗಲಿದೆ, ಕಾಂಟಿನೆಂಟಲ್ ಕ್ರಿಕೆಟ್ ಆಡಳಿತ ಮಂಡಳಿಯಾಗಿರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮಂಗಳವಾರ ತನ್ನ ‘ಎಕ್ಸ್’ ಹ್ಯಾಂಡಲ್ನಲ್ಲಿ ಬರೆದುಕೊಂಡಿದೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಮಹಿಳಾ ಏಷ್ಯಾ ಕಪ್ 2024 ರ ವೇಳಾಪಟ್ಟಿಯ ಬಗ್ಗೆ ಮಾತನಾಡುವುದಾದರೆ, ಜುಲೈ 21 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮಹಿಳಾ ವಿರುದ್ಧ ಭಾರತ ಮಹಿಳಾ ತಂಡವನ್ನು ಆಡಲು ನಿರ್ಧರಿಸಲಾಗಿತ್ತು. ಆದಾಗ್ಯೂ, ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಎಸಿಸಿ ಆಟವನ್ನು ಜುಲೈ 19 ಕ್ಕೆ ನಿಗದಿ ಮಾಡಿದೆ. ವಿಶೇಷವೆಂದರೆ, ಅಪೇಕ್ಷಿತ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಕೇಂದ್ರ ಸ್ಥಾನವನ್ನು ಪಡೆಯುತ್ತಿರುವುದು ಇದೇ ಮೊದಲು. ಕಾಂಟಿನೆಂಟಲ್ ಈವೆಂಟ್​​ನಲ್ಲಿ ಇಲ್ಲಿಯವರೆಗೆ ಕೇವಲ ಏಳು ತಂಡಗಳು ಆಡಿದ್ದವು.

ಇದನ್ನೂ ಓದಿ: T20 World Cup : ಅಫಘಾನಿಸ್ತಾನ ತಂಡದ ನಾಯಕ ರಶೀದ್​ ಗೆ ಕರೆ ಮಾಡಿ ಶುಭಾಶಯ ತಿಳಿಸಿದ ತಾಲಿಬಾನ್ ನಾಯಕ

ಏಷ್ಯನ್ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದ್ದು, ಆಯಾ ಗುಂಪುಗಳ ಅಗ್ರ ಎರಡು ತಂಡಗಳು ಜುಲೈ 26 ರಂದು ನಡೆಯಲಿರುವ ಸೆಮಿಫೈನಲ್​ಗೆ ಅರ್ಹತೆ ಪಡೆಯುತ್ತವೆ. ಫೈನಲ್ ಪಂದ್ಯ ಜುಲೈ 28ರಂದು ನಡೆಯಲಿದೆ. ಇದಲ್ಲದೆ, ಸಾಂಪ್ರದಾಯಿಕ ಎದುರಾಳಿಗಳ ಜೊತೆಗೆ ನೇಪಾಳ ಮತ್ತು ಯುಎಇ ತಂಡಗಳನ್ನು ಟೀಮ್ ಇಂಡಿಯಾದೊಂದಿಗೆ ಗುಂಪು ಮಾಡಲಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ಥಾಯ್ಲೆಂಡ್ ಮತ್ತು ಮಲೇಷ್ಯಾ ತಂಡಗಳು ‘ಬಿ’ ಗುಂಪಿನಲ್ಲಿವೆ.

ಮಹಿಳಾ ಏಷ್ಯಾ ಕಪ್ ಅನ್ನು ಕೊನೆಯ ಬಾರಿಗೆ 2022 ರಲ್ಲಿ ಬಾಂಗ್ಲಾದೇಶದಲ್ಲಿ ಆಡಿಸಲಾಗಿತ್ತು. ಅಲ್ಲಿ ಫೈನಲ್​​ನಲ್ಲಿ ಶ್ರೀಲಂಕಾ ಮಹಿಳೆಯರನ್ನು ಎಂಟು ವಿಕೆಟ್​ಗಳಿಂ ಸೋಲಿಸಿದ ಭಾರತ ಮಹಿಳೆಯರು ಏಳನೇ ಪ್ರಶಸ್ತಿ ಗೆದ್ದುಕೊಂಡಿದ್ದರು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಏಷ್ಯಾ ಕಪ್ ಅನ್ನು ಎರಡು ವರ್ಷಗಳ ಕಾಲ ಮುಂದೂಡಲಾಗಿತ್ತು.

