CM Siddaramaiah : ಎಚ್‌.ಡಿ. ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸಲ್ಲ, ಹೇಳೋದೆಲ್ಲ ಸುಳ್ಳು: ಸಿಎಂ ಸಿದ್ದರಾಮಯ್ಯ - Vistara News

ಕರ್ನಾಟಕ

CM Siddaramaiah : ಎಚ್‌.ಡಿ. ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸಲ್ಲ, ಹೇಳೋದೆಲ್ಲ ಸುಳ್ಳು: ಸಿಎಂ ಸಿದ್ದರಾಮಯ್ಯ

CM Siddaramaiah : ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳುವುದು ಬರೀ ಸುಳ್ಳು. ಅವರು ಸುಳ್ಳನ್ನೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾರೆ. ಅವರ ಹೇಳಿಕೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

HD Kumarswamy and CM Siddaramaiah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (Former CM HD Kumaraswamya) ಅವರ ಆರೋಪಗಳಿಗೆ ನಾನು ಉತ್ತರ ಕೊಡೋದಿಲ್ಲ. ಗ್ಯಾರಂಟಿ ಯೋಜನೆಗಳಲ್ಲಿ (Congress Guarantee Scheme) ಒಂದಾದ “ಶಕ್ತಿ” (Shakti Scheme) ಅಡಿ ಒಂದು ಕೋಟಿಗೂ ಅಧಿಕ ಮಹಿಳೆಯರು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಇದು ಸಾಧನೆ ಅಲ್ವಾ? ಈ ಸಾಧನೆಗಳನ್ನು ಕುಮಾರಸ್ವಾಮಿಗೆ ಸಹಿಸಲು ಆಗುತ್ತಿಲ್ಲ. ಈ ಕಾರಣಕ್ಕೇ ಪರದಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದ್ದಾರೆ.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ (Former Prime Minister Jawaharlal Nehru) ಅವರ 134 ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಎಚ್‌.ಡಿ. ಕುಮಾರಸ್ವಾಮಿ ಅವರು ಹೇಳುವುದು ಬರೀ ಸುಳ್ಳು. ಅವರು ಸುಳ್ಳನ್ನೇ ಬಂಡವಾಳ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು.

Cm Siddaramaiah pays floral tributes to former PM Jawaharlal Nehru
ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಅವರ 134ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ.

ಇದನ್ನೂ ಓದಿ: HSRP Number Plate : ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಇನ್ನೂ ಹಾಕಿಸಿಲ್ವಾ, ಟೆನ್ಶನ್‌ ಬೇಡ! ಯಾಕಂದ್ರೆ..?

ಕಾವೇರಿ ನಿವಾಸದಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ ಎಂಬ ಎಚ್.ಡಿ. ಕುಮಾರಸ್ವಾಮಿ ಆರೋಪದ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಬರೀ ಸುಳ್ಳೇ.. ಸುಳ್ಳು ಬಿಟ್ರೆ ಬೇರೆ ಏನೂ ಗೊತ್ತಿಲ್ಲ ಅವರಿಗೆ. ಅವರು ಸುಳ್ಳನ್ನೇ ಆರೋಪ‌ ಮಾಡೋದು. ಸುಳ್ಳು ಅಂತ ಗೊತ್ತಿದ್ದರೂ ನೀವು ಪ್ರಶ್ನೆ ಮಾಡುತ್ತೀರಾ? ಎಂದು ಮಾಧ್ಯಮದವರನ್ನೇ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ನೆಹರೂ ದೂರದೃಷ್ಟಿಯ ಫಲ ಇದು

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೆಹರೂ ಮೌಲ್ಯವನ್ನು ಅಳವಡಿಸಿಕೊಳ್ಳೋಣ

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು. ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆಧುನಿಕ ಭಾರತದ ಶಿಲ್ಪಿ

ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೇ ದೇಶದ ಮಕ್ಕಳ ಪಾಲಿಗೆ ಚಾಚಾ ನೆಹರೂ ಆದರು. ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯಾ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನ್ನಿಸಿಕೊಂಡರು ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ನೆಹರೂ ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತನಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು.

