Diwali Gift: ದೀಪಾವಳಿ ಹಿನ್ನೆಲೆ ಕಂಪನಿ ಉದ್ಯೋಗಿಗಳಿಗೆ ದುಬಾರಿ ಕಾರು ಗಿಫ್ಟ್‌ ಕೊಟ್ಟ ಬಾಸ್! - Vistara News

ಪ್ರಮುಖ ಸುದ್ದಿ

Diwali Gift: ದೀಪಾವಳಿ ಹಿನ್ನೆಲೆ ಕಂಪನಿ ಉದ್ಯೋಗಿಗಳಿಗೆ ದುಬಾರಿ ಕಾರು ಗಿಫ್ಟ್‌ ಕೊಟ್ಟ ಬಾಸ್!

Diwali Gift: ಹರಿಯಾಣದ ಫಾರ್ಮಾ ಕಂಪನಿ ಚೇರ್ಮನ್‌ ಎಂ.ಕೆ. ಭಾಟಿಯಾ ಅವರು ಉದ್ಯೋಗಿಗಳಿಗೆ ಕಾರು ಉಡುಗೊರೆ ಕೊಟ್ಟಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

VISTARANEWS.COM


on

Haryana Company Owner With Employees
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಎಲ್ಲ ಕಂಪನಿಗಳಲ್ಲಿ ದೀಪಾವಳಿ ಬೋನಸ್‌ ಕುರಿತು ಚರ್ಚೆಯಾಗುತ್ತಿದೆ. ಕಂಪನಿಗಳೂ ದೀಪಾವಳಿ ಹಿನ್ನೆಲೆಯಲ್ಲಿ ಉದ್ಯೋಗಿಗಳಿಗೆ ಬೋನಸ್‌ ಹಾಗೂ ಸ್ವೀಟ್‌ ಕೊಟ್ಟು ಅವರ ಹಬ್ಬದ ಖುಷಿ ಹೆಚ್ಚಿಸುತ್ತವೆ. ಆದರೆ, ಹರಿಯಾಣದಲ್ಲಿ ಫಾರ್ಮಾ ಕಂಪನಿ (Haryana Pharma Company) ಮಾಲೀಕರೊಬ್ಬರು ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಹಬ್ಬದ (Diwali Gift) ಹಿನ್ನೆಲೆಯಲ್ಲಿ ಟಾಟಾ ಪಂಚ್‌ (Tata Punch) ಕಾರುಗಳನ್ನೇ ಉಡುಗೊರೆ ನೀಡುವ ಮೂಲಕ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೌದು, ಹರಿಯಾಣದ ಪಂಚ್‌ಕುಲ ಮೂಲದ ಮಿಟ್ಸ್‌ಕಾರ್ಟ್‌ (MitsKart) ಎಂಬ ಫಾರ್ಮಾ ಕಂಪನಿಯ ಮಾಲೀಕರಾದ ಎಂ.ಕೆ. ಭಾಟಿಯಾ ಅವರು ಕಂಪನಿಯ 12 ಉದ್ಯೋಗಿಗಳಿಗೆ ದೀಪಾವಳಿ ಹಬ್ಬದ ಉಡುಗೊರೆಯಾಗಿ ಟಾಟಾ ಪಂಚ್‌ ಕಾರುಗಳನ್ನು ನೀಡಿದ್ದಾರೆ. ಎಂ.ಕೆ. ಭಾಟಿಯಾ ಅವರು ಕಂಪನಿ ಉದ್ಯೋಗಿಗಳಿಗೆ ಕಾರುಗಳ ಕೀ ಕೊಟ್ಟಿರುವ ಸಂಗತಿಯು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ. ಅಲ್ಲದೆ, ಉದ್ಯೋಗಿಗಳಿಗೆ ಕಾರುಗಳನ್ನೇ ಗಿಫ್ಟ್‌ ಕೊಟ್ಟು ಹೃದಯ ವೈಶಾಲ್ಯ ಮೆರೆದ ಬಾಸ್‌ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

