HD Kumaraswamy : ಎಚ್‌.ಡಿ. ಕುಮಾರಸ್ವಾಮಿ ಮಾತು ನಂಬಲು ನಾನು ದಡ್ಡನೇ?: ಡಿ.ಕೆ. ಶಿವಕುಮಾರ್ - Vistara News

ಕರ್ನಾಟಕ

HD Kumaraswamy : ಎಚ್‌.ಡಿ. ಕುಮಾರಸ್ವಾಮಿ ಮಾತು ನಂಬಲು ನಾನು ದಡ್ಡನೇ?: ಡಿ.ಕೆ. ಶಿವಕುಮಾರ್

HD Kumaraswamy : ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಎಚ್‌.ಡಿ. ಕುಮಾರಸ್ವಾಮಿ ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನೂ ದಡ್ಡನೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

CM Siddaramaiah and DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ (Karnataka Chief Minister) ಎಂದು ಘೋಷಣೆ ಮಾಡಿದರೆ, ಮುಂಬೈಯಿಂದ ಮರಳಿ ಬರುವುದಾಗಿ ಕೆ. ಗೋಪಾಲಯ್ಯ (K Gopalaiah) ಮತ್ತು ಎಸ್.ಟಿ. ಸೋಮಶೇಖರ್ (ST Somashekhar) ಫೋನ್ ಮಾಡಿ ಹೇಳಿದ್ದರು. ಆದರೆ, ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ನನ್ನ ಹೆಸರು ಹೇಳಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ವಾಗ್ದಾಳಿ ನಡೆಸಿದರು.

ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಅನ್ನುವ ಕುಮಾರಸ್ವಾಮಿ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಅನ್ನುತ್ತಾರೆ. ಅವರ ಮಾತು ಕೇಳಲು ನಾವೇನು ದಡ್ಡರೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Actor Darshan : ವೈದ್ಯೆಗೆ ನಾಯಿ ಕಚ್ಚಿದ ಪ್ರಕರಣ; ವಿಚಾರಣೆಗೆ ನಟ ದರ್ಶನ್‌ ಹಾಜರ್‌

ಸರ್ಕಾರಕ್ಕೆ ನಮ್ಮ ಪಕ್ಷದ 136 ಜನ ಶಾಸಕರು ಮತ್ತು ಪಕ್ಷೇತರರ ಬೆಂಬಲವಿದೆ. ಕುಮಾರಸ್ವಾಮಿ ಅವರೇ ಎನ್‌ಡಿಎಯಿಂದ ಮೊದಲು ಹೊರಬನ್ನಿ, ಒಬ್ಬ ವ್ಯಕ್ತಿಗೆ ಸ್ಪಷ್ಟವಾದ ರಾಜಕೀಯ ನಿಲುವು ಇರಬೇಕು ಎಂದು ಅವರಿಗೆ ಹೇಳಿದೆ. ನಂತರ ಈ ಕುರಿತು ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗಲೇ ಇಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌ಡಿಕೆ ದ್ವಂದ್ವ ನಿಲುವು

ಕುಮಾರಸ್ವಾಮಿ ಅವರ ದ್ವಂದ್ವ ನಿಲುವು ಅವರಿಗೆ ಅರ್ಥವಾಗುತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಸೇರಿದ್ದಾರೆ, ತೆಲಂಗಾಣದಲ್ಲಿ ಕೆಸಿಆರ್ಗೆ ಪರವಾಗಿ ಮಾತನಾಡುತ್ತಾರೆ. ಕೆಸಿಆರ್ ಅವರ ಮಗ ಮೋದಿ ಅವರನ್ನು ಸುಳ್ಳ ಎಂದು ಕರೆಯುತ್ತಾರೆ. 18 ಜನ ಶಾಸಕರನ್ನು ಕರೆದುಕೊಂಡು, ಅವರನ್ನು ಖುರ್ಚಿಯಿಂದ ಇಳಿಸಿದವರ ಜತೆಗೆ ಮಿಲನವಾಗಿದ್ದೇವೆ, ಸಂಸಾರ ನಡೆಸುತ್ತೇವೆ ಎಂದರೆ ಸಿದ್ದಾಂತ ಎನ್ನುವುದು ಎಲ್ಲಿಗೆ ಹೋಯಿತು? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

Operation Hasta and congress Karnataka

ಸರ್ಕಾರ ಬೀಳಿಸಿದವರ ಜತೆಗೇ ನೆಂಟಸ್ತನ

ಜೆಡಿಎಸ್ ಜಾತ್ಯತೀತ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟ ಪಕ್ಷ ಎನ್ನುವ ಕಾರಣಕ್ಕೆ 80 ಜನ ಕಾಂಗ್ರೆಸ್ ಶಾಸಕರು ಇದ್ದರೂ 30 ಸ್ಥಾನ ಗೆದ್ದಂತಹ ಅವರ ಪಕ್ಷಕ್ಕೆ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು. ಈಗ ಸರ್ಕಾರ ಬೀಳಿಸಿದವರ ಜತೆಗೇ ಅವರು ನೆಂಟಸ್ಥನ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ನಾವು ಆಡಳಿತ ಮಾಡಲು ಬಿಡಲಿಲ್ಲವೇ?

