Dina Bhavishya : ಈ ರಾಶಿಯವರಿಗೆ ಆರ್ಥಿಕ ಒತ್ತಡ ಜತೆಗೆ ಉದ್ಯೋಗಿಗಳ ಅಸಹಕಾರ - Vistara News

ಪ್ರಮುಖ ಸುದ್ದಿ

Dina Bhavishya : ಈ ರಾಶಿಯವರಿಗೆ ಆರ್ಥಿಕ ಒತ್ತಡ ಜತೆಗೆ ಉದ್ಯೋಗಿಗಳ ಅಸಹಕಾರ

Dina Bhavishya : ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷದ ದಶಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Dina Bhavishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂದ್ರನು ಬುಧವಾರವೂ ಕನ್ಯಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಮೇಷ ರಾಶಿಯವರು ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ವೃಷಭ ರಾಶಿಯವರು ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಸಿಂಹ ರಾಶಿಯ ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ (Kannada Dina Bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (8-11-2023)

ಶ್ರೀ ಶಕೇ 1945, ಶೋಭಕೃತ (ಶೋಭನ) ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ
ತಿಥಿ: ದಶಮಿ 08:22 ವಾರ: ಬುಧವಾರ
ನಕ್ಷತ್ರ: ಪೂರ್ವಾ ಪಾಲ್ಗುಣಿ 19:18 ಯೋಗ: ಇಂದ್ರ 16:09
ಕರಣ: ವಿಷ್ಟಿ (ಭದ್ರ) 08:22 ಅಮೃತ ಕಾಲ: ಮಧ್ಯಾಹ್ನ 12: 09 ರಿಂದ 1:56ರವರೆಗೆ

ಸೂರ್ಯೋದಯ : 06:15  ಸೂರ್ಯಾಸ್ತ : 05:51

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಮಧ್ಯಮವಾಗಿ ಇರಲಿದೆ. ಹಣಕಾಸು, ಬಾಕಿ ವ್ಯವಹಾರಗಳು ಪೂರ್ಣವಾಗಲಿದೆ. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ಮಾಡುವಿರಿ. ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆ ಕೊಡಬಹುದು. ಪ್ರಯಾಣಿಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ ಇದ್ದು, ಕೆಲಸ ಕಾರ್ಯಗಳು ನಿಧಾನವಾಗಲಿದೆ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಮಾಡುವುದು ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ ಮಾಡುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ ಮಾಡುವಿರಿ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ ಮಾಡುವಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವ ಸಾಧ್ಯತೆ ಇದೆ. ಅವಸರದಲ್ಲಿ ಕೆಲಸ ಮಾಡುವುದು ಬೇಡ.ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ದಿಢೀರ್ ಪ್ರಯಾಣ ಮಾಡುವ ಸಾಧ್ಯತೆ ಇದೆ.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Weather News: ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ. ಶನಿವಾರವಂತೂ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Weather News
Koo

ಕಾರವಾರ/ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ (Rain News) ಮುಂದುವರಿದಿದ್ದು, ಉತ್ತರ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆ ಸೇರಿ ಕರಾವಳಿಯಾದ್ಯಂತ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಯ (Weather News) ಕುರಿತು ಹವಾಮಾನ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ರಜೆ ಘೋಷಣೆ ಮಾಡಿದ್ದಾರೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಕಟ್ಟಡಗಳು ಕುಸಿದಿವೆ.

karnataka Weather Forecast

ಉಡುಪಿ ಜಿಲ್ಲೆಯಲ್ಲೂ ರಜೆ

ಮಳೆಯ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕುಗಳು ಸೇರಿ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ವಿಭಾಗಕ್ಕೆ ರಜೆ ಘೋಷಿಸಲಾಗಿದೆ. ಆದರೆ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ ,ಎಂಜಿನಿಯರಿಂಗ್, ಐಟಿಐ ವಿದ್ಯಾಸಂಸ್ಥೆಗಳಿಗೆ ರಜೆ ಇಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ

Continue Reading

ಪ್ರಮುಖ ಸುದ್ದಿ

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

Mahindra Marazzo: ಮುಂದಿನ ಎರಡು ತಿಂಗಳ ಅವಧಿಯಲ್ಲಿ ಎಂಪಿವಿ ಉತ್ಪಾದನೆ ಕೊನೆಗೊಳಿಸಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವೆರಿಟೊ ಕಂಪನಿಯು ಉತ್ಪಾದಿಸಿದ ಕೊನೆಯ ಸೆಡಾನ್ ಇದಾಗಿದೆ. ಎಂಪಿವಿ ಮಾರುಕಟ್ಟೆ ಇಂದು ಒಟ್ಟು ಪ್ರಯಾಣಿಕ ವಾಹನ ಮಾರುಕಟ್ಟೆಯಲ್ಲಿ ಸುಮಾರು 16 ಪ್ರತಿಶತ ಪಾಲನ್ನು ಹೊಂದಿದೆ. ಟೊಯೊಟಾ ಮತ್ತು ಮಾರುತಿ ಸುಜುಕಿ ಈ ವಿಭಾಗದಲ್ಲಿ ಪಾರಮ್ಯ ಹೊಂದಿವೆ.

