Air Pollution: ಕಲುಷಿತ ನಗರ; ದೆಹಲಿ ಜತೆಗೆ ಭಾರತದ ಇನ್ನೆರಡು ಸ್ಥಳಗಳು! - Vistara News

ದೇಶ

Air Pollution: ಕಲುಷಿತ ನಗರ; ದೆಹಲಿ ಜತೆಗೆ ಭಾರತದ ಇನ್ನೆರಡು ಸ್ಥಳಗಳು!

Air Pollution: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಪ್ರಮಾಣವು ಜಾಸ್ತಿಯಾಗುತ್ತಿದ್ದು, ಮಕ್ಕಳು, ಹಿರಿಯರು ಸೇರಿ ಜನ ಉಸಿರಾಡಲು ಕೂಡ ಪರದಾಡುವಂತಾಗಿದೆ. ಇತ್ತ ಭಾರತದ ಇತರ ಎರಡು ನಗರಗಳು ಕೂಡ ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

VISTARANEWS.COM


on

delhi pollution
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಪ್ರಮಾಣವು (Air Pollution) ದಿನೇದಿನೆ ಜಾಸ್ತಿಯಾಗುತ್ತಿದ್ದು, ಮಕ್ಕಳು, ಹಿರಿಯರು ಸೇರಿ ಜನ ಉಸಿರಾಡಲು ಕೂಡ ಪರದಾಡುವಂತಾಗಿದೆ. ಇತ್ತ ಭಾರತದ ಇತರ ಎರಡು ನಗರಗಳು ಕೂಡ ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಆತಂಕ ಮೂಡಿಸಿದೆ. ಸ್ವಿಸ್ ಗ್ರೂಪ್ ಐಕ್ಯೂ ಎಐಆರ್ (IQAir)​​ ಪ್ರಕಾರ ಕಲುಷಿತ ನಗರಗಳ ಪೈಕಿ ವಿಶ್ವದಲ್ಲೇ ದೆಹಲಿ ನಂ. 1 ಸ್ಥಾನದಲ್ಲಿದ್ದು, ಕೋಲ್ಕತ್ತಾ ಮತ್ತು ಮುಂಬೈ ಸಹ ಹೆಚ್ಚು ವಾಯುಮಾಲಿನ್ಯ ಎದುರಿಸುತ್ತಿರುವ ಭಾರತೀಯ ನಗರಗಳಾಗಿವೆ. ಈ ಮೂರು ನಗರಗಳು ಟಾಪ್‌ 10ರಲ್ಲಿ ಸ್ಥಾನ ಪಡೆದಿವೆ.

ಭಾನುವಾರ ಬೆಳಗಿನ ಲೆಕ್ಕಾಚಾರದ ಪ್ರಕಾರ ಐಕ್ಯೂ ಎಐಆರ್ ಪಟ್ಟಿಯಲ್ಲಿ ದೆಹಲಿ 483 ಅಂಕ ದಾಖಲಿಸಿ ಅಗ್ರಸ್ಥಾನದಲ್ಲಿದೆ. ಪಾಕಿಸ್ತಾನದ ಲಾಹೋರ್ 371 ಅಂಕಗಳೊಂದಿಗೆ ನಂತರದ ಸ್ಥಾನದಲ್ಲಿದೆ. ಕೋಲ್ಕತ್ತಾ ಮತ್ತು ಮುಂಬೈ 206 ಮತ್ತು 162 ಅಂಕ ಪಡೆದಿವೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಅಂಕಿಅಂಶಗಳ ಪ್ರಕಾರ, ದೆಹಲಿ-ಎನ್‌ಸಿಆರ್‌ನಲ್ಲಿ ಭಾನುವಾರ ‘ತೀವ್ರ’ ವರ್ಗದ ವಾಯುಮಾಲಿನ್ಯ ಮತ್ತು ವಿಷಕಾರಿ ಮಬ್ಬು, ದಟ್ಟವಾದ ಹೊದಿಕೆ ಆವರಿಸಿಕೊಂಡಿತ್ತು. ಹೆಚ್ಚಿನ ಸ್ಥಳಗಳಲ್ಲಿ ಐಕ್ಯೂ ಎಐಆರ್ 400ಕ್ಕಿಂತ ಹೆಚ್ಚಾಗಿತ್ತು.

ಐಕ್ಯೂ ಎಐಆರ್ ಲೆಕ್ಕಾಚಾರ

ಸಿಪಿಸಿಬಿ ಪ್ರಕಾರ ಐಕ್ಯೂ ಎಐಆರ್ 0-50ರ ಪ್ರಮಾಣದಲ್ಲಿದ್ದರೆ ಕನಿಷ್ಠ ಪರಿಣಾಮದೊಂದಿಗೆ ‘ಉತ್ತಮ’ ಎಂದು ಪರಿಗಣಿಸಲಾಗುತ್ತದೆ. 51-100 ಸೂಕ್ಷ್ಮ ಜನರಿಗೆ ಸಣ್ಣ ಉಸಿರಾಟದ ಅಸ್ವಸ್ಥತೆಯೊಂದಿಗೆ ‘ತೃಪ್ತಿಕರ’ ವರ್ಗವಾಗಿದೆ, 101-200 ಶ್ವಾಸಕೋಶ, ಅಸ್ತಮಾ ಮತ್ತು ಹೃದ್ರೋಗ ಹೊಂದಿರುವ ಜನರಿಗೆ ಉಸಿರಾಟದ ಅಸ್ವಸ್ಥತೆಗೆ ಕಾರಣವಾಗುವ ‘ಮಧ್ಯಮ’ ವರ್ಗ ಎಂದು ಗುರುತಿಸಲಾಗಿದೆ, 201-300 ದೀರ್ಘಕಾಲದವರೆಗೆ ಉಸಿರಾಟದ ತೊಂದರೆ ಅನುಭವಿಸುವ ಸಾಧ್ಯತೆಗಳ ‘ಕಳಪೆ’ ವರ್ಗವಾಗಿದೆ. 301-400 ʼಅತ್ಯಂತ ಕಳಪೆ’ ವರ್ಗವಾಗಿದ್ದು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: Delhi Air Pollution: ದೆಹಲಿ ವಾಯುಮಾಲಿನ್ಯ; ಶಾಲೆಗಳಿಗೆ ರಜೆ ಘೋಷಿಸಿದ ಸರ್ಕಾರ!