ಕುಮಾರಸ್ವಾಮಿ ಅವರೇ, ನೀವು ಸಹ 20 ಮತ್ತು 14 ತಿಂಗಳು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದೀರಿ. ನಿಮಗೆ ಆಡಳಿತ ಮಾಡಲು ಬಿಡಲಿಲ್ಲವೇ? ವಿರೋಧ ಪಕ್ಷವಾಗಿ ಟೀಕೆಗಳನ್ನು ಮಾಡಿದರೂ ಬಿಜೆಪಿಯವರಿಗೆ ನಾವು ಆಡಳಿತ ಮಾಡಲು ಬಿಡಲಿಲ್ಲವೇ? ಆದರೆ ನೀವು ಅಧಿಕಾರ ನನಗೆ ಸಿಗಲಿಲ್ಲ ಎಂದು ಅಸೂಯೆಯಿಂದ ಕೈ, ಕೈ ಉಜ್ಜಿಕೊಂಡು ಕುಳಿತರೆ ಏನು ಪ್ರಯೋಜನ? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ನಮಗೆ ಇನ್ನೆಷ್ಟು ಶಕ್ತಿ ಇರಬೇಕು?

ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ನಮ್ಮ ಆಡಳಿತವನ್ನು ನೋಡಿಕೊಂಡು ಇರಲು ನಿಮಗೆ ಆಗುತ್ತಿಲ್ಲ. ಗ್ಯಾರಂಟಿಗಳ ಬಗ್ಗೆ, ಆಡಳಿತದ ಬಗ್ಗೆ ಎಲ್ಲದರ ಬಗ್ಗೆಯೂ ಕುಹಕವಾಡುತ್ತಿದ್ದೀರಿ. ನಮ್ಮ ತಪ್ಪುಗಳನ್ನು ಹೇಳಿದರೆ ತಿದ್ದಿಕೊಂಡು ಕೆಲಸ ಮಾಡುತ್ತೇವೆ, ಅನವಶ್ಯಕ ಟೀಕೆಗಳು ಸಲ್ಲದು. ನಮ್ಮ ಆಡಳಿತ ವೈಫಲ್ಯಗಳನ್ನು ಎತ್ತಿ ತೋರಿಸಲಿ, ಅದರ ಬದಲು ನಮ್ಮ ಶಾಸಕರಿಗೆ ಕರೆ ಮಾಡುವುದು ಸೇರಿದಂತೆ ಇತರೇ ಕೆಲಸಗಳನ್ನು ಮಾಡಿದರೆ, ಇದನ್ನು ಏನೆಂದು ಕರೆಯಬೇಕು? ನಮಗೆ ಎಲ್ಲ ವಿಚಾರ ಗೊತ್ತಿದೆ! ವಿರೋಧ ಪಕ್ಷಕ್ಕೆ ಅಷ್ಟೊಂದು ಶಕ್ತಿ ಇರುವಾಗ ನಮಗೆ ಇನ್ನೆಷ್ಟು ಶಕ್ತಿ ಇರಬೇಕು ಎಂದು ಡಿ.ಕೆ. ಶಿವಕುಮಾರ್ ಗುಡುಗಿದರು.

ಬಿಜೆಪಿಯವರು 6 ತಿಂಗಳ ನಂತರ ನೂತನ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಿದ್ದಾರೆ. ಅದು ಅವರ ಪಕ್ಷದ ಆಂತರಿಕ ವಿಚಾರ. ಅವರು ನಮ್ಮನ್ನು ರಚನಾತ್ಮಕವಾಗಿ ಟೀಕೆ ಮಾಡಿದರೆ ಒಪ್ಪಿಕೊಳ್ಳುತ್ತೇವೆ, ಇದೇ ಪ್ರಜಾಪ್ರಭುತ್ವ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಕುಮಾರಸ್ವಾಮಿ ಒಂದು ನಿಮಿಷ ಇದ್ದಂತೆ ಇನ್ನೊಂದು ನಿಮಿಷ ಇರುವುದಿಲ್ಲ

