Birthday: ಸಂಕಷ್ಟದ ಸಮಯದಲ್ಲಿ ನಾಡು ಮುನ್ನಡೆಸಿದ ಮುಮ್ಮಡಿ ಕೃಷ್ಣರಾಜ ಒಡೆಯರ್‌ - Vistara News

ಕರ್ನಾಟಕ

Birthday: ಸಂಕಷ್ಟದ ಸಮಯದಲ್ಲಿ ನಾಡು ಮುನ್ನಡೆಸಿದ ಮುಮ್ಮಡಿ ಕೃಷ್ಣರಾಜ ಒಡೆಯರ್‌

ಮುಮ್ಮಡಿ ಕೃಷ್ಣರಾಜ ಒಡೆಯರ್‌ ಅವರು ಮೈಸೂರು ಸಂಸ್ಥಾನದ ಒಡೆಯರಾಗಿ ಒಳ್ಳೆಯ ಆಡಳಿತ ನೀಡಿದ್ದಲ್ಲದೆ, ಹಲವಾರು ಸಾಹಿತ್ಯ ಕೃತಿಗಳನ್ನೂ ರಚಿಸಿದರು.

VISTARANEWS.COM


on

Maharaja Krishnaraja Wadiyar 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಸಾಹತುಶಾಹಿ ಆಡಳಿತದ ಹಿಡಿತದಲ್ಲಿ ದೇಶ ನಲುಗುತ್ತಿದ್ದ ಕಾಲದಲ್ಲಿ ಮೈಸೂರು ನಾಡಿನ ಆಡಳಿತವನ್ನು ನಾಜೂಕಾಗಿ ನಿಭಾಯಿಸಿದ ಮಹಾರಾಜರುಗಳಲ್ಲಿ ಒಬ್ಬರು ಮುಮ್ಮಡಿ ಕೃಷ್ಣರಾಜ ಒಡೆಯರು.

1794ರ ಜುಲೈ 14ರಂದು ಜನಿಸಿದ ಮುಮ್ಮಡಿ ಕೃಷ್ಣರಾಜ ಒಡೆಯರು ಮೈಸೂರು ರಾಜ್ಯದ ಇತಿಹಾಸದಲ್ಲಿ ತುಂಬಾ ಕಷ್ಟಕರ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದವರು. ಆಡಳಿತಾತ್ಮಕವಾಗಿ ಇವರ ಹೆಸರು ಅಷ್ಟಾಗಿ ಕೇಳಿಬರುವುದಿಲ್ಲ. ಆದರೆ ಸಾಹಿತ್ಯ ಕಲೆ ಸಂಸ್ಕೃತಿಗಳಿಗೆ ಇವರ ಕೊಡುಗೆ ಅಪಾರ. ಹೀಗಾಗಿ ಇವರನ್ನು ʻಕನ್ನಡದ ಭೋಜರಾಜʼ ಎಂದೂ ಕರೆಯಲಾಗುತ್ತದೆ.