VISTARANEWS.COM


on

Mahindra Marazzo
Koo

ಬೆಂಗಳೂರು: ಮಹೀಂದ್ರಾ ಕಂಪನಿಯು ಬಿಡುಗಡೆ ಮಾಡಿದ ಆರು ವರ್ಷಗಳ ನಂತರ ಮರಾಜೊ (Mahindra Marazzo) ಎಂಪಿವಿಯ ಮಾರಾಟವನ್ನು ನಿಲ್ಲಿಸಿದೆ. ಇದು ಕಾರು ತಯಾರಕರು ನಿರೀಕ್ಷಿಸಿದ ಮಟ್ಟಕ್ಕೆ ಮಾರಾಟದಲ್ಲಿ ಯಶಸ್ಸನ್ನು ಹೊಂದಿಲ್ಲ. ಮಾರುತಿ ಎರ್ಟಿಗಾ, ಎಕ್ಸ್ ಎಲ್ 6 ಮತ್ತು ಕಿಯಾ ಕ್ಯಾರೆನ್ಸ್ ಪ್ರತಿಸ್ಪರ್ಧಿಯಾಗಿದ್ದ ಇದನ್ನು ಸೆಪ್ಟೆಂಬರ್ 2018 ರಲ್ಲಿ 9.99 ಲಕ್ಷದಿಂದ 13.90 ಲಕ್ಷ ರೂ.ಗಳ ನಡುವೆ ಬಿಡುಗಡೆ ಮಾಡಲಾಗಿತ್ತು. ಇದು ನಾಲ್ಕು ಟ್ರಿಮ್ ಗಳು ಮತ್ತು 7- ಮತ್ತು 8-ಸೀಟರ್ ಕಾನ್ಫಿಗರೇಶನ್ ಗಳಲ್ಲಿ ಬಂದಿತ್ತು. ಆದರೆ, ಗ್ರಾಹಕರ ಗಮನ ಸೆಳೆಯಲು ವಿಫಲಗೊಂಡಿತ್ತು.

ಮುಂದಿನ ಎರಡು ತಿಂಗಳ ಅವಧಿಯಲ್ಲಿ ಎಂಪಿವಿ ಉತ್ಪಾದನೆ ಕೊನೆಗೊಳಿಸಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ವೆರಿಟೊ ಕಂಪನಿಯು ಉತ್ಪಾದಿಸಿದ ಕೊನೆಯ ಸೆಡಾನ್ ಇದಾಗಿದೆ. ಎಂಪಿವಿ ಮಾರುಕಟ್ಟೆ ಇಂದು ಒಟ್ಟು ಪ್ರಯಾಣಿಕ ವಾಹನ ಮಾರುಕಟ್ಟೆಯಲ್ಲಿ ಸುಮಾರು 16 ಪ್ರತಿಶತ ಪಾಲನ್ನು ಹೊಂದಿದೆ. ಟೊಯೊಟಾ ಮತ್ತು ಮಾರುತಿ ಸುಜುಕಿ ಈ ವಿಭಾಗದಲ್ಲಿ ಪಾರಮ್ಯ ಹೊಂದಿವೆ.

ಮಹೀಂದ್ರಾ ಜೂನ್ 2024 ರವರೆಗೆ 44,793 ಮರಾಜೊಗಳನ್ನು ಮಾರಾಟ ಮಾಡಿದೆ. ಇದು ಮಾಸಿಕ ಸರಾಸರಿ ಸುಮಾರು 640 ಯುನಿಟ್​ಗಳು. ಕೋವಿಡ್ -19 ಲಾಕ್​ಡೌನ್​ ಸಮಯದಲ್ಲಿ ಮಾರಾಟವು ಕುಸಿಯಿತು. ಬಿಎಸ್ 6 ಹಂತ 2ರ ಮಾನದಂಡಗಳಿಂದಾಗಿ ಮರಾಜೊ ಕಾರಿನ ಡೀಸೆಲ್ ಎಂಜಿನ್ ಅನ್ನು ಅಪ್​ಡೇಟ್ ಮಾಡಲೂ ಸಾಧ್ಯವಾಗಲಿಲ್ಲ. ಮಾರಾಟದ ಅಂಕಿಅಂಶಗಳನ್ನು ದೃಷ್ಟಿಕೋನದಲ್ಲಿ ಹೇಳುವುದಾದರೆ ಮರಾಜೊ ಕಳೆದ ಐದು ತಿಂಗಳಲ್ಲಿ ಸರಾಸರಿ 34 ಯೂನಿಟ್​ ಮಾರಾಟ ಮಾಡಿದರೆ ಮಾರುತಿ ಮತ್ತು ಕಿಯಾ ಕ್ರಮವಾಗಿ ಸರಾಸರಿ 14,495 ಎರ್ಟಿಗಾಗಳು ಮತ್ತು 4,412 ಕ್ಯಾರೆನ್ಸ್ ಎಂಪಿವಿಗಳನ್ನು ಮಾರಾಟ ಮಾಡಿವೆ.

