Uttara Kannada News: ಆಧುನಿಕತೆ ನಡುವೆಯೂ ಜಿಲ್ಲೆಯ ಸಾಂಸ್ಕೃತಿಕ ವಿಶೇಷತೆ ಎತ್ತರಕ್ಕೆ ಬೆಳೆಯುತ್ತಿದೆ: ವಿಶ್ವೇಶ್ವರ ಹೆಗಡೆ - Vistara News

ಉತ್ತರ ಕನ್ನಡ

Uttara Kannada News: ಆಧುನಿಕತೆ ನಡುವೆಯೂ ಜಿಲ್ಲೆಯ ಸಾಂಸ್ಕೃತಿಕ ವಿಶೇಷತೆ ಎತ್ತರಕ್ಕೆ ಬೆಳೆಯುತ್ತಿದೆ: ವಿಶ್ವೇಶ್ವರ ಹೆಗಡೆ

Uttara Kannada News: ಯಲ್ಲಾಪುರ ಪಟ್ಟಣದ ಗಾಂಧೀ ಕುಟೀರದಲ್ಲಿ 3ನೇ ದಿನದ ಸಂಕಲ್ಪ ಉತ್ಸವ ಕಾರ್ಯಕ್ರಮಕ್ಕೆ ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.

VISTARANEWS.COM


on

3rd day Sankalpa Utsav program at Yallapur was inaugurated by former Assembly Speaker Vishweshwar Hegde Kageri
ಯಲ್ಲಾಪುರ ಪಟ್ಟಣದ ಗಾಂಧೀ ಕುಟೀರದಲ್ಲಿ 3ನೇ ದಿನದ ಸಂಕಲ್ಪ ಉತ್ಸವ ಕಾರ್ಯಕ್ರಮವನ್ನು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಆಧುನಿಕತೆಯ ನಡುವೆಯೂ ನಮ್ಮ ಜಿಲ್ಲೆಯ ಸಾಂಸ್ಕೃತಿಕ (Cultural) ವಿಶೇಷತೆಗಳು ಇಂದಿಗೂ ಉಳಿದಿದೆ ಹಾಗೂ ಇನ್ನೂ ಎತ್ತರಕ್ಕೆ ಬೆಳೆಯುತ್ತಿದೆ ಎಂದು ರಾಜ್ಯ ವಿಧಾನಸಭೆಯ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಪಟ್ಟಣದ ಗಾಂಧೀ ಕುಟೀರದಲ್ಲಿ 3ನೇ ದಿನದ ಸಂಕಲ್ಪ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಯಲ್ಲಾಪುರದ ಸಂಕಲ್ಪ ಉತ್ಸವದ ಸಂಭ್ರಮವನ್ನು ಮನೆ ಮನೆಯಲ್ಲಿ ಆನಂದಿಸುತ್ತಾರೆ. ನಾವು ದೂರದಲ್ಲಿದ್ದರೂ ಇದು ನಮ್ಮೂರಿನ ಉತ್ಸವ ಎಂದು ಹೆಮ್ಮೆಯಿಂದ ಕಾಣುತ್ತೇವೆ. ಪ್ರಮೋದ ಹೆಗಡೆ ಅವರ ಜೀವನೋತ್ಸಾಹವು ನಮ್ಮೆಲ್ಲರಿಗೂ ಪ್ರೇರಣೆ. ನಮ್ಮ ಜೀವನದಲ್ಲಿ ಒಂದು ಘಟ್ಟವನ್ನು ತಲುಪಿದಾಗ ನಮ್ಮಲ್ಲಿ ಉತ್ಸಾಹ ಕಡಿಮೆಯಾಗುವುದು ಸಹಜ. ಆದರೆ ತಮ್ಮ ಮಕ್ಕಳನ್ನೂ ಮೀರಿ ಹೊಸದನ್ನು ಮಾಡಲು ಪ್ರಮೋದ ಹೆಗಡೆ ಅವರಿಗಿರುವ ತುಡಿತ ಪ್ರಶಂಸನೀಯ ಎಂದರು.

