Vice President Polls: ಎನ್‌ಡಿಎ ಅಭ್ಯರ್ಥಿ ಆಯ್ಕೆಗೆ ಇಂದು ಮಹತ್ವದ ಸಭೆ, ಮೂವರಲ್ಲಿ ಯಾರಾಗಬಹುದು? - Vistara News

ದೇಶ

Vice President Polls: ಎನ್‌ಡಿಎ ಅಭ್ಯರ್ಥಿ ಆಯ್ಕೆಗೆ ಇಂದು ಮಹತ್ವದ ಸಭೆ, ಮೂವರಲ್ಲಿ ಯಾರಾಗಬಹುದು?

Vice president polls: ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದೆ. ಇದರ ನಡುವೆಯೇ ಉಪರಾಷ್ಟ್ರಪತಿ ಚುನಾವಣೆ ರಂಗೇರಿದ್ದು, ಎನ್‌ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಮಹತ್ವದ ಸಭೆ ಇಂದು ನಡೆಯಲಿದೆ.

VISTARANEWS.COM


on

parliament
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಆಗಸ್ಟ್‌ ೬ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಯಾರು ಎನ್ನುವುದನ್ನು ನಿರ್ಧರಿಸುವ ಅತ್ಯಂತ ಮಹತ್ವದ ಸಭೆ ಶನಿವಾರ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಹಿರಿಯ ನಾಯಕರನ್ನು ಒಳಗೊಂಡ ಸಂಸದೀಯ ಮಂಡಳಿ ಸಭೆಯಲ್ಲಿ ಈ ವಿಚಾರ ಅಂತಿಮಗೊಳ್ಳಲಿದೆ.

ಎನ್‌ಡಿಎಯಲ್ಲಿರುವ ಬಿಜೆಪಿಯ ಮಿತ್ರ ಪಕ್ಷಗಳು ಕೂಡಾ ತಮ್ಮ ಆಯ್ಕೆಗಳನ್ನು ಕಳುಹಿಸಿಕೊಡಲಿದ್ದಾರೆ. ಇವುಗಳನ್ನೆಲ್ಲ ಪರಿಗಣಿಸಿ ಬಿಜೆಪಿ ಸಂಸದೀಯ ಮಂಡಳಿ ಅಂತಿಮ ತೀರ್ಮಾನವನ್ನು ಮಾಡಲಿದೆ.

ಸಹಮತಕ್ಕೆ ಪ್ರಯತ್ನ?
ಬಿಜೆಪಿ ಸಂಸದೀಯ ಮಂಡಳಿ ಸಭೆ ಒಬ್ಬ ಅಬ್ಯರ್ಥಿಯನ್ನು ಅಂತಿಮಗೊಳಿಸಿದ ಬಳಿಕ ಈ ಬಗ್ಗೆ ಪ್ರತಿಪಕ್ಷಗಳ ಜತೆಗೂ ಚರ್ಚಿಸಿ ಸಹಮತವನ್ನು ರೂಪಿಸುವ ಪ್ರಯತ್ನವೊಂದು ನಡೆಯಲಿದೆ ಎಂದು ಹೇಳಲಾಗಿದೆ. ಒಂದು ವೇಳೆ ಸಹಮತ ಮೂಡದಿದ್ದರೆ ಸ್ಪರ್ಧೆ ಖಚಿತವಾಗಲಿದೆ.

ಯಾರಿಗಿದೆ ಅವಕಾಶ?
ಎನ್‌ಡಿಎ ಅಭ್ಯರ್ಥಿ ಯಾರಾಗಬಹುದು ಎಂಬ ಬಗ್ಗೆ ಆಗಲೇ ಮೂರು ಹೆಸರುಗಳು ಚರ್ಚೆಯಲ್ಲಿವೆ. ಪಂಜಾಬಿನ ಮಾಜಿ ಮುಖ್ಯಮಂತ್ರಿಯಾಗಿರುವ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌, ಕೇಂದ್ರದ ಮಾಜಿ ಸಚಿವ ಮುಖ್ತಾರ್‌ ಅಬ್ಬಾಸ್‌ ನಕ್ವಿ ಮತ್ತು ಕೇರಳದ ರಾಜ್ಯಪಾಲರಾಗಿರುವ ಆರಿಫ್‌ ಮೊಹಮ್ಮದ್‌ ಖಾನ್‌ ಅವರ ಹೆಸರು ಪ್ರಮುಖವಾಗಿದೆ.

