Actress Kajol: ರಶ್ಮಿಕಾ, ಕತ್ರಿನಾ ಆಯ್ತು, ಈಗ ಕಾಜೋಲ್ ಡೀಪ್‌ಫೇಕ್ ವಿಡಿಯೊ ವೈರಲ್‌! - Vistara News

ಬಾಲಿವುಡ್

Actress Kajol: ರಶ್ಮಿಕಾ, ಕತ್ರಿನಾ ಆಯ್ತು, ಈಗ ಕಾಜೋಲ್ ಡೀಪ್‌ಫೇಕ್ ವಿಡಿಯೊ ವೈರಲ್‌!

Actress Kajol: ಕಾಜೋಲ್‌ ಕ್ಯಾಮೆರಾದಲ್ಲಿ ತನ್ನ ಡ್ರೆಸ್ ಬದಲಾಯಿಸುತ್ತಿರುವಂತೆ ಕಾಣುವಂತೆ ಮಾಡಲಾಗಿದೆ. ರಶ್ಮಿಕಾ ಮಂದಣ್ಣ ನಂತರ, ಬಾಲಿವುಡ್ ನಟಿ ಕಾಜೋಲ್ ಅವರ ಡೀಪ್‌ಫೇಕ್ ವಿಡಿಯೊ ಇಂಟರ್‌ನೆಟ್‌ನಲ್ಲಿ ಕಾಣಿಸಿಕೊಂಡಿದೆ.

VISTARANEWS.COM


on

After Rashmika Mandanna Kajol Deepfake Video Surfaces Online
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌ ನಂತರ ಬಾಲಿವುಡ್ ನಟಿ ಕಾಜೋಲ್ ಅವರ ಡೀಪ್‌ಫೇಕ್ ವಿಡಿಯೊ ಇಂಟರ್‌ನೆಟ್‌ನಲ್ಲಿ ಕಾಣಿಸಿಕೊಂಡಿದೆ. ಕ್ಲಿಪ್‌ನಲ್ಲಿ, ಕಾಜೋಲ್‌ನ ಮುಖವನ್ನು ಬಳಸಿಕೊಂಡು ಮಹಿಳೆಯೊಬ್ಬರು ಕ್ಯಾಮೆರಾ ಮುಂದೆ ಬಟ್ಟೆ ಬದಲಾಯಿಸುತ್ತಿರುವಂತೆ ಕಂಡಿದೆ. “ಗೆಟ್‌ ರೆಡಿ ವಿತ್‌ ಮಿ’ ಎನ್ನುವ ಟಿಕ್‌ಟಾಕ್‌ನ ಟ್ರೆಂಡ್‌ಗಾಗಿ ಇಂಗ್ಲಿಷ್‌ ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ನರ್‌ ರೋಸಿ ಬ್ರಿನ್‌ ಅವರ ವಿಡಿಯೊಗೆ ಕಾಜೋಲ್‌ ಅವರ ಮುಖವನ್ನು ಡೀಪ್‌ಫೇಕ್‌ ಮಾಡಲಾಗಿದೆ ಎಂದು ವರದಿಯಾಗಿದೆ.

