IND vs NZ: ಮುಂದಿದೆ ಟೇಬಲ್​ ಟಾಪ್​ ಕಂಟಕ; ಪಾರಾದೀತೇ ಭಾರತ? - Vistara News

ಕ್ರಿಕೆಟ್

IND vs NZ: ಮುಂದಿದೆ ಟೇಬಲ್​ ಟಾಪ್​ ಕಂಟಕ; ಪಾರಾದೀತೇ ಭಾರತ?

ಕಳೆದ ಎರಡು ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಅಗ್ರಸ್ಥಾನದೊಂದಿಗೆ ಸಿಮಿ ಫೈನಲ್ ಪ್ರವೇಶ ಪಡೆದು ಸೋಲು ಕಂಡಿತ್ತು. ಈ ಬಾರಿ ಕಂಟಕದಿಂದ ಪಾರಾಗಲಿ ಎನ್ನುವುದು ಭಾರತೀಯ ಕ್ರಿಕೆಟ್​ ಅಭಿಮಾನಿಗಳ ಹಾರೈಕೆಯಾಗಿದೆ.

VISTARANEWS.COM


on

rohit sharma and kane williamson
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: 12 ವರ್ಷಗಳ ಬಳಿಕ ವಿಶ್ವಕಪ್(ICC World Cup 2023)​ ಗೆಲ್ಲುವ ಇರಾದೆಯೊಂದಿಗೆ ಭಾರತ ತಂಡ ಬುಧವಾರ ನಡೆಯುವ ಸೆಮಿಫೈನಲ್(IND vs NZ)​ ಪಂದ್ಯದಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ. ಆದರೆ ಕ್ರಿಕೆಟ್​ ಅಭಿಮಾನಿಗಳಿಗೆ ಆತಂಕವೊಂದು ಎದುರಾಗಿದೆ. ಇದಕ್ಕೆ ಎರಡು ಕಾರಣ. ಭಾರತ ಟೇಬಲ್​ ಟಾಪರ್ ಆಗಿರುವುದು ಮತ್ತು ಎದುರಾಳಿ ನ್ಯೂಜಿಲ್ಯಾಂಡ್​ ಸಿಕ್ಕಿರುವುದು. ಈ ಕಂಟಕದಿಂದ ಭಾರತ ಪಾರಾದೀತೇ ಎನ್ನುವುದು ಬುಧವಾರದ ಕುತೂಹಲ.

ಟೇಬಲ್​ ಟಾಪ್​ ಕಂಟಕವೇ?

ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಭಾರತ ತಂಡಕ್ಕೆ ಟೇಬಲ್​ ಟಾಪ್​ ಸ್ಥಾನ ಕಂಟಕವಾಗಿಯೇ ಪರಿಣಮಿಸಿದೆ. ಹೌದು, ಈ ಹಿಂದಿನ ಎರಡು ವಿಶ್ವಕಪ್​ ಟೂರ್ನಿಯಲ್ಲಿ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಸಂಪಾದಿಸಿತ್ತು. ಆದರೆ ಈ ಎರಡೂ ಸೆಮಿಫೈನಲ್​ನಲ್ಲಿ ಸೋಲು ಕಂಡಿತ್ತು. 2015ರಲ್ಲಿ ಭಾರತ ‘ಬಿ’ ಗ್ರೂಪ್​ನಲ್ಲಿ ಆಡಿದ ಎಲ್ಲ 6 ಪಂದ್ಯಗಳನ್ನು ಗೆದ್ದು 12 ಅಂಕದೊಂದಿಗೆ ಸೆಮಿಫೈನಲ್​ ಪ್ರವೇಶಿಸಿತ್ತು. 2019ರಲ್ಲಿ ಲಂಡನ್​ನಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ 9 ಪಂದ್ಯಗಳನ್ನು ಆಡಿ 7ರಲ್ಲಿ ಗೆದ್ದು 15 ಅಂಕದೊಂದಿಗೆ ಅಗ್ರಸ್ಥಾನ ಪಡೆದಿದ್ದತ್ತು. ಆದರೆ ಈ ಎರಡೂ ಟೂರ್ನಿಯಲ್ಲಿ ಸೆಮಿ ಪಂದ್ಯಗಳಲ್ಲಿ ಭಾರತ ಮುಗ್ಗರಿಸಿತ್ತು.

