ICC World Cup 2023: ಸೆಮಿ ಪಂದ್ಯಗಳ ಅಂಪೈರ್​ ಪಟ್ಟಿ, ಮಳೆ ನಿಯಮ ಹೀಗಿದೆ - Vistara News

ಕ್ರಿಕೆಟ್

ICC World Cup 2023: ಸೆಮಿ ಪಂದ್ಯಗಳ ಅಂಪೈರ್​ ಪಟ್ಟಿ, ಮಳೆ ನಿಯಮ ಹೀಗಿದೆ

ಸೆಮಿಫೈನಲ್​ಗೆ ಮಳೆ ಬಂದು ನಿಗದಿತ ದಿನದಂದು ಪಂದ್ಯ ನಡೆಯದಿದ್ದರೆ ಮೀಸಲು ದಿನಕ್ಕೆ ಪಂದ್ಯ ಮುಂದುವರಿಯಲಿದೆ.

VISTARANEWS.COM


on

semifinals umpire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ವಿಶ್ವಕಪ್​ ಟೂರ್ನಿಯ(ICC World Cup 2023) ಸೆಮಿಫೈನಲ್​ ಪಂದ್ಯಗಳು ಬುಧವಾರದಿಂದ ಆರಂಭಗೊಳ್ಳಲಿದೆ. ನಾಳೆ ನಡೆಯುವ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ನ್ಯೂಜಿಲ್ಯಾಂಡ್(IND vs NZ)​ ಮುಖಾಮುಖಿಯಾಗಲಿದೆ. ಗುರುವಾರದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ(AUS vs SA) ಸೆಣಸಾಡಲಿವೆ. ಈ ಪಂದ್ಯಗಳ ಅಂಪೈರ್​ಗಳು(semi-finals umpires) ಮತ್ತು ಮಳೆ ನಿಯಮದ ಸಂಪೂರ್ಣ ಮಾಹಿತಿ ಇಂತಿದೆ.

ಸೆಮಿಫೈನಲ್‌ ಪಂದ್ಯಗಳ ಅಂಪೈರ್​ಗಳ ಪಟ್ಟಿ

ಭಾರತ- ನ್ಯೂಜಿಲ್ಯಾಂಡ್‌

ಫೀಲ್ಟ್​ ಅಂಪಾಯರ್: ರಿಚರ್ಡ್‌ ಇಲ್ಲಿಂಗ್‌ವರ್ತ್‌, ರಾಡ್‌ ಟ್ಯುಕರ್‌

ಥರ್ಡ್‌ ಅಂಪಾಯರ್‌: ಜೋಯೆಲ್‌ ವಿಲ್ಸನ್‌

ಫೋರ್ತ್‌ ಅಂಪಾಯರ್‌: ಅಡ್ರಿಯನ್‌ ಹೋಲ್ಡ್‌ಸ್ಟಾಕ್‌

ಮ್ಯಾಚ್‌ ರೆಫ್ರಿ: ಆ್ಯಂಡಿ ಪೈಕ್ರಾಫ್ಟ್

ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ

ಫೀಲ್ಡ್​ ಅಂಪಾಯರ್: ರಿಚರ್ಡ್‌ ಕೆಟಲ್‌ಬರೋ, ನಿತಿನ್‌ ಮೆನನ್‌

ಥರ್ಡ್‌ ಅಂಪಾಯರ್‌ ;ಕ್ರಿಸ್‌ ಗಫಾನಿ

ಫೋರ್ತ್‌ ಅಂಪಾಯರ್‌: ಮೈಕಲ್‌ ಗಾಫ್

ಮ್ಯಾಚ್‌ ರೆಫ್ರಿ:ಜಾವಗಲ್‌ ಶ್ರೀನಾಥ್‌

ಮಳೆ ಬಂದರೆ ಏನು ಗತಿ?

ವಿಶ್ವಕಪ್​ ಲೀಗ್​ ಹಂತದ ಯಾವುದೇ ಪಂದ್ಯಕ್ಕೂ ಮೀಸಲು ದಿನ ಇರಲಿಲ್ಲ. ಲೀಗ್ ಹಂತದ ಪಂದ್ಯಗಳು ಮಳೆಯಿಂದ ರದ್ದುಗೊಂಡರೆ ಎರಡು ತಂಡಗಳಿಗೂ ತಲಾ ಒಂದು ಅಂಕ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಕೆಲವು ಪಂದ್ಯಗಳಿಗೆ ಮಳೆ ಅಡ್ಡಿ ಪಡಿಸಿದ್ದರೂ, ಯಾವುದೇ ಪಂದ್ಯ ಕೂಡ ರದ್ದುಗೊಂಡಿರಲಿಲ್ಲ. ಇದೀಗ ಸೆಮಿಫೈನಲ್​ಗೆ ಮಳೆ ಬಂದು ನಿಗದಿತ ದಿನದಂದು ಪಂದ್ಯ ನಡೆಯದಿದ್ದರೆ ಏನು ಗತಿ, ಫಲಿತಾಂಶ ನಿರ್ಧಾರ ಹೇಗೆ ಹೀಗೆ ಹಲವು ಪಶ್ನೆಗಳು ಕ್ರಿಕೆಟ್​ ಅಭಿಮಾನಿಗಳಲ್ಲಿ ಕಾಡಲಾರಂಭಿಸಿದೆ. ಆದರೆ ಚಿಂತಿಸುವ ಅಗತ್ಯವಿಲ್ಲ. ಐಸಿಸಿ ಮಂಗಳವಾರ ಇದರ ಬಗ್ಗೆ ಸ್ಪಷ್ಟನೆ ನೀಡಿದ್ದು, ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮೀಸಲು ದಿನ ಇರುತ್ತದೆ ಎಂದಿದೆ.

ಇದನ್ನೂ ಓದಿ Ind vs Nz : ಹಳೆ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಭಾರತ?

ಮೀಸಲು ದಿನವೂ ಮಳೆ ಬಂದರೆ ಫಲಿತಾಂಶ ಹೇಗೆ?

