KL Rahul : ಕೋಚ್​ ರಾಹುಲ್​ ದಾಖಲೆ ಮುರಿದ ಕೆ. ಎಲ್ ರಾಹುಲ್​! - Vistara News

ಕ್ರಿಕೆಟ್

KL Rahul : ಕೋಚ್​ ರಾಹುಲ್​ ದಾಖಲೆ ಮುರಿದ ಕೆ. ಎಲ್ ರಾಹುಲ್​!

ಕೆ. ಎಲ್ ರಾಹುಲ್ (KL Rahul) ಹಾಲಿ ಆವೃತ್ತಿಯ ವಿಶ್ವ ಕಪ್​ನಲ್ಲಿ ಒಟ್ಟು 17 ಬ್ಯಾಟರ್​ಗಳನ್ನು ಔಟ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

VISTARANEWS.COM


on

KL Rahul
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್​​: ಏಕದಿನ ವಿಶ್ವಕಪ್​ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಎಂಬ ಹೆಗ್ಗಳಿಕೆಗೆ ಕೆ.ಎಲ್ ರಾಹುಲ್ (KL Rahul) ಪಾತ್ರರಾಗಿದ್ದಾರೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್​ನಲ್ಲಿ ಮಿಚೆಲ್ ಮಾರ್ಷ್ ಕ್ಯಾಚ್ ಪಡೆಯುವ ಮೂಲಕ ರಾಹುಲ್ 2023 ರ ವಿಶ್ವಕಪ್​ನಲ್ಲಿ ತಮ್ಮ 17 ನೇ ಬಲಿಯನ್ನು ಪಡೆದುಕೊಂಡರು. ಅವರು ಹಾಲಿ ಕೋಚ್ ಹಾಗೂ ಭಾರತ ತಂಡದ ಮಾಜಿ ವಿಕೆಟ್​ ಕೀಪರ್​ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮುರಿದಿದ್ದಾರೆ.

2003ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್​ನಲ್ಲಿ ದ್ರಾವಿಡ್ 15 ಕ್ಯಾಚ್​ಗಳು ಹಾಗೂ 1 ಸ್ಟಂಪಿಂಗ್ ದಾಖಲೆಯನ್ನು ಮಾಡಿದ್ದರು. ಭಾನುವಾರ ನಡೆದ ಫೈನಲ್ನಲ್ಲಿ ರಾಹುಲ್ 107 ಎಸೆತಗಳಲ್ಲಿ 66 ರನ್ ಗಳಿಸಿದರು. ಮೂರು ವಿಕೆಟ್ ನಷ್ಟಕ್ಕೆ 81 ರನ್​ ಗಳಿಸಿ ಅನಿಶ್ಚಿತತೆಯಲ್ಲಿದ್ದ ಭಾರತ ತಂಡಕ್ಕೆ ಚೇತರಿಸಿಕೊಳ್ಳಲು ಸಹಾಯ ಮಾಡಿದರು.

ವಿಶ್ವ ಕಪ್​ನಲ್ಲಿ ಗರಿಷ್ಠ ವಿಕೆಟ್ ಪಡೆದ ಭಾರತ ವಿಕೆಟ್ ಕೀಪರ್​ಗಳ ವಿವರ

  • ಕೆಎಲ್ ರಾಹುಲ್ 11 ಪಂದ್ಯ, 17 ವಿಕೆಟ್​, 16 ಕ್ಯಾಚ್,​ 1 ಸ್ಪಂಪ್,​ 2023 ವರ್ಷ
  • ರಾಹುಲ್ ದ್ರಾವಿಡ್ 11 ಪಂದ್ಯ 16 ವಿಕೆಟ್​ 15 ಕ್ಯಾಚ್​ 1 ಸ್ಟಂಪ್​ 2003 ವರ್ಷ
  • ಎಂಎಸ್ ಧೋನಿ 8 ಪಂದ್ಯ 15 ವಿಕೆಟ್​ 15 ಕ್ಯಾಚ್​​ 0 ಸ್ಟಂಪ್​ 2015 ವರ್ಷ
  • ಸೈಯದ್ ಕಿರ್ಮಾನಿ 8 ಪಂದ್ಯ 14 ವಿಕೆಟ್​ 12 ಕ್ಯಾಚ್​ 2 ಸ್ಟಂಪ್ಡ್​​ 1983 ವರ್ಷ
  • ಕಿರಣ್ ಮೋರೆ 6 ಪಂದ್ಯ 11 ವಿಕೆಟ್​​ 6 ಕ್ಯಾಚ್​ 5 ಸ್ಟಂಪ್​ 1987 ವರ್ಷ

