Ester Noronha: ನಾಳೆ ತೆರೆಗೆ ಬರಲಿದೆ ಎಸ್ತರ್ ನರೋನ್ಹಾ ಹೊಸ ಕನಸು ‘ದಿ ವೆಕೆಂಟ್ ಹೌಸ್’ ರಿಲೀಸ್ - Vistara News

South Cinema

Ester Noronha: ನಾಳೆ ತೆರೆಗೆ ಬರಲಿದೆ ಎಸ್ತರ್ ನರೋನ್ಹಾ ಹೊಸ ಕನಸು ‘ದಿ ವೆಕೆಂಟ್ ಹೌಸ್’ ರಿಲೀಸ್

Ester Noronha: ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಈ ಬ್ಯೂಟಿ ‘ದಿ ವೆಕೆಂಟ್ ಹೌಸ್’ ಸಿನಿಮಾ ನಿರ್ದೇಶಿಸಿ, ನಟಿಸಿರುವುದರ ಜತೆಗೆ ಸಂಗೀತ ನಿರ್ದೇಶನ, ನಿರ್ಮಾಣ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

VISTARANEWS.COM


on

Ester Noronha the venkat House cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹುಭಾಷಾ ನಟಿ ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ʻದಿ ವೆಕೆಂಟ್ ಹೌಸ್ʼ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಕಾಣಲಿದೆ. ಈಗಾಗಲೇ ಚಿತ್ರದ ಟ್ರೈಲರ್‌ ಹಾಗೂ ಹಾಡುಗಳು ಭಾರೀ ಸದ್ದು ಮಾಡಿದ್ದು, ಪ್ರೇಕ್ಷಕರ ಗಮನಸೆಳೆದಿವೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’, ‘ಲೋಕಲ್ ಟ್ರೈನ್’, ‘ಲಂಕೆ’ ಇನಾಮ್ದಾರ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಈ ಬ್ಯೂಟಿ ‘ದಿ ವೆಕೆಂಟ್ ಹೌಸ್’ ಸಿನಿಮಾ ನಿರ್ದೇಶಿಸಿ, ನಟಿಸಿರುವುದರ ಜತೆಗೆ ಸಂಗೀತ ನಿರ್ದೇಶನ, ನಿರ್ಮಾಣ ಜವಾಬ್ದಾರಿಯನ್ನು ಕೂಡ ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನರೋನ್ಹಾ ಹೊಸ ಕನಸ್ಸಿಗೆ ಬರೋಬ್ಬರಿ 75 ಥಿಯೇಟರ್‌ನಲ್ಲಿ ಬಿಡುಗಡೆಯಾಗಲಿದೆ.

‘ದಿ ವೆಕೆಂಟ್ ಹೌಸ್’ ಸಿನಿಮಾ ಕನ್ನಡ ಹಾಗೂ ಕೊಂಕಣಿ ಭಾಷೆಯಲ್ಲಿ ಮೂಡಿಬಂದಿದೆ. ಚಿತ್ರಕ್ಕೆ ನರೇಂದ್ರ ಗೌಡ ಛಾಯಾಗ್ರಹಣವಿದ್ದರೆ, ವಿಜಯ್ ರಾಜ್ ಸಂಕಲನವಿದೆ. ‘ದಿ ವೆಕೆಂಟ್ ಹೌಸ್’ ಸಿನಿಮಾವನ್ನು ಬಹುತೇಕ ಮಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಖಾಲಿ ಮನೆಯ ಸುತ್ತ ನಡೆಯುವ ಘಟನೆ ಆಧರಿತ ಸಿನಿಮಾ ಮಾಡಲಾಗಿದೆ.

ಎಸ್ತರ್‌ ನರೋನ್ಹಾ ಮಂಗಳೂರಿನವರಾದರು. ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಕನ್ನಡ ಸಿನಿಮಾ ‘ಉಸಿರಿಗಿಂತ ನೀನೇ ಹತ್ತಿರ’ ಎಂಬ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಅನುಪಮ್ ಖೇರ್ ನಟನಾ ಶಾಲೆಯಲ್ಲಿ ತರಬೇತಿ ಪಡೆದು ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಎಸ್ತರ್ ಬಳಿಕ ತೆಲುಗು, ತುಳು ಸಿನಿಮಾಗಳಲ್ಲೂ ನಟಿಸಿದ್ದಾರೆ.