ನೆಹರೂ ಅವರು ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಂದರು. ಕೊನೇ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಇದನ್ನೂ ಓದಿ: HD Kumaraswamy : ಎಚ್‌ಡಿಕೆಯಿಂದ ವಿದ್ಯುತ್‌ ಕಳ್ಳತನವೆಂದ ಕಾಂಗ್ರೆಸ್‌; ದಂಡ ಕಟ್ತೇನೆ ಅಂದ್ರು ಕುಮಾರಸ್ವಾಮಿ

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

CM Siddaramaiah: ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.

VISTARANEWS.COM


on

CM Siddaramaiah
Koo

ಬೆಂಗಳೂರು: ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಶುಕ್ರವಾರ ಎಸ್‌ಸಿಸಿಪಿ, ಟಿಎಸ್‌ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.

ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದರು.

CM Siddaramaiah: ಸಿದ್ದರಾಮಯ್ಯ ಈಗ ಕನ್ನಡ ಮೇಷ್ಟ್ರು; ಶಾಲೆಗೆ ಭೇಟಿ ನೀಡಿ ವ್ಯಾಕರಣ ಪಾಠ ಮಾಡಿದ ಸಿಎಂ!

CM Siddaramaiah
CM Siddaramaiah Visits A School In Bengaluru, Takes A Class Of Grammar

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಾಲು ಸಾಲು ರ‍್ಯಾಲಿಗಳು, ಚುನಾವಣಾ ಸಮಾವೇಶಗಳು, ಅಬ್ಬರದ ಭಾಷಣಗಳಲ್ಲೇ ನಿರತರಾಗಿದ್ದ, ದಿನ ಬೆಳಗಾದರೆ ಹತ್ತಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಯಾವಾಗಲೂ ಬ್ಯುಸಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಶುಕ್ರವಾರ (ಜುಲೈ 5) ಕನ್ನಡ ಮೇಷ್ಟ್ರಾಗಿ ಮಕ್ಕಳಿಗೆ ಒಂದಷ್ಟು ಪಾಠ ಮಾಡಿದರು. ಹೌದು, ದಿನನಿತ್ಯದ ಬ್ಯುಸಿ ಚಟುವಟಿಕೆಗಳ ಮಧ್ಯೆಯೇ ಅವರು ಬೆಂಗಳೂರಿನ (Bengaluru) ಚಾಮರಾಜಪೇಟೆಯಲ್ಲಿರುವ (Chamarajpet) ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಸಿದ್ದರಾಮಯ್ಯ, ಮಕ್ಕಳಿಗೆ ಕನ್ನಡ ವ್ಯಾಕರಣದ ಪಾಠ ಮಾಡಿದರು.

ಸುಮಾರು 250 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢಿರ್‌ ಭೇಟಿ ನೀಡಿದ ಅವರು ಮೊದಲು 10ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇದೇ ವೇಳೆ, ಪಠ್ಯಪುಸ್ತಕ, ಬಾತ್‌ ರೂಮ್‌ ಕಿಟ್‌ಗಳ ಸಮರ್ಪ ವಿತರಣೆ ಆಗುತ್ತಿದೆ ಎಂದು ಮಕ್ಕಳು ಸಿಎಂಗೆ ತಿಳಿಸಿದರು. ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದರು. ಮಕ್ಕಳು ಕೂಡ ಉತ್ಸಾಹದಿಂದ, ಬೆಳಗ್ಗೆ ದೋಸೆ, ಮಧ್ಯಾಹ್ನ ಊಟ ಚೆನ್ನಾಗಿರುತ್ತದೆ, ಆಗಾಗ ಪಲಾವ್ ಕೂಡ ಕೊಡುತ್ತಾರೆ ಎಂದು ವಿವರಿಸಿದರು.

ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ…

ಭೇಟಿ ವೇಳೆ ಮಕ್ಕಳಿಗೆ ಸಿಎಂ ವ್ಯಾಕರಣ ಪಾಠ ಮಾಡಿದರು. ಸಂದಿ ಎಂದರೇನು? ಸಂದಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವುಗಳು ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು , ಯಾವಾಗ ಆರಂಭಿಸಿದರು ಎಂದು ಸಿಎಂ ಪ್ರಶ್ನೆ ಕೇಳಿದರು. ನೀವೇ ಆರಂಭಿಸಿದ್ದು ಎಂದ ವಿದ್ಯಾರ್ಥಿ ಇಸವಿ ಹೇಳಲಿಲ್ಲ. ಬಳಿಕ 94-95ರಲ್ಲಿ ಆರಂಭಿಸಿದ್ದಾಗಿ ಸಿಎಂ ಹೇಳಿದರು. ಆಗ ಮಕ್ಕಳು ಚಪ್ಪಾಳೆ ತಟ್ಟಿದರು.

ಇದನ್ನೂ ಓದಿ: CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

ಶಾಲೆಯ ಸಾಧನೆ ಬಗ್ಗೆಯೂ ಶಿಕ್ಷಕರು ಸಿಎಂ ಗಮನಕ್ಕೆ ತಂದರು. “ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್‌ ಹಾಗು ಒಬ್ಬ ವಿದ್ಯಾರ್ಥಿನಿ ಮಾತ್ರ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾಳೆ” ಎಂದು ವಿವರಿಸಿದರು. ಮಕ್ಕಳು ಶಾಲೆಯ ವ್ಯವಸ್ಥೆ ಬಗ್ಗೆ ತಿಳಿಸುತ್ತ, “ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ” ಎಂದು ತಿಳಿಸಿದರು. ಇದೇ ವೇಳೆ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ವಿಧಾನ ಪರಿಷತ್‌ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವರು ಸಿಎಂಗೆ ಸಾಥ್‌ ನೀಡಿದರು.

Continue Reading

ಮಳೆ

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಳನಾಡು ಸೇರಿ ಮಲೆನಾಡು, ಕರಾವಳಿಯಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದೆ. ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ (Rain News) ಮಳೆಯಾಗಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಧಾರವಾಡ ಗ್ರಾಮೀಣ ಭಾಗದಲ್ಲೂ ಮಳೆಯು ಅಬ್ಬರಿಸಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆಯು ವ್ಯಾಪಿಸಿದೆ. ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯು, ಶುಕ್ರವಾರ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಅಬ್ಬರಿಸಿದೆ. ಮಳೆಗೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಕ್ಕೆ ಹೆಚ್ಚಾದ ಒಳ ಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ.

ಜುಲೈ 6ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಧಾರಾಕಾರ ಮಳೆಗೆ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

karnataka Weather Forecast

ಶಿರೂರು ಸಮೀಪ ಗುಡ್ಡ ಕುಸಿಯುವ ಭೀತಿ

ಉಡುಪಿಯ ಶಿರೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಭೀತಿ ಹೆಚ್ಚಾಗಿದೆ. ಬೈಂದೂರು ತಾಲೂಕು, ಶಿರೂರು ಸಮೀಪದಲ್ಲಿ ಗುಡ್ಡ ಜರಿಯುವ ಸಾಧ್ಯತೆ ಇದೆ. ಐಆರ್‌ಬಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿ ಶತಶಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿತ್ತು. ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಗುಡ್ಡ ಜರಿಯುವ ಭೀತಿ ಇದೆ.

ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒತ್ತಿನಣೆಯಲ್ಲಿ ನಿಧಾನವಾಗಿ ಜರಿದು ಗುಡ್ಡ ಬೀಳುತ್ತಿದೆ. ಮಳೆ ಮುಂದುವರೆದರೆ ಸಂಪೂರ್ಣ ಗುಡ್ಡ, ಹೆದ್ದಾರಿ ಮೇಲೆ ಕುಸಿಯುವ ಭೀತಿ ಇದೆ. ಒಂದು ವೇಳೆ ಗುಡ್ಡ ಜರಿದರೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಸಂಪರ್ಕ ಬಂದ್ ಆಗಲಿದೆ.

