ಕೆಟ್ಟ ನಿಂತ ಡ್ರಿಲ್ಲಿಂಗ್ ಯಂತ್ರ! ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಸ್ಥಗಿತ - Vistara News

ದೇಶ

ಕೆಟ್ಟ ನಿಂತ ಡ್ರಿಲ್ಲಿಂಗ್ ಯಂತ್ರ! ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಸ್ಥಗಿತ

Tunnel Collapse: ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ ಸುರಂಗ ಮಾರ್ಗ ಕುಸಿದ ಪರಿಣಾಮ 40 ಕಾರ್ಮಿಕರ ಅಪಾಯದ ಸ್ಥಿತಿಗೆ ಸಿಲುಕಿದ್ದಾರೆ.

VISTARANEWS.COM


on

Vistara Editorial, Ensure safety of workers during massive projects
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡೆಹ್ರಾಡೂನ್: 130 ಗಂಟೆಗಳಿಗೂ ಹೆಚ್ಚು ಕಾಲ ಸುರಂಗದೊಳಗೆ (Tunnel Collapse) ಸಿಲುಕಿರುವ 40 ಕಾರ್ಮಿಕರನ್ನು (40 workers trapped) ರಕ್ಷಿಸಲು ಸಮಯದ ಜತೆಗೆ ಸ್ಪರ್ಧೆಗೆ ಬಿದ್ದಿರುವ ರಕ್ಷಣಾ ಕಾರ್ಯಕರ್ತರಿಗೆ ಶುಕ್ರವಾರ ಮತ್ತೊಂದು ಹಿನ್ನಡೆ ಎದುರಾಗಿದೆ. ಹೈ ಪವರ್ ಡ್ರಿಲ್ಲಿಂಗ್ ಮಷಿನ್ (auger drilling machine) ಕೈ ಕೊಟ್ಟಿದೆ. 22 ಮೀಟರ್ ಡ್ರಿಲ್ಲಿಂಗ್ ಮಾಡಿರುವ ಈ ಮಷಿನ್ ಬೇರಿಂಗ್‌ಗಳು ಜಾಮ್ ಆದ್ದರಿಂದ ಕಲ್ಲಿನ ಮಧ್ಯೆಗಳ ಸಿಲುಕಿಕೊಂಡಿದೆ. ಇದರಿಂದ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆ ಭಾರೀ ಅಡ್ಡಿ ಎದುರಾಗಿದೆ.

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. ಸುಮಾರು 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿದೆ. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಇಷ್ಟಾದರೂ ಜನರನ್ನು ಹೊರಗೆ ತರಲು ಆಗುತ್ತಿಲ್ಲ. ಹಲವು ಕಾರಣಗಳಿಂದಾಗಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕರ ಕುಟುಂಬಸ್ಥರು ಅಧಿಕಾರಿಗಳು, ಸಿಬ್ಬಂದಿ, ಸರ್ಕಾರದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಬೆಳಿಗ್ಗೆ 9 ಗಂಟೆಯ ನಂತರ ಡ್ರಿಲ್ಲಿಂಗ್‌ನಲ್ಲಿ ಯಾವುದೇ ಪ್ರಗತಿಯನ್ನು ಸಾಧಿಸಲು ಸಾಧ್ಯವಾಗಲಿಲ್ಲ. ಸುಮಾರು 22 ಮೀಟರ್ ಕೊರೆದಿರುವ ಡ್ರಿಲ್ಲಿಂಗ್ ಮಷಿನ್ ಬಳಿಕ ಸ್ಥಗಿತಗೊಂಡಿತು. ಗುರುವಾರ ಬೆಳಗ್ಗೆ 10.30ರ ಸುಮಾರಿಗೆ ಡ್ರಿಲ್ಲಿಂಗ್ ಮಷಿನ್‌ಗೆ ಕಲ್ಲು ಎದುರಾದ್ದರಿಂದ ಹಾಳಾಗಿತ್ತು. ಈ ವೇಳೆ, ಕೇವಲ 3 ಮೀಟರ್ ಕೊರೆಯಲು ಮಾತ್ರವೇ ಸಾಧ್ಯವಾಗಿತ್ತು. ಇದಕ್ಕೂ ಮೊದಲು ಮೊದಲ ಆರು ಗಂಟೆಗಳಲ್ಲಿ ಒಂಬತ್ತು ಮೀಟರ್, ಒಂಬತ್ತು ಗಂಟೆಗಳಲ್ಲಿ 12 ಮೀಟರ್ ಮತ್ತು 20 ಗಂಟೆಗಳಲ್ಲಿ 22 ಮೀಟರ್ ಪ್ರಗತಿ ಸಾಧಿಸಲು ಸಾಧ್ಯವಾಯಿತು.

