Urfi Javed: ಗೋಲ್ಡನ್ ಟೆಂಪಲ್‌ಗೆ ಸಲ್ವಾರ್ ಧರಿಸಿ ಹೋದ ಉರ್ಫಿ; ಎಲ್ಲದಕ್ಕೂ ಸೈ ಅಂದ್ರು ಫ್ಯಾನ್ಸ್‌! - Vistara News

ಬಾಲಿವುಡ್

Urfi Javed: ಗೋಲ್ಡನ್ ಟೆಂಪಲ್‌ಗೆ ಸಲ್ವಾರ್ ಧರಿಸಿ ಹೋದ ಉರ್ಫಿ; ಎಲ್ಲದಕ್ಕೂ ಸೈ ಅಂದ್ರು ಫ್ಯಾನ್ಸ್‌!

Urfi Javed: ಗುಲಾಬಿ ಬಣ್ಣದ ಸಾಂಪ್ರದಾಯಿಕ ಸಲ್ವಾರ್ ಸೂಟ್‌ನಲ್ಲಿ ಬೆರಗುಗೊಳಿಸಿದ್ದಾರೆ. ಉರ್ಫಿಯ ಗೋಲ್ಡನ್ ಟೆಂಪಲ್‌ ವಿಸಿಟ್‌ ಫೋಟೊಗಳು ವೈರಲ್‌ ಆಗಿವೆ.

VISTARANEWS.COM


on

Urfi Javed visits Golden Temple
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉರ್ಫಿ ಜಾವೇದ್ (Urfi Javed) ಆಗಾಗ ಟ್ರೋಲ್‌ಗೆ ಗುರಿಯಾಗುವುದು ಹೊಸತೇನಲ್ಲ. ಫ್ಯಾಷನ್‌ ಐಕಾನ್‌ ಎಂತಲೇ ಖ್ಯಾತಿ ಪಡೆದಿರುವ ಉರ್ಫಿ ಗುಲಾಬಿ ಬಣ್ಣದ ಸಲ್ವಾರ್ ಕಮೀಜ್‌ ಧರಿಸಿ, ಅಮೃತಸರದ ಗೋಲ್ಡನ್ ಟೆಂಪಲ್‌ಗೆ ತನ್ನ ಸಹೋದರಿ ಡಾಲಿಯೊಂದಿಗೆ ಭೇಟಿ ಕೊಟ್ಟಿದ್ದಾರೆ. ಇದೀಗ ಉರ್ಫಿಯ ಈ ಹೊಸ ಅವತಾರಕ್ಕೆ ನೆಟ್ಟಿಗರು ಹಾಡಿ ಹೊಗಳಿದ್ದಾರೆ.

ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿಯ ಕ್ಷಣಗಳನ್ನು ಉರ್ಫಿ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಗುಲಾಬಿ ಬಣ್ಣದ ಸಾಂಪ್ರದಾಯಿಕ ಸಲ್ವಾರ್ ಸೂಟ್‌ನಲ್ಲಿ ಬೆರಗುಗೊಳಿಸಿದ್ದಾರೆ. ಪವಿತ್ರ ಸ್ಥಳದಲ್ಲಿ ಕೈ ಜೋಡಿಸಿ ಆಶೀರ್ವಾದ ಪಡೆಯುತ್ತಿರುವ ಫೋಟೊ ಸಹ ಹಂಚಿಕೊಂಡಿದ್ದಾರೆ. ಅವರ ಫ್ಯಾನ್ಸ್‌ ಕಮೆಂಟ್‌ ಮೂಲಕ ʻಉರ್ಫಿ ಧಾರ್ಮಿಕಕ್ಕೂ ಸೈʼʼಎಂದು ಹಾಡಿ ಹೊಗಳಿದ್ದಾರೆ. ಇನ್ನೊಬ್ಬರು ʻʻಉರ್ಫಿ ಸುಂದರವಾಗಿ ಕಾಣುತ್ತಿದ್ದಾರೆʼʼಎಂದು ಕಮೆಂಟ್‌ ಮಾಡಿದ್ದಾರೆ.

