VISTARA TOP 10 NEWS : ಭಾರತ ವಿಶ್ವ ವಿಜಯಕ್ಕೆ ಪ್ರಾರ್ಥನೆ, ಉ.ಪ್ರದಲ್ಲಿ ಹಲಾಲ್‌ ಉತ್ಪನ್ನ ಬ್ಯಾನ್‌ - Vistara News

ಕರ್ನಾಟಕ

VISTARA TOP 10 NEWS : ಭಾರತ ವಿಶ್ವ ವಿಜಯಕ್ಕೆ ಪ್ರಾರ್ಥನೆ, ಉ.ಪ್ರದಲ್ಲಿ ಹಲಾಲ್‌ ಉತ್ಪನ್ನ ಬ್ಯಾನ್‌

VISTARA TOP 10 NEWS : ವಿಶ್ವ ಕಪ್‌ ಫೈನಲ್‌ ನಲ್ಲಿ ಭಾರತ ಗೆಲ್ಲಲಿ ಎಂಬ ಪ್ರಾರ್ಥನೆ ಎಲ್ಲೆಡೆ ಕೇಳುತ್ತಿದೆ, ಯತೀಂದ್ರ ಸಿದ್ದರಾಮಯ್ಯ ಮೇಲೆ ಬಿಜೆಪಿ ಇನ್ನಷ್ಟು ಆಪಾದನೆ ಮಾಡಿದೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್‌ 10 ನ್ಯೂಸ್‌.

VISTARANEWS.COM


on

Vistara Top 10 Neww
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1.ವಿಶ್ವಕಪ್‌ ಫೈನಲ್‌ ಕದನಕ್ಕಾಗಿ ಕ್ಷಣಗಣನೆ‌ : ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವಿಗಾಗಿ ಪ್ರಾರ್ಥನೆ
ಆರು ವಾರಗಳ ಕಾಲ ನಡೆದ ಏಕ ದಿನ ವಿಶ್ವ ಕಪ್​ನ (ICC World Cup 2023) ಕೊನೆಯ ಮತ್ತು ವಿಜೇತರನ್ನು ನಿರ್ಣಯಿಸುವ ಪಂದ್ಯ ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ನೆವೆಂಬರ್​ 19ರಂದು ನಡೆಯಲಿದೆ. ಅಕ್ಟೋಬರ್ 5ರಂದು ಟೂರ್ನಿಯ ಉದ್ಘಾಟನಾ ಆವೃತ್ತಿಯೂ ಇದೇ ಸ್ಟೇಡಿಯಮ್​ನಲ್ಲಿ ನಡೆದಿತ್ತು. ಇದೀಗ ಅದೇ ಸ್ಟೇಡಿಯಮ್​ನಲ್ಲಿ ವಿಶ್ವ ವಿಜೇತರು ಯಾರೆಂಬುದು ಪ್ರಕಟವಾಗಲಿದೆ. ಸಹಜವಾಗಿ ಟೂರ್ನಿಯ ಬಲಿಷ್ಠ ಎರಡು ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ಫೈನಲ್​ಗೇರಿದ್ದು ಇತ್ತಂಡಗಳು ಪ್ರಶಸ್ತಿಗಾಗಿ ಸೆಣಸಾಸಲಿವೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ: ICC World Cup 2023 : ವಿಶ್ವ ಕಪ್ ಫೈನಲ್ ಪಂದ್ಯಗಳಲ್ಲಿ ದಾಖಲಾದ ಗರಿಷ್ಠ ರನ್​ ಎಷ್ಟು?
ಇದನ್ನೂ ಓದಿ: ICC World Cup 2023 : ಪಂದ್ಯ ಟೈ ಆದರೆ, ಮಳೆ ಬಂದರೆ ಫಲಿತಾಂಶ ಪ್ರಕಟಿಸುವುದು ಹೇಗೆ?
ಇದನ್ನೂ ಓದಿ: ICC World Cup 2023 : ಫೈನಲ್ ಪಂದ್ಯದಲ್ಲಿ ಬ್ಯಾಟರ್​ಗಳ ಅಬ್ಬರ ಖಾತರಿ; ಯಾಕೆ ಗೊತ್ತೇ?

