ಗಾಜಾ ಆಸ್ಪತ್ರೆಯಲ್ಲಿ ಸುರಂಗ, ಬಂದೂಕು ಪತ್ತೆಹಚ್ಚಿದ ಇಸ್ರೇಲ್; ವಿಶ್ವಸಂಸ್ಥೆ ನೆರವು ಇಲ್ಲ - Vistara News

ಪ್ರಮುಖ ಸುದ್ದಿ

ಗಾಜಾ ಆಸ್ಪತ್ರೆಯಲ್ಲಿ ಸುರಂಗ, ಬಂದೂಕು ಪತ್ತೆಹಚ್ಚಿದ ಇಸ್ರೇಲ್; ವಿಶ್ವಸಂಸ್ಥೆ ನೆರವು ಇಲ್ಲ

ಗಾಜಾ ನಗರದಲ್ಲಿರುವ ಆಸ್ಪತ್ರೆಯಲ್ಲಿ ಹಮಾಸ್‌ ಉಗ್ರರು ಪಿತೂರಿ ನಡೆಸುತ್ತಿದ್ದಾರೆ ಎಂದು ಇಸ್ರೇಲ್‌ ಸೇನೆ ಆರೋಪಿಸಿದ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಸುರಂಗ ಪತ್ತೆಯಾಗಿದೆ. ಹಲವು ಶಸ್ತ್ರಾಸ್ತ್ರಗಳನ್ನೂ ಇಸ್ರೇಲ್‌ ಸೇನೆ ಪತ್ತೆಹಚ್ಚಿದೆ.

VISTARANEWS.COM


on

Guns In Al Shifa Hospital
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಾಜಾ ನಗರ: ಹಮಾಸ್‌ ಉಗ್ರರ ಬೀಡಾಗಿರುವ ಗಾಜಾ ನಗರದ ಅಲ್‌-ಶಿಫಾ (Al Shifa Hospital) ಆಸ್ಪತ್ರೆ ಮೇಲೆ ದಾಳಿ ಮಾಡಿದ ಇಸ್ರೇಲ್‌ ಸೇನೆಯು ಉಗ್ರರ ಕರಾಳ ಮುಖವನ್ನು ಅನಾವರಣ ಮಾಡಿದೆ. ಅಲ್‌ ಶಿಫಾ ಆಸ್ಪತ್ರೆಯಲ್ಲಿಯೇ ಹಮಾಸ್‌ ಉಗ್ರರ (Hamas Terrorists) ಸುರಂಗವನ್ನು ಪತ್ತೆಹಚ್ಚಿರುವ ಇಸ್ರೇಲ್‌, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಂಡಿದೆ. ಈ ಕುರಿತ ವಿಡಿಯೊಗಳನ್ನು ಇಸ್ರೇಲ್‌ ಡಿಫೆನ್ಸ್‌ ಫೋರ್ಸ್‌ (Israel Defence Force) ಹಂಚಿಕೊಂಡಿದೆ.

“ಅಲ್‌ ಶಿಫಾ ಆಸ್ಪತ್ರೆಯು ಹಮಾಸ್‌ ಉಗ್ರರ ತಾಣವಾಗಿದೆ. ಆಸ್ಪತ್ರೆಯಲ್ಲಿ ಹಮಾಸ್‌ ಉಗ್ರರ ಸುರಂಗ ಪತ್ತೆಯಾಗಿದೆ. ಎಕೆ 47 ಗನ್‌ಗಳು, ಸ್ನೈಫರ್‌ ರೈಫಲ್‌ಗಳು, ಗ್ರೆನೇಡ್‌ಗಳು ಸೇರಿ ಹಲವು ಶಸ್ತ್ರಾಸ್ತ್ರಗಳು ಸಿಕ್ಕಿವೆ. ಆಸ್ಪತ್ರೆಯನ್ನು ಹಮಾಸ್‌ ಉಗ್ರರು ಮಿಲಿಟರಿ ಕಾರ್ಯಾಚರಣೆಗೆ ಬಳಸುತ್ತಿದೆ” ಎಂದು ಇಸ್ರೇಲ್‌ ಸೇನೆ ತಿಳಿಸಿದೆ. ಮತ್ತೊಂದೆಡೆ, ಗಾಜಾ ನಗರದ ಮೇಲೆ ಇಸ್ರೇಲ್‌ ಸಂಪೂರ್ಣ ಹಿಡಿತ ಸಾಧಿಸುತ್ತಿರುವ ಕಾರಣ ವಿಶ್ವಸಂಸ್ಥೆಯಿಂದ ಗಾಜಾ ನಗರದಲ್ಲಿರುವ ನಿರಾಶ್ರಿತರಿಗೆ ನೆರವು ನೀಡಲು ಆಗುತ್ತಿಲ್ಲ ಎಂದು ತಿಳಿದುಬಂದಿದೆ.