ಉರ್ಫಿ ಜಾವೇದ್ ಅವರು ‘ಬಿಗ್ ಬಾಸ್ ಒಟಿಟಿ’ಯ ಬಳಿಕ ಖ್ಯಾತಿಯನ್ನು ಗಳಿಸಿದರು. ಉರ್ಫಿ ಜಾವೇದ್ ʼಬಿಗ್ ಬಾಸ್ ಒಟಿಟಿ’ಯಲ್ಲಿ ಭಾಗವಹಿಸಿದ ನಂತರ ಖ್ಯಾತಿ ಗಳಿಸಿದರು. ಹಲವಾರು ಟಿವಿ ಶೋಗಳಲ್ಲಿಯೂ ನಟಿಸಿದ್ದಾರೆ. ಅವರು ‘ಬಡೆ ಭಯ್ಯಾ ಕಿ ದುಲ್ಹನಿಯಾ’ ಚಿತ್ರದಲ್ಲಿ ಅವ್ನಿ ಪಾತ್ರವನ್ನು ಮರು ಸೃಷ್ಟಿಸುವ ಮೂಲಕ ಪ್ರವರ್ದಮಾನಕ್ಕೆ ಬಂದಿದ್ದರು. ಜತೆಗೆ ಹಲವು ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಎಂಟಿವಿ ಸ್ಪಿಲ್ಟ್‌ವಿಲ್ಲಾ ಸೀಸನ್‌-14 (MTV Splitsvilla-season 14)ರಲ್ಲಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: Urfi Javed: ಬಂಧನದ ಬಗ್ಗೆ ‘ರೀಲ್’‌ ಬಿಟ್ಟ ಉರ್ಫಿಗೆ ಎದುರಾಯ್ತು ‘ರಿಯಲ್‌’ ಸಂಕಷ್ಟ!

ಬಂಧನದ ಬಗ್ಗೆ ‘ರೀಲ್’‌ ಬಿಟ್ಟಿದ್ದ ಉರ್ಫಿ

ಚಿತ್ರ-ವಿಚಿತ್ರ ಬಟ್ಟೆ ತೊಡುವ ಮೂಲಕ ಸದಾ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೇದ್‌ (Urfi Javed) ಅವರನ್ನು ಪೊಲೀಸರು ಅರೆಸ್ಟ್‌ ಮಾಡುತ್ತಿರುವ ಫೇಕ್‌ ವಿಡಿಯೊ ಇತ್ತೀಚೆಗೆ ಚರ್ಚೆಗೆ ಗ್ರಾಸವಾಗಿದ್ದರು. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಮುಂಬೈ ಪೊಲೀಸರು ನಟಿಯ ವಿರುದ್ಧ ದೂರು ದಾಖಲಿಸಿದ್ದರು ʼʼಉರ್ಫಿ ಜಾವೇದ್‌ ಅವರನ್ನು ಬಂಧಿಸಲಾಗಿದೆ ಎನ್ನಲಾದ ವಿಡಿಯೊ ನಿಜವಲ್ಲ. ಫೇಕ್‌ ವಿಡಿಯೊ ಸೃಷ್ಟಿಸಿ (Fake arrest video) ಸಮವಸ್ತ್ರವನ್ನು ದುರುಪಯೋಗಪಡಿಸಿದ್ದಕ್ಕಾಗಿ ಉರ್ಫಿ ಜಾವೇದ್‌ ವಿರುದ್ಧ ದೂರು ದಾಖಲಿಸಲಾಗಿದೆʼʼ ಎಂದು ಪೊಲೀಸರು ತಿಳಿಸಿದ್ದರು.

ವೈರಲ್‌ ಆದ ವೀಡಿಯೊದಲ್ಲಿ ಉರ್ಫಿ ಜಾವೇದ್‌ ಅವರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿ ಕರೆದುಕೊಂಡು ಹೋಗುತ್ತಿರುವುದು ಕಂಡು ಬಂದಿತ್ತು. ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಮ್ಮೊಂದಿಗೆ ಪೊಲೀಸ್ ಠಾಣೆಗೆ ಬರುವಂತೆ ಹೇಳುತ್ತಾರೆ. ʼʼಈ ರೀತಿ ತುಂಡು ತುಂಡು ಬಟ್ಟೆಯನ್ನು ಹಾಕಿಕೊಂಡು ಯಾರು ಓಡಾಡುತ್ತಾರೆ?ʼʼ ಎಂದು ಅಧಿಕಾರಿ ಉರ್ಫಿಗೆ ಪ್ರಶ್ನೆ ಕೇಳುತ್ತಾರೆ. ಇದಾದ ಬಳಿಕ ಅಧಿಕಾರಿಗಳು ಏನು ಹೇಳಬೇಕೆಂದರೂ ಪೊಲೀಸ್ ಠಾಣೆಯಲ್ಲಿ ಹೇಳಬಹುದು ಎಂದು ವಾದ ವಿವಾದದ ನಂತರ ಉರ್ಫಿಯನ್ನು ಕಸ್ಟಡಿಗೆ ಕರೆದೊಯ್ಯುತ್ತಾರೆ. ವಿಡಿಯೊದಲ್ಲಿ ಉರ್ಫಿ ಒಂದು ಜೊತೆ ಡೆನಿಮ್ ಪ್ಯಾಂಟ್‌ನೊಂದಿಗೆ ಬ್ಯಾಕ್‌ಲೆಸ್‌ ಕೆಂಪು ಟಾಪ್ ಧರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Hum Do Humare Barah:ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ.