ಮಂಜುನಾಥ್, ಗೌರಿಶಂಕರ್ ಸೇರಿದಂತೆ ಜೆಡಿಎಸ್ ಪಕ್ಷದ ಅನೇಕರ ಬಳಿ ಕೇಳಿದ್ದೇನೆ, ʼಕುಮಾರಸ್ವಾಮಿ ಅವರು ಹೇಗೆʼ ಎಂದು. ಒಂದು ನಿಮಿಷ ಇದ್ದ ನಿರ್ಧಾರ ಇನ್ನೊಂದು ನಿಮಿಷ ಇರುವುದಿಲ್ಲ, ಅದಕ್ಕೆ ನಮಗೆ ಅವರ ಬಳಿ ಕೆಲಸ ಮಾಡಲು ಆಗುವುದಿಲ್ಲ. ನಮಗೆ ಕಾಂಗ್ರೆಸ್ ಪಕ್ಷವೇ ಸರಿ ಎಂದು ಹೇಳಿದ್ದರು. ಹೀಗಾಗಿ ಅವರು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಇದನ್ನೂ ಓದಿ: Karnataka Politics : ಕಾಂಗ್ರೆಸ್‌ ಸೇರಿದ ಜೆಡಿಎಸ್‌ನ ಇಬ್ಬರು ಮಾಜಿ ಶಾಸಕರು; ಕೋಮುವಾದಿ ಜನತಾ ದಳವೆಂದ ಸಿಎಂ

ಮೋಸ ಮಾಡಿದಂತೆ ಅಲ್ಲವೇ?

ಪಕ್ಷ ಬಿಟ್ಟು ಕಾಂಗ್ರೆಸ್ ಸೇರುತ್ತೇನೆ ಅಂದವರಿಗೆ ಕುಮಾರಸ್ವಾಮಿ, “ನೀನು ದಳದಲ್ಲೇ ಇರು, ಆದರೆ ಬಿಜೆಪಿಗೆ ಕೆಲಸ ಮಾಡುವ ಬದಲು ಕಾಂಗ್ರೆಸ್ ಪಕ್ಷಕ್ಕೆ ಕೆಲಸ ಮಾಡು” ಎಂದು ಹೇಳಿದ್ದಾರಂತೆ. ಇದು ಹೇಗೆ ಸಾಧ್ಯ? ಮೋಸ ಮಾಡಿದಂತೆ ಅಲ್ಲವೇ? ಇದರ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಗೌರಿಶಂಕರ್ ಮತ್ತು ಮಂಜುನಾಥ್ ಅವರನ್ನೇ ಕೇಳಬೇಕು. ಈ ಕಾರಣಕ್ಕೆ ಇವರಿಬ್ಬರು ಕಾರ್ಯಕರ್ತರ ಅಭಿಪ್ರಾಯ ಪಡೆದುಕೊಂಡು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೈಬಿಡುವ ಪ್ರಶ್ನೆಯೇ ಇಲ್ಲ

ನಮ್ಮ ಪಕ್ಷದ ಬಿ.ಎಲ್.ಶಂಕರ್, ನರೇಂದ್ರಸ್ವಾಮಿ, ವಿನಯ್ ಕುಲಕರ್ಣಿ ಸೇರಿದಂತೆ ಇವರಿಗೆ ಪಕ್ಷದಲ್ಲಿ ಇರುವಂತಹ ಹಿರಿತನ ಹೊಸದಾಗಿ ಪಕ್ಷ ಸೇರ್ಪಡೆ ಆದವರಿಗೂ ಇದೆ. ಎಷ್ಟೇ ಮತಗಳನ್ನು ಪಡೆದುಕೊಂಡು ಸೋತಿದ್ದರೂ ನಮ್ಮ ಪಕ್ಷದ ಕಷ್ಟಕಾಲದಲ್ಲಿ ಜತೆಗೆ ನಿಂತ ಕಾರ್ಯಕರ್ತರು, ನಾಯಕರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ದಿವಂಗತ ಧ್ರುವನಾರಾಯಣ ಅವರು ಕೇವಲ 1 ಮತಗಳ ಅಂತರದಲ್ಲಿ ಗೆದ್ದಿದ್ದರು, ನಂತರದ ಲೋಕಸಭಾ ಚುನಾವಣೆಯಲ್ಲಿ ಒಂದೊಂದು ಬೂತಿನಲ್ಲಿ ಒಂದೊಂದೇ ಮತಗಳು ಕಡಿಮೆಯಾಗಿ 1200 ಮತಗಳ ಅಂತರದಲ್ಲಿ ಸೋತರು, ಅವರ ಮಗ 50 ಸಾವಿರ ಮತಗಳ ಅಂತರದಲ್ಲಿ ಗೆದ್ದಿದ್ದಾನೆ. ಸೌಮ್ಯಾ ರೆಡ್ಡಿ, ದಿನೇಶ್ ಗುಂಡೂರಾವ್ ಅವರು ಕಡಿಮೆ ಅಂತರದಲ್ಲಿ ಸೋಲು – ಗೆಲುವು ಕಂಡಿದ್ದಾರೆ. ಅಂದರೆ ನಾವು ಯಾರನ್ನೂ ಕೂಡ ಎಂತಹ ಸಂದರ್ಭದಲ್ಲಿಯೂ ದೂರ ಮಾಡುವುದಿಲ್ಲ ಎನ್ನುವುದಕ್ಕೆ ಈ ಫಲಿತಾಂಶಗಳು ಉದಾಹರಣೆ ನೀಡಿವೆ ಎಂದು ಡಿ.ಕೆ. ಶಿವಕುಮಾರ್ ವಿವರಣೆ ನೀಡಿದರು.