ಈ ಮಧ್ಯೆ ಹೆಚ್ಚುವರಿಯಾಗಿ, ಆಗರ್ ಡ್ರಿಲ್ಲಿಂಗ್ ಯಂತ್ರವನ್ನು ಕೂಡ ತರಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಇಂದೋರ್‌ನಿಂದ ವಾಯು ಮಾರ್ಗವಾಗಿ ಶನಿವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಈ ಯಂತ್ರ ತಲುಪುವ ಸಾಧ್ಯತೆಗಳಿವೆ. ಈ ಯಂತ್ರವು ಪ್ರತಿ ಗಂಟೆಗೆ 5 ಮೀಟರ್ ವೇಗದಲ್ಲಿ ಕಲ್ಲುಮಣ್ಣುಗಳ ಮೂಲಕ ಭೇದಿಸುವ ಸಾಮರ್ಥ್ಯವನ್ನು ಹೊಂದಿದೆ. ಆದಾಗ್ಯೂ, ಅದರ ದಾರಿಯಲ್ಲಿನ ಅಡಚಣೆಗಳು ಈಗ ಪ್ರಮಾಣಿತ ವೇಗದಲ್ಲಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಬಹುದು.

ಅತ್ಯಾಧುನಿಕ ಡ್ರಿಲ್ಲಿಂಗ್‌ ಮಷೀನ್‌ ಬಳಕೆ

ಶುಕ್ರವಾರ ಬೆಳಗಿನ ಜಾವದಿಂದಲೇ ರಕ್ಷಣಾ ಕಾರ್ಯಾಚರಣೆಗೆ ಅತ್ಯಾಧುನಿಕ ಡ್ರಿಲ್ಲಿಂಗ್‌ ಮಷೀನ್‌ ಬಳಕೆ ಮಾಡಲಾಗಿದ್ದು, ಇದರಿಂದಲೇ ಸುಮಾರು 21 ಮೀಟರ್‌ ಕೊರೆಯಲಾಗಿದೆ. ಮತ್ತೆ ಮೂರು ಪೈಪ್‌ಗಳನ್ನು ಅಳವಡಿಸಲಾಗಿದ್ದು, ಒಳಗೆ ಸಿಲುಕಿರುವ ಕಾರ್ಮಿಕರಿಗೆ ನೀರು, ಊಟ, ಕೃತಕ ಆಮ್ಲಜನಕ ಸೇರಿ ಹಲವು ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಆದರೆ, ಅವಶೇಷದ ಪ್ರಮಾಣವು ಜಾಸ್ತಿ ಇರುವ ಕಾರಣ ರಕ್ಷಣೆ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಭಾರಿ ಅವಶೇಷ ಇರುವ ಕಾರಣ ಇನ್ನೂ ಎರಡು-ಮೂರು ದಿನ ಕಾರ್ಯಾಚರಣೆ ನಡೆಸಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಉತ್ತರಕಾಶಿಯಿಂದ ಯಮುನೋತ್ರಿಗೆ 26 ಕಿಲೋಮೀಟರ್‌ ಸಂಚರಿಸುವುದನ್ನು ಕಡಿಮೆಗೊಳಿಸಲು ಸುರಂಗ ನಿರ್ಮಿಸಲಾಗುತ್ತಿದೆ. ಸುರಂಗ ಕುಸಿಯುತ್ತಲೇ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಒಳಗೆ ಸಿಲುಕಿದ್ದಾರೆ. ಏಕಾಏಕಿ ಸುರಂಗ ಕುಸಿದ ಕಾರಣ ಒಬ್ಬ ಕಾರ್ಮಿಕರೂ ಹೊರಗೆ ಬರಲು ಸಾಧ್ಯವಾಗಿಲ್ಲ. ಉತ್ತರಾಖಂಡ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುತ್ತಿದೆ.

ಈ ಸುದ್ದಿಯನ್ನೂ ಓದಿ: ಸುರಂಗದಲ್ಲಿ ಸಿಲುಕಿದ 40 ಜನಕ್ಕೆ ಅನಾರೋಗ್ಯ; 6 ದಿನವಾದರೂ ರಕ್ಷಣೆ ದುಸ್ಸಾಧ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024: ಒಲಿಂಪಿಕ್ಸ್ ಆಯೋಜನೆ; ಫ್ರಾನ್ಸ್​ ಅಧ್ಯಕ್ಷರಿಗೆ ಶುಭ ಕೋರಿದ ಪ್ರಧಾನಿ ಮೋದಿ

Paris Olympics 2024: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ, “ತಂತ್ರಜ್ಞಾನದ ಅಳವಡಿಕೆ ಜತೆಗೆ ಮಾನವ ಕೇಂದ್ರಿತವಾಗಿಯೇ ಏಳಿಗೆ ಹೊಂದಲು ಭಾರತ ಆದ್ಯತೆ ನೀಡುತ್ತಿದೆ. ಜಾಗತಿಕವಾಗಿ ತಂತ್ರಜ್ಞಾನದ ಜತೆಗೇ ಮಾನವ ಕೇಂದ್ರಿತ ಅಭಿವೃದ್ಧಿಯು ಪ್ರಮುಖ ವಿಷಯವಾಗಬೇಕಿದೆ” ಎಂದು ಪ್ರತಿಪಾದಿಸಿದರು.

