Boat Capsizes: ನದಿಯಲ್ಲಿ ಮುಳುಗಿದ ದೋಣಿ; 12 ಕೂಲಿ ಕಾರ್ಮಿಕರು ಜಲಸಮಾಧಿ - Vistara News

ದೇಶ

Boat Capsizes: ನದಿಯಲ್ಲಿ ಮುಳುಗಿದ ದೋಣಿ; 12 ಕೂಲಿ ಕಾರ್ಮಿಕರು ಜಲಸಮಾಧಿ

Boat Capsizes: ಬಿಹಾರದ ಸರಯೂ ನದಿಯಲ್ಲಿ ದೋಣಿಯೊಂದು ಮುಳುಗಿದ್ದು, 18 ಜನ ನೀರುಪಾಲಾಗಿದ್ದಾರೆ. ಇನ್ನೂ 15 ಜನ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ನಡೆಯುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

Bihar Boat Capsizes
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಟನಾ: ಬಿಹಾರದ ಸರನ್‌ ಜಿಲ್ಲೆಯ (Saran District) ಸರಯೂ ನದಿಯಲ್ಲಿ (Sarayu River) ಬುಧವಾರ (ನವೆಂಬರ್‌ 1) ದೋಣಿಯೊಂದು (Boat Capsizes) ಮುಳುಗಿದೆ. ಒಟ್ಟು 18 ಜನ ಪ್ರಯಾಣಿಸುತ್ತಿದ್ದ ದೋಣಿ ಮುಳುಗಿದ್ದು, ಇದುವರೆಗೆ ಮೂರು ಶವಗಳು ಪತ್ತೆಯಾಗಿವೆ. 6 ಜನರನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದ್ದು, ಇನ್ನೂ 9 ಜನರ ರಕ್ಷಣೆಗಾಗಿ ತೀವ್ರ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಬುಧವಾರ ಸಂಜೆ ದೋಣಿ ಮುಳುಗಿದೆ ಎಂದು ತಿಳಿದುಬಂದಿದೆ. ದೋಣಿ ಮುಳುಗಿ ಹಲವು ಗಂಟೆ ಕಳೆದಿರುವುದರಿಂದ ನೀರಿನಲ್ಲಿ ನಾಪತ್ತೆಯಾದ 9 ಜನ ಕೂಡ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಆದಾಗ್ಯೂ, ಒಂಬತ್ತು ಜನರ ರಕ್ಷಣೆಗೆ ರಾತ್ರಿಯಾದರೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

“ಮಾಂಝಿ ಬಳಿಯ ಮಾಟಿಯಾರ್‌ ಘಾಟ್‌ನಲ್ಲಿ ಬೋಟ್‌ ಚಲಿಸುತ್ತಿತ್ತು. ಸಣ್ಣ ಬೋಟ್‌ನಲ್ಲಿ 18 ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಮಹಿಳೆಯರು ಹಾಗೂ ಪುರುಷರು ಇರುವ ಹಡಗು ಚಲಿಸುತ್ತಿರುವಾಗಲೇ ಬೃಹತ್‌ ಅಲೆಯೊಂದು ಅಪ್ಪಳಿಸಿರುವ ಸಾಧ್ಯತೆ ಇದೆ. ಹಾಗಾಗಿಯೇ, ಇಡೀ ಹಡಗು ಮಗುಚಿದೆ. ಇದುವರೆಗೆ ಮೂವರ ಶವವನ್ನು ಹೊರತೆಗೆಯಲಾಗಿದೆ. ಆರು ಜನರನ್ನು ರಕ್ಷಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Drowned In River : ಪ್ರತ್ಯೇಕ ಕಡೆಗಳಲ್ಲಿ ಜಾನುವಾರ ತೊಳೆಯಲು ಹೋದ ಮೂವರು ಯುವಕರು ನೀರುಪಾಲು