2. ಸಿಎಂ ಪುತ್ರನ ಹಸ್ತಕ್ಷೇಪಕ್ಕೆ ಸರ್ಕಾರವೇ ಕೊಡ್ತಾ ಸಾಕ್ಷ್ಯ? : ಪಟ್ಟಿಯಲ್ಲಿದೆ ವಿವೇಕಾನಂದ ಹೆಸರು
ಪೊಲೀಸ್ ಇಲಾಖೆಯಲ್ಲಿ ಮತ್ತೆ 71 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ (transfer) ಮಾಡಲಾಗಿದೆ. ಇದರಲ್ಲಿ ವಿವೇಕಾನಂದ ಎಂಬವರನ್ನು ಮೈಸೂರು ನಗರದ ವಿವಿ ಪುರಂ ಪೊಲೀಸ್‌ ಠಾಣೆಗೆ ವರ್ಗಾಯಿಸಿ ಆದೇಶ ನೀಡಲಾಗಿದೆ. ಈ ವಿವೇಕಾನಂದ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತಮ್ಮ ತಂದೆ ಜತೆಗೆ ಮಾತನಾಡಿರುವ ವಿಡಿಯೋದಲ್ಲಿ ಉಲ್ಲೇಖಿಸಿರುವ ವ್ಯಕ್ತಿಯಾ ಎಂಬ ಚರ್ಚೆಗೆ ನಡೆದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ : ಯತೀಂದ್ರ ಮಾತಿಗೆ ತಾಳೆಯಾದ ವಿವೇಕಾನಂದ ವರ್ಗ, ʼಸಾಕ್ಷಿ ಇಲ್ಲಿದೆ ನೋಡಿʼ ಎಂದ ಎಚ್‌ಡಿಕೆ
ಇದನ್ನೂ ಓದಿ : ಟ್ರಾನ್ಸ್‌ಫರ್‌ ಆಗಿರುವ ವಿವೇಕಾನಂದ ಯಾರೆಂದೇ ಗೊತ್ತಿಲ್ಲ!; ಯತೀಂದ್ರ ಸ್ಪಷ್ಟನೆ

3.R Ashok : 2008ರಲ್ಲಿ ಬಿಜೆಪಿಗೆ ಅಧಿಕಾರ ನಿರಾಕರಿಸಿದ್ದು ‌HDK ಅಲ್ಲ, ದೇವೇಗೌಡ್ರು; ಆರ್‌. ಅಶೋಕ್
ಅಂದು 2008ರಲ್ಲಿ ಬಿಜೆಪಿಗೆ ಹಸ್ತಾಂತರ ಮಾಡಲು ನಿರಾಕರಿಸಿದ್ದು ಎಚ್‌ ಡಿ ಕುಮಾರಸ್ವಾಮಿ ಅಲ್ಲ, ಎಚ್.ಡಿ ದೇವೇಗೌಡರು. ಹಾಗೆ ಮಾಡದೆ ಇರುತ್ತಿದ್ದರೆ ಕಾಂಗ್ರೆಸ್‌ ಇಂದು ಬೋರ್ಡ್‌ ಗೇ ಇರುತ್ತಿರಲಿಲ್ಲ ಎಂಬ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌. ಎಚ್.ಡಿ. ದೇವೇಗೌಡರು ಅಂದು ಆ ತಪ್ಪನ್ನು ಮಾಡಬಾರದಿತ್ತು ಎಂದು ವಿಸ್ತಾರ ನ್ಯೂಸ್‌ ವಿಶೇಷ ಸಂದರ್ಶನದಲ್ಲಿ ಅವರು ಹೇಳಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. Yathindra Siddaramaiah : ʼಹಲೋ ಅಪ್ಪಾʼ ಆ್ಯಪ್ ಡೌನ್‌ಲೋಡ್ ಮಾಡಿ ಪೇಮೆಂಟ್ ಮಾಡಿ!
ಯತೀಂದ್ರ ಸಿದ್ದರಾಮಯ್ಯ (‌Yathindra Siddaramaiah) ಅವರ “ಲಿಸ್ಟ್‌” ರಾಜಕೀಯದ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಪ್ರತಿಪಕ್ಷಗಳು ಈಗ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಯತೀಂದ್ರ ಸಿದ್ದರಾಮಯ್ಯ ವಿರುದ್ಧ “ಹಲೋ ಅಪ್ಪಾ, ಆ್ಯಪ್ ಡೌನ್‌ಲೋಡ್ ಮಾಡಿ ಪೇಮೆಂಟ್ ಮಾಡಿ” ಪೋಸ್ಟರ್‌, “ಶ್ಯಾಡೋ ಸಿಎಂ” ಪೋಸ್ಟರ್ (Shadow CM), ಇಂಧನ ಸಚಿವ ಕೆ.ಜೆ. ಜಾರ್ಜ್‌, ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಕೆಲವರ ಮೇಲೆ ಪೋಸ್ಟರ್‌ಗಳನ್ನು ರಚಿಸಿ ಸರ್ಕಾರಿ ಕಚೇರಿಗಳ ಸಹಿತ ಅಲ್ಲಲ್ಲಿ ಅಂಟಿಸಲಾಗುತ್ತಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಇದನ್ನೂ ಓದಿ : ‌Yathindra Siddaramaiah : ‘ಅಪ್ಪಾ ಜಿ’ ಪೋಸ್ಟರ್‌ ಬಿಟ್ಟು ಕಾಲೆಳೆದ ಬಿಜೆಪಿ!