Continue Reading

ಪ್ರಮುಖ ಸುದ್ದಿ

Frank Duckworth : ಮಳೆ ಪೀಡಿತ ಪಂದ್ಯಗಳಿಗೆ ಅನ್ವಯಿಸುವ ಡಕ್ವರ್ತ್​​ ಲೂಯಿಸ್ ನಿಯಮದ ರೂವಾರಿ ಫ್ರಾಂಕ್​ ಡಕ್ವರ್ತ್​​ ನಿಧನ

Frank Duckworth ಮಳೆ ಪೀಡಿತ ಕ್ರಿಕೆಟ್ ಪಂದ್ಯಗಳ ಫಲಿತಾಂಶಗಳನ್ನು ನಿರ್ಧರಿಸಲು ಡಕ್ವರ್ತ್ ಮತ್ತು ಸಹ ಸಂಖ್ಯಾಶಾಸ್ತ್ರಜ್ಞ ಟೋನಿ ಲೂಯಿಸ್ ರೂಪಿಸಿದ ಡಕ್ವರ್ತ್-ಲೂಯಿಸ್ ಪ್ರಸ್ತುತ ಚಾಲ್ತಿಯಲ್ಲಿದೆ. ಐಸಿಸಿ ಅದಕ್ಕೆ ಮಾನ್ಯತೆ ನೀಡಿದೆ. ಈ ವಿಧಾನವನ್ನು ಮೊದಲ ಬಾರಿಗೆ 1997 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬಳಸಲಾಯಿತು

VISTARANEWS.COM


on

Frank Duckworth
Koo

ಬೆಂಗಳೂರು: ಮಂಗಳವಾರ ಮುಂಜಾನೆ ನಡೆದ ಟಿ20 ವಿಶ್ವ ಕಪ್ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಅಫಘಾನಿಸ್ತಾನ ತಂಡ ಐತಿಹಾಸಿಕ ಗೆಲುವು ದಾಖಲಿಸಿತ್ತು. ಪಂದ್ಯದ ವೇಳೆ ಮಳೆ ಬಂದ ಕಾರಣ ಡಕ್ವರ್ತ್​ (Frank Duckworth) ಲೂಯಿಸ್ ನಿಯಮದ ಪ್ರಕಾರ ಬಾಂಗ್ಲಾದೇಶಕ್ಕೆ ಡಕ್ವರ್ತ್​ ನಿಯಮದ ಪ್ರಕಾರ 19 ಓವರ್​ಗಳಿಗೆ 114 ರನ್ ಮಾಡುವ ಗುರಿ ನೀಡಲಾಗಿತ್ತು. ಆದರೆ ಬಾಂಗ್ಲಾದೇಶ ತಂಡ 8 ರನ್​ಗಳಿಂದ ಸೋತಿತ್ತು. ಇಲ್ಲಿ ಅಪಘಾನಿಸ್ತಾನ ತಂಡಕ್ಕೆ ನೆರವಾಗಿದ್ದು ಡಕ್ವರ್ತ್​ ನಿಯಮ. ಇಂಥ ಅಮೋಘ ನಿಯಮದ ಸಹ ಕರ್ತೃ ಇಂಗ್ಲಿಷ್ ಸಂಖ್ಯಾಶಾಸ್ತ್ರಜ್ಞ ಫ್ರಾಂಕ್ ಡಕ್ವರ್ತ್ (84) ಮಂಗಳವಾರ ನಿಧನ ಹೊಂದಿದ್ದಾರೆ. ಈ ವಿಶೇಷ ದಿನದಂದು ಅವರು ನಿಧನದ ಸುದ್ದಿ ಪ್ರಕಟಗೊಂಡಿರುವುದು ವಿಶೇಷ. ಅ