ನದಿಯಲ್ಲಿ ರಕ್ಷಣಾ ಸಿಬ್ಬಂದಿಯು ರಾತ್ರಿಯಾದರೂ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದುರಂತದ ಸುದ್ದಿ ತಿಳಿದ ನೂರಾರು ಗ್ರಾಮಸ್ಥರು ಕೂಡ ನದಿಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಸರನ್‌ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೇರಿ ಹಲವು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕೆಲ ತಿಂಗಳ ಹಿಂದೆ ಕೇರಳದ ತಾನೂರ್ ತುವಾಲ್ ಬೀಚ್​ ಬಳಿ ಪ್ರವಾಸಿಗರಿದ್ದ ದೋಣಿ ಮುಳುಗಿ 18 ಮಂದಿ ಮೃತಪಟ್ಟಿದ್ದರು. 40ಕ್ಕೂ ಅಧಿಕ ಪ್ರವಾಸಿಗರಿದ್ದ ದೋಣಿ ಸಂಜೆ ಏಳು ಗಂಟೆಯ ವೇಳೆಗೆ ಮುಳುಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ಮಧ್ಯರಾತ್ರಿವರೆಗೂ ಶೋಧ ಕಾರ್ಯ ನಡೆಸಿ ಶವಗಳನ್ನು ಹೊರತೆಗೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

Narendra Modi: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಮಧ್ಯೆ ವಾಕ್ಸಮರ, ವಾಗ್ದಾಳಿ, ಟೀಕೆ, ವ್ಯಂಗ್ಯ ಚುರುಕಾಗಿವೆ. ಇದಕ್ಕೆ ನಿದರ್ಶನ ಎಂಬಂತೆ, “ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜೂನ್‌ 4ರಂದು ಪತನವಾಗುತ್ತದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರತ್ಯುತ್ತರ ನೀಡಿದ್ದು, “ನನ್ನನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಎನ್‌ಡಿಟಿವಿಗೆ ನೀಡಿದ ಸಂದರ್ಶನದ ವೇಳೆ ಮಮತಾ ಬ್ಯಾನರ್ಜಿ ಹೇಳಿಕೆ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು. “ಮಮತಾ ಬ್ಯಾನರ್ಜಿ ಅವರು ಹೇಳಿದ್ದು ನಿಜ. ಜೂನ್‌ 4ರಂದು ಲೋಕಸಭೆ ಅವಧಿ ಮುಗಿಯಲಿದೆ. ಆದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಹೊಸ ಸರ್ಕಾರ ರಚಿಸಲಿದೆ. ನಾನು ಕಾಶಿಯವ (ಅವರ ಲೋಕಸಭೆ ಕ್ಷೇತ್ರ), ನಾನು ಅವಿನಾಶಿ. ಕಾಶಿಯನ್ನು ಹೇಗೆ ನಾಶಪಡಿಸಲು ಆಗುವುದಿಲ್ಲವೋ, ಹಾಗೆಯೇ, ನನ್ನನ್ನು ಕೂಡ ಯಾರಿಂದಲೂ ನಾಶಪಡಿಸಲು ಆಗುವುದಿಲ್ಲ” ಎಂಬುದಾಗಿ ಹೇಳಿದರು.

ಬಿಜೆಪಿಯೇ ಅಧಿಕಾರಕ್ಕೆ ಎಂದ ಸಮೀಕ್ಷೆ

ಲೋಕಸಭೆ ಚುನಾವಣೆ ಕುರಿತು ಸಟ್ಟಾ ಬಜಾರ್‌ ಸಮೀಕ್ಷಾ ವರದಿ ತಯಾರಿಸಿದೆ. ಐದು ಹಂತದ ಮತದಾನದ ಮುಕ್ತಾಯದ ಬಳಿಕ ಸಟ್ಟಾ ಬಜಾರ್ ಸಮೀಕ್ಷಾ ವರದಿ ಪ್ರಕಟಿಸಿದಂತೆ, ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ 300 ಸೀಟುಗಳಲ್ಲಿ ಗೆದ್ದರೂ ಕೆಲ ರಾಜ್ಯಗಳಿಗೆ ಬಿಜೆಪಿಗೆ ಅನುಕೂಲವಾದರೆ, ಕೆಲ ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗುತ್ತಿದೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಬರಲಿವೆ. ತಮಿಳುನಾಡು ಹಾಗೂ ಒಡಿಶಾ ಕೂಡ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳನ್ನು ತಂದುಕೊಡಲಿವೆ ಎಂಬುದಾಗಿ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

