KEA Exam: ಮುಸ್ಲಿಂ ಮುಖಂಡರ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ಸರ್ಕಾರ, ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಬಹುದು! - Vistara News

ಉದ್ಯೋಗ

KEA Exam: ಮುಸ್ಲಿಂ ಮುಖಂಡರ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ಸರ್ಕಾರ, ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಬಹುದು!

KEA Exam: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧಾರಣೆಗೆ ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಿಷೇಧ ವಿಧಿಸಲಾಗಿತ್ತು. ಇದೀಗ ಕೆಇಎ ಸ್ಪರ್ಧಾತ್ಮಕ ಪರೀಕ್ಷೆಗೆ ಹಿಜಾಬ್‌ ಧರಿಸಿ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

VISTARANEWS.COM


on

KEA Exam Candidates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಲವು ಮುಸ್ಲಿಂ ಸಂಘಟನೆಗಳು ಮತ್ತು ಮುಸ್ಲಿಂ ಕೇಂದ್ರಿತ ಪಕ್ಷಗಳ ವಿರೋಧಕ್ಕೆ ಮಣಿದಿರುವ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಹಿಜಾಬ್‌ ಧರಿಸಿ ಕೆಇಎ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ! ಕೆಇಎ ಪರೀಕ್ಷೆಗೆ ಹಿಜಾಬ್‌ ನಿಷೇಧವಿಲ್ಲ, ಕಾಲುಂಗುರ ಹಾಗೂ ಮಾಂಗಲ್ಯ ಧರಿಸಿ ಮಹಿಳಾ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) (KEA Exam) ತಿಳಿಸಿದೆ. ಕೆಇಎ ವಸ್ತ್ರ ಸಂಹಿತೆ ಪ್ರಕಾರ ಪರೀಕ್ಷಾ ಕೇಂದ್ರಕ್ಕೆ ಹಿಜಾಬ್‌ ಧರಿಸಿ ಆಗಮಿಸುವಂತಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಹೀಗಾಗಿ ಕೆಇಎ ಸ್ಪಷ್ಟನೆ ನೀಡಿದೆ. ಜಮ್ಮು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಉಮರ್‌ ಅಬ್ದುಲ್ಲಾ, ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಓವೈಸಿ ಮುಂತಾದ ಮುಸ್ಲಿಂ ಮುಖಂಡರು ಹಿಜಾಬ್‌ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಒತ್ತಡ ಹೇರಿದ್ದರು.

ನವೆಂಬರ್ 18 ಮತ್ತು‌ 19ರಂದು ನಡೆಯುವ ಕೆಇಎ ಪರೀಕ್ಷೆಗಳಿಗೆ ಈ ಹಿಂದಿನಂತೆ ಹಿಜಾಬ್‌ಗೆ ಅನುಮತಿ ಇರಲಿದೆ. ಪರೀಕ್ಷೆ ಆರಂಭದ ಸಮಯಕ್ಕಿಂತ 2 ಗಂಟೆ ಮೊದಲೇ ಅಭ್ಯರ್ಥಿಗಳು ಹಾಜರಿರಬೇಕು. ಅದೇ ರೀತಿ ಹಿಂದು ಅಭ್ಯರ್ಥಿಗಳಿಗೆ ತಾಳಿ, ಕಾಲುಂಗುರಗಳಿಗೆ ವಿನಾಯಿತಿ ನೀಡಲಾಗಿದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ತಿಳಿಸಿದ್ದಾರೆ.

ಸಚಿವ ಎಂ.ಸಿ ಸುಧಾಕರ್ ಸ್ಪಷ್ಟನೆ

ಹಿಜಾಬ್ ಧಾರಣೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಪ್ರತಿಕ್ರಿಯಿಸಿ, ಬ್ಲೂಟೂತ್ ಬಳಸಿ ಅಕ್ರಮ ಎಸಗುವುದು ಹಾಗೂ ಹಿಜಾಬ್‌ಗೂ ಯಾವುದೇ ರೀತಿಯ ಸಂಬಂಧವಿಲ್ಲ. ಹಿಜಾಬ್ ಹಾಕಿಕೊಂಡು ಬಂದವರು ಯಾರೂ ಬ್ಲೂಟೂತ್ ಹಾಕಿಕೊಂಡು ಪರೀಕ್ಷೆ ಬರೆದಿಲ್ಲ. ಹೀಗಾಗಿ ಹಿಜಾಬ್‌ಗೆ ನಿಷೇಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ | Job Alert: ಕೊಡಗು ಜಿಲ್ಲಾ ನ್ಯಾಯಾಲಯದ 64 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಎಲ್ಲ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಮುನ್ನ 2 ಗಂಟೆ ಮುಂಚಿತವಾಗಿ ಹಾಜರಾಗಬೇಕು. ಬಿಗಿ ತಪಾಸಣೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡುತ್ತೇವೆ. ಎರಡು ಗಂಟೆ ಮುಂಚಿತವಾಗಿ ಬಂದ ಮೇಲೆ ಎಲ್ಲರನ್ನು ಚೆಕ್ ಮಾಡುತ್ತಾರೆ. ಮಹಿಳಾ ಪೊಲೀಸ್ ಸಿಬ್ಬಂದಿ ಸಹ ಸ್ಥಳದಲ್ಲಿ ಇರುತ್ತಾರೆ ಎಂದು ತಿಳಿಸಿದ್ದಾರೆ.

