Job News : ಅತಿಥಿ ಉಪನ್ಯಾಸಕರ ಸೇವಾ ಅವಧಿ ವಿಸ್ತರಣೆ; ಹೊರಗುತ್ತಿಗೆ ನೌಕರರಿಗೆ ಗುಡ್‌ ನ್ಯೂಸ್‌ - Vistara News

ಉದ್ಯೋಗ

Job News : ಅತಿಥಿ ಉಪನ್ಯಾಸಕರ ಸೇವಾ ಅವಧಿ ವಿಸ್ತರಣೆ; ಹೊರಗುತ್ತಿಗೆ ನೌಕರರಿಗೆ ಗುಡ್‌ ನ್ಯೂಸ್‌

Job News : ಅತಿಥಿ ಉಪನ್ಯಾಸಕರ ನೇಮಕ ವಿಚಾರದಲ್ಲಿನ ಬಹುದಿನಗಳ ಬೇಡಿಕೆಯನ್ನು ಉನ್ನತ ಶಿಕ್ಷಣ ಇಲಾಖೆ ಈಡೇರಿಸಿದೆ. ಮತ್ತೊಂದು ಕಡೆ ವಿವಿಧ ಜಿ.ಪಂ ಇಲಾಖೆಗಳ ಹೆಚ್ಚುವರಿ ವೇತನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

VISTARANEWS.COM


on

Guest Lecturer AI image
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ (Guest Lecturer) ಹಾಗೂ ಹೊರಗುತ್ತಿಗೆ ನೌಕರರಿಗೆ (Outsourced employees) ಗುಡ್‌ ನ್ಯೂಸ್‌ ಒಂದನ್ನು ನೀಡಿದೆ. ಒಂದು ಕಡೆ ಅತಿಥಿ ಉಪನ್ಯಾಸಕರ ನೇಮಕ ವಿಚಾರದಲ್ಲಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದರೆ, ಮತ್ತೊಂದು ಕಡೆ ವಿವಿಧ ಜಿ.ಪಂ ಇಲಾಖೆಗಳ ಹೆಚ್ಚುವರಿ ವೇತನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅತಿಥಿ ಉಪನ್ಯಾಸಕರಿಗೆ ಬಂಪರ್‌

ಅತಿಥಿ ಉಪನ್ಯಾಸಕರನ್ನು ಇಷ್ಟ ವರ್ಷಗಳ ಕಾಲ ಪ್ರತಿ ಸೆಮಿಸ್ಟರ್‌ ಆಧಾರಿತವಾಗಿ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಒಂದು ಸೆಮಿಸ್ಟರ್‌ ಮುಗಿಯುತ್ತಿದ್ದಂತೆ ಮತ್ತೆ ಅವರು ಕೆಲಸಕ್ಕೆ ಅರ್ಜಿ ಹಾಕಬೇಕಿತ್ತು. ನೇಮಕಾತಿಗಾಗಿ ಅಲೆದಾಟ, ಸಂದರ್ಶನ ಸೇರಿದಂತೆ ಮತ್ತಿತರ ಸಮಸ್ಯೆಗಳನ್ನು ಅನುಭವಿಸಬೇಕಿತ್ತು. ಈ ಸಮಸ್ಯೆಗೆ ಪರಿಹಾರ ನೀಡಿ ಎಂದು ಸಾಕಷ್ಟು ಬಾರಿ ಅತಿಥಿ ಉಪನ್ಯಾಸಕರು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸುತ್ತಾ ಬಂದಿದ್ದರು. ಈಗ ಅತಿಥಿ ಉಪನ್ಯಾಸಕರ ಭಾಗ್ಯದ ಬಾಗಿಲು ತೆರೆದಿದೆ.

ಶೈಕ್ಷಣಿಕ ವರ್ಷಕ್ಕೆ ನೇಮಕ

ಉನ್ನತ ಶಿಕ್ಷಣ ಇಲಾಖೆಯು ಈ ಬಾರಿ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರವನ್ನು ನೀಡಿದೆ. 2023-24ನೇ ಸಾಲಿನ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದ್ದು, ಸೆಮಿಸ್ಟರ್ ಬದಲಾಗಿ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ ಮಾತ್ರ) ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಈ ಮೂಲಕ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಗೆ ಸರ್ಕಾರ ಅಸ್ತು ಎಂದಂತೆ ಆಗಿದೆ.

ಹೊರಗುತ್ತಿಗೆ ನೌಕರರಿಗೆ

ವಿವಿಧ ಜಿ.ಪಂ ಇಲಾಖೆಗಳ ಹೆಚ್ಚುವರಿ ವೇತನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾಗಿವೆ. ಈ ಕಾರಣದಿಂಧ ಬಾಕಿ/ಪ್ರಸಕ್ತ ಸಾಲಿನ ವೇತನ, ದಿನಗೂಲಿ ನೌಕರರ ನಿವೃತ್ತಿ ಸೌಲಭ್ಯಗಳ ಪಾವತಿಗಾಗಿ, ಹೊರಗುತ್ತಿಗೆ ಸಿಬ್ಬಂದಿ ವೇತನ ಹಾಗೂ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ.

ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.1226.17 ಲಕ್ಷ (ರೂಪಾಯಿ ಒಂದು ಸಾವಿರದ ಎರಡು ನೂರ ಇಪ್ಪತ್ತಾರು ಲಕ್ಷದ ಹದಿನೇಳು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ಹೆಚ್ಚುವರಿ ವೇತನವನ್ನು ಬಿಡುಗಡೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.

ಪದವೀಧರ ಶಿಕ್ಷಕರ ಜ್ಯೇಷ್ಠತೆ ಸಮಸ್ಯೆ ಬಗ್ಗೆ ಸಿಎಂ ಜತೆ ಶೀಘ್ರ ಚರ್ಚೆ: ಮಧು ಬಂಗಾರಪ್ಪ

ಪ್ರಾಥಮಿಕ ಶಾಲಾ ಸೇವಾನಿರತ ಪದವೀಧರ ಶಿಕ್ಷಕರ (Graduate Teachers) ಜ್ಯೇಷ್ಠತೆಯ ಸಮಸ್ಯೆ ಸೇರಿದಂತೆ ಇನ್ನಿತರ ಪ್ರಮುಖ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಜತೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಅವರು ರಾಜ್ಯ ಶಿಕ್ಷಕರ ಸಂಘಕ್ಕೆ ಭರವಸೆ ನೀಡಿದ್ದಾರೆ. ಈ ಮೂಲಕ ಶೈಕ್ಷಣಿಕ ವಲಯದ (Education News) ಹಲವು ಸಮಸ್ಯೆಗಳನ್ನು ಪರಿಹರಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Karnataka Politics : ಮುಂದಿನ 5 ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ!

ರಾಜ್ಯದ ಸಮಗ್ರ ಶಿಕ್ಷಣ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (Karnataka State Primary School Teachers Association) ನಿಯೋಗದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಸಭೆ ನಡೆಸಿ, ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಸೇವೆಯಲ್ಲಿರುವ ಪದವೀಧರ ಶಿಕ್ಷಕರನ್ನು 6 ರಿಂದ 8ಕ್ಕೆ ವಿಲೀನಗೊಳಿಸುವ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಪ್ರಾಥಮಿಕ ಶಾಲೆಗಳಲ್ಲಿ 15ರಿಂದ 20 ವರ್ಷ ಸೇವೆ ಸಲ್ಲಿಸಿದ ಪದವೀಧರ ಶಿಕ್ಷಕರ ಸೇವಾ ಜೇಷ್ಠತೆಯನ್ನು ಸಂರಕ್ಷಿಸಿ, 6 ರಿಂದ 8ಕ್ಕೆ ನಿಯುಕ್ತಿಗೊಳಿಸುವ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನಿಸುವುದಾಗಿ ಸಚಿವ ಮಧು ಬಂಗಾರಪ್ಪ ಶಿಕ್ಷಕರ ಸಂಘಕ್ಕೆ ಭರವಸೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Job Alert: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 27 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ನಾಳೆ (ಜೂನ್‌ 30)ವರೆಗೆ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

Job Alert
Koo

-ಆರ್.ಕೆ.ಬಾಲಚಂದ್ರ, ಬ್ಯಾಂಕಿಂಗ್ ಪರಿಣತರು
ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 27 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ನಾಳೆ (ಜೂನ್‌ 30)ವರೆಗೆ ಅವಕಾಶ ಕಲ್ಪಿಸಲಾಗಿದೆ (Job Alert).

ರಾಜ್ಯದ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ.

ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕ ನಡೆಸಿದ ಐಬಿಪಿಎಸ್ ಈ ಬಾರಿ 9,995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ. ರಾಜ್ಯದ ಎರಡು ಬ್ಯಾಂಕುಗಳಲ್ಲಿ 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಒಟ್ಟು 200 ಹುದ್ದೆಗಳು ಮತ್ತು ಆಫೀಸರ್ ಸ್ಟೇಲ್-1-386 ಹುದ್ದೆಗಳಿವೆ. ಕಳೆದ ಬಾರಿ ರಾಜ್ಯದ ಈ ಎರಡೂ ಬ್ಯಾಂಕ್‌ಗಳಲ್ಲಿ 807 ಹುದ್ದೆಗಳಿಗೆ ನೇಮಕ ನಡೆದಿತ್ತು.

ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಖಾಲಿ ಇರುವ ಹುದ್ದೆಗಳ ಮೀಸಲಾತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್)
ಬ್ಯಾಂಕ್ಎಸ್​ ಸಿ(SC)ಎಸ್​ಟಿ(ST)ಒಬಿಸಿ (NCL)*EWS*ಸಾಮಾನ್ಯTOTAL
ಕರ್ನಾಟಕ ಗ್ರಾಮೀಣ ಬ್ಯಾಂಕ್167271040100
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್167271040100
ಆಫೀಸರ್ ಸ್ಕೇಲ್-I
ಕರ್ನಾಟಕ ಗ್ರಾಮೀಣ ಬ್ಯಾಂಕ್43217729116286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್157271041100
EWS-ಆರ್ಥಿಕ ವಾಗಿ ಹಿಂದುಳಿದ ವರ್ಗ   *NCL- ಕೆನೆ ಪದರ ಹೊರತಾದ

ಈಗ ನಿಗದಿಪಡಿಸಿರುವ ಹುದ್ದೆಗಳ ಸಂಖ್ಯೆಗಳು ಹೆಚ್ಚಾಗಲೂಬಹುದು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಮೀಸಲಿಟ್ಟ ಹುದ್ದೆಗಳ ಸಂಖ್ಯೆ ಏರಿಕೆಯಾಗಲೂಬಹುದು. ಆದ್ದರಿಂದ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನಿರಾಶರಾಗಬೇಕಾಗಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಜೂನ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಯೋಮಿತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18 ರಿಂದ 28 ವರ್ಷಗಳು. ಆಫೀಸರ್ ಸ್ಕೇಲ್-I ಹುದ್ದೆಗೆ 18 ರಿಂದ 30 ವರ್ಷಗಳು.  ಎಸ್​.ಸಿ ಮತ್ತು ಎಸ್​.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಇದೆ. 

ಶೈಕ್ಷಣಿಕ ಅರ್ಹತೆ ಮತ್ತು ಅನುಭವಗಳೇನಿರಬೇಕು?

Group“B”-ಆಫೀಸ್ ಅಸಿಸ್ಟೆಂಟ್​ ಹುದ್ದೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಭಾಷೆ ತಿಳಿದಿರುವುದು ಅವಶ್ಯಕ. ಕಂಪ್ಯೂಟರ್​ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ.

Group“A”-Officers-ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)

ಯಾವುದೇ ವಿಷಯದಲ್ಲಿ ಪದವಿ. ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಥವಾ ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವವರಿಗೆ ಆದ್ಯತೆ. ಆದರೆ ಸ್ಥಳೀಯ ಭಾಷೆ ತಿಳಿದಿರಬೇಕಾದುದು ಅವಶ್ಯಕ. ಕಂಪ್ಯೂಟರ್ ನಿರ್ವಹಣಾ ಜ್ಞಾನ ಕಡ್ಡಾಯ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಟೇಲ್-1ಕ್ಕೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿರುವುದು ಅವಶ್ಯ. 8ನೇ ತರಗತಿಯವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವವರನ್ನು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಪಡೆದ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಸರಿಯಾಗಿ ತಿಳಿದಿಲ್ಲ ಎಂಬುದು ಆಯ್ಕೆಯ ಸಂದರ್ಭದಲ್ಲಿ ಗಮನಕ್ಕೆ ಬಂದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಭಾಷೆಯನ್ನು ಕಲಿತುಕೊಳ್ಳಲು 6 ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಇತ್ತ ಗಮನಿಸಿ

ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆ, ಎರಡಕ್ಕೂ ಅರ್ಜಿ ಸಲ್ಲಿಸಬಹುದು.

ಕ್ರೆಡಿಟ್ ಇತಿಹಾಸ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬ್ಯಾಂಕ್ ​ಖಾತೆ ಹೊಂದಿದ್ದರೆ, ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಹುದ್ದೆಗೆ ನೇಮಕವಾಗುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್  ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತಪಡಿಸಿ ಕೊಳ್ಳಬೇಕು.
  • ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದಿದ್ದರೆ, ಮೊದಲು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ NOC ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್​ಸಿ/ಎಸ್​ಟಿ/ ಅಂಗವಿಕಲರು / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಆನ್​ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಪರೀಕ್ಷಾ ಪೂರ್ವ ತರಬೇತಿ(PRE-EXAMINATION TRAINING (PET)

ಎಸ್ಸಿ/ಎಸ್ಟಿ/ ಅಲ್ಪಸಂಖ್ಯಾತ ಅಭ್ಯರ್ಥಿಗಳು / ಮಾಜಿ ಸೈನಿಕರು / ವಿಶೇಷಚೇತನ ಅಭ್ಯರ್ಥಿಗಳಿಗೆ ಐಬಿಪಿಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ತರಬೇತಿ ಪಡೆಯಬಹುದು. ಈ ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ಇದರ ಖರ್ಚು ಮೆಚ್ಚಗಳನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಧಾರವಾಡದಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು,ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ(ಮಂಗಳೂರು ಹೊರತು ಪಡಿಸಿ)

ಈ ಬಾರಿಯ ಬದಲಾವಣೆಗಳೇನು?

ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ಅಭ್ಯರ್ಥಿಗಳು ತರುವ ಗುರುತಿನ ಪತ್ರದ (ಐಡಿ ಪ್ರೂಫ್​) ಸಂಖ್ಯೆ ನೀಡುವುದು ಕಡ್ಡಾಯ. ಆ ಸಂಖ್ಯೆ ಅಭ್ಯರ್ಥಿ ಸಲ್ಲಿಸಿದ ಅರ್ಜಿಯಲ್ಲಿರುವ ಹೆಸರಿನೊಂದಿಗೆ ಹೊಂದಾಣಿಕೆಯಾಗಬೇಕು. ಈ ಬಾರಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಿಗೆ, ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳಬೇಕು. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನೂ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

  • ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಎರಡಕ್ಕೂ ಅರ್ಜಿ ಸಲ್ಲಿಸಬಹುದು.ಆದರೆ ಆಫೀಸರ್ ಕೇಡರ್​ನಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು.
  • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ತನ್ನ ಕೈ ಬರಹದ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ   ಅರ್ಜಿಯೊಂದಿಗೆ ಅಪ್ ಲೋಡ್ ಮಾಡಬೇಕು. ಕ್ಯಾಪಿಟಲ್ ಲೆಟರ್ಸ್​ನಲ್ಲಿ ಬರೆದ ಡಿಕ್ಲರೇಷನ್ ಮತ್ತು ಸಹಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
  • ಅರ್ಜಿ ಸಲ್ಲಿಕೆ, ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿಗಾಗಿ www.ibps.in/ಜಾಲತಾಣಕ್ಕೆ ಭೇಟಿ ನೀಡಿ.
  • ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ. ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ ಕ್ರಿಯೇಟ್ ಮಾಡಿಕೊಳ್ಳಿ. ಹಾಗೆಯೇ ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ.
  • ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ. ಡೇಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ.

ಇತ್ತ ಗಮನಿಸಿ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 27, 2024
  • ಪೂರ್ವಭಾವಿ ಪರೀಕ್ಷೆ ತರಬೇತಿಗೆ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳುವುದು: ಜುಲೈ
  • ಪೂರ್ವಭಾವಿ ಪರೀಕ್ಷೆಗೆ ತರಬೇತಿ: ಜುಲೈ 22-27
  • ಪೂರ್ವಭಾವಿ ಪರೀಕ್ಷೆಗೆ ಪ್ರವೇಶಪತ್ರ ಲಭ್ಯ ಜುಲೈ/ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆ: ಆಗಸ್ಟ್, 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಆಗಸ್ಟ್/ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆ ನಡೆಯುವುದು ಸೆಪ್ಟೆಂಬರ್ / ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಫಲಿತಾಂಶ ಅಕ್ಟೋಬರ್, 2024
  • ಸಂದರ್ಶನ ನಡೆಯುವುದು: ನವೆಂಬರ್, 2024
  • ನೇಮಕ ಶಿಫಾರಸು: ಜನವರಿ, 2025

ಆಯ್ಕೆ ಹೇಗೆ?