Continue Reading

ದೇಶ

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

Kangana Ranaut: ಮಂಡಿಯಲ್ಲಿ ನಡೆದ ಬೃಹತ್‌ ಸಮಾವೇಶಕ್ಕೆ ಆಗಮಿಸಿದ ಮೋದಿ ಅವರು ಕಂಗನಾ ಪರ ಮತಯಾಚನೆ ಮಾಡಿದರು. ಇನ್ನು ನರೇಂದ್ರ ಮೋದಿ ಅವರು ವೇದಿಕೆಗೆ ಬರುತ್ತಲೇ ಕಂಗನಾ ರಣಾವತ್‌ ಅವರು ಕೆಂಪು ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ಇದೇ ವೇಳೆ ಅವರು, ಟಿಕೆಟ್‌ ನೀಡಿದ್ದಕ್ಕಾಗಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಧನ್ಯವಾದ ತಿಳಿಸಿದರು.

VISTARANEWS.COM


on

Kangana Ranaut
Koo

ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ (Mandi) ಲೋಕಸಭೆ ಕ್ಷೇತ್ರದಲ್ಲಿ (Lok Sabha Election 2024) ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut) ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ (ಮೇ 24) ಪ್ರಚಾರ ನಡೆಸಿದ್ದಾರೆ. ಮಂಡಿಯಲ್ಲಿ ನಡೆದ ಬೃಹತ್‌ ಸಮಾವೇಶಕ್ಕೆ ಆಗಮಿಸಿದ ಮೋದಿ ಅವರು ಕಂಗನಾ ಪರ ಮತಯಾಚನೆ ಮಾಡಿದರು. ಇನ್ನು ನರೇಂದ್ರ ಮೋದಿ ಅವರು ವೇದಿಕೆಗೆ ಬರುತ್ತಲೇ ಕಂಗನಾ ರಣಾವತ್‌ ಅವರು ಕೆಂಪು ಗುಲಾಬಿ ಹೂವು ನೀಡಿ ಸ್ವಾಗತಿಸಿದರು. ಈ ಫೋಟೊ ಈಗ ವೈರಲ್‌ ಆಗಿದೆ.

ನರೇಂದ್ರ ಮೋದಿ ಅವರು ಮಂಡಿಯಲ್ಲಿ ಪ್ರಚಾರ ನಡೆಸಿದ, ಗುಲಾಬಿ ಹೂವು ನೀಡಿದ ಫೋಟೊಗಳನ್ನು ಕಂಗನಾ ರಣಾವತ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮೋದಿ ಅವರು ಆಗಮಿಸುವ ಮೊದಲು ಚುನಾವಣೆ ಸಮಾವೇಶ ಉದ್ದೇಶಿಸಿ ಕಂಗನಾ ಮಾತನಾಡಿದರು. “ನನಗೆ ಬಾಲಿವುಡ್‌ನಲ್ಲಿ ಹೊರಗಿನವಳು, ಇಂಗ್ಲಿಷ್‌ ಬರಲ್ಲ ಎಂಬುದಾಗಿ ಮೂದಲಿಸುತ್ತಿತ್ತು. ಆದರೆ, ಜಗತ್ತಿನ ದೊಡ್ಡ ಪಕ್ಷವಾದ ಬಿಜೆಪಿ ಹಾಗೂ ಜಗತ್ತಿನ ಧೀಮಂತ ನಾಯಕರಾದ ಮೋದಿ ಅವರು ನನ್ನನ್ನು ಗುರುತಿಸಿ, ಮಂಡಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದಾರೆ” ಎಂದು ಹೇಳಿದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಟನೆ ತೊರೆಯುವುದಾಗಿ ಕಂಗನಾ ರಣಾವತ್‌ ಘೋಷಣೆ ಮಾಡಿದ್ದಾರೆ. ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

