Zika Virus : ರಾಯಚೂರು ಆಯ್ತು ಈಗ ಚಿಕ್ಕಬಳ್ಳಾಪುರದಲ್ಲಿ ಝಿಕಾ ಭೀತಿ! - Vistara News

ಆರೋಗ್ಯ

Zika Virus : ರಾಯಚೂರು ಆಯ್ತು ಈಗ ಚಿಕ್ಕಬಳ್ಳಾಪುರದಲ್ಲಿ ಝಿಕಾ ಭೀತಿ!

Zika Virus : ಮತ್ತೆ ಕರ್ನಾಟಕದಲ್ಲಿ ಝಿಕಾ ವೈರಸ್‌ ಭೀತಿ ಹೆಚ್ಚಾಗಿದೆ. ಚಿಕ್ಕಬಳ್ಳಾಪುರದಲ್ಲಿ ಸೋಂಕು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಅಲರ್ಟ್‌ ಆಗಿದೆ.

VISTARANEWS.COM


on

After Raichur Zika virus detected in Chikkaballapura
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನ ಬಳಿಕ ಜನರಿಗೆ ಮತ್ತೆ ತಲೆನೋವು ಶುರುವಾಗಿದೆ. ನೆರೆಯ ಕೇರಳ, ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳಲ್ಲಿ ಕಾಣಿಸಿಕೊಂಡಿದ್ದ ಝಿಕಾ ಸೋಂಕು ಇದೀಗ ಮತ್ತೆ ಕರ್ನಾಟಕಕ್ಕೆ ಕಾಲಿಟ್ಟಿದೆ. ಮೊದಲ ಝಿಕಾ ವೈರಸ್ (Zika virus) ರಾಯಚೂರಿನಲ್ಲಿ ಪತ್ತೆ ಆಗಿತ್ತು. ಇದೀಗ ಚಿಕ್ಕಬಳ್ಳಾಪುರದಲ್ಲಿ ವೈರಸ್‌ ಪತ್ತೆಯಾಗಿದೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ತಲಕಾಯಲಕೊಂಡ ಬಳಿ ಝಿಕಾ ವೈರಸ್ ಪತ್ತೆ ಆಗಿದೆ. ತಲಕಾಯಲಕೊಂಡ ಗ್ರಾಮದ ಬಳಿ ಕೀಟಶಾಸ್ತ್ರಜ್ಞ ಪರೀಕ್ಷಿಸಿದ ಸೊಳ್ಳೆಯೊಂದರಲ್ಲಿ ಸೋಂಕು ಕಂಡಿದೆ. ಸೋಂಕಿನ ಲಕ್ಷಣಗಳು ಕಂಡು ಬಂದಾಕ್ಷಣ ವೈದ್ಯಕೀಯ ತಪಾಸಣೆ ಮಾಡಿಸುವಂತೆ ವೈದ್ಯರಿಗೆ ಸಲಹೆ ನೀಡಿದ್ದಾರೆ.

ಎರಡು ದಿನಗಳ ಹಿಂದೆ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಎಚ್ಒ‌ ಪ್ರಸ್ತಾಪದ ಬೆನ್ನಲ್ಲೇ ವೈದ್ಯಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಬಗ್ಗೆ ಆಡಳಿತ ವೈದ್ಯಾಧಿಕಾರಿ ವೆಂಕಟೇಶ್ ಮಾಹಿತಿ ನೀಡಿದ್ದು, ತಲಕಾಯಬೆಟ್ಟ ,ಬಚ್ಚನಹಳ್ಳಿ, ವೆಂಕಟಾಪುರ ದಿಬ್ಬೂರಹಳ್ಳಿ ಗ್ರಾಮಗಳಲ್ಲಿ ಗರ್ಭಿಣಿ‌ರ ರಕ್ತ ಪರೀಕ್ಷೆ ಮಾಡಲಾಗಿದೆ. ರಕ್ತ ಮಾದರಿಯನ್ನು ಬೆಂಗಳೂರಿನ ಲ್ಯಾಬ್‌ಗೆ‌ ರವಾನೆ ಮಾಡಲಾಗಿದೆ.

ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಲ್ಲಿ ಆರು ಕಡೆ ಸೊಳ್ಳೆಗಳ ಪರೀಕ್ಷೆ ನಡೆಸಲಾಗಿತ್ತು ಎಂದು ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ವೈದ್ಯಾಧಿಕಾರಿ ಮಹೇಶ್ ಕುಮಾರ್ ಹೇಳಿದ್ದಾರೆ. ಸೊಳ್ಳೆಗಳ ರಕ್ತ ಮಾದರಿಯನ್ನು ಬೆಂಗಳೂರಿನ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಝಿಕಾ ವೈರಸ್ ಪತ್ತೆಯಾಗಿರುವ ಕುರಿತು ಕೇಂದ್ರ ಕಛೇರಿಯಿಂದ ವರದಿ ಬಂದಿತ್ತು. ಹೀಗಾಗಿ ತಕ್ಷಣ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮಾಹಿತಿ ನೀಡಿದ್ದೆವು. ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಹಾಗು ಸುತ್ತಮುತ್ತ ಐದು ಗ್ರಾಮಗಳಲ್ಲಿ ಸರ್ವೆ ಮಾಡಿದ್ದೇವೆ. ಐದು ಗ್ರಾಮಗಳಲ್ಲಿ ಮೂವತ್ತು ಗರ್ಭಿಣಿಯರ ರಕ್ತ ಮಾದರಿಯನ್ನು ಲ್ಯಾಬ್ ಕಳುಹಿಸಿದ್ದೇವೆ. ಸದ್ಯ ವರದಿಗಾಗಿ ಕಾಯುತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Fraud Case : ಎನ್ವಿ ಗ್ರೀನ್ ಕಂಪೆನಿ ಮಾಲೀಕನ ವಿರುದ್ಧ ಎಫ್ಐಆರ್; ಕೋಟಿ ವಂಚಿಸಿದ್ರಾ ಅಶ್ವತ್ಥ್‌ ಹೆಗ್ಡೆ?

ಏನಿದು ಝಿಕಾ ವೈರಸ್?

ಏಡಿಸ್‌ ಸೊಳ್ಳೆಯಿಂದ ಹರಡುವ ರೋಗವಿದು. ಥೇಟ್‌ ಡೆಂಗ್ಯೂ, ಚಿಕೂನ್ ಗುನ್ಯಾ ಅಥವಾ ಹಳದಿ ಜ್ವರದ ಮಾದರಿಯಲ್ಲಿ ಇದು ಹರಡುತ್ತದೆ. ಈ ಸೊಳ್ಳೆಗಳು ಹೆಚ್ಚಾಗಿ ದಾಳಿ ಮಾಡುವುದು ಹಗಲು ಹೊತ್ತಿನಲ್ಲಿ. ಹಾಗೆಂದು ಅವು ರಾತ್ರಿಯ ಹೊತ್ತು ಕಚ್ಚದೇ ಕರುಣೆ ತೋರುತ್ತವೆ ಎಂದಲ್ಲ! ಇವು ಮನೆಯ ಒಳಗೆ-ಹೊರಗೆ ಎಂಬ ಭೇದವಿಲ್ಲದೆ, ಎಲ್ಲೆಂದರಲ್ಲಿ ಇರುತ್ತವೆ. ಹಾಗಾಗಿ ಯಾವುದೇ ಕಾರಣಕ್ಕೂ ಸೊಳ್ಳೆಯ ಕಡಿತಕ್ಕೆ ಒಳಗಾಗುವಂತಿಲ್ಲ. ‌

ಹಾಗೆಂದು ಸೋಂಕು ಹರಡುವುದಕ್ಕೆ ಇದೊಂದೇ ಮಾರ್ಗವೂ ಅಲ್ಲ. ತಾಯಿಯ ಹೊಟ್ಟೆಯಲ್ಲಿರುವ ಮಗುವಿಗೆ, ಎದೆಹಾಲಿನಿಂದ ಮತ್ತು ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಈ ರೋಗ ಹರಡುತ್ತದೆ. ರಕ್ತಪೂರಣದಿಂದ ಹರಡುವ ಬಗ್ಗೆ ಖಚಿತ ಮಾಹಿತಿ ಲಭ್ಯವಿಲ್ಲ. ಆದರೆ ಖಂಡಿತವಾಗಿಯೂ ಕೋವಿಡ್‌ನಂತೆ ಕೆಮ್ಮು, ಸೀನಿನಿಂದೆಲ್ಲ ಹರಡುವ ರೋಗವಲ್ಲ ಇದು.