ಚಿತ್ರದುರ್ಗದಲ್ಲಿ ಶಾಲೆಗೆ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಳ್ಳಿಹಟ್ಟಿ ಗೊಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ಜತೆಗೆ ಶಾಲಾ ಕೊಠಡಿಯಲ್ಲಿ ನೀರು ಸೋರುತ್ತಿದೆ. ಹೀಗಾಗಿ ಶಿಕ್ಷಕರು ಮಕ್ಕಳನ್ನು ಒಂದು ಮೂಲೆಗೆ ಕೂರಿಸಿದ್ದಾರೆ. ನೂತನ ಕಟ್ಟಡ ಅಥವಾ ಬೇರೊಂದು ಕಟ್ಟಡ ಕಟ್ಟಿಸಿಕೊಡುವಂತೆ ಹಲವು ಬಾರಿ ಶಾಲಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ.

ಒತ್ತಿನೆಣೆ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರವಾಸಿ ತಾಣ ಒತ್ತಿನೆಣೆ ಬೀಚ್‌ನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧ ಹೇರಿದೆ. ಅದರಲ್ಲೂ ಎಲ್ಲಾ ಬೀಚ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಾಚ್ ಗಾರ್ಡ್ ಸಿಬ್ಬಂದಿ ಕಣ್ಗಾವಲು ಇದೆ. ಆದರೂ ಅಪ್ಪಳಿಸಿ ಬರುವ ಅಲೆಗಳ ಮುಂದೆ ಸೆಲ್ಫಿ ತೆಗೆಯಲು ಪ್ರವಾಸಿಗರು ಯತ್ನಿಸುತ್ತಿದ್ದಾರೆ.

ಅಪಾಯದಲ್ಲಿರುವ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ ಅಪಾಯದಲ್ಲಿದೆ. ಸ್ಥಳೀಯರ ದೂರಿನಂತೆ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದೆ. ಸೇತುವೆಯ ಅಡಿ ಭಾಗದಲ್ಲಿ ತುಂಡು ತುಂಡಾಗಿ ಬೀಮ್‌ಗಳ ಸಿಮೆಂಟ್‌ಗಳು ಬೀಳುತ್ತಿವೆ. ನಿರಂತರ ಅಕ್ರಮ ಮರುಳು ಸಾಗಾಟವೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಇಲ್ಲದಿರುವುದು ಮರಳು ದಂದೆಕೋರರಿಗೆ ವರದಾನವಾಗಿದೆ ಎಂದು ಕಿಡಿಕಾರಿದ್ದಾರೆ. ಬಳ್ಕುಂಜೆ ಭಾಗದಿಂದ ಪಲಿಮಾರು, ಉಡುಪಿ, ನಿಟ್ಟೆ, ಬೆಳ್ಮಣ್, ಕುದುರೆಮುಖ, ಹೆಬ್ರಿ, ಸಾಗರ ಮೊದಲಾದ ಕಡೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

Uttara Kannada News: ಉತ್ತರ ಕನ್ನಡ ಜಿಲ್ಲಾಡಳಿತದ ವೆಬ್ ಸೈಟ್ https://uttarakannada.nic.in/ನಲ್ಲಿ ಜೀವನ ಸಂಗಮ ಎಂಬ ಪೋರ್ಟಲ್ ಆರಂಭಿಸಿರುವ ಜಿಲ್ಲಾಡಳಿತ, ಜಿಲ್ಲೆಯಲ್ಲಿನ ಯುವ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆಯ್ಕೆಯನ್ನು ಪರಿಚಯಿಸಲು ಹಾಗೂ ಎಚ್.ಐ.ವಿ. ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧಗಳನ್ನು ಬೆಸೆದು, ಅವರು ವಿವಾಹವಾಗಲು ವೇದಿಕೆ ಒದಗಿಸಲು ಮುಂದಾಗಿದೆ. ಈ ಮೂಲಕ ಅವರ ಬದುಕಿನಲ್ಲಿ ಸುಗಮ ರೀತಿಯಲ್ಲಿ ಅರ್ಥಪೂರ್ಣ ಸಂಬಂಧಗಳು ಏರ್ಪಡುವಂತೆ ಮಾಡಲು ಪ್ರಯತ್ನಿಸಿದೆ.