6. ವಿಸ್ತಾರ ಅಂಕಣ: ಭಾರತಾಂಬೆಯ ವಿರುದ್ಧ ಆಕೆಯ ತನುಜಾತೆಯನ್ನು ಎತ್ತಿಕಟ್ಟುವುದು ಏಕೆ?

vistara Column Photo


“ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡೋರು ಯಾರು? ಯಾರ್ರೀ ತೆರಿಗೆ ಕೊಡೋರು? ರಾಜ್ಯದ ಜನಗಳಲ್ಲವ? ಅದಕ್ಕೆ ಅಂತ ಬೇರೆ ಜನರೇನಾದರೂ ಇರುವರೇ, ಇಲ್ಲ. ನಮ್ಮ ರಾಜ್ಯದಿಂದ ಹಣ ಕೊಟ್ಟಿದ್ದೀವಿ” ಎನ್ನುವ ವಾದವೊಂದು ಹುಟ್ಟಿಕೊಂಡಿದೆ. ಹಿಂದಿ ಹೇರಿಕೆ, ಆರ್ಯ-ದ್ರಾವಿಡ ಮತ್ತಿತರ ವಾದಗಳ ಮೂಲಕ ಭಾರತ ಬೇರೆ, ರಾಜ್ಯಗಳು ಬೇರೆ ಎನ್ನುವ ತಾರತಮ್ಯ ಸೃಷ್ಟಿಸಲಾಗುತ್ತಿದೆ. ಇದರ ಬಗ್ಗೆ ವಿಶ್ಲೇಷಣೆ ನಡೆಸಿದ್ದಾರೆ ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ರಾದ ಹರಿಪ್ರಕಾಶ್‌ ಕೋಣೆಮನೆಯವರು ತಮ್ಮ ವಿಸ್ತಾರ ಅಂಕಣದಲ್ಲಿ. ಪೂರ್ಣ ಲೇಖನಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ

6. Halal Products: ಸಿಎಂ ಯೋಗಿ ದಿಟ್ಟ ನಿರ್ಧಾರ ‌’ಹಲಾಲ್‌’ ಉತ್ಪನ್ನಗಳ ಮಾರಾಟ ನಿಷೇಧ!.
ಹಲಾಲ್‌ ಕಟ್ ವಿಷಯವು ಚರ್ಚೆಗೆ ಗ್ರಾಸವಾಗಿರುವ, ಪರ-ವಿರೋಧ ಚರ್ಚೆಗಳು ಆಗಾಗ ಕೇಳಿಬರುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರವು (Uttar Pradesh Government) ರಾಜ್ಯದಲ್ಲಿ ಹಲಾಲ್‌ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು (Halal Certified Products) ನಿಷೇಧಿಸಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

7. Telangana Polls: 500 ರೂ.ಗೆ ಎಲ್‌ಪಿಜಿ, ಸ್ತ್ರೀಯರಿಗೆ ಉಚಿತ ಪ್ರಯಾಣ; ಕಾಂಗ್ರೆಸ್‌ ಭರ್ಜರಿ ಭರವಸೆ
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಐದೂ ರಾಜ್ಯಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಸ್ಪರ್ಧೆಗೆ ಬಿದ್ದು ‘ಉಚಿತ ಕೊಡುಗೆ’ಗಳ (Free Bies) ಭರವಸೆಗಳನ್ನು ನೀಡುತ್ತಿವೆ. ತೆಲಂಗಾಣದಲ್ಲೂ ಕಾಂಗ್ರೆಸ್‌ (Telangana Polls) ಹತ್ತಾರು ಭರವಸೆಗಳನ್ನು ನೀಡಿದ್ದು, ಜನರಿಗೆ ಭರಪೂರ ಉಚಿತ ಯೋಜನೆ ಘೋಷಿಸಿದೆ. ಅದರಲ್ಲೂ, 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್‌, ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೇರಿ ಹಲವು ಭರವಸೆ ನೀಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. Digital Payment: ಗಮನಿಸಿ; ಡಿಸೆಂಬರ್‌ 31ರಿಂದ ಈ ಯುಪಿಐ ಖಾತೆಗಳು ಬಂದ್!
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯಾರೂ ಜೇಬಲ್ಲಿ ದುಡ್ಡು ಇಟ್ಟುಕೊಂಡ ಓಡಾಡುತ್ತಿಲ್ಲವೇನೋ ಎನ್ನುವಷ್ಟರ ಮಟ್ಟಿಗೆ ಡಿಜಿಟಲ್‌ ಪೇಮೆಂಟ್‌ (Digital Payment)ನ ಪ್ರಮಾಣ ಹೆಚ್ಚಿದೆ. ಈ ಮಧ್ಯೆ ನ್ಯಾಷನಲ್‌ ಪೇಮೆಂಟ್ಸ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (NPCI) ಡಿಸೆಂಬರ್‌ 31ರಿಂದ ಕೆಲವೊಂದು ಯುಪಿಐ ಖಾತೆಗಳನ್ನು ನಿಷ್ಕ್ರಿಯಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ರಾಮಮಂದಿರಕ್ಕೆ ಹೋದವರು ಮುಸ್ಲಿಮರಾಗಿ ಬರುತ್ತಾರೆ ಎಂದ ಪಾಕ್‌ ಮಾಜಿ ಕ್ರಿಕೆಟಿಗ; ಬೆಂಡೆತ್ತಿದ ಜನ
ರಾಮಮಂದಿರದ ಗರ್ಭಗುಡಿಯಲ್ಲಿ 2024ರ ಜನವರಿ 22ರಂದು ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ನಡೆಯಲಿದೆ. ಇದರ ನಡುವೆ “ರಾಮಮಂದಿರಕ್ಕೆ ಹೋದವರು ಮುಸ್ಲಿಮರಾಗಿ ಹೊರಬರುತ್ತಾರೆ” ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್‌ ಮಿಯಾಂದಾದ್‌ (Javed Miandad) ಹೇಳಿರುವ ಹಳೆಯ ವಿಡಿಯೊ (Viral Video) ಈಗ ವೈರಲ್‌ ಆಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. Bullock Attack : ರೊಚ್ಚಿಗೆದ್ದ ದೇವರ ಗೂಳಿ; ಕೊಂಬಿನಿಂದ ಗುದ್ದಿ ಬಸ್ಸಿನ ಮೇಲೆ ದಾಳಿ!
ದೇವರಿಗೆ ಬಿಟ್ಟ ಹೋರಿಗಳು (Bullock Attack) ಸಾಮಾನ್ಯವಾಗಿ ಜನರ ನಡುವೆ ಬೆರೆಯುತ್ತಾ ಸೌಹಾರ್ದದಿಂದ ಇರುತ್ತವೆ ಎನ್ನುವ ಪ್ರತೀತಿ ಇದೆ. ಆದರೆ, ಕೆಲವು ಕಡೆ ಈ ನಂಬಿಕೆಯನ್ನು ಮುರಿಯುವುದು ಕೂಡಾ ಇದೆ. ಕೆಲವೊಮ್ಮೆ ಶಾಂತವಾಗಿರುವ ಹೋರಿಗಳು ಕೂಡಾ ಒಮ್ಮಿಂದೊಮ್ಮೆಗೇ ಸಿಟ್ಟಿಗೇಳುವುದುಂಟು. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಹೋರಿಯೊಂದು ಬಸ್ಸನ್ನೇ ತಡೆಹಿಡಿದಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ ಘೋಷಿಸಿದೆ.