91 ಕೋಟಿ ರೂ. ಆಸ್ತಿಗೆ ಒಡತಿ

ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಕಂಗನಾ ರಣಾವತ್‌ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇವರು ಚುನಾವಣಾ ಅಫಿಡವಿಟ್ ನಲ್ಲಿ 91 ಕೋಟಿ ರೂ.ಗಳ ಆಸ್ತಿಯನ್ನು ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಅವರ ಬಳಿ 5 ಕೋಟಿ ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ನಟಿ ಹಾಗೂ ರಾಜಕಾರಣಿ ಘೋಷಿಸಿದ್ದಾರೆ.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Continue Reading

ದೇಶ

Lok Sabha Election: ನಾಳೆ 6ನೇ ಹಂತದಲ್ಲಿ 58 ಕ್ಷೇತ್ರಗಳಿಗೆ ಮತದಾನ; ಖಟ್ಟರ್‌, ಕನ್ಹಯ್ಯ ಸೇರಿ ಹಲವರ ಭವಿಷ್ಯ ನಿರ್ಧಾರ

Lok Sabha Election: ಶನಿವಾರ ಆರನೇ ಹಂತದ ಮತದಾನ ನಡೆಯಲಿದೆ. ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಯು (Lok Sabha Election 2024) ಅಂತಿಮ ಹಂತ ತಲುಪಿದ್ದು, ಶನಿವಾರ (ಮೇ 24) 58 ಕ್ಷೇತ್ರಗಳಲ್ಲಿ 6ನೇ ಹಂತದ ಮತದಾನ (6th Phase Voting) ನಡೆಯಲಿದೆ. ಸುಷ್ಮಾ ಸ್ವರಾಜ್‌ ಪುತ್ರಿ ಬಾನ್ಸುರಿ ಸ್ವರಾಜ್‌, ಮನೋಹರ ಲಾಲ್‌ ಖಟ್ಟರ್‌, ಕನ್ಹಯ್ಯ ಕುಮಾರ್‌ ಸೇರಿ ಹಲವು ಪ್ರಮುಖ ನಾಯಕರ ಭವಿಷ್ಯವು ಶನಿವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಂಡಿದೆ.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

6ನೇ ಹಂತದಲ್ಲಿ ಕಣಕ್ಕಿಳಿದ ಪ್ರಮುಖ ಅಭ್ಯರ್ಥಿಗಳು

ಬಾನ್ಸುರಿ ಸ್ವರಾಜ್: ನವದೆಹಲಿ ಕ್ಷೇತ್ರ
ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರು ನವದೆಹಲಿ ಲೋಕಸಭಾ ಅಭ್ಯರ್ಥಿಯಾಗಿದ್ದು, ಎಎಪಿಯ ಸೋಮನಾಥ್ ಭಾರ್ತಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಹಾಲಿ ಸಂಸದೆ ಮೀನಾಕ್ಷಿ ಲೇಖಿ ಬದಲು ಬಾನ್ಸುರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಮನೇಕಾ ಗಾಂಧಿ: ಸುಲ್ತಾನ್‌ಪುರ
ಮನೇಕಾ ಗಾಂಧಿ ಸುಲ್ತಾನ್‌ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಮಾಜವಾದಿ ಪಕ್ಷದ ರಾಮ್ ಭುಲ್ ನಿಶಾದ್ ಮತ್ತು ಬಹುಜನ ಸಮಾಜ ಪಕ್ಷದ ಉದಯ್ ರಾಜ್ ವರ್ಮಾ ವಿರುದ್ಧ ಕಣಕ್ಕಿಳಿದಿದ್ದಾರೆ.