ಹಿಜಾಬ್ ಎಂಬುವುದು ಮುಸ್ಲಿಂ ಧಾರ್ಮಿಕ ಭಾವನೆ ಆಗಿರುತ್ತ. ಕ್ಯಾಪ್‌ ಅಥವಾ ಹಿಜಾಬ್ ಬೇರೆಯವರು ದಿನವೂ ಹಾಕಿಕೊಂಡು ಬರುತ್ತಾರಾ? ಉದ್ದೇಶಪೂರ್ವಕವಾಗಿ ಇಂತವುಗಳನ್ನು ದುರ್ಬಳಕೆ ಮಾಡುವವರಿಗೆ ನಿಷೇಧ ಇರಲಿದೆ ಎಂದು ದೂರವಾಣಿ ಮೂಲಕ ವಿಸ್ತಾರ ನ್ಯೂಸ್‌ಗೆ ಸಚಿವ ಎಂ.ಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

ವಸ್ತ್ರ ಸಂಹಿತೆ ಮತ್ತು ಇತರ ನಿಯಮಗಳು ಏನಿರುತ್ತವೆ?

ಕಳೆದ ಪರೀಕ್ಷೆ ಸಂದರ್ಭದಲ್ಲಿ ಬ್ಲೂಟೂತ್‌ ಬಳಸಿಸ ಅಕ್ರಮ ನಡೆಸಿರುವುದರ ಹಿನ್ನೆಲೆಯಲ್ಲಿ ಈಗ ತಲೆ, ಕಿವಿ, ಬಾಯಿ ಮುಚ್ಚುವ ವಸ್ತುಗಳನ್ನು ನಿಷೇಧಿಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ. ನವೆಂಬರ್ 18 ಮತ್ತು 19ರಂದು ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ ವಸ್ತ್ರ ಸಂಹಿತೆ ಹೀಗಿರಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  1. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.
  2. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
  3. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು,
  4. ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.
  5. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
  6. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  1. ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಚ್‌ಗಳು ಅಥವಾ ಬಟನ್‌ಗಳಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  2. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
  3. ಎತ್ತರವಾದ ಹಿಮ್ಮಡಿಯ ಶೂಗಳನ್ನು ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  4. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ),

ನಿಷೇಧಿತ ವಸ್ತುಗಳ ಪಟ್ಟಿ ಇಂತಿದೆ

  1. ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
  2. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
  3. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ.
  4. ಪೆನ್ಸಿಲ್, ಪೇಪರ್, ಎಲೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
  5. ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸಿವುದನ್ನು ಬಾಯಿ ಕಿವಿ ಹಾಗು ತಲೆ ಮುಚ್ಚುವ ವಸ್ತ್ರವನ್ನು / ಸಾಧನವನ್ನು ಧರಿಸುವುದನ್ನು ನಿಷೇಧಿಸಿದೆ.
  6. ಯಾವುದೇ ರೀತಿಯ ಮಾಸ್ಕ್‌ ಅನ್ನು ಧರಿಸುವಂತಿಲ್ಲ.

ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ.

  • ಪ್ರವೇಶ ಪತ್ರ ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು,
  • ಎರಡು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ತರುವುದು.
  • ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ.
  • ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಇದನ್ನು ಓದಿ | Job Alert: ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯದಲ್ಲಿ 487 ಹುದ್ದೆಗಳಿವೆ!

ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ರಾಜ್ಯದಾದ್ಯಂತ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್​, ಆಫೀಸರ್ ಒಟ್ಟು 586 ಹುದ್ದೆಗಳಿಗೆ (Job Recruitment) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 27ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕೆ ಸಂಬಂಧಿಸಿದ ನಿಯಮ, ಅರ್ಹತೆ ವಿವರ ಇಂತಿದೆ.

VISTARANEWS.COM


on

By

Job Recruitment
Koo

ಬೆಂಗಳೂರು: ಕರ್ನಾಟಕ (karnataka) ಗ್ರಾಮೀಣ ಬ್ಯಾಂಕ್‌ನಲ್ಲಿ (Karnataka Gramina Bank) ಖಾಲಿ ಇರುವ ಒಟ್ಟು 586 ಆಫೀಸ್ ಅಸಿಸ್ಟೆಂಟ್ (office assistant)​, ಆಫೀಸರ್ (officer) ಹುದ್ದೆಗಳಿಗೆ ನೇಮಕಾತಿಯನ್ನು (Job Recruitment) ಘೋಷಿಸಿದೆ. ಆಸಕ್ತ ಅಭ್ಯರ್ಥಿಗಳು 2024ರ ಜೂನ್ 27ರೊಳಗಾಗಿ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಹುದ್ದೆಯ ವಿವರ

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 386, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್ 200 ಸೇರಿ ಒಟ್ಟು 586 ಹುದ್ದೆಗಳಲ್ಲಿ ಆಫೀಸ್ ಅಸಿಸ್ಟೆಂಟ್ 200, ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್) 386 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಾದ್ಯಂತ ಹುದ್ದೆಗಳು ಖಾಲಿ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಅರ್ಹತೆ ಏನು?