ಇದನ್ನೂ ಓದಿ: T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

ಈಗ 14.59 ಲಕ್ಷ-17 ಲಕ್ಷ ರೂ.ಗಳ ನಡುವೆ ಮಾರಾಟವಾಗುವ ಮತ್ತು ಮೂರು ಟ್ರಿಮ್ ಗಳನ್ನು ಹೊಂದಿರುವ ಮರಾಜೊ ಜೂನ್ ವರೆಗೆ 93,000 ರೂ.ಗಳವರೆಗೆ ರಿಯಾಯಿತಿಯೊಂದಿಗೆ ಲಭ್ಯವಿದೆ.

ಮರಾಜೊವನ್ನು ಭಾರತದಲ್ಲಿ ಅಭಿವೃದ್ಧಿ ಮಾಡಿಲ್ಲ. ಇದು ಅಮೆರಿಕದ ಮಿಚಿಗನ್ ನಲ್ಲಿರುವ ಮಹೀಂದ್ರಾ ನಾರ್ತ್ ಅಮೇರಿಕನ್ ಟೆಕ್ನಿಕಲ್ ಸೆಂಟರ್ (ಎಂಎನ್ ಎಟಿಸಿ) ರಚಿಸಿದ ಮೊದಲ ಕಾರು. ಮಾರಾಟಕ್ಕಿದ್ದ ಸಂಪೂರ್ಣ ಅವಧಿಯಲ್ಲಿ ಯಾವುದೇ ಅಪ್​​ಡೇಟ್ ಪಡೆಯಲಿಲ್ಲ. ಇದು ಅದರ ಮಾರಾಟ ಅಂಕಿಅಂಶಗಳ ಮೇಲೆ ಪರಿಣಾಮ ಬೀರಿತು. ಆರಂಭದಲ್ಲಿ ಎಎಂಟಿ- ಪೆಟ್ರೋಲ್ ಎಂಜಿನ್​ ಮಾದರಿಯ ಬಗ್ಗೆ ಮಾತುಕತೆಗಳು ನಡೆದರೂ ಕೊನೆಗೆ ಅದು ಬರಲಿಲ್ಲ.

ಮಹೀಂದ್ರಾ ಎಂಪಿವಿ ಏಕೈಕ 123 ಬಿಹೆಚ್ ಪಿ, 300 ಎನ್ಎಂ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನುವಲ್ ಸಂ 17.3 ಕಿ.ಮೀ ಇಂಧನ ದಕ್ಷತೆಯ ರೇಟಿಂಗ್ ಅನ್ನು ಪಡೆದಿದೆ. ತನ್ನ ಎಂಪಿವಿ ಸಹೋದರರಲ್ಲಿಯೂ ಸಹ ಮರಾಜೊ ಲ್ಯಾಡರ್​ ಪ್ಲಾಟ್ ಫಾರ್ಮ್ ಹೊಂದಿದ್ದರೂ ಫ್ರಂಟ್-ವ್ಹೀಲ್-ಡ್ರೈವ್ ಸೆಟಪ್ ಅನ್ನು ಹೊಂದಿತ್ತು. ಹೀಗಾಗಿ ಬಿಡುಗಡೆಯಾದ ಸಮಯಕ್ಕೆ ಅಪೇಕ್ಷಿತವಾಗಿತ್ತು. ವಿಶೇಷವಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಟೊಯೊಟಾದ ಇನ್ನೋವಾ ಕ್ರಿಸ್ಟಾದಂಥ ರಿಯರ್ ವೀಲ್ ಡ್ರೈವ್ ಮಾದರಿಯು ಹೆಚ್ಚು ಗಮನ ಸೆಳೆದಿತ್ತು. ಮರಾಜೊ ಎಂಪಿವಿಯನ್ನು ಸಂಪೂರ್ಣವಾಗಿ ಲೋಡ್ ಮಾಡಿದಾಗ ಅದರ ನಾಲ್ಕು ಸಿಲಿಂಡರ್​ ಎಂಜಿನ್ ಕಡಿಮೆ ಪವರ್ ಹೊಂದಿತ್ತು.