ಇದನ್ನೂ ಓದಿ Ind vs Nz : ಹಳೆ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಭಾರತ?

2015ರಲ್ಲಿ ಆಸೀಸ್​ ವಿರುದ್ಧ ಸೋಲು

2015ರ ವಿಶ್ವಕಪ್​ನಲ್ಲಿ ಟೇಬಲ್​ ಟಾಪರ್​ ಭಾರತ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್​ ಪಂದ್ಯವನ್ನಾಡಿತ್ತು. 2011ರಲ್ಲಿ ಭಾರತಕ್ಕೆ ವಿಶ್ವಕಪ್​ ತಂದುಕೊಟ್ಟ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರು 2ನೇ ಬಾರಿಯೂ ವಿಶ್ವಕಪ್​ ತಂದುಕೊಡಲಿದ್ದಾರೆ ಎಂದು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ನಿರೀಕ್ಷೆ ಮಾಡಿದ್ದರು. ಆದರೆ ಸಿಡ್ನಿಯಲ್ಲಿ ನಡೆದ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡ ಧೋನಿ ಪಡೆಗೆ ಆಘಾತವಿಕ್ಕಿತು. 95 ರನ್ನುಗಳ ಸೋಲು ಕಂಡು ಟೂರ್ನಿಯನ್ನು ಅಂತ್ಯಗೊಲೀಸಿತು. ಮೊದಲು ಬ್ಯಾಟಿಂಗ್​ ನಡೆಸಿದ ಆಸ್ಟ್ರೇಲಿಯಾ 7 ವಿಕೆಟ್​ಗೆ 328 ರನ್‌ ಪೇರಿಸಿತು. ಬೃಹತ್​ ಮೊತ್ತವನ್ನು ಕಂಡು ಆರಂಭದಲ್ಲೇ ಕಂಗಾಲಾದ ಭಾರತ 46.5 ಓವರ್‌ಗಳಲ್ಲಿ 233ಕ್ಕೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲಿಗೆ ತುತ್ತಾಯಿತು. ಆಸೀಸ್​ ಪರ ಸ್ಟೀವನ್​ ಸ್ಮಿತ್​ (105), ಆರಾನ್​ ಫಿಂಚ್‌ (81) ಬಾರಿಸಿ ಮಿಂಚಿದರು. ಭಾರತದ ಪರ ಧೋನಿ 65 ರನ್‌ ಮಾಡಿದರು. ಉಳಿದ ಎಲ್ಲ ಆಟಗಾರರು ವೈಫಲ್ಯ ಕಂಡರು.

2015 world cup semi final
2019 world cup semi final


2019ರಲ್ಲಿ ಕಿವೀಸ್​ ವಿರುದ್ಧ ಸೋಲು

ಲಂಡನ್​ನಲ್ಲಿ ನಡೆದ ಈ ವಿಶ್ವಕಪ್​ ಟೂರ್ನಿಯಲ್ಲಿ ಭಾರತ ವಿರಾಟ್​ ಕೊಹ್ಲಿ ಸಾರಥ್ಯದಲ್ಲಿ ಕಣಕ್ಕಿಳಿದಿತ್ತು. ಲೀಗ್​ ಹಂತದಲ್ಲಿ ಅಮೋಘ ಸಾಧನೆ ತೋರಿದ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಿತು. ರೋಹಿತ್​ ಶರ್ಮ ಅವರು ವಿಶ್ವಕಪ್​ ಇತಿಹಾಸದ ಆವೃತ್ತಿಯಯೊಂದರಲ್ಲೇ ಸರ್ವಾಧಿಕ 5 ಶತಕ ಬಾರಿಸಿದ್ದರು. ತಂಡ ಎಲ್ಲ ವಿಭಾಗದಲ್ಲೂ ಬಲಿಷ್ಠ ವಾಗಿತ್ತು. ಅಲ್ಲದೆ ಕಪ್​ ಗೆಲ್ಲುವ ಫೇವರಿಟ್​ ಕೂಡ ಆಗಿತ್ತು. ಆದರೆ ಸೆಮಿಫೈನಲ್​ನಲ್ಲಿ ನ್ಯೂಜಿಲ್ಯಾಂಡ್​ ಅಡ್ಡಗಾಲಿಕ್ಕಿತು.