ರಕ್ತಪರೀಕ್ಷೆಯಿಂದ ದೇಹದಲ್ಲಿ ವೈರಸ್‌ ಇದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬಹುದು. ಒಂದೊಮ್ಮೆ ಪರೀಕ್ಷೆಯಲ್ಲಿ ಝಿಕಾ ವೈರಸ್‌ ಸೋಂಕು ಖಾತ್ರಿಯಾದರೆ, ವೈದ್ಯರನ್ನು ಸಂಪರ್ಕಿಸಿ ಮನೆಯಲ್ಲೇ ಚಿಕಿತ್ಸೆ ಪಡೆಯಬಹುದು. ಕೋವಿಡ್‌ ರೋಗಿಗಳಂತೆ ಅವರನ್ನು 14 ದಿನಗಳ ಕ್ವಾರಂಟೈನ್‌ ಇಡಬೇಕಾದ ಅಗತ್ಯವಿಲ್ಲ. ಸಾಕಷ್ಟು ದ್ರವಾಹಾರ, ವಿಶ್ರಾಂತಿ ಕಡ್ಡಾಯವಾಗಿ ರೋಗಿಗಳಿಗೆ ಬೇಕು. ಮನೆಯ ಎಲ್ಲರೂ ಸೊಳ್ಳೆಪರದೆಯನ್ನು ಬಳಸುವುದು ಅತ್ಯಗತ್ಯ.

ಇದನ್ನೂ ಓದಿ: Karnataka Weather : ಕರಾವಳಿ, ದಕ್ಷಿಣ ಒಳನಾಡಲ್ಲಿ ಮಳೆ ಸಾಧ್ಯತೆ; ಉತ್ತರದಲ್ಲಿ ಒಣ ಹವೆ

ಈ ಮುಂಜಾಗ್ರತಾ ಕ್ರಮ ಅತ್ಯಗತ್ಯ

ಸೊಳ್ಳೆಗಳ ಮೂಲವನ್ನು ಮೊದಲು ನಾಶಪಡಿಸಿ. ನಿಂತ ನೀರಿನಲ್ಲಿ ಏಡಿಸ್‌ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುತ್ತವೆ. ಅಕಾಲಿಕ ಮಳೆಯಿಂದ ಎಲ್ಲೆಂದರೆ ನೀರು ನಿಲ್ಲುವುದು ಸಾಮಾನ್ಯ ದೃಶ್ಯವಾಗಿದೆ. ಅಂಥವು ಮನೆಯ ಸುತ್ತಲೆಲ್ಲೂ ಇಲ್ಲದಂತೆ ನೋಡಿಕೊಳ್ಳಿ.

ತುಂಬು ತೋಳಿನ ಮತ್ತು ಕಾಲಿನ ವಸ್ತ್ರಗಳನ್ನೇ ಧರಿಸಿ. ಸೊಳ್ಳೆಗಳಿಂದ ದೂರವಿರಲು ನಿರೋಧಕ ಕ್ರೀಮ್‌, ಸ್ಪ್ರೇಗಳು ನಿಮಗೆ ಸಹನೀಯವಾದರೆ ಅವುಗಳನ್ನು ಬಳಸಿ. ಶಿಶುಗಳಿದ್ದರೆ, ಅವುಗಳ ತೊಟ್ಟಿಲು, ಹಾಸಿಗೆಗಳಿಗೆ ಅವಶ್ಯವಾಗಿ ಸೊಳ್ಳೆಪರದೆ ಕಟ್ಟಿ. ಸೊಳ್ಳೆಗಳ ಉಪಟಳ ತೀರಾ ಹೆಚ್ಚಿರುವ ಪ್ರದೇಶ ನಿಮ್ಮದಾಗಿದ್ದರೆ ಫಾಗಿಂಗ್‌ ಮಾಡುವುದು ಸಹಕಾರಿ.

ಯಾವುದೇ ಸಾಕು ಪ್ರಾಣಿಗಳಿಗೆ, ಉದಾ- ಮನೆಯ ನಾಯಿ, ಬೆಕ್ಕುಗಳಿಗೆ ಈ ವೈರಸ್‌ ಹರಡಿಲ್ಲ ಅಥವಾ ಈ ಪ್ರಾಣಿಗಳಿಂದ ಮಾನವರಿಗೆ ಹರಡಿದ ಉದಾಹರಣೆಗಳಿಲ್ಲ.

ಝಿಕಾ ವೈರಸ್‌ ಇರುವಂಥ ಸ್ಥಳಗಳಿಗೆ ಅಥವಾ ಸೊಳ್ಳೆಯ ಉಪದ್ರ ಹೆಚ್ಚಿರುವಂಥ ಸ್ಥಳಗಳಿಗೆ ಪ್ರಯಾಣ ಮಾಡುವುದು ಅನಿವಾರ್ಯ ಅಲ್ಲದಿದರೆ, ಪ್ರಯಾಣವನ್ನು ಮುಂದೂಡಿ. ರೋಗ ಲಕ್ಷಣಗಳು ಕಂಡುಬಂದರೆ ಕೂಡಲೆ ವೈದ್ಯರನ್ನು ಸಂಪರ್ಕಿಸಿ. ಈ ರೋಗ ಸಾಮಾನ್ಯವಾಗಿ ಜೀವ ತೆಗೆಯುವಂಥದ್ದಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips Kannada: ಕುಂಬಳಕಾಯಿ ಬೀಜದಲ್ಲಿದೆ ನಮ್ಮ ಆರೋಗ್ಯದ ಗುಟ್ಟು!

Health Tips Kannada: ʻಅಲ್ಲೇನಿದೆ? ಕುಂಬಳಕಾಯಿ!ʼ ಎಂದು ಸಸಾರ ಮಾಡುವಂತಿಲ್ಲ ಈ ತರಕಾರಿಯನ್ನು. ಕುಂಬಳಕಾಯಿಯ ಸತ್ವಗಳ ಬಗ್ಗೆ ತಿಳಿದರೆ, ಆಡಿಕೊಳ್ಳುವ ಬಾಯಿಗಳೆಲ್ಲ ಮುಚ್ಚಿಕೊಳ್ಳಬಹುದು. ಇಡೀ ಕುಂಬಳಕಾಯಿ ಬಿಡಿ, ಅದರ ಬೀಜಗಳ ಮಹಾತ್ಮೆಯನ್ನು ತಿಳಿದುಕೊಂಡರೂ ಸಾಕು ಎಷ್ಟೊಂದು ಆರೋಗ್ಯಕರ ಲಾಭಗಳನ್ನು ಪಡೆಯಬಹುದು ಗೊತ್ತೇ? ಹೆಚ್ಚಿನ ಮಾಹಿತಿ ಈ ಲೇಖನದಲ್ಲಿದೆ.

VISTARANEWS.COM


on

Health Tips Kannada
Koo

ಕುಂಬಳಕಾಯಿ ಎನ್ನುತ್ತಿದ್ದಂತೆ (Health Tips Kannada) ಹೆಗಲು ಮುಟ್ಟಿಕೊಳ್ಳುವ ವಿಷಯ ಅಲ್ಲವಿದು. ಕುಂಬಳಬೀಜದ ವಿಷಯ ನಾವಿಲ್ಲಿ ಮಾತಾಡುತ್ತಿರುವುದು. ʻಅಲ್ಲೇನಿದೆ. ಬರೀ ಕುಂಬಳಕಾಯಿʼ ಎನ್ನುವಂಥ ಮಾತುಗಳಿಂದ ಅದೊಂದು ಕೇವಲವಾದ ವಸ್ತು ಎನ್ನುವಂಥ ಭಾವ ಮೂಡುತ್ತದೆ. ಆದರೆ ಕುಂಬಳಕಾಯಿಯ ಸತ್ವಗಳ ಬಗ್ಗೆ ತಿಳಿದರೆ, ಆಡಿಕೊಳ್ಳುವ ಬಾಯಿಗಳೆಲ್ಲ ಮುಚ್ಚಿಕೊಳ್ಳಬಹುದು. ಇಡೀ ಕುಂಬಳಕಾಯಿ ಬಿಡಿ, ಅದರ ಬೀಜಗಳ ಮಹಾತ್ಮೆಯನ್ನು ತಿಳಿದುಕೊಂಡರೂ ಸಾಕು. ನಾವಿಂದು ಮಾಡುವುದಕ್ಕೆ ಹೊರಟಿರುವುದು ಅದನ್ನೇ… ಕುಂಬಳ ಬೀಜಗಳ ಸದ್ಗುಣಗಳನ್ನು ತಿಳಿಯಲು. ಹಲವು ಸಮಸ್ಯೆಗಳಿಗೆ ಸರಳ ಸಮಾಧಾನದಂತೆ ಈ ಪುಟ್ಟ ಬೀಜಗಳು ಕಂಡುಬರುತ್ತವೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು, ಹೃದಯದ ಆರೋಗ್ಯ ಸುಧಾರಿಸುವವರೆಗೆ ಹಲವು ರೀತಿಯಲ್ಲಿ ಕುಂಬಳಬೀಜ ನಮಗೆ ಉಪಕಾರಿಯಾಗಬಲ್ಲದು. ಹಲವು ರೀತಿಯ ಖನಿಜಗಳು ಮತ್ತು ವಿಟಮಿನ್‌ಗಳಿಂದ ಸಮೃದ್ಧವಾಗಿರುವ ಈ ಜೀವಗಳು, ಹಸಿವಾದಾಗ ಅಥವಾ ಕಳ್ಳ ಹಸಿವೆಯನ್ನು ನಿವಾರಿಸುವುದನ್ನು ಸುಮ್ಮನೆ ಬಾಯಾಡುವುದಕ್ಕೆ ಜೊತೆಯಾಗುತ್ತವೆ. ಇದನ್ನು ಗೋಡಂಬಿಯಂತೆ ಹಲವು ಖಾದ್ಯಗಳಿಗೆ ಬಳಸಬಹುದು. ಚಿಟಿಕೆ ಉಪ್ಪಿನೊಂದಿಗೆ ಹುರಿದರೆ, ಚಹಾ ಜೊತೆಗೆ ಬಾಯಿಗೆಸೆದುಕೊಳ್ಳಬಹುದು.