ಆಗಲೇ ನಾಮಪತ್ರ ಸಲ್ಲಿಕೆ ಆರಂಭ
ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜುಲೈ ೫ರಿಂದಲೇ ಆರಂಭವಾಗಿದ್ದು, ಜುಲೈ ೧೯ರವರೆಗೆ ಕಾಲಾವಕಾಶವಿದೆ. ಚುನಾವಣೆ ಆಗಸ್ಟ್‌ ೬ರಂದು ನಡೆಯಲಿದೆ. ರಾಜ್ಯಸಭೆಯ ಅಧ್ಯಕ್ಷರೂ ಆಗಲಿರುವ ಉಪರಾಷ್ಟ್ರಪತಿಗಳ ಆಯ್ಕೆಗೆ ಲೋಕಸಭಾ ಮತ್ತು ರಾಜ್ಯಸಭೆಯ ಸದಸ್ಯರು ಆಯ್ಕೆ ಮಾಡಲಿದ್ದಾರೆ. ರಾಷ್ಟ್ರಪತಿಗಳ ಚುನಾವಣೆಯಲ್ಲಿರುವಂತೆ ಇಲ್ಲಿ ಶಾಸಕರಿಗೆ ಮತಾಧಿಕಾರವಿರುವುದಿಲ್ಲ.

ಜುಲೈ ೧೮ರಂದು ರಾಷ್ಟ್ರಪತಿ ಚುನಾವಣೆ
ಜುಲೈ ೧೮ರಂದು ಸಂಸತ್ತಿನ ಅಧಿವೇಶನ ಆರಂಭವಾಗಲಿದ್ದು, ಅಂದೇ ರಾಷ್ಟ್ರಪತಿಗಳ ಆಯ್ಕೆಗೆ ಚುನಾವಣೆ ನಡೆಯಲಿದೆ. ದ್ರೌಪದಿ ಮುರ್ಮು ಅವರು ಎನ್‌ಡಿಎ ಅಭ್ಯರ್ಥಿಯಾಗಿದ್ದರೆ, ಮಾಜಿ ಸಚಿವ ಯಶ್ವಂತ್‌ ಸಿನ್ಹಾ ಅವರು ಪ್ರತಿಪಕ್ಷಗಳ ಅಭ್ಯರ್ಥಿಯಾಗಿದ್ದಾರೆ.

ಇದನ್ನೂ ಓದಿ| Explainer: ಶುರುವಾಗಿದೆ President Election ದಂಗಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bomb Threat: ಮುಂಬೈನ 50ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬಾಂಬ್‌ ದಾಳಿ ಬೆದರಿಕೆ; ಎಲ್ಲೆಡೆ ಕಟ್ಟೆಚ್ಚರ

Bomb Threat: ಮುಂಬೈನಲ್ಲಿರುವ ಪ್ರತಿಷ್ಠಿತ ಜಸ್ಲೋಕ್‌ ಹಾಸ್ಪಿಟಲ್‌, ರಹೇಜಾ ಹಾಸ್ಪಿಟಲ್‌, ಸೆವೆನ್‌ ಹಿಲ್ಸ್‌, ಕೊಹಿನೂರ್‌, ಕೆಇಎಂ, ಜೆಜೆ ಹಾಸ್ಪಿಟಲ್‌, ಸೇಂಟ್‌ ಜಾರ್ಜ್‌ ಹಾಸ್ಪಿಟಲ್‌ ಸೇರಿ ಹಲವು ಆಸ್ಪತ್ರೆಗಳ ಮೇಲೆ ಬಾಂಬ್‌ ದಾಳಿ ಮಾಡಲಾಗುವುದು ಎಂಬುದಾಗಿ ಬೆದರಿಕೆ ಹಾಕಲಾಗಿದೆ. ಇದಕ್ಕೂ ಕೆಲ ಗಂಟೆಗಳ ಮೊದಲು ದೇಶದ 41 ಏರ್‌ಪೋರ್ಟ್‌ಗಳನ್ನು ಸ್ಫೋಟಿಸಲಾಗುವುದು ಎಂದು ಬೆದರಿಕೆ ಒಡ್ಡಲಾಗಿತ್ತು.