VISTARANEWS.COM


on

Toyota Technical Education Programme started at Bareilly Government Polytechnic by TKM
Koo

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) 66ನೇ ಟೊಯೋಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಮತ್ತು ಟಿ-ಟಿಇಪಿ ಅಡಿಯಲ್ಲಿ “ತಾಂತ್ರಿಕ ಶಿಕ್ಷಣ ಮತ್ತು ಮಾನ್ಯತೆಗಾಗಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು (ಸ್ಟಾರ್) ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಾರಂಭಿಸುವುದಾಗಿ (Toyota Kirloskar Motor) ಘೋಷಿಸಿದೆ.

ಸ್ಥಳೀಯ ಉತ್ಪಾದನಾ ಪರಿಸರ ವ್ಯವಸ್ಥೆಯನ್ನು ಬೆಂಬಲಿಸಲು ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಸಮುದಾಯಗಳನ್ನು ಸಬಲೀಕರಣಗೊಳಿಸಲು, ಟಿಕೆಎಂ ತನ್ನ ಪ್ರಮುಖ ಕಾರ್ಯಕ್ರಮಗಳಾದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಮತ್ತು ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ಯೊಂದಿಗೆ ಮುಂಚೂಣಿಯಲ್ಲಿದೆ. ಒಂದು ದಶಕಕ್ಕೂ ಹೆಚ್ಚು ಕಾಲದಿಂದ, ಈ ಕಾರ್ಯಕ್ರಮಗಳು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ತರಬೇತಿಯನ್ನು ಒದಗಿಸುವತ್ತ ಗಮನ ಹರಿಸಿವೆ. ‘ಸ್ಕಿಲ್ ಇಂಡಿಯಾ’ ಅಭಿಯಾನಕ್ಕೆ ಗಮನಾರ್ಹ ಕೊಡುಗೆ ನೀಡಿವೆ.

ಇದನ್ನೂ ಓದಿ: Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು 2023 ರ ಜುಲೈ 29 ಮತ್ತು 30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮದ 3 ನೇ ವಾರ್ಷಿಕೋತ್ಸವದ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸಂವಹನ ನಡೆಸುವ ಗೌರವವನ್ನು ಪಡೆದ ಟಿಟಿಟಿಐ ಹಳೆಯ ವಿದ್ಯಾರ್ಥಿ ಮತ್ತು 2022 ರ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಮೆಕಾಟ್ರಾನಿಕ್ಸ್ ಕಂಚಿನ ಪದಕ ವಿಜೇತ ಅಖಿಲೇಶ್ ನರಸಿಂಹ ಮೂರ್ತಿ ಒಂದು ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ.