ಬ್ರಿಟಿಷರೊಡನೆ 1799ರ ಎರಡನೇ ಮೈಸೂರು ಯುದ್ಧದಲ್ಲಿ ಟಿಪ್ಪೂವಿನ ಮರಣವಾಯಿತು. ನಂತರ ಮೈಸೂರು ರಾಜ್ಯದ ಆಡಳಿತವನ್ನು ಪುನಃ ಮೈಸೂರು ಅರಸು ಮನೆತನಕ್ಕೆ ವಹಿಸಬೇಕೆಂಬ ಒಪ್ಪಂದವಾಯಿತು. ಅದಕ್ಕೆ ತುಂಬಾ ಬಲವಾದ ವಿರೋಧಗಳೂ ಇದ್ದವು. ಮಹಾರಾಣಿ ಲಕ್ಷ್ಮಮ್ಮಣ್ಣಿಯವರ ಬುದ್ಧಿವಂತಿಕೆ, ಚಿಂತನೆಯಿಂದ ಒಪ್ಪಂದ ಕೈಗೂಡಿತು. ಮುಮ್ಮಡಿ ಕೃಷ್ಣರಾಜ ಒಡೆಯರ್‌ ಆಗ ಐದು ವರ್ಷದ ಬಾಲಕನಾಗಿದ್ದರು. ಇವರ ಪರವಾಗಿ ಮಹಾರಾಣಿಯವರು ಮತ್ತು ದಿವಾನ್ ಪೂರ್ಣಯ್ಯನವರು ಆಡಳಿತ ನಡೆಸಬೇಕೆಂದು ಒಪ್ಪಂದವಾಯಿತು. ಆಂತರಿಕ ಆಡಳಿತವನ್ನು ಮಾತ್ರ ಅರಸರು ನಿರ್ವಹಿಸುವುದು, ಉಳಿದ ಎಲ್ಲಾ ಹೊರ ವ್ಯವಹಾರಗಳೂ ಈಸ್ಟ್ ಇಂಡಿಯ ಕಂಪನಿ ಸರ್ಕಾರದವೆಂದು ಒಪ್ಪಂದವಾಯಿತು. ವಾರ್ಷಿಕವಾಗಿ ಕಂಪನಿ ಸರ್ಕಾರಕ್ಕೆ ಏಳು ಲಕ್ಷ ಪಗೋಡಾಗಳನ್ನು ಕಪ್ಪವಾಗಿ ಕೊಡಬೇಕಿತ್ತು. ಅರಮನೆಯ ಅಪಾರ ಐಶ್ವರ್ಯ ಬ್ರಿಟಿಷರ ಪಾಲಾಯಿತು.

ಇದನ್ನೂ ಓದಿ: Modi in Karnataka | ಮೈಸೂರು ಅರಮನೆಯಲ್ಲಿ ಮೋದಿ, ಇಲ್ಲಿವೆ ಸ್ಮರಣೀಯ ಚಿತ್ರಗಳು

ಮುಮ್ಮಡಿ ಕೃಷ್ಣರಾಜ ಒಡೆಯರ ವಿದ್ಯಾಭ್ಯಾಸ ಮತ್ತು ತರಬೇತಿಯನ್ನು ಮಹಾರಾಣಿ ಸಮರ್ಪಕವಾಗಿ ನಿರ್ವಹಿಸಿದರು. ಅವರು 1810ರಲ್ಲಿ ಮರಣಿಸಿದರು. ಪೂರ್ಣಯ್ಯನವರೂ ಕಾಲವಾದರು. ನಂತರ ಮುಮ್ಮಡಿ ಕೃಷ್ಣರಾಜ ಒಡೆಯರು ಹೆಚ್ಚು ಕಾಲ ಅಧಿಕಾರ ನಡೆಸಲು ಬ್ರಿಟಿಷ್ ಆಡಳಿತ ಅವಕಾಶ ಕೊಡಲಿಲ್ಲ. 1931ರಲ್ಲಿ, ಸರಿಯಾಗಿ ಕಪ್ಪ ಕೊಡಲಿಲ್ಲವೆಂಬ ನೆಪದಿಂದ ಆಗಿನ ಗೌರ್ನರ್ ಜನರಲ್ ವಿಲಿಯಂ ಬೆಂಟಿಂಕ್, ಲುಷಿಂಗ್ಟನ್ ಕಬ್ಬನ್ ಎಂಬ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ಇವರ ಮೇಲೆ ನೇಮಿಸಿದ. ನಂತರ 27 ಮಾರ್ಚ್‌ 1868ರವರೆಗೆ, ಅಂದರೆ ಸಾವನ್ನಪ್ಪುವವರೆಗೂ ಒಡೆಯರ್‌ ಬ್ರಿಟಿಷ್‌ ಕಣ್ಗಾವಲಲ್ಲಿ ಆಡಳಿತ ನಡೆಸಿದರು.