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ​ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಪರೀಕ್ಷೆ(ಪೂರ್ವ ಭಾವಿ/ ಮುಖ್ಯ ಪರೀಕ್ಷೆ/ ಸಂದರ್ಶನ-ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ) ನಡೆಸಲಾಗುತ್ತದೆ. ಪರೀಕ್ಷೆಯ ಸ್ವರೂಪ ಹೇಗಿರುತ್ತದೆ ಎಂಬ ವಿವರಣೆ ಇಲ್ಲಿದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪ ಸ್ )/ ಸ್ಕೇಲ್–I ಅಧಿಕಾರಿ ಪೂರ್ವ ಭಾವಿ ಪರೀಕ್ಷೆ:

ಕ್ರ.ಸಂ.ಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ
1ತಾರ್ಕಿಕ  ಪರೀಕ್ಷೆ (Reasoning)    ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದರೊಂದು ಭಾಷೆಯ ಆಯ್ಕೆ4040      ಸಂಯೋಜಿತ ಸಮಯ;45 ನಿಮಿಷಗಳು
2ಸಂಖ್ಯಾತ್ಮಕ ಸಾಮರ್ಥ್ಯ  (Numerical Ability)/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ (Quantitative Aptitude)  40  40
 ಒಟ್ಟು 8080 

ಮುಖ್ಯ ಪರೀಕ್ಷೆ

(ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ )/ಸ್ಕೇಲ್–I ಅಧಿಕಾರಿ):

ಕ್ರ .ಸಂಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ  
1ತಾರ್ಕಿಕ ಪರೀಕ್ಷೆಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050    2 ಗಂಟೆಗಳ ಸಂಯೋಜಿತ ಸಮಯ
2ಕಂಪ್ಯೂಟರ್ ಜ್ಞಾನ4020
3ಸಾಮಾನ್ಯ ಅರಿವು (General Awareness)4040
4a*ಆಂಗ್ಲ ಭಾಷೆಇಂಗ್ಲಿಷ್4040
5b*ಹಿಂದಿ ಭಾಷೆಹಿಂದಿ4040
6ಸಂಖ್ಯಾತ್ಮಕ ಸಾಮರ್ಥ್ಯ/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಟೆಸ್ಟ್ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050
 ಒಟ್ಟು 200200 
(*ಅಭ್ಯರ್ಥಿಗಳು 4 a ಅಥವಾ 4 b ಆಯ್ಕೆ ಮಾಡಬಹುದು)

ಕರ್ನಾಟಕದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದ ರೊಂದು ಭಾಷೆಯ ಆಯ್ಕೆ ಮಾಡಿಕೊಳ್ಳಬಹುದು. ಆನ್ಲೈ ನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆಯನ್ನು ಆಯ್ಕೆ ಮಾಡಿಕೊಂಡಿರಬೇಕು. ಅದೇ ಭಾಷೆಯಲ್ಲೇ ಪರೀಕ್ಷೆ ಬರೆಯಬೇಕು (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ).

ಗಮನಿಸಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ ) ಪರೀಕ್ಷೆ ಬರೆಯುವವರು ಗಣಿತಕ್ಕೆ ಸಂಬಂಧಿಸಿದಂತೆ ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆ ಬರೆಯಬೇಕು ಹಾಗೂ ಅಧಿಕಾರಿ ಸ್ಕೇಲ್-I ಹುದ್ದೆಗಾಗಿ ಪರೀಕ್ಷೆ ಬರೆಯುವವರು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆ ಬರೆಯಬೇಕು.

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಸಂಭವನೀಯತೆ, ಕ್ರಮಪಲ್ಲಟನೆ ಮತ್ತು ಸಂಯೋಜನೆ, ಡೇಟಾ ಸಮರ್ಪಕತೆ ಸರಾಸರಿ, ಶೇಕಡಾವಾರು, ಗುಣಾಕಾರ, ಭಾಗಾಕಾರ, ವರ್ಗ ಮೂಲಗಳು, A.P, G.P ಸೇರಿದಂತೆ ಸಂಖ್ಯಾ ಲೆಕ್ಕಾಚಾರದ ಪ್ರಶ್ನೆಗಳ ವಿಷಯದ ಮೇಲೆ ಪ್ರಶ್ನೆಗಳಿರುತ್ತವೆ. ಸರಳ ಮತ್ತು ಚಕ್ರ ಬಡ್ಡಿ, ಲಾಭ/ನಷ್ಟ ಕುರಿತ ಪ್ರಶ್ನೆಗಳೂ ಇರುತ್ತವೆ. ಕೆಲಸದ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳು ಉದಾ: 3 ಜನರು ಒಂದು ಕೆಲಸವನ್ನು 5 ದಿನಗಳಲ್ಲಿ ಮಾಡಿದರೆ 7 ಜನರು ಆ ಕೆಲಸವನ್ನು ಮಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತಾರೆ ಇಂಥವೂ ಇರುತ್ತವೆ.

ಇದನ್ನೂ ಓದಿ: Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

ಋಣಾತ್ಮಕ ಮೌಲ್ಯಮಾಪನ ಇದೆ

ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಲ್ಲಿಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.ಎಲ್ಲ ಹಂತದ ಋಣಾತ್ಮಕ ಮೌಲ್ಯಮಾಪನದಲ್ಲೂ ಇದೇ ನಿಯಮ ಅನ್ವಯಿಸುತ್ತದೆ.

ಆಯ್ಕೆ ವಿಧಾನ

ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ.

  • ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ-ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಗಳನ್ನು ಮಾತ್ರ  ಅಂತಿಮ ಮೆರಿಟ್ ಪಟ್ಟಿಗಾಗಿ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ.
  • ಅಧಿಕಾರಿಗಳ ಹುದ್ದೆಗೆ ಸ್ಕೇಲ್-I ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಸಂದರ್ಶನ

ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ (ಸ್ಕೇಲ್ I) ಆಫೀಸರ್ಸ್ ಸ್ಕೇಲ್-I ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇ40. ಎಸ್.ಸಿ/ಎಸ್.ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 35.

ಇದನ್ನೂ ಓದಿ: Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಶಿಕ್ಷಣ

Top 5 Engineering Courses: ಇವು ಬಹು ಬೇಡಿಕೆಯ ಟಾಪ್ 5 ಎಂಜಿನಿಯರಿಂಗ್ ಕೋರ್ಸ್‌ಗಳು

ಜೆಇಇ ಮತ್ತು ಸಿಇಟಿ ಪರೀಕ್ಷೆ ತೇರ್ಗಡೆಯಾದ ಬಳಿಕ ಮುಂದೇನು ಎನ್ನುವ ಗೊಂದಲ ಕಾಡುವುದು ಸಹಜ. ಕೆಲವೊಂದು ಎಂಜಿನಿಯರಿಂಗ್ ಕೋರ್ಸ್ ಗಳು ನಿರಂತರ ಬೇಡಿಕೆಯಲ್ಲಿದ್ದು, ಹೆಚ್ಚಿನ ಉದ್ಯೋಗಾವಕಾಶಗಳನ್ನೂ ಹೊಂದಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಉತ್ತಮ ವಿಷಯಗಳನ್ನು ಸರಿಯಾದ ಸಮಯದಲ್ಲಿ ಆಯ್ಕೆ ಮಾಡುವುದು ಬಹು ಮುಖ್ಯವಾಗಿದೆ. ಸಾಕಷ್ಟು ಎಂಜಿನಿಯರಿಂಗ್ ಕೋರ್ಸ್ ಗಳು ಲಭ್ಯವಿದ್ದರೂ ಭಾರತದಲ್ಲಿ ಬಹುಕಾಲದಿಂದ ಹೆಚ್ಚು ಬೇಡಿಕೆಯಲ್ಲಿರುವ ಐದು ಎಂಜಿನಿಯರಿಂಗ್ ಕೋರ್ಸ್ ಗಳ (Top 5 Engineering Courses) ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Top 5 Engineering Courses
Koo

ಸಿಇಟಿ ಕೌನ್ಸೆಲಿಂಗ್‌ ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ವಿದ್ಯಾರ್ಥಿಗಳು ಯಾವ ಎಂಜಿನಿಯರಿಂಗ್‌ ಕೋರ್ಸ್‌ಗೆ ಪ್ರವೇಶ ಪಡೆಯಬೇಕು ಎಂಬ ಯೋಚನೆಯಲ್ಲಿ ತೊಡಗಿದ್ದಾರೆ. ಭಾರತದಲ್ಲಿ (india) ಬಹು ಬೇಡಿಕೆಯಲ್ಲಿರುವ ಅಗ್ರ ಐದು ಎಂಜಿನಿಯರಿಂಗ್ ಕೋರ್ಸ್‌ಗಳು (Top 5 Engineering Courses) ಮತ್ತು ಉದ್ಯೋಗಾವಕಾಶಗಳ ಕುರಿತು ಮಾಹಿತಿ ಇಲ್ಲಿದೆ.

ಕಂಪ್ಯೂಟರ್ ವಿಜ್ಞಾನ / ಮಾಹಿತಿ ತಂತ್ರಜ್ಞಾನ

ಕಂಪ್ಯೂಟರ್ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಎಂಜಿನಿಯರಿಂಗ್ ಭಾರತದಲ್ಲಿ ಅತ್ಯಂತ ಜನಪ್ರಿಯ ಎಂಜಿನಿಯರಿಂಗ್ ಕೋರ್ಸ್ ಆಗಿದೆ. ಕಳೆದ ದಶಕದಲ್ಲಿ ಐಟಿ ಕ್ರಾಂತಿಯ ಆಗಮನದೊಂದಿಗೆ ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮತ್ತು ಕಂಪ್ಯೂಟರ್ ಎಂಜಿನಿಯರ್‌ಗಳ ಬೇಡಿಕೆಯು ಭಾರತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ.