VISTARANEWS.COM


on

hum do humare barah
Koo

ವಿಜಯನಗರ: ಮುಸ್ಲಿಂ ಸಮುದಾಯವನ್ನು (muslim community) ಕೇಂದ್ರೀಕರಿಸಿದ ಚಿತ್ರಕತೆ (Screen play) ಹೊಂದಿರುವ ʼಹಮ್‌ ದೋ, ಹಮಾರೇ ಬಾರಹ್ʼ (Hum Do Humare Barah) ಚಿತ್ರ ಬಿಡುಗಡೆಗೆ ಆಕ್ಷೇಪಣೆ ವ್ಯಕ್ತವಾಗಿದೆ. ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ ಮತ್ತು ಮುಸ್ಲಿಂ ಸಮಾಜದಿಂದ ವಿರೋಧ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಇದರ ಬಿಡುಗಡೆ ತಡೆಯುವಂತೆ ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಯಾವುದೀ ಸಿನಿಮಾ?

ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ. ಒಂದೆಡೆ, ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಕೊಲೆ ಮತ್ತು ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಕೂಡ ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತೆ ಎನ್‌ಸಿಪಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ನಟ ಅನ್ನು ಕಪೂರ್ ಮಹಾರಾಷ್ಟ್ರ ಪೊಲೀಸ್ ಮತ್ತು ಗೃಹ ಸಚಿವಾಲಯದಿಂದ ಭದ್ರತೆಯನ್ನು ಕೋರಿದ್ದಾರೆ.

ಕಮಲ್ ಚಂದ್ರ ನಿರ್ದೇಶನದ ಈ ಚಿತ್ರದಲ್ಲಿ ಅನ್ನು ಕಪೂರ್ ಹೊರತಾಗಿ ಪಾರ್ಥ್ ಸಮಾನ್, ಅಶ್ವಿನಿ ಕಲ್ಸೇಕರ್ ಮತ್ತು ಪರಿತೋಷ್ ತಿವಾರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇತ್ತೀಚೆಗೆ ಈ ಚಿತ್ರವು ಕಾನ್ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಅಲ್ಲಿ ಅದು ಪ್ರಶಂಸಿಸಲ್ಪಟ್ಟಿದೆ. ಈ ಚಿತ್ರದ ಟೀಸರ್ ನೋಡಿದ ಮೇಲೆ ನಮಗೆ, ನಮ್ಮ ಕಲಾವಿದರಿಗೆ ಹಾಗೂ ನಿರ್ದೇಶಕರಿಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅನ್ನು ಕಪೂರ್ ಹೇಳಿದ್ದಾರೆ. “ಐಸಿಸ್‌ ಮಾದರಿಯಲ್ಲಿ ಶಿರಚ್ಛೇದ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ನಮ್ಮ ಚಿತ್ರಕ್ಕೆ ಸಂಬಂಧಿಸಿದ ಎಲ್ಲಾ ಕಲಾವಿದರಿಗೆ ರಕ್ಷಣೆ ನೀಡುವಂತೆ ನಾನು ಮಹಾರಾಷ್ಟ್ರ ಪೊಲೀಸರು, ಗೃಹ ಸಚಿವರು ಮತ್ತು ಗೃಹ ಸಚಿವಾಲಯವನ್ನು ಕೋರುತ್ತೇನೆ” ಎಂದಿದ್ದಾರೆ.

“ನಮಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಫೋನ್ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ನನ್ನ ಚಿತ್ರತಂಡಕ್ಕೆ ಹೇಳುತ್ತೇನೆ. ಸಿನಿಮಾ ನೋಡದೆ ಅದರ ಬಗ್ಗೆ ಯಾವುದೇ ಅಭಿಪ್ರಾಯ ಮೂಡಿಸಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ನಮ್ಮ ಸಿನಿಮಾ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತದೆ. ಇದು ಜನಸಂಖ್ಯೆ ನಿಯಂತ್ರಣದ ಬಗ್ಗೆ ಮಾತನಾಡುತ್ತದೆ. ಯಾವುದೇ ಧರ್ಮವನ್ನು ಅವಮಾನಿಸುವುದು ಅಥವಾ ಮಾನಹಾನಿ ಮಾಡುವುದು ನಮ್ಮ ಉದ್ದೇಶವಲ್ಲ” ​​ಎಂದು ಅನ್ನು ಕಪೂರ್‌ ಹೇಳಿದ್ದಾರೆ.