Maneka Gandhi

ನವೀನ್ ಜಿಂದಾಲ್: ಕುರುಕ್ಷೇತ್ರ
6ನೇ ಹಂತದ ಚುನಾವಣೆಯಲ್ಲಿ ಹರಿಯಾಣದ ಕುರುಕ್ಷೇತ್ರ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಬಿಜೆಪಿ ಅಭ್ಯರ್ಥಿ ನವೀನ್ ಜಿಂದಾಲ್, ಎಎಪಿಯ ಸುಶೀಲ್ ಗುಪ್ತಾ ಮತ್ತು ಇಂಡಿಯನ್ ನ್ಯಾಷನಲ್ ಲೋಕದಳದ (ಐಎನ್‌ಎಲ್‌ಡಿ) ಅಭಯ್ ಸಿಂಗ್ ಚೌಟಾಲಾ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಂದಾಲ್ ಬಂದಿದ್ದಾರೆ

ಅಭಿಜಿತ್ ಗಂಗೋಪಾಧ್ಯಾಯ: ತಮ್ಲುಕ್ ಕ್ಷೇತ್ರ
ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿ. ಟಿಎಂಸಿಯ ದೇಬಂಗ್ಶು ಭಟ್ಟಾಚಾರ್ಯ ಮತ್ತು ಸಿಪಿಐ(ಎಂ) ನಿಂದ ಸಯಾನ್ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸಿದ್ದಾರೆ. ಗಂಗೋಪಾಧ್ಯಾಯ ಅವರು ಕೋಲ್ಕೊತಾ ಹೈಕೋರ್ಟ್‌ನ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿ ಮಾರ್ಚ್‌ನಲ್ಲಿ ಬಿಜೆಪಿ ಸೇರಿದ್ದರು.

ಪ್ರವೀಣ್ ನಿಶಾದ್: ಸಂತ ಕಬೀರ ನಗರ
ಸಂತ ಕಬೀರ್ ನಗರದಲ್ಲಿ ಬಿಜೆಪಿ ಉಸ್ತುವಾರಿ ಪ್ರವೀಣ್ ನಿಶಾದ್, ಸಮಾಜವಾದಿ ಪಕ್ಷದ ಲಕ್ಷ್ಮೀಕಾಂತ್ ಅಲಿಯಾಸ್ ಪಪ್ಪು ನಿಶಾದ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಮನೋಜ್ ತಿವಾರಿ VS ಮತ್ತು ಕನ್ಹಯ್ಯ ಕುಮಾರ್
ಈಶಾನ್ಯ ದೆಹಲಿ ಕ್ಷೇತ್ರದಲ್ಲಿ ಇಬ್ಬರು ಪ್ರಮುಖ ಅಭ್ಯರ್ಥಿಗಳ ವಿರುದ್ಧ ಕದನ ನಡೆಯಲಿದೆ. ಹಾಲಿ ಸಂಸದ ಮನೋಜ್ ತಿವಾರಿ ಮತ್ತು ಕಾಂಗ್ರೆಸ್‌ನ ಕನ್ಹಯ್ಯ ಕುಮಾರ್ ಕಣದಲ್ಲಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದ ಏಳು ಸಂಸದರ ಪೈಕಿ ಎಲ್ಲ ಆರು ಸಂಸದರನ್ನು ಕೈಬಿಟ್ಟರೆ, ತಿವಾರಿ ಮಾತ್ರ ಕಣದಲ್ಲಿದ್ದಾರೆ.

Kanhaiya Kumar

ಸಂಬಿತ್ ಪಾತ್ರಾ: ಪುರಿ ಕ್ಷೇತ್ರ
ಒಡಿಶಾದ ಪುರಿ ಕ್ಷೇತ್ರದಿಂದ ಸಂಬಿತ್ ಪಾತ್ರ ಸ್ಪರ್ಧಿಸುತ್ತಿದ್ದಾರೆ. ಬಿಜೆಡಿಯ ಅರೂಪ್ ಪಟ್ನಾಯಕ್ ಮತ್ತು ಕಾಂಗ್ರೆಸ್‌ನ ಜಯನಾರಾಯಣ ಪಟ್ನಾಯಕ್ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ.