Immunity Against Diseases Kantola Benefits

ಪ್ರತಿರೋಧಕತೆ ಹೆಚ್ಚಳ

ವಿಟಮಿನ್‌ ಇ ಮತ್ತು ಜಿಂಕ್‌ ಸತ್ವಗಳಿಂದ ಸಮೃದ್ಧವಾಗಿರುವ ಈ ಬೀಜಗಳು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಲ್ಲವು. ಸೋಂಕುಗಳ ವಿರುದ್ಧ ಹೋರಾಡುವಂಥ ಸಾಮರ್ಥ್ಯ ವಿಟಮಿನ್‌ ಇ ಗಿದೆ. ದೇಹದಲ್ಲಿ ಅಂಡಲೆಯುವ ಮುಕ್ತ ಕಣಗಳನ್ನು ಕಟ್ಟಿಹಾಕುವ ಸಾಧ್ಯತೆಯೂ ಇ ಜೀವಸತ್ವಕ್ಕಿದೆ. ಪ್ರತಿರೋಧಕ ಶಕ್ತಿಯನ್ನು ಜಾಗೃತಗೊಳಿಸುವ ಬಗ್ಗೆ ಸತುವಿನ ಕಾರ್ಯಸಾಮರ್ಥ್ಯ ಕಡಿಮೆಯೇನಿಲ್ಲ. ಹಾಗಾಗಿ ಮಳೆಗಾಲದ ಸೋಂಕುಗಳನ್ನು ಮಟ್ಟ ಹಾಕುವುದಕ್ಕೆ ಉಳಿದೆಲ್ಲ ಕ್ರಮಗಳ ಜೊತೆಗೆ ಕುಂಬಳಬೀಜ ಬಾಯಾಡಿಸುವುದನ್ನು ಮರೆಯಬೇಡಿ.

Vastu Tips

ನಿದ್ದೆ ಹೆಚ್ಚಳ

ಕುಂಬಳಬೀಜದಲ್ಲಿ ಟ್ರಿಪ್ಟೊಫ್ಯಾನ್‌ ಎಂಬ ಅಮೈನೊ ಆಮ್ಲವಿದೆ. ಇದು ಸೆರೊಟೋನಿನ್‌ ಮತ್ತು ಮೆಲಟೋನಿನ್‌ನಂಥ ಹ್ಯಾಪಿ ಹಾರ್ಮೋನುಗಳ ಉತ್ಪಾದನೆಗೆ ಪ್ರಚೋದನೆ ನೀಡುತ್ತದೆ. ಈ ಹಾರ್ಮೋನುಗಳು ನಮ್ಮ ಮೂಡ್‌ ಮತ್ತು ನಿದ್ದೆಯನ್ನು ನಿಯಂತ್ರಿಸುತ್ತವೆ. ಹಾಗಾಗಿ ನಿದ್ರಾಹೀನತೆಯನ್ನು ದೂರ ಮಾಡಿ, ಕಣ್ತುಂಬಾ ನಿದ್ದೆ ತರಿಸಿ, ದೇಹ-ಮನಸ್ಸುಗಳ ಆರೋಗ್ಯವನ್ನು ಕಾಪಾಡುವಲ್ಲಿ ಈ ಕಿರುಬೀಜಗಳದ್ದು ದೊಡ್ಡ ಕಾಣಿಕೆ.

ಉತ್ಕರ್ಷಣ ನಿರೋಧಕತೆ

ಇದರಲ್ಲಿ ವಿಟಮಿನ್‌ ಇ ಮಾತ್ರವಲ್ಲ, ದೊಡ್ಡ ಪ್ರಮಾಣದಲ್ಲಿ ಕೆರೊಟಿನಾಯ್ಡ್‌ಗಳೂ ಇವೆ. ಇವೆಲ್ಲ ದೇಹವನ್ನು ಉರಿಯೂತದಿಂದ ಕಾಪಾಡುವ ಗುಣವನ್ನು ಹೊಂದಿವೆ. ದೇಹದ ಕೋಶಗಳನ್ನು ಮುಕ್ತಕಣಗಳಿಂದ ಕಾಪಾಡಿ, ಅವುಗಳ ಜೀವಿತಾವಧಿಯನ್ನು ಹೆಚ್ಚಿಸುತ್ತವೆ. ಇದರಿಂದ ದಾಂಗುಡಿಯಿಡುವ ಮಾರಕ ರೋಗಗಳನ್ನು ದೂರ ಮಾಡುವುದಕ್ಕೆ ಸಾಧ್ಯವಾಗುತ್ತದೆ.

healthy internal organs of human digestive system

ಜೀರ್ಣಕಾರಿ

ಇದರಲ್ಲಿರುವ ನಾರಿನಂಶದಿಂದಾಗಿ ಜೀರ್ಣಾಂಗಗಳ ಆರೋಗ್ಯ ಸುಧಾರಿಸುತ್ತದೆ. ಮಲಬದ್ಧತೆಯನ್ನು ನಿವಾರಿಸಿ, ಪಚನಕ್ರಿಯೆಯನ್ನು ಚುರುಕಾಗಿಸುತ್ತದೆ. ನಾರುಯುಕ್ತ ಆಹಾರಗಳು ಜೀರ್ಣಾಂಗಗಳ ಆರೋಗ್ಯಕ್ಕೆ ಮಾತ್ರವಲ್ಲ, ತೂಕ ಇಳಿಕೆಗೂ ಸೂಕ್ತವಾದವು. ಇಂಥ ಆಹಾರಗಳು ಬೇಗನೇ ಹೊಟ್ಟೆ ತುಂಬಿದ ಅನುಭವವನ್ನು ನೀಡಿ, ಬೇಗ ಹಸಿವಾಗದಂತೆ ತಡೆಯುತ್ತವೆ.

ಮೆಗ್ನೀಶಿಯಂ ವಿಫುಲ

ದೇಹದ ಹಲವು ಕೆಲಸಗಳನ್ನು ನಿರ್ವಹಿಸುವುದಕ್ಕೆ ನಮಗೆ ಮೆಗ್ನೀಶಿಯಂ ಅಗತ್ಯವಾದ ಖನಿಜ. ರಕ್ತದೊತ್ತಡ ಸಮತೋಲನದಲ್ಲಿ ಇರಿಸುವುದು, ಸ್ನಾಯು ಮತ್ತು ನರಗಳ ಆರೋಗ್ಯ ರಕ್ಷಣೆ, ಮೂಳೆಗಳನ್ನು ಭದ್ರಗೊಳಿಸುವುದು ಮತ್ತು ದೇಹಕ್ಕೆ ಬೇಕಾದ ಶಕ್ತಿ ಒದಗಿಸುವಂಥ ಹಲವು ಕೆಲಸಗಳು ಈ ಖನಿಜದ ಪಾಲಿಗಿದೆ. ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ, ಬದುಕಿನ ಸ್ವಾಸ್ಥ್ಯ ಹೆಚ್ಚಿಸುವುದಕ್ಕೆ ಮೆಗ್ನೀಶಿಯಂ ಬೇಕು. ಈ ಖನಿಜ ಕುಂಬಳ ಬೀಜದಲ್ಲಿ ಹೇರಳವಾಗಿದೆ.

Obese male suffering from chest pain high blood pressure cholesterol level Sesame Benefits

ಕೊಲೆಸ್ಟ್ರಾಲ್‌ ಕಡಿಮೆ

ಕುಂಬಳಕಾಯಿ ಬೀಜಗಳಲ್ಲಿ ಆರೋಗ್ಯಯುತ ಕೊಬ್ಬು ಮತ್ತು ಪ್ರೊಟೀನ್‌ಗಳು ತುಂಬಿವೆ. ಆರೋಗ್ಯಕರ ಕೊಬ್ಬಿನ ಸೇವನೆಯಿಂದ ದೇಹದಲ್ಲಿರುವ ಕೊಲೆಸ್ಟ್ರಾಲ್‌ನಂಥ ಬೇಡದ ಕೊಬ್ಬು ಜಮೆಯಾಗುವುದನ್ನು ತಡೆಯಬಹುದು. ಇದರಿಂದ ಹೃದಯದ ತೊಂದರೆಗಳನ್ನೂ ದೂರ ಇರಿಸಬಹುದು. ಹಾಗಾಗಿ ಸುಮ್ಮನೆ ತಿನ್ನಿ, ಹುರಿದು ತಿನ್ನಿ, ಟೋಸ್ಟ್‌ ಮಾಡಿ ತಿನ್ನಿ, ಬೇರೆ ಖಾದ್ಯಗಳಿಗೆ ಬಳಸಿ- ಹೇಗಾದರೂ ಸರಿ, ಕುಂಬಳ ಬೀಜವನ್ನು ನಿತ್ಯದ ಆಹಾರದಲ್ಲಿ ಸೇರಿಸಿಕೊಳ್ಳಿ, ಆರೋಗ್ಯ ಹೆಚ್ಚಿಸಿಕೊಳ್ಳಿ.

