Caste Census : ಜಾತಿ ಗಣತಿ ವರದಿ ತಿರಸ್ಕಾರ ಮನವಿಗೆ ಸಹಿ ಹಾಕಿದ ಡಿ.ಕೆ. ಶಿವಕುಮಾರ್! - Vistara News

ಕರ್ನಾಟಕ

Caste Census : ಜಾತಿ ಗಣತಿ ವರದಿ ತಿರಸ್ಕಾರ ಮನವಿಗೆ ಸಹಿ ಹಾಕಿದ ಡಿ.ಕೆ. ಶಿವಕುಮಾರ್!

Caste Census : ಕಾಂತರಾಜು ಆಯೋಗದ ವರದಿ ತಿರಸ್ಕರಿಸುವ ಸಂಬಂಧ ಒಕ್ಕಲಿಗರ ಸಂಘ ಮನವಿ ಪತ್ರವನ್ನು ಸಿದ್ಧಪಡಿಸಿತ್ತು. ಇದಕ್ಕೆ ಈಗ ಡಿ.ಕೆ. ಶಿವಕುಮಾರ್‌ ಅವರ ಸಹಿಯನ್ನು ಪಡೆದುಕೊಳ್ಳಲಾಗಿದ್ದು, ಆ ಪತ್ರವನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಲಾಗಿದೆ.

VISTARANEWS.COM


on

Caste Census report by DK Shivakumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಚ್‌. ಕಾಂತರಾಜು ನೇತೃತ್ವದ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ‘ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ -2015’ ವರದಿಯನ್ನು (ಜಾತಿ ಗಣತಿ – Caste Census) ಸ್ವೀಕರಿಸಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಒಕ್ಕಲಿಗ ಸಮುದಾಯ ವಿರೋಧಿಸುತ್ತಾ ಬಂದಿದೆ. ಈಗ ಕಾಂತರಾಜ್ ಆಯೋಗದ (Kantharaj Commission) ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ (Vokkaliga Sangha) ಸಲ್ಲಿಸಿದ್ದ ಮನವಿ ಪತ್ರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಸಹಿ ಹಾಕುವ ಮೂಲಕ ತಮ್ಮ ವಿರೋಧವನ್ನು ದಾಖಲಿಸಿದ್ದಾರೆ.

ಈ ಮೂಲಕ ಸರ್ಕಾರದ ಜಾತಿ ಜನಗಣತಿ ವರದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಹ ವಿರೋಧ ವ್ಯಕ್ತಪಡಿಸಿದಂತೆ ಆಗಿದೆ. ಕಾಂತರಾಜು ಆಯೋಗದ ವರದಿ ತಿರಸ್ಕರಿಸುವ ಸಂಬಂಧ ಒಕ್ಕಲಿಗರ ಸಂಘ ಮನವಿ ಪತ್ರವನ್ನು ಸಿದ್ಧಪಡಿಸಿತ್ತು. ಇದಕ್ಕೆ ಈಗ ಡಿ.ಕೆ. ಶಿವಕುಮಾರ್‌ ಅವರ ಸಹಿಯನ್ನು ಪಡೆದುಕೊಳ್ಳಲಾಗಿದ್ದು, ಆ ಪತ್ರವನ್ನು ಹಿಂದುಳಿದ ವರ್ಗಗಳ ಆಯೋಗಕ್ಕೆ ಸಲ್ಲಿಸಲಾಗಿದೆ. ಇದರ ಮನವಿ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಲ್ಲಿಸಲಾಗಿದೆ.

Caste Census report by DK Shivakumar

ಇದನ್ನೂ ಓದಿ: Electricuted Case :‌ ವಿದ್ಯುತ್‌ ಸ್ಪರ್ಶದಿಂದ ತಾಯಿ-ಮಗು ಸಾವಿಗೆ ಇಲಿ ಕಾರಣ ಎಂದ ಸಚಿವ ಜಾರ್ಜ್!