VISTARANEWS.COM


on

district administration has made an innovative attempt for the first time in the state for the marriage of farmer youth and disabled people
Koo

ಕಾರವಾರ: ಇತ್ತೀಚೆಗೆ ನಡೆದ ʼಜನಸ್ಪಂದನ ಕಾರ್ಯಕ್ರಮʼದಲ್ಲಿ ರೈತ ಯುವಕರೊಬ್ಬರು ತಮಗೆ ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಅರ್ಜಿ ಸಲ್ಲಿಸಿರುವ ವಿಷಯ ವ್ಯಾಪಕ ಸುದ್ದಿಯಾಗಿತ್ತು. ಇದು ರೈತ ಯುವಕರು ವಿವಾಹವಾಗಲು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಜದ ಕಣ್ತೆರೆದಿತ್ತು. ಇದಕ್ಕೆ ಪರಿಹಾರವೆಂಬಂತೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲಾಡಳಿತದ (Uttara Kannada News) ಮೂಲಕ ರೈತ ಯುವಕರು ಮಾತ್ರವಲ್ಲದೇ ವಿಕಲಚೇತನರು, ಎಚ್.ಐ.ವಿ. ಪೀಡಿತರಿಗೆ ವಿವಾಹವಾಗಲು ಸೂಕ್ತ ವೇದಿಕೆ ಒದಗಿಸುವ ವಿನೂತನ ಪ್ರಯತ್ನಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತ ಮುನ್ನುಡಿ ಬರೆದಿದೆ.

ಉತ್ತರ ಕನ್ನಡ ಜಿಲ್ಲಾಡಳಿತದ ವೆಬ್ ಸೈಟ್ https://uttarakannada.nic.in/ ನಲ್ಲಿ ಜೀವನ ಸಂಗಮ ಎಂಬ ಪೋರ್ಟಲ್ ಆರಂಭಿಸಿರುವ ಜಿಲ್ಲಾಡಳಿತ, ಜಿಲ್ಲೆಯಲ್ಲಿನ ಯುವ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆಯ್ಕೆಯನ್ನು ಪರಿಚಯಿಸಲು ಹಾಗೂ ಎಚ್.ಐ.ವಿ. ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧಗಳನ್ನು ಬೆಸೆದು, ಅವರು ವಿವಾಹವಾಗಲು ವೇದಿಕೆ ಒದಗಿಸಲು ಮುಂದಾಗಿದೆ. ಈ ಮೂಲಕ ಅವರ ಬದುಕಿನಲ್ಲಿ ಸುಗಮ ರೀತಿಯಲ್ಲಿ ಅರ್ಥಪೂರ್ಣ ಸಂಬಂಧಗಳು ಏರ್ಪಡುವಂತೆ ಮಾಡಲು ಪ್ರಯತ್ನಿಸಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜು. 6,7ರಂದು ʼನಟನ ತರಂಗಿಣಿʼ 20ನೇ ವರ್ಷೋತ್ಸವ

ಈ ಪೋರ್ಟಲ್ ಸೇವೆ ಪಡೆಯಲು ಬಳಕೆದಾರರು ಯಾವುದೇ ನೋಂದಣಿ ಶುಲ್ಕ ಅಥವಾ ಇತರೇ ಯಾವುದೇ ಶುಲ್ಕಗಳಿಲ್ಲದೆ ನೋಂದಾಯಿಸಿಕೊಳ್ಳಬಹುದು. ಇದು ಆರ್ಥಿಕವಾಗಿ ಹಿಂದುಳಿದ ವರ್ಗದವರನ್ನೂ ಒಳಗೊಂಡಂತೆ ಎಲ್ಲಾ ವ್ಯಕ್ತಿಗಳಿಗೂ ನೆರವು ಒದಗಿಸಲಿದ್ದು, ಶಿಕ್ಷಣದ ಕೊರತೆ ಮತ್ತು ಬೇರೆ ಯಾವುದೇ ಉದ್ಯೋಗವಿಲ್ಲದ ಕಾರಣ ಸೂಕ್ತ ಜೀವನ ಸಂಗಾತಿಯನ್ನು ಪಡೆಯದ ರೈತ ಯುವಕರಿಗೆ ಜೀವನ ಸಂಗಾತಿಯನ್ನು ಪಡೆಯಲು ಈ ಪೋರ್ಟಲ್ ಉತ್ತಮ ವೇದಿಕೆಯನ್ನು ಒದಗಿಸುತ್ತದೆ.

