Education News : ಪದವೀಧರ ಶಿಕ್ಷಕರ ಜ್ಯೇಷ್ಠತೆ ಸಮಸ್ಯೆ ಬಗ್ಗೆ ಸಿಎಂ ಜತೆ ಶೀಘ್ರ ಚರ್ಚೆ: ಮಧು ಬಂಗಾರಪ್ಪ - Vistara News

ಕರ್ನಾಟಕ

Education News : ಪದವೀಧರ ಶಿಕ್ಷಕರ ಜ್ಯೇಷ್ಠತೆ ಸಮಸ್ಯೆ ಬಗ್ಗೆ ಸಿಎಂ ಜತೆ ಶೀಘ್ರ ಚರ್ಚೆ: ಮಧು ಬಂಗಾರಪ್ಪ

Education News : ರಾಜ್ಯದ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಸಭೆ ನಡೆಸಿ, ಸುದೀರ್ಘವಾಗಿ ಚರ್ಚೆ ನಡೆಸಿದರು. ಇದೇ ವೇಳೆ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ ಹಾಗೂ ನೀರು ನೀಡುವ ಸರ್ಕಾರದ ಕ್ರಮಕ್ಕೆ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಕೆ.ನಾಗೇಶ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ ನುಗ್ಗಲಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

VISTARANEWS.COM


on

Karnataka State Primary School Teachers Association
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರ (Graduate Teachers) ಜ್ಯೇಷ್ಠತೆಯ ಸಮಸ್ಯೆ ಸೇರಿದಂತೆ ಇನ್ನಿತರ ಪ್ರಮುಖ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಜತೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಅವರು ರಾಜ್ಯ ಶಿಕ್ಷಕರ ಸಂಘಕ್ಕೆ ಭರವಸೆ ನೀಡಿದ್ದಾರೆ. ಈ ಮೂಲಕ ಶೈಕ್ಷಣಿಕ ವಲಯದ (Education News) ಹಲವು ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳಿದ್ದಾರೆ.

ರಾಜ್ಯದ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (Karnataka State Primary School Teachers Association) ನಿಯೋಗದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಸಭೆ ನಡೆಸಿ, ಸುದೀರ್ಘವಾಗಿ ಚರ್ಚೆ ನಡೆಸಿದರು.

Karnataka State Primary School Teachers Association
Karnataka State Primary School Teachers Association

ಇದನ್ನೂ ಓದಿ: Self Harming : ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿ; ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಕೆ.ನಾಗೇಶ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ ನುಗ್ಗಲಿ ಅವರು ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು.