ದಿನೇಶ್ ಲಾಲ್ ಯಾದವ್ VS ಧರ್ಮೇಂದ್ರ ಯಾದವ್
ಅಜಂಗಢ ಕ್ಷೇತ್ರದಲ್ಲಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಸೋದರ ಸಂಬಂಧಿ ಸಮಾಜವಾದಿ ಪಕ್ಷದ ಧರ್ಮೇಂದ್ರ ಯಾದವ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಅಜಂಗಢ ಕ್ಷೇತ್ರವನ್ನು ಅಖಿಲೇಶ್ ಯಾದವ್ ಗೆದ್ದಿದ್ದರು.

ಮನೋಹರ್ ಲಾಲ್ ಖಟ್ಟರ್: ಕರ್ನಾಲ್
ಬಿಜೆಪಿ ಅಭ್ಯರ್ಥಿ ಮತ್ತು ಹರಿಯಾಣದ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ಕರ್ನಾಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ದಿವ್ಯಾoಶು ಬುಧಿರಾಜ ವಿರುದ್ಧ ಸ್ಪರ್ಧಿಸಿದ್ದಾರೆ.

ಅನಂತ್ ನಾಗ್ -ರಾಜೌರಿ ಕ್ಷೇತ್ರ
ಜಮ್ಮು – ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ಇಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಬಿಜೆಪಿಯು ಇಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

ಇದನ್ನೂ ಓದಿ: Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

Continue Reading

ದೇಶ

Phalodi Satta Bazar: ಚುನಾವಣೆಯಲ್ಲಿ ಮೋದಿ ಹ್ಯಾಟ್ರಿಕ್ ಖಚಿತ; ಸಟ್ಟಾ ಬಜಾರ್‌ ಸಮೀಕ್ಷಾ ವರದಿ ಇಲ್ಲಿದೆ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ 300 ಸೀಟುಗಳಲ್ಲಿ ಗೆದ್ದರೂ ಕೆಲ ರಾಜ್ಯಗಳಿಗೆ ಬಿಜೆಪಿಗೆ ಅನುಕೂಲವಾದರೆ, ಕೆಲ ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗುತ್ತಿದೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಬರಲಿವೆ ಎಂಬುದಾಗಿ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Phalodi Satta Bazar
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಐದು ಹಂತದ ಮತದಾನ ಮುಕ್ತಾಯಗೊಂಡಿದೆ. ಆರನೇ ಹಂತದ ಮತದಾನವು ಶನಿವಾರ (ಮೇ 25) ನಡೆಯಲಿದೆ. ಇದಕ್ಕಾಗಿ ಚುನಾವಣೆ ಆಯೋಗ ಸಕಲ ಸಿದ್ಧತೆ ಕೈಗೊಳ್ಳುತ್ತಿದೆ. ಇದರ ಮಧ್ಯೆಯೇ, ಫಲೋಡಿ ಸಟ್ಟಾ ಬಜಾರ್‌ ಮಾರ್ಕೆಟ್‌ (Phalodi Satta Bazar) ಸಂಸ್ಥೆಯು ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಹೊಸ ಸಮೀಕ್ಷಾ ವರದಿ ಪ್ರಕಟಿಸಿದೆ. ಲೇಟೆಸ್ಟ್‌ ವರದಿ ಪ್ರಕಾರ, ನರೇಂದ್ರ ಮೋದಿ (Narendra Modi) ಅವರು ಹ್ಯಾಟ್ರಿಕ್‌ ಸಾಧಿಸುವುದು ಖಚಿತ ಎಂದು ವರದಿ ತಿಳಿಸಿದೆ.

