ಮುಂಗಾರು ಅವಧಿಯ ಭತ್ತದ ಬೆಳೆ ಬಿತ್ತನೆ ಪ್ರದೇಶದಲ್ಲಿ 17% ಇಳಿಕೆ - Vistara News

ಕೃಷಿ

ಮುಂಗಾರು ಅವಧಿಯ ಭತ್ತದ ಬೆಳೆ ಬಿತ್ತನೆ ಪ್ರದೇಶದಲ್ಲಿ 17% ಇಳಿಕೆ

ಕಳೆದ ಜೂನ್‌ನಲ್ಲಿ ದೇಶದ ನಾನಾ ಕಡೆಗಳಲ್ಲಿ ಮುಂಗಾರಿನ ಕೊರತೆ ಉಂಟಾಗಿದ್ದರಿಂದ ಭತ್ತದ ಬಿತ್ತನೆಯಲ್ಲಿ ಇಳಿಕೆ ಉಂಟಾಗಿದೆ. ಸ್ವಾರಸ್ಯವೆಂದರೆ ಖಾದ್ಯ ತೈಲ ಬೀಜಗಳ ಬಿತ್ತನೆ ಚುರುಕಾಗಿದೆ.

VISTARANEWS.COM


on

paddy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮುಂಗಾರು ಅವಧಿಯ ಭತ್ತದ ಬಿತ್ತನೆ ಪ್ರದೇಶದಲ್ಲಿ ೧೭% ಇಳಿಕೆಯಾಗಿದೆ.

ಕಳೆದ ಜೂನ್‌ ಅವಧಿಯಲ್ಲಿ ಮುಂಗಾರು ಮಳೆಯ ಆರಂಭ ವಿಳಂಬವಾಗಿತ್ತು. ಇದರ ಪರಿಣಾಮ ಬಿತ್ತನೆಯ ಪ್ರದೇಶದಲ್ಲೂ ಇಳಿಕೆಯಾಗಿದೆ. ಹೀಗಿದ್ದರೂ, ಇತ್ತೀಚೆಗೆ ಉತ್ತಮ ಮಳೆಯ ಹಿನ್ನೆಲೆಯಲ್ಲಿ ಬಿತ್ತನೆ ಪ್ರದೇಶ ಮತ್ತಷ್ಟು ಚೇತರಿಕೆಯಾಗುವ ನಿರೀಕ್ಷೆ ಇದೆ. ಆದರೆ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇಳಿಕೆಯಾಗಿದೆ.

ಭತ್ತದ ಬಿತ್ತನೆ ಪ್ರದೇಶದಲ್ಲಿ ಇಳಿಕೆ ಆಗಿದ್ದರೂ, ತೈಲ ಬೀಜಗಳ ಬಿತ್ತನೆಯಲ್ಲಿ ಗಣನೀಯ ಚೇತರಿಕೆ ಉಂಟಾಗಿದೆ. ಕಳೆದ ಜುಲೈ ೮ರಂದು ೨೦% ಇಳಿಕೆಯಾಗಿದ್ದ ತೈಲ ಬೀಜಗಳ ಬಿತ್ತನೆ ಪ್ರದೇಶದಲ್ಲಿ ಜುಲೈ ೧೫ರ ವೇಳೆಗೆ ೭% ಚೇತರಿಕೆ ಉಂಟಾಗಿದೆ. ೨೦೨೧ರ ಇದೇ ಅವಧಿಯನ್ನು ಹೋಲಿಸಿ ಈ ಅಂಕಿ ಅಂಶಗಳನ್ನು ನೀಡಲಾಗಿದೆ.

ಸರ್ಕಾರ ತೈಲ ಬೀಜಗಳ ಉತ್ಪಾದನೆ ಮತ್ತು ವಿತರಣೆಗೆ ಆದ್ಯತೆ ನೀಡಿದೆ. ಖಾದ್ಯ ತೈಲ ಆಮದನ್ನು ಗಣನೀಯವಾಗಿ ತಗ್ಗಿಸುವುದು ಇದರ ಉದ್ದೇಶವಾಗಿದೆ. ಆಮದು ಕಡಿಮೆಯಾದರೆ, ಅದಕ್ಕೆ ತಗಲುವ ವೆಚ್ಚ ಕೂಡ ಇಳಿಕೆಯಾಗಲಿದೆ.