ಚರ್ಚೆಯ ಪ್ರಮುಖ ಅಂಶಗಳು

⦁ ಸೇವೆಯಲ್ಲಿರುವ ಪದವೀಧರ ಶಿಕ್ಷಕರನ್ನು 6 ರಿಂದ 8ಕ್ಕೆ ವಿಲೀನಗೊಳಿಸುವ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಪ್ರಾಥಮಿಕ ಶಾಲೆಗಳಲ್ಲಿ 15ರಿಂದ 20 ವರ್ಷ ಸೇವೆ ಸಲ್ಲಿಸಿದ ಪದವೀಧರ ಶಿಕ್ಷಕರ ಸೇವಾ ಜೇಷ್ಠತೆಯನ್ನು ಸಂರಕ್ಷಿಸಿ, 6 ರಿಂದ 8ಕ್ಕೆ ನಿಯುಕ್ತಿಗೊಳಿಸುವ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನಿಸುವುದಾಗಿ ಸಚಿವ ಮಧು ಬಂಗಾರಪ್ಪ ಶಿಕ್ಷಕರ ಸಂಘಕ್ಕೆ ಭರವಸೆ ನೀಡಿದರು.
⦁ ರಾಜ್ಯಾದ್ಯಂತ ಮಧ್ಯಂತರ ರಜೆ ಹಾಗೂ ಬೇಸಿಗೆ ರಜೆಗಳಲ್ಲಾದ ವ್ಯತ್ಯಾಸವನ್ನು ಸರಿಪಡಿಸಲು ಇದೇ ವೇಳೆ ಒತ್ತಾಯಿಸಲಾಯಿತು.
⦁ ನೂತನ ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಜಿಲ್ಲಾ ಮತ್ತು ತರಬೇತಿ ಸಂಸ್ಥೆಗಳಲ್ಲಿರುವ ಹೆಚ್ಚುವರಿ ಹುದ್ದೆಗಳನ್ನು ನಿಯುಕ್ತಿಗೊಳಿಸಿ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಈ ವೇಳೆ ತಿಳಿಸಿದರು.
⦁ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಗುರುಗಳು ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಹಾಗೂ ಪ್ರೌಢ ಶಾಲೆಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ನವೆಂಬರ್ ಅಂತ್ಯದಲ್ಲಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಲಾಯಿತು.
⦁ ರಾಜ್ಯಾದ್ಯಂತ ಶಿಕ್ಷಕರ ವೈದ್ಯಕೀಯ ಬಿಲ್ಲುಗಳ ಮೊತ್ತವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಕ್ರೋಢೀಕರಿಸಿ, ಕಳೆದ ಸಾಲಿನಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ, ರಾಜ್ಯದ ಸಮಸ್ತ ಶಿಕ್ಷಕರಿಗೆ ಬೇಕಾದ ವೈದ್ಯಕೀಯ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ವಿನಂತಿಸಲಾಯಿತು.
⦁ ಮುಖ್ಯ ಗುರುಗಳು ಹಾಗೂ Sಆಒಅ ರವರ ಜಂಟಿ ಖಾತೆಯನ್ನು ಈ ಮೊದಲಿನಂತೆ ನಿರ್ವಹಿಸಲು ಸೂಕ್ತ ಆದೇಶ ಹೊರಡಿಸಲು ಒತ್ತಾಯಿಸಲಾಯಿತು. ಸದರಿ ವಿಷಯಕ್ಕೆ ಸಚಿವರು ಪ್ರತಿಕ್ರಿಯೆ ನೀಡಿ, ಈ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಭಿಪ್ರಾಯ ಕ್ರೋಢೀಕರಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದೆಂದು ತಿಳಿಸಿದರು.
⦁ ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆಯ ಕುರಿತು ಚರ್ಚಿಸಲಾಯಿತು. ಈ ಕುರಿತು ಸಮಗ್ರ ಮಾಹಿತಿಯನ್ನು ಕ್ರೋಢೀಕರಿಸಿ ಮತ್ತೊಂದು ಪ್ರಮುಖ ಸಭೆಯನ್ನು ಜರುಗಿಸಿ ಚರ್ಚಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
⦁ ಪ್ರಾಥಮಿಕ ಶಾಲೆಯಿಂದ ಪ್ರೌಢ ಶಾಲೆಗೆ ಹಾಗೂ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಗುರುಗಳ ಹುದ್ದೆಗೆ ಬಡ್ತಿ ಹೊಂದಿದಾಗ ವೇತನ ಬಡ್ತಿಗಳಲ್ಲಿ 10, 15, 20, 25 ಹಾಗೂ 30 ವರ್ಷಗಳ ವೇತನ ಬಡ್ತಿಯಲ್ಲಾಗುವ ವ್ಯತ್ಯಾಸಗಳ ಕುರಿತು ಕೂಡ ಸಿಎಂ ಜತೆ ಚರ್ಚಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
⦁ ರಾಜ್ಯಾದ್ಯಂತ ಮುಂದಿನ ಶೈಕ್ಷಣಿಕ ವರ್ಷದಿಂದ ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿಯನ್ನು ಮೊದಲನೇ ಸೆಮಿಸ್ಟರ್‌ನಲ್ಲಿ ನಡೆಸುವ ಬದಲಾಗಿ ಮೊದಲನೇ ಸೆಮಿಸ್ಟರ್‌ನಲ್ಲಿ ಕ್ರೀಡಾಕೂಟ ಹಾಗೂ 2ನೇ ಸೆಮಿಸ್ಟರ್‌ನಲ್ಲಿ ಪ್ರತಿಭಾ ಕಾರಂಜಿಯನ್ನು ನಡೆಸಿ ಮಕ್ಕಳು ಹಾಗೂ ಶಿಕ್ಷಕರ ಮೇಲಿನ ಒತ್ತಡವನ್ನು ಕಡಿಮೆ ಮಾಡಬೇಕೆಂದು ಒತ್ತಾಯಿಸಲಾಯಿತು.
⦁ ತಾಲೂಕಿಗೊಂದು ಜೂನಿಯರ್ ದೈಹಿಕ ಶಿಕ್ಷಣಾಧಿಕಾರಿಗಳ ಹುದ್ದೆಗಳನ್ನು ಸೃಜಿಸಿ, ದೈಹಿಕ ಶಿಕ್ಷಕರಿಗೆ ಬಡ್ತಿ ನೀಡುವುದು ಹಾಗೂ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಅವರಿಗೂ ಕೂಡ ಬಡ್ತಿ ಅವಕಾಶ ಕೊಡಬೇಕೆಂದು ಒತ್ತಾಯಿಸಲಾಯಿತು.
⦁ ಶಿಕ್ಷಕರ ಕಲ್ಯಾಣ ನಿಧಿಯಿಂದ ಶಿಕ್ಷಕರ ವೈದ್ಯಕೀಯ ವೆಚ್ಚಗಳನ್ನು ಶಿಕ್ಷಕರ ಕಲ್ಯಾಣ ನಿಧಿಯ ನಿಯಮಗಳಂತೆ ಮಂಜೂರು ಮಾಡುವುದು ಹಾಗೂ ಶಿಕ್ಷಕರ ಸಹಪಠ್ಯ ಚಟುವಟಿಕೆಯನ್ನು ಈ ವರ್ಷ ಮುಂದುವರಿಸಬೇಕೆಂದು ಒತ್ತಾಯಿಸಲಾಯಿತು.
⦁ ಶಿಕ್ಷಕರ ಸಮಾಲೋಚನಾ ಸಭೆಗಳನ್ನು ಶೈಕ್ಷಣಿಕವಾಗಿ ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು.
⦁ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಅಭಿಮತ ವರ್ಗಾವಣೆಯನ್ನು ಮಾಡಲು ವಿನಂತಿಸಲಾಯಿತು. ಹಾಗೂ ವಿಜಯನಗರ ಜಿಲ್ಲೆಗೆ ಜಿಲ್ಲಾ ಮತ್ತು ತರಬೇತಿ ಸಂಸ್ಥೆಯನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಲಾಯಿತು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಬಿ.ಬಿ. ಕಾವೇರಿ, ಪ್ರಾಥಮಿಕ ಶಿಕ್ಷಣ ನಿರ್ದೇಶಕ ಪ್ರಸನ್ನಕುಮಾರ್, ಪ್ರೌಢ ಶಿಕ್ಷಣ ನಿರ್ದೇಶಕ ಕೃಷ್ಣಾ ಜಿ. ಕರಿಚೆನ್ನನವರು ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ. ನಾಗೇಶ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ ನುಗ್ಗಲಿ, ಉಪಾಧ್ಯಕ್ಷರಾದ ಪದ್ಮಲತಾ, ಸಹ ಕಾರ್ಯದರ್ಶಿ ಎಚ್.ಎಸ್. ಚೇತನ್, ಸಂಘಟನಾ ಕಾರ್ಯದರ್ಶಿ ಪ್ರಮೀಳಾ ಟಿ. ಕಾಮನಳ್ಳಿ, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸಿದ್ರಾಮ ಮ. ಲೋಕನ್ನವರ, ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷ ಗಿರೀಶ್, ವಿಜಯನಗರ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪ, ಮಂಡ್ಯ ಜಿಲ್ಲಾ ಅಧ್ಯಕ್ಷ ಜೆ.ವೈ. ಮಂಜುನಾಥ್, ಕೊಡಗು ಜಿಲ್ಲಾ ಕಾರ್ಯದರ್ಶಿ ರಮಾನಂದ, ಎಐಪಿಟಿಎಫ್‌ನ ಮಹಿಳಾ ಸಂಚಾಲಕಿ ರೇಖಾ ದಳವಾಯಿ, ಹಾವೇರಿ ಜಿಲ್ಲಾ ಕಾರ್ಯದರ್ಶಿ ವಿಜಯೇಂದ್ರ ಯತ್ನಳ್ಳಿ, ಕಲಬುರ್ಗಿ ಜಿಲ್ಲೆಯ ಕಾರ್ಯದರ್ಶಿ ಬಾಬು ಮೌರ್ಯ, ಜೇವರ್ಗಿ ತಾಲೂಕು ಕಾರ್ಯದರ್ಶಿ ಮರೆಯಪ್ಪ ಹೊಸಮನಿ, ವಿಜಯಕುಮಾರ ಬಡಿಗೇರ, ಬೆಂಗಳೂರು ಉತ್ತರ ಜಿಲ್ಲೆಯ ನಾಗರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Snake Bite : ಹಾವಿನ ದ್ವೇಷ 12 ವರುಷ! ಕಾಟ ಕೊಟ್ಟಿದ್ದ ಯುವಕನನ್ನು ಕಚ್ಚಿ ಸಾಯಿಸಿತೇ ನಾಗರಹಾವು?