ಈ ಪೋರ್ಟಲ್ ಎಲ್ಲಾ ಬಳಕೆದಾರರಿಗೆ ಅತ್ಯಂತ ಸುರಕ್ಷಿತ ಪೋರ್ಟಲ್ ಆಗಿದ್ದು, ಹೊಂದಾಣಿಕೆಯ ಪ್ರಕ್ರಿಯೆಯಲ್ಲಿ ಅವರ ಗೌಪ್ಯತೆ ಮತ್ತು ಘನತೆಗೆ ಆದ್ಯತೆ ನೀಡಲಾಗಿದೆ. ವಿವಾಹವಾಗಲು ಸಲ್ಲಿಸುವ ಅರ್ಜಿಗಳನ್ನು ಮತ್ತು ಪ್ರೊಫೈಲ್‌ಗಳನ್ನು ವ್ಯಕ್ತಿಯು ವಾಸವಾಗಿರುವ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ಸೇರಿದಂತೆ ಉತ್ತರ ಕನ್ನಡ ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು ಪರಿಶೀಲಿಸಲಿದ್ದು, ಅರ್ಜಿದಾರರ ಪ್ರೊಫೈಲ್‌ಗಳಲ್ಲಿನ ನೈಜತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸುತ್ತಾರೆ.

ವಿವಾಹವಾಗಲು ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿನ್ನೆಲೆ, ವಾಸಸ್ಥಳ, ಉದ್ಯೋಗ, ಕೌಟುಂಬಿಕ ಪರಿಸ್ಥಿತಿ, ಆತನ ಆದಾಯ, ಮಾನಸಿಕ ಮತ್ತು ದೈಹಿಕ ಆರೋಗ್ಯ ಸ್ಥಿತಿಗತಿ ಬಗ್ಗೆ ಜಿಲ್ಲೆಯ ವಿವಿಧ ಅಧಿಕಾರಿಗಳು ಖುದ್ದು ಸ್ಥಳ ಭೇಟಿ ಪರಿಶೀಲನೆ ನಡೆಸಲಿದ್ದು, ಅರ್ಹ ವ್ಯಕ್ತಿಗಳಿಗೆ ಮಾತ್ರ ಹೊಂದಾಣಿಕೆಯ ಮುಂದಿನ ಪ್ರಕ್ರಿಯೆಯಲ್ಲಿ ಮುಂದುವರೆಯಲು ಅವಕಾಶ ನೀಡಲಾಗುವುದು.

ಇದನ್ನೂ ಓದಿ: HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

ಈ ಸೇವೆಯು ಎಲ್ಲಾ ಧರ್ಮಗಳ ವ್ಯಕ್ತಿಗಳಿಗೂ ಮುಕ್ತವಾಗಿದ್ದು, ಸಾರ್ವಜನಿಕರು ತಮ್ಮ ಧಾರ್ಮಿಕ ಅದ್ಯತೆಗಳನ್ನು ಮ್ಯಾಚ್ ಮೇಕಿಂಗ್‌ಗೆ ನಿರ್ದಿಷ್ಟಪಡಿಸಲು ಅವಕಾಶ ನೀಡುವುದರ ಜತೆಗೆ, ತಮ್ಮದೇ ಆದ ಜಾತಿಯೊಳಗೆ ಹೊಂದಾಣಿಕೆಗಳನ್ನು ಆಯ್ಕೆ ಮಾಡಬಹುದು ಅಥವಾ ಅಂತರ-ಜಾತಿ ಆಯ್ಕೆಗಳನ್ನು ಆಯ್ಕೆ ಮಾಡಿಕೊಂಡು, ವೈಯಕ್ತಿಕ ಆದ್ಯತೆಗಳ ಆಧಾರದ ಮೇಲೆ ತಮಗೆ ಇಚ್ಚಿಸುವ ಹೊಂದಾಣಿಕೆಯನ್ನು ಆಯ್ಕೆ ಮಾಡಬಹುದು.