ಸ್ವಾಭಿಮಾನ ಇರುತ್ತದೆ ಅಲ್ಲವೇ?

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನುಗ್ಗಬೇಕು, ಹಳಬರು, ಹೊಸಬರು ಎಲ್ಲರಿಗೂ ಅವಕಾಶ ನೀಡುತ್ತಿದ್ದೇವೆ, ಮುಂದೆಯೂ ನೀಡುತ್ತೇವೆ. ಕುಮಾರಸ್ವಾಮಿ ಅವರೇ, ಗೌರಿಶಂಕರ್ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಿ ನೋಟಿಸ್ ನೀಡಿ, ಮತ್ತೆ ನಿಮ್ಮ ಜತೆಯೇ ಕೆಲಸ ಮಾಡು ಎಂದರೆ ಅದು ಹೇಗೆ ಸಾಧ್ಯ. ಮನುಷ್ಯನಿಗೆ ತನ್ನದೇ ಆದ ಸ್ವಾಭಿಮಾನವಿರುತ್ತದೆ ಅಲ್ಲವೇ?

ನಾನು ಮತ್ತು ಚೆನ್ನಿಗಪ್ಪ ಅವರು ಒಂದೇ ಜಿಲ್ಲೆಯವರು, ಒಟ್ಟಿಗೆ ರಾಜಕಾರಣ ಮಾಡುತ್ತಾ ಬೆಳೆದವರು. ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಅವರನ್ನು ನೋಡಲು ಹೋಗಿದ್ದೆ. ಈ ವೇಳೆ ‘ಯಾವ ಕಾರಣಕ್ಕೆ ಚುಂಚನಗಿರಿ ಸ್ವಾಮೀಜಿಗಳ ಮೇಲೆ ಪ್ರಕರಣ ದಾಖಲಿಸಬೇಕಾಯಿತು’ ಎಂದು ಹೇಳಿ ಬೇಸರ ವ್ಯಕ್ತಪಡಿಸಿದ್ದರು.

ಪ್ರಬಲ ಶಕ್ತಿ ಸೇರ್ಪಡೆ

ಡಿ.ಸಿ.ಗೌರಿಶಂಕರ್ ಅವರನ್ನು ಸೋಲಿಸಲು ನಾವು ಸಾಕಷ್ಟು ಕೆಲಸ ಮಾಡಿದೆವು, ನಮ್ಮ ಅಭ್ಯರ್ಥಿ 6 ಸಾವಿರ ಮತಗಳನ್ನು ಪಡೆದರೆ ಗೌರಿಶಂಕರ್ ಅವರು 2 ಸಾವಿರ ಮತಗಳ ಅಂತರದಿಂದ ಸೋತರು. ಈಗ ನಮ್ಮವರೇ ಆಗಿದ್ದಾರೆ, ಪ್ರಬಲ ಶಕ್ತಿಯೊಂದು ತುಮಕೂರಿನ ಭಾಗದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಬಿಜೆಪಿಯವರು ನಮ್ಮ ಮುಹೂರ್ತವನ್ನೇ ಹುಡುಕಿದ್ದಾರೆ