ರಾಜ್ಯ ಸರ್ಕಾರಕ್ಕೆ ಅಭಿನಂದನೆ

ರಾಜ್ಯದಲ್ಲಿ ಸುಮಾರು 30,000 ಶಿಕ್ಷಕರ ವರ್ಗಾವಣೆ ಮಾಡಿದ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ 153 ಕೋಟಿ ರೂಪಾಯಿಗಳ ಶಾಲಾ ಅನುದಾನವನ್ನು ನೀಡಿರುವುದು ಹಾಗೂ ರಾಜ್ಯದ ಸಮಸ್ತ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರನ್ನು ನೀಡಿದ್ದಕ್ಕೆ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಕೆ.ನಾಗೇಶ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ ನುಗ್ಗಲಿ ಅವರು ಅಭಿನಂದನೆಯನ್ನು ಸಲ್ಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

Actor Darshan : ದರ್ಶನ್ ಬಿಡುಗಡೆ ಬಗ್ಗೆ ಜ್ಯೋತಿಷ್ಯ ಹೇಳುತ್ತಿರುವಾಗಲೇ ತಾಯಿ ಮೂಕಾಂಬಿಕಾ ದೇವಿ ಬಲಗಡೆ ಹೂ ಪ್ರಸಾದ ಕೊಟ್ಟಿದೆ. ದೇವಿಯ ಹೂ ಪ್ರಸಾದದಿಂದ ದರ್ಶನ್ ಬಿಡುಗಡೆಯನ್ನು ಜ್ಯೋತಿಷಿ ಡಾ ಲಕ್ಷ್ಮೀಕಾಂತ ಆಚಾರ್ಯ ದೃಢೀಕರಿಸಿದ್ದಾರೆ.

VISTARANEWS.COM


on

By

Actor darshan
Koo

ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ (Actor Darshan) ಆಶ್ವೀಜ-ಕಾರ್ತಿಕ ಮಾಸದ ಮಧ್ಯ ಭಾಗದಲ್ಲಿ ಬಿಡುಗಡೆ ಆಗುತ್ತಾರೆ ಎಂದು ಸ್ಫೋಟಕ ಭವಿಷ್ಯವನ್ನು ಜ್ಯೋತಿಷಿ ಡಾ.ಲಕ್ಷ್ಮಿಕಾಂತ ಆಚಾರ್ಯ ನುಡಿದಿದ್ದಾರೆ. 2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದ್ದು, ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. ತುಮಕೂರು ಸನಿಹದ ಚಿನಗ ಗ್ರಾಮದಲ್ಲಿ ನೆಲೆಸಿರುವ ಶ್ರೀ ಮೂಕಾಂಬಿಕಾ ದೇವಿ ಹೂ ಪ್ರಸಾದ ಕೊಡುವ ಮೂಲಕ ದರ್ಶನ್ ಬಿಡುಗಡೆಗೆ ಮುನ್ಸೂಚನೆ ಕೊಟ್ಟಿದ್ದಾಳೆ.