ಇತ್ತೀಚೆಗಷ್ಟೇ ನಟ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೊ ಆತಂಕ ಸೃಷ್ಟಿಸಿತ್ತು. “ಗೆಟ್‌ ರೆಡಿ ವಿತ್‌ ಮಿ’ ಎನ್ನುವ ಟಿಕ್‌ಟಾಕ್‌ನ ಟ್ರೆಂಡ್‌ಗಾಗಿ ಇಂಗ್ಲಿಷ್‌ ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ನರ್‌ ರೋಸಿ ಬ್ರಿನ್‌ ಅವರ ವಿಡಿಯೊಗೆ ಕಾಜೋಲ್‌ ಅವರ ಮುಖವನ್ನು ಡೀಪ್‌ಫೇಕ್‌ ಮಾಡಲಾಗಿದೆ. ಇದು ತಮ್ಮದೇ ವಿಡಿಯೊ ಎಂದು ರೋಸಿ ಅವರು ಖಚಿತಪಡಿಸಿದ್ದಾರೆ ಎಂದು ‘ದಿ ಕ್ಮಿಂಟ್‌’ ಹಾಗೂ “ಬೂಮ್‌ಲೈವ’ ಫ್ಯಾಕ್ಟ್‌ಚೆಕ್‌ ಪ್ರಕಟಿಸಿವೆ. ಕಾಜೋಲ್‌ ನಟಿ ಕ್ಯಾಮೆರಾದಲ್ಲಿ ತನ್ನ ಡ್ರೆಸ್ ಬದಲಾಯಿಸುತ್ತಿರುವಂತೆ ಕಾಣುವಂತೆ ಮಾಡಲಾಗಿದೆ.

ಇತ್ತೀಚೆಗೆ, ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೊ ಬಗ್ಗೆ ನಟರಾದ ಅಮಿತಾಭ್‌ ಬಚ್ಚನ್, ಕೀರ್ತಿ ಸುರೇಶ್, ಮೃಣಾಲ್ ಠಾಕೂರ್, ಇಶಾನ್ ಖಟ್ಟರ್ ಮತ್ತು ನಾಗ ಚೈತನ್ಯ ಸೇರಿದಂತೆ ಅನೇಕ ಸೆಲೆಬ್ರಿಟಿಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆಂಗ್ಲೋ ಇಂಡಿಯನ್ ಯುವತಿ ಝರಾ ಪಟೇಲ್ (Zara Patel) ಅವರ ಹಾಟ್ ವಿಡಿಯೊಗೆ ರಶ್ಮಿಕಾ ಮಂದಣ್ಣ ಮುಖ ಅಂಟಿಸಿ ವೈರಲ್ ಮಾಡಲಾಗಿತ್ತು.

ಇದನ್ನೂ ಓದಿ: ಪ್ರೀತಿ ಒಪ್ಪದ ಯುವತಿ ಫೋಟೊ ಅಶ್ಲೀಲವಾಗಿ ಎಡಿಟ್‌ ಮಾಡಿದ ಬೆಳಗಾವಿ ಯುವಕ; ಡೀಪ್‌ಫೇಕ್ ಕೇಸ್!

ಕೇಂದ್ರ ಸಚಿವರಿಂದಲೂ ವಿರೋಧ

ವೈರಲ್ ಆಗುತ್ತಿರುವ ರಶ್ಮಿಕಾ ಅವರ ಡೀಪ್‌ಫೇಕ್ ವಿಡಿಯೊ ಕುರಿತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಕೂಡ ಪ್ರತಿಕ್ರಿಯಿಸಿದ್ದರು. ʼʼಇಂಥ ಅಪಾಯಕಾರಿ ಮತ್ತು ಹಾನಿಕಾರಕ ತಪ್ಪು ಮಾಹಿತಿಗಳನ್ನು ಈ ವೇದಿಕೆಗಳ ಮೂಲಕ ಎದುರಿಸಬೇಕಾಗಿದೆʼʼ ಎಂದು ಅವರು ಹೇಳಿದ್ದರು. ಜತೆಗೆ ರಶ್ಮಿಕಾ ಅವರ ಅಭಿಮಾನಿಗಳೂ ನಟಿಯ ಬೆಂಬಲಕ್ಕೆ ನಿಂತಿದ್ದರು

ಡೀಪ್‌ಫೇಕ್‌ ಅಂದರೇನು?