ಕಾರಣವೇನು?

ಕಡಿಮೆ ತಾಪಮಾನ, ಗಾಳಿಯ ಕೊರತೆ, ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ, ಕಸ ಸುಡುವುದು ಮುಂತಾದ ಕಾರಣಗಳಿಂದ ಗಾಳಿ ಕಲುಷಿತವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಸದ್ಯದಲ್ಲೇ ದೀಪಾವಳಿ ಹಬ್ಬ ಬರುವುದರಿಂದ ಪಟಾಕಿ ಬಳಕೆ ಹೆಚ್ಚಲಿದ್ದು, ಈ ಬಗ್ಗೆಯೂ ಆತಂಕ ಮೂಡಿದೆ.

ಶಾಲೆಗಳಿಗೆ ರಜೆ ಘೋಷಣೆ

ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣವು ಹೆಚ್ಚಾದ ಕಾರಣ ಸರ್ಕಾರವು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು 5ನೇ ತರಗತಿವರೆಗಿನ ಶಾಲೆಗಳಿಗೆ ನವೆಂಬರ್‌ 10ರವರೆಗೆ ರಜೆ ಘೋಷಿಸಿದೆ. ಹಾಗೆಯೇ, 6ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಿಕ್ಷಕರು ಆನ್‌ಲೈನ್ ಕ್ಲಾಸ್‌ ತೆಗೆದುಕೊಳ್ಳಲು ಸೂಚಿಸಿದೆ. ವಾಯುಮಾಲಿನ್ಯದ ಹಿನ್ನೆಲೆಯಲ್ಲಿ ನವೆಂಬರ್‌ 5ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದರೂ, ಮಾಲಿನ್ಯ ಪ್ರಮಾಣವು ಜಾಸ್ತಿಯೇ ಆಗುತ್ತಿರುವುದರಿಂದ ರಜೆಯನ್ನು ವಿಸ್ತರಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಉಸಿರಾಟದ ಸಮಸ್ಯೆ, ಕಣ್ಣಿನ ಸಮಸ್ಯೆಗಳು ಉಲ್ಬಣಿಸುತ್ತಿವೆ ಎಂದು ವೈದ್ಯರು ತಿಳಿಸಿದ್ದಾರೆ. ವಾಯುಮಾಲಿನ್ಯ ಪ್ರಮಾಣ ಜಾಸ್ತಿಯೇ ಆಗುತ್ತಿರುವುದರಿಂದ ಜನರು ಆತಂಕದಲ್ಲಿಯೇ ಕಾಲ ಕಳೆಯುವಂತಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Special Status: ಎನ್‌ಡಿಎಗೆ ಮೈತ್ರಿಗೆ ಮೊದಲ ಅಗ್ನಿ ಪರೀಕ್ಷೆ; ವಿಶೇಷ ಸ್ಥಾನಮಾನಕ್ಕೆ ಜೆಡಿಯು ನಿರ್ಣಯ

Special Status: ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ಮುಖಂಡರು ಬಿಹಾರದ ಆರ್ಥಿಕ ಮತ್ತು ಅಭಿವೃದ್ಧಿ ಕೊರತೆಗಳನ್ನು ಉಲ್ಲೇಖಿಸಿದ್ದು, ವಿಶೇಷ ಸ್ಥಾನಮಾನ ನೀಡಬೇಕು ಎಂಬ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ಅಗತ್ಯವನ್ನು ಪ್ರತಿಪಾದಿಸಿದೆ. ಬಿಹಾರ ಸಂಪುಟದಲ್ಲಿ ಕಳೆದ ವರ್ಷ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ನಿರ್ಣಯ ಅಂಗೀಕರಿಸಲಾಗಿತ್ತು.

VISTARANEWS.COM


on

Special Status
Koo

ಪಾಟ್ನಾ: ಈ ಬಾರಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ(NDA Government) ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜೆಡಿಯು(JDU) ಇದೀಗ ಕೇಂದ್ರ ಸರ್ಕಾರದ ಎದುರು ತನ್ನ ದಶಕದ ಬೇಡಿಕೆಯನ್ನಿಡಲು ಶತ ಪ್ರಯತ್ನ ಮಾಡುತ್ತಿದೆ. ಇದರ ಭಾಗವಾಗಿ ಇಂದು ನಡೆದ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ದಶಕದ ಬೇಡಿಕೆಯಾಗಿರುವ ಬಿಹಾರಕ್ಕೆ ವಿಶೇಷ ಸ್ಥಾನಮಾನದ(Special Status) ನಿರ್ಣಯವನ್ನು ಅಂಗೀಕಾರ ಮಾಡಲಾಗಿದೆ.

ಸಭೆಯಲ್ಲಿ, ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರನ್ನು ಜೆಡಿಯುನ ಹೊಸ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಅಲ್ಲದೆ ಜೆಡಿಯು ಎನ್‌ಡಿಎನಲ್ಲಿಯೇ ಉಳಿಯಲು ನಿರ್ಧರಿಸಲಾಯಿತು. NEET-UG ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪೇಪರ್ ಸೋರಿಕೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು ಎಂಬ ಬೇಡಿಕೆಯನ್ನು ಜೆಡಿಯು ನಾಯಕರು ಮುಂದಿಟ್ಟರು.

ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದ ಮುಖಂಡರು ಬಿಹಾರದ ಆರ್ಥಿಕ ಮತ್ತು ಅಭಿವೃದ್ಧಿ ಕೊರತೆಗಳನ್ನು ಉಲ್ಲೇಖಿಸಿದ್ದು, ವಿಶೇಷ ಸ್ಥಾನಮಾನ ನೀಡಬೇಕು ಎಂಬ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ಅಗತ್ಯವನ್ನು ಪ್ರತಿಪಾದಿಸಿದೆ. ಬಿಹಾರ ಸಂಪುಟದಲ್ಲಿ ಕಳೆದ ವರ್ಷ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ನಿರ್ಣಯ ಅಂಗೀಕರಿಸಲಾಗಿತ್ತು.