“ಕೆಲವು ವರ್ಷಗಳ ಹಿಂದೆ ನಾನು ಕಂಪನಿ ಆರಂಭಿಸಿದಾಗ ಅಷ್ಟೇನೂ ಲಾಭ ಇರಲಿಲ್ಲ. ಆದರೆ, ನಮ್ಮ ಕಂಪನಿಯ ಪರಿಶ್ರಮ ಹಾಗೂ ಬದ್ಧತೆಯಿಂದಾಗಿ ಇಂದು ಲಾಭದತ್ತ ಸಾಗುತ್ತಿದ್ದೇವೆ. ಹಾಗಾಗಿ, ಹೆಚ್ಚು ಶ್ರಮ ವಹಿಸಿದ, ಬದ್ಧತೆಯಿಂದ ಕೆಲಸ ಮಾಡಿದ 12 ನೌಕರರಿಗೆ ಟಾಟಾ ಪಂಚ್‌ ಕಾರುಗಳನ್ನು ಉಡುಗೊರೆ ನೀಡಿದ್ದೇವೆ. 12 ನೌಕರರಲ್ಲಿ ಕಂಪನಿಯ ಆಫೀಸ್‌ ಸಹಾಯಕ ಕೂಡ ಇದ್ದಾರೆ. ಮುಂದಿನ ದಿನಗಳಲ್ಲಿ 12 ಉದ್ಯೋಗಿಗಳಲ್ಲ 50 ಉದ್ಯೋಗಿಗಳಿಗೆ ಕಾರುಗಳನ್ನು ಉಡುಗೊರೆ ನೀಡುವ ಯೋಜನೆ ಇದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಬ್ಬಾ ಲಾಟರಿ; 1,200 ನೌಕರರನ್ನು ಜಪಾನ್‌ ಟ್ರಿಪ್‌ಗೆ ಕಳುಹಿಸಿದ ಅಮೆರಿಕ ಕಂಪನಿ ಬಾಸ್!

ಒಟ್ಟಿನಲ್ಲಿ ಕಂಪನಿ ಬಾಸ್‌ಗಳು ಎಂದರೆ ಯಾವಾಗಲೂ ಸಿಡುಕು ಮೂತಿಯವರು, ಉದ್ಯೋಗಿಗಳಿಗೆ ಹಚ್ಚಿನ ಕೆಲಸ ನೀಡಿ, ತಾವು ಚೆನ್ನಾಗಿ ಇರುವವರು, ಹೆಚ್ಚು ಸಂಬಳ ನೀಡದೆ, ವೇತನ ಹೆಚ್ಚಿಸದೆ ಲಾಭವನ್ನಷ್ಟೇ ನೋಡುವವರು ಎಂಬ ಬೇಸರದ ಮಾತುಗಳು ಕೇಳಿಬರುವ ಸಂದರ್ಭದಲ್ಲಿ ಹರಿಯಾಣದ ಕಂಪನಿ ಚೇರ್ಮನ್‌ ಎಂ.ಕೆ. ಭಾಟಿಯಾ ಅವರು ಉದ್ಯೋಗಿಗಳಿಗೆ ಕಾರುಗಳನ್ನೇ ಉಡುಗೊರೆಯಾಗಿ ನೀಡಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ. ಇದರಿಂದ ಕಂಪನಿಯ ಬೇರೆ ನೌಕರರು ಶ್ರಮವಹಿಸಿ ಕೆಲಸ ಮಾಡಲು ಸಾಧ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಟಾಟಾ ಪಂಚ್‌ನ ಕಾರುಗಳ ಬೆಲೆಯು 6 ಲಕ್ಷ ರೂ.ನಿಂದ ಆರಂಭವಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Prajwal Revanna Case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್‌ ಟ್ವೀಟ್‌ ಮಾಡಿದ್ದು, “CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ. ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದಾಗಿದೆ ಎಂದು ಜೆಡಿಎಸ್‌ ದೂರಿದೆ.

VISTARANEWS.COM


on

Prajwal Revanna Case JDS calls CD Shivakumar pen drive gang
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜೆಡಿಎಸ್‌ ಟ್ವೀಟ್‌ ಮಾಡಿದ್ದು, “CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್” ಆರೋಪ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದೇ ಇದರ ಹಿಂದಿರುವ ಸಂಚಾಗಿದೆ ಎಂದು ಜೆಡಿಎಸ್‌ ಟ್ವೀಟ್‌ ಮೂಲಕ ಆರೋಪ ಮಾಡಿದೆ.

ಜೆಡಿಎಸ್‌ ಟ್ವೀಟ್‌ನಲ್ಲೇನಿದೆ?

“CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್”
1.ಡಿಸಿಎಂ ಡಿ.ಕೆ.ಶಿವಕುಮಾರ್
2.ಕೃಷಿ ಸಚಿವ ಚೆಲುವರಾಯಸ್ವಾಮಿ
3.ಕಂದಾಯ ಸಚಿವ ಕೃಷ್ಣಭೈರೇಗೌಡ
4. IT BT ಸಚಿವ ಪ್ರಿಯಾಂಕ್ ಖರ್ಗೆ
+
ಇನ್ನೂ ಒಬ್ಬ ಸಚಿವ
+
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದಾಗಿದೆ. ಈ ಸಂಚು ಸಾಕಾರಗೊಳಿಸಲು CD ಶಿವಕುಮಾರ್ ಸಾಹೇಬರು ವಕೀಲರಾದ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ 100 ಕೋಟಿ ರೂಪಾಯಿ” ಎಂದು ಜೆಡಿಎಸ್‌ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ.

Continue Reading

ದೇಶ

Swati Maliwal: ಸ್ವಾತಿ ಮಾಲಿವಾಲ್‌ ಕೇಸ್‌ಗೆ ಟ್ವಿಸ್ಟ್;‌ ತಮ್ಮ ಸಂಸದೆ ವಿರುದ್ಧವೇ ತಿರುಗಿಬಿದ್ದ ಆಪ್‌ ನಾಯಕರು!

Swati Maliwal: ದೆಹಲಿ ಮುಖ್ಯಮಂತ್ರಿ ಕಚೇರಿಯಲ್ಲಿ ನನ್ನ ಮೇಲೆ ಹಲ್ಲೆ ನಡೆದಿದೆ. ಸಿಎಂ ಆಪ್ತ ಸಹಾಯಕ ನನಗೆ ಒದ್ದಿದ್ದಾನೆ ಎಂಬುದಾಗಿ ಸ್ವಾತಿ ಮಾಲಿವಾಲ್‌ ಅವರು ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ, ಆಪ್‌ ನಾಯಕರು ಗಲಾಟೆ ನಡೆದಿರುವ ವಿಡಿಯೊವನ್ನು ಬಿಡುಗಡೆ ಮಾಡಿದ್ದಾರೆ. ಹಾಗೆಯೇ, ಸ್ವಾತಿ ಮಾಲಿವಾಲ್‌ ಮಾಡಿದ ಆರೋಪಗಳೆಲ್ಲವೂ ಸುಳ್ಳು ಎಂದಿದ್ದಾರೆ.

VISTARANEWS.COM


on

Swati Maliwal
Koo

ನವದೆಹಲಿ: ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ನಿವಾಸದಲ್ಲಿ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ರಾಜ್ಯಸಭೆ ಆಪ್‌ ಸದಸ್ಯೆ ಸ್ವಾತಿ ಮಾಲಿವಾಲ್‌ (Swati Maliwal) ಅವರು ಆರೋಪಿಸಿರುವುದು ದೇಶಾದ್ಯಂತ ಸುದ್ದಿಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ಅವರ ಆಪ್ತ ಸಹಾಯಕ ವಿಭವ್‌ ಕುಮಾರ್‌ (Bibhav Kumar) ಅವರೇ ಹಲ್ಲೆ ಮಾಡಿದ್ದಾರೆ ಎಂದು ಸ್ವಾತಿ ಮಾಲಿವಾಲ್‌ ಅವರು ಆರೋಪಿಸಿ ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ. ಆದರೆ, ಈ ಪ್ರಕರಣಕ್ಕೀಗ ಟ್ವಿಸ್ಟ್‌ ಸಿಕ್ಕಿದ್ದು, ಸ್ವಾತಿ ಮಾಲಿವಾಲ್‌ ಆರೋಪ ಸುಳ್ಳು ಎಂದು ಆಪ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ದೆಹಲಿ ಸಿಎಂ ಕಚೇರಿಯಲ್ಲಿ ಗಲಾಟೆ ನಡೆದಿರುವ ಕುರಿತ ವಿಡಿಯೊವನ್ನು ಕೂಡ ಬಿಡುಗಡೆ ಮಾಡಿದ್ದಾರೆ.