ಗೌರಿಶಂಕರ್ ಮತ್ತು ಮಂಜುನಾಥ್ ಅವರು ನ.15 ರಂದೆ ಪಕ್ಷ ಸೇರ್ಪಡೆಯಾಗಬೇಕು ಎಂದು ಇಚ್ಚಿಸಿದ್ದರು, ವಿಜಯೇಂದ್ರ ಅವರು ಈ ದಿನವೇ ಅಧಿಕಾರ ಸ್ವೀಕಾರ ಮಾಡುತ್ತಿದ್ದಾರೆ ಎಂದರೆ ನಿಮ್ಮಿಬ್ಬರ ಮುಹೂರ್ತ ಚೆನ್ನಾಗಿದೆ ಅಂತ ಅಲ್ಲವೇ? ಕಾಂಗ್ರೆಸ್ ಪಕ್ಷದಲ್ಲಿ ಯಾವ ಸ್ಥಾನ ಸಿಗದೇ ಇರಬಹುದು, ಆದರೆ ತ್ರಿವರ್ಣ ಧ್ವಜವನ್ನು ಹೆಗಲ ಮೇಲೆ ಹಾಕಿಕೊಳ್ಳುವ ಪುಣ್ಯ ಸಿಗುತ್ತದೆ. ಬೇರೆ ಯಾವ ಪಕ್ಷದಲ್ಲಿಯೂ ಈ ಅವಕಾಶ ಸಿಗಲು ಸಾಧ್ಯವಿಲ್ಲ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ: HD Kumarswamy : ಕಾಂಗ್ರೆಸ್‌ ಎಂದರೆ ಕಳ್ಳಕಳ್ಳವಾಗಿ ಪೋಸ್ಟರ್‌ ಅಂಟಿಸುವ ಶಿಖಂಡಿ ಪಕ್ಷ; ಜೆಡಿಎಸ್‌ ತಿರುಗೇಟು

ಇನ್ನಷ್ಟು ನಾಯಕರು ಕಾಂಗ್ರೆಸ್‌ ಸೇರುತ್ತಾರೆ

ಯಾರೇ ಏನೂ ತಿಪ್ಪರಲಾಗ ಹೊಡೆದರೂ ಯಾರು ಏನೂ ಮಾಡಲು ಆಗುವುದಿಲ್ಲ, ಮುಂದಿನ ಚುನಾವಣೆಯನ್ನು ಎಲ್ಲರೂ ಎದುರಿಸೋಣ. ಮುಂದಿನ ವಾರ ಇನ್ನಷ್ಟು ಪ್ರಮುಖ ನಾಯಕರು ಪಕ್ಷ ಸೇರ್ಪಡೆಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ಹೊಸದಾಗಿ ಪಕ್ಷ ಸೇರ್ಪಡೆಯಾದ ಕ್ಷೇತ್ರಗಳಲ್ಲಿ ನಾನೇ ಖುದ್ದಾಗಿ ಬಂದು ಕಾರ್ಯಕರ್ತರ ಸಭೆ ನಡೆಸಲಿದ್ದು, ದಾಸರಹಳ್ಳಿ, ತುಮಕೂರು ಗ್ರಾಮಾಂತರದಲ್ಲಿ ಶೀಘ್ರ ಸಭೆ ನಡೆಸುತ್ತೇನೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Weather News: ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ. ಶನಿವಾರವಂತೂ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Weather News
Koo

ಕಾರವಾರ/ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ವರುಣನ ಆರ್ಭಟ (Rain News) ಮುಂದುವರಿದಿದ್ದು, ಉತ್ತರ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆ ಸೇರಿ ಕರಾವಳಿಯಾದ್ಯಂತ ಶನಿವಾರ (ಜುಲೈ 6) ರಜೆ ಘೋಷಣೆ ಮಾಡಲಾಗಿದೆ. ಭಾರಿ ಮಳೆಯ (Weather News) ಕುರಿತು ಹವಾಮಾನ ಇಲಾಖೆ ವರದಿ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ರಜೆ ಘೋಷಣೆ ಮಾಡಿದ್ದಾರೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಹಲವು ಕಟ್ಟಡಗಳು ಕುಸಿದಿವೆ.

karnataka Weather Forecast

ಉಡುಪಿ ಜಿಲ್ಲೆಯಲ್ಲೂ ರಜೆ

ಮಳೆಯ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕುಗಳು ಸೇರಿ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ವಿಭಾಗಕ್ಕೆ ರಜೆ ಘೋಷಿಸಲಾಗಿದೆ. ಆದರೆ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮಾ ,ಎಂಜಿನಿಯರಿಂಗ್, ಐಟಿಐ ವಿದ್ಯಾಸಂಸ್ಥೆಗಳಿಗೆ ರಜೆ ಇಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Dengue Fever: ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ.