ಕಾರ್ಯಾಧ್ಯಕ್ಷರಾಗಿ ನೇಮಕವಾದ ನಂತರ ಮಾತನಾಡಿರುವ ಝಾ, ಪ್ರಧಾನಿ ನರೇಂದ್ರ ಮೋದಿ ಯಾವಾಗಲೂ ಬಿಹಾರದತ್ತ ಹೆಚ್ಚು ಗಮನ ಹರಿಸುತ್ತಾರೆ. ರಾಜ್ಯಕ್ಕೆ ವಿಶೇಷ ವರ್ಗದ ಸ್ಥಾನಮಾನ ಅಥವಾ ಪ್ಯಾಕೇಜ್‌ಗಾಗಿ ಪಕ್ಷದ ಬೇಡಿಕೆಯನ್ನು ಈಡೇರಿಸುತ್ತಾರೆ ಎಂಬ ಭರವಸೆ ಇದೆ. ಜೆಡಿಯು ಯಾವಾಗಲೂ ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವುದಾಗಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಸಂಜಯ್‌ ಝಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಾವು ವಿಶೇಷ ಸ್ಥಾನಮಾನ ಮತ್ತು ಆರ್ಥಿಕ ಪ್ಯಾಕೇಜ್‌ಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ.

ಬಿಜೆಪಿ ಕಗ್ಗಂಟು

ಜೆಡಿಯುನ ಈ ಬೇಡಿಕೆ ಬಿಜೆಪಿಗೆ ಭಾರೀ ಕಗ್ಗಂಟಾಗಿ ಪರಿಣಮಿಸಲಿದೆ. ಒಂದು ವೇಳೆ ಬಿಹಾರದ ಈ ಬೇಡಿಕೆಯನ್ನು ಈಡೇರಿಸಿದರೂ, ಮತ್ತೊಂದೆಡೆ ಎನ್‌ಡಿಎಗೆ ಅನಿವಾರ್ಯವಾಗಿರುವ ಆಂಧ್ರ ಪ್ರದೇಶದ ತೆಲುಗು ದೇಶಂ ಪಕ್ಷದ ಬೆಂಬಲ ಉಳಿಸಿಕೊಳ್ಳಲು ಅದರ ಬೇಡಿಕೆಯನ್ನು ಕೂಡ ಈಡೇರಿಸಬೇಕಾಗುತ್ತದೆ. ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಕೂಡ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಇರಿಸಿದ್ದಾರೆ.

ಬಿಹಾರ ಸರ್ಕಾರ ಕಳೆದ ವರ್ಷ ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ ಶೇ. 65ಕ್ಕೆ ಹೆಚ್ಚಿಸಿತ್ತು. ಸರ್ಕಾರದ ಈ ಆದೇಶವನ್ನು ಪಾಟ್ನಾ ಹೈಕೋರ್ಟ್ (Patna High Court)​ ರದ್ದುಗೊಳಿಸಿದೆ. ರಾಜ್ಯವ್ಯಾಪಿ ಜಾತಿ ಸಮೀಕ್ಷೆ ನಡೆಸಿ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಪ್ರಮಾಣವನ್ನು ಕಳೆದ ವರ್ಷ ಹೆಚ್ಚಿಸಲಾಗಿತ್ತು. ರಾಜ್ಯ ಸರ್ಕಾರದ ಈ ಕ್ರಮವು ಸುಪ್ರೀಂ ಕೋರ್ಟ್ ಆದೇಶಿಸಿದ ಮೀಸಲಾತಿಯ ಶೇ. 50 ರ ಮಿತಿಯನ್ನು ಮೀರಿದೆ. ಹೀಗಾಗಿ ಪಾಟ್ನಾ ಹೈಕೋರ್ಟ್‌ ಇದನ್ನು ಸಂವಿಧಾನ ಬಾಹಿರ ಎಂದು ಕರೆದಿದೆ.

2023ರ ನವೆಂಬರ್‌ನಲ್ಲಿ ನಿತೀಶ್ ಕುಮಾರ್ ನೇತೃತ್ವ ಸರ್ಕಾರ ಜಾರಿಗೆ ತಂದ ಕಾನೂನನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ನೇತೃತ್ವದ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಬಿಹಾರ ವಿಧಾನಸಭೆ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿದ ಕೆಲವು ದಿನಗಳ ನಂತರ, ನಿತೀಶ್ ಕುಮಾರ್ ಸರ್ಕಾರವು ರಾಜ್ಯ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಮಿತಿಯನ್ನು ಶೇ. 50ರಿಂದ ಶೇ. 65 ಕ್ಕ ಹೆಚ್ಚಿಸಲು ಗೆಜೆಟ್ ಅಧಿಸೂಚನೆಗಳನ್ನು ಹೊರಡಿಸಿತ್ತು.

ಇದನ್ನೂ ಓದಿ: Bulldozer: ‌ಉತ್ತರ ಪ್ರದೇಶದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ರಸ್ತೆಯಲ್ಲಿ ಗುಂಡು ಹಾರಿಸಿದವರ ಹೋಟೆಲ್ ಧ್ವಂಸ!

Continue Reading

ಪ್ರಮುಖ ಸುದ್ದಿ

Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Arvind Kejriwal: ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

VISTARANEWS.COM


on

Arvind Kejriwal
Koo

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರನ್ನು ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿ ದೆಹಲಿ ಅವೆನ್ಯೂ ಕೋರ್ಟ್‌ (Dehli avenue Court) ಆದೇಶ ನೀಡಿದೆ. ಸಿಬಿಐ ನಡೆಸುತ್ತಿರುವ ದೆಹಲಿ ಮದ್ಯ ನೀತಿ (Delhi Excise policy) ಪ್ರಕರಣದಲ್ಲಿ, ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಲಾಗಿತ್ತು.