ಕಂಪ್ಯೂಟರ್ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಿ.ಟೆಕ್ ನಂತಹ ಪದವಿ ಮಟ್ಟದ ಎಂಜಿನಿಯರಿಂಗ್ ಪ್ರೋಗ್ರಾಂ ಎಂಜಿನಿಯರ್‌ಗಳು ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಸಂಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯನ್ನು ನಿರ್ವಹಿಸಲು ಅಗತ್ಯವಾದ ತಾಂತ್ರಿಕ ಕೌಶಲಗಳನ್ನು ಪಡೆಯಬಹುದು. ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿ.ಟೆಕ್ ಅಥವಾ ಐಟಿಯಲ್ಲಿ ಬಿ.ಟೆಕ್ ಲೀನಿಯರ್ ಸರ್ಕ್ಯೂಟ್ರಿ, ಡೇಟಾ ಸ್ಟ್ರಕ್ಚರ್‌ಗಳು ಮತ್ತು ಡಿಜಿಟಲ್ ಸಿಸ್ಟಮ್‌ಗಳಂತಹ ವೈವಿಧ್ಯಮಯ ವಿಷಯಗಳ ಜೊತೆಗೆ ಇಂಟರ್ನೆಟ್ ತಂತ್ರಜ್ಞಾನ ಮತ್ತು ಸಂಬಂಧಿತ ಕ್ಷೇತ್ರಗಳು, ಡಿಜಿಟಲ್ ಪ್ರೋಗ್ರಾಂ ವಿನ್ಯಾಸಗಳ ಮೇಲೆ ಕಲಿಯಬಹುದು.

ಕಂಪ್ಯೂಟರ್ ಎಂಜಿನಿಯರಿಂಗ್ ಮತ್ತು ಸಾಫ್ಟ್‌ವೇರ್ ಎಂಜಿನಿಯರ್‌ಗಳಿಗೆ ಉದ್ಯೋಗಗಳ ಕೊರತೆಯಿಲ್ಲ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕ್ಯಾಂಪಸ್ ಪ್ಲೇಸ್ ಡ್ರೈವ್‌ಗಳಿಂದ ಐಬಿಎಂ, ಟಿಸಿಎಸ್, ವಿಪ್ರೋ, ಮೈಕ್ರೋಸಾಫ್ಟ್ ಮತ್ತು ಗೂಗಲ್ ನಂತಹ ಉನ್ನತ ತಂತ್ರಜ್ಞಾನದ ಮೇಜರ್‌ಗಳಿಂದ ವಿದ್ಯಾರ್ಥಿಗಳನ್ನು ನೇರವಾಗಿ ನೇಮಿಸಿಕೊಳ್ಳಲಾಗುತ್ತದೆ. ಇವರಿಗೆ ಆರಂಭದಲ್ಲೇ 4.5 ಲಕ್ಷ ರೂ.ನಿಂದ 6 ಲಕ್ಷ ರೂ.ಗಳವರೆಗೆ ವೇತನವನ್ನು ನಿರೀಕ್ಷಿಸಬಹುದು.


ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ / ಕಮ್ಯುನಿಕೇಷನ್ ಎಂಜಿನಿಯರಿಂಗ್

ಎಲೆಕ್ಟ್ರಾನಿಕ್ / ಎಲೆಕ್ಟ್ರಿಕಲ್/ಕಮ್ಯುನಿಕೇಷನ್ ಎಂಜಿನಿಯರಿಂಗ್ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರವಾಗಿದೆ. ಉತ್ಪಾದನೆ, ಆರೋಗ್ಯ ರಕ್ಷಣೆ, ಯಾಂತ್ರೀಕೃತಗೊಂಡ ನಿರ್ವಹಣಾ ವ್ಯವಸ್ಥೆ, ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಂತಹ ವಿವಿಧ ಕೈಗಾರಿಕಾ ಉಪವಿಭಾಗಗಳಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಗಳಿಗೆ ಹೆಚ್ಚಿನ ಬೇಡಿಕೆ ಇದೆ.

ಭೌತಶಾಸ್ತ್ರ ಮತ್ತು ಲೆಕ್ಕದಲ್ಲಿ ತೀವ್ರ ಆಸಕ್ತಿ ಮತ್ತು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಈ ಕ್ಷೇತ್ರವನ್ನು ಆರಿಸಿಕೊಳ್ಳಬಹುದು. ಈ ಕ್ಷೇತ್ರವು ಎಲೆಕ್ಟ್ರಾನಿಕ್ ಸಂವೇದಕಗಳು, ಸೆಮಿಕಂಡಕ್ಟರ್‌ಗಳು, ರೋಬೋಟಿಕ್ಸ್‌ನ ರೇಖೀಯ ವ್ಯವಸ್ಥೆಗಳು, ವಿದ್ಯುತ್ಕಾಂತೀಯ ಮತ್ತು ಸರ್ಕ್ಯೂಟ್ರಿಯನ್ನು ಒಳಗೊಂಡಿದೆ. ಇದರ ಹೊರತಾಗಿ ಎಲೆಕ್ಟ್ರಾನಿಕ್ ಸಂವಹನದ ಹೊಸ ಕ್ಷೇತ್ರವು ದೂರಸಂಪರ್ಕ ಉದ್ಯಮ ಮತ್ತು ಮೊಬೈಲ್ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ.
ಎಲೆಕ್ಟ್ರಾನಿಕ್ ಕಮ್ಯುನಿಕೇಷನ್ಸ್‌ನಲ್ಲಿ ಪದವಿಪೂರ್ವ ಬಿಟೆಕ್ ಪ್ರೋಗ್ರಾಂ ಅನ್ನು ಆರಿಸಿದರೆ ಕಮ್ಯುನಿಕೇಷನ್‌ ಎಂಜಿನಿಯರಿಂಗ್, ವಿನ್ಯಾಸ, ಸಂಕೇತ ಮತ್ತು ವ್ಯವಸ್ಥೆಗಳ ಅಭಿವೃದ್ಧಿ, ಡಿಜಿಟಲ್ ಎಲೆಕ್ಟ್ರಾನಿಕ್ಸ್, ಇಂಟಿಗ್ರೇಟೆಡ್ ಸರ್ಕ್ಯೂಟ್‌ಗಳು ಮತ್ತು ವಿಎಲ್‌ಎಸ್‌ಐಗಳ ಮೇಲೆ ಅಧ್ಯಯನವನ್ನು ಕೇಂದ್ರೀಕರಿಸುತ್ತದೆ.

ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಬಹಳ ಕ್ರಿಯಾತ್ಮಕ ಕ್ಷೇತ್ರವಾಗಿದ್ದು ಹಲವಾರು ಕೈಗಾರಿಕೆಗಳು ಮತ್ತು ವ್ಯಾಪಾರ ಪ್ರಕ್ರಿಯೆಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಲ್ಲಿರುವ ದೂರಸಂಪರ್ಕಗಳಂತಹ ನವೀನ ಸಬ್‌-ಡೊಮೇನ್‌ಗಳ ಆಗಮನವು ವೃತ್ತಿಜೀವನವನ್ನು ನಿರ್ಮಿಸಲು ಅತ್ಯಂತ ಲಾಭದಾಯಕ ಎಂಜಿನಿಯರಿಂಗ್ ಶಾಖೆಗಳಲ್ಲಿ ಇದು ಒಂದಾಗಿದೆ.

ಎಲೆಕ್ಟ್ರಿಕಲ್ ಎಂಜಿನಿಯರ್‌ಗಳಿಗೆ ಉನ್ನತ ನೇಮಕಾತಿಗಳಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಂತಹ ಸಾರ್ವಜನಿಕ ವಲಯ ಘಟಕಗಳು ಸೇರಿವೆ. ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL), ಖಾಸಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ ದೈತ್ಯಗಳಾದ ಇಂಟೆಲ್, ಸೋನಿ, ತೊಷಿಬಾ, ಫಿಲಿಪ್ಸ್, ನೋಕಿಯಾ, ಎಲ್ ಜಿ, ಸ್ಯಾಮ್ ಸಂಗ್ ನಲ್ಲಿ ಸಾಕಷ್ಟು ಉದ್ಯೋಗಾವಕಾಶವನ್ನು ಒದಗಿಸುತ್ತದೆ. ಹೊಸಬರು ವರ್ಷಕ್ಕೆ 4ರಿಂದ 6 ಲಕ್ಷ ರೂ.ವರೆಗೆ ವೇತನವನ್ನು ನಿರೀಕ್ಷಿಸಬಹುದು.