Continue Reading

ಆರೋಗ್ಯ

Fatty Lever Disease: ಎಚ್ಚರ ವಹಿಸಿ, ಮಕ್ಕಳನ್ನು ಸದ್ದಿಲ್ಲದೆ ಕಾಡುತ್ತಿದೆ ಫ್ಯಾಟಿ ಲಿವರ್‌ ಕಾಯಿಲೆ!

Fatty lever disease: ಮಕ್ಕಳ ಆಟವೆಂದರೆ ಏನೂ ಆದೀತು. ಕುಂಟಾಬಿಲ್ಲೆಯಿಂದ ಹಿಡಿದು, ಕಣ್ಣಾಮುಚ್ಚಾಲೆ, ಗಾಳಿಪಟ, ಮರಕೋತಿ, ಜೂಟಾಟ, ಜೋಕಾಲಿ… ಪಟ್ಟಿ ಉದ್ದವಾಗುತ್ತದೆ. ಆದರೆ ಈ ಯಾವ ಆಟಗಳೂ ಈಗಿನ ಮಕ್ಕಳಿಗಲ್ಲ, ಹಳೆಯ ಕಾಲದ ಚಿಣ್ಣರಿಗೆ. ಈಗಿನ ಮಕ್ಕಳ ಆಟದ ಪಟ್ಟಿಯನ್ನು ಕೊಡುವುದಾದರೆ ಫ್ರೀಫಯರ್‌, ಪಬ್‌ಜೀ, ಸಬ್‌ವೇ ಸರ್ಫರ್‌, ಕ್ಯಾಂಡಿ ಕ್ರಷ್…‌ ಇಂಥವೇ ಇರುತ್ತವೆ ಅದರಲ್ಲಿ. ಸದಾ ಕಾಲ ಪರದೆಗೇ ಅಂಟಿಕೊಂಡಿರುವ ಈ ಮಕ್ಕಳಲ್ಲಿ ಹೊರಗಿನ ಆಟ ಲುಪ್ತವಾದ್ದರಿಂದ ಆಗುತ್ತಿರುವ ಸಮಸ್ಯೆಗಳು ಒಂದೆರಡೇ ಅಲ್ಲ. ಕೇವಲ ದೃಷ್ಟಿದೋಷವನ್ನು ಮಾತ್ರವೇ ಪರದೆಯ ವ್ಯಸನ ನೀಡುತ್ತಿಲ್ಲ, ಜೊತೆಗೆ ಫ್ಯಾಟಿ ಲಿವರ್‌ನಂಥ ಗಂಭೀರವಾದ ಯಕೃತ್ತಿನ ಸಮಸ್ಯೆಗಳನ್ನು ಸಹ ನೀಡುತ್ತವೆ.

VISTARANEWS.COM


on

Fatty Lever Disease
Koo

ಟಿ ಲಿವರ್‌ ಸಮಸ್ಯೆ ಕೇವಲ (Fatty lever disease) ವಯಸ್ಕರಿಗೆ ಎಂದು ಭಾವಿಸಬೇಡಿ, ಮಕ್ಕಳಲ್ಲೂ ವ್ಯಾಪಕವಾಗುತ್ತಿದೆ ಎಂದು ಅಧ್ಯಯನಗಳು ಎಚ್ಚರಿಸುತ್ತಿವೆ. ದೋಷಪೂರಿತ ಆಹಾರಶೈಲಿಯ ಜೊತೆಗೆ ಆಟ, ಓಟಗಳೂ ಮಕ್ಕಳಲ್ಲಿ ಕಾಣೆಯಾಗಿರುವುದು ಆತಂಕವನ್ನು ಹೆಚ್ಚಿಸುತ್ತಿದೆ. ಮಕ್ಕಳ ಆಟವೆಂದರೆ ಏನೂ ಆದೀತು. ಕುಂಟಾಬಿಲ್ಲೆಯಿಂದ ಹಿಡಿದು, ಕಣ್ಣಾಮುಚ್ಚಾಲೆ, ಗಾಳಿಪಟ, ಮರಕೋತಿ, ಜೂಟಾಟ, ಜೋಕಾಲಿ… ಪಟ್ಟಿ ಉದ್ದವಾಗುತ್ತದೆ. ಆದರೆ ಈ ಯಾವ ಆಟಗಳೂ ಈಗಿನ ಮಕ್ಕಳಿಗಲ್ಲ, ಹಳೆಯ ಕಾಲದ ಚಿಣ್ಣರಿಗೆ. ಈಗಿನ ಮಕ್ಕಳ ಆಟದ ಪಟ್ಟಿಯನ್ನು ಕೊಡುವುದಾದರೆ ಫ್ರೀಫಯರ್‌, ಪಬ್‌ಜೀ, ಸಬ್‌ವೇ ಸರ್ಫರ್‌, ಕ್ಯಾಂಡಿ ಕ್ರಷ್…‌ ಇಂಥವೇ ಇರುತ್ತವೆ ಅದರಲ್ಲಿ. ಸದಾ ಕಾಲ ಪರದೆಗೇ ಅಂಟಿಕೊಂಡಿರುವ ಈ ಮಕ್ಕಳಲ್ಲಿ ಹೊರಗಿನ ಆಟ ಲುಪ್ತವಾದ್ದರಿಂದ ಆಗುತ್ತಿರುವ ಸಮಸ್ಯೆಗಳು ಒಂದೆರಡೇ ಅಲ್ಲ. ಕೇವಲ ದೃಷ್ಟಿದೋಷವನ್ನು ಮಾತ್ರವೇ ಪರದೆಯ ವ್ಯಸನ ನೀಡುತ್ತಿಲ್ಲ, ಜೊತೆಗೆ ಫ್ಯಾಟಿ ಲಿವರ್‌ನಂಥ ಗಂಭೀರವಾದ ಯಕೃತ್ತಿನ ಸಮಸ್ಯೆಗಳನ್ನು ಸಹ ನೀಡುತ್ತವೆ. ಅದರಲ್ಲೂ ಭಾರತದಲ್ಲಿ ಪ್ರತಿ ಮೂರನೇ ಮಗುವಿಗೆ ಯಕೃತ್ತಿನ ಕೊಬ್ಬು ಕಾಡುತ್ತಿದೆ ಎನ್ನುವುದು ಇತ್ತೀಚಿನ ಅಧ್ಯಯನಗಳ ಸಾರ.

Fatty Lever

ವಿವರಗಳು ಇಂತಿವೆ

ದಿನಕ್ಕೆ ಆರು ತಾಸುಗಳ ದೈಹಿಕ ಚಟುವಟಿಕೆಯನ್ನು ಮಾಡದ ಮಕ್ಕಳು ಯಕೃತ್ತಿನ ಸಮಸ್ಯೆಗೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೈಹಿಕ ಚಟುವಟಿಕೆಯೆಂದರೆ ಯಾವುದೋ ಕ್ರಮಬದ್ಧವಾದ ಆಟವನ್ನೇ ಮಕ್ಕಳು ಆಡಬೇಕೆಂದಿಲ್ಲ. ಕಳೆಯ ಕಾಲದ ಕುಂಟಾಬಿಲ್ಲೆ, ಜೂಟಾಟಗಳಿಂದ ಹಿಡಿದು ಯಾವುದೇ ರೀತಿಯ ಆಡುವ, ಓಡುವ, ಕುಣಿದು ಕುಪ್ಪಳಿಸುವ ಚಟುವಟಿಕೆಯೂ ಮಕ್ಕಳನ್ನು ಆರೋಗ್ಯಪೂರ್ಣವಾಗಿ ಇರಿಸುತ್ತದೆ. ಇಂಥ ಯಾವುದೇ ಚಟುವಟಿಕೆಗಳು ಮಕ್ಕಳಲ್ಲಿ ಫ್ಯಾಟಿ ಲಿವರ್‌ ಬಾರದಂತೆ ತಡೆಯುವಲ್ಲಿ ಶೇ. 33ರಷ್ಟು ಯಶಸ್ವಿಯಾಗುತ್ತವೆ ಎನ್ನುತ್ತವೆ ಕ್ಲಿನಿಕಲ್‌ ಮತ್ತು ಪ್ರಾಯೋಗಿಕ ಹೆಪಟಾಲಜಿ ವಿಭಾಗದ ಅಧ್ಯಯನಗಳು.