ಕರ್ನಾಟಕದಲ್ಲೂ ಆಕ್ಷೇಪ

ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ, “ಈ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಶಾಂತಿ ಸೌಹಾರ್ದತೆ ಕದಡುವ ಕೆಲಸ ಈ ಸಿನಿಮಾದಿಂದ ಮಾಡಲಾಗುತ್ತಿದೆ. ಚಿತ್ರೀಕರಣ ಮಾಡಬೇಕು ಅಂದ್ರೆ ಪ್ರಜ್ವಲ್ ರೇವಣ್ಣರವರ ಪೆನ್ ಡ್ರೈವ್ ವಿಷಯ ಮೇಲೆ ಚಿತ್ರ ಮಾಡಲಿ. ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಚಿತ್ರ ಮಾಡಲಿ. ಸಾಮಾನ್ಯ ಜನರು ಪಡುತ್ತಿರುವ ಕಷ್ಟಗಳನ್ನು ಅರ್ಥ ಮಾಡಿಕೊಂಡು ಚಿತ್ರೀಕರಣ ಮಾಡಲಿ. ಧರ್ಮವನ್ನು ಮುಂದಿಟ್ಟು ಚಿತ್ರೀಕರಣ ಮಾಡೋದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರ ಚಿತ್ರ ಬಿಡುಗಡೆಗೆ ತಡೆ ಹಾಕಬೇಕು” ಎಂದು ಒತ್ತಾಯಿಸಿದೆ.‌

ಇದನ್ನೂ ಓದಿ: Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Continue Reading

ಬಾಲಿವುಡ್

Saiyami Kher: ಜರ್ಮನಿಯ ಫೇಮಸ್‌ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಖ್ಯಾತ ನಟಿ!

Saiyami Kher: ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

VISTARANEWS.COM


on

Saiyami Kher to participate in Ironman Triathlon in Germany
Koo

ಬೆಂಗಳೂರು: ನಟಿ ಸಯ್ಯಾಮಿ ಖೇರ್ (Saiyami Kher ) ಸೆಪ್ಟೆಂಬರ್ 15ರಂದು ಜರ್ಮನಿಯಲ್ಲಿ ನಡೆಯಲಿರುವ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ನಟಿ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ನಟಿ ಈಜು, ಸೈಕ್ಲಿಂಗ್ ಮತ್ತು ಜಿಮ್‌ನಲ್ಲಿ ತರಬೇತಿ ಪಡೆಯುವ ವಿಡಿಯೊ ಇದರಲ್ಲಿದೆ.

ನಟಿ ಪೋಸ್ಟ್‌ನಲ್ಲಿ ʻʻಕೊರೊನಾ ಆದ ಬಳಿಕ ಸಮಯ ಹೇಗೆ ಸಾಗಿತು ಗೊತ್ತಾಗಿಲ್ಲ. ಶೂಟಿಂಗ್‌ ಸೆಟ್‌ನಲ್ಲಿ ಪ್ರತಿದಿನ ಆನಂದಿಸುತ್ತಿದ್ದೆ. ಜೀವನ ರೋಲರ್ ಕೋಸ್ಟರ್ ಆಗಿತ್ತು. ಕಳೆದ ವರ್ಷ ಬೈಕ್ ಅಪಘಾತ ಕೂಡ ಆಯ್ತು. ಎಂಟು ತಿಂಗಳ ಕಾಲ ವ್ಯಾಯಾಮ ಏನೂ ಇಲ್ಲದೆ ಹಾಗೇ ಇದ್ದೆ. ಇದಾದ ಬಳಿಕ , ಟ್ರಯಥ್ಲಾನ್ ಈವೆಂಟ್‌ಗೆ ತರಬೇತಿ ಪಡೆಯುವುದು ಅತ್ಯಂತ ಕಠಿಣವಾಗಿತ್ತು. ಟ್ರಯಥ್ಲಾನ್ ಈವೆಂಟ್‌ಗಾಗಿ ಎರಡು ತಿಂಗಳ ತರಬೇತಿಯನ್ನು ಪಡೆದ ನಂತ ಇಂದು ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗಿಯಾಗಲು ಸಿದ್ಧನಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಸಿನಿಮಾ ವಿಚಾರಕ್ಕೆ ಬಂದರೆ, ಸಯ್ಯಾಮಿ ʻಅಗ್ನಿʼ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ದಿವ್ಯೆಂದು ಶರ್ಮಾ ಅವರೊಂದಿಗೆ ನಟಿಸಲಿದ್ದಾರೆ. ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ಬೆಂಬಲದೊಂದಿಗೆ ರಾಹುಲ್ ಧೋಲಾಕಿಯಾ ನಿರ್ದೇಶನವಿದೆ.