ಇದನ್ನೂ ಓದಿ: Ester Noronha: ನಟಿ ಎಸ್ತರ್ ನರೋನ್ಹಾ ಈಗ ನಿರ್ದೇಶಕಿ; ನ.17ಕ್ಕೆ ‘ದಿ ವೆಕೆಂಟ್ ಹೌಸ್’ ಚಿತ್ರ ರಿಲೀಸ್

ಇಷ್ಟು ವರ್ಷದ ನಟನೆ ಅನುಭವವನ್ನು ಧಾರೆ ಎರೆದು ದಿ ವೆಕೆಂಟ್ ಹೌಸ್ ಸಿನಿಮಾ ನಿರ್ದೇಶಿಸಿ ನಟಿಸಿ ತಮ್ಮದೇ ಜಾನೆಟ್ ನೊರೊನ್ಹಾ ಪ್ರೊಡಕ್ಷನ್ಸ್ ನಿರ್ಮಾಣ ಕೂಡ ಮಾಡಿದ್ದಾರೆ. ನಾಯಕಿಯಾಗಿ ಗೆದ್ದಿರುವ ಈ ಬ್ಯೂಟಿ ನಿರ್ದೇಶಕಿಯಾಗಿಯೂ ಸ್ಯಾಂಡಲ್ ವುಡ್ ನಲ್ಲಿ ನೆಲೆ ನಿಲ್ಲುವಂತಾಗಲಿ. ಅಂದಹಾಗೇ ದಿ ವೆಕೆಂಟ್ ಹೌಸ್ ಸಿನಿಮಾವನ್ನು ಚಂದನ್ ಫಿಲ್ಮಂಸ್ ರಾಜ್ಯಾದ್ಯಂತ ಬಿಡುಗಡೆ ಮಾಡಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Ram Pothineni: ರಾಮ್ ಪೋತಿನೇನಿ ಅಭಿನಯದ ʻಡಬಲ್ ಇಸ್ಮಾರ್ಟ್ʼ ಬಿಡುಗಡೆಗೆ‌ ಮುಹೂರ್ತ ಫಿಕ್ಸ್!

Ram Pothineni: ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ.

VISTARANEWS.COM


on

Double iSmart to release on August 15
Koo

ಬೆಂಗಳೂರು: ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ನಟ ರಾಮ್ ಪೋತಿನೇನಿ (Ram Pothineni) ಕಾಂಬಿನೇಷನ್ ಮೇಲೆ ಸಿನಿಪ್ರಿಯರಿಗೆ ಭಾರಿ ನಿರೀಕ್ಷೆ ಇದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆಯೇ ‘ಡಬಲ್ ಇಸ್ಮಾರ್ಟ್’ ಚಿತ್ರದ ಟೀಸರ್​ ಮೂಡಿಬಂದಿದೆ. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ‌ ನಿಗದಿಯಾಗಿದೆ. ಆಗಸ್ಟ್ 15ಕ್ಕೆ ಡಬಲ್ ಇಸ್ಮಾರ್ಟ್ ಚಿತ್ರ ತೆರೆಗೆ ಬರಲಿದೆ.

ಸೌತ್​ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್​ ಇಸ್ಮಾರ್ಟ್​’ ಚಿತ್ರದಲ್ಲೂ ವಿಲನ್​ ಆಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ಕಾವ್ಯಾ ಥಾಪರ್ ನಟಿಸಿದ್ದಾರೆ.

ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್​ ಇಸ್ಮಾರ್ಟ್​’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಪುರಿ ಕನೆಕ್ಟ್ಸ್​’ ಬ್ಯಾನರ್ ಮೂಲಕ ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ.

ಈ‌ ಮೊದಲ ಬಂದ ಈ ಚಿತ್ರದ ಮೊದಲ ಸರಣಿ ಸಿನಿಮಾ 2019 ರಲ್ಲಿ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರ್ತಿದೆ. ಟಾಲಿವುಡ್‌ನಲ್ಲಿ ಈಗಲೇ ಒಂದು ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ ಅಂತ ಹೇಳಬಹುದು.

ಇದನ್ನೂ ಓದಿ: Ram Pothineni: ಡೈನಾಮಿಕ್ ಸ್ಟಾರ್ ರಾಮ್‌ – ಸಂಜಯ್ ದತ್ ಭರ್ಜರಿ ಜುಗಲ್ಬಂದಿ: `ಡಬಲ್ ಇಸ್ಮಾರ್ಟ್‘ ಟೀಸರ್‌ ಔಟ್‌!