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ಆಫೀಸ್ ಅಸಿಸ್ಟೆಂಟ್ ಹುದ್ದಗೆ 18ರಿಂದ 28 ವರ್ಷ ಮತ್ತು ಆಫೀಸರ್ ಸ್ಕೇಲ್-1 (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗೆ 18ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿ ಗಳಿಗೆ 5 ವರ್ಷ, ಒಬಿಸಿ (ಎನ್ ಸಿಎಲ್ ) ಅಭ್ಯರ್ಥಿ ಗಳಿಗೆ 3 ವರ್ಷ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಆಫೀಸರ್ (ಸ್ಕೇಲ್ I) ಹುದ್ದೆಗಳಿಗೆ ಎಸ್‌ಸಿ ಮತ್ತು ಎಸ್ ಟಿ, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ 175 ರೂ., ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್​) ಹುದ್ದೆಗಳಿಗೆ ಎಸ್ ಸಿ/ಎಸ್ ಟಿ/ಪಿಡಬ್ಲ್ಯೂ ಬಿಡಿ/ಇಎಸ್ ಎಂ/ಡಿಇಎಸ್ ಎಂ ಅಭ್ಯರ್ಥಿಗಳಿಗೆ 175 ರೂ., ಇತರ ಅಭ್ಯರ್ಥಿಗಳಿಗೆ 850 ರೂ. ಶುಲ್ಕ ವಿಧಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಅರ್ಜಿ ಪ್ರಕ್ರಿಯೆ

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೇರವಾಗಿ ನೋಂದಣಿ ಮಾಡಿಕೊಳ್ಳಲು ವೆಬ್ ಸೈಟ್ https://ibpsonline.ibps.in/rrb13oamay24/ ಅನ್ನು ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಅರ್ಹ ಅಭ್ಯರ್ಥಿಗಳಿಗೆ ಪೂರ್ವ ಭಾವಿ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮುಖ್ಯ ಪರೀಕ್ಷೆ ನಡೆಸಿ ಆಯ್ಕೆಯಾದವರಿಗೆ ಸಂದರ್ಶನ ನಡೆಸಲಾಗುತ್ತದೆ. ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Continue Reading

Latest

Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

Job Recruitment ಉದ್ಯೋಗ ಎಲ್ಲರಿಗೂ ಅಗತ್ಯವಾಗಿರುತ್ತದೆ.ಇಂದಿನ ಕಾಲದಲ್ಲಿ ಕೆಲಸ ಸಿಗುವುದೇ ಒಂದು ದೊಡ್ಡ ಸವಾಲಾಗಿದೆ. ಅದರಲ್ಲೂ ಬ್ಯಾಂಕ್ ಕೆಲಸಗಳಿಗಾಗಿ ಹೆಚ್ಚಿನವರು ಕಾಯುತ್ತಿರುತ್ತಾರೆ. ಕೆಲವರ ಕನಸಿನ ಉದ್ಯೋಗವಾಗಿರುತ್ತದೆ ಇದು. ಬ್ಯಾಂಕ್ ಆಫ್ ಬರೋಡಾ ಒಂದಷ್ಟು ಹುದ್ದೆಗಳಿಗಾಗಿ ನೇಮಕಾತಿ ಮಾಡಿಕೊಳ್ಳಲಿದೆ. ಆಸಕ್ತರು ಇದಕ್ಕೆ ಪ್ರಯತ್ನಿಸಬಹುದು. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ bankofbaroda.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 2, 2024 ಕೊನೆಯ ದಿನವಾಗಿದೆ.

VISTARANEWS.COM


on

Job Recruitment
Koo

ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ 2024ಕ್ಕೆ 627 ನಿರ್ವಹಣೆ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಯನ್ನು (Job Recruitment )ಘೋಷಿಸಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ bankofbaroda.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 2, 2024 ಕೊನೆಯ ದಿನವಾಗಿದೆ.

ಹುದ್ದೆಯ ವಿವರಗಳು:

  • ಡೆಪ್ಯುಟಿ ಉಪಾಧ್ಯಕ್ಷ – ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಎಂಜಿನಿಯರ್ : 4 ಹುದ್ದೆಗಳು
  • ಸಹಾಯಕ ಉಪಾಧ್ಯಕ್ಷ- ಡೇಟಾ ಸೈಂಟಿಸ್ಟ್ ಮತ್ತು ಡೇಟಾ ಎಂಜಿನಿಯರ್ : 9 ಹುದ್ದೆಗಳು
  • ಆರ್ಕಿಟೆಕ್ಟ್ : 8 ಹುದ್ದೆಗಳು
  • ಝೋನಲ್ ಸೇಲ್ಸ್ ಮ್ಯಾನೇಜರ್ : 3 ಹುದ್ದೆಗಳು
  • ಸಹಾಯಕ ಉಪಾಧ್ಯಕ್ಷ : 20 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್ : 22 ಹುದ್ದೆಗಳು
  • ಮ್ಯಾನೇಜರ್ : 11 ಹುದ್ದೆಗಳು
  • ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್ : 1 ಹುದ್ದೆ
  • ಗ್ರೂಪ್ ಹೆಡ್ : 4 ಹುದ್ದೆಗಳು
  • ಟೆರಿಟರಿ ಮುಖ್ಯಸ್ಥ : 8 ಹುದ್ದೆಗಳು
  • ಸೀನಿಯರ್ ರಿಲೇಶನ್ ಶಿಪ್ ಮ್ಯಾನೇಜರ್ : 234 ಹುದ್ದೆಗಳು
  • ಇ-ವೆಲ್ತ್ ರಿಲೇಶನ್ ಶಿಪ್ ಮ್ಯಾನೇಜರ್ : 26 ಹುದ್ದೆಗಳು
  • ಪ್ರೈವೇಟ್ ಬ್ಯಾಂಕರ್- ರೇಡಿಯನ್ಸ್ ಪ್ರೈವೇಟ್: 12 ಹುದ್ದೆಗಳು
  • ಗ್ರೂಪ್ ಸೇಲ್ಸ್ ಹೆಡ್(ವರ್ಚುವಲ್ ಆರ್ ಎಂ ಸೇಲ್ಸ್ ಹೆಡ್):1 ಹುದ್ದೆ
  • ವೆಲ್ತ್ ಸ್ಟ್ರಾಟಜಿಸ್ಟ್(ಹೂಡಿಕೆ ಮತ್ತು ವಿಮೆ)/ಪ್ರೊಡಕ್ಟ್ ಹೆಡ್ : 10 ಹುದ್ದೆಗಳು
  • ಪೋರ್ಟ್‌ಪೊಲಿಯೊ ರಿಸರ್ಚ್ ಆ್ಯನಲಿಸ್ಟ್ :1 ಹುದ್ದೆ
  • ಎವಿಪಿ- ಸ್ವಾಧೀನ ಮತ್ತು ಸಂಬಂಧ ನಿರ್ವಾಹಕ: 19 ಹುದ್ದೆಗಳು
  • ವಿದೇಶಿ ವಿನಿಮಯ ಮತ್ತು ಸಂಬಂಧ ವ್ಯವಸ್ಥಾಪಕ : 15 ಹುದ್ದೆಗಳು
  • ಕ್ರೆಡಿಟ್ ಆ್ಯನಲಿಸ್ಟ್ : 80 ಹುದ್ದೆಗಳು
  • ರಿಲೇಶನ್ ಶಿಪ್ ಮ್ಯಾನೇಜರ್ : 66 ಹುದ್ದೆಗಳು
  • ಸೀನಿಯರ್ ಮ್ಯಾನೇಜರ್ –ಬಿಸಿನೆಸ್ ಫೈನಾನ್ಸ್ : 4 ಹುದ್ದೆಗಳು
  • ಮುಖ್ಯ ವ್ಯವಸ್ಥಾಪಕ- ಇಂಟರ್ ನಲ್ ಕಂಟ್ರೋಲ್ಸ್ : 3 ಹುದ್ದೆಗಳು