ತನಿಖೆ ಮತ್ತು ಮುಕ್ತ ನ್ಯಾಯಾಂಗ ಪ್ರಕ್ರಿಯೆಯ ದೃಷ್ಟಿಯಿಂದ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ಪಡೆಯುವುದು ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ಮೂರು ದಿನಗಳ ಸಿಬಿಐ ಕಸ್ಟಡಿ ಅಂತ್ಯಗೊಂಡ ನಂತರ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆದೇಶವನ್ನು ವಿಶೇಷ ನ್ಯಾಯಾಧೀಶ ಸುನೇನಾ ಶರ್ಮಾ ಕಾಯ್ದಿರಿಸಿದ್ದರು. ಕೇಜ್ರಿವಾಲ್ ತನಿಖೆಗೆ ಸಹಕಾರ ನೀಡುತ್ತಿಲ್ಲ, ಸರಿಯಾದ ಉತ್ತರಗಳನ್ನು ಕೊಡುತ್ತಿಲ್ಲ ಎಂದು ಸಿಬಿಐ ರಿಮಾಂಡ್ ಅರ್ಜಿಯಲ್ಲಿ ಆರೋಪಿಸಿದೆ.

2021-22 ರ ದೆಹಲಿಯ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭದ ಪ್ರಮಾಣವನ್ನು ಶೇಕಡಾ 5 ರಿಂದ 12 ಕ್ಕೆ ಹೆಚ್ಚಿಸಿರುವ ಬಗ್ಗೆ ಯಾವುದೇ ಸಮರ್ಥನೆ ಅಥವಾ ಸತ್ಯವಾದ ವಿವರಣೆ ನೀಡಿಲ್ಲ ಎಂದು ಸಿಬಿಐ ಆರೋಪಿಸಿದೆ. ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ದಕ್ಷಿಣ ಭಾರತದ ಪ್ರಮುಖರು ದೆಹಲಿಯಲ್ಲಿ ಮೊಕ್ಕಾಂ ಹೂಡಿದಾಗ, ಪರಿಷ್ಕೃತ ಅಬಕಾರಿ ನೀತಿಗೆ ಕ್ಯಾಬಿನೆಟ್ ಅನುಮೋದನೆಯನ್ನು ಒಂದೇ ದಿನದಲ್ಲಿ ತರಾತುರಿಯಲ್ಲಿ ಚಲಾವಣೆ ಮಾಡುವ ಮೂಲಕ ಏಕೆ ಪಡೆಯಲಾಯಿತು ಎಂಬುದನ್ನು ವಿವರಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದಿದೆ. ಕೇಜ್ರಿವಾಲ್ ಅವರು ಪ್ರಕರಣದ ಆರೋಪಿಗಳಾದ ಮಾಗುಂಟ ಶ್ರೀನಿವಾಸಲು ರೆಡ್ಡಿ, ಅರ್ಜುನ್ ಪಾಂಡೆ ಮತ್ತು ಮೂತ ಗೌತಮ್ ಅವರನ್ನು ಭೇಟಿಯಾದ ಬಗ್ಗೆ ಸರಿಯಾದ ವಿವರಣೆಯನ್ನು ಕೊಟ್ಟಿಲ್ಲ ಎಂದು ಸಿಬಿಐ ಹೇಳಿದೆ.

ಕೇಜ್ರಿವಾಲ್ ಪ್ರಮುಖ ರಾಜಕಾರಣಿ ಮತ್ತು ದೆಹಲಿಯ ಮುಖ್ಯಮಂತ್ರಿಯಾಗಿರುವುದರಿಂದ, ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿರುವುದರಿಂದ, ಕಸ್ಟಡಿ ವಿಚಾರಣೆಯ ಸಮಯದಲ್ಲಿ ಅವರು ಈಗಾಗಲೇ ಬಹಿರಂಗಪಡಿಸಿದ ಸಾಕ್ಷಿಗಳು ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದು. ಇನ್ನೂ ಪರಿಶೀಲಿಸಬೇಕಾದವರು, ಮತ್ತಷ್ಟು ಸಂಗ್ರಹಿಸಬೇಕಾದ ಪುರಾವೆಗಳನ್ನು ಹಾಳು ಮಾಡಿ ಮತ್ತು ನಡೆಯುತ್ತಿರುವ ತನಿಖೆಗೆ ಅಡ್ಡಿಯಾಗಬಹುದು ಎಂದು ಸಿಬಿಐ ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದೆ.

2021-22ರ ದೆಹಲಿ ಮದ್ಯ ನೀತಿಯನ್ನು ರೂಪಿಸುವಾಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮೊದಲು ಬಂಧಿಸಿತ್ತು. ಕೇಜ್ರಿವಾಲ್ ಅವರು ಎಎಪಿಯ ಸಂಚಾಲಕರಾಗಿದ್ದರಿಂದ ಗೋವಾದಲ್ಲಿ ಪಕ್ಷದ ಪ್ರಚಾರಕ್ಕೆ ಹಣ ನೀಡಲು ಮದ್ಯ ಮಾರಾಟಗಾರರಿಂದ ಪಡೆದ ಹಣವನ್ನು ಬಳಸಲಾಗಿದೆ ಎಂದು ಇಡಿ ಆರೋಪಿಸಿದೆ. ಕೇಜ್ರಿವಾಲ್ ಮತ್ತು ಇತರ ಪ್ರಮುಖ ಆಮ್ ಆದ್ಮಿ ಪಾರ್ಟಿ ನಾಯಕರಿಗೆ ಕೇಂದ್ರ ಸರ್ಕಾರ ತನ್ನ ಏಜೆನ್ಸಿಗಳನ್ನು ಬಳಸಿಕೊಂಡು ಸುಳ್ಳು ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುತ್ತಿದೆ ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ.