ಒಂದೊಮ್ಮೆ ಸೆಮಿಫೈನಲ್ ಪಂದ್ಯಗಳು ಮಳೆಯಿಂದ ಅಡಚಣೆಯಾಗಿ ಮೀಸಲು ದಿನವೂ ನಡೆಯದಿದ್ದರೆ ಫಲಿತಾಂಶ ಹೇಗೆ ನಿರ್ಧರಿಸಲಾಗುತ್ತದೆ ಎಂಬ ಪಶ್ನೆ ಎಲ್ಲ ಕ್ರಿಕೆಟ್​ ಅಭಿಮಾನಿಗಳಲ್ಲಿ ಕಾಡಲಾರಂಭಿಸಿದೆ. ಇದಕ್ಕೆ ಉತ್ತರ ಇಲ್ಲಿದೆ. ಮೀಸಲು ದಿನವೂ ಪಂದ್ಯ ಸಂಪೂರ್ಣವಾಗಿ ನಡೆಯದಿದ್ದರೆ ಆಗ ಲೀಗ್​ ಹಂತದಲ್ಲಿ ಹೆಚ್ಚು ಅಂಕ ಮತ್ತು ರನ್​ ರೇಟ್ ಹೊಂದಿರುವ ತಂಡ ಫೈನಲ್​ ಪ್ರವೇಶಿಸಲಿದೆ. ಉದಾಹರಣೆ ಭಾರತ ಮತ್ತು ನ್ಯೂಜಿಲ್ಯಾಂಡ್​ ತಂಡದ ಸೆಮಿ ಫೈನಲ್​ ರದ್ದುಗೊಂಡರೆ ಇದರ ಲಾಭ ಭಾರತಕ್ಕೆ ಲಭಿಸಲಿದೆ. ಏಕೆಂದರೆ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ. ಹೀಗಾಗಿ ಭಾರತ ಫೈನಲ್​ ಪ್ರವೇಶ ಪಡೆಯುತ್ತದೆ.

ಇದನ್ನೂ ಓದಿ IND vs NZ: ಮುಂದಿದೆ ಟೇಬಲ್​ ಟಾಪ್​ ಕಂಟಕ; ಪಾರಾದೀತೇ ಭಾರತ?

ಸಮಾನ ಅಂಕ ಹೊಂದಿದ್ದರೆ?

ಒಂದೊಮ್ಮೆ ಸೆಮಿಫೈನಲ್​ ಮುಖಾಮುಖಿಯಾಗುವ ತಂಡದ ಅಂಕಗಳು ಸಮಾನವಾಗಿದ್ದರೆ, ಆಗ ರನ್​ರೇಟ್​ನಲ್ಲಿ ಮುಂದಿರುವ ತಂಡಕ್ಕೆ ಇದರ ಲಾಭ ಸಿಗಲಿದೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಲಾ 14 ಅಂಕ ಹೊಂದಿದೆ. ಆದರೆ ರನ್​ ರೇಟ್​ನಲ್ಲಿ ದಕ್ಷಿಣ ಆಫ್ರಿಕಾ ಮುಂದಿದೆ. ಹೀಗಾಗಿ ಈ ಪಂದ್ಯ ಮಳೆಯಿಂದ ರದ್ದುಗೊಂಡರೆ ದಕ್ಷಿಣ ಆಫ್ರಿಕಾ ನೇರವಾಗಿ ಫೈನಲ್​ ಪ್ರವೇಸಿಸಲಿದೆ.

ಬೌಂಡರಿ ಕೌಂಟ್​ ಇಲ್ಲ

ಕಳೆದ ಬಾರಿಯ ವಿಶ್ವಕಪ್​ ಫೈನಲ್​ನಲ್ಲಿ ಸೂಪರ್​ ಓವರ್​ ಟೈಗೊಂಡಾಗ ಫಲಿತಾಂಶಕ್ಕೆ ಬೌಂಡರಿ ಲೆಕ್ಕಾಚಾರವನ್ನು ಮಾಡಲಾಗಿತ್ತು. ಇದು ಭಾರಿ ವಿವಾದಕ್ಕೂ ಕಾರಣವಾಗಿತ್ತು. ಈ ಬಾರಿ ಬೌಂಡರಿ ನಿಯಮವನ್ನು ತೆಗೆದು ಹಾಕಲಾಗಿದೆ. ಈ ಬಾರಿ ಸೆಮಿ ಆಗಲಿ ಫೈನಲ್​ ಆಗಲಿ ಟೈ ಗೊಂಡರೆ ಫಲಿತಾಂಶ ಬರುವ ತನಕ ಸೂಪರ್​ ಓವರ್​ ಆಡಿಸಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

Joe Root : ಲಾರ್ಡ್ಸ್​ನಲ್ಲಿ ನಡೆದ ಮೊದಲ ಟೆಸ್ಟ್​ನಲ್ಲಿ ಅವರು ಸೀಮಿತ ಅವಕಾಶಗಳನ್ನು ಪಡೆದುಕೊಂಡಿದ್ದರು. ಒಮ್ಮೆ ಮಾತ್ರ ಬ್ಯಾಟಿಂಗ್ ಮಾಡಿದ್ದರು. ಆದಾಗ್ಯೂ, ಟ್ರೆಂಟ್ ಬ್ರಿಜ್​​ನಲ್ಲಿ ನಡೆದ ಎರಡನೇ ಟೆಸ್ಟ್​​ನಲ್ಲಿ ಅವರು ಶ್ರೀಲಂಕಾದ ಆಟಗಾರ ಮಹೇಲಾ ಜಯವರ್ಧನೆ ಮತ್ತು ವೆಸ್ಟ್ ಇಂಡೀಸ್​​ನ ಶಿವನಾರಾಯಣ್ ಚಂದ್ರಪಾಲ್ ಅವರನ್ನು ಹಿಂದಿಕ್ಕಿದ್ದರು. ಇದರಲ್ಲಿ ಅವರ 32 ನೇ ಟೆಸ್ಟ್ ಶತಕವೂ ಸೇರಿದೆ.

