Motivational story: ಉಪ್ಪನ್ನೇ ತಿಂದ್ರೆ ಕಹಿ, ಎಲ್ಲದರ ಜತೆ ಬೆರೆಸಿ ತಿಂದ್ರೆ? - Vistara News

ಸ್ಫೂರ್ತಿ ಕತೆ

Motivational story: ಉಪ್ಪನ್ನೇ ತಿಂದ್ರೆ ಕಹಿ, ಎಲ್ಲದರ ಜತೆ ಬೆರೆಸಿ ತಿಂದ್ರೆ?

Motivational story: ಜೀವನದ ತುಂಬಾ ನೋವು, ಬೇಸರ ಅನ್ನುತ್ತಿದ್ದ ಯುವಕನಿಗೆ ಗುರುಗಳು ನೀರು ಮತ್ತು ಉಪ್ಪಿನ ಮೂಲಕ ಕಲಿಸಿಕೊಟ್ಟಿದ್ದೇನು?

VISTARANEWS.COM


on

motivational story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- motivational story

ಒಬ್ಬ ಯುವಕನಿಗೆ ಬದುಕೇ ಬೇಸರವಾಗಿತ್ತು. ಯಾವುದರಲ್ಲೂ ಆಸಕ್ತಿ ಇಲ್ಲ. ಒಂಥರಾ ಖಿನ್ನತೆ. ಮನೆಯಲ್ಲಿ ಒಬ್ಬನೇ ಕುಳಿತಿರುತ್ತಿದ್ದ. ಸ್ನೇಹಿತರ ಜತೆಗೆ ಬೆರೆಯುವುದು ಕೂಡಾ ಬೇಡ ಅನಿಸುತ್ತಿತ್ತು. ಒಂದು ದಿನ ಆ ಊರಿಗೆ ಒಬ್ಬ ಗುರುಗಳು ಬಂದಿದ್ದಾರೆ ಎನ್ನುವ ಸುದ್ದಿ ಅವನಿಗೆ ಗೊತ್ತಾಯಿತು. ತನ್ನ ಸಮಸ್ಯೆಗೆ ಅವರ ಬಳಿ ಏನಾದರೂ ಪರಿಹಾರ ಇರಬಹುದಾ ಎಂದು ಯೋಚಿಸಿದ.

ಯುವಕ ಗುರುಗಳ ಬಳಿಗೆ ಹೋಗಿ, ʻʻಜೀವನದಲ್ಲಿ ನನಗೆ ಹಲವಾರು ಸಮಸ್ಯೆಗಳಿವೆ. ಹಾಗಾಗಿ ಸದಾ ಬೇಸರದಲ್ಲಿ ಕಾಲ ಕಳೆಯುತ್ತಿದ್ದೇನೆ. ನಾನು ಎಲ್ಲರ ಹಾಗೆ ಸಂತೋಷವಾಗಿರೋದು ಹೇಗೆ? ದಯವಿಟ್ಟು ನನ್ನ ಸಮಸ್ಯೆಗೆ ಪರಿಹಾರ ತಿಳಿಸಿʼʼ ಎಂದು ಕೇಳಿದ.

ಗುರುಗಳು ಯುವಕ ಹೇಳಿದ್ದೆಲ್ಲವನ್ನೂ ಗಮನವಿಟ್ಟು ಕೇಳಿದರು. ಆದರೆ, ಏನೂ ಉತ್ತರ ನೀಡದೆ ಎದ್ದು ಒಳಗೆ ನಡೆದರು. ಯುವಕನಿಗೆ ಗೊಂದಲವಾಯಿತು. ʻʻನಾನೇನೋ ಇವರಾದರೂ ಪರಿಹಾರ ಹೇಳುತ್ತಾರೆ ಎಂದು ಇಲ್ಲಿಗೆ ಬಂದರೆ ಏನೂ ಹೇಳದೆ ಒಳಗೆ ಹೋಗಿಬಿಟ್ಟರಲ್ಲʼʼ ಅಂತ ಮನಸ್ಸಿನೊಳಗೇ ಹೇಳಿಕೊಂಡ. ಅಷ್ಟು ಹೊತ್ತಿಗೆ ಗುರುಗಳು ಹೊರಗೆ ಬಂದರು. ಅವರ ಒಂದು ಕೈಯಲ್ಲಿ ಒಂದು ಲೋಟ ನೀರು ಮತ್ತು ಒಂದು ಉಪ್ಪಿನ ಡಬ್ಬಿ ಇತ್ತು.

ʻʻಹುಡುಗಾ.. ಈ ಡಬ್ಬಿಯಿಂದ ಒಂದು ಮುಷ್ಟಿ ಉಪ್ಪು ತೆಗೆದು ಲೋಟದಲ್ಲಿರುವ ನೀರಿಗೆ ಹಾಕುʼʼ ಎಂದರು. ಯುವಕ ಹಾಗೇ ಮಾಡಿದ… ಉಪ್ಪು ಹಾಗೇ ನೀರಲ್ಲಿ ಕರಗಿತು. ಆ ಗುರುಗಳು ʻಅದನ್ನು ಕುಡಿʼ ಅಂದ್ರು. ಯವಕನಿಗೆ ಏನಪ್ಪಾ ಇದು ಅನಿಸಿತು.. ಆದರೆ, ಅಡ್ಡ ಮಾತು ಹೇಳಲಾಗದೆ ಒಂದು ಸಿಪ್‌ ಕುಡಿದ. ಅದಕ್ಕಿಂತ ಜಾಸ್ತಿ ಕುಡಿಯಲು ಆಗಲೇ ಇಲ್ಲ.

ಮುಖ ಸೊಟ್ಟಗೆ ಮಾಡಿದ ಯುವಕನಲ್ಲಿ ಗುರುಗಳು ಕೇಳಿದರು: ಹೇಗಿತ್ತಪ್ಪಾ ನೀರು?

ಹುಡುಗ ಹೇಳಿದ: ಕುಡಿಯಲು ಸಾಧ್ಯವೇ ಇಲ್ಲ ಗುರುಗಳೇ.. ಅಷ್ಟು ಉಪ್ಪಾಗಿದೆ.

ಗುರುಗಳು ನಕ್ಕು ಹೇಳಿದರು: ಆಯ್ತು ಬಿಡು.. ಈಗ ಒಂದು ಮುಷ್ಟಿ ಉಪ್ಪು ಹಿಡಿದುಕೊಂಡು ನನ್ನ ಜತೆಗೆ ಬಾ……

ಗುರುಗಳು ಯುವಕನನ್ನು ಒಂದು ಕೊಳದ ಬಳಿಗೆ ಕರೆದುಕೊಂಡು ಹೋದರು. ಕೈಯಲ್ಲಿರುವ ಉಪ್ಪನ್ನು ಕೊಳಕ್ಕೆ ಹಾಕು ಎಂದರು. ಹುಡುಗ ಹಾಕಿದ. ಈಗ ಒಂದು ಬೊಗಸೆ ನೀರು ಎತ್ತಿ ಕುಡಿ ಅಂದರು. ಯುವಕ ಕುಡಿದ.

ಗುರುಗಳು ʻಹೇಗಿದೆಯಪ್ಪಾ ನೀರುʼ ಎಂದು ಕೇಳಿದರು.

ಆಗ ಹುಡುಗ: ಚೆನ್ನಾಗಿದೆ ಗುರುಗಳೇ..

ಗುರುಗಳು ಕೇಳಿದರು: ಉಪ್ಪುಪ್ಪಾಗಿ ಏನಾದ್ರೂ ಇತ್ತಾ?