ಟಿ-ಟಿಇಪಿ ಒಂದು ಸಮಗ್ರ ವರ್ಷ ವಿಡೀ ನಡೆಯುವ ಕಾರ್ಯಕ್ರಮವಾಗಿದೆ. ಇದು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಅನ್ನು ಒಳಗೊಂಡಿದೆ ಮತ್ತು ಅಂತಿಮ ವರ್ಷದ ಐಟಿಐ / ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಅನುಗುಣವಾಗಿದೆ. ಈ ಕಾರ್ಯಕ್ರಮದ ಪ್ರಮುಖ ಲಕ್ಷಣಗಳಲ್ಲಿ ಟೊಯೊಟಾದಿಂದ ಟಿ-ಟಿಇಪಿಯ ಪ್ರಮುಖ ತರಬೇತುದಾರರಿಗೆ ವಿಶೇಷ ತರಬೇತಿ, ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಟೊಯೊಟಾ ಡೀಲರ್ ಶಿಪ್‌ಗಳಲ್ಲಿ ಪ್ರಾಯೋಗಿಕ ಕೌಶಲ್ಯ ಅಭಿವೃದ್ಧಿ ಮತ್ತು ಭಾರತೀಯ ವಾಹನ ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ತಂತ್ರಜ್ಞಾನಗಳ ತಾಂತ್ರಿಕ ಜ್ಞಾನವನ್ನು ನೀಡಲು ವಿನ್ಯಾಸಗೊಳಿಸಲಾದ ಪಠ್ಯಕ್ರಮ ಸೇರಿವೆ. ಕಳೆದ ವರ್ಷ ಆರ್ಥಿಕವಾಗಿ ಸವಾಲಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಅಧ್ಯಯನವನ್ನು ಮುಂದುವರಿಸಲು ಸಹಾಯ ಮಾಡಲು ಟಿಕೆಎಂ ಸ್ಟಾರ್ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿತು. ಇಲ್ಲಿಯವರೆಗೆ, 13 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಟಿ-ಟಿಇಪಿ ಮೂಲಕ ತರಬೇತಿ ಪಡೆದಿದ್ದಾರೆ. 70% ಕ್ಕೂ ಹೆಚ್ಚು ಜನರು ದೇಶಾದ್ಯಂತ ವಿವಿಧ ಆಟೋಮೊಬೈಲ್ ಕಂಪನಿಗಳು ಮತ್ತು ಅವುಗಳ ಡೀಲರ್‌ಶಿಪ್‌ಗಳಲ್ಲಿ ಉದ್ಯೋಗವನ್ನು ಪಡೆದಿದ್ದಾರೆ ಎಂದು ತಿಳಿಸಿದೆ.

ಇದನ್ನೂ ಓದಿ: World Blood Donors Day: ವಿಶ್ವ ರಕ್ತದಾನಿಗಳ ದಿನ; ಜಾಗೃತಿ ಜಾಥಾಕ್ಕೆ ದಿನೇಶ್ ಗುಂಡೂರಾವ್‌ ಚಾಲನೆ

ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಉತ್ತರ ಪ್ರದೇಶ ಸರ್ಕಾರದ ವಿಧಾನ ಪರಿಷತ್ ಸದಸ್ಯ ಡಿ.ಸಿ. ವರ್ಮಾ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಾದ ಕೌಶಲ್ಯಗಳೊಂದಿಗೆ ನಮ್ಮ ಯುವಕರನ್ನು ಸಬಲೀಕರಣಗೊಳಿಸುವ ಟಿಕೆಎಂನ ಬದ್ಧತೆಯನ್ನು ನಾವು ಶ್ಲಾಘಿಸುತ್ತೇವೆ. ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮ (ಟಿ-ಟಿಇಪಿ) ನಂತಹ ಉಪಕ್ರಮಗಳು ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ನಮ್ಮ ಧ್ಯೇಯದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಿವೆ. ವಿಶೇಷವಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಸವಾಲಿನ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಟಿ-ಟಿಇಪಿ ಮತ್ತು ಸ್ಟಾರ್ ವಿದ್ಯಾರ್ಥಿವೇತನ ಬೆಂಬಲವು ವಿದ್ಯಾರ್ಥಿಗಳಿಗೆ ಟೊಯೊಟಾದ ಮೌಲ್ಯಗಳು, ಉತ್ತಮ ಅಭ್ಯಾಸಗಳು ಮತ್ತು ಸುಧಾರಿತ ತಂತ್ರಜ್ಞಾನಗಳ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ.