“ಸ್ವಾತಿ ಮಾಲಿವಾಲ್‌ ಅವರು ನೀಡಿರುವ ಹೇಳಿಕೆಯು ಸಂಪೂರ್ಣವಾಗಿ ಸುಳ್ಳುಗಳಿಂದ ಕೂಡಿದೆ ಎಂಬುದು ಈ ವಿಡಿಯೊದಿಂದ ಬಯಲಾಗಿದೆ. ಸ್ವಾತಿ ಮಾಲಿವಾಲ್‌ ಅವರು ಹೇಳಿದ ಸುಳ್ಳುಗಳನ್ನು ದೇಶದ ಜನರ ಮುಂದಿಡುತ್ತಿದ್ದೇವೆ” ಎಂದು ಆಪ್‌ ನಾಯಕಿ, ಸಚಿವೆ ಆತಿಶಿ ಅವರು ಸುದ್ದಿಗೋಷ್ಠಿಯಲ್ಲಿ ತಮ್ಮದೇ ಪಕ್ಷದ ನಾಯಕಿ ನೀಡಿರುವ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ. ಹಾಗೆಯೇ, ಅವರು ದೆಹಲಿ ಸಿಎಂ ಕಚೇರಿಯಲ್ಲಿ ನಡೆದ ಗಲಾಟೆ ಕುರಿತ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ.

ವಿಡಿಯೊದಲ್ಲಿ ಏನಿದೆ?

ದೆಹಲಿ ಸಿಎಂ ಕಚೇರಿಗೆ ಭೇಟಿ ನೀಡಿದ ವೇಳೆ ಸ್ವಾತಿ ಮಾಲಿವಾಲ್‌ ಅವರಿಗೆ ಭದ್ರತಾ ಸಿಬ್ಬಂದಿಯು ಹೊರಗೆ ತೆರಳಿ ಎಂಬುದಾಗಿ ಹೇಳಿದ್ದಾರೆ. ಆದರೆ, ನಾನು ಹೊರಗೆ ಹೋಗಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭದ್ರತಾ ಸಿಬ್ಬಂದಿಯೊಬ್ಬರಿಗೆ ಬಾಂಡ್ಲಿ (ಬೊಕ್ಕ ತಲೆಯವರು) ಎಂಬುದಾಗಿ ಬೈದಿದ್ದಾರೆ. ನಾನು ಇದರ ಬಗ್ಗೆ ಎಲ್ಲರಿಗೂ ಹೇಳುತ್ತೇನೆ ಎಂದು ಸ್ವಾತಿ ಮಾಲಿವಾಲ್‌ ಅವರು ದೆಹಲಿ ಸಿಎಂ ಕಚೇರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಮಾಡಿ, ಆದರೆ ಇಲ್ಲಿಂದ ಹೊರಡಿ ಎಂದು ಸಿಬ್ಬಂದಿ ಸೂಚಿಸಿದ್ದಾರೆ. ಆಗ, ಸ್ವಾತಿ ಮಾಲಿವಾಲ್‌ ಅವರು ಭದ್ರತಾ ಸಿಬ್ಬಂದಿಗೆ ಅವಾಚ್ಯವಾಗಿ ಬೈದಿದ್ದಾರೆ. ಇಷ್ಟೆಲ್ಲ ಅಂಶಗಳು ವಿಡಿಯೊದಲ್ಲಿವೆ.

ಸ್ವಾತಿ ಮಾಲಿವಾಲ್‌ ಆರೋಪವೇನು?

ಸ್ವಾತಿ ತಮ್ಮ ದೂರಿನಲ್ಲಿ ತಾವು ಆ ದಿನ ಅನುಭವಿಸಿದ ನೋವಿನ ಬಗ್ಗೆ ದಾಖಲಿಸಿದ್ದಾರೆ. ವಿಭವ್‌ ಕುಮಾರ್‌ 7-8ರಿಂದ ಎಂಟು ಬಾರಿ ಕಪಾಳಕ್ಕೆ ಬಾರಿಸಿದ್ದಾನೆ. ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಟ್ಟಿ ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದಾರೆ.

ಇದನ್ನೂ ಓದಿ: Swati Maliwal: “ಪೀರಿಯೆಡ್ಸ್‌ ಆಗಿದೆ.. ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ”-ಆಘಾತಕಾರಿ ಸಂಗತಿ ಬಿಚ್ಚಿಟ್ಟ ಸ್ವಾತಿ ಮಲಿವಾಲ್‌

Continue Reading

ಕ್ರೈಂ

Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

Prajwal Revanna Case: ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಆರೋಪ ಮಾಡಿದ್ದಾರೆ.

VISTARANEWS.COM


on

Prajwal Revanna Case DK Shivakumar offers Rs 100 crore to get involved in pen drive case Devaraje Gowda allegations
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegowda) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಇದ್ದಾರೆ. ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಳಿ ಪೆನ್‌ಡ್ರೈವ್‌ ತರಿಸಿಕೊಂಡು ಎಲ್ಲವನ್ನೂ ರೆಡಿ ಮಾಡಿದ್ದು ಡಿಕೆಶಿ, ಇದರಲ್ಲಿ ಸುಮ್ಮನಾಗಲು 100 ಕೋಟಿ ರೂಪಾಯಿ ಆಫರ್‌ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಮಾತನಾಡಿದ್ದಲ್ಲ ಎಂದು ಹೇಳಿದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ.