ಮರಾಠಿಯ ಖ್ಯಾತ ನಟಿ ಉಷಾ ಕಿರಣ್ ಅವರ ಮೊಮ್ಮಗಳು ಮತ್ತು ಪ್ರಮುಖ ಬಾಲಿವುಡ್ ನಟಿ ತನ್ವಿ ಅಜ್ಮಿ ಅವರ ಸೊಸೆ. ರಾಕೇಶ್ ಓಂಪ್ರಕಾಶ್ ಮೆಹ್ರಾ ನಿರ್ದೇಶಿಸಿದ ಮತ್ತು 2016 ರಲ್ಲಿ ಬಿಡುಗಡೆಯಾದ “ಮಿರ್ಜ್ಯಾ” ಚಿತ್ರದಲ್ಲಿನ ಅಭಿನಯಕ್ಕಾಗಿ ಸೈಯಾಮಿ ಖೇರ್ ಮನ್ನಣೆ ಗಳಿಸಿದರು.

Continue Reading

ಬಾಲಿವುಡ್

Malaika Arora: 38ರ ಅರ್ಜುನ್‌ ಕಪೂರ್‌ಗೆ 50ರ ಮಲೈಕಾ ಅರೋರಾ ಸಹವಾಸ ಸಾಕಾಯ್ತಾ?!

Malaika Arora: ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

VISTARANEWS.COM


on

Malaika Arora respectfully part ways Here what we know
Koo

ಬೆಂಗಳೂರು: ಮಲೈಕಾ ಅರೋರಾ (Malaika Arora) ಮತ್ತು ಅರ್ಜುನ್ ಕಪೂರ್(Arjun Kapoor) ಆಗಾಗ ವಕೇಶನ್‌ ಮೂಡ್‌ನಲ್ಲಿರುವ ಫೋಟೊವನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಜತೆಗೆ ಅದೆಷ್ಟೋ ಬಾರಿ ಸಾರ್ವಜನಿಕವಾಗಿ ಕಾಣಿಸಿದ್ದುಂಟು. ಆದರೀಗ ಜೋಡಿ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪರಸ್ಪರರ ಭವಿಷ್ಯದ ಒಳಿತಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಮಲೈಕಾ ಮತ್ತು ಅರ್ಜುನ್ ʼವಿಶೇಷವಾದ ಸಂಬಂಧʼವನ್ನು ಹೊಂದಿದ್ದರು. ಇಬ್ಬರೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಜೋಡಿ ಬೇರೆಯಾಗಬೇಕು ಎಂದು ನಿರ್ಧರಿಸಿದೆ. ಇಷ್ಟೂ ವರ್ಷಗಳಲ್ಲಿ, ಅವರು ತಮ್ಮ ಸಂಬಂಧಕ್ಕೆ ಗೌರವವನ್ನು ನೀಡಿದ್ದಾರೆ. ಒಂದು ವೇಳೆ ಬೇರೆಯಾಗಲು ನಿರ್ಧರಿಸಿದರೂ ಪರಸ್ಪರ ಅದೇ ಗೌರವವನ್ನು ಕಾಪಾಡಿಕೊಂಡು ಹೋಗುತ್ತಾರೆ ಎಂದು ವರದಿಯಾಗಿದೆ.

ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

ಇತ್ತೀಚಿನ ವರದಿಗಳ ಪ್ರಕಾರ ಇಬ್ಬರ ನಡುವೆ ಬಿರುಕು ಮೂಡಿದೆ ಎನ್ನಲಾಗಿದೆ. ಅರ್ಜುನ್‌ ಕಪೂರ್ ಕುಟುಂಬದವರನ್ನು ಅನ್​ಫಾಲೋ ಮಾಡಿದ್ದಾರೆ ಮಲೈಕಾ ಅರೋರಾ. ಅಷ್ಟೇ ಅಲ್ಲದೇ ಅರ್ಜುನ್ ಕಪೂರ್ ಈಗ ನಟಿ ಕುಶಾ ಕಪಿಲಾ (Kusha Kapila) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂತಲೂ ವರದಿಗಳಿವೆ.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಈ ಮೊದಲು ಮಲೈಕಾ ಅವರು ಅರ್ಜುನ್ ಕಪೂರ್ ತಂದೆ ಬೋನಿ ಕಪೂರ್, ಕುಟುಂಬದ ಇತರ ಸದಸ್ಯರಾದ ಅನಿಲ್ ಕಪೂರ್, ಜಾನ್ವಿ ಕಪೂರ್, ಖುಷಿ ಕಪೂರ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಇವರುಗಳನ್ನು ಮಲೈಕಾ ಅನ್​ಫಾಲೋ ಮಾಡಿದ್ದಾರೆ. ಆದರೆ, ಅರ್ಜುನ್ ಕಪೂರ್ ಅವರನ್ನು ಈಗಲೂ ಅವರು ಫಾಲೋ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿರುವ ಕರಣ್ ಜೋಹರ್ ಅವರ ಮನೆಯಲ್ಲಿ ಅರ್ಜುನ್ ಮತ್ತು ಕುಶಾ ಒಟ್ಟಿಗೆ ಪಾರ್ಟಿ ಮಾಡಿದ್ದಾಗಿನಿಂದಲೂ ಸಂಬಂಧದ ವದಂತಿಗಳು ಪ್ರಾರಂಭವಾದವು.