Actor darshan
ದರ್ಶನ್‌ ಕುರಿತು ಜ್ಯೋತಿಷ್ಯ ಹೇಳುವಾಗಲೇ ಬಲಗಡೆಯಿಂದ ಹೂ ಪ್ರಸಾದ ಕೊಟ್ಟ ದೇವಿ

ಮೂಕಾಂಬಿಕಾ ದೇವಿ ಆರಾಧಕರು, ಜ್ಯೋತಿಷಿ ಡಾ. ಲಕ್ಷ್ಮೀಕಾಂತ ಆಚಾರ್ಯ ಅವರು ಈ ಬಗ್ಗೆ ಮಾತಾನಾಡಿದ್ದಾರೆ. ದರ್ಶನ್ ಬಿಡುಗಡೆ ಬಗ್ಗೆ ಜ್ಯೋತಿಷ್ಯ ಹೇಳುತ್ತಿರುವಾಗಲೇ ತಾಯಿ ಮೂಕಾಂಬಿಕಾ ದೇವಿ ಬಲಗಡೆ ಹೂ ಪ್ರಸಾದ ಕೊಟ್ಟಿದೆ. ದೇವಿಯ ಹೂ ಪ್ರಸಾದದಿಂದ ದರ್ಶನ್ ಬಿಡುಗಡೆ ದೃಢೀಕರಿಸಿದ್ದಾರೆ. ಕಾರ್ತಿಕ್ ಮಾಸದ ಅಂತ್ಯದೊಳಗೆ ನಟ ದರ್ಶನ್ ಬಿಡುಗಡೆ ಆಗುತ್ತಾರೆ. ದರ್ಶನ್ ಅವರ ಜನ್ಮ ಜಾತಕದ ಪ್ರಕಾರ ಶುಭ ಸಮಯ ಪ್ರಾರಂಭವಾಗಿದೆ. ದೇವಿಯ ಆಶೀರ್ವಾದ ಸಂಪೂರ್ಣ ಇದ್ದು, ಎಲ್ಲವೂ ಶುಭ ಆಗುತ್ತದೆ. ದರ್ಶನ್‌ರ ದಶಾಬುಕ್ತಿಗಳು ಅಂತ್ಯವಾಗಿ, ಶುಭ ದಶಾಬುಕ್ತಿಗಳು ಪ್ರಾರಂಭವಾಗಿವೆ. ಅಭಿಮಾನಿಗಳಿಗೆ ಯಾವುದೇ ರೀತಿಯ ಆತಂಕ ಬೇಡ. ಪೂಜೆ-ಪುನಸ್ಕಾರ ಎಲ್ಲವನ್ನೂ ನಡೆಸಿಕೊಂಡು ಬಂದಿರುವುದರಿಂದ ಆ ದೇವಿಯ ಅನುಗ್ರಹ ಇರುತ್ತದೆ. ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ ಎಂದು ಜ್ಯೋತಿಷಿ ಡಾ.ಲಕ್ಷ್ಮೀಕಾಂತ ಆಚಾರ್ಯ ತಿಳಿಸಿದ್ದಾರೆ.

Actor darshan
Actor Darshan

ಈ ದೇವಿ ಹೂ ಪ್ರಸಾದ ಕೊಟ್ಟರೆ ಇಲ್ಲಿವರೆಗೂ ಯಾವುದೂ ಕೂಡ ಸುಳ್ಳಾಗಿಲ್ಲ. ಸಾಕಷ್ಟು ರೀತಿಯಲ್ಲಿ ಒಳ್ಳೆಯದಾಗಿದೆ ಎಂದು ಭಕ್ತಾಧಿಗಳು ಹೇಳಿಕೊಂಡು ಬಂದಿದ್ದಾರೆ. ಇದಕ್ಕೆ ಸಾಕಷ್ಟು ಉದಾಹರಣೆ ಕೂಡ ಇದೆ. ನಟ ದರ್ಶನ್‌ಗೆ ಇಷ್ಟು ದಿವಸ ಜನ್ಮ‌ ಜಾತಕದಲ್ಲಿ ಗುರುದಶಾಬುಕ್ತಿ ನಡೆಯುತ್ತಿತ್ತು. 2027ಕ್ಕೆ ಶನಿ ದಶಾಬುಕ್ತಿ ಪ್ರಾರಂಭವಾಗಲಿದೆ. ದರ್ಶನ್ ರಾಜಕೀಯ ಜೀವನ ತುಂಬಾ ಚೆನ್ನಾಗಿರಲಿದೆ. 2027ರ ನಂತರ ರಾಜಕೀಯದಲ್ಲಿ ಉನ್ನತ ಸ್ಥಾನ ಪಡೆಯುತ್ತಾರೆ. ಹಾಗಾಗಿ ಇದರಲ್ಲಿ ಯಾವುದೇ ಅನುಮಾನ ಬೇಡ. 2027ರ ನಂತರ ದರ್ಶನ್ ಜೀವನ ಶೈಲಿ ಬದಲಾಗಲಿದೆ. ಈಗ 2024ರ ಅಂತ್ಯದಲ್ಲಿ ಇದ್ದೇವೆ, 2025-2026ರ ನಂತರ 2027ರಿಂದ ಒಳ್ಳೆಯ ಸಮಯ ಪ್ರಾರಂಭವಾಗುತ್ತದೆ. ಒಳ್ಳೆಯ ರೀತಿಯ ಜೀವನ ಕಲ್ಪಿಸಿಕೊಡುತ್ತಾಳೆ. ರಾಜಕೀಯ ಪ್ರವೇಶದ ಯೋಗ ಕೂಡ ದರ್ಶನ್‌ಗೆ ಇದೆ. ದಶಾಬುಕ್ತಿಗಳು ಮನುಷ್ಯನ ಜೀವನ ಶೈಲಿಯನ್ನೇ ಬದಲಾಯಿಸಿ ಬಿಡುತ್ತದೆ.