ಅರ್ಹತೆ ಏನು?

ಬ್ಯಾಂಕ್ ಆಫ್ ಬರೋಡಾ ಆಸಕ್ತ ಅರ್ಜಿದಾರರಿಗೆ ಲಿಖಿತ ಪರೀಕ್ಷೆಗಳು ಮತ್ತು ಸಂದರ್ಸನಗಳನ್ನು ಒಳಗೊಂಡ ಆಯ್ಕೆ ಪ್ರಕ್ರಿಯೆ ಇರುತ್ತದೆ. ಅಧಿಸೂಚನೆಯಲ್ಲಿ ವಿವರಿಸಿರುವ ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಅನುಸರಿಸುವ ಮೂಲಕ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ಅರ್ಹತೆಗಳನ್ನು ಹೊಂದಿರುತ್ತಾರೆ ಮತ್ತು ನೇಮಕಾತಿ ಪ್ರಕ್ರಿಯೆಗೆ ಸಿದ್ಧರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಬಹುದು. ಹೆಚ್ಚವರಿಯಾಗಿ ಬ್ಯಾಂಕ್ ಆಫ್ ಬರೋಡಾ ಪ್ರತಿ ಉದ್ಯೋಗಕ್ಕೆ ಸಂಬಂಧಿಸಿದ ಜವಾಬ್ದಾರಿಗಳು ಮತ್ತು ನಿರೀಕ್ಷೆಗಳ ಬಗ್ಗೆ ಮೌಲ್ಯಯುತವಾದ ವಿವರಗಳನ್ನು ನೀಡುತ್ತದೆ ಮತ್ತು ಅಭ್ಯರ್ಥಿಗಳು ಸಂಸ್ಥೆಯೊಳಗೆ ತಮ್ಮ ವೃತ್ತಿ ಜೀವನದ ಭವಿಷ್ಯದ ಬಗ್ಗೆ ತಿಳುವಳಿಕೆಯುಳ್ಳ ನಿರ್ಧಾರಗಳನ್ನು ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ.

ನೇಮಕಾತಿ ಪಾರದರ್ಶಕವಾಗಿದ್ದು, ಅಭ್ಯರ್ಥಿಗಳ ಪ್ರತಿಭೆಯನ್ನು ಗಮನಿಸಿ ಬ್ಯಾಂಕ್ ಆಫ್ ಬರೋಡಾ ಉನ್ನತ ಅರ್ಹ ವ್ಯಕ್ತಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಹಾಗಾಗಿ ಅಭ್ಯರ್ಥಿಗಳು ಅಪ್ಲಿಕೇಶನ್ ಪ್ರಕ್ರಿಯೆ ಸಮಯದಲ್ಲಿ ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಪರಿಣಾಮಕಾರಿಯಾಗಿ ಸಮರ್ಥಿಸಬಹುದು.