ಮೆಕ್ಯಾನಿಕಲ್ ಎಂಜಿನಿಯರಿಂಗ್

ಮೆಕ್ಯಾನಿಕಲ್ ಎಂಜಿನಿಯರಿಂಗ್ ಅತ್ಯಂತ ಹಳೆಯ ಮತ್ತು ಇಂದಿಗೂ ಬಹು ಬೇಡಿಕೆಯಲ್ಲಿರುವ ಕೋರ್ಸ್. ಮೆಕ್ಯಾನಿಕಲ್ ಎಂಜಿನಿಯರ್ ಗಳು ಎಲ್ಲಾ ಪ್ರಮುಖ ಕೈಗಾರಿಕಾ ಪ್ರಕ್ರಿಯೆಗಳಿಗೂ ಅಗತ್ಯವಾಗಿರುತ್ತಾರೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಸ್ತುಗಳ ಯಂತ್ರಶಾಸ್ತ್ರದ ಅಧ್ಯಯನವನ್ನು ಒಳಗೊಂಡಿರುತ್ತದೆ. ಅದು ವಿನ್ಯಾಸ, ನಿರ್ಮಾಣ, ವಾಸ್ತುಶಿಲ್ಪ, ತಂತ್ರಜ್ಞಾನ, ಯಾಂತ್ರೀಕೃತಗೊಂಡ ಮತ್ತು ಇತರ ಹಲವು ಪರಿಕಲ್ಪನೆಗಳ ವಿಷಯದ ಮೇಲೆ ಅಧ್ಯಯನವನ್ನು ಕೇಂದ್ರೀಕರಿಸುತ್ತದೆ. ಮೆಕ್ಯಾನಿಕಲ್ ಎಂಜಿನಿಯರ್‌ಗಳು ಯಂತ್ರಶಾಸ್ತ್ರದ ಮೂಲಕ ಚಲಿಸುವ ಯಾವುದನ್ನಾದರೂ ಮತ್ತು ಎಲ್ಲವನ್ನೂ ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು, ನಿರ್ಮಿಸಲು ಮತ್ತು ನಿರ್ವಹಿಸಲು ಸಾಧ್ಯವಾಗುವಂತೆ ತರಬೇತಿ ಪಡೆಯುತ್ತಾರೆ. ಭೌತಶಾಸ್ತ್ರ ಮತ್ತು ಗಣಿತಶಾಸ್ತ್ರದ ಸಂಕೀರ್ಣ ಸಂಯೋಜನೆಯನ್ನು ನಿಭಾಯಿಸಲು ತೀವ್ರ ಆಸಕ್ತಿ ಮತ್ತು ಸಾಮರ್ಥ್ಯವನ್ನು ಹೊಂದಿರುವ ವಿದ್ಯಾರ್ಥಿಗಳು ಈ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು.

ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಥರ್ಮೋಡೈನಾಮಿಕ್ಸ್, ಫ್ಲೂಯಿಡ್ ಮೆಕ್ಯಾನಿಕ್ಸ್, ಚಲನೆ ಮತ್ತು ಆವೇಗ, ರೊಬೊಟಿಕ್ಸ್, ಕಂಪ್ಯೂಟರ್ ಅಪ್ಲಿಕೇಶನ್‌ಗಳು, ದಹನ ಎಂಜಿನ್ ವಿನ್ಯಾಸ, ವಸ್ತು ಸೂಕ್ಷ್ಮ-ನಿರ್ಮಾಣ, ಕಂಪ್ಯೂಟರ್ ಸಿಸ್ಟಮ್ ವಿನ್ಯಾಸ, ಬಯೋಮೆಕಾನಿಕ್ಸ್ ಮತ್ತು ಇತರವುಗಳಂತಹ ವಿವಿಧ ಉಪ-ವಿಷಯಗಳನ್ನು ಇದು ಕಲಿಯಲು ಅವಕಾಶ ಕಲ್ಪಿಸುತ್ತದೆ.

ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಉದ್ಯೋಗವನ್ನು ಹುಡುಕುವುದು ಕಠಿಣ ಕೆಲಸವಲ್ಲ. ಏಕೆಂದರೆ ವಿಷಯವು ಬಹುತೇಕ ಎಲ್ಲಾ ಪ್ರಮುಖ ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಅವಕಾಶವನ್ನು ಹೊಂದಿದೆ. ಭಾರತದಲ್ಲಿ ಮಹೀಂದ್ರ, ಜನರಲ್ ಮೋಟಾರ್ಸ್, ಫಿಯೆಟ್, ಅಶೋಕ ಲೇಲ್ಯಾಂಡ್ ಮತ್ತು ಟಾಟಾ ಮೋಟಾರ್ಸ್, ಎಬಿಬಿ, ಇಸ್ರೋ, ಡಿಆರ್ ಡಿಒ , ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್ ಸೇರಿದಂತೆ ಇನ್ನೂ ಹಲವಾರು ಸುಪ್ರಸಿದ್ದ ಕಂಪನಿಗಳಲ್ಲಿ ಹೆಚ್ಚಿನ ಅವಕಾಶವನ್ನು ಹೊಂದಿದೆ. ಮೆಕ್ಯಾನಿಕಲ್ ಎಂಜಿನಿಯರ್‌ಗಳು 1.3 ರಿಂದ 3.5 ಲಕ್ಷ ರೂ.ವರೆಗೆ ವೇತನವನ್ನು ನಿರೀಕ್ಷಿಸಬಹುದು.


ಸಿವಿಲ್ ಎಂಜಿನಿಯರಿಂಗ್

ಸಿವಿಲ್ ಎಂಜಿನಿಯರಿಂಗ್ ಕೂಡ ಹಳೆಯ ಎಂಜಿನಿಯರಿಂಗ್ ವಿಭಾಗವಾಗಿದೆ. ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಕಲಿಯುವ ಸಾಕಷ್ಟು ವಿಷಯಗಳಿವೆ. ಸಿವಿಲ್ ಎಂಜಿನಿಯರಿಂಗ್ ಅತ್ಯಂತ ವೈವಿಧ್ಯಮಯ ಎಂಜಿನಿಯರಿಂಗ್ ಶಾಖೆಗಳಲ್ಲಿ ಒಂದಾಗಿದೆ. ಸಿವಿಲ್ ಎಂಜಿನಿಯರಿಂಗ್ ರಚನೆ ವಿನ್ಯಾಸ, ರಚನಾತ್ಮಕ ಯಂತ್ರಶಾಸ್ತ್ರ, ದ್ರವ ಯಂತ್ರಶಾಸ್ತ್ರ, ಮಣ್ಣಿನ ಯಂತ್ರಶಾಸ್ತ್ರ, ವಾಟರ್ ರಿಸೋರ್ಸ್ ಎಂಜಿನಿಯರಿಂಗ್ ಮತ್ತು ಹೈಡ್ರಾಲಿಕ್ಸ್‌ನಂತಹ ವಿವಿಧ ಪರಿಕಲ್ಪನೆಗಳು ಮತ್ತು ವಿಷಯಗಳನ್ನು ಒಳಗೊಂಡಿದೆ.

ಭಾರತದಲ್ಲಿ ಸಿವಿಲ್ ಎಂಜಿನಿಯರ್‌ಗಳಿಗೆ ಉದ್ಯೋಗವಕಾಶ ಸಾಕಷ್ಟಿದೆ. ವಸತಿ ಸೌಕರ್ಯಗಳಿಗೆ ಹೆಚ್ಚುತ್ತಿರುವ ಬೇಡಿಕೆ ಮತ್ತು ಆಧುನಿಕ ಮೂಲಸೌಕರ್ಯ ಯೋಜನೆಗಳಿಗೆ ಸರ್ಕಾರದ ಉತ್ತೇಜನದೊಂದಿಗೆ ಸಿವಿಲ್ ಎಂಜಿನಿಯರ್‌ಗಳಿಗೆ ಲಭ್ಯವಿರುವ ಉದ್ಯೋಗಾವಕಾಶಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಭಾರತೀಯ ರೈಲ್ವೇ, ಲೋಕೋಪಯೋಗಿ ಇಲಾಖೆ, ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್, ಡಿಆರ್ ಒಡಿ ಮತ್ತು ಇಸ್ರೋ ನಂತಹ ಸಾರ್ವಜನಿಕ ವಲಯದಲ್ಲಿ ಖಾಸಗಿ ವಲಯದ ಘಟಕಗಳಾದ ಲಾರ್ಸೆನ್ ಮತ್ತು ಟೂಬ್ರೊ, ಡಿಎಲ್‌ಎಫ್ ನಲ್ಲಿ ಹೆಚ್ಚಿನ ಬೇಡಿಕೆ ಇದೆ. ಸಿವಿಲ್ ಎಂಜಿನಿಯರಿಂಗ್ ಪದವೀಧರರು ಪ್ರಾರಂಭದಲ್ಲಿ ತಿಂಗಳಿಗೆ 20,000ರಿಂದ 30,000 ರೂ. ವರೆಗೆ ಸಂಬಳವನ್ನು ನಿರೀಕ್ಷಿಸಬಹುದು. ಭಾರತದಲ್ಲಿ ಈಗ ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ನಡೆಯುತ್ತಿರುವುದರಿಂದ ಸಿವಿಲ್‌ ಎಂಜಿನಿಯರ್‌ಗಳಿಗೆ ಭಾರಿ ಬೇಡಿಕೆ ಇದೆ. ಅನುಭವ ಗಳಿಸುತ್ತಿದ್ದಂತೆ ಮಾಸಿಕ ಲಕ್ಷಕ್ಕೂ ಹೆಚ್ಚಿನ ಸಂಬಳ ಪಡೆಯಬಹುದು.