1983ರಲ್ಲಿ ಕನಿಷ್ಠ ಮೊತ್ತ ಬಾರಿಸಿ ರಕ್ಷಿಸಿ ಟ್ರೋಫಿ ಗೆದ್ದಿದ್ದ ತಂಡ

ಆಸ್ಟ್ರೇಲಿಯಾ ತಂಡ ಭಾನುವಾರ ನಡೆದ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಭಾರತ 50 ಓವರ್​ಗಳಲ್ಲಿ 240 ರನ್​ಗಳಿಗೆ ಆಲ್​ಔಟ್ ಆಗಿದೆ. ದೊಡ್ಡ ಮೊತ್ತ ಕೂಡಿಕೆಯಾಗುವ ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ಇದು ಕನಿಷ್ಠ ಮೊತ್ತವೆಂದು ಹೇಳಲಾಗುತ್ತಿದೆ. ಇದು ಭಾರತ ತಂಡದ ಗೆಲುವಿಗೆ ಸಾಕೇ ಎಂಬುದು ಪ್ರಶ್ನೆಯಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ, ಮೊದಲು ಬ್ಯಾಟಿಂಗ್ ಮಾಡುವ ತಂಡಗಳು ಫೈನಲ್​​ನಲ್ಲಿ ಏಳು ಬಾರಿ ಗೆದ್ದಿದೆ. ಮೊದಲು ಬೌಲಿಂಗ್ ಮಾಡಿದ ಐದು ತಂಡಗಳು ಜಯ ಸಾಧಿಸಿದೆ. ಹೀಗಾಗಿ ಭಾರತ ತಂಡ ತಾನು ಪೇರಿಸಿದ 240 ರನ್​ಗಳನ್ನು ಕಾಪಾಡಿಕೊಳ್ಳುವುದೇ ಎಂದು ಕಾದು ನೋಡಬೇಕಾಗಿದೆ. ಆದರೆ, ಭಾರತ ತಂಡವೇ ಅತ್ಯಂತ ಕನಿಷ್ಠ ಮೊತ್ತವನ್ನು ರಕ್ಷಿಸಿಕೊಂಡು ಪ್ರಶಸ್ತಿ ಗೆದ್ದಿರುವ ಇತಿಹಾಸವಿದೆ.

ಇದನ್ನೂ ಓದಿ: ICC World Cup 2023 : ನರೇಂದ್ರ ಮೋದಿ ಸ್ಟೇಡಿಯಮ್​ನಲ್ಲಿ ಸೆಲೆಬ್ರಿಟಿಗಳ ದಂಡು

ಏಕದಿನ ವಿಶ್ವಕಪ್ ಫೈನಲ್ ನಲ್ಲಿ ರಕ್ಷಿಸಲಾದ ಅತ್ಯಂತ ಕಡಿಮೆ ಸ್ಕೋರ್ ಯಾವುದು?

1983ರ ಫೈನಲ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 183 ರನ್ ಗಳಿಸಿತ್ತು. ಏಕದಿನ ವಿಶ್ವಕಪ್ ಫೈನಲ್ನಲ್ಲಿ ತಂಡವೊಂದು ಯಶಸ್ವಿಯಾಗಿ ರಕ್ಷಿಸಿದ ಅತ್ಯಂತ ಕಡಿಮೆ ಸ್ಕೋರ್ ಅದಾಗಿದೆ. ಮೊಹಿಂದರ್ ಅಮರ್​ನಾಥ್ ಮತ್ತು ಮದನ್ ಲಾಲ್ ತಲಾ 3 ವಿಕೆಟ್ ಪಡೆದಿದ್ದರು. ಈ ಮೂಲಕ ಭಾರತದ ಬೌಲರ್​ಗಳು ಬಲಿಷ್ಠ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಲೈನ್ಅಪ್ ಅನ್ನು 140 ರನ್​ಗಳಿಗೆ ಸೀಮಿತಗೊಳಿಸಿ ಟ್ರೋಫಿ ಗೆದ್ದಿತ್ತು. ಇದು ವಿಶ್ವ ಕಪ್ ಇತಿಹಾಸದಲ್ಲಿ ತಂಡವೊಂದು ಕನಿಷ್ಠ ಮೊತ್ತವನ್ನು ರಕ್ಷಿಸಿ ಗೆದ್ದ ಸಂದರ್ಭವಾಗಿದೆ. 1992ರಲ್ಲಿ ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ 249 ರನ್ ಬಾರಿಸಿದ್ದು ವಿಶ್ವಕಪ್ ತಂಡವೊಂದು ಯಶಸ್ವಿಯಾಗಿ ರಕ್ಷಿಸಿದ ಎರಡನೇ ಕನಿಷ್ಠ ಮೊತ್ತವಾಗಿದೆ.