Actor darshan
Actor Darshan

ಒಳ್ಳೆಯದು ಪ್ರಾರಂಭ ಆಗಬೇಕು ಅಂದಾಗ ಕೆಟ್ಟದು ನಮ್ಮ‌ ಕಣ್ಣಿಗೆ ಯಾವುದು ಕಾಣಿಸಲ್ಲ. ದೇವಿಯು ಆಶೀರ್ವಾದ ಮಾಡಿರುವುದರಿಂದ ಅವರ ಜೀವನ ಸುಗಮವಾಗಿ ನಡೆಯುತ್ತದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಚಂಡಿಕಾ ಯಾಗ ಮಾಡಿಸಿದ್ದರು. ಆದಾದ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿ ಆದರು. ಕ್ಷೇತ್ರಕ್ಕೆ ಸಿರಾದ ದಿವಂಗತ ಸತ್ಯನಾರಾಯಣ್, ವಾಸು, ಬೆಮೆಲ್ ಕಾಂತರಾಜು, ಗೌರಿಶಂಕರ್, ಸುರೇಶ್‌ಗೌಡ ಹಾಗೂ ಪರಮೇಶ್ವರ, ಮುದ್ದಹನುಮೇಗೌಡ ಸಾಕಷ್ಟು ರೀತಿಯ ರಾಜಕೀಯ ವ್ಯಕ್ತಿಗಳು ದೇವಿಯ ಆಶೀರ್ವಾದ ಪಡೆದಿದ್ದಾರೆ. ಎಲ್ಲರಿಗೂ ಒಳ್ಳೆಯದಾಗಿರುವ ನಿದರ್ಶನಗಳಿವೆ ಎಂದು ತುಮಕೂರಿನಲ್ಲಿ ಜ್ಯೋತಿಷಿ ಡಾ. ಲಕ್ಷ್ಮೀಕಾಂತ ಆಚಾರ್ಯ ತಿಳಿಸಿದ್ದಾರೆ.

Actor Darshan
Actor Darshan

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

KEA Updates : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌ ಆಗಿದೆ. ಸೀಟು ಸಿಗದವರು/ ಚಾಯ್ಸ್‌ ದಾಖಲಿಸದವರಿಗೆ ಸೆ.30ರಿಂದ ಆಪ್ಷನ್‌ ಎಂಟ್ರಿಗೆ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

By

KEA UGCET 2024
Koo

ಬೆಂಗಳೂರು: ದ್ವಿತೀಯ ಪಿಯುಸಿ ಮೂರನೇ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಯುಜಿಸಿಇಟಿ-24 (UGCET 2024) ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Updates) ಅವಕಾಶ ಕಲ್ಪಿಸಿದ್ದು, ಶನಿವಾರದಿಂದಲೇ ಆದ್ಯತಾ ಕ್ರಮದಲ್ಲಿ ಆಪ್ಷನ್ಸ್‌ಗಳನ್ನು ದಾಖಲಿಸಲು ವೆಬ್‌ಸೈಟ್‌ ನಲ್ಲಿ ಲಿಂಕ್‌ ಬಿಡುಗಡೆ ಮಾಡಿದೆ.

ಇದಲ್ಲದೆ, ಮೊದಲ ಎರಡೂ ಸುತ್ತುಗಳಲ್ಲಿ ಆಪ್ಷನ್‌ಗಳನ್ನು ದಾಖಲು ಮಾಡದವರು ಹಾಗೂ ಹಂಚಿಕೆಯಾದ ಸೀಟಿಗೆ ಯಾವುದೇ ಛಾಯ್ಸ್‌ ನೀಡದವರು ಹಾಗೂ ಇದುವರೆಗೂ ಯಾವುದೇ ಸೀಟು ಹಂಚಿಕೆಯಾಗದವರಿಗೂ ಆಪ್ಷನ್ಸ್‌ ದಾಖಲಿಸಲು ಸೆ.30ರಿಂದ ಅ.4ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಶನಿವಾರ ತಿಳಿಸಿದ್ದಾರೆ.

ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಅ.7ರಂದು ಮತ್ತು ಅಂತಿಮ ಫಲಿತಾಂಶವನ್ನು ಅ.8ರಂದು ಪ್ರಕಟಿಸಲಾಗುವುದು. ಶುಲ್ಕ ಪಾವತಿ, ಪ್ರವೇಶ ಪತ್ರ ಡೌನ್‌ ಲೋಡ್‌ ಮಾಡಿಕೊಳ್ಳಲು ಅ.9ರಿಂದ 14ರವರೆಗೆ ಅವಕಾಶ ನೀಡಲಾಗುವುದು. ಅ.15, ಕಾಲೇಜಿಗೆ ವರದಿ ಮಾಡಿಕೊಳ್ಳಲು ಕೊನೆ ದಿನ ಎಂದು ಪ್ರಸನ್ನ ವಿವರಿಸಿದ್ದಾರೆ.

30ರೊಳಗೆ ಸಲ್ಲಿಸಿ:

3ನೇ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಅಂಕಗಳ ಮಾಹಿತಿಯನ್ನು ಪಿಯುಸಿ ಇಲಾಖೆಯಿಂದ ನೇರವಾಗಿ ಪಡೆದು, ಅದರ ಆಧಾರದ ಮೇಲೆ ಸಿಇಟಿ ರ‍್ಯಾಂಕ್‌ ನೀಡಲಾಗಿದೆ. ಇತರೆ ಬೋರ್ಡ್ ಗಳಿಂದ 12ನೇ ತರಗತಿಯನ್ನು ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಕೂಡ ತಮ್ಮ ಅಂಕಪಟ್ಟಿ ಮತ್ತು 2024ನೇ ಸಾಲಿನ ಸಿಇಟಿ ಪ್ರವೇಶ ಪತ್ರವನ್ನು ಸೆ.30ರೊಳಗೆ ಪ್ರಾಧಿಕಾರಕ್ಕೆ ಸಲ್ಲಿಸಿ ರ್ಯಾಂಕ್‌ ಪಡೆದು, ಆಪ್ಷನ್‌ ದಾಖಲಿಸಬಹುದು.