ಐದು ಹಂತದ ಮತದಾನದ ಮುಕ್ತಾಯದ ಬಳಿಕ ಸಟ್ಟಾ ಬಜಾರ್‌ ಮಾರ್ಕೆಟ್‌ ಸಮೀಕ್ಷಾ ವರದಿ ಪ್ರಕಟಿಸಿದಂತೆ, ಬಿಜೆಪಿಯೊಂದೇ 304-306 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಇನ್ನು ಎನ್‌ಡಿಎ ಮೈತ್ರಿಕೂಟವು ಸುಲಭವಾಗಿ 325-330 ಕ್ಷೇತ್ರಗಳಲ್ಲಿ ಜಯಿಸಲಿದೆ. ಮತ್ತೊಂದೆಡೆ ಕಾಂಗ್ರೆಸ್‌ ಪಕ್ಷವು 60-62 ಕ್ಷೇತ್ರಗಳಲ್ಲಿ ಜಯಿಸಲಿದೆ ಎಂಬುದಾಗಿ ಸಮೀಕ್ಷಾ ವರದಿ ತಿಳಿಸಿದೆ. ಹಾಗಾಗಿ, ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವೇ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂಬುದು ವರದಿಯ ಸಾರಾಂಶವಾಗಿದೆ.

ಎಲ್ಲಿ ಏಳು? ಎಲ್ಲಿ ಬೀಳು?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದೇ 300 ಸೀಟುಗಳಲ್ಲಿ ಗೆದ್ದರೂ ಕೆಲ ರಾಜ್ಯಗಳಿಗೆ ಬಿಜೆಪಿಗೆ ಅನುಕೂಲವಾದರೆ, ಕೆಲ ರಾಜ್ಯಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಲಭಿಸಲಿವೆ ಎಂದು ಹೇಳಲಾಗುತ್ತಿದೆ. ಬಿಹಾರ, ಹರಿಯಾಣ, ಮಹಾರಾಷ್ಟ್ರ ಹಾಗೂ ರಾಜಸ್ಥಾನದಲ್ಲಿ ಬಿಜೆಪಿಯ ಸ್ಥಾನಗಳು ಕಡಿಮೆಯಾಗಲಿವೆ. ಆದರೆ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಬರಲಿವೆ. ತಮಿಳುನಾಡು ಹಾಗೂ ಒಡಿಶಾ ಕೂಡ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳನ್ನು ತಂದುಕೊಡಲಿವೆ ಎಂಬುದಾಗಿ ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.

ಫಲೋಡಿ ಸಟ್ಟಾ ಮಾರುಕಟ್ಟೆ ಇತಿಹಾಸವೇನು?

ಇದೀಗ ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ತಲುಪಿದ್ದು, ಇನ್ನುಳಿದಿರುವುದು ಕೇವಲ ಎರಡೇ ಹಂತದ ಚುನಾವಣೆ. ಹೀಗಿರುವಾಗ ಮತ್ತೊಮ್ಮೆ ಚುನಾವಣಾ ಫಲಿತಾಂಶದ ಭವಿಷ್ಯವಾಣಿಗಾಗಿ ರಾಜಸ್ಥಾನ ಮೂಲಕ ಫಲೋಡಿ ಸಟ್ಟಾ ಬಜಾರ್‌ನತ್ತ ಎಲ್ಲರೂ ಮುಖಮಾಡಿದ್ದಾರೆ. ಫಲೋಡಿ ಸಟ್ಟಾ ಮಾರುಕಟ್ಟೆಯು ಶತಮಾನಗಳ ಇತಿಹಾಸ ಹೊಂದಿದೆ. 19 ನೇ ಶತಮಾನದ ಅಂತ್ಯದ ವೇಳೆಗೆ ಈ ಮಾರುಕಟ್ಟೆಯ ಭವಿಷ್ಯವಾಣಿ ಮೂಲಕ ದೇಶದ ಗಮನವನ್ನೇ ಸೆಳೆದಿತ್ತು. ಹಿಂದೆ ಮಳೆಯ ಮುನ್ಸೂಚನೆಗಾಗಿ ಈ ಮಾರುಕಟ್ಟೆಯ ಮೇಲೆ ಜನ ಅವಲಂಭಿಸಿದ್ದರು. ಬರು ಬರುತ್ತಾ ಈ ಕಲೆ ದಂಧೆಯಾಗಿ ಮಾರ್ಪಾಡಾಗಿತ್ತು. ಅನಂತರದ ದಿನಗಳಲ್ಲಿ ಚುನಾವಣಾ ಭವಿಷ್ಯವಾಣಿ, ಬೆಟ್ಟಿಂಗ್‌ ದಂಧೆಗಳಿಗೆ ಈ ಮಾರುಕಟ್ಟೆ ಕುಖ್ಯಾತಿ ಪಡೆಯಿತು. ಕಾನೂನೂ ಬಾಹಿರವಾಗಿದ್ದರೂ ಕ್ರಿಕೆಟ್‌, ಐಪಿಎಲ್‌ ಸಂದರ್ಭದಲ್ಲಿ ಇಲ್ಲಿ ಅತಿ ಹೆಚ್ಚಾಗಿ ಬೆಟ್ಟಿಂಗ್‌ ನಡೆಯುತ್ತದೆ ಎಂಬ ಆರೋಪ ಕೇಳಿಬರುತ್ತದೆ.