ಆ ಮೂಲಕ ಅವರ ಒಟ್ಟಾರೆ ಕೌಶಲ್ಯ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಹೆಚ್ಚುವರಿಯಾಗಿ ಟೊಯೊಟಾದಂತಹ ಉದ್ಯಮ ಪಾಲುದಾರರ ಸಹಯೋಗದ ಪ್ರಯತ್ನಗಳು ಉತ್ತರ ಪ್ರದೇಶದ ವಿದ್ಯಾರ್ಥಿಗಳಲ್ಲಿ ವಿಶ್ವದರ್ಜೆಯ ಕಾರ್ಯಪಡೆಯ ಲಭ್ಯತೆಯನ್ನು ಹೆಚ್ಚಿಸುತ್ತದೆ, ಅವರ ವೃತ್ತಿಜೀವನದ ಆಕಾಂಕ್ಷೆಗಳನ್ನು ಸಾಧಿಸಲು ಸಹಾಯ ಮಾಡುತ್ತದೆ. ವಾಹನ ಕ್ಷೇತ್ರದ ಬೆಳವಣಿಗೆಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಈ ವೇಳೆ ಕಾರ್ಪೊರೇಟ್ ವ್ಯವಹಾರ ಮತ್ತು ಆಡಳಿತದ ಕಂಟ್ರಿ ಹೆಡ್ ಮತ್ತು ಕಾರ್ಯನಿರ್ವಾಹಕ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಮಾತನಾಡಿ, ಟಿಕೆಎಂನಲ್ಲಿ ಯುವ ಪ್ರತಿಭೆಗಳಿಗೆ ಸುಧಾರಿತ ತಾಂತ್ರಿಕ ಕೌಶಲ್ಯ ಮತ್ತು ಜ್ಞಾನವನ್ನು ಪಡೆಯಲು ಅವಕಾಶಗಳನ್ನು ಸೃಷ್ಟಿಸುವಲ್ಲಿ ತಾಂತ್ರಿಕ ತರಬೇತಿಯ ಪರಿವರ್ತಕ ಶಕ್ತಿಯನ್ನು ನಾವು ಗುರುತಿಸುತ್ತೇವೆ. ನಮ್ಮ ಟಿ-ಟಿಇಪಿ ಸೌಕರ್ಯ ಮತ್ತು ಸ್ಟಾರ್ ಕಾರ್ಯಕ್ರಮವು ಆಟೋಮೋಟಿವ್ ಉದ್ಯಮಕ್ಕೆ ನುರಿತ ಕಾರ್ಯಪಡೆಯನ್ನು ಬೆಳೆಸುವ ನಮ್ಮ ಬದ್ಧತೆಗೆ ಉದಾಹರಣೆಯಾಗಿದೆ. ಅದೇ ಸಮಯದಲ್ಲಿ ವಿಶಾಲವಾದ ‘ಸ್ಕಿಲ್ ಇಂಡಿಯಾ’ ಮಿಷನ್ ಅನ್ನು ಬೆಂಬಲಿಸುತ್ತದೆ, ಅಂತಿಮವಾಗಿ ನಮ್ಮ ಸಮುದಾಯಗಳಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುತ್ತದೆ.

ಟಿ-ಟಿಇಪಿ ಉಪಕ್ರಮದ ಭಾಗವಾಗಿರುವ ಸ್ಟಾರ್ ಕಾರ್ಯಕ್ರಮವು ಅರ್ಹ ವಿದ್ಯಾರ್ಥಿಗಳನ್ನು, ವಿಶೇಷವಾಗಿ ಆರ್ಥಿಕವಾಗಿ ಸವಾಲಿನ ಹಿನ್ನೆಲೆಯಿಂದ ಬಂದವರನ್ನು ವಿದ್ಯಾರ್ಥಿವೇತನವನ್ನು ಒದಗಿಸುವ ಮೂಲಕ ಮತ್ತು ಆಟೋಮೋಟಿವ್ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನಕ್ಕಾಗಿ ಅಗತ್ಯ ಕೌಶಲ್ಯಗಳು ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುವ ಮೂಲಕ ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಪ್ರತಿಭೆಗಳನ್ನು ಪೋಷಿಸಲು, ವಿದ್ಯಾರ್ಥಿಗಳು ತಮ್ಮ ಪೂರ್ಣ ಸಾಮರ್ಥ್ಯವನ್ನು ತಲುಪಲು ಮತ್ತು ವಾಹನ ಉದ್ಯಮ ಮತ್ತು ನಮ್ಮ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಲು ನಾವು ಸಮರ್ಪಿತರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

ಕಾರ್ಯಕ್ರಮದಲಲ್ಲಿ ಬರೇಲಿಯ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ನರೇಂದ್ರ ಕುಮಾರ್, ವಾಣಿಜ್ಯ ಟೊಯೊಟಾದ ನಿರ್ದೇಶಕ ಶಿವಂ ಗುಪ್ತಾ ಮಾತನಾಡಿದರು.

Continue Reading

ಕರ್ನಾಟಕ

BBMP: ಬಿಬಿಎಂಪಿ ವಿಭಜನೆ ಬೇಡ; ಇದು ಕನ್ನಡಿಗರಿಗೆ ಮಾರಕ: ನಾರಾಯಣ ಗೌಡ

BBMP: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ವಿಭಜಿಸುವ ಯತ್ನವನ್ನು ಸರ್ಕಾರ ನಿಲ್ಲಿಸಿ, ವಲಯಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಿ, ಸುಗಮ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ.