ತಮಗಿದ್ದ ಅತ್ಯಂತ ಸೀಮಿತ ಅವಕಾಶದಲ್ಲಿಯೇ ಮುಮ್ಮಡಿ ಕೃಷ್ಣರಾಜರು ಒಳ್ಳೆಯ ಆಡಳಿತ ನಡೆಸಿದರು. ಅವರ ಕಾಲದಲ್ಲಿಯೇ ಮೈಸೂರು ನಗರದಲ್ಲಿ ಸಾರ್ವಜನಿಕ ಉಚಿತ ವೈದ್ಯಶಾಲೆಗಳು ಆರಂಭವಾದವು. ಆಂಗ್ಲ ವಿದ್ಯಾಭ್ಯಾಸಕ್ಕಾಗಿ ಶಾಲೆಗಳು ಆರಂಭವಾದವು. ಶಿವನಸಮುದ್ರದ ಬಳಿ ಕಾವೇರಿ ನದಿಗೆ ಸೇತುವೆ ನಿರ್ಮಾಣವಾಯಿತು. ಸಾಹಿತ್ಯಕ್ಷೇತ್ರಕ್ಕೆ ಅವರ ಸೇವೆ ಗಣನೀಯವಾಗಿತ್ತು. ತತ್ವನಿಧಿ, ಗಣಿತ ಸಂಗ್ರಹ, ಸೌಗಂಧಿಕಾ ಪರಿಣಯ, ಸೂರ್ಯ ಚಂದ್ರವಂಶಾವಳಿ, ಶ್ರೀ ಚಾಮುಂಡಿಕಾ ಲಘು ನಿಘಂಟು, ಕೃಷ್ಣ ಕಥಾ ಸಾರ ಸಂಗ್ರಹ, ಚತುರಂಗ ಸಾರ ಸರ್ವಸ್ವ, ದೇವತಾನಾಮ ಕುಸುಮ ಮಂಜರಿ, ದಶವಿಭಾಗ ಪದಕ, ಮಹಾ ಕೋಶ ಸುಧಾಕರ, ಸಂಖ್ಯರತ್ನ ಕೋಶ, ಸ್ವರ ಚೂಡಾಮಣಿ ಮೊದಲಾದ ಕೃತಿಗಳನ್ನು ಇವರು ರಚಿಸಿದರು. ಹೊಸಗನ್ನಡದ ಮೊದಲ ಗದ್ಯ ಗ್ರಂಥವೆಂದು ಮನ್ನಣೆಗೆ ಪಾತ್ರವಾಗಿರುವ ʻಮುದ್ರಾ ಮಂಜೂಷ’ ಕೃತಿಯ ಕರ್ತೃ ಕೆಂಪುನಾರಾಯಣನು ಮುಮ್ಮಡಿ ಕೃಷ್ಣರಾಜರ ಆಶ್ರಿತನಾಗಿದ್ದನು.

ಇದನ್ನೂ ಓದಿ: ನಾಲ್ವಡಿ ಕೃಷ್ಣರಾಜ ಒಡೆಯರ್‌: ಮರೆಯಲಾಗದ ಮೈಸೂರಿನ ಮಹಾರಾಜ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

India Yamaha: ಬೆಂಗಳೂರಿನಲ್ಲಿ ಇಂಡಿಯಾ ಯಮಹಾ ಮೋಟಾರ್ (ಐವೈಎಂ) ಪ್ರೈ. ಲಿಮಿಟೆಡ್‌ನ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದೆ.ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