ಇಲ್ಲ ಗುರುಗಳೇ.. ಚೆನ್ನಾಗೇ ಇತ್ತು: ಎಂದ ಯುವಕ.

ಗುರುಗಳು ಕೊಳದ ಪಕ್ಕದಲ್ಲಿ ಯುವಕನನ್ನು ತನ್ನ ಜತೆ ಕೂರಿಸಿಕೊಂಡರು. ಅವನ ಕೈ ಹಿಡಿದುಕೊಂಡು ಹೇಳಿದರು: ಹುಡುಗಾ.. ಬದುಕಿನಲ್ಲಿ ನೋವು ಅನ್ನುವುದು ಉಪ್ಪಿದ್ದ ಹಾಗೆ. ಹೆಚ್ಚೂ ಅಲ್ಲ, ಕಡಿಮೆಯೂ ಅಲ್ಲ. ಉಪ್ಪಿನ ಪ್ರಮಾಣವೂ ಒಂದೇ ಇರುತ್ತದೆ. ಆದರೆ, ನಾವು ಅದನ್ನು ಯಾವುದಕ್ಕೆ ಹಾಕುತ್ತೇವೆ ಅನ್ನುವುದರ ಮೇಲೆ ಅದರ ರುಚಿಯಲ್ಲಿ ವ್ಯತ್ಯಾಸವಾಗುತ್ತದೆ.

ಉಪ್ಪು ಇದೆ ಅಂತ ಅದನ್ನಷ್ಟೇ ತಿನ್ನುತ್ತಾ ಕಹಿಯೇ ಆಗುತ್ತದೆ. ಸ್ವಲ್ಪ ಉಪ್ಪನ್ನು ಸಾರಿಗೆ ಹಾಕು, ಸ್ವಲ್ಪ ಸಾಂಬಾರಿಗೆ, ಸ್ವಲ್ಪ ಮಜ್ಜಿಗೆಗೆ, ಇನ್ನು ಸ್ವಲ್ಪ ಚಟ್ನಿಗೆ ಹಾಕು. ಎಲ್ಲವೂ ಎಷ್ಟೊಂದು ರುಚಿ ಅನಿಸ್ತದೆ ನೀನೇ ನೋಡು.

ಅಂದ್ರೆ ನೀನು ನೋವು, ಬೇಸರ ಅಂತ ಮೂಲೆಯಲ್ಲಿ ಕೂತರೆ ಅಲ್ಲೇ ನರಳುತ್ತಾ ಇರ್ತೀಯಾ…. ಹೊರಗಡೆ ವಿಶಾಲವಾದ ಜಗತ್ತಿದೆ.. ಈ ಕೊಳದ ಹಾಗೆ.. ಅದರ ಜತೆಗೆ ಬೆರೆತು ನೋಡು.. ನೋವು ಕೂಡಾ ಖುಷಿಯಾಗಿ ಬದಲಾಗುತ್ತದೆ.

ಗುರುಗಳ ಕಾಲಿಗೆ ನಮಸ್ಕರಿಸಿ ಹೊರಟ ಯುವಕನಿಗೆ ನೆನಪಾಯಿತು.. ಓ ಇವತ್ತು ತಂಗಿಯ ಬರ್ತ್‌ ಡೇ ಅಲ್ವಾ?

ಇದನ್ನೂ ಓದಿ | Motivational story: ಮೂರ್ಖನಾಗಿದ್ದು ಯಾರು? ಅವನಾ? ಇವನಾ?

ಇದನ್ನೂ ಓದಿ| Motivational story: ಆವತ್ತು ಆ ಹೋಟೆಲಿನಲ್ಲಿ ಕೊಟ್ಟಿದ್ದು ಬರೀ ಮಸಾಲೆ ದೋಸೆ ಆಗಿರಲಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

ರಾಜಮಾರ್ಗ ಅಂಕಣ: ಅನಾಥಾಶ್ರಮದ ಹುಡುಗಿಯು ಅಮೇರಿಕನ್ ಕಂಪೆನಿಯ ಸಿಇಒ ಆದ ಕಥೆ

ರಾಜಮಾರ್ಗ ಅಂಕಣ: ವಿಶೇಷ ಎಂದರೆ ಜ್ಯೋತಿ ರೆಡ್ಡಿ ಅವರು ಇಂದಿಗೂ ತನ್ನ ಬಾಲ್ಯದ ಕಷ್ಟಗಳನ್ನು ಮರೆತಿಲ್ಲ. ವರ್ಷಕ್ಕೊಮ್ಮೆ ಆದರೂ ಭಾರತಕ್ಕೆ ಬಂದೇ ಬರುತ್ತಾರೆ. ಅನಾಥಾಶ್ರಮಗಳಿಗೆ ಭೇಟಿ ನೀಡಿ ನೆರವು ನೀಡುತ್ತಾರೆ. ಹಲವು ಸರಕಾರಿ ಶಾಲೆಗಳ ನೂರಾರು ಬಡ ಮಕ್ಕಳ ಶಿಕ್ಷಣದ ವೆಚ್ಚವನ್ನು ಭರಿಸುತ್ತಾರೆ.

VISTARANEWS.COM


on

ರಾಜಮಾರ್ಗ ಅಂಕಣ Jyothi Reddy
Koo

ವಾರಂಗಲ್ ನಗರದ ಕಲ್ಲು ಒಡೆಯುವ ಹುಡುಗಿ ಜ್ಯೋತಿ ರೆಡ್ಡಿ ಬಿಲಿಯನ್ ಡಾಲರ್ ಕಂಪೆನಿ ಕಟ್ಟಿದ್ದು ಹೇಗೆ?

Rajendra-Bhat-Raja-Marga-Main-logo

:: ರಾಜೇಂದ್ರ ಭಟ್ ಕೆ.

ರಾಜಮಾರ್ಗ ಅಂಕಣ: ‘ಯಾವಾಗ ನಿನ್ನ ಆಕಾಂಕ್ಷೆಗಳು ಪ್ರಬಲವಾಗಿ ಇರುತ್ತವೆಯೋ, ಆಗ ನಿನ್ನೊಳಗೆ ಅತಿಮಾನುಷ ಶಕ್ತಿಗಳು ಪ್ರವಹಿಸುತ್ತವೆ.ʼ
(ನೆಪೋಲಿಯನ್ ಹಿಲ್)

ಈ ಮಾತಿಗೆ ನಿದರ್ಶನ ಆಗುವ ಸಾಧನೆ ಮಾಡಿ ತನ್ನ ಬದುಕನ್ನು ತಾನೇ ರೂಪಿಸಿಕೊಂಡಿರುವ ಒಬ್ಬ ಅನಾಥ ಹುಡುಗಿಯ ಕಥೆಯು ಇಂದು ನಿಮ್ಮ ಮುಂದೆ.