VISTARANEWS.COM


on

Bomb threat
Koo

ಮುಂಬೈ: ದೇಶದಲ್ಲಿ ಇತ್ತೀಚೆಗೆ ಪ್ರಮುಖ ನಗರಗಳಲ್ಲಿ ಬಾಂಬ್‌ ದಾಳಿಗಳ ಬೆದರಿಕೆಗಳು (Bomb Threat) ಜಾಸ್ತಿಯಾಗಿವೆ. ಬೆಂಗಳೂರಿನ ಶಾಲೆಗಳು ಸೇರಿ ಮುಂಬೈ, ದೆಹಲಿ ಏರ್‌ಪೋರ್ಟ್‌ಗಳು (Airports), ಸರ್ಕಾರದ ಕಟ್ಟಡಗಳಿಗೆ ಹುಸಿ ಬೆದರಿಕೆ ಕರೆಗಳು, ಇ-ಮೇಲ್‌ಗಳು ರವಾನೆಯಾಗುತ್ತಲೇ ಇವೆ. ಇದರ ಬೆನ್ನಲ್ಲೇ, ಮಂಗಳವಾರ (ಜೂನ್‌ 18) ಮುಂಬೈನಲ್ಲಿರುವ 50ಕ್ಕೂ ಅಧಿಕ ಆಸ್ಪತ್ರೆಗಳನ್ನು (Mumbai Hospitals) ಸ್ಫೋಟಿಸುವುದಾಗಿ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದೆ. ಹಾಗಾಗಿ, ಪೊಲೀಸರು ಆಸ್ಪತ್ರೆಗಳ ಸುತ್ತ ಕಟ್ಟೆಚ್ಚರ ವಹಿಸಿದ್ದಾರೆ.

ಮಂಗಳವಾರವೇ ದೇಶದ 41 ವಿಮಾನ ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂಬುದಾಗಿ ಹುಸಿ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಆಗಲೂ ಭದ್ರತಾ ಸಿಬ್ಬಂದಿ, ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿಯ ಪರಿಶೀಲನೆ ನಡೆಸಿದ್ದರು. ಇದಾದ ಕೆಲವೇ ಗಂಟೆಯಲ್ಲಿ ಮುಂಬೈನ ಆಸ್ಪತ್ರೆಗಳಿಗೂ ಬಾಂಬ್‌ ಬೆದರಿಕೆ ಹಾಕಲಾಗಿದೆ. ಬಾಂಬ್‌ ಬೆದರಿಕೆಯ ಕುರಿತು ಪೊಲೀಸರೇ ಮಾಹಿತಿ ನೀಡಿದ್ದಾರೆ. ವಿಪಿಎನ್‌ ನೆಟ್‌ವರ್ಕ್‌ ಬಳಸಿ ಬಾಂಬ್‌ ದಾಳಿಯ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಮುಂಬೈನಲ್ಲಿರುವ ಪ್ರತಿಷ್ಠಿತ ಜಸ್ಲೋಕ್‌ ಹಾಸ್ಪಿಟಲ್‌, ರಹೇಜಾ ಹಾಸ್ಪಿಟಲ್‌, ಸೆವೆನ್‌ ಹಿಲ್ಸ್‌, ಕೊಹಿನೂರ್‌, ಕೆಇಎಂ, ಜೆಜೆ ಹಾಸ್ಪಿಟಲ್‌, ಸೇಂಟ್‌ ಜಾರ್ಜ್‌ ಹಾಸ್ಪಿಟಲ್‌ ಸೇರಿ ಹಲವು ಆಸ್ಪತ್ರೆಗಳ ಮೇಲೆ ಬಾಂಬ್‌ ದಾಳಿ ಮಾಡಲಾಗುವುದು ಎಂಬುದಾಗಿ ಬೆದರಿಕೆ ಹಾಕಲಾಗಿದೆ. ಇ-ಮೇಲ್‌ ಮೂಲಕ ಬೆದರಿಕೆ ಒಡ್ಡುತ್ತಲೇ ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿಯು ಆಸ್ಪತ್ರೆಗಳಿಗೆ ತೆರಳಿ, ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ, ಭದ್ರತೆಯನ್ನು ಕೂಡ ಹೆಚ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ, ದೇಶದ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸಲಾಗುವುದು ಎಂದು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಗೆ ಬೆದರಿಕೆಯ ಮೇಲ್‌ ಬಂದಿತ್ತು. ಬೆಂಗಳೂರು, ದೆಹಲಿ, ಅಹಮದಾಬಾದ್‌, ಚೆನ್ನೈ ಸೇರಿ ಹಲವು ನಗರಗಳ ಶಾಲೆಗಳನ್ನೂ ಸ್ಫೋಟಿಸುವ ಬೆದರಿಕೆ ಕರೆಗಳು ಬಂದಿದ್ದವು. ಬಳಿಕ ನಕಲಿ ಬಾಂಬ್‌ ಬೆದರಿಕೆ ಎಂಬುದಾಗಿ ತಿಳಿದುಬಂದಿತ್ತು. ಬೆಂಗಳೂರಿನಲ್ಲಿ ಶಾಲೆಗಳಿಗೆ ಬಾಂಬ್‌ ಬೆದರಿಕೆ ಬಂದಾಗಲಂತೂ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇದಾದ ಬಳಿಕ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಭಯಪಡುವಂತಾಗಿತ್ತು.