VISTARANEWS.COM


on

Paris Olympics 2024
Koo

ಬಾರಿ(ಇಟಲಿ): ಇಟಲಿಯಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ (G7 Summit Italy) ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್‌(Emmanuel Macron)​ ಅವರನ್ನು ಭೇಟಿಯಾದ ವೇಳೆ ಪ್ಯಾರಿಸ್​ ಒಲಿಂಪಿಕ್ಸ್ ಆಯೋಜಿಸುತ್ತಿರುವುದಕ್ಕೆ ಶುಭ ಹಾರೈಸಿದ್ದಾರೆ. ಟೂರ್ನಿ ಅತ್ಯಂತ ಯಶಸ್ವಿಯಾಗಿ ಸಾಗಲಿ ಎಂದು ಮೋದಿ ಹಾರೈಸಿದ್ದಾರೆ. ಉಭಯ ನಾಯಕರು ಮಾತುಕತೆ ನಡೆಸಿದ ಫೋಟೊವನ್ನು ಮೋದಿ ಅವರು ತಮ್ಮ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದಾರೆ.​ ಬಹುನಿರೀಕ್ಷಿತ ಪ್ಯಾರಿಸ್​ ಒಲಿಂಪಿಕ್ಸ್​(Paris Olympics 2024) ಜುಲೈ 26ರಿಂದ ಆರಂಭಗೊಳ್ಳಲಿದೆ. ಆಗಸ್ಟ್​ 11ರ ತನಕ ಈ ಟೂರ್ನಿ ಸಾಗಲಿದೆ.

ಭಾರತವು ಜಿ7 ರಾಷ್ಟ್ರಗಳ ಒಕ್ಕೂಟದ ಸದಸ್ಯ ರಾಷ್ಟ್ರವಾಗಿರದಿದ್ದರೂ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದರು. ಮೋದಿ ಅವರು ಶುಕ್ರವಾರ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್‌, ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಸೇರಿ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಶನಿವಾರವೂ ಹಲವು ನಾಯಕರೊಂದಿಗೆ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ


ಜಿ-7 ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ, “ತಂತ್ರಜ್ಞಾನದ ಅಳವಡಿಕೆ ಜತೆಗೆ ಮಾನವ ಕೇಂದ್ರಿತವಾಗಿಯೇ ಏಳಿಗೆ ಹೊಂದಲು ಭಾರತ ಆದ್ಯತೆ ನೀಡುತ್ತಿದೆ. ಜಾಗತಿಕವಾಗಿ ತಂತ್ರಜ್ಞಾನದ ಜತೆಗೇ ಮಾನವ ಕೇಂದ್ರಿತ ಅಭಿವೃದ್ಧಿಯು ಪ್ರಮುಖ ವಿಷಯವಾಗಬೇಕಿದೆ” ಎಂದು ಪ್ರತಿಪಾದಿಸಿದರು.

“ತಂತ್ರಜ್ಞಾನವನ್ನು ಸೃಜನಶೀಲತೆಯ ಸೃಷ್ಟಿಗಾಗಿ, ಅಭಿವೃದ್ಧಿಗಾಗಿ, ಏಳಿಗೆಗಾಗಿ ಬಳಸಬೇಕೇ ಹೊರತು, ವಿನಾಶಕ್ಕಾಗಿ ಅದನ್ನು ಬಳಸಬಾರದು. ಜಗತ್ತಿನಾದ್ಯಂತ ಬೇರೂರಿರುವ ಸಾಮಾಜಿಕ ಅಸಮಾನತೆಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ಇಂದು ತಂತ್ರಜ್ಞಾನವನ್ನು ಬಳಸಬೇಕಾಗಿದೆ. ಭಾರತವು, ಇಂತಹ ಪ್ರಯತ್ನ ಮಾಡುತ್ತಿದೆ. ಕೃತಕ ಬುದ್ಧಿಮತ್ತೆ ಸೇರಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಏಳಿಗೆಯತ್ತ ಮುಂದೆ ಸಾಗುತ್ತಿದೆ. ಎಲ್ಲರಿಗೂ ಕೃತಕ ಬುದ್ಧಿಮತ್ತೆ (AI For All) ಎಂಬ ತತ್ವದೊಂದಿಗೆ, ಕೃತಕ ಬುದ್ಧಿಮತ್ತೆ ಬಳಕೆಗೆ ರಾಷ್ಟ್ರೀಯ ಸ್ಟ್ರ್ಯಾಟಜಿಯೊಂದಿಗೆ ಮುನ್ನಡೆಯುತ್ತಿದೆ” ಎಂದು ತಿಳಿಸಿದರು.