VISTARANEWS.COM


on

Joe Root
Koo

ಎಡ್ಜ್ ಬಾಸ್ಟನ್: ಇಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನವಾದ ಶನಿವಾರ ಇಂಗ್ಲೆಂಡ್ ಸ್ಟಾರ್ ಬ್ಯಾಟ್ಸ್ ಮನ್ ಜೋ ರೂಟ್ (Joe Root) ವೆಸ್ಟ್ ಇಂಡೀಸ್ ದಂತಕತೆ ಬ್ರಿಯಾನ್ ಲಾರಾ ಅವರನ್ನು ಹಿಂದಿಕ್ಕಿ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಏಳನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಲಾರಾ ಅವರ ವೃತ್ತಿಜೀವನದಲ್ಲಿ ಗಳಿಸಿದ್ದ 11,953 ರನ್​ ಳಿಗಿಂತ ಕೇವಲ 14 ರನ್​ ಹಿಂದಿದ್ದ ರೂಟ್​ ಮೊದಲ ದಿನ ಸ್ಟಂಪ್ ವೇಲೆ 2* ರನ್ ಗಳಿಸಿ ಅಜೇಯರಾಗಿದ್ದರು. ಅಂತೆಯೇ ಇಂಗ್ಲೆಂಡ್​ನ ಮೊದಲ ಇನ್ನಿಂಗ್ಸ್​ನ 14 ನೇ ಓವರ್​ನಲ್ಲಿ ಅವರು ಜೇಡನ್ ಸೀಲ್ಸ್ ಅವರ ಎಸೆತವನ್ನು ಎದುರಿಸಿ ಲಾರಾ ಹಿಂದಿಕ್ಕಿದರು. ಇದು ರೂಟ್​ ವೃತ್ತಿಜೀವನದಲ್ಲಿ ಮತ್ತೊಂದು ಮಹತ್ವದ ಸಾಧನೆಯನ್ನು ಸೂಚಿಸುತ್ತದೆ.

ಈ ಮೈಲಿಗಲ್ಲು ದಾಟುವಲ್ಲಿ ರೂಟ್ ಕೆಲವು ನಾಟಕೀಯ ಅವಕಾಶಗಳನ್ನು ಪಡೆದರು. 10 ನೇ ಓವರ್​ನಲ್ಲಿ ಸೀಲ್ಸ್ ಅವರ ಬೌಲಿಂಗ್​ ವೇಳೆ ಎಲ್ಬಿಡಬ್ಲ್ಯು ನಿರ್ಧಾರವನ್ನು ವೆಸ್ಟ್ ಇಂಡೀಸ್ ಪರಿಶೀಲಿಸಲಿಲ್ಲ, ಈ ನಿರ್ಧಾರವು ದುಬಾರಿ ಎಂಬುದಾಗಿ ಸಾಬೀತಾಯಿತು. ಡಿಆರ್​ಎಸ್​ ತೆಗೆದುಕೊಂಡಿದ್ದರೆ ರೂಟ್ ಔಟ್ ಆಗುತ್ತಿದ್ದರು ಎಂದು ರಿಪ್ಲೇಗಳು ತೋರಿಸಿದ್ದವು. ಇಂಗ್ಲೆಂಡ್​ನ ಬ್ಯಾಟಿಂಗ್ ಲೈನ್ಅಪ್​​ನ ಆಧಾರಸ್ತಂಭವಾಗಿರುವ ರೂಟ್, ಟೆಸ್ಟ್ ಕ್ರಿಕೆಟ್​​ನಲ್ಲಿ 10 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಈ ಸರಣಿ ಪ್ರಾರಂಭಿಸಿದ್ದರು. ಲಾರ್ಡ್ಸ್​ನಲ್ಲಿ ನಡೆದ ಮೊದಲ ಟೆಸ್ಟ್​ನಲ್ಲಿ ಅವರು ಸೀಮಿತ ಅವಕಾಶಗಳನ್ನು ಪಡೆದುಕೊಂಡಿದ್ದರು. ಒಮ್ಮೆ ಮಾತ್ರ ಬ್ಯಾಟಿಂಗ್ ಮಾಡಿದ್ದರು. ಆದಾಗ್ಯೂ, ಟ್ರೆಂಟ್ ಬ್ರಿಜ್​​ನಲ್ಲಿ ನಡೆದ ಎರಡನೇ ಟೆಸ್ಟ್​​ನಲ್ಲಿ ಅವರು ಶ್ರೀಲಂಕಾದ ಆಟಗಾರ ಮಹೇಲಾ ಜಯವರ್ಧನೆ ಮತ್ತು ವೆಸ್ಟ್ ಇಂಡೀಸ್​​ನ ಶಿವನಾರಾಯಣ್ ಚಂದ್ರಪಾಲ್ ಅವರನ್ನು ಹಿಂದಿಕ್ಕಿದ್ದರು. ಇದರಲ್ಲಿ ಅವರ 32 ನೇ ಟೆಸ್ಟ್ ಶತಕವೂ ಸೇರಿದೆ.

ಫಾರ್ಮ್​ಗೆ ಮರಳಿದ ರೂಟ್​

ಇಂಗ್ಲೆಂಡ್​ನ ಮಾಜಿ ನಾಯಕ ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ ತಮ್ಮ ಫಾರ್ಮ್ ಮರಳಿ ಪಡೆದಿದ್ದಾರೆ. ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪ್ರಸ್ತುತ ಮೂರು ಪಂದ್ಯಗಳ ಸರಣಿಯಲ್ಲಿ, ಅವರು ಇಲ್ಲಿಯವರೆಗೆ ಒಂದು ಶತಕ ಮತ್ತು ಅರ್ಧಶತಕವನ್ನು ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಟೆಸ್ಟ್ ಕ್ರಿಕೆಟ್​ನಲ್ಲಿ ಸಾರ್ವಕಾಲಿಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗುವ ಸಾಮರ್ಥ್ಯ ರೂಟ್ ಹೊಂದಿದ್ದಾರೆ ಎಂದು ಅನೇಕ ಕ್ರಿಕೆಟ್ ಶ್ರೇಷ್ಠರು ಮತ್ತು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 32 ಶತಕಗಳು ಮತ್ತು 62 ಅರ್ಧಶತಕಗಳನ್ನು ಹೊಂದಿರುವ ಅವರ ದಾಖಲೆ ಸ್ವತಃ ಮಾತನಾಡುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಮತ್ತು ಶತಕಗಳ ದಾಖಲೆಯನ್ನು ರೂಟ್ ಹೊಂದಿದ್ದಾರೆ.