ಕಾವ್ಯಾ ಥಾಪರ್ ನಾಯಕಿಯಾಗಿ ನಟಿಸಿದ್ದು, ಸಂಜಯ್ ದತ್ ಖಳನಾಯಕನಾಗಿ ತೊಡೆ ತಟ್ಟಿದ್ದಾರೆ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಚಿತ್ರ ಮೂಡಿ ಬರುತ್ತಿದೆ. ಮಣಿ ಶರ್ಮಾ ಸಂಗೀತ ಚಿತ್ರಕ್ಕಿದೆ. ಕ್ರೇಜಿ ಪ್ಯಾನ್ ಇಂಡಿಯನ್ ಪ್ರಾಜೆಕ್ಟ್ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ ಬ್ಯಾನರ್ ನಡಿ ಪೂರಿ ಜಗನ್ನಾಥ್, ಚಾರ್ಮಿ ಕೌರ್ ನಿರ್ಮಾಣದಲ್ಲಿ ಚಿತ್ರ ಅದ್ಧೂರಿಯಾಗಿ ಮೂಡಿಬರುತ್ತಿದೆ.

Continue Reading

ಸ್ಯಾಂಡಲ್ ವುಡ್

V Cinemas: ರಮೇಶ್ ಅರವಿಂದ್ – ಡಾಲಿ ಧನಂಜಯರಿಂದ ‘ವಿ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಉದ್ಘಾಟನೆ

V Cinemas: ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ʻʻಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

V Cinemas multiplex inauguration by dolly dhanjay Ramesh arvind
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ (V Cinemas) ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ “ವಿ ಸಿನಿಮಾಸ್” ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು.‌ ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ಮಾರ್ಸ್ ಸುರೇಶ್, ಮಾಲೀಕರಾದ ಅಜಿತ್ ಜಗದೀಶ್ ಹಾಗೂ ತಂತ್ರಜ್ಞ ಮ್ಯಾಥ್ಯೂ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ವಿತರಕ ಮಾರ್ಸ್ ಸುರೇಶ್ , ʻʻಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯುಳ್ಳ ನಾಲ್ಕು ಆಡಿಗಳು ಇಲ್ಲಿದೆ. ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ದರ ಕೂಡ ಬೇರೆ ಮಲ್ಟಿಪ್ಲೆಕ್ಸ್ ಗಳಿಗಿಂತ ತುಂಬಾ ಕಡಿಮೆ ಇರುತ್ತದೆ. ಮೊದಲ ಪ್ರಾಧಾನ್ಯತೆ ಕನ್ನಡ ಚಿತ್ರಗಳಿಗಿರುತ್ತದೆ. ಇಂದು ಮೊದಲ ಚಿತ್ರವಾಗಿ ಡಾಲಿ ಧನಂಜಯ ಅಭಿನಯದ “ಕೋಟಿ” ಚಿತ್ರ ಪ್ರದರ್ಶನವಾಗಿದೆʼʼ ಎಂದರು.

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಇದನ್ನೂ ಓದಿ: Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಏನೇ ಆಧುನಿಕ ತಂತ್ರಜ್ಞಾನ ಬಂದರೂ ಥಿಯೇಟರ್ ನಲ್ಲಿ ಸಾವಿರಾರು ಜನರ ಮಧ್ಯೆ ಕುಳಿತು ಸಿನಿಮಾ ನೋಡುವ ಅನುಭವವೇ ಬೇರೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ. ಚಿತ್ರಮಂದಿರ ಪ್ರಾರಂಭ ಮಾಡಿರುವ ಮಾಲೀಕರಿಗೆ ಹಾಗೂ ಮಾರ್ಸ್ ಸುರೇಶ್ ಅವರಿಗೆ ಅಭಿನಂದನೆಗಳು ಎಂದರು ರಮೇಶ್ ಅರವಿಂದ್.

ಚಿತ್ರಮಂದಿರಲ್ಲಿ ಸಿನಿಮಾ ನೋಡುವ ಖುಷಿ ಮನೆಯಲ್ಲಿ ನೋಡಿದರೆ ಬರುವುದಿಲ್ಲ.. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರವನ್ನು ನೋಡಿ ಆನಂದಿಸಿದಾಗ, ನಮ್ಮಂತಹ ನಟರಿಗೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರಗಳನ್ನು ನೋಡಿ ಎಂದು ತಿಳಿಸಿದ ಡಾಲಿ ಧನಂಜಯ, “ವಿ ಸಿನಿಮಾಸ್” ಗೆ ಶುಭ ಹಾರೈಸಿದರು.