ಇದನ್ನೂ ಓದಿ: Arvind Kejriwal: ಪ್ಯಾಂಟ್‌ ಲೂಸ್‌ ಆಗಿದೆ, ಒಂದು ಬೆಲ್ಟ್‌ ಕೊಡಿ; ಕೋರ್ಟ್‌ಗೆ ಅರವಿಂದ್‌ ಕೇಜ್ರಿವಾಲ್‌ ಮನವಿ‌

Continue Reading

ಪ್ರಮುಖ ಸುದ್ದಿ

V Somanna: ಹೆಜ್ಜಾಲ- ಚಾಮರಾಜನಗರ ರೈಲ್ವೆ ಕಾರ್ಯ ಶೀಘ್ರದಲ್ಲಿ: ಸಚಿವ ಸೋಮಣ್ಣ

V Somanna: 1996-97ರಲ್ಲಿ ಈ ಯೋಜನೆ ಪ್ರಪೋಸಲ್ ಇತ್ತು. ಈಗ ನನಗೆ ಅವಕಾಶ ಸಿಕ್ಕಿದೆ. 697 ಎಕರೆ ಜಮೀನು ಬೇಕಾಗಬಹುದು. ಇದರಲ್ಲಿ ಅರಣ್ಯ ಜಮೀನು ಬರುವುದಿಲ್ಲ. ರೈತರ ಜಮೀನಿನ ಮೇಲೆ ಹೋಗುತ್ತದೆ. ಇನ್ನು ಹದಿನೈದು ದಿನಗಳಲ್ಲಿ ಇದಕ್ಕಾಗಿ ಸರ್ವೇ ಕಾರ್ಯ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ.

VISTARANEWS.COM


on

V Somanna
Koo

ಬೆಂಗಳೂರು: ಹೆಜ್ಜಾಲದಿಂದ ಆರಂಭಿಸಿ ಕನಕಪುರ, ಸಾತನೂರು, ಹಲಗೂರು , ಕೊಳ್ಳೇಗಾಲ- ಚಾಮರಾಜನಗರದವರೆಗೆ ಬರಲಿರುವ 142 km ರೈಲು ಮಾರ್ಗದ (Railway Line) ಸರ್ವೇ ಕಾರ್ಯ (Survey) ಮತ್ತೆ ಕೈಗೆತ್ತಿಕೊಳ್ಳಲಾಗುವುದು. 2019ರಲ್ಲೇ ಸರ್ವೆ ಆಗಿ ಸ್ಥಗಿತ ಆಗಿತ್ತು, ಈಗ ಮತ್ತೆ ಸರ್ವೇ ಮಾಡುತ್ತೇವೆ. ಈ ಯೋಜನೆಗೆ ರಾಜ್ಯ ಸರ್ಕಾರ (Karnataka Govt) ಜಾಗ ಕೊಡಬೇಕಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ (Central minister) ವಿ. ಸೋಮಣ್ಣ (V Somanna) ಹೇಳಿದ್ದಾರೆ.

ರೈಲ್ವೆ ಯೋಜನೆಗಳ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ನೇತೃತ್ವದ ಸಭೆ ಮುಕ್ತಾಯಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು. 1996-97ರಲ್ಲಿ ಈ ಯೋಜನೆ ಪ್ರಪೋಸಲ್ ಇತ್ತು. ಈಗ ನನಗೆ ಅವಕಾಶ ಸಿಕ್ಕಿದೆ. 697 ಎಕರೆ ಜಮೀನು ಬೇಕಾಗಬಹುದು. ಇದರಲ್ಲಿ ಅರಣ್ಯ ಜಮೀನು ಬರುವುದಿಲ್ಲ. ರೈತರ ಜಮೀನಿನ ಮೇಲೆ ಹೋಗುತ್ತದೆ. ಇನ್ನು ಹದಿನೈದು ದಿನಗಳಲ್ಲಿ ಇದಕ್ಕಾಗಿ ಸರ್ವೇ ಕಾರ್ಯ ಆರಂಭಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಕಂಟೋನ್ಮೆಂಟ್ ಹಾಗೂ ಯಶವಂತಪುರ ಸ್ಟೇಷನ್‌ಗಳನ್ನು ವಿಶ್ವದರ್ಜೆಗೆ ಏರಿಸಲು 2022-23ರಲ್ಲಿ ಮಂಜೂರಾತಿ ನೀಡಲಾಗಿದೆ. ಇದರ ಯೋಜನೆಯ ಮೊತ್ತ ಬೆಂಗಳೂರು ಕಂಟೋನ್ಮೆಂಟ್ 485 ಕೋಟಿ ರೂ. ಹಾಗೂ ಯಶವಂತಪುರ ಸ್ಟೇಷನ್ 387 ಕೋಟಿ ರೂ. ಈ ಎರಡೂ ನಿಲ್ದಾಣ ಪುನರಾಭಿವೃದ್ಧಿ ಕಾರ್ಯವೂ 2025ರಲ್ಲಿ ಪೂರೈಸಲಾಗುವುದು. 2018-19ರ ಯಶವಂತಪುರ – ಚನ್ನಸಂದ್ರ 25 km ಹಾಗೂ ಬೈಯಪ್ಪನಹಳ್ಳಿ – ಹೊಸೂರು 48 km ಡಬಲಿಂಗ್ ಯೋಜನೆಗಳನ್ನು ಕ್ರಮವಾಗಿ ರೂ 314 ಕೋಟಿ ಹಾಗೂ ರೂ 500 ಕೋಟಿ ಮೊತ್ತದಲ್ಲಿ ಮಂಜೂರು ಮಾಡಲಾಗಿದ್ದು, ಕಾಮಗಾರಿ ಮುಂದುವರೆದಿದೆ ಎಂದಿದ್ದಾರೆ ಸೋಮಣ್ಣ.