ಈ ಪೋರ್ಟಲ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ರಕ್ಷಿಸಲು ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ಡೇಟಾವನ್ನು ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ ಯುವತಿಯರಿಗೆ ಮಾತ್ರ ಈ ವಿವಾಹ ಹೊಂದಾಣಿಕೆಗೆ ವೇದಿಕೆ ಒದಗಿಸಲಿದ್ದು, ಜಿಲ್ಲೆಯ ನಿವಾಸಿಗಳಿಗೆ ಮಾತ್ರ ಇದರ ನೆರವು ದೊರೆಯಲಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಜಿಲ್ಲೆಯಲ್ಲಿ ಸೂಕ್ತ ಸಂಗಾತಿ ದೊರೆಯದೇ ಒಂಟಿಯಾಗಿ ಕೊರಗುತ್ತಿರುವ ಯುವ ರೈತರು, ವಿಕಲಚೇತನರು, ಎಚ್.ಐ.ವಿ. ಪೀಡಿತರಿಗೆ ಸೂಕ್ತ ಜೀವನ ಸಂಗಾತಿಯನ್ನು ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತದಿಂದ ಜೀವನ ಸಂಗಮ ಪೋರ್ಟಲ್ ತೆರೆಯಲಾಗಿದೆ. ಇಲ್ಲಿ ಅರ್ಜಿ ಸಲ್ಲಿಸುವವರಿಗೆ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿಕೊಡಲಾಗುವುದು. ಅಂತರ್ಜಾತಿ ವಿವಾಹವಾಗುವವರಿಗೆ ಮತ್ತು ವಿಕಲಚೇತನರನ್ನು ವಿವಾಹವಾಗುವವರಿಗೆ ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನ ಸೇರಿದಂತೆ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು. 10 ಕ್ಕಿಂತ ಹೆಚ್ಚು ಜೋಡಿಗಳು ಒಪ್ಪಿಗೆ ನೀಡಿದಲ್ಲಿ ವಿವಿಧ ಸಂಘ ಸಂಸ್ಥೆಗಳ ನೆರವಿನಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಚಿಂತನೆ ಇದೆ. ಜಿಲ್ಲೆಯ ಅನಾಥಾಶ್ರಮಗಳಲ್ಲಿನ ಯುವತಿಯರಿಗೂ ಸಹ ಈ ಪೋರ್ಟಲ್ ಮೂಲಕ ಸೂಕ್ತ ಜೀವನ ಸಂಗಾತಿ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

BJP Karnataka: ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ.

VISTARANEWS.COM


on

BJP Karnataka
ರಾಜ್ಯ ಬಿಜೆಪಿ ನೂತನ ಉಸ್ತುವಾರಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್
Koo

ಬೆಂಗಳೂರು: ರಾಜ್ಯ ಬಿಜೆಪಿಗೆ (BJP Karnataka) ನೂತನ ಉಸ್ತುವಾರಿ, ಸಹ ಉಸ್ತುವಾರಿಯನ್ನು ನೇಮಕ ಮಾಡಲಾಗಿದೆ. ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ.

ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದು, ಕರ್ನಾಟಕದ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ | Guarantee Schemes: ಗ್ಯಾರಂಟಿ ಯೋಜನೆಗಳಿಗೆ ದಲಿತರ 14 ಸಾವಿರ ಕೋಟಿ ರೂ. ಕಸಿದು ಕೊಟ್ಟ ಸಿದ್ದರಾಮಯ್ಯ!

ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆಗೆ ಬಿಜೆಪಿ ವಿರೋಧ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಮುಡಾ ಹಗರಣ ಹೊರಗೆ ತಂದಿದ್ದಕ್ಕೆ ರಾಜ್ಯ ಸರ್ಕಾರದಿಂದ ಸೇಡು ತೀರಿಸಿಕೊಳ್ಳುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪ ಮಾಡಿದ್ದಾರೆ.