ಮ್ಯಾಂಚೆಸ್ಟರ್​ನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ನ್ಯೂಜಿಲ್ಯಾಂಡ್​ 8ಕ್ಕೆ 239 ರನ್‌ ಗಳಿಸಿತು. ಭಾರತದ ಬ್ಯಾಟಿಂಗ್​ ವೇಳೆ ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯ ಮೀಸಲು ದಿನಕ್ಕೆ ಮುಂದುವರಿಯಿತು. ಇಲ್ಲಿ ಅಗ್ರ ಕ್ರಮಾಂಕದ ಬ್ಯಾಟಿಂಗ್‌ ವೈಫ‌ಲ್ಯಕ್ಕೆ ಸಿಲುಕಿದ ಕೊಹ್ಲಿ ಪಡೆ 18 ರನ್​ಗಳ ಸೋಲಿಗೆ ತುತ್ತಾಯಿತು. ಧೋನಿ ಅವರು ರನೌಟ್​ ಆಗುವ ಮೂಲಕ ಭಾರತದ ವಿಶ್ವಕಪ್​ ಕನಸು ಕಮರಿಹೋಗಿತ್ತು. ಭಾರತ 49.3 ಓವರ್‌ಗಳಲ್ಲಿ 221ಕ್ಕೆ ಆಲೌಟ್‌ ಆಗಿ ಕೂಟದಿಂದ ನಿರ್ಗಮಿಸಿತು.

2019 world cup semi final
2019 world cup semi final


ಈ ಬಾರಿಯೂ ಟೇಬಲ್​ ಟಾಪರ್​…

ಈ ಹಿಂದಿನ ಎರಡು ಟೂರ್ನಿಗಳಲ್ಲಿ ಟೇಬಲ್​ ಟಾಪರ್​ ಆಗಿದ್ದ ಭಾರತ ಈ ಬಾರಿಯೂ ಅಗ್ರಸ್ಥಾನದಲ್ಲೇ ಕಾಣಿಸಿಕೊಂಡಿದೆ. ಹೀಗಾಗಿ ಸಂಖ್ಯಾ ಶಾಸ್ತ್ರದ ಭವಿಷ್ಯದಲ್ಲಿ ಭಾರತಕ್ಕೆ ಕಂಟಕ ತಪ್ಪಿದ್ದಲ್ಲ. ಅಲ್ಲದೆ ಎದುರಾಳಿ ನ್ಯೂಜಿಲ್ಯಾಂಡ್​ ಕಾಣಿಸಿಕೊಂಡಿರುವುದು ಇನ್ನಷ್ಟು ಚಿಂತೆಗೆ ಕಾರಣವಾಗಿದೆ. ಭಾರತ ಕಳೆದ ವಿಶ್ವಕಪ್ ಸೆಮಿಫನಲ್​ ಮತ್ತು ಚೊಚ್ಚಲ ವಿಶ್ವಕಪ್​ ಟೆಸ್ಟ್​ನಲ್ಲಿ ಕಿವೀಸ್​ ವಿರುದ್ಧವೇ ಸೋಲು ಕಂಡಿತ್ತು. ಹೀಗಾಗಿ ಭಾರತ 2 ಕಂಟಕವನ್ನು ಗೆಲ್ಲಬೇಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ; ಮೈದಾನದಲ್ಲಿ ಬಾಲಕರ ರೋಚಕ ಕ್ರಿಕೆಟ್

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಮೈದಾನದಲ್ಲಿ ಬಾಲಕರ ಕ್ರಿಕೆಟ್ ರೋಚಕವಾಗಿತ್ತು.

VISTARANEWS.COM


on

By

53rd KVS National Games inaugurated
Koo

ಬೆಂಗಳೂರು: 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ಕ್ಕೆ (KVS Sports Meet) ಸೋಮವಾರ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ ಚಾಲನೆ ನೀಡಲಾಯಿತು. 14 ವರ್ಷದೊಳಗಿನ ಬಾಲಕರ ವಿಭಾಗದ ಕ್ರಿಕೆಟ್‌ ರೋಚಕವಾಗಿತ್ತು. ಮುಖ್ಯ ಅತಿಥಿಯಾಗಿ ಕೆವಿಎಸ್‌ ಉಪ ಆಯುಕ್ತರು ಡಾ.ಧರ್ಮೇಂದ್ರ ಪಟ್ಲೆ, ಸಹಾಯಕ ಆಯುಕ್ತ ಆರ್ ಪ್ರಮೋದ್ ಸೇರಿ ಇತರರು ಭಾಗಿಯಾಗಿದ್ದರು.