‘ಡೀಪ್‌ಫೇಕ್’ ಕೃತಕ ಬುದ್ಧಿಮತ್ತೆಯ ಸಹಾಯದಿಂದ ಮಾಡಿದ ವಿಡಿಯೊಗಳು. ಇವು ನೈಜವಾಗಿಯೇ ಕಾಣಿಸುತ್ತವೆ. ಡೀಪ್‌ಫೇಕ್ ವೀಡಿಯೊದಲ್ಲಿ ಸಾಮಾನ್ಯವಾಗಿ ಬೇರೆ ಬೇರೆ ವ್ಯಕ್ತಿಗಳ ದೇಹ ಮತ್ತು ಮುಖವನ್ನು ಡಿಜಿಟಲ್ ಮ್ಯಾನಿಪುಲೇಟ್ ಮಾಡಿ ಜೋಡಿಸಿ ಒರಿಜಿನಲ್‌ ಆಗಿ ಕಾಣುವಂತೆ ಮಾಡಲಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Anupam Kher: ಪ್ರಾಮಾಣಿಕ ವ್ಯಕ್ತಿ ಸಹಿಸಿಕೊಳ್ಳಲೇಬೇಕು; ಉ.ಪ್ರ ಹಿನ್ನಡೆ ಕುರಿತು ಅನುಪಮ್ ಖೇರ್‌ ಟ್ವೀಟ್

ಉತ್ತರ ಪ್ರದೇಶದಲ್ಲಿ ಲೋಕಸಭಾ ಫಲಿತಾಂಶ ಬಿಜೆಪಿಗೆ ಬಹುದೊಡ್ಡ ಆಘಾತವನ್ನು ನೀಡಿದೆ. ಈ ಕುರಿತು ನಟ, ಚಿತ್ರ ನಿರ್ಮಾಪಕ ಅನುಪಮ್ ಖೇರ್ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಕೆಲವೊಮ್ಮೆ ಪ್ರಾಮಾಣಿಕ ವ್ಯಕ್ತಿ ತುಂಬಾ ಪ್ರಾಮಾಣಿಕವಾಗಿರಬಾರದು ಎಂದು ನಾನು ಭಾವಿಸುತ್ತೇನೆ. ನೇರವಾದ ತೊಗಟೆಯನ್ನು ಹೊಂದಿರುವ ಮರವನ್ನು ಸಾಮಾನ್ಯವಾಗಿ ಮೊದಲು ಕತ್ತರಿಸಲಾಗುತ್ತದೆ. ಪ್ರಾಮಾಣಿಕ ವ್ಯಕ್ತಿ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

By

Anupam Kher
Koo

ಲೋಕಸಭೆ ಚುನಾವಣೆ 2024ರ (Loksabha election-2024) ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಬಿಜೆಪಿ (Bjp) ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗಳಿಸಿದರೂ ಉತ್ತರ ಪ್ರದೇಶದಲ್ಲಿ (uttarpradesh) ಪಕ್ಷಕ್ಕೆ ಭಾರಿ ಆಘಾತವಾಗಿದೆ. ಅಯೋಧ್ಯೆ ಇರುವ ಫೈಜಾಬಾದ್ (Faizabad) ಸೇರಿದಂತೆ ಹಲವು ಕ್ಷೇತ್ರಗಳನ್ನು ಅದು ಸ್ಥಾನಗಳನ್ನು ಕಳೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ರಾಮಮಂದಿರವನ್ನು (rammandir) ನಿರ್ಮಿಸಿದರೂ ಬಿಜೆಪಿ ಅಲ್ಲಿ ಹಿನ್ನಡೆ ಕಂಡಿದೆ.