ಜುಲೈ ೯-೧೫ರ ಅವಧಿಯಲ್ಲಿ ಒಟ್ಟಾರೆಯಾಗಿ ಬಿತ್ತನೆಯಲ್ಲಿ ಸುಧಾರಣೆ ದಾಖಲಾಗಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ವಾಯುವ್ಯ ಮತ್ತು ಪೂರ್ವ ಹಾಗೂ ಈಶಾನ್ಯ ಭಾರತದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಜೂನ್‌ನಲ್ಲಿ ಒಟ್ಟಾರೆ ಮುಂಗಾರು ಮಳೆಯ ೮% ಕೊರತೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Uttara Kannada News: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್‌) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 41 ಕೋಟಿ ರೂಪಾಯಿ ಜಮಾವಾಗಿದೆ. ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

VISTARANEWS.COM


on

35 crore crop damage insurance deposit for farmers of Yallapur constituency says MLA Shivaram Hebbar
Koo

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ (Uttara Kannada News) ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ (ಕೆ.ಡಿ.ಸಿ.ಸಿ. ಬ್ಯಾಂಕ್‌) 2023-24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 35 ಕೋಟಿ ರೂಪಾಯಿ ಜಮೆಯಾಗಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ, ಗೋವಿನ ಜೋಳದ ಬೆಳೆಗೆ ಹಾನಿಯಾಗಿ ರೈತ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈಗ ಬೆಳೆ ವಿಮೆಯ ಬಿಡುಗಡೆಯಿಂದಾಗಿ ಭತ್ತ, ಗೋವಿನ ಜೋಳ ಬೆಳೆದು ಜೀವನ ಜೀವನ ಸಾಗಿಸುತ್ತಿದ್ದ ಹಲವಾರು ರೈತರಿಗೆ ಆರ್ಥಿಕ ಶಕ್ತಿ ಬಂದಂತಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ. ಹೀಗೆ ಒಟ್ಟು 35 ಕೋಟಿ ರೂಪಾಯಿ ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ವಿಮೆ ಪರಿಹಾರವನ್ನು ನೀಡಲು ಸಹಕರಿಸಿದ ಕೃಷಿ ಇಲಾಖೆಯ ಅಧಿಕಾರಿಗೆ, ವಿಮೆ ಕಂಪನಿಯ ಸಿಬ್ಬಂದಿಗಳಿಗೆ ಹಾಗೂ ಸರ್ಕಾರಕ್ಕೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ: Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

ಸರ್ಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನವನ್ನು ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರವನ್ನು ಒದಗಿಲಾಗಿದೆ. ವಿಮೆ ಕಂಪನಿಯ ಮಾನದಂಡದ ಅನ್ವಯವಾಗಿ ಉತ್ತರ ಕನ್ನಡ ಜಿಲ್ಲೆಯ ಭತ್ತ ಹಾಗೂ ಗೋವಿನ ಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ (ಕೆ.ಡಿ.ಸಿ.ಸಿ ಬ್ಯಾಂಕ್‌) ನ ಮೂಲಕವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Yadgiri News: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ರೈತ ಮಲ್ಲಿಕಾರ್ಜುನರೆಡ್ಡಿಗೌಡ ತಮ್ಮ ಐದು ಎಕರೆ ಭೂಮಿಯಲ್ಲಿ ಯಾವುದೇ ಕ್ರಿಮಿನಾಶಕ ಬಳಸದೇ ಸಾವಯವ ಕೃಷಿ ಮಾಡಿ ಮಾವು ಬೆಳೆದು ಯಶಸ್ವಿಯಾಗಿದ್ದಾರೆ. ಬರಡು ಭೂಮಿಯಲ್ಲಿ ಏನಾದರು ಕೃಷಿ ಮಾಡಿ ಯಶಸ್ಸು ಸಾಧಿಸಬೇಕೆಂದು ಕನಸು ಕಟ್ಟಿಕೊಂಡಿದ್ದ‌ ರೈತ, ಬಂಪರ್ ಮಾವು ಬೆಳೆದು ಇತರರಿಗೆ ಮಾದರಿಯಾಗಿದ್ದಾನೆ.

VISTARANEWS.COM


on

Bilhara village farmer grew bumper mango on barren land
Koo

ಯಾದಗಿರಿ: ಆ ಭೂಮಿ ಕೃಷಿ (Agriculture) ಮಾಡಲು ಯೋಗ್ಯವಿಲ್ಲದಂತಾಗಿತ್ತು. ಯಾವ ಬೆಳೆಯೂ ಬೆಳೆಯುತ್ತಿರಲಿಲ್ಲ. ಇಂತಹ ಭೂಮಿಯಲ್ಲಿ ಏನಾದರು ಕೃಷಿ ಮಾಡಿ ಯಶಸ್ಸು ಸಾಧಿಸಬೇಕೆಂದು ಕನಸು ಕಟ್ಟಿಕೊಂಡಿದ್ದ‌ ರೈತ, ಬರಡು ಭೂಮಿಯಲ್ಲಿ ಬಂಪರ್ ಮಾವು ಬೆಳೆದು ಇತರರಿಗೆ (Yadgiri News) ಮಾದರಿಯಾಗಿದ್ದಾನೆ.