Caste Census report by DK Shivakumar

ಈಗ ಜಾತಿ ಗಣತಿ ವಿಚಾರಕ್ಕೆ ಸರ್ಕಾರದೊಳಗಿನ ಸಂಘರ್ಷಕ್ಕೆ ಕಾರಣವಾದಂತೆ ಆಗಿದ್ದು, ಈ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿ ಜಾರಿ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಕೆಲವು ಸಚಿವರು ಒತ್ತಡ ತರುತ್ತಿದ್ದಾರೆ. ಸಚಿವರಾದ ಪರಮೇಶ್ವರ್, ಸತೀಶ್ ಜಾರಕಿಹೊಳಿ, ಶಿವರಾಜ್ ತಂಗಡಗಿ ಸಿಎಂಗೆ ಮನವಿ ಮಾಡುತ್ತಿದ್ದಾರೆ. ಆದರೆ, ಒಕ್ಕಲಿಗ, ಲಿಂಗಾಯತ ಸಮುದಾಯದ ಸಚಿವರು ಜಾತಿಗಣತಿ ವರದಿ ಬಿಡುಗಡೆಗೆ ವಿರೋಧಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ಡಿ.ಕೆ. ಶಿವಕುಮಾರ್‌ ಅವರ ನಡೆ ಈ ಕುತೂಹಲವನ್ನು ಹುಟ್ಟುಹಾಕಿದೆ.

Caste Census report by DK Shivakumar

ಜಾತಿ ಗಣತಿ ಮೂಲ ವರದಿಯೇ ನಾಪತ್ತೆ!

ರಾಜ್ಯ ರಾಜಕೀಯದಲ್ಲಿ (Karnataka Politics) ಭಾರಿ ಚರ್ಚೆಯನ್ನು ಹುಟ್ಟುಹಾಕಿರುವ ಜಾತಿ ಗಣತಿ ವರದಿಯ (Caste Census Report) ಮೂಲ ಪ್ರತಿ (Original copy) ಕಣ್ಮರೆಯಾಗಿದೆಯೇ? ಇಂಥದ್ದೊಂದು ಪ್ರಶ್ನೆ ಈ ಹುಟ್ಟಿಕೊಂಡಿದೆ. ಈ ವರದಿಯನ್ನು ಸ್ವೀಕಾರ ಮಾಡಿ ಬಿಡುಗಡೆ ಮಾಡಲು ಸಿಎಂ ಉತ್ಸಾಹ ತೋರಿದ್ದರು. ಈ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ವರದಿಯು ಬಿಡುಗಡೆ ಆಗಬೇಕಿತ್ತು. ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿಗೆ ಇದರ ಲಾಭ ಪಡೆಯಲು ಕಾಂಗ್ರೆಸ್‌ ಸರ್ಕಾರ (Congress Government) ಮುಂದಾಗಿತ್ತು. ಆದರೆ, ಈಗ ಇದರ ಮೂಲ ಪ್ರತಿಯೇ ಕಣ್ಮರೆಯಾಗಿದೆ ಎಂಬ ಅನುಮಾನ ಕಾಡತೊಡಗಿದೆ.

Caste Census report by DK Shivakumar

ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಮುಖ್ಯಸ್ಥ ಕಾಂತರಾಜು ಅವರು ನೀಡಿದ್ದ ಜಾತಿ ಗಣತಿ ವರದಿ ಇದಾಗಿತ್ತು. ಇದರ ಮೂಲ ಪ್ರತಿ ನಾಪತ್ತೆಯಾಗಿದೆ ಎಂದು ಪತ್ರ ಬರೆದು ಎರಡು ವರ್ಷ ಕಳೆದರೂ ಸರ್ಕಾರದಿಂದ ಯಾವುದೇ ಉತ್ತರ ಇಲ್ಲ. ಜಾತಿಗಣತಿಯ ಮೂಲ ಪ್ರತಿ ಸರ್ಕಾರದ ಖಜಾನೆಯಿಂದಲೇ ನಾಪತ್ತೆಯಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ.