ಈ ಕುರಿತು ಬಾಲಿವುಡ್ ನಟ (Bollywood actor) ಮತ್ತು ಬಿಜೆಪಿ ಬೆಂಬಲಿಗ ಅನುಪಮ್ ಖೇರ್ (Anupam Kher) ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಫಲಿತಾಂಶದ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಭಿ ಕಭಿ ಸೋಚ್ತಾ ಹೂಂ ಕಿ ಇಮಾಂದಾರ್ ವ್ಯಕ್ತಿ ಕೋ ಬಹೋತ್ ಝಾದಾ ಇಮಾಂದಾರ್ ನಹೀ ಹೋನಾ ಚಾಹಿಯೇ. ಜಂಗಲ್ ಮೇ ಸೀಧೇ ತಾನೆ ವಾಲೇ ಪೇಡ್ ಹೇ ಸಬ್ಸೇ ಪೆಹಲೇ ಕಾತೇ ಜಾತೇ ಹೈ. ಬಹುತ್ ಝಾದಾ ಇಮಾಂದಾರ್ ವ್ಯಕ್ತಿ ಕೋ ಹೇ ಸಬ್ಸೇ ಝ್ಯಾದಾ ಕಷ್ಟ ಉಠನೇ ಪಡತೇ ಹೈ. ಪರ್ ಫಿರ್ ಭಿ ವೋ ಅಪ್ನಿ ಇಮಾಂದಾರಿ ನಹೀ ಛೋಡ್ತಾ. ಇಸ್ಲಿಯೇ ಕರೋಡೋ ಲೋಗೋ ಕೆ ಲಿಯೇ ಪ್ರೇರಣಾ ಕಾ ಸ್ತೋತ್ರ ಬಂತ ಹೈ” ಎಂದು ಅವರು ಹೇಳಿದ್ದಾರೆ.


ಇದರ ಅನುವಾದ ಇಂತಿದೆ. ಕೆಲವೊಮ್ಮೆ ಪ್ರಾಮಾಣಿಕ ವ್ಯಕ್ತಿ ತುಂಬಾ ಪ್ರಾಮಾಣಿಕವಾಗಿರಬಾರದು ಎಂದು ನಾನು ಭಾವಿಸುತ್ತೇನೆ. ನೇರವಾದ ತೊಗಟೆಯನ್ನು ಹೊಂದಿರುವ ಮರವನ್ನು ಸಾಮಾನ್ಯವಾಗಿ ಮೊದಲು ಕತ್ತರಿಸಲಾಗುತ್ತದೆ. ಪ್ರಾಮಾಣಿಕ ವ್ಯಕ್ತಿ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಡೆತಡೆಗಳ ಹೊರತಾಗಿಯೂ, ಅವನು ತನ್ನ ಪ್ರಾಮಾಣಿಕತೆಯನ್ನು ಬಿಟ್ಟುಕೊಡುವುದಿಲ್ಲ. ಅದಕ್ಕಾಗಿಯೇ ಅವರು ಕೋಟ್ಯಂತರ ಜನರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Election Results 2024: ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಿವರು!


ಈ ನಡುವೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಯ ಸತತ ಮೂರನೇ ಗೆಲುವಿಗೆ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ: ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನರಿಗೆ ನಮಸ್ಕರಿಸುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಪದಗಳು ಎಂದಿಗೂ ನ್ಯಾಯವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

Continue Reading

Lok Sabha Election 2024

Election Results 2024: ಕಂಗನಾ, ಸುರೇಶ್‌ ಗೋಪಿ, ಶತ್ರುಘ್ನ ಸಿನ್ಹಾ ಸೇರಿ ಹಲವು ನಟ–ನಟಿಯರ ಗೆಲುವು

Election Results 2024 : ಗಾಂಧಿ ಕುಟುಂಬದ ಕ್ಷೇತ್ರ ಅಮೇಠಿಯಲ್ಲಿ ಸ್ಮೃತಿ ಇರಾನಿಗೆ ಸೋಲಾಗಿದೆ. ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ (Election Results 2024) ಗೆದ್ದು ಬೀಗಿದ್ದಾರೆ. ರಮಾನಂದ್ ಸಾಗರ್ ಅವರ `ರಾಮಾಯಣ’ ಶೋನ ಭಗವಾನ್ ರಾಮನ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟ ಅರುಣ್ ಗೋವಿಲ್ ಅವರು ಗೆದ್ದಿದ್ದಾರೆ.