ಮಹೀಂದ್ರಾ ಮುಂಬರುವ ವಾರಗಳಲ್ಲಿ ಥಾರ್ 5-ಡೋರ್ ಅನ್ನು ಮಾರುಕಟ್ಟೆಗೆ ತರಲು ಸಜ್ಜಾಗುತ್ತಿದೆ ಮತ್ತು ಈ ವರ್ಷದ ಅಂತ್ಯದ ವೇಳೆಗೆ ಎಕ್ಸ್ ಯುವಿ 700 ಆಧಾರಿತ ಇವಿ ಕೂಡ ಮಾರುಕಟ್ಟೆಗೆ ಬರಲಿದೆ.

Continue Reading

ದೇಶ

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

BSP President: ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಶುಕ್ರವಾರ (ಜುಲೈ 5) ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಉಪಯೋಗ ಆಗಲಿಲ್ಲ. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

BSP President
Koo

ಚೆನ್ನೈ: ರಾಜಕೀಯ ಹತ್ಯೆ, ಹಿಂಸಾಚಾರ, ಬೇರೆ ರಾಜಕೀಯ ಪಕ್ಷದ ನಾಯಕರ ಮೇಲೆ ಹಲ್ಲೆಗಳು ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಇಂತಹ ರಾಜಕೀಯ ದ್ವೇಷದ ಹತ್ಯೆಗಳು ತಮಿಳುನಾಡಿಗೂ ಕಾಲಿಟ್ಟಿವೆ. ಇದಕ್ಕೆ ನಿದರ್ಶನ ಎಂಬಂತೆ, ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಮಾಡಲಾಗಿದೆ. ಚೆನ್ನೈನಲ್ಲಿರುವ (Chennai) ಅವರ ನಿವಾಸದ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಶುಕ್ರವಾರ (ಜುಲೈ 5) ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿದೆ. ಮಾರಕಾಸ್ತ್ರಗಳ ಸಮೇತ ಆಗಮಿಸಿದ ಅವರು ದಾಳಿ ನಡೆಸಿ, ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ನಗರದಲ್ಲಿರುವ ಥೌಸಂಡ್‌ ಲ್ಯಾಂಪ್ಸ್‌ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್‌ ಅವರು ಇದಕ್ಕೂ ಮೊದಲು ಗ್ರೇಟರ್‌ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್‌ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್‌ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್‌ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಇಷ್ಟಾದರೂ ಅವರ ಮೇಲೆ ಹಲ್ಲೆ ನಡೆಸಿ, ಹತ್ಯೆಗೈಯಲಾಗಿದೆ.

ಆರ್ಮ್‌ಸ್ಟ್ರಾಂಗ್‌ ಜತೆಗೆ ಇನ್ನಿಬ್ಬರ ಮೇಲೆಯೂ ಹಲ್ಲೆ ನಡೆದಿದ್ದು, ಅವರು ಗಾಯಗೊಂಡಿದ್ದಾರೆ. ದಾಳಿ ಮಾಡಿದ ಆರು ಮಂದಿಯ ಕುರಿತು ಇದುವರೆಗೆ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದಾಗ್ಯೂ, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Dengue Fever: ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ.

VISTARANEWS.COM


on

Dengue Fever
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿವೆ. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಗ್ಯೂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಬಲಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಗುಡಿಬಂಡೆ ಪಟ್ಟಣದ‌ ನಿವಾಸಿ ವೇಣು(50) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರರಿಂದ ವೇಣು ಅವರು ಮೃತಪಟ್ಟಿರುವುದಾಗಿ ಸಂಬಂಧಿಕರು ಹೇಳಿದ್ದಾರೆ.

ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಹೀಗಾಗಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಬಿಬಿಎಂಪಿ, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಭಾರಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ನಿರ್ಧರಿಸಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ. 50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ನೆನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.

Continue Reading
Advertisement
Weather News
ಉತ್ತರ ಕನ್ನಡ21 mins ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ29 mins ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ55 mins ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ1 hour ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ1 hour ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ2 hours ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ2 hours ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್2 hours ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ2 hours ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Kerala govt
ದೇಶ2 hours ago

Kerala Govt: ಕೇರಳ ಸರ್ಕಾರಿ ನೌಕರರ ಪೈಕಿ ಮೂರರಲ್ಲಿ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ6 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ7 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ9 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ10 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು11 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು12 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ16 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