ಎಕ್ಸ್‌ ವೇದಿಕೆಯಲ್ಲಿ ಪೋಸ್ಟ್ ಮಾಡಿ ವಿಜಯೇಂದ್ರ ಅವರು, ಮೈಸೂರಿನ ಮುಡಾ ನಿವೇಶನ ಅವ್ಯವಹಾರದ ಬಗ್ಗೆ ನಿರಂತರವಾಗಿ ಸರ್ಕಾರಕ್ಕೆ ಪತ್ರ ಬರೆದು ಸೂಕ್ತ ಕ್ರಮಕ್ಕಾಗಿ ಒತ್ತಾಯಿಸುತ್ತಿದ್ದ ಜಿಲ್ಲಾಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಕಾಂಗ್ರೆಸ್ ಸರ್ಕಾರ ದಕ್ಷ ಅಧಿಕಾರಿಯೊಬ್ಬರ ಮೇಲೆ ದ್ವೇಷ ಕಾರಿಕೊಂಡಿದೆ.

ಸದ್ಯ ಮುಡಾದ ಬಹುಕೋಟಿ ಹಗರಣದ ತನಿಖೆ ನಡೆಸುವ ನಾಟಕವಾಡುತ್ತಿರುವ ಸರ್ಕಾರ
ದಕ್ಷ ಅಧಿಕಾರಿಗಳು ಅದೇ ಸ್ಥಾನದಲ್ಲಿ ಮುಂದುವರಿದರೆ ಸತ್ಯ ಹೊರಬರುತ್ತದೆ ಎಂಬ ಆತಂಕದಿಂದ ವರ್ಗಾವಣೆ ಮಾಡಿರುವುದು ಸ್ಪಷ್ಟವಾಗಿದ್ದು, ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರದಿಂದ ಈ ವರ್ಗಾವಣೆಯ ಹಿಂದಿದೆ ಎಂದು ಆರೋಪಿಸಿದ್ದಾರೆ.

Continue Reading
Advertisement
New Fashion Trend
ಫ್ಯಾಷನ್5 mins ago

New Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಬೆರಳನ್ನು ಆಕ್ರಮಿಸಿದ ಫಂಕಿ ಉಂಗುರಗಳು!

CM Siddaramaiah
ಕರ್ನಾಟಕ16 mins ago

CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

karnataka Weather Forecast
ಮಳೆ60 mins ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

district administration has made an innovative attempt for the first time in the state for the marriage of farmer youth and disabled people
ಕರ್ನಾಟಕ1 hour ago

Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

Bajaj Freedom 125
ಪ್ರಮುಖ ಸುದ್ದಿ1 hour ago

Bajaj Freedom 125 CNG : ಬಜಾಜ್​ ಕಂಪನಿಯ ಸಿಎನ್​ಜಿ ಬೈಕ್​ ಬಿಡುಗಡೆ; ಕೆ.ಜಿಗೆ 102 ಕಿಲೋ ಮೀಟರ್​​ ಮೈಲೇಜ್​

Keir Starmer
ಪ್ರಮುಖ ಸುದ್ದಿ1 hour ago

Keir Starmer: ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ನೇಮಕ; ಅಭಿನಂದನೆ ಸಲ್ಲಿಸಿದ ಮೋದಿ

Bikini Dress
Latest1 hour ago

Bikini Day: ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆ ಉಡಾಯಿಸಿದ ಸುಂದರಿಯರಿವರು!

Narendra Modi
ಪ್ರಮುಖ ಸುದ್ದಿ1 hour ago

Narendra Modi : ಚಾಂಪಿಯನ್ನರ ಜತೆ ಸ್ಮರಣೀಯ ಸಂಭಾಷಣೆ; ಭಾರತ ಕ್ರಿಕೆಟ್ ತಂಡದ ಜತೆಗಿನ ಮಾತುಕತೆಯ ವಿಡಿಯೊ ಬಿಡುಗಡೆ ಮಾಡಿದ ಮೋದಿ

Monsoon Fashion
ಫ್ಯಾಷನ್1 hour ago

Monsoon Fashion: ಮಾನ್ಸೂನ್‌ಗೆ ರೀ ಎಂಟ್ರಿ ನೀಡಿದ ಪ್ರಿಂಟೆಡ್‌ ಕಲರ್‌ ನೆಕ್‌ ಕುರ್ತಾ ಫ್ಯಾಷನ್‌

BJP Karnataka
ಕರ್ನಾಟಕ1 hour ago

BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ60 mins ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ3 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ3 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ5 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ7 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು8 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು8 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ13 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