53rd KVS National Games inaugurated
53rd KVS National Games inaugurated

ಇದೇ ವೇಳೆ ಕೆ.ವಿ.ಎಸ್ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳು ನೆರವೇರಿಸಿದರು. ಪಾತ್ರ ಮತ್ತು ನಾಯಕತ್ವ ಎರಡನ್ನೂ ಅಭಿವೃದ್ಧಿಪಡಿಸುವಲ್ಲಿ ಕ್ರೀಡೆಯ ಮಹತ್ವವನ್ನು ಎತ್ತಿ ತೋರಿಸಿದರು. ಆಟಗಾರರನ್ನು ಹುಮ್ಮಸ್ಸಿನಿಂದ ಸ್ಪರ್ಧಿಸಲು ಪ್ರೋತ್ಸಾಹಿಸಿದರು. ಮುಂಬರುವ ದಿನಗಳಲ್ಲಿ ರೋಚಕ ಕ್ರಿಕೆಟ್ ಪಂದ್ಯಗಳನ್ನು ನೋಡುವ ನಿರೀಕ್ಷೆಯಿದೆ, ಏಕೆಂದರೆ ಭಾಗವಹಿಸುವವರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮೈದಾನಕ್ಕೆ ತರುತ್ತಾರೆ ಎಂದು ಅಭಿಪ್ರಾಯಪಟ್ಟರು.

Continue Reading

ಕ್ರೀಡೆ

Duleep Trophy: ದುಲೀಪ್​ ಟ್ರೋಫಿಯಿಂದ ಹೊರಬಿದ್ದ ಮೊಹಮ್ಮದ್ ಸಿರಾಜ್

Duleep Trophy: ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.

VISTARANEWS.COM


on

Duleep Trophy
Koo

ಮುಂಬಯಿ: ದುಲೀಪ್​ ಟ್ರೋಫಿ(Duleep Trophy) ಆರಂಭಕ್ಕೂ ಮುನ್ನವೇ ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್(mohammed siraj) ಅನಾರೋಗ್ಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಹಿರಿಯ ಆಟಗಾರ ರವೀಂದ್ರ ಜಡೇಜಾ(Ravindra Jadeja) ಅವರನ್ನು ಭಾರತ ‘ಬಿ’ ತಂಡದಿಂದ ಬಿಡುಗಡೆ ಮಾಡಲಾಗಿದೆ.

ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಉಮ್ರಾನ್ ಬದಲಿಗೆ ಮಧ್ಯಪ್ರದೇಶದ ಮಧ್ಯಮ ವೇಗಿ ಗೌರವ್ ಯಾದವ್ ಭಾರತ ‘ಸಿ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಡೇಜಾ ಸ್ಥಾನಕ್ಕೆ ಬದಲಿ ಆಟಗಾರನನ್ನ ಹೆಸರಿಸಲಾಗಿಲ್ಲ. ಜಡೇಜಾ ದುಲೀಪ್ ಟ್ರೋಫಿಯಲ್ಲಿ ಕೇವಲ ಒಂದು ಪಂದ್ಯವನ್ನು ಆಡಿ ಬಳಿಕ ಬಾಂಗ್ಲಾದೇಶ ಟೆಸ್ಟ್​ ಸರಣಿಗೆ ಮುಂಚಿತವಾಗಿ ಭಾರತ ಶಿಬಿರಕ್ಕೆ ತೆರಳಬೇಕಿತ್ತು. ಆದರೆ ಬಿಸಿಸಿಐ ಅವರಿಗೆ ಕೊನೆಯ ಕ್ಷಣದಲ್ಲಿ ವಿಶ್ರಾಂತಿ ನೀಡಿದೆ. ಭಾರತ ‘ಎ’ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದರೆ, ‘ಡಿ’ತಂಡವನ್ನು ಶ್ರೇಯಸ್‌ ಅಯ್ಯರ್‌ ಮುನ್ನಡೆಸಲಿದ್ದಾರೆ.

ಭಾರತ ‘ಎ’ ತಂಡ


ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ಭಾರತ ‘ಬಿ’ ತಂಡ


ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್‌ ಟೆಸ್ಟ್‌ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)

ಇದನ್ನೂ ಓದಿ Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

ಭಾರತ ‘ಸಿ’ ತಂಡ


ಋತುರಾಜ್ ಗಾಯಕ್ವಾಡ್​ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್‌ ಜುಯೆಲ್‌ (ವಿ.ಕೀ), ಸಂದೀಪ್ ವಾರಿಯರ್.