ಏಕದಿನ ವಿಶ್ವಕಪ್ ಫೈನಲ್ ಚೇಸಿಂಗ್​ನಲ್ಲಿ ಆಸ್ಟ್ರೇಲಿಯಾದ ದಾಖಲೆ ಏನು?

ಏಕದಿನ ವಿಶ್ವಕಪ್ ಫೈನಲ್​​ನಲ್ಲಿ ಆಸ್ಟ್ರೇಲಿಯಾ ಒಟ್ಟು ಮೂರು ಬಾರಿ ಚೇಸ್ ಮಾಡಿ. ಎರಡು ಬಾರಿ ಗೆದ್ದಿದೆ ಮತ್ತು ಒಂದು ಬಾರಿ ಸೋತಿದೆ. 1975ರ ವಿಶ್ವಕಪ್ ಫೈನಲ್​ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 17 ರನ್​ಗಳ ಸೋಲಿಗೆ ಒಳಗಾಗಿತ್ತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

Virat Kohli: ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ. ನ್ಯೂಯಾರ್ಕ್(eam India in New York)​ ತಲುಪಿರುವ ಟೀಮ್​ ಇಂಡಿಯಾದ(Team India ) ಮೊದಲ ಬ್ಯಾಚ್​ ಅಭ್ಯಾಸ ಆರಂಭಿಸಿದೆ.

VISTARANEWS.COM


on

Virat Kohli
Koo

ಮುಂಬಯಿ: ಒಂದೆಡೆ ಟೀಮ್​ ಇಂಡಿಯಾದ ಆಟಗಾರರೆಲ್ಲ ಟಿ20 ವಿಶ್ವಕಪ್​ ಗೆಲ್ಲುವ ಪಣತೊಟ್ಟು ನ್ಯೂಯಾರ್ಕ್​ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇತ್ತ ವಿರಾಟ್​ ಕೊಹ್ಲಿ(Virat Kohli) ಅವರು ಮುಂಬೈನಲ್ಲಿ ಸಖತ್​ ಪಾರ್ಟಿ ಮಾಡಿಕೊಂಡು ಎಂಜಾಯ್​ ಮಾಡುತ್ತಿದ್ದಾರೆ. ಕೊಹ್ಲಿಯ ಈ ನಡೆಯನ್ನು ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಖಂಡಿಸಿದ್ದಾರೆ.

ಕಳೆದ ಶನಿವಾರ ಭಾರತ ತಂಡದ ನಾಯಕ ರೋಹಿತ್​ ಶರ್ಮ, ಕೋಚ್​ ರಾಹುಲ್​ ದ್ರಾವಿಡ್​, ರಿಷಭ್​ ಪಂತ್​, ಕುಲ್​ದೀಪ್​ ಯಾದವ್​, ಜಸ್​ಪ್ರೀತ್​ ಬುಮ್ರಾ ಸೇರಿ ಬಹುತೇಕ ಆಟಗಾರರು ನ್ಯೂಯಾರ್ಕ್​ಗೆ ತೆರಳಿದ್ದರು. ಈ ವೇಳೆ ವಿರಾಟ್​ ಕೊಹ್ಲಿ ವೈಯಕ್ತಿಕ ಕಾರಣ ನೀಡಿ ಪ್ರಯಾಣಿಸಿರಲಿಲ್ಲ. ಇದೀಗ ಮುಂಬೈಯ ರೆಸ್ಟೋರೆಂಟ್​ನಲ್ಲಿ ಪತ್ನಿ ಅನುಷ್ಕಾ ಶರ್ಮಾ(Anushka Sharma) ಜತೆಗೆ ಮುಂಬೈನಲ್ಲಿ ಡಿನ್ನರ್ ಪಾರ್ಟಿ(Anushka Sharma And Virat Kohli’s Dinner) ನಡೆಸಿದ್ದಾರೆ.