ಆಯ್ಕೆ ಪ್ರಕ್ರಿಯೆ

ಆಯ್ಕೆ ಪ್ರಕ್ರಿಯೆಯಲ್ಲಿ ಮೊದಲು ಬಂದ ಅರ್ಹ ಅಭ್ಯರ್ಥಿಗಳ ರೆಸ್ಯೂಮ್ ಗಳು ಮತ್ತು ಅಪ್ಲಿಕೇಶನ್ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುವುದು. ಇಂಟರ್ ವೀವ್ ನಲ್ಲಿ ಅಭ್ಯರ್ಥಿಯ ಕೌಶಲ, ಅನುಭವ ಮತ್ತು ಸ್ಥಾನಕ್ಕೆ ಸರಿಹೊಂದುವಂತಹ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಕೌಶಲ್ಯ ಪರೀಕ್ಷೆ, ಗ್ರೂಪ್ ಇಂಟರ್ ವೀವ್ ನಂತಹ ಇತರ ವಿಧಾನಗಳಿಂದ ಅಭ್ಯರ್ಥಿಗಳ ಸಾಮರ್ಥ್ಯವನ್ನು ಗಮನಿಸಲಾಗುತ್ತದೆ. ಅದರಲ್ಲಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ EWS ಮತ್ತು OBC ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ. ಜೊತೆಗೆ GST ಮತ್ತು ವಹಿವಾಟು ಶುಲ್ಕಗಳನ್ನು ನೀಡಬೇಕಾಗುತ್ತದೆ. SC, ST, PWD ಮತ್ತು ಮಹಿಳಾ ಅಭ್ಯರ್ಥಿಗಳು 100 ರೂ. ಜೊತೆಗೆ GST ಮತ್ತು ವಹಿವಾಟು ಶುಲ್ಕಗಳನ್ನು ನೀಡಬೇಕಾಗುತ್ತದೆ. ಹಾಗೇ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮತ್ತು ಇಂಟರ್ ನೆಟ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಳಸಿ ಶುಲ್ಕ ಪಾವತಿಸಬಹುದು.

ಇದನ್ನೂ ಓದಿ: Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

ಹೆಚ್ಚಿನ ಮಾಹಿತಿಗಳನ್ನು ಪಡೆಯಲು ಮತ್ತು ಅರ್ಜಿ ಸಲ್ಲಿಸಲು ಬ್ಯಾಂಕ್ ಆಫ್ ಬರೋಡಾದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.

Continue Reading

ಉದ್ಯೋಗ

HPCL Job Interview: ಎಚ್ ಪಿ ಸಿ ಎಲ್ ಸಿಎಂಡಿ ಹುದ್ದೆ ಸಂದರ್ಶನ; ಘಟಾನುಘಟಿ 8 ಅಭ್ಯರ್ಥಿಗಳು ಫೇಲ್!

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ಸಿಎಂಡಿ ಹುದ್ದೆಗೆ ಸಂದರ್ಶನ ನೀಡಿದ (HPCL Job Interview) ಎಲ್ಲ ಎಂಟು ಅಭ್ಯರ್ಥಿಗಳನ್ನು ಸರ್ಕಾರದ ಪಬ್ಲಿಕ್ ಎಂಟರ್‌ಪ್ರೈಸಸ್ ಸೆಲೆಕ್ಷನ್ ಬೋರ್ಡ್ (ಪಿಇಎಸ್‌ಬಿ) ತಿರಸ್ಕರಿಸಿದೆ. ಜೂನ್ 14ರಂದು ಪಿಇಎಸ್‌ಬಿ ಎಚ್‌ಪಿಸಿಎಲ್ ಮಂಡಳಿಯ ನಿರ್ದೇಶಕರು ಮತ್ತು ಇಂದ್ರಪ್ರಸ್ಥ ಗ್ಯಾಸ್‌ನ ಎಂಡಿ ಸೇರಿ ಎಂಟು ಅಭ್ಯರ್ಥಿಗಳ ಸಂದರ್ಶನ ನಡೆಸಲಾಗಿತ್ತು.

VISTARANEWS.COM


on

By

HPCL Job Interview
Koo

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (HPCL) ಸಿಎಂಡಿ (CMD) ಹುದ್ದೆಗೆ ಸರ್ಕಾರದ ಪಬ್ಲಿಕ್ ಎಂಟರ್‌ಪ್ರೈಸಸ್ ಸೆಲೆಕ್ಷನ್ ಬೋರ್ಡ್ (PESB) ಸಂದರ್ಶನ (HPCL Job Interview) ನಡೆಸಿದ್ದು, ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸಿದೆ. ಜೂನ್ 14 ರಂದು ಪಿಇಎಸ್‌ಬಿ ಎಚ್‌ಪಿಸಿಎಲ್ ಮಂಡಳಿಯ ನಿರ್ದೇಶಕರು ಮತ್ತು ಇಂದ್ರಪ್ರಸ್ಥ ಗ್ಯಾಸ್‌ನ ಎಂಡಿ ಸೇರಿ ಎಂಟು ಅಭ್ಯರ್ಥಿಗಳ ಸಂದರ್ಶನ ನಡೆಸಿದ್ದರು. ಆದರೆ ಅವರೆಲ್ಲರನ್ನೂ ತಿರಸ್ಕರಿಸಲಾಗಿದೆ.

ಎಚ್‌ಪಿಸಿಎಲ್ ನ ಸಿಎಂಡಿ ಹುದ್ದೆಗೆ ಇದು ಮೂರನೇ ಸಂದರ್ಶನವಾಗಿದ್ದು, ಈವರೆಗೆ ರಾಜ್ಯ ತೈಲ ಸಂಸ್ಥೆಯಲ್ಲಿನ ಈ ಹುದ್ದೆಗೆ ಯಾವುದೇ ಸೂಕ್ತ ಅಭ್ಯರ್ಥಿಯನ್ನು ಮಂಡಳಿಗೆ ಆಯ್ಕೆ ಮಾಡುವುದು ಸಾಧ್ಯವಾಗಲಿಲ್ಲ.

