Assembly Election 2023: ಮಧ್ಯಪ್ರದೇಶದಲ್ಲಿ ಶೇ.71.16, ಛತ್ತೀಸ್‌ಗಢದಲ್ಲಿ ಶೇ.68.15 ಮತದಾನ - Vistara News

ದೇಶ

Assembly Election 2023: ಮಧ್ಯಪ್ರದೇಶದಲ್ಲಿ ಶೇ.71.16, ಛತ್ತೀಸ್‌ಗಢದಲ್ಲಿ ಶೇ.68.15 ಮತದಾನ

VISTARANEWS.COM


on

Assembly Election 2023: 71.16 pc voting in Madhya Pradesh, 68.15 pc in Chhattisgarh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮಧ್ಯ ಪ್ರದೇಶ (Madhya Pradesh Election) ಹಾಗೂ ಛತ್ತೀಸ್‌ಗಢ(Chhattisgarh Election) ವಿಧಾನಸಭೆ ಚುನಾವಣೆಗೆ ಶುಕ್ರವಾರ ಮತದಾನ ನಡೆಯಿತು(Voting). ಸಂಜೆ 5ರ ಹೊತ್ತಿಗೆ ಮಧ್ಯ ಪ್ರದೇಶದಲ್ಲಿ ಶೇ.71.16 ಹಾಗ ಛತ್ತೀಸ್‌ಗಢದ 70 ಕ್ಷೇತ್ರಗಳಿಗೆ ನಡೆದ ಎರಡನೇ ಹಂತದ ಚುನಾವಣೆಗೆ ಶೇ.68.15ರಷ್ಟು ಮತದಾನ ನಡೆಯಿತು. ಈ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ತೀವ್ರ ಹಣಾಹಣಿ ಇದೆ. ಸದ್ಯ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ (Congress Party) ಆಡಳಿತದಲ್ಲಿದ್ದರೆ, ಮಧ್ಯ ಪ್ರದೇಶದಲ್ಲಿ ಬಿಜೆಪಿ ಪಕ್ಷದ (BJP party) ಸರ್ಕಾರವಿದೆ. ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ(election Result).

ಮಧ್ಯಪ್ರದೇಶದಲ್ಲಿ ಶುಕ್ರವಾರ ಮತದಾನ ನಡೆದ ಎಲ್ಲಾ 230 ವಿಧಾನಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.60.52ರಷ್ಟು ಮತದಾನವಾಗಿತ್ತು. ರಾಜ್ಯದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.45.40ರಷ್ಟು ಮತದಾನ ನಡೆದಿತ್ತು. ಮಧ್ಯ ಪ್ರದೇಶದಲ್ಲಿ ಶುಗ್ರವಾರ ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಶುರುವಾಗಿತ್ತು. ಮಧ್ಯ ಪ್ರದೇಶದ ಚುನಾವಣೆಯಲ್ಲಿ 2,500ಕ್ಕೂ ಅಧಿಕ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಸುಮಾರು 5.59 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದರು. ಇದರಲ್ಲಿ 2.87 ಕೋಟಿ ಪುರುಷ ಮತ್ತು 2.71 ಕೋಟಿ ಮಹಿಳಾ ಮತದಾರರಿದ್ದಾರೆ. ಮಹಿಳೆಯರೇ ನಡೆಸುವ 5,000 ಬೂತ್‌ಗಳು ಮತ್ತು 183 ವಿಕಲಚೇತನರು ನಡೆಸುತ್ತಿರುವ ಮತಗಟ್ಟೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಮತದಾನ

ಛತ್ತೀಸ್‌ಗಢದಲ್ಲಿ ಎರಡನೇ ಹಂತದಲ್ಲಿ 70 ಕ್ಷೇತ್ರಗಳಿಗೆ ಶೇ.68.15ರಷ್ಟು ಮತದಾನ ನಡೆಯಿತು. ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಶೇ.55.31 ರಷ್ಟು ಮತದಾನವಾಗಿದೆ. ಮಧ್ಯಾಹ್ನ 1 ಗಂಟೆಯವರೆಗೆ ಶೇ.38.22ರಷ್ಟು ಮತದಾನವಾಗಿತ್ತು. ನವೆಂಬರ್ 7ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಛತ್ತೀಸ್‌ಗಢನ 20 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಛತ್ತೀಸ್‌ಗಢ ಒಟ್ಟು 90 ಕ್ಷೇತ್ರಗಳನ್ನು ಹೊಂದಿವೆ.

ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಮತದಾನಕ್ಕಾಗಿ 18,800ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಮತದಾನ ನಡೆಯುತ್ತಿರುವ 70 ಕ್ಷೇತ್ರಗಳಲ್ಲಿ ಒಟ್ಟು 958 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶ ಎರಡರಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪ್ರಮುಖ ಹಣಾಹಣಿ ಇದೆ.

ಲೋಕಸಭೆ ಚುನಾವಣೆಗೆ ಸುಮಾರು ಆರು ತಿಂಗಳ ಮುಂಚಿತವಾಗಿ ನಡೆಯುತ್ತಿರುವ ಐದು ರಾಜ್ಯಗಳ ಚುನಾವಣೆಗಳು ವಿವಿಧ ಕಾರಣಗಳಿಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ನಿರ್ಣಾಯಕವಾಗಿವೆ. ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮತ ಎಣಿಕೆ ಜೊತೆಗೆ ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನ ಮತ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ.

ಈ ಸುದ್ದಿಯನ್ನೂ ಓದಿ: Mahadev App Case: ಛತ್ತೀಸ್‌ಗಢ ಸಿಎಂ ಬಘೇಲ್ ವಿರುದ್ಧ ಲಂಚದ ಪುರಾವೆ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

K Kavitha: ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ ಜುಲೈ 3ರವರೆಗೆ ವಿಸ್ತರಣೆ; ಸಾಕ್ಷ್ಯ ನಾಶದ ಆರೋಪ

K Kavitha: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಭಾರತ ರಾಷ್ಟ್ರ ಸಮಿತಿ ನಾಯಕಿ, ವಿಧಾನ ಪರಿಷತ್‌ ಸದಸ್ಯೆ ಕೆ. ಕವಿತಾ ವಿರುದ್ಧ ಜಾರಿ ನಿರ್ದೇಶನಾಲಯ ಸೋಮವಾರ ಆರೋಪ ಪಟ್ಟಿ ಸಲ್ಲಿಸಿದೆ. ಕವಿತಾ ಅವರು ಸುಮಾರು 292.8 ಕೋಟಿ ರೂ. ಮೌಲ್ಯದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದೆ. ಜತೆಗೆ ಈ ಹಗರಣದಲ್ಲಿ 1,100 ಕೋಟಿ ರೂ.ಗಿಂತ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದೂ ತಿಳಿಸಿದೆ.

VISTARANEWS.COM


on

K Kavitha
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ (Delhi Liquor Policy Case) ಸಂಬಂಧಿಸಿದಂತೆ ಬಂಧನದಲ್ಲಿರುವ ಭಾರತ ರಾಷ್ಟ್ರ ಸಮಿತಿ (BRS) ನಾಯಕಿ, ವಿಧಾನ ಪರಿಷತ್‌ ಸದಸ್ಯೆ (MLC) ಕೆ. ಕವಿತಾ (K Kavitha) ವಿರುದ್ಧ ಜಾರಿ ನಿರ್ದೇಶನಾಲಯ (Enforcement Directorate) ಸೋಮವಾರ ಆರೋಪ ಪಟ್ಟಿ ಸಲ್ಲಿಸಿದೆ. ಕವಿತಾ ಅವರು ಸುಮಾರು 292.8 ಕೋಟಿ ರೂ. ಮೌಲ್ಯದ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದೆ. ಜತೆಗೆ ಈ ಹಗರಣದಲ್ಲಿ ಒಟ್ಟು 1,100 ಕೋಟಿ ರೂ.ಗಿಂತ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದೂ ತಿಳಿಸಿದೆ.