ಈ ಪಾರ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ ಬೌಲರ್ ಜಹೀರ್ ಖಾನ್(Zaheer Khan) ಮತ್ತು ಅವರ ಪತ್ನಿ ಸಾಗರಿಕಾ ಘಾಟ್ಗೆ(Sagarika Ghatge), ಜನಪ್ರಿಯ ದೂರದರ್ಶನ ಕಾಮೆಂಟೇಟರ್ ಗೌರವ್ ಕಪೂರ್(Gaurav Kapur) ಕೂಡ ಭಾಗಿಯಾಗಿದ್ದರು. ಈ ವಿಡಿಯೊ ಕಂಡ ನೆಟ್ಟಿಗರು ಕೊಹ್ಲಿಗೆ ಈಗ ತಂಡಕ್ಕಿಂತ ಕೇವಲ ಪಾರ್ಟಿ ಮಾಡಿ ಕಾಲ ಕಳೆಯುವುದು ಖಷಿ ನೀಡುತ್ತಿದೆ. ಈತ ಕೇವಲ ತನ್ನ ವೈಯಕ್ತಿಕ ದಾಖಲೆಗಾಗಿ ಮಾತ್ರ ಆಡುತ್ತಾನೆ ಎಂದು ಕಮೆಂಟ್​ ಮಾಡಿದ್ದಾರೆ.

ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ. ನ್ಯೂಯಾರ್ಕ್(eam India in New York)​ ತಲುಪಿರುವ ಟೀಮ್​ ಇಂಡಿಯಾದ(Team India ) ಮೊದಲ ಬ್ಯಾಚ್​ ಅಭ್ಯಾಸ ಆರಂಭಿಸಿದೆ. ಎಲ್ಲ ಆಟಗಾರರು ಇಂದು ರನ್ನಿಂಗ್​ ಮತ್ತು ಫುಟ್ಬಾಲ್​ ಆಡುವ ಮೂಲಕ ವ್ಯಾಯಾಮ ನಡೆಸಿದ್ದಾರೆ. ಗುರುವಾರದಿಂದ ಬ್ಯಾಟಿಂಗ್​ ಮತ್ತು ಬೌಲಿಂಗ್​ ಅಭ್ಯಾಸ ಆರಂಭಿಸಲಿದ್ದಾರೆ. ಟೀಮ್​ ಇಂಡಿಯಾದ ದ್ವಿತೀಯ ಬ್ಯಾಚ್​ ಇಂದು ನ್ಯೂಯಾರ್ಕ್​ಗೆ ತಲುಪಲಿದೆ.

ಇದನ್ನೂ ಓದಿ Virat Kohli: ಐಪಿಎಲ್​ 2024ರ ಸಾಧನೆ ಕುರಿತು ಹೇಳಿಕೆ ನೀಡಿದ ವಿರಾಟ್ ಕೊಹ್ಲಿ

ಭಾರತ ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಏಕೈಕ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದಾದ ಬಳಿಕ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ ಮತ್ತು ಭಾರತ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Viral Run Out Video: ರನೌಟ್​ ಪ್ರಯತ್ನದ ವಿಡಿಯೊವನ್ನು ಅಂಪೈರ್​ ರಿಚರ್ಡ್‌ ಕೆಟಲ್‌ಬರೋ ತಮ್ಮ ಟ್ವಿಟರ್ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು ‘ಕ್ರಿಕೆಟ್‌ನಲ್ಲಿ ಬಿಲಿಯನ್ ಕ್ಷಣವನ್ನು ನೋಡಿದ್ದೇನೆ. ಆದರೆ ಈ ರೀತಿಯ ರೋಚಕ ಕ್ಷಣವನ್ನು ನೋಡಿದ್ದು ಇದೇ ಮೊದಲು’ ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Viral Run Out Video
Koo

ಮುಂಬಯಿ: ಸಾಮಾಜಿಕ ಜಾಲತಾಣದಲ್ಲಿ ಹಲವು ವೈರಲ್​ ವಿಡಿಯೋಗಳು(Viral Video) ಹರಿದಾಡುತ್ತಿರುತ್ತವೆ. ಆದರೆ ಅವುಗಳಲ್ಲಿ ಕೆಲವೊಂದು ವಿಡಿಯೋಗಳು ವಿಶೇಷ ಕಾರಣದಿಂದಾಗಿ ಜನರ ಗಮನ ಸೆಳೆದುಬಿಡುತ್ತದೆ. ಇದೀಗ ಇತಂಹದ್ದೇ ವಿಡಿಯೊವೊಂದು ಕ್ರಿಕೆಟ್​ ಅಭಿಮಾನಿಗಳ ಮನಗೆದ್ದಿದೆ. ಮಕ್ಕಳ ಕ್ರಿಕೆಟ್​ ಟೂರ್ನಿಯಲ್ಲಿ ರನೌಟ್​ ಮಾಡು ಹರಸಾಹಸಪಟ್ಟ ವಿಡಿಯೊವೊಂದು ವೈರಲ್(Viral Run Out Video)​ ಆಗಿದೆ.