ಎಚ್‌ಪಿಸಿಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಸಿಎಮ್‌ಡಿ) ಹುದ್ದೆಗೆ ಯಾವುದೇ ಅಭ್ಯರ್ಥಿಯನ್ನು ಮಂಡಳಿಯು ಶಿಫಾರಸು ಮಾಡಿಲ್ಲ ಮತ್ತು ಸರ್ಚ್-ಕಮ್-ಸೆಲೆಕ್ಷನ್ ಕಮಿಟಿ (ಎಸ್‌ಸಿಎಸ್‌ಸಿ) ಸೇರಿದಂತೆ ಆಯ್ಕೆಗಾಗಿ ಮುಂದಿನ ಕ್ರಮದ ಸೂಕ್ತ ಕೋರ್ಸ್ ಅನ್ನು ಆಯ್ಕೆ ಮಾಡಲು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯಕ್ಕೆ ಸಲಹೆ ನೀಡಿದೆ ಎಂದು ಪಿಇಎಸ್ ಬಿ ಸಮಿತಿಯು ಅಧಿಸೂಚನೆಯಲ್ಲಿ ತಿಳಿಸಿದೆ.

ಎಚ್‌ಪಿಸಿಎಲ್ ನ ಸಿಎಂಡಿ ಹುದ್ದೆಯು 2024ರ ಸೆಪ್ಟೆಂಬರ್ 1ರಂದು ಖಾಲಿಯಾಗಲಿದೆ. ಪ್ರಸ್ತುತ ಪುಷ್ಪ್ ಕುಮಾರ್ ಜೋಶಿ ಅವರು ಈ ಹುದ್ದೆಯಲ್ಲಿದ್ದು, ಅವರು 60 ವರ್ಷಗಳನ್ನು ತಲುಪಿದಾಗ ನಿವೃತ್ತರಾಗಲಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಮತ್ತು ಆಯಿಲ್ ಆಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ಒಎನ್‌ಜಿಸಿ) ನಲ್ಲಿ ಉನ್ನತ ಹುದ್ದೆಗೆ ಸೂಕ್ತವಾದ ಯಾರನ್ನೂ ಪಿಇಎಸ್‌ಬಿ ಈ ಹಿಂದೆಯೂ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಇದು ಐಒಸಿಯಲ್ಲಿ ಅಧಿಕಾರ ವಹಿಸಿಕೊಂಡವರು ನಿವೃತ್ತಿ ವಯಸ್ಸನ್ನು ತಲುಪಿದ ಅನಂತರವೂ ಹೆಚ್ಚುವರಿ ವರ್ಷ ಅಧಿಕಾರದಲ್ಲಿ ಇರಲು ಸಾಧ್ಯವಾಯಿತು ಮತ್ತು ನಿವೃತ್ತ ಕಾರ್ಯನಿರ್ವಾಹಕರಿಗೆ ಒಎನ್ ಜಿಸಿ ಯಲ್ಲಿ ಪ್ರಭಾರ ಅಧಿಕಾರವನ್ನು ನೀಡಲಾಯಿತು.

ಪಿಇಎಸ್‌ಬಿ 2021ರ ಜೂನ್ 3ರಂದು ಭಾರತದ ಅತಿದೊಡ್ಡ ತೈಲ ಮತ್ತು ಅನಿಲ ಉತ್ಪಾದಕ ಒಎನ್ ಜಿಸಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಐಎಎಸ್ ಅಧಿಕಾರಿಗಳು ಸೇರಿದಂತೆ ಒಂಬತ್ತು ಅಭ್ಯರ್ಥಿಗಳನ್ನು ಸಂದರ್ಶಿಸಿತು. ಹಿರಿಯ ಅಧಿಕಾರಿಗಳಾದ ಅವಿನಾಶ್ ಜೋಶಿ, ನೀರಜ್ ವರ್ಮಾ, ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ಹಣಕಾಸು ನಿರ್ದೇಶಕಿ ಪೊಮಿಲಾ ಜಸ್ಪಾಲ್ ಮತ್ತು ತಂತ್ರಜ್ಞಾನ ಮತ್ತು ಕ್ಷೇತ್ರ ಸೇವೆಗಳ ಒಎನ್‌ಜಿಸಿ ನಿರ್ದೇಶಕ ಓಂ ಪ್ರಕಾಶ್ ಸಿಂಗ್ ಅವರನ್ನು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿದೆ.

ಅನಂತರ ಸಚಿವಾಲಯವು ಆಯ್ಕೆ ಸಮಿತಿಯನ್ನು ರಚಿಸಿತು. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ನಿಂದ 60 ವರ್ಷ ವಯಸ್ಸಿನ ಅನಂತರ ನಿವೃತ್ತರಾದ ಅರುಣ್ ಕುಮಾರ್ ಸಿಂಗ್ ಅವರನ್ನು ಒಎನ್ ಜಿಸಿ ಮುಖ್ಯಸ್ಥರನ್ನಾಗಿ ಹೆಸರಿಸಿತು. ಸಿಂಗ್ ಅವರು ಮೊದಲ ಸ್ಥಾನದಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರಲಿಲ್ಲ. ಆದರೆ 60 ವರ್ಷ ವಯಸ್ಸಿನ ವ್ಯಕ್ತಿಗಳನ್ನು ಪರಿಗಣಿಸಲು ಅರ್ಹತಾ ನಿಯಮವನ್ನು ಬದಲಾಯಿಸಲಾಯಿತು. ಅವರಿಗೆ ಮೂರು ವರ್ಷಗಳ ಅವಧಿಯನ್ನು ನೀಡಲಾಗಿದ್ದು ಅದು ಡಿಸೆಂಬರ್ 2025ರಲ್ಲಿ ಕೊನೆಗೊಳ್ಳಲಿದೆ.