ಎಚ್ಚರಿಕೆಯಿಂದ ಆಪ್ಷನ್ಸ್‌ ದಾಖಲಿಸಿ ಇಲ್ಲದಿದ್ದರೆ ಐದು ಪಟ್ಟು ದಂಡ

ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಣೆ ನಂತರ ಅಭ್ಯರ್ಥಿಗಳಿಗೆ ಯಾವುದೇ ಛಾಯ್ಸ್‌ಗಳನ್ನು ದಾಖಲಿಸಲು ಅವಕಾಶ ಇರುವುದಿಲ್ಲ. ಹೀಗಾಗಿ ಸೀಟು ಸಿಕ್ಕ ನಂತರ ಪ್ರವೇಶ ಪಡೆಯಬೇಕು. ಒಂದು ವೇಳೆ ಪ್ರವೇಶ ಪಡೆಯದಿದ್ದರೆ ಸರ್ಕಾರ ನಿಗದಿಪಡಿಸಿರುವ ಎಂಜಿನಿಯರಿಂಗ್‌ ಶುಲ್ಕದ ಐದು ಪಟ್ಟು ದಂಡ ಕಟ್ಟಬೇಕಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಎಚ್ಚರಿಕೆಯಿಂದ ಆಪ್ಷನ್ಸ್‌ ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ತಮಗೆ ದೊರೆತಿರುವ ಸೀಟು ರದ್ದುಪಡಿಸಿಕೊಳ್ಳಲು ಅ.3ರ ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ. ಅಂತಹವರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ವಿವರಿಸಿದರು. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಇನ್ನು ಮುಂದೆ ಪ್ರತ್ಯೇಕವಾಗಿ ನಡೆಯಲಿದ್ದು, ಸದ್ಯದಲ್ಲೇ ಅದರ‌ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದರು.

Continue Reading

ಚಿಕ್ಕೋಡಿ

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಕೋರ್ಟ್‌ ಗಲ್ಲುಶಿಕ್ಷೆ ಹಾಗೂ ದಂಡವನ್ನು ವಿಧಿಸಿದೆ.

VISTARANEWS.COM


on

By

ಸಾಂದರ್ಭಿಕ ಚಿತ್ರ
Koo

ಚಿಕ್ಕೋಡಿ: ಬಾಲಕಿಯ ಮೇಲೆ ಎರಗಿ ತನ್ನ ಕಾಮದಾಸೆಯನ್ನು (Physical Abuse) ತೀರಿಸಿಕೊಂಡು ಕೊಂದು (murder case) ಹಾಕಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ. ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ. ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ(32) ಎಂಬಾತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

2017ರಲ್ಲಿ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಅಪ್ರಾಪ್ತೆ ಮೇಲೆ ತನ್ನ‌ ಕಾಮದ ಕಣ್ಣಿಟ್ಟಿದ್ದ ಕಾಮುಕ ಉದ್ದಪ್ಪ ರಾಮಪ್ಪ , ಯಾರು ಇಲ್ಲದೆ ಇರುವಾಗ ಬಾಲಕಿಗೆ ಚಾಕೋಲೇಟ್ ಆಸೆ ತೋರಿಸಿದ್ದ. ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕೋಲೇಟ್‌ ಕೊಡಿಸಿ ಪುಸಲಾಯಿಸಿದ್ದ ಕೀಚಕ ಬಳಿಕ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ತನ್ನ ಕೃತ್ಯ ಎಲ್ಲಿ ಹೊರಬರುತ್ತೋ ಎಂದು ನಂತರ ಮಗುವಿನ ಕಣ್ಣು, ಮೂಗಿಗೆ ಮಣ್ಣು ಹಾಕಿ ಕೊಲೆ ಮಾಡಿದ್ದ.

Physical Abuse
Physical Abuse

ಪ್ರಕರಣದ ಕೂಲಂಕುಷ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಹಾರೂಗೇರಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ.

ರಾಯಚೂರಿನಲ್ಲಿ ಮನೆ ಮಾಲೀಕಿಯನ್ನು ಕೊಂದ ಬಾಡಿಗೆದಾರ

ರಾಯಚೂರಿನಲ್ಲಿ ಬಾಡಿಗೆದಾರನಿಂದ ಮಹಿಳೆಯೊಬ್ಬರ ಕೊಲೆ ಆಗಿದೆ. ರಾಯಚೂರು ನಗರದ ಉದಯ್ ನಗರದಲ್ಲಿ ಘಟನೆ ನಡೆದಿದೆ. ಶೋಭಾ ಪಾಟೀಲ್(60) ಕೊಲೆಯಾದವರು. ಇದೇ ಸೆಪ್ಟೆಂಬರ್25 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಮಾಡಿ ಸ್ವ ಗ್ರಾಮದಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿ ಶಿವು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ವೃದ್ಧೆ ಶೋಭಾ ಮನೆಯಲ್ಲಿ ಶಿವು ಬಾಡಿಗೆಗೆ ಇದ್ದ. ಬೆಂಗಳೂರಿನಲ್ಲಿ ಮಕ್ಕಳ ಜತೆ ಇದ್ದ ಶೋಭಾ ಇತ್ತೀಚೆಗೆ ರಾಯಚೂರಿಗೆ ಬಂದಿದ್ದರು. ಮನೆ‌ ಖಾಲಿ ಮಾಡುವಂತೆ ಆರೋಪಿ ಶಿವುಗೆ ತಿಳಿಸಿದ್ದರು. ಘಟನಾ ದಿನ ಶೋಭಾರ ಮನೆಗೆ ಬಂದಿದ್ದ. ಮಲಗಿದ್ದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಂದು, ಚಿನ್ನಾಭರಣ, ಫೋನ್ ಕದ್ದೊಯ್ದಿದ್ದ. ಬಳಿಕ ತಾನೇನು ಮಾಡಿಲ್ಲ ಎಂಬಂತೆ ಮೃತ ಮಹಿಳೆ ಕುಟುಂಬಸ್ಥರ ಜತೆಗೆ ಓಡಾಡಿಕೊಂಡಿದ್ದ. ಶೋಭಾ ಅಂತ್ಯಕ್ರಿಯೆ ಬಳಿಕ ಆಕೆ ಚಿನ್ನಾಭರಣ ಕಾಣದೇ ಇದ್ದಾಗ ಪೊಲೀಸರಿಗೆ ದೂರು ನೀಡಿದ್ದರು. ಸಿಸಿಟಿವಿ ಒಂದರಲ್ಲಿ ಆತ ಓಡಾಡಿದ್ದ ದೃಶ್ಯ ಸೆರೆ ಆಗಿತ್ತು. ಅದರ ಆಧಾರದಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Street Dogs‌ : ಬೀದಿ ನಾಯಿಗಳಿಗೆ ಆಹಾರ ವ್ಯವಸ್ಥೆ ಮಾಡಲು ಹೊಸ ಯೋಜನೆ ಜಾರಿಗೆ ಕ್ರಮವಹಿಸಲಾಗುವುದು ಎಂದು ಬಿಬಿಎಂಪಿ ಪಶುಸಂಗೋಪನಾದ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