ಭಾರತ ‘ಡಿ’ ತಂಡ

ಶ್ರೇಯಸ್ ಅಯ್ಯರ್​ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

Continue Reading

ಕ್ರೀಡೆ

IPL 2025: ಮುಂಬೈ ಇಂಡಿಯನ್ಸ್​ಗೆ ನೂತನ ನಾಯಕ; ಪೋಸ್ಟರ್​ ಬಿಡುಗಡೆ ಮಾಡಿದ ಫ್ರಾಂಚೈಸಿ

IPL 2025: ಬುಮ್ರಾ ರೋಹಿತ್​ಗೆ ಬಹಳ ಆತ್ಮಿಯರಾಗಿರುವ ಕಾರಣ ಬುಮ್ರಾ ನಾಯಕನಾದರೆ ರೋಹಿತ್​ ಕೂಡ ಮುಂಬೈ ತೊರೆಯಲು ಹಿಂದೇಟು ಹಾಕಬಹುದು ಎನ್ನುವುದು ಫ್ರಾಂಚೈಸಿಯ ಯೋಜನೆ.

VISTARANEWS.COM


on

Jasprit Bumrah
Koo

ಮುಂಬಯಿ: 5 ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್​(Mumbai Indians) ಮುಂಬರುವ ಐಪಿಎಲ್​ ಆವೃತ್ತಿಗೂ ಮುನ್ನ ಮಹತ್ವದ ಘೋಷಣೆಯೊಂದನ್ನು ಮಾಡಲು ಮುಂದಾಗಿದೆ. ಇದರ ಸುಳಿವನ್ನು ಸ್ವತಃ ಫ್ರಾಂಚೈಸಿಯೇ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟುಕೊಟ್ಟಿದೆ. ಹೌದು, ಪ್ರಧಾನ ವೇಗಿ ಜಸ್​ಪ್ರೀತ್​ ಬುಮ್ರಾ(Jasprit Bumrah) ಅವರನ್ನು ನೂತನ ನಾಯಕನನ್ನಾಗಿ ಮಾಡಲು ನಿರ್ಧರಿಸಿದಂತಿದೆ. ಬುಮ್ರಾ ಅವರು ಜನಗಳ ಮಧ್ಯೆ ಕೈಬೀಸುತ್ತಾ ರ‍್ಯಾಂಪ್ ವಾಕ್ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದೆ. ಹೀಗಾಗಿ ಬುಮ್ರಾ ನಾಯಕನಾಗುವುದು ಖಚಿತ ಎನ್ನುವಂತಿದೆ. ಇದಕ್ಕೆ ಅಧಿಕೃತ ಮುದ್ರೆಯೊಂದು ಬೀಳಲು ಮಾತ್ರ ಬಾಕಿ ಇದೆ.

ಕಳೆದ ಬಾರಿ ರೋಹಿತ್​ ಶರ್ಮ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ ಪಾಂಡ್ಯ(Hardik Pandya)ಗೆ ನಾಯಕತ್ ಪಟ್ಟ ನೀಡಲಾಗಿತ್ತು. ಆದರೆ, ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಎಂದೂ ಕಾಣದ ವೈಫಲ್ಯ ಕಂಡಿತ್ತು. ಪಾಂಡ್ಯ ನಾಯಕನಾಗುವ ಬಗ್ಗೆ ಬುಮ್ರಾ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಬಳಿಕ ಫ್ರಾಂಚೈಸಿಯೇ ಅವರನ್ನು ಸಮಾಧಾನಪಡಿಸಿತ್ತು. ಇದೀಗ ಬುಮ್ರಾ ಅವರನ್ನೇ ನಾಯಕನನ್ನಾಗಿ ಮಾಡಲು ಮುಂದಾಗಿದೆ. ಬುಮ್ರಾ ಕಾರ್ಯವೈಖರಿ ಬಗ್ಗೆಯೂ ಸಹ ಆಟಗಾರರಿಗೆ ಸಮಧಾನವಿದೆ. ಬುಮ್ರಾ ರೋಹಿತ್​ಗೆ ಬಹಳ ಆತ್ಮಿಯರಾಗಿರುವ ಕಾರಣ ಬುಮ್ರಾ ನಾಯಕನಾದರೆ ರೋಹಿತ್​ ಕೂಡ ಮುಂಬೈ ತೊರೆಯಲು ಹಿಂದೇಟು ಹಾಕಬಹುದು ಎನ್ನುವುದು ಫ್ರಾಂಚೈಸಿಯ ಯೋಜನೆ.