ಆಕೆಯ ಹೆಸರು ಜ್ಯೋತಿ ರೆಡ್ಡಿ (Jyothi Reddy). ಆಕೆ ತೆಲಂಗಾಣ ರಾಜ್ಯದ ವಾರಂಗಲನ ಅತ್ಯಂತ ಬಡ ಕುಟುಂಬದ ಹುಡುಗಿ ಆಗಿದ್ದಳು. ಆಕೆಯ ಹೆತ್ತವರಿಗೆ ಮೂರು ಗಂಡು ಮತ್ತು ಎರಡು ಹೆಣ್ಣು ಮಕ್ಕಳು. ಬಡತನ ಮತ್ತು ಹಸಿವು ಹೆಚ್ಚಾದ ಕಾರಣ ಅವಳ ಹೆತ್ತವರು ಇಬ್ಬರು ಹೆಣ್ಣು ಮಕ್ಕಳನ್ನು ಅನಾಥಾಶ್ರಮಕ್ಕೆ ಸೇರಿಸಿದರು. ಮತ್ತೆ ಅವರನ್ನು ನೋಡಲಿಕ್ಕೂ ಬರಲಿಲ್ಲ! ಅದರಲ್ಲಿ ಒಬ್ಬರು ಜ್ಯೋತಿ! ಆಕೆ ತನ್ನ ಬಾಲ್ಯದ ಐದು ವರ್ಷಗಳನ್ನು ಅನಾಥಾಶ್ರಮದಲ್ಲಿ ಕಳೆಯಬೇಕಾಯಿತು.

ಅಸಹಾಯಕ ಬದುಕು, ನೂರಾರು ಸವಾಲು!

ಹಿರಿಯ ಮಗಳಾದ ಜ್ಯೋತಿ ಅನಾಥ ಮಕ್ಕಳ ಸರಕಾರಿ ಶಾಲೆಗೆ ಹೋಗಿ 12ನೆಯ ತರಗತಿ ಪಾಸಾದಳು. ಅದರ ಬೆನ್ನಿಗೆ ಅವರ ಕಸಿನ್ ಜೊತೆಗೆ ಮದುವೆ ಕೂಡ ನಡೆದು ಹೋಯಿತು. ಆಗ ಅವರಿಗೆ 16 ವರ್ಷ! ಹದಿನೆಂಟು ತುಂಬುವ ಹೊತ್ತಿಗೆ ಮಡಿಲಲ್ಲಿ ಎರಡು ಹೆಣ್ಣು ಮಕ್ಕಳು ಮಲಗಿದ್ದವು! ಗಂಡನಿಗೆ ಎಲ್ಲಿಯೂ ಪರ್ಮನೆಂಟ್ ಕೆಲಸ ಇರಲಿಲ್ಲ. ಆಗ ಮಕ್ಕಳ ಜವಾಬ್ದಾರಿ ಕೂಡ ಜ್ಯೋತಿ ಅವರೇ ಹೊತ್ತರು.

ಕಠಿಣ ದುಡಿಮೆಯ ಜೊತೆಗೆ ಒಂದಷ್ಟು ಕನಸು!

ಬತ್ತದ ಗದ್ದೆಯಲ್ಲಿ ನೇಜಿಯನ್ನು ನೆಡುವ ಕೆಲಸ, ಕಲ್ಲನ್ನು ಒಡೆಯುವ ಕೆಲಸವನ್ನು ಕೂಡ ಅವರು ಮಾಡಿದರು. ತನ್ನ ಬದುಕು ಸ್ವಾವಲಂಬಿ ಆಗಬೇಕು ಎನ್ನುವ ತುಡಿತ ಅವರನ್ನು ಅಂತಹ ಕೆಲಸಕ್ಕೆ ದೂಡಿತು.

ಆಗ ಅವರ ನೆರವಿಗೆ ಬಂದದ್ದು ‘ನೆಹರೂ ಯುವ ಕೇಂದ್ರ’ ಎನ್ನುವ ಸರಕಾರದ ಅಧೀನ ಸಂಸ್ಥೆ. ಅದರಲ್ಲಿ ಜ್ಯೋತಿ ರೆಡ್ಡಿ ಅವರು ಸ್ವಯಂಸೇವಕಿಯಾಗಿ ಮಕ್ಕಳಿಗೆ ಪಾಠ ಮಾಡುವ ಕೆಲಸ ಮಾಡಿದರು. ಅದರ ಜೊತೆಗೆ ಅಂಬೇಡ್ಕರ್ ಬಯಲು ವಿವಿಯ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿ ಎರಡನ್ನೂ ಅವರು ಮುಗಿಸಿದರು. ಹಾಗೆಯೇ ಅವರ ಕಂಪ್ಯೂಟರ್ ಅಪ್ಲಿಕೇಶನ್ ಡಿಪ್ಲೊಮಾ ಕೂಡ ಪೂರ್ತಿ ಆಯಿತು.

ಟೀಚರ್ ಆಗಿ ಉದ್ಯೋಗ ಆರಂಭ ಮಾಡಿದರು

ಆಗ ಅವರಿಗೆ ಸರಕಾರಿ ಶಾಲೆಯ ಟೀಚರ್ ಉದ್ಯೋಗವು ದೊರೆಯಿತು. ತಿಂಗಳಿಗೆ 6,000 ರೂಪಾಯಿ ಸಂಬಳ ಕೈ ಸೇರುತ್ತಿತ್ತು. ಪುಟ್ಟ ಬಾಡಿಗೆ ಮನೆ. ಅವರ ಕುಟುಂಬಕ್ಕೆ ಆ ಸಂಬಳವು ಯಾವುದಕ್ಕೂ ಸಾಲುತ್ತಿರಲಿಲ್ಲ. ಶಾಲೆಗೆ ಎರಡು ಘಂಟೆ ನಡೆದು ಹೋಗುವ ಕಷ್ಟ ಬೇರೆ. ಆಗ ದಾರಿಯಲ್ಲಿ ಸೀರೆಗಳನ್ನು ಮಾರುತ್ತ ಒಂದಿಷ್ಟು ಹಣ ಗಳಿಸಿದರು. ಮನೆಯಲ್ಲಿ ಒಂದು ಹೊಲಿಗೆ ಯಂತ್ರ ಇಟ್ಟುಕೊಂಡು ಸ್ವಲ್ಪ ಸಂಪಾದನೆ ಮಾಡಿದರು.

ಅಮೆರಿಕಾದಲ್ಲಿ ಉದ್ಯೋಗದ ಆಫರ್ ಬಂತು!

2000ರ ಹೊತ್ತಿಗೆ ಅವರ ಜೀವನದಲ್ಲಿ ಒಂದು ಮಹತ್ವದ ತಿರುವು ಬಂದೇ ಬಿಟ್ಟಿತು. ಅವರ ಸೋದರ ಮಾವ ಒಬ್ಬರು ಅಮೆರಿಕಾದಿಂದ ಊರಿಗೆ ಬಂದವರು ಜ್ಯೋತಿ ಅವರನ್ನು ಭೇಟಿ ಮಾಡಿದರು. ಅಮೆರಿಕಾದಲ್ಲಿ ಉದ್ಯೋಗದ ಭರವಸೆ ನೀಡಿದರು. ಆಗ ಅವರ ಮನಸ್ಸಿನಲ್ಲಿ ಗೊಂದಲವು ಆರಂಭ ಆಯಿತು.

ಒಂದು ಕಡೆ ತನ್ನ ಸಂಸಾರದ ಜವಾಬ್ದಾರಿ. ಇನ್ನೊಂದು ಕಡೆ ಸರಕಾರಿ ನೌಕರಿ. ಮತ್ತೊಂದು ಕಡೆ ಅವರದ್ದೇ ಆದ ಬಹಳ ದೊಡ್ಡ ಕನಸು! ಇವುಗಳಲ್ಲಿ ಯಾವುದನ್ನು ಆರಿಸುವುದು? ಕೊನೆಗೆ ಅವರು ಗಟ್ಟಿ ನಿರ್ಧಾರ ಮಾಡಿ ಮೂರನೆಯದನ್ನು ಆರಿಸಿದರು. ಅದರಲ್ಲಿ ತೀವ್ರವಾದ ರಿಸ್ಕ್ ಇತ್ತು. ಆದರೆ ರಿಸ್ಕ್ ಇಲ್ಲದೆ ಕನಸು ಪೂರ್ತಿ ಆಗುವುದು ಹೇಗೆ?