ದೆಹಲಿ ಕೋರ್ಟ್‌ನ ವಿಶೇಷ ನ್ಯಾಯಾಧೀಶೆ ಕಾವೇರಿ ಬೆವೇಜಾ ಅವರ ಮುಂದೆ ಪೂರಕ ಪ್ರಾಸಿಕ್ಯೂಷನ್ ದೂರು ಸಲ್ಲಿಸಿದ್ದು, ಕವಿತಾ ಅವರ ನ್ಯಾಯಾಂಗ ಬಂಧನವನ್ನು ಜುಲೈ 3ರವರೆಗೆ ವಿಸ್ತರಿಸಲಾಗಿದೆ. ಜತೆಗೆ ಪ್ರಿನ್ಸ್, ದಾಮೋದರ್ ಮತ್ತು ಅರವಿಂದ್ ಸಿಂಗ್ ಎಂಬ ಮೂವರು ಸಹ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಇಲ್ಲಿಯ ತನಕ ನಡೆದ ತನಿಖೆಯ ಪ್ರಕಾರ ಒಟ್ಟು 1,100 ಕೋಟಿ ರೂ. ಮೊತ್ತದ ಹಗರಣ ನಡೆದಿರುವುದು ಕಂಡು ಬಂದಿದೆ. ಕವಿತಾ, ಚಂಪ್ರೀತ್ ಸಿಂಗ್, ಪ್ರಿನ್ಸ್ ಕುಮಾರ್, ದಾಮೋದರ್ ಶರ್ಮಾ ಮತ್ತು ಅರವಿಂದ್ ಸಿಂಗ್ ಅವರು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ. ಈ ಪೈಕಿ ಕವಿತಾ ಅವರು 292.8 ಕೋಟಿ ರೂ.ಗಳ ಪಿಒಸಿ (Money generated and laundered in crime)ಯಲ್ಲಿ ಭಾಗಿಯಾಗಿದ್ದಾರೆ. 100 ಕೋಟಿ ರೂ.ಗಳ ಕಿಕ್‌ಬ್ಯಾಕ್‌ ಅನ್ನು ಎಎಪಿ ನಾಯಕರಿಗೆ ನೀಡಲಾಗಿದೆ. ಮಾತ್ರವಲ್ಲ ಕವಿತಾ ಅವರು ಮೊಬೈಲ್‌ನಲ್ಲಿದ್ದ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದೂ ದೂರಲಾಗಿದೆ.

ಆರೋಪಿ ವಿಜಯ್ ನಾಯರ್ (ಎಎಪಿಯ ಉನ್ನತ ನಾಯಕರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ) ಮೂಲಕ ಕವಿತಾ ಅವರು ಸೌತ್ ಗ್ರೂಪ್ ಸದಸ್ಯರು ಮತ್ತು ಎಎಪಿ ನಾಯಕರೊಂದಿಗೆ ಸೇರಿ 100 ಕೋಟಿ ರೂ.ಗಳನ್ನು ಪಾವತಿಸಲು ಮತ್ತು ಅನಗತ್ಯ ಪ್ರಯೋಜನಗಳನ್ನು ಪಡೆಯಲು ಸಂಚು ರೂಪಿಸಿದ್ದರು ಎಂದು ವಿವರಿಸಲಾಗಿದೆ.

ಪ್ರಕರಣದ ಹಿನ್ನೆಲೆ

ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿರುವ ಕೆ. ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿ, ಸುಮಾರು ನಾಲ್ಕು ತಾಸು ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಮಾರ್ಚ್‌ 15 ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೀಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ ಹಾಗೂ ಸಿಬಿಐ ಅಧಿಕಾರಿಗಳು ಕೆ. ಕವಿತಾ ಅವರನ್ನು ವಿಚಾರಣೆ ನಡೆಸಿದೆ.

ಇದನ್ನೂ ಓದಿ: Liquor Policy Case : ಆಪ್​ ನಾಯಕರಿಗೆ ಕವಿತಾ 100 ಕೋಟಿ ಲಂಚ ಕೊಟ್ಟಿದ್ದು ಹೌದು; ಇಡಿ ಮಾಹಿತಿ

ಸೌತ್‌ ಗ್ರೂಪ್‌ ಎಂಬ ಕಂಪನಿಯನ್ನು ಕೆ. ಕವಿತಾ ಸೇರಿ ಹಲವರನ್ನು ಮುನ್ನಡೆಸುತ್ತಿದ್ದು, ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ಬಳಿಕ ಇದೇ ಕಂಪನಿಗೆ ಗುತ್ತಿಗೆ ಪಡೆಯಲು ಆಮ್‌ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಕ್ಕೆ ಲಂಚ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕಾಗಿ ಇ.ಡಿ ಹಾಗೂ ಸಿಬಿಐ ಕೂಲಂಕಷ ತನಿಖೆ ನಡೆಸುತ್ತಿದೆ. 