Yamaha has opened a new Blue Square outlet in Bengaluru
Koo

ಬೆಂಗಳೂರು: ಇಂಡಿಯಾ ಯಮಹಾ ಮೋಟಾರ್ (India Yamaha Motor Pvt Ltd) ಪ್ರೈ. ಲಿಮಿಟೆಡ್, ಬೆಂಗಳೂರಿನಲ್ಲಿ ಹೊಸ ಅತ್ಯಾಧುನಿಕ “ಬ್ಲೂ ಸ್ಕ್ವೇರ್” ಔಟ್‌ಲೆಟ್ ಅನ್ನು ತೆರೆದಿದೆ. ಬೆಂಗಳೂರು ವರ್ತೂರು ಹೋಬಳಿಯ ಅಂಬಲಿಪುರದಲ್ಲಿ ಮೋಟೋ ವರ್ಲ್ಡ್ ಹೆಸರಿನಲ್ಲಿ ಈ ಹೊಸ ಔಟ್‌ಲೆಟ್ ಅನ್ನು ಪ್ರಾರಂಭಿಸಲಾಗಿದ್ದು, ಈ ಔಟ್‌ಲೆಟ್ 7,100 ಚದರ ಅಡಿಯಷ್ಟು ವಿಶಾಲವಾಗಿದೆ. ಯಮಹಾ ಬ್ಲೂ ಸ್ಕ್ವೇರ್ ಶೋರೂಮ್‌ಗಳನ್ನು ಗ್ರಾಹಕರಿಗೆ ವೈಯಕ್ತೀಕರಿಸಿದ ವಿಧಾನದಲ್ಲಿ ಅತ್ಯುತ್ತಮ ಮಾರಾಟ, ಸರ್ವೀಸ್ ಮತ್ತು ನೆರವನ್ನು ನೀಡುವ ಮೂಲಕ ಉತ್ತಮ ಅನುಭವವನ್ನು ನೀಡುವಂತೆ ವಿನ್ಯಾಸಗೊಳಿಸಲಾಗಿದೆ.

ಈ ಬ್ಲೂ ಸ್ಕ್ವೇರ್ ಔಟ್‌ಲೆಟ್ ಯಮಹಾ ಬ್ರ್ಯಾಂಡ್‌ನ ಹುಮ್ಮಸ್ಸನ್ನು ದಾಟಿಸುತ್ತದೆ ಮತ್ತು ಗ್ರಾಹಕರಿಗೆ ಸಂಪೂರ್ಣ ಸೇವೆಯನ್ನು ಒದಗಿಸುವಂತೆ ವಿನ್ಯಾಸಗೊಂಡಿದೆ. ವೈಯಕ್ತೀಕರಿಸಿದ ವಿಧಾನದ ಮೂಲಕ ಗ್ರಾಹಕರಿಗೆ ಸೇವೆ ಒದಗಿಸಲಾಗುತ್ತಿದ್ದು, ಪ್ರತಿಯೊಬ್ಬ ಗ್ರಾಹಕರು ತೃಪ್ತಿಕರ ಸೇವೆ ಪಡೆಯಲಿದ್ದಾರೆ. ಈ ವಿಶೇಷವಾದ ಔಟ್‌ಲೆಟ್‌ಗಳನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಅನುವು ಮಾಡಿಕೊಟ್ಟಿರುವ ಬ್ರ್ಯಾಂಡ್ ಗ್ರಾಹಕರಿಗೆ ಯಮಹಾ ರೇಸಿಂಗ್ ಜಗತ್ತಿಗೆ ಪ್ರವೇಶಿಸುವ ಅವಕಾಶವನ್ನೂ ನೀಡುತ್ತಿದೆ.

ಇದನ್ನೂ ಓದಿ: Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

ಈ ಪ್ರೀಮಿಯಂ ಔಟ್‌ಲೆಟ್‌ಗಳ ಪ್ರತಿಯೊಂದು ವಿಭಾಗವನ್ನೂ ಅಂತರರಾಷ್ಟ್ರೀಯ ಮೋಟಾರ್‌ ಸ್ಪೋರ್ಟ್‌ಗಳಲ್ಲಿ ತೊಡಗಿಸಿಕೊಂಡಿರುವ ಜಾಗತಿಕ ಬ್ರ್ಯಾಂಡ್‌ ಆದ ಯಮಹಾ ಜತೆಗೆ ಸಂಬಂಧ ಹೊಂದುವ ಹೆಮ್ಮೆಯ ಭಾವವನ್ನು ಮೂಡಿಸುವಂತೆ ಚಿಂತನಶೀಲವಾಗಿ ರಚಿಸಲಾಗಿದೆ. ಯಮಹಾ, ಬ್ರ್ಯಾಂಡ್‌ನ ಹೆಮ್ಮೆಯ ರೇಸಿಂಗ್ ಪರಂಪರೆಯನ್ನು ಪ್ರತಿನಿಧಿಸುವ “ಬ್ಲೂ (ನೀಲಿ)” ಬಣ್ಣ ಮತ್ತು ಗ್ರಾಹಕರು ಯಮಹಾದ ಹರ್ಷದಾಯಕ ಮತ್ತು ಸೊಗಸಾದ ಶ್ರೇಣಿಯ ದ್ವಿಚಕ್ರ ವಾಹನಗಳೊಂದಿಗೆ ಸಂಪರ್ಕ ಸಾಧಿಸಲು ರಚಿಸಲಾದ ಪ್ಲಾಟ್‌ಫಾರ್ಮ್ ಅನ್ನು ಸಂಕೇತಿಸುವ “ಸ್ಕ್ವೇರ್” ಸಂಯೋಜನೆಯ ಮೂಲಕ ಗ್ರಾಹಕರೊಂದಿಗೆ ಉತ್ತಮ ಸಂಪರ್ಕವನ್ನು ಸಾಧಿಸಿದೆ.