Continue Reading

ಕ್ರೀಡೆ

Gautam Gambhir : ಗೌತಮ್​ ಗಂಭೀರ್​ಗೆ ವಿಶೇಷ ಸಂದೇಶ ಕಳುಹಿಸಿದ ದ್ರಾವಿಡ್​; ಭಾವುಕರಾದ ನೂತನ ಕೋಚ್​!

Gautam Gambhir : ಗಂಭೀರ್ ಅವರ ಯುಗ ಪ್ರಾರಂಭವಾಗುವ ಮೊದಲು, ರಾಹುಲ್ ದ್ರಾವಿಡ್ ಗೌತಮ್ ಗಂಭೀರ್ ಅವರಿಗೆ ಭಾವನಾತ್ಮಕ ಸಂದೇಶವನ್ನು ಕಳುಹಿಸಿದ್ದಾರೆ. ಅವರ ಹೊಸ ಪಾತ್ರಕ್ಕಾಗಿ ಅವರನ್ನು ಪ್ರೇರೇಪಿಸಿದ್ದಾರೆ. ತಂಡದ ಎಲ್ಲಾ ಆಟಗಾರರೊಂದಿಗೆ ಅದ್ಭುತ ಬಾಂಧವ್ಯ ಹೊಂದಿದ್ದ ದ್ರಾವಿಡ್, ಗಂಭೀರ್ ಕೂಡ ಇದೇ ರೀತಿಯ ಸಂಬಂಧ ಹೊಂದಿರುತ್ತಾರೆ ಎಂದು ನಿರೀಕ್ಷಿಸಿದ್ದಾರೆ. ಆಟಗಾರರು ಫಿಟ್ ಆಗಿರಬೇಕು ಮತ್ತು ಪ್ರತಿ ಪಂದ್ಯಕ್ಕೂ ಲಭ್ಯವಿರಬೇಕು ಎಂದು ದ್ರಾವಿಡ್ ಹಾರೈಸಿದ್ದಾರೆ.

VISTARANEWS.COM


on

Gautam Gambhir
Koo

ಬೆಂಗಳೂರು: ವೆಸ್ಟ್​ ಇಂಡೀಸ್​ನ ಬಾರ್ಬಡೋಸ್​​ನಲ್ಲಿ ನಡೆದ 2024ರ ಟಿ 20 ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ಚಾಂಪಿಯನ್ ಆಯಿತು. ಇದೇ ವೇಳೆ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರ ಅಭಿಯಾನವೂ ಅಂತ್ಯಗೊಂಡಿತು. ಇದೀಗ ಹೊಸ ಯುಗ ಪ್ರಾರಂಭವಾಗುವ ಸಮಯ ಬಂದಿದೆ. ಕೆಚ್ಚೆದೆಯ ಬ್ಯಾಟರ್​​ ಗೌತಮ್ ಗಂಭೀರ್ (Gautam Gambhir) ಶ್ರೀಲಂಕಾ ವಿರುದ್ಧದ ಸರಣಿಯೊಂದಿಗೆ (IND vs SL) ಭಾರತದ ಹೊಸ ಮುಖ್ಯ ಕೋಚ್ ಆಗಿ ತಮ್ಮ ಕಾರ್ಯವನ್ನು ಪ್ರಾರಂಭಿಸಿದ್ದಾರೆ.

ಗಂಭೀರ್ ಅವರ ಯುಗ ಪ್ರಾರಂಭವಾಗುವ ಮೊದಲು, ರಾಹುಲ್ ದ್ರಾವಿಡ್ ಗೌತಮ್ ಗಂಭೀರ್ ಅವರಿಗೆ ಭಾವನಾತ್ಮಕ ಸಂದೇಶವನ್ನು ಕಳುಹಿಸಿದ್ದಾರೆ. ಅವರ ಹೊಸ ಪಾತ್ರಕ್ಕಾಗಿ ಅವರನ್ನು ಪ್ರೇರೇಪಿಸಿದ್ದಾರೆ. ತಂಡದ ಎಲ್ಲಾ ಆಟಗಾರರೊಂದಿಗೆ ಅದ್ಭುತ ಬಾಂಧವ್ಯ ಹೊಂದಿದ್ದ ದ್ರಾವಿಡ್, ಗಂಭೀರ್ ಕೂಡ ಇದೇ ರೀತಿಯ ಸಂಬಂಧ ಹೊಂದಿರುತ್ತಾರೆ ಎಂದು ನಿರೀಕ್ಷಿಸಿದ್ದಾರೆ. ಆಟಗಾರರು ಫಿಟ್ ಆಗಿರಬೇಕು ಮತ್ತು ಪ್ರತಿ ಪಂದ್ಯಕ್ಕೂ ಲಭ್ಯವಿರಬೇಕು ಎಂದು ದ್ರಾವಿಡ್ ಹಾರೈಸಿದ್ದಾರೆ.

ಗಂಭೀರ್ ಅವರ ದೃಢ ನಿರ್ಧಾರ ಮತ್ತು ಎಂದಿಗೂ ಬಿಟ್ಟುಕೊಡದ ಮನೋಭಾವವನ್ನು ದ್ರಾವಿಡ್ ಶ್ಲಾಘಿಸಿದ್ದಾರೆ. ಅವರು ಈ ಗುಣವನ್ನು ಭಾರತೀಯ ತಂಡಕ್ಕೆ ತರಬಹುದು ಎಂದು ಆಶಿಸಿದ್ದಾರೆ

ರಾಹುಲ್ ದ್ರಾವಿಡ್ ಭಾವನಾತ್ಮಕ ಸಂದೇಶ ಇಲ್ಲಿದೆ

ಬಿಸಿಸಿಐ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ ಆಡಿಯೊ ಸಂದೇಶದಲ್ಲಿ, ದ್ರಾವಿಡ್ ಗಂಭೀರ್ ಅವರಿಗೆ ಭಾರತೀಯ ತಂಡದೊಂದಿಗೆ ಯಾವಾಗಲೂ ಇರುವ ನಿರೀಕ್ಷೆಗಳನ್ನು ಹೇಳಿದ್ದಾರೆ. ಅದೇ ರೀತಿ ಆದರೆ ಅವರಿಗೆ ಯಶಸ್ಸನ್ನು ಹಾರೈಸಿದ್ದಾರೆ. ಭಾರತೀಯ ಕ್ರಿಕೆಟ್ ಅನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಬಹುದು ಎಂದು ಆಶಿಸಿದ್ದಾರೆ.