Continue Reading

ದೇಶ

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Lok Sabha Election Result 2024 Live: ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದೆ. ಮತಎಣಿಕೆ ಕೇಂದ್ರಗಳಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಒಟ್ಟು 543 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, 272 ಮ್ಯಾಜಿಕ್‌ ನಂಬರ್‌ ಆಗಿದೆ. ನರೇಂದ್ರ ಮೋದಿ ಹ್ಯಾಟ್ರಿಕ್‌ ಬಾರಿಸುವರೋ ಇಲ್ಲವೇ ಇಂಡಿಯಾ ಒಕ್ಕೂಟ ಮುನ್ನಡೆ ಪಡೆಯುವುದೋ ಎಂಬ ಚರ್ಚೆ, ನಿರೀಕ್ಷೆ, ಕುತೂಹಲ ಹೆಚ್ಚಾಗಿದೆ. ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.

VISTARANEWS.COM


on

Lok Sabha Election Result 2024 Live
Koo

ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆ ಫಲಿತಾಂಶಕ್ಕೆ (Lok Sabha Election Result 2024 Live) ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ (ಜೂನ್‌ 4) ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದ್ದು, ಇದಕ್ಕಾಗಿ ಚುನಾವಣೆ ಆಯೋಗವು (Election Commission) ಸಕಲ ಸಿದ್ಧತೆ ಮಾಡಿಕೊಂಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಪ್ರತಿಕ್ಷಣದ ಮಾಹಿತಿಯು ಇಲ್ಲಿ ಲಭ್ಯವಾಗಲಿದೆ.

ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

Continue Reading

ಉದ್ಯೋಗ

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Job Alert: 304 ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಏರ್‌ ಫೋರ್ಸ್‌ ಅರ್ಜಿ ಆಹ್ವಾನಿಸಿದೆ (Indian Air Force Recruitment 2024). ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 28.

VISTARANEWS.COM


on

Job Alert
Koo

ನವದೆಹಲಿ: ಭಾರತೀಯ ವಾಯುಪಡೆ (Indian Air Force)ಯಲ್ಲಿ ಕಾರ್ಯ ನಿರ್ವಹಿಸಬೇಕು ಎನ್ನುವ ಕನಸು ಬಹುತೇಕರಲ್ಲಿರುತ್ತದೆ. ಇದೀಗ ಅಂತಹ ಕನಸು ನನಸಾಗುವ ಸಮಯ ಬಂದಿದೆ. 304 ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಏರ್‌ ಫೋರ್ಸ್‌ ಅರ್ಜಿ ಆಹ್ವಾನಿಸಿದೆ (Indian Air Force Recruitment 2024). ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜೂನ್‌ 28 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಫ್ಲೈಯಿಂಗ್: 29, ಗ್ರೌಂಡ್ ಡ್ಯೂಟಿ (ಟೆಕ್ನಿಕಲ್): 156, ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್): 119 ಮತ್ತು ಫ್ಲೈಯಿಂಗ್: ಎನ್‌ಸಿಸಿ ಸ್ಪೆಷಲ್‌ ಎಂಟ್ರಿ ಸ್ಕೀಮ್‌ ಅಡಿಯಲ್ಲಿ ಶೇ. 10ರಷ್ಟು ಹುದ್ದೆಗಳಿವೆ.
ಫ್ಲೈಯಿಂಗ್ ಬ್ರ್ಯಾಂಚ್ ಹುದ್ದೆಗಳಿಗೆ: ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ಕ್ಲಾಸ್ ತೇರ್ಡೆಯಾಗಿರಬೇಕು.
ಗ್ರೌಂಡ್ ಡ್ಯೂಟಿ (ನಾನ್‌ ಟೆಕ್ನಿಕಲ್) ಹುದ್ದೆಗಳಿಗೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಗ್ರೌಂಡ್ ಡ್ಯೂಟಿ (ಟೆಕ್ನಿಕಲ್) ಬ್ರ್ಯಾಂಚ್ ಹುದ್ದೆಗಳಿಗೆ: ಭೌತಶಾಸ್ತ್ರ, ಗಣಿತ ವಿಷಯಗಳೊಂದಿಗೆ 12ನೇ ಕ್ಲಾಸ್ ಓದಿ, ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ

ಏರ್‌ ಫೋರ್ಸ್‌ ಕಾಮನ್ ಅಡ್ಮಿಷನ್ ಟೆಸ್ಟ್‌ (Air Force Common Admission Test)ಗೆ ಅರ್ಜಿ ಸಲ್ಲಿಸುವ ಮುನ್ನ ವಯೋಮಿತಿಯನ್ನು ಗಮನಿಸಿ. ಫ್ಲೈಯಿಂಗ್‌ ಬ್ರ್ಯಾಂಚ್‌ಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 24 ವರ್ಷ. ಗ್ರೌಂಡ್‌ ಡ್ಯೂಟಿ (ಟೆಕ್ನಿಕಲ್‌ / ನಾನ್‌ ಟೆಕ್ನಿಕಲ್‌) ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವರ್ಷ 20 ವರ್ಷ ಮತ್ತು ಗರಿಷ್ಠ ವಯಸ್ಸು 26 ವರ್ಷ.