ಮೈದಾನದಲ್ಲಿ ಶಾಲಾ ವಿದ್ಯಾರ್ಥಿಗಳು ಕ್ರಿಕೆಟ್ ಟೂರ್ನಿಯೊಂದ ಪಂದ್ಯವನ್ನು ಆಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಟ್ರೈಕರ್​ನಲ್ಲಿದ್ದ ಬ್ಯಾಟರ್​ ಚೆಂಡನ್ನು ಹೊಡೆದು ರನ್​ ಗಳಿಸಲು ನಾನ್​ಸ್ಟ್ರೈಕ್​ಗೆ ಓಡಿದ್ದಾನೆ. ಚೆಂಡು ಫೀಲ್ಡರ್​ ಕೈ ಸೇರಿದ ಕಾರಣ ನಾನ್​ಸ್ಟ್ರೈಕ್​ಕರ್​ನಲ್ಲಿದ್ದ ಬ್ಯಾಟರ್​ ಓಡಲು ನಿರಾಕರಿಸಿ ನಾನ್​ಸ್ಟ್ರೈಕ್​ನಲ್ಲಿಯೇ ನಿಲ್ಲುತ್ತಾನೆ. ಸುಲಭವಾಗಿ ರನೌಟ್​ ಅವಕಾಶ ಸಿಕ್ಕರೂ ಕೂಡ ಫೀಲ್ಡರ್​ ಗಡಿಬಿಡಿಯಲ್ಲಿ ಚೆಂಡನ್ನು ಕೀಪರ್​ ಕೈಗೆ ಎಸೆಯದೆ ನಾನ್​ಸ್ಟ್ರೈಕ್​ನತ್ತ ಬಿಸಾಡುತ್ತಾನೆ. ಚೆಂಡು ವಿಕೆಟ್​ಕೆ ಬಡಿಯದೆ ಮತ್ತೊಂದು ಫೀಲ್ಡರ್​ ಕೈ ಸೇರಿತು. ಆತ ಕೀಪರ್​ ಕಡೆ ಚೆಂಡನ್ನು ಎಸೆದ ವೇಳೆ ಪಿಚ್​ ಬದಿಯಲ್ಲಿ ನಿಂತಿದ್ದ ಫೀಲ್ಡರ್​ ಒಬ್ಬ ಚೆಂಡು ಕ್ಯಾಚ್​ ಹಿಡಿದು ವಿಕೆಟ್​ಕೆ ಎಸೆತುತ್ತಾನೆ. ಇಲ್ಲಿಯೂ ಗುರಿ ತಪ್ಪುತ್ತದೆ. ನಾನ್​ಸ್ಟ್ರೈಕ್​ನಲ್ಲಿದ್ದ ಬ್ಯಾಟರ್​ಗಳು ತಮ್ಮ ಪಾಡಿಗೆ ತಾವು ಚರ್ಚೆಯಲ್ಲಿ ಮಗ್ನರಾಗಿರುತ್ತಾರೆ. ಕೀಪರ್​ ಕೂಡ ರನೌಟ್​ ಮಾಡಲು ಎಡವುತ್ತಾನೆ. ಎದುರಾಳಿಗಳ ಪರದಾಟ ಕಂಡ ಬ್ಯಾಟರ್​ ತಕ್ಷಣ ಸ್ಟ್ರೈಕ್​ಗೆ ಓಡಿ ರನೌಟ್​ ಅಪಾಯದಿಂದ ಪಾರಾಗಿದ್ದಾನೆ.