ವಾರಂಗಲ್ ಟು ಅಮೆರಿಕಾ ಹಾರಿದರು!

ಪ್ರೀತಿಸುವ ತನ್ನ ಎರಡು ಹೆಣ್ಣು ಮಕ್ಕಳನ್ನು ಒಂದು ಮಿಷನರಿ ಹಾಸ್ಟೆಲಿನಲ್ಲಿ ಬಿಟ್ಟರು. ವೀಸಾ ಮಾಡಿಸಲು ತುಂಬಾ ಕಷ್ಟಪಟ್ಟರು. ಕೊನೆಗೆ ಧೈರ್ಯ ಜೋಡಿಸಿಕೊಂಡು ವಾರಂಗಲ್ ಟು ಅಮೆರಿಕ ವಿಮಾನದಲ್ಲಿ ಹಾರಿದರು! ಈಗ ಅವರಿಗೆ ನಿಜವಾದ ಸಮಸ್ಯೆಗಳು ಆರಂಭವಾದವು. ಕೆಲಸ ಕೊಡಿಸುವ ಭರವಸೆ ಕೊಟ್ಟಿದ್ದ ಸೋದರ ಮಾವ ಅಲ್ಲಿ ಕೈ ಎತ್ತಿದರು. ಮಹಾನಗರದಲ್ಲಿ ಕಣ್ಣಿಗೆ ಬಟ್ಟೆಯನ್ನು ಕಟ್ಟಿ ಬಿಟ್ಟ ಅನುಭವ ಅವರಿಗೆ ಆಯಿತು. ತಂದಿದ್ದ ಸ್ವಲ್ಪ ದುಡ್ಡು ಪೂರ್ತಿ ಖಾಲಿ ಆಗಿತ್ತು.

ಮಾಯಾ ನಗರಿಯಲ್ಲಿ ಒಂಟಿ ಹೆಣ್ಣಿನ ಹೋರಾಟ!

ಅವರು ಯಾವತ್ತೂ ಅಮೆರಿಕಾ ನೋಡಿದವರೇ ಅಲ್ಲ! ಅಲ್ಲಿ ಅವರಿಗೆ ಸಂಬಂಧಿಕರು ಅಥವಾ ಪರಿಚಯದವರು ಅಂತ ಯಾರೂ ಇರಲಿಲ್ಲ. ಆದರೆ ಗುಂಡಿಗೆಯಲ್ಲಿ ಧೈರ್ಯ ಇತ್ತು. ತಮ್ಮ ಪದವಿ, ಸ್ಟೇಟಸ್ ಎಲ್ಲವನ್ನೂ ಗಾಳಿಗೆ ತೂರಿ ಗ್ಯಾಸ್ ಸ್ಟೇಶನ್, ಬೇಬಿ ಸಿಟ್ಟಿಂಗ್, ವಿಡಿಯೋ ಗೇಮ್ಸ್ ಶಾಪ್… ಹೀಗೆ ಹಲವು ಕಡೆ ದುಡಿದರು. ಆ ಸಂದರ್ಭ ಸೂಕ್ಷ್ಮವಾಗಿ ಅಮೆರಿಕಾದ ಜನ ಜೀವನವನ್ನು, ಉದ್ಯೋಗದ ಅವಕಾಶಗಳನ್ನು ಅಭ್ಯಾಸ ಮಾಡಿದರು. ಅವರು ಒಂದೂವರೆ ವರ್ಷದಲ್ಲಿ 40,000 ಅಮೇರಿಕನ್ ಡಾಲರ್ ಸಂಪಾದನೆ ಮಾಡಿದ್ದರು!

ಆರಂಭ ಆಗಿಯೇ ಬಿಟ್ಟಿತು ಕನಸಿನ ಕಂಪೆನಿ!

ಅದನ್ನು ಬಂಡವಾಳ ಮಾಡಿಕೊಂಡು ಅಮೆರಿಕಾದ ಫೀನಿಕ್ಸ್ ಎಂಬಲ್ಲಿ ಒಂದು ಸಣ್ಣದಾದ ಕಚೇರಿಯನ್ನು ತೆರೆದು ‘KEY SOFTWARE SOLUTIONS’ ಎಂಬ ಕನ್ಸಲ್ಟೆನ್ಸಿ ಕಂಪೆನಿ ತೆರೆದರು( 2001). ಅವರು ಕಲಿತಿದ್ದ ಕಂಪ್ಯೂಟರ್ ತರಬೇತಿಯು ಅವರಿಗೆ ಈಗ ಸಹಾಯಕ್ಕೆ ಬಂದಿತು.

ಅಮೆರಿಕಾದಲ್ಲಿ ಹೊರಗಿಂದ ಬರುವವರಿಗೆ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ಮತ್ತು ವೀಸಾ ಪಡೆಯುವ ಬಗ್ಗೆ ಮಾರ್ಗದರ್ಶನ ನೀಡುವ ಸಂಸ್ಥೆಯಾಗಿ ತಮ್ಮ ಸಂಸ್ಥೆಯನ್ನು ಬೆಳೆಸಿದರು. ಒಬ್ಬರೇ ಸ್ವಾವಲಂಬಿಯಾದ ಹೆಣ್ಣು ಮಗಳು ಅಮೆರಿಕಾದಲ್ಲಿ ಮಾಡಿದ ಭಾರೀ ಹೋರಾಟವು ಕೊನೆಗೂ ಫಲ ನೀಡಿತು. ಒಂದರ ಹಿಂದೆ ಒಂದು ಅವರ ಕಂಪೆನಿಯ ಫ್ರಾಂಚೈಸಿಗಳು ಆರಂಭ ಆದವು. ಅವರ ಕಠಿಣ ಪರಿಶ್ರಮ, ಬದ್ಧತೆ ಮತ್ತು ಬಲವಾದ ನಂಬಿಕೆ ಇವುಗಳು ಅವರನ್ನು ಬಹಳ ಎತ್ತರಕ್ಕೆ ಬೆಳೆಸಿದವು.

ಇಂದವರ ಕಂಪೆನಿ ಬಿಲಿಯನ್ ಡಾಲರ್ ಆದಾಯ ಹೊಂದಿದೆ!

ಈಗ ಅವರ ಬಿಲಿಯನ್ ಡಾಲರ್ ಕಂಪೆನಿಯು ನೂರಾರು ಮಂದಿಗೆ ಉದ್ಯೋಗ ನೀಡಿದೆ. ತನ್ನ ಇಬ್ಬರು ಮಕ್ಕಳನ್ನು ಕೂಡ ಅವರು ಅಮೆರಿಕಕ್ಕೆ ಕರೆಸಿ ಸಾಫ್ಟವೇರ್ ಇಂಜಿನಿಯರಿಂಗ್ ಓದಿಸಿ ಮದುವೆ ಮಾಡಿದ್ದಾರೆ. ಅವರಿಗೆ NRI OF THE YEAR ಪ್ರಶಸ್ತಿ ದೊರೆತಿದೆ!