VISTARANEWS.COM


on

Election Results 2024 in celebrities
Koo

ಬೆಂಗಳೂರು: ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ (Election Results 2024) ಗೆದ್ದು ಬೀಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ವಿನ್‌ ಆಗಿದ್ದಾರೆ.

ಟಿವಿ ರಾಮ ಅರುಣ್ ಗೋವಿಲ್

ರಮಾನಂದ್ ಸಾಗರ್ ಅವರ `ರಾಮಾಯಣ’ ಶೋನ ಭಗವಾನ್ ರಾಮನ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟ ಅರುಣ್ ಗೋವಿಲ್ ಅವರು ಉತ್ತರ ಪ್ರದೇಶದ ಮೀರತ್‌ನಿಂದ ಗೆದ್ದಿದ್ದಾರೆ.

ಸುರೇಶ್‌ ಗೋಪಿ

ಈ ಹಿಂದಿನ ಲೋಕಸಭೆ ಚುನಾವಣೆ (2019)ಯಲ್ಲಿಯೂ ಸುರೇಶ್‌ ಗೋಪಿ ಉತ್ತಮ ಪ್ರದರ್ಶನ ತೋರಿದ್ದರು. ಶೇ. 28.19ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಆಗ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಶೇ. 30.85 ಮತ ಪಡೆದಿದ್ದರು. ಕಾಂಗ್ರೆಸ್‌ನ ಟಿ.ಎಸ್.ಪಾರ್ಥಪನ್ ಶೇ. 39.83ರಷ್ಟು ಮತ ಪಡೆದು ಜಯ ಗಳಿಸಿದ್ದರು. ಅವರು 4,15,089 ಮತಗಳನ್ನು ಗಳಿಸಿ 3,21,456 ಮತಗಳನ್ನು ಪಡೆದ ಸಿಪಿಐಯ ರಾಜಾಜಿ ಮ್ಯಾಥ್ಯೂ ಥಾಮಸ್ ಅವರನ್ನು ಸೋಲಿಸಿದ್ದರು.

ಇದನ್ನೂ ಓದಿ: Election Results 2024: 5 ಬಾರಿಯ ಸಂಸದನ ವಿರುದ್ಧ ಚೊಚ್ಚಲ ಪ್ರಯತ್ನದಲ್ಲೇ ಭರ್ಜರಿ ಗೆಲುವು ಸಾಧಿಸಿದ ಯೂಸುಫ್ ಪಠಾಣ್

ಶತ್ರುಘ್ನ ಸಿನ್ಹಾ (ಟಿಎಂಸಿ, ಅಸನ್ಸೋಲ್)

ಪಶ್ಚಿಮ ಬಂಗಾಳ ಅಸನ್ಸೋಲ್‌ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರಿ ಬಾಬು ಎಂದೇ ಖ್ಯಾತರಾಗಿರುವ ಶತ್ರುಘ್ನ ಸಿನ್ಹಾ ಟಿ ಎಂ ಸಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ 63,000 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುರಿಂದರ್‌ ಸಿಂಗ್‌ ಅಹ್ಲುವಾಲಿಯಾ ಅವರನ್ನು ಸೋಲಿಸಿದ್ದಾರೆ.

ಹೇಮಾ ಮಾಲಿನಿ (ಬಿಜೆಪಿ, ಮಥುರಾ)

2024ರ ಲೋಕಸಭಾ ಚುನಾವಣೆಯಲ್ಲೂ ಮಥುರಾ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡಿರುವ ಹೇಮಾ ಮಾಲಿನಿ, ಈ ಬಾರಿಯೂ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಾರ್ಟಿಯ ಸುರೇಶ್ ಸಿಂಗ್ ಅವರನ್ನು 106924 ಮತಗಳ ಅಂತರದಿಂದ ಸೋಲಿಸಿದ್ದಾರೆ.