ಅರ್ಜಿ ಶುಲ್ಕ

ಎಎಫ್‌ಸಿಎಟಿ ಪ್ರವೇಶ ಶುಲ್ಕ 550 ರೂ. ಇನ್ನು ಎನ್‌ಸಿಸಿ ಸ್ಪೆಷಲ್‌ ಎಂಟ್ರಿ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.
ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಇದಕ್ಕಾಗಿ ಕ್ರೆಡಿಟ್ ಕಾರ್ಡ್‌, ಡೆಬಿಟ್ ಕಾರ್ಡ್‌, ನೆಟ್‌ ಬ್ಯಾಂಕಿಂಗ್, ಇ-ಚಲನ್‌ ಬಳಸಬಹುದು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಒಟ್ಟು 300 ಅಂಕಗಳಿಗೆ ನಡೆಯಲಿದೆ. 100 ಪ್ರಶ್ನೆಗಳು ಇರಲಿದ್ದು, ಎರಡು ಗಂಟೆ ಅವಧಿಯನ್ನು ಹೊಂದಿದೆ. ಲಿಖಿತ ಪರೀಕ್ಷೆ ಜನರಲ್‌ ಅವರ್ನೆಸ್‌, ವರ್ಬಲ್‌ ಎಬಿಲಿಟಿ, ನ್ಯುಮೆರಿಕಲ್‌ ಎಬಿಲಿಟಿ ಮತ್ತು ರೀಸನಿಂಗ್‌ & ಮಿಲಿಟರಿ ಅಪ್ಟಿಟ್ಯೂಡ್‌ ಟೆಸ್ಟ್‌ ಅನ್ನು ಒಳಗೊಂಡಿದೆ.

Indian Air Force Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು, ಅಗತ್ಯ ಮಾಹಿತಿಗಳನ್ನು ನೀಡಿ ಹೆಸರು ನೋಂದಾಯಿಸಿ.
  • ನಂತರ ತೆರೆದುಕೊಳ್ಳುವ ಹೊಸ ಪುಟದಲ್ಲಿರುವ ಅರ್ಜಿ ನಮೂನೆಯನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ವೈರಲ್ ನ್ಯೂಸ್

Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

Viral News: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕೈಗೆ ಸಿಕ್ಕಿದ್ದನ್ನೆಲ್ಲಾ ದರೋಡೆ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ ಆರಾಮ ಮತ್ತು ತಂಪಾಗಿಸುವ ಎಸಿ ಗಾಳಿಯ ಅಡಿಯಲ್ಲಿ ನಿದ್ದೆಗೆ ಜಾರಿದ್ದು, ಪೊಲೀಸರು ಬಂದ ಬಳಿಕವೇ ಆತನಿಗೆ ಎಚ್ಚರವಾಯಿತು!

VISTARANEWS.COM


on

By

Viral News
Koo

ಲಕ್ನೋ: ಸರ್ಕಾರಿ ನೌಕರನೊಬ್ಬನ (government employee) ಮನೆಗೆ (house) ದರೋಡೆ ಮಾಡಲು ಬಂದ ಕಳ್ಳನೊಬ್ಬ (burglars) ಕೂಲಿಂಗ್ ಎಸಿ ಪ್ರಭಾವದಿಂದ ನಿದ್ದೆಗೆ ಜಾರಿದ ಘಟನೆ ಲಕ್ನೋದಲ್ಲಿ (Lucknow) ನಡೆದಿದ್ದು, ಪೊಲೀಸರು ಬಂದ ಬಳಿಕವೇ ಆತನಿಗೆ ಎಚ್ಚರವಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (Viral News) ಆಗಿದೆ.