ಕೆರೆಯ ನೀರನು ಕೆರೆಗೆ ಚೆಲ್ಲಿ…

ವಿಶೇಷ ಎಂದರೆ ಜ್ಯೋತಿ ರೆಡ್ಡಿ ಅವರು ಇಂದಿಗೂ ತನ್ನ ಬಾಲ್ಯದ ಕಷ್ಟಗಳನ್ನು ಮರೆತಿಲ್ಲ. ವರ್ಷಕ್ಕೊಮ್ಮೆ ಆದರೂ ಭಾರತಕ್ಕೆ ಬಂದೇ ಬರುತ್ತಾರೆ. ಅನಾಥಾಶ್ರಮಗಳಿಗೆ ಭೇಟಿ ನೀಡಿ ನೆರವು ನೀಡುತ್ತಾರೆ. ಹಲವು ಸರಕಾರಿ ಶಾಲೆಗಳ ನೂರಾರು ಬಡ ಮಕ್ಕಳ ಶಿಕ್ಷಣದ ವೆಚ್ಚವನ್ನು ಭರಿಸುತ್ತಾರೆ. ಎಸೆಸೆಲ್ಸಿಯ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಬಡಮಕ್ಕಳಿಗೆ ತಲಾ ಐದು ಸಾವಿರ ರೂಪಾಯಿ ಬಹುಮಾನ ಕೊಟ್ಟು ಬೆನ್ನು ತಟ್ಟುತ್ತಾರೆ.

“ಬಾಲ್ಯದ ಬಡತನ ನನ್ನ ಮನಸ್ಸು ಮತ್ತು ಹೃದಯವನ್ನು ನೋಯಿಸಿತ್ತು. ಆದರೆ ಭಾರತದ ಪ್ರತಿ ಅನಾಥ ಮಗು ನನ್ನಂತೆ ಬೆಳೆಯಬೇಕು ಎಂದು ಆಸೆ ಪಡುತ್ತೇನೆ” ಎಂದು ಆಕೆಯು ಹೇಳುವಾಗ ಅವರ ಕಣ್ಣಲ್ಲಿ ಗೆದ್ದ ಖುಷಿ ಇತ್ತು!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಪೇಪರ್ ಹಂಚುತ್ತಿದ್ದ ಹುಡುಗ ಜಿಲ್ಲಾಧಿಕಾರಿ ಆದ ಕಥೆ

Continue Reading

ಅಂಕಣ

ರಾಜಮಾರ್ಗ ಅಂಕಣ: ಪೇಪರ್ ಹಂಚುತ್ತಿದ್ದ ಹುಡುಗ ಜಿಲ್ಲಾಧಿಕಾರಿ ಆದ ಕಥೆ

ರಾಜಮಾರ್ಗ ಅಂಕಣ: ಅನಾಥಾಶ್ರಮದಲ್ಲಿ ಇದ್ದ ಹುಡುಗ, ಪೇಪರ್‌ ಹಂಚುತ್ತಿದ್ದ ಬಾಲಕ, ಕಠಿಣ ಪರಿಶ್ರಮದಿಂದ ಬೆಳೆದು ಜಿಲ್ಲಾಧಿಕಾರಿ ಆದ ಕಥೆ ಎಂಥವರಿಗೂ ಸ್ಫೂರ್ತಿ.

VISTARANEWS.COM


on

ರಾಜಮಾರ್ಗ ಅಂಕಣ abudal nasar ias
Koo

ಕೇರಳದ ಅಬ್ದುಲ್ ನಾಸರ್ ಬದುಕಿನ ಯಶೋಗಾಥೆ ಅದ್ಭುತ!

Rajendra-Bhat-Raja-Marga-Main-logo

:: ರಾಜೇಂದ್ರ ಭಟ್ ಕೆ.

ರಾಜಮಾರ್ಗ ಅಂಕಣ: ಆತ ತನ್ನ ಐದನೇ ವರ್ಷಕ್ಕೆ ಸರಿಯಾಗಿ ತನ್ನ ಅಪ್ಪನನ್ನು ಕಳೆದುಕೊಂಡಿದ್ದರು. ಅವರಿಗೆ ಐದು ಜನ ಸೋದರ, ಸೋದರಿಯರು. ಅವರನ್ನೆಲ್ಲ ಸಾಕಲು ಅವರ ಅಮ್ಮ ಯಾರ್ಯಾರದೋ ಮನೆಯಲ್ಲಿ ಪಾತ್ರೆ ಪಗಡಿಗಳನ್ನು ತೊಳೆಯಬೇಕಾಯಿತು. ಹಸಿವು ಮತ್ತು ಅಪಮಾನ ಬದುಕಿನ ಪಾಠ ಕಲಿಸಿತು.

13 ವರ್ಷ ಅನಾಥಾಶ್ರಮದಲ್ಲಿ ಕಳೆದವರು ನಾಸರ್

ಅಮ್ಮನಿಗೆ ಅವರನ್ನು ಸಾಕುವುದು ಕಷ್ಟ ಆದಾಗ ಮಗನನ್ನು ಒಂದು ಅನಾಥಾಶ್ರಮದಲ್ಲಿ ತಂದು ಬಿಟ್ಟರು. ಅಲ್ಲಿನ ಅರೆಹೊಟ್ಟೆಯ ಊಟ, ಅನಾರೋಗ್ಯಕರ ವಾತಾವರಣ ಮತ್ತು ಬೆವರು ಹರಿಸುವ ದುಡಿಮೆ ಅವರ ಸಂಗಾತಿಗಳು ಆದದ್ದು ಆಗ. ಅಲ್ಲಿನ ಹಿಂಸೆಯು ಅತಿಯಾದಾಗ ಅನಾಥಾಶ್ರಮ ಬಿಟ್ಟು ಓಡಿ ಹೋಗುವ ನೆನಪು ಅವರಿಗೆ ಆದದ್ದು ಉಂಟು. ರಾಗಿಂಗ್ ಕೂಡ ಜೋರಾಗಿತ್ತು. ಓಡಿ ಹೋಗೋಣ ಎಂದು ಅನ್ನಿಸಿದಾಗಲೆಲ್ಲ ಅಮ್ಮನ ಅಸಹಾಯಕತೆಯು ಕಣ್ಣ ಮುಂದೆ ಬಂದು ಕಣ್ಣೀರು ಗಲ್ಲವನ್ನು ತೋಯಿಸುತ್ತಿತ್ತು. ಆಗ ತನ್ನ ಶಿಕ್ಷಣದ ಖರ್ಚು ತಾನೇ ಭರಿಸಲು ಅವರು ನಿರ್ಧಾರ ಮಾಡುತ್ತಾರೆ.

ಹೊಟ್ಟೆಪಾಡಿಗಾಗಿ ಹಲವೆಡೆಗಳಲ್ಲಿ ದುಡಿಮೆ

ಬಿಡುವಿನ ಅವಧಿಯಲ್ಲಿ ಪೇಪರ್ ಹಂಚುವ, ಬಸ್ಸುಗಳಲ್ಲಿ ಕ್ಲೀನರ್ ಆಗಿ ದುಡಿಯುವ, ಹೋಟೆಲುಗಳಲ್ಲಿ ಸಪ್ಲಾಯರ್ ಆಗಿ ದುಡಿಯುವ ಅವಕಾಶ ಅವರಿಗೆ ಒದಗಿತು. ತಲಸ್ಸೇರಿಯ ಪದವಿ ಕಾಲೇಜಿನಲ್ಲಿ ಓದುವಾಗ ತನಗಿಂತ ಕಿರಿಯ ವಿದ್ಯಾರ್ಥಿಗಳಿಗೆ ಟ್ಯೂಶನ್ ಕೊಡುವುದು, ಫೋನ್ ಆಪರೇಟರ್ ಮೊದಲಾದ ಉದ್ಯೋಗವನ್ನು ಮಾಡಿದರು.