ಈ ಹಾಸ್ಯಮಯ ರನೌಟ್​ ಪ್ರಯತ್ನದ ವಿಡಿಯೊವನ್ನು ಅಂಪೈರ್​ ರಿಚರ್ಡ್‌ ಕೆಟಲ್‌ಬರೋ ತಮ್ಮ ಟ್ವಿಟರ್ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡು ‘ಕ್ರಿಕೆಟ್‌ನಲ್ಲಿ ಬಿಲಿಯನ್ ಕ್ಷಣವನ್ನು ನೋಡಿದ್ದೇನೆ. ಆದರೆ ಈ ರೀತಿಯ ರೋಚಕ ಕ್ಷಣವನ್ನು ನೋಡಿದ್ದು ಇದೇ ಮೊದಲು’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

ಐಸಿಸಿ ಕೂಟಗಳಲ್ಲಿ ಅಂಪೈರ್​ ರಿಚರ್ಡ್‌ ಕೆಟಲ್‌ಬರೋ ಟೀಮ್ ಇಂಡಿಯಾ ಪಾಲಿಗೆ ಐರನ್ ಲೆಗ್ ಎನಿಸಿಕೊಂಡಿದ್ದಾರೆ. ರಿಚರ್ಡ್‌ ಕೆಟಲ್‌ಬರೋ ಕಾರ್ಯನಿರ್ವಹಿಸಿದ ಎಲ್ಲ ಮಹತ್ವದ ಪಂದ್ಯದಲ್ಲಿಯೂ ಭಾರತ ತಂಡ ಸೋಲುಕಂಡಿದೆ.

2014 ರಿಂದ ರಿಚರ್ಡ್‌ ಕೆಟಲ್‌ಬರೋ ಅಂಪೈರಿಂಗ್‌ ಮಾಡಿದ ಎಲ್ಲ ಪ್ರಮುಖ ಪಂದ್ಯಗಳಲ್ಲಿಯೂ ಟೀಮ್‌ ಇಂಡಿಯಾ ಸೋಲು ಕಂಡಿದೆ. 2014ರ ಟಿ20 ವಿಶ್ವ ಕಪ್ ಫೈನಲ್, 2015ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2016ರ ಟಿ20 ವಿಶ್ವ ಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2021ರ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್, 2023ರ ಏಕದಿನ ವಿಶ್ವಕಪ್ ಫೈನಲ್​​ ಪಂದ್ಯದಲ್ಲಿ ಭಾರತ ಸೋತಿತ್ತು. ಹೀಗಾಗಿ ಭಾರತ ತಂಡ ಆಡುವ ಪ್ರಮುಖ ಪಂದ್ಯಗಳಲ್ಲಿ ರಿಚರ್ಡ್‌ ಕೆಟಲ್‌ಬರೋ ಅಂಪೈರ್ ಆದರೆ ಭಾರತ ಸೋಲುವುದು ಖಚಿತ ಎಂಬ ಅಭಿಪ್ರಾಯ ಅಭಿಮಾನಿಗಳದ್ದಾಗಿದೆ.

Continue Reading

ಕ್ರೀಡೆ

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Hardik Pandya: ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಮಾತುಗಳು ಕೆಲದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜತೆಗೆ ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ಹಾರ್ದಿಕ್ ಪಾಂಡ್ಯ ಅವರು ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನತಾಶಾಗೆ ವರ್ಗಾಯಿಸಬೇಕಿದೆ ಎನ್ನಲಾಗಿದೆ.

VISTARANEWS.COM


on

Hardik Pandya
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್(T20 world cup 2024)​ ಟೂರ್ನಿಗಾಗಿ ಈಗಾಗಲೇ ನ್ಯೂಯಾರ್ಕ್(eam India in New York)​ ತಲುಪಿರುವ ಟೀಮ್​ ಇಂಡಿಯಾದ(Team India ) ಮೊದಲ ಬ್ಯಾಚ್​ ಅಭ್ಯಾಸ ಆರಂಭಿಸಿದೆ. ಆಟಗಾರರು ಅಭ್ಯಾಸ ನಿರತ ವಿಡಿಯೊವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ಕೌಟುಂಬಿಕ ಸಮಸ್ಯೆಯನ್ನು ಬದಿಗೊತ್ತಿ ಹಾರ್ದಿಕ್​ ಪಾಂಡ್ಯ(Hardik Pandya) ಕೂಡ ತಂಡದ ಯಶಸ್ಸಿಗಾಗಿ ಟಿ20 ಆಡಲು ಸಜ್ಜಾಗಿದ್ದಾರೆ. ಲಂಡನ್​ನಿಂದ ನೇರವಾಗಿ ನ್ಯೂಯಾರ್ಕ್​ಗೆ ಬಂದಿಳಿದ ಪಾಂಡ್ಯ ಟೀಮ್​ ಇಂಡಿಯಾ ಜತೆ ಅಭ್ಯಾಸ ನಡೆಸಿದ್ದಾರೆ.