ಮಳೆ ಪೀಡಿತ ಕ್ರಿಕೆಟ್ ಪಂದ್ಯಗಳ ಫಲಿತಾಂಶಗಳನ್ನು ನಿರ್ಧರಿಸಲು ಡಕ್ವರ್ತ್ ಮತ್ತು ಸಹ ಸಂಖ್ಯಾಶಾಸ್ತ್ರಜ್ಞ ಟೋನಿ ಲೂಯಿಸ್ ರೂಪಿಸಿದ ಡಕ್ವರ್ತ್-ಲೂಯಿಸ್ ಪ್ರಸ್ತುತ ಚಾಲ್ತಿಯಲ್ಲಿದೆ. ಐಸಿಸಿ ಅದಕ್ಕೆ ಮಾನ್ಯತೆ ನೀಡಿದೆ. ಈ ವಿಧಾನವನ್ನು ಮೊದಲ ಬಾರಿಗೆ 1997 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಬಳಸಲಾಯಿತು. 2001 ರಲ್ಲಿ ಮಳೆಯಿಂದ ಮೊಟಕುಗೊಂಡ ಪಂದ್ಯಗಳಲ್ಲಿ ಪರಿಷ್ಕೃತ ಗುರಿ ನಿಗದಿಪಡಿಸುವ ಪ್ರಮಾಣಿತ ವಿಧಾನವಾಗಿ ಐಸಿಸಿ ಡಿಎಲ್​ಎಸ್​​ನ್ನು ಅಳವಡಿಸಿಕೊಂಡಿತು. ಅಂದ ಹಾಗೆ ಡಕ್ವರ್ತ್​ ಅವರು ಜೂನ್​ 21ಕ್ಕೆ ಮೃತಪಟ್ಟಿದ್ದಾರೆ. ಆದರೆ ವಿಷಯ ಪ್ರಕಟಗೊಂಡಿರುವುದು ಜೂನ್​ 25ರಂದು ಎಂಬುದು ವಿಶೇಷ.

ಇದನ್ನೂ ಓದಿ: T20 World Cup : ಅಫಘಾನಿಸ್ತಾನ ತಂಡದ ನಾಯಕ ರಶೀದ್​ ಗೆ ಕರೆ ಮಾಡಿ ಶುಭಾಶಯ ತಿಳಿಸಿದ ತಾಲಿಬಾನ್ ನಾಯಕ

ಡಕ್ವರ್ತ್ ಮತ್ತು ಲೂಯಿಸ್​ ಅವರ ನಿವೃತ್ತಿಯ ನಂತರ ಈ ವಿಧಾನವನ್ನು ಡಕ್ವರ್ತ್-ಲೂಯಿಸ್-ಸ್ಟರ್ನ್ ವಿಧಾನ ಎಂದು ಮರುನಾಮಕರಣ ಮಾಡಲಾಯಿತು. ಪ್ರಸ್ತುತ ಬಳಕೆಯಲ್ಲಿರುವ ನಿಯಮಕ್ಕ ಆಸ್ಟ್ರೇಲಿಯಾದ ಸಂಖ್ಯಾಶಾಸ್ತ್ರಜ್ಞ ಸ್ಟೀವನ್ ಸ್ಟರ್ನ್ ಕೆಲವು ಮಾರ್ಪಾಡುಗಳನ್ನು ಮಾಡಿದ್ದಾರೆ.

ಡಕ್ವರ್ತ್ ಮತ್ತು ಲೂಯಿಸ್ ಇಬ್ಬರಿಗೂ ಜೂನ್ 2010 ರಲ್ಲಿ ಎಂಬಿಇ (ಮೆಂಬರ್ ಆಫ್ ದಿ ಆರ್ಡರ್ ಆಫ್ ದಿ ಬ್ರಿಟಿಷ್ ಎಂಪೈರ್) ಗೌರವ ನೀಡಲಾಗಿದೆ. ಡಿಎಲ್ಎಸ್ ವಿಧಾನವು ಸಂಕೀರ್ಣ ಸಂಖ್ಯಾಶಾಸ್ತ್ರೀಯ ವಿಶ್ಲೇಷಣೆಯಾಗಿದೆ. ಇದು ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಪರಿಷ್ಕೃತ ಗುರಿಯನ್ನು ನಿಗದಿಪಡಿಸಲು ಉಳಿದಿರುವ ವಿಕೆಟ್​ಗಳು ಮತ್ತು ಕಳೆದುಕೊಂಡ ಓವರ್​ನಂಥ ಅನೇಕ ಅಂಶಗಳನ್ನು ನೀಡುತ್ತದೆ.