ಹಲೋ ಗೌತಮ್ (ಗಂಭೀರ್). ಮತ್ತು ಭಾರತೀಯ ಕ್ರಿಕೆಟ್ ತಂಡದ ತರಬೇತುದಾರರಾಗಿ ನಮ್ಮ ವಿಶ್ವದ ಅತ್ಯಂತ ರೋಮಾಂಚಕಾರಿ ಕೆಲಸಕ್ಕೆ ಸ್ವಾಗತ. ಬಾರ್ಬಡೋಸ್​​ನಲ್ಲಿ ಮತ್ತು ಕೆಲವು ದಿನಗಳ ನಂತರ ಮುಂಬೈನಲ್ಲಿ ಮರೆಯಲಾಗದ ಸಂಜೆ ನನ್ನ ಕನಸುಗಳನ್ನು ಮೀರಿದ ರೀತಿಯಲ್ಲಿ ನಾನು ಭಾರತೀಯ ತಂಡದೊಂದಿಗೆ ನನ್ನ ಅವಧಿಯನ್ನು ಕೊನೆಗೊಳಿಸಿ ಮೂರು ವಾರಗಳಾಗಿವೆ. ಎಲ್ಲಕ್ಕಿಂತ ಹೆಚ್ಚಾಗಿ ತಂಡದೊಂದಿಗಿನ ನನ್ನ ಸಮಯದಲ್ಲಿ ನಾನು ಹೊಂದಿರುವ ನೆನಪುಗಳು ಮತ್ತು ಸ್ನೇಹವನ್ನು ನಾನು ಅಮೂಲ್ಯವೆಂದು ಪರಿಗಣಿಸುತ್ತೇನೆ”ಎಂದು ದ್ರಾವಿಡ್ ಹೇಳಿದ್ದಾರೆ.

ನೀವು ಭಾರತದ ತರಬೇತುದಾರನ ಪಾತ್ರವನ್ನು ವಹಿಸಿಕೊಂಡಾಗ, ನಾನು ನಿಮಗೂ ಅದೇ ಸಂಭ್ರಮ ಸಿಗಲಿ ಬಯಸುತ್ತೇನೆ. ಪ್ರತಿ ತಂಡದಲ್ಲಿ ಸಂಪೂರ್ಣ ಫಿಟ್ ಆಟಗಾರರ ಲಭ್ಯತೆಯನ್ನು ನೀವು ಹೊಂದಿರುತ್ತೀರಿ ಎಂದು ನಾನು ಭಾವಿಸುತ್ತೇನೆ. ಅದಕ್ಕೆ ಶುಭವಾಗಲಿ!” ಎಂದು ದ್ರಾವಿಡ್​ ಹೇಳಿದ್ದಾರೆ.

ನಿಮ್ಮ ತಂಡದ ಸಹ ಆಟಗಾರನಾಗಿ ನೀವು ಮೈದಾನದಲ್ಲಿ ಸರ್ವಸ್ವವನ್ನೂ ನೀಡುವುದನ್ನು ನಾನು ನೋಡಿದ್ದೇನೆ. ನಿಮ್ಮ ಬ್ಯಾಟಿಂಗ್ ಪಾಲುದಾರ ಮತ್ತು ಸಹ ಫೀಲ್ಡರ್ ಆಗಿ ನಿಮ್ಮ ದೃಢತೆ ಮತ್ತು ಶರಣಾಗತಿಗೆ ನಿರಾಕರಿಸುವುದನ್ನು ನಾನು ನೋಡಿದ್ದೇನೆ. ಐಪಿಎಲ್ ಋತುಗಳಲ್ಲಿ ಯುವ ಆಟಗಾರರೊಂದಿಗೆ ಕೆಲಸ ಮಾಡುವ ಮತ್ತು ಮೈದಾನದಲ್ಲಿ ತಂಡದಿಂದ ಅತ್ಯುತ್ತಮವಾದದ್ದನ್ನು ಹೊರತೆಗೆಯುವ ನಿಮ್ಮ ಸಾಮರ್ಥ್ಯವನ್ನು ನಾನು ಗಮನಿಸಿದ್ದೇನೆ ಎಂದು ದ್ರಾವಿಡ್ ಹೇಳಿದ್ದಾರೆ.

ನೀವು ಭಾರತೀಯ ಕ್ರಿಕೆಟ್ ಬಗ್ಗೆ ಎಷ್ಟು ಸಮರ್ಪಿತವಾಗಿದ್ದೀರಿ ಎಂದು ನನಗೆ ತಿಳಿದಿದೆ ಮತ್ತು ಈ ಎಲ್ಲಾ ಗುಣಗಳನ್ನು ನೀವು ಈ ಹೊಸ ಕೆಲಸಕ್ಕೆ ಬಳಸುತ್ತಿರಿ ಎಂದು ನನಗೆ ಖಾತ್ರಿಯಿದೆ. ನಿಮಗೆ ತಿಳಿದಿರುವಂತೆ, ನಿರೀಕ್ಷೆಗಳು ಹೆಚ್ಚಾಗಿರುತ್ತವೆ ಮತ್ತು ಪರೀಕ್ಷೆಗಳು ಆಗಾಗ ಎದುರಾಗುತ್ತವೆ. ಆದರೆ ಕೆಟ್ಟ ಸಮಯಗಳಲ್ಲಿಯೂ ನೀವು ಎಂದಿಗೂ ಏಕಾಂಗಿಯಾಗಿರುವುದಿಲ್ಲ. ನಿಮ್ಮ ಆಟಗಾರರು, ನಿಮ್ಮ ಸಹಾಯಕ ಸಿಬ್ಬಂದಿ, ಹಿಂದಿನ ನಾಯಕರ ಬೆಂಬಲವನ್ನು ನೀವು ಹೊಂದಿರುತ್ತೀರಿ. ನೀವು ಯಾರಿಗಾಗಿ ಆಡುತ್ತೀರಿ ಎಂಬುದನ್ನು ಎಂದಿಗೂ ಮರೆಯಬೇಡಿ. ಅಭಿಮಾನಿಗಳಿಗೆ ತುಂಬಾ ಬೇಡಿಕೆಯಿರುತ್ತಾರೆ. ಯಾವಾಗಲೂ ತಂಡದ ಹಿಂದೆಯೇ ಇರಿ. ನಾನು ನಿಮಗೆ ಶುಭ ಹಾರೈಸುತ್ತೇನೆ ಎಂದು ದ್ರಾವಿಡ್ ಹೇಳಿದ್ದಾರೆ.