ಮಲೈಕಾ ಈ ಹಿಂದೆ ನಟ, ನಿರ್ಮಾಪಕ ಅರ್ಬಾಜ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು 2016ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಅವರಿಗೆ ಅರ್ಹಾನ್ ಖಾನ್ ಹೆಸರಿನ ಮಗನಿದ್ದಾನೆ. ಮಲೈಕಾ ಮತ್ತು ಅರ್ಜುನ್ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದು, 2019ರಲ್ಲಿ ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಅರ್ಜುನ್‌ ಕಪೂರ್‌ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ʼಸಿಂಗಮ್ ಅಗೇನ್ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅವರು ಅಜಯ್‌ ದೇವಗನ್‌ಗೆ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಮತ್ತು ಕರೀನಾ ಕಪೂರ್ ಖಾನ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Continue Reading

ಒಟಿಟಿ

OTT Releases: ಒಟಿಟಿಯಲ್ಲಿ ಈ ವಾರ ತೆರೆ ಕಾಣುತ್ತಿವೆ ಬಹು ನಿರೀಕ್ಷೆಯ ಈ ಐದು ಚಿತ್ರಗಳು

ಪ್ರತೀಕ್ ಗಾಂಧಿ ಅಭಿನಯದ ದೇಧ್ ಭೀಗಾ ಜಮೀನ್ ಸೇರಿದಂತೆ ಐದು ಬಹು ನಿರೀಕ್ಷೆಯ ಚಿತ್ರಗಳು ಈ ವಾರ ಒಟಿಟಿಯಲ್ಲಿದ್ದು (OTT Releases), ಮನೆಮಂದಿ, ಸ್ನೇಹಿತರೊಂದಿಗೆ ನಿಮ್ಮಿಷ್ಟದ ಚಿತ್ರವನ್ನು ನೋಡುತ್ತಾ ಈ ವಾರದ ರಜೆಯನ್ನು ಕಳೆಯಬಹುದು. ಈ ಐದು ಚಿತ್ರಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

OTT Releases
Koo

ನಿಧಾನಕ್ಕಾದರೂ ಸರಿ ಮಳೆ (rain) ಮೆಲ್ಲನೆ ಅಡಿಯಿಡುತ್ತಿದೆ. ಬೇಸಿಗೆಯ (summer) ಬಿಸಿಲಿನಿಂದ ಬೇಸತ್ತು ತಂಪಾದ ವಾತಾವರಣದಲ್ಲಿ ಹೊದಿಕೆ ಹೊದ್ದು ಮಲಗುವುದು ಬೇಸರ ಮೂಡಿಸುತ್ತದೆ. ಇನ್ನು ಮನೆಯಲ್ಲಿ ರಜೆಯನ್ನು ಕಳೆಯುವುದಂತೂ ತುಂಬಾ ಬೋರು ಎಂದೆನಿಸುವುದು ಉಂಟು. ಆದರೆ ಈ ವಾರ ಐದು ಚಿತ್ರಗಳು (movies) ಒಟಿಟಿಯಲ್ಲಿ (OTT) ಬಿಡುಗಡೆಯಾಗುತ್ತಿದ್ದು (OTT Releases), ರಜೆಯನ್ನು ಖುಷಿಯಿಂದ ಕಳೆಯಬಹುದು.

ಚಿತ್ರಮಂದಿರಗಳಿಗೆ ಹೋಗಿ ಸರತಿಯಲ್ಲಿ ನಿಂತು ಟಿಕೆಟ್ ಪಡೆದು ಜನಜಂಗುಳಿಯ ಮಧ್ಯೆ ಚಿತ್ರ ವೀಕ್ಷಿಸಲು ಇಷ್ಟ ಪಡದವರಿಗೆ ಒಟಿಟಿಗಳು, ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹಲವಾರು ಹೊಸಹೊಸ ಚಲನಚಿತ್ರಗಳು ಮತ್ತು ಪ್ರದರ್ಶನಗಳು ಕಾಣಿಸುತ್ತಿವೆ. ಆದರೆ ಇತ್ತೀಚಿಗೆ ಪ್ರದರ್ಶನಗಳು ಕಡಿಮೆಯಾಗಿದ್ದರೂ ಈ ವಾರಾಂತ್ಯದಲ್ಲಿ ಭರ್ಜರಿಯಾಗಿ ಚಿತ್ರಗಳು ಸಿನಿ ಪರದೆಯ ಮೇಲೆ ಬಂದಿದೆ.