Continue Reading

ಪ್ರಮುಖ ಸುದ್ದಿ

T20 World Cup : ಅಫಘಾನಿಸ್ತಾನ ತಂಡದ ನಾಯಕ ರಶೀದ್​ ಗೆ ಕರೆ ಮಾಡಿ ಶುಭಾಶಯ ತಿಳಿಸಿದ ತಾಲಿಬಾನ್ ನಾಯಕ

T20 World Cup: ಅಫ್ಘಾನಿಸ್ತಾನ ಪುರುಷರ ಟಿ 20 ವಿಶ್ವಕಪ್​​ನಲ್ಲಿ ಬಾರಿಗೆ ಸೆಮಿಫೈನಲ್ ತಲುಪುವ ಮೂಲಕ ಸ್ಮರಣೀಯ ದಾಖಲೆ ಬರೆದಿದೆ. ಕೆರಿಬಿಯನ್ ನೆಲದಲ್ಲಿ ನಡೆದ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸುವ ಮೊದಲು ಅಫ್ಘಾನಿಸ್ತಾನವು ಅಚ್ಚರಿಯ ಫಲಿತಾಂಶ ಒದಗಿಸಿತ್ತು.

VISTARANEWS.COM


on

T20 world cup 2024
Koo

ಬೆಂಗಳೂರು: ಟಿ20 ವಿಶ್ವ ಕಪ್​ 2024 (T20 World Cup 2024) ಅಫಘಾನಿಸ್ತಾನ ತಂಡ ಬಾಂಗ್ಲಾದೇಶ ತಂಡವನ್ನು ಸೋಲಿಸಿರುವ ಹಿನ್ನೆಲೆಯಲ್ಲಿ ಅಲ್ಲಿನ ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಕಿ ನಾಯಕ ರಶೀದ್ ಖಾನ್​ಗೆ ವಿಡಿಯೊ ಕಾಲ್ ಮಾಡಿ ಮಾತನಾಡಿದ್ದಾರೆ. ಲಕ್ಷಾಂತರ ಅಫ್ಘಾನಿಸ್ತಾನ ಕ್ರಿಕೆಟ್ ಅಭಿಮಾನಿಗಳ ಭಾವನೆಗಳನ್ನು ಅವರು ತಮ್ಮ ಕರೆಯ ಮೂಲಕ ಪ್ರತಿಧ್ವನಿಸಿದ್ದಾರೆ ಎನ್ನಲಾಗಿದೆ. ಪುರುಷರ ಟಿ 20 ವಿಶ್ವಕಪ್ 2024 ರ ಸೆಮಿಫೈನಲ್​ ಪ್ರವೇಶಿಸಿದ್ದಕ್ಕಾಗಿ ತಂಡವನ್ನು ಅಭಿನಂದಿಸಿದ್ದಾರೆ. ಸೇಂಟ್ ವಿನ್ಸೆಂಟ್​​ನ ಕಿಂಗ್ಸ್​​ಟೌನ್​ ಅರ್ನೋವ್ ವೇಲ್ ಮೈದಾನದಲ್ಲಿ ನಡೆದ ಕೊನೆಯ ಸೂಪರ್ 8 ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಅಫ್ಘಾನಿಸ್ತಾನದ ರೋಚಕ ಗೆಲುವು ಸಾಧಿಸಿತ್ತು.

ಅಫ್ಘಾನಿಸ್ತಾನ ಪುರುಷರ ಟಿ 20 ವಿಶ್ವಕಪ್​​ನಲ್ಲಿ ಬಾರಿಗೆ ಸೆಮಿಫೈನಲ್ ತಲುಪುವ ಮೂಲಕ ಸ್ಮರಣೀಯ ದಾಖಲೆ ಬರೆದಿದೆ. ಕೆರಿಬಿಯನ್ ನೆಲದಲ್ಲಿ ನಡೆದ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸುವ ಮೊದಲು ಅಫ್ಘಾನಿಸ್ತಾನವು ಅಚ್ಚರಿಯ ಫಲಿತಾಂಶ ಒದಗಿಸಿತ್ತು.