ಇದನ್ನೂ ಓದಿ: Vistara Kannada Sambhrama : ವಿಸ್ತಾರ ಕನ್ನಡ ಸಂಭ್ರಮದಲ್ಲಿ ಹೇಗಿತ್ತು ಮನರಂಜನೆಯ ಸುಗ್ಗಿ; ಇಲ್ಲಿವೆ ಫೋಟೊ ಝಲಕ್‌

ಈ ಸಾಂಸ್ಕೃತಿಕ ಸಂಭ್ರಮದ ಉತ್ಸವ ನನ್ನದು ಎಂದು ಅನೇಕರು ಸ್ವಯಂ ಸೇವಕರಾಗಿ ಕಾರ್ಯಕ್ರಮದ ಯಶಸ್ಸಿಗಾಗಿ ತೊಡಗಿಕೊಂಡಿದ್ದಾರೆ, ಅವರೆಲ್ಲರ ಶ್ರಮದ ಫಲವಾಗಿ 37 ವರ್ಷಗಳಿಂದ ಈ ಕಾರ್ಯಕ್ರಮ ಊರಿನ ಎಲ್ಲರ ಕಾರ್ಯಕ್ರಮವಾಗಿ ಬೆಳೆದು ಬಂದಿದೆ ಎಂದು ತಿಳಿಸಿದರು.

ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಮಾತನಾಡಿ, ಇಂದಿನ ಯುವ ಪೀಳಿಗೆ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಬಯಸುತ್ತಿದ್ದಾರೆ. ಜನರು ಒಂದು ಹೊಸ ಪ್ರದೇಶದ ಕಲಾ ವೈವಿಧ್ಯತೆಯನ್ನು ಅನುಭವಿಸ ಬಯಸುತ್ತಾರೆ. ಅಂತಹ ಒಂದು ಪ್ರವಾಸೋದ್ಯಮಕ್ಕೆ ನಮ್ಮ ಉತ್ತರಕನ್ನಡದ ಸಂಕಲ್ಪ ಉತ್ಸವವು ನಾಂದಿ ಹಾಡುತ್ತಿದೆ. ಸರ್ಕಾರಕ್ಕೆ ಸವಾಲೊಡ್ಡಿ 37 ವರ್ಷಗಳಿಂದ ಈ ಕಾರ್ಯಕ್ರಮ ನಡೆದುಕೊಂಡಿರುವುದು ಪ್ರಮೋದ ಹೆಗಡೆ ಅವರ ಧೃಢಸಂಕಲ್ಪವನ್ನು ತೋರುತ್ತದೆ ಎಂದರು.

ಸಂಕಲ್ಪ ಸೇವಾ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಮಳೆ ನೀರು ಕೊಯ್ಲು ಅಭಿಯಾನದ ರುವಾರಿಯಾದ ಚಂದ್ರು ಎಸಳೆ ಅವರಿಗೆ ಸಂಕಲ್ಪ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: Turnip Benefits: ಟರ್ನಿಪ್‌ ಗಡ್ಡೆಯ ಬಗ್ಗೆ ಗೊತ್ತೆ? ಅದರ ಗುಣ ವಿಶೇಷಗಳನ್ನು ತಿಳಿಯಿರಿ

ವೇದಿಕೆಯಲ್ಲಿ ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಜಿ.ಎನ್.‌ ಗಾಂವ್ಕರ್‌, ಎಂ.ಕೆ. ಭಟ್‌, ಉಮೇಶ ಭಾಗ್ವತ್‌, ನಿವೃತ್ತ ಪ್ರಾಂಶುಪಾಲ ಶ್ರೀರಂಗ ಕಟ್ಟಿ, ಸುಬ್ಬಣ್ಣ ಬೋಳ್ಮನೆ ಇದ್ದರು.