ಮುಂಚೂಣಿಯಲ್ಲಿ ಭಾರತ

ಮಧುಮೇಹ ಮತ್ತು ಬೊಜ್ಜಿನ ಸಮಸ್ಯೆಯ ನಂತರದ ಸ್ಥಾನವನ್ನು ಫ್ಯಾಟಿ ಲಿವರ್‌ ಆಕ್ರಮಿಸಿದೆ. ಈ ನಿಟ್ಟಿನಲ್ಲಿ ಯಕೃತ್ತಿನ ಕೊಬ್ಬನ್ನು ಹೊತ್ತ ಅತಿಹೆಚ್ಚು ಜನರನ್ನು ಹೊಂದಿರುವ ದೇಶವಾಗಿ ಭಾರತ ಹೊರಹೊಮ್ಮಲು ಸಿದ್ಧತೆ ನಡೆಸಿದೆ. ಅಂದರೆ, ಸುಮಾರು ೫೦ ಕೋಟಿ ಜನಕ್ಕೆ ಯಕೃತ್‌ನ ತೊಂದರೆ ಕಾಡುತ್ತಿದೆ. ಪ್ರತಿ ಮೂರನೇ ಮಗು ಯಕೃತ್ತಿನ ತೊಂದರೆಗೆ ತುತ್ತಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಿ ತಿನಿಸುಗಳು, ಜಿಡ್ಡುಭರಿತ ಆಹಾರದ ಸೇವನೆ ಮಿತಿಮೀರಿ ಹೆಚ್ಚಿದೆ. ಹಾಗೆ ತಿಂದ ಮೇಲೆ ಅದನ್ನು ಕರಗಿಸಲು ವ್ಯಾಯಾಮ ಮಾಡಿ ಶಕ್ತಿ ವ್ಯಯಿಸುವ ಬದಲು, ಜೀರ್ಣಾಂಗಗಳೇ ಚೂರ್ಣಿಸುವ ಕೆಲಸವನ್ನು ಮಾಡಬೇಕೆಂದು ಅಪೇಕ್ಷಿಸುತ್ತೇವೆ. ಇಂಥ ಸಂದರ್ಭಗಳಲ್ಲಿ ಯಕೃತ್ತಿನಲ್ಲಿ ಕೊಬ್ಬು ಶೇಖರವಾಗತೊಡಗುತ್ತದೆ. ಇದು ಮಕ್ಕಳು-ವಯಸ್ಕರೆನ್ನದೆ ಎಲ್ಲರನ್ನೂ ಕಾಡುತ್ತಿದೆ. ಇದರಿಂದಾಗಿ ಅಲ್ಕೋಹಾಲ್‌ನಿಂದಾಗುವ ಫ್ಯಾಟಿ ಲಿವರ್‌ಗಿಂತಲೂ ಹೆಚ್ಚು ಅಲ್ಕೋಹಾಲ್‌ ಜನ್ಯವಲ್ಲದ ಫ್ಯಾಟಿಲಿವರ್‌ ಸಮಸ್ಯೆ ಕಂಡುಬರುತ್ತಿದೆ. ಇದಕ್ಕೆ ಮುಖ್ಯ ಕಾರಣಗಳು ಹಲವಿವೆ. ದೈಹಿಕ ಚಟುವಟಿಕೆ ಕ್ಷೀಣವಾಗಿರುವುದು ಎಲ್ಲಕ್ಕಿಂತ ಮು‍ಖ್ಯವಾಗಿದ್ದು. ಜೊತೆಗೆ, ಕರಿದ ತಿಂಡಿಗಳು, ಮಸಾಲೆ ಭರಿತ ಜಿಡ್ಡಿನ ಆಹಾರಗಳು, ಗುಜರಿ ತಿನಿಸುಗಳು, ಸಂಸ್ಕರಿತ ಸಕ್ಕರೆಯ ಪದಾರ್ಥಗಳ ಸೇವನೆ ಎಲ್ಲ ವಯೋಮಾನದವರಲ್ಲೂ ಹೆಚ್ಚಿದೆ. ಇದರಿಂದ ಯಕೃತ್ತಿನ ಸಮಸ್ಯೆ ಮಾತ್ರವಲ್ಲದೆ, ಕೊಲೆಸ್ಟ್ರಾಲ್‌, ಬೊಜ್ಜು, ಮಧುಮೇಹ, ಥೈರಾಯ್ಡ್‌ ಏರುಪೇರು, ಅಜೀರ್ಣ, ನಿದ್ರಾಹೀನತೆಯಂಥ ತೊಂದರೆಗಳು ಗಂಟು ಬೀಳುತ್ತವೆ.

ಇದನ್ನೂ ಓದಿ: Constipation Problem: ಮಲಬದ್ಧತೆಯ ಸಮಸ್ಯೆಯೇ? ಸರಳ ಪರಿಹಾರಗಳು ಇಲ್ಲಿವೆ!

ಬದಲಾವಣೆ ಅಗತ್ಯ

ನಿಯಮಿತವಾದ ವ್ಯಾಯಾಮ, ಸಂತುಲಿತ ಆಹಾರ, ಅಲ್ಕೋಹಾಲ್‌ ಮತ್ತು ಸಂಸ್ಕರಿತ ಆಹಾರಗಳ ಸೇವನೆಯಿಂದ ದೂರ ಇರುವುದು ಮುಂತಾದ ಕೆಲವು ಸರಳ ಬದಲಾವಣೆಗಳಿಂದ ನಮ್ಮ ಯಕೃತ್ತನ್ನು ಕ್ಷೇಮವಾಗಿ ಕಾಪಾಡಿಕೊಂಡು, ರೋಗಮುಕ್ತರಾಗಿ ಬದುಕುವುದಕ್ಕೆ ಸಾಧ್ಯವಿದೆ. ಆಹಾರದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳುವುದರಿಂದ ಯಕೃತ್ತಿನ ಆರೋಗ್ಯ ಗಣನೀಯ ಪ್ರಮಾಣದಲ್ಲಿ ಸುಧಾರಿಸಬಲ್ಲದು. ಇವುಗಳ ಜೊತೆಗೆ ದಿನಕ್ಕೆ 30 ನಿಮಿಷಗಳ ದೈಹಿಕ ಚಟುವಟಿಕೆ ಕಡ್ಡಾಯವಾಗಿಬೇಕು.

Green tea

ಗ್ರೀನ್‌ ಟೀ

ಹಲವು ರೀತಿಯ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಈ ಪೇಯ, ದೇಹದಲ್ಲಿ ಉರಿಯೂತ ಶಮನ ಮಾಡಬಲ್ಲದು. ಇದರಿಂದ ಯಕೃತ್ತಿನ ಆರೋಗ್ಯವೂ ಸುಧಾರಿಸುತ್ತದೆ.

Green vegetables

ಹಸಿರು ತರಕಾರಿಗಳು

ಎಲೆಕೋಸು, ಹೂಕೋಸು, ಬ್ರೊಕೊಲಿಯಂಥ ತರಕಾರಿಗಳು ಸಹ ಪಿತ್ತಜನಕಾಂಗದ ಆರೋಗ್ಯ ರಕ್ಷಣೆಗೆ ನೆರವಾಗಬಲ್ಲವು.

Seeds Assortment

ಬೀಜಗಳು

ಆರೋಗ್ಯಕರ ಕೊಬ್ಬು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುವ ಬಾದಾಮಿ, ವಾಲ್‌ನಟ್‌ ಮುಂತಾದ ಬೀಜಗಳು ಲಿವರ್‌ನ ಕ್ಷಮತೆಯನ್ನು ಹೆಚ್ಚಿಸಬಲ್ಲವು

Garlic cloves

ಬೆಳ್ಳುಳ್ಳಿ

ಪಿತ್ತಜನಕಾಂಗದ ಉರಿಯೂತವನ್ನು ಕಡಿಮೆ ಮಾಡಿ, ಉತ್ಕರ್ಷಣ ನಿರೋಧಕವಾಗಿಯೂ ಬೆಳ್ಳುಳ್ಳಿ ಕೆಲಸ ಮಾಡಬಲ್ಲದು.

Berries

ಬೆರ್ರಿಗಳು

ಬ್ಲೂಬೆರ್ರಿ, ಸ್ಟ್ರಾಬೆರ್ರಿಯಂಥವು ದೇಹಕ್ಕೆ ಹೆಚ್ಚಿನ ನಾರಿನಂಶದೊಂದಿಗೆ ಪಿತ್ತಜನಕಾಂಗದ ರಕ್ಷಣೆಗೆ ಅಗತ್ಯ ಸತ್ವಗಳನ್ನು ನೀಡಬಲ್ಲವು.

Continue Reading

ಆರೋಗ್ಯ

Nutritional Supplements: ನಿತ್ಯವೂ ಪೋಷಕಾಂಶಗಳ ಸಪ್ಲಿಮೆಂಟ್‌ ಸೇವನೆ ಆರೋಗ್ಯಕ್ಕೆ ವರವೇ? ಶಾಪವೇ?