ಭಾವುಕರಾದ ಗೌತಮ್ ಗಂಭೀರ್

ಈ ಸಂದೇಶವನ್ನು ಕೇಳಿದ ನಂತರ ಗೌತಮ್ ಗಂಭೀರ್ ಭಾವುಕರಾದರು. ದ್ರಾವಿಡ್ ಅವರನ್ನು ತಾವು ನೋಡಿದ ಅತ್ಯಂತ ನಿಸ್ವಾರ್ಥ ಕ್ರಿಕೆಟಿಗ ಎಂದು ಕರೆದರು. ತಮ್ಮ ಕೆಲಸವನ್ನು ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.

ಇದನ್ನೂ ಓದಿ: Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

ದ್ರಾವಿಡ್ ಸಂದೇಶಕ್ಕೆ ಹೇಗೆ ಪ್ರತಿಕ್ರಿಯಿಸಬೇಕೆಂದು ನನಗೆ ತಿಳಿದಿಲ್ಲ ಏಕೆಂದರೆ ಈ ಸಂದೇಶವು ನನಗೆ ತುಂಬಾ ಮುಖ್ಯ. ಇದಕ್ಕೆ ಕಾರಣ ಈ ಸಂದೇಶ ಯಶಸ್ವಿಯಾದ ವ್ಯಕ್ತಿಯಿಂದ ಬಂದದ್ದಲ್ಲ. ನಾನು ಆಡುವಾಗ ಯಾವಾಗಲೂ ನೋಡುತ್ತಿದ್ದ ವ್ಯಕ್ತಿಯಿಂದ ದೊರಕಿದೆ. ರಾಹುಲ್ ಭಾರತೀಯ ಕ್ರಿಕೆಟ್​ಗೆ ಅಗತ್ಯವಿರುವ ಎಲ್ಲವನ್ನೂ ಕೊಟ್ಟಿದ್ದಾರೆ. ನನಗೆ ಮಾತ್ರವಲ್ಲ, ಮುಂದಿನ ಪೀಳಿಗೆಗೆ ಮತ್ತು ಇಂದಿನ ಪೀಳಿಗೆಗೂ ಅವರಿಂದ ಕಲಿಯಲು ಬಹಳಷ್ಟಿದೆ ಎಂದು ಹೇಳಿದ್ದಾರೆ.

ನಾನು ಸಾಮಾನ್ಯವಾಗಿ ಹೆಚ್ಚು ಭಾವುಕನಾಗುವುದಿಲ್ಲ. ಆದರೆ ಈ ಸಂದೇಶವು ನಿಜವಾಗಿಯೂ ನನ್ನನ್ನು ತುಂಬಾ ಕಾಡಿದೆ. ಇದು ಉತ್ತಮ ಸಂದೇಶ ಮತ್ತು ಇದು ಅವರ ಸ್ಥಾನ ತುಂಬುವ ದೊಡ್ಡ ಜವಾಬ್ದಾರಿಯಿದೆ ನಾನು ಅದನ್ನು ಸಂಪೂರ್ಣ ಪ್ರಾಮಾಣಿಕತೆ ಮತ್ತು ಪಾರದರ್ಶಕತೆಯಿಂದ ಮಾಡಬಲ್ಲೆ, ಎಂದು ಅವರು ಹೇಳಿದರು.

Continue Reading

ಕ್ರೀಡೆ

Ricky Ponting : ಡೆಲ್ಲಿ ಕ್ಯಾಪಿಟಲ್ಸ್​ ಕೋಚಿಂಗ್ ಹುದ್ದೆಯಿಂದ ಪಾಂಟಿಂಗ್ ನಿರ್ಗಮಿಸಿದ್ದು ಯಾಕೆ? ಕಾರಣ ಕೊಟ್ಟ ಮಾಲೀಕ ಪಾರ್ಥ್​ ಜಿಂದಾಲ್​

Ricky Ponting :

VISTARANEWS.COM


on

Ricky Ponting
Koo

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ (Ricky Ponting) ಅವರನ್ನು ಬಿಟ್ಟಾಗ ಫ್ರಾಂಚೈಸಿಯ ಅಭಿಮಾನಿಗಳಿಗೆ ಮತ್ತು ಆಟಗಾರರಿಗೆ ಆಘಾತವನ್ನುಂಟು ಮಾಡಿತ್ತು. ಆದರೆ ಫ್ರಾಂಚೈಸಿಯ ಸಹ ಮಾಲೀಕ ಮತ್ತು ಅಧ್ಯಕ್ಷ ಪಾರ್ಥ್ ಜಿಂದಾಲ್ ಅಂತಿಮವಾಗಿ ಪಾಂಟಿಂಗ್ ಅವರನ್ನು ಆ ಹುದ್ದೆಯಿಂದ ತೆಗೆದುಹಾಕುವ ನಿರ್ಧಾರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಮೂಲಕ ರಿಕಿ ಪಾಂಟಿಂಗ್ ಅವರಿಂದ ಬೇರ್ಪಡುವುದಾಗಿ ಘೋಷಿಸಿತು. ಪಾಂಟಿಂಗ್ ಏಳು ವರ್ಷಗಳ ಕಾಲ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಮುಖ್ಯ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದರು. ಆದರೆ ಅವರ ಅಧಿಕಾರಾವಧಿಯಲ್ಲಿ ತಂಡವು ಒಂದೇ ಒಂದು ಟ್ರೋಫಿಯನ್ನು ಗೆಲ್ಲಲು ವಿಫಲವಾಯಿತು. ಇಷ್ಟು ದೀರ್ಘಾವಧಿಯಲ್ಲಿ ಒಂದೇ ಒಂದು ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟ್ರೋಫಿಯನ್ನು ಗೆಲ್ಲಲು ತಂಡದ ಅಸಮರ್ಥತೆಯಿಂದಾಗಿ ಪಾಂಟಿಂಗ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಈ ಹಿಂದೆ ಭಾವಿಸಲಾಗಿತ್ತು. ಆದರೆ ಪಾರ್ಥ್ ಜಿಂದಾಲ್ ಅಂತಹ ದೊಡ್ಡ ನಿರ್ಧಾರದ ಹಿಂದಿನ ನಿಜವಾದ ಕಾರಣ ಬಹಿರಂಗಪಡಿಸಿದ್ದಾರೆ.