ಐಒಸಿ, ಪಿಇಎಸ್‌ಬಿ ಪ್ರಕರಣದಲ್ಲಿ ಕಳೆದ ವರ್ಷ ಮೇನಲ್ಲಿ ಶ್ರೀಕಾಂತ್ ಮಾಧವ್ ವೈದ್ಯ ಅವರ ಬದಲಿಗಾಗಿ ಯಾವುದೇ ಶಿಫಾರಸು ಮಾಡಲಿಲ್ಲ. ಅವರು ಆಗಸ್ಟ್ 2023 ರಲ್ಲಿ 60 ವರ್ಷ ವಯಸ್ಸಿನ ಅನಂತರ ನಿವೃತ್ತಿ ಹೊಂದಿದ್ದರು. ಸಮಿತಿಯು ಚೆನ್ನೈ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನ (CPCL) ವ್ಯವಸ್ಥಾಪಕ ನಿರ್ದೇಶಕ ಅರವಿಂದ್ ಕುಮಾರ್ ಸೇರಿ 10 ಅಭ್ಯರ್ಥಿಗಳನ್ನು ಸಂದರ್ಶಿಸಿತು.

2020ರ ಜುಲೈ 1ರಂದು ಭಾರತದ ಅತಿದೊಡ್ಡ ತೈಲ ಕಂಪೆನಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವೈದ್ಯ ಅವರು ಗುತ್ತಿಗೆ ಆಧಾರದ ಮೇಲೆ ಮರು-ಉದ್ಯೋಗ ದಲ್ಲಿ ತಮ್ಮ ನಿವೃತ್ತಿಯ ದಿನಾಂಕದ ಅನಂತರ 2023ರ ಸೆಪ್ಟೆಂಬರ್ 1ರಿಂದ 202೪ರ ಆಗಸ್ಟ್ ವರೆಗೆ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಂಡರು.

ಈ ತಿಂಗಳು, ತೈಲ ಸಚಿವಾಲಯವು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ನ ಹೊಸ ಅಧ್ಯಕ್ಷರ ಅರ್ಜಿಗಳನ್ನು ಆಹ್ವಾನಿಸಿದೆ. ಪಿಇಎಸ್‌ಬಿ ಅಧ್ಯಕ್ಷರ ನೇತೃತ್ವದ ಮೂವರು ಸದಸ್ಯರ ಹುಡುಕಾಟ-ಕಮ್-ಆಯ್ಕೆ ಸಮಿತಿಯು ಈ ಆಯ್ಕೆಯನ್ನು ಮಾಡುತ್ತದೆ. ಈ ಸಮಿತಿಯು ತೈಲ ಕಾರ್ಯದರ್ಶಿ ಮತ್ತು ಮಾಜಿ ಎಚ್‌ಪಿಸಿಎಲ್ ಅಧ್ಯಕ್ಷ ಎಂ.ಕೆ. ಸುರಾನಾ ಅವರನ್ನು ಸದಸ್ಯರನ್ನಾಗಿ ಒಳಗೊಂಡಿದೆ.

ಜುಲೈ 3ರೊಳಗೆ ನಾಯಕತ್ವದಲ್ಲಿ ಕನಿಷ್ಠ ಐದು ವರ್ಷಗಳ ಅನುಭವ ಹೊಂದಿರುವ ಪ್ರಮುಖ ಸಂಸ್ಥೆಗಳಿಂದ ಸ್ನಾತಕೋತ್ತರ ನಿರ್ವಹಣಾ ಪದವಿಗಳನ್ನು ಹೊಂದಿರುವ ಎಂಜಿನಿಯರ್‌ಗಳು, ಚಾರ್ಟರ್ಡ್ ಅಕೌಂಟೆಂಟ್‌ಗಳು ಮತ್ತು ವೆಚ್ಚ ಲೆಕ್ಕಪರಿಶೋಧಕರಿಂದ ಅರ್ಜಿಗಳನ್ನು ಕೋರಲಾಗಿದೆ. ವಯಸ್ಸಿನ ಅರ್ಹತೆಯ ಕಟ್-ಆಫ್ ಅನ್ನು ಆಂತರಿಕರಿಗೆ 58 ವರ್ಷಗಳಿಗಿಂತ ಹೆಚ್ಚಿಲ್ಲ ಎಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಮತ್ತು ಹೊರಗಿನವರಿಗೆ 57 ವರ್ಷಗಳು, ಜಾಹೀರಾತಿನ ಪ್ರಕಾರ ನಿವೃತ್ತಿ ವಯಸ್ಸು 60 ವರ್ಷಗಳು.

ಸಚಿವಾಲಯವು ಆರಂಭದಲ್ಲಿ 61 ವರ್ಷ ವಯಸ್ಸನ್ನು ತಲುಪದ ಯಾರನ್ನಾದರೂ ಕೆಲಸಕ್ಕೆ ಪರಿಗಣಿಸಲು ಅವಕಾಶ ನೀಡಿತು. ಇದರಿಂದ ವೈದ್ಯ ಅವರು ಕೆಲಸಕ್ಕೆ ಅರ್ಹರಾದರು.


ಪಿಎಸ್‌ಯುಗಳಲ್ಲಿ ಬೋರ್ಡ್ ಮಟ್ಟದ ಹುದ್ದೆಗಳನ್ನು ನೇಮಿಸಿಕೊಳ್ಳಲು ಅಸ್ತಿತ್ವದಲ್ಲಿರುವ ನಿಯಮಗಳು ನಿವೃತ್ತಿಯ ಮೊದಲು ಕನಿಷ್ಠ ಎರಡು ವರ್ಷಗಳ ಸೇವೆಯನ್ನು ಹೊಂದಿರುವ ಆಂತರಿಕ ವ್ಯಕ್ತಿಯ ಉಮೇದುವಾರಿಕೆಯನ್ನು ಪರಿಗಣಿಸಲು ಮತ್ತು ಹೊರಗಿನ ಅಭ್ಯರ್ಥಿಗಳ ಸಂದರ್ಭದಲ್ಲಿ ಮೂರು ವರ್ಷಗಳನ್ನು ಅನುಮತಿಸುತ್ತದೆ.