ಇದನ್ನೂ ಓದಿ: ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?


ಕೆಮಿಕಲ್ ಎಂಜಿನಿಯರಿಂಗ್

ಕೆಮಿಕಲ್ ಎಂಜಿನಿಯರಿಂಗ್ ಭಾರತದಲ್ಲಿ ಬಹು ಬೇಡಿಕೆಯಲ್ಲಿರುವ ಅಗ್ರ 5 ಎಂಜಿನಿಯರಿಂಗ್ ಶಾಖೆಗಳಲ್ಲಿ ಒಂದಾಗಿದೆ. ಇದಕ್ಕೆ ಮುಖ್ಯ ಕಾರಣ ರಾಸಾಯನಿಕ, ಸಂಸ್ಕರಣೆ, ಆಹಾರ ಸಂಸ್ಕರಣೆ ಮತ್ತು ಔಷಧೀಯ ಕ್ಷೇತ್ರಗಳಂತಹ ಕೈಗಾರಿಕೆಗಳಲ್ಲಿ ರಾಸಾಯನಿಕ ಎಂಜಿನಿಯರ್‌ಗಳಿಗೆ ಬೇಡಿಕೆ ಹೆಚ್ಚಾಗಿರುವುದು.
ಕೆಮಿಕಲ್ ಎಂಜಿನಿಯರಿಂಗ್ ವಿಷಯದ ವ್ಯಾಪ್ತಿ ವಿಸ್ತಾರವಾಗಿದೆ. ಹಲವಾರು ವಲಯಗಳಲ್ಲಿ ಇದಕ್ಕೆ ಬೇಡಿಕೆ ಇದೆ. ರಾಸಾಯನಿಕ ಎಂಜಿನಿಯರಿಂಗ್‌ನಲ್ಲಿ ರಾಸಾಯನಿಕಗಳು, ಸಾವಯವ ಮತ್ತು ಅಜೈವಿಕ ರಸಾಯನಶಾಸ್ತ್ರ, ಪೆಟ್ರೋಲಿಯಂ ಯೋಜನೆಗಳು, ಔಷಧೀಯ ರಸಾಯನಶಾಸ್ತ್ರ, ರಾಸಾಯನಿಕ ಎಂಜಿನಿಯರಿಂಗ್ ಪ್ರಕ್ರಿಯೆ ಕುರಿತು ಅಧ್ಯಯನ ಮಾಡಬಹುದು.

ಅತ್ಯುತ್ತಮ ಉದ್ಯೋಗಾವಕಾಶಗಳನ್ನು ಹೊಂದಿರುವ ಕೆಮಿಕಲ್ ಎಂಜಿನಿಯರ್‌ ಪದವೀಧರರಿಗೆ ಒಎನ್‌ಜಿಸಿ, ಎಸ್ಸಾರ್ ಆಯಿಲ್ ಲಿಮಿಟೆಡ್, ಗುಜರಾತ್ ಗ್ಯಾಸ್ ಕಂಪೆನಿ ಲಿಮಿಟೆಡ್, ಇಂಡೋ ಗಲ್ಫ್ ಫರ್ಟಿಲೈಸರ್ಸ್ ಲಿಮಿಟೆಡ್, ರಿಲಯನ್ಸ್ ಇಂಡಸ್ಟ್ರೀಸ್, ಕೋರಮಂಡಲ್ ಫರ್ಟಿಲೈಸರ್ಸ್ ಲಿಮಿಟೆಡ್ ಮತ್ತು ಇತರ ಹಲವು ಕಂಪೆನಿಗಳಲ್ಲಿ ಉತ್ತಮ ಅವಕಾಶಗಳಿವೆ. ಕೆಮಿಕಲ್ ಎಂಜಿನಿಯರಿಂಗ್ ಪದವೀಧರರು ಪ್ರಾರಂಭದಲ್ಲಿ ತಿಂಗಳಿಗೆ 15,000 ರಿಂದ 25,000 ರೂ. ವೇತನವನ್ನು ನಿರೀಕ್ಷಿಸಬಹುದು. ಈ ಉದ್ಯಮ ವೇಗವಾಗಿ ಬೆಳೆಯುತ್ತಿರುವುದರಿಂದ ಸಾಕಷ್ಟು ಉತ್ತಮ ಸಂಬಳ ಪಡೆಯಬಹುದಾಗಿದೆ.

Continue Reading

ಉದ್ಯೋಗ

Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

Job Alert: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 17,727 ಗ್ರೂಪ್‌ ಬಿ ಮತ್ತು ಗ್ರೂಪ್‌ ಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಎಸ್‌ಎಸ್‌ಸಿ ಮುಂದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಜುಲೈ 24ರೊಳಗೆ ಅರ್ಜಿ ಸಲ್ಲಿಸಬೇಕು.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ನಿಮಗೆಂದೇ ಅವಕಾಶಗಳ ಹೆಬ್ಬಾಗಿಲೊಂದು ತೆರೆದಿದೆ. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 17,727 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಎಸ್‌ಎಸ್‌ಸಿ ಮುಂದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 24 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಸೆಕ್ಷನ್ ಆಫೀಸರ್, ಅಸಿಸ್ಟಂಟ್‌ / ಅಸಿಸ್ಟಂಟ್‌ ಸೆಕ್ಷನ್ ಆಫೀಸರ್, ಇನ್ಸ್‌ಪೆಕ್ಟರ್, ಅಸಿಸ್ಟಂಟ್‌ ಎನ್‌ಫೋರ್ಸ್‌ಮೆಂಟ್‌ ಆಫೀಸರ್‌, ಸಬ್ ಇನ್ಸ್‌ಪೆಕ್ಟರ್, ಎಕ್ಸಿಕ್ಯೂಟಿವ್ ಅಸಿಸ್ಟೆಂಟ್, ರಿಸರ್ಚ್‌ ಅಸಿಸ್ಟಂಟ್‌,
ಡಿವಿಷನಲ್‌ ಅಕೌಂಟೆಂಟ್, ಸಬ್ ಇನ್ಸ್‌ಪೆಕ್ಟರ್ / ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್, ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್, ಅಡಿಟರ್‌, ಅಕೌಂಟೆಂಟ್, ಅಕೌಂಟೆಂಟ್ / ಜೂನಿಯರ್ ಅಕೌಂಟೆಂಟ್, ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್, ಸೀನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಅಪ್ಪರ್ ಡಿವಿಷನ್ ಕ್ಲರ್ಕ್, ಸೀನಿಯರ್‌ ಅಡ್ಮಿನಿಸ್ಟ್ರೇಷನ್‌ ಅಸಿಸ್ಟಂಟ್‌, ಟ್ಯಾಕ್ಸ್‌ ಅಸಿಸ್ಟಂಟ್‌ ಮುಂತಾದ ಹುದ್ದೆಗಳಿವೆ. ಅಧಿಸೂಚನೆ ಪ್ರಕಾರ ಯಾವುದೇ ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ, ಕಾನೂನು ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ / ಇಎಸ್‌ಎಂ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ) ವಿಭಾಗಕ್ಕೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ವಿಭಾಗಕ್ಕೆ 13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ವಿಭಾಗಕ್ಕೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಇಎಸ್‌ಎಂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ (Computer Based Examination)-ಟೈರ್‌-I, ಟೈರ್‌-II, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೊದಲ ಪರೀಕ್ಷೆ ಸೆಪ್ಟೆಂಬರ್‌-ಅಕ್ಟೋಬರ್‌ ನಡುವೆ ಮತ್ತು ಎರಡನೇ ಪರೀಕ್ಷೆ ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆ ಇದೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ಮಾಹಿತಿಗಾಗಿ Help Desk (SSC-HQ) 1800 309 3063, SSC (KKR), Bengaluru 080 25502520, 09483862020 ನಂಬರ್‌ಗೆ ಕರೆ ಮಾಡಿ. ಅಥವಾ ಅಧಿಕೃತ ವೆಬ್‌ಸೈಟ್‌ ssc.gov.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿ ಖಾಲಿ ಇದೆ ಬರೋಬ್ಬರಿ 18,799 ಹುದ್ದೆ: ಅಪ್ಲೈ ಮಾಡುವ ವಿಧಾನ ಇಲ್ಲಿದೆ

Continue Reading

ಉದ್ಯೋಗ

Job Alert: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಸಲು ಇಂದು ಅಂತಿಮ ದಿನ

Job Alert: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದುಕೊಂಡಿರುವವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿ ಸಲ್ಲಿಕೆ ಹೇಗೆ, ಪರೀಕ್ಷೆ ಯಾವ ರೀತಿಯಲ್ಲಿ ಇರುತ್ತದೆ ಮುಂತಾದ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ. ಅಂದ ಹಾಗೆ, ಅರ್ಜಿ ಸಲ್ಲಿಸಲು ಜೂನ್‌ 27 ಕೊನೇ ದಿನ ಎನ್ನುವುದನ್ನು ಮರೆಯಬೇಡಿ.