Continue Reading

ಸ್ಯಾಂಡಲ್ ವುಡ್

Darshan Arrested: ಬಡ್ಡಿ ಕಟ್ಟದವರಿಗೆ ‘ನರಕ’ ಆಗಿತ್ತೇ ಈ ಶೆಡ್? ಇಲ್ಲಿ ನಡೆದಿವೆಯೇ ಇನ್ನಷ್ಟು ಕೊಲೆಗಳು?

Darshan Arrested: ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

VISTARANEWS.COM


on

Darshan Arrested renuka shed like hell more murders here
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ‌ ಮಾಡಿದ ಶೆಡ್ ಮೇಲೆ ಕೂಡ ನೂರೆಂಟು ಅನುಮಾನ ಹುಟ್ಟಿಕೊಂಡಿದ್ದು, ರೇಣುಕಾಸ್ವಾಮಿ ಕೊಲೆ ಮಾಡಿದ ಶೆಡ್ ಇಂದು ಕೂಡಾ ಪೊಲೀಸ್ ವಶಕ್ಕೆ ಇರಲಿದೆ.

ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್‌ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್‌ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.

ಇದನ್ನೂ ಓದಿ: Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಸ್ಯಾಂಡಲ್ ವುಡ್

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Darshan Arrested: ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

Darshan Arrested vinish write special message for darshan fathers day
Koo

ಬೆಂಗಳೂರು: ತಂದೆ – ತಾಯಿ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಅಮೂಲ್ಯವಾದವರು. ಅವರಲ್ಲಿ ನಾವು ಯಾರನ್ನೇ ಕಳೆದುಕೊಂಡರೂ (Darshan Arrested) ಆಘಾತದ ಸಿಡಿಲು ಬಡಿಯುವುದಂತೂ ಖಂಡಿತ. ಹಾಗಾಗಿ ತಂದೆ ತಾಯಿಯ ಋಣ, ಪ್ರೀತಿ, ಮಮತೆ ಯಾವತ್ತೂ ಮರೆಯಲಾಗದು.  ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭ ಕೋರಿದ್ದಾನೆ. ದರ್ಶನ್‌ಗೆ ಒಬ್ಬನೇ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.

ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದಿದ್ದ ದರ್ಶನ್‌ ಪುತ್ರ ವಿನೀಶ್

ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದ.

ಇದನ್ನೂ ಓದಿ: Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದ.

ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ

ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Continue Reading
Advertisement
Petrol Diesel Price
ಕರ್ನಾಟಕ2 seconds ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ21 mins ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ29 mins ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Kannada New Movie Chowkidar pruthvi ambaar
ಸಿನಿಮಾ38 mins ago

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Patna Boat Accident
ದೇಶ39 mins ago

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Sachin Tendulkar
ಕ್ರೀಡೆ52 mins ago

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Petrol Diesel Price
ಪ್ರಮುಖ ಸುದ್ದಿ1 hour ago

Petrol Diesel Price: ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ: ಸಿಎಂ ಸಮರ್ಥನೆ

Child Marriage
ವಿದೇಶ1 hour ago

12ರ ಹರೆಯದ ಮಗಳನ್ನು 5 ಲಕ್ಷ ರೂ.ಗೆ ಮಾರಿ 72 ವರ್ಷದ ವೃದ್ಧನೊಂದಿಗೆ ಮದುವೆ ಮಾಡಿಸಲು ಮುಂದಾದ ಪಾಪಿ ತಂದೆ!

EVM Row
ದೇಶ2 hours ago

EVM Row: ಮೊಬೈಲ್‌ ಬಳಸಿ ಇವಿಎಂ ಅನ್‌ಲಾಕ್‌ ಮಾಡಿದ ಸಂಸದನ ಸಂಬಂಧಿ; ಎಲ್ಲಿ ನಡೆಯಿತು ಮೋಸ?

Vijayalakshmi Darshan Reactivated Instagram Account
ಸ್ಯಾಂಡಲ್ ವುಡ್2 hours ago

Actor Darshan:  ಇನ್​ಸ್ಟಾಗ್ರಾಮ್‌ ಖಾತೆಯನ್ನು ಸಕ್ರಿಯಗೊಳಿಸಿದ ದರ್ಶನ್‌ ಪತ್ನಿ; ಮಾಧ್ಯಮದ ಮುಂದೆ ಬರ್ತಾರಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renuka swamy murder
ಚಿತ್ರದುರ್ಗ21 mins ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

ಟ್ರೆಂಡಿಂಗ್‌