ಇದನ್ನೂ ಓದಿ: Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

ಹೆಚ್ ಪಿಸಿಎಲ್ ಉನ್ನತ ಹುದ್ದೆಗೆ ಜೂನ್ 14 ರ ಅಧಿಸೂಚನೆಯಲ್ಲಿ ಪಿಇಎಸ್ ಬಿ , ಹೆಚ್ ಪಿಸಿಎಲ್ ಸಂಸ್ಕರಣಾಗಾರಗಳ ನಿರ್ದೇಶಕ ಶುಣ್ಮುಗವೇಲ್ ಭರತನ್, ಕಂಪೆನಿಯ ನಾಲ್ವರು ಕಾರ್ಯನಿರ್ವಾಹಕ ನಿರ್ದೇಶಕರಾದ ಅನುಜ್ ಕುಮಾರ್ ಜೈನ್, ಸುಬೋಧ್ ಬಾತ್ರಾ, ಕೆ. ವಿನೋದ್, ಸಂದೀಪ್ ಮಹೇಶ್ವರಿ ಹಾಗೂ ಐಒಸಿ, ಗೇಲ್ ಮತ್ತು ಐಜಿಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ಕಮಲ್ ಕಿಶೋರ್ ಚಾಟಿವಾಲ್ ಅವರನ್ನು ಸಂದರ್ಶನ ನಡೆಸಿತ್ತು. ಆದರೆ ಹೆಚ್ ಪಿಸಿಎಲ್ ನ ಉನ್ನತ ಹುದ್ದೆಗೆ ಇವರು ಯಾರೂ ಸೂಕ್ತವಾಗಿಲ್ಲ ಎಂದು ಮಂಡಳಿ ಹೇಳಿದೆ.

Continue Reading

ಉದ್ಯೋಗ

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ. ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಿ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (National Fertilizers Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ (NFL Recruitment 2024). ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2 (Job Alert).

ಹುದ್ದೆಗಳ ವಿವರ

ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್)- 56
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಕ್ಯಾನಿಕಲ್)- 18
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಲೆಕ್ಟ್ರಿಕಲ್)- 21
ಮ್ಯಾನೇಜ್‌ಮೆಂಟ್‌ ಟ್ರೈನಿ (ಇನ್ಸ್ಟ್ರುಮೆಂಟೇಶನ್)- 17
ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್ ಲ್ಯಾಬ್)- 12
ಮ್ಯಾನೇಜ್‌ಮೆಂಟ್‌ ಟ್ರೈನಿ (ಸಿವಿಲ್)- 3
ಮ್ಯಾನೇಜ್‌ಮೆಂಟ್‌ ಟ್ರೈನಿ (ಫೈರ್ & ಸೇಫ್ಟಿ)- 5
ಮ್ಯಾನೇಜ್‌ಮೆಂಟ್‌ ಟ್ರೈನಿ (ಮಾಹಿತಿ ತಂತ್ರಜ್ಞಾನ)- 5
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಟೀರಿಯಲ್ಸ್) -11
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಚ್ಆರ್)- 16

ವಿದ್ಯಾರ್ಹತೆ ಮತ್ತು ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿ.ಟೆಕ್ / ಬಿಎಸ್‌ಸಿ / ಎಂಬಿಎ / ಎಂಎಸ್‌ಸಿ / ಪಿಜಿ ಡಿಪ್ಲೋಮಾ / ಪಿಜಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 700 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ 1 ವರ್ಷ ತರಬೇತಿ ನೀಡಲಾಗುತ್ತದೆ. ಬಳಿಕ 3 ವರ್ಷಗಳ ಒಪ್ಪಂದದ ಮೇರೆಗೆ ನೇಮ ಮಾಡಿಕೊಳ್ಳಲಾಗುತ್ತದೆ. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಮಾತ್ರ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 40,000 ರೂ.-1,40,000 ರೂ. ಮಾಸಿಕ ವೇತನ ಲಭಿಸಲಿದೆ.

NFL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಬಳಿಕ ಲಾಗಿನ್‌ ಆಗಿ ಸೂಕ್ತ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ +91-8660511568 ನಂಬರ್‌ಗೆ ಕರೆ ಮಾಡಿ.

ಇದನ್ನೂ ಓದಿ: Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading
Advertisement
Kalki 2898 AD Movie Bhairava Anthem Released
ಕರ್ನಾಟಕ12 seconds ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು3 mins ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ4 mins ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ8 mins ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ12 mins ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ32 mins ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ42 mins ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest49 mins ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಕೇಂದ್ರ ಸರ್ಕಾರ ಹಣ ಕೊಟ್ಟಿದ್ರೆ ತೆರಿಗೆ ಹೆಚ್ಚಿಸುವ ಅಗತ್ಯವೇ ಇರ್ತಿರಲಿಲ್ಲ: ಸಿಎಂ ಸಿದ್ದರಾಮಯ್ಯ

International Yoga Day 2024
Latest1 hour ago

International Yoga Day 2024: ಕುತ್ತಿಗೆ ನೋವಿನ ನಿವಾರಣೆಗೆ ಯಾವ ಆಸನಗಳು ಸೂಕ್ತ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು8 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು9 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