Caste Census report by DK Shivakumar

2018ರಿಂದ 2020ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಕಚೇರಿಯ ತಿಜೋರಿಯಲ್ಲಿದ್ದ ಮೂಲ ಪ್ರತಿ ನಾಪತ್ತೆಯಾಗಿದೆ. ಮೂಲ ಪ್ರತಿಗಳ ಬದಲಾಗಿ ಕೇವಲ ನಕಲು ಪ್ರತಿಗಳನ್ನು ಹಾಗೂ ಸ್ಕ್ಯಾನ್ ಮಾಡಿದ ಕೆಲವು ದಾಖಲೆಗಳನ್ನು ಮಾತ್ರ ಆಯೋಗದ ತಿಜೋರಿಯಲ್ಲಿ ಉಳಿಸಲಾಗಿದೆ.

ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ ವಾಗಿರುವ ಜಾತಿಗಣತಿಗೆ ಈಗ ನಾಟಕೀಯ ತಿರುವು ಸಿಕ್ಕಿದೆ. ಈವರೆಗೆ ಸರ್ಕಾರ ಈ ವಿಷಯವನ್ನು ಮುಚ್ಚಿಟ್ಟಿದ್ದು ಏಕೆ ಎಂಬ ಪ್ರಶ್ನೆ ಕಾಡತೊಡಗಿದೆ.

ಏನಿದು ನಾಪತ್ತೆ ಪ್ರಕರಣ?

2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಸೂಚಿಸಿತ್ತು. 2015ರಲ್ಲಿ ಎಚ್. ಕಾಂತರಾಜ್ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ವರದಿ ಸಿದ್ಧಪಡಿಸಿ ಭದ್ರತಾ ಕೊಠಡಿಯಲ್ಲಿ ವರದಿಯ ಮೂಲ ಪ್ರತಿ ಸಹಿತ ಹಲವು ದಾಖಲೆಗಳನ್ನು ಆಯೋಗ ಇರಿಸಿತ್ತು.

ನಂತರ 2018ರಲ್ಲಿ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂತು. ಈ ಅವಧಿಯಲ್ಲಿ ಹಿಂದುಳಿದ ವರ್ಗದ ಆಯೋಗಕ್ಕೆ ಅಧ್ಯಕ್ಷರ ನೇಮಕ ಆಗಿರಲಿಲ್ಲ. ನಂತರ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಜಯಪ್ರಕಾಶ್ ಹೆಗಡೆಯವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಅವರ ಅವಧಿಯಲ್ಲಿ ಅಂದರೆ 2021ರ ಆಗಸ್ಟ್‌ನಲ್ಲಿ ಆಯೋಗವು ಜಾತಿಗಣತಿಯ ವರದಿಯನ್ನು ಹುಡುಕಿದಾಗ ಮೂಲ ಪ್ರತಿ ಕಣ್ಮರೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಆಯೋಗದ ಅಂದಿನ ಸದಸ್ಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್ ಅವರು ಸರ್ಕಾರಕ್ಕೆ ಪತ್ರ ಬರೆದು ಮೂಲ ಪ್ರತಿ ಕಳ್ಳತನ ಆಗಿರುವ ಬಗ್ಗೆ ಪತ್ರ ಬರೆದಿದ್ದರು. 2022ರ ಏಪ್ರಿಲ್‌ನಲ್ಲಿ ಸದಸ್ಯ ಕಾರ್ಯದರ್ಶಿಯಾಗಿದ್ದ ದಯಾನಂದ ಅವರು ಪ್ರಸಾದ್ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಮೂಲ ದಾಖಲೆ ಅಲ್ಲದ ಸ್ಕ್ಯಾನ್ ಪ್ರತಿಯು ನಮಗೆ ಲಭ್ಯವಾಗಿದೆ. ಅದರಲ್ಲಿ ತಮ್ಮ ಸಹಿ ಇದ್ದು ಅದು ಅಧಿಕೃತ ಸಹಿ ಹೌದೋ ಅಲ್ಲವೋ ಎಂಬುದನ್ನು ತಿಳಿಸಿ ಎಂದು ಮಾಹಿತಿಯನ್ನು ಕೇಳಿದ್ದರು.

ಇದನ್ನೂ ಓದಿ: Karnataka Electricity : ಜನವರಿವರೆಗೂ ವಿದ್ಯುತ್ ಸಮಸ್ಯೆ ಇಲ್ಲ ಎಂದ ಜಾರ್ಜ್! ಆನಂತರ..?