VISTARANEWS.COM


on

Do not split BBMP says Karave State President TA Narayana Gowda
Koo

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ವಿಭಜಿಸುವ ಯತ್ನವನ್ನು ರಾಜ್ಯ ಸರ್ಕಾರ ನಿಲ್ಲಿಸಿ, ವಲಯಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಿ, ಸುಗಮ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಾಲಿಕೆ ವಿಭಜನೆಯು ನಿಶ್ಚಿತವಾಗಿ ಕನ್ನಡಿಗರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಈ ಹಿಂದೆಯೂ ಸಹ ಪಾಲಿಕೆ ವಿಭಜನೆಯ ಮಾತುಗಳು ಕೇಳಿಬಂದಾಗ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿತ್ತು. ಆಡಳಿತ ಸುಧಾರಣೆಯ ನಿಟ್ಟಿನಲ್ಲಿ ಸರ್ಕಾರದ ಕಾಳಜಿಯನ್ನು ನಾವು ಪ್ರಶ್ನಿಸುತ್ತಿಲ್ಲ. ಆದರೆ ಇದು ಕನ್ನಡಿಗರ ಪಾಲಿಗೆ ಸಮಸ್ಯಾತ್ಮಕವಾಗುವ ಹಿನ್ನೆಲೆಯಲ್ಲಿ ನಮ್ಮ ತಾತ್ವಿಕ ವಿರೋಧವಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಯತ್ನವನ್ನು ಸರ್ಕಾರ ನಿಲ್ಲಿಸಿ, ವಲಯಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಿ ಸುಗಮ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

ಬೆಂಗಳೂರು ಮಹಾನಗರ ಇತ್ತೀಚಿನ ದಿನಗಳಲ್ಲಿ ವಲಸಿಗರ ಸಂತೆಯಾಗಿ ಹೋಗಿದೆ. ಪ್ರತಿನಿತ್ಯ ಬೇರೆ ಬೇರೆ ರಾಜ್ಯಗಳಿಂದ ಜನರು ಗಂಟುಮೂಟೆ ಕಟ್ಟಿಕೊಂಡು ಬಂದು ಬೆಂಗಳೂರಿನಲ್ಲಿ ನೆಲೆಸುತ್ತಿದ್ದಾರೆ. ಬೆಂಗಳೂರಿನ ಭೌಗೋಳಿಕ, ಸಾಮಾಜಿಕ, ಸಾಂಸ್ಕೃತಿಕ ಚಹರೆಯನ್ನೇ ಈ ವಲಸಿಗರು ಬದಲಾಯಿಸುತ್ತಿದ್ದಾರೆ. ಬೆಂಗಳೂರಿನ ಮೂಲನಿವಾಸಿಗಳಾದ ಕನ್ನಡಿಗರೇ ಅತಂತ್ರ ಸ್ಥಿತಿಯಲ್ಲಿ ಬದುಕುವಂತ ಸಂದರ್ಭವನ್ನು ಈ ವಲಸಿಗರು ಸೃಷ್ಟಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ನಗರದ ಸ್ವಾಸ್ಥ್ಯ, ಸಾಮರಸ್ಯಕ್ಕೆ ಧಕ್ಕೆ ತಂದು ಸಂಘರ್ಷವನ್ನು ನಿರ್ಮಿಸಿದರೆ ಆಶ್ಚರ್ಯ ಪಡಬೇಕಾಗಿಲ್ಲ. ಇಂಥ ಸಂದರ್ಭದಲ್ಲಿ ಬೆಂಗಳೂರನ್ನು ವಿಭಜಿಸಿ ಐದು ಪಾಲಿಕೆಗಳನ್ನಾಗಿ ಮಾಡಿದರೆ ವಲಸಿಗರು ಹೆಚ್ಚು ಇರುವ ಪಾಲಿಕೆಗಳನ್ನು ಇದೇ ಜನರು ನಿಯಂತ್ರಣಕ್ಕೆ ತಂದುಕೊಂಡರೆ ಕನ್ನಡಿಗರು ಎಲ್ಲಿಗೆ ಹೋಗಬೇಕು? ಬೆಳಗಾವಿ ಮಹಾನಗರಪಾಲಿಕೆಯ ಇತಿಹಾಸ ಸರ್ಕಾರಕ್ಕೆ ಗೊತ್ತಿಲ್ಲದೇ ಏನಿಲ್ಲ. ಬೆಂಗಳೂರಿನಲ್ಲೂ ಇಂಥ ಪಾಲಿಕೆಗಳು ಬೇಕೇ? ಎಂದು ಅವರು ಪ್ರಶ್ನಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಎಂಟು ವಲಯಗಳನ್ನು ರಚಿಸಿ, ವಿಕೇಂದ್ರೀಕರಣದ ಹೆಜ್ಜೆ ಇಟ್ಟಿದೆ. ಎಂಟೂ ವಲಯಗಳಿಗೆ ಐಎಎಸ್ ಅಧಿಕಾರಿಗಳನ್ನೇ ವಲಯ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅಲ್ಲದೆ ಜಂಟಿ ಆಯುಕ್ತರನ್ನೂ ನೇಮಿಸಲಾಗಿದೆ. ಸರ್ಕಾರ ಮೊದಲು ಮಾಡಬೇಕಿರುವ ಕೆಲಸ ಈ ವಲಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ತುಂಬಿ, ಮೂಲಸೌಕರ್ಯಗಳನ್ನು ಹೆಚ್ಚಿಸಿ, ಹೆಚ್ಚಿನ ಸ್ವಾಯತ್ತತೆಯನ್ನು ಒದಗಿಸುವುದು. ಹೀಗಾದಾಗ ಮಾತ್ರ ವಿಕೇಂದ್ರೀಕರಣದ ಉದ್ದೇಶ ಈಡೇರುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಯತ್ನವನ್ನು ಸರ್ಕಾರ ನಿಲ್ಲಿಸಿ, ವಲಯಗಳಿಗೆ ಹೆಚ್ಚಿನ ಶಕ್ತಿಯನ್ನು ತುಂಬಿ ಸುಗಮ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Continue Reading