VISTARANEWS.COM


on

By

BBMP plans to make arrangements for food in areas where stray dogs do not get food
Koo

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ (Street dogs) ಆಹಾರ ಸಿಗದಂತಹ ಪ್ರದೇಶದಲ್ಲಿ ಆಹಾರದ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಬಿಬಿಎಂಪಿಯ ಪಶುಸಂಗೋಪನಾ ವಿಭಾಗದಿಂದ ಪ್ರಾಯೋಗಿಕವಾಗಿ ಹೊಸ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಪಶುಸಂಗೋಪನಾ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಬೀದಿನಾಯಿಗಳ ಅಟ್ಯಾಕ್‌ಗೆ ಕಾರಣ ಹಸಿವು?

ನಗರದಲ್ಲಿ ಅನೇಕ ಸ್ಥಳಗಳಲ್ಲಿ ಸಮುದಾಯ ಪ್ರಾಣಿಗಳಿಗೆ ದಿನಕ್ಕೆ ಒಂದು ಹೊತ್ತಿನ ಆಹಾರವೂ ಸಹ ಸಿಗದಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ. ಇದರಿಂದ ಬೀದಿ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಬೀದಿ ನಾಯಿಗಳು ಸಾರ್ವಜನಿಕರಿಗೆ ಕಚ್ಚುವ ಪ್ರಕರಣಗಳು ಕಂಡಬರುತ್ತಿದ್ದು, ಅದನ್ನು ನಿಂಯಂತ್ರಿಸಬೇಕಿದೆ. ಆದ್ದರಿಂದ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡಲು ಪಾಲಿಕೆಯು ಪ್ರಾಣಿ ಪಾಲಕರು, ಪೌರಕಾರ್ಮಿಕರು, ಹೋಟೆಲ್ ಮಾಲಿಕರು, ಆರೋಗ್ಯ ವಿಭಾಗದ ಸಿಬ್ಬಂದಿ ಹಾಗೂ ಇತರೆ ಆಸಕ್ತರೊಂದಿಗೆ ಸಮನ್ವಯ ಸಾಧಿಸಿ ಇದನ್ನು ಮಾಡಲಾಗುತ್ತಿದೆ.

BBMP plans to make arrangements for food in areas where stray dogs do not get food
BBMP plans to make arrangements for food in areas where stray dogs do not get food

ಯೋಜನೆಯ ಜಾರಿ ವಿಧಾನ

ಪ್ರಾಣಿಗಳಿಗೆ ಆಹಾರ ನೀಡುವ ಪ್ರಾಣಿ ಪ್ರಿಯರ ನೋಂದಣಿಗೆ ಅವಕಾಶ ಕಲ್ಪಿಸಲಾಗುವುದು. ನಂತರ ಪೌರ ಕಾರ್ಮಿಕರು ಮತ್ತು ಖಾಸಗಿ ಹೋಟೆಲ್ ಮಾಲಿಕರನ್ನು ಇದರಲ್ಲಿ ಪಾಲ್ಗೊಳ್ಳುವಂತೆ ಮಾಡಿ ಆಹಾರ ನೀಡುವ ಸ್ಥಳಗಳನ್ನು ಗುರುತಿಸಿ ಬೀದಿ ನಾಯಿಗಳಿಗೆ ಸರಿಯಾಗಿ ಆಹಾರ ಸಿಗುವಂತೆ ಮಾಡುವುದು. ಅದಾದ ಬಳಿಕ ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಆಯ್ದ ಸ್ಥಳಗಳಲ್ಲಿ ಅನುಷ್ಟಾನಗೊಳಿಸಿ ಎಲ್ಲಾ ಪಾಲುದಾರರ ಪ್ರತಿಕ್ರಿಯೆಯನ್ನು ಸಂಗ್ರಹಿಸಲಾಗುವುದು. ಯೋಜನೆ ಯಶಸ್ವಿಯಾದಲ್ಲಿ ಪಾಲಿಕೆಯ ಎಲ್ಲಾ ವಾರ್ಡ್ಗಳಲ್ಲಿ ಈ ಅಭಿಯಾನವನ್ನು ಅನುಷ್ಟಾನಗೊಳಿಸುವುದು ಎಂದು ಆಯಕ್ತರು ಮಾಹಿತಿ ನೀಡಿದ್ದಾರೆ.