ರಾಧಿಕಾ ಶರತ್‌ಕುಮಾರ್ (ಬಿಜೆಪಿ, ವಿರುದ್‌ನಗರ)
ನಟಿ ರಾಧಿಕಾ ಶರತ್‌ಕುಮಾರ್ ಅವರು ತಮಿಳುನಾಡಿನ ವಿರುದ್‌ನಗರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಆದರೆ ಸೋತಿದ್ದಾರೆ.

ಸ್ಮೃತಿ ಇರಾನಿ

ಗಾಂಧಿ ಕುಟುಂಬದ ಕ್ಷೇತ್ರ ಅಮೇಠಿಯಲ್ಲಿ ಸ್ಮೃತಿ ಇರಾನಿಗೆ ಈ ಬಾರಿ ಸೋಲಾಗಿದೆ. ಗಾಂಧಿ ಕುಟುಂಬದ ಬಲಗೈ ಬಂಟ ಕಿಶೋರಿ ಲಾಲ್‌ ಶರ್ಮಾ ಇಲ್ಲಿ ಇರಾನಿಗೆ ಸೋಲಿನ ರುಚಿ ತೋರಿಸಿದ್ದಾರೆ. ಈ ಮೂಲಕ ಕಳೆದ ಬಾರಿ ರಾಹುಲ್‌ ಗಾಂಧಿಯನ್ನೇ ಸೋಲಿಸಿದ್ದ ಇರಾನಿ, ಇದೀಗ ಅವರ ಬಂಟನ ಕೈಯಲ್ಲಿ ಸೋಲು ಕಾಣುವಂತಾಗಿದೆ.

ಮನೋಜ್ ತಿವಾರಿ (ಬಿಜೆಪಿ, ಈಶಾನ್ಯ ದೆಹಲಿ)

ಈಶಾನ್ಯ ದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಭೋಜ್‌ಪುರಿ ನಟ, ಗಾಯಕ ಮನೋಜ್ ತಿವಾರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕನ್ಹಯ್ಯ ಕುಮಾರ್ ವಿರುದ್ಧ ಭರ್ಜರಿ ಮತಗಳಿಂದ ಗೆದ್ದಿದ್ದಾರೆ.

ರವಿ ಕಿಶನ್

ರಾಜಕಾರಣಿ ಹಾಗೂ ಬಿಜೆಪಿ ನಾಯಕ ರವಿ ಕಿಶನ್ ಉತ್ತರ ಪ್ರದೇಶದ ಗೋರಖ್‌ಪುರ ಕ್ಷೇತ್ರದಿಂದ 74,536 ಮತಗಳ ಅಂತರದಿಂದ ಗೆದ್ದಿದ್ದಾರೆ.

ಪವನ್ ಸಿಂಗ್

ಜನಪ್ರಿಯ ಭೋಜ್‌ಪುರಿ ನಟ ಮತ್ತು ಗಾಯಕ ಪವನ್ ಸಿಂಗ್ ಬಿಹಾರದ ಕಾರಕಟ್‌ನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮುನ್ನಡೆ ಸಾಧಿಸಿದ್ದಾರೆ.

Continue Reading

ಬಾಲಿವುಡ್

Election Results 2024: ಕಂಗನಾ ರಣಾವತ್‌ ಎದುರು ʼಮಂಡಿʼಯೂರಿದ ಖ್ಯಾತ ರಾಜಕಾರಣಿಯ ಮಗ!