ಹೌದು, ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ರೈತ ಮಲ್ಲಿಕಾರ್ಜುನರೆಡ್ಡಿ ಗೌಡ ತಮ್ಮ ಐದು ಎಕರೆ ಭೂಮಿಯಲ್ಲಿ ಯಾವುದೇ ಕ್ರಿಮಿನಾಶಕ ಬಳಸದೇ ಸಾವಯವ ಕೃಷಿ ಮಾಡಿ ಮಾವು ಬೆಳೆದು ಯಶಸ್ವಿಯಾಗಿದ್ದಾರೆ.

ರೈತ ಮಲ್ಲಿಕಾರ್ಜುನರೆಡ್ಡಿಗೌಡ ಅವರ ಐದು ಎಕರೆ ಭೂಮಿಯಲ್ಲಿ ಯಾವುದೇ ಬೇರೆ ಬೆಳೆ ಬೆಳೆಯುತ್ತಿರಲಿಲ್ಲ. ಹೀಗಾಗಿ ಮಾವು ಬೆಳೆಯಲು ಯೋಜನೆ ರೂಪಿಸಿ, 5 ಎಕರೆ ಭೂಮಿಯಲ್ಲಿ 2011ರಲ್ಲಿ 500 ಮಾವಿನ ಗಿಡಗಳನ್ನು ನಾಟಿ ಮಾಡಿದ್ದು, ಮೂರು ವರ್ಷಗಳ ನಂತರ ಮಾವು ಉತ್ತಮ ಫಲ ಕೊಡುತ್ತಿದೆ. ಇನ್ನು ನೀರಿಗಾಗಿ ಭೀಮಾನದಿ ಮೂಲಕ ಪೈಪ್ ಲೈನ್ ಹಾಕಿಕೊಂಡು ಹಾಗೂ ಜಮೀನಿನಲ್ಲಿ ಒಂದು ಬೋರ್‌ವೆಲ್ ಕೊರೆಸಿ ಮಾವಿನ ಗಿಡಕ್ಕೆ ನೀರು ಹರಿಸಲಾಗುತ್ತಿದೆ.

ಇದನ್ನೂ ಓದಿ: Vijayanagara News: ವಿಜೃಂಭಣೆಯಿಂದ ನಡೆದ ಉಜ್ಜಯಿನಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ

ಸಾವಯವ ಗೊಬ್ಬರ ಬಳಕೆ

ಮಾವಿನ ಬೆಳೆಗೆ ಯಾವುದೇ ಕ್ರಿಮಿನಾಶಕ ಬಳಕೆ ಮಾಡಿಲ್ಲ. ಸಾವಯವ ಗೊಬ್ಬರ ಬಳಸಿ, ಮಾವು ಬೆಳೆದಿದ್ದಾರೆ. ಕೇಸರಿ, ರಸಪುರಿ, ಬೆನಿಶ್ಯಾನ್, ಮಲ್ಲಿಕಾ ಸೇರಿದಂತೆ ಹಲವು ತಳಿಯ ಮಾವು ಬೆಳೆದಿದ್ದು, ಉತ್ತಮ ಫಸಲು ಬಂದಿದೆ.

ಈ ಕುರಿತು ರೈತ ಮಲ್ಲಿಕಾರ್ಜುನರೆಡ್ಡಿ ಗೌಡ ಮಾತನಾಡಿ, ಬರಡುಭೂಮಿಯಲ್ಲಿ ಯಾವುದೇ ಬೆಳೆ ಬೆಳೆಯುತ್ತಿರಲಿಲ್ಲ. 5 ಎಕರೆ ಭೂಮಿಯಲ್ಲಿ 500 ಕ್ಕೂ ಹೆಚ್ಚು ಮಾವು ಬೆಳೆದಿದ್ದು, ಯಾವುದೇ ಕ್ರಿಮಿನಾಶಕ ಹಾಕುವುದಿಲ್ಲ. ಸಾವಯವ ಗೊಬ್ಬರ ಬಳಸಿ ಮಾವು ಬೆಳೆಯಲಾಗಿದೆ. ಈಗ ಹೆಚ್ಚು ಮಾವು ಫಸಲು ಬಂದಿದೆ ಎಂದು ತಿಳಿಸಿದ್ದಾರೆ.