Nutritional supplements: ಹಲವು ಸಪ್ಲಿಮೆಂಟ್‌ಗಳನ್ನು ಸೇವಿಸುವುದರಿಂದ ನಮ್ಮ ದೇಹಕ್ಕೆ ಬೇಕಾದ ಹೆಚ್ಚುವರಿ, ಅಗತ್ಯ ಪೋಷಕಾಂಶಗಳು ಲಭ್ಯವಾಗಿ ಖಂಡಿತವಾಗಿಯೂ ಆರೋಗ್ಯ ವೃದ್ಧಿಯಾಗಿ, ತೂಕ ಹಿತಮಿತವಾಗಿರಿಸಿಕೊಳ್ಳುವಲ್ಲಿ ಸಹಾಯವಾಗಬಹುದು. ವಿಟಮಿನ್‌ ಸಪ್ಲಿಮೆಂಟ್‌ಗಳ ಸೇವನೆಯಿಂದ ದೇಹದ ಪಚನಕ್ರಿಯೆಯೂ ವೃದ್ಧಿಯಾಗಿ ಆ ಮೂಲಕ ಶಕ್ತಿ ಸರಿಯಾಗಿ ದೇಹಕ್ಕೆ ಲಭ್ಯವಾಗಿ, ದೇಹ ಚುರುಕಾಗಿ, ಎಲ್ಲ ಕೆಲಸ ಕಾರ್ಯಗಳು ಸಹಜವಾಗಿ ಆಗುತ್ತದೆ. ಆದರೆ, ಅತಿಯಾಗಿ ಸಪ್ಲಿಮೆಂಟ್‌ಗಳ ಸೇವನೆಯಿಂದ ಅಡ್ಡ ಪರಿಣಾಮಗಳೂ ಆಗಬಹುದು. ಈ ಬಗ್ಗೆ ಮಾಹಿತಿ ಇಲ್ಲಿದೆ.

VISTARANEWS.COM


on

Nutritional Supplements
Koo

ಕಳೆದ ಕೆಲವು ದಶಕಗಳಿಂದ ತೂಕ ಏರಿಕೆ ಎನ್ನುವುದೇ ಬಹುತೇಕ ಎಲ್ಲರ ಸಮಸ್ಯೆಯಾಗಿದೆ. ವೃತ್ತಿಯಲ್ಲಿನ ಒತ್ತಡ, ನಗರ ಜೀವನ, ವ್ಯಾಯಾಮದ ಕೊರತೆ, ಆಹಾರ ಪದ್ಧತಿ, ಜೀವನಕ್ರಮದಲ್ಲಿ ಬದಲಾವಣೆ ಇತ್ಯಾದಿಗಳೇ ತೂಕದ ಸಮಸ್ಯೆಯನ್ನೂ ಹಲವು ಆರೋಗ್ಯದ ಸಮಸ್ಯೆಗಳನ್ನೂ ಸಣ್ಣ ವಯಸ್ಸಿನಲ್ಲಿಯೇ ಹಲವರಿಗೆ ತಂದೊಡ್ಡಿದೆ ನಿಜ. ಸಣ್ಣ ವಯಸ್ಸಿನಲ್ಲಿಯೇ ಮಧುಮೇಹ, ಅಧಿಕ ರಕ್ತದೊತ್ತಡ, ಕೊಲೆಸ್ಟೆರಾಲ್‌ ಸಮಸ್ಯೆ, ಬೊಜ್ಜು ಇತ್ಯಾದಿ ಸಮಸ್ಯೆಗಳೆಲ್ಲ ಕಾಣಿಸಿಕೊಳ್ಳಲು ಆರಂಭವಾಗುತ್ತದೆ. ಹಲವು ಪೋಷಕಾಂಶಗಳ ಕೊರತೆ ಇತ್ಯಾದಿಗಳ ಸಮಸ್ಯೆಯೂ ಜೊತೆಗೆ ಸೇರಿಕೊಂಡು ಅನಾರೋಗ್ಯ, ಶಕ್ತಿಹೀನತೆಯಂಥ ಒಂದಿಲ್ಲೊಂದು ಸಮಸ್ಯೆಗಳು ಎಡತಾಕುತ್ತವೆ. ಇಂತಹ ಸಂದರ್ಭ ಇತ್ತೀಚೆಗಿನ ದಿನಗಳಲ್ಲಿ ಸಪ್ಲಿಮೆಂಟ್‌ಗಳ ಸೇವನೆಯೂ ಹೆಚ್ಚುತ್ತಿದೆ. ಹಲವು ಸಪ್ಲಿಮೆಂಟ್‌ಗಳನ್ನು ಜೊತೆಗೆ ಸೇವಿಸುವುದರಿಂದ ನಮ್ಮ ದೇಹಕ್ಕೆ ಬೇಕಾದ ಹೆಚ್ಚುವರಿ, ಅಗತ್ಯ ಪೋಷಕಾಂಶಗಳು ಲಭ್ಯವಾಗಿ ಖಂಡಿತವಾಗಿಯೂ ಆರೋಗ್ಯ ವೃದ್ಧಿಯಾಗಿ, ತೂಕ ಹಿತಮಿತವಾಗಿರಿಸಿಕೊಳ್ಳುವಲ್ಲಿ ಸಹಾಯವಾಗಬಹುದು. ವಿಟಮಿನ್‌ ಸಪ್ಲಿಮೆಂಟ್‌ಗಳ ಸೇವನೆಯಿಂದ ದೇಹದ ಪಚನಕ್ರಿಯೆಯೂ ವೃದ್ಧಿಯಾಗಿ ಆ ಮೂಲಕ ಶಕ್ತಿ ಸರಿಯಾಗಿ ದೇಹಕ್ಕೆ ಲಭ್ಯವಾಗಿ, ದೇಹ ಚುರುಕಾಗಿ, ಎಲ್ಲ ಕೆಲಸ ಕಾರ್ಯಗಳು ಸಹಜವಾಗಿ ಆಗುತ್ತದೆ. ಆದರೆ, ಅತಿಯಾಗಿ ಸಪ್ಲಿಮೆಂಟ್‌ಗಳ ಸೇವನೆ (Nutritional Supplements), ಸರಿಯಾದ ಸಪ್ಲಿಮೆಂಟ್‌ ಸೇವಿಸದೆ ಇರುವುದು, ಅಗತ್ಯವಿಲ್ಲದಿದ್ದರೂ ಸಪ್ಲಿಮೆಂಟ್‌ ಸೇವನೆ ಮಾಡುವುದು, ಅಥವಾ ತಪ್ಪುತಪ್ಪಾಗಿ ಸೇವಿಸುವುದು ಇತ್ಯಾದಿ ಮಾಡುವುದರಿಂದ ಅಡ್ಡ ಪರಿಣಾಮಗಳೂ ಆಗಬಹುದು. ಈಗ ಸಪ್ಲಿಮೆಂಟ್‌ಗಳ ಹೆಸರಿನಲ್ಲಿ ಮಾರುಕಟ್ಟೆಗೆ ಬಂದಿರುವ ಅನೇಕ ಫೇಕ್‌ ಸಪ್ಲಿಮೆಂಟ್‌ಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕಾಗಿದೆ. ಹೀಗಾಗಿ, ಸಪ್ಲಿಮೆಂಟ್‌ ವರವಾಗುವ ಜೊತೆಗೆ ಕೆಲವೊಮ್ಮೆ ಶಾಪವಾಗಿಯೂ ಪರಿಣಮಿಸಬಹುದು. ಕೆಲವೊಮ್ಮೆ ಇದರಿಂದ ದೇಹಕ್ಕೆ ತೊಂದರೆಯೂ ಆಗಬಹುದು. ತೂಕ ಇಳಿಕೆಗೆಂದೇ ಸೇವಿಸುವ ಸಪ್ಲಿಮೆಂಟ್‌ಗಳು, ದಿಢೀರ್‌ ತೂಕ ಇಳಿಸಬಹುದೆಂದು ಹೇಳಿಕೊಳ್ಳುವ ಮಾತ್ರೆಗಳು, ಪುಡಿಗಳು ಇತ್ಯಾದಿಗಳ ಬಗ್ಗೆ ಸದಾ ಎಚ್ಚರಿಕೆ ಇರುವುದು ಒಳ್ಲೆಯದು. ಸಪ್ಲಿಮೆಂಟ್‌ಗಳ ಹೆಸರಿನಲ್ಲಿ ಇವು ದೇಹಕ್ಕೆ ಒಳ್ಳೆಯದು ಮಾಡುವ ಬದಲು ಹಾನಿಯನ್ನೇ ಮಾಡುವುದು ಹೆಚ್ಚು.

Healthy vitamins and supplements on wooden teaspoons against

ಎಚ್ಚರಿಕೆ ವಹಿಸಬೇಕಾದ್ದೇನು?