ಯಶವಂತಪುರ – ಚನ್ನಸಂದ್ರ ಯೋಜನೆಯಲ್ಲಿ ಈಗಾಗಲೇ ಯಶವಂತಪುರ ಹೆಬ್ಬಾಳ 10.3 km ಗಳನ್ನೂ ಪೂರ್ಣಗೊಳಿಸಲಾಗಿದೆ. ಮೇ 2025ರಲ್ಲಿ ಈ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಿದೆ. 1997-98 ರಲ್ಲಿ ಮಂಜೂರಾದ, ನೆನೆನಗುದಿಗೆ ಬಿದ್ದಿದ್ದ ಮಹತ್ವದ ಬೆಂಗಳೂರು – ವೈಟ್‌ಫೀಲ್ಡ್ 38 km ಕ್ವಾಡ್ರುಪ್ಲಿಂಗ್ ಯೋಜನೆಗಳನ್ನು ಈಗ ಕೈಗೆತ್ತಿಗೊಂಡು ಕಾಮಗಾರಿಗೆ ವೇಗ ನೀಡಲಾಗಿದ್ದು, ಬೆಂಗಳೂರು ದಂಡು – ಬೈಯಪ್ಪನಹಳ್ಳಿ ನಡುವೆ 13 ಕಾಮಗಾರಿ ನಡೆಯುತ್ತಿದೆ. ಇದರ ಯೋಜನೆ ಮೊತ್ತ ರೂ. 492 ಕೋಟಿ. ಜೂನ್ 2025ರಲ್ಲಿ ಈ ಯೋಜನೆಯನ್ನು ಪೂರ್ಣ ಮಾಡುವ ಗುರಿಯಿದೆ. ನನ್ನ ಮತ ಕ್ಷೇತ್ರದ ವಿಜಯನಗರ, ನಾಯಂಡಹಳ್ಳಿ, ಯೂನಿವರ್ಸಿಟಿಯಲ್ಲಿ ಕಾಮಗಾರಿಗಳನ್ನು ಸರಿಪಡಿಸುತ್ತೇವೆ ಎಂದು ಸೋಮಣ್ಣ ತಿಳಿಸಿದರು.

11ರಂದು ಖಾತೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಅಧಿಕಾರಿಗಳ ಜೊತ ಚರ್ಚೆ ಮಾಡಿದ್ದೇನೆ. ಇಲಾಖೆಯ ಸಾಧಕ ಭಾದಕಗಳ ಅರಿಯುವ ಕೆಲಸ ಮಾಡ್ತಿದ್ದೇನೆ. ರೈಲ್ವೆ ಇಲಾಖೆಗೆ ರಾಜ್ಯದಿಂದ ಅತಿರಥ ಮಹಾರಥರು ಮಂತ್ರಿಗಳಾಗಿ ಕೊಡುಗೆ ಕೊಟ್ಟಿದ್ದಾರೆ. ಅಶ್ವಿನಿ ವೈಷ್ಣವ್ ಹಾಗೂ ಜಲಶಕ್ತಿ ಸಚಿವ ಸಿ. ಆರ್ ಪಾಟೀಲ್ ನನಗೆ ಹೆಚ್ಚಿನ ಹುಮ್ಮಸ್ಸು ಕೊಟ್ಟಿದ್ದಾರೆ. ಐವತ್ತು ವರ್ಷಗಳಲ್ಲಿ ಆಗದಿರುವುದನ್ನು ಹತ್ತು ವರ್ಷಗಳಲ್ಲಿ ರೈಲ್ವೆ ಇಲಾಖೆ ಮಾಡಿ ತೋರಿಸಿದೆ. ರೈಲ್ವೆ ಇಲಾಖೆಯ ಕಾರ್ಯವೈಖರಿ ಒಂದು ರೀತಿ ಮಿಲಿಟರಿ ಇದ್ದಂತೆ. ಇನ್ನೂ ಎರಡು ವರ್ಷಗಳಲ್ಲಿ ಕರ್ನಾಟಕ, ವಿಭಿನ್ನ ರೀತಿಯಲ್ಲಿ ರೈಲ್ವೆ ಇಲಾಖೆಯಲ್ಲಿ ಬದಲಾವಣೆ ಆಗುತ್ತದೆ. ನನ್ನ ನಲವತ್ತು ವರ್ಷಗಳ ಅನುಭವದೊಂದಿಗೆ ಬದಲಾವಣೆ ಆಗುತ್ತದೆ. ರೈಲ್ವೆ ಮೇಲ್ಸುತುವೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅರ್ಧ ಅರ್ಧ ಹಣ ಕೊಡಬೇಕು. ಜಾಗವನ್ನು ರಾಜ್ಯ ಸರ್ಕಾರ ಕೊಡಬೇಕು ಎಂದಿದ್ದಾರೆ ಸೋಮಣ್ಣ.

ಈಗಾಗಲೇ ಪೂರ್ಣಗೊಂಡ ಕಾಮಗಾರಿಗಳ ಮಾಹಿತಿ ಅವರು ನೀಡಿದರು.
ಹಾಸನ – ಬೆಂಗಳೂರು ಹೊಸ ಲೈನ್ : 166 km ರೂ 2010 ಕೋಟಿ ವೆಚ್ಚದಲ್ಲಿ 2017 ರಲ್ಲಿ ನಿರ್ಮಾಣಗೊಂಡಿದೆ
ಯಲಹಂಕ – ದೇವರಪಲ್ಲಿ ಡಬಲಿಂಗ್ : 72 km ರೂ 882 ಕೋಟಿ ವೆಚ್ಚದಲ್ಲಿ 2021ರಲ್ಲಿ ಪೂರ್ಣ ಗೊಂಡಿದೆ
2016 ರಲ್ಲಿ ರೂ 167 ಕೋಟಿ ವೆಚ್ಚದಲ್ಲಿ ಯಲಹಂಕ – ಚನ್ನಸಂದ್ರ 13km ಡಬಲಿಂಗ್
95 ಕೋಟೆ ವೆಚ್ಚದಲ್ಲಿ ಯಲಹಂಕ – ಯಶವಂತಪುರ 7km ಡಬಲಿಂಗ್ ಪೂರ್ಣಗೊಂಡಿದೆ
ಪ್ರಧಾನಿ ಮೋದಿಯವರ ಸಂಕಲ್ಪದಂತೆ ಸಾಮಾನ್ಯ ರೈಲ್ವೆ ಪ್ರಯಾಣಿಕರಿಗೂ ಉತ್ತಮ್ಮ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಬೈಯಪ್ಪನಹಳ್ಳಿಯಲ್ಲಿ ರೂ 314 ಕೋಟಿ ವೆಚ್ಚದಲ್ಲಿ 2022ರಲ್ಲಿ ವಿಶ್ವೇಶ್ವರಯ್ಯ ಟರ್ಮಿನಲ್ ನಿರ್ಮಾಣಗೊಂಡಿದೆ.
ರೂ 280 ಕೋಟಿ ವೆಚ್ಚದಲ್ಲಿ 11 RUB ಗಳ ಹಾಗೂ ರೂ 285 ಕೋಟಿ ವೆಚ್ಚದಲ್ಲಿ 12 ROB ಗಳ ನಿರ್ಮಾಣಗೊಂಡಿದೆ.