ಮಾವಿನ ಹಣ್ಣುಗಳು ಪೌಷ್ಟಿಕಾಂಶವುಳ್ಳ ಹಣ್ಣು ಆಗಿದ್ದು, ಅದರಲ್ಲೂ ಸಾವಯವ ಮಾವಿನ ಹಣ್ಣಿಗೆ ಭಾರೀ ಬೇಡಿಕೆ ಇದೆ. ಇನ್ನು ಸಾವಯವ ಮಾವು ಬೆಳೆದ ಹಿನ್ನೆಲೆಯಲ್ಲಿ ರೈತ, ಮಾವು ಮಾರಾಟ ಮಾಡಲು ಯಾವುದೇ ಮಾರುಕಟ್ಟೆಗೆ ಅಲೆದಾಡುವುದು ತಪ್ಪಿದೆ. ಖರೀದಿದಾರರೇ ಖುದ್ದಾಗಿ ಜಮೀನಿಗೆ ಆಗಮಿಸಿ ಒಂದು ಸ್ಯಾಂಪಲ್ ಮಾವಿನ ಹಣ್ಣು ಸೇವಿಸಿ, ಮಾವು ಖರೀದಿ ಮಾಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಮಾವಿನ ಹಣ್ಣುಗಳನ್ನು ಖರೀದಿ ಮಾಡಿ, ಬಳಿಕ ಅವುಗಳನ್ನು ಗುಜರಾತ್, ಮುಂಬೈ, ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕಳುಹಿಸುತ್ತಾರೆ.

ಇದನ್ನೂ ಓದಿ: Moringa Leaves Health Benefits: ನುಗ್ಗೆ ಸೊಪ್ಪು ಏಕೆ ತಿನ್ನಬೇಕು? ಏನಿದೆ ಇದರಲ್ಲಿ ವಿಶೇಷ ಗುಣ?

ವಡಗೇರಾ ತಾಲೂಕಿನ ಬಿಳ್ಹಾರ ಗ್ರಾಮದ ಈ ಸಾವಯವ ಮಾವಿನ ಹಣ್ಣಿಗೆ ಭಾರೀ ಡಿಮ್ಯಾಂಡ್ ಇದ್ದು, ರೈತ ಮಲ್ಲಿಕಾರ್ಜುನರೆಡ್ಡಿಗೌಡ ಉತ್ತಮ ಆದಾಯ ಗಳಿಸಿದ್ದಾರೆ.

Continue Reading

ವಿಜಯನಗರ

Vijayanagara News: ವಿಜಯನಗರ ಜಿಲ್ಲೆಗೆ 130 ಕೋಟಿ ರೂ. ಬೆಳೆ ಪರಿಹಾರ: ಡಿಸಿ

Vijayanagara News: ಹೊಸಪೇಟೆ ತಾಲೂಕಿನ 3,880 ರೈತರಿಗೆ 3,45,51,946 ರೂ., ಹಗರಿಬೊಮ್ಮನಹಳ್ಳಿ ತಾಲೂಕಿನ 15,813 ರೈತರಿಗೆ 19,24,12,902 ರೂ., ಕೂಡ್ಲಿಗಿ ತಾಲೂಕಿನ 19,010 ರೈತರಿಗೆ 23,12,23,100 ರೂ., ಕೊಟ್ಟೂರು ತಾಲೂಕಿನ 12,833 ರೈತರಿಗೆ 14,04,56,255 ರೂ., ಹಡಗಲಿ ತಾಲೂಕಿನ 20,925 ರೈತರಿಗೆ 26,93,01,607 ರೂ. ಮತ್ತು ಹರಪನಹಳ್ಳಿ ತಾಲೂಕಿನ 37,082 ರೈತರಿಗೆ 42,28,62,000 ರೂ. ನಂತೆ ವಿಜಯನಗರ ಜಿಲ್ಲೆಯಲ್ಲಿ ತಾಲೂಕುವಾರು ಬೆಳೆ ಪರಿಹಾರ ಮೊತ್ತ ಸಂದಾಯವಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌ ತಿಳಿಸಿದ್ದಾರೆ.

VISTARANEWS.COM


on

130 crore crop compensation amount paid to Vijayanagara district says DC m S Diwakar
ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌.
Koo

ಹೊಸಪೇಟೆ: 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಜಯನಗರ ಜಿಲ್ಲೆಯಲ್ಲಿ (Vijayanagara News) ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2000 ರೂ. ವರೆಗೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ, ಸರ್ಕಾರದಿಂದ ಆದೇಶಿಸಲಾಗಿದೆ.

ಅದರಂತೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇಲೆ ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದ್ದು, ವಿಜಯನಗರ ಜಿಲ್ಲೆಯಲ್ಲಿ ಈವರೆಗೂ ಹತ್ತು ಹಂತಗಳಲ್ಲಿ ಒಟ್ಟು 1,09,543 ರೈತರಿಗೆ 130,08,07,810 ರೂ. ಇನ್ಪುಟ್ ಸಬ್ಸಿಡಿಯನ್ನು ಜಮಾ ಮಾಡಲು ಅನುಮೋದನೆ ನೀಡಲಾಗಿದ್ದು, ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮಾ ಮಾಡಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ICMR Dietary Guidelines: ನಿಮ್ಮ ಆರೋಗ್ಯ ಚೆನ್ನಾಗಿರಬೇಕೆ? ತಜ್ಞ ಸಮಿತಿಯ ಈ ಆಹಾರ ಸಲಹೆ ಪಾಲಿಸಿ

ಬಾಕಿ ಉಳಿದ ಅರ್ಹ ರೈತರಿಗೆ ಹಂತ-ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಜಮಾ ಮಾಡಲಾಗುವುದು. ಈಗಾಗಲೇ ಅನುಮೋದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯಿತಿಗಳು ಹಾಗೂ ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಸೀಲ್ದಾರರ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರಚುರಪಡಿಸಲಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆ ತಾಲೂಕು ಕಚೇರಿ, ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿ, ಕೂಡ್ಲಿಗಿ ತಾಲೂಕು ಕಚೇರಿ, ಕೊಟ್ಟೂರು ತಾಲೂಕು ಕಚೇರಿ, ಹಡಗಲಿ ತಾಲೂಕು ಕಚೇರಿ ಮತ್ತು ಹರಪನಹಳ್ಳಿ ತಾಲೂಕು ಕಚೇರಿಗಳಲ್ಲಿನ ಸಹಾಯವಾಣಿಗಳಿಗೆ ಕಚೇರಿ ಸಮಯದಲ್ಲಿ ರೈತರು ಫ್ರೂಟ್ಸ್ ಐಡಿ ಸಂಖ್ಯೆಯೊಂದಿಗೆ ಸಂಬಂಧಪಟ್ಟ ತಾಲೂಕು ಕಚೇರಿಯ ಸಹಾಯವಾಣಿಗೆ ಭೇಟಿ ನೀಡಿ ಬೆಳೆ ಪರಿಹಾರ ಮಾಹಿತಿ ಪಡೆಯಬಹುದಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಇದನ್ನೂ ಓದಿ: Dwarka Tour: ದ್ವಾರಕೆಗೆ ಹೋದಾಗ ಏನೇನು ನೋಡಬಹುದು?

ತಾಲೂಕುವಾರು ಮಾಹಿತಿ

ಹೊಸಪೇಟೆ ತಾಲೂಕಿನ 3,880 ರೈತರಿಗೆ 3,45,51,946 ರೂ., ಹಗರಿಬೊಮ್ಮನಹಳ್ಳಿ ತಾಲೂಕಿನ 15,813 ರೈತರಿಗೆ 19,24,12,902 ರೂ., ಕೂಡ್ಲಿಗಿ ತಾಲೂಕಿನ 19,010 ರೈತರಿಗೆ 23,12,23,100 ರೂ., ಕೊಟ್ಟೂರು ತಾಲೂಕಿನ 12,833 ರೈತರಿಗೆ 14,04,56,255 ರೂ., ಹಡಗಲಿ ತಾಲೂಕಿನ 20,925 ರೈತರಿಗೆ 26,93,01,607 ರೂ. ಮತ್ತು ಹರಪನಹಳ್ಳಿ ತಾಲೂಕಿನ 37,082 ರೈತರಿಗೆ 42,28,62,000 ರೂ. ನಂತೆ ವಿಜಯನಗರ ಜಿಲ್ಲೆಯಲ್ಲಿ ತಾಲೂಕುವಾರು ಬೆಳೆ ಪರಿಹಾರ ಮೊತ್ತ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಕೃಷಿ

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Cocoa Price: ಹತ್ತಾರು ವರ್ಷಗಳಿಂದ ಒಂದೇ ಬೆಲೆಯಲ್ಲಿ ಸ್ಥಿರವಾಗಿದ್ದ ಕೋಕೋ ಬೆಲೆ ದಾಖಲೆಯ ಮಟ್ಟಕ್ಕೆ ಏರುತ್ತಿದೆ. 2022ರ ವರೆಗೆ ಹಸಿ ಕೋಕೋ (ಕೊಕ್ಕೋ) ಧಾರಣೆ 40 ರೂ. ಆಸುಪಾಸಿನಲ್ಲಿತ್ತು. ಅಲ್ಲಿಂದ ಹಿಂದಕ್ಕೆ 10-12 ವರ್ಷಗಳಲ್ಲಿ ಈ ಕೋಕೋ ಬೆಲೆ 30-40 ರೂ.ಯಲ್ಲೇ ಸ್ಥಿರವಾಗಿ ನಿಂತಿತ್ತು. ಎಲ್ಲ ಉಪ ಬೆಳೆಗಳ ದರ ಏರು ಮುಖ ಕಂಡಿದ್ದರೂ, ಕೋಕೋ ಧಾರಣೆ ಮಾತ್ರ 40 ರೂ. ಆಚೆ ಈಚೆ ಸುತ್ತುತ್ತಿತ್ತು. ಇದೀಗ ಬೆಲೆ ಬರೋಬರಿ 320 ರೂ. ಅಂದರೆ 800% ಹೆಚ್ಚಳವಾಗಿದೆ. ಇನ್ನೂ ಏರಿಕೆ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ.

VISTARANEWS.COM


on

Cocoa Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಹತ್ತಾರು ವರ್ಷಗಳಿಂದ ಒಂದೇ ಬೆಲೆಯಲ್ಲಿ ಸ್ಥಿರವಾಗಿದ್ದ ಕೋಕೋ ಬೆಲೆ (Cocoa Prices) ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ಏರುತ್ತಿದೆ. ಪರಣಾಮ, ಅಡಿಕೆ ಬೆಳೆಯ ಜತೆ ಉಪ ಬೆಳೆಯಾಗಿ ಬೆಳೆಯುತ್ತಿದ್ದ ಕೋಕೋದಿಂದ ಒಂದಿಷ್ಟು ರೈತರಿಗೆ ಅನಿರೀಕ್ಷಿತವಾಗಿ ದೊಡ್ಡ ಬೋನಸ್ ದೊರೆತಂತಾಗಿದೆ.

2022ರ ವರೆಗೆ ಹಸಿ ಕೋಕೋ (ಕೊಕ್ಕೋ) ಧಾರಣೆ 40 ರೂ. ಆಸುಪಾಸಿನಲ್ಲಿತ್ತು. ಅಲ್ಲಿಂದ ಹಿಂದಕ್ಕೆ 10-12 ವರ್ಷಗಳಲ್ಲಿ ಈ ಕೋಕೋ ಬೆಲೆ 30-40 ರೂ.ಯಲ್ಲೇ ಸ್ಥಿರವಾಗಿ ನಿಂತಿತ್ತು. ಎಲ್ಲ ಉಪ ಬೆಳೆಗಳ ದರ ಏರು ಮುಖ ಕಂಡಿದ್ದರೂ, ಕೋಕೋ ಧಾರಣೆ ಮಾತ್ರ 40 ರೂ. ಆಚೆ ಈಚೆ ಸುತ್ತುತ್ತಿತ್ತು.

ಕೊಕೋ ಧಾರಣೆ ತೀರಾ ಕುಸಿತ ಕಂಡಾಗ, ಕೊಕೋ ಕೃಷಿಯ ಬಗ್ಗೆ ಮಲೆನಾಡು ಕರಾವಳಿ ಭಾಗದ ಕೃಷಿಕರು ಕೋಕೋವನ್ನು ನಿರ್ಲಕ್ಷಿಸಿದ್ದರು. ಮೂರ್ನಾಲ್ಕು ವರ್ಷಗಳ ಹಿಂದೆ ʼಎಂದೂ ಧಾರಣೆ ಏರದ ಇದು ಲಾಭದಾಯಕವಲ್ಲದ ಬೆಳೆ’ ಎಂಬ ಹಣೆ ಪಟ್ಟಿಯೂ ಕೋಕೋ ಬೆಳೆಗೆ ಅಂಟಿಕೊಂಡಿತ್ತು. ಬೆಲೆ ಇಲ್ಲದ ಕೋಕೋ ಗಿಡಗಳು ಅಡಿಕೆ ತೋಟದಲ್ಲಿ ಇರುವುದೇ ಒಂದು ಸಮಸ್ಯೆ ಅನ್ನುವಂತಾಗಿತ್ತು!