ಇದನ್ನೂ ಓದಿ: Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Continue Reading

ದೇಶ

Jagan Mohan Reddy: ಸರ್ಕಾರದ 500 ಕೋಟಿ ರೂ.ನಲ್ಲಿ ಜಗನ್‌ ಅರಮನೆ ನಿರ್ಮಾಣ? ಟಿಡಿಪಿ ಸ್ಫೋಟಕ ಆರೋಪ

Jagan Mohan Reddy: ಋಷಿಕೊಂಡ ಹಿಲ್ಸ್‌ ಪ್ರವಾಸಿ ತಾಣವಾಗಿತ್ತು. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ, 9.88 ಎಕರೆ ಜಾಗದಲ್ಲಿ ಜಗನ್‌ ಮೋಹನ್‌ ರೆಡ್ಡಿ ಅವರು ಬಂಗಲೆ ನಿರ್ಮಿಸಿದ್ದಾರೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಬಾತ್‌ ಟಬ್‌ ನಿರ್ಮಿಸಿದ್ದಾರೆ. ಇಂತಹ ಹತ್ತಾರು ಐಷಾರಾಮಿ ಕೋಣೆಗಳು, ಸೌಕರ್ಯಗಳು ಬಂಗಲೆಯಲ್ಲಿವೆ.

VISTARANEWS.COM


on

Jagan Mohan Reddy
Koo

ಅಮರಾವತಿ: ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ (Andhra Pradesh Assembly Election 2024) ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ (Jagan Mohan Reddy) ಅವರ ವೈಎಸ್‌ಆರ್‌ಸಿಪಿ ಪಕ್ಷವು ಸೋಲನುಭವಿಸಿದ್ದು, ಜಗನ್‌ ಮೋಹನ್‌ ರೆಡ್ಡಿ ಅವರು ಮುಖಭಂಗ ಅನುಭವಿಸಿದ್ದಾರೆ. ಎನ್‌.ಚಂದ್ರಬಾಬು ನಾಯ್ಡು (N Chandra Babu Naidu) ಅವರ ಟಿಡಿಪಿಯು ಆಂಧ್ರದಲ್ಲಿ ಅಧಿಕಾರಕ್ಕೆ ಬಂದಿದೆ. ಇದರ ಬೆನ್ನಲ್ಲೇ, “ಜಗನ್‌ ಮೋಹನ್‌ ರೆಡ್ಡಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದ 500 ಕೋಟಿ ರೂ. ವೆಚ್ಚದಲ್ಲಿ ವಿಶಾಖಪಟ್ಟಣಂನಲ್ಲಿ ಅರಮನೆಯಂತಹ ಐಷಾರಾಮಿ ಬಂಗಲೆ ಕಟ್ಟಿಸಿಕೊಂಡಿದ್ದಾರೆ” ಎಂಬುದಾಗಿ ಟಿಡಿಪಿ ಗಂಭೀರ ಆರೋಪ ಮಾಡಿದೆ.