VISTARANEWS.COM


on

Dengue Fever
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆಯಾಗಿವೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 107 ಹೊಸ ಕೇಸ್‌ಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 343 ಸಕ್ರಿಯ ಡೆಂಗ್ಯೂ ಪ್ರಕರಣಗಳು ಇವೆ. ಡೆಂಗ್ಯೂ ಸೋಂಕಿನಿಂದ ಜನವರಿಯಿಂದ ಈವರೆಗೆ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 899 ಮಂದಿಗೆ ಡೆಂಗ್ಯೂ ಟೆಸ್ಟ್‌ ನಡೆಸಲಾಗಿದ್ದು, ಈ ಪೈಕಿ 155 ಮಂದಿಗೆ ಡೆಂಗ್ಯೂ ದೃಢವಾಗಿದೆ. ಬೆಂಗಳೂರಿನಲ್ಲಿ 107, ಚಿತ್ರದುರ್ಗ 10, ದಾವಣಗೆರೆ 4, ಶಿವಮೊಗ್ಗ 9, ಉತ್ತರ ಕನ್ನಡ 2, ವಿಜಯನಗರ 4, ಹಾಸನ 16 ಉಡುಪಿಯಲ್ಲಿ 3 ಕೇಸ್‌ಗಳು ಪತ್ತೆಯಾಗಿವೆ. 343 ಸಕ್ರಿಯ ಪ್ರಕರಣಗಳ ಪೈಕಿ 142 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಡೆಂಗ್ಯೂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೊದಲ ಬಲಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಗುಡಿಬಂಡೆ ಪಟ್ಟಣದ‌ ನಿವಾಸಿ ವೇಣು(50) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಡೆಂಗ್ಯೂ ಜ್ವರರಿಂದ ವೇಣು ಅವರು ಮೃತಪಟ್ಟಿರುವುದಾಗಿ ಸಂಬಂಧಿಕರು ಹೇಳಿದ್ದಾರೆ.

ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

ಬೆಂಗಳೂರು: ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು (Dengue Fever) ಹೆಚ್ಚಳವಾಗುತ್ತಿರುವುದರಿಂದ ಆತಂಕ ಮೂಡಿದೆ. ಹೀಗಾಗಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಿರುವ ಬಿಬಿಎಂಪಿ, ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಭಾರಿ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲು ನಿರ್ಧರಿಸಿದೆ. ಸದ್ಯದಲ್ಲೇ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಿಗೂ ಆರೋಗ್ಯ ಇಲಾಖೆ ಆದೇಶ ಹೊರಡಿಸಲಿದೆ.

ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡಿದವರಿಗೆ ಇನ್ಮುಂದೆ 50 ರೂಪಾಯಿ ಅಲ್ಲ, 500 ರೂಪಾಯಿ ದಂಡ ವಿಧಿಸಲು ಪಾಲಿಕೆ ನಿರ್ಧರಿಸಿದೆ. ಸ್ವಚ್ಛತೆ ಇಲ್ಲದಿದ್ದರೆ 500 ರೂ. ದಂಡ ಬೀಳೋದು ಗ್ಯಾರಂಟಿ. 50 ರೂ ಇದ್ದ ದಂಡದ ಮೊತ್ತವನ್ನು 500 ರೂ.ಗೆ ಏರಿಕೆ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ನೆನ್ನೆ ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜನರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಗ್ರಹಿಸಿದ ನೀರನ್ನು ನಾಲ್ಕೈದು ದಿನಗಳಿಗೆ ಒಮ್ಮೆ ಬದಲಾಯಿಸಬೇಕು. ಆಶಾ ಕಾರ್ಯಕರ್ತೆಯರು ಬಂದಾಗ ಸಾರ್ವಜನಿಕರು ಸ್ಪಂದಿಸಬೇಕು ಎಂದು ಕೋರಿದ್ದಾರೆ.

Continue Reading

ಕರ್ನಾಟಕ

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Namma Metro: ಬೆಂಗಳೂರಿನ ಮೆಟ್ರೋ ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ಜುಲೈ 6ರಿಂದ ಹೆಚ್ಚುವರಿಯಾಗಿ 15 ರೈಲುಗಳು ಕಾರ್ಯಾಚರಣೆ ನಡೆಸಲಿವೆ.