ಮೋದಿಯನ್ನು ಹಾಡಿ ಹೊಗಳಿದ್ದ ಮೆಲೋನಿ

ಜಾರ್ಜಿಯಾ ಮೆಲೋನಿ ಅವರು ಇದಕ್ಕೂ ಮೊದಲು ನರೇಂದ್ರ ಮೋದಿ ಅವರನ್ನು ಹೊಗಳಿದ್ದರು. ರೈಸಿನಾ ಶೃಂಗಸಭೆಯ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಿದ್ದ ಜಾರ್ಜಿಯಾ ಮೆಲೋನಿ, “ನರೇಂದ್ರ ಮೋದಿ ಅವರು ವಿಶ್ವದ ನಾಯಕರಲ್ಲಿಯೇ ಹೆಚ್ಚು ಪ್ರೀತಿಗೆ ಪಾತ್ರರಾಗಿದ್ದಾರೆ. ಅವರು ಧೀಮಂತ ನಾಯಕರು ಎಂಬುದು ಸಾಬೀತಾಗಿದೆ. ಇದಕ್ಕಾಗಿ ಮೋದಿ ಅವರಿಗೆ ಅಭಿನಂದನೆಗಳು” ಎಂದಿದ್ದರು. “ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಾಗೂ ಇಟಲಿ ಸಂಬಂಧ ಮತ್ತಷ್ಟು ವೃದ್ಧಿಯಾಗುತ್ತಿದೆ. ಉಭಯ ದೇಶಗಳ ಸಂಬಂಧವನ್ನು ವ್ಯೂಹಾತ್ಮಕ ಸಂಬಂಧವಾಗಿ ಮಾರ್ಪಡಿಸಲು ನಾವು ಉತ್ಸುಕರಾಗಿದ್ದೇವೆ. ಇದರಿಂದ ಎರಡೂ ದೇಶಗಳ ಸಂಬಂಧ ಇನ್ನಷ್ಟು ವೃದ್ಧಿಯಾಗಲಿದೆ” ಎಂದು ತಿಳಿಸಿದ್ದರು.

Continue Reading

ದೇಶ

Maoists Killed: ಛತ್ತೀಸ್‌ಗಢದಲ್ಲಿ 8 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆ; ಓರ್ವ ಯೋಧ ಹುತಾತ್ಮ

Maoists Killed: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಅಬುಜ್ಮಾರ್ಹ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 8 ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಬುಜ್ಮಾರ್ಹ್ ಒಂದು ಗುಡ್ಡಗಾಡು ಅರಣ್ಯ ಪ್ರದೇಶವಾಗಿದ್ದು, ಇದು ನಾರಾಯಣಪುರ, ಬಿಜಾಪುರ ಮತ್ತು ದಾಂತೇವಾಡ ಜಿಲ್ಲೆಗಳ ಮಧ್ಯದಲ್ಲಿದೆ. ಇದು 4,000 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿದ್ದು ಮಾವೋವಾದಿಗಳ ಅಡುಗುತಾಣವಾಗಿ ಬದಲಾಗಿದೆ.

VISTARANEWS.COM


on

Maoists Killed
Koo

ಹೊಸದಿಲ್ಲಿ:‌ ಛತ್ತೀಸ್‌ಗಢದ ಅಬುಜ್ಮಾರ್ಹ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 8 ಮಾವೋವಾದಿಗಳು ಸಾವನ್ನಪ್ಪಿದ್ದಾರೆ (Maoists Killed). ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಎರಡು ದಿನಗಳಿಂದ ಅಬುಜ್ಮಾರ್ಹ್‌ ಒಳಗೊಂಡ ನಾರಾಯಣಪುರ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ.

ಅಬುಜ್ಮಾರ್ಹ್ ಒಂದು ಗುಡ್ಡಗಾಡು ಅರಣ್ಯ ಪ್ರದೇಶವಾಗಿದ್ದು, ಇದು ನಾರಾಯಣಪುರ, ಬಿಜಾಪುರ ಮತ್ತು ದಾಂತೇವಾಡ ಜಿಲ್ಲೆಗಳ ಮಧ್ಯದಲ್ಲಿದೆ. ಇದು 4,000 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿದ್ದು ಮಾವೋವಾದಿಗಳ ಅಡುಗುತಾಣವಾಗಿ ಬದಲಾಗಿದೆ. ಜನ ಸಂಚಾರ ಕಡಿಮೆ ಇರುವ, ಭೌಗೋಳಿಕವಾಗಿ ಪ್ರತ್ಯೇಕವಾಗಿರುವ ಈ ಪ್ರದೇಶವನ್ನು ಮಾವೋವಾದಿಗಳ ಚಟುವಟಿಕೆಗಳ ಕೇಂದ್ರವೆಂದು ಪರಿಗಣಿಸಲಾಗಿದೆ.

ನಾರಾಯಣಪುರ, ಕಂಕರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಇಂದು ಬೆಳಿಗ್ಗೆ ಅಬುಜ್ಮಾರ್ಹ್ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ. ಗುಂಡಿನ ಚಕಮಕಿ ಮುಂದುವರಿದಿದೆ.

ಈ ನಾಲ್ಕು ಜಿಲ್ಲೆಗಳ ಜಿಲ್ಲಾ ರಿಸರ್ವ್ ಗಾರ್ಡ್ (DRG), ವಿಶೇಷ ಕಾರ್ಯಪಡೆ (STF) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ನ 53ನೇ ಬೆಟಾಲಿಯನ್ ಸಿಬ್ಬಂದಿಯನ್ನು ಒಳಗೊಂಡ ತಂಡ ಜೂನ್ 12ರಂದು ಇಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಮಾವೋವಾದಿಗಳು ದಾಳಿ ನಡೆಸಿದಾಗ ಗುಂಡಿನ ಚಕಮಕಿ ಆರಂಭವಾಯಿತು.