ಹಾಗಾದರೆ, ಸಪ್ಲಿಮೆಂಟ್‌ ಸೇವನೆಯ ಸಂದರ್ಭ ಎಚ್ಚರಿಕೆ ವಹಿಸಬೇಕಾದ್ದೇನು ಎಂಬ ಗೊಂದಲ ನಿಮಗಾಗಿರಬಹುದು. ಯಾವಾಗಲೂ ಸಮಸ್ಯೆಯ ಮೂಲವನ್ನು ಕಂಡು ಹಿಡಿಯದೆ, ನೀವೇ ವೈದ್ಯರಾಗಲು ಹೊರಡಬೇಡಿ. ನಿಮ್ಮ ಆರೋಗ್ಯದ ಸಮಸ್ಯೆಗೆ, ತೂಕ ಹೆಚ್ಚಳಕ್ಕೆ ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ. ವೈದ್ಯರ, ಪೋಷಕಾಂಶ ತಜ್ಞರ ಸಲಹೆ ಪಡೆಯಿರಿ. ದೇಹಕ್ಕೆ ಯಾವ ಪೋಷಕಾಂಶದ ಕೊರತೆಯಾಗಿದೆ ಎಂದು ಅವರ ಸಲಹೆಯ ಮೇರೆಗೆ ಪರೀಕ್ಷೆ ಮಾಡಿಸಿಕೊಂಡು, ಅವರ ಸಲಹೆಯ ಮೇರೆಗೆ ಸಪ್ಲಿಮೆಂಟ್‌ ತೆಗೆದುಕೊಳ್ಳಿ. ನೀವೇ ನೇರವಾಗಿ ಸಪ್ಲಿಮೆಂಟ್‌ಗಳ ಸೇವನೆಗೆ ಇಳಿಯಬೇಡಿ. ವೈದ್ಯರ ಅನುಮತಿಯ ಮೇರೆಗೆ ಸಂಬಂಧಿಸಿದ ಸಪ್ಲಿಮೆಂಟ್‌ ಸೇವಿಸಿ.

ಇದನ್ನೂ ಓದಿ: Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

ಜೀವನಕ್ರಮವನ್ನು ರೂಢಿಸಿಕೊಳ್ಳುವುದು ಮುಖ್ಯ

ಎಲ್ಲಕ್ಕಿಂತ ಹೆಚ್ಚಾಗಿ ಆರೋಗ್ಯಕರ ಜೀವನಕ್ರಮವನ್ನು ರೂಢಿಸಿಕೊಳ್ಳುವುದು ಮುಖ್ಯ. ಸಪ್ಲಿಮೆಂಟ್‌ಗಳನ್ನು ತಿನ್ನುತ್ತೇನಲ್ಲ, ಇನ್ನು ಪೋಷಕಾಂಶಗಳ ಬಗ್ಗೆ ನಾನು ತಿನ್ನುವ ಆಹಾರದ ನಿಗಾ ಇರಿಸಿಕೊಳ್ಳುವ ಅಗತ್ಯವಿಲ್ಲ ಎಂದು ಬೇಕಾಬಿಟ್ಟಿ, ನಾಲಿಗೆಗೆ ಹಿತವೆನಿಸಿದ್ದನ್ನೆಲ್ಲ ತಿನ್ನಲು ಹೊರಡಬೇಡಿ. ನಾಲಿಗೆ ಬಯಸಿದ್ದನ್ನೆಲ್ಲ ನಾಲಿಗೆಗೆ ಕೊಡುವ ಮೊದಲು ಯೋಚಿಸಿ. ದೇಹಕ್ಕೆ ಒಳ್ಳೆಯದನ್ನು ಬಯಸುವ ಆಹಾರಗಳನ್ನು ಸೇವಿಸುವುದನ್ನು ಅಭ್ಯಾಸ ಮಾಡಿ. ದೇಹವನ್ನು ಚುರುಕಾಗಿರಿಸುವುದನ್ನು, ಅಭ್ಯಾಸ ಮಾಡಿ. ವ್ಯಾಯಾಮ, ಯೋಗ, ವಾಕಿಂಗ್‌, ಉತ್ತಮ ಆಹಾರಭ್ಯಾಸಗಳೇ ಇದರಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂಬುದನ್ನು ಮರೆಯಬೇಡಿ.

Continue Reading

ಆರೋಗ್ಯ

Oats For Weight Loss: ಓಟ್ಸ್‌ ತಿನ್ನುವುದರಿಂದ ತೂಕ ಇಳಿಯುತ್ತದೆಯೇ? ಉತ್ತರ ಇಲ್ಲಿದೆ

Oats For Weight Loss: ಓಟ್ಸ್‌ ಎಂಬುದು ಅತ್ಯಂತ ಹಳೆಯ ದವಸ ಧಾನ್ಯಗಳ ಪೈಕಿ ಒಂದು. ಇದರಲ್ಲಿ ನಮ್ಮ ದೇಹಕ್ಕೆ ಬೇಕಾಗುವ ಸಾಕಷ್ಟು ಮೈಕ್ರೋ ಹಾಗೂ ಮ್ಯಾಕ್ರೋ ಪೋಷಕಾಂಶಗಳಿವೆ. ಇವುಗಳಲ್ಲಿ ಪ್ರೊಟೀನ್‌ ಹೆಚ್ಚಿದ್ದು, ಇತರ ಧಾನ್ಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನಾರಿನಂಶವೂ, ಪೋಷಕಾಂಶಗಳೂ ಇರುತ್ತವೆ. ಪೋಷಕಾಂಶ ತಜ್ಞರ ಪ್ರಕಾರ, ಓಟ್ಸ್‌ನಲ್ಲಿ ಸಾಕಷ್ಟು ಕರಗಬಲ್ಲ ನಾರಿನಂಶವಿರುವುದರಿಂದ ಇದು ಕೊಲೆಸ್ಟೆರಾಲ್‌ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅಷ್ಟೇ ಅಲ್ಲ, ದೇಹಕ್ಕೆ ಗ್ಲುಕೋಸ್‌ ಬೇಗನೆ ಸೇರದಂತೆಯೂ ಇವು ಮಾಡುತ್ತದೆ.

VISTARANEWS.COM


on

Oats For Weight Loss
Koo

ಎಲ್ಲರಿಗೂ ಒಂದಲ್ಲ ಒಂದು ಹಂತದಲ್ಲಿ ತಾವು ತೂಕ ಇಳಿಸಿಕೊಂಡು ಫಿಟ್‌ ಆಗಬೇಕು ಎಂಬ ಬಯಕೆ ಬಂದೇ ಬರುತ್ತದೆ. ಕಾರಣ ಇಂದಿನ ಒತ್ತಡದ ಜೀವನಕ್ರಮದಲ್ಲಿ, ಗೊತ್ತೇ ಆಗದಂತೆ ತೂಕ ಏರಿಸಿಕೊಂಡು ಒಂದು ದಿನ, ಅಯ್ಯೋ ಹೆಂಗಿದ್ದ ನಾನು ಹೆಂಗಾಗಿಬಿಟ್ಟೆ ಎಂಬ ಮರುಕ ಬಂದೇ ಬರುತ್ತದೆ. ಜ್ಞಾನೋದಯವಾಗುವ ಆ ಹಂತದಲ್ಲಿ, ಒಂದಿಷ್ಟು ಆರೋಗ್ಯಕರ ಅಭ್ಯಾಸಗಳು, ನಡಿಗೆ, ವ್ಯಾಯಾಮ ಸೇರಿದಂತೆ ತೂಕ ಇಳಿಸಿಕೊಳ್ಳುವ ಕಾರ್ಯಕ್ರಮ ಶುರುಹಚ್ಚಿಕೊಳ್ಳುತ್ತೇವೆ. ಅವರಿವರಿಂಧ ಕೇಳಿ, ಓದಿ ಪಡೆದುಕೊಂಡ ಮಾಹಿತಿಗಳ ಆಧಾರದಲ್ಲಿ ತೂಕ ಇಳಿಕೆಗೆ ತೊಡಗುವುದೇ ಹೆಚ್ಚು. ಹೀಗೆ ತೂಕ ಇಳಿಕೆಗೆ ಹೊರಟ ಪ್ರತಿಯೊಬ್ಬರೂ ಓಟ್ಸ್‌ ಕಡೆಗೆ ಒಂದಲ್ಲ ಒಂದು ದಿನ ಮುಖ ಮಾಡುತ್ತಾರೆ. ಓಟ್ಸ್‌ ಎಂಬುದು ಅತ್ಯಂತ ಹಳೆಯ ದವಸ ಧಾನ್ಯಗಳ ಪೈಕಿ ಒಂದು. ಇದರಲ್ಲಿ ನಮ್ಮ ದೇಹಕ್ಕೆ ಬೇಕಾಗುವ ಸಾಕಷ್ಟು ಮೈಕ್ರೋ ಹಾಗೂ ಮ್ಯಾಕ್ರೋ ಪೋಷಕಾಂಶಗಳಿವೆ. ಇವುಗಳಲ್ಲಿ ಪ್ರೊಟೀನ್‌ ಹೆಚ್ಚಿದ್ದು, ಇತರ ಧಾನ್ಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನಾರಿನಂಶವೂ, ಪೋಷಕಾಂಶಗಳೂ ಇರುತ್ತವೆ. ಪೋಷಕಾಂಶ ತಜ್ಞರ ಪ್ರಕಾರ, ಓಟ್ಸ್‌ನಲ್ಲಿ ಸಾಕಷ್ಟು ಕರಗಬಲ್ಲ ನಾರಿನಂಶವಿರುವುದರಿಂದ ಇದು ಕೊಲೆಸ್ಟೆರಾಲ್‌ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅಷ್ಟೇ ಅಲ್ಲ, ದೇಹಕ್ಕೆ ಗ್ಲುಕೋಸ್‌ ಬೇಗನೆ ಸೇರದಂತೆಯೂ ಇವು ಮಾಡುತ್ತದೆ. ಕರುಳಿನಲ್ಲಿ ಆಹಾರ ಸುಲಭವಾಗಿ ಪ್ರವಹಿಸಲು ಕೂಡಾ ಇದು ನೆರವಾಗುತ್ತದೆ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು ದೇಹದಲ್ಲಿ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಇವೆಲ್ಲ ನಿಜವೇ ಆದರೂ, ಓಟ್ಸ್‌ನ ನಿತ್ಯದ ಸೇವನೆಯಿಂದ ತೂಕ (Oats For Weight Loss) ಇಳಿಸಬಹುದಾ? ಇದರ ಸೇವನೆ ಒಳ್ಳೆಯದಾ ಎಂದು ಪ್ರಶ್ನಿಸಿದರೆ ಖಂಡಿತವಾಗಿಯೂ ಗೊಂದಲ ಹುಟ್ಟಿಸದೆ ಇರದು.