Continue Reading

ದೇಶ

Delhi Airport: ಹಾರುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ; ದೆಹಲಿ ಏರ್‌ಪೋರ್ಟ್‌ನಲ್ಲಿ ಎಮರ್ಜನ್ಸಿ ಘೋಷಣೆ!

Delhi Airport: ಏರ್‌ ಇಂಡಿಯಾದ 807 ವಿಮಾನವು ಶುಕ್ರವಾರ (ಮೇ 17) ಸಂಜೆ 5.52ರ ಸುಮಾರಿಗೆ ಹಾರಾಟ ಆರಂಭಿಸಿದೆ. ಇದಾದ ಕೂಡಲೇ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 175 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಲೇ ಎಲ್ಲರೂ ಆತಂಕ್ಕೀಡಾಗಿದ್ದರು. ಆದಾಗ್ಯೂ, 6.38ರ ಸುಮಾರಿಗೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್‌ ಮಾಡಲಾಯಿತು. ಯಾರಿಗೂ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Delhi Airport
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಪೂರ್ಣ ಪ್ರಮಾಣದ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಹೊರಡಬೇಕಿದ್ದ ಏರ್‌ ಇಂಡಿಯಾ ವಿಮಾನದಲ್ಲಿ (Air India) ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಪೂರ್ಣ ಪ್ರಮಾಣದ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ನೂರಾರು ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏರ್‌ ಇಂಡಿಯಾದ 807 ವಿಮಾನವು ಶುಕ್ರವಾರ (ಮೇ 17) ಸಂಜೆ 5.52ರ ಸುಮಾರಿಗೆ ಹಾರಾಟ ಆರಂಭಿಸಿದೆ. ಇದಾದ ಕೂಡಲೇ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 175 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಲೇ ಎಲ್ಲರೂ ಆತಂಕ್ಕೀಡಾಗಿದ್ದರು. ಆದಾಗ್ಯೂ, 6.38ರ ಸುಮಾರಿಗೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್‌ ಮಾಡಲಾಯಿತು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಕೂಡಲೇ ವಿಮಾನವನ್ನು ಲ್ಯಾಂಡ್‌ ಮಾಡಿದ ಕಾರಣ ಯಾರಿಗೂ ತೊಂದರೆಯಾಗಿಲ್ಲ ಎನ್ನಲಾಗಿದೆ.

“ಏರ್‌ ಇಂಡಿಯಾ ವಿಮಾನದ ಎ.ಸಿ ಯೂನಿಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು 6.15ರ ಸುಮಾರಿಗೆ ಕರೆ ಬಂತು. ಕೂಡಲೇ ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದವು. ವಿಮಾನವನ್ನು ಲ್ಯಾಂಡ್‌ ಮಾಡುತ್ತಲೇ ಕೂಲಂಕಷವಾಗಿ ಪರಿಶೀಲನೆ ನಡೆಸಲಾಯಿತು. ಲ್ಯಾಂಡ್‌ ಆಗುತ್ತಲೇ ಕೆಲ ಹೊತ್ತಿನಲ್ಲಿಯೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಲಾಯಿತು. ಅದೃಷ್ಟವಶಾತ್‌, ಯಾರಿಗೂ ತೊಂದರೆಯಾಗಿಲ್ಲ” ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುರುವಾರವಷ್ಟೇ (ಮೇ 16) ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿತ್ತು. ದೆಹಲಿಯಿಂದ ವಡೋದರಾಕ್ಕೆ ಪ್ರಯಾಣ ಬೆಳೆಸಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಎಂದು ಬರೆದಿರುವ ಟಿಶ್ಯೂ ಪೇಪರ್‌ ಪತ್ತೆಯಾಗಿತ್ತು. ಶೌಚಾಲಯದಲ್ಲಿ ಈ ಟಿಶ್ಯೂ ಪೇಪರ್‌ ಪತ್ತೆಯಾಗಿದ್ದು, ಪ್ರಯಾಣಿಕರಲ್ಲಿ ಭಾರೀ ಆತಂಕ ಸೃಷ್ಟಿಸಿತ್ತು. ಅಧಿಕೃತ ಮಾಹಿತಿ ಪ್ರಕಾರ ಬೆಳಗ್ಗೆ 7.30ರ ವೇಳೆಗೆ ವಿಮಾನ ಇನ್ನೇನು ಟೇಕ್‌ ಆಫ್‌ ಆಗಬೇಕಿತ್ತು. ಈ ವೇಳೆ ವಿಮಾನ ಸಿಬ್ಬಂದಿಗೆ ಈ ಟಿಶ್ಯೂ ಸಿಕ್ಕಿದೆ ಎನ್ನಲಾಗಿದೆ. ಇದಾದ ಬಳಿಕ ಪರಿಸ್ಥಿತಿ ತಿಳಿಯಾಗಿತ್ತು.