ಪಾರ್ಥ್ ಜಿಂದಾಲ್ ಏನಂದರು?

ಪಾರ್ಥ್ ಜಿಂದಾಲ್ ಅವರು 2026 ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ತಂಡಕ್ಕೆ ಪ್ರಾಯೋಜಕರಾಗಿರುವ ಪ್ರಸಿದ್ಧ ಜೆಎಸ್​ಡಬ್ಲ್ಯೂ ಗ್ರೂಪ್​ನ ಮುಖ್ಯಸ್ಥರಾಗಿದ್ದಾರೆ. ಒಲಿಂಪಿಕ್ಸ್ ಮುನ್ನಾದಿನದಂದು ಸಿಎನ್ಬಿಸಿ-ಟಿವಿ 18 ಜೊತೆಗಿನ ಇತ್ತೀಚಿನ ಚರ್ಚೆಯಲ್ಲಿ ಮಾತನಾಡಿ, ರಿಕಿ ಪಾಂಟಿಂಗ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಸಿದ ಬಗ್ಗೆ ಮಾತನಾಡಿದ್ದಾರೆ.

ರಿಷಭ್ ಪಂತ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ ಮತ್ತು ಮುಖೇಶ್ ಕುಮಾರ್ ಅವರಂತಹ ಭಾರತೀಯ ಅಂತಾರಾಷ್ಟ್ರೀಯ ಆಟಗಾರರನ್ನು ಒಳಗೊಂಡಿರುವ ತಮ್ಮ ತಂಡದ ಪ್ರಮುಖ ಗುಂಪಿನಲ್ಲಿ ಯುವ ಸಹ ಮಾಲೀಕ ವಿಶ್ವಾಸವನ್ನು ತೋರಿಸಿದರು.

“ಮೆಗಾ ಹರಾಜಿನ ಉಳಿಸುವ ಮತ್ತು ಬಿಡುಗಡೆ ನಿಯಮಗಳ ಬಗ್ಗೆ ನಾವು ಬಿಸಿಸಿಐಗೆ ನಮ್ಮ ಅಭಿಪ್ರಾಯಗಳನ್ನು ನೀಡುತ್ತೇವೆ. ಡೆಲ್ಲಿ ಕ್ಯಾಪಿಟಲ್ಸ್​ನಲ್ಲಿ ನಾವು ಉತ್ತಮ ಆಟಗಾರರನ್ನು ಹೊಂದಿದ್ದೇವೆ. ರಿಷಭ್ ಪಂತ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜೇಕ್ ಫ್ರೇಸರ್-ಮೆಕ್ಗುರ್ಕ್, ಟ್ರಿಸ್ಟಾನ್ ಸ್ಟಬ್ಸ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್ ಅವರಂತಹ ಆಟಗಾರರನ್ನು ನೋಡಿದ್ದೇವೆ ಎಂದು ಜಿಂದಾಲ್ ಹೇಳಿದ್ದಾರೆ.

ಪಾಂಟಿಂಗ್ ಅವರನ್ನು ಮುಖ್ಯ ಕೋಚ್ ಹುದ್ದೆಯಿಂದ ತೆಗೆದುಹಾಕುವ ಬಗ್ಗೆ ಕೇಳಿದಾಗ, ಜಿಂದಾಲ್, ಅವರು ಸದಾ ಭಾರತದಲ್ಲಿ ಲಭ್ಯ ಇರಬೇಕು. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದ ಹೇಳಿದ್ದಾರೆ.

ಇದನ್ನೂ ಓದಿ: ICC Champions Trophy : ಪಾಕಿಸ್ತಾನದ ಕ್ರಿಕೆಟ್​ ಮಂಡಳಿಯ ಮಾಧ್ಯಮ ಹಕ್ಕುಗಳನ್ನು ಕೇಳುವವರೇ ಇಲ್ಲ!

ಕೋಚ್​ ಸಂಪೂರ್ಣ ಸಮಯ ಮೀಸಲಿಡಬೇಕು. ಅವರು ಭಾರತದ ಯಾವುದೇ ನಗರದಲ್ಲಿ ಯಾವುದೇ ಸಮಯದಲ್ಲಿ ಲಭ್ಯವಿರಬೇಕು. ನಾವು ಈ ಬದಲಾವಣೆಯನ್ನು ಮಾಡಲು ಇದೊಂದೇ ಕಾರಣ ಎಂದು ಜಿಂದಾಲ್ ಹೇಳಿದ್ದಾರೆ. ಇದೇ ವೇಳೆ ಈ ಏಳು ವರ್ಷಗಳಲ್ಲಿ ರಿಕಿ ಪಾಂಟಿಂಗ್ ಅವರ ಅಮೂಲ್ಯ ಸೇವೆಗಳಿಗಾಗಿ ಧನ್ಯವಾದಗಳನ್ನೂ ಅರ್ಪಿಸಿದ್ದಾರೆ.

ರಿಕಿ ಪಾಂಟಿಂಗ್ ಕೋಚ್ ಆಗಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ 2020ರಲ್ಲಿ ಫೈನಲ್ ತಲುಪಿತ್ತು. ದುರದೃಷ್ಟವಶಾತ್, ಫೈನಲ್ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿತ್ತು.