ಕಳ್ಳತನದ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಮನೆಗೆ ಬಂದಾಗ ಬಹಳಷ್ಟು ವಸ್ತುಗಳನ್ನು ಕಳ್ಳರು ಕದ್ದೊಯ್ದಿರುವುದು ತಿಳಿದು ಬಂದಿದೆ. ಪೊಲೀಸರು ಬಂದು ತನಿಖೆ ನಡೆಸುತ್ತಿದ್ದಾಗ ಆರಾಮವಾಗಿ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಂಡು ಅವರು ಬೆಚ್ಚಿಬಿದ್ದರು. ಕಳ್ಳ ಎಚ್ಚರಗೊಂಡಾಗ ಅವನ ಮುಂದೆ ಪೊಲೀಸರು ಕುಳಿತಿರುವುದನ್ನು ಕಂಡು ಅವನೂ ಗಾಬರಿಗೊಂಡಿದ್ದಾನೆ. ಬಳಿಕ ಪೊಲೀಸರಿಗೆ ಸಂಪೂರ್ಣ ಕಥೆಯನ್ನು ವಿವರಿಸಿದ್ದಾನೆ. ಬಳಿಕ ಪೊಲೀಸರು ಆತನನ್ನು ಬಂಧಿಸಿದರು.

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ನಡೆದ ವಿಚಿತ್ರ ಘಟನೆ ಇದಾಗಿದೆ. ಕೈಗೆ ಸಿಕ್ಕಿದ್ದನ್ನೆಲ್ಲಾ ದರೋಡೆ ಮಾಡಲು ಮನೆಗೆ ನುಗ್ಗಿದ ಕಳ್ಳನೊಬ್ಬ ಆರಾಮ ಮತ್ತು ತಂಪಾಗಿಸುವ ಎಸಿ ಗಾಳಿಯ ಅಡಿಯಲ್ಲಿ ನಿದ್ದೆಗೆ ಜಾರಿದನು. ಇತರ ದರೋಡೆಕೋರರ ಜೊತೆಯಲ್ಲಿ ಮನೆಗೆ ಪ್ರವೇಶಿಸಿದ ಈತ ಗಾಢವಾದ ನಿದ್ರೆಯಿಂದ ಎಚ್ಚರವಾಗಲೇ ಇಲ್ಲ. ಹೀಗಾಗಿ ಇತರರು ಆತನನ್ನು ಅಲ್ಲೇ ಬಿಟ್ಟು ಹೋಗಿದ್ದಾರೆ.

ವಾರಣಾಸಿಯಲ್ಲಿ ನಿಯೋಜನೆಗೊಂಡಿರುವ ಸರ್ಕಾರಿ ನೌಕರನಿಗೆ ಸೇರಿದ ಇಂದಿರಾನಗರದ ಸೆಕ್ಟರ್ 20ರ ಮನೆಗೆ ಕಳ್ಳರ ತಂಡ ನುಗ್ಗಿದೆ. ಕಳ್ಳರು ಈ ಮನೆಯಿಂದ ಕೈಗೆ ಸಿಕ್ಕಿದ್ದನ್ನೆಲ್ಲ ಎತ್ತಿಕೊಂಡು ಹೋಗಿದ್ದಾರೆ. ರೂಮಿನಲ್ಲಿದ್ದ ಎಸಿಯ ಕೆಳಗೆ ಕಳ್ಳ ಮಲಗಿ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾನೆ. ಆದರೆ ಯಾವುದೋ ನಶೆಯಲ್ಲಿದ್ದ ಈತ ಇನ್ವರ್ಟರ್ ಎತ್ತಲು ಹೋಗಿದ್ದಾನೆ. ಆದರೆ ಅದಕ್ಕೂ ಮೊದಲು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ನಿರ್ಧರಿಸಿದ. ಕೋಣೆಯಲ್ಲಿದ್ದ ಎಸಿ ಸ್ವಿಚ್ ಆನ್ ಮಾಡಿ ಅಲ್ಲೇ ಗಟ್ಟಿಯಾಗಿ ನಿದ್ದೆಗೆ ಜಾರಿದ್ದಾನೆ.


ಇತರ ಕಳ್ಳರು ಆತನನ್ನು ಎಬ್ಬಿಸಲು ಪ್ರಯತ್ನಿಸಿದರೂ ಆತ ಎದ್ದೇಳಲಿಲ್ಲ. ಬೆಳಗ್ಗೆ ಮನೆಯ ಗೇಟ್ ತೆರೆದಿರುವುದನ್ನು ನೋಡಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರಾಮವಾಗಿ ಮಲಗಿರುವ ಕಳ್ಳನನ್ನು ನೋಡಿದ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.