ಜಸ್​ಪ್ರೀತ್​ ಬುಮ್ರಾ ಅವರು ಇದುವರೆಗೆ 133 ಐಪಿಎಲ್​ ಆಡಿದ್ದು 165 ವಿಕೆಟ್​ ಕೆಡವಿದ್ದಾರೆ. 2013ರಲ್ಲಿ ಮುಂಬೈ ತಂಡದ ಪರ ಐಪಿಎಲ್​ ಪದಾರ್ಪಣೆ ಮಾಡಿದ್ದ ಬುಮ್ರಾ ಇದುವರೆಗೂ ಮುಂಬೈ ಪರವೇ ಆಡುತ್ತಿದ್ದಾರೆ.

ಇದನ್ನೂ ಓದಿ IPL 2025: ಮುಂಬೈ ಇಂಡಿಯನ್ಸ್​ಗೆ ಶ್ರೇಯಸ್​ ಅಯ್ಯರ್​, ಕೆಕೆಆರ್​ಗೆ ಸೂರ್ಯಕುಮಾರ್​ ನಾಯಕ!​

ಸೂರ್ಯಕುಮಾರ್​ ಯಾದವ್​ಗೆ ಹಾಲಿ ಚಾಂಪಿಯನ್​ ಕೆಕೆಆರ್(KKR)​ ತಂಡದಿಂದ ನಾಯಕತ್ವದ ಆಫರ್​ ಬಂದಿದೆ ಎಂದು ವರದಿಯಾಗಿದೆ. ಸೂರ್ಯಕುಮಾರ್​ ಯಾದವ್​ ಅವರು ಮುಂಬೈ ತಂಡ ಸೇರುವ ಮುನ್ನ ಕೆಕೆಆರ್​ ಪರ ಆಡುತ್ತಿದ್ದರು. 2014 ರ ಐಪಿಎಲ್ ಹರಾಜಿನಲ್ಲಿ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಖರೀದಿಸಿತ್ತು. ಇದೇ ಆವೃತ್ತಿಯಲ್ಲಿ ಕೆಕೆಆರ್​ ಚಾಂಪಿಯನ್​ ಕೂಡ ಆಗಿತ್ತು. ಗೌತಮ್​ ಗಂಭೀರ್​ ತಂಡದ ನಾಯಕನಾಗಿದ್ದರು. ಸೂರ್ಯಕುಮಾರ್​ ಕೆಕೆಆರ್​ ಪರ ನಾಲ್ಕು ಋತುಗಳಲ್ಲಿ 54 ಪಂದ್ಯಗಳನ್ನಾಡಿ 608 ರನ್​ ಬಾರಿಸಿದ್ದರು. 2018ರಲ್ಲಿ ಸೂರ್ಯ ಮುಂಬೈ ತಂಡ ಸೇರಿದ್ದರು.

ಸೂರ್ಯಕುಮಾರ್​ ಇದುವರೆಗೆ 150 ಐಪಿಎಲ್ ಪಂದ್ಯಗಳಿಂದ 3594 ರನ್​ ಬಾರಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 24 ಅರ್ಧಶತಕ ಒಳಗೊಂಡಿದೆ. ರೋಹಿತ್ ಶರ್ಮ ಅವರು ಟಿ20 ಕ್ರಿಕೆಟ್​ಗೆ ನಿವೃತ್ತಿ ಹೇಳಿದ ಕಾರಣ ಭಾರತ ತಂಡದ ಟಿ20 ನಾಯಕತ್ವ ಸೂರ್ಯಕುಮಾರ್​ ಹೆಗಲೇರಿದೆ. ಅವರ ಪೂರ್ಣ ಪ್ರಮಾಣದ ನಾಯಕತ್ವದಲ್ಲಿ ಆಡಿದ್ದ ಕಳೆದ ಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 3-0 ಅಂತರದಿಂದ ಗೆದ್ದು ಬೀಗಿತ್ತು.