ಬಾಂಗ್ಲಾದೇಶ ವಿರುದ್ಧದ ಥ್ರಿಲ್ಲರ್ ಪಂದ್ಯದ ನಂತರ ಮೈದಾನದಲ್ಲಿದ್ದ ರಶೀದ್ ಖಾನ್ ಅವರೊಂದಿಗೆ ತಾಲಿಬಾನ್ ವಿದೇಶಾಂಗ ಸಚಿವರು ಮಾತನಾಡುವ ವೀಡಿಯೊವನ್ನು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ಹಂಚಿಕೊಂಡಿದೆ. ಬಾಂಗ್ಲಾದೇಶ ವಿರುದ್ಧದ ಗೆಲುವಿಗಾಗಿ ತಂಡವನ್ನು ಅಭಿನಂದಿಸಿದ ಮುತ್ತಾಕಿ, ಮುಂದಿನ ಯಶಸ್ಸನ್ನು ಹಾರೈಸಿದ್ದರು. 1

ಅಫ್ಘಾನಿಸ್ತಾನದ ಆಟಗಾರರು ಮೈದಾನದಲ್ಲಿ ಡಾನ್ಸ್​ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದ್ದರು. ರಶೀದ್ ಖಾನ್ ತಂಡದ ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದರೆ, ಆಟಗಾರರು ವಿಜಯೋತ್ಸವದಲ್ಲಿ ಸಾಗಿದ್ದರು. ಕೋಚ್ ಜೊನಾಥನ್ ಟ್ರಾಟ್​ ಅವನ್ನು ಹೆಗಲ ಮೇಲೆ ಎತ್ತಿಕೊಂಡು ಹೋಗಿದ್ದರು. ಅಫ್ಘಾನಿಸ್ತಾನದ ಆಟಗಾರರು ತಂಡದ ಬಸ್​ನಲ್ಲಿ ತಮ್ಮ ಬೌಲಿಂಗ್ ಕೋಚ್ ಡ್ವೇನ್ ಬ್ರಾವೋ ಅವರ ರ್ಯಾಪ್ ಹಾಡುಗಳಿಗೆ ಡಾನ್ಸ್ ಮಾಡಿದ್ದರು

ಅಫಘಾನಿಸ್ತಾನದಲ್ಲೂ ಮೆರವಣಿಗೆ

ಅಫ್ಘಾನಿಸ್ತಾನದ ನಂಗರ್ಹಾರ್ ಪ್ರಾಂತ್ಯದ ಬೀದಿಗಳಲ್ಲಿ ಅಫ್ಘಾನಿಸ್ತಾನದ ಐತಿಹಾಸಿಕ ಸೆಮಿಫೈನಲ್ ಪ್ರವೇಶವನ್ನು ಆಚರಿಸುವ ಮೆರವಣಿಗೆ ನಡೆದವು. ನಾಯಕ ರಶೀದ್ ಖಾನ್ ಬ್ರಿಯಾನ್ ಲಾರಾ ಅವರಿಗೆ ಕೃತಜ್ಞತೆಯನ್ನೂ ಸಲ್ಲಿಸಿದ್ದಾರೆ. ಯಾಕೆಂದರೆ ಪಂದ್ಯಾವಳಿಯ ಆರಂಭದಲ್ಲಿ ವೆಸ್ಟ್ ಇಂಡೀಸ್ ದಂತಕಥೆ ಲಾರಾ, ನಾಲ್ಕು ಸೆಮಿಫೈನಲ್ ಸ್ಪರ್ಧಿಗಳಲ್ಲಿ ಒಂದು ತಂಡವನ್ನು ಅಫಘಾನಿಸ್ತಾನವನ್ನು ಆಯ್ಕೆ ಮಾಡಿದ್ದರು. ಅದು ತಮಗೆ ಸಾಕಷ್ಟು ಪ್ರೇರಣೆ ನೀಡಿತು ಎಂದು ಹೇಳಿದರು.