Election Results 2024: 2024ರ ಚುನಾವಣೆಯ ಫಲಿತಾಂಶದ ದಿನದಂದು ಕಂಗನಾ ತಮ್ಮ ತಾಯಿಯ ಆಶೀರ್ವಾದವನ್ನು ಪಡೆದಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಟನೆ ತೊರೆಯುವುದಾಗಿ ಕಂಗನಾ ರಣಾವತ್‌ ಈಗಾಗಲೇ ಘೋಷಣೆ ಮಾಡಿದ್ದಾರೆ. ಕಂಗನಾ ರಣಾವತ್‌ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಸ್ಪರ್ಧಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 65,807 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

VISTARANEWS.COM


on

Election Results 2024 Kangana Ranaut on lead
Koo

ಬೆಂಗಳೂರು: ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ (Election Results 2024) ಗೆದ್ದು ಬೀಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಸ್ಪರ್ಧಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ವಿನ್‌ ಆಗಿದ್ದಾರೆ. ಆ ಮೂಲಕ ನಟಿಯ ಗೆಲುವು ಖಚಿತವಾಗಿದೆ.

“ಹೆಣ್ಣಿನ ಬಗ್ಗೆ ಕೀಳಾಗಿ ಮಾತನಾಡುವ ಪರಿಣಾಮಗಳನ್ನು ಅವರು ಅನುಭವಿಸಬೇಕಾಗುತ್ತದೆ. ನನ್ನ ‘ಜನ್ಮಭೂಮಿ’ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ. ಬಹುಶಃ, ಬೇರೊಬ್ಬರು ತಮ್ಮ ಬ್ಯಾಗ್‌ ಪ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ಆದರೆ ನಾನು ಇಲ್ಲಿ ಇದ್ದೇ ಇರುತ್ತೇನೆʼʼಎಂದು ಗೆಲ್ಲುವ ಮುಂಚೆ ಕಂಗನಾ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Election Results 2024: ಇಂದೋರ್‌ನಲ್ಲಿ NOTAಕ್ಕೆ ಲಭಿಸಿತು ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮತ; ಹಿಂದಿನ ದಾಖಲೆಗಳೆಲ್ಲ ಉಡೀಸ್‌

2024ರ ಚುನಾವಣೆಯ ಫಲಿತಾಂಶದ ದಿನದಂದು ಕಂಗನಾ ತಮ್ಮ ತಾಯಿಯ ಆಶೀರ್ವಾದವನ್ನು ಪಡೆದಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಟನೆ ತೊರೆಯುವುದಾಗಿ ಕಂಗನಾ ರಣಾವತ್‌ ಈಗಾಗಲೇ ಘೋಷಣೆ ಮಾಡಿದ್ದಾರೆ. ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

Continue Reading

Lok Sabha Election 2024

Election Results 2024: ಮತ ಎಣಿಕೆಯ ಮೊದಲು ತಾಯಿಯಿಂದ ಮೊಸರು-ಸಕ್ಕರೆಯ ಆಶೀರ್ವಾದ ಪಡೆದ ಕಂಗನಾ!

Election Results 2024: ಕಂಗನಾ ತಾಯಿಯ ಆಶೀರ್ವಾದ ಪಡೆದ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. . “ತಾಯಿಯೇ ದೇವರ ರೂಪ, ಇಂದು ನನ್ನ ತಾಯಿ ನನಗೆ ಮೊಸರು ಮತ್ತು ಸಕ್ಕರೆಯನ್ನು ತಿನ್ನಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

VISTARANEWS.COM


on

Election Results 2024 leading from Mandi, takes her mother's blessings
Koo

ಬೆಂಗಳೂರು: ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್‌ (Kangana Ranaut) ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ (Election Results 2024) ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. 2024ರ ಚುನಾವಣೆಯ ಫಲಿತಾಂಶದ ದಿನದಂದು ಅವರು ತಮ್ಮ ತಾಯಿಯ ಆಶೀರ್ವಾದವನ್ನು ಪಡೆದರು. ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ ಸ್ಪರ್ಧಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಅವರು 6 ಬಾರಿ ಸಿಎಂ ಆಗಿದ್ದ ವೀರಭದ್ರ ಸಿಂಗ್ ಹಾಗೂ ಹಾಲಿ ಮಂಡಿ ಸಂಸದೆ ಪ್ರತಿಭಾ ಸಿಂಗ್ ಅವರ ಪುತ್ರ.