ಟೀಮ್​ ಇಂಡಿಯಾದ ದ್ವಿತೀಯ ಬ್ಯಾಚ್​ ಇಂದು ನ್ಯೂಯಾರ್ಕ್​ಗೆ ತಲುಪಲಿದೆ. ಗುರುವಾರದಿಂದ ಈ ಆಟಗಾರರು ಕೂಡ ಅಭ್ಯಾಸ ಆರಂಭಿಸಲಿದ್ದಾರೆ. ವಿರಾಟ್​ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್​ ತಮ್ಮ ವೈಯಕ್ತಿಕ ಕಾರಣಗಳಿಂದ ತಂಡ ಸೇರುವುದು ಕೊಂಚ ತಡವಾಗಲಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್​ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ.

ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ಮಾತುಗಳು ಕೆಲದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜತೆಗೆ ವಿಚ್ಛೇದನ(Hardik Pandya and Natasa Stankovic divorce) ಪ್ರಕ್ರಿಯೆಯ ಭಾಗವಾಗಿ, ಹಾರ್ದಿಕ್ ಪಾಂಡ್ಯ ಅವರು ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನತಾಶಾಗೆ ವರ್ಗಾಯಿಸಬೇಕಿದೆ ಎನ್ನಲಾಗಿದೆ. ಈ ಎಲ್ಲ ಮಾತುಗಳ ಮಧ್ಯೆಯೂ ಪಾಂಡ್ಯ ದೇಶದ ಕರ್ತವ್ಯಕ್ಕೆ ಹಾಜರಾಗಿದ್ದು ಟಿ20 ವಿಶ್ವಕಪ್​ಗೆ ಅಭ್ಯಾಸ ಆರಂಭಿಸಿದ್ದಾರೆ. ಇದಕ್ಕೆ ಅನೇಕ ನೆಟ್ಟಿಗರು ಪಾಂಡ್ಯಗೆ ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ


Continue Reading

ಪ್ರಮುಖ ಸುದ್ದಿ

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Rishabh Pant:

VISTARANEWS.COM


on

Rishab Pant
Koo

ಬೆಂಗಳೂರು: ಭೀಕರ ಕಾರು ಅಫಘಾತದ ಬಳಿಕ ಚೇತರಿಸಿಕೊಂಡು ಒಂದು ವರ್ಷಕ್ಕೂ ಹೆಚ್ಚು ಸಮಯದ ನಂತರ ರಾಷ್ಟ್ರೀಯ ಕರ್ತವ್ಯಕ್ಕೆ ಹಾಜರಾಗಿರುವ ರಿಷಭ್ ಪಂತ್​ಗೆ ಬಿಸಿಸಿಐ ವಿಶೇಷ ಗೌರವ ಸಲ್ಲಿದೆ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಹೊಸ ನೀಲಿ ಜೆರ್ಸಿಯಲ್ಲಿ ಕಾಣಿಸಿಕೊಂಡಿರುವ ಅವರ ವಿಡಿಯೊವನ್ನು ಶೇರ್ ಮಾಡಿದೆ. ಸುಂದರ ಕ್ರಿಕೆಟ್ ಆಟಗಾರ ಮುಂದಿನ ತಿಂಗಳು ನಡೆಯಲಿರುವ ಟಿ 20 ವಿಶ್ವಕಪ್ 2024 ರಲ್ಲಿ ಮತ್ತೆ ತಮ್ಮ ದೇಶಕ್ಕಾಗಿ ಆಡುವ ವಿಷಯವನ್ನು ಸಂಭ್ರಮಿಸುವಂತೆ ಮಾಡಿದೆ. ಜೂನ್ 5ರಂದು ನ್ಯೂಯಾರ್ಕ್​ನಲ್ಲಿ ಐರ್ಲೆಂಡ್ ವಿರುದ್ಧ ಭಾರತ ತನ್ನ ಮೊದಲ ಪಂದ್ಯವನ್ನಾಡಲಿದೆ. ತಂಡದ ಮತ್ತೊಬ್ಬ ವಿಕೆಟ್ ಕೀಪರ್-ಬ್ಯಾಟರ್​ ಸಂಜು ಸ್ಯಾಮ್ಸನ್​ಗಿಂತ ಮುಂಚಿತವಾಗಿ ಪಂತ್ ಅವರನ್ನು ಆರಂಭಿಕ ಇಲೆವೆನ್​​ನಲ್ಲಿ ಆಯ್ಕೆ ಮಾಡಿದರೆ, ಅದು ಮೆನ್ ಇನ್ ಬ್ಲೂ ತಂಡದ ಐತಿಹಾಸಿಕ ಕ್ಷಣವಾಗಬಹುದು.