ಇದನ್ನೂ ಓದಿ: David Warner Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

ಅಫ್ಘಾನಿಸ್ತಾನದಲ್ಲಿ ಕ್ರಿಕೆಟ್​​ ಪ್ರೀತಿಸುವ ಯುವಕರಿಗೆ ಸೆಮಿಫೈನಲ್ ಬೃಹತ್ ಸ್ಫೂರ್ತಿಯಾಗಲಿದೆ ಎಂದು ನಾನು ಭಾವಿಸುತ್ತೇನೆ. ಅಫ್ಘಾನಿಸ್ತಾನ ತಂಡ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದೆ. ಇದು ನಂಬಲಾಗದ ಭಾವನೆ, ಮತ್ತು ಅಫ್ಘಾನಿಸ್ತಾನವನ್ನು ಸೆಮಿಫೈನಲ್​​ನ ಅಗ್ರ ನಾಲ್ಕು ಸ್ಥಾನಗಳಲ್ಲಿ ಉಲ್ಲೇಖಿಸಿದ ಏಕೈಕ ವ್ಯಕ್ತಿ ಬ್ರಿಯಾನ್ ಲಾರಾ. ನಾವು ಅದನ್ನು ಸಾಬೀತುಪಡಿಸಿದ್ದೇವೆ ಎಂದು ನಾನು ಭಾವಿಸುತ್ತೇನೆ ಎಂದು ರಶೀದ್ ಹೇಳಿದ್ದಾರೆ.

Continue Reading

ಕ್ರೀಡೆ

AFG vs SA: ಅಜೇಯ ದಕ್ಷಿಣ ಆಫ್ರಿಕಾಗೆ ಸವಾಲೊಡ್ಡೀತೇ ಆಫ್ಘನ್?​; ನಾಳೆ ಮೊದಲ ಸೆಮಿ ಫೈನಲ್​

AFG vs SA: ಅಫಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೂ ಟಿ20 ಕ್ರಿಕೆಟ್​ನಲ್ಲಿ 2 ಬಾರಿ ಮುಖಾಮುಖಿಯಾಗಿವೆ. ಈ ಎರಡೂ ಪಂದ್ಯಗಳನ್ನು ಕೂಡ ದಕ್ಷಿಣ ಆಫ್ರಿಕಾವೇ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹರಿಣ ಪಡೆಯೇ ಬಲಿಷ್ಠವಾಗಿ ಗೋಚರಿಸಿದೆ

VISTARANEWS.COM


on

AFG vs SA
Koo

ಟ್ರಿನಿಡಾಡ್: ಹಾಲಿ ಟಿ20 ವಿಶ್ವಕಪ್‌(T20 World Cup 2024) ಕ್ರಿಕೆಟ್‌ ಪಂದ್ಯಾವಳಿಯಲ್ಲಿ ನ್ಯೂಜಿಲ್ಯಾಂಡ್​, ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಗಳಿಗೆ ಸೊಕ್ಕಡಗಿಸಿ ಕನಸಿನ ಓಟ ಬೆಳೆಸಿರುವ ಅಫಘಾನಿಸ್ತಾನ(AFG vs SA), ನಾಳೆ ನಡೆಯುವ ಮಹತ್ವದ ಸೆಮಿಫೈನಲ್​ ಪಂದ್ಯದಲ್ಲಿ ಕೂಟದ ಅಜೇಯ ತಂಡವಾದ ದಕ್ಷಿಣ ಆಫ್ರಿಕಾದ ಸವಾಲನ್ನು(South Africa vs Afghanistan Semi Final 1) ಎದುರಿಸಲಿದೆ. ಈ ಪಂದ್ಯ ಭಾರತದಲ್ಲಿ ಬೆಳಗಿನ ಜಾವ 6 ಗಂಟೆಗೆ ಪ್ರಸಾರಗೊಳ್ಳಲಿದೆ.