ಜತೆಗೆ ಕೋಕೋ ಹಣ್ಣುಗಳನ್ನು ತಿನ್ನಲು ದಾಂಗುಡಿ ಇಡುತ್ತಿದ್ದ ಮಂಗ, ಅಳಿಲು, ಕೆಲವು ಪಕ್ಷಿಗಳು ಬರಿ ಕೋಕೋ ಹಣ್ಣುಗಳನ್ನು ಹಾಳು ಮಾಡುವುದಲ್ಲದೆ, ಅಡಿಕೆ ಬೆಳೆಯನ್ನೂ ನಾಶ ಮಾಡುತ್ತಿದ್ದವು. ಬೆಲೆಯೂ ಇಲ್ಲದ, ತೊಂದರೆಯೂ ಜಾಸ್ತಿ ಇದ್ದ ಕೋಕೋ ಮರಗಳನ್ನು ಮಲೆನಾಡು ಕರಾವಳಿಯ ನೂರಾರು ಅಡಿಕೆ ಬೆಳೆಗಾರರು ಕಡಿದು, ಅಡಿಕೆ ಮರಗಳಿಗೆ ಮಲ್ಚಿಂಗ್ ಮಾಡಿ ಕೈ ತೊಳೆದುಕೊಂಡಿದ್ದು ಇತಿಹಾಸ. ಈಗ ಅದೇ ರೈತರು ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಕೋಕೋ ಬೆಳೆಯ ಧಾರಣೆ ಅಡಿಕೆ ಮರದ ಎತ್ತರಕ್ಕೆ ಏರುತ್ತಿರುವುದು ಕಂಡು ಅನೇಕ ರೈತರು ಸಂಕಟ ಅನುಭವಿಸುವಂತಾಗಿರುವುದೂ ಸತ್ಯ.

ಕಳೆದ ದಶಕದಲ್ಲಿ ಹಸಿ ಕೋಕೋ 40 ರೂ. ಇದ್ದಿದ್ದು, ಇವತ್ತು ಬರೋಬರಿ 320 ರೂ.ಗೆ ತಲುಪಿದೆ. ಅಂದರೆ 800% ಹೆಚ್ಚಳ! ಇನ್ನೂ ಏರಿಕೆ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ.

ಧಾರಣೆ ಏರಿಕೆಗೆ ಕಾರಣ ಏನು?

ಕೋಕೋವನ್ನು ಐಸ್‌ಕ್ರೀಮ್, ಚಾಕೊಲೇಟ್, ಮಿಠಾಯಿ, ಬೇಕಿಂಗ್ ಮತ್ತು ಸೌಂದರ್ಯವರ್ಧಕ ಉದ್ಯಮಗಳಲ್ಲಿ ಬಳಸಲಾಗುತ್ತದೆ. ಈ ಉದ್ಯಮಗಳಲ್ಲಿ ಹೆಚ್ಚಿನ ಬೇಡಿಕೆ ಇದ್ದರೂ, ಬರ ಮತ್ತು ನೀರಿನ ಕೊರತೆಯಿಂದ ವಿಶ್ವದಾದ್ಯಂತ ಕೋಕೋ ಬೆಳೆ ಗಣನೀಯವಾಗಿ ಇಳಿಮುಖವಾಗಿರುವುದು ಇವತ್ತಿನ ಕೋಕೋ ಧಾರಣೆ ಏರಿಕೆ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಎನ್ನಲಾಗುತ್ತಿದೆ.

ಜಾಗತಿಕ ಪೂರೈಕೆಯ 70%ರಷ್ಟಿರುವ ಆಫ್ರಿಕಾದ ಕೋಕೋ ಉತ್ಪಾದನೆಯು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಜಾಗತಿಕ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗದೆ ಬೆಳೆ ನೆಲ ಕಚ್ಚಿರುವುದು ಭಾರತವೂ ಸೇರಿದಂತೆ ವಿಶ್ವ ಮಾರುಕಟ್ಟೆಯಲ್ಲಿ ಕೋಕೋ ಧಾರಣೆ ಏರಿಕೆ ಆಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಭಾರತದಲ್ಲೂ ಹವಾಮಾನ ವ್ಯತ್ಯಾಸದಿಂದ ಕೋಕೋ ಬೆಳೆ ಇಳಿಮುಖವಾಗಿದೆ.