VISTARANEWS.COM


on

Job Alert
Koo

-ಆರ್.ಕೆ. ಬಾಲಚಂದ್ರ. ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಫ್ಟ್‌ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು

ಬ್ಯಾಂಕ್ ಸಿಬ್ಬಂದಿ ನೇಮಕಾತಿ (Job Alert) ಸಂಸ್ಥೆ(ಐಬಿಪಿಎಸ್​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ.  ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನ. ರಾಜ್ಯದ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ.

ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕ ನಡೆಸಿದ ಐಬಿಪಿಎಸ್ ಈ ಬಾರಿ 9,995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ. ರಾಜ್ಯದ ಎರಡು ಬ್ಯಾಂಕುಗಳಲ್ಲಿ 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಒಟ್ಟು 200 ಹುದ್ದೆಗಳು ಮತ್ತು ಆಫೀಸರ್ ಸ್ಟೇಲ್-1-386 ಹುದ್ದೆಗಳಿವೆ. ಕಳೆದ ಬಾರಿ ರಾಜ್ಯದ ಈ ಎರಡೂ ಬ್ಯಾಂಕ್ಗಳಲ್ಲಿ 807 ಹುದ್ದೆಗಳಿಗೆ ನೇಮಕ ನಡೆದಿತ್ತು.

ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಖಾಲಿ ಇರುವ ಹುದ್ದೆಗಳ ಮೀಸಲಾತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್)
ಬ್ಯಾಂಕ್ಎಸ್​ ಸಿ(SC)ಎಸ್​ಟಿ(ST)ಒಬಿಸಿ (NCL)*EWS*ಸಾಮಾನ್ಯTOTAL
ಕರ್ನಾಟಕ ಗ್ರಾಮೀಣ ಬ್ಯಾಂಕ್167271040100
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್167271040100
ಆಫೀಸರ್ ಸ್ಕೇಲ್-I
ಕರ್ನಾಟಕ ಗ್ರಾಮೀಣ ಬ್ಯಾಂಕ್43217729116286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್157271041100
EWS-ಆರ್ಥಿಕ ವಾಗಿ ಹಿಂದುಳಿದ ವರ್ಗ   *NCL- ಕೆನೆ ಪದರ ಹೊರತಾದ

ಈಗ ನಿಗದಿಪಡಿಸಿರುವ ಹುದ್ದೆಗಳ ಸಂಖ್ಯೆಗಳು ಹೆಚ್ಚಾಗಲೂ ಬಹುದು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಮೀಸಲಿಟ್ಟ ಹುದ್ದೆಗಳ ಸಂಖ್ಯೆ ಏರಿಕೆಯಾಗಲೂಬಹುದು. ಆದ್ದರಿಂದ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನಿರಾಶರಾಗಬೇಕಾಗಿಲ್ಲ.

ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಖಾಲಿ ಇರುವ ಹುದ್ದೆಗಳ ಮೀಸಲಾತಿ

ಅರ್ಜಿ ಸಲ್ಲಿಸುವುದು ಹೇಗೆ?

ಜೂನ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 27 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಯೋಮಿತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18 ರಿಂದ 28 ವರ್ಷಗಳು. ಆಫೀಸರ್ ಸ್ಕೇಲ್-I ಹುದ್ದೆಗೆ 18 ರಿಂದ 30 ವರ್ಷಗಳು.  ಎಸ್​.ಸಿ ಮತ್ತು ಎಸ್​.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಇದೆ. 

ಶೈಕ್ಷಣಿಕ ಅರ್ಹತೆ ಮತ್ತು ಅನುಭವಗಳೇನಿರಬೇಕು?

Group“B”-ಆಫೀಸ್ ಅಸಿಸ್ಟೆಂಟ್​ ಹುದ್ದೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಭಾಷೆ ತಿಳಿದಿರುವುದು ಅವಶ್ಯಕ. ಕಂಪ್ಯೂಟರ್​ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ.

ಇದನ್ನೂ ಓದಿ: Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

Group“A”-Officers-ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)

ಯಾವುದೇ ವಿಷಯದಲ್ಲಿ ಪದವಿ. ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಥವಾ ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವವರಿಗೆ ಆದ್ಯತೆ. ಆದರೆ ಸ್ಥಳೀಯ ಭಾಷೆ ತಿಳಿದಿರಬೇಕಾದುದು ಅವಶ್ಯಕ. ಕಂಪ್ಯೂಟರ್ ನಿರ್ವಹಣಾ ಜ್ಞಾನ ಕಡ್ಡಾಯ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಟೇಲ್-1ಕ್ಕೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿರುವುದು ಅವಶ್ಯ.8ನೇ ತರಗತಿಯವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವವರನ್ನು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಪಡೆದ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಸರಿಯಾಗಿ ತಿಳಿದಿಲ್ಲ ಎಂಬುದು ಆಯ್ಕೆಯ ಸಂದರ್ಭದಲ್ಲಿ ಗಮನಕ್ಕೆ ಬಂದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಭಾಷೆಯನ್ನು ಕಲಿತುಕೊಳ್ಳಲು 6 ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಇತ್ತ ಗಮನಿಸಿ

ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆ, ಎರಡಕ್ಕೂ ಅರ್ಜಿ ಸಲ್ಲಿಸಬಹುದು.

ಕ್ರೆಡಿಟ್ ಇತಿಹಾಸ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬ್ಯಾಂಕ್ ​ಖಾತೆ ಹೊಂದಿದ್ದರೆ, ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಹುದ್ದೆಗೆ ನೇಮಕವಾಗುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್  ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತಪಡಿಸಿ ಕೊಳ್ಳಬೇಕು.
  • ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದಿದ್ದರೆ, ಮೊದಲು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ NOC ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್​ಸಿ/ಎಸ್​ಟಿ/ ಅಂಗವಿಕಲರು / ಮಾಜಿ ಸೈ

ನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಆನ್​ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಪರೀಕ್ಷಾ ಪೂರ್ವ ತರಬೇತಿ(PRE-EXAMINATION TRAINING (PET):

ಎಸ್ಸಿ/ಎಸ್ಟಿ/ ಅಲ್ಪಸಂಖ್ಯಾತ ಅಭ್ಯರ್ಥಿಗಳು / ಮಾಜಿ ಸೈನಿಕರು / ವಿಶೇಷಚೇತನ ಅಭ್ಯರ್ಥಿಗಳಿಗೆ ಐಬಿಪಿಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ತರಬೇತಿ ಪಡೆಯಬಹುದು. ಈ ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ಇದರ ಖರ್ಚು ಮೆಚ್ಚಗಳನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಧಾರವಾಡದಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು,ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಮುಖ್ಯ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ(ಮಂಗಳೂರು ಹೊರತು ಪಡಿಸಿ)

ಈ ಬಾರಿಯ ಬದಲಾವಣೆಗಳೇನು?

ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ಅಭ್ಯರ್ಥಿಗಳು ತರುವ ಗುರುತಿನ ಪತ್ರದ (ಐಡಿ ಪ್ರೂಫ್​) ಸಂಖ್ಯೆ ನೀಡುವುದು ಕಡ್ಡಾಯ. ಆ ಸಂಖ್ಯೆ ಅಭ್ಯರ್ಥಿ ಸಲ್ಲಿಸಿದ ಅರ್ಜಿಯಲ್ಲಿರುವ ಹೆಸರಿನೊಂದಿಗೆ ಹೊಂದಾಣಿಕೆಯಾಗಬೇಕು. ಈ ಬಾರಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಿಗೆ, ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳಬೇಕು. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನೂ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

  • ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಎರಡಕ್ಕೂ ಅರ್ಜಿ ಸಲ್ಲಿಸಬಹುದು.ಆದರೆ ಆಫೀಸರ್ ಕೇಡರ್​ನಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು.
  • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ತನ್ನ ಕೈ ಬರಹದ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ   ಅರ್ಜಿಯೊಂದಿಗೆ ಅಪ್ ಲೋಡ್ ಮಾಡಬೇಕು. ಕ್ಯಾಪಿಟಲ್ ಲೆಟರ್ಸ್​ನಲ್ಲಿ ಬರೆದ ಡಿಕ್ಲರೇಷನ್ ಮತ್ತು ಸಹಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
  • ಅರ್ಜಿ ಸಲ್ಲಿಕೆ, ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿಗಾಗಿ www.ibps.in/ಜಾಲತಾಣಕ್ಕೆ ಭೇಟಿ ನೀಡಿ.
  • ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ. ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ ಕ್ರಿಯೇಟ್ ಮಾಡಿಕೊಳ್ಳಿ. ಹಾಗೆಯೇ ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ.
  • ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ. ಡೇಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ.