ವಿಶಾಖಪಟ್ಟಣಂನಲ್ಲಿರುವ ಋಷಿಕೊಂಡ ಬೆಟ್ಟದಲ್ಲಿ ನಿರ್ಮಿಸಲಾಗಿರುವ ಟಿಡಿಪಿ ಶಾಸಕ ಗಂಟಾ ಶ್ರೀನಿವಾಸ್‌ ರಾವ್‌ ನೇತೃತ್ವದ ಎನ್‌ಡಿಎ ನಿಯೋಗವು ಭೇಟಿ ನೀಡಿದ್ದು, ಇದಾದ ಬಳಿಕ ಟಿಡಿಪಿಯು ಗಂಭೀರ ಆರೋಪ ಮಾಡಿದೆ. “ಜಗನ್‌ ಮೋಹನ್‌ ರೆಡ್ಡಿ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರದ 500 ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಬಂಗಲೆಯನ್ನು ಕಟ್ಟಿಸಿಕೊಂಡಿದ್ದಾರೆ. ಇನ್ನೂ 10 ವರ್ಷ ಆಡಳಿತದಲ್ಲಿರುತ್ತೇನೆ ಎಂದು ಭಾವಿಸಿ, ವೈಯಕ್ತಿಕ ಕಾರಣಗಳಿಗಾಗಿ ಇದನ್ನು ಬಳಸುವುದು ಅವರ ಉದ್ದೇಶವಾಗಿತ್ತು” ಎಂದು ಟಿಡಿಪಿ ಆರೋಪಿಸಿದೆ.

ವಿಶಾಖಪಟ್ಟಣಂ ಅಥವಾ ವೈಜಾಗ್‌ಅನ್ನೇ ಇದಕ್ಕೂ ಮೊದಲು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಲಾಗಿತ್ತು. ವೈ.ಎಸ್.ಜಗನ್‌ ಮೋಹನ್‌ ರೆಡ್ಡಿ ಅವರು ಇದಕ್ಕೂ ಮೊದಲು ಮೂರು ನಗರಗಳನ್ನು ರಾಜಧಾನಿ ಎಂಬುದಾಗಿ ಘೋಷಿಸಲಾಗಿತ್ತು. ವಿಶಾಖಪಟ್ಟಣಂಅನ್ನು ಕೂಡ ರಾಜಧಾನಿ ಎಂಬುದಾಗಿ ಘೋಷಿಸಲಾಗಿತ್ತು. ಹಾಗಾಗಿ, ಇಲ್ಲಿಯೇ ಐಷಾರಾಮಿ ಮನೆಯನ್ನು ಕಟ್ಟಿಸಿದ್ದಾರೆ. ಪತ್ನಿಯ ಆಸೆಯಂತೆಯೇ ಜಗನ್‌ ಮೋಹನ್‌ ರೆಡ್ಡಿ ಅವರು ಐಷಾರಾಮಿ ಬಂಗಲೆ ಕಟ್ಟಿಸಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ.

ಋಷಿಕೊಂಡ ಹಿಲ್ಸ್‌ ಪ್ರವಾಸಿ ತಾಣವಾಗಿತ್ತು. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದರು. ಆದರೆ, 9.88 ಎಕರೆ ಜಾಗದಲ್ಲಿ ಜಗನ್‌ ಮೋಹನ್‌ ರೆಡ್ಡಿ ಅವರು ಬಂಗಲೆ ನಿರ್ಮಿಸಿದ್ದಾರೆ. ಸುಮಾರು 36 ಲಕ್ಷ ರೂ. ವೆಚ್ಚದಲ್ಲಿ ಬಾತ್‌ ಟಬ್‌ ನಿರ್ಮಿಸಿದ್ದಾರೆ. ಇಂತಹ ಹತ್ತಾರು ಐಷಾರಾಮಿ ಕೋಣೆಗಳು, ಸೌಕರ್ಯಗಳು ಬಂಗಲೆಯಲ್ಲಿವೆ. ಇದನ್ನೇ ಪಾರ್ಟಿ ಕಚೇರಿ ಮಾಡುವುದು ಜಗನ್‌ ಮೋಹನ್‌ ರೆಡ್ಡಿ ಅವರ ಉದ್ದೇಶವಾಗಿತ್ತು ಎಂದು ಆರೋಪಿಸಲಾಗಿದೆ. ಆಂಧ್ರ ಪ್ರದೇಶ ವಿಧಾನ ಸಭೆಯ 175 ಸೀಟುಗಳ ಪೈಕಿ ಎನ್‌ಡಿಎ 164 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಈ ಪೈಕಿ ಟಿಡಿಪಿ 135, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 8 ಕಡೆ ಗೆದ್ದಿದೆ. ವೈಎಸ್‌ಆರ್‌ಸಿಪಿಯು ಕೇವಲ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದು ಅವರಿಗೆ ಮುಖಭಂಗ ತಂದಿದೆ.