ಸಾನ್ವಿ ಇನಾಮದಾರ್‌ ಪ್ರಾರ್ಥಿಸಿದರು. ಸಂಕಲ್ಪ ಸೇವಾ ಸಂಸ್ಥೆಯ ಸಂಚಾಲಕ ಪ್ರಸಾದ ಹೆಗಡೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಭಾಸ್ಕರ್‌ ನಾಯ್ಕ ನಿರೂಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ವೀಕೆಂಡ್‌ಗೆ ಬ್ರೇಕ್‌ ಕೊಟ್ಟ ವರುಣ! ಈ 3 ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

Rain News : ವಾರಾಂತ್ಯದಲ್ಲಿ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಕೊಂಚ ತಗ್ಗಿದ್ದರೆ, ಕರಾವಳಿ-ಮಲೆನಾಡು, ಉತ್ತರ ಒಳನಾಡಿನಲ್ಲಿ ಮಳೆಯು (Karnataka Weather Forecast) ಜೋರಾಗಿ ಇರಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ (Karnataka Weather Forecast) ಸಾಮಾನ್ಯವಾಗಿದೆ. ವಾರಾಂತ್ಯದಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ.

ಉಳಿದ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಬಿರುಗಾಳಿ ಬೀಸಲಿದೆ. ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಲ್ಲಿ ಮೋಡ ಕವಿ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಸೂರ್ಯ ತನ್ನ ದರ್ಶನ ಕೊಡಲಿದ್ದಾನೆ. ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಕೂಡಿದ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 40-50 ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ಉತ್ತರ ಒಳನಾಡಿನ ಬೀದರ್‌, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Karnataka Weather forecast : ಕರಾವಳಿ, ಉತ್ತರ ಒಳನಾಡಿನಲ್ಲಿ ಮಳೆಯು (Rain News) ಅಬ್ಬರಿಸುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ಕಾರವಾರ: ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಶುಕ್ರವಾರ ಉತ್ತರಕನ್ನಡ ಜಿಲ್ಲೆಯಲ್ಲಿ ಮತ್ತೆ ವರುಣಾರ್ಭಟ ಮುಂದುವರಿದಿದೆ. ಕರಾವಳಿ ತಾಲೂಕುಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಭಾಗಗಳಲ್ಲಿ ಭಾರೀ ಗಾಳಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಒಂದು ತಾಸಿಗೂ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವೆಡೆ ಮರಗಳು ನೆಲಕ್ಕುರುಳಿತ್ತು.

ಮುಂಗಾರು ಮಳೆಗೆ ಪಪ್ಪಾಯಿ ಬೆಳೆ ಹಾನಿ

ಬಾಗಲಕೋಟೆಯಲ್ಲೂ ಮುಂಗಾರು ಮಳೆ ಅಬ್ಬರಕ್ಕೆ ತೋಟಗಾರಿಕಾ ಬೆಳೆ ಹಾನಿಯಾಗಿದ್ದು ರೈತರು ಆತಂಕದಲ್ಲಿದ್ದಾರೆ. ಬಾಗಲಕೋಟೆ ತಾಲೂಕಿನ ಹೊನ್ನಾಕಟ್ಟಿ ಗ್ರಾಮದಲ್ಲಿ ಫಸಲು ಕೈಗೆಟಕುವ ಮುನ್ನವೇ ಮಳೆಗೆ ಪಪ್ಪಾಯಿ ಆಹುತಿಯಾಗಿದೆ. ಅಧಿಕ ಮಳೆಯಿಂದಾಗಿ ತೇವಾಂಶದಿಂದ ಗಿಡದಿಂದ ಪಪ್ಪಾಯಿ ಉದುರುತ್ತಿದೆ.