Oats Vegetarian foods for stamina

ತೂಕ ಇಳಿಸುತ್ತದೆಯೆ?

ಈ ಓಟ್ಸ್‌ ಸೇವನೆಯಿಂದ ನಿಜವಾಗಿಯೂ ತೂಕ ಇಳಿಯುತ್ತದೆಯೇ ಎಂಬುದು ಎಲ್ಲರ ಪ್ರಶ್ನೆ. ಈ ಪ್ರಶ್ನೆ ಹೊಸತೇನಲ್ಲ. ಯಾಕೆಂದರೆ ಓಟ್ಸ್‌ನಲ್ಲಿ ಸಾಕಷ್ಟು ಪೋಷಕಾಂಶಗಳೂ, ನಾರಿನಂಶವೂ ಇರುವುದರಿಂದ ಇದರಿಂದ ತೂಕ ಇಳಿಯಬಹುದು ಎಂಬುದು ನಿಜವೇ ಆದರೂ, ಸರಿಯಾಗಿ ಹಿತಮಿತವಾಗಿ ಸೇವನೆ ಮಾಡಿದರೆ ಮಾತ್ರ ಇದು ಸಾಧಯ ಎಂಬುದೂ ಸತ್ಯವೇ. ಯಾಕೆಂದರೆ ಓಟ್ಸ್‌ನಲ್ಲಿ ಸ್ಟಾರ್ಚ್‌ ಕೂಡಾ ಇರುವುದರಿಂದ ಹಾಗೂ ಹೆಚ್ಚು ಕಾರ್ಬೋಹೈಡ್ರೇಟ್‌ ಇರುವ ಕಾರಣದಿಂದ ಹೆಚ್ಚು ಗ್ಲಿಸೆಮಿಕ್‌ ಇಂಡೆಕ್ಸ್‌ ಹೊಂದಿರುತ್ತದೆ. ಹಾಗಾಗಿ ದೇಹದಲ್ಲಿ ಸಕ್ಕರೆಯ ಪ್ರಮಾಣ ಏರುವ ಅಪಾಯವೂ ಇದೆ. ಹಿತಮಿತವಾಗಿ ಸೇವಿಸಿದರೆ ಮಾತ್ರ ಪ್ರಯೋಜನ ಪಡೆಯಬಹುದು ಎನ್ನುತ್ತಾರೆ.

ಇದನ್ನೂ ಓದಿ: Monsoon Hair care: ಮಳೆಗಾಲದಲ್ಲಿ ಕೂದಲಿನ ಆರೈಕೆಗೆ ಈ ಸಲಹೆ ಪಾಲಿಸಿ

ಇನ್‌ಸ್ಟ್ಯಾಂಟ್‌ ಓಟ್ಸ್‌ ಬೇಡ

ಓಟ್ಸ್‌ನನ್ನು ನಾವು ಹೇಗೆ ಬಳಸುತ್ತೇವೆ ಎಂಬುದರಲ್ಲಿ ಸತ್ಯ ಅಡಗಿದೆ ಎನ್ನುತ್ತಾರೆ ತಜ್ಞರು. ಯಾಕೆಂದರೆ ಓಟ್ಸ್‌ನಿಂದ ಲಾಭ ಇರುವಷ್ಟೇ ಅಪಾಯವೂ ಇದೆ. ಮಾರುಕಟ್ಟೆಯಲ್ಲಿ ಈಗ ಸುಲಭವಾಗಿ ಬಗೆಬಗೆಯ ಫ್ಲೇವರ್‌ಗಳ ಮಸಾಲೆಗಳ ಜೊತೆಗೆ ಲಭ್ಯವಾಗುವ ಇನ್‌ಸ್ಟ್ಯಾಂಟ್‌- ದಿಢೀರ್‌ ಓಟ್ಸ್‌ಗಳಲ್ಲಿ ಗ್ಲಿಸೆಮಿಕ್‌ ಇಂಡೆಕ್ಸ್‌ ಹೆಚ್ಚಿರುತ್ತದೆ. ಹಣ್ಣುಗಳನ್ನು ಸೇರಿಸಿ, ಇನ್‌ಸ್ಟ್ಯಾಂಟ್‌ ಓಟ್ಸ್‌ ಮಾಡಿ ತಿನ್ನುವುದರಿಂದ ರಕ್ತದಲ್ಲಿ ಸಕ್ಕರೆ ದಿಢೀರ್‌ ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಾರೆ ತಜ್ಞರು.
ಹಾಗಾದರೆ, ತೂಕ ಇಳಿಸುವ ಉದ್ದೇಶದಿಂದ ಓಟ್ಸ್‌ ತಿನ್ನಲು ಬಯಸುವ ಮಂದಿ ಯಾವ ಕ್ರಮದಲ್ಲಿ ತಿಂದರೆ ಲಾಭ ಪಡೆಯಬಹುದು ಎಂಬ ಪ್ರಶ್ನೆ ನಿಮ್ಮದಾಗಿದ್ದರೆ, ಉತ್ತರ ಇಲ್ಲಿದೆ. ಇನ್‌ಸ್ಟ್ಯಾಂಟ್‌ಗಳ ಬದಲಾಗಿ ಸ್ಟೀಲ್‌ ಕಟ್‌ ಓಟ್ಸ್‌ಗಳ ಬಳಕೆ ಮಾಡುವುದು ಒಳ್ಳೆಯದು. ಇದು ನಿಧಾನವಾಗಿ ಶಕ್ತಿ ನೀಡುತ್ತದೆ. ಹಾಗೂ ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ಓಟ್ಸ್‌ ಒಳ್ಳೆಯದೆಂದು ಅಂದುಕೊಂಡು ಅತಿಯಾಗಿ ಓಟ್ಸನ್ನೇ ನಿತ್ಯವೂ ತಿನ್ನುವುದೂ ಕೂಡಾ ಒಳ್ಳೆಯದಲ್ಲ. ಹಿತಮಿತವಾಗಿ ತಿಂದರೆ ಮಾತ್ರ ಅವುಗಳ ನಿಜವಾದ ಪ್ರಯೋಜನ ಪಡೆಯಲು ಸಾಧ್ಯವಾಗಬಹುದು.

Continue Reading
Advertisement
Actor Darshan support by anchor hemalatha
ಸ್ಯಾಂಡಲ್ ವುಡ್4 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ18 mins ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ30 mins ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Actor Darshan Renukaswamy assault police lathi found How did D Gang get
ಕ್ರೈಂ36 mins ago

Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

IRCTC
ದೇಶ58 mins ago

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

1983 World Cup
ಕ್ರೀಡೆ1 hour ago

1983 WC Win Anniversary: ಚೊಚ್ಚಲ ಏಕದಿನ ವಿಶ್ವಕಪ್ ಗೆಲುವಿನ​ ಸವಿ ನೆನಪನ್ನು ವಿಂಡೀಸ್​ನಲ್ಲಿ ಕೇಕ್​ ಕತ್ತರಿಸಿ ಸಂಭ್ರಮಿಸಿದ ರವಿಶಾಸ್ತ್ರಿ, ಗವಾಸ್ಕರ್, ​ಬಿನ್ನಿ

Viral Video
Latest1 hour ago

Viral Video: ಪೇಪರ್ ನೋಡದೆ ಪ್ರಮಾಣ ವಚನ ಸ್ವೀಕರಿಸಿ ಬೆರಗುಗೊಳಿಸಿದ ಅತ್ಯಂತ ಕಿರಿಯ ಸಂಸದೆ!

cm siddaramaiah water price hike
ಕರ್ನಾಟಕ1 hour ago

CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Neha Gowda in saree with baby bump
ಸ್ಯಾಂಡಲ್ ವುಡ್1 hour ago

Neha Gowda: ಸೀರೆಯುಟ್ಟು ಸಿಂಪಲ್‌ ಆಗಿ ಗಂಡನ ಜತೆ ಪೋಸ್‌ ಕೊಟ್ಟ ಗರ್ಭಿಣಿ ನೇಹಾ ಗೌಡ!

Viral Video
Latest1 hour ago

Viral Video : ‘ಅಲ್ಲಾಹು ಅಕ್ಬರ್’ ಎನ್ನದ ಹಿಂದೂ ಬಾಲಕನಿಗೆ ಎಂಜಲು ನೆಕ್ಕಲು ಹೇಳಿದ ಮುಸ್ಲಿಂ ಯುವಕರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