ಉದ್ಯಮ-ಪ್ರಧಾನ ಅನುಭವವನ್ನು ಒದಗಿಸುವುದರ ಜತೆಗೆ, ಈ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಬ್ಲೂ ಸ್ಟ್ರೀಕ್ಸ್ ರೈಡರ್‌ಗಳಿಗೆ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ಯಮಹಾದ ವಿಶೇಷ ಬೈಕರ್ ಸಮುದಾಯದ ಸವಾರರು ಇತರ ಸವಾರರನ್ನು ಭೇಟಿ ಮಾಡಲು ಮತ್ತು ಸಂವಹನ ನಡೆಸಲು ಅನುವು ಮಾಡಿಕೊಡುತ್ತದೆ. ಹೊಸ ಔಟ್‌ಲೆಟ್ ಸೇರಿದಂತೆ ಈಗ ಕರ್ನಾಟಕ ಮಾರುಕಟ್ಟೆಯಲ್ಲಿ ಯಮಹಾ 23 ಎಕ್ಸ್‌ಕ್ಲೂಸಿವ್ ಬ್ಲೂ ಸ್ಕ್ವೇರ್ ಶೋ ರೂಂಗಳನ್ನು ಹೊಂದಿದೆ.

ಯಮಹಾದ ಸೂಪರ್‌ಸ್ಪೋರ್ಟ್ ಆರ್3 (321ಸಿಸಿ), ಟಾರ್ಕ್-ರಿಚ್ ಎಂಟಿ -03 (321 ಸಿಸಿ) ಮತ್ತು ಮ್ಯಾಕ್ಸಿ-ಸ್ಪೋರ್ಟ್ಸ್ ಏರಾಕ್ಸ್(155 ಸಿಸಿ) ಮತ್ತು ಏರಾಕ್ಸ್ ವರ್ಷನ್ ಎಸ್ (155 ಸಿಸಿ)ಗಳನ್ನು ಬ್ಲೂ ಸ್ಕ್ವೇರ್ ಶೋರೂಮ್‌ಗಳ ಮೂಲಕ ವಿಶೇಷವಾಗಿ ಮಾರಾಟ ಮಾಡಲಾಗುತ್ತದೆ. ಈ ಪ್ರೀಮಿಯಂ ಔಟ್‌ಲೆಟ್‌ಗಳು ವೈಝಡ್‌ಎಫ್‌-ಆರ್‌15 ಎಂ (155 ಸಿಸಿ), ವೈಝಡ್‌ಎಫ್‌-ಆರ್‌15 ವಿ4 (155ಸಿಸಿ), ವೈಝಡ್‌ಎಫ್‌-ಆರ್‌15ಎಸ್ ವಿ3 (155 ಸಿಸಿ), ಎಂಟಿ-15 ವಿ2 (155 ಸಿಸಿ), ಬ್ಲೂ ಕೋರ್ ತಂತ್ರಜ್ಞಾನ ಆಧರಿತ ಮಾಡೆಲ್ ಗಳಾದ ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 4.0 (149 ಸಿಸಿ), ಎಫ್‌ಝಡ್‌ಎಸ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಫ್‌ಐ ವರ್ಷನ್ 3.0 (149 ಸಿಸಿ), ಎಫ್‌ಝಡ್‌-ಎಕ್ಸ್ (149 ಸಿಸಿ), ಮತ್ತು ಸ್ಕೂಟರ್ ಗಳಾದ ಫ್ಯಾಸಿನೋ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ 125 ಎಫ್ಐ ಹೈಬ್ರಿಡ್ (125 ಸಿಸಿ), ರೇ ಝಡ್ಆರ್ ಸ್ಟ್ರೀಟ್ ರಾಲಿ 125 ಎಫ್ಐ ಹೈಬ್ರಿಡ್ (125 ಸಿಸಿ) ಮುಂತಾದ ನವೀಕರಿಸಿದ ಲೈನ್-ಅಪ್‌ಗಳನ್ನು ಪ್ರದರ್ಶಿಸಲಾಗುತ್ತದೆ.