ದೇಧ್ ಭೀಗಾ ಜಮೀನ್ (Dedh Bhiga Zameen)

ಜಿಯೋ ಸಿನಿಮಾದಲ್ಲಿ (JioCinema) ಮೇ 31ರಿಂದ ಪ್ರದರ್ಶನ ಕಾಣಲಿರುವ ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಕ್ಯಾಮ್ 1992ನ ಬಳಿಕ ಈ ಚಿತ್ರದಲ್ಲಿ ಪ್ರತೀಕ್ ಅವರ ಪ್ರತಿಭೆ ಮತ್ತಷ್ಟು ಪ್ರೇಕ್ಷಕರ ಮನ ಗೆಲ್ಲಲಿದೆ. ಮಡಗಾಂವ್ ಎಕ್ಸ್‌ಪ್ರೆಸ್‌ನ ಯಶಸ್ಸು ಮತ್ತು ದೋ ಔರ್ ದೋ ಪ್ಯಾರ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಅನಂತರ ಪ್ರತೀಕ್ ಈಗ ಸಂಪೂರ್ಣವಾಗಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಖುಶಾಲಿ ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ಜೊತೆಯಾಗಿರುವ ಪ್ರತೀಕ್ ಸ್ವಂತ ಹಕ್ಕುಗಳಿಗಾಗಿ ಹೋರಾಡುತ್ತಿರುವ ಸಾಮಾನ್ಯ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ಮ ಮೀಡಿಯಾ ಆಂಡ್ ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಡಿಯಲ್ಲಿ ಶೈಲೇಶ್ ಆರ್ ಸಿಂಗ್, ಸುನಿಲ್ ಜೈನ್ ಮತ್ತು ಹಿತೇಶ್ ಠಕ್ಕರ್ ನಿರ್ಮಿಸಿದ ಪುಲ್ಕಿತ್ ಬರೆದು ನಿರ್ದೇಶಿಸಿದ ಈ ಚಿತ್ರವು ಭ್ರಷ್ಟ ವ್ಯವಸ್ಥೆಯ ವಿರುದ್ಧ ಮಧ್ಯಮ ವರ್ಗದ ಸಾಮಾನ್ಯ ಜನರ ಹೋರಾಟದ ಮೇಲೆ ಬೆಳಕು ಚೆಲ್ಲಿದೆ.


ವಿಗಿಲಿ 2 (Vigil 2)

ನೆಟ್‌ಫ್ಲಿಕ್ಸ್ (Netflix) ಮೇ 31ರಂದು ತೆರೆ ಕಾಣುವ ಟಾಮ್ ಎಡ್ಜ್ ಅವರ ಪೊಲೀಸ್ ಕಾರ್ಯಾಚರಣೆಯ ಎರಡನೇ ಸರಣಿ ಇದಾಗಿದೆ. 2021ರಲ್ಲಿ ಮೊದಲ ಸೀಸನ್ ಕೊನೆಗೊಂಡಾಗ ನಿಖರವಾಗಿ ಪ್ರಾರಂಭವಾಗುತ್ತದೆ ಎಂದು ಹೇಳಲಾಗಿತ್ತು. ಸುರನ್ನೆ ಜೋನ್ಸ್ ಅವರು ಡಿಟೆಕ್ಟಿವ್ ಚೀಫ್ ಇನ್‌ಸ್ಪೆಕ್ಟರ್ ಆಮಿ ಸಿಲ್ವಾ ಪಾತ್ರದಲ್ಲಿ ಈ ಸರಣಿಯಲ್ಲೂ ಕಾಣಿಸಿಕೊಂಡಿದ್ದಾರೆ. ಖಾಸಗಿ ಸಂಸ್ಥೆಗಳೊಂದಿಗೆ ಸೇರಿ ಯುಕೆ ಸರ್ಕಾರ ನಡೆಸುವ ಪಿತೂರಿಯ ಕಥೆಯನ್ನು ಇದು ಒಳಗೊಂಡಿದೆ.