VISTARANEWS.COM


on

Namma Metro
Koo

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ (Namma Metro) ಬಿಎಂಆರ್‌ಸಿಎಲ್‌ ಗುಡ್ ನ್ಯೂಸ್ ನೀಡಿದೆ. ನಾಳೆಯಿಂದ (ಜುಲೈ 6) ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರ ಒತ್ತಾಯದ ಮೇರೆಗೆ ಹೆಚ್ಚುವರಿ ಮೆಟ್ರೋ ಕಾರ್ಯಾಚರಣೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ಜುಲೈ 6ರಿಂದ ಹೆಚ್ಚುವರಿಯಾಗಿ 15 ರೈಲುಗಳು ಕಾರ್ಯಾಚರಣೆ ನಡೆಸಲಿವೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ಹೆಚ್ಚುವರಿ ಮೆಟ್ರೋ ಸೇವೆ ಆರಂಭವಾಗಲಿದೆ. ಈ ಮೂಲಕ ನೇರಳೆ ಮಾರ್ಗದಲ್ಲಿ ಪ್ರತೀ 3.5 ನಿಮಿಷಕ್ಕೊಂದು ರೈಲು ಸೇವೆ ಇರಲಿದೆ, ಇನ್ನುಳಿದಂತೆ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಇದನ್ನೂ ಓದಿ | Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಬಿ.ಎಂ.ಆ‌ರ್.ಸಿ.ಎಲ್, ಜುಲೈ 6ರಿಂದ ಜಾರಿಗೆ ಬರುವಂತೆ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು, ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುವುದು. ಈ 15 ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು ರೈಲು ವೈಟ್‌ ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಚಲಿಸುತ್ತವೆ.

ಅದರಂತೆ, ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8:48, 8:58, 9:08, 9:18, 9:29, 9:39, 9:50, 10:00, 10:11, 10:21, 10:39, 10:50, 11:00, 11:22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳ ಆವರ್ತನದಲ್ಲಿ ಬೆಳಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದು ತಿಳಿಸಿದೆ.

ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್‌ ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳ ಆವರ್ತನದಲ್ಲಿ ಲಭ್ಯವಿರುತ್ತದೆ.

ಇದನ್ನೂ ಓದಿ | Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಬೇಕು ಎಂದು ಬಿಎಂಆರ್‌ಸಿಎಲ್‌ ಕೋರಿದೆ.

Continue Reading

ಬೆಂಗಳೂರು

Teach For India : ಟೀಚ್ ಫಾರ್ ಇಂಡಿಯಾದಿಂದ 2025ರ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿಗಳ ಆಹ್ವಾನ

Teach for India: ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಎರಡು ವರ್ಷದ, ಪೂರ್ಣಕಾಲಿಕ ಫೆಲೋಶಿಪ್ ಕಾರ್ಯಕ್ರಮವಾಗಿದ್ದು ಶೈಕ್ಷಣಿಕ ವಲಯದಲ್ಲಿ ಆಸಕ್ತಿಯುಳ್ಳ ಮತ್ತು ಬದಲಾವಣೆಯ ನಾಯಕರಾಗಲು ಬಯಸುವವರಿಗೆ ಸಬಲೀಕರಿಸುವ ಉದ್ದೇಶ ಹೊಂದಿದೆ. 640ಕ್ಕೂ ಹೆಚ್ಚು ಫೆಲೋಗಳು 2024 ಸಮೂಹ ಸೇರಿದ್ದು ಈ ಕಾರ್ಯಕ್ರಮದ ಬೆಳೆಯುತ್ತಿರುವ ಪ್ರಭಾವಕ್ಕೆ ಮತ್ತು ಶಿಕ್ಷಣ- ಸಮಾನತೆಯ ಚಳವಳಿಯ ಪರಿಣಾಮದ ಸದೃಢ ಸಾಕ್ಷಿಯಾಗಿದೆ.

VISTARANEWS.COM


on

Teach for India
Koo

ಬೆಂಗಳೂರು: ಮಕ್ಕಳಿಗೆ ಶೈಕ್ಷಣಿಕ ಸಮಾನತೆ ತರಲು ಶ್ರಮಿಸುತ್ತಿರುವ ಟೀಚ್ ಫಾರ್ ಇಂಡಿಯಾ (Teach for India) ತನ್ನ 2025ರ ಫೆಲೋಶಿಪ್ ಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಸೆಪ್ಟೆಂಬರ್ 1, 2024. ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಎರಡು ವರ್ಷದ, ಪೂರ್ಣಕಾಲಿಕ ಫೆಲೋಶಿಪ್ ಕಾರ್ಯಕ್ರಮವಾಗಿದ್ದು ಶೈಕ್ಷಣಿಕ ವಲಯದಲ್ಲಿ ಆಸಕ್ತಿಯುಳ್ಳ ಮತ್ತು ಬದಲಾವಣೆಯ ನಾಯಕರಾಗಲು ಬಯಸುವವರಿಗೆ ಸಬಲೀಕರಿಸುವ ಉದ್ದೇಶ ಹೊಂದಿದೆ. 640ಕ್ಕೂ ಹೆಚ್ಚು ಫೆಲೋಗಳು 2024 ಸಮೂಹ ಸೇರಿದ್ದು ಈ ಕಾರ್ಯಕ್ರಮದ ಬೆಳೆಯುತ್ತಿರುವ ಪ್ರಭಾವಕ್ಕೆ ಮತ್ತು ಶಿಕ್ಷಣ- ಸಮಾನತೆಯ ಚಳವಳಿಯ ಪರಿಣಾಮದ ಸದೃಢ ಸಾಕ್ಷಿಯಾಗಿದೆ.