ಇದನ್ನೂ ಓದಿ: Vastu Tips: ನೆಲ ಒರೆಸುವಾಗಲೂ ವಾಸ್ತು ನಿಯಮ ಪಾಲಿಸಲೇಬೇಕು!

ಹೆಚ್ಚು ಸಮಗ್ರವಾದ ಅನುಭವವನ್ನು ಒದಗಿಸುವ ಭರವಸೆಯನ್ನು ನೀಡುತ್ತಾ, ಈ ಪ್ರೀಮಿಯಂ ಬ್ಲೂ ಸ್ಕ್ವೇರ್ ಔಟ್‌ಲೆಟ್‌ಗಳು ಯಮಹಾದ ನಿಜವಾದ ಆ್ಯಕ್ಸೆಸರೀಸ್‌ಗಳು, ಅಧಿಕೃತ ಉಡುಪುಗಳು ಮತ್ತು ಯಮಹಾ ನಿಜವಾದ ಬಿಡಿಭಾಗಗಳನ್ನು ಗ್ರಾಹಕರಿಗೆ ಪ್ರದರ್ಶನ ಮತ್ತು ಮಾರಾಟ ಮಾಡುತ್ತವೆ.

Continue Reading

ಕರ್ನಾಟಕ

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Neha Hiremath: ನೇಹಾ ಹಿರೇಮಠ ಅವರು ಬೆಂಗಳೂರಿನ ಬೇಗೂರು ರೋಡ್‌, ಹೊಂಗಸಂದ್ರದ ವಾರ್ಡ್‌ ನಂಬರ್‌ 135ರಲ್ಲಿ ವಾಸವಿರುವುದಾಗಿ ವಿಳಾಸ ನೀಡಿ, ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವುದು ಮತ್ತೊಂದು ಚರ್ಚೆಯ ವಿಷಯವಾಗಿದೆ. ಇವರು ಎಸ್‌ಸಿ ಪ್ರಮಾಣಪತ್ರ ಪಡೆದಿರುವುದಕ್ಕೆ ಹಲವು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

VISTARANEWS.COM


on

Neha Hiremath
Koo

ಬೆಂಗಳೂರು: ದೇಶಾದ್ಯಂತ ಸುದ್ದಿಯಾಗಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ (Neha Murder Case) ಹೊಸ ಟ್ವಿಸ್ಟ್‌ ಸಿಕ್ಕಿದೆ. ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ, ಲಿಂಗಾಯತ ಸಮುದಾಯದ ನೇಹಾ ಹಿರೇಮಠ ಅವರು ಪಡೆದಿರುವ ಪರಿಶಿಷ್ಟ ಜಾತಿ ಪ್ರಮಾಣಪತ್ರವೀಗ (Caste Certificate) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಲಿಂಗಾಯತ ಸಮುದಾಯದ ನಿರಂಜನ ಹಿರೇಮಠ ಅವರ ಪುತ್ರಿಯಾದ ನೇಹಾ ಹಿರೇಮಠ ಅವರು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಏ.18 ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ ಹಿರಮೇಠ ಪುತ್ರಿ ನೇಹಾ ಕೊಲೆ ನಡೆದಿತ್ತು. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಫಯಾಜ್‌ ಎಂಬಾತನನ್ನು ಬಂಧಿಸಲಾಗಿದ್ದು, ಇದು ಲವ್‌ ಜಿಹಾದ್‌ ಎಂಬ ಆರೋಪಗಳೂ ಕೇಳಿಬಂದಿದ್ದವು. ನೇಹಾಳನ್ನು ಕೊಂದಿದ್ದ ಆರೋಪಿ ಫಯಾಜ್‌ನನ್ನು ಸಿಐಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಫಯಾಜ್ ತಂದೆ-ತಾಯಿ ಸೇರಿ 10 ಕ್ಕೂ ಹೆಚ್ಚು ಜನರ ವಿಚಾರಣೆ ಮಾಡಲಾಗಿದೆ. ಇದರ ಬೆನ್ನಲ್ಲೇ, ನೇಹಾ ಹಿರೇಮಠ ಜಾತಿ ಪ್ರಮಾಣಪತ್ರವು ವೈರಲ್‌ ಆಗಿದೆ.