ಇದನ್ನೂ ಓದಿ: Bomb threat: ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ; ಟಿಶ್ಯೂ ಪೇಪರ್‌ನಲ್ಲಿ ಬಂದಿತ್ತು ಸಂದೇಶ

Continue Reading
Advertisement
Retirement Plan
ಮನಿ ಗೈಡ್4 mins ago

Retirement Plan: ನಿವೃತ್ತಿ ನಂತರ ನೆಮ್ಮದಿ ಜೀವನ ನಡೆಸಬೇಕೆ? ಈ 5 ಯೋಜನೆಗಳನ್ನು ಮರೆಯಬೇಡಿ

Siddharth Kak
ದೇಶ10 mins ago

Siddharth Kak: ಡಿಡಿಯ ʼಸುರಭಿʼ ಕಾರ್ಯಕ್ರಮ ನೆನಪಿದೆಯಾ? ಪ್ರತಿ ವಾರ ಎಷ್ಟು ಲಕ್ಷ ಪೋಸ್ಟ್‌ ಕಾರ್ಡ್‌ ಬರುತ್ತಿತ್ತು ಗೊತ್ತಾ?

Prajwal Revanna Case JDS calls CD Shivakumar pen drive gang
ರಾಜಕೀಯ11 mins ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Swati Maliwal
ದೇಶ17 mins ago

Swati Maliwal: ಸ್ವಾತಿ ಮಾಲಿವಾಲ್‌ ಕೇಸ್‌ಗೆ ಟ್ವಿಸ್ಟ್;‌ ತಮ್ಮ ಸಂಸದೆ ವಿರುದ್ಧವೇ ತಿರುಗಿಬಿದ್ದ ಆಪ್‌ ನಾಯಕರು!

Irfan Pathan
ಕ್ರೀಡೆ19 mins ago

Irfan Pathan : ಕಹಿ ನೆನಪು; ಬುರ್ಖಾ ಧರಿಸದ ಪತ್ನಿ ಜತೆ ಫೋಟೋ ತೆಗಿಸಿಕೊಳ್ಳಲು ಒಪ್ಪದ ಇರ್ಫಾನ್ ಪಠಾಣ್​​

Tatkal Tickets
ದೇಶ36 mins ago

Tatkal Tickets: ಕೊನೆ ಘಳಿಗೆಯಲ್ಲಿ ರೈಲು ಪ್ರಯಾಣಕ್ಕೆ ತತ್ಕಾಲ್‌ ಟಿಕೆಟ್‌ ಪಡೆಯುವುದು ಹೇಗೆ?

Prajwal Revanna Case DK Shivakumar offers Rs 100 crore to get involved in pen drive case Devaraje Gowda allegations
ಕ್ರೈಂ38 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

Delhi Airport
ದೇಶ41 mins ago

Delhi Airport: ಹಾರುತ್ತಿದ್ದ ವಿಮಾನದಲ್ಲಿ ಅಗ್ನಿ ಅವಘಡ; ದೆಹಲಿ ಏರ್‌ಪೋರ್ಟ್‌ನಲ್ಲಿ ಎಮರ್ಜನ್ಸಿ ಘೋಷಣೆ!

water aerator
ಬೆಂಗಳೂರು46 mins ago

Water Aerator : ಸ್ವಿಗ್ಗಿಯಲ್ಲಿ ಆರ್ಡರ್ ಮಾಡಿದ್ರೆ 10 ನಿಮಿಷದಲ್ಲಿ ಮನೆ ತಲುಪುತ್ತದೆ ವಾಟರ್ ಏರಿಯೇಟರ್​

Holenarasipura sexual assault case lot of confusion in the victim statement against HD Revanna Case
ಕ್ರೈಂ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ11 mins ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ14 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ16 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