ಇದನ್ನೂ ಓದಿ: Jagan Reddy : ಚುನಾವಣಾ ರ್ಯಾಲಿಯಲ್ಲಿ ಆಂಧ್ರ ಸಿಎಂ ಜಗನ್​​ ತಲೆಗೆ ಕಲ್ಲೆಸೆತ

Continue Reading

ದೇಶ

IPS Officer: ಕ್ಯಾನ್ಸರ್‌ನಿಂದ ಪತ್ನಿ ಸಾವಿನ ಸುದ್ದಿ ತಿಳಿದ ಕೆಲವೇ ನಿಮಿಷದಲ್ಲಿ ಐಪಿಎಸ್‌ ಅಧಿಕಾರಿ ಆತ್ಮಹತ್ಯೆ!

IPS Officer: ಹಿರಿಯ ಐಪಿಎಸ್‌ ಅಧಿಕಾರಿಯಾಗಿದ್ದ, ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶೀಲಾದಿತ್ಯ ಚೇಟಿಯಾ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪತ್ನಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಸುದ್ದಿಯನ್ನು ಅರಗಿಸಿಕೊಳ್ಳಲಾಗದೆ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

IPS Officer
Koo

ದಿಸ್ಪುರ: ಮನುಷ್ಯ ಎಷ್ಟೇ ದೊಡ್ಡ ಹುದ್ದೆಯಲ್ಲಿರಲಿ, ಎಷ್ಟೇ ಖಡಕ್‌ ಆಗಿರಲಿ, ಧೈರ್ಯವಂತನಾಗಿರಲಿ, ತನ್ನವರನ್ನು ಕಳೆದುಕೊಂಡಾಗ, ತಾನು ಪ್ರೀತಿಸುತ್ತಿದ್ದವರು ಕಣ್ಣೆದುರೇ ನಿಧನರಾದಾಗ ಅಧೀರನಾಗುತ್ತಾನೆ. ಇನ್ನೇಕೆ ಬದುಕಬೇಕು ಎಂದು ಹತಾಶನಾಗುತ್ತಾನೆ. ಇದೇ ಆತನನ್ನು ಆತ್ಮಹತ್ಯೆಗೆ ದಾರಿಮಾಡಿಕೊಡುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಅಸ್ಸಾಂನಲ್ಲಿ (Assam) ಐಪಿಎಸ್‌ ಅಧಿಕಾರಿಯೊಬ್ಬರು (IPS Officer) ಪತ್ನಿ ಕ್ಯಾನ್ಸರ್‌ನಿಂದ ನಿಧನರಾದ ಕೆಲವೇ ನಿಮಿಷಗಳಲ್ಲಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

ಹಿರಿಯ ಐಪಿಎಸ್‌ ಅಧಿಕಾರಿಯಾಗಿದ್ದ, ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶೀಲಾದಿತ್ಯ ಚೇಟಿಯಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಪತ್ನಿ ಅಗೋಮೊನಿ ಬರ್ಬರುವಾ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರು ಗುವಾಹಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ (ಜೂನ್‌ 18) ಆಸ್ಪತ್ರೆಯಲ್ಲಿಯೇ ನಿಧನರಾದರು. ಶೀಲಾದಿತ್ಯ ಚೇಟಿಯಾ ಅವರು ಆಸ್ಪತ್ರೆಗೆ ತೆರಳುವ ಮೊದಲೇ ಅವರ ಪತ್ನಿ ನಿಧನರಾಗಿದ್ದರು ಎಂದು ತಿಳಿದುಬಂದಿದೆ.

ಅಗೋಮೊನಿ ಬರ್ಬರುವಾ ಅವರು ಅಗಲಿದ್ದಾರೆ ಎಂಬ ಸುದ್ದಿಯು ಶೀಲಾದಿತ್ಯ ಚೇಟಿಯಾ ಅವರಿಗೆ ಬರಸಿಡಿಲು ಬಡಿದಂತೆ ಭಾಸವಾಗಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಅವರು ತಮ್ಮ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಡಿಐಜಿ ರ‍್ಯಾಂಕ್‌ ಆಫೀಸರ್‌ ಆಗಿದ್ದ ಶೀಲಾದಿತ್ಯ ಚೇಟಿಯಾ ಅವರು ಪತ್ನಿಯ ಅನಾರೋಗ್ಯದಿಂದಾಗಿ ಕಳೆದ ನಾಲ್ಕು ತಿಂಗಳಿಂದ ಸುದೀರ್ಘ ರಜೆಯಲ್ಲಿದ್ದರು ಎಂದು ತಿಳಿದುಬಂದಿದೆ.