ಪಂತ್ ಪಿಚ್​ಗೆ ಮರಳುವ ಮೊದಲು ಹೃದಯಪೂರ್ವಕ ಸಂದೇಶದೊಂದಿಗೆ ಭಾರತೀಯ ಶರ್ಟ್​ನಲ್ಲಿ ತಮ್ಮ ಹೊಸ ನೋಟದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಒಂದು ಇಣುಕು ನೋಟವನ್ನು ನೀಡಿದ್ದಾರೆ.

“ಸಿದ್ಧ. ಸಮರ್ಥ. ನಿರ್ಧರಿಸಲಾಗಿದೆ! ಪ್ರತಿಕೂಲ ಪರಿಸ್ಥಿತಿಯಿಂದ ಗೆಲುವಿನವರೆಗೆ, ಐಸಿಸಿ ಪುರುಷರ ಟಿ 20 ವಿಶ್ವಕಪ್​ಗೆ ರಿಷಭ್ ಪಂತ್​ ಅವರ ಪ್ರಯಾಣವು ದೃಢನಿಶ್ಚಯಕ್ಕೆ ಸಾಕ್ಷಿ. ಜೂನ್ 5 ರಿಂದ ನಡೆಯಲಿರುವ ಟಿ20 ವಿಶ್ವ ಕಪ್​ನಲ್ಲಿ ವಿಕೆಟ್ ಕೀಪರ್​, “ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

ಭಯಾನಕ ಘಟನೆಯ ನಂತರ ಪಂತ್ ಮರಳಿದ್ದಾರೆ

ಡಿಸೆಂಬರ್ 30, 2022 ರ ಸಂಜೆ, ಪಂತ್ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಭಯಾನಕ ಕಾರು ಅವಘಡದಲ್ಲಿ ಸಿಲುಕಿದ್ದರು. ಅವರ ವಾಹನವು ರಸ್ತೆ ಬಿಟ್ಟು ಹೆಚ್ಚಿನ ವೇಗದಲ್ಲಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಹೊಸ ವರ್ಷದ ಮುನ್ನಾದಿನವನ್ನು ಕುಟುಂಬದೊಂದಿಗೆ ಕಳೆಯಲು ಮುಂಜಾನೆ ಮನೆಗೆ ಪ್ರಯಾಣಿಸುತ್ತಿದ್ದಾಗ ಪಂತ್ ಅವರ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು.

ಆ ಪ್ರದೇಶದ ಸ್ಥಳೀಯರು ಅವರನ್ನು ಉರಿಯುತ್ತಿರುವ ವಾಹನದಿಂದ ಹೊರಗೆಳೆದು ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದರು. ಪುನಶ್ಚೇತನ ಮತ್ತು ಚೇತರಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸುವ ಮೊದಲು, ಪಂತ್ ಅವರ ಮೊಣಕಾಲುಗಳು ಮತ್ತು ದೇಹದ ಇತರ ಭಾಗಗಳಲ್ಲಿ ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗಿತ್ತು. ಸಂಪೂರ್ಣ ಆರೋಗ್ಯಕ್ಕೆ ಮರಳಲು ಅವರಿಗೆ ಒಂದು ವರ್ಷಕ್ಕಿಂತ ಹೆಚ್ಚು ಸಮಯ ಹಿಡಿಯಿತು. ಆದಾಗ್ಯೂ ಅಷ್ಟೊಂದು ಭೀಕರ ಅಪಘಾತದ ಬಳಿಕ ಅವರು ಚೇತರಿಸಿಕೊಂಡ ವೇಗ ಅಸಾಮಾನ್ಯವಾಗಿದೆ.

Continue Reading
Advertisement
Virat Kohli
ಕ್ರೀಡೆ10 mins ago

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

PM Narendra Modi
ದೇಶ22 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ23 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ26 mins ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ38 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ40 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ46 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್53 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ58 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ1 hour ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ21 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