ಎ ಪಾರ್ಟ್ ಆಫ್ ಯು (A Part of You )

ನೆಟ್‌ಫ್ಲಿಕ್ಸ್ ನಲ್ಲಿ ಮೇ 31ರಿಂದ ತೆರೆ ಕಾಣುವ ಈ ಚಿತ್ರದಲ್ಲಿ ಹದಿಹರೆಯದವರು ತಮ್ಮನ್ನು ಮತ್ತು ತಮ್ಮ ಹೊಸ ಪ್ರಪಂಚವನ್ನು ಅರ್ಥಮಾಡಿಕೊಳ್ಳಲು ಹೆಣಗಾಡುವ ಕಥೆಯನ್ನು ಒಳಗೊಂಡಿದೆ. ಸಿಗ್ಗೆ ಎಕ್ಲುಂಡ್ ಅವರ ನಿರ್ದೇಶನದ ಈ ಚಿತ್ರದಲ್ಲಿ ಫೆಲಿಸಿಯಾ ಮ್ಯಾಕ್ಸಿಮ್, ಎಡ್ವಿನ್ ರೈಡಿಂಗ್, ಇಡಾ ಎಂಗ್ವೊಲ್, ಅಲ್ವಾ ಬ್ರಾಟ್ ಮತ್ತು ಜರಾ ಲಾರ್ಸನ್ ಅವರ ಮೊದಲ ಬಾರಿಗೆ ಅಭಿನಯಿಸಿದ್ದಾರೆ.


ರೈಸಿಂಗ್ ವಾಯ್ಸೆಸ್‌ (Raising Voices )

ನೆಟ್‌ಫ್ಲಿಕ್ಸ್ ನಲ್ಲಿ ಮೇ 31ರಂದು ತೆರೆ ಕಾಣಲಿರುವ ಈ ಚಿತ್ರದಲ್ಲಿ 17 ವರ್ಷದ ಬಾಲಕಿ ಪ್ರೌಢಶಾಲೆಯಲ್ಲಿ ಲೈಂಗಿಕ ದೌರ್ಜನ್ಯವನ್ನು ವರದಿ ಮಾಡಿದಾಗ ತನಿಖೆಯಿಂದ ಅವಳ ಜೀವನವನ್ನು ಹೆಚ್ಚು ಚರ್ಚೆಯಾಗುತ್ತಿದೆ. ಅವಳ ಸಂಬಂಧಗಳನ್ನು ಪರೀಕ್ಷಿಸಲಾಗುತ್ತದೆ. ಜೋಸ್ ಮ್ಯಾನುಯೆಲ್ ಲೊರೆಂಜೊ ಮತ್ತು ಮಿಗುಯೆಲ್ ಸಾಯೆಜ್ ಕ್ಯಾರಲ್ ಅವರ ನಿರ್ದೇಶನದ ಈ ಚಿತ್ರದಲ್ಲಿ ನಿಕೋಲ್ ವ್ಯಾಲೇಸ್, ಕ್ಲಾರಾ ಗಲ್ಲೆ, ಐಚಾ ವಿಲ್ಲಾವರ್ಡೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ:Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಎರಿಕ್ (Eric)

ನೆಟ್‌ಫ್ಲಿಕ್ಸ್ ನಲ್ಲಿ ಮೇ 30ರಿಂದ ಪ್ರದರ್ಶನ ಕಾಣುತ್ತಿರುವ ಈ ಚಿತ್ರದಲ್ಲಿ ಎರಿಕ್ ಬೆನೆಡಿಕ್ಟ್ ಕಂಬರ್ಬ್ಯಾಚ್, ಗೇಬಿ ಹಾಫ್ಮನ್ ಮತ್ತು ಮೆಕಿನ್ಲೆ ಬೆಲ್ಚರ್ III ನಟಿಸಿದ್ದಾರೆ. ಅಬಿ ಮೋರ್ಗನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಒಂಬತ್ತು ವರ್ಷದ ಮಗು ಒಂದು ದಿನ ಬೆಳಗ್ಗೆ ಶಾಲೆಗೆ ಹೋಗುವ ದಾರಿಯಲ್ಲಿ ಕಣ್ಮರೆಯಾಗುತ್ತದೆ. ತಂದೆ ತನ್ನ ಮಗನಿಗಾಗಿ ಹುಡುಕುವ ಕಥೆ ಇದರಲ್ಲಿದೆ.

Continue Reading
Advertisement
Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್2 mins ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ5 mins ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ21 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ30 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ30 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ31 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ39 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ45 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Dolly Dhananjay kotee distribution rights held by KRG Studios
ಸ್ಯಾಂಡಲ್ ವುಡ್49 mins ago

Dolly Dhananjay: ಕೆಆರ್​ಜಿ ಸ್ಟುಡಿಯೋಸ್ ಪಾಲಾದ ‘ಕೋಟಿ‌’ ವಿತರಣಾ ಹಕ್ಕು; ರಿಲೀಸ್‌ಗೆ ಕೌಂಟ್‌ ಡೌನ್!

bhavani revanna case
ಪ್ರಮುಖ ಸುದ್ದಿ1 hour ago

Bhavani Revanna: `ಮನೆಗೆ ಬನ್ನಿʼ ಎಂದ ಭವಾನಿ ರೇವಣ್ಣ ಮನೆಯಲ್ಲಿಲ್ಲ! ಹಾಗಾದ್ರೆ ಎಲ್ಲಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