‌”2009ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಶೀಲಾದಿತ್ಯ ಚೇಟಿಯಾ ಅವರು ನಿಧನರಾಗಿರುವುದು ದುರದೃಷ್ಟಕರ ಸಂಗತಿಯಾಗಿದೆ. ಶೀಲಾದಿತ್ಯ ಚೇಟಿಯಾ ಪತ್ನಿ ನಿಧನರಾದ ಕೆಲವೇ ನಿಮಿಷಗಳಲ್ಲಿ ಅಧಿಕಾರಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅಸ್ಸಾಂ ಪೊಲೀಸ್‌ ಇಲಾಖೆಗೆ ಶಾಕಿಂಗ್‌ ವಿಚಾರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಪ್ರಾರ್ಥಿಸುತ್ತೇವೆ” ಎಂದು ಅಸ್ಸಾಂ ಪೊಲೀಸ್‌ ಮಹಾನಿರ್ದೇಶಕ ಜಿ.ಪಿ. ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

Continue Reading

ದೇಶ

Union Budget 2024: ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಏರಿಕೆ? ಇಲ್ಲಿದೆ ಮಹತ್ವದ ಅಪ್‌ಡೇಟ್

Union Budget 2024: ಜುಲೈ 15ರಿಂದ 22ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾಗಿ, ಬಡವರು, ಮಧ್ಯಮ ವರ್ಗದವರ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ, ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷಕ್ಕೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Union Budget 2024
Koo

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಧಿಕಾರಕ್ಕೆ ಬಂದಿದ್ದು, ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ ಮಂಡಿಸಲು (Union Budget 2024) ಸಿದ್ಧತೆ ನಡೆಸಿದ್ದಾರೆ. ಇನ್ನು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಲಿದೆ ಎಂದು ಹೇಳಲಾಗುತ್ತಿದೆ. ಆದಾಯ ತೆರಿಗೆ ಮಿತಿಯನ್ನು 3 ಲಕ್ಷ ರೂಪಾಯಿಯಿಂದ (ಹೊಸ ತೆರಿಗೆ ಪದ್ಧತಿ) 5 ಲಕ್ಷ ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.

ದೇಶದಲ್ಲಿ ಈಗ ಹಳೆಯ ತೆರಿಗೆ ಪದ್ಧತಿ ಹಾಗೂ ಹೊಸ ತೆರಿಗೆ ಪದ್ಧತಿ ಚಾಲ್ತಿಯಲ್ಲಿವೆ. ಆದಾಯ ತೆರಿಗೆ ಪಾವತಿದಾರರು ಯಾವ ತೆರಿಗೆ ಪದ್ಧತಿಯನ್ನು ಬೇಕಾದರೂ ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಹಳೆಯ ತೆರಿಗೆ ಪದ್ಧತಿಯಲ್ಲಿ 2.5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಇದೆ. ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಂಡವರಿಗೆ 3 ಲಕ್ಷ ರೂ.ವರೆಗೆ ವಿನಾಯಿತಿ ಇದೆ. ಈಗ ಇದನ್ನು 5 ಲಕ್ಷ ರೂ.ಗೆ ಏರಿಕೆ ಮಾಡಬಹುದು ಎಂಬ ನಿರೀಕ್ಷೆ ಇದೆ. ಆದರೆ, ಗರಿಷ್ಠ ತೆರಿಗೆ ಪ್ರಮಾಣವನ್ನು ಶೇ.30ರಿಂದ ಶೇ.25ಕ್ಕೆ ಇಳಿಸಬೇಕು ಎಂಬ ಒತ್ತಾಯವಿದ್ದು, ಇದನ್ನು ಈಡೇರಿಸುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಜುಲೈ 15ರಿಂದ 22ರ ಅವಧಿಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದು ಹೇಳಲಾಗತ್ತಿದೆ.