Continue Reading

ಕ್ರಿಕೆಟ್

Ashwini Puneeth Rajkumar: ಅಪ್ಪು ಕಪ್‌ ಸೀಸನ್‌ 2ಗೆ ಚಾಲನೆ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

Ashwini Puneeth Rajkumar: ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

VISTARANEWS.COM


on

Ashwini Puneeth Rajkumar launched Appu Cup season 2
Koo

ಬೆಂಗಳೂರು: ಅಪ್ಪು ನೆನಪನ್ನು ಚಿರಸ್ಥಾಯಿಯಾಗಿಸುವ ನಿಟ್ಟಿನಲ್ಲಿ ಅಪ್ಪು ಕಪ್‌ ಸೀಸನ್‌ 2 ಬ್ಯಾಡ್ಮಿಂಟನ್‌ ಟೂರ್ನಿಗೆ ಇಂದು ನಾಗರಬಾವಿಯ ಕಿಂಗ್ಸ್‌ ಕ್ಲಬ್‌ನಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಸ್ಪರ್ಧಾಳುಗಳಿಗೆ ಶುಭ ಕೋರಿ, ಮೊದಲ ಪಂದ್ಯದ ಆರಂಭಕ್ಕೆ ಟಾಸ್‌ ಹಾಕಿದರು.

PRK ಸಂಸ್ಥೆಯ ಸಹಯೋಗದೊಂದಿಗೆ ಚೇತನ್‌ ಸೂರ್ಯ ಅವರು ಈ ಟೂರ್ನಮೆಂಟ್‌ ಅನ್ನು ಆಯೋಜಿಸಿದ್ದು, ಈ ಪಂದ್ಯಾವಳಿಯು ಮೂರು ದಿನಗಳ ಕಾಲ ನಡೆಯಲಿದೆ. ಅಪ್‌ ಕಪ್‌ ಸೀಸನ್‌ 2ನಲ್ಲಿ ಹತ್ತು ತಂಡಗಳು ಭಾಗವಹಿಸಲಿದ್ದು, ಸಿನಿಮಾ, ಧಾರಾವಾಹಿ ಮತ್ತು ಮಾಧ್ಯಮದವರು ಆಡಲಿದ್ದಾರೆ.

ಸೀಸನ್‌ 1 ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಅದ್ದೂರಿಯಾಗಿ ಸೀಸನ್‌ 2 ಅನ್ನು ಆಯೋಜಿಸಲಾಗಿದೆ. ಇತ್ತೀಚೆಗೆ ಅಪ್ಪು ಕಪ್‌ ಸೀಸನ್‌ 2 ಆಕರ್ಷಕ ಟ್ರೋಫಿ ಜೊತೆಗೆ ತಂಡಗಳ ಜೆರ್ಸಿಗಳನ್ನು ಅನಾವರಣಗೊಳಿಸಲಾಗಿತ್ತು. ಇದೀಗ ಅದ್ದೂರಿಯಾಗಿ ಪಂದ್ಯಾವಳಿಗಳನ್ನು ಆರಂಭಿಸಲಾಗಿದ್ದು, ಅಂತಿಮ ವಿಜೇತರಿಗೆ ಭಾರೀ ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

ಕಾರ್ಯಕ್ರಮದಲ್ಲಿ ಮೀಡಿಯಾ ಕನೆಕ್ಟ್‌ ಸಂಸ್ಥಾಪಕಿ ಹಾಗೂ ಸಿಇಒ ದಿವ್ಯಾ ರಂಗೇನಹಳ್ಳಿ, ಡಿಪಿಐಎಸ್ ಫೌಂಡರ್‌, ಚೇರ್‌ಪರ್ಸನ್ ಸುನಿತಾ ಗೌಡ, ‌ಹಿರಿಯ ನಿರ್ಮಾಕರಾದ ಸಾರಾ ಗೋವಿಂದು ಉಪಸ್ಥಿತರಿದ್ದರು.

Continue Reading
Advertisement
Joe Root
ಕ್ರೀಡೆ9 mins ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ12 mins ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Aishwarya Rai Bachchan
ಸಿನಿಮಾ13 mins ago

Aishwarya Rai Bachchan: ಐಶ್ವರ್ಯಾ ರೈ ಧರಿಸಿರುವ V ಆಕಾರದ ಈ ವಜ್ರದುಂಗುರದ ವಿಶೇಷತೆ ಗೊತ್ತೆ?

Mukesh Ambani
ವಾಣಿಜ್ಯ40 mins ago

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

Minister Dinesh Gundurao drives for the 5th Kannada Sahitya Sammelana in Bengaluru
ಬೆಂಗಳೂರು51 mins ago

Kannada Sahitya Sammelana: ಬೆಂಗಳೂರಿನಲ್ಲಿ 5ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ

The woman shows gray hair on her head. Hair with fragments of gray hair, hair roots requiring dyeing
ಆರೋಗ್ಯ52 mins ago

Ways to Prevent Gray Hair: 30 ದಾಟುವ ಮೊದಲೇ ಕೂದಲು ಬೆಳ್ಳಗಾಗುತ್ತಿದೆಯೇ? ಇದಕ್ಕಿದೆ ಸರಳ ಪರಿಹಾರ

Yadgiri News Kolluru bridge inundation MLA Channareddy Patil tunnuru visit inspection
ಯಾದಗಿರಿ52 mins ago

Yadgiri News: ಕೃಷ್ಣಾ ನದಿ ಪ್ರವಾಹದಿಂದ ಕೊಳ್ಳುರು ಸೇತುವೆ ಮುಳುಗಡೆ; ಶಾಸಕ ಚನ್ನಾರೆಡ್ಡಿ ಪಾಟೀಲ ಭೇಟಿ

Nirmala Sahaya Hasta programme by Okkaliga Yuva Brigade on 28th July and 1st 3rd and 5th August
ಬೆಂಗಳೂರು53 mins ago

Bengaluru News: ಒಕ್ಕಲಿಗ ಯುವ ಬ್ರಿಗೇಡ್‌ನಿಂದ ಜು.28ರಂದು ʼನಿರ್ಮಲ ಸಹಾಯ ಹಸ್ತʼ ಕಾರ್ಯಕ್ರಮ

Karnataka weather Forecast
ಮಳೆ54 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Drowned in water
ಬಳ್ಳಾರಿ1 hour ago

Drowned in water : ಮೀನು ಹಿಡಿಯುವಾಗ ಫಿಟ್ಸ್‌ ಬಂದು ನದಿಗೆ ಬಿದ್ದ ಮೀನುಗಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ54 mins ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ6 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ7 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