ಈ ಫೆಲೋಶಿಪ್ ಅರ್ಜಿ ಪ್ರಕ್ರಿಯೆ ಅತ್ಯಂತ ಎಚ್ಚರದಿಂದ ಆಯ್ಕೆ ಮಾಡಲಾಗುತ್ತದೆ ಮತ್ತು ಭಾರತದ ಅತ್ಯಂತ ಉಜ್ವಲ ಮತ್ತು ಭರವಸೆಯ ವ್ಯಕ್ತಿಗಳ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಆಯ್ದ ಫೆಲೋಗಳು ಕಠಿಣ ತರಬೇತಿ ಕಾರ್ಯಕ್ರಮ ಪಡೆಯುತ್ತಾರೆ ಅದರಲ್ಲಿ ಅವರು ಶಿಕ್ಷಣ ವ್ಯವಸ್ಥೆಯನ್ನು ಅದರ ಬೇರುಮಟ್ಟದಿಂದ ಅರ್ಥ ಮಾಡಿಕೊಳ್ಳಲು ಪ್ರೇರಣೆ ನೀಡಲಾಗುತ್ತದೆ.

ಇದನ್ನೂ ಓದಿ : Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ನ ವಿಶಿಷ್ಟ ಆಯಾಮವೆಂದರೆ ಪ್ರಸ್ತುತ ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರಿವರ್ತನೀಯ ಬದಲಾವಣೆ ತರುವ ಅವಕಾಶ. ಇದು ಅವರಿಗೆ ನಾಯಕತ್ವ, ಸಮಸ್ಯೆ ಪರಿಹರಿಸುವುದು ಮತ್ತು ನಿಜ ಜೀವನದ ಸವಾಲುಗಳನ್ನು ಎದುರಿಸುವ ಹಲವು ಆಯಾಮಗಳ ಕುರಿತು ಒಳನೋಟಗಳನ್ನು ನೀಡುತ್ತದೆ ಅದು ಅವರ ಒಟ್ಟಾರೆ ವೃತ್ತಿಯ ಪ್ರಗತಿಗೆ ಮಹತ್ತರ ಬದಲಾವಣೆ ತರುತ್ತದೆ.

ಟೀಚ್ ಫಾರ್ ಇಂಡಿಯಾ ಫೆಲೋಶಿಪ್ ಕುರಿತು ಹೆಚ್ಚು ತಿಳಿಯಲು ಮತ್ತು ಆಯ್ಕೆ ಪ್ರಕ್ರಿಯೆಗೆ ಈ ಕೆಳಕಂಡ ಲಿಂಕ್ ಗಳಿಗೆ ಭೇಟಿ ನೀಡಿ:

Continue Reading
Advertisement
Hardik Pandya
ಪ್ರಮುಖ ಸುದ್ದಿ2 mins ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ57 mins ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ1 hour ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ2 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ2 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ2 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

RBI Fine
ದೇಶ2 hours ago

RBI Fine: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಆರ್‌ಬಿಐ 1.31 ಕೋಟಿ ರೂ. ದಂಡ; ಕಾರಣ ಹೀಗಿದೆ

Namma Metro
ಕರ್ನಾಟಕ2 hours ago

Namma Metro: ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ನಾಳೆಯಿಂದ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

Viral Video
ವೈರಲ್ ನ್ಯೂಸ್2 hours ago

Viral Video: ಆಧಾರ್ ಕಾರ್ಡ್ ಫೋಟೋಗೆ ಸುಂದರ ಪೋಸ್ ಕೊಟ್ಟು ಮನ ಗೆದ್ದ ಪುಟಾಣಿ! ನಿಮಗೇನು ಅನಿಸಿತು?

Brain Eating Amoeba
ಆರೋಗ್ಯ2 hours ago

Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ5 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ7 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ7 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ9 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ11 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು12 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು12 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ17 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