ಹೊಸ ತೆರಿಗೆಯ ಸ್ಲ್ಯಾ ಬ್‌ ಹೀಗಿದೆ

ಆದಾಯವಿಧಿಸುವ ತೆರಿಗೆ
0-3 ಲಕ್ಷ ರೂ.ತೆರಿಗೆ ಇರಲ್ಲ
3-6 ಲಕ್ಷ ರೂ.5%
6-9 ಲಕ್ಷ ರೂ.10%
9-12 ಲಕ್ಷ ರೂ.15%
12-15 ಲಕ್ಷ ರೂ.20%
15 ಲಕ್ಷ ರೂ.ಗಿಂತ ಹೆಚ್ಚು30%

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

Union Budget 2024

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಜುಲೈನಲ್ಲಿ ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ಇದನ್ನೂ ಓದಿ: Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Continue Reading
Advertisement
Bomb threat
ದೇಶ4 hours ago

Bomb Threat: ಮುಂಬೈನ 50ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬಾಂಬ್‌ ದಾಳಿ ಬೆದರಿಕೆ; ಎಲ್ಲೆಡೆ ಕಟ್ಟೆಚ್ಚರ

Drowned in Water boy who went swimming drowned and died
ಬೀದರ್‌4 hours ago

Drowned in Water: ಡ್ಯಾಮ್ ನೀರಿನಲ್ಲಿ ಈಜಲು ಹೋದ ಬಾಲಕ ಮುಳುಗಿ ಸಾವು!

Jagan Mohan Reddy
ದೇಶ4 hours ago

Jagan Mohan Reddy: ಸರ್ಕಾರದ 500 ಕೋಟಿ ರೂ.ನಲ್ಲಿ ಜಗನ್‌ ಅರಮನೆ ನಿರ್ಮಾಣ? ಟಿಡಿಪಿ ಸ್ಫೋಟಕ ಆರೋಪ

PM Surya Ghar Yojana Comprehensive Review Meeting by Union Minister Pralhad Joshi
ಕರ್ನಾಟಕ4 hours ago

Pralhad Joshi: ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರದ ಪ್ರತೀಕ ಸೂರ್ಯ ಘರ್: ಜೋಶಿ

Sonakshi Sinha
ಬಾಲಿವುಡ್5 hours ago

Sonakshi Sinha: ಮುಸ್ಲಿಂ ಯುವಕನ ಜತೆ ಸೋನಾಕ್ಷಿ ಸಿನ್ಹಾ ವಿವಾಹ; ತಾಯಿ, ಸಹೋದರನೂ ಮದುವೆಗೆ ಹೋಗಲ್ಲ?

Construction of International Cricket Stadium at Shira MLA T B Jayachandra KSCA team inspection
ಕರ್ನಾಟಕ6 hours ago

Shira News: ಶಿರಾದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ; ಶಾಸಕ ಜಯಚಂದ್ರ ಪರಿಶೀಲನೆ

Malayali actress Honey Rose starring Rachel movie Teaser release
ಕರ್ನಾಟಕ6 hours ago

Rachel Movie: ಮಲಯಾಳಿ ನಟಿ ಹನಿ ರೋಸ್ ನಾಯಕಿಯಾಗಿ ನಟಿಸಿರುವ ‘ರೆಚೆಲ್’ ಚಿತ್ರದ ಟೀಸರ್ ರಿಲೀಸ್‌

IPS Officer
ದೇಶ6 hours ago

IPS Officer: ಕ್ಯಾನ್ಸರ್‌ನಿಂದ ಪತ್ನಿ ಸಾವಿನ ಸುದ್ದಿ ತಿಳಿದ ಕೆಲವೇ ನಿಮಿಷದಲ್ಲಿ ಐಪಿಎಸ್‌ ಅಧಿಕಾರಿ ಆತ್ಮಹತ್ಯೆ!

Sambhavami Yuge Yuge movie release on June 21
ಕರ್ನಾಟಕ6 hours ago

Kannada New Movie: ಜೂ.21ಕ್ಕೆ ‘ಸಂಭವಾಮಿ ಯುಗೇ ಯುಗೇ’ ಚಿತ್ರ ರಿಲೀಸ್‌

Kodi Mutt Swamiji
ಪ್ರಮುಖ ಸುದ್ದಿ6 hours ago

Kodi Mutt Swamiji: ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು, ರಾಜ್ಯದಲ್ಲಿ ಅತಿವೃಷ್ಟಿ: ಕೋಡಿಮಠ ಶ್ರೀ ಭವಿಷ್ಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