ವಿವರವಾದ ಯೋಜನೆಯ ಶೀಘ್ರ ಬಿಡುಗಡೆ:

ಸಮುದಾಯದ ಪ್ರಾಣಿಗಳಿಗೆ ಉತ್ತಮ ಸಹಾಯ ಮಾಡಲು ಕೇರ್‌ಟೇಕರ್‌ಗಳನ್ನು ಬಲಪಡಿಸುವುದರ ಜೊತೆಗೆ, ಪ್ರಾಣಿಗಳ ಸಂರಕ್ಷಣೆ ಕಾರ್ಯಾಚರಣೆ ಹಾಗೂ ಶಸ್ತ್ರಚಿಕಿತ್ಸಾ ನಂತರದ ಆರೈಕೆ, ವೈದ್ಯಕೀಯ ಮೇಲ್ವಿಚಾರಣೆಗೆ ಅಗತ್ಯವಿರುವ ಸಂದರ್ಭಗಳಲ್ಲಿ ಪ್ರತ್ಯೇಕ ವಲಯಗಳಲ್ಲಿ ರಕ್ಷಣೆ ಮತ್ತು ಚೇತರಿಸಿಕೊಳ್ಳುವಿಕೆಯನ್ನು ಬೆಂಬಲಿಸುವ ಸಾಮರ್ಥ್ಯವನ್ನು ಪಾಲಿಕೆ ನಿರ್ಮಿಸುತ್ತಿದೆ. ಈ ಕುರಿತು ವಿವರವಾದ ಯೋಜನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಪ್ರಾಣಿ ಪಾಲಕರು ನೋಂದಣಿ ಮಾಡಿಕೊಳ್ಳಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿರುವ ಪ್ರಾಣಿ ಪಾಲಕರು ಪಾಲಿಕೆ ಪಶುಸಂಗೋಪನಾ ಇಲಾಖೆಯಿಂದ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಪಶಸಂಗೋಪನೆ ವಿಬಾಗದ ಸಾಮಾಜಿಕ ಜಾಲತಾಣವಾದ X, Facebook ಮತ್ತು Instagram (@bbmp_animalhusbandry) ಪುಟಗಳಲ್ಲಿ ನೋಂದಣಿಯ ಮಾಡಿಕೊಳ್ಳುವ ಲಿಂಕ್ ಅನ್ನು ನೀಡಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಈ ಯೋಜನೆಯನ್ನು ಯಶಸ್ವಿಗೊಳಿಸಲು ಪಾಲಿಕೆ ಜೊತೆ ಕೈಜೋಡಿಸುವಂತೆ ಎಲ್ಲಾ ಸಮುದಾಯ ಪ್ರಾಣಿ ಪಾಲಕರಲ್ಲಿ ಕೋರಲಾಗಿದೆ.

ನೋಂದಣಿ ಕಡ್ಡಾಯವಲ್ಲ:

ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ಪಾಲಕರ ನೋಂದಣಿಯು 2ನೇ ಅಕ್ಟೋಬರ್ 2024 ರಿಂದ ಪ್ರಾರಂಭವಾಗಲಿದ್ದು, 31ನೇ ಅಕ್ಟೋಬರ್ 2024ರವರೆಗೆ ನೊಂದಣಿಯಾಗಲು ಅವಕಾಶವಿರುತ್ತದೆ. ಪ್ರಾಣಿ ಪಾಲಕರ ನೋಂದಣಿ ಕಡ್ಡಾಯವಾಗಿರುವುದಿಲ್ಲ. ಈ ನೋಂದಣಿಯು ಅಭಿಯಾನವನ್ನು ಯೋಜಿಸಲು ಮತ್ತು ಅದನ್ನು ಸಮರ್ಥನೀಯವಾಗಿ ಡೇಟಾಬೇಸ್ ರಚಿಸುವ ದೃಷ್ಟಿಯಿಂದ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ.

ಪಾಲಿಕೆ ಜೊತೆ ಕೈ ಜೋಡಿಸಿ:

ಬೀದಿ ನಾಯಿಗಳಿಗೆ ಆಹಾರ ನೀಡುವ ಅಭಿಯಾನದ ಮೂಲಕ, ನಾಗರೀಕರಲ್ಲಿ ಸಹಾನುಭೂತಿಯ ಅರ್ಥವನ್ನು ಹಾಗೂ ಪ್ರಾಣಿಗಳೊಂದಿಗಿನ ಸಹಬಾಳ್ವೆಯ ಅನುಕೂಲವನ್ನು ಮನವರಿಕೆ ಮಾಡಲು Coexisting Champion ಆಗಿ ಪಾಲಿಕೆ ಜೊತೆ ಕೈ ಜೋಡಿಸಲು ಕೋರುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಸ್ಥಳೀಯರು ತಮ್ಮ ಪ್ರದೇಶದಲ್ಲಿ ಸಮುದಾಯದ ಪ್ರಾಣಿಗಳ ಆರೈಕೆಯ ಸಾಮಾಜಿಕ ಕಾಳಜಿಯ ಕಾರ್ಯವನ್ನು ಕೈಗೊಳ್ಳಲು ಪ್ರೋತ್ಸಾಹಿಸಲು ಕೋರಿದೆ.

1533ಗೆ ಕರೆ ಮಾಡಿ:

ಬೀದಿ ನಾಯಿಗಳಿಗೆ ಸಂಬಂಧಿಸಿದಂತೆ ಪಾಲಿಕೆಯ ಪಶಸಂಗೋಪನಾ ವಿಭಾಗದಿಂದ ಸಾಕಷ್ಟು ಉಪ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಾಗರೀಕರಿಗೆ ಅಗತ್ಯವಿರುವ ಯಾವುದೇ ಸಹಾಯಕ್ಕಾಗಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆಯಾದ 1533 ಗೆ ಸಂಪರ್ಕಿಸಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor darshan
ಪ್ರಮುಖ ಸುದ್ದಿ4 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು5 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ5 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು6 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು6 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು7 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು8 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು10 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು10 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ11 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