ಪಪ್ಪಾಯಿ ಬೆಳೆದ ಹೊನ್ನಾಕಟ್ಟಿ ರೈತ ಯಲ್ಲಪ್ಪ ಜಿವೊಜಿ ಕಂಗಾಲಾಗಿದ್ದಾರೆ. 2 ಎಕರೆ ಜಮೀನಿನಲ್ಲಿ 2 ಲಕ್ಷ ರೂ. ಹೆಚ್ಚು ಖರ್ಚು ಮಾಡಿ ಪಪ್ಪಾಯಿ ಬೆಳೆಯಲಾಗಿತ್ತು. ಆದರೆ ಪಪ್ಪಾಯಿ ಫಸಲು ಚನ್ನಾಗಿ ಬಂದಿದ್ದರೂ, ಮಳೆಯಿಂದ ಪಪ್ಪಾಯಿಗೆ ಕೊಳೆ ರೋಗಕ್ಕೆ ಉದುರುತ್ತಿದೆ. 7- 8 ಲಕ್ಷ ರೂ ಲಾಭದ ನಿರೀಕ್ಷೆಯಲ್ಲಿದ್ದ ರೈತ ಯಲ್ಲಪ್ಪನಿಗೆ ಇದೀಗ ಸಾಲದ ಹೊರೆ ಹೆಚ್ಚಾಗಿದೆ. ನಿರಂತರ ಮಳೆಯಿಂದ ಪಪ್ಪಾಯಿ ಬೆಳೆ ಸಂಪೂರ್ಣ ಹಾನಿಯಾಗಿದೆ. ಸದ್ಯ ಸರ್ಕಾರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.

ಭಾರಿ ಮಳೆಗೆ ಕೆರೆಯಂತಾದ ಕಾಲಕಾಲೇಶ್ವರ ಗ್ರಾಮ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಸುತ್ತಮುತ್ತ ಭಾರಿ‌ ಮಳೆಯಾಗುತ್ತಿದ್ದು, ಕಾಲಕಾಲೇಶ್ವರ ಗ್ರಾಮದ ರಸ್ತೆಗಳು ಕೆರೆಯಂತಾಗಿದೆ. ರಸ್ತೆ ತುಂಬ ನೀರು ನಿಂತು ಜನರು ಓಡಾಡಲು ಪರದಾಡುವಂತಾಗಿತ್ತು. ಇತ್ತ ಕಾಲಕಾಲೇಶ್ವರ ಗುಡ್ಡದಲ್ಲಿ ಕಿರು ಜಲಪಾತ ಸೃಷ್ಟಿಯಾಗಿದ್ದು, ಜನರು ವೀಕ್ಷಣೆಗಾಗಿ ಬರುತ್ತಿದ್ದ ದೃಶ್ಯ ಕಂಡು ಬಂತು.

ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡುಗಡೆ; ಗ್ರಾಮಸ್ಥರಿಗೆ ಎಚ್ಚರಿಕೆ

ಕಲಬುರಗಿಯ ಚಿಂಚೊಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ನಾಗರಾಳ‌ ಬಳಿ ಇರುವ ಮುಲ್ಲಾಮಾರಿ ಜಲಾಶಯದ ಒಳಹರಿವು 1,500 ಕ್ಯೂಸೆಕ್ ಹೆಚ್ಚಾಗಿದೆ. ಜಲಾಶಯದ ಗರಿಷ್ಠ ಮಟ್ಟ 491 ಮೀಟರ್ ಇದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದ ನೀರು ಬಿಡುಗಡೆ ಮಾಡಲಾಗುತ್ತದೆ. ಹೀಗಾಗಿ ಮುಲ್ಲಾಮಾರಿ ಕೆಡದಂಡೆ ಗ್ರಾಮಗಳಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ ಸೇರಿ ಹಲವು ಗ್ರಾಮಗಳಿಗೆ ನದಿ ‌ದಡದಲ್ಲಿ ಹೋಗದಂತೆ ಎಇ‌ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಕಲಬುರಗಿಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಕಲಬುರಗಿಯ ಶಹಾಬಾದ್, ಆಳಂದ, ಚಿಂಚೊಳ್ಳಿ ಸೇರಿ ಹಲವು ಭಾಗದಲ್ಲಿ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಚಿತ್ತಾಪೂರ ತಾಲೂಕಿನ ತರ್ಕಸ್ ಪೇಟೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ, ಶೇಖರಿಸಿಟ್ಟಿದ್ದ ದವಸ ಧಾನ್ಯಗಳು ನೀರುಪಾಲಾಗಿದ್ದವು. ಜತೆಗೆ ಚಂದಾಪುರ ಪಟೇಲ್ ಕಾಲೋನಿಯಲ್ಲಿ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿತ್ತು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ‌ ಕಾರಣ‌ ಮಳೆ‌ ನೀರು ಮನೆಗೆ ನುಗ್ಗಿತ್ತು. ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕಿದರು.

ಮಳೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿತ್ತು. ಮರ ಬಿದ್ದ ಪರಿಣಾಮ ಕಿ.ಮೀ ಗಟ್ಟಲೆ ವಾಹನ ದಟ್ಟಣೆ ಉಂಟಾಗಿತ್ತು. ಅಡ್ಡಲಾಗಿ ಬಿದ್ದ ಮರದ ಕೆಳಗಡೆಯಿಂದ ಸವಾರರು ರಸ್ತೆ ದಾಟುತ್ತಿದ್ದರು. ಮರ ಬಿದ್ದು ಗಂಟೆಗಟ್ಟಲೆ ಸಮಯ ಕಳೆದರೂ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಸ್ಥಳೀಯರಿಂದಲೇ ಮರ ತೆರವುಗೊಳಿಸಲಾಯಿತು.

ಗುಡುಗು ಸಹಿತ ಮಳೆ ಎಚ್ಚರಿಕೆ

ಜೂನ್‌ 15ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿವೇಗವು ಒಂದು ಎರಡು ಕಡೆಗಳಲ್ಲಿ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30-21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Self Harming : ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

Self Harming : ಕುಡಿದ ಅಮಲಿನಲ್ಲಿ ಠಾಣೆಗೆ ಬಂದ ವ್ಯಕ್ತಿಯೊಬ್ಬ ಪಿಎಸ್‌ಐ ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಠಾಣೆ ಎದುರೇ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

VISTARANEWS.COM


on

By

Self Harming
ಸಾಂದರ್ಭಿಕ ಚಿತ್ರ
Koo

ಕಾರವಾರ: ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದವರು. ಜೂಜಾಟ ಆರೋಪದಡಿ ಭಾಸ್ಕರ್‌ ವಿರುದ್ಧ ರಾಮನಗರ ಪಿಎಸ್ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದಾನೆ.

ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Udupi News : ತಂದೆ ಸಾವಿನಿಂದ ಖಿನ್ನತೆಗೆ ಜಾರಿದವಳು ಬಾವಿಗೆ ಹಾರಿ ಆತ್ಮಹತ್ಯೆ; ಮಕ್ಕಳಿಬ್ಬರು ಅನಾಥ

ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

ಮೈಸೂರು: ಬೆಳೆ ಸಾಲ ತೀರಿಸಲಾಗದೆ ಕೆರೆಗೆ ಹಾರಿ ರೈತರೊಬ್ಬರು (Farmer Death) ಆತ್ಮಹತ್ಯೆ (Self Harming) ಮಾಡಿಕೊಂಡು ಮೃತಪಟ್ಟಿದ್ದಾರೆ. ಮೈಸೂರು (Mysuru News) ಜಿಲ್ಲೆಯ ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ ನಡೆದಿದೆ. ಅಣ್ಣೇಗೌಡ (57) ಮೃತ ದುರ್ದೈವಿ.