ಅಲ್‌-ಶಿಫಾ ಆಸ್ಪತ್ರೆಯ ಕೆಳಗೆ ಹಮಾಸ್‌ ಉಗ್ರರ ಸುರಂಗವಿದೆ. ಆಸ್ಪತ್ರೆ ಮೂಲಕ ಸುರಂಗದೊಳಗೆ ಹೋಗುವುದು, ಅಲ್ಲಿಂದ ಬರುವುದು, ಆಸ್ಪತ್ರೆಯಲ್ಲಿಯೇ ದಾಳಿಗೆ ಸಂಚು ರೂಪಿಸುವುದು ಸೇರಿ ಹಲವು ಕೃತ್ಯಗಳಲ್ಲಿ ಹಮಾಸ್‌ ಉಗ್ರರು ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬುಲ್ಡೋಜರ್‌ಗಳನ್ನು ಬಳಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು, ಆಸ್ಪತ್ರೆಯಲ್ಲಿ ಉಗ್ರ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದು ಹಮಾಸ್‌ ಉಗ್ರರಿಗೆ ಇಸ್ರೇಲ್‌ ಗಡುವು ನೀಡಿತ್ತು. ಆದರೆ, ಹಮಾಸ್‌ ಉಗ್ರರು ಇದಕ್ಕೆ ಸೊಪ್ಪು ಹಾಕದ ಕಾರಣ ಭೀಕರವಾಗಿ ದಾಳಿ ನಡೆಸಲಾಗುತ್ತಿದೆ. ಇನ್ನು ಆಸ್ಪತ್ರೆಯಲ್ಲಿ ಇಸ್ರೇಲ್‌ ಒತ್ತೆಯಾಳುಗಳ ಶವಗಳು ಕೂಡ ದೊರೆತಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Israel Palestine War: ‌ಇಸ್ರೇಲ್‌ ಸೈನಿಕರು ಅತ್ಯಾಚಾರಿಗಳು ಎಂದ ಶಿಕ್ಷಕನ ಬಂಧನ!

12 ಸಾವಿರ ದಾಟಿದ ಸಾವಿನ ಸಂಖ್ಯೆ

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರದಲ್ಲಿ ಮೃತಪಟ್ಟವರ ಸಂಖ್ಯೆ 12 ಸಾವಿರ ದಾಟಿದೆ. ಅದರಲ್ಲೂ, ಹಮಾಸ್‌ ಉಗ್ರರ ತಾಣವಾದ ಗಾಜಾ ನಗರದ ಮೇಲೆ ಇಸ್ರೇಲ್‌ ನಿರಂತರವಾಗಿ ದಾಳಿ ನಡೆಸುತ್ತಿದ್ದು, ನಗರದಲ್ಲಿ ಇದುವರೆಗೆ 11 ಸಾವಿರಕ್ಕೂ ಜನ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯವೇ ಮಾಹಿತಿ ನೀಡಿದೆ. ಇನ್ನೂ 3 ಸಾವಿರಕ್ಕೂ ಅಧಿಕ ಜನ ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂಬುದಾಗಿ ಮಾಹಿತಿ ನೀಡಿದೆ. ಇನ್ನು ಹಮಾಸ್‌ ಉಗ್ರರ ದಾಳಿಗೆ ಇಸ್ರೇಲ್‌ನಲ್ಲಿ 1,400 ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Yuva Rajkumar: ಡಿವೋರ್ಸ್‌ ನೋಟಿಸ್‌ ಬೆನ್ನಲ್ಲೇ ನಟ ಯುವ ರಾಜ್‌ಕುಮಾರ್‌ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರ ನಡುವೆ ಆರೋಪ-ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಪರಸ್ಪರ ಅಕ್ರಮ ಸಂಬಂಧಗಳ ಕುರಿತು ಬಹಿರಂಗ ಆರೋಪಗಳು ಹೆಚ್ಚಾಗಿವೆ. ಈಗ ಶ್ರೀದೇವಿ ಭೈರಪ್ಪ ಅವರು ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ. ಆ ಮೂಲಕ ಡಿವೋರ್ಸ್‌ ಪ್ರಕರಣವೀಗ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಹೌದು, ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಮರುತ್ತರ ನೀಡಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಇದೇ ವರ್ಷದ ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್‌ ನೀಡಿದ್ದಾರೆ. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ.