Continue Reading

ಕ್ರೀಡೆ

Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

Natasa Stankovic: ನತಾಶಾ ಅವರ ಈ ಪೋಸ್ಟ್ ನೋಡುವಾಗ ಪಾಂಡ್ಯ ಅವರು ನತಾಶ ಜತೆಗೆ ಸರಿಯಾಗಿ ಸಂವಹನ ಮತ್ತು ಅವರನ್ನು ಕೇರ್​ ಮಾಡುತ್ತಿರಲಿಲ್ಲ ಎನ್ನುವಂತಿದೆ.

VISTARANEWS.COM


on

Natasa Stankovic
Koo

ಲಂಡನ್​: ಜುಲೈನಲ್ಲಿ ಕ್ರಿಕೆಟಿಗ ಹಾರ್ದಿಕ್​ ಪಾಂಡ್ಯ(Hardik Pandya) ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್(Natasa Stankovic) ಅವರಿಗೆ ವಿಚ್ಛೇದನ(Hardik-Natasa Divorce) ನೀಡುವ ಮೂಲಕ 4 ವರ್ಷಗಳ ದಾಂಪತ್ಯ ಜೀವನಕ್ಕೆ ಬ್ರೇಕ್ ಹಾಕಿದ್ದರು. ಆದರೆ, ಈ ಜೋಡಿಯ ವಿಚ್ಛೇದನಕ್ಕೆ ಏನು ಕಾರಣವಿರಬಹುದೆಂದು ಎಂಬ ಬಗ್ಗೆ ನಿರಂತರ ಊಹಾಪೋಹಗಳ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಲೇ ಇದೆ. ಇದೀಗ ನತಾಶ ಅವರೇ ತಮ್ಮ ವಿಚ್ಛೇದನಕ್ಕೆ ಕಾರಣ ಏನೆಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ ಒಂದನ್ನು ಮಾಡಿರುವ ನತಾಶ, “ಪ್ರೀತಿಯು ಇತರರನ್ನು ಎಂದಿಗೂ ಅವಮಾನಿಸುವುದಿಲ್ಲ.. ಪ್ರೀತಿ ಎಂದರೇ ದಯೆ ಮತ್ತು ತಾಳ್ಮೆ, ಇದು ಹೆಮ್ಮೆ ಅಥವಾ ಅಸೂಯೆಯಲ್ಲ. ಪ್ರೀತಿ ಎನ್ನುವುದು ಬೇಡಿಕೆಯ ವಸ್ತು ಆಗಬಾರದು. ಪ್ರೀತಿ ಎನ್ನುವುದು ರಕ್ಷಣೆ ನೀಡಬೇಕು. ನಿಜವಾದ ಪ್ರೀತಿ ಎಂದಿಗೂ ಸುಳ್ಳಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ Natasa Stankovic : ‘ಹೊಸ ಹೆಸರನ್ನು ಪಡೆಯುತ್ತಿದ್ದೇನೆ’; ಕುತೂಹಲ ಮೂಡಿಸಿದ ನತಾಶಾ ಸ್ಟಾಂಕೊವಿಕ್​ ಹೊಸ ಪೋಸ್ಟ್​​​

ನತಾಶಾ ಅವರ ಈ ಪೋಸ್ಟ್ ನೋಡುವಾಗ ಪಾಂಡ್ಯ ಅವರು ನತಾಶ ಜತೆಗೆ ಸರಿಯಾಗಿ ಸಂವಹನ ಮತ್ತು ಅವರನ್ನು ಕೇರ್​ ಮಾಡುತ್ತಿರಲಿಲ್ಲ ಎನ್ನುವಂತಿದೆ. ಅಲ್ಲದೇ ನತಾಶಾಗೆ ಹಾರ್ದಿಕ್‌ ಅವರ ಕೆಲ ನಡುವಳಿಕೆ ಕೂಡ ಇಷ್ಟವಾಗದೇ ಅದನ್ನು ಸರಿಪಡಿಸಿಕೊಳ್ಳಲು ಹೇಳಿದ್ದರೂ ಪಾಂಡ್ಯ ಇದನ್ನು ಪಾಲಿಸಲು ನಿರಾಕರಿಸಿರಬಹುದು ಇದೇ ಕಾರಣಕ್ಕೆ ಇವರಿಬ್ಬರು ಬೇರೆಯಾದರು ಎನ್ನುವಂತಿದೆ.