ಕಂಗನಾ ತಾಯಿಯ ಆಶೀರ್ವಾದ ಪಡೆದ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. . “ತಾಯಿಯೇ ದೇವರ ರೂಪ, ಇಂದು ನನ್ನ ತಾಯಿ ನನಗೆ ಮೊಸರು ಮತ್ತು ಸಕ್ಕರೆಯನ್ನು ತಿನ್ನಿಸುತ್ತಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ತಮ್ಮ ಗೆಲುವಿನ ವಿಶ್ವಾಸದಲ್ಲಿರುವ ಕಂಗನಾಗೆ ಇದು ದೊಡ್ಡ ದಿನ. “ಮಂಡಿಯು ಹೆಣ್ಣು ಮಕ್ಕಳಿಗೆ ಆಗುವ ಅವಮಾನಗಳನ್ನು ನಾನು ಸಹಿಸುವುದಿಲ್ಲ. ಹಿಮಾಚಲ ಪ್ರದೇಶ ನನ್ನ ‘ಜನ್ಮಭೂಮಿ’ ಮತ್ತು ನಾನು ಇಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆʼʼ ಎಂದು ಕಂಗನಾ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: AP Election results 2024 live: ಆಂಧ್ರ ಪ್ರದೇಶ ವಿಧಾನಸಭೆ: ಭರ್ಜರಿ ಗೆಲುವಿನತ್ತ ಟಿಡಿಪಿ

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ನಟನೆ ತೊರೆಯುವುದಾಗಿ ಕಂಗನಾ ರಣಾವತ್‌ ಈಗಾಗಲೇ ಘೋಷಣೆ ಮಾಡಿದ್ದಾರೆ. ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಈ ಘೋಷಣೆ ಮಾಡಿದ್ದಾರೆ. “ನೀವು ಮಂಡಿ ಲೋಕಸಭೆಯಲ್ಲಿ ಗೆಲುವು ಸಾಧಿಸಿದರೆ ಏನೆಲ್ಲ ಮಾಡುತ್ತೀರಿ” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೌದು, ಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದಾರೆ. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದಾರೆ.

Continue Reading
Advertisement
Dina Bhavishya
ಪ್ರಮುಖ ಸುದ್ದಿ6 mins ago

Dina Bhavishya: ಈ ರಾಶಿಯವರಿಗೆ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ!

Odisha
ದೇಶ5 hours ago

Odisha: ಒಡಿಶಾದಲ್ಲಿ ಬಿಜೆಪಿಗೆ ಗೆಲುವು; ಸಿಎಂ ರೇಸ್‌ನಲ್ಲಿದ್ದಾರೆ ಐವರು ನಾಯಕರು, ಯಾರವರು?

Pradeep Eshwar
ಕರ್ನಾಟಕ6 hours ago

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

India vs Ireland
ಕ್ರೀಡೆ6 hours ago

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

Sunita Williams
ಪ್ರಮುಖ ಸುದ್ದಿ7 hours ago

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Dr C N Manjunath
ಕರ್ನಾಟಕ7 hours ago

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

New Cancer Drug
ಆರೋಗ್ಯ7 hours ago

New Cancer Drug: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಕ್ರಾಂತಿ; ಹೊಸ ಔಷಧ ಪ್ರಯೋಗ ಶೇ. 100 ಯಶಸ್ವಿ!

World Environment Day celebration in karatagi
ಕೊಪ್ಪಳ7 hours ago

World Environment Day: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಬೇಕು

500 Rs deposit in the name of new admission children by old students of Government Kannada School Lingasugur
ಕರ್ನಾಟಕ7 hours ago

Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Koti Movie
ಸಿನಿಮಾ8 hours ago

Koti Movie: ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೈಲರ್ ರಿಲೀಸ್; ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ7 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