ಇದನ್ನೂ ಓದಿ: Rupert Murdoch: ಮಾಧ್ಯಮ ಲೋಕದ ದೊರೆಗೆ ಐದನೇ ಮದುವೆ; 93ನೇ ವಯಸ್ಸಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರೂಪರ್ಟ್ ಮುರ್ಡೋಕ್

ಪೊಲೀಸರು ಮನೆಗೆ ಬಂದ ಬಳಿಕ ಕಳ್ಳರು ಬಹಳಷ್ಟು ವಸ್ತುಗಳನ್ನು ಕದ್ದೊಯ್ದಿರುವುದು ತಿಳಿದುಬಂದಿದೆ.
ಕಳ್ಳ ಎಚ್ಚರಗೊಂಡಾಗ ಅವನ ಮುಂದೆ ಪೊಲೀಸರು ಕುಳಿತಿರುವುದನ್ನು ಕಂಡು ಆತ ಗಾಬರಿಯಾಗಿದ್ದಾನೆ. ಬಳಿಕ ಆತ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ವಿವರಿಸಿದ್ದು, ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು ಇತರ ಕಳ್ಳರನ್ನು ಪತ್ತೆ ಹಚ್ಚಲು ಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಇತರ ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading
Advertisement
Road Accident
ಕರ್ನಾಟಕ17 mins ago

Road Accident: ಕೊಲ್ಹಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗಳಿಗೆ ಕಾರು ಡಿಕ್ಕಿಯಾಗಿ ಪಲ್ಟಿ, ಮೂವರ ದುರ್ಮರಣ

T20 World Cup 2024
ಕ್ರೀಡೆ27 mins ago

T20 World Cup 2024: ದೂರದರ್ಶನದಲ್ಲಿಯೂ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​ ಪಂದ್ಯಾವಳಿ

Uttara Kannada Lok Sabha Constituency
ಉತ್ತರ ಕನ್ನಡ31 mins ago

Uttara Kannada Lok Sabha Constituency: ಉತ್ತರ ಕನ್ನಡ ಕ್ಷೇತ್ರದಲ್ಲಿ ಈ ಬಾರಿಯೂ ಬಿಜೆಪಿ ಜಯಭೇರಿ?

Dr. K Sudhakar
ಕರ್ನಾಟಕ39 mins ago

Dr. K Sudhakar: ರಾಜ್ಯ ಸರ್ಕಾರದ ಚಿಹ್ನೆ ದುರ್ಬಳಕೆ; ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್

Rave Party
ಕರ್ನಾಟಕ56 mins ago

Rave Party: ರೇವ್‌ ಪಾರ್ಟಿ ಕೇಸ್‌ನಲ್ಲಿ ತೆಲುಗು ನಟಿ ಹೇಮಾಗೆ 12 ದಿನ ನ್ಯಾಯಾಂಗ ಬಂಧನ

K Kavitha
ದೇಶ1 hour ago

K Kavitha: ಬಿಆರ್‌ಎಸ್‌ ನಾಯಕಿ ಕವಿತಾ ಬಂಧನ ಜುಲೈ 3ರವರೆಗೆ ವಿಸ್ತರಣೆ; ಸಾಕ್ಷ್ಯ ನಾಶದ ಆರೋಪ

MS Dhoni Europe Trip
ಕ್ರೀಡೆ1 hour ago

MS Dhoni Europe Trip: ಐಪಿಎಲ್​ ಮುಗಿಸಿ ಕುಟುಂಬದ ಜತೆ ಯುರೋಪ್​ಗೆ ಪ್ರವಾಸ ಹೋದ ಧೋನಿ

Lok Sabha Election Result 2024 Live
ದೇಶ2 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ; ಇಲ್ಲಿದೆ ಪ್ರತಿಕ್ಷಣದ ಮಾಹಿತಿ

Job Alert
ಉದ್ಯೋಗ2 hours ago

Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Viral News
ವೈರಲ್ ನ್ಯೂಸ್2 hours ago

Viral News: ಕದಿಯಲು ಬಂದ ಮನೆಯಲ್ಲೇ ನಿದ್ದೆಹೋದ ಕಳ್ಳ; ಪೊಲೀಸರೇ ಎಬ್ಬಿಸಬೇಕಾಯಿತು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