ಕಲಿಕೆಯಲ್ಲಿ ಸಾಧಾರಣ ವಿದ್ಯಾರ್ಥಿ

ಅಬ್ದುಲ್ ನಾಸರ್ ಹೇಳುವ ಪ್ರಕಾರ ಅವರೊಬ್ಬ ಸಾಮಾನ್ಯರಲ್ಲಿ ಸಾಮಾನ್ಯ ಬುದ್ಧಿಮತ್ತೆಯ ವಿದ್ಯಾರ್ಥಿ. ಹೈಸ್ಕೂಲ್, ಪಿಯುಸಿ, ಪದವಿ ಎಲ್ಲ ಕಡೆಯೂ ಅವರಿಗೆ ದೊರೆತದ್ದು ಕೇವಲ ದ್ವಿತೀಯ ದರ್ಜೆ ಮಾತ್ರ. ಆದರೆ MSW ಮಾಡುವಾಗ ಅವರ ಅದ್ಭುತವಾದ ಪ್ರತಿಭೆ ಹೊರಬಂದಿತು. ಅದರಲ್ಲಿ ಅವರಿಗೆ ಅತ್ಯುನ್ನತ ಶ್ರೇಣಿ ಫಲಿತಾಂಶ ಬಂದಿತು. 1994ರಲ್ಲಿ ಕೇರಳ ಸರಕಾರದ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಿ ಆಗಿ ಕೆಲಸಕ್ಕೆ ಸೇರಿದರು.

ಓದುವ ಹಸಿವು ಕಡಿಮೆ ಆಗಲೇ ಇಲ್ಲ

ಸರಕಾರಿ ಉದ್ಯೋಗಕ್ಕೆ ಸೇರಿದ ಕೂಡಲೇ ಅವರು ತನ್ನ ಅಮ್ಮನನ್ನು ಮನೆಕೆಲಸವನ್ನು ಬಿಡಿಸಿ ತನ್ನ ಕ್ವಾರ್ಟರ್ಸಗೆ ಕರೆದುಕೊಂಡು ಬಂದರು. ಅಲ್ಲಿ ಅವರಿಗೆ ನೆಮ್ಮದಿಯ ಬದುಕು ದೊರೆಯಲು ಏನೆಲ್ಲ ಬೇಕೋ ಅದೆಲ್ಲವನ್ನೂ ಮಾಡಿಕೊಟ್ಟರು.

ವರ್ಷಕ್ಕೆ ಎರಡೆರಡು ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಾ ಸಾಗಿದರು

ಈ ಕಡೆ ಅವರ ಓದುವ ಅಭ್ಯಾಸವು ತೀವ್ರವಾಗಿ ಹೆಚ್ಚಾಯಿತು. ರಸ್ತೆ ಬದಿಯಲ್ಲಿ ಅರ್ಧ ಬೆಲೆಗೆ ಮಾರಾಟ ಆಗುತ್ತಿದ್ದ ಪುಸ್ತಕಗಳನ್ನು ಆಯ್ದು ತಂದು ಓದಿದರು. ನಂತರ ಅವುಗಳನ್ನು ಅದೇ ರೇಟಿಗೆ ತನ್ನ ಗೆಳೆಯರಿಗೆ ಮಾರಿದರು. ವರ್ಷಕ್ಕೆ ಎರಡೆರಡು ಪರೀಕ್ಷೆಗಳನ್ನು ಬರೆದು ಭಡ್ತಿ ಪಡೆಯುತ್ತಾ ಮುಂದೆ ಹೋದರು. ಸಮರ್ಪಣಾ ಭಾವದಿಂದ ದುಡಿದು ಸರಕಾರದ ಮನ್ನಣೆ ಪಡೆದರು. 2015ರಲ್ಲಿ ಅವರು ಸ್ವಂತ ಸಾಮರ್ಥ್ಯದ ಮೇಲೆ ಡೆಪ್ಯೂಟಿ ಕಲೆಕ್ಟರ್ ಹುದ್ದೆಗೆ ಏರಿದರು. 2019ರಲ್ಲಿ ಕೊಲ್ಲಂ ಜಿಲ್ಲೆಯ ಜಿಲ್ಲಾಧಿಕಾರಿ ಆಗಿ ಕೂಡ ಆಯ್ಕೆ ಆದರು. ಭ್ರಷ್ಟಾಚಾರ ಇಲ್ಲದ ಶುದ್ಧಾಂಗ ಅಧಿಕಾರವನ್ನು ಉಪಯೋಗ ಮಾಡಿ ಗೆದ್ದರು.

ತನ್ನ ಹುದ್ದೆಯನ್ನು ಪ್ರಭಾವಯುತವಾಗಿ ಬಳಕೆ ಮಾಡಿಕೊಂಡು ಜನರ ಸೇವೆ ಮಾಡಿದರು. ತನ್ನನ್ನು ಜನಸೇವೆಗೆ ಮುಡಿಪಾಗಿಟ್ಟರು. ಅಬ್ದುಲ್ ನಾಸರ್ ಅವರ ಹೋರಾಟದ ಬದುಕು ಯಾರಿಗಾದರೂ ಸ್ಫೂರ್ತಿದಾಯಕ ಆಗಬಹುದು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ನೆನಪಾದಳು ಅರುಣಾ ಶಾನುಭಾಗ್!‌

Continue Reading

ಅಂಕಣ

ರಾಜಮಾರ್ಗ ಅಂಕಣ: ದೃಷ್ಟಿ ವಿಕಲತೆಯನ್ನು ಮೆಟ್ಟಿ ನಿಂತು ಐಎಎಸ್ ಅಧಿಕಾರಿ ಆದ ಪ್ರಾಂಜಲ್ ಪಾಟೀಲ್!

ರಾಜಮಾರ್ಗ ಅಂಕಣ: ಅತ್ಯಂತ ಪ್ರಬಲ ಇಚ್ಛಾಶಕ್ತಿ, ನಿರಂತರ ಪ್ರಯತ್ನ, ಎಂದಿಗೂ ಬತ್ತಿ ಹೋಗದ ಸ್ಫೂರ್ತಿ, ಬೆಟ್ಟದಷ್ಟು ಆತ್ಮವಿಶ್ವಾಸ ಇವುಗಳ ಜೊತೆಗೆ 2016ರಲ್ಲಿ ಅವರು ಮೊದಲ ಬಾರಿಗೆ ಐಎಎಸ್ ಪರೀಕ್ಷೆಯನ್ನು ಬರೆದು ಮೊದಲನೆಯ ಪ್ರಯತ್ನದಲ್ಲಿಯೇ ತೇರ್ಗಡೆಯಾದರು!

VISTARANEWS.COM


on

pranjal patil ರಾಜಮಾರ್ಗ ಅಂಕಣ
Koo

ಆಕೆಯ ಯಾವ ಕನಸಿಗೂ ಕುರುಡುತನ ಅಡ್ಡಿ ಆಗಲೇ ಇಲ್ಲ!