ಅಣ್ಣೇಗೌಡ ಮೂರು ಎಕರೆಯಲ್ಲಿ ತಂಬಾಕು ಮತ್ತಿತರೆ ಬೆಳೆ ಬೆಳೆಯುತ್ತಿದ್ದರು. ಕೃಷಿ ಚಟುವಟಿಕೆಗಾಗಿ ಪಂಚವಳ್ಳಿಯ ಐಒಬಿ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದರು. ಖಾಸಗಿ ಬ್ಯಾಂಕ್‌ನಲ್ಲಿ 14 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದರು. ಬೆಳೆ ಕೈ ಹತ್ತದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆರೆಯಿಂದ ರೈತನ ಮೃತದೇಹವನ್ನು ಮೇಲಕ್ಕೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಮಳೆ ಪ್ರಮಾಣ ತಗ್ಗಿದ್ದರೂ, ಮಲೆನಾಡು ಹಾಗೂ ಒಳನಾಡಿನ ಹಲವೆಡೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ. ಶುಕ್ರವಾರವೂ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವೆಡೆ ಚದುರಿದಂತೆ ಮಧ್ಯಮ ಮಳೆಯಾಗಲಿದೆ. ಬಾಗಲಕೋಟೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡದಲ್ಲಿ ಹಲವೆಡೆ ಭಾರೀ ಮಳೆಯಾಗಲಿದೆ. ಬೆಂಗಳೂರಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿ ಸೇರಿ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿಯು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Double Decker Flyover : ಬೆಂಗಳೂರಿನ ಮೊದಲ ಡಬಲ್‌ ಡೆಕ್ಕರ್‌ ಫ್ಲೈಓವರ್‌ ಕೊನೆಗೂ ಸಿದ್ಧ; ಯಾವಾಗಿಂದ ಸಂಚಾರಕ್ಕೆ ಅವಕಾಶ

ರಾಯಚೂರಿನಲ್ಲಿ ಈಜುಕೊಳವಾದ ಶಾಲೆ ಆವರಣ

ಅಲ್ಪ ಮಳೆಗೆ ಸರಕಾರಿ‌ ಶಾಲೆ ಆವರಣವು ಈಜುಕೊಳವಾಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಶಾಲೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. ಜೀವ ಭಯದಲ್ಲೇ ಮಕ್ಕಳು ಮತ್ತು ಶಿಕ್ಷಕರು ಪಾಠ ಪ್ರವಚನ ಮಾಡಬೇಕಾದ ಪರಿಸ್ಥಿತಿ ನಿರ್ಮಾನವಾಗಿದೆ. ಜಿಟಿ ಜಿಟಿ ಮಳೆಯಿಂದ ಕೊಠಡಿಗಳು ಸೋರುತ್ತಿದೆ. ಜೋರಾಗಿ ಮಳೆ ಬಂದರೆ ನೀರು ನುಗ್ಗುವ ಭೀತಿ ಇದೆ. ಇತ್ತ ಸೋರುತ್ತಿರುವ ಕೊಠಡಿಯಲ್ಲೆ ಮಧ್ಯಾಹ್ನ ಬಿಸಿ ಊಟದ ಆಹಾರ ಧಾನ್ಯಗಳ ಸಂಗ್ರಹ ಮಾಡಲಾಗಿದೆ. ಪಿಡಿಒ, ಬಿಇಓ ಅವರ ಗಮನಕ್ಕೆ ತಂದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್‌ ಸವಾರ

ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಬೈಕ್ ಸವಾರನ ಜೀವ ಉಳಿದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಂದ್ರಶೇಖರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಹಳ್ಳ ದಾಟಲು ಬೈಕ್‌ ಸವಾರ ಮುಂದಾಗಿದ್ದ. ಈ ವೇಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದ, ಇದನ್ನೂ ಗಮನಿಸಿದ ಸ್ಥಳೀಯರು ಕೂಡಲೇ ಸವಾರನನ್ನು ರಕ್ಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Students Fall Sick
ಯಾದಗಿರಿ2 mins ago

Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

RSA vs NEP
ಕ್ರೀಡೆ8 mins ago

RSA vs NEP: ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ; ಗೆಲುವಿನ ಖಾತೆ ತೆರೆದ ಕಿವೀಸ್​

Actor Darshan Chandranna Family Members Want Anu To Attend Funeral
ಸ್ಯಾಂಡಲ್ ವುಡ್14 mins ago

Actor Darshan: ಎಷ್ಟೇ ದಿನ ಆದರೂ ಚಂದ್ರಣ್ಣನ ಶವ ಎತ್ತಲ್ಲ; ಅನು ತಂದೆ ನಿಧನಕ್ಕೆ ಸಂಬಂಧಿಕರ ಕಣ್ಣೀರು

cow smuuggling
ಪ್ರಮುಖ ಸುದ್ದಿ16 mins ago

Cow Smuggling : ಗೋವು ಸಾಗಿಸುತ್ತಿದ್ದವರಿಂದ ಹಿಂದೂಪರ ಸಂಘಟನೆ ಕಾರ್ಯಕರ್ತರ ಮೇಲೆ ಗಂಭೀರ ಹಲ್ಲೆ

Actor Darshan
ಕ್ರೈಂ39 mins ago

Actor Darshan: ಪ್ರಾಯಶ್ಚಿತದ ಬೇಗೆಯಲ್ಲಿ ದರ್ಶನ್‌; ದುಃಖ ತೋಡಿಕೊಂಡ ಚಾಲೆಂಜಿಂಗ್‌ ಸ್ಟಾರ್‌ ಹೇಳಿದ್ದೇನು?

Actor Darshan arrest dhruva sraja KD will release
ಸ್ಯಾಂಡಲ್ ವುಡ್40 mins ago

Actor Darshan: ಧ್ರುವ ಸರ್ಜಾ ನಿರಾಳ ; ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಬರೆಯಲು ʻಕೆಡಿʼ ಸಜ್ಜು

IND vs CAN
ಕ್ರಿಕೆಟ್45 mins ago

IND vs CAN: ಇಂದು ಭಾರತ-ಕೆನಡಾ ಪಂದ್ಯ ಅನುಮಾನ; ಭಾರೀ ಮಳೆ ಎಚ್ಚರಿಕೆ ನೀಡಿದ ಹಮಾಮಾನ ಇಲಾಖೆ

Chitradurga News
ಪ್ರಮುಖ ಸುದ್ದಿ50 mins ago

Road Accident : ಚಿತ್ರದುರ್ಗದಲ್ಲಿ ಭೀಕರ ಅಪಘಾತ; ಇಬ್ಬರು ಮಕ್ಕಳು ಸೇರಿ ಸ್ಥಳದಲ್ಲೇ ನಾಲ್ಕು ಮಂದಿ ಸಾವು

Namma Metro
ಪ್ರಮುಖ ಸುದ್ದಿ1 hour ago

Namma Metro : ಮೆಟ್ರೊ ಪ್ರಯಾಣಿಕರೆ ಗಮನಿಸಿ; ಜೂನ್​ 17ರಂದು 1 ಗಂಟೆವರೆಗೆ ಚಲ್ಲಘಟ್ಟದಿಂದ ಕೆಂಗೇರಿ ತನಕ ಸೇವೆ ಇಲ್ಲ

G7 Summit
ಪ್ರಮುಖ ಸುದ್ದಿ1 hour ago

G7 Summit : ನಿಮ್ಮ ಭೇಟಿಯಿಂದ ಸಂತೋಷವಾಗಿದೆ; ಅಮೆರಿಕ ಅಧ್ಯಕ್ಷ ಬೈಡೆನ್​ ಭೇಟಿ ಬಗ್ಗೆ ಮೋದಿ ಉತ್ಸಾಹ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ15 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು16 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು17 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ17 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