ಇದನ್ನೂ ಓದಿ: V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

Continue Reading

ದೇಶ

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

Stabbing:ಶಾಲೆಯಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಜಗಳ ಆಗಿತ್ತು. ಮಾತಿಗೆಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಒಬ್ಬ ವಿದ್ಯಾರ್ಥಿ ಕೋಪದ ಭರದಲ್ಲಿ ಹರಿತವಾದ ಸಾಧನದಿಂದ ಮತ್ತೋರ್ವನಿಗೆ ಚುಚ್ಚಿದ್ದಾನೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ.

VISTARANEWS.COM


on

Stabbing
Koo

ಭುವನೇಶ್ವರಂ: ವಿದ್ಯಾರ್ಥಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಹರಿತವಾದ ವಸ್ತುವಿನಿಂದ ಇರಿದಿರುವ ಘಟನೆ ಒಡಿಶಾ(Odisha)ದ ಗಂಜಂ ಜಿಲ್ಲೆಯಲ್ಲಿ ನಡೆದಿದೆ. ಒಂಬತ್ತನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತನಿಗೇ ಕೋಪದ ಭರದಲ್ಲಿ ಇರಿದಿ(Stabbing)ದ್ದಾನೆ. ಸಾನಕೆಮುಂಡಿ ಪ್ರದೇಶದಲ್ಲಿರುವ ರಘನಾಥಂ ಪ್ರೌಢ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಗಾಯಾಳು ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ವಿವರ:

ಶಾಲೆಯಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ನಡುವೆ ಯಾವುದೋ ಕ್ಷುಲ್ಲಕ ವಿಚಾರಕ್ಕೆ ಜಗಳ ಆಗಿತ್ತು. ಮಾತಿಗೆಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಒಬ್ಬ ವಿದ್ಯಾರ್ಥಿ ಕೋಪದ ಭರದಲ್ಲಿ ಹರಿತವಾದ ಸಾಧನದಿಂದ ಮತ್ತೋರ್ವನಿಗೆ ಚುಚ್ಚಿದ್ದಾನೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕ ಜೀವನ್ಮರಣದ ನಡುವೆ ಹೋರಾಡುತ್ತಿದ್ದಾನೆ. ಮೊದಲಿಗೆ ಬಾಲಕನನ್ನು ಸೆರಗಢಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ MKCG ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಲು ಪ್ರಾಂಶುಪಾಲರೂ ನಿರಾಕರಿಸಿದ್ದಾರೆ.

ಬೆಂಗಳೂರಿನಲ್ಲೂ ಇಂತಹದ್ದೇ ಒಂದು ಘಟನೆ ಮೂರು ದಿನಗಳ ಹಿಂದೆ ನಡೆದಿತ್ತು. ಪರೀಕ್ಷಾ ಕೊಠಡಿಯ ಹೊರಗೆ ಬ್ಯಾಗ್ ಇಡುವ ವಿಚಾರಕ್ಕೆ ರಾಗಿ ಗುಡ್ಡ ಹಾಗೂ ಸಾರಕ್ಕಿ ಬಳಿ ಇರುವ ಶಾಲಾ ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದಿದೆ. ಪರೀಕ್ಷೆ ಮಗಿಸಿ ಮನೆಗೆ ಹೋಗುವಾಗ ಎರಡು ಶಾಲೆಗಳ ಮಕ್ಕಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಖಾಸಗಿ ಶಾಲೆಯೊಂದರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಬಂದಿದ್ದ ಎರಡು ಶಾಲೆಯ ಮಕ್ಕಳು, ಪರೀಕ್ಷಾ ಕೇಂದ್ರದಲ್ಲಿ ಜಗಳ ನಡೆಸಿದ್ದಾರೆ. ಒಳಗೆ ಜಗಳವಾಡಿ ಅದೇ ದ್ವೇಷದಿಂದ ಹಿಂಬಾಲಿಸಿ ಬಂದಿದ್ದ ರಾಗಿ ಗುಡ್ಡ ಬಳಿ ಇರುವ ಶಾಲಾ ಬಾಲಕರು, ನಂತರ ಸಾರಕ್ಕಿ ಬಳಿ ಇರುವ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದು ಪರಾರಿ ಆಗಿದ್ದಾರೆ.

ಬುಧವಾರ ಮಧ್ಯಾಹ್ನ 1-45ಕ್ಕೆ ಘಟನೆ ನಡೆದಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಎಲ್ಲ ಬಾಲಕರ ಮೇಲೂ ಕೊಲೆ ಯತ್ನ ಪ್ರಕರಣದಡಿ ಪ್ರಕರಣ ದಾಖಲಿಸಿದ್ದಾರೆ. ಪುಸ್ತಕ ಹಿಡಿಯಬೇಕಿದ್ದ ಕೈಗಳಿಗೆ ಈಗ ಕೋಳ ಬಿದ್ದಿದೆ.