ಕ್ವಿಂಟಾಲ್ ಡ್ರೈ ಕೋಕೋಗೆ ಈಗ ಲಕ್ಷ ಬೆಲೆ

ಹಸಿ ಕೋಕೋ ದರ 320 ರೂ. ಗಡಿ ದಾಟುತ್ತಿರುವಾಗಲೇ, ಒಣಗಿದ ಡ್ರೈ ಕೋಕೋ ಧಾರಣೆಯೂ ಅದೇ ಪ್ರಮಾಣದಲ್ಲಿ ಏರುತ್ತಿದ್ದು ಗರಿಷ್ಠ ಒಣ ಕೋಕೋ ದರ ಈಗ ಕೆ.ಜಿ.ಗೆ 960 ರೂ. ಅನ್ನು ತಲುಪಿದೆ. ದರ ಏರಿಕೆ ಹೀಗೆ ಮುಂದುವರಿದರೆ ಮೂರ್ನಾಲ್ಕು ದಿನಗಳಲ್ಲಿ ಅದು ನಾಲ್ಕಂಕೆಯನ್ನು ಮುಟ್ಟಿ, ಕ್ವಿಂಟಾಲ್ ಡ್ರೈ ಕೋಕೋ ಬೆಲೆ ದಾಖಲೆಯ 1,00,000 ರೂ. ತಲುಪುವ ಸಾಧ್ಯತೆ ಇದೆ.

ಕೋಕೋ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವುದೂ ಈಗ ದುಸ್ತರ

ಕೋಕೋ ಧಾರಣೆ ಮಿಂಚಿ‌ ವೇಗದಲ್ಲಿ ಏರುತ್ತಿರುವಾಗ ಫಸಲಿಗೆ ಬರುತ್ತಿರುವ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವುದೂ ಸಣ್ಣ ರೈತರಿಗೆ ತಲೆನೋವಾಗಿ ಪರಿಣಮಿಸುತ್ತಿದೆ. ಮಂಗ, ಅಳಿಲು, ಕೆಂಜಳಿಲು, ಕಬ್ಬೆಕ್ಕು, ಪಕ್ಷಿಗಳಿಂದ ಬೆಳೆಯನ್ನು ರಕ್ಷಣೆ ಮಾಡಿಕೊಂಡು ಹಣ್ಣಾದಾಗ ಕಟಾವು ಮಾಡಬೇಕು. ಆದರೆ ಕಟಾವು ಮಾಡುವ ಮೊದಲೇ ಪ್ರಾಣಿಗಳಿಂದ ರಕ್ಷಣೆ ಮಾಡಿಕೊಳ್ಳುವುದು ರೈತರಿಗೆ ದೊಡ್ಡ ಸವಾಲಾಗಿದೆ. ಇದಲ್ಲದೆ ಕೋಕೋ ಹಣ್ಣುಗಳನ್ನು ತೋಟದಿಂದಲೇ ಕದಿಯುತ್ತಿರುವ ವರದಿಗಳೂ ಹರಿದಾಡುತ್ತಿವೆ.

ಇದನ್ನೂ ಓದಿ: Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಒಟ್ಟಿನಲ್ಲಿ ಒಂದು ಕಾಲದಲ್ಲಿ ಐಸ್‌ಕ್ರೀಮ್, ಚಾಕಲೇಟ್‌ಗಳಲ್ಲಿ ಬಳಸುತ್ತಿದ್ದ ವೆನಿಲಾ ಬೆಳೆಯ ದರ ಏರಿಕೆಯಿಂದ ಆಗುತ್ತಿದ್ದ ಪರಿಣಾಮಗಳು ಈಗ ಕೋಕೋಗೆ ರಾಜ ಮರ್ಯಾದೆಯ ದರ ಬರುತ್ತಿದೆ. ಜಾಗತಿಕ ಮಟ್ಟದಲ್ಲಿ ಕೋಕೋ ಬೇಡಿಕೆ ಹೆಚ್ಚಿದ್ದು, ಪೂರೈಕೆ ಕಡಿಮೆ ಇರುವ ಕಾರಣ ಸಧ್ಯಕ್ಕಂತು ಅದರ ದರ ಇಳಿಯುವ ಸಾಧ್ಯತೆ ಕಡಿಮೆ ಎಂದು ಚರ್ಚೆ ನೆಡೆಯುತ್ತಿದೆ.

Continue Reading
Advertisement
HD Revanna released from jail Revanna Go straight to HD Deve Gowda house
ಕ್ರೈಂ22 seconds ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್9 mins ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ13 mins ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

pm narendra modi nomination
ಪ್ರಮುಖ ಸುದ್ದಿ26 mins ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest33 mins ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Love Failure
ಬೆಂಗಳೂರು ಗ್ರಾಮಾಂತರ35 mins ago

Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

HD Revanna Bail I am not happy that Revanna has been released says HD Kumaraswamy
ರಾಜಕೀಯ55 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

Bomb threat
ದೇಶ57 mins ago

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

T20 World Cup 2024
ಕ್ರಿಕೆಟ್1 hour ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 mins ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ55 mins ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ9 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ19 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ19 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ19 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ20 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ20 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