ಇದನ್ನೂ ಓದಿ: Encounter In Kanker: ಭದ್ರತಾ ಪಡೆಗಳೊಂದಿಗೆ ಎನ್‌ಕೌಂಟರ್‌; ಓರ್ವ ನಕ್ಸಲ್‌ ಸಾವು

29ಕ್ಕೂ ಹೆಚ್ಚು ಮಾವೋವಾದಿಗಳ ಹತ್ಯೆ

ಏಪ್ರಿಲ್‌ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ 29 ಮಾವೋವಾದಿಗಳನ್ನು ಹತ್ಯೆ ಮಾಡಿದ್ದರು. ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಈ ಎನ್‌ಕೌಂಟರ್‌ ನಡೆದಿತ್ತು. ಗುಪ್ತಚರದ ಖಚಿತ ಮಾಹಿತಿಯ ಮೇರೆಗೆ ಬಿಎಸ್ಎಫ್ (BSF) ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (DRG) ಕಂಕರ್‌ನ ಚೋಟೆಬೆಟಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಿನಗುಂಡ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಮಾವೋವಾದಿಗಳನ್ನು ಕೊಂದಿದ್ದರು.

ಎನ್‌ಕೌಂಟರ್‌ ನಡೆದ ಸ್ಥಳದಿಂದ ಬಳಿಕ ಮಾವೋವಾದಿಗಳ ಶವಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕಾರ್ಯಾಚರಣೆಯ ಸ್ಥಳದಿಂದ ಏಳು ಏಕೆ ಸರಣಿ ರೈಫಲ್‌ಗಳು ಮತ್ತು ಮೂರು ಲೈಟ್ ಮೆಷಿನ್ ಗನ್‌ಗಳನ್ನೂ (LMGs) ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಗುಂಡಿನ ಚಕಮಕಿ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಹತರಾದ ಮಾವೋವಾದಿಗಳ ಪೈಕಿ ಉನ್ನತ ನಕ್ಸಲ್ ನಾಯಕ ಶಂಕರ್ ರಾವ್ ಕೂಡ ಸೇರಿದ್ದ. ಪೊಲೀಸ್ ಅಧಿಕಾರಿಗಳ ಪ್ರಕಾರ ಶಂಕರ್‌ ತಲೆಗೆ 25 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.

ಹಲವು ವರ್ಷಗಳಿಂದ ಸಮಸ್ಯೆ

ಛತ್ತೀಸ್‌ಗಢವು ಹಲವು ದಶಕಗಳಿಂದ ನಕ್ಸಲೈಟ್‌, ಮಾವೋವಾದಿಗಳ ಭೀತಿ ಎದುರಿಸುತ್ತಿದೆ. ವಿಶೇಷವಾಗಿ ಬಸ್ತಾರ್ ಪ್ರದೇಶವು ನಕ್ಸಲ್ ಚಟುವಟಿಕೆಗಳ ಕೇಂದ್ರ ಸ್ಥಾನವಾಗಿದೆ. ಇಲ್ಲಿ ಆಗಾಗ ಹಿಂಸಾಚಾರ ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್‌ ನಡೆಯುತ್ತಲೇ ಇರುತ್ತದೆ. ನಕ್ಸಲರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸುವುದು, ಸ್ಥಳೀಯ ಅಭಿವೃದ್ಧಿಗೆ ಆದ್ಯತೆ ನೀಡುವುದು ಮತ್ತು ಶರಣಾಗುವ ನಕ್ಸಲರಿಗೆ ಪುನರ್ವಸತಿ ಕಲ್ಪಸಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ. ಆದಾಗ್ಯೂ ಈ ಪ್ರಯತ್ನಗಳ ಹೊರತಾಗಿಯೂ ರಾಜ್ಯದಲ್ಲಿ ನಕ್ಸಲ್ ಹಾವಳಿ ಮುಂದುವರಿದಿದೆ.

Continue Reading

Lok Sabha Election 2024

Indresh Kumar: ರಾಮ ಭಕ್ತರು ಅಧಿಕಾರದಲ್ಲಿದ್ದಾರೆ, ರಾಮ ವಿರೋಧಿಗಳು ಸೋತಿದ್ದಾರೆ; ಆರ್‌ಎಸ್‌ಎಸ್‌ ನಾಯಕನ ಹೊಸ ಹೇಳಿಕೆ

ಜೈಪುರದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್‌ ಹಿರಿಯ ನಾಯಕ ಇಂದ್ರೇಶ್‌ ಕುಮಾರ್‌ ಅವರು, ಬಿಜೆಪಿಯ ದುರಹಂಕಾರದಿಂದ ಅದಕ್ಕೆ 240 ಸ್ಥಾನಗಳು ಸಿಕ್ಕಿತು ಎಂದು (Indresh Kumar) ಹೇಳಿದ್ದು ಚರ್ಚೆಗೆ ಕಾರಣವಾಗಿತ್ತು. ಇದು ಆರ್ ಎಸ್ ಎಸ್ ಮತ್ತು ಬಿಜೆಪಿ ನಡುವಿನ ಭಿನ್ನಮತದ ಬಗ್ಗೆ ವದಂತಿಗಳನ್ನು ಹುಟ್ಟು ಹಾಕಿತ್ತು. ಇದೀಗ ಇಂದ್ರೇಶ್ ಅವರು ಹೊಸ ಹೇಳಿಕೆ ನೀಡಿದ್ದಾರೆ.