ಕಳೆದ ವರ್ಷ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ರೇಗಿಸಬೇಡಿ ಈ ರೀತಿ ರೇಗಿಸೋದ್ರಿಂದ ನಿಮಗೆ ಕೆಟ್ಟ ಹೆಸರು ಬರುವುದಲ್ಲದೇ ಕಾಲೇಜಿಗೂ ಕೆಟ್ಟ ಹೆಸರು ಬರುತ್ತೆ ಅಂತ ಬುದ್ಧಿವಾದ ಹೇಳಿದಕ್ಕೆ ಸಹಪಾಠಿಯನ್ನೇ ಚಾಕುವಿನಿಂದ ಇರಿದಿರುವ ಘಟನೆ ಜಯನಗರದಲ್ಲಿ ನಡೆದಿತ್ತು.

ವಿದ್ಯಾರ್ಥಿಗೆ ಚಾಕು ಇರಿದಿರುವ ಸಹಪಾಠಿಗಳು ನಮಗೆ ಬುದ್ಧಿವಾದ ಹೇಳ್ತಿಯಾ? ನಾವು ನಿನ್ನಂತೆಯೇ ಈ ಕಾಲೇಜಿಗೆ ಸೇರಿಕೊಂಡಿರೋದು, ನಮ್ಮ ಇಷ್ಟ ಬಂದ ಹಾಗೇ ಮಾಡ್ತೀವಿ ಅಂತ ಕ್ಯಾತೆ ತೆಗೆದಿದ್ದಾರೆ. ಆದರೆ ಇದನ್ನು ವಿದ್ಯಾರ್ಥಿ ವಿರೋಧಿಸಿದ್ದಕ್ಕಾಗಿ ಕಾಲೇಜಿನಲ್ಲಿ ಗಲಾಟೆ ಮಾಡಿಕೊಂಡಿದ್ದರು. ವಿಜಯ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿಗಳ ಜಗಳ ತಿಳಿದು ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದಾರೆ. ಈ ವಿಚಾರಕ್ಕೆ ಬೇಸರವಾಗಿದ್ದರಿಂದ ಸೇಡು ತೀರಿಸಿಕೊಳ್ಳಲಿಕ್ಕಾಗಿ ವಿದ್ಯಾರ್ಥಿಯ ಮೇಲೆ ಚಾಕು ಚುಚ್ಚಿ ಪರಾರಿಯಾಗಿದ್ದಾರೆ. ವಿಚಾರ ತಿಳಿದ ಪೊಲೀಸರು ಬಾಲಾಪರಾಧಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Continue Reading
Advertisement
T20 World Cup 2024
ಪ್ರಮುಖ ಸುದ್ದಿ8 mins ago

T20 World Cup 2024 : ಫೈನಲ್ ಪಂದ್ಯ ಆರಂಭಕ್ಕೆ ಮೊದಲೇ ವಿಜೇತರನ್ನು ಘೋಷಿಸಿದ ಟಾಮ್ ಮೂಡಿ

Actor Darshan
ಬೆಂಗಳೂರು11 mins ago

Actor Darshan: ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

Special Status
ದೇಶ16 mins ago

Special Status: ಎನ್‌ಡಿಎಗೆ ಮೈತ್ರಿಗೆ ಮೊದಲ ಅಗ್ನಿ ಪರೀಕ್ಷೆ; ವಿಶೇಷ ಸ್ಥಾನಮಾನಕ್ಕೆ ಜೆಡಿಯು ನಿರ್ಣಯ

Jain Shantamani Kala Kendra Stone Carving and Painting Camp in Bengaluru
ಬೆಂಗಳೂರು31 mins ago

Bengaluru News: ಜೈನ್‌ ಶಾಂತಮಣಿ ಕಲಾ ಕೇಂದ್ರದ ಕಲ್ಲಿನ ಕೆತ್ತನೆ ಮತ್ತು ಚಿತ್ರಕಲಾ ಶಿಬಿರ “ಪಾರ್ಶ್ವ ಪಡಾಪ್” ಗೆ ಸಂಭ್ರಮದ ತೆರೆ

Virat Kohli
ಪ್ರಮುಖ ಸುದ್ದಿ48 mins ago

Virat kohli : ವಿರಾಟ್ ಕೊಹ್ಲಿಗೆ ಫಾರ್ಮ್​ಗೆ ಮರಳಲು ಸಲಹೆಗಳನ್ನು ನೀಡಿದ ಮಾಜಿ ನಾಯಕ ಸುನೀಲ್ ಗವಾಸ್ಕರ್​

WhatsApp color
ತಂತ್ರಜ್ಞಾನ1 hour ago

WhatsApp: ಇನ್ನು ಮುಂದೆ ಈ ಫೋನ್‌ಗಳಲ್ಲಿ ವಾಟ್ಸ್ಯಾಪ್‌ ಸಿಗೋಲ್ಲ! ನಿಮ್ಮ ಫೋನೂ ಇದೆಯಾ ನೋಡಿ

Self Harming
ಕ್ರೈಂ1 hour ago

Self Harming: ಕೆರೆಗೆ ಹಾರಿ ಆತ್ಮಹತ್ಯೆ ಯತ್ನ; ಇಬ್ಬರು ಮಕ್ಕಳ ಸಾವು, ತಾಯಿ ಪಾರು

Rohit Sharma
ಪ್ರಮುಖ ಸುದ್ದಿ1 hour ago

Rohit Sharma : ಒಂದು ಸಿಕ್ಸರ್ ಬಾರಿಸಿದರೆ ಕೊಹ್ಲಿಯ ದಾಖಲೆ ಮುರಿಯುತ್ತಾರೆ ರೋಹಿತ್​ ಶರ್ಮಾ

Shirt Dress Fashion
ಫ್ಯಾಷನ್2 hours ago

Shirt Dress Fashion: ಶರ್ಟ್ ಡ್ರೆಸ್‌ ನ್ಯೂ ಲುಕ್‌ಗೆ 3 ಸಿಂಪಲ್‌ ಐಡಿಯಾ

assault case bjp worker
ಕ್ರೈಂ2 hours ago

Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ9 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