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದಾರೆ.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ರಿಪ್ಲೈ

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Continue Reading

ಭವಿಷ್ಯ

Dina Bhavishya : ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಸಿಂಹ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ವೃಷಭ, ಕಟಕ, ಕನ್ಯಾ, ತುಲಾ, ಮಕರ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರಿಗೆ ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 17:26 ವಾರ: ಮಂಗಳವಾರ
ನಕ್ಷತ್ರ: ಆಶ್ಲೇಷಾ 23:37 ಯೋಗ: ವ್ಯಾಘಾತ 16:45
ಕರಣ: ಬಾಲವ 17:26 ಅಮೃತ ಕಾಲ: ರಾತ್ರಿ 09:55ರಿಂದ 11:39ವರೆಗೆ
ದಿನದ ವಿಶೇಷ: ಶ್ರುತ ಪಂಚಮಿ, ತಿಪ್ಪಗೊಂಡನಹಳ್ಳಿ ಉತ್ಸವ

ಸೂರ್ಯೋದಯ : 05:53   ಸೂರ್ಯಾಸ್ತ : 06:46

ರಾಹುಕಾಲ ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಗಳಿಸುವಿರಿ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಇದೆ. ಭರವಸೆಯ ಹೊಸ ಅವಕಾಶಗಳು ತಪ್ಪದಂತೆ ನೋಡಿಕೊಳ್ಳಿ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಬದಲಾವಣೆಯಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ:ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ : ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕೂಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ಅಷ್ಟೇ ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಕರ್ನಾಟಕ

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar: ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಇದಾದ ಬಳಿಕ ಶ್ರೀದೇವಿ ಭೈರಪ್ಪ ಅವರು ಪ್ರತಿಕ್ರಿಯಿಸಿದ್ದು, ನನಗೆ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂದಿದ್ದಾರೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಅವರ ವಕೀಲರು ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಶ್ರೀದೇವಿ ಅವರು ಹೇಗೆ ಕಿರುಕುಳ ನೀಡುತ್ತಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ. ಇದಕ್ಕೆ ಈಗ ಶ್ರೀದೇವಿ ಭೈರಪ್ಪ ಅವರು ಪ್ರತ್ಯುತ್ತರ ನೀಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು/ವಾಷಿಂಗ್ಟನ್:‌ ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ವಿಚ್ಛೇದನ ಪ್ರಕರಣವು ವಿವಿಧ ಆಯಾಮಗಳನ್ನು ಪಡೆಯುತ್ತಿದೆ. ಇದೊಂದು ವಿಚ್ಛೇದನ ಪ್ರಕರಣವಾಗದೆ ಯುವ ರಾಜ್‌ಕುಮಾರ್‌ ಹಾಗೂ ಅವರ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರ ನಡುವಿನ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗುತ್ತಿದೆ. “ಶ್ರೀದೇವಿ ಭೈರಪ್ಪ ಅವರು ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಅವರ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದು, ಇದಕ್ಕೆ ಶ್ರೀದೇವಿ ಭೈರಪ್ಪ ಪ್ರತಿಕ್ರಿಯಿಸಿದ್ದಾರೆ. “ಸತ್ಯ ಹಾಗೂ ನ್ಯಾಯಕ್ಕೆ ಗೆಲುವಿದೆ ಎಂಬುದಾಗಿ ನಾನು ನಂಬಿದ್ದೇನೆ” ಎಂಬುದಾಗಿ ಇನ್‌ಸ್ಟಾಗ್ರಾಂನಲ್ಲಿ ಶ್ರೀದೇವಿ ಭೈರಪ್ಪ ಪೋಸ್ಟ್‌ ಮಾಡಿದ್ದಾರೆ.

“ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳುಮಟ್ಟದ, ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ. ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು ಮೌನವಾಗಿದ್ದೆ. ಆದರೆ, ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳುಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಹಾಗೂ ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತೇವೆ ಎಂದು ನಾನು ನಂಬಿದ್ದೇನೆ” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಯುವ ಪರ ವಕೀಲರು ಹೇಳಿದ್ದೇನು?

ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Continue Reading

ಪ್ರಮುಖ ಸುದ್ದಿ

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Yuva Rajkumar: ನಟ ಯುವ ರಾಜ್‌ಕುಮಾರ್‌ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್‌ ನೋಟಿಸ್‌ ಕಳುಹಿಸಿದ್ದಾರೆ. ಇದಾದ ಬಳಿಕ ಶ್ರೀದೇವಿ ಭೈರಪ್ಪ ಅವರು ಪ್ರತಿಕ್ರಿಯಿಸಿದ್ದು, ನನಗೆ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂದಿದ್ದಾರೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಅವರ ವಕೀಲರು ಸುದ್ದಿಗೋಷ್ಠಿ ನಡೆಸಿ ಹಲವು ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಶ್ರೀದೇವಿ ಅವರು ಹೇಗೆ ಕಿರುಕುಳ ನೀಡುತ್ತಿದ್ದರು ಎಂಬುದನ್ನು ಅವರು ವಿವರಿಸಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿಗೆ ಡಿವೋರ್ಸ್‌ ನೋಟಿಸ್‌ ನೀಡಿರುವ ಪ್ರಕರಣಕ್ಕೆ ಹಲವು ಟ್ವಿಸ್ಟ್‌ಗಳು ಸಿಗುತ್ತಿವೆ. ಡಿವೋರ್ಸ್‌ ನೋಟಿಸ್‌ ಸಿಕ್ಕಾಗ ಪ್ರತಿಕ್ರಿಯಿಸುವೆ ಎಂಬುದಾಗಿ ಯುವ ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಪ್ರತಿಕ್ರಿಯಿಸಿದ ಬೆನ್ನಲ್ಲೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. “ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ದೈಹಿಕವಾಗಿ ಫಿಟ್‌ ಇಲ್ಲ ಎಂಬುದಾಗಿ ಶ್ರೀದೇವಿ ಪ್ರಸಾದ್‌ ಅವರು ನಟನಿಗೆ ಕಿರುಕುಳ ನೀಡಿದ್ದಾರೆ” ಎಂಬುದಾಗಿ ಅವರು ಆರೋಪಿಸಿದ್ದಾರೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

“ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

“ಯುವ ಪತ್ನಿಯು ಇಡೀ ಕುಟುಂಬದ ವ್ಯವಹಾರ ಹಾಗೂ ಎಲ್ಲದರ ಮೇಲೂ ಕಂಟ್ರೋಲ್ ಮಾಡಲು ಪ್ರಯತ್ನಿಸಿದ್ದಳು. ಯುವ ಫ್ಯಾಮಿಲಿಯಿಂದ ಬಹಳ ಹಣ ಖರ್ಚು ಮಾಡಿಸಿಕೊಂಡಿದ್ದಾರೆ. ಐಎಎಸ್ ಕಲಿಯಲು ದೆಹಲಿಗೆ ಹೋಗಿದ್ದರು. ಅವಳ ಬಾಯ್ ಫ್ರೆಂಡ್ ರಾಧಯ್ಯ ಎಂಬವರ ಜತೆ ಸಂಬಂಧ ಇಟ್ಟುಕೊಂಡಿದ್ದಾರೆ. ರಾತ್ರಿ ಅವನ ಮನೆಯಲ್ಲಿ ಉಳದುಕೊಳ್ತಿದ್ದರು. ಇಂಥ ಹಲವು ಕಾರಣಗಳನ್ನು ಅರ್ಜಿಯಲ್ಲಿ ನಮೂದಿಸಿ ಫೈಲ್ ಮಾಡಿದ್ದೇವೆ. ಆದರೆ ಯುವ ಪತ್ನಿಯು ಯುವನಿಗೆ ಬೇರೆ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಸ್ಯಾಂಡಲ್ ವುಡ್ ನಟಿಯೊಬ್ಬರ ಜತೆ ಯುವನಿಗೆ ಸಂಬಂಧ ಇತ್ತು ಎಂದು ಅವರು ರಿಪ್ಲೈ ಮಾಡಿದ್ದಾರೆ” ಎಂದು ತಿಳಿಸಿದರು.

ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಪ್ರತಿಕ್ರಿಯೆ

ಯುವ ರಾಜ್‌ಕುಮಾರ್‌ ಅವರ ವಕೀಲರು ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಶ್ರೀದೇವಿ ಭೈರಪ್ಪ ಅವರು ಅಮೆರಿಕದಿಂದಲೇ ವಕೀಲರ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. “ಯುವ ರಾಜ್‌ಕುಮಾರ್‌ ಅವರು ನನಗೆ ಕಿರುಕುಳ ನೀಡುತ್ತಿದ್ದರು. ನೀವು ನೀಡಿದ ನೋಟಿಸ್‌ನಲ್ಲಿ ಉಲ್ಲೇಖಿಸಿದ ಅಂಶಗಳು ಸತ್ಯಕ್ಕೆ ದೂರವಾಗಿವೆ. ನನಗೆ ನಿಮ್ಮ ಕುಟುಂಬವನ್ನು ಒಡೆಯಬೇಕು ಎಂದಿದ್ದರೆ ಅಮೆರಿಕಕ್ಕೆ ಬರುತ್ತಿರಲಿಲ್ಲ. ಅಷ್ಟಕ್ಕೂ, ಯುವ ರಾಜ್‌ಕುಮಾರ್‌ ಅವರು ನಟಿ ಸಪ್ತಮಿ ಗೌಡ ಅವರೊಂದಿಗೆ ಸಂಬಂಧ ಹೊಂದಿದ್ದಾರೆ. ನಿಮ್ಮ ಆರೋಪಗಳಿಗೆ ಕಾನೂನಾತ್ಮಕವಾಗಿಯೇ ಉತ್ತರ ಕೊಡುತ್ತೇನೆ” ಎಂಬುದಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Continue Reading
Advertisement
Karnataka Weather Forecast
ಮಳೆ20 mins ago

Karnataka Weather : ಬೆಂಗಳೂರಲ್ಲಿ ಭಾರಿ ಮಳೆ ಎಚ್ಚರಿಕೆ; ಮುಕ್ಕಾಲು ಕರ್ನಾಟಕಕ್ಕೆ ರೆಡ್‌ ಅಲರ್ಟ್‌

Rakshit Shetty Richard Anthony Produce By Hombale
ಆರೋಗ್ಯ20 mins ago

Menopause: ಮಹಿಳೆಯರೇ, ಈ ಸಮಸ್ಯೆಗಳು ಕಾಣಿಸುತ್ತಿವೆಯೇ?; ಹಾಗಿದ್ದರೆ ನಿಮ್ಮ ಮೆನೋಪಾಸ್‌ ಸಮೀಪದಲ್ಲಿದೆ ಎಂದರ್ಥ!

Yuva Rajkumar
ಕರ್ನಾಟಕ23 mins ago

Yuva Rajkumar: ಕಾಂತಾರ ಕ್ವೀನ್‌ ಸಪ್ತಮಿ ಗೌಡ ಜತೆ ಯುವ ರಾಜ್‌ಕುಮಾರ್‌ ಸಂಬಂಧ; ಪತ್ನಿ ಶ್ರೀದೇವಿ ಆರೋಪ

Cervical Cancer
ಆರೋಗ್ಯ1 hour ago

Cervical Cancer: ಮಹಿಳೆಯರ ಗರ್ಭಕಂಠದ ಕ್ಯಾನ್ಸರ್‌; ಪುರುಷರಿಗೂ ಇದೆ ಅಪಾಯ!

Dina Bhavishya
ಭವಿಷ್ಯ2 hours ago

Dina Bhavishya : ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ!

Yuva Rajkumar
ಕರ್ನಾಟಕ7 hours ago

Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

Yuva Rajkumar
ಪ್ರಮುಖ ಸುದ್ದಿ8 hours ago

Yuva Rajkumar: ಹಲ್ಲು ಉಜ್ಜಲ್ಲ, ಸ್ನಾನ ಮಾಡಲ್ಲ, ಫಿಟ್ ಇಲ್ಲ ಎಂದು ಕಿರುಕುಳ ಕೊಡುತ್ತಿದ್ದ ಯುವ ಪತ್ನಿ!: ವಕೀಲರ ಆರೋಪ

Minister Dinesh Gundurao instructed to prepare for the disaster management that may occur on the coast during rainy season.
ದಕ್ಷಿಣ ಕನ್ನಡ8 hours ago

Mangalore News: ಸಿಡಿಲ ಅಪಾಯ ಇರುವ ಸ್ಥಳಗಳಲ್ಲಿ ಮಿಂಚು ಪ್ರತಿಬಂಧಕ ವ್ಯವಸ್ಥೆ; ಸರ್ಕಾರದ ನಿರ್ಧಾರ

Inauguration of Pushpam Ayurveda Wellness Center in Bengaluru
ಬೆಂಗಳೂರು8 hours ago

Bengaluru News: ಬೆಂಗಳೂರಿನಲ್ಲಿ ಪುಷ್ಪಮ್ ಆಯುರ್ವೇದ ವೆಲ್‌ನೆಸ್ ಸೆಂಟರ್‌ಗೆ ಚಾಲನೆ

Kalki 2898 AD Trailer Released on Vyjayanthi Movies YouTube Channel
ಕರ್ನಾಟಕ9 hours ago

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