VISTARANEWS.COM


on

By

Indresh Kumar
Koo

ರಾಮನನ್ನು (ram) ವಿರೋಧಿಸಿದವರು ಅಧಿಕಾರದಿಂದ ಹೊರಗೆ ಉಳಿದಿದ್ದಾರೆ. ರಾಮ ಭಕ್ತಿ ಪ್ರತಿಜ್ಞೆ ಮಾಡಿದವರು ಅಧಿಕಾರದಲ್ಲಿದ್ದಾರೆ. ನರೇಂದ್ರ ಮೋದಿ (narendra modi) ನೇತೃತ್ವದಲ್ಲಿ ಮೂರನೇ ಬಾರಿಗೆ ಸರ್ಕಾರ ರಚನೆಯಾಗಿದೆ ಎಂದು ಆರ್ ಎಸ್ ಎಸ್ ನಾಯಕ (RSS Leader) ಇಂದ್ರೇಶ್ ಕುಮಾರ್ (Indresh Kumar) ಹೇಳಿದ್ದಾರೆ. ಬಿಜೆಪಿಯ ದುರಂಹಕಾರ (BJP’s Arrogance) ಕುರಿತು ಇವರು ಈ ಹಿಂದೆ ನೀಡಿದ ಹೇಳಿಕೆ ಭಾರಿ ಚರ್ಚೆಗೆ ಒಳಗಾಗಿತ್ತು. ಇವರ ಹೇಳಿಕೆ ಮೋದಿ ವಿರುದ್ಧ ಮತ್ತು ಬಿಜೆಪಿ ವಿರುದ್ಧ ಎಂಬ ವ್ಯಾಖ್ಯಾನ ಕೇಳಿ ಬಂದಿತ್ತು. ಇದೀಗ ಇಂದ್ರೇಶ್‌ ಕುಮಾರ್‌ ಯುಟರ್ನ್‌ ಹೊಡೆದಿದ್ದಾರೆ. ಮೋದಿ ಮತ್ತು ಬಿಜೆಪಿ ಪರ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) 240 ಸ್ಥಾನಗಳಿಗೆ ಸೀಮಿತವಾಗಿದೆ. ಬಿಜೆಪಿ ನಾಯಕರ “ಅಹಂಕಾರ”ದಿಂದ ಪಕ್ಷವು ಬಹುಮತದ ಅಂಕವನ್ನು ಕಳೆದುಕೊಂಡಿದೆ ಎಂದು ಅವರು ಹೇಳಿದ್ದು ಸಂಚಲನ ಸೃಷ್ಟಿಸಿತ್ತು.

ಲೋಕಸಭೆ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಪಡೆದ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ ಕುರಿತು ಜೈಪುರ ಬಳಿಯ ಕನೋಟಾದಲ್ಲಿ ಗುರುವಾರ ನಡೆದ ‘ರಾಮರಥ ಅಯೋಧ್ಯೆ ಯಾತ್ರಾ ದರ್ಶನ ಪೂಜಾ ಸಮಾರೋಹ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮನ ಭಕ್ತಿ ಮಾಡಿದ ಸೊಕ್ಕಿನ ಪಕ್ಷವನ್ನು 241ಕ್ಕೆ ನಿಲ್ಲಿಸಲಾಯಿತು. ಆದರೆ ಅದುವೇ ಅತಿದೊಡ್ಡ ಪಕ್ಷವಾಯಿತು ಎಂದು ಟೀಕಿಸಿದ್ದರು.


ಅಹಿಂಸೆ ಮತ್ತು ಸತ್ಯದ ತತ್ವಗಳನ್ನು ಉಲ್ಲೇಖಿಸಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಎಲ್ಲರ ಬಗ್ಗೆ ವಿನಮ್ರತೆ ಮತ್ತು ಸದ್ಭಾವನೆಯ ಅಗತ್ಯವನ್ನು ಒತ್ತಿ ಹೇಳಿದ್ದರು ಹಾಗೂ ನಿಜವಾದ ‘ಸೇವಕ’ ಅಹಂಕಾರವಿಲ್ಲದೆ ಜನರ ಸೇವೆ ಮಾಡಬೇಕು ಮತ್ತು ಘನತೆಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದ್ದರು.