ಈ ಬಾರಿಯ ಟೂರ್ನಿಯಲ್ಲಿ ಇತ್ತಂಡಗಳಿಗೂ ಕೂಡ ಅದೃಷ್ಠ ಕೈ ಹಿಡಿದಿದೆ. ಲೀಗ್​ ಹಂತದಲ್ಲಿ ಸೋಲುವ ಪಂದ್ಯಗಳನ್ನು ಗೆದ್ದು ಸೂಪರ್​-8 ಹಂತಕ್ಕೇರಿತ್ತು. ಪ್ರತಿ ಐಸಿಸಿ ಟೂರ್ನಿಯಲ್ಲಿ ಗೆಲ್ಲುವ ಪಂದ್ಯಗಳನ್ನು ಸೋಲುವ ಮತ್ತು ಮಳೆಯಿಂದ ಹೊನ್ನಡೆ ಅನುಭವಿಸಿ ಚೋಕರ್ಸ್​ ಎನಿಸಿಕೊಳ್ಳುತ್ತಿದ್ದ ದಕ್ಷಿಣ ಆಫ್ರಿಕಾದ ನಸೀಬು ಈ ಬಾರಿ ಬದಲಾದಂತಿದೆ. ಲೀಗ್​ ಹಂತದಲ್ಲಿ ಬಾಂಗ್ಲಾ ವಿರುದ್ಧ 1 ರನ್​ ಅಂತರದಿಂದ ಗೆದ್ದದ್ದು, ಸೂಪರ್​-8 ಪಂದ್ಯದಲ್ಲಿ ವಿಂಡೀಸ್​ ಎದುರು ಮಳೆ ಪೀಡಿತ ಪಂದ್ಯವನ್ನು ಜಯಿಸಿದ್ದು ನೋಡುವಾಗ ಹರಿಣ ಪಡೆ ಈ ಬಾರಿ ಚೋಕರ್ಸ್​ ಹಣೆಪಟ್ಟಿಯನ್ನು ಕಳಚಿಕೊಳ್ಳುವ ಸಾಧ್ಯತೆಯೊಂದು ಕಂಡಿಬಂದಿದೆ.

ದಕ್ಷಿಣ ಆಫ್ರಿಕಾ ಪರ ಡಿ ಕಾಕ್​ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್​ ಇದುವರೆಗೂ ನಿರೀಕ್ಷತ ಬ್ಯಾಟಿಂಗ್​ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್​ ಮತ್ತು ಫೀಲ್ಡಿಂಗ್​ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ, ಸೆಮಿಫೈನಲ್​ನಲ್ಲಿಯೂ ಇದೇ ರೀತಿಯಲ್ಲಿ ಪಂದ್ಯವನ್ನು ಗೆಲ್ಲಬಹುದು ಎಂದು ಯೋಚಿಸಿ ಕುಳಿತರೆ ಸೋಲು ಎದುರಾಗುವುದು ಖಚಿತ ಎನ್ನಲಡ್ಡಿಯಿಲ್ಲ. ಏಕೆಂದರೆ, ಅಫಘಾನಿಸ್ತಾನ 100 ರನ್​ ಬಾರಿಸಿದರೂ ಕೂಡ ಇದನ್ನು ಹಿಡಿದು ನಿಲ್ಲಿಸುವ ತಾಕತ್ತು ಈ ತಂಡದ ಬೌಲರ್​ಗಳಿಗಿದೆ. ಸ್ಪಿನ್​, ಸ್ಪೀಡ್​ ಎರಡೂ ವಿಭಾಗದಲ್ಲಿಯೂ ವೈವಿಧ್ಯಮಯವಾಗಿದೆ. ಬ್ಯಾಟಿಂಗ್​ನಲ್ಲಿ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಪ್ರತಿ ಪಂದ್ಯದಲ್ಲಿಯೂ ಶ್ರೇಷ್ಠ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಮಧ್ಯಮ ವೇಗಿ ನವೀನ್​ ಉಲ್​ ಹಕ್​ ಕೂಡ ಘಾತಕ ಬೌಲಿಂಗ್​ ಪ್ರದರ್ಶನ ತೋರುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದಾರೆ.