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಭಾರತದ ಅತ್ಯಂತ ಕ್ಲಿಷ್ಟವಾದ ಪರೀಕ್ಷೆ ಅಂದರೆ ಐಎಎಸ್. ಕೇಂದ್ರ ಸರಕಾರದ ಅಧೀನ ಸಂಸ್ಥೆಯಾದ UPSC ನಡೆಸುವ ಈ ಪರೀಕ್ಷೆಯಲ್ಲಿ ಪ್ರತೀ ವರ್ಷವೂ 7ರಿಂದ 8 ಲಕ್ಷದಷ್ಟು ಯುವಕ – ಯುವತಿಯರು ತಮ್ಮ ಪ್ರತಿಭೆಯನ್ನು ನಿಕಷಕ್ಕೆ ಒಡ್ಡುತ್ತಿದ್ದು ತೇರ್ಗಡೆ ಆಗುವವರ ಪ್ರಮಾಣ 2-3% ಮಾತ್ರ! ಅಂತಹ ಕ್ಲಿಷ್ಟವಾದ ಪರೀಕ್ಷೆಯಲ್ಲಿ ಸಂಪೂರ್ಣ ಕುರುಡುತನ (Visually impaired) ಇರುವ ಹುಡುಗಿಯೊಬ್ಬಳು ಎರಡೆರಡು ಬಾರಿ ತೇರ್ಗಡೆ ಆದರು (Pranjal Patil IAS) ಅಂದರೆ ನಂಬೋದು ಹೇಗೆ?

ಆಕೆ ಪ್ರಾಂಜಲ್ ಪಾಟೀಲ್, ಮಹಾರಾಷ್ಟ್ರದವರು

ಆಕೆ ಮಹಾರಾಷ್ಟ್ರದ ಉಲ್ಲಾಸ ನಗರದವರು. ಹುಟ್ಟುವಾಗ ಆಕೆಗೆ ಮಸುಕು ಮಸುಕಾಗಿ ಕಾಣುತ್ತಿತ್ತು. ಆರು ವರ್ಷ ಪ್ರಾಯ ಆದಾಗ ಪೂರ್ತಿಯಾಗಿ ಕುರುಡುತನ ಆವರಿಸಿತ್ತು. ಸಣ್ಣ ಪ್ರಾಯದಲ್ಲಿಯೇ ಆಕೆಯ ದೊಡ್ಡ ಕನಸುಗಳಿಗೆ ಕೊಳ್ಳಿ ಇಟ್ಟ ಅನುಭವ ಆಗಿತ್ತು. ಆದರೆ ಮನೆಯವರು ಮತ್ತು ಹೆತ್ತವರು ಆಕೆಯ ಮನೋಸ್ಥೈರ್ಯವನ್ನು ಕುಸಿಯಲು ಬಿಡಲಿಲ್ಲ.

ಆಕೆ ಮಹಾನ್ ಪ್ರತಿಭಾವಂತೆ. ದಾದರ್ ನಗರದ ಕಮಲ ಮೆಹ್ತಾ ಕುರುಡು ಮಕ್ಕಳ ಶಾಲೆಗೆ ಸೇರಿ ಪ್ರಾಥಮಿಕ ಶಿಕ್ಷಣ ಪೂರ್ತಿ ಮಾಡುತ್ತಾರೆ. ಬ್ರೈಲ್ ಲಿಪಿಯಲ್ಲಿ ಓದಲು ಮತ್ತು ಬರೆಯಲು ಕಲಿಯುತ್ತಾರೆ. ಮುಂದೆ ಸೈಂಟ್ ಕ್ಸೇವಿಯರ್ ಕಾಲೇಜಿನಲ್ಲಿ ರಾಜನೀತಿ ಶಾಸ್ತ್ರದಲ್ಲಿ ಪದವಿ ಪಡೆಯುತ್ತಾರೆ.

ಆಗ ಏನೂ ಕಾಣದಿದ್ದರೂ ಉಲ್ಲಾಸ ನಗರದ ಮನೆಯಿಂದ ಹೊರಟು ಒಬ್ಬಳೇ ಛತ್ರಪತಿ ಶಿವಾಜಿ ಟರ್ಮಿನಲನವರೆಗೆ ಹೋಗಿ ಹಿಂದೆ ಬರುತ್ತಿದ್ದರು. ಮುಂಬೈ ನಗರದ ಜನರು ತನ್ನ ಬಗ್ಗೆ ತುಂಬಾ ಅನುಕಂಪವನ್ನು ಹೊಂದಿದ್ದರು ಅನ್ನುತ್ತಾರೆ ಆಕೆ.

ಆಕೆಯ ಕನಸುಗಳಿಗೆ ಆಕಾಶವೂ ಮಿತಿ ಅಲ್ಲ!

ಮುಂದೆ ಪ್ರಾಂಜಲ್ ಪಾಟೀಲ್ ಹೊರಟದ್ದು ರಾಜಧಾನಿ ದೆಹಲಿಗೆ. ಅಲ್ಲಿನ ಜವಾಹರಲಾಲ್ ನೆಹರು ವಿವಿಯ ಮೂಲಕ ಆಕೆಯು ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಡಾಕ್ಟರೇಟ್ ಪದವಿಯನ್ನು ಪಡೆಯುತ್ತಾರೆ.

ಅದೇ ಹೊತ್ತಿಗೆ ವಿದುಷಿ ಎಂಬ ತನ್ನ ಗೆಳತಿಯ ಮಾತಿನಿಂದ ಆಕೆಯು ಪ್ರಭಾವಿತರಾಗುತ್ತಾರೆ. ಐಎಎಸ್ ಪರೀಕ್ಷೆಗೆ ಗಂಭೀರವಾದ ಸಿದ್ಧತೆ ನಡೆಸುವಂತೆ ವಿದುಷಿ ಆಕೆಗೆ ಸಲಹೆ ಕೊಡುತ್ತಾರೆ. ಪ್ರಾಂಜಲ್ ಎಷ್ಟು ವೇಗವಾಗಿ ಹೇಳುತ್ತಿದ್ದಳೋ ಅಷ್ಟೇ ವೇಗವಾಗಿ ವಿದುಷಿ ಪ್ರಾಜೆಕ್ಟ ನೋಟ್ಸ್ ಬರೆದು ಕೊಡುತ್ತಿದ್ದಳು.

ಆಗ ಆಕೆಗೆ JAWS ( Job Access With Speech) ಎಂಬ ಸಾಫ್ಟವೇರ್ ನೆರವಿಗೆ ಬರುತ್ತದೆ. ಅದು ಯಾವುದೇ ಪುಸ್ತಕವನ್ನು ಗಟ್ಟಿಯಾಗಿ ಓದಿ ಹೇಳುವ ಸಾಫ್ಟವೇರ್. ತನ್ನ ಆಲಿಸುವ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡು ಆಕೆಯು ಆ ಸಾಫ್ಟವೇರ್ ಬಳಸಿಕೊಂಡು ದಿನಕ್ಕೆ 10-12 ಘಂಟೆಯಷ್ಟು ಪುಸ್ತಕಗಳನ್ನು ಓದುತ್ತಾರೆ. ತುಂಬಾ ವಿಡಿಯೋ ಪಾಠಗಳನ್ನು ಕೇಳುತ್ತಾರೆ. ತನ್ನ ಗೆಳತಿಯ ನೆರವನ್ನು ಪಡೆಯುತ್ತಾರೆ.