ಇದನ್ನೂ ಓದಿ: Narendra Modi: 2047ರವರೆಗೆ ದೇಶಕ್ಕಾಗಿ ನನ್ನ ಸೇವೆ; ಇದು ದೇವರ ಆದೇಶ ಎಂದ ಮೋದಿ

Continue Reading
Advertisement
Narendra Modi
ದೇಶ5 hours ago

Narendra Modi: ನನ್ನನ್ನು ನಾಶಪಡಿಸಲು ಯಾರಿಂದಲೂ ಸಾಧ್ಯವಿಲ್ಲ; ಮಮತಾ ಬ್ಯಾನರ್ಜಿಗೆ ಮೋದಿ ಚಾಟಿ

ಕರ್ನಾಟಕ5 hours ago

Driving Bus With Umbrella: ಛತ್ರಿ ಹಿಡಿದು ಬಸ್ ಚಾಲನೆ; ಮೋಜಿಗಾಗಿ ವಿಡಿಯೊ ಮಾಡಿದ ಡ್ರೈವರ್‌, ಕಂಡಕ್ಟರ್‌ ಸಸ್ಪೆಂಡ್‌!

Vistara editorial
ಬೆಂಗಳೂರು5 hours ago

ವಿಸ್ತಾರ ಸಂಪಾದಕೀಯ: ಕಸ ವಿಲೇವಾರಿಗೆ ಹೊಸ ಸಂಸ್ಥೆ, ಜಾರಿಕೊಳ್ಳುವ ನೆಪ ಆಗದಿರಲಿ

SRH vs RR
ಕ್ರೀಡೆ5 hours ago

SRH vs RR: ಹೈದರಾಬಾದ್​ಗೆ ಗೆಲುವಿನ ‘ಸನ್​ರೈಸ್’; ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

Electric Shock
ಕ್ರೈಂ6 hours ago

Electric Shock: ಲಿಂಗಸುಗೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

Prajwal Revanna Case
ಕರ್ನಾಟಕ6 hours ago

Prajwal Revanna Case: ರಾಜ್ಯಕ್ಕೆ ಬಂದು ಕಾನೂನು ಗೌರವಿಸಿ; ಪ್ರಜ್ವಲ್‌ಗೆ ವಿಸ್ತಾರ ನ್ಯೂಸ್‌ ಬಹಿರಂಗ ಪತ್ರ

Kangana Ranaut
ದೇಶ7 hours ago

Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

T20 World Cup 2024
ಕ್ರೀಡೆ7 hours ago

T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

Prajwal Revanna Case
ಕರ್ನಾಟಕ7 hours ago

Prajwal Revanna Case: ವಕೀಲ ದೇವರಾಜೇಗೌಡಗೆ ಇನ್ನೂ 14 ದಿನ ಜೈಲೇ ಗತಿ; ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

Yuzvendra Chahal
ಕ್ರಿಕೆಟ್7 hours ago

Yuzvendra Chahal: ಸಿಕ್ಸರ್​ ಹೊಡೆಸಿಕೊಂಡು ಐಪಿಎಲ್​ನಲ್ಲಿ ಕೆಟ್ಟ ದಾಖಲೆ ಬರೆದ ಚಹಲ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