ಇದನ್ನೂ ಓದಿ AFG vs BAN: ಕಾಬುಲ್​ನಲ್ಲಿ ಆಫ್ಘನ್ನರ ಮುಗಿಲು ಮುಟ್ಟಿದ ಸಂಭ್ರಮಾಚರಣೆ; ಗುಂಪು ಚದುರಿಸಲು ಜಲಫಿರಂಗಿ ಪ್ರಯೋಗ

ಮುಖಾಮುಖಿ


ಅಫಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೂ ಟಿ20 ಕ್ರಿಕೆಟ್​ನಲ್ಲಿ 2 ಬಾರಿ ಮುಖಾಮುಖಿಯಾಗಿವೆ. ಈ ಎರಡೂ ಪಂದ್ಯಗಳನ್ನು ಕೂಡ ದಕ್ಷಿಣ ಆಫ್ರಿಕಾವೇ ಗೆದ್ದಿದೆ. ಈ ಲೆಕ್ಕಾಚಾರದಲ್ಲಿ ಹರಿಣ ಪಡೆಯೇ ಬಲಿಷ್ಠವಾಗಿ ಗೋಚರಿಸಿದೆ. ಆದರೂ ಕೂಡ ಅಪಾಯಕಾರಿ ಆಫ್ಘನ್​ ಸವಾಲನ್ನು ಹಗುರವಾಗಿ ಕಾಣಬಾರದು. ಏಕೆಂದರೆ ಹೊಡಿ ಬಡಿ ಆಟವಾದ ಟಿ20 ಕ್ರಿಕೆಟ್​ನಲ್ಲಿ ಕೊನೆಯ ಎಸೆತದಲ್ಲಿಯೂ ಪಂದ್ಯದ ಫಲಿತಾಂಶ ಬದಲಾದ ನಿದರ್ಶನವಿದೆ.

ಹವಾಮಾನ ವರದಿ


ಸೂಪರ್​-8 ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡಿದರೂ ಕೂಡ ನಾಳೆ(ಬುಧವಾರ) ನಡೆಯುವ ಸೆಮಿ ಫೈನಲ್​ ಪಂದ್ಯಕ್ಕೆ ಯಾವುದೇ ಮಳೆ ಭೀತಿ ಎದುರಾಗಿಲ್ಲ. ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಸಂಭಾವ್ಯ ತಂಡಗಳು


ದಕ್ಷಿಣ ಆಫ್ರಿಕಾ:
ಕ್ವಿಂಟನ್ ಡಿ ಕಾಕ್ (ವಿಕೆಟ್​ ಕೀಪರ್​), ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಆನ್ರಿಚ್ ನಾರ್ಜೆ, ಒಟ್ನೀಲ್ ಬಾರ್ಟ್‌ಮನ್.

ಅಫಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಇಬ್ರಾಹಿಂ ಜದ್ರಾನ್, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಕರೀಂ ಜನತ್, ರಶೀದ್ ಖಾನ್ (ನಾಯಕ), ನಂಗೆಯಾಲಿಯಾ ಖರೋಟೆ, ನೂರ್ ಅಹ್ಮದ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ.

Continue Reading
Advertisement
Karnataka Milk Federation
ಪ್ರಮುಖ ಸುದ್ದಿ22 mins ago

ವಿಸ್ತಾರ ಸಂಪಾದಕೀಯ: ಹಾಲು ದರ ಏರಿಕೆ ಬಳಕೆದಾರನಿಗೆ ಹೊರೆಯಾಗದಿರಲಿ

Dina Bhavishya
ಭವಿಷ್ಯ22 mins ago

Dina Bhavishya: ಈ ರಾಶಿಯವರಿಗೆ ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದುಕೊಡಲಿದೆ

Women's Asia Cup
ಪ್ರಮುಖ ಸುದ್ದಿ6 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ6 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Arvind Kejriwal
ಪ್ರಮುಖ ಸುದ್ದಿ6 hours ago

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Kodagu News
ಕೊಡಗು6 hours ago

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Lok Sabha Speaker
ಪ್ರಮುಖ ಸುದ್ದಿ7 hours ago

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Rahul Gandhi
ಪ್ರಮುಖ ಸುದ್ದಿ7 hours ago

Rahul Gandhi : ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

Ayodhya Ram Mandir
ಪ್ರಮುಖ ಸುದ್ದಿ8 hours ago

Ayodhya Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ‘ಟೆಂಪಲ್ ಮ್ಯೂಸಿಯಮ್​’; ಯೋಗಿ ಸಂಪುಟದ ಸಮ್ಮತಿ

Milk Price
ಪ್ರಮುಖ ಸುದ್ದಿ8 hours ago

Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