ಹಾರ್ದಿಕ್​ ಮತ್ತು ನತಾಶಾ ನಡುವಿನ ಬ್ರೇಕಪ್​ಗೆ ಸಂವಹನ ಕೊರತೆಯೇ ಮುಖ್ಯ ಕಾರಣ ಎಂದು ಆಪ್ತ ಮೂಲಗಳು ಮಾಹಿತಿ ನೀಡಿತ್ತು. ಇಬ್ಬರ ನಡುವಿನ ಮನಸ್ತಾಪ ಮತ್ತು ಜಗಳಕ್ಕೆ ಪರಿಹಾರ ಕಂಡುಕೊಳ್ಳುವ ತಾಳ್ಮೆ ಇಬ್ಬರಲ್ಲೂ ಇರಲಿಲ್ಲ. ಹೀಗಾಗಿ ಮನಸ್ತಾಪ ದೊಡ್ಡದಾಗಿ ಡಿವೋರ್ಸ್​ಗೆ ಕಾರಣವಾಯಿತು ಎಂದು ಆಪ್ತ ಮೂಲಗಳು ತಿಳಿಸಿತ್ತು. ಇದೀಗ ನತಾಶ ಕೂಡ ಪ್ರೀತಿಯ ಬಗ್ಗೆ ಬರೆದುಕೊಂಡಿರುವುದನ್ನು ನೋಡುವಾಗ ಆಪ್ತ ಮೂಲಗಳು ನೀಡಿದ ಮಾಹಿತಿ ಸತ್ಯ ಎನ್ನುವಂತಿದೆ.


ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ವಿಚ್ಛೇದನ ಪಡೆದರೂ ಕೂಡ ಇಬ್ಬರೂ ಪುತ್ರ ಅಗಸ್ತ್ಯನನ್ನು(Agastya) ಸಹ-ಪೋಷಕರಾಗಿ ನೋಡಿಕೊಳ್ಳುತ್ತೇವೆ. ಅವನಿಗೆ ಯಾವುದೇ ಕಾರಣಕ್ಕೂ ಯಾವ ಕೊರತೆಯೂ ಆಗದಂತೆ ನಾವಿಬ್ಬರೂ ಸಮನಾಗಿ ಅವನ ಜವಾಬ್ದಾರಿ ಹಂಚಿಕೊಳ್ಳಲಿದ್ದೇವೆ ಎಂದು ಈಗಾಗಲೇ ಪಾಂಡ್ಯ ಮತ್ತು ನತಾಶ ಜಂಟಿ ಹೇಳಿಯಲ್ಲಿ ಖಚಿತಪಡಿಸಿದ್ದಾರೆ.

Continue Reading
Advertisement
karnataka Weather Forecast
ಮಳೆ2 ಗಂಟೆಗಳು ago

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ2 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

Action Prince Dhruva Sarja much awaited film Martin to hit the screens on October 11
ಸಿನಿಮಾ11 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು12 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು15 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು15 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ16 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

MLA Muniratna
ಬೆಂಗಳೂರು16 ಗಂಟೆಗಳು ago

MLA Muniratna: ಶಾಸಕ ಮುನಿರತ್ನ ಕೇಸ್‌; ರಾಜಕಾರಣಿಗಳ ಹನಿಟ್ರ್ಯಾಪ್‌ ಮಾಡುತ್ತಿದ್ದ ರೂಮಿನ ಸ್ಥಳ ಮಹಜರು ಮಾಡಿದ ಎಸ್‌ಐಟಿ ಅಧಿಕಾರಿಗಳು

Power cut off due to a technical problem in the transformer Bengaluru faces water crisis today
ಬೆಂಗಳೂರು18 ಗಂಟೆಗಳು ago

Water supply: ಟ್ರಾನ್ಸಫಾರ್ಮರ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ವಿದ್ಯುತ್‌ ಸಂಪರ್ಕ ಕಡಿತ; ಬೆಂಗಳೂರಿಗೆ ಇಂದು ನೀರಿನ ಸಮಸ್ಯೆ

Gandhi Jayanti 2024
ಬೆಂಗಳೂರು19 ಗಂಟೆಗಳು ago

Gandhi Jayanti 2024: ಗಾಂಧಿ ಜಯಂತಿ ಹಿನ್ನೆಲೆ ಸರ್ಕಾರಿ ಯೋಜನೆಗಳ ಅರಿವು ಮೂಡಿಸಿದ ಎನ್‌ಸಿಸಿ ಕೆಡೆಟ್‌ಗಳು

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ11 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