Neha Murder Case

ಬೆಂಗಳೂರು ವಿಳಾಸ ನೀಡಿದ್ದೇಕೆ?

ನೇಹಾ ಹಿರೇಮಠ ಅವರು ಬೆಂಗಳೂರಿನ ಬೇಗೂರು ರೋಡ್‌, ಹೊಂಗಸಂದ್ರದ ವಾರ್ಡ್‌ ನಂಬರ್‌ 135ರಲ್ಲಿ ವಾಸವಿರುವುದಾಗಿ ವಿಳಾಸ ನೀಡಿ, ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿರುವುದು ಮತ್ತೊಂದು ಚರ್ಚೆಯ ವಿಷಯವಾಗಿದೆ. ಮೊದಲಿಗೆ ನೇಹಾ ಹಿರೇಮಠ ಅವರು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿದ್ದೇಕೆ? ಹುಬ್ಬಳ್ಳಿಯವರಾದ ಅವರು ಅದಕ್ಕೆ, ಬೆಂಗಳೂರು ವಿಳಾಸ ನೀಡಿದ್ದೇಕೆ? ನೇಹಾ ಹಿರೇಮಠ ಅವರು ಇದ್ದಿದ್ದು ಬೆಂಗಳೂರಿನಲ್ಲಾ? ಅಥವಾ ಹುಬ್ಬಳ್ಳಿಯಲ್ಲಾ ಎಂಬುದು ಸೇರಿ ಹಲವು ಪ್ರಶ್ನೆಗಳು ಮಾಡಿವೆ.

ಸಮತಾ ಸೇನೆ ಆಕ್ರೋಶ

ನೇಹಾ ಹಿರೇಮಠ ಅವರು ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿರುವುದಕ್ಕೆ ಹುಬ್ಬಳ್ಳಿಯಲ್ಲಿ ಸಮತಾ ಸೇನೆಯು ಆಕ್ರೋಶ ವ್ಯಕ್ತಪಡಿಸಿದೆ. “ಹುಬ್ಬಳ್ಳಿ ನಿವಾಸಿಯಾದ ನೇಹಾ ಹಿರೇಮಠ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಅಲ್ಲದೆ, ಅವರು ಬೆಂಗಳೂರು ವಿಳಾಸ ನೀಡಿ ಬೇಡ ಜಂಗಮ ಜಾತಿ ಪ್ರಮಾಣಪತ್ರ ಪಡೆದಿದ್ದಾರೆ. ಇದು ಪರಿಶಿಷ್ಟರ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ” ಎಂದು ಸಂಘಟನೆಯು ದೂರಿದೆ. ಅಷ್ಟೇ ಅಲ್ಲ, ಅವರ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸುವಂತೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವನ್ನು ಆಗ್ರಹಿಸಿದೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Continue Reading

ಧಾರ್ಮಿಕ

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Koppala News: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ಮಹಾರಥೋತ್ಸವವು ಶುಕ್ರವಾರ ಅಪಾರ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Huligemma Devi Maharathotsava in Hulagi
Koo

ಕೊಪ್ಪಳ: ತಾಲೂಕಿನ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಅಪಾರ ಭಕ್ತಸಾಗರದ ನಡುವೆ ಮಹಾರಥೋತ್ಸವವು ವಿಜೃಂಭಣೆಯಿಂದ (Koppala News) ಜರುಗಿತು.