ಇತ್ತ ಗಮನಿಸಿ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 27, 2024
  • ಪೂರ್ವಭಾವಿ ಪರೀಕ್ಷೆ ತರಬೇತಿಗೆ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳುವುದು: ಜುಲೈ
  • ಪೂರ್ವಭಾವಿ ಪರೀಕ್ಷೆಗೆ ತರಬೇತಿ: ಜುಲೈ 22-27
  • ಪೂರ್ವಭಾವಿ ಪರೀಕ್ಷೆಗೆ ಪ್ರವೇಶಪತ್ರ ಲಭ್ಯ ಜುಲೈ/ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆ: ಆಗಸ್ಟ್, 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಆಗಸ್ಟ್/ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆ ನಡೆಯುವುದು ಸೆಪ್ಟೆಂಬರ್ / ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಫಲಿತಾಂಶ ಅಕ್ಟೋಬರ್, 2024
  • ಸಂದರ್ಶನ ನಡೆಯುವುದು: ನವೆಂಬರ್, 2024
  • ನೇಮಕ ಶಿಫಾರಸು: ಜನವರಿ, 2025

ಆಯ್ಕೆ ಹೇಗೆ?

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ​ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಪರೀಕ್ಷೆ(ಪೂರ್ವ ಭಾವಿ/ ಮುಖ್ಯ ಪರೀಕ್ಷೆ/ ಸಂದರ್ಶನ-ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ) ನಡೆಸಲಾಗುತ್ತದೆ. ಪರೀಕ್ಷೆಯ ಸ್ವರೂಪ ಹೇಗಿರುತ್ತದೆ ಎಂಬ ವಿವರಣೆ ಇಲ್ಲಿದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪ ಸ್ )/ ಸ್ಕೇಲ್–I ಅಧಿಕಾರಿ ಪೂರ್ವ ಭಾವಿ ಪರೀಕ್ಷೆ:

ಕ್ರ.ಸಂ.ಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ
1ತಾರ್ಕಿಕ  ಪರೀಕ್ಷೆ (Reasoning)    ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದರೊಂದು ಭಾಷೆಯ ಆಯ್ಕೆ4040      ಸಂಯೋಜಿತ ಸಮಯ;45 ನಿಮಿಷಗಳು
2ಸಂಖ್ಯಾತ್ಮಕ ಸಾಮರ್ಥ್ಯ  (Numerical Ability)/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ (Quantitative Aptitude)  40  40
 ಒಟ್ಟು 8080 

ಮುಖ್ಯ ಪರೀಕ್ಷೆ

(ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ )/ಸ್ಕೇಲ್–I ಅಧಿಕಾರಿ):

ಕ್ರ .ಸಂಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ  
1ತಾರ್ಕಿಕ ಪರೀಕ್ಷೆಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050    2 ಗಂಟೆಗಳ ಸಂಯೋಜಿತ ಸಮಯ
2ಕಂಪ್ಯೂಟರ್ ಜ್ಞಾನ4020
3ಸಾಮಾನ್ಯ ಅರಿವು (General Awareness)4040
4a*ಆಂಗ್ಲ ಭಾಷೆಇಂಗ್ಲಿಷ್4040
5b*ಹಿಂದಿ ಭಾಷೆಹಿಂದಿ4040
6ಸಂಖ್ಯಾತ್ಮಕ ಸಾಮರ್ಥ್ಯ/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಟೆಸ್ಟ್ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050
 ಒಟ್ಟು 200200 
(*ಅಭ್ಯರ್ಥಿಗಳು 4 a ಅಥವಾ 4 b ಆಯ್ಕೆ ಮಾಡಬಹುದು)

ಕರ್ನಾಟಕದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದ ರೊಂದು ಭಾಷೆಯ ಆಯ್ಕೆ ಮಾಡಿಕೊಳ್ಳಬಹುದು. ಆನ್ಲೈ ನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆಯನ್ನು ಆಯ್ಕೆ ಮಾಡಿಕೊಂಡಿರಬೇಕು. ಅದೇ ಭಾಷೆಯಲ್ಲೇ ಪರೀಕ್ಷೆ ಬರೆಯಬೇಕು (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ)

ಗಮನಿಸಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ ) ಪರೀಕ್ಷೆ ಬರೆಯುವವರು ಗಣಿತಕ್ಕೆ ಸಂಬಂಧಿಸಿದಂತೆ ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆ ಬರೆಯಬೇಕು ಹಾಗೂ ಅಧಿಕಾರಿ ಸ್ಕೇಲ್-I ಹುದ್ದೆಗಾಗಿ ಪರೀಕ್ಷೆ ಬರೆಯುವವರು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆ ಬರೆಯಬೇಕು.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಇದನ್ನೂ ಓದಿ: Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಋಣಾತ್ಮಕ ಮೌಲ್ಯಮಾಪನ ಇದೆ

ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಲ್ಲಿಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.ಎಲ್ಲ ಹಂತದ ಋಣಾತ್ಮಕ ಮೌಲ್ಯಮಾಪನದಲ್ಲೂ ಇದೇ ನಿಯಮ ಅನ್ವಯಿಸುತ್ತದೆ.

ಆಯ್ಕೆ ವಿಧಾನ

ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ-ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಗಳನ್ನು ಮಾತ್ರ  ಅಂತಿಮ ಮೆರಿಟ್ ಪಟ್ಟಿಗಾಗಿ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ.

ಅಧಿಕಾರಿಗಳ ಹುದ್ದೆಗೆ ಸ್ಕೇಲ್-I ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಸಂದರ್ಶನ

ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ (ಸ್ಕೇಲ್ I) ಆಫೀಸರ್ಸ್ ಸ್ಕೇಲ್-I ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇ40. ಎಸ್.ಸಿ/_ಎಸ್.ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 35.

Continue Reading
Advertisement
Murder Case
ಬೆಂಗಳೂರು5 mins ago

Murder Case: ಕುಡಿದ ಅಮಲಿನಲ್ಲಿ ಕಟ್ಟಡದಿಂದ ಸ್ನೇಹಿತನನ್ನೇ ತಳ್ಳಿ ಕೊಂದ ಯುವಕ!

Gruha Lakshmi
ಕರ್ನಾಟಕ17 mins ago

Gruha Lakshmi: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸ್ಪಷ್ಟನೆ

Road Accident
ಕ್ರೈಂ17 mins ago

Road Accident: ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

INDW vs SAW
ಕ್ರೀಡೆ18 mins ago

INDW vs SAW: ವಿಶ್ವ ದಾಖಲೆ ನಿರ್ಮಿಸಿದ ಭಾರತ ಮಹಿಳಾ ತಂಡ

Karnataka CM Row
ಪ್ರಮುಖ ಸುದ್ದಿ21 mins ago

Karnataka CM Row: ‘ಗೌಡ’ ಸಿಎಂ ಆಯ್ತು, ಈಗ ‘ಲಿಂಗಾಯತ’ ಸಿಎಂ ಕೂಗು; ರಂಭಾಪುರಿ ಶ್ರೀ ಹೇಳಿದ ಹೆಸರಿದು!

Dengue Fever
ಚಿಕ್ಕಮಗಳೂರು51 mins ago

Dengue Fever : ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಬಲಿ; ಈವರೆಗೆ ಐವರು ಸಾವು

Aiden Markram
ಕ್ರೀಡೆ1 hour ago

Aiden Markram: ಧೋನಿಯಂತೆ ಮಾರ್ಕ್ರಮ್​ ಕೂಡ ಲಕ್ಕಿ ಕ್ಯಾಪ್ಟನ್​; ಸಾಧನೆ ಹೀಗಿದೆ

Fahadh Faasil in trouble faces Human Rights Commission action
ಮಾಲಿವುಡ್1 hour ago

Fahadh Faasil: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು

Viral Video
ವೈರಲ್ ನ್ಯೂಸ್1 hour ago

Viral Video: ಖೈದಿ ಜೊತೆಗೆ ಮಹಿಳಾ ಪೊಲೀಸ್‌ ಅಧಿಕಾರಿ ಲೈಂಗಿಕ ಕ್ರಿಯೆ; ಭಾರೀ ವೈರಲ್‌ ಆಗ್ತಿದೆ ಈ ವಿಡಿಯೋ

5 Soldiers Killed
ದೇಶ1 hour ago

5 Soldiers Killed: ಲಡಾಕ್‌ನ ನದಿಯಲ್ಲಿ ಸೇನಾ ವಾಹನ ಮಗುಚಿ ಭೀಕರ ದುರಂತ; ಐವರು ಯೋಧರು ಹುತಾತ್ಮ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ19 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