ಕರ್ನಾಟಕ

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Congress Guarantee: ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ (Congress Guarantee) ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿಗಳನ್ನು ಮರು ಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ, ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

ಇದನ್ನೂ ಓದಿ | Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ

ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂಬ ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ದರ್ಶನ್ ಪ್ರಕರಣ: ಪ್ರಭಾವಿಗಳು ನನ್ನನ್ನು ಭೇಟಿಯಾಗಿಲ್ಲ

ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅದು ಕೇವಲ ಸುದ್ದಿ. ನನ್ನನ್ನು ಭೇಟಿಯಾಗಲು ಯಾರೂ ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದರು.

ಚಿತ್ರ ನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುವ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರೆಯೆ ನೀಡಿ, ಪೊಲೀಸ್‌ನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗಿದೆ ಎಂಬ ಪ್ರಶ್ನೆಗೆ, ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶ ನಿರೀಕ್ಷೆಯಂತೆ ಬಂದಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯ ರೀತಿ ಫಲಿತಾಂಶ ಬಂದಿಲ್ಲ. ಮೈಸೂರು ಸೋತಿರುವುದು ಚಾಮರಾಜನಗರ ಲೊಕಸಭಾ ಕ್ಷೇತದಲ್ಲಿ ಗೆದ್ದಿರುವುದು ಸತ್ಯ. ಒಂದರಿಂದ 9 ಸ್ಥಾನಕ್ಕೇರಿದ್ದು, ಶೇ. 13% ರಷ್ಟು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ. ಆದರೆ ನಿರೀಕ್ಷೆಯಂತೆ ಆಗಿಲ್ಲ ಎಂದರು.

ಇದನ್ನೂ ಓದಿ | Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಮುಂಗಾರು ವಿಫಲವಾಗುತ್ತಿದೆ ಎಂಬ ಬಗ್ಗೆ ಮಾತನಾಡಿ, ಇನ್ನೂ 10 ದಿನಗಳಿವೆ. ಕಾದು ನೋಡೋಣ ಮೋಡ ಬಿತ್ತನೆ ಬಗ್ಗೆ ನಾನು ತಜ್ಞರ ಬಳಿ ಚರ್ಚಿಸುತ್ತೇನೆ ಎಂದು ತಿಳಿಸಿದರು.

Continue Reading

ಕರ್ನಾಟಕ

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

Course Fee Hike: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

VISTARANEWS.COM


on

Koo

ಬೆಂಗಳೂರು: ವೃತ್ತಿಪರ ಕೋರ್ಸ್‌ ವ್ಯಾಸಾಂಗ ಮಾಡ ಬಯಸುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಇದರಿಂದ ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕೋರ್ಸ್‌ಗಳ ಶುಲ್ಕ ಶೇ.10ರಷ್ಟು ಹೆಚ್ಚಳವಾಗಲಿದೆ.

ಪ್ರವೇಶ ಶುಲ್ಕದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇ.10 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಶೇ.15ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುದೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇ. 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ | NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಕೆಇಎ, ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್, ಹಾಗೂ ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅಧ್ಯಕ್ಷರಾದ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ, ಶ್ಯಾಮ್, ಕರ್ನಾಟಕ ರಾಜ್ಯ ಮತೀಯ ಅಲ್ಪಸಂಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಶಫಿಅಹಮ್ಮದ್, ಎಂ.ಎಸ್.ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ತರಾದ ಎಂ.ಆ‌ರ್.ಜಯರಾಮ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.

Continue Reading
Advertisement
Toyota Technical Education Programme started at Bareilly Government Polytechnic by TKM
ದೇಶ7 mins ago

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Truck Driver
ದೇಶ1 hour ago

ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಂದ ಟ್ರಕ್‌ ಡ್ರೈವರ್;‌ ಭೀಕರ ವಿಡಿಯೊ ಇಲ್ಲಿದೆ

Do not split BBMP says Karave State President TA Narayana Gowda
ಕರ್ನಾಟಕ2 hours ago

BBMP: ಬಿಬಿಎಂಪಿ ವಿಭಜನೆ ಬೇಡ; ಇದು ಕನ್ನಡಿಗರಿಗೆ ಮಾರಕ: ನಾರಾಯಣ ಗೌಡ

ಕರ್ನಾಟಕ2 hours ago

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Arundhati Roy
ದೇಶ2 hours ago

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Sunny Leone
ಸಿನಿಮಾ3 hours ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ3 hours ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ3 hours ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ3 hours ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು3 hours ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ7 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