ಇದನ್ನೂ ಓದಿ: Old Students Association: ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ವಾಟ್ಸ್‌ಆ್ಯಪ್‌ ಗ್ರೂಪ್ ರಚಿಸಲು ಆದೇಶ

ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಹುಲಗಿಯ ಶ್ರೀ ಹುಲಿಗೆಮ್ಮ ದೇವಿಯ ಪ್ರಸಕ್ತ ಸಾಲಿನ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರದಿಂದ ಜೂನ್ 3 ರ ಸೋಮವಾರದವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಶುಕ್ರವಾರ ಸಂಜೆ ಮಹಾರಥೋತ್ಸವವು ಲಕ್ಷಾಂತರ ಭಕ್ತಾಧಿಗಳ ಸಮೂಹದ ನಡುವೆ ಅದ್ದೂರಿಯಾಗಿ ನಡೆಯಿತು.

ಸುಮಾರು 5 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಭಾಗಿ

ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವದಲ್ಲಿ ಭಕ್ತರ ಉಧೋ ಉಧೋ ಘೋಷಣೆ ಮುಗಿಲು ಮುಟ್ಟಿತ್ತು. ಭಕ್ತವೃಂದ ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಸಮರ್ಪಿಸಿ, ಭಕ್ತಿ ಭಾವ ಮೆರೆದರು. ಕರ್ನಾಟಕದ ವಿವಿಧ ಜಿಲ್ಲೆಗಳ ಮತ್ತು ಆಂಧ್ರಪ್ರದೇಶದ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಇತರೆ ರಾಜ್ಯಗಳ ಸುಮಾರು ಐದು ಲಕ್ಷಕ್ಕೂ ಅಧಿಕ ಭಕ್ತಾದಿಗಳು ಜಾತ್ರೆಗೆ ಆಗಮಿಸಿ, ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು.

ರಥೋತ್ಸವ ಸಂದರ್ಭದಲ್ಲಿ ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಹುಲಿಗೆಮ್ಮ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ್ ಸುತಗುಂಡಿ ಹಾಗೂ ಕೊಪ್ಪಳ ಮತ್ತು ಗಂಗಾವತಿ ಡಿವೈಎಸ್ಪಿಗಳು ಹಾಗೂ ಇತರರು ಉಪಸ್ಥಿತರಿದ್ದರು

Continue Reading
Advertisement
Cardamom Benefits
ಆರೋಗ್ಯ28 mins ago

Cardamom Benefits: ಏಲಕ್ಕಿ ಕೇವಲ ಘಮದಲ್ಲಷ್ಟೇ ಅಲ್ಲ, ಇದರ ಪ್ರಯೋಜನಗಳು ಎಷ್ಟೊಂದು!

Karnataka Weather Forecast
ಮಳೆ58 mins ago

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Healthy Salad Tips
ಆಹಾರ/ಅಡುಗೆ1 hour ago

Healthy Salad Tips: ನೀವು ಸಲಾಡ್‌ ಪ್ರಿಯರೇ? ಸಲಾಡ್‌ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ!

Lok Sabha Election
ದೇಶ2 hours ago

Lok Sabha Election: ಇಂದು ಕೊನೇ ಹಂತದ ಮತದಾನ; ಸಂಜೆ ಎಕ್ಸಿಟ್‌ ಪೋಲ್, ಇಂದೇ ತಿಳಿಯಲಿದೆ ಭವಿಷ್ಯ!

Dina Bhavishya
ಭವಿಷ್ಯ2 hours ago

Dina Bhavishya : ತಿಂಗಳ ಮೊದಲ ದಿನವೇ ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರಿಗೆ ಕಿರಿಕಿರಿ ಅನುಭವ

Anti Islam Rally
ವಿದೇಶ7 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ8 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು9 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ9 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ10 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