ಡಾ. ಪ್ರಸಾದ್ ಅವರು ಯಾವ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದು ದಾಖಲೆಗಳಲ್ಲಿ ಲಭ್ಯವಾಗಿಲ್ಲ. ಈ ಎಲ್ಲ ದಾಖಲೆಗಳಿಂದ ಸರ್ಕಾರದಲ್ಲಿ ಜಾತಿಗಣತಿಯ ಮೂಲ ಪ್ರತಿ ಕಣ್ಮರೆ ಆಗಿದೆ ಎಂಬುದು ಗೊತ್ತಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Actor Darshan: ಶನಿವಾರ ಬೆಳಗ್ಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Actor Darshan

6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್

ʻʻಡಿ 6106ʼʼಎಂದು ಒಬ್ಬ ಅಭಿಮಾನಿ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ದರ್ಶನ್ ಕೈದಿ ನಂಬರ್‌ನಲ್ಲಿಯೇ ಮೊಬೈಲ್ ಕವರ್‌ ಕೂಡ ಬಂದಿದೆ. ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ತಮ್ಮ ವಾಹನಗಳಿಗೆ ಈ ರೀತಿಯ ಸ್ಟಿಕ್ಕರ್‌ವನ್ನು ನೂರಾರು ಫ್ಯಾನ್ಸ್‌ ಹಾಕಿಕೊಂಡು ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುತ್ತಿದ್ದಾರೆ. ಕೈದಿ ನಂಬರ್ 6106 ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟ್ರೆಂಡಿಂಗ್ ಆಗುತ್ತಿದೆ.

ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇತ್ತೀಚೆಗೆ ಅವರ ವಿಶೇಷ ಚೇತನ ಅಭಿಮಾನಿಯೊಬ್ಬರು ಅವರನ್ನು ನೋಡಲು ಬಂದಿದ್ದರು. ಈ ಘಟನೆಯ ನಂತರ ಅಭಿಮಾನಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದು ಜೈಲಿನಿಂದಲೇ ನಟ ದರ್ಶನ್ ಮನವಿ ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Continue Reading

ಬೆಂಗಳೂರು

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

BBMP Scam: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

BBMP Scam
Koo

ಬೆಂಗಳೂರು: ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣವು ಗಂಭೀರ ಸ್ವರೂಪ ಪಡೆದಿರುವ ಬೆನ್ನಲ್ಲೇ ಮತ್ತೊಂದು ಬಹುಕೋಟಿ ಹಗರಣವು ಬಯಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP Scam) ಅಧಿಕಾರಿಗಳು ಸುಮಾರು 102 ಕೋಟಿ ರೂಪಾಯಿಯನ್ನು ನಕಲಿ ಸೊಸೈಟಿಗಳಿಗೆ (Fake Societies) ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 9 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಹೌದು, ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ವಿಧವೆಯರಿಗೆ ಮೀಸಲಾದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 102 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಹಗರಣದಲ್ಲಿ ಶಾಮೀಲಾದ ಅಧಿಕಾರಿಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Siddaramaiah: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜೂನ್‌ 28) ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಹಾಗೆಯೇ, ಹಲವು ಮನವಿಗಳನ್ನು ಕೂಡ ಸಿದ್ದರಾಮಯ್ಯ ಮಾಡಿದರು.

VISTARANEWS.COM


on

CM SIddaramaiah
Koo

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೀಡು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಇದರ ಮಧ್ಯೆಯೇ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು, ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡಬೇಕು ಎಂದು ಅವರು ಕೋರಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು. ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೋರಲಾಯಿತು. ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಇದನ್ನೂ ಓದಿ: CM Siddaramaiah: ನಿತಿನ್‌ ಗಡ್ಕರಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ಪ್ರಮುಖ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚೆ

Continue Reading
Advertisement
Actor Darshan
ಕರ್ನಾಟಕ5 mins ago

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Amarnath Yatra
ದೇಶ13 mins ago

Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ

BBMP Scam
ಬೆಂಗಳೂರು37 mins ago

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Assam Tour
ಪ್ರವಾಸ50 mins ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ1 hour ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ1 hour ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

karnataka weather Forecast
ಮಳೆ2 hours ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ2 hours ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ3 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