ರೈಲ್ವೇಸ್ ಅವರಿಗೆ ಉದ್ಯೋಗವನ್ನು ನಿರಾಕರಿಸಿತು

2016ರಲ್ಲೀ ಅವರು ಭಾರತೀಯ ರೈಲ್ವೇ ಸೇವೆಗೆ ಅರ್ಜಿ ಹಾಕುತ್ತಾರೆ. ಆದರೆ ಆಕೆ ಕುರುಡಿ ಎಂಬ ಕಾರಣಕ್ಕೆ ರೈಲ್ವೇಸ್ ಅವರಿಗೆ ಉದ್ಯೋಗವನ್ನು ನಿರಾಕರಣೆ ಮಾಡುತ್ತದೆ. ಆಗ ಸಿಟ್ಟಿಗೆದ್ದ ಆಕೆ ಪ್ರಧಾನಿ ನರೇಂದ್ರ ಮೋದಿಗೆ ಮತ್ತು ಆಗಿನ ರೈಲ್ವೇ ಮಂತ್ರಿ ಸುರೇಶ್ ಪ್ರಭು ಅವರಿಗೆ ನೇರವಾಗಿ ಪತ್ರವನ್ನು ಬರೆಯುತ್ತಾರೆ. ಆಗ ಸುರೇಶ್ ಪ್ರಭು ಅವರು ಆಕೆಯನ್ನು ಸಂಪರ್ಕ ಮಾಡಿ ನಿಮ್ಮ ವಿದ್ಯೆಗೆ ತಕ್ಕದಾದ ಉದ್ಯೋಗ ಕೊಡುವ ಭರವಸೆ ನೀಡಿದ್ದರು. ಆದರೆ ಆಗಲೇ ಐಎಎಸ್ ಪರೀಕ್ಷೆಯ ತಯಾರಿಯಲ್ಲಿ ಮುಳುಗಿದ್ದ ಪ್ರಾಂಜಲ್ ಆ ಪ್ರಸ್ತಾಪವನ್ನು ಸ್ವೀಕಾರ ಮಾಡುವುದಿಲ್ಲ.

ಆಕೆ ಎರಡು ಬಾರಿ ಐಎಎಸ್ ಪರೀಕ್ಷೆ ತೇರ್ಗಡೆ ಆದರು!

ಅತ್ಯಂತ ಪ್ರಬಲ ಇಚ್ಛಾಶಕ್ತಿ, ನಿರಂತರ ಪ್ರಯತ್ನ, ಎಂದಿಗೂ ಬತ್ತಿ ಹೋಗದ ಸ್ಫೂರ್ತಿ, ಬೆಟ್ಟದಷ್ಟು ಆತ್ಮವಿಶ್ವಾಸ ಇವುಗಳ ಜೊತೆಗೆ 2016ರಲ್ಲಿ ಅವರು ಮೊದಲ ಬಾರಿಗೆ ಐಎಎಸ್ ಪರೀಕ್ಷೆಯನ್ನು ಬರೆದು ಮೊದಲನೆಯ ಪ್ರಯತ್ನದಲ್ಲಿಯೇ ತೇರ್ಗಡೆಯಾದರು! ಅದೂ ಯಾವ ಕೋಚಿಂಗ್ ಇಲ್ಲದೆ! ಆದರೆ ಆಲ್ ಇಂಡಿಯಾ ರಾಂಕಿಂಗ್ 744 ಬಂದಿತ್ತು. ಅದು ಅವರಿಗೆ ತೃಪ್ತಿ ತರಲಿಲ್ಲ. ಯಾವುದೋ ಒಂದು ಅಜ್ಞಾತ ಇಲಾಖೆಯಲ್ಲಿ ಒಬ್ಬ ಸಾಮಾನ್ಯ ಅಧಿಕಾರಿಯಾಗಿ ಕೆಲಸ ಮಾಡಲು ಆಕೆ ರೆಡಿ ಇರಲಿಲ್ಲ. ಅದಕ್ಕೋಸ್ಕರ ಎರಡನೇ ಬಾರಿಗೆ ಅಷ್ಟೇ ಪ್ರಯತ್ನ ಮಾಡಿ 2017ರಲ್ಲಿ ಮತ್ತೆ ಐಎಎಸ್ ಪರೀಕ್ಷೆ ಬರೆದರು. ಈ ಬಾರಿ ಕೂಡ ತೇರ್ಗಡೆ ಆದರು. ಈ ಬಾರಿ ರಾಂಕಿಂಗ್ 124 ಬಂದಿತ್ತು!

ಅವರ ಕನಸಿನ ರೆಕ್ಕೆಗೆ ಸಾವಿರ ಗರಿಗಳು!

ಪ್ರಾಂಜಲ್ ಭಾರತದ ಮೊಟ್ಟ ಮೊದಲ ದೃಷ್ಟಿ ವಿಕಲತೆಯ ಸಾಧಕಿಯಾಗಿ ಐಎಎಸ್ ಪರೀಕ್ಷೆ ತೇರ್ಗಡೆ ಆಗಿದ್ದರು! ಲಿಖಿತ ಪರೀಕ್ಷೆಯಲ್ಲಿ ಆಕೆಯು ಪಡೆದ ಅಂಕಗಳು 854! ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳು 179! ಒಟ್ಟು 1033 ಅನ್ನುವುದು ಕೂಡ ಆಕೆಯ ನಿಜವಾದ ಕ್ರೆಡಿಟ್.

ನಂತರ ತರಬೇತಿಯನ್ನು ಮುಗಿಸಿ ಮೇ 28, 2018ರಂದು ಅವರು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಸಿಸ್ಟಂಟ್ ಕಲೆಕ್ಟರ್ ಆಗಿ ನೇಮಕ ಪಡೆಯುತ್ತಾರೆ. ಅದರ ನಂತರ ಅಕ್ಟೋಬರ್ 14, 2019ರಂದು ಸಬ್ ಕಲೆಕ್ಟರ್ ಆಗಿ ತಿರುವನಂತಪುರಂ ಜಿಲ್ಲೆಗೆ ನೇಮಕ ಪಡೆಯುತ್ತಾರೆ!

ಯಾರ ಸಹಾಯ ಇಲ್ಲದೆ ತನ್ನ ಎಲ್ಲ ಕೆಲಸಗಳನ್ನು ತಾನೇ ಮಾಡುವ, ಅದ್ಭುತವಾದ ಮೆಮೊರಿ ಪವರ್ ಹೊಂದಿರುವ, ಸಮಾಜ ಸೇವೆಯ ತೀವ್ರವಾದ ತುಡಿತವನ್ನು ಹೊಂದಿರುವ, ಬೆಟ್ಟವನ್ನು ಕರಗಿಸುವ ಧೈರ್ಯ ಮತ್ತು ಆತ್ಮವಿಶ್ವಾಸಗಳನ್ನು ಹೊಂದಿರುವ ಪ್ರಾಂಜಲ್ ಪಾಟೀಲ್ ಮತ್ತು ಆಕೆಯ ಗಂಡ ಕೋಮಲ್ ಸಿಂಗ್ ಪಾಟೀಲ್ ಅವರು ಇತ್ತೀಚೆಗೆ ತಮ್ಮ ಅಂಗದಾನಕ್ಕೆ ಜೊತೆಯಾಗಿ ಸಹಿ ಹಾಕಿ ಸುದ್ದಿ ಆಗಿದ್ದಾರೆ.

ಆಕೆಯ ಒಂದು ಮಾತು ನನಗೆ ಭಾರೀ ಕನೆಕ್ಟ್ ಆಗಿದ್ದು ಅದನ್ನು ಇಲ್ಲಿ ಉಲ್ಲೇಖ ಮಾಡುತ್ತೇನೆ.

SUCCESS doesn’t give us INSPIRATION. But the STRUGGLE behind the SUCCESS gives us the INSPIRATION.

ಹೌದು ತಾನೇ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ನಾಗಾರಾಧನೆ- ಪ್ರಕೃತಿಯ ಆರಾಧನೆ ಆಗಲಿ

Continue Reading

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading
Advertisement
Actor darshan
ಪ್ರಮುಖ ಸುದ್ದಿ8 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು9 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ9 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು10 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು10 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು11 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು12 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು13 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು14 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ15 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