ಇದನ್ನೂ ಓದಿ: Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಇದು ಆರ್‌ಎಸ್‌ಎಸ್ ಮತ್ತು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯವನ್ನು ಎತ್ತಿ ಹಿಡಿದು ವಿವಾದವನ್ನು ಹುಟ್ಟು ಹಾಕಿತ್ತು. ಇಂತಹ ಹೇಳಿಕೆಗಳು ಗೊಂದಲವನ್ನು ಬಿತ್ತುವ ಉದ್ದೇಶದಿಂದ ಮಾಡಲಾಗಿದೆ. ಇದು ಕೇವಲ ಊಹಾಪೋಹ ಎಂದು ಆರ್ ಎಸ್ ಎಸ್ ಸ್ಪಷ್ಟಪಡಿಸಿದೆ.

Continue Reading

ಪ್ರಮುಖ ಸುದ್ದಿ

G7 Summit : ನಿಮ್ಮ ಭೇಟಿಯಿಂದ ಸಂತೋಷವಾಗಿದೆ; ಅಮೆರಿಕ ಅಧ್ಯಕ್ಷ ಬೈಡೆನ್​ ಭೇಟಿ ಬಗ್ಗೆ ಮೋದಿ ಉತ್ಸಾಹ

G7 Summit : ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಅಂಶಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಅಧ್ಯಕ್ಷ ಮ್ಯಾಕ್ರನ್ ಅವರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಹಯೋಗದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

VISTARANEWS.COM


on

G7 Summit
Koo

ಅಪುಲಿಯಾ: ಜಿ 7 ಶೃಂಗಸಭೆಯ (G7 Summit) ಹೊರತಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ಇಟಲಿಯಲ್ಲಿ ಅಮರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಅನೌಪಚಾರಿಕವಾಗಿ ಭೇಟಿಯಾದರು. ಭಾರತ ಮತ್ತು ಯುಎಸ್ “ಜಾಗತಿಕ ಒಳಿತನ್ನು ಮತ್ತಷ್ಟು ಹೆಚ್ಚಿಸಲು ಒಟ್ಟಾಗಿ ಕೆಲಸ ಮಾಡುತ್ತಲೇ ಇರುತ್ತವೆ” ಈ ಭೇಟಿಯ ಬಳಿಕ ಮೋದಿ ಹೇಳಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪಿಎಂ ಮೋದಿ ಸಂತೋಷ ವ್ಯಕ್ತಪಡಿಸಿದ್ದಾರೆ. ಯುಎಸ್ ಅಧ್ಯಕ್ಷರನ್ನು ಭೇಟಿಯಾಗುವುದು ಯಾವಾಗಲೂ ಸಂತೋಷವಾಗಿದೆ ಎಂದು ಬರೆದಿದ್ದಾರೆ.

ಜೋ ಬೈಡೆನ್​, ನಿಮ್ಮನ್ನು ಭೇಟಿಯಾಗುವುದು ಯಾವಾಗಲೂ ಸಂತೋಷದ ಸಂಗತಿ. ಜಾಗತಿಕ ಒಳಿತಿಗಾಗಿ ಭಾರತ ಮತ್ತು ಯುಎಸ್ಎ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿವೆ” ಎಂದು ಪಿಎಂ ಮೋದಿ ಬರೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ಅಂಶಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದ್ದರು. ಅಧ್ಯಕ್ಷ ಮ್ಯಾಕ್ರನ್ ಅವರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉತ್ಸಾಹ ವ್ಯಕ್ತಪಡಿಸಿದ್ದಾರೆ. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಹಯೋಗದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ತಮ್ಮ ಸಭೆಯಲ್ಲಿ, ಪಿಎಂ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್ ಭಾರತ ಮತ್ತು ಫ್ರಾನ್ಸ್ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯನ್ನು ರೂಪಿಸುವ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ರಕ್ಷಣಾ ಸಹಯೋಗವು ಚರ್ಚೆಯಲ್ಲಿ ಪ್ರಮುಖ ವಿಷಯವಾಗಿತ್ತು. ಉಭಯ ನಾಯಕರು ರಕ್ಷಣಾ ಸಹಕಾರವನ್ನು ಹೆಚ್ಚಿಸುವ ಬದ್ಧತೆಯನ್ನು ಪುನರುಚ್ಚರಿಸಿದರು. ಚರ್ಚೆಯ ಸಮಯದಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ಸಾಂಸ್ಕೃತಿಕ ಸಂಬಂಧಗಳ ವೃದ್ಧಿಗೂ ಆದ್ಯತೆ ನೀಡಲಾಯಿತು.

ಇದನ್ನೂ ಓದಿ: Narendra Modi: ತಂತ್ರಜ್ಞಾನ ಜತೆಗೆ ಮಾನವ ಕೇಂದ್ರಿತ ಏಳಿಗೆಗೆ ಭಾರತ ಆದ್ಯತೆ; ಇಟಲಿ ಜಿ7 ಸಭೆಯಲ್ಲಿ ಮೋದಿ

ಜಿ 7 ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದೆವು. ಇಂಧನ, ರಕ್ಷಣೆ, ಸಂಶೋಧನೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಭಾರತ ಮತ್ತು ಫ್ರಾನ್ಸ್ ಅನ್ನು ಒಂದುಗೂಡಿಸುವ ಕಾರ್ಯತಂತ್ರದ ಪಾಲುದಾರಿಕೆಯ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಅವರಲ್ಲಿ ಅತ್ಯುತ್ಸಾಹವಿದೆ. ಎಂದು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಒಂದು ವರ್ಷದಲ್ಲಿ ನಾಲ್ಕನೇ ಭೇಟಿ

ಒಂದು ವರ್ಷದಲ್ಲಿ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ಮೋದಿಯವರ ನಾಲ್ಕನೇ ಸಭೆ ಇದಾಗಿದೆ. ಯುವಕರಲ್ಲಿ ಸಂಶೋಧನಾ ಜಾಯಮಾನ ಉತ್ತೇಜಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚಿಸಿದ್ದಾರೆ.

ಜಿ 7 ಶೃಂಗಸಭೆಯ ಹೊರತಾಗಿ ಪ್ರಧಾನಿ ಮೋದಿ ಅವರು ಯುಕೆ ಪ್ರಧಾನಿ ರಿಷಿ ಸುನಕ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರನ್ನು ಭೇಟಿಯಾದರು. ವಿಶೇಷವೆಂದರೆ, ಭಾರತವು ಗ್ರೂಪ್ ಆಫ್ ಸೆವೆನ್ (ಜಿ 7) ಶೃಂಗಸಭೆಯಲ್ಲಿ ವಿದೇಶಿ ಆಹ್ವಾನಿತ ದೇಶವಾಗಿ ಭಾಗವಹಿಸಿದೆ.

ಜೂನ್ 13 ರಿಂದ 15 ರವರೆಗೆ ಇಟಲಿಯ ಅಪುಲಿಯಾ ಪ್ರದೇಶದ ಐಷಾರಾಮಿ ಬೊರ್ಗೊ ಎಗ್ನಾಜಿಯಾ ರೆಸಾರ್ಟ್​​ನಲ್ಲಿ ಶೃಂಗಸಭೆ ನಡೆದಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

Continue Reading
Advertisement
Electric shock
ಚಿಕ್ಕಮಗಳೂರು8 seconds ago

Electric shock : ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

NEET UG 2024
ಕರ್ನಾಟಕ11 mins ago

NEET UG 2024: ವಿದ್ಯಾರ್ಥಿಗಳಿಗೆ ಅನ್ಯಾಯ; ನೀಟ್ ಮರು ಪರೀಕ್ಷೆ, ತನಿಖೆಗೆ ಸಿಎಂ ಆಗ್ರಹ

Paris Olympics 2024
ಕ್ರೀಡೆ21 mins ago

Paris Olympics 2024: ಒಲಿಂಪಿಕ್ಸ್ ಆಯೋಜನೆ; ಫ್ರಾನ್ಸ್​ ಅಧ್ಯಕ್ಷರಿಗೆ ಶುಭ ಕೋರಿದ ಪ್ರಧಾನಿ ಮೋದಿ

Maoists Killed
ದೇಶ23 mins ago

Maoists Killed: ಛತ್ತೀಸ್‌ಗಢದಲ್ಲಿ 8 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆ; ಓರ್ವ ಯೋಧ ಹುತಾತ್ಮ

Progress Review Meeting by Safai Karmachari National Commission Chairman M Venkatesan at hosapete
ವಿಜಯನಗರ26 mins ago

Vijayanagara News: ಪೌರ ಕಾರ್ಮಿಕರ ಉತ್ತಮ ಆರೋಗ್ಯಕ್ಕಾಗಿ ಆರೋಗ್ಯ ಶಿಬಿರ ನಡೆಸಲು ಸೂಚನೆ

Viral News
Latest28 mins ago

Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ! ಆಕೆ ಕೊಟ್ಟ ಕಾರಣ ಮಜವಾಗಿದೆ!

James Wan
ಸಿನಿಮಾ33 mins ago

James Wan: ಜೇಮ್ಸ್‌ ವಾನ್‌ ನಿರ್ದೇಶನದ ಈ 6 ಥ್ರಿಲ್ಲರ್‌ ಚಿತ್ರಗಳನ್ನು ತಪ್ಪದೇ ನೋಡಿ!

Bhandara Fair
ಬಾಗಲಕೋಟೆ36 mins ago

Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

darshan give sopports to arrested people
ಸ್ಯಾಂಡಲ್ ವುಡ್48 mins ago

Actor Darshan: ಎಲ್ಲ ಖರ್ಚು ನೋಡಿಕೊಳ್ತೇನೆ, ನೀವು ಸರೆಂಡರ್‌ ಆಗಿ ಎಂದಿದ್ದ ದರ್ಶನ್ ತಾನೇ ಪೊಲೀಸ್‌ ಬೋನಿಗೆ ಬಿದ್ದ!

T20 World Cup 2024 Super 8
ಕ್ರಿಕೆಟ್1 hour ago

T20 World Cup 2024 Super 8: ಸೂಪರ್​-8 ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಆಫ್ಘಾನ್​ ಮೊದಲ ಎದುರಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ19 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು20 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು21 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ21 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